ಒಟ್ಟು 932 ಕಡೆಗಳಲ್ಲಿ , 51 ದಾಸರು , 858 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೃಷ್ಣಲೀಲೆಅಕ್ಕ ನಂದಗೋಪನ ಅರಮನೆಯೊಳಗೊಬ್ಬ |ಅಕ್ರೂರ ಬಂದನಂತೆ ಪಹೊಕ್ಕು ಬಳಕೆಯಿಲ್ಲ ಹೊಸಬನು ಇವನಂತೆ |ಇಕ್ಕೋ ಬಾಗಿಲ ಮುಂದೆ ಈಗ ರಥವ ಕಂಡೆ ಅ.ಪಮಧುರಾ ಪಟ್ಟಣವಂತೆ ಮಾವನ ಮನೆಯಂತೆ |ನದಿಯ ದಾಟಲುಬೇಕಂತೆ ||ಎದುರು ಅರಿವಿಲ್ಲದಂತೆ ಏನೆಂಬೆ ಏಣಾಕ್ಷಿ |ಉದಯದಿ ಪಯಣವಂತೆ 1ಒಳ್ಳೆ ವೇಳೆಗಳಂತೆ ಬಿಲ್ಲುಹಬ್ಬಗಳಂತೆ |ಎಲ್ಲಾ ಬೀದಿ ಸಿಂಗರವಂತೆ ||ಮಲ್ಲರ ಕೂಟವಂತೆ ಮತ್ತೆ ಕಾಳಗವಂತೆ |ಅಲ್ಲೆ ತಾಯ್ತಂದೆಗಳ ಕಾಲಿಗೆ ನಿಗಳವಂತೆ 2ಮತ್ತೆ ಪಾಂಡವರಂತೆ ಮೋಹದ ಸೋದರರಂತೆ |ಅತ್ತೆಯ ಮಕ್ಕಳಂತೆ ||ಸುತ್ತ ಶತ್ರುಗಳಂತೆ ಸಕಲ ಕಾರ್ಯಗಳಂತೆ |ಚಿತ್ತಜನಯ್ಯನ ಚಿತ್ತ ಎರಡಾಯ್ತಂತೆ 3ಅಲ್ಲಿ ಪುಟ್ಟಿದನಂತೆ ಅರಸನಳಿಯನಂತೆ |ಇಲ್ಲಿಗೆ ಬಂದನಂತೆ ||ಕಳ್ಳಕಪಟನಂತೆ ಎಂದಿಗೂ ಹೀಗಂತೆ |ನಿಲ್ಲದೆ ಯಶೋದೆಗೆ ಕಣ್ಣ ನೀರಂತೆ 4ತಾಳಲಾರೆವು ನಾವು ಪುರಂದರವಿಠಲನ |ಕಾಣದೆ ನಿಲಲಾರೆವೆ ||ಕಾಲದಲೊಂದಾಗಿ ಕಾಮಿನಿಯರು ಕೂಡಿ |ಆಲಸ್ಯವಿಲ್ಲದೆ ಆಣೆಯಿಡುವ ಬನ್ನಿ
--------------
ಪುರಂದರದಾಸರು
ಕೃಷ್ಣೇತಿ ಮಂಗಳಂ ದಿವ್ಯನಾಮ ಪಇಷ್ಟರಿಂದಲಿ ಭವಬಂಧನನಷ್ಟವಾಗಿ ಹೋಹುದೋ ಅ.ಪನಾರದಮುನಿ ತಾನು ನರಕ ಪಟ್ಟಣಕೆ ಹೋಗಿವಾರೀಜನಾಭ ಎಂದು ಒದರಿದಾಗ ||ಘೋರ ಪಾತಕವೆಲ್ಲ ದೂರವಾಗಿ ಹೋಯ್ತುಸೂರೆಯಾಯಿತು ಸ್ವರ್ಗಲೋಕವೆಲ್ಲ 1ಅಜಮಿಳನು ಈ ನಾಮ ಅಂತ್ಯಕಾಲಕೆ ಸ್ಮರಿಸೆನಿಜಪದವಿಯೈದಿದನು ನಿಮಿಷದಲಿ ||ಭುಜಗಭೂಷಣನು ತಾ ಶ್ರೀರಾಮನಾಮವನಿಜಕಾಂತೆಯನು ಕರೆದು ಉಪದೇಶವಿತ್ತ 2ಪಂಚಪಾಂಡವರನು ಪರಿಪಾಲಿಸಿತು ನಾಮಪಾಂಚಾಲೀ ಮೊರೆಕೇಳಿ ಪೊರೆಯಿತು ನಾಮ ||ವಂಚನೆ ಮಾಡಿ ಕೌರವರ ಮಡುಹಿ ನಿ -ಶ್ಚಿಂತೆಯಲಿ ಪಾಂಡವರ ಪಟ್ಟಗಟ್ಟಿದ ನಾಮ 3ಸರಸಿಯೊಳಗೆ ಮುಳುಗಿ ಅರಿಯ ಬಾಧೆಗೆ ಸಿಲುಕಿಕರಿರಾಜ ಹರಿಯೆಂದು ಮೊರೆಯಿಡಲು ||ತ್ವರಿತದಿಂದಲಿ ಬಂದು ಕರಿಯನುದ್ಧರಿಸುತಕರಿರಾಜವರದನೆಂದೆನಿಸಿಕೊಂಡ ನಾಮ 4ಧ್ರುವ ತನ್ನ ತಂದೆ ತೊಡೆಯ ಮೇಲೇರಲು ಪೋಗೆಅವನ ಮಲತಾಯಿ ಗರ್ಜಿಸಿದಳಾಗ ||ಧ್ರುವ ಸುಖಬಿಟ್ಟು ವನಕೆ ಪೋಗಿ ತಪ ಮಾಡಿಸವಿಯಾದಚಲಪದವ ಪಡೆದನಾಗ 5ಹಿರಣ್ಯಕಶಿಪು ತನ್ನ ಮಗನ ಬಾಧೆಯ ಪಡಿಸೆಗಿರಿಯ ಶಿಖರದಿಂದೀಡಾಡಲು ||ನರಹರೆ ನರಹರೆ ರಕ್ಷಿಸೆಂದನ್ನಲುನರಸಿಂಹ ರೂಪದಿಂದವನ ಪಾಲಿಸಿದ 6ಕಂದನ ಅಪರಾಧವ ಕೇಳದೆ ನೃಪನು ತಾನಂದತಿ ದಾರುಣ ಕಡಹದೋಳು ಕೆಡಹೆ ||ಅಂದು ಸುಧನ್ವ ಶ್ರೀಕೃಷ್ಣನೆಂದೆನಲಾಗಿಬೆಂದು ಕಂದಿವ ಎಣ್ಣೆ ತಣ್ಣೀರಾಯಿತು 7ಅಸುರ ಬಾಧೆಗೆ ಸಿಲುಕಿ ಅಶೋಕವನದಲಿಶಶಿಮುಖಿ ಬೀಜಮಂತ್ರವ ಜಪಿಸೆ ||ಅಸುರನ ಕೊಂದು ಅಶೋಕವನವ ಬಿಡಿಸಿವಸುಧೀ ಸುತೆಯ ಸಲಹಿದ ರಾಮನಾಮ 8ಪರಿಪರಿ ಭಕ್ತರನು ಪಾಲಿಸಿತು ಈ ನಾಮಪರಮ ಮಂಗಲವು ಪಾವನವು ಈ ನಾಮ ||ಸುರರು ಬ್ರಹ್ಮಾದಿಗಳು ಸ್ರೋತ್ರ ಮಾಡುವ ನಾಮಧರೆಯೊಳುಸಿರಿಪುರಂದರ ವಿಠಲ ನಾಮ9
--------------
ಪುರಂದರದಾಸರು
ಕೆಟ್ಟಿತು ಕೆಲಸವೆಲ್ಲ - ಲೋಕದಿ ಕಾಮನಟ್ಟುಳಿದಶನವಾಯಿತು ಪ.ಬಟ್ಟೆ ತಪ್ಪಿ ಮುಂದೆ ಕೆಟ್ಟು ಕರ್ಮಿಯಾಗಿಬಿಟ್ಟು ಮುಂದಣ ಪಥವ - ಹೇ ದೇವಾ ಅಪಸತ್ಯ ಕಾಮ ಕರ್ಮವು ಧರ್ಮದ ಬಲಮತ್ತೆ ಅಡಗಿಹೋಯಿತುಎತ್ತ ನೋಡಲು ನೀಚವೃತ್ತಿಯೆತುಂಬಿಅತ್ಯಂತ ಪ್ರಬಲವಾಯ್ತೋ ಹೇ ದೇವಾ 1ಹೊತ್ತುಹೊತ್ತಿಗೆ ಹಲವು ಲಂಪಟತನದಲಿಚಿತ್ತ ಚಂಚಲವಾಯಿತುಸತ್ತು ಹುಟ್ಟುವ ಸುಳಿಯಲ್ಲದೆ ಮತ್ತೊಂದುಗೊತ್ತು ಇಲ್ಲದೆ ಹೋಯಿತ್ತೋ ಹೆ ದೇವಾ 2ಪೇಳುವುದೇನಿನ್ನು ದುರ್ಜನರ ಸಂಗದೋಲಾಟ ಸೊಗಸಾಯಿತುಕೀಳು ಮೇಲು ಮೇಲು ಕೀಳಾಗಿ ನಡೆಯುವಕಾಲವೆಗ್ಗಳವಾಯಿತೋ ಹೇ ದೇವಾ3ಆಳುವ ಅರಸರಿಗೆಲ್ಲ ಕಾಂತನದಾಸೆಮೇಲು ಮೇಲಾಯಿತಯ್ಯನೀಲ ಮೇಘಶ್ಯಾಮ ನಿನ್ನಾಳೆಂಬರಿಗೆಕೂಳು ಹುಟ್ಟದೆ ಹೋಯಿತೋ ಹೇ ದೇವಾ 4ಅರಿಷಡ್ವರ್ಗದಲಿ ಸಿಲುಕಿ ಸುಜ್ಞಾನದಅರಿವು ಇಲ್ಲದೆ ಹೋಯಿತುಕರಣಾಳು ಶ್ರೀ ಪುರಂದರವಿಠಲನೆ ನಿನ್ನಸ್ಮರಣೆಯಿಲ್ಲದೆ ಹೋಯಿತೋ ಹೇ ದೇವಾ 5
--------------
ಪುರಂದರದಾಸರು
ಕೆಟ್ಟು ನೆಂಟರ ಸೇರುವುದು ಬಹಳ ಕಷ್ಟಹುಟ್ಟೇಳು ಜನ್ಮಕ್ಕೆ ಇದು ಬೇಡ ಹರಿಯೆ ಪ.ಹರಿಯನಪ್ಪಲುಬಹುದು ಉರಿಯ ಮುಕ್ಕಲುಬಹುದುಉರುವ ಮಾರಿಗೆ ಗ್ರಾಸವಾಗಬಹುದುಸುರಿವ ಕೆಂಡದ ಮನೆಗೆ ಬರಿಮೈಯೊಳಿರಬಹುದುಧರೆಯೊಳಗೆ ದಾರಿದ್ರವಾರಿಗೂ ಬೇಡವೋ 1ವಿಷಯ ಕುಡಿಯಲುಬಹುದು ಇರಿದುಕೊಳ್ಳಲುಬಹುದುಹಸಿದ ಹುಲಿಬಾಯಿ ತುತ್ತಾಗಬಹುದುಹಸೆಗೆಟ್ಟು ಹೋದ ನಂಟಿರಲಿ ತಾ ಬಾಯನ್ನುಕಿಸಿಯಲಾಗದು ಕೊರಳ ಹಿಸುಕಿಕೊಳಬಹುದು 2ಕುಡುಗೋಲು ಪಿಡಿದು ಕೂಟಿಯಮಾಡಿ ಉಣಬಹುದುಒಡಲಾಸೆಗೊಲ್ಬುರಾಳಾಗಬಹುದುಒಡೆಯ ಶ್ರೀ ಪುರಂದರವಿಠ¯ ಸ್ಮರಣೆಯಲಿಬಡವನಾಗಿಯೇ ಬೇಡಿ ಉಣ್ಣಬಹುದು 3
--------------
ಪುರಂದರದಾಸರು
ಕೆಟ್ಟೆನಲ್ಲೊ ಹರಿಯೆ |ಸಿಟ್ಟು ಮಾಡಿ ಎನ್ನ ಬಿಟ್ಟು ಕಳೆಯ ಬೇಡ ಪಬಂದೆನು ನಾ-ತಂದೆ-ತಾಯಿಗಳುದರದಿ |ಒಂದನೂ ಅರಿಯದೆ ಬಾಲಕತನದೊಳು ||ಮುಂದುವರಿದ ಯೌವನದೊಳು ಸತಿ-ಸುತ-|ರಂದವ ನೋಡುತ ನಿನ್ನ ನಾ ಮರೆತೆನೊ 1ಸ್ನಾನ-ಸಂಧ್ಯಾನವು ಹೀನವಾಯಿತು ಬಹು-|ಮಾನವಿಲ್ಲದೆ ಕುಲಹೀನರಾಶ್ರಯದಿಂದ ||ಙ್ಞÕನಿಗಳೊಡನಾಟವಿಲ್ಲದೆ ಮನದೊಳು |ದಾನ-ಧರ್ಮದ ಬಟ್ಟೆಯಂತೆಂದು ಮರೆತನು 2ಮೊದಲೆ ಬುದ್ದಿಯು ಹೀನ ಅದರೊಳು ವೃದ್ಧಾಪ್ಯ |ಕದನವು ದಶದಿಕ್ಕಿನುದಯದ ರಾಯರ ||ಎದೆನೀರು ಬತ್ತಿತು ಅದರಿಂದ ನಿನ್ನಯ |ಪದಪದ್ಮಯುಗಳದ ತುದಿಯ ನಾ ಮರೆತೆನು 3ಮೂಢನಾದೆನು ನಿನ್ನ ಬೇಡಿಕೊಳ್ಳದೆ ನಾನು |ಕಾಡೊಳಗಾಡುವ ಮೃಗದಂತೆ ಜೀವಿಸಿ ||ಗೂಡೊಳಗಿರುತಿಹ ಗೂಬೆಯ ತೆರನಂತೆ |ಮಾಡದೆ ನಿನ್ನಯ ಸ್ಮರಣೆಯ ಮರೆತೆನು 4ಬುದ್ದಿಹೀನನು ನಾನು ಉದ್ದರಿಸೆಲೊ ದೇವಮುದ್ದು ಶ್ರೀಪುರಂದರವಿಠಲನೆನ್ನ ||ಬುದ್ದಿಯೊಳಡಗಿಯೆ ತಿದ್ದಿಟ್ಟು ನಡೆಸಯ್ಯ |ಪೊದ್ದುವೆ ನಿನ್ನಯ ಚರಣಾರವಿಂದವ 5
--------------
ಪುರಂದರದಾಸರು
ಕೆಂಡಕ್ಕೆ ಗೊರಲಿ ಮುತ್ತುವುದುಂಟೆಪಾಂಡುರಂಗನ ದಾಸರಿಗೆ ಭಯವುಂಟೆ ? ಪ.ಆನೆ ಸಿಂಹನ ಕೂಡ ಅಣಕವಾಡುವುದುಂಟೆಶ್ವಾನಗೆ ಹುಲಿಯೊಳು ಸರಸವುಂಟೆ ?||ಏನೆಂಬೆ ಎರಡಿಲ್ಲದಿರುಳು ಹಗಲು ನಿನ್ನಧ್ಯಾನ ಮಾಡುವರಿಗೆ ನರಕವುಂಟೆ ? ಸ್ವಾಮಿ ? 1ಕತ್ತಲೆ ರವಿಯನು ಕವಿದು ಮುಚ್ಚುವುದುಂಟೆಹತ್ತಿ ಸರ್ಪನ ಕಪ್ಪೆ ನುಂಗುವುದುಂಟೆ ? ||ಅತ್ತಿತ್ತ ಮನವನು ಹರಿಬಿಡದಲಿ ಏಕಚಿತ್ತದಿ ನೆನೆವಗೆ ನರಕವುಂಟೆ ಸ್ವಾಮಿ 2ಆ ಮಾರುತನ ಗುದ್ದಿ ಹದ್ದು ನೋಯಿಸಲುಂಟೆಹೇಮಗಿರಿಗೆವಜ್ರ ಸಿಡಿಯಲುಂಟೆ ?ಸ್ವಾಮಿ ಶ್ರೀ ಪುರಂದರವಿಠಲರಾಯನೆ ನಿನ್ನನಾಮಧಾರಿಗಳಿಗೆ ನರಕವುಂಟೆ ಸ್ವಾಮಿ ? 3
--------------
ಪುರಂದರದಾಸರು
ಕೇಶವ -ಮಾಧವ - ಗೋವಿಂದ ವಿಠಲೆಂಬದಾಸಯ್ಯ ಬಂದ ಕಾಣೆ ಪ.ದೋಷರಹಿತ ನರವೇಷವ ಧರಿಸಿದ ದಾಸಯ್ಯ ಬಂದ ಕಾಣೆಘಳಿಲನೆ ಕೂರ್ಮ ತಾನಾಗಿ ಗಿರಿಯಪೊತ್ತ ದಾಸಯ್ಯ ಬಂದ ಕಾಣೆಇಳೆಯಕದ್ದ ಸುರನ ಕೋರೆದಾಡಿಯ ಅಳಿದ ದಾಸಯ್ಯ ಬಂದ ಕಾಣೆಛಲದಿ ಕಂಬದಿ ಬಂದು ಅಸುರನ ಸೀಳಿದ ದಾಸಯ್ಯ ಬಂದ ಕಾಣೆ 1ಬಲಿಯ ದಾನವಬೇಡಿ ನೆಲವನಳೆದು ನಿಂದ ದಾಸಯ್ಯ ಬಂದ ಕಾಣೆಮತಿತ ಕ್ಷತ್ರಿಯರ ಕು¯ವ ಸಂಹರಿಸಿದ ದಾಸಯ್ಯ ಬಂದ ಕಾಣೆಲಲನೆಯ ನೊಯ್ಯೆ ತಾ ತಲೆ ಹತ್ತಾರನು ಕೊಂದ ದಾಸಯ್ಯ ಬಂದ ಕಾಣೆನೆಲ ಕೊತ್ತಿಕಂಸನ ಬಲವನಳಿದ ಮುದ್ದು ದಾಸಯ್ಯ ಬಂದ ಕಾಣೆ 2ಪುಂಡತನದಿ ಪೋಗಿ ಪುರವನುರುಪಿಬಂದ ದಾಸಯ್ಯ ಕಾಣೆಲಂಡರಸದೆಯಲು ತುರಗವನೇರಿದ ದಾಸಯ್ಯ ಬಂದ ಕಾಣೆಹಿಂಡುವೇದಗಳೆಲ್ಲ ಅರಸಿ ನೋಡಲು ಸಿಗದದಾಸಯ್ಯ ಬಂದ ಕಾಣೆಪಾಂಡುರಂಗ ನಮ್ಮಪುರಂದರ ವಿಠಲದಾಸಯ್ಯ ಬಂದ ಕಾಣೆ 3
--------------
ಪುರಂದರದಾಸರು
ಕೇಶವ ನಾರಾಯಣಮಾಧವ -ಹರಿ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ವಾಸುದೇವಎನಬಾರದೆ ?ಪ.ಕೇಶವನ ನಾಮವನುಏಸುಬಾರಿ ನೆನೆದರೂ |ದೋಷಪರಿಹವಪ್ಪುದು - ಏ ಜಿಹ್ವೆ ಅಪಜಲಜನಾಭನ ನಾಮವು - ಈ ಜಗ - |ದೊಳು ಜನಭಯಹರಣ ||ಸುಲಭವೇದ್ಯನೆನಲೇಕೆ ಸುಖಕೆ ಸಾಧನವಿದು |ಬಲಿಯೆಂಬ ಭಕ್ತನು ಬಗೆದು ರಸವನುಂಡು ಹೇಜಿಹ್ವೆ1ಹೇಮಕಶ್ಯಪ ಸಂಹಾರ - ಭಕ್ತರು ನಿನ್ನ |ನಾಮವ ಸವಿದುಂಬರು ||ವಾಮನ ವಾಮನನೆಂದು ವಂದಿಸಿದವರಿಗೆ |ಶ್ರೀಮದನಂತ ಪುರಂದರವಿಠಲನುಕಾಮಿತ ಫಲವೀವನು - ಹೇಜಿಹ್ವೆ3
--------------
ಪುರಂದರದಾಸರು
ಕೇಶವನೊಲುಮೆಯು ಆಗುವ ತನಕ ಹರಿದಾಸರೊಳಿರು ಮನವೆಕ್ಲೇಶ ಪಾಶಗಳ ಹರಿದು ವಿಳಾಸದಿ ದಾಸರ ನುತಿಗಳ ಪೊಗಳುತ ಮನದೊಳು ಪ.ಮೋಸದಿ ಜೀವಿಯಘಾಸಿ ಮಾಡಿದ ಫಲಕಾಶಿಗೆ ಹೋದರೆ ಹೋದೀತೆದಾಸರ ಕರೆ ತಂದು ಕಾಸು ಕೊಟ್ಟ ಫಲ ಲೇಸಾಗದೆ ಸಸಿನಿದ್ದೀತೆಭಾಷೆಯ ಕೊಟ್ಟು (ನಿ) ರಾಸೆಯ ಮಾಡಿದಫಲ ಮೋಸವು ಮಾಡದೆ ಬಿಟ್ಟೀತೆಶಶಿವದನೆಯ ಅಧರಾಮೃತ ಸೇವಿಸಿ ಸುಧೆಯೆಂದಡೆ ನಿಜವಾದೀತೆ 1ಕನಕದ ಪಾತ್ರದ ಘನತೆಯ ಪ್ರಭೆಗಳು ಶುನಕನಮನಸಿಗೆ ಸೊಗಸೀತೆಹೀನ ಮನುಜನಿಗೆ ಜಾÕನವ ಭೋಧಿಸೆ ಹೀನ ವಿಷಯಗಳು ಹೋದಿತೇಮಾನಿನಿ ಮನಸು ನಿಧಾನವು ಇಲ್ಲದಿರೆಮಾನಭಿಮಾನ ಉಳಿದೀತೆಭಾನುವಿಕಾಸನ ಭಜನೆಯ ಮಾಡದ ದೀನಗೆ ಮುಕುತಿಯು ದೊರಕೀತೆ 2ಸತ್ಯದ ಧರ್ಮವ ನಿತ್ಯವು ಭೋಧಿಸೆ ತೊತ್ತಿನ ಮನಸಿಗೆ ಸೊಗಸೀತೆತತ್ವದ ಅರ್ಥ ವಿಚಿತ್ರದಿ ಪೇಳಲು ಕತ್ತೆಯ ಮನಸಿಗೆ ತಿಳಿದೀತೆಪುತ್ಥಳಿ ಬೊಂಬೆಯ ಚಿತ್ರದಿ ಬರೆದಿರೆ ಮುತ್ತುಕೊಟ್ಟರೆ ಮಾತಾಡೀತೆಕತ್ತುರಿ ತಿಲಕವನೊತ್ತಿ ಫಣೆಯೊಳಿಡೆ ಅರ್ತಿಯುತೋರದೆ ಇದ್ದೀತೆ 3ನ್ಯಾಯವ ಬಿಟ್ಟು ಅನ್ಯಾಯ ಪೇಳುವ ನಾಯಿಗೆ ನರಕವು ತಪ್ಪೀತೆತಾಯಿ ತಂದೆಗಳ ನೋಯಿಸಿದ ಅನ್ಯಾಯಿಗೆ ಮುಕ್ತಿಯು ದೊರಕೀತೆಬಾಯಿ ಕೊಬ್ಬಿನಿಂದ ಬೈಯುವ ಮನುಜಗೆ ಘಾಯವುಆಗದೆ ಬಿಟ್ಟೀತೆಮಾಯಾವಾದಗಳ ಕಲಿತಾ ಮನುಜಗೆ ಕಾಯಕಷ್ಟ ಬರದಿದ್ದೀತೆ 4ಸಾಧು ಸಜ್ಜನರನು ಬಾಧಿಸಿದಾ ಪರವಾದಿಗೆ ದೋಷವು ತಪ್ಪೀತೆಬಾಧಿಸಿ ಬಡವರ ಅರ್ಥವ ಒಯ್ವವಗೆ ವ್ಯಾಧಿ ರೋಗಗಳು ಬಿಟ್ಟೀತೆಬದ್ದ ಮನುಜ ಬಹು ಕ್ಷುದ್ರವ ಕಲಿತರೆಬುದ್ದಿ ಹೀನನೆಂಬುದು ಹೋದೀತೆಕದ್ದು ಒಡಲ ತಾ ಪೊರೆವನ ಮನೆಯೊಳಗೆಇದ್ದುದು ಹೋಗದೆ ಇದ್ದೀತೆ 5ಅಂಗದ ವಿಷಯಂಗಳನು ತೊರೆದಾತಗೆ ಅಂಗನೆಯರಬಗೆ ಸೊಗಸೀತೆಸಂಗ ಸುಖಂಗಳು ಹಿಂಗಿದ ಮನುಜಗೆ ಶೃಂಗಾರದ ಬಗೆ ಸೊಗಸೀತೆಇಂಗಿತವರಿಯುವ ಸಂಗ ಶರೀರ ವಜ್ರಾಂಗಿಯಾಗದೆ ಇದ್ದೀತೆಮಂಗಳ ಮಹಿಮನ ಅಂಘ್ರಿಯ ಕಾಣದ ಭಂಗಗೆ ಮುಕ್ತಿಯು ದೊರಕೀತೆ 6ಕರುಣಾಮೃತದಾ ಚರಣವ ಧರಿಸಿದ ಪರಮಗೆ ಸರಳಿ ಬಂದೀತೆಕರಣ ಪಾಶದುರವಣೆ ತೊರೆವಾತಗೆ ಶರಣರ ಪದ್ಧತಿ ತಪ್ಪೀತೆಆರುಶಾಸ್ತ್ರವನು ಮೀರಿದ ಯೋಗಿಗೆತಾರಕ ಬ್ರಹ್ಮವು ತಪ್ಪೀತೆವರದ ಪುರಂದರವಿಠಲನ ಚರಣಸ್ಮರಿಸುವವನಿಗೆ ಸುಖ ತಪ್ಪೀತೆ * 7
--------------
ಪುರಂದರದಾಸರು
ಕೇಳನೊಹರಿ ತಾಳನೋ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ತಾಳ ಮೇಳಗಳಿದ್ದು ಪ್ರೇಮವಿಲ್ಲದ ಗಾನ ಪ.ತಂಬೂರಿ ಮೊದಲಾದಅಖಿಳ ವಾದ್ಯಗಳಿದ್ದುಕೊಂಬು ಕೊಳಲ ಧ್ವನಿಸಾರವಿದ್ದು ||ತುಂಬುರು ನಾರದರ ಗಾನ ಕೇಳುವಹರಿನಂಬಲಾರ ಈ ಡಂಭಕದ ಕೂಗಾಟ 1ನಾನಾಬಗೆಯಭಾವ ರಾಗ ತಿಳಿದು ಸ್ವರಜಾÕನ ಮನೋಧರ್ಮ ಜಾತಿಯಿದ್ದು ||ದಾನವಾರಿಯ ದಿವ್ಯ ನಾಮರಹಿತವಾದಹೀನ ಸಂಗೀತ ಸಾಹಿತ್ಯವ ಮನವಿತ್ತು 2ಅಡಿಗಡಿಗಾನಂದ ಬಾಷ್ಪ ಪುಳಕದಿಂದನುಡಿನುಡಿಗೂ ಶ್ರೀ ಹರಿಯೆನ್ನುತ ||ದೃಢಭಕ್ತರನು ಕೊಡಿ ಹರಿಕೀರ್ತನೆಯ ಪಾಡಿಕಡೆಗೆ ಪುರಂದರವಿಠಲನೆಂದರೆ ಕೇಳ್ವ 3
--------------
ಪುರಂದರದಾಸರು
ಕೇಳಲೊಲ್ಲನೆ ಎನ್ನ ಮಾತನು-ರಂಗ -|ಕಾಳಿಮರ್ದನನಿಗೆ ಪೇಳೇ ಗೋಪಮ್ಮ ಬುದ್ಧಿ ಪಬಿಟ್ಟ ಕಂಗಳ ಮುಚ್ಚಲೊಲ್ಲನೆ-ಬೇಗ- |ಬೆಟ್ಟಕೆ ಬೆನ್ನೊಡ್ಡಿ ನಿಂತನೆ ||ಸಿಟ್ಟಿಂದೆ ಕೋರೆಯ ತೋರ್ಪನೆ-ಬೇಗ-|ಗಟ್ಟಿ ಉಕ್ಕಿನ ಕಂಬ ಒಡೆದು ಬಂದನೆ ರಂಗ 1ಮೂರಡಿ ಭೂಮಿಯ ಬೇಡಿದನೆ-ನೃಪರ-|ಬೇರ ಕಡಿಯಲು ಕೊಡಲಿ ತಂದನೆ |ನಾರಸೀರೆಯನುಟ್ಟುಕೊಂಡನೆ-ಬೇಗ-|ಚೋರತನದಿ ಹರವಿ ಹಾಲ ಕುಡಿದನಮ್ಮ 2ಬತ್ತಲೆ ನಾರಿಯರನಪ್ಪಿದ-ಬೇಗ-|ಉತ್ತಮ ಅಶ್ವವ ಹತ್ತಿದ ||ಹತ್ತವತಾರವನೆತ್ತಿದ-ನಮ್ಮ-|ಸತ್ಯಮೂರುತಿ ಪುರಂದರವಿಠಲರಾಯನು 3
--------------
ಪುರಂದರದಾಸರು
ಕೇಳು ಕೋಪಿಸಬೇಡ ಹೇಳಲಿಕಂಜುವೆಬಾಳು ಬಡತನವ ನಾನು ಪ.ತಲೆಗೊಯ್ಕ ಹಿರಿಯ ಮಗ ಇಳೆಗೆ ಪೂಜಿತನಲ್ಲಬಲು ಭಂಡ ನಿನ್ನಯ ಕಿರಿಯ ಮಗ ||ಲಲನೆಯು ಸೇರಿದಳು ಬಲು ಲೋಭಿಗಳ ಮನೆಯಹೊಲಕುಲವರಿಯಳು ನಿನ್ನ ಸೊಸೆಯು ರಂಗ 1ಮಗಳ ಮಾರ್ಗವುಡೊಂಕು | ಮೈದುನ ಗುರುದ್ರೋಹಿಮಗನ ಮಗನು ಚಾಡಿಗಾರಹಗರಣಕೆ ನೀಚರ ಹಣ್ಣು ಮೆದ್ದೆಂಜಲಜಗದೊಡೆಯನೆನಿಸಿಕೊಂಡೆ - ನೀನುಂಡೆ 2ಲಕ್ಷ್ಮೀಪತಿಯು ಎನಿಸಿಭಿಕ್ಷೆ ಬೇಡಲು ಪೋದೆಪಕ್ಷಿಯ ಪೆಗಲೇರಿ ರಾಜನೆನಿಸಿದೆ ||ಸಾಕ್ಷಾತು ಪುರಂದರವಿಠಲನೆ ನಿನ್ನಗುಣಲಕ್ಷಣ ಪೇಳಲಳವೆ - ಕಳೆವೆ 3
--------------
ಪುರಂದರದಾಸರು
ಕೇಳೆಗೋಪಿಗೋಪಾಲ ಮಾಡಿದ ಬಲು |ದಾಳಿಯ ಗೋಕುಲದಿ ಪತಾಳೆಲಾರೆವೆ ತವಕದಲಿ ಕಂದಗೆ ಬುದ್ಧಿ |ಹೇಳೆ ಕೃಷ್ಣವ ಕರೆದು ಅ.ಪಸರಿರಾತ್ರಿಯೊಳು ಸರಸರನೆ ಮನೆಗೆ ಬಂದು |ಸುರಿದು ಪಾಲ್ಪೆಣ್ಣೆಗಳ ||ಉರೋಜಗಳಿಗೆಕರಸರಿಸಿ ಕಣ್ಗಳನು |ತೆರೆದು ನೋಡುವನೆ ನಮ್ಮ 1ಗಂಡನು ಮನೆಯೊಳಗಿರಲು ಬಂದು ಕೃಷ್ಣ |ಭಂಡ ಮಾತುಗಳ ಬಹು ||ತುಂಟತನದಲಾಡಿಉದ್ದಂಡಕಠಿಣಕಾಯ |ದುಂಡುಕುಚವ ಪಿಡಿದ 2_______ವದ ಮೇಲಿರಲು ತಾ |ಸೀರೆಯ ಸೆಳೆವ ನೋಡೆ ||ಆರಿವರೆಂದು ವಿಚಾರಿಸಿ ನೋಡಲು |ಮೋರೆಯ ಬಾಗಿದನೆ 3ಕೇರಿಯೊಳಗೆದಧಿಮಾರುತಿರಲು ಕೃಷ್ಣ |ಸಾರಿ ಬಂದು ಮೊಸರ ||ಸೂರೆಗೊಂಡು ಪರನಾರಿಯರ ನೆರೆದು ತಾ |ಘೋರರೂಪದಿ ಮೆರೆದ 4ಆಡಲೇತಕೆ ನಮ್ಮ ಬಾಗಿಲಂಗಳದೊಳು |ಬೇಡುವ ಜಲ ದೈನ್ಯದಿ ||ನೀಡುವೆ ಜಲ ಜಲಜಾಕ್ಷ ಬಾಬಾ ಎನೆ |ಮಾಡುವರತಿಎಂಬನೆ5ಹುಡುಗನೆಂದು ಕೈಯ ಪಿಡಿಯ ಪೋಗಲು ನಮ್ಮ |ಉಡೆಮುಡಿ ಪಿಡಿದ ನೋಡೆ ||ಪಡೆದವಳಿಗೆ ಪೇಳುವೆ ನಡೆ ಎನೆ ಮಚ್ಚ |ಕೊಡಲಿ ತೋರುವನೆಗೋಪಿ6ಮಡದಿಯರೆಲ್ಲರು ಮಿಯುತಲಿರೆ ಮೈ |ಉಡುಗೆಯ ತೆಗೆದುಕೊಂಡು ||ಸಡಗರದಲಿ ಬೇಡಿಕೊಳ್ಳೆ ವಸ್ತ್ರಗಳನು |ಕೊಡದೆ ಅಡವಿಗೆ ನಡೆದ 7ಬೆಣ್ಣೆಯ ತಿಂದು ತಮ್ಮಣ್ಣಗೆ ತಾ ಕೊಟ್ಟು |ಚಿಣ್ಣರ ಬಡಿವ ನೋಡೆ ||ಬಣ್ಣಿಸಿ ನಮ್ಮ ಬಾಯಿಗೆ ಬೆಣ್ಣೆ ತೊಡೆಯುತ |ಬೆಣ್ಣೆಯ ತಿಂದಿರೆಂಬ 8ಏಣಲೋಚನೆ ಸರ್ಪವೇಣಿ ನಮ್ಮ ಮನೆ |ಓಣಿಯೊಳಗೆ ಪೋಗುತ ||ಕಾಣದಂತೆ ಚಕ್ರಪಾಣಿ ನಮ್ಮೊಳು ತನ್ನ |ತ್ರಾಣವ ತೋರಿದನೆ 9ಪದುಮನಾಭನು ಪುರದ ಚದುರಿಯರಿಗೆ ತಾನು |ಮದನಶಾಸ್ತ್ರವ ಪೇಳುತ ||ಮುದದೊಳಗಿರಲವರೊಡೆಯ ಬರಲು ಕೃಷ್ಣ |ಕುದುರೆಯ ನೇರಿದನೆ 10ಎಷ್ಟುಪದ್ರವ ಕೊಟ್ಟರು ಗೋಕುಲದೊಳು |ಬಿಟ್ಟವನಿರಲಾರೆವೆ ||ಸೃಷ್ಠಿಯೊಳಗೆ ಸರ್ವಾಭಿಷ್ಟದ ಪುರಂದರ-|ವಿಠಲ ಸಲಹುವನೆ 11
--------------
ಪುರಂದರದಾಸರು
ಕೈಯ ತೋರೋ ಕರುಣಿಗಳರಸಾ-ಕೈಯ ತೋರೊ |ಕೈಯಲಿ ಬೆಣ್ಣೆಯ ಮುದ್ದೆಯ ನೀಡುವೆ-ಕೈಯ ಪಅಂಗುಲಿಯೊಳು ಪೊನ್ನುಂಗುರವೊಪ್ಪುವ ಕೈಯ ತೋರೊ |ಶೃಂಗಾರದಿ ಶಂಖಚಕ್ರವ ಧರಿಸಿದ ಕೈಯ ತೋರೊ ||ಅಂಗೈಯಲಿ ಧ್ವಜಪಧ್ಮವಿರಾಜಿಪ ಕೈಯ ತೋರೊ |ಅಂಗನೆಯರಉತ್ತುಂಗಕುಚದಲಿಟ್ಟ ಕೈಯ ತೋರೊ1ಬಡಬ್ರಾಹ್ಮಣನವಲಕ್ಕಿಯ ಬೇಡಿದ ಕೈಯ ತೋರೊ |ಕೊಡೆ ಮಾಡಿ ಗಿರಿಯೆತ್ತಿ ಗೋಗಳ ಕಾಯ್ದ-ಕೈಯ ತೋರೊ ||ಕಡುಹಿರಣ್ಯಾಖ್ಯನ ಒಡಲನು ಬಗೆದ-ಕೈಯ ತೋರೊ |ಧೃಡ ಪ್ರಹ್ಲಾದನ ಮಂಡೆಯೊಳಿಟ್ಟ ಕೈಯ ತೋರೊ 2ಅಲ್ಲಿ ಪೂತನಿಯ ಅಸುವನೆ ಹೀರಿದ ಕೈಯ ತೋರೊ |ಬಲ್ಲಿದಮಲ್ಲರ ಮರ್ದಿಸಿ ಬಂದ-ಕೈಯ ತೋರೊ ||ಮೆಲ್ಲನೆ ಕುಬುಜೆಯ ಡೊಂಕನೆ ತಿದ್ದಿದ ಕೈಯ ತೋರೊ |ಬಿಲ್ಲನು ಎಡಗೈಯಲಿ ಮುರಿದಿಟ್ಟ ಕೈಯ ತೋರೊ 3ಬಲಿಯನು ವಂಚಿಸಿ ದಾನವ ಬೇಡಿದ ಕೈಯ ತೋರೊ |ಫಲಪುಷ್ಪ ಪಾರಿಜಾತವ ತಂದ ಕೈಯ ತೋರೊ ||ಒಲಿದು ಪಾರ್ಥಗೆ ರಥವನು ನಡೆಸಿದ ಕೈಯ ತೋರೊ |ಮಲ್ಲಿಗೆ ಜಾಜಿಯ ತುರುಬಿಗೆ ಮುಡಿಸಿದ ಕೈಯ ತೋರೊ 4ಆಕಾಶದ ಚಂದ್ರಮನನು ಕರೆದ-ಕೈಯ ತೋರೊ |ನಾಕಪತಿಗೆ ಅಭಯವನಿತ್ತ-ಕೈಯ ತೋರೊ |ನೇಕ ಬಗೆಯಲಿ ಕೊಳಲನೂದುವ-ಕೈಯ ತೋರೊ |ಶ್ರೀಕಾಂತ ನಮ್ಮ ಪುರಂದರವಿಠಲ-ಕೈಯ ತೋರೊ 5
--------------
ಪುರಂದರದಾಸರು
ಕೊಟ್ಟಸಾಲ ಕೊಡದೆ ಭಂಡಾಟ ಮಾಡುತಿಹನೆ |ಎಷ್ಟು ಕೇಳಿದರೆನಗೆ ಓಯೆನ್ನದಿಹನೆ ಪಭರದಿ ಕೇಳಲು ಜಲದಿ ಕಣ್ಣ ಬಿಡುತಿಹನೆ |ತರುಬಿ ಕೇಳಲು ಕಲ್ಲು ಹೊತ್ತು ನಿಂತಿಹನೆ ||ಮರಳಿ ಕೇಳಲು ಊರ ಅಡವಿ ಸೇರುವನೆ |ಇರುಳು ಹಗಲೆಲ್ಲ ಕಾಣಿಸಿಕೊಳ್ಳದಿಹನೆ 1ಕಂಡು ನಿಲ್ಲಿಸಲೊಂದು ಕಾಲಲಿ ನಿಲುವನೆ |ಕೊಂಡ ಸಾಲಕೆ ಕೊಡಲಿ ಪಿಡಿದು ನಿಲ್ಲುವನೆ ||ಉಂಡರಾಣಿಯೆಂದು ಉಪವಾಸವಿರುವನೆ |ಬಂಡನಂದದಿ ಠಕ್ಕುಟೌಳಿ ನಡಿಸುವನೆ 2ಕೆಟ್ಟ ಬಯಲುಲಜ್ಜೆಹೇವ ತೊರೆಯುವನೆ |ಕೊಟ್ಟು ಪೋಗೆನ್ನಲು ಕಲಿಯು ಆಗುವನೆ ||ಸೃಷ್ಟಿಗೊಡೆಯ ಶ್ರೀರಂಗಪಟ್ಟಣದಪುರಂದರ |ವಿಠಲೇಶನು ನಮ್ಮ ಪಶ್ಚಿಮರಂಗನಾಥನು 3
--------------
ಪುರಂದರದಾಸರು