ಒಟ್ಟು 7419 ಕಡೆಗಳಲ್ಲಿ , 132 ದಾಸರು , 3991 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸುಮ್ಮನೆ ವೈಷ್ಣವನೆಂದಿರಿ -ಪರ - |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಬ್ರಹ್ಮ ಸುಜ್ಞಾನವನರಿಯದ ಮನುಜನ ಪ.ಮುಖವ ತೊಳೆದು ನಾಮವಿಟ್ಟವನಲ್ಲದೆ |ಮಿಕ್ಕ ಶಾಸ್ತ್ರಂಗಳ ನೋಡಿದನೆ ? ||ಸುಖ ಶೃಂಗಾರಕೆ ಮಾಲೆ ಧರಿಸಿದನಲ್ಲದೆ |ಭಕುತಿಯ ರಸದೊಳು ಮುಳುಗಿದನೇನಯ್ಯ 1ಊರ ಮಾತುಗಳೆಲ್ಲನಾಡಿದನಲ್ಲದೆ |ನಾರಾಯಣ ಕೃಷ್ಣ ಶರಣೆಂದನೆ ? |ನಾರಿಯರಿಗೆ ಮೆಚ್ಚಿ ಮರುಳಾದನಲ್ಲದೆ |ಗುರುಹಿರಿಯರಿಗೆಲ್ಲ ಎರಗಿದನೇನಯ್ಯ 2ಗಂಗೆಯಲಿ ಮಣ್ಣು ತೊಳವವನಲ್ಲದೆ |ಹಿಂಗದೆ ಸ್ನಾನವ ಮಾಡಿದನೆ ? |ರಂಗ ಶ್ರೀ ಪುರಂದರವಿಠಲನ ದಾಸರ |ಸಂಗಡ ಕೂಡಾಡಿ ತಿರುಗಿದನೇನಯ್ಯ 3
--------------
ಪುರಂದರದಾಸರು
ಸುರತಸುಖಕೆ ಅಂಗನೆಯರ ಮೇಳದಲಿಇಹಗೆ ಆಧ್ಯಾತ್ಮದಗೊಡವೆಏತಕೆಪಭಂಗಿ ಮಧ್ಯದಿ ಕೂಡಿ ಇಹಗೆ ಭಜನೆ ಸಾಧನೆಗಳೇತಕೆರಂಗುರಾಗದಿ ಮುಳುಗುವವನಿಗೆ ರೇಚಕ ವಿದ್ಯೆಯಾತಕೆಶೃಂಗಾರದ ಪದವಿಡಿದ ಮನುಜಗೆ ಸುಷುಮ್ನದ ಮಾರ್ಗವಿದೇತಕೆ1ನಲ್ಲೆಯರ ನುಡಿಯಿಂದ ಕೇಳುವಗೆ ನಾದಧ್ವನಿ ತಂಪೇತಕೆಚೆಲ್ಲೆಗಣ್ಣರ ಕುಚದಲೊರಗುವಗೆ ಚಿತ್ಕಳ ವಿಷಯವೇತಕೆಜೊಲ್ಲು ಕುಡಿಯುತಲಿಹ ಜಡನಿಗೆ ಜ್ವಲಿಸುತಿಹ ಅಮೃತವದೇತಕೆಹಲ್ಲು ತೆರೆವಹೊತ್ತಿಲಿರುವನಿಗೆ ಹಂಸದ ಕೂಟವದೇತಕೆ2ಭಾಮಿನಿಯರ ಸಭೆಯಲಿದ್ದವನಿಗೆ ಭ್ರೂಮಧ್ಯದ ಸದರೇತಕೆವಾಮಲೋಚನೆಯ ಅಂಗಸಂಗಗೆ ಹೃನ್ಮನ ಚಿಂತನವೇತಕೆಕಾಮಿನಿಯ ಕಣ್ಬಲೆಗೆ ಬಿದ್ದವಗೆ ಕಡೆಹಾಯುವ ಚಿಂತನೆಯೇತಕೆಸ್ವಾಮಿ ಚಿದಾನಂದ ಗುರುವಿನ ಸ್ಮರಣೆಯದು ಅವಗೇತಕೆ3
--------------
ಚಿದಾನಂದ ಅವಧೂತರು
ಸುರನಾರಿಯರ ಮಹಿಮೆಪರಿಪರಿ ಹೊಗಳುತಬಿರುದಿನಕೋಲಹೊಯಿದೇವಕೋಲ ಪ.<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಉಮಾದಿಗಳಿಗೆಲ್ಲಬೊಮ್ಮ ಹ್ಯಾಂಗ ಶಪಿಸಿದಅಮ್ಮಾ ಇದು ಒಂದುಕೌತುಕಕೋಲಅಮ್ಮಾ ಇದುಕೌತುಕ ಹೇಳೆಂದಝಮ್ಮನೆ ದೂತೆ ನುಡಿದಳುಕೋಲ 1ಭಾರತಿ ದೇಹದಲ್ಲಿ ಸೇರಿದರ್ಹಾಂಗಮ್ಮಪಾರ್ವತಿದೇವಿ ಮೊದಲಾದಕೋಲಪಾರ್ವತಿದೇವಿ ಮೊದಲಾದ ಕೆಲದಿಯರುನಾರಿರುಕ್ಮಿಣಿ ಎನಗ್ಹೇಳಕೋಲ2ಪಾಂಚಾಲಿದೇವಿ ತಾನು ಪಂಚಪಾಂಡವರ ಕೂಡಿಕೆಂಚಿತಾ ಹ್ಯಾಂಗ ರಮಿಸೋಳುಕೋಲಕೆಂಚಿತಾ ಹ್ಯಾಂಗ ರಮಿಸೋಳುಮಹಿಮೆಯ ಕಿಂಚಿತ್ತಾಗಿ ಎನಗ್ಹೇಳಕೋಲ3ಇಂದುಮುಖಿಯರ ಜನ ಚಂದಾಗಿ ಹೇಳಮ್ಮಸಂದೇಹಬ್ಯಾಡ ಎನಕೂಡಕೋಲಸಂದೇಹಬ್ಯಾಡ ಎನಕೂಡ ಅದಕೇಳಿಆನಂದವ ಬಡುವೆಅನುಗಾಲಕೋಲ4ಮತ್ತೆ ರಾಮೇಶನ ಅತ್ಯಂತ ಭಕ್ತಳಉತ್ತಮ ಕಥೆಯ ಎನಗ್ಹೇಳಕೋಲಉತ್ತಮ ಕಥೆಯ ಎನಗ್ಹೇಳ ಹರುಷದಿಬಿತ್ತಿ ಬೆಳೆದೇವಧರೆಮ್ಯಾಲೆಕೋಲ5
--------------
ಗಲಗಲಿಅವ್ವನವರು
ಸುವ್ವಿ ಎಂದು ಪಾಡಿರೆ ಸುಜ್ಞಾನ ದೇವರಭವಹರಿವುದು ಭಯವಿಲ್ಲ ಸುವ್ವಿಪಂಚ ಶಕ್ತಿಗಳೆಂಬಪರಮಮುತ್ತೈದೆಯರುವಂಚನೆಗೆ ದೂರಾಗಿ ವರ್ತಿಸುತ ಸುವ್ವಿವಂಚನೆಗೆ ದೂರಾಗಿ ವರ್ತಿಪಐದೆಯರುಮುಂಚೆ ಬೇಗದಲಿ ಮಡಿಯಾಗಿ ಸುವ್ವಿ1ಕ್ಷೇತ್ರದ ಒರಳಲ್ಲಿ ಕ್ಷರನೆಂಬ ಅಕ್ಕಿಯುಕ್ಷೇತ್ರಜÕನೆಂಬ ಒನಕೆಯ ಸುವ್ವಿಕ್ಷೇತ್ರಜÕನೆಂಬ ಒನಕೆಯ ಪಿಡಿದುಪಾತ್ರನಾಗೆಂದು ಹರಸುತ ಸುವ್ವಿ2ಆರು ಮೂರಾದವನ ಐದು ಎಂಟಾದವನಬೇರೇಳು ನಾಲ್ಕೆರಡು ಬಗೆಯಾದವನ ಸುವ್ವಿಬೇರೇಳು ನಾಲ್ಕೆರಡು ಬಗೆಯಾದನೆಲ್ಲನುವಾರಣದಿ ನೀವೆಲ್ಲ ತಳಿಸಿರೆ ಸುವ್ವಿ3ವಾಸನೆಯ ಮೆರುಗನು ಒಳಿತಾಗಿ ತಳಿಸುತ್ತಸೂಸದಂತೆಲ್ಲವ ಮಗುಚುತ್ತ ಸುವ್ವಿಸೂಸದಂತೆಲ್ಲವ ಮಗಚುತ್ತ ಅಕ್ಕಿಯರಾಶಿಯನು ಮಾಡಿ ಬಿಡಿರವ್ವ ಸುವ್ವಿ4ಪರವಸ್ತುವಾದವನ ಪರಬ್ರಹ್ಮವಾದವನಪರಮಾತ್ಮನೆಂಬ ಪುರುಷನ ಸುವ್ವಿಪರಮಾತ್ಮನೆಂಬ ಪುರುಷ ಚಿದಾನಂದನಪರಮನೈವೇದ್ಯದ ಪಾಕಕ್ಕೆ ಸುವ್ವಿ5
--------------
ಚಿದಾನಂದ ಅವಧೂತರು
ಸುವ್ವಿ ಸುವ್ವಾಲಿ |ಸುವ್ವಿ ಸಾಧ್ವಿಯರು ರಾಘವೇಂದ್ರರ ಪಾಡಿ ಪಅಂದಿನ ಕಾಲದ ಮಧ್ವಶಾಸ್ತ್ರವ ಮನಕೆ ತಂದು |ಅಂದದಿ ಟಿಪ್ಪಣಿ ಮಾಡಿದ ದೇವರಾರು | ಸುವ್ವಿ ||ಅಂದು ವಾದಿಸುವ ಜನರನ್ನು ಬಾಯಿ ಮುಚ್ಚಿಸಿದ |ಚಂದಿರ ವದನೆ ಈತನಮ್ಮ ಗುರುವು | ಸುವ್ವಿ 1ಇವರ ಚರಿತೆಯನ್ನು ತೋರಿದಷ್ಟು ತುತಿಸುವೆ |ಕಿವಿಗೊಟ್ಟು ಕೇಳುವದುಬುಧಜನರು | ಸುವ್ವಿ ||ಪವನಾಂಶರಿವರು ಕವಲಿಲ್ಲ ಖ್ಯಾತರಾಗಿ |ಅವನಿಯ ಸುರರಿಂದರ್ಚನೆಗೊಂಗುವರು | ಸುವ್ವಿ 2ಅಷ್ಟಾಕ್ಷರ ಮಂತ್ರವನು ತಪ್ಪದಲೆ ನಿತ್ಯವಾಗಿ |ನಿಷ್ಠೆಯಿಂದ ಭಜಿಸಲು ಭೂತ ಭಯವು | ಸುವ್ವಿ ||ಕುಷ್ಠರೋಗ ಕ್ಷಯ ಪಾಂಡು ಜ್ವರ ಸನ್ನಿ ಮೊದಲಾದ |ಅಷ್ಟುಪದ್ರವಾಕ್ಷಣ ಬಿಟ್ಟು ಓಡುವುದು | ಸುವ್ವಿ 3ಮೃತ್ತಿಕೆಮಾಲೆಅಂಗಾರದಿವ್ಯ ಮಂತ್ರಾಕ್ಷತೆಯು |ಹತ್ತಿರವಿರಲು ಕ್ಲೇಶವ ಲೇಶ ಕಾಣರು | ಸುವ್ವಿ ||ಎತ್ತ ಹೋದರು ಜನರಿಗೆ ಜಯಪ್ರದ ತೋರುವದು |ಕತ್ತಲಿಲ್ಲ ಶತಸಿದ್ಧ ಮತ್ತೇನುಕೇಳಿ| ಸುವ್ವಿ 4ಪಂಡಿತರು ಮೊದಲಾಗಿಹಸ್ತಿಉಷ್ಟ್ರ ಕುದುರೆಯ |ಹಿಂಡುಗಳು ತೃಷೆಯಿಂದ ಬಳಲುತಿರೆ | ಸುವ್ವಿ ||ದಂಡ ಜಗತಿಗೂರಿ ತೋಯ ತೆಗಿಸಿಯವನೀ |ಮಂಡಲದೊಳಗೆ ಪೆಸರಾದರಿವರು | ಸುವ್ವಿ 5ಕಟ್ಟಲಿಯ ಭತ್ತದೊಳು ಭೂಪದಳಯುಕ್ತ ಬರ |ಲಿಟ್ಟುಕೊಂಡು ಉಣಿಸಿ ಉತ್ತಮ ವರವ | ಸುವ್ವಿ ||ಕೊಟ್ಟು ಕಳಿಸಿದ ಮೇಲೆ ಆವು ಕೊಂಚಿಯಾಗಲಿಲ್ಲ |ಗಟ್ಟಿ ಸಂಕಲ್ಪರಿವರು ಮುನಿವರರು | ಸುವ್ವಿ 6ವಿಪ್ರರೆಲ್ಲರು ಹೇಳಿಸಿ ಕಟ್ಟಿಸಿದ ಸದನವ |ಥಟ್ಟನೆ ಕೆಡಿಸಿ ಭೂಪ ಮೆಚ್ಚುವಂದದಿ | ಸುವ್ವಿ ||ನೆಪ್ಪು ಧರೆಗಾಗಲೆಂದುಗುರುಸುಧೀಂದ್ರ ಕುಮಾರ |ಸರ್ಪನ ತೋರಿಸಿ ಸುಪ್ರಖ್ಯಾತರಾದರು | ಸುವ್ವಿ 7ದ್ವಿಜರ ಸ್ತೋಮವು ಬಾಯಿ ಬಿಡುತಿರೆ ದಯದಿಂದ |ನಿಜಕಾಷ್ಟವಿಳೆಗೆ ನಿಲ್ಲಿಸಿ ಮರವ | ಸುವ್ವಿ ||ಸೃಜಿಸಿ ಪಲ್ಲವ ಫಲಯುಕ್ತವಾಗಿ ತೋರಿಸಿದ |ಭಜಿಸಿರಿವರನ್ನು ಮಕ್ಕಳು ಬೇಡುವವರು | ಸುವ್ವಿ 8ಮುತ್ತಿನ ಮಾಲಿಕೆನೃಪಭಕ್ತಿಯಿಂದ ಕೊಡಲಾಗಿ |ಸಪ್ತಜಿಹ್ವಗುಣಿಸಿದ ಸರ್ವರು ನೋಡಿ | ಸುವ್ವಿ ||ಮತ್ತೆ ಬೇಡಲು ಪಾವಕನಿಗೆ ಪ್ರಾರ್ಥನೆಯ ಮಾಡಿ |ಮತ್ರ್ಯಪಗೆ ಇತ್ತರು ಮೊದಲಂತೆಯೆ ತಂದು | ಸುವ್ವಿ 9ಹಿಂದೆ ಮಾಡಿದ ದುಷ್ಕರ್ಮ ತೀರ ಬಂದದನು ನೋಡಿ |ಬಂದಾಕ್ಷಣದಲ್ಲಿ ಅವನ ವಿಚಾರಿಸಿ | ಸುವ್ವಿ ||ಇಂದಿರೇಶನ ಕಾರುಣ್ಯ ಬಲದಿಂದ ಜನನೋಡೆ |ಸಂದೇಹವಿಲ್ಲದೆ ಸುಲೋಕವನಿತ್ತರು | ಸುವ್ವಿ 10ತುಂಗಾತೀರ ಮಂತ್ರಾಲಯದಲ್ಲಿಶ್ರಾವಣಬಹುಳ |ಮಂಗಳ ಬಿದಿಗಿಯಲ್ಲಿ ನಿವಾಸವಾದರು | ಸುವ್ವಿ ||ಶೃಂಗಾರ ವೃಂದಾವನ ದ್ವಾದಶನಾಮ ಶ್ರೀ ಮುದ್ರೆಯು |ಕಂಗಳುಸಾಲವು ನೋಡ ಹೊದ್ದ ಶಾಠಿಯ | ಸುವ್ವಿ 11ಅಂಧಕಬಧಿರಕುಂಟ ನಾನಾ ರೋಗಿಗಳು ಮತ್ತೆ |ಕಂದ ವಜ್ರ್ಯ ಮೊದಲಾದವರಿಗೆಕಾಮ್ಯ| ಸುವ್ವಿ ||ತಂದುಕೊಡುವರು ಬೇಗ ಇತರ ಸಂಶಯವಿಲ್ಲ |ಮಂದಭಾಗ್ಯರಿಗೆ ಇವರ ಸೇವೆ ದೊರೆಯದೇ || ಸುವ್ವಿ 12ಕೌತುಕವೇನೆನ್ನಲಿ ಮುಂಜಿ ವಿವಾಹ ಮಾಡಿಸುವರು |ಚಾತುರ್ಮಾಸದೊಳಗೆ ಗ್ರಹಗಳಸ್ತವಾಗೆ | ಸುವ್ವಿ ||ಧಾತಾ ಪಿತ ನಿಲಯವಿದೇನೋಯೆಂದು ತೋರುವದು |ಪ್ರೀತಿಯುಳ್ಳ ಭಕ್ತರಿಗೆ ಅಧಮರಿಗಲ್ಲ | ಸುವ್ವಿ 13ಪಾಡ್ಯ ಪೂರ್ವಾರಾಧನೆ ಉತ್ತರಾರಾಧನೆಗೆ |ಒಡ್ಡಿಬರುವುದು ಎಂಟು ದಿಕ್ಕುಗಳಿಂದ ಜನವು | ಸುವ್ವಿ ||ಕಡ್ಡಿಹಿಡಿಯದಂಥ ಸಂದಣಿಯೊಳು ಸನ್ಮುಹೂರ್ತದಿ |ದೊಡ್ಡ ರಥವೇರಿ ಮಠವ ಸುತ್ತುವರು | ಸುವ್ವಿ 14ಇಷ್ಟೇಯೆನ್ನಲು ವಶವಲ್ಲ ಮಹಿಮೆಗಳಿನ್ನೂ ಉಂಟು |ನಷ್ಟ ಮಾಡುವರು ದುರ್ಮತ ದಾರಿದ್ರ್ಯವ | ಸುವ್ವಿ ||ಸೃಷ್ಟಿಗೊಡೆಯ ಪ್ರಾಣೇಶ ವಿಠ್ಠಲನೆಂದು ಪೇಳ್ವರು |ಎಷ್ಟು ಪೇಳಿದರೂ ಎನ್ನಿಂದಲಿ ತೀರದು | ಸುವ್ವಿ 15
--------------
ಪ್ರಾಣೇಶದಾಸರು
ಸುಳಾದಿಧ್ರುವತಾಳಬಾಲ ಸೂರ್ಯನಿಭಮಣ್ಯಾಂಕಮೌಳಿಹೀಲಿಯ ಪಿಂಛಪ್ರವಾಳಗುಚ್ಛಮ್ಯಾಲಲರದಂಡೆ ಝೇಂಕರಿಪಾಳಿಬಾಲರಯ್ಯನ ಮೊಗದ ಶೋಭೆಭ್ರೂಲತೆ ವಿಲಾಸ ನೋಟದಿಮಕರಕುಂಡಲವಿಶಾಲೇರಿ ಸಿರಿವತ್ಸಕೌಸ್ತುಭನೀಲಮಾಣಿಕ ವಜ್ರವಲಯ ವೈಜಂತಿವನಮಾಲೆ ತುಲಸಿ ಗಂಧ ಮೌಕ್ತಿಕ ಸರಗಳನೀಲನದ ರತುನದಾಮಪೊನ್ನಚೇಲನೂಪುರ ಕಿರುಗೆಜ್ಜೆಯ ಗೋಪಾಲ ಪರಸನ್ನವೆಂಕಟ ಕೃಷ್ಣ ಶಾಮಲಕಾಯ 1ಮಠ್ಯತಾಳನಂದವ್ರಜದ ಗೋವರ ವೃಂದಾಂಬುಧಿಗೆ ಪೂರ್ಣೇಂದು ನÀಂದಸೂನು ಲಾಸ್ಯವಾಡೆಒಂದೊಂದು ಲಯದಗತಿಹೊಂದ್ಯಮರದುಂದುಭಿಗಳ್ದಂ ಧಳಧಂ ಧಂದಳೆನ್ನೆಗಂಧರ್ವ ತುಂಬುರರು ನಾರಂದ ಮಹತೀಗೀತ ಪ್ರಬಂಧ ಹೇಳೆ ನಂದರಸದಿಂದಾಡುತಿರೆ ಗೋವಿಂದ ದಂದಂ ದಂದಂ ಧಿಮಿಕೆನ್ನಲಂದದಿ ಮದ್ದಳೆ ತಾಳಬಂದಿಮೊಗ ? ತುತ್ತುರಿ ಕಹಳೆ ಕಂಬುವೇಣುಗೂಡಿಅಂದಾಡಿದ ಪ್ರಸನ್ವೆಂಕಟ ಕೃಷ್ಣ ನಲವಿಂದ 2ತ್ರಿವಿಡಿ ತಾಳಶ್ರೀಕಮಲ ಭಭೂರ್ವಪಿನಾಕಿವಿಪಾಹಿಪನಾಕಜಾದ್ಯರ ಚೇಷ್ಟಕಶ್ರೀಕರ ಪ್ರಸನ್ನವೆಂಕಟ ಕೃಷ್ಣಆಕಳಕಾವರ ವಶಗ ಹಾಹಾ 3ಅಟ್ಟತಾಳಅನಂತನಿಗಮನಿಕರಕೆ ನಿಲುಕದಅನಂತಾನಂತ ಗುಣಪರಿಪೂರ್ಣಗೆಧÉೀನುಕಾವರ ಪಳ್ಳಿ ಗೋಟಲೆತೀಯಂ ತೀಯಂ ವೈಯ್ಯ ಅಯ್ಯಾಧೇನುಕಾವರ ಪಳ್ಳಿ ಗೋಟಲೆಜ್ಞಾನಿಜನಕೆಮೋದಹಾನಿ ಖಳರ್ಗೀವಜ್ಞಾನಾನಂದ ಬಾಲ ಪ್ರಸನ್ನವೆಂಕಟ ಕೃಷ್ಣಗೆ 4ಏಕತಾಳವೈಕುಂಠ ವಾರಿಜಾಕ್ಷ ಲೋಕರಕ್ಷತೋಕವೇಷಧರಮುರಹರಶ್ರೀಧರಶ್ರೀಕರ ಗುಣನಿಧೆ ಪುರಾಣಪುರುಷ ಹರೇ ಹರೇಗೋಕುಲಪತೆ ಗೋವರ್ಧನಧರಪಾಕಹ ಮದನಿಕಾರಕರ ಪ್ರಸನ್ವೆಂಕಟ ಕೃಷ್ಣನೆಲೊ ಭಕ್ತವತ್ಸಲ 5ಜತೆಶುಭಕೀರ್ತನೆ ಜಿಹ್ವೆಗೆ ಶುಭಕಥೆ ಕಿವಿಗಳಿಗೆಶುಭಮೂರ್ತಿ ಕಣ್ಗೀಯಯ್ಯ ಪ್ರಸನ್ವೆಂಕಟಕೃಷ್ಣಯ್ಯ
--------------
ಪ್ರಸನ್ನವೆಂಕಟದಾಸರು
ಸುಳಿದನ್ಯಾರೆ ಈಗ ಸುಳಿದನ್ಯಾರೆಕೆಳದಿ ಎನ್ನುಪ್ಪರಿಗೆಯ ಮುಂದೆಹೊಳೆವ ಹೊಂಬಕ್ಕಿಯ ಮೇಲೆಥಳಥಳಿಪ ಮಿಂಚಿನಂತೆ ಪ.ಎಸೆವಮಣಿಕನಕಾಭರಣಿಟ್ಟುನಸುನಗೆ ಬೆಳಗ ವೈಸರಿಸಿಬಿಸಜಾಕ್ಷಿಯಳೋರ್ವಳ ಕೂಡಹೊಸಪರಿಸರಸವಾಡುತಲಿ1ಮುಂದುಗ್ಗಡಿಪ ಸುರಸಂದೋಹಹಿಂದಕ್ಕೆಳದಿ ಮುನಿಸಮ್ಮೋಹಅಂದದಿ ಮುಂಗಡಿರುವ ವಾದ್ಯಸಂದಣಿಯ ಸೊಬಗಿನಲ್ಲಿ 2ಎನ್ನ ಮನದಿ ನೇಹವ ಬೀರಿಇನ್ನ್ಯಾಕೆ ದೂರ ನೋಡಿದನೆಮನ್ನಿಸ್ಯವನ ತಾರೆ ಶ್ರೀ ಪ್ರಸನ್ನವೆಂಕಟವರದನ ಬೇಗ 3
--------------
ಪ್ರಸನ್ನವೆಂಕಟದಾಸರು
ಸುಳಿದವನಾರಮ್ಮಯ್ಯ ಬೆಟ್ಟದಮೇಲೆಹಳುವದೊಳಿಹ ತಿಮ್ಮಣ್ಣ ಪ.ವಾರೆದುರುಬಿಗೆ ಸಂಪಿಗೆಗೂಡಿ ವಿಹಗವನೇರಿ ಬರುವನಕ್ಕವಾರಿಜಾನನವಜ್ರಮಣಿದಂಥಾನಗೆ ಸೊಬಗೇರಿದಹರಿಕಾಣಕ್ಕ1ಅಡಿಗೊಮ್ಮೆ ಜೀಯಾ ಪರಾಕೆಂಬ ಸುರಮುನಿಗಡಣದ ವೀರನಾರಮ್ಮನುಡಿದರೆ ನುಡಿವ ನುಡಿಯದಿದ್ದರೊಲ್ಲದಬೆಡಗಿನ ಮಹಿಮ ನೀರೆ 2ಮಕರಕುಂಡಲಶಂಖ ಚಕ್ರಕೌಸ್ತುಭಶಿರಿಯುಕುತ ವಕ್ಷದವನಾವನೆಅಖಿಳಜಗವ ತನ್ನ ಬಸುರಲಿ ಬಚ್ಚಿಟ್ಟಸಖಶ್ರೀನಿವಾಸದೇವನೆ3ಸಾಮಗಾನವನಾದರಿಪ ಶಾಮಲಾಂಗದಕೋಮಲದಾರುಹೇಳೆವ್ಯೋಮಕಚಾಜಾದಿ ವಂದಿತಾನತಜನಪ್ರೇಮವಾರಿಧಿ ನೋಡೆಲೆ 4ಸಿರಿಅಂಜನಾದ್ರಿಯೊಳಾವಾಗ ಮಂಗಳಚರಿತನು ದಾರೆ ತಂಗಿಮರೆಹೊಕ್ಕವರಕಾವಪರಸನ್ನವೆಂಕಟವರದನ ನಂಬು ಬೇಗ 5
--------------
ಪ್ರಸನ್ನವೆಂಕಟದಾಸರು
ಸುಳ್ಳು ಮಾತಿನ ನಿನ್ನಾಚಾರವು ತಿಳಿವಿಕೆ ಏನೇನಿಲ್ಲಎಲ್ಲ ಡಂಭವು ನಡತೆಯ ವಿವರವು ಗತಿಗೆನೀ ದೂರಾದೆಯಲ್ಲಪಮಂಡೆಯ ಬೋಳಿಸಿ ಕಣ್ಣನೆ ಮುಚ್ಚುವಿಪಿಟಿಪಿಟಿ ಏನದು ಮಂತ್ರದಂಡವೇತಕೆ ಮನಸದು ಚಂಚಲಏತಕೆ ಮಾಡುವಿ ತಂತ್ರ1ಕೈಯಣ ಗಿಂಡಿಯ ಕಂಕುಳ ಪೆಟ್ಟಿಗೆಕಟ್ಟಿಯಿಹುದು ತಲೆಗಟ್ಟುಬೈಗಳೆಂಬುವು ಪರಿಪರಿ ನೋಡಲುಕೋತಿ ಹಾರಿಕೆಯಳವಟ್ಟು2ಜ್ಞಾನವದಿಲ್ಲವು ಪುಸ್ತಕ ಮನೆಯೊಳುಹೋಳಿಗೆ ತುಪ್ಪದ ಗಬಕುಧ್ಯಾನವಿಲ್ಲವು ಮೌನವಿಲ್ಲವು ಯಮನಕೈಯಿಂದ ದುಬುಕು3ನಿರಿವಿಡಿದುಟ್ಟಿಹ ಪಂಚೆಕಚ್ಚೆಯಧೋತ್ರನಾಮ ವಿಭೂತಿಯ ಬೆಳಕುಪರಮಾನ್ನವ ಸಕ್ಕರೆಯನು ಕಲಸಿನುಂಗುವೆ ಗುಳುಕು ಗುಳುಕು4ಮುಂದೆ ಹೇಳುವನ ಮೆಟ್ಟಿಕೊಂಡುಂಬುದುಇಂತಿದು ನಿನ್ನಯ ಬದುಕುಸುಂದರ ಚಿದಾನಂದ ಸ್ವರೂಪವ ತಿಳಿವುದುಎಂದುಎಂದಿಗೆ ಬಲುಧಡಕ5
--------------
ಚಿದಾನಂದ ಅವಧೂತರು
ಸೇವಕತನದ ರುಚಿಯೇನಳೆದೆಯೋ |ದೇವ ಹನುಮರಾಯ ನೀ ವೈರಾಗ್ಯ ಬೇಡಿ ಪಉದಧಿಯ ದಾಟಿ ಸೀತೆಯ ಕಂಡು ಬಂದಾಗಮದುವೆಯ ಮಾಡೆನ್ನಬಾರದಿತ್ತೆ ||ಪದದಿ ಪಾಷಾಣವ ಪೆಣ್ಣ ಮಾಡಿದನಿಗೆಇದು ಏನಾಶ್ಚರ್ಯವೊ ನೀ ಬಯಸಲೊಲ್ಲದೆ 1ಕ್ಷಣದೊಳು ಸಂಜೀವನ ಗಿರಿ ತಂದಾಗಧನವನು ಬೇಡಲು ಕೊಡದಿಹನೇ ||ವಿನಯದ ವಿಭೀಷಣಗೆ ರಾಜ್ಯಪದವನಿತ್ತವನಿಗೆನಾಶ್ಚರ್ಯವೊ ಹನುಮ ನೀನೊಲ್ಲದೆ 2ಸಾರ್ವಭೌಮನು ತಾನೆ ಮೆಚ್ಚಿ ಬಂದಾಗಲೆಉರ್ಪಿಯ ಬೇಡಲು ಕೊಡದಿಹನೇಸರ್ವವ ತೊರೆದು ಶ್ರೀ ಪುರಂದರವಿಠಲನನಿವ್ರ್ಯಾಜ ಭಕುತಿಯ ಬೇಡಿಕೊಂಡೆಯಲ್ಲದೆ 3
--------------
ಪುರಂದರದಾಸರು
ಸೈಶಬಾಸ ಗಬರು ದರೋಡೆ ಬರತದಅಬಬ್ಬ ನೋಡಿದರೆ ಆರ್ಭಟಸಬಬ ಐತಿದು ಸಾಧುರ ಪುಣ್ಯಶುಭನುಡಿಯುತದ ಶಕುನದ ಹಕ್ಕಿಪಐದು ಮಂದಿ ನೆಲೆಗಳ್ಳರು ಕೂಡಿಊರ ಆತ್ಮದಲಿ ಸೇರುವರುಐಕ್ಯದಿಂದ ಶ್ರೀ ಗುರುವಿನ ಕೂಡಿಐದು ಮಂದಿ ಬಿಟ್ಟೋಡುವರು1ಎಂಟು ಹತ್ತು ಮಂದಿ ಬಂಟರು ಕೂಡಿಮುತ್ತಿಗೆ ಹಾಕಿ ನಿನ್ನ ಕೆಡಿಸುವರುಸತ್ಯನಾದ ಶ್ರೀ ಗುರುವಿನ ನೆನೆದರೆಹತ್ತು ಮಂದಿ ಬಿಟ್ಟೋಡುವರು2ನೋಡಿ ಬಗೆಯೋ ನಿನ್ನ ಕಾಡವು ಹುಲಿಗಳುಬೇಡಿದ ಪದಾರ್ಥ ದೊರಕುವುದುಕೂಡಿ ಭಜಿಸೊ ಶ್ರೀ ಚಿದಾನಂದನಮೂಲ ಮಂತ್ರಪ್ರಣವದೊರಕುವುದು3
--------------
ಚಿದಾನಂದ ಅವಧೂತರು
ಸೊಡ್ಡುಡಂಬಕಅವನಿಭಾರಂಗೆ ಸೊಡ್ಡುಸೊಡ್ಡು ಭಕುತಿಹೀನ ಹೆಡ್ಡಂಗೆ ಸೊಡ್ಡು ಪ.ಶುದ್ಧ ಸಾತ್ವಿಕಗುರುಮಧ್ವಮತವ ಬಿಟ್ಟುಬದ್ದಡ್ಡ ದಾರಿಯವಿಡಿದಗೆ ಸೊಡ್ಡುಮದ್ಯಘಟಕೆ ಮನವಿಟ್ಟು ಪೀಯೂಷವನೊದ್ದು ಕಳೆದ ಹೊಲೆ ಮಾನಿಸಗೆ ಸೊಡ್ಡು 1ಜಗದೆರೆಯನ ಜಗದಾಕಾರ ಸಟೆಯೆಂದುಬಗುಳ್ವ ಬಾಯೊಳು ಹೊಡೆ ಮಗುಳೆ ಸೊಡ್ಡುಅಘಹರನಾಳಿಗಾಳಾಗಿ ದೊರೆಯೆ ತಾನೆಂಬಗೆ ನಗೆಗೇಡಿನಾ ಮಾತೆ ಸೊಡ್ಡು 2ಶ್ರುತಿಸ್ಮøತಿಗಳವಡದನಂತಗುಣಗೆ ದುರ್ಮತಿಯಲ್ಲಿ ನಿರ್ಗುಣೆಂದವಗೆ ಸೊಡ್ಡುರತಿಪತಿಪಿತನಲ್ಲದನ್ಯ ಸರ್ವೋತ್ತಮತ್ವಕೆ ನಿರಯದಂಧತಮದ ಸೊಡ್ಡು 3ಹರಿಗೆ ಮನುಭವವಿಧಿಯೆಂದೊಕ್ಕಣಿಪಗೆಚಿರಕ್ಲೇಶ ಭವಯಾತ್ರೆಲಂಜು ಸೊಡ್ಡುಒರೆದೊರೆದಖಿಳಾಗಮಾರ್ಥವ ತಿಳಿದೇನುಹರಿಯೊಪ್ಪದಾ ನರಖರನಿಗೆ ಸೊಡ್ಡು 4ಪರಮಭಾಗವತರಾಚರಣೆಗೆ ಅಸೂಯಕ್ಕವರಗ್ರಂಥಚೋರಗೆ ಶಿರದಿ ಸೊಡ್ಡುಸಿರಿಪತಿ ಪ್ರಸನ್ವೆಂಕಟೇಶನ ಭಟರ ಕಂಡ್ಹರುಷಲ್ಲದವಗೆ ಮೂಗಲಿ ಸುಣ್ಣ ಸೊಡ್ಡು 5
--------------
ಪ್ರಸನ್ನವೆಂಕಟದಾಸರು
ಸ್ಮರಿಸು ಮನವೆ ಸ್ಮರಿಸು ಸ್ಮರನ ಪಿತನದುರಿತಭವಭಯಸಮೂಹದೂರಮಾವರನಪ.ಒಬ್ಬ ಬಾಲನಯ್ಯನ ಒದೆದಒಬ್ಬ ಬಾಲಗಟವಿಲೊಲಿದಒಬ್ಬ ಬಾಲನ ಅಪ್ಪಿ ರಾಜ್ಯವ ಒಬ್ಬ ಬಾಲಗಿತ್ತುಒಬ್ಬ ಬಾಲೆಯುಂಗುಟದಿ ಪೆತ್ತಒಬ್ಬ ಬಾಲೆಯುಂಗುಟದಿ ಪೊತ್ತಒಬ್ಬ ಬಾಲೆಗಕ್ಷಯ್ಯೆಂದು ಕುಕ್ಷಿಲೊಬ್ಬ ಬಾಲಪನ 1ಇಬ್ಬರ ಮೂರುಸಾರೆಲಳಿದಇಬ್ಬರಿಹ ಭೂಜವ ಮುರಿದಇಬ್ಬರೊಗ್ಗೂಡಿ ಬೆಳೆದು ಹನ್ನಿಬ್ಬರ ಬಡಿದಇಬ್ಬರ ಕಾರಾಗಾರ ತಗಿದಇಬ್ಬರುಪ್ಪು ಬೇಡಲಿ ಸದೆದಇಬ್ಬರಿಂದೈದಿ ಹೋಳಮಯ್ಯನ ನಿಬ್ಬರಿಸಿದನ 2ಮೂರು ಮನೆಯೊಳಗಿಹನಮೂರುಮಾತಿಗೆ ಹೊಂದದವನಮೂರು ಮೈಯನ ಕೃತ ಸೇವೆಗೆ ಮೂರು ರೂಪಾದನಮೂರು ಪೊಳಲ ಹಗೆಕಾರನಮೂರುವೆಂಬನುರುಹಿದನಮೂರಾಂತಕ ಪ್ರಸನ್ವೆಂಕಟ ಮೂರು ಲೋಕೇಶನ 3
--------------
ಪ್ರಸನ್ನವೆಂಕಟದಾಸರು
ಸ್ವಾಮಿ ನೀ ಮಾಡಿದುಪಕಾರಾ ಕಿಂತು ಪಾಮರನಪ್ರತಿಉಪಕಾರಾ | ಭೀಮಾಶಂಕರ ಗುರುವಾಗುವ ಪ್ರಕಾರಾ |ಈ ಮನಕೆ ಎಂದಿಗೆ ತೋರದಾಕಾರಾ ||ಸ್ವಾಮಿ||ಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಲಕ್ಷ ಎಂಬತ್ತು ಮೂರೊಂದನು |ಯೋನಿಕುಕ್ಷಿಯೊಳಗೆಹೊಕ್ಕು ಬಂದೆನೊ | ಭಕ್ಷ್ಯಾಭಕ್ಷ್ಯವ ಮೆದ್ದೆನು |ಅನುಪೇಕ್ಷಿಯೊಳಗೆ ಮುಳುಗಿದ್ದೆನೋ | ಭಿಕ್ಷುಕರೊಡೆಯನಿರೀಕ್ಷಿಸಿ ಕೃಪಾ ಕಟಾಕ್ಷದಿ ಸದ್ಗುರು ರಕ್ಷಿಸಿದಂಥಾ1ನೀರೊಳು ಜೀವಿಸುತಿದೆ ಮೀನಾ |ನೀರು ಕಾರಣವರಿಯದು | ಆ ಮೀನಾ |ಪಾರವಿಲ್ಲದಂಥದೀ ಮೀನಾ |ಪರವಸ್ತುಖೂನನರಿಯದು ಮನ ಮೀನಾ |ನಾರೇರ ನೋಟಕ್ಕೆ ಸೇರಿ ತಾ ಹೋದೀತು |ಸಾರವಸ್ತುವ ತಂದು ತೋರಿಸಿದಂಥ2ತನುವು ತನ್ನೊಳಗೆ ತಾ ತೋರದು |ತನು ಮನದ ವೃತ್ತಿಗೆ ತಾ ಬಾರದು |ಜನನ ಮೃತ್ಯಂಗಳು ದೋರದು |ಎನಗೆ ಸಾಧು ಸಜ್ಜನ ಸಂಗ ದೊರಕದು |ಘನಗುರುಶಂಕರ ಚಿನುಮಯರೂಪ- |ದನುಭವಕೆ ತಂದು ಎನಗೆ ನೀ ಕೊಟ್ಟಂಥ3
--------------
ಜಕ್ಕಪ್ಪಯ್ಯನವರು
ಸ್ವಾಮಿ ಮುಖ್ಯಪ್ರಾಣ-ನೀ-ಮಲೆವರ ಗಂಟಲಗಾಣ ಪಸಕಲ ವಿದ್ಯಾ ಪ್ರವೀಣ-ನೀ-ಹಿಡಿದೆಯೋ ರಾಮರಚರಣಅ.ಪಏಕಾದಶೀಯ ರುದ್ರ-ನೀ-ಹಿಡಿದೆಯೊ ರಾಮರ ಮುದ್ರಾಸೇತುವೆಗಟ್ಟಿ ಸಮುದ್ರ-ನೀ-ಹಾರಿದೆಯೋ ಬಲಭದ್ರ 1ಸಂಜೀವಿನಿ ಪರ್ವತವನ್ನು-ಅಂಜದೆ ತಂದೆಯೊ ನೀನು |ಅಂಜನೆತನುಸಂಭವನು-ನಿನ್ನ-ಬೇಡಿಕೊಂಬೆನೋ ನಾನು2ವೈಕುಂಠಸ್ಥಳದಿಂದ ಬಂದು-ಪಂಪಾಕ್ಷೇತ್ರದಿನಿಂದು|ಯಂತ್ರೋದ್ಧಾರಕನೆಂದು-ಪುರಂದರ ವಿಠಲನೆ ಸಲಹೆಂದು 3
--------------
ಪುರಂದರದಾಸರು