ಒಟ್ಟು 8092 ಕಡೆಗಳಲ್ಲಿ , 130 ದಾಸರು , 4966 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರೋಗಣೆಯ ಮಾಡೋ ಎನ್ನಯ್ಯಆರೋಗಣೆಯ ಮಾಡೋ ಪ.ನಾರದಾರ್ಚಿತಪಾದ ನಾರಾಯಣ ಸ್ವಾಮೀ ಅ.ಪಸರಸಿಜಾಲಯೆ ಲಕ್ಷ್ಮಿ ಸರಸ್ವತಿಭಾರತಿಪರಿಪರಿ ಅಡಿಗೆಯ ಸಿದ್ದ ಮಾಡಿಹರೊ ||ಪರಿಮಿತಿಯಿಲ್ಲದ ರುಚಿಯ ಪದಾರ್ಥವಪರಮಪುರುಷ ಉಂಡು ದಯ ಮಾಡೋ ಸ್ವಾಮಿ1ಅಂಬುಜಮುಖಿ ಲಕ್ಷ್ಮಿ ತಾಂಬೂಲ ಕೊಡುವಳುಕಂಬುಕಂಧರನೇ ನೀ ಕೈಕೊಳು ಬೇಗ ||ರಂಭೆ ಊರ್ವಸಿ ಮೇನಕೆ ಮೊದಲಾದವರುಸಂಭ್ರಮದಿ ಬಂದು ನಾಟ್ಯಕೆ ಕಾದಿಹರೊ ಸ್ವಾಮಿ 2ಸರಸಿಜಭವನಯ್ಯ ಪುರಂದರವಿಠಲಸರುವಭೋಗಭುಂಜಿಪ ನರರ ಪಾಲಿಸೊ ದೇವಾ3
--------------
ಪುರಂದರದಾಸರು
ಆವ ಕುಲವಾದರೇನು ಪ.ಭಾವದ ಎಲ್ಲಾನ ತಿಳದವನಿಗೆ ಮತ್ತೇ ಅಪಅಸುಡೊಂಕು ಕಬ್ದು ಇರಲು - ಅದರೊಳಗಿದ್ದರಸ ತಾನು ಡೊಂಕೇನಲೊ - ಮರುಳೆವಿಷಯಭಾವನೆ ಬಿಟ್ಟು ನೀ ಹೋಗಿ ಗುರುಗಳಹಸನಾಗಿ ಕೇಳು ಕಾಣೋ - ಮನುಜಾ 1ನಾನಾವರ್ಣದ ಆಕಳ - ಕ್ಷೀರದಲಿನಾನಾವರ್ಣಗಳಹುದೆ - ಮನುಜಾಹೀನ ಭಾವನೆಗಳನಿಂದಿಟ್ಟು ನೀ ಪೋಗಿಜ್ಞಾನಿಗಳ ಕೇಳು ಕಾಣೋ - ಮನುಜಾ 2ಶರಧಿಯೊಳ ತೆರೆನೊರೆಗಳಾ - ಪರಿಯಂತೆಶರೀರವಲ್ಲದೆ ಬೇರಿಹುದೇ ?ವರಪುರಂದರವಿಠಲನ ಸ್ಮರಿಸುತಿರಲು ನಿನಗೆಸಿರಿಯನು ಮುಕುತಿಯಹುದು - ಮನುಜಾ 3
--------------
ಪುರಂದರದಾಸರು
ಆವ ಪುಣ್ಯವೊ ಗೋಪಿಗಾವ ಪುಣ್ಯವೊ ಪ.ಆವ ಪರಬೊಮ್ಮನಾವಾವ ಪರಿಯಲಾಡಿಸುವ ಅ.ಪ.ಮಾರನನ್ನ ಪೆತ್ತನ ಕುಮಾರನೆಂದು ಕರೆದು ತನ್ನಮಾರಬೀಸಿ ಬಿಗಿದಪ್ಪಿ ಮೋರೆ ನೋಡಿ ಮೊಲೆಯ ಕೊಡುವ1ಕಾಲನಾಗಿ ಜಗವ ತತ್ಕಾಲದಲ್ಲಿ ನುಂಗುವಂಗೆಕಾಲಮೇಲೆ ಮಲಗಿಸಿ ತ್ರಿಕಾಲದಲ್ಲಿ ಹಾಲನೆರೆವ2ನೀತ ಪ್ರಭು ವಿಶ್ವಕೆ ವಿನೀತನಾಗಿ ಕೈಯ ಒಡ್ಡೆನೀತಿ ಹೇಳಿ ನವನವನೀತವಿತ್ತು ರಂಜಿಸುವ 3ಆನೆಗೊಲಿದು ಎಂಟುದಿಕ್ಕಿನಾನೆಯಾಳ್ದ ಅಪ್ರತಿಮ ದಯಾನಿಧಿಯ ಕುಳ್ಳಿರಿಸಿ ಆನೆ ಬಂತಂತಾನೆಯೆಂಬ 4ತೋಳನೋಡುಧೈರ್ಯದೀರ್ಹತ್ತು ತೋಳಿನವನ ಹೋರುವ ನಳಿತೋಳವಿಡಿದು ವಾರಂವಾರ ತೋಳನ್ನಾಡೊ ಮಗನೆ ಎಂಬ 5ತಾರಕೋಪದೇಶಕಗೆತಾರಕರಂಗನಳಲುತಾರಕಪತಿಯ ತೋರಿ ತಾರಕ್ಕ ಬಿಂದಿಗೆಯೆಂಬ 6ದಟ್ಟವಾದ ಜೀವಜಾಲದಅಟ್ಟುಳಿನಿವಾರಣಂಗೆದಟ್ಟು ದಟ್ಟು ಎಂದು ರಂಗನ ದಟ್ಟ ಸಾಲನಿಕ್ಕಿಸುವ 7ಚಿನ್ಮಯಾತ್ಮ ಮುಕ್ತಾಮುಕ್ತ ಚಿನ್ನರನಾಡಿಸುವಂಗೆಚಿನ್ನ ತಾ ಹೊನ್ನ ಗುಬ್ಬಿ ಚಿನ್ನ ಗುಬ್ಬಿಯಾಡಿಸುವ 8ದೃಷ್ಟಾದೃಷ್ಟದೇಹಿಗಳದೃಷ್ಟ ನಿಯಾಮಕಂಗೆದೃಷ್ಟಿ ತಾಕಿತೆಂದು ತೆಗೆದು ದೃಷ್ಟಿ ದಣಿಯೆತುಷ್ಟಿಬಡುವ9ಅನ್ನಮಯನು ಬ್ರಹ್ಮಾದ್ಯರಿಗೆ ಅನ್ನಕಲ್ಪತರುಪರಮಾನ್ನ ಚಿನ್ನಿಪಾಲಿನಿಂದ ಅನ್ನಪ್ರಾಶನ ಮಾಡಿಸುವ 10ನಿತ್ಯತೃಪ್ತ ನಿತ್ಯಾನಂದ ನಿತ್ಯಭೋಗಿ ನಿತ್ಯತಂತ್ರನಿತ್ಯಕರ್ಮನ್ನೆತ್ತಿಕೊಂಡುನೆತ್ತಿಮೂಸಿ ಮುದ್ದಿಸುವ11ಆ ಲಯದಲ್ಲಾಲದೆಲೆ ಆಲಯಗೆ ತೊಟ್ಟಿಲು ಉಯ್ಯಾಲೆಯಿಟ್ಟು ಮುದ್ದು ಮಾತನಾಲಿಸಿ ಜೋಗುಳವ ಪಾಡುವ 12ಅಂಜಲಿಪುಟದಿ ಸುರರಂಜಿಕೆಯ ಬಿಡಿಸುವ ನಿರÀಂಜನಗಭ್ಯಂಜನಿಸಿ ಅಂಜನಿಟ್ಟುಅಮ್ಮೆಕೊಡುವ13ಸಪ್ತ ಸಪ್ತಭುವನಜನಕೆಸುಪ್ತಿಎಚ್ಚರೀವನಿಗೆಸುಪ್ತಿಕಾಲವೆಂದು ತಾನು ಸುಪ್ತಳಾಗಿ ಸ್ತನವ ಕೊಡುವ14ತನ್ನ ಮಗನ ನಡೆಯ ನುಡಿಯ ತನ್ನ ಪತಿಗೆ ಹೇಳಿ ಹಿಗ್ಗಿತನ್ನ ಭಾಗ್ಯ ಲಕ್ಷ್ಮೀಶ ಪ್ರಸನ್ನವೆಂಕಟ ಕೃಷ್ಣಯೆಂಬ 15
--------------
ಪ್ರಸನ್ನವೆಂಕಟದಾಸರು
ಆವ ಮಾನುನಿ ನಿನಗೇನು ಮಾಡಿದಳೊ ಇಂದಿನಭಾವಬೇರ್ಯಾಗಿದೆ ಮುಖದಲಿ ಕೇಳೊಪ.ಬಿರಿಗಣ್ಣು ಬಿಡುವೆ ಮೊಲೆಯನೆÉೂಲ್ಲೆ ಕಂದ ದಿವ್ಯಶರೀರಕ್ಕೆ ಗ್ರಹಕಪಟೇನೊ ಮುಕುಂದ 1ಬಾಯೊಳು ಬಿರಿಜೊಲ್ಲು ಬರುತಿದೆ ಮಗುವೆ ಹಾ ಹಾಹಾಯೆಂದು ತೆರಬಾಯ ತೆರದ್ಯಾಕೊ ನಗುವೆ 2ತಿರುಕರಣುಗನಂತೆ ತಿರುಗುವೆ ಬಾಲ ಲೇಶಕರುಣವಿಲ್ಲ ಎನ್ನೊಳು ಪುಣ್ಯಶೀಲ 3ಅನ್ನವನೊಲ್ಲೆ ಮನೆಯ ಬಿಟ್ಟೆಯೊ ಕೂಸು ನಿನ್ನಚಿನ್ನತನದ್ಭುತವಾಗಿದೆ ಲೇಸೊ 4ಉದ್ಹಿಡಿದಾಡುವ ಮರುಳಾಂತ ಶಿಶುವೆ ಪುಣ್ಯದೆÉೂಡೆಯ ಪ್ರಸನ್ನವೆಂಕಟನೆ ಎನ್ನಸುವೆ 5
--------------
ಪ್ರಸನ್ನವೆಂಕಟದಾಸರು
ಆವಳಂಜಿಸಿದವಳು ಪೇಳು ರಂಗಮ್ಮ ನಾನವಳಗಾರುಮಾಡುವೆ ನಡೆ ಕೃಷ್ಣಮ್ಮಪ.ದೂರುವಿರಾದರೆ ಮಗನ ದಾರಿಗೆ ಹೋಗದಿರಿ ಎಂದುಸಾರಿ ಕೈಯಕಡ್ಡಿಕೊಟ್ಟೆ ಜಾರೆಯರಿಗೆಸಾರಿ ಸಾರಿಗೆ ನಿನ್ನನು ರಟ್ಟು ಮಾಡುವ ಮಾತೇನುಆರಿಗೆ ಮಕ್ಕಳಿಲ್ಲೇನೊ ನಾನೇ ಹಡೆದವಳೇನೊ 1ಇದ್ದರಿರಲಿ ಕೂಸಿನ ಆಡುವಾಟಕೊಪ್ಪಿದರೆಎದ್ದು ಹೋದರೆ ಹೋಗಲಿ ಆವಪಳ್ಳಿಂದಕದ್ದು ತಿಂದನೆಂದಾವಾಗ ಕೂಗುವ ಕಾರಣವೇನೊಮುದ್ದೆ ಬೆಣ್ಣೆ ಕೈಯಲಿತ್ತರೊಲ್ಲದೆ ಚೆಲ್ಲುವೆ ಕಂದ 2ಏಸುಪುಣ್ಯರಾಶಿ ಕೂಡಿತೆಂದು ನಿನ್ನಾಟವ ನೋಡಿಬೀಸಿ ಬಿಗಿದಪ್ಪುವಂಥ ಭಾಗ್ಯವನುಂಡೆಕೂಸೆ ನಿನ್ನ ಕಂಡಸೂಯೆಬಡುವರಳಿಯಲಮ್ಮದಾಸರಿಗೆ ಲೇಸಾಗಲಿ ಪ್ರಸನ್ವೆಂಕಟ ಕೃಷ್ಣ 3
--------------
ಪ್ರಸನ್ನವೆಂಕಟದಾಸರು
ಆವಾಗ್ಗೆ ಕಾಂಬೆ ನಿನ್ನ ಮೈಯ ನನ್ನಕಾವಮುಕುಂದ ಮುರಾರಿಯ ಸರ್ವಜೀವಕೆ ಛಾಯನಾದವನ ನನ್ನಸಾವು ಹುಟ್ಟು ತಪ್ಪಿಸುವನ ಪ.ದೇಶ ದೇಶ ತಿರುಗಿ ಸೋತೆ ನಾ ಬಲುದೇಶಿಗನಾದೆ ಕೃಶಾದೆ ನಾ ತನ್ನದಾಸರ ಹಾನಿ ಇನ್ನಾರಿಗೆ ಆವಾಸುಕಿಶಯನಗೆ ಹೇಳಿದೆ 1ಆಪತ್ತು ಬರಲೀಸ ಎಂದಿಗೆತ್ರಿವಿಧತಾಪವನಾರೈವದಾವಾಗ್ಗೆ ಬಹುಪಾಪ ನೂಕಿದೆ ಅವನ ನಾಮದೆ ಕಂಡಶ್ರೀಪತಿಗೆಲ್ಲ ಬಿನ್ನೈಪೆನಿಂದೆ 2ಕಂಗಳುದಣಿವನ್ನ ಕಾಂಬೆನೆ ಎನ್ನಿಂಗಿತ ಹರಿಮೆಚ್ಚಿ ಕೇಳ್ವನೆನಿತ್ಯಮಂಗಳ ಪ್ರಸನ್ವೆಂಕಟಾಚಲವಾಸರಂಗನು ನಿಜಭಕ್ತವತ್ಸಲ 3
--------------
ಪ್ರಸನ್ನವೆಂಕಟದಾಸರು
ಆವಾವಾಗಲಿ ರಾಮನ ನೆನೆವನವ ಜಾಣ ಪ.ಸಚೇಲ ಸ್ನಾನ ಮೋನಗಳ್ಯಾಕೆಶುಚಿ ಇಲ್ಲೆಂಬನುಮಾನಗಳ್ಯಾಕೆಉಚಿತಾನುಚಿತ ಕಾಲವದ್ಯಾಕಘಪಚನ ಮಾಡುವ ಹರಿನಾಮಾಗ್ನಿ 1ಅಮಲ ಸ್ಥಾನವು ಬರಲಿನ್ಯಾಕೆಕ್ರಮದಕ್ಷರ ಮಾಲಿಕೆ ಬೇಕ್ಯಾಕೆರಮಣೀಯಾಸನ ಬಯಸುವದ್ಯಾಕತಿಕ್ರಮವಾಹುದು ಭವಕೋಟಿಯ ವಾರ್ತೆ 2ಆಲಸ್ಯದೆ ಅವನ ಮರೆಯಲಿನ್ಯಾಕೆಪಾಲಿಪ ಕರುಣಿಯ ಬಿಟ್ಟಿರಲ್ಯಾಕೆನಾಲಿಗೆಲವನಿರೆ ಕಾಲನ ದೂತರಹಾಳುಮಾಡುವ ಪ್ರಸನ್ವೆಂಕಟ ದಾತಾರ 3
--------------
ಪ್ರಸನ್ನವೆಂಕಟದಾಸರು
ಆಶಾವಿಡಿದು ಬಂದಿಹೆ ದೇಶಿಗ ನಾನು ಅಭಿಲಾಷೆ ಪೂರಿಸೆಮ್ಮಯ್ಯ ಶೇಷಗಿರಿಯ ತಿಮ್ಮ್ಮಯ್ಯ ಪ.ಘೊರ ಭವಾರಣ್ಯದಲ್ಲಿ ದಾರಾಪತ್ಯಬಂಧು ಜನರೆಂಬಕ್ರೂರಮೃಗಾಸ್ಯಕೆ ಸಿಲುಕಿ ದಾರಿವರಿಯೆನಾರಸಿಂಹ ನಿನ್ನವರು ತೋರಿದರು ಶ್ರೀಮಂಗಳಮೂರುತಿಯ ಕಂಡು ಸುಖಸಾರಾಮೃತವುಣ್ಣಲಾಗಿ 1ಒಡಲಿಗೋಸುಗವೃತ್ತಿಹಿಡಿದು ತಡವರಿಸುತಕಡೆಗಾಣದೊರಲಿ ಅಂಜ್ಯೋಡುತಿರಲುಒಡೆಯ ನಿನ್ನಯ ಸಿರಿಸಡಗರ ನಾಮಕೇಳಿಹುಡುಕುತ ನಲಿವಿಂದ ಬಡತನ ಹಿಂಗಲೆಂದು 2ಈಗಿದೆÉೀ ವೈಕುಂಠವೆಂದುಭೋಗಿವಾಸುದೇವನೆಂದುಬಾಗಿಶ್ರುತಿಸ್ಮøತಿಗಳು ಕೂಗುತಲಿವೆಯೋಗಿಪ್ರಸನ್ವೆಂಕಟ ಭಾಗವತರ ಪ್ರಿಯನೆಂದುಹೀಗೆ ಘನಗೋಳಿಡುತ ನಾ ನೀಗುವೆ ಚಿಂತೆಯನೆಂದು 3
--------------
ಪ್ರಸನ್ನವೆಂಕಟದಾಸರು
ಆಳಬೇಕೈ ಸುಮತಿ ಪತಿವ್ರತೆಯಜಾಳಿಸಬೇಕೈ ಕುಬುದ್ಧಿಯ ಬುಧರು ಪ.ನಾಗರಕ್ಷಕನಪಾದಹೊಂದಿ ವಿಷಯ ಸ್ವಾರ್ಥನೀಗಿಹ ಮಡದಿಯ ಕೂಡಬೇಕೈಭಾಗವತರನು ಮಲಿನಿಪ ಮೋಹಿಯಮೂಗು ಮುಂದಲೆ ಮೊಲೆ ಕೊಯಿದಟ್ಟಬೇಕೈ 1ಶೀಲವಿಡಿದು ನವನಾರೇರ ಸಖ್ಯದಲಿಆಲಯನಡೆಸುವಳಿರಲಿಬೇಕಯ್ಯಆಲಿಕುಣಿಸಿ ನವ ಪುರುಷರ ಕಂಡು ತಾಮ್ಯಾಲೆ ಬೀಳುವಳಜಿಹ್ವೆಸೀಳಬೇಕೈ2ಷಂಡಗಂಡಗೆ ಹಿತ ಹೇಳಿ ಅಂಗವದಂಡಿಸಿ ಕೊಳುವಳ ನಂಬಬೇಕೈಕಂಡ ಬೀದಿಲಿ ಸಾಧು ಕೊಂಡೆಯಾಡುವಳಮಂಡೆಬೋಳಿಸಿ ಕತ್ತೆನೇರಿಸಬೇಕೈ3ಮನೆಗೆಲಸದಲಿಟ್ಟು ಮಹಾತ್ಮರ ಸೇವೆಗೆಂದೂದಣಿಯದ ರಂಭೆಯ ಒಲಿಸಬೇಕುಅಣಕಿಸಿ ಒಲಿದರ ನೀಚಾನುಕೂಲೆಯಾದತನಗಲ್ಲದವಳ ಹೊಳೆ ನೂಕಬೇಕೈ 4ಶಶಿರವಿರಾಶಿ ಮೈ ಹೊಳವಿಲಿ ಮೆರೆವಕುಶಲಗೆ ಮನವಿಟ್ಟ ಜಾಣೆ ಬೇಕೈಪ್ರಸನ್ನವೆಂಕಟಪತಿಯಾಕಾರ ನೋಡಿ ತಾಅಶರೀರನೆಂಬಳ್ಗೆ ವಿಷವಿಕ್ಕಿರೈ 5
--------------
ಪ್ರಸನ್ನವೆಂಕಟದಾಸರು
ಇ. ಶ್ರೀಹರಿ ಲಕ್ಷ್ಮಿಯರುಅಂಗಳದೊಳಗಾಡೋ ರಂಗಪರಹೆಂಗಳ ಮನೆಗ್ಹೋಗ ಬ್ಯಾಡೋ ನೀಲಾಂಗ ಪದಧಿಘೃತಚೋರನೆನ್ನುವರು ನಿನ್ನಬೆದರಿಸಿ ಜರೆವರು ಪದುಮನೇತ್ರೆಯರುವಿಧವಿಧದಲಿ ಬಾಧಿಸುವರು ಕೊರಳಪದಕದ ಸರವನ್ನು ಸೆಳೆದುಕೊಳ್ಳುವರು 1ಕಿರುಕುಳ ....ನಿನ್ನ ಮನಕರಕರಿಸುವದೆನಗಿನಿತು ಕೇಳಣ್ಣಕರುಗಳ ಬಿಡ ಹೇಳಿ ಮುನ್ನಾ ಬಲುಹಗರಣಗೈಯ್ಯುವರೆನ್ನಾ ಸಂಪನ್ನಾ 2ನುಡಿಯಲಾಲಿಸುಮುದ್ದು ಕಂದಾ ನಿನ-ಗಿಡುವೆನಕ್ಷತೆ ವಸ್ತ್ರಾಭರಣ ಸುಗಂಧಾಕೊಡುವೆನುದಧಿಘೃತದಿಂದಾ ಕಾೈದಕಡಬು ಕಜ್ಜಾಯ ಅತಿರಸವಾ ಗೋವಿಂದಾ 3
--------------
ಗೋವಿಂದದಾಸ
ಇಂಥ ಬುದ್ಧಿಯಲ್ಲಿ ಸೇರಿತೊ ಕೃಷ್ಣ ಗೋಕುಲದೊಳುಎಂಥವರೂ ನಿನ್ನ ದೂರು ಹೇಳುತಿಪ್ಪರೊ ಹೀಗಾದರೆ ನಿಲ್ಲರೋ ಪಗಂಡನುಳ್ಳ ನಾರಿಯರಾ ಮಂದಿಯೆಲ್ಲ ನೋಡ ಬಲು ಉ-ದ್ದಂಡತನದಲ್ಲಿ ಸೀರೆ ಸೆರಗ ಪಿಡಿವರೇ ಇಂಥ ದುಡುಕು ಮಾಡುವರೇ ||ಚಂಡಾಡುವಾಗೆನ್ನವಸನ ಮರೆತೆ ಕೊಂಡು ಪೋಗಲವಳು |ಕಂಡು ಕೊಸರಿಕೊಂಡರಿಂಥ ಸುದ್ದಿ ಹುಟ್ಟಿಸಿ ಪೇಳುವಳಮ್ಮ ಹೊಂದಿಸಿ 1ಹಿರಿಯರುಳ್ಳಾ ಸೊಸೆಯ ಕೂಡ ಒಗೆತನವ ಕೆಡಿಸುವಂತೆ |ಸರಸವಾಡುವದು ನಿನಗೆ ಸಲ್ಲುವದೇನೋ ಯನಗೆ ಭೂಷಣವೇನೋ ||ನಿರುತ ಅವಳ ತಾಯಿ ನಂದಗೋಪಗಣ್ಣಾಯೆಂದು ಕರೆಯ- |ಲರಿತೆನತ್ತೆ ದುಗಳು ನಾದಿನಿಯೆಂದು ಮನಸಿಗೆ ಚರ್ಚೆ ಮಾಡಿದೆನೀ ಬಗೆ2ಕುಲದೇವತೆಯ ಮೀಸಲು ತುಪ್ಪ ನೆಲವಿನ ಮೇಲಿಟ್ಟಿರಲು ಮದ್ದು |ಕಲಶವ ಒಡೆದು ಬಾಹುವದೆಲ್ಲ ಚಿನ್ನಾಟವೇನೋ, ಅವರು ಮುದ್ದಿಸುವರೇನೋ ||ತಿಳಿಯದೆ ನೆಳಲಿದುಯೆಂದು ಕಳ್ಳನ ಒಳಗಿರಿಸಿಹಳೇಕೆಂದು ವಡದೆ |ನೆಲಖರಿಧೋಗುವಘೃತನೋಡಲೆ ತಿಂದೆನಮ್ಮಯ್ಯ ತಪ್ಪಿರೆ ಕಟ್ಹ್ಯಾಕು ಕಯ್ಯ 3ಚಿನ್ನನಂತೆಯಾಗಿಯವರ ಮಗ್ಗುಲೊಳು ಮಲಗಿಯೆಂಥ |ಸಣ್ಣ ಕೃತ್ಯ ಮಾಡಿ ಬಾಹುವೆಂತಲ್ಲೋ ಕಂದ ಕೇಳುವರಿಗೇನುಛಂದ||ನಿನ್ನ ಸಲಿಗೆ ಬಹಳ ಕಂಡು ಇಲ್ಲದ್ದೊಂದೆ ಹುಟ್ಟಿಸುವರು |ಯನ್ನ ದಿಸವಕ್ಕೀ ಜಾರತ್ವ ಕಲಿತಿದ್ದೇನೇನೇ ನಿನಗೇನೂ ತಿಳಿಯದೇನೇ 4ಕದ್ದು ಮೊಲೆಯುಂಡು ಕರು ಬಿಟ್ಟು ಹರಕೊಂಡಿತು ನೋಡಿರಿ ಎಂಬೆಯಂತೆ |ದುಗ್ಧವೆಮಾರಿಬಾಳಿವೆ ಮಾಡುವರೆಂತು ತಾಳುವರೋ ಹೀಗಾದರೆ ನಿಲ್ಲರೋ ||ಇದ್ದಾ ಮನೆಯವರಿಗೆ ನಂಬವು ಅಂಥಾಲಾಳ ಮೊಲೆಯ ನಾನುಂಡರೆ ಮೋರೆಗೆ |ಒದ್ದರೆ ರೋದನ ಮಾಡುತ ನಿನ್ನ ಬಳಿಗೊಂದಿನ ಬಾರೆನೇ ಹುಡುಗರಿಗಂಬುವ ಮಾತೇನೇ 5ಇಡಲುದಕವ ಬೆರಸಿ ಮಜ್ಜನಕೆ ಛಲದಿಂದಲಿ ಚಲ್ಲಿ ಬಾಹುವರೇ |ಬಡಿವೆನೊ ನಾ ತಾಳದೆ, ಮುದ್ದಾದರೆ ಮತ್ತೊಮ್ಮೆಯುಣಬೇಕು ಆಡುತ ಮನೆಯೊಳಗಿರಬೇಕು ||ಹುಡುಗರ ಸಂಗಡ ಅಣ್ಣನೂ ನಾನೂ ಇದ್ದೆವೆ, ಅಲ್ಲಾಕೆಯ ಮೊಮ್ಮಗನು |ಗಡಿಗೆಯ ಉರುಳಿಸೆ ನಾ ಕಂಡವರಿಗೆ ಹೇಳಿದೆನೆ ಇಷ್ಟಾ ಯನ್ನನು ಕಾಡುವದದೃಷ್ಟಾ 6ಎದೆಗಳ ಮುಟ್ಟುವದೇಕೋ ಎರಕೊಂಬುವರಲ್ಲಿಗೆ ಪೋಗಿಯಿನ್ನನ್ನಾ |ಹದದಿಂದಲೆ ಯಿರು ಶಿಕ್ಷೆಯ ಮಾಳ್ಪೆ ಎಚ್ಚರಿಕೆಯಿರಲಿ ಕಾಲ್ಪಡಿದರೆ ಬಿಡೆನೋ ಮರಳಿ ||ಮುದದಿಂದಲಿ ಚಂಡೊಗೆಯಲು ಅವಳಾ ಬಚ್ಚಲಿಯೊಳು ಬಿತ್ತು ತಕ್ಕೊಂಡೇ |ಹದ ತಪ್ಪಿದರೀ ಹೆಂಗಸರೆಲ್ಲಾ ಪ್ರಾಣೇಶ ವಿಠಲನಾಣೇ ಸುಳ್ಳಲ್ಲವು ಕಾಣೇ 7
--------------
ಪ್ರಾಣೇಶದಾಸರು
ಇಂಥಾ ದೂರುವುದೊಳಿತಲ್ಲವರೆಮ್ಮ ರಂಗಯ್ಯನು, ಹಾವಳಿ |ಅಂಥಾದು ಏನು ಮಾಡಿದನಮ್ಮ ಎಂದೆಂದಿಗು ನಮ್ಮ ||ಸಂತತಿಯೊಳು ಗುಣವಂತರೇ ಕೃಷ್ಣ ನಿ-ರಂತರ ಬಡವರನೆಂತು ದಣಿಸುವ ಪಕಣ್ಣೇ ಬಿಡುವನು ಬೆದರಿಸೆ ಮಾತರಿಯ ವನದೊಳಗಡಗಿಹ |ಮಣ್ಣು ತಿಂಬುವ ಬಾಯ್ದೆರೆವನಾರ್ಯ ಹಿತಕರ್ಮಗಳರಿಯ ||ಅನ್ನ ತಿನ್ನಲರಿಯ ಬೆಣ್ಣೆ ಮೆಲುವ ಬಲು |ಹೆಣ್ಣು ನೆರೆದು ಮತ್ತನ್ಯರೊಳು ಕಲಹೆ 1ಎಲ್ಲ್ಯಾಡೊದು ದುರ್ಗಂಧವು ಕಠಿಣಾಂಗ ನೆಲಗೆದರುವ ಶ್ರಿಂಗ |ರಿಲ್ಲದೆ ರಹದೆರೆವರ್ಭಕ ರಂಗ ಪಾಪವರಿಯ, ಮಂಗ- ||ರೊಲ್ಲಭ ಅಹಿಫಣೆಯಲ್ಲಿ ಕುಣಿದು ವಸ- |ನಿಲ್ಲದೆ ತಿರುಗುವಗೆಲ್ಲಿದೊ ವಾಚಿ2ಮೀನ ಕೂರ್ಮದಂತ್ಯುದಕದೊಳಗೆ ಆಡುವ ಕೆಸರೊಳಗೆ |ಶ್ರೀನಾರಸಿಂಹ ಸಣ್ಣವರೊಳಗೆ ಆಡುವ ತನ್ನೊಳಗೆ ||ತಾನೇ ಅಗ್ನಿಯ ನುಂಗಿ ನಭಕೇಶಗೆಮಾನವಕೊಟ್ಟಾನೆ ಪ್ರಾಣೇಶ ವಿಠಲನ 3
--------------
ಪ್ರಾಣೇಶದಾಸರು
ಇದಿರಾರೊ-ಗುರುವೆ-ಸಮರಾರೊ ಪಮದನಜನಕಪ್ರಿಯ ಗುರುಮಧ್ವರಾಯಅ.ಪಸನ್ನುತಮಹಿಮ ಪ್ರಸನ್ನವದನ ನಿನ-ಗನ್ಯನಲ್ಲವೊ ನೀಯೆನ್ನ ರಕ್ಷಿಸಬೇಕೋ ||ನಿನ್ನ ನೋಡಿದವರ್ಧನ್ಯರಾಗುವರುಎನ್ನ ದಯಾಮೂರ್ತಿ ಮನ್ನಿಸಿ ನೋಡೋ 1ದುರ್ಜನರನು ಗರ್ಜೆನೆಯಿಂದ ಓಡಿಸಿಸಜ್ಜನರನು ಸಂರಕ್ಷಿಸಿದಾತನೆ |ಈ ಜಗದಲಿ ಮಧ್ಯಗೇಹರ ಪತ್ನಿಯಪೂಜ್ಯ ಜಠರದಲಿ ಜನಿಸಿದ ಧೀರ 2ವೇದಶಾಸ್ತ್ರಗಳಿಂದ ಮಾಯಿಗಳ ಖಂಡಿಸಿಸಾಧಿಸಿ ಹರಿಯೆ ಸರ್ವೋತ್ತಮನೆಂದು ||ಮೋದಭರಿತವಾದ ದಿವ್ಯಶಾಸ್ತ್ರವ ಗೈದಮೋದತೀರ್ಥ-ಪುರಂದರವಿಠಲದಾಸ3
--------------
ಪುರಂದರದಾಸರು
ಇದು ಏನಂಗ ಮೋಹನಾಂಗ |ಮದನಜನಕ ತೊರವೆಯ ನರಸಿಂಗ ಪ.ಸುರರುತುತಿಸಿ ಕರೆಯೆ ತುಟಿಯ ಮಿಸುಕದವತೆರೆದೆ ಏತಕೆ ಬಾಯ ತೆರನ ಪೇಳೊಮ್ಮೆ 1ವರನೀಲರತುನ ಮಾಣಿಕದ ಹಾರಗಳಿರೆ |ಕೊರಳೊಳು ಕರುಳ ಮಾಲೆಯ ನಿಟ್ಟು ಮೆರೆವುದು 2ಸಿರಿಮುದ್ದು ನರಸಿಂಹ ಪುರಂದರವಿಠಲ |ಸಿರಿಯಿಪ್ಪ ತೊಡೆಯಲಿ ಅರಿಯ ತಂದಿಡುವುದು 3
--------------
ಪುರಂದರದಾಸರು
ಇಂದುನಾಳ್ಯೊ ಈಗಾವಾಗೊ ಈಕಾಯಸ್ಥಿರವಲ್ಲಇಂದಿರೇಶ ನಿನ್ನ ನೆನೆವ ಮತಿಯ ನೀಡೊ ಮನ್ನಿಸಿ ನೋಡೊ ಪ.ಕುಚ್ಛಿತ ಕರ್ಮವಾಚರಿಸಿ ಕಶ್ಮಲ ಜನ್ಮನುಭವಿಸಿದುಶ್ಚಿತ್ತದಿ ಬಾಳ್ದೆನಯ್ಯ ದೂರಾದೆ ನಿಮಗೆ ದಮ್ಮ್ಮಯ್ಯಅಚ್ಚುತ ನಿನ್ನಿಚ್ಛೆಯಿಂದೆ ಆದಿವರ್ಣದವನಾದೆಸ್ವಚ್ಛಿತ ಭಕ್ತಿಯನಿಲಯ ಸುಜನಬಂಧು ಸುಗುಣಸಿಂಧು 1ಹೊಟ್ಟೆಯ ಹೋರಟೆಗಾಗಿ ಹೊತ್ತಾರೆದ್ದು ತಿರುಗಿ ತಿರುಗಿಕೆಟ್ಟ ವೃತ್ತಿಯನ್ನು ಹಿಡಿದೆ ಕೀಳುಮನುಜರೊಳಾಡಿದೆಬಿಟ್ಟೆ ನಿಮ್ಮ ಪೂಜೆಯನ್ನು ಬಿದ್ದೆ ಭವಾಂಬುಧಿಯನ್ನುವಿಠ್ಠಲ ಎನ್ನುದ್ಧರಿಸೊ ವಿದ್ವದ್ಹøದ್ಯ ವೇದವೇದ್ಯ 2ವೇದಶಾಸ್ತ್ರಾಭ್ಯಾಸವಿಲ್ಲ ವೇದಜÕರರ್ಚಿಸಲಿಲ್ಲಬೋಧವನು ಕೇಳಲಿಲ್ಲ ಬುದ್ಧಿ ಎನ್ನೊಳು ಚೂರಿಲ್ಲಸಾಧನವ ತಿಳಿಯಲಿಲ್ಲ ಸಾಧುಮಾರ್ಗವ ಕಾಣಲಿಲ್ಲಭೇದಜÕರೊಳ್ ಕೂಡಿಸೆನ್ನ ಭೀಮಪಾಲಾಭಿನವಲೀಲ 3ಕಾಂತೇರ ಕುಚೇಷ್ಟೆಗಳಿಗೆ ಕೀಳುಚ್ಚಾರದ ಮಕ್ಕಳಿಗೆಭ್ರಾಂತನಾಗಿ ಸ್ನೇಹ ತೋರ್ದ ಬಲೆಯೊಳ್ ಸಿಲುಕಿದೆಸಂತರಂಘ್ರಿ ಸಖ್ಯವನೊಲ್ಲೆ ಸತ್ಕಥೆಯನಾಲಿಸಲೊಲ್ಲೆಅಂತು ಮದವನಿಳಿಸಿ ಕಾಯೊಅಂಗಜಪಿತನೆ ಅಘರಹಿತನೆ4ಬಳಲಿಸಿದೆ ತನುವನು ಬಯಸಿ ಖಳರಾರ್ಥವನ್ನುನಳಿನಾಕ್ಷ ನಿನ್ನ ಬೇಡದೆ ನಾಸ್ತಿಕರಿಗೆ ಕೈಯನೊಡ್ಡಿದೆಹೊಳೆವ ಸುರಭಿಯ ಬಿಟ್ಟು ಹುಲಿಪಾಲಿಗಾಯಾಸಬಟ್ಟೆಕಳೆದೆನನಘ್ರ್ಯಾಯುಷ್ಯವ ಕುಚೇಲಮಿತ್ರ ಕರುಣನೇತ್ರ 5ವಿಷ್ಣು ತತ್ವವರಿಯದೆ ಧೀರ ವೈಷ್ಣವನೆನಿಸದೆಭ್ರಷ್ಟಮನವ ತೊಳೆಯದೆ ಬಹಿಛ್ಛಿನ್ನದಲ್ಲೆ ಮೆರೆದೆಶಿಷ್ಯ ಗುರುಗಳ ಜರಿದೆ ಶಠರನು ಅನುಸರಿಸಿದೆದುಷ್ಟವೃತ್ತಿಯನು ಬಿಡಿಸೊ ದುರ್ಗುಣಧಾಮನ ದುರಿತಶಮನ 6ಇಂದ್ರಿಯಗ್ರಾಮ ನಿನ್ನದು ಇಷ್ಟ ಬಳಗವು ನಿನ್ನದುಸೌಂದರ್ಯ ಸುಖ ನಿನ್ನದು ಸ್ವರೂಪ ಸ್ವಾತಂತ್ರ್ಯ್ರನಿನ್ನದುಮಂದಮತಿಯಿಂದ ಅಹಂಮತಿಯಲ್ಲಿ ನೊಂದೆ ಬಹುಕುಂದನೋಡದೆನ್ನ ಸಲಹೊ ಕುಂಜರವರದ ಕುಶಲಪದದ7ನಿನ್ನ ಕಥಾಮೃತವು ಕಿವಿಗೆ ನಿನ್ನ [ಕೀರ್ತನೆ ನಾಲಗೆಗೆ]ನಿನ್ನ ಲಾವಣ್ಯವು ಕಣ್ಣಿಗೆ ನಿನ್ನ ಸೇವೆ ಸರ್ವ ಇಂದ್ರಿಯಕ್ಕೆಎನಗೆ ಬೇಗ ಕರುಣಿಸಿ ಎಲ್ಲ ದುರಿಚ್ಛೆಗಳ ನೂಕುಇನ್ನು ದಾಸದಾಸ್ಯವು ಬೇಕೊ ಋಷಿಕುಲೇಶ ಹೃಷಿಕೇಶ 8ಅಚ್ಯುತಾನಂತಗೋವಿಂದ ಆದಿಪುರುಷ ಮುಕುಂದಸಚ್ಚಿದಾನಂದಸರ್ವೇಶ ಸುಚರಿತ್ರ ಕರಿವರದನೆಚ್ಚಿದೆ ತವ ಪಾದಾಂಬುಜ ನಮೊ ಬೊಮ್ಮಾದ್ಯರ ದೇವನಿಚ್ಚಪ್ರಸನ್ವೆಂಕಟ [ನಿನ್ನ ನೆನೆವ ಮ್ಮತಿಯನೀಡೊಮನ್ನಿಸಿ ನೋಡೊ] 9
--------------
ಪ್ರಸನ್ನವೆಂಕಟದಾಸರು