ಒಟ್ಟು 8293 ಕಡೆಗಳಲ್ಲಿ , 131 ದಾಸರು , 4393 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಿಡೆನೊ ನಿನ್ನಂಘ್ರಿ ಶ್ರೀನಿವಾಸ ನನ್ನದುಡಿಸಿಕೊಳ್ಳೆಲೊ ಶ್ರೀನಿವಾಸ ನಿನ್ನುಡಿಯ ಜೀತಲ್ಲೊ ಶ್ರೀನಿವಾಸ ನನ್ನನಡೆ ತಪ್ಪು ಕಾಯೊ ಶ್ರೀನಿವಾಸ ಪ.ಬಡಿಯೊ ಬೆನ್ನಲಿ ಶ್ರೀನಿವಾಸ ನನ್ನೊಡಲ ಹೊಯ್ಯದಿರೊ ಶ್ರೀನಿವಾಸ ನಾಬಡವ ಕಾಣೆಲೊ ಶ್ರೀನಿವಾಸ ನಿನ್ನೊಡಲ ಹೊಕ್ಕೆನೊ ಶ್ರೀನಿವಾಸ 1ಪಂಜುವಿಡಿವೆನೊ ಶ್ರೀನಿವಾಸ ನಿನ್ನೆಂಜಲ ಬಳಿದುಂಬೆ ಶ್ರೀನಿವಾಸ ನಾಸಂಜೆ ಉದಯಕೆ ಶ್ರೀನಿವಾಸ ಕಾಳಂಜಿಯ ಪಿಡಿವೆನೊ ಶ್ರೀನಿವಾಸ 2ಸತ್ತಿಗೆ ಚಾಮರ ಶ್ರೀನಿವಾಸ ನಾನೆತ್ತಿಕುಣಿವೆನೊ ಶ್ರೀನಿವಾಸ ನಿನ್ನರತ್ತುನ ಹಾವಿಗೆ ಶ್ರೀನಿವಾಸ ನಾಹೊತ್ತು ನಲಿವೆನೊ ಶ್ರೀನಿವಾಸ 3ಹೇಳಿದಂತಾಲಿಹೆ ಶ್ರೀನಿವಾಸ ನಿನ್ನಾಳಿಗಾಳಾಗಿಹೆ ಶ್ರೀನಿವಾಸ ಅವರೂಳಿಗವ ಮಾಳ್ಪೆ ಶ್ರೀನಿವಾಸ ನನ್ನಪಾಲಿಸೊ ಬಿಡದೆ ಶ್ರೀನಿವಾಸ 4ನಿನ್ನ ನಾಮ ಹೋಳಿಗೆ ಶ್ರೀನಿವಾಸ ಕಳ್ಳಕುನ್ನಿ ನಾನಾಗಿಹೆ ಶ್ರೀನಿವಾಸಕಟ್ಟಿನಿನ್ನವರೊದ್ದರೆ ಶ್ರೀನಿವಾಸ ನನಗಿನ್ನು ಲಜ್ಜ್ಯಾತಕೆ ಶ್ರೀನಿವಾಸ 5ಬೀಸಿ ಕೊಲ್ಲಲವರೆ ಶ್ರೀನಿವಾಸ ಮುದ್ರೆಕಾಸಿ ಚುಚ್ಚಲವರೆ ಶ್ರೀನಿವಾಸ ಮಿಕ್ಕಘಾಸಿಗಂಜೆನಯ್ಯ ಶ್ರೀನಿವಾಸ ಎಂಜಲಾಸೆಯಬಂಟನಾ ಶ್ರೀನಿವಾಸ6ಹೇಸಿ ನಾನಾದರೆ ಶ್ರೀನಿವಾಸಹರಿದಾಸರೊಳು ಪೊಕ್ಕೆ ಶ್ರೀನಿವಾಸಅವರಭಾಸೆಯ ಕೇಳಿಹೆ ಶ್ರೀನಿವಾಸ ಆವಾಶೆಯ ಸೈರಿಸೊ ಶ್ರೀನಿವಾಸ 7ತಿಂಗಳವನಲ್ಲ ಶ್ರೀನಿವಾಸವತ್ಸರಂಗಳವನಲ್ಲೊ ಶ್ರೀನಿವಾಸ ರಾಜಂಗಳ ಸವಡಿಪೆ ಶ್ರೀನಿವಾಸ ಭವಂಗಳ ದಾಟುವೆ ಶ್ರೀನಿವಾಸ 8ನಿನ್ನವ ನಿನ್ನವ ಶ್ರೀನಿವಾಸ ನಾನನ್ಯವನರಿಯೆನೊ ಶ್ರೀನಿವಾಸ ಅಯ್ಯಾಮನ್ನಿಸೊ ತಾಯ್ತಂದೆ ಶ್ರೀನಿವಾಸ ಪ್ರಸನ್ನ ವೆಂಕಟಾದ್ರಿ ಶ್ರೀನಿವಾಸ 9
--------------
ಪ್ರಸನ್ನವೆಂಕಟದಾಸರು
ಬಿದಿಗೆಯ ದಿವಸ(ಹನುಮಂತನನ್ನು ಕುರಿತು)ಸಮನಸನಾಗಿ ತೋರುವನಲ್ಲೆ ನೀರೆ ಪ.ಧನ್ಯನಾಗಿರುವ ದೊರೆಯ ಧರಿಸುತ್ತಚೆನ್ನಿಗನಾಗಿ ತೋರುವನಲ್ಲೆ ಈತ 1ಪಟ್ಟೆಕಂಬಿಯ ನಿರುದುಟ್ಟುಕೊಂಡಿರುವಕಟ್ಟಿದುತ್ತರೀಯ ಭೂಷಣದಿಂದ ಮೆರೆವ 2ಸೋಮಾರ್ಕಶಿಖಿಯಂತಿರುವುದು ತ್ರಿನಾಮರಾಮಣೀಯಕ ಮನೋಹರ ಪೂರ್ಣಕಾಮ 3ವೀರವೈಷ್ಣವ ಮುದ್ದು ಮೋಹನಕಾಯಭೂರಿಭೂಷಣಭುಜಬಲ ಹರಿಪ್ರಿಯ 4ರೂಪನೋಡಲು ಕಾಮರೂಪನಂತಿರುವಚಾಪಲ ಪ್ರೌಢ ಚಿದ್ರೂಪನಂತಿರುವ 5ಬಾಲವ ನೆಗಹಿ ಕಾಲೂರಿ ಶೋಭಿಸುವನೀಲದುಂಗುರದ ಹಸ್ತವ ನೀಡಿ ಮೆರೆವ 6ಗೆಜ್ಜೆ ಕಾಲುಂಗರ ಪದಕಕಟ್ಟಾಣಿಸಜ್ಜನನಾಗಿ ತೋರುವನು ನಿಧಾನಿ 7ಊರ್ವಶಿ :ತರುಣಿ ಕೇಳೀತನೆ ದೊರೆಮುಖ್ಯಪ್ರಾಣವರನಿಗಮಾಗಮ ಶಾಸ್ತ್ರಪ್ರವೀಣ1ಮಾಯವಾದಿಗಳ ಮಾರ್ಗವ ಖಂಡಿಸಿದವಾಯುಕುಮಾರ ವಂದಿತ ಜನವರದರಂಭೆ : ದಿಟವಾಯ್ತು ಪೇಳ್ದ ಮಾತಾದರು ಜಾಣೆಚಟುಳ ಹನುಮನ ಉತ್ಕಟರೂಪ ಕಾಣೆ 1ವಾಮನನಾದ ಕಾರಣವೇನೆ ಪೇಳೆನಾ ಮನಸೋತೆ ಎಂತುಂಟೊ ಹರಿಲೀಲೆ 2ಊರ್ವಶಿ : ನಾಗವೇಣಿ ನೀ ಕೇಳೆ ನಾಗವೈರಿಯೊಳುಸಾಗಿತು ಸೇವೆಯೆಂಬುದು ಮನಸಿನೊಳು 1ವಾದವ ಮಾಡಿ ವಿನೋದದಿ ಹರಿಯಪಾದಸೇವೆಗೆ ಮನನಾದ ಕೇಳಿದೆಯೊ 2ವೀರ ವೇಷವನಿದ ಕಂಡು ಶ್ರೀಹರಿಯದೂರವಾದನೋ ಎಂದು ಮನದೊಳು ನಿಜವು 3ತೋರಲು ಬೇಗದಿ ದೊರೆ ಹನುಮಂತಭೂರಿಭೂಷಣ ಸುಂದರ ರೂಪವಾಂತ 4ಇಂದಿನ ಸೇವೆಯೆನ್ನಿಂದತಿ ದಯದಿಮಂದರಧರಿಸಿಕೊಳ್ವುದು ಎಂದು ಭರದಿ 5ಒಯ್ಯನೆ ಪೇಳುತ್ತ ವಯ್ಯಾರದಿಂದಕೈಯನು ನೀಡಿ ಸಾನಂದದಿ ಬಂದ 6ಕಂತುಪಿತನು ಹನುಮಂತ ಮಾನಸಕೆಸಂತಸ ತಾಳಿ ಆನಂತನು ದಿಟಕೆ 7ಏರುತ ಹನುಮನಭೂರಿವೈಭವದಿಸ್ವಾರಿಯು ಪೊರಟ ಸಾಕಾರವ ಮುದದಿ 8ತೋರಿಸಿ ಭಕ್ತರಘೋರದುರಿತವಸೂರೆಗೊಳ್ಳುವನು ವಿಚಾರಿಸಿ ನಿಜವ 9ಹದನವಿದೀಗೆಲೆ ಬಿದಿಗೆಯ ದಿನದಿಮದನಜನಕನು ಮೈದೋರುವ ಮುದದಿ 10ಪ್ರತಿದಿನದಂತೆ ಶ್ರೀಪತಿ ದಯದಿಂದಅತಿಶಯ ಮಂಟಪದೊಳು ನಲವಿಂದ 11ಎಂತು ನಾ ವರ್ಣಿಪೆ ಕಂತುಜನಕನಅಂತ್ಯರಹಿತ ಗುಣಾನಂಮಹಿಮನ 12ಏಕಾಂತದಿ ಲೋಕೈಕನಾಯಕನುಶ್ರೀಕರವಾಗಿ ನಿಂದನು ನಿತ್ಯಸುಖನು 13* * *ರಂಭೆ : ಇವನತಿಜಾಣನಮ್ಮಾ ಇವನ್ಯಾರಮ್ಮಾ ಪ.ಇವನತಿಜಾಣ ಲಕ್ಷ್ಮೀಧವನಿಗಿಂತಲು ಮುಂದೆತವಕದಿ ಬರುವತ್ತಿತ್ತವರನ್ನು ನೋಡದೆ 1ಅಂದಣವೇರಿ ಮತ್ತೊಂದ ತಾ ನೋಡದೆಒಂದೇ ಮನದಿ ಬೇಗ ಮುಂದೆ ಬರುವನಮ್ಮಾ 2ಬಾಲಬ್ರಹ್ಮಚಾರಿ ಶಿಲೆಯಂತಿರುವನುಅಲೋಚಿಸಲಿವ ಮೂಲಪುರುಷನಮ್ಮಾ 3ಪುಟ್ಟನಾದರು ಜಗಜಟ್ಟಿಯಂತಿರುವನುದಿಟ್ಟನಿವನವನ ಮುಟ್ಟಿ ನೋಡಮ್ಮ 4ಊರ್ವಶಿ :ನಾರೀ ಇವನೀಗಹೊಂತಕಾರಿಲೋಕಕ್ಕಾಧಾರಿಪ.ಕೊಬ್ಬಿದ ದೈತ್ಯರಿಗೀತನೆಕಾಲಹಬ್ಬುವದಾತ್ಮಕ್ಕೀತನೆ ಮೂಲಉಬ್ಬುವ ಹರಿಯೆಂದರೆ ಮೈಯೆಲ್ಲಒಬ್ಬನಿಗಾದರೂ ಬಗ್ಗುವನಲ್ಲ 1ಎಲ್ಲಿರುವನುಹರಿಅಲ್ಲಿಹನೀತಬಲ್ಲಿದನಾರಾಯಣಗಿವ ದೂತಖುಲ್ಲರ ಮನಕತಿ ಝಲ್ಲೆನುವಾತಸುಲ್ಲಭನೆಯಿವ ಮುಂದಿನ ಧಾತ 2ಭೇದವಿಲ್ಲೆಂಬುದವರಿಗೆಯಿವ ತುಂಟಮೇದಿನಿಬಾಧಕರಿಗೆ ಯಿವ ಕಂಟಆದಿ ಮೂರುತಿ ಕೇಶವನಿಗೆಬಂಟಮಾಧವಭಕ್ತರಿಗೀತನೆ ನೆಂಟ 3ದುರಿತಾರಣ್ಯದಹನ ನಿರ್ಲೇಪವರವೆಂಕಟಪತಿಯಿದಿರೊಳಗಿಪ್ಪಪರಮಾತ್ಮನ ಪರತತ್ತ್ವ ಸ್ವರೂಪಮರೆಮಾತೇನಿವ ದೊರೆ ಹನುಮಪ್ಪ 4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಬಿಂದುಮಾಧವರಮಾಧವಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಬಿಂದುಮಾಧವಸುಬಂಧು ದೀನಭವ|ಬಂಧತರಣ ಗೋವಿಂದ ಶ್ರೀ ಕೃಷ್ಣ1ಮಂದರಾದ್ರಿಧರಕುಂದರದನಮಹಾ |ಸುಂದರಸಿರಿಹೃನ್ಮಂದಿರ ವಾಸಾ2ಕದ್ದಿಕಾರ ಸುರವೃಂದ ಸುಪೂಜಿತ |ಇದ್ದಿ ದೇವ ಕಚವೃಂದ ಸಮೇತಾ3ನಂದ ನಂದನ ಸುಸಿಂಧುರ ವರದ ಮು-ಕುಂದಗೋಪಿಕಾ ವೃಂದ ವಿಹಾರಾ4ಮಲ್ಲಿಖೇಡ ಸ್ಥಳ ಹೊಳೆ ಕಾಗಿಣಿ ಥಡಿಬಳಿಗೆ ರಾಯರು ಕುಳಿತಲ್ಲಿರುವ5ಪಂಕಜಾಕ್ಷ ಮೀನಕೇತು ಜನಕ ಗರು-ಡಾಂಕಶಶಿಧ್ವಜ ಶಂಕರಪ್ರಿಯ ಹರಿ6
--------------
ಜಕ್ಕಪ್ಪಯ್ಯನವರು
ಬುತ್ತಿಯ ಕಟ್ಟೊ - ಮನುಜಾ ||ಬುತ್ತಿಯ ಕಟ್ಟೊ ಪ.ಬುತ್ತಿಯನ್ನು ಕಟ್ಟಿದರೆ |ಎತ್ತಲಾದರುಣ್ಣಬಹುದು ಅಪಧರ್ಮವೆಂಬ ಮಡಿಕೆಯಲ್ಲಿ |ನಿರ್ಮಲ ಗಂಗೆಯನುತುಂಬಿ ||ಸುಮ್ಮಾನದಿಂದಲಿ ಬೇಗ |ಒಮ್ಮನಕ್ಕಿಯ ಅನ್ನಬಾಗಿ 1ಅರಿವು ಎಂಬ ಅರಿವೆಯ ಹಾಸಿ |ಗರಿಮೆ ಹಾಲ - ಮೊಸರ ತಳಿದು ||ಪರಮವೈರಾಗ್ಯದಿಂದ |ಸಿರಿಹರಿಗರ್ಪಿತವೆಂದು 2ಕರ್ತು ಪುರಂದರವಿಠಲನ |ತತ್ತ್ವವೆಂಬ ಬುತ್ತಿಯನ್ನು ||ಹತ್ತಿರ ತಂದಿಟ್ಟುಕೊಂಡು |ನಿತ್ಯವುಂಡು ತೃಪ್ತಿಪಡೆಯೊ 3
--------------
ಪುರಂದರದಾಸರು
ಬುದ್ಧಿ ಧೃತಿಯೆಂಬ ನಾರೇರು ಶ್ರೀಮುದ್ದು ಕೃಷ್ಣನ ಒಲಿಸಿಕೊಂಡರು ಪ.ಅಕ್ಕ ಬುದ್ಧಿವಂತೆ ತಂಗಿಗೆ ಬಲುನಿಕ್ಕರದಲಿ ಹಿತವಾಡಿದಳುಚಿಕ್ಕವಳೆಂದಂಜದೆÉ ಧೃತಿಯು ತಮ್ಮಕ್ಕನೊಳು ಬಡಿದಾಡಿದಳು 1ಕಟ್ಟಲೆ ಮೀರಿ ಮಾತಾಡದಿರೆ ತಂಗಿಸಿಟ್ಟು ಬರುತಿದೆ ಕಾಡದಿರೆಕಟ್ಟಲೆ ಮೀರಿ ಮೊದಲೆ ನವೆದೆ ನಿನ್ನಕಟ್ಟಿನೊಳಗೆ ಸಿಕ್ಕಿ ಬಲು ದಣಿದೆ 2ಒಗತನ ದಾರದೆ ಸಣ್ಣವಳೆ ನೀಜಗಳಕ್ಕೆ ನಿಂತೆ ದೊಡ್ಡೆದೆಯವಳೆನಗೆಗೇಡು ಮಾಡಿಕೊಂಡೆಲೆಯಕ್ಕ ನಿನಗೊಗತನ ನನ್ನಿಂದ ತಗಲಕ್ಕ 3ಹರಿನಿನಗೆ ದಕ್ಕಿದನೆಂದು ಉಣ್ಣದುರಿಯಬೇಡೆಲೆ ತಂಗಿ ಹೋಗಿಂದುಅರಸ ದಕ್ಕುವನೆ ಇನ್ನಾರಿಗೆ ಅಕ್ಕಕಿರುಕುಳು ಮಾತ್ಯಾಕೆ ಹಿರಿಯಳಿಗೆ 4ನನ್ನ ಹಿರಿಯತನ ಕೆಣಕಿದ್ಯಲ್ಲೆನನ್ನ ಕಣ್ಣ ಮುಂದೆ ನಿನ್ನೆ ಬಂದವಳೆಹುಣ್ಣಿಮೆ ಚಂದ್ರ ದಿನಕೆ ಹಿರಿಯ ಜಗಮನ್ನಣೆಗೆ ಬಾಲಚಂದ್ರನಲ್ಲೆ 5ಪಟ್ಟ ನನ್ನದು ಮೊನ್ನೆ ಬಂದವಳೆ ನಿನ್ನದಿಟ್ಟತನವನೇನ ಹೇಳಲೆಕೃಷ್ಣ ನಿನಗೆ ದೂರನಲ್ಲೆ ಅಕ್ಕ ಹರಿಯಗುಟ್ಟಿನ ಮೋಹವೆ ನನಗೆ ಅಕ್ಕ 6ತಂಗಿ ಮನವ ನೋಯಿಸ್ಯಾಡದಿರೆ ಶ್ರೀರಂಗನೆನಗೆರವು ಮಾಡದಿರೆಮಂಗಳ ಮಹಿಮ ಮುರಾರಿಯ ಅರ್ಧಾಂಗಿಯೆ ನಾ ನಿನಗೆ ಸರಿಯೆ 7ಹಿರಿಯ ಕಿರಿಯಳಲ್ಲ ಸರಿ ಹೇಳೆಹರಿಗೆರವಿನ ಮಾತಿಲ್ಲಖರೆಕೇಳೆಪರಮಪುರುಷ ವಾಸುದೇವನೆ ಕೊಟ್ಟವರಕೆಂದು ತಪ್ಪದೆ ಕಾವನೆ 8ಕನ್ಯೆ ಲಕ್ಷುಮಿಯ ರಮಣನೆ ಸ್ವಾಮಿತನ್ನ ನಂಬಿದವರ ಹೊರೆವನೆಪುಣ್ಯ ಗೋಪೀಜನಜಾರನೆ ಪ್ರಸನ್ನವೆಂಕಟಪತಿ ಧೀರನೆ 9
--------------
ಪ್ರಸನ್ನವೆಂಕಟದಾಸರು
ಬುದ್ಧಿಯ ಪೇಳೇ ಗೋಪಮ್ಮ ನಿನ್ನಮುದ್ದು ಮಗನ ಲೂಟಿ ಘನವಾದುದಮ್ಮ ಪಸದ್ದು ಇಲ್ಲದ ಹಾಗೆ ಬಂದಾನೆಕದ್ದು ಬೆಣ್ಣೆಯನೆಲ್ಲ ತಿಂದಾನೆಎದ್ದೊಮ್ಮೆ ನೋಡಿ ನಾ ಗದ್ದಲ ಮಾಡಲುಸದ್ದು ಮಾಡದೆ ಕೃಷ್ಣ ಹದ್ದನೇರುತ ಪೋದ 1ಜಲಜ ಗಂಧಿನಿಯರು ಕೂಡೀ ನಾವುಜಲದೊಳಾಡುವುದನ್ನು ನೋಡೀಜಲಜನಾಭನು ಮರದ ತಲೆಯ ಮೇಲ್ಕಟ್ಟಿದಸುಲಿದಿಟ್ಟ ಸೀರೆಯ ಬಲರಾಮನನುಜ 2ಹಾಲ ಮಾರಲು ಪೋದ ಮಗಳಾ ಕಂಡುಮೇಲೆ ಬೀಳುತ ಮಾಡೆ ಜಗಳಾಶಾಲೆಯ ಸುಲಿದು ಬತ್ತಲೆ ನಿಲ್ಲಿಸಿದನುಮೂರ್ಲೋಕದೊಡೆಂiÀುಶ್ರೀಲೋಲಗೋವಿಂದ 3
--------------
ಗೋವಿಂದದಾಸ
ಬೇಡಬೇಡೆಲಾ ಕೊಡಬೇಡೆಲಾ ಸೀರೆಬೇಡಿದರೆ ದೇವರಾಣೆಲಾ ಪಇನ್ನೆರಡು ಗಳಿಗೆಗೆ ನಿನ್ನ ಉಂಬುವ ಹೊತ್ತು |ಅನ್ನದಕಾಂಕ್ಷೆ ಹುಟ್ಟದೇನಲಾ ||ಮನ್ನಿಸಿ ಬೇಡಿದರೆ ಉನ್ನತಾಹಂಕಾರ- |ವನ್ನು ತೋರುವೆ ಇಟ್ಟುಕೊಳ್ಳೆಲಾ 1ವ್ಯಾಳೆವಾಗಲು ಯಮ್ಮನ್ನಾಳುವವರೇ ಬಹರು |ಹೇಳಿ ನಿನ್ನನೇ ಕೊಲ್ಲಿಸುವೆವೇವಲಾ ||ಖೂಳಪೂತನಿ ಕೊಂದ ಧಾಳಿ ಬಲ್ಲರವರು |ಬಾಲಕನೆನ್ನರು ನಿನ್ನಗೆಲಾ 2ಬತ್ತಲರಾಗಿ ಜಲ ವ್ಯರ್ಥ ಸೇರಿದಿರೆಂದು |ವತ್ತಿ ನಮ್ಮನು ಕೊಲ್ಲರವರೆಲಾ ||ಹತ್ತೆಂಟು ತಲೆಯಿಂದ ವಸ್ತ್ರರಹಿತ ಸ್ನಾನ |ನಿತ್ಯನಮ್ಮೊಳು ನಡತೆಲಾ 3ಕರಕರಿಗಾರದೆ ಮೈಮರೆದು ಊರಿಗೆ ಹೋಗಿ |ಭರದಿಂದೆಶೋದೆಗೆ ದೂರೆವೆಲಾ ||ತರುಣಿಯರೆಲ್ಲ ಹಿಂದೆ ಮೊರೆಯಿಡೆ ಲಾಲಿಸಿ |ಒರಳಿಗೆ ಕಟ್ಟಿಸಿದ್ದೆವೆಲಾ 4ಲಲನೆಯರೆಲ್ಲ ಕೂಡಿ ಜಲಬಿಟ್ಟು ಬಂದರೆ |ಕೊಳುವೆ ನಿನ್ನಯ ಪ್ರಾಣಾ | ತಿಳಿಯಲೊಗಳಿಸಿ ಸಂಸಾರವ ಸಲುಹುತಿಹರು ನಾವೇ |ಕಳವೇನೊ ಪ್ರಾಣೇಶ ವಿಠಲ 5
--------------
ಪ್ರಾಣೇಶದಾಸರು
ಬೇವ ಬೆಲ್ಲದೊಳಿಡಲೇನು ಫಲಹಾವಿಗೆ ಹಾಲೆರೆದೇನು ಫಲ ? ಪ.ಕುಟಿಲವ ಬಿಡದಲೆ ಕುಜನರು ಮಂತ್ರವಪಠನೆಯ ಮಾಡಿದರೇನು ಫಲ?ಸಟೆಯನ್ನಾಡುವ ಮನುಜರು ಮನದಲಿವಿಠಲನ ನೆನೆದರೆ ಏನು ಫಲ ? 1ಮಾತಾ - ಷತೃಗಳ ಬಳಲಿಸುವಾತನುಯಾತ್ರೆಯ ಮಾಡಿದರೇನು ಫಲ ?ಘಾತಕತನವನು ಬಿಡದೆ ನಿರಂತರನೀತಿಯನೋದಿದರೇನು ಫಲ ? 2ಕಪಟತನದಲಿ - ಕಾಡುವರೆಲ್ಲರುಜಪಗಳ ಮಾಡಿದರೇನು ಫಲ ?ಕುಪಿತ ಬುದ್ಧಿಯನು ಬಿಡದೆ ನಿರಂತರಉಪವಾಸ ಮಾಡಿದರೇನು ಫಲ ? 3ಪತಿಗಳ ನಿಂದಿಸಿ ಬೊಗಳುವ ಸತಿಯರುವ್ರತಗಳ ಮಾಡಿದರೇನು ಫಲ ?ಅತಿಥಿಗಳೆಯಡೆಯಲಿ ಭೇದವ ಮಾಡಿ ಸದ್ಗತಿಯನು ಬಯಸಿದರೇನು ಫಲ ? 4ಹೀನ ಗುಣಂಗಳ ಬಿಡದೆ ನದಿಯೊಳುಸ್ನಾನವ ಮಾಡಿದರೇನು ಫಲ ?ಜಾÕನಿ ಪುರಂದರವಿಠಲನ ನೆನೆಯದೆಮೌನವ ಮಾಡಿದರೇನು ಫಲ? 5
--------------
ಪುರಂದರದಾಸರು
ಬ್ರಹ್ಮಾಂಡದೊಳಗಿದ್ದ ಚರ್ಯೆಯ ತಂದು |ಪಿಂಡಾಂಡದೊಳಗೆಲ್ಲ ತೋರಬೇಕೆಂದು |ಪುಂಡಲೀಕನ ಭಕ್ತಿಗೆ ತಾನೆ ಬಂದು |ಪಾಂಡುರಂಗ ನಾಮ ರೂಪದಿ ನಿಂದೂ ಜೋ ಜೋ ||ಜೋ ಜೋ ಜೋ ಶ್ರೀ ಗಂಗಾಧರನೆ ಜೋ ಜೋ ಜೋಶ್ರೀ ವತ್ಸಧರನೇ ಜೋ ಜೋ ಜೋ ಶ್ರೀ ಶಶಿಧರನೇ |ಜೋ ಜೋ ಜೋ ಶ್ರೀ ದತ್ತಾತ್ರೇಯನೇ ಜೋ ಜೋ ಜೋ1<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ತನ್ನ ವಾಯು ಸಾಧು ಸಂತರೊಳಾಡಿ |ತನ್ನ ಸ್ಫುರಣಿ ಮಾಯಗಳಿತವೆ ಕೂಡಿ |ತನ್ನ ಸ್ವಸುಖವೆ ಬೋಧರಿಯೆತ್ತಿ ನೋಡಿ |ತನ್ನಿಂದುತ್ಪತ್ತಿ ಸ್ಥಿತಿ ಲಯವು ತೋರಡಗಿ | ಜೋ ಜೋ2ನಿತ್ಯಶುದ್ಧಬುದ್ಧಸರ್ವಾಂತರಾತ್ಮಾ |ಸತ್ಯ ಶಾಶ್ವತ ಸಾಧು ದಯ ಸಾರ್ವಭೌಮಾ |ಪ್ರತ್ಯಾತ್ಮ ಪರಮಾತ್ಮ ಐಕ್ಯಮೇಕಾತ್ಮಾ |ನಿತ್ಯಅಪರೋಕ್ಷನಿರ್ಗುಣ ನಿಜ ಧಾಮಾ ಜೋ ಜೋ3ಕಾಶೀ ನಿವಾಸಿ ವಿಶ್ವೇಶ ವೃಷಾತ್ಮಾ |ನಾಸಿಕತ್ರ್ಯಂಬಕ ನೀನೆ ಮಹಾತ್ಮಾ |ವಾಸುದೇವನ ಪ್ರಾಣ ಪ್ರಿಯ ಪರಮಾತ್ಮಾ |ಕ್ಲೇಶಭಕ್ತರಿಗಾಗಿ ವಾಸಿಸುವಾತ್ಮಾ ಜೋ ಜೋ4
--------------
ಜಕ್ಕಪ್ಪಯ್ಯನವರು
ಬ್ರಹ್ಮಾದಿಕರನು ಪರಬ್ರಹ್ಮದಿಚ್ಛಿಲಿ ಪಡೆದಳಮ್ಮಪರಂಜ್ಯೋತಿ ಪರಬ್ರಹ್ಮಿಣೀಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ವಾಣಿ ಕಲ್ಯಾಣಿಫಣಿವೇಣಿ| ರುದ್ರಾಣಿಶರ್ವಾಣಿಸುವಾಣಿ ಗೀರ್ವಾಣಿ ವರದೆ | ಗಾಣಿತ್ರಿನಯನ ಅಜನ ರಾಣಿ ಶಂಕರ ಪ್ರಾಣಿ ಪುಸ್ತಕಪಾಣಿನಾರಾಯಣೀ1ಅಂಬೆ ಲೋಕಾಂಬೆ ಭ್ರಮರಾಂಬೆ ಮೂಕಾಂಬೆಹರಡಿಂಬೆ ಪ್ರತಿಬಿಂಬೆ ಕುಚಕುಂಭೆ ಸಾಂಬೆ |ರಂಭೆ ಹೇರಂಬೆ ಶರಣೆಂಬೆ ವರಗೊಂಬೆ ಭಕ್ತರಬೊಂಬೆ ಹೊಳೆವ ಗೊಂಬೆ2ಕಾಳೆ ಹಿಮ ಬಾಳೆ ಭೂ ಪಾಳೆ ಕುಸುಮಾಳೆವನಮಾಳೆಕಂದರಮೌಳೆ ಕುಟಿಲ ಕುರುಳೆ |ಕೇಳಿನಿನ್ನಯ ಲೀಲೆ ಕಾಲಿಗೆರಗುವರಘವ ಮೂಲಕೆತ್ತೆತ್ತಿಬಿಸುಟುವ ಕೃಪಾಳೆ3ಬೇಕೆಂಬೊ ಬಯಕಿತ್ತು ಸಾಕು ಸಾಕೆನಿಸುವರುಲೋಕದೊಳಗ್ಯಾರುಂಟು ನಿನ್ನ ಬಿಟ್ಟು |ಏಕೆ ವಿವೇಕೆ ಎನ್ನೀ ಕುಟಿಲಗುಣನೋಡ ಬೇಕೆಕ್ಷಮೆಮಾಡಿದರೆ ಮೈಯುಳಿಯುವದು4ಕಾಯಜನ ಮಾತೆ ಸಿತಕಾಯನರ್ಧಾಂಗಿ ಜಗಕಾರ್ಯನಿರ್ಮಿಸುವ ನರರುದಿಸಿ ಮೂರು || ಕಾಯಡಗಿ ಹೋದನಿಷ್ಕಾಯ ಪರಶಕ್ತ್ಯೆನ್ನ ಕಾಯ್ದುಕೊಳ್ಳೆಲೆತಾಯಿ ಸ್ತ್ರೀಯರನ್ನೆ5ಸಾರಿದರಹೊರೆವಸಂಸಾರದೊಳು ಮುಳುಗಿದರೆತಾರಿಸುವ ತವಕದಿಂತರುಳೆತರುಣೀ |ಸೇರಿಸುತ ತಿರುಗಿ ತನು ಬಾರದ್ಹಾದಿಗೆ ಒಯ್ದುತಾರಿಸುವ ಸ್ಥಿರದಿ ನೀ ತೋಯಜಾಕ್ಷಿ6ಕುಸುಮಸರ್ಪಾದಿಗಳು ಕುಸುಮಗಂಧಿಯ ಪದಕೆಕುಸುಮವೃಷ್ಟಿಗವು ದೇವಿಯ ಸುಕೃತಿಗಳೂ |ಕುಸುಮದೊಳು ಕರಕಂಜ ಕುಸುಮದೊಳುವರವಿಡಿದ ಕುಸುಮಶರರಿಪುಶಂಕರನ ಶಂಕರೀ7
--------------
ಜಕ್ಕಪ್ಪಯ್ಯನವರು
ಭಕುತ ಜನ ಮುಂದೆ ನೀನವರ ಹಿಂದೆ - ಇದಕೆ |ಯುಕುತಿ ಕೈಕೊಳದಯ್ಯ ಗಯಾಗದಾಧರನೆ ಪಕಟ್ಟೆರಡು ಕೂಡಿ ತಾ ನದಿಸೂಸಿ ಹರಿವಾಗ |ಕಟ್ಟುಕ್ಕಿದಾಗ ಹರಿಗೋಲ ಹಾಕೆ ||ನೆಟ್ಟನೆ ಜಿಗಿಜಿಗಿದು ದಾಟಿ ತಾ ಪೋಪಾಗ |ಹುಟ್ಟು ಮುಂದಲ್ಲದಲೆ ಹರಿಗೋಲು ಮುಂದೆ? 1ಕಾಳೆಹೆಗ್ಗಾಳೆದುಂದುಭಿನಾನಾ ವಾದ್ಯದಿಂ |ಓಲಗದಿಂದೈದೆ ಅರಸು ತಾ ಬರುವಾಗ ||ಸಾಲಾಗಿ ಬಳಿವಿಡಿದು ಸಂಭ್ರಮದಿ ಇರುವಾಗ |ಆಳು ಮುಂದಲ್ಲದೆ ಅರಸು ತಾ ಮುಂದೆ 2ಉತ್ಸವ ಮೂರುತಿಯು ಬೀದಿ ಮೆರೆಯುತ ಬರಲು |ಸತ್ಸಂಗತಿಗೆ ಹರಿದಾಸರೆಲ್ಲ ||ಅಚ್ಚ ಸಿರಿಯರಸು ಸಿರಿಪುರಂದರ ವಿಠಲನೆ |ವತ್ಸಮುಂದಲ್ಲದೆಧೇನುತಾ ಮುಂದೆ?
--------------
ಪುರಂದರದಾಸರು
ಭಕ್ತರ ಪ್ರೇಮಿ ಫಕೀರ ಸ್ವಾಮಿ | ಭಕ್ತರ ನಿರ್ಮಿಸಿಭಕ್ತಿಯ ಪ್ರಕಟಿಸಿ | ಯುಕ್ತಿಯ ಬೋಧಿಸಿ | ಶಕ್ತಿಯನೊದಗಿಸಿ | ತ್ಯಕ್ತ ವಿಷಯ ವಿರಕ್ತಿಯ ಸೇರಿಸಿ |ಮುಕ್ತನೆನಿಸಿ ಅವ್ಯಕ್ತವ ಕರಗಿಸಿ1<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಬೋಧವ ಬೋಧಿಸಿ ಭೇದವ ಛೇದಿಸಿ |ವಾದವ ಅರಗಿಸಿ ಕ್ರೋಧವ ಕರಗಿಸಿ |ಛೇದ-ವಿಚ್ಛೇದದ ಹಾದಿಯ ಹಾರಿಸಿಓದುವ ನುಡಿ ವೇದಾಗಮವಾದವು2ನೀನೇ ನಿನ್ನ ನೀನೆ ನಿನ್ನೊಳು ನೀನೆ ಜಗದೊಳುನೀನೆ ಎನ್ನೊಳು ನೀನೆ ಸರ್ವವು ನೀನೆ ಎಲ್ಲವು |ನೀನೆ ನಿನ್ಹೊರತೇನೊಂದಿಲ್ಲ3ಶ್ರುತಿಸ್ವ .............. ನಿಂತವುಸ್ಮøತಿಗಳು ನಿಂತವು .........................ಮತಿಗಳು ಸ್ತುತಿಗಳದ ನಿಮ್ಮ ನಾ ಕಂಡು4ಮಾರಮದ ಸಂಹಾರ ತಿಸರ ಆಸಾರ ಸುಖ ಸಾಕಾರಾ |ಶಂಕರ ಶೂರಾಭವಭಯಹಾರಾಶ್ರೀ ಫಕೀರ................... ಜಗದೋದ್ಧಾರ ಸದ್ಗುರು5
--------------
ಜಕ್ಕಪ್ಪಯ್ಯನವರು
ಭಕ್ತರೆಂದರೆ ನೈಜ ಭಕ್ತರವರು ಪ.ಚಿತ್ತಜನಯ್ಯನ ಚರಿತಾಮೃತಕೆ ಮನವಿಟ್ಟು ಅ.ಪ.ಅಧಿಯಾತ್ಮ ತಾಪಗಳುಅಧಿಭೂತ ಕ್ಲೇಶದನುಭವಅಧಿದೈವದಟ್ಟುಳಿಯನೆಣಿಸರತಿ ಬಲವಂತರ್ಮಧು ಮಥನಗಲ್ಲದರ ಬಗೆಗಂಜರು 1ವೇದತಂತ್ರವಾಕ್ಯದಿಂದುಪದೇಶಮಾಡಿದರೆ ಮೋಹನಕೊಳಗಾಗರುವದಿಸಿ ಬಲವತ್ಸ್ನಾನವ ಮಾಡಿ ಬೆದರಿಸಲುಕದಲದಂತಃಕರಣದ್ಹರಿದಾಸರು 2ಬದಿಗೆ ಬಂದಡಲಾವದುರಿತಕೋಟಿಗಳನ್ನುತುದಿಗಾಲಿಲೊದ್ದು ಸಲೆ ತಲೆವಾಗರುಹುದುಗೊಂಡು ಷಡುವರ್ಗ ರಿಪುಗಳನು ಗೆದ್ದುಹರಿಪದಲಂಪಟ ಜ್ಞಾನಾಂಬುಧಿಗಳು 3ವಿಧಿಭವೇಂದ್ರಾದಿ ಸುರರಾಳ್ದ ಲಕುಮೀಪತಿಯಸುದಯಾರಸನುಂಬುವ ಬೋಧನವರುಸದಮಲ ಗುಣಾನಂತ ಪ್ರಸನ್ವೆಂಕಟಪತಿಯಹೃದಯವಲ್ಲಭರೆನಿಪಅಚಲಮತಿಯವರು4
--------------
ಪ್ರಸನ್ನವೆಂಕಟದಾಸರು
ಭಕ್ತವತ್ಸಲ ಬಂದು ಬಾಗಿಲಲಿ ನಿಂತುಎತ್ತ ಹೋದನೆಂದು ಧಿಗಿಲು ಎನುತಮತ್ಯಾಕೆ ಬರಲಿಲ್ಲವೊ ಅರ್ಜುನರಾಯ ಪ.ವೀರರಾಯರÀ ಸೇವೆ ಪರಿಪರಿ ಮಾಡಿದ್ದುಮರೆತುಕೊಂಡು ಧರ್ಮ ದೊರೆಯಾಗಿ ಕುಳಿತ 1ಪಾಂಚಾಲಿ ರಮಣನು ಪಂಚ ಪಗಡೆಯನಾಡಿವಂಚನೆ ಮಾಡದೆ ಹಂಚಿಕೆಯಲಿಕುಳಿತ 2ಧಿಟ್ಟ ಭೀಮರಾಯ ಹುಟ್ಟು ಬಚ್ಚಿಟ್ಟುಕೊಂಡುಸಿಟ್ಟಿಲಿಂದ ಮೈ ಮುಟಿಗ್ಯಾಗಿ ಕುಳಿತ 3ಪುಂಡ ಭೀಮರಾಯ ಮಂಡಿ ಕೆದರಿಕೊಂಡುಖಂಡಗನ್ನವ ಉಂಡು ದಿಂಡೆನ್ಹಾಂಗ ಕುಳಿತ 4ಚಲ್ವ ಅರ್ಜುನರಾಯ ಬಿಲ್ಲು ಮೂಲೆಗೆ ಇಟ್ಟುಒಲ್ಲಿಯ ಮುಸುಕು ಹಾಕಿ ಎಲ್ಲೋ ಹೋಗಿ ಕುಳಿತ 5ಹೆÀಚ್ಚಿನ ಗಾಂಡೀವ ಬಚ್ಚಿಟ್ಟು ಕೋಣ್ಯಾಗೆಹುಚ್ಚನ್ಹಾಂಗೆಮಾರಿಮುಚ್ಚಿಕೊಂಡು ಕುಳಿತ6ಚದುರ ನಕುಲರಾಯ ಎದುರಿಗೆ ಬಾರದೆಹೆದರಿಕೊಂಡು ತಾನು ಕುದುರೆ ಮನೆಯ ಹೊಕ್ಕ 7ಧನವೆತ್ತಿಸಹದೇವಘನವಿದ್ಯಾನರಿಯದೆದನಕರುಗಳನ್ನೆಲ್ಲ ಅನುಸರಿಸಿ ಇರುವ 8ಪಾಂಡವರೆ ಶ್ರೇಷ್ಠರು ಧೈರ್ಯವೆ ಇರಲೆಂದುಶೌರಿಕುರುರಾಯಗೆ ತಾ ನುಡಿದನು9ಇಷ್ಟೂರು ಹರಿಗಂಜಿ ಬಿಟ್ಟರು ಕೈಕಾಲುಧಿಟ್ಟ ಬಲರಾಮ ತಾ ‌ಘಟ್ಯಾಗಿ ಕೈ ಹೊಯಿದನು 10ಇಷ್ಟೊಂದು ಗಾಬರಿ ದಿಟ್ಟೆಯರೆ ಆಗದಿರಿಕೊಟ್ಟನುಅಭಯದಿಟ್ಟ ರಾಮೇಶ11
--------------
ಗಲಗಲಿಅವ್ವನವರು
ಭಕ್ತವತ್ಸಲನೆಂಬ ಚಿಹ್ನೆ ನಿನಗೆಯುಕ್ತವಲ್ಲದೆ ಆರಿಗೊಪ್ಪುವುದು ಕೃಷ್ಣ ಪ.ಎಲ್ಲ ಜಗದ ತಂದೆ ನಿನ್ನ ಮಗ ಆ ನಂದನೊಲ್ಲಭೆಯ ಕಂದನಾದಚೆಲ್ಲುವೆ ಅರಸಿ ನಿನ್ನಂಗನೆ ಲಕುಮವ್ವಗೊಲ್ಲತೇರಿಗೆಂತು ಸೋತಿದ್ದೆ ಸ್ವಾಮಿ 1ಮಂದಿ ರಾಜಾಂಡಕೋಟಿಗೆ ಗುರುವರ್ಯ ನೀನುಸಾಂದೀಪನi್ಞ್ಯಳಿಗವ ಮಾಡ್ದೆಮಂದಜಾಸನಆ ವಾಯು ನಿನ್ನ ಓಲೈಸುತಿರೆಕಂದನೆನಿಸಿದೆ ಯಶೋದಾದೇವಿಗೆ ಸ್ವಾಮಿ 2ಮೂರು ಚಾವಡಿ ಪಾರುಪತ್ಯದ ಪ್ರಭುವೆ ನೀನೇರಿದೆ ನರನ ಬಂಡಿಯನುದ್ವಾರಕೆಯ ಅರಸೆ ನೀ ಚೀರಿದರೋಡಿ ಬಂದುಆ ರಮಣಿಯಮಾನಉಳಿಸಿದೆ ಸ್ವಾಮಿ3ಮುಕ್ತದ್ರುಹಿಣರಿಂದಸೇವ್ಯನೀ ಧರ್ಮನಮಖದೊಳೆಂಜಲ ಪತ್ರ ತೆಗೆದೆಪ್ರಕಟಿತನಿತ್ಯಮಹಾತೃಪ್ತ ನೀ ವಿದುರನಕಕುಲತೆಯ ಔತಣಗೊಂಡು ಮುದಿಸಿದೆ ಸ್ವಾಮಿ 4ಹಲವು ಶ್ರ್ರುತಿಗಳಿಗೆ ನೀ ನಿಲುಕದೆ ನೆನೆದವಗೆಸುಲಭದಿ ಪೊರೆವ ಉದಾರಿಬಲದ ಮ್ಯಾಲೊಲಿಯುವ ದೊರೆಯಲ್ಲ ಭಕ್ತರಛಲರಕ್ಷ ಪ್ರಸನ್ನವೆಂಕಟ ಜಗದಧ್ಯಕ್ಷ ಸ್ವಾಮಿ 5
--------------
ಪ್ರಸನ್ನವೆಂಕಟದಾಸರು