ಒಟ್ಟು 11213 ಕಡೆಗಳಲ್ಲಿ , 138 ದಾಸರು , 6168 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲೇಸು ಮಾಡಿದೆ ಮಾತೆ ಪುಣ್ಯದ ರಾಶಿ ಎನಗೊದಗಿತು ಭಲ ಪ ಆಶೆಯನು ಪೂರೈಪೆನಿಂದಿನ ಘಾಸಿಯಾಕೆ ದ್ವಿಜರಿಗಲಾ ಅ.ಪ ಬಂಡಿಯನ್ನವು ಪಾಯಸವುಸುಖಿ ವುಂಡು ತೇಗುತ ಬರುವೆನು1 ಶಾನೆ ಖಾರದಪ್ಪಳ ಸಂಡಿಗೆಯು ನೂರಾರು ಬೆಂಡು ಪುಟ್ಟಿಗೆಗಳು 2 ದೋಸೆ ಕೋಡುಬಳೆಯಪ್ಪಗಳು | ಸೋ- ಮಾಸಿ ಹೂರಗಿ ಮಾಡಿಸು ಸೂಸಲುಪ್ಪಿನಕಾಯಿಗಳನ್ನು ರಾಸಿ ರಾಸಿಯು ತುಂಬಿಸು 3 ಎಲ್ಲವನು ಹೆಚ್ಚಾಗಿ ಮಾಡಿಸು ನಿಲ್ಲದೀಗಲೆ ಪೋಗುತಾ ಸುಳ್ಳಿದಲ್ಲವು ತಿಳಿಯುತ 4 ಕುಡಿವೆ ಭುಜವಪ್ಪಳಿಸಿ ನಾಂ ಸಡಗರವೆನಗೆ ಗೈದ ತಾಂ 5
--------------
ಗುರುರಾಮವಿಠಲ
ಲೋಕದವರ ತಳ್ಳಿ ಕಾಲಿಗೆಸುತ್ತಿದ ಬಳ್ಳಿ ಶೋಕಮಯಸಂಕೋಲೆ ಸಾಕು ಹರಿ ಕಡಿ ಕೀಲಿ ಪ ದಮ್ಮನಿದ್ದರೆ ಠೊಣ್ಯನೆಂಬುವರು ತೆಳ್ಳಗಿದ್ದರೆ ಬಡಕನೆಂಬುವರು ರಮ್ಯನುಡಿಯೆ ಬಾಯ್ಬಡಕನೆಂಬುವರು ಸುಮ್ಮನಿದ್ದರೆ ಗುಸುಕನೆಂಬುವರು 1 ಜಮ್ಮಾಸಿ ಉಂಡರೆ ಜೋಗಿಯೆಂಬುವರು ಕಮ್ಮಿ ಉಂಡರೆ ರೋಗಿಯೆಂಬುವರು ದಿಮ್ಮಾಕೆಂಬುವರು ಜಳಜಳವಿದ್ದರೆ ಸಮ್ಮತಬಡರು ಹೊಲಸುಕಂಡರೆ 2 ಮಾಡಿ ಉಂಡರೆ ನೋಡಿ ಸಹಿಸರು ಬೇಡಿ ಉಂಡರೆ ಹೇಡಿಯೆಂಬುವರು ಗಾಢಮುಕ್ತಿಪದ ಕೊಡುವ ಶ್ರೀರಾಮನ ಹಾಡಿ ಪಾಡಿದರೆ ನಿಂದೆ ಮಾಡುವರು3
--------------
ರಾಮದಾಸರು
ಲೋಕನಾಯಕಿ ಹೆಣ್ಣಾ ನೋಡಮ್ಮ ಸತ್ಯ ಲೋಕೇಶ ಬೊಮ್ಮನೀಕೆ ಮಗನಮ್ಮ ಪ. ಶೋಣಿತ ಶುಕ್ಲ ಸಂಮ್ಮಂಧಗಳಿಲ್ಲ ಇಂಥಾ ಜಾಣತನವು ಬೇರೊಬ್ಬಗಿಲ್ಲ ವಾಣೀಶ ಶಂಭು ಮುಖ್ಯ ಸುರರೆಲ್ಲ ತತ್ವ ಕಾಣದೆ ನಿತ್ಯಮೆಣೀಸುವವರಲ್ಲ 1 ಮೂಢ ದೈತ್ಯರ ಮೋಹಿಸಲಿಕಂದು ಒಳ್ಳೆ ಪಾಡಾದ ಸಮಯಕೊದಗಿ ಬಂದು ಮೂಡಿ ಸುಧೆಯ ಕಲಶ ತಂದು ತಡ ಮಾಡದೆ ಸುರರಿಗಿಕ್ಕಿದಳಂದು 2 ಶಿವನು ಮರಳುಗೊಂಡ ಶೃಂಗಾರಸಾರ ಭುವನೈಕರಕ್ಷ ದೀನಮಂದಾರ ಪವನವಂದಿತೆ ಪದ್ಮೆಗಾಧಾರ ನಿತ್ಯ ನವಯವ್ವನೆಗೆ ನಾವು ಪರಿವಾರ 3 ಭಸ್ಮೋದ್ಧೂಳಿತ ದೇಹಭವನಂದು ವರವ ಭಸ್ಮಾಸುರನಿಗಿತ್ತೋಡುವ ಬಂದು ವಿಸ್ಮಯಗೊಂಡು ನೀನೆ ಗತಿಯೆಂದು ಪೇಳೆ ಭಸ್ಮಗೈದಳು ದೈತ್ಯಾಧಮನಂದು 4 ನಾಗಗಿರಿಯ ಶಿಖರದ ಮೇಲೆ ನೆಲೆ ಯಾಗಿ ಶೋಭಿಪಳತ್ಯದ್ಭುತ ಬಾಲೆ ಶ್ರೀಗುರು ಶಿವಮುಖ್ಯ ಸುರಪಾಲೆ ದಯ ವಾಗಿ ತೋರ್ಪಳು ತನ್ನ ಶುಭಲೀಲೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ಲೋಕನೀತಿ 1 ಕಾಮಧೇನು ಕಲ್ಪತರು ಕಾಮಿತಾರ್ಥವನೀವ ಹರಿಯೇ ಎನಗಿರೆ ಎನಗ್ಯಾತಕೆ ಚಿಂತೆ ಕಾಮಿತಾರ್ಥವನೀವ ದೊರೆಯಿರಲು ಯನಗ್ಯಾತರ ಕೊರೆತೆ ಹರಿಕಾವದೇವ ನೀನಿರಲು ಕೋಳಿ ತನ್ನ ಮರಿಗೆ ಹಾಲುಕೊಟ್ಟು ಸಾಕುವದೆ ಕಾಳ ರಾತ್ರಿಯು ಕಳೆದು ಹರಿ ಉದಿಸುವನೆಂದು ಕೋಳಿಕೂಗಿದರೂ ಏಳದೆ ಮಲಗಿ ಕಾಲಕಳೆವರು ಮನುಜರುಹರಿಯೆ ಕಾಲಕೂಟ ಸಮ ಕಾಮಿತಾರ್ಥವ ಬೇಡುವರು ಕಾಲದೂತರು ಬರುವ ವ್ಯಾಳೆತನಕ ನಿನಧ್ಯಾನಿಸದೆ ಕಾಲಕಳೆವರು ಮನುಜರು ಕಾಲಮೂರುತಿ ನೀನೆ ಎಂದರಿಯರು ಹರಿ ಕಾಲ ಅಕಾಲ ನಿನಗುಂಟೆ ಎನಗುಂಟೆ ದೇವ ನೀ ಎನಗೆ ಇಂಥಾ ಕೀಳು ಬುದ್ಧಿಯ ಕೊಡದಿರೊ, ಏಳು ಬೆಟ್ಟದ ಒಡೆಯ ಶ್ರೀ ಶ್ರೀನಿವಾಸ 2 ಬೆಳಗೆದ್ದು ಹರಿ ನಿನ್ನ ಧ್ಯಾನಿಸದೆ ಪರಧ್ಯಾನ ಪರನಿಂದೆಯಲ್ಲಿಹರು ನಿತ್ಯ ನಿನ್ನ ಧ್ಯಾನ ಬಿಟ್ಟು ಬೆಳಗಾಗೆ ನಿನ್ನ ಸೂರ್ಯರಶ್ಮಿ ಬಿದ್ದರೂ ಏಳರು ಶಯನ ಬಿಟ್ಟು ಈ ಜಗದಿ ದೇವ ಈ ಕಲಿ ಜನರು ಇಂಥಾ ಬೆಳಗ ಎನಗೀಯದೆ ನೀ ಎನ್ನೊಳಗಿದ್ದು ಬೆಳಗಿನ ಜಾವದಿ ನಿನ್ನ ಕಳೆಕಳೆರೂಪ ಎನಗೆ ತೋರೋ ಘಳಿರನೆ ಶ್ರೀ ಶ್ರೀನಿವಾಸ 3 ಎರಡನೆ ಜಾವದಲಿ ಹುಂಜ ಹರಿಪೂರ್ವದಲಿ ಬರುವ ಏಳಿರೆಂದು ಕೂಗಲು ಸತಿ ಸಹಿತ ಕಾಮಕೇಳಿಯಲಿಹರು ಮೂರನೆ ಝಾವದಲಿ ಹರಿ ಉದಿಸಿ ಬ್ರಾಹ್ಮೀಮುಹೂರ್ತದೊಳು ಹರಿ ಬೆಳಕೀವ ಲೋಕಕೆ ಎಂದು ಕೂಗುವುದು ಕೋಳಿ ಕೇಳಿ ಕರ್ಣದಲಿ ಶಯನ ಬಿಟ್ಟೇಳರೊ ಈ ಜಗದಿ ಮೂರೆರಡು ಶತಶ್ವಾಸ ಜಪ ಮಾಡಿಸುವ ಹರಿಭಕ್ತ ಹನುಮನೆಂದರಿಯದೆ ಮಲಗಿ ಕಾಲ ಎರಗಿ ಬರುವುದು ಆಯುಷ್ಯವೆಂದರಿಯದೆ ಭಾರತೀಪತಿ ಅಂತರ್ಯಾಮಿ ನಿನ್ನಧ್ಯಾನಿಸದೆ ಇಹರಲ್ಲೋ ಈ ಜಗದಿ ಶ್ರೀ ಶ್ರೀನಿವಾಸ ಎನ್ನ ನೀನವರ ಸಂಗ ಸೇರಿಸದೆ ಕಾಯೊ ಹರಿಯೆ ಎನ್ನ ದೊರೆಯೆ 4 ಸೂರ್ಯನಂತರ್ಯಾಮಿ ನೀನಲದೆ ಮತ್ಯಾರಿಹರು ಹರಿ ಸೂರ್ಯಾಂತರ್ಗತ ಸೂರ್ಯನಾರಾಯಣ ಸೂರ್ಯಕೋಟಿ ತೇಜದಿ ಮೆರೆವೆ ಸೂರ್ಯ ಸಹಸ್ರ ಉದಿಸಿದಂತೆ ಬರುವೆ ಕರ್ಮ ನೀ ಮಾಡಿಸಿ ಪೆರ್ಮೆಯಿಂದವರ ಕಾಯ್ವ ಶರ್ವಾದಿವಂದಿತ ಗರ್ವರಹಿತ ವೈಕುಂಠಪತಿ ನೀ ನಿನ್ನವರ ಕಾಯಲು ಸರ್ವದಾ ಅವರಿಗೆ ವಲಿದು ಕಾವೆ ಆದಿನಾರಾಯಣ ಶ್ರೀ ಶ್ರೀನಿವಾಸ ಕಾಯೆನ್ನ ಸೂರ್ಯಾಂತರ್ಗತ ವೆಂಕಟೇಶಾ 5 ಹಗಲಿರುಳು ಎನ್ನದೆ ನಿನ್ನ ಸ್ತುತಿಪರು ಭಕ್ತರು ಅಘಹರನೆ ನಿನ್ನ ಪ್ರೇರಣೆಯಿಂದಲವರಿರಲು ಬಗೆಬಗೆಯ ರೂಪದಿ ಬಂದವರ ಸಲಹುವೆ ನಗೆ ಮೊಗದ ಶ್ರೀ ರಮೆಯರಸ ಲಕ್ಷ್ಮೀಶ ನಿನ್ನ ಬಗೆ ಅರಿತಿಹರಾರಿರೀಜಗದಿ ಪಗಲಿರುಳೆನ್ನದೆ ನೀನವರಲ್ಲಿದ್ದು ಸಲಹಲು ಬಗೆವರೆ ಅನ್ಯರಿಗೆ ಅಲ್ಪರಿವರೆ ನಿನ್ನವರು ಜಗದಾಖ್ಯ ವೃಕ್ಷನೀನಿರಲು ನಿನ್ನ ಭಕ್ತರು ನಿನಗಲ್ಲದೆ ಜಗದೊಡೆಯ ಶ್ರೀ ಶ್ರೀನಿವಾಸ
--------------
ಸರಸ್ವತಿ ಬಾಯಿ
ಲೋಕನೀತಿ ಅಂತರಂಗದ ರೋಗ ಯಾವುದು ಅದುಚಿಂತೆಯಲ್ಲದೆ ಮತ್ತ್ಯಾವುದು ಪ. ಸಂತತ ಶ್ರೀಹರಿನಾಮದಿಂದ್ಹೋಹುದುಅಂತ್ಯಕೊದಗಿತಜಮಿಳನಿಗಿನ್ನಾವುದು ಅ.ಪ. ಶ್ರವಣ ಮನನ ಸಾಧನ ನವವಿಧಭಕ್ತಿಭವಬೇರ ಕಡಿವುದೆಂದರಿಯಬೇಕುರವಿಕುಲಾಂಬುಧಿಸೋಮ ರಾಮನ್ನ ಚಿಂತಿಸಿಭವವಾರಿಧಿಯ ದಾಟುವರೆಲ್ಲರು ಕೇಳಿ 1 ಜರಾಮರಣಾದಿ ದುಃಖಗಳ ಪರಿಹರಿಸಿಪರಿಪರಿಯಾನಂದ ಕೊಡುವುದಿದುಮರೆಯದೆ ಮನದಲಿ ಒಮ್ಮೆ ನೆನೆದು ಪಾಡೆಸರುವಾಭೀಷ್ಟವ ಕೊಡುವುದಿದೊಂದೆವೆ 2 ಭಯಗಳ ಬಿಡಿಸಿ ಅಭಯಗಳ ಕೊಡಿಸುವಭವದೂರ ಗೋವಿಂದನೆಂದರಿತುಹಯವದನನೆ ಎನ್ನ ಉದ್ಧರಿಸೊ ಎಂದುನಯದಿಂದ ಬೇಡುವರ ಭಾಗ್ಯವೆ ಭಾಗ್ಯ 3
--------------
ವಾದಿರಾಜ
ಲೋಕನೀತಿ ಅಧಿಕಾರಿಯಾಗಬೇಕು ಅದಕಾಗಿ ದುಡಿಯಬೇಕು ಪ ಅಧಿಕಾರಿಯಾಗುವುದು ಸುಲಭವಲ್ಲ ಎದೆಚಾಚಿ ಜಗದಿ ಹೆಮ್ಮೆಯ ತೋರುವ ಅ.ಪ ಶಾಶ್ವತವಿರಬೇಕು ಅದನೀಶ್ವರ ಕೊಡಬೇಕು ವಿಶ್ವವಿದ್ಯಾನಿಲಯವ ಸೇರುತಲಿ ಶಶ್ವದಿ ಪರವಿದ್ಯಾಶಾಖೆಯಲಿ 1 ಭೂಷಣವೆನಗೆಂದು ನೀ ಮೋಸ ಹೋಗಬೇಡ ಸಾಸಿರ ಸಾಸಿರ ಸ್ಥಾನಗಳಿಗೆ ನೀ ಆಸೆ ಪಡದೆ ಹರಿಶಾಸನ ಸಭೆಯ 2 ಕಮ್ಮಿಯ ಪ್ರತಿಫಲಕೆ ನೀ ಸಮ್ಮತಿ ಕೊಡದಿರೆಲೊ ಮರ್ಮವರಿತು ಪರಲೋಕವ ಪಡೆಯಲು ಹಮ್ಮನು ಮುರಿಯುವ ಕಾರ್ಮಿಕ ಸಭೆಯ 3 ಕಾಲವರಿತು ಸತತ ನೀ ಮೇಲಕೇಳಬೇಕು ಬಾಲಗೋಪಾಲನು ನೆಲೆಸುವುದಕೆ ಹೃದ ಯಾಲಯ ರಚನೆಯ ಚತುರ ಶಿಲ್ಪಿಯ 4 ಶ್ರವಣ ಮಾಡಬೇಕು ಶಾಸ್ತ್ರವ ಮನನ ಮಾಡಬೇಕು ಶ್ರವಣ ಮನನ ನಿಧಿ ಧ್ಯಾಸನದಿಂದ ಪ್ರ ಸನ್ನ ಹರಿದಯದಿ ಸಿಗುವ ಮುಕುತಿಗೆ 5
--------------
ವಿದ್ಯಾಪ್ರಸನ್ನತೀರ್ಥರು
ಲೋಕನೀತಿ ಎಲ್ಲಿಗೇತಕೆ ಪೋಗಿ ತಲ್ಲಣಿಸುವೆಯೊ ಮನವೆ ಇಲ್ಲೆ ಶ್ರೀಹರಿಯಿಲ್ಲವೆ ಪ ಬಲ್ಲವರ ಹೃದಯಗುಹೆಯಲ್ಲಿ ಪ್ರಕಟಿಸುತ ಜನ ತುಂಬಿ ಸೂಸುತಲಿರುವ ಅ.ಪ ಕಾಶಿ ರಾಮೇಶ್ವರ ಬದರಿ ತಿರುಪತಿಯೆಂದು ಘಾಸಿಗÉೂಳ್ಳುವೆ ಏತಕೋ ವಾಸನೆಯ ನೀಗದವನಾಶೆಪಾಶಗಳಿಂದ ಬೇಸತ್ತು ಚರಿಸಲೇಕೋ ಈಶನಾವಾಸವೀಜಗವೆಲ್ಲವಿಲ್ಲಿಲ್ಲ ವಲ್ಲಿರುವನೆಂಬುದೇಕೋ ಶ್ರೀಶ ಶ್ರೀಹರಿಯ ನೀನಿರುವಲ್ಲೆ ಶೋಧಿಸುವ ಆಸೆಯುದಯಿಸಲಿಲ್ಲವೇಕೋ 1 ಅಣುಮಹತುಗಳಲ್ಲಿ ತೃಣಜೀವಕೋಟಿಯಲಿ ಗುಣ ಮಹಿಮನರಿಯ ಬಯಸೋ ಎಣಿಸಲಾಗದನಂತಗುಣನ ಪ್ರಾಣಿ ಸಮೂಹ ಗಣಗಳೊಳು ಕಾಣಬಯಸೋ ಅಣುವಿಗಣುವೆನಿಸಿ ಮಹತಿಗೆ ಮಹತ್ತಹನ ಕಣ್ದಣಿಯೆ ಕಾಣುತ ಭಾವಿಸೊ ಗುಣನಿಧಿಯು ನಿನ್ನ ಶ್ರದ್ಧಾಭಕ್ತಿಗಳಿಗೊಲಿದು ಕ್ಷಣದಿ ಕಾಣಿಸುವನಿದನರಿತು ನೀ ಚರಿಸೋ 2 ವ್ರತನಿಯಮಗಳ ಕಾಮ್ಯ ಫಲದಾಸೆಯಿಂ ಮಾಡೆ ಫಲವೇನು ವ್ಯರ್ಥಶ್ರಮವೋ ಸತತ ನಿನ್ನಯ ವ್ಯಾಪ್ತ ಮಹಿಮೆಯರಿಯದೆ ಪೂಜೆ ಮಾಡಿದರು ವ್ಯರ್ಥಶ್ರಮವೋ ಮತಿವಿಕಳ ಕೋಪ ತಾಪದ ದಾಸನವ ಮಾಳ್ಪ ದಾನವದು ವ್ಯರ್ಥಶ್ರಮವೋ ಅಕಳಂಕಮಹಿಮ ರಘುರಾಮವಿಠ್ಠಲನೆಂದು ನಂಬಿ ನಡೆವುದೆ ಸಾರ್ಥಕವೋ 3
--------------
ರಘುರಾಮವಿಠಲದಾಸರು
ಲೋಕನೀತಿ ಏನು ಮಾಡಿದರೇನು ಹಾನಿಯಾಗದು ಪಾಪ ಶ್ರೀನಿಕೇತನನ ದಿವ್ಯನಾಮ ನೆನೆಮನವೆ ಪ ಕ್ಷಣ ಪದಕಮಲಗಳ ಸ್ಮರಿಸಿ ಮನದೊಳಗೆ ಪ್ರತಿ ಕ್ಷಣಕ್ಷಣದಿ ಹರಿ ಮಹಿಮೆ ಭಜಿಸಿ ಭಕ್ತಿಯಲಿ ತೃಣ ಘನದೊಳಿಹನು ಹರಿ ಎನುತ ಚಿಂತಿಸಿ ಮನದಿ ಪ್ರಣವ ಪ್ರತಿಪಾದ್ಯನಂಘ್ರಿಯ ಭಜಿಸದನಕ 1 ಕಪಟನಾಟಕ ಸೂತ್ರಧಾರಿ ಶ್ರೀ ಹರಿಯ ಗುಣ ಅಪರಿಮಿತ ಮಹಿಮೆಗಳ ಭಜಿಸಿ ಹಿಗ್ಗುತಲಿ ಚಪಲ ಬುದ್ಧಿಗಳಿಂದ ತಪಿಸಿ ಕಂಗೆಡದೆ ಮನ ಅಪರೂಪ ಹರಿನಾಮ ಜಪ ಮಾಡದನಕ 2 ದಾನಧರ್ಮಗಳಿಂದ ಧನ್ಯನಾದೆನು ಎನಲು ಹಾನಿಯಾಗೋದು ಆಯು ಪ್ರತಿ ನಿಮಿಷದಿ ಸ್ನಾನ ಜಪತಪದೊಳಗೆ ಯಾರೆನಗೆ ಸರಿ ಎನದÉ ಮೌನದಿಂದ್ಹರಿ ನಾಮ ಧ್ಯಾನಿಸುವತನಕ 3 ಕ್ಲೇಶ ಆನಂದಗಳು ಈಶನಾಜ್ಞೆ ಇದೆಂದು ವಾಸುದೇವನೆ ಜಗತ್ಪ್ರೇರಕನು ಎಂದು ಶ್ವಾಸ ಬಿಡುವ ಶಕ್ತಿ ಲೇಸು ತನಗಿಲ್ಲ ಸ- ರ್ವೇಶ ನಿನ್ನಧೀನವೆಂದರಿವ ತನಕ4 ಗಾತ್ರ ಶೋಷಣೆಯಾಕೆ ಪಾರ್ಥಸಖನಂಘ್ರಿಗಳ ಕೀರ್ತಿಸುತ ಮನದಿ ರಾತ್ರಿ ಹಗಲು ಕಮಲನಾಭ ವಿಠ್ಠಲನ ಶ್ರೀಮೂರ್ತಿಯನೆ ನೆನೆನೆನೆದು ಸುಖಿಯಾಗೊ ಮನವೆ5
--------------
ನಿಡಗುರುಕಿ ಜೀವೂಬಾಯಿ
ಲೋಕನೀತಿ ಮತ್ಸರಿಸುವವರಲ್ಲಿ ಮಾನ್ಯವಿರಲೀ ಪ ಬಚ್ಚಲಿಲ್ಲದ ಮನೆಯು ಸ್ವಚ್ಛತಾನಾಗಿಹುದೆ ಅ.ಪ ಅರಿಷಡ್ವರ್ಗಗಳು ತುಂಬಿಕೊಂಡಿಹ ದೇಹ ಪರಿಶುದ್ಧವಹುದೇನೊ ಆವಾಗಲೂ ಪರಿಪರಿಯಿಂದಲಿ ಪರಿವಾರ ಜನಗಳು ಪರಿಹಾಸ್ಯಮಾಡಿ ಅಘವ ಕದ್ದೊಯ್ವರಯ್ಯ 1 ಗುಣತ್ರಯಗಳಿಂದಲಿ ನಿಬಿಡವಾದೀದೇಹ ಗುಣಕಾರ್ಯ ಮಾಡದೇ ಬಿಡದೆಂದಿಗೂ ಅಣಿಯಾಗಿ ದುರ್ಗುಣಗಳೊಕ್ಕಣಿಸಿ ಪೇಳುವಡೆ ಗುಣವ ತಿದ್ದಲು ತಾವು ಋಣಿಯಾಗುವರಯ್ಯ2 ಅಭಿಮಾನವೆಂಬುದು ನಭೋಮಂಡಲವರೆಗಿಹುದು ಶುಭವೆಂತೊ ಡಾಂಭಿಕದ ಹೇ ಮಾನವಾ ತುಂಬಿತುಳುಕುವ ದುರಭಿಮಾನವನೆ ತೊಲಗಿಸಿ ಇಂಬು ತೋರುವರಯ್ಯ ಮನಸ್ಥೈರ್ಯಕೇ3 ಕಕ್ಕುಲತೆ ಪಡದೆ ನಕ್ಕುಸಂತೈಸಿಲಾಲಿಸುವ ತೆರದಿ ಅಕ್ಕರದಿ ತನ್ನ ಅಪರಾಧಗಳನೆಲ್ಲ ಲೆಕ್ಕಿಸದೆ ಪೇಳ್ವರದು ಉಪಕಾರವಯ್ಯ 4 ಮಚ್ಚರದಿ ನಿಂದಿಸೆ ಅಚ್ಚುತನ ಭಕುತರಿಗೆ ನಿಚ್ಚದಲಿ ಸ್ವಚ್ಛಭಕುತಿ ಇಹುದು ಮಚ್ಚರಕೆ ಸ್ವೇಚ್ಛೆಯಿಂದೆದುರು ಉಚ್ಚರಿಸದಿರೆ ಮೆಚ್ಚಿ ಕಾಯುವನಯ್ಯ ಶ್ರೀ ವೇಂಕಟೇಶ 5
--------------
ಉರಗಾದ್ರಿವಾಸವಿಠಲದಾಸರು
ಲೋಕನೀತಿ ಮನವೇ ನೀ ಭಜಿಸು| ರಾಮನಾಮವನು ಘನ ಮುಕ್ತಿಸಾಧನೆ | ಪಾದನಾಮವನು ಪ ಅಂದದ ನಾಮ| ಚಂದದ ನಾಮ|| ವಂದಿಸೆ ಮನಕಾ| ನಂದದ ನಾಮ 1 ಕೋಮಲ ನಾಮ| ನಿರ್ಮಲ ನಾಮ| ಕಾಮಿತವೀವ ಸು| ಪ್ರೇಮದ ನಾಮ 2 ಪಾವನ ನಾಮ| ಶ್ರೀವರ ನಾಮ|| ಪವನಸಂಜಾತನು ಸ್ಮರಿಸುವ | ನಾಮ 3 ಅಗಣಿತ ಮಹಿಮ|| ಜಗದಭಿರಾಮನ | ಘನಗುಣ ನಾಮ 4 ಭಕ್ತಾದಿ ಜನರು| ಭಜಿಸುವ ನಾಮ| ಮುಕ್ತಿಸಾಧನವಾದ| ಭಕ್ತಿಯ ನಾಮ 5
--------------
ವೆಂಕಟ್‍ರಾವ್
ಲೋಕನೀತಿ (ಅ) ಅಂಟಿ ಅಂಟದ ಹಾಗೆ ಇರಬೇಕು ಪ ಈ ತಂಟೆ ಸಂಸಾರದ ಬುದ್ಧಿ ಉಂಟಾದವರಿಗೆಲ್ಲಾ ಅ.ಪ ಎಂಟು ಮದಗಳನ್ನು ಬಿಡಬೇಕು | ಹದಿ- ನೆಂಟನೇ ತತ್ವ ತಿಳಿಯಬೇಕು ಭಂಟನಾಗಿ ವೈಕುಂಠ ಸೇರುವದಕೆ 1 ಶತ್ರುಗಳಾರ್ವರ ಗೆಲ್ಲಬೇಕು | ನಿಜ- ಮಿತ್ರರಾರ್ವರೊಳು ನಿಲ್ಲಬೇಕು ರಾತ್ರಿ ಹಗಲು ಪತ್ನೀಪುತ್ರರೊಡನೆ ಕಮಲ- ಪತ್ರದಿ ನೀರಿದ್ದ ರೀತಿಯಿಂದಲಿ ತಾನು 2 ಮಾನವಮಾನ ಒಂದಾಗಬೇಕು | ಅನು- ಮಾನವಿಲ್ಲದೆ ತಿರುಗಲುಬೇಕು ಇನ್ನೇನಾದರು ಗುರುರಾಮವಿಠಲನಾ- ಧೀನನೆನುತ ಮದ್ದಾನೆಯಂದದಿ ತಾನು 3
--------------
ಗುರುರಾಮವಿಠಲ
ಲೋಕನೀತಿ (ಆ) ಇರುವುದೆಲ್ಲ ಮನೆಯೊಳಗಿದ್ದರೆ ಆಡಿಗೆಗೆ ಯಾತಕ್ಕೆ ತಡವಾಗೋದು | ಪ ತರಬೇಕೇಂದು ನೂರು ತಡವೆ ನಾ ನುಡಿದರು ಅರಿಯದವರ ಪರಿತಿರುಗುತ್ತಲಿರುವದು ಅ.ಪ ಮನೆ ಮನೆಯಲಿವಂದು ಮಾನಾರ್ಧಮಾನಗಳು ಮೆಣಸಿನಪುಡಿ ಉಪ್ಪು ಅಕ್ಕಿ ಸಾಲ ದಿನ ದಿನ ಮಧ್ಯಾಹ್ನ ತಿರುಗಿದ ಮೇಲೆ ಮನೆಗೆ ಬಂದು ಹಸಿವೆನುತ ಪೇಳುವದು 1 ಎಣ್ಣೆವಗ್ಗರಣೆಯಲ್ಲದೆ ಕಾಣೆನಭಿಗಾರ ಮುನ್ನೆ ಪಿತ್ಥ ಹೆಚ್ಚಿ ತಲೆ ನೋಯ್ವುದು ನಿನ್ನೆಮೊನ್ನೆ ಹೇಳಿದುದಕೆ ಹೊಡೆಸಿಕೊಂಡೆ ದೊಣ್ಣೆಪೆಟ್ಟಿನಿಂದ ಬೆನ್ನು ಬಾತಿರುವದು 2 ವರುಷಕ್ಕಾಗುವ ಮಟ್ಟಿಗೆಲ್ಲಾ ಪದಾರ್ಥ ಶೇ- ಖರವ ಮಾಡುವುದು ಈ ಮನೆಯೊಳಿಲ್ಲಾ ಹಿರಿಯರಿಂದ ಬಂದ ಸಂಪ್ರದಾಯವಿದೇನೊ ಇಂಥಾಮನೆಯ ಸೇರಿ ಈ ಸುಖ ಪಡುವೆ 3 ಮದುವೆಯಲ್ಲಿದ್ದದ್ದು ಪ್ರಸ್ತದೊಳಗೆಯಿಲ್ಲ ಬದಲು ಸೀರೆಯು ನಾನುಟ್ಟರಿಯೆ ವಿಧಿಲಿಖಿತವು ತಪ್ಪುವುದೆಯೆಂದಿಗಾದರು ವದರಿ ಕೊಂಡರೆಯೇನು ಇದರೊಳು ಫಲವುಂಟು 4 ಜ್ಞಾನ ಶೂನ್ಯರು ಮನೆಯೊಳಿಹರೆಲ್ಲರು ಈ ನರಜನ್ಮವು ಇಷ್ಟಕ್ಕೆಸಾಕೆಂದು ಧೇನಿಸಿ ಗುರುರಾಮವಿಠಲನ ಬೇಡುವೆ 5
--------------
ಗುರುರಾಮವಿಠಲ
ಲೋಕನೀತಿಯ ಪದಗಳು 448 ಅನ್ನದಾನವನ್ನೆ ಮಾಡು ಕನ್ಯದಾನವನ್ನೆ ಮಾಡುನಿನ್ನ ನಂಬಿದರ ಪೊರೆದುನ್ನತ ಹರ್ಷದಿ ಬಾಳುಸನ್ನುತ ಸರ್ವಲೋಕಗಳನ್ನು ರಕ್ಷಿಸುವನಾಗ ಪ್ರ-ಸನ್ನ ಮೂರುತಿಯಾಗುರನ್ನದ ರಾಶಿಗಳನ್ನು ಚಿನ್ನದ ಆಭರಣಗಳನ್ನುಭೂಸುರರಿಗಿತ್ತು ಮನ್ನಿಸು ಉದಾರನಾಗುಮನ್ನೆಯರೆಲ್ಲರು ಬಂದುನಿನ್ನನೋಲೈಸಲೆಂದು ಅಪರ್ಣೆಪರಿಸಿದಳು 1 ಕೋಟಿ ಗೋದಾನವ ಮಾಡು ಸಾಟಿಯಿಲ್ಲದಂಥಾ ಪಂಚಕೋಟಿ ಗಜದಾನ ಶತಕೋಟಿಯಶ್ವದಾನಗಳಮೀಟಾದ ಬ್ರಾಹ್ಮರಿಗಿತ್ತು ಕೀರ್ತಿವಂತನಾಗು ಕಿ-ರೀಟ ಶೌರ್ಯದೊಳಾಗು ಮೀಟಾದ ಮಂತ್ರಿಗಳ ಕಿ-ರೀಟ ರತ್ನಕಾಂತಿಗಳ ಕೋಟಿ ನಿನ್ನ ಪಾದದಲ್ಲಿಧಾಟಿಯಾಗಿರುವನಾಗುಲೂಟಿಸಿ ವೈರಿಗಳನು ಗೋಟುಗೊಳಿಸುವ ಶಶಿಜೂಟ ಭಕ್ತನಾಗು 2 ಇತ್ತೆರದೆ ಬೀಸುತಿಹ ಮುತ್ತಿನ ಚಾಮರ ಶ್ವೇತಛ್ಛತ್ರ ಸೀಗುರಿಗಳ ಮೊತ್ತದ ಸಾಲೊಳಗೆ ಒ-ಪ್ಪುತ್ತಲಿರುವವನಾಗು ಸತ್ಯವಂತನಾಗು ಸುವ್ರತ ನೀನಾಗುಪೆತ್ತವರ ನೋಡಿ ನಲಿವುತ್ತಿರಲು ಭೂಸುರರುಮುತ್ತಿನಕ್ಷತೆಯನಾಂತುಪೃಥ್ವಿಯ ವೊಳಗೆಲ್ಲಾ ಸ-ರ್ವೋತ್ತಮ ಪುರುಷನಾಗೆನುತ್ತಮಸ್ತಕದಿ ತಳಿವುತ್ತ ಪರಸಿದರು 3 ಇಂದ್ರನಾಗು ಭೋಗದೊಳು ಸತ್ಯವಾಕ್ಯದೊಳು ಹರಿ-ಶ್ಚಂದ್ರನಾಗು ಪಾಲನೆಯ ಮಾಡುವುದರೊಳಗೆ ಉ-ಪೇಂದ್ರನಾಗು ಬುದ್ಧಿ ಕೌಶಲದೊಳು ತಿಳಿಯಲು ನಾ-ಗೇಂದ್ರ ನೀನಾಗುಚಂದ್ರನಾಗು ಶಾಂತಿಯೊಳಗೆಂದು ವಂದಿಮಾಗಧರವೃಂದ ಕರವೆತ್ತಿ ಜಯವೆಂದು ಪೊಗಳುತ್ತಿರಲಾ-ಚಂದ್ರಾರ್ಕವು ಸೌಖ್ಯದಿ ಬಾಳೆಂದು ಸಾನಂದದೊಳಾಗಇಂದಿರೆ ಪರಸಿದಳು4 ಧೀರನಾಗುದಾರನಾಗು ಸೂರಿಜನವಾರಕೆ ಮಂ-ದಾರನಾಗು ಸಂಗರ ಶೂರನಾಗು ವೈರಿ ಜ-ಝ್ಝೂರನಾಗು ಮಣಿಮಯ ಹಾರನಾಗುವೀರಾಧಿವೀರ ನೀನಾಗುಭೂರಮಣನಾಗು ಮಂತ್ರಿವಾರ ಸಂರಕ್ಷಕನಾಗುಕಾರುಣ್ಯಸಾಗರನಾಗು ಕಾಮಿತಫಲಿದನಾಗುಶ್ರೀ ರಾಮೇಶನಪಾದಾಬ್ಜ ವಾರಿಜ ಭಕ್ತನಾಗೆಂದುಶಾರದೆ ಪರಸಿದಳು5
--------------
ಕೆಳದಿ ವೆಂಕಣ್ಣ ಕವಿ
ಲೋಕನೀತಿಯ ಹಾಡುಗಳು ಶ್ರೀನಾಥನ ನಾಮಾಮೃತ ರುಚಿಯೆಲ್ಲ ಪರಮ ಭಕುತಗಲ್ಲದೆ ಪ ಹೀನ ಮನುಜರು ಕೇಳಿ ಹಿರ್ರನೆ ಹಿಗ್ಗಿ ಆನಂದಪಡಬಲ್ಲರೆ ಅ.ಪ. ಕ್ಷೀರ ವಾರಿಯ ಕೂಟ ಮರಾಳ ತಿಳಿವಂತೆನೀರು ಕೋಳಿಯು ಬಲ್ಲುದೆಸಾರಮೇಯನ ಬಾಲ ನಳಿಗೆಯೊಳಿಟ್ಟರೆನೇರವಾಗಬಲ್ಲದೆದಾರು ಪ್ರತಿಮೆಗೆ ಸೀರೆಯನುಡಿಸಲುನಾರಿಯಾಗಬಲ್ಲುದೆಭಾರತಿಪತಿ ಪಾದವರಿಯದ ಮನುಜನುನಾರಾಯಣನ ಬಲ್ಲನೆ1 ಉದರಕ್ಕೆ ಗ್ರಾಸವ ನಡೆಸದ ಮನುಜನುಮದುವೆ ಮಾಡಲು ಬಲ್ಲನೆಸದನಕ್ಕೆ ಜನ ಬರೆ ಕದನವ ತೆಗೆವವಬುಧರು ಎಂಬುದ ಬಲ್ಲನೆವಿಧಿಯಂತೆ ಮಸೆದು ಮತ್ಸರಿಸುವವ ನಮಗೆಹದುಳ ಹಾರೈಸುವನೆಮದವೆಗ್ಗಳಿಸಿ ಮೆರೆವ ಮನುಜ ಹರಿಪದಗಳರ್ಚಿಸಬಲ್ಲನೆ 2 ಕನ್ನಡಿಯೊಳು ರೂಪು ಹೊಳೆದಂತೆ ಹಂಚಿನೊಳ್‍ಇನ್ನು ಕಾಣಿಸಬಲ್ಲುದೆಕಣ್ಣಿಲ್ಲದವನಿಗೆ ಚಿನ್ನವ ತೋರಲುಬಣ್ಣ ಹೇಳಲು ಬಲ್ಲನೆಹೆಣ್ಣಿನ ಮೇಲಿನ ವ್ಯಾಮೋಹ ಬಿಡದವಸಂನ್ಯಾಸಿಯಾಗುವನೆಅನ್ಯ ದೈವಂಗಳ ಭಜಿಸುವ ನರಗೆ ಮೋ-ಹನ್ನ ವಿಠ್ಠಲ ಒಲಿವನೇ 3
--------------
ಮೋಹನದಾಸರು
ಲೋಕಪಾಲನೆ ನಾಕವಂದ್ಯನೆ ಸಾಕುಬಿಡು ಚಲವಾ ಯಾಕೆ ಕೋಪ ದೀನ ನಾನೆಲೈ ಶ್ರೀಕರ ಸುಗುಣಾ ಪ ಕಾವರಿಲ್ಲವೋ ದೇವ ದೇವನೆ ಭಾವಜಾತಪಿತನೆ ಜೀವಕೋಟಿಯ ಜೀವರಾಶಿಯ ಪಾವನಾಂಗನೆ ಅ.ಪ ಪರರ ನಾನುಪರಿಚರಿಸಲಿಲ್ಲವೋ ದುರುಳಭಾವದಿ ಪರರ ಹಿಂಸೆಗೈದು ಎನ್ನ ಉದರ ಪೊರೆದೆನೋ 1 ವೇದಗಳ ನಾನೋದಿ ಅರಿಯೇ ಸಾಧು ಸಂಗಮ ಭೇದಗೈದೆ ಗರ್ವದಿಂದೆ ವೇದವೇದ್ಯನೆ 2 ಗಂಗಜನಕ ತುಂಗ ವಿಕ್ರಮ | ಮಂಗಳಾಂಗನೇ ಮಾಂಗಿರೀಶ ನಿನ್ನ ನಾಮಭೃಂಗವ ತೋರೈ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್