ಒಟ್ಟು 15952 ಕಡೆಗಳಲ್ಲಿ , 137 ದಾಸರು , 7176 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾಯಕಾರಳೆ ಕಾಯೊ ಕರುಣದಿ ಬಾಯಿ ಬಿಡುವೆನೆ ರುದ್ರಾಣಿ ಪ ನೋಯಲಾರದೆ ದೇವಿ ಮರೆಹೊಕ್ಕೆ ನೋವು ಕಳೆಯಮ್ಮ ಭವಾನಿ ಅ.ಪ ಭಕ್ತಜನರಿಗೆ ಆಪ್ತಮಾತೃ ನೀ ನಿತ್ಯೆ ನಿರ್ಮಲರೂಪಿಣೀ ಭೃತ್ಯನೊಳು ದಯವಿತ್ತು ಪೊರೆ ಆದಿ ಶಕ್ತಿ ದೈತ್ಯಸಂಹಾರಿಣಿ 1 ಶುಂಭ ನಿಶುಂಭರೆಂಬ ಖಳರ ಜಂಬ ಮುರಿದೌ ಚಂಡಿಕೆ ಅಂಬೆನಿನ್ನನು ನಂಬಿ ಭಜಿಪೆ ಇಂಬುಗೊಟ್ಟು ಸಲಹಂಬಿಕೆ 2 ಸುರರ ಮೊರೆಕೇಳಿ ದುರುಳÀರ್ಹಾವಳಿ ದೂರಮಾಡಿ ಶೌರಿಯೆ ನೀ(ರಟ)ಸಿದವರಿಗೆ ವರವ ಕರುಣಿಸಿ ಕರುಣ ದೋರಿದೌದರಿಯೆ 3 ಅನ್ನಪೂರ್ಣೆಯೆ ನಿನ್ನ ಪಾದ ವನ್ನು ಭಜಿಸುವೆ ಕಲ್ಯಾಣಿ ಭಿನ್ನವಿಲ್ಲದೆ ನಿನ್ನ ಸುತಗೆ ಸುಖ ವನ್ನು ಕೊಡೆ ನಾರಾಯಣೆ 4 ರಾಮದಾಸರ ಪ್ರೇಮ ಜನನಿಯೆ ನೇಮದಿಂ ನಿನ್ನ ಪಾಡುವೆ ಹೈಮಾವತಿ ಎನ್ನ ಕಾಮಿತಾರ್ಥವ ಪ್ರೇಮದಿಂ ನೀಡು ಕರುಣಿಯೆ 5
--------------
ರಾಮದಾಸರು
ಮಾಯಮತವೊಳಿತಲ್ಲ ನಿನಗೆನಾಯಿ ಜನ್ಮವು ಬಾರದೆ ಬಿಡದಲ್ಲ ಪ ಜಗಕೆ ಕಾರಣ ದೇವ ತಾನಿರಲುಬೊಗಳಿಕೊಂಬೆ ಭೇದವಿಲ್ಲೆಂದುತೆಗೆವನು ಯಮ ಬೆನ್ನ ಚರ್ಮ ಇದುನಗೆಯಲ್ಲ ಕೇಳೋ ತಿಳಿಯೊ ದುಷ್ಕರ್ಮ 1 ಭೇದವಿಲ್ಲೆಂದು ತಿಳಿದು ನೀಮಾದಿಗರ ಮನೆಯಲ್ಲಿ ಉಣಲೊಲ್ಲೆ ಯಾಕೊಸಾಧಿಸಿ ನೋಡಲು ನಿನಗೆ ಇಷ್ಟುಬದುಕುಂಟಾದರು ಉಸುರಲಿನ್ಯಾಕೋ 2 ಅಕ್ಕತಂಗಿಯರಿರಲು ನೀನುರೊಕ್ಕವಿಕ್ಕಿ ಮದುವೆ ಆಗುದ್ಯಾಕೊಚಿಕ್ಕ ತಂಗಿತಾಯಿ ಮೊದಲು ನಿನ್ನಲೆಕ್ಕದಲ್ಲಿ ನೋಡಲು ಒಂದಲ್ಲವೇನೋ3 ಸಂಕರ ಮತಕೆ ನೀ ಹೊಂದಿ ಪಂಕದೊಳು ಬೀಳಬೇಕಲ್ಲೊಸಂಕಟಗೊಳಗಾದಿಯಲ್ಲ ನಿನ್ನಬಿಂಕವ ಮುರಿವರು ಯಮನವರಲ್ಲೊ4 ಇನ್ನಾದರು ಭೇದಮತವನುಚೆನ್ನಾಗಿ ತಿಳಿಯೋ ರಂಗವಿಠಲನುತನ್ನ ದಾಸ್ಯವನು ಕೊಟ್ಟುಉನ್ನತ ಪದವೀವನು ನಿನಗೆ 5
--------------
ಶ್ರೀಪಾದರಾಜರು
ಮಾಯವಾಯಿತು ರತುನ | ಮರೆ ಮೋಸಮಾಡಿ ಪ. ಮಾಯವಾಯಿತು ಎನ್ನ ಮೋಹದ ಮಮ ಗುರುವೆಂತೆಂಬ ರತುನ ನೋಯಲೇಕಿದಕಿನ್ನು ನೃಹರಿ ಉ- ಪಾಯದಿಂದಪಹರಿಸಿವೈದನು ಅ.ಪ. ಕರಗತವಾಗಿ ಇತ್ತು | ಪ್ರಕಾಶವು ಧರಣಿಯಲ್ಲಿ ವ್ಯಾಪಿಸಿತ್ತು ಪರಿಪರಿ ಸಜ್ಜನಕೆ ತತ್ವದ ವರ ಸುಧೆಯನುಣಿಸುತ್ತಲಿತ್ತು ಕರಕರದು ಅಂಕಿತವ ಕೊಡುತಲಿ ಪರಮ ಸಾಧನಗೈಸುತಿತ್ತು 1 ಸುಂದರವಾಗಿ ಇತ್ತು | ದುರ್ಜನರಿಗದ ರಂದ ತೋರದಲೆ ಇತ್ತು ಒಂದೊಂದೂ ಗುಣ ವರ್ಣಿಸಲು ಈ ಮಂದ ಮತಿಗಳವಲ್ಲವಿನ್ನು ತಂದೆ ಮುದ್ದುಮೋಹನಾರೆಂ- ತೆಂದು ಜಗದಲಿ ಮೆರೆಯುತಿತ್ತು 2 ಮಾಸಿ ಪೋದಂಥ ಹರಿ | ದಾಸಕೂಟ ತಾ ಸ್ಥಾಪಿಸುತ ಈ ಪರಿ ವಾಸುದೇವನ ಗುಣಮಣಿಗಳ ರಾಶಿಭೂತದಿ ಅರುಹಿ ಶಿಷ್ಯರ ಸಾಸಿರಾನೂರ್ಮೇಲೆ ಹೆಚ್ಚಿಸಿ ತಾ ಸೂರೆಗೊಂಡಾನಂದವನು3 ಗತಶಾಲಿ ಸಾಹಸ್ರವು | ಮೇಲೆಂಟು ಶತವು ಮತ್ತರವತ್ತೆರಸುವು ವತ್ಸವಿಕ್ರಮ ಪ್ರಥಮ ಮಾಸವು ಪ್ರಥಮ ಪಕ್ಷದ ರಾಮನವಮಿ ಹಿತದಿ ಮಂಗಳವಾರ ಸೂರ್ಯನ ಗತಿಯು ನೆತ್ತಿಯೊಳೋರೆ 4 ಎಷ್ಟು ಪೊಗಳಲಳವು | ಆನಂದ ರತ್ನದ ಗುಟ್ಟರಿಯದು ಜಗವು ಶ್ರೇಷ್ಠ ಗೋಪಾಲಕೃಷ್ಣವಿಠಲನು ಕೊಟ್ಟು ಕಳುಹಿಸಿ ಧರೆಯೊಳ್ಮೆರಸಿ ಥಟ್ಟನೇ ತಾ ಕರೆಸಿಕೊಂಡು ಶ್ರೇಷ್ಠ ಶಯ್ಯೆಯ ಮಾಡಿಕೊಂಡನು 5
--------------
ಅಂಬಾಬಾಯಿ
ಮಾಯಾ ಕಾರ್ಯವಾಕೆಯೆ ಮಿಥ್ಯವೂಈ ರೀತಿುಂದಲಾತ್ಮನಿಛ್ಛೆಯಲಿದುಸೇರಿದಂತಿಹುದಾಗಿ ಭ್ರಾಂತಿಯು ಜಾರುವನ್ನೆಗ ಪೊಳೆಯಲು1ಮುನ್ನ ನೀ ಬಂದೆನೆಂಬಲ್ಲಿ ಪರವiನುಭಿನ್ನವಿಲ್ಲದೆ ಪೂರ್ಣವಾಗಿರಲಿನ್ನು ನಿನಗೆಡೆಯಾವದೂಅನ್ಯ ವಿಲ್ಲದನನ್ಯನೀಶನೆ ನಾನುನಿನ್ನ ಕಾರ್ಯದ ನೇತ್ರಮಾತ್ರಕ್ಕುನ್ನತ ಕೃತಿಯಾಗಿರೇ 2ಮರುಭೂಮಿಯೊಳು ಮುಸುಕೆ ಮಿತ್ರನ ಕಾಂತಿಕೆರೆಯ ನೀರಿನ ಹಾಗೆ ಕಾಣುತಲಿರಲು ನೋಡಿದರುದಕವೆಬರಿಯ ಚೌಳೆಂತಾ ಪರಿಯು ನಿನ್ನಯ ತೋರ್ಕೆನಿರತ ಉಂಟೆಂಬಂತೆ ನಿನ್ನಯ ಮರುಳಿನಿಂ ಮುಂದಿರುತಿರೆ 3ಹೊಳೆಯಲಿಲ್ಲವು ಹುಸಿಯಾಗಿ ನೀ ಮುನ್ನಬಳಿಕ ನಿನ್ನೊಳು ಬದ್ದನೆಂಬೀ ಬಗೆಯು ತನಗೆಂತಪ್ಪುದೂತಿಳಿದು ನೋಡಲು ತಾನೊಬ್ಬನಾತ್ಮನುಕಳೆದು ಕೂಡುವ ಮಾತು ಮಾತ್ರವೆಯಳವಿಗೊಂಡಿರವಿಷ್ಟಕೆ 4ಅರಿವಿನಾ ಘಟ್ಟಿಯಾಗಿಹೆ ನಾ ನಿತ್ಯವರಿವು ಮರವೆಗಳೆಂದು ತೋರ್ದರು ಕರಣಧರ್ಮಗಳಲ್ಲದೆಬೆರದು ಬೇರಾಹ ಬಗೆಯಂದಿಗಿಲ್ಲವುತಿರುಪತಿಯ ಶ್ರೀ ವೆಂಕಟೇಶನೆ ತರುಬಿಕೊಂಡಿರೆ ವಿಶ್ವವಾ 5ಕಂ||ನುಡಿಯಲು ಜೀವನು ಕೋಪದಿಕಿಡಿಗೆದರುವ ಕಂಗಳಿಂದಭಿಮಾನನ ಬಲದಿಂತಡೆಯದೆ ತನು ಜೀವನನಾರ್ಭಟಿಸುತ ವಾದಿಸಿದುದ ಪುಸಿತನ ಬಂತೆಂಬುದರಿಂ
--------------
ತಿಮ್ಮಪ್ಪದಾಸರು
ಮಾಯಾ ಜಯಕೃತಿಗೆ ಮಂಗಳಂ ಶಾಂತಿ ಸ್ವರೂಪಳಿಗೆ ಮಂಗಳಂ ಭಕ್ತರ ಕಂಗಳಿಂದಲಿ ನೋಡಿ ರಂಗನ ಪಾದವ ತೋರ್ವಳಿಗೆ ಪ. ಮಂಗಳಂ ಜಯ ಮಂಗಳಂ ಅ.ಪ. ಅಲ್ಲಿ ವೈಕುಂಠದೊಳಗೆ ಇರಲು ಬಲ್ಲಿದ ಭೃಗು ಋಷಿ ತಾ ಬರಲು ವಲ್ಲಭನ ವಕ್ಷಸ್ಥಳ ಒದೆಯಲು ಹರಿ ಸೊಲ್ಲು ಕೇಳದೆ ಓಡಿ ಬಂದಳಿಗೆ 1 ಕೊಲ್ಲಾಪುರದಲಿ ನಿಂದಳಿಗೆ ಎಲ್ಲರಭೀಷ್ಟವ ಸಲಿಪಳಿಗೆ ಖುಲ್ಲರ ಮರ್ಧಿಪ ಹರಿಯ ವಕ್ಷಸ್ಥಳ ದಲ್ಲಿ ಸದಾ ನೆಲಸಿರ್ಪಳಿಗೆ 2 ಶ್ರೀ ಜಯದೇವಿಗೆ ಶ್ರೀ ಲಕ್ಷ್ಮಿಗೆ ಶ್ರೀ ರುಕ್ಮಿಣೀ ಸತ್ಯಭಾಮಳಿಗೆ ಶ್ರೀ ಪದ್ಮಾವತಿ ನಾಮಕ ನಾನಾರೂಪ ಗುಣಾನ್ವಿತೆಗೆ 3 ಮುಕ್ತಾಮುಕ್ತರಿಗೊಡೆಯಳಿಗೆ ಮುಕ್ತಿಯ ಭಕ್ತರಿಗೀವಳಿಗೆ ಮುಕ್ತಳೆನಿಸಿ ಮುಕ್ತಾಶ್ರಯನಿಗೆ ಆ- ಸಕ್ತಿಯಿಂದ ಸೇವೆ ಮಾಳ್ಪಳಿಗೆ 4 ಗೋಪಾಲಕೃಷ್ಣವಿಠ್ಠಲನ ಆಪಾದ ಮೌಳಿಯ ಗುಣಗಳನು ತಾ ಪರಿಪರಿಯಿಂದ ವರ್ಣಿಸುತ್ತಿದ್ದರು ಅಪಾರವಾಗಿಯೆ ಕಾಂಬಳಿಗೆ 5
--------------
ಅಂಬಾಬಾಯಿ
ಮಾಯಾ ಭ್ರಮಿತನಾದ ಮೂಢನಪರಾಧ ಶತವನು ಪಗುಣ ಮೂರರೊಳು ಬದ್ಧನಾಗಿ ಮತ್ತೆಗುಣಕಾರ್ಯ ವಿಷಯಂಗಳೊಳು ಸಕ್ತನಾಗಿಗುಣ ಹತ್ತರಭಿಮಾನಿಯಾಗಿ ುಪ್ಪಗುಣಹೀನನಿಗೆ ಜ್ಞಾನ ದೊರಕೊಳ್ಳದಾಗಿ 1ಪುಣ್ಯ ಪಾಪ ಮಿಶ್ರವೆಂಬ ಕರ್ಮಜನ್ಯವಾದ ಸ್ಥೂಲದೇಹ ತಾನೆಂಬಭಿನ್ನಮತಿಗೆ ದೊರಕೊಂಬ ಜ್ಞಾನವಿನ್ನುಂಟೆ ನಿರ್ಣೈಸೆ ಸುಗುಣ ಕದಂಬ 2ಚಂಚಲವಾಗಿಪ್ಪ ಮನವು ಅಲ್ಲಿವಂಚನೆುಂ ಮಾಳ್ಪ ಸ್ತುತಿ ಪೂಜೆ ಜಪವುಸಂಚಿತವಾುತಘ ವ್ರಜವು ಹೀಗೆವಂಚಿಪ ಮಾಯೆಯ ಗೆಲಲಾರಿಗಳವು 3ಕರ್ಮಕಲಾಪವ ಕಳಿದು ಚಿತ್ತನಿರ್ಮಲನಾಗಿ ಬ್ರಹ್ಮವ ನೆರೆ ತಿಳಿದುಹಂಮಳಿದುಳಿವದೆಲ್ಲಿಯದು ನೀನುಸುಮ್ಮನಿರದೆ ಕಾಯೆ ಸುಲಭವಾಗಿಹುದು 4ಬಂಧನವಿದ ಪರಿಹರಿಸು ಕೃಪೆುಂದಲಿ ಭವದಿಂದಲೆನ್ನನುದ್ಧರಿಸು ತಂದೆ ನೀ ತಿರುಪತಿಯರಸು ಲೋಕಬಂಧು ಶ್ರೀ ವೆಂಕಟರಮಣ ನಿರೀಕ್ಷಿಸು 5ಓಂ ವಿಶ್ವರೂಪ ಪ್ರದರ್ಶಕಾಯ ನಮಃ
--------------
ತಿಮ್ಮಪ್ಪದಾಸರು
ಮಾಯಾದೊಳಗೆ ಶಿಲ್ಕಿ ಮಗ್ನನಾಗಿ ಮರವೆಗೆ ಒಳಗಾದೆ ಕಾಯಬೇಕಯ್ಯ ನಿನ್ನ ಕರುಣ ರಸವನ್ನು ಕಾಣದೆ ನಾ ಬರಿದೆ ಪ ದೀನದಯಾಪರ ದನುಜಾಂತಕ ನಿಧಾನ ಸುಜನವಂದ್ಯಾ ಮಾನವಾದಿ------ಜನಕ ಸನ್ಮಾನಿತ ಮುಚುಕುಂದ ನಿತ್ಯ ಶ್ರೀ ರಂಗಾ 1 ಇತರ ಜ್ಞಾನತೊರೆದು ಮನಬಣ್ಣ ಮರೆದು ಪಾದ ಸೌಖ್ಯವ ಕಾಣದಿನ್ನೂ ಪಿಡಿವರು ಇನ್ನೂ 2 ಏಸೋ ಬಾರಿ ನಾ ಹುಟ್ಟಿದರೇನು ಇನ್ನು ನಿನ್ನ ಕಾಣದೆ ಮನವು ನಿನ್ನಲ್ಲಿಲ್ಲದೆ ಘಾಸಿಗೆ ಬಿದ್ದೆನು ಕರುಣಿಸೊ ಬೇಗನೆ ಘನ್ನ `ಹೆನ್ನ ವಿಠ್ಠಲನೆ ' ವಾಸುದೇವ ಎನ್ನ ವೈನದಿ ರಕ್ಷಿಸೋ ವಸುಧೆಯ ಪಾಲಕ 3
--------------
ಹೆನ್ನೆರಂಗದಾಸರು
ಮಾಯೆ ಮುಟ್ಟದಿರೆನ್ನನು ನಿನ್ನಯ ಮೂರುಕಾಯಾಭಿಮಾನವೆನಿಸುವ ಮೈಲಿಗೆಯನು ಹೇಯವಿದೆಂದು ಬಿಟ್ಟರಿಕೆಯ ಮಡಿಯುಟ್ಟೆಬಾಯ ಹೊೈುಸುವೆನಿನ್ನು ತಪ್ಪಿದೆಯಾದರೆ ಪಧೀರತನದಿ ಸದಸದ್ವಿವೇಕವ ತೊಟ್ಟು | ಸಾರಿ ಧನಾದಿ ಭೋಗಗಳ ಬಿಟ್ಟುಸಾರವಲ್ಲೆಂದು ಸ್ವರ್ಗಾದಿ ಸುಖಂಗಳ | ಮೀರಿದ ವಿರತನು ನಾನೆಂದೆನಲ್ಲದೆ ನಿನ್ನನಾರಿಯಬೇಕೆಂದೆನೆ ವಿಷಯವಿ | ಕಾರದೊಳ್ಬಳಿಸಂದೆನೆ ಧ್ಯಾನ ಸಾಧನಕಾರವೆ ಸಾಕೆಂದೆನೆ ಕಲ್ಪಿತವಾದ ಘೋರ ಸಂಸಾರವಸಾರವೆಂದೆನಲ್ಲದೆ 1ಶಮೆುಂದ ಚಿತ್ತ ವಿಕ್ಷೇಪವ ತೊಲಯ | ದಯೆುಂದಿಂದ್ರಿಯಗಳ ತಗ್ಗಿಸಿಕ್ರಮದಿಂ ತಿತಿಕ್ಷೆುಂ ಸಹನವ ಮಾಡಿ | ಯಮಿತೋಪರಮದಲಗ್ಗಳನೆಂದೆನಲ್ಲದೆಸಮತೆುಲ್ಲದೆ ಬಂದೆನೆ ತನು ಭೋಗ | ಮಮತೆಯೊಳಗೆ ನಿಂದೆನೆ ವಿಘ್ನವಿಕ್ರಮಕೊಳಗಾದೆನೆಂದೆನೆ ವೇದಾಂತೋಪಕ್ರಮವೆನ್ನೊಳಾುತೆಂದು ವಿವರಿಸಿದೆನಲ್ಲದೆ 2ದೀಪಿತ ಮೋಕ್ಷೇಚ್ಛೆುಂದ ತೋರುವ ಸಕಲ | ತಾಪತ್ರಯಗಳ ತೊಲಗಿಸಿಈಪರಿ ವೇದಾಂತ ಶ್ರವಣ ಮನನದ ಪ್ರ | ತಾಪದಿಂದರಿಗಳಿಲ್ಲೆನಗೆಂದೆನಲ್ಲದೆನೀ ಪುಸಿಯಲ್ಲೆಂದೆನೆ ಕಲ್ಪಿತ ನಾಮ | ರೂಪವ ನಿಜವೆಂದೆನೆ ತಾದೃಶ್ಯ ವಿಲೋಪಕನಲ್ಲೆಂದೆನೆ ಕೇಳು ಪ್ರತಿಜ್ಞೆಯ | ಗೋಪಾಲಾರ್ಯನೆ ನಾನೆಂದೆನಲ್ಲದೆ3
--------------
ಗೋಪಾಲಾರ್ಯರು
ಮಾರ ಎನ್ನ ಸಂ ಹಾರ ಮಾಡಲು ದಂಡು ತಂದನೆ ಪ ಮುಂದಾಗಿ ಬಂದೊದಗಿದವು 1 ಅಂತರಂಗದಿ ಮನೋಭ್ರಾಂತಿ ಬಿಡಿಸುವವ ಸಂತನೀಗಲೆ ಬಂದಿರುವನೆ2 ಭೃಂಗಗಳೇ ರಣರಂಗದಿ ಕೂಗುವ ಸಂಗತಿಗೆ ಬೆದರಿದೆನೆ 3 ಶುಕವೇರಿ ಧನುವಿನೋಳ್ ವಿಕಸಿತ ಸಮಬಾಣ ಮುಖದೊಳು ಗುರಿಯನ್ನೆ ನೋಡುವ 4 ಆವಾಗಲೂ ವಾಸುದೇವವಿಠಲನ ಪಾದವೆ ಗತಿಯೆಂದಿರುವೆನೆ 5
--------------
ವ್ಯಾಸತತ್ವಜ್ಞದಾಸರು
ಮಾರ ಕೋಟಿ ಸುಂದರ ಪ ಸೋಮಶೇಖರಾದಿ ಸುರ ಸ್ತೋಮನುತ ನಾಮ ಅ.ಪ ಸಾಯಕ ಶ್ರೀದಾಯಕ ನಿರ್ಮಾಯ ರಘುರಾಯ 1 ಅಪ್ರಾಕೃತ ಶರೀರ ಗೋ ವಿಪ್ರಜನ ಪಾಲ ನಿನ್ನ ಸುಪ್ರಭಾವ ಪೊಗಳಲು ಸರ್ಪಾಧಿಪಗಳವೇ 2 ದೇವ ಗುರುರಾಮ ವಿಠಲಾ ವನಜನೇತ್ರ ನೂತ- ನಾವರಣ ಪುರಿವಾಸ ಕಾವುದೆಮ್ಮನು ಸರ್ವೇಶಾ 3
--------------
ಗುರುರಾಮವಿಠಲ
ಮಾರ ಜನಕನ ನೀರೆ ಪ ಕರವ ಹರುಷದಿಂದಾ ಅ.ಪ ಕ್ಷೀರವಾರ್ಧಿತನಯೆಯೆಂದು ಸಾರಸಾಕ್ಷಿಯರು ಬಂದು ಕೋರಿ ಭಜಿಸುವರು ನಿನ್ನ ಅಪಾರ ಮಹಿಮೆಗಳನು 1 ಸುತ್ತ ಜ್ಯೋತಿಗಳ ಬೆಳಗಿ ಮುತ್ತೈದೆಯರೆಲ್ಲ ಕೂಡಿ ಮುತ್ತು ಮಾಣಿಕ ಪೀಠವಿರಿಸಿ ಭಕ್ತಿಯಿಂದ ಪ್ರಾರ್ಥಿಸುವರು 2 ಜನಕರಾಯನ ಕುಮಾರಿ ಸನಕಾದಿಯೋಗಿ ಜನಾಧಾರೀ ದಿನಕರ ಕೋಟಿ ಪ್ರಕಾಶೆ ದಿವ್ಯಮಣಿಮಯ ಭೂಷೆ 3 ಮಾನಸಾಬ್ಜ ಮಂಟಪದಲಿ ಧ್ಯಾನವೆಂಬೊ ಪೀಠದಲ್ಲಿ ಜ್ಞಾನಿಶಕ್ತಿಗಳು ಪೊಗಳೆ ಸಾನುರಾಗದಿಂದಲೀಗಾ 4 ನಿತ್ಯಸಂಪತ್ಪ್ರದಾಯಿನಿ ಭೃತ್ಯವತ್ಸಲೆ ಜನನೀಸತ್ಯಸಂಕಲ್ಪ ಗುರುರಾಮ ವಿಠಲನ ಪಟ್ಟದರಾಣಿ 5
--------------
ಗುರುರಾಮವಿಠಲ
ಮಾರ ಪ. ಮಧುರೆಗೆ ಪೋಗಿ ನಮ್ಮ ಮರೆದ ಅಲ್ಲಿಇದಿರಾದ ಖಳರನು ಜರಿದಕದನಕರ್ಕಶನೆಂಬ ಬಿರುದ ತೋರಿ ತನ್ನಪದಕೆರಗಿದವರ ಪೊರೆದ 1 ಕಂದರ್ಪಕೋಟಿಯ ಗೆಲುವ ಇವಸೌಂದರ್ಯದಿಂದತಿ ಚೆಲುವನಂದನ ಕಂದ ಭಕ್ತರಿಗೊಲಿವ ಇವನಂದನ ಮುನಿವೃಂದಕೆ ಸಲುವ 2 ಕೊಡುವನು ಬೇಡಿದ ಫಲವ ಇವಬಿಡ ಸಖಿ ಖಳರೊಳು ಛಲವಒಡಂಬಡಿಸಿ ರಿಪುವ ಗೆಲುವನೆಂದುಮೃಡ ಬಲ್ಲನಿವನ ಕೌಶಲವ3 ಇಂಥ ಭವದ ದುರಂತ ಬಲುಸಂತಾಪವನುಂಬ ಭ್ರಾಂತಅಂಥಾ ಹರಿಯೊಳೆನ ಪಂಥಸಲ್ಲಸಂತತ ನಿನಗೆ ನಿಶ್ಚಿಂತ 4 ಇನ್ನಾದರೆ ಸುಪ್ರಸನ್ನ ನಮ್ಮಚೆನ್ನಿಗ ಹಯವದನನ್ನವರ್ಣಿಸಿ ವರ್ಣಿಸಿ ನಿನ್ನವನ ತಾರೆಹೆಣ್ಣೆತೋರೆ ಬೇಗದಿ ಅವನ 5
--------------
ವಾದಿರಾಜ
ಮಾರಕೋಟಿ ಸುಂದರಾಂಗ ಪ ಸರುವಾಂತರಯಾಮಿಯೆಂದು ಶೃತಿಯು ನಿನ್ನ ಪೊಗಳವೆಅ.ಪ ಬಲ್ಲಿದನೀ ಒಳಗೆ ಇದ್ದು ಬರಿದೆ ಬನ್ನಬಡಿಸುವರೆ 1 ಶರಣಾಗತ ಪ್ರಾಣನೆಂಬ ಬಿರುದು ಪೋಗದೆ ನಿನಗೆ 2 ಮ್ಮಪ್ಪಕಾಯೊ ಶ್ರೀ ಗುರುರಾಮ ವಿಠಲರಾಯ ಸ್ವಾಮಿ 3
--------------
ಗುರುರಾಮವಿಠಲ
ಮಾರಜನಕ ನಂಬಿದೆ ನಿನ್ನ ಪಾರುಮಾಡೆನ್ನ ಪರಮಪಾವನ್ನ ಪ ಮೀರಿತು ಭವಬಾಧೆ ಸೈರಿಸೆನಿನ್ನು ಸಾರಸಾಕ್ಷನೆ ಪರಿಹರಿಸು ಮೋಹನ್ನ ಅ.ಪ ದುಷ್ಟಸಂಸಾರಸಾಗರದೊಳು ಕೆಟ್ಟ ನಿಂದೆಗಳೆಂಬ ಘನತೆರಿಗಳು ಹುಟ್ಟಿ ಏಳುತಲಿಹವು ಸಾಲಿಗೆ ಸಾಲು ಬೆಟ್ಟದಂತೆ ಮಹ ಭೀಕರದೊಳು ಎಷ್ಟಂತ ಈಸಬೇಕಿನ್ನಿದರೊಳು ಸೃಷ್ಟಿಕರ್ತ ನೀನೆ ಮೊರೆ ದಯದೊಳು 1 ವಾಸನ್ಹಿಡಿದು ಸೆಳೆದುನುಂಗ್ವವೈದಾರು ಮೋಸ ಜಲಚರಗಳ ಮೀರಿದ ತೊಡರು ಆಸೆಯೆಂಬ ಮಹ ಸೆಳವಿನ ಜೋರು ಸುಳಿ ಮಡುವು ಸಾವಿರಾರು ಈಸುವುದು ಮುಂದಕ್ಕೆ ಅಗದು ಮಾರು ಶ್ರೀಶನೆ ಪಿಡಿದೆತ್ತಿ ಕರುಣವ ತೋರು 2 ಇಂತು ಭವದ ಸಾಗರವನ್ನು ಎಂತು ದಾಟಿ ನಾ ಪಾರಾಗುವೆನು ನಿಂತುನೋಡಲು ಅಂಜಿ ಮನಸಿಗೆ ಇನ್ನು ಭ್ರಾಂತಿಬಡುತ ನಿನ್ನ ಮರೆಯ ಹೊಕ್ಕೆನು ಚಿಂತಾಯಕ ಭಕ್ತ ತೀವ್ರಬಂದಿನ್ನು ಸಂತಸದಿಂ ಪೊರೆಯೊ ಶ್ರೀರಾಮ ಎನ್ನನು 3
--------------
ರಾಮದಾಸರು
ಮಾರಜನಕ ಮುರಾರಿ ಕಾಣಮ್ಮ ಪ ಅರುಣ ಚರಣ ಕಳದಿರವು ಅಂಕುಶಧ್ವಜ ಅರವಿಂದ ರೇಖಾಂಕ ಪುರುಷನಾರಮ್ಮ ಉರಗಶಯನ ಕರಸರೋಜ ಮಧ್ಯದೊಳಿಟ್ಟು ಸುರರಿಂದರ್ಚನೆಗೊಂಬ ಹರಿಯು ಕಾಣಮ್ಮ 1 ಪೊಳೆವ ಉದಯ ಶಶಿ ಬೆಳಗು ಸೋಲಿಪ ನಾಖಾ ವಳಿಯಿಂದ ಒಪ್ಪುವ ಚಲುವನಾರಮ್ಮಾ ಕುಲಿಶ ಪಾಣಿಗೆ ಒಲಿದಿಳೆಯೊಳು ಬಂದು ಖಂ ಜಲಧಿ ಕಾಣಮ್ಮ 2 ಅಂದುಗೆ ಗೆಜ್ಜೆ ಕಡಗ ಪೊನ್ನೂಪುರ ತೊಡಂದ ಬರುತಿಹ ಪ್ರೌಢನಾರಮ್ಮ ದೃಢ ಭಕ್ತರೆಡೆಯಲಿ ಬಿಡದೆ ನಲಿಯುತಲಿಪ್ಪ ಮೃಡಸುರಪಾದ್ಯರ ಪತಿಯು ಕಾಣಮ್ಮ 3 ಕರಿಗಲ್ಲಿನಂತೆ ಸುಂದರ ಜಂಘೆ ಜಾನುಗ ಳೆರಡು ತರಣಿಯಂತೆ ಇವನಾರಮ್ಮಾ ಪರಮೇಷ್ಠಿ ಪ್ರಳಯದಿ ಸಿರಿಯಿಂದ ನುತಿಗೊಂಬ ಪರಮ ಪುರುಷ ನರಹರಿಯು ಕಾಣಮ್ಮ 4 ಇಭವರಕರದಂತೆ ಉಭಯ ಊರು ಕಟಿ ಪ್ರಭ ವಸನವನುಟ್ಟ ಸುಭಗನಾರಮ್ಮಾ ರಭಸದಿಂದಲಿ ಕಂಭ ಬಿಗಿದು ಪ್ರಹ್ಲಾದಗೆ ಅಭಯವಿತ್ತ ಸುರಪ್ರಭುವು ಕಾಣಮ್ಮ 5 ವಲಿವಿೂಕ ಬಿಲದಂತೆ ಸುಳಿನಾಭಿ ಜಠರತ್ರಿ ವಳಿಗಳಿಂದಲಿ ಬಲು ಪೊಳೆವನಾರಮ್ಮಾ ನಳಿನೋದ್ಭವನ ಪುತ್ರಾಖಿಳ ಲೋಕ ತಾಳಿದಾ ಹಾಲಾಹಲಕಂಠನ ಗೆಳೆಯ ಕಾಣಮ್ಮಾ 6 ಕೌಸ್ತುಭ ವೈಜಯಂತೀ ಸರ ಸಿರಿಯಿಂದಲೊಪ್ಪೋ ನಿರಯನಾರಮ್ಮ ವರಭೃಗುಮುನಿಪನ ಸ್ಪರುಶವನು ತಾಳ್ದ ಕರುಣ ಸಾಗರ ಸಿರಿಧರನು ಕಾಣಮ್ಮ 7 ಅರಿ ಶಂಖ ಸತತ ಪಿಡಿದಿಹ ಚತುರನಾರಮ್ಮ ದಿತಿಜರ ಸದೆದು ದೇವತೆಗಳ ಸಲಹಿದ ಚತುರಾಸ್ಯ ಕೃತಿದೇವಿ ಪತಿಯು ಕಾಣಮ್ಮ 8 ಧರದಿಂದೊಪ್ಪುತಲಿಹ ಪಿರಿಯ ನಾರಮ್ಮಾ ಸಿರಿಯೊಡನೆ ಕ್ಷೀರಶರಧಿ ಯೊಳೊರಗಿಪ್ಪ ವಜ್ರ ಪಂಜರವನು ಕಾಣಮ್ಮ 9 ಸುರಕಪೋಲ ನಾಸ ಸರಸಿಜನಯನ ಪು ಕುಂಡಲಿ ಯುಗಧರನು ಆರಮ್ಮಾ ಶರಧಿ ಮಥನದಲ್ಲಿ ತರುಣಿಯಾಗಿ ಅಸು ರರ ಮೋಹಿಸಿದ ಅಜರನು ಕಾಣಮ್ಮ10 ಬಾಲಶಶಿಯಂತೆ ಫಾಲಕಸ್ತೂರಿನಾಮ ಮೌಳಿ ಸುಳಿಕೇಶ ಬಾಲನಾರಮ್ಮಾ ಮೂಲೇಶನಾದ ಜಗನ್ನಾಥ ವಿಠ್ಠಲ ಮೂರ್ಲೋಕಾಧಿಪ ಶ್ರೀ ಗೋಪಾಲ ಕಾಣಮ್ಮ11
--------------
ಜಗನ್ನಾಥದಾಸರು