ಒಟ್ಟು 7812 ಕಡೆಗಳಲ್ಲಿ , 132 ದಾಸರು , 3804 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದ್ರಿಯವಶಕನ ಮಾಡಿದಿರೆನ್ನಮುಂದುವರಿವೆನರಿಯದೆ ಸುಪ್ರಸನ್ನಾಪಎನ್ನೊಳಿರುವ ಗುಣದೋಷ ಸೂಕ್ಷ್ಮಂಗಳಚನ್ನಾಗಿ 'ವರಿಸಿ ತಿಳಿದು ನೋಡೆಮನ್ನಿಸಿ ಪೊರೆವ ಕರುಣ ಬರದಿದ್ದರುನಿನ್ನವನೆಂಬಭಿಮಾನದಿಂ ಗುರುವೆ1ಶೈಲಕೆ ಸ್ಥೂಲತೆ ಜಾಲಾಂದ್ರಗತ ರೇಣುಜಾಲಕೆ ಸೂಕ್ಷ್ಮತೆಯತಿ ಲಾಘವತೂಲಕೆ ಬಂದಿಪ್ಪ ಸ್ವಾಭಾ'ಕವ ನೋಡಿತಾಳಲಾರದವನಂದದಿ ಮುಂದುವರಿಸುವೆನು2ಮಶಕ ಮಕ್ಷುಕ ಮಲ ಕ್ರಿ'ು ಖರ ಸೂಕರಶಶ ಗಜ ತುರಗ ವ್ಯಾಘ್ರಾಧಿಗಳಪಶುಗಳ ಸಂದಣಿಗಳಲಿ ಕೊಂಬೆನು ಎನ್ನವಶ'ಲ್ಲವೆಂದಿವ ವೊಳಗುಗೈವವರುಂಟೆ 3ಪರರೆನ್ನೊಳಿಹ ಗುಣ ದೋಷಾನುಸಾರದಿಹರುಷ 'ಷಾದಜನಕ ವಾಕ್ಯವಅರಿತರಿಯದೆ ನುಡಿದರೆ 'ಚಾರಿಸಿ ನಾನೆಚ್ಚರುಗೊಳ್ಳದು ಭ್ರಮೆುಂ ಕೆಡುತಿಹೆನಾಗಿ 4ಪರರ ದೂಷಣೆಯ ನಾ ಮಾಡಿದರುಪರರೊಳು ಬರಿದೆ ದ್ವೇಷವನೆಸಗಿದರು ಮುಂದೆ'ರಿಯರ ವಚನವ ಹಳಿದರು ಸಟೆಯನುಚರಿಸಿದರಾಗಲೆನಗೆ 'ಪ್ರಹತಿ ದೋಷ 5ರಾಗ ದ್ವೇಷದ ಬಲ'ಡಿದನ್ಯಧರ್ಮವನಾಗಮವಂತರ ಸಮ್ಮತವಾಕೂಗಿ ವಾದಿಸಿ ಜುಸುವ ಬುದ್ಧಿಗೈದರಿನ್ನಾಗಲಿ ಸುರೆಯನ್ನೀಂಟಿದ ದೋಷವೆನಗೆ6ಪರನಾರಿಯರ ರೂಪು ಲಾವಣ್ಯವನು ನೋಡಿಕರಗಿದೆನೈ ಕಾಮಾಧೀನನಾಗಿಬರಿಯನೃತವನಾಡ್ದೆನೈ ತಪ್ಪಿದೆನು ಮುಂದೆಬರಲಿ ಸ್ವರ್ಣಸ್ತಿಯ ದೋಷವೆನಗೆ ಸ್ವಾ'ು 7ಆರಾದರೇನವರೆಸಗಿದ ಕರ್ಮದದಾರಿಯೊಳಿರೆ ನಿಗ್ರ'ಸಿನು ಮುಂದೆದೂರಿಕೊಂಡರೆ ಕೇಳಿ ಖತಿಗೊಂಡೆನಾದರೆಸಾರಲಿ ಗುರುದಾರಗಾ'ುದೋಷವು ನನ್ನ 8ಆವಜನ್ಮದ ಸುಕೃತವೊ ನಿನ್ನ ಚರಣದಸೇವೆ ದೊರಕಿ ಧನ್ಯನಾದೆನಯ್ಯಾಭಾವನೆಯಳವಡದ ಅಭಿಮಾನದಿಂದನ್ಯಜೀವರೊಳ್ದೋಷವನೆಣಿಸಿ ನಾನೊಂದೆನೂ 9ಎನ್ನ ಜನನಿ ಜನಕರು ನಿನ್ನ ಚರಣದೊಳ್ಚೆನ್ನಾಗಿ ನಿಂದರು ಸದ್ಗುರುವೆನಿನ್ನವನಾದೆ ನಾನಿಲ್ಲ ಜನುಮವೆನಗೆನ್ನುತಿದ್ದರು ರಾಗಾದಿಗಳಾಶೆ ಬಲುಹಯ್ಯ 10ಮರೆತು ನಡದೆನು ತಪ್ಪಿದೆನಯ್ಯ ಚಿಕನಾಗಪುರವಾಸ ಗುರು ವಾಸುದೇವಾರ್ಯನೆಪರಮ ಪಾಪಿಗಳ ಸಂಸರ್ಗದೋಷವೆನಗೆಬರಲಿ ಮಾಡಿದ ಪ್ರತಿಜ್ಞೆಯ ಬಿಟ್ಟೆನಾದರೆ 11
--------------
ವೆಂಕಟದಾಸರು
ಇನಿತೆಂದು ಶಾಸ್ತ್ರ ಪೇಳುವವು ಪ ಪುನಹ ಪುನಹ ಭಗವತ್ಪ್ರಾಪ್ತಿ ಬೇಕೆಂಬುವರಿಗೆ ಅ.ಪ. ಅನುಬಂಧಿಗಳಲಿ ಮಮತೆಯನೆ ಬಿಡು ವಿಷಯ ವಾ ಸನೆಯನೀಡಾಡು ಸುಜ್ಞಾನ ಭಕ್ತಿಯ ಬೇಡು ಮನದಲ್ಲಿ ಹರಿಯ ಮೂರ್ತಿಯನೆ ನೆರೆ ನೋಡು ಸುಜ್ಞ ರನು ಕೊಂಡಾಡು ಅಜ್ಞಾನಿಗಳ ಸಹವಾಸ ಸುಡು ವನಜನಾಭನ ಪೂಜೆ ಮಾಡು ಪ್ರತಿ ಕ್ಷಣ ಬಿಡದೆ ಭಗವದ್ಗುಣಗಳ ಕೊಂಡಾಡು 1 ಪರಮಾಣು ಮೊದಲ್ಗೊಂಡು ವ್ಯಕ್ತ ತತ್ತ್ವದೊಳ ಹೊರಗೆ ವ್ಯಾಪಕನಾಗಿ ತದ್ರೂಪ ನಾಮದಿಂ ಕರೆಸುತಲಿ ತದ್ವಿಕಾರಗಳಿಲ್ಲದಲೆ ಸೃಷ್ಟಿ ಪರಿಪಾಲನೆ ಲಯಗಳನೆ ಮಾಡಿ ಮೋದಿಸುತಾ ಪರಮಾತ್ಮನೊಬ್ಬನಿಹನೆಂದು ಹರಿಗೆ ಮರೆಯದಲೆ ಮಹಿಮೆಗಳ ಪೊಗುಳುತಿರು ಮನುಜಾ 2 ಹರಿಭಕ್ತರಿದ್ದೆಡೆಗೆ ಹರಿದು ಹೋಗಲಿ ಬೇಕು ತಿರಿಯ ಕ್ಪುಂಡ್ರಗಳ ನಿಂದಿಸಬೇಕು ಹರಿಯ ನಾಮತ್ರಯಾಂಕಿತರಿಗೆರಗಲು ಬೇಕು ಗುರು ಹಿರಿಯರ ವಗುಣಗಳೆಣಿಸದಿರ ಬೇಕು ಮ ತ್ಸರವ ಬಿಡಬೇಕು ಭಕ್ತರಲಿ ಹೀಗೆ ಒರೆದೊರೆದು ಪೇಳುವರು ಬುಧರು ನಿತ್ಯದಲಿ 3 ನಿತ್ಯ ನೈಮಿತ್ತಿಕ ಸುಕರ್ಮ ಮಾಡಲು ಬೇಕು ಕೃತ್ಯವಲ್ಲದೆ ಲೋಕವಾರ್ತೆಗಳ ಬಿಡಬೇಕು ಚಿತ್ತದಲಿ ಹರಿಪಾದ ಚಿಂತಿಸುತಲಿರಬೇಕು ವಿತ್ತದೇಹಾಗಾರ ಭಗವಂತನದೆಂದು ದೇ ಪರಿಯಂತ ಮಾಳ್ಪ ಕರ್ಮ ಸತ್ಯಸಂಕಲ್ಪಕಿವು ಪೂಜೆ ಎನಬೇಕು 4 ಸೀತೋಷ್ಣ ಸುಖ ದುಃಖ ಮಾನಾಪಮಾನ ಜಯ ಭೀತಿ ನಿರ್ಭೀತಿ ಅಪಜಯ ಜ್ವರಾಪಸ್ಮಾರ ಭೂತ ಬಾಲ ಗ್ರಹ ಮೃಗಸರ್ಪ ನೃಪ ಚೋರ ಯಾತನೆಗೆ ಭಯಪಡದೆ ಸರ್ವತ್ರದಲಿ ಜಗ ನ್ನಾಥವಿಠ್ಠಲನ ಸ್ಮರಿಸುತಿರು ಮಹಾ ಪಾತಕವ ಪರಿಹರಿಸಿ ಪೊರೆವ ದಯದಿಂದಾ 5
--------------
ಜಗನ್ನಾಥದಾಸರು
ಇನಿಯಗೆನ್ನೊಡನೆ ಮುನಿಸೋ ಪ್ರೀತಿಯೋ ಪೇಳೆವನಜಾಕ್ಷಿಯವನೆಸಗಿದುದಾ ಪೇಳ್ವೆನೆ ಪ ಮೃಗಮದ ತಿಲಕವ ಪಣೆಗೆ ತಾನಿಡಲಿಲ್ಲಅಗಿಲುಗಂಧವ ಮೈಗೆ ತೀಡಲಿಲ್ಲ ಸೊಗಸು ಸಂಪಿಗೆ ಸರವಮುಡಿಸಿ ಝಗಝಗಿಪ ಮುತ್ತಿನ ಸರವಹಾಕದೆ ಎನ್ನ ಮುಗುಳು ಮೊಲೆಗೆಸೆಳ್ಳುಗುರಿಕ್ಕದಿದ್ದ ಮೇಲೆ1 ಗುರುಕುಚರ್ಚಿತ ಮೃಗಮದ ಪತ್ರವ ಸೆರಗಿನಿಂದೊರಸಿದನೆಕುಂಕುಮಗಂಧವ ಭರದಿ ಲೇಪಿಸಿದನೆ ತಾನೆತಾಂಬೂಲವ ಹರುಷದಿ ಕರದಿತ್ತನೆಆಲಿಂಗಿಸಿ ಪರಮ ಸಂತೋಷದಿ ತಿರುಗಿ ನೋಡಿದನೆ 2 ಧರಿಸಿದ ಮಿಸುನಿಯ ಆಭರಣಂಗಳ ಭರದಿಂದ ತೆಗೆದ ತಾನೆಚಿನ್ನದುಂಗುರವ ಬೆರಳಿಗೆ ನಲಿದಿಟ್ಟನೆತರುಣಿ ಬಾರೆಂದು ನಂಬುಗೆಗೊಟ್ಟನೆಶ್ರೀ ಕೆಳದಿಯ ಪುರದ ರಾಮೇಶ ಎನ್ನನೆರೆದು ಮನ್ನಿಸಿದನೆ3
--------------
ಕೆಳದಿ ವೆಂಕಣ್ಣ ಕವಿ
ಇನ್ನಾದರೂ ಬುದ್ಧಿ ಬಾರದು ಜನಕೆ ಕಣ್ಣಾರೆ ಕಂಡರು ಮರವುದು ಮನಕೆ ಪ. ಉದರದಲ್ಲಿ ರಚಿಸುವರ್ಯಾರು ರೂಪಾ- ತದಧೀನವಾಗಿ ಬರುವದೆಂದು ತಾಪ ಮದ ಮೋಹಾದಿಗಳೆಂತು ಮಸುಕುವದೆಂತರಿ- ತಿದ ನೋಡಿದರೆ ಕರ್ತ ತೋರುವ ಭೂಪ 1 ಕಾರಣ ಸಾಮಥ್ರ್ಯಯಿದ್ದರು ಕಾರ್ಯ ತೋರದು ಕೆಲರಿಗೆ ತನ್ನಂತಾಗುವದು ವಾರಿಧಿ ಶಯನನ ವಶವಾದರಿಂದಹಂ- ಕಾರದಿಂದಲಿ ತನ್ನಿಂದಹದೆಂಬ ಮೋಹದಿ 2 ರಕ್ಷಕರಿಲ್ಲದ ಶಿಶು ಬದುಕುವುದು ಲಕ್ಷ ಜನರ ಯತ್ನದಲಿ ಮತ್ತೊಂದಿರದು ಲಕ್ಷ್ಮೀರಮಣ ವೆಂಕಟೇಶನ ಗತಿಯೆಂದಾ- ಪೇಕ್ಷಿಸದಿರೆ ಕುಕ್ಷಿಯೊಳಗಿಟ್ಟು ಸಲಹುವಾ 3
--------------
ತುಪಾಕಿ ವೆಂಕಟರಮಣಾಚಾರ್ಯ
ಇನ್ನಾರಿಗುಸುರುವೆ ಇನ್ನಾರ ಬಳಲಿಸುವೆನಿನ್ನ ಚಿತ್ತಬಂದಂತೆ ನೀನೆ ಕಾಯಯ್ಯ ಪ. ಅನ್ನಾಥರೊಡೆಯ ಎನ್ನ ಮುನ್ನ ಮಾಡಿದ ಪಾಪತÀನ್ನ ಫಲವಾಯಿತೆಂದು ಇನ್ನುಬ್ಬಿ ಕೊಬ್ಬುತಿದೆಎನ್ನುದರದಿ ಅನುದಿನ್ನ ಕೂಡಿಘನ್ನಪಿತ್ತವೆಂಬ ಬಲುಕಿಚ್ಚು ಹೆಚ್ಚುತಿದೆ 1 ದ್ರೌಣ್ಯಸ್ತ್ರದಿಂದ ಬೆಂದ ನಿನ್ನ ತಂಗಿಯ ಮೊಮ್ಮಗಸನಕಾದಿಗಳರ್ಚಿಸುವ ಸೌಮ್ಯಪಾದದಕೊನೆಯನ್ನೆ ಮುಟ್ಟಿಸಿ ಪೆಣನಾಗಿರ್ದ ಹಸುಳೆಯ ಜನರು ಜಯಜಯವೆನೆ ಜೀವಂತನ್ನ ಮಾಡಿದೆ 2 ನಿತ್ಯ ಮೃತನು ನಾನುಭೃತ್ಯನು ಪಾಪವ ಕಿತ್ತು ಎತ್ತಿಕೋ ತಂದೆ 3 ಅಂಜಿದ ಕಪಿಕಟಕ ಸಭೆಯ ಪಂಜರ ಬಸಿವುತಿದೆ ನಿನ್ನಕಂಜಾಕ್ಷದಿಂದ ನೋಡಿದರವರಂಜಿಪೋಗದೆಅಂಜನಾದೇವಿಯ ಸುತನಾಳಿದ ರಘುರಾಯಅಂಜಿಸಬೇಡ ತಂದೆ ನಿನ್ನ ಕಂದನ ರಕ್ಷಿಸಿಕೊ 4 ವನ್ನದ ಹರಿಣನಂತೆ ಸುತ್ತ ಮುನ್ನ ಬರಲು ಕೃಷ್ಣಎನ್ನ ತಾಪವು ಅನುದಿನ್ನ ತಟ್ಟದುಇನ್ನೊಬ್ಬ ಮದ್ದನೀಯೆ ಅದು ಉನ್ನತವಾಗುತಿದೆ ತಂದೆಎನ್ನಾಳು ಹಯವದನ ಇನ್ನಾದರೆ ಸಲಹೊ 5
--------------
ವಾದಿರಾಜ
ಇನ್ನಾರಿಗುಸುರುವೆನುಎನ್ನ ಸುಖದುಃಖವನುಪನ್ನಗಾಭರಣ ಶ್ರೀರಾಮೇಶಲಿಂಗ ಪ ಸುರಪತಿಗೆ ಅಂಡವರತವು ಅಗುನಿ ಆಶ್ರಯಿಸಿದರನೆ ಭಕ್ಷಿಪನು ಯಮ ನಿಷ್ಕರುಣಿಯುನಿರುತಿ ರಾಕ್ಷಸ ವರಣ ನೀರೊಳಿಹ ವಾಯು ಸಂ-ಚರಿಪ ಭಾಗ್ಯೋನ್ಮತ್ತನಾತ್ಮಘಾತಕನು 1 ನಾರಾಯಣಗೆ ನಿದ್ರೆ ನಾಗೇಂದ್ರಶಯನಗೇವಾರಿಜಭವಗೆ ಪ್ರಣವ ಜಪಕಾಲವುವೀರಭದ್ರನೆ ಕೋಪಿ ಪಾರ್ವತಿಯೆ ಚಂಡಿ ಮದವೇರಿ ಮುಕುಟವನು ತೂಗುವನು ಗಣವರನು 2 ಸರಸಿಜಾಪ್ತಗೆ ಸಮಯವಿಲ್ಲ ಶಶಿ ತನ್ನೊಳಂಕುರಿಸಿದ ಕಲಂಕ ಕಳಕೊಳಲಾರನುವರ ಕೆಳದಿ ರಾಮೇಶ ನೀನೇ ಚಿತ್ತಕೆ ತಂದುಮರೆಯೊಕ್ಕವನ ನೋಡಿ ಪೊರೆಯದಿದ್ದ ಮೇಲೆ 3
--------------
ಕೆಳದಿ ವೆಂಕಣ್ಣ ಕವಿ
ಇನ್ನು ಏನು ತಿಳಿಯದು ಹರಿ ಪ ಪನ್ನಗಾದ್ರಿನಿಲಯ ಪರಮ ಪಾವನ್ನ ಜಗನ್ಮೋಹನ ಅ.ಪ ಎಲ್ಲಾ ಜಗನಿನ್ನೊಳಗಿಹುದು ಎಲ್ಲರೊಳಗೆ ನೀನಿರುವೈ ಬಲ್ಲಿದನು ನೀನು ನಿನಗೆ ಸಮ ಬ್ರಹ್ಮಾದಿಸುರರೊಳಗ್ಯಾರು 1 ದೀನರು ಮಾಡಿದ ಕರ್ಮವ ನೀನು ಕಳೆಯಲಾರೆಯಾ ನಾನಿದಕೆ ಭಾಗಿಯೋ ನೀನಿದ್ದು ಮಾಡಿಸಲಿಲ್ಲವೆ 2 ಎಂದೂ ನಿನ್ನ ಆಜ್ಞೆಯಿಲ್ಲದೆ ಒಂದಾದರು ಚಲಿಸುವುದೆ ತಂದೆ ತಾಯಿ ಗುರುದೈವ ನೀನೆಂದು ನಂಬಿದೆ ಇಂದಿರೇಶ3 ಶೃತಿತತಿ ಶಾಸ್ತ್ರ ಪುರಾಣಗಳತಿಶಯದಲಿ ಪೊಗಳುವುದು ಗತಿ ನೀನೆ ಎಂದನವರತವು ಕಥೆಗಳ ಕೇಳುವುದೇಕೆ 4 ಅಗಣಿತ ಗುಣನಿಧಿ ಗುರುರಾಮವಿಠಲ 5
--------------
ಗುರುರಾಮವಿಠಲ
ಇನ್ನೂ ನೆಲೆಯ ನೋಡುವರೆ | ಮುನ್ನ ಮಾಡಿದ್ದಾಡುವರೇ ||ಉನ್ನತ ಮಹಿಮ ನಿನ್ನ ನಂಬಿದವರನು ಕಾಡುವರೇ ಪ ಕರವ ನೀಡುತ ನೋಡುತಲಿ 1 ಘಾಸಿ ಆದೆ ಕಾಸಿಗಾಗಿ |ದಾಸ ಪಾಲಕ ಲಕ್ಷ್ಮೀಶ ತಪ್ಪದಿರೋ ಭಾಷೆಗಾಗಿ 2 ಮನ್ನಿಸೆನ್ನ ಮಾತು ಹರಿಯೇ | ಇನ್ನು ಮಾತೊಂದು ನಾನರಿಯೆ | ಬೆನ್ನು ಬಿದ್ದವರ ಕಾಯೋ ರುಕ್ಮೇಶ ನಾರಾಯಣ ದೊರೆಯೇ 3
--------------
ರುಕ್ಮಾಂಗದರು
ಇನ್ನೆಲ್ಲಿತನಕ ಇವಗೆ ದುರ್ಬವಣೆ ಹರಿಯೆ ನಿನ್ನ ಉನ್ನತವಾದ ಮರೆಬಿದ್ದ ಬಳಿಕ ಪ ಮಂದಮತಿ ತೊಲಗದು ಕುಂದು ನಿಂದೆ ಅಳಿವಲ್ಲದು ಮಂದಿಮಕ್ಕಳ ಮೋಹವೊಂದು ಕಡಿವಲ್ಲದು ಸಿಂಧುಶಯನನೆ ಗೋವಿಂದ ನಿಮ್ಮ ಚರಣ ವೊಂದೆ ಮನದಲಿ ಭಜಿಸಾನಂದಪಡಿವಲ್ಲದು 1 ಮೋಸಮರವೆ ಹರಿವಲ್ಲದು ಆಶಪಾಶ ಬಿಡವಲ್ಲದು ಹೇಸಿ ಸಂಸಾರದ ದುರ್ವಾಸನೆಯು ಹಿಂಗದು ದೂಷಣೆಗೆ ನೋಯುವುದು ಭೂಷಣೆಗೆ ಹಿಗ್ಗುವುದು ದೋಷದೂರನೆ ನಿನ್ನ ಧ್ಯಾಸನಿಲ್ಲವಲ್ಲದು 2 ಕಪಟ ಮತ್ಸರಬುದ್ಧಿ ಚಪಲತನ ಅತಿಕ್ರೋಧ ಕಪಿಮನದ ಚೇಷ್ಟೆ ಅಪರೋಕ್ಷ ನಿಲ್ಲವಲ್ಲದು ಅಪ್ಪ ಶ್ರೀರಾಮ ನಿಮ್ಮ ಜಪತಪ ಸಿದ್ಧಿಸವಲ್ಲದು 3
--------------
ರಾಮದಾಸರು
ಇನ್ನೇನ ಮಾಡುವೆ ಇನ್ನಾರ ಬೇಡುವೆ ಪ್ರ-ಸನ್ನ ಚೆನ್ನಕೇಶವ ಎನ್ನ ಬಿನ್ನಪವಮನ್ನಿಸಿ ದಿನದಿನದಲ್ಲಿನಿನ್ನನರ್ಚಿಪಂತೆ ಮಾಡು ಪ. ಮೊಲೆಯುಂಬ ಹಸುಗೂಸು ಮಾತನಾಡಿ ತನ್ನಮನದಭೀಷ್ಟವ ಪೇಳ್ವುದೆಚೀರಿ ಅಳುವದೈಸೆ ಅದನರಿತು ಅದರ ತಾಯಿಅಪ್ಪ್ಪಿಮುದ್ದಾಡಿಸುತ್ತಬಳಲಿಕೆÀ ಪೋಪಂತೆ ನಸುಬಿಸಿಪಾಲನುಬಾಯೆಂದು ಕುಡಿಸುವಳುಸಿರಿಲಲನೆಯರಸ ನಮ್ಮ ಈ ಪರಿಯಲಿನೀನು ಲಾಲಿಸಿ ಸಲಹಬೇಕು 1 ಕರಿ ಕರೆಯಲುಪೊರೆದಂತೆ ಪೊರೆಯೆನ್ನನುಮಕರಿಯ ಕೊಂದು ಪೊರೆದಂತೆ2 ಹುಲಿಯ ಕಂಡೋಡುವ ಹುಲ್ಲೆಯ ಮರಿಯಂತೆಭವದ ಬೇಗೆಯಲಿ ಬೆಂದೆ ವಿಘಳಿಗೆ ಘಳಿಗೆಯೊಳು ಅಲಸದೆ ಪಾಪವಗÀಳಿಸುವ ಗÀಸಣೆಗಂಜೆತುಳಸಿಯ ದಳದಿಂದ ಸಂತುಷ್ಟನಹ ನಿನ್ನಒಲಿಸುವ ಭಾಗ್ಯದಲ್ಲೆ ಈ ಇಳೆಗೆ ಭಾರವಾದೆಇಹಪರ ದುಃಖದ ಹಂಬಲಿಕೆ ಎಳ್ಳಷ್ಟು ಇಲ್ಲಸನ್ಮಾರ್ಗದ ಹಂಬಲಿಕೆ ಎಳ್ಳಷ್ಟು ಇಲ್ಲ ಅಪವರ್ಗದ ಹಂಬಲಿಕೆ ಎಳ್ಳಷ್ಟು ಇಲ್ಲ3 ಹೆಂಡಿರ ಸಾಕಲಾರದೆ ಹೆಣ್ಣು ಮಕ್ಕಳುಗಳಕಂಡ ಕಂಡವಗೆರ್À ಮಾರಿ ಜಗಭಂಡನೆನಿಸಿಕೊಂಡೆ ಬಡತನ ಹಿಂಗದೆಕೊಂಡೆಯಗಳ ಪೇಳುವೆಉಂಡುಡುವರ ಕಂಡು ಮತ್ಸರ ಮಾಡುವೆತಂಡ ತಂಡÀದವರಿಂದ ಕಡಗೊಂಡರ್ಧನ ಕೊಡದೆ ಕಲ್ಲಪೊರುವೆನು ಕೋ-ದಂಡವೇರಿಸಿ ಕೊಂಡೆನು 4 ದಂಡವಿಡಿದು ವೇಷಧಾರಿಯೆಂಬುದ ಕೈಕೊಂಡು ರಾವಣನಂತೆ ಚರಿಸಿ ಎನ್ನಮಂಡೆ ಬೋಳು ಮಾಡಿ-ಕೊಂಡು ಇಳೆಯೊಳು ಪರಸತಿಯರ ಮೋಹಿಪೆಪುಂಡರೀಕಾಕ್ಷ ಈ ಪರಿಯ ಕ್ಲೇಶಗಳನುಉಂಡರೆÀ ವೈರಾಗ್ಯ ಬಾರದು ಎಲೆಪಾಂಡವಪ್ರಿಯ ಇನ್ನಾರಿ ಗುಸುರುವೆನು ಉ-ದ್ದಂಡಭಕ್ತರ ಸೇರಿಸೊ ಕೈ-ಕೊಂಡು ನಿನ್ನುದ್ದಂಡಭಕ್ತರ ಸೇರಿಸೊ5 ತಪ್ಪಿದರೆ ತಾಯಿ ತನ್ನ ಮಕ್ಕಳುಗಳತಕ್ಕೈಸಿಕೊಂಬವೊಲು ಕಾಮ-ನಪ್ಪ ಎನ್ನಪ್ಪ ಒಂದು ಕೊರತೆಯ ಕಾಣದೆಕರುಣದಿ ಕಾಯಬೇಕುಅಪಾರಮಹಿಮ ನೀನಾಶ್ರಿತ ಜನರನುಅತ್ತ ಹೋಗೆನ್ನೆ ಗಡ ನೀನ-ಪ್ರತಿಮಹಿಮನೆನಿಸಿಕೊಂಡೆ ಅದರಿಂದಅಮರರ ಶಿರೋರನ್ನವೆ ಅರ್ಜುನಸಖಅಮರರ ಶಿರೋರನ್ನವೆ 6 ಸರಿಮಿಗಿಲಿಲ್ಲದ ಸರ್ವೇಶ ಹರಿಯೆಂದುಸಿರಿಹಯವದನರಾಯ ನಿನ್ನಪರಮ ಮುನಿಗಳೆಲ್ಲಪರೀಕ್ಷೆಮಾಡಿ ನೋಡಿಮುನ್ನ ನಿರ್ಣೈಸಿದರುಹಿರಿಯರ ಮಾತನು ಪಾಟಿಮಾಡದನಗೋತ್ರ ಸೂತ್ರಗಳು ಪೋಕುಪ್ರವರ ಗೋತ್ರ ಋಷಿಮೂಲಯೆಂದು ಪ್ರಸಿದ್ಧ ಇನ್ನಾರು ನಿನ್ನಂಥವರು 7
--------------
ವಾದಿರಾಜ
ಇನ್ನೇನಿನ್ನೇನು ಎನಗಿನ್ನು ಇನ್ನೇನಿನ್ನೇನು ಧ್ರುವ ಎನ್ನೊಳು ಗುರು ತನ್ನ ಮರ್ಮವು ತೋರಿದ ಇನ್ನೇನಿನ್ನೇನು 1 ಮುನ್ನಿನ ಕರ್ಮವು ನಿರ್ಮೂಲವಾಯಿತು ಇನ್ನೇನಿನ್ನೇನು 2 ಎನ್ನೊಳು ಘನಬ್ರಹ್ಮವಸ್ತು ತಾನಾಯಿತು ಇನ್ನೇನಿನ್ನೇನು 3 ನಾನು ನಾನೆಂಬುದು ನೆಲಿಯು ತಾನಾಯಿತು ಇನ್ನೇನಿನ್ನೇನು 4 ಏನೆಂದು ತಿಳಿಯದ ಅನುಮಾನ ಗಳೆಯಿತು ಇನ್ನೇನಿನ್ನೇನು 5 ಪರಮ ತತ್ವದ ಗತಿ ನೆಲೆ ನಿಭ ತೋರಿತು ಇನ್ನೇನಿನ್ನೇನು 6 ಎನ್ನೊಳಾತ್ಮ ಖೂನ ಕುರುಹವು ತಿಳಿಯಿತು ಇನ್ನೇನಿನ್ನೇನು 7 ಕನಸು ಮನಸು ಎಲ್ಲ ನಿನ್ನ ಸೇವೆ ಆಯಿತು ಇನ್ನೇನಿನ್ನೇನು 8 ಹಗಲಿರುಳೆಂಬುದು ಹಗರಣವಾಯಿತು ಇನ್ನೇನಿನ್ನೇನು 9 ಅರಹು ಮರಹಿನ ಇರುವು ತಿಳಿಯುತು ಇನ್ನೇನಿನ್ನೇನು 10 ಭಾವದ ಬಂiÀiಲಾಟ ನಿಜವಾಗಿ ದೋರಿತು ಇನ್ನೇನಿನ್ನೇನು 11 ಜೀವಶಿವನ ಗತಿ ಸೋಹ್ಯವು ತಿಳಿಯಿತು ಇನ್ನೇನಿನ್ನೇನು 12 ಆಯವು ದಾಯವು ಸಾಹ್ಯವು ದೋರಿತು ಇನ್ನೇನಿನ್ನೇನು 13 ಜೀವನ್ನ ಜಾತಿಯ ಕೀಲವು ತಿಳಿಯಿತು ಇನ್ನೇನಿನ್ನೇನು 14 ಜನ್ಮ ಮರಣದಾ ಜಂತ್ರವು ಮುರಿಯಿತು ಇನ್ನೇನಿನ್ನೇನು 15 ಸಂದೇಹ್ಯ ಸಂಕಲ್ಪ ಸೂಕ್ಷ್ಮವು ಹರಿಯಿತು ಇನ್ನೇನಿನ್ನೇನು 16 ಮರಣದ ಗತಿಗಳ ಮಂತ್ರವು ತಿಳಿಯಿತು ಇನ್ನೇನಿನ್ನೇನು 17 ಸುಷಮ್ನ ನಾಳದ ಸೂಕ್ಷ್ಮವು ದೋರಿತು ಇನ್ನೇನಿನ್ನೇನು 18 ಇಮ್ಮನವಿದ್ದದು ಒಮ್ಮನವಾಯಿತು ಇನ್ನೇನಿನ್ನೇನು 19 ಆಧಾರಚಕ್ರದ ಹಾದಿಯು ತಿಳಿಯಿತು ಇನ್ನೇನಿನ್ನೇನು 20 ಸದ್ಗುರು ಕೃಪೆಯಾದಾ ಸಾಧನವಾಯಿತು ಇನ್ನೇನಿನ್ನೇನು 21 ಇನ್ನೇನಿನ್ನೇನು 22 ಅಂತರಾತ್ಮನ ಸೂತ್ರಾಂತ್ರವು ತಿಳಿಯಿತು ಇನ್ನೇನಿನ್ನೇನು 23 ಇನ್ನೇನಿನ್ನೇನು 24 ಎನ್ನೊಳು ಭಾಸ್ಕರ ಗುರು ತಾನೆಯಾದನು ಇನ್ನೇನಿನ್ನೇನು 25
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇನ್ಯಾಕೆ ದೇವಿ ಮುನಿಸು ಮಾತಾಡೇ| ನಿನ್ನ ಹಿಡಿದ ಛಲ ಗೆಲಿಸಿದ ಬಳಿಕ ಪ ಘನ ಮಳೆಗರವ ಜೀಮ್ಯೂತಮ್ಯಾಲೇ|ತಾ| ಮುನಿಪ ಕೋಪದಿ ಪೋಗುತಲಿಹ| ಮನ ದೊಳಗಿದ್ದ ಚಾತಕನಂತೆ ನಿನ್ನ ಮ್ಯಾಲೆ| ವನರುಹ ನೇತ್ರ ನಾ ಮುನಿದುದು ಕಾಣೆ 1 ಸಂಗತಿಲ್ಲದೆ ನಿನ್ನಾಂಗ ನಟ್ಟುಳಿಯಿಂದ| ಭಂಗ ಗೊಂಡಿಹುದು| ತುಂಗ ಪಯೋಧರೆನ್ನಂಗ ತೋಷಿಸುವ ತಾ| ಲಿಂಗನ ಗೈಯೆ ನೀ ಮಂಗಳವದನೇ 2 ನಿನ್ನಿಂದಾಗಲಿ ಮತ್ತ ನನ್ನಿಂದಾಗಲಿ ಇನ್ನು ಮುನ್ನಾದ ಮನದ ಗಂಟು ಬಿಟ್ಟು| ಪನ್ನಗವೇಣಿ ಮಾತಾಡೇ ಸದ್ಗುಣದ ಸಂ| ಪನ್ನೇ ಮಹಿಪತಿ ಸುತಗೊಲಿದ ಶ್ರೀದೇವಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇನ್ಯಾತಕನುಮಾನವಯ್ಯಾ ಪ ಅನ್ಯಥಾ ಗತಿ ಕಾಣೆ ನಿನ್ನ ಚರಣಗಳಾಣೆ ಅ.ಪ. ನಾಶರಹಿತನೆ ನಮಗೆ ಏಸೇಸು ಕಲ್ಪಕ್ಕು ವಾಸ ಏಕತ್ರದಲ್ಲಿ ನೀ ಸಾಕ್ಷಿಯಾಗಿದ್ದು ದಾಸನಾದವಗಪ್ರ- ಯಾಸದಿ ಫಲಗಳುಣಿಸಿ ಲೇಶ ಘನಮಾಡಿ ಸಂತೋಷಪಡುವಾ ನಿನ್ನ ದ್ವೇಷಿ ನಾನಲ್ಲವಯ್ಯ ದೇಶಕಾಲಾದಿಗಳಿಗೀಶ ನೀನೆಂದರಿದು ದಾಸನಾಗಿರುವೆನೆಂದಾಶೆ ಪುಟ್ಟಿದ ಬಳಿಕ 1 ನಿತ್ಯ ತೃಪ್ತನೆ ನಿನ್ನ ಕೃತ್ಯಕೇನೆಂಬೆನೋ ಸತ್ಯಸಂಕಲ್ಪ ಹರಿಯೇ ಮೃತ್ಯುಮಾರಿಗಳೆನಗೆ ಹತ್ತಿಕೊಂಡದರಿಂದ ಸತ್ತುಪುಟ್ಟುವೆಯಿನ್ನು ದತ್ತಕರ್ತೃತ್ವ ಬೆನ್ಹತ್ತಿಕೊಂಡದರಲ್ಲಿ ಅತ್ಯಪರಾಧಿಯಂದತ್ತ ಮೊಗದಿರುಗದಿರು ಭೃತ್ಯವತ್ಸಲನೆಂದಗತ್ಯ ಮನಸೋತ ಬಳಿಕ 2 ವೇದವೇದ್ಯ ಸ್ವಗತ ಭೇದವರ್ಜಿತ ಪೂರ್ಣ ಮಾಧವ ಮಹಿದಾಸ ಆದಿನಾರಾಯಣ ವಿನೋದ ವಿಷ್ವಕ್ಸೇನ ಶ್ರೀದವಿಠಲಾ ನಿನ್ನ ಕ್ರೋಧ ವರರೂಪ- ವಾದ ವಾರ್ತೆಯು ಕೇಳಿ ಧೈರ್ಯಬಿಡದಾ ಬಳಿಕಿನ್ನು 3
--------------
ಶ್ರೀದವಿಠಲರು
ಇರಬಾರದೊ ಬಡವ ಜಗತ್ತಿನೊಳಗೆ | ಪರದೇಶಿ ಮಾನವಗೆ ದಿಕ್ಕು ಮತ್ತಾವನು ಪ ಪೊಡವಿಪತಿ ದೃಷ್ಟಿಗಳು ಒಳ್ಳೆವಲ್ಲಾವೆಂದು | ಬಿಡದೆ ಜನ ಪೇಳುವುದು ಸಿದ್ಧವಯ್ಯಾ | ಬಡವ ನಾನಯ್ಯ ನಾನಾ ಕಷ್ಟಬಟ್ಟೆರಡು | ಒಡವೆ ಸಂಪಾದಿಸಲು ಅಪಹರಿಸಿದ ನೋಡು 1 ದಿನ ಪ್ರತಿ ದಿನದಲ್ಲಿ ಕರಳು ಕಟ್ಟಿಕೊಂಡು | ಹಣದಾಸಿಯಿಂದ ನಾ ಘಳಿಸಿದ್ದೆನೊ | ಮನೆವುಗೆ ಬಂದು ಮಾಡಿಕೊಂಡೊಯ್ದಿಯಾ ಧರ್ಮವೇ | ವನಜನಾಭನೆ ನಿನ್ನ ದೊರೆತನಕೆ ಶರಣೆಂಬೆ2 ದೊರೆಗಳಾ ಲಕ್ಷಣವಿದೆ ಎಂದೆಂದಿಗೆ ತಮಗೆ | ಸರಿಬಂದ ಕಾರ್ಯಮಾಡುವರಲ್ಲದೇ | ನೆರೆಯವರದೇ ತಪ್ಪೇ ವಿಜಯ ವಿಠ್ಠಲರೇಯ | ಮರಳೆ ಮಾತಾಡಿದರೆ ಅಪರಾಧ ಹೊರಿಸುವರು 3
--------------
ವಿಜಯದಾಸ
ಇಲ್ಲವೋ ಮುಕ್ತಿ ಇಲ್ಲವಿಲ್ಲವೋ ಮೆಲ್ಲ ಮೆಲ್ಲನೆ ದೃಷ್ಟಿನಿಲ್ಲಿಸಿಮೇರು ಶಿಖರವ ನೋಡುವತನಕ ಪ ಚಕ್ರವಾರ ಮೆಟ್ಟಿನಿಂತು ಚಂಚಲಿಸದಂತೆ ದೃಷ್ಟಿಯಿಟ್ಟುವಿಕ್ರಮದಲಿ ಬ್ರಹ್ಮರಂದ್ರ ಪೊಕ್ಕು ತೇಜ ಕಾಣುವತನಕ 1 ದೃಢಚಿತ್ತದಲಿದ್ದು ಮಾರುತನ ಮೇಲಕೆ ಊದಿಒಡನೆ ಕೂಡಿಸಿ ವಾಯುಮನವನು ಅಸುವನು ಕಾಣುವತನಕ2 ಓಂಕಾರ ಧ್ವನಿಯ ಕೇಳಿ ಒತ್ತೊತ್ತು ಬೆಳಗಿನೊಳುಶಂಕರನೆನಿಪ ಚಿದಾನಂದ ಬ್ರಹ್ಮವನೆ ಕಾಣುವ ತನಕ 3
--------------
ಚಿದಾನಂದ ಅವಧೂತರು