ಒಟ್ಟು 2825 ಕಡೆಗಳಲ್ಲಿ , 118 ದಾಸರು , 1964 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೇಶವ ಜಗದೀಶ ಸಾಸಿರಭಾಸುರಕೋಟಿಸಂಕಾಶ ವಾಸವಾದಿಗಳ ವಂದ್ಯ ಸೀತಾಪತೆ 1 ನಾರಾಯಣ ಸಕಲವೇದಪಾರಾಯಣ ಕೃಷ್ಣ ನಾರದಾದಿಗಳ ವಂದ್ಯ ಸೀತಾಪತೆ 2 ಮಾಧವ ಮಂಗಳಗಾತ್ರ ವೇದವನ್ನೆ ಕದ್ದು ಒಯ್ದ ಆ ಖಳನ ಕೊಂದೆ ಸೀತಾಪತೆ 3 ಗೋವಿಂದ ಗೋಕುಲಬಾಲ ಗೋಪಿಯರ ಮನೋಹರ ಆದಿ ಕೂರ್ಮಾವತಾರ ಸೀತಾಪತೆ 4 ವಿಷ್ಣುವೆ ಯತಿಗಳ ವಂದ್ಯ ಅಷ್ಟಲಕ್ಷ್ಮಿಯರ ನಾಥ ದಿಟ್ಟ ವÀರಾಹರೂಪನಾದ ಸೀತಾಪತೆ 5 ವೈರಿ ಯದುಕುಲಕ್ಕೆ ತಿಲಕನಾದ ಚೆಲುವನಾದ ಹರಿ ನೀನೆ ಸೀತಾಪತೆ 6 ತ್ರಿವಿಕ್ರಮರೂಪನಾಗಿ ತ್ರಿಜಗವನ್ನೆ ಪಾಲಿಸಿದ ವಾಮನರೂಪಿ ನೀನೆ ಸೀತಾಪತೆ7 ವಾಮನರೂಪವ ತಾಳಿ ಆ ಮಹಾಬಲಿಯನ್ನೆ ತುಳಿದು ನೇಮದಿ ಕ್ಷತ್ರೇರ ಕೊಂದ ಸೀತಾಪತೆ 8 ಶ್ರೀಧರ ನೀನೆಂದೆನಿಸಿ ಶೋಷಿಸಿ ಖಳg Àನೆಲ್ಲ ಜಾನಕಿಯ ತÀಂದ ರಾಮ ಸೀತಾಪತೆ 9 ಹೃಷೀಕೇಶ ನೀನೆಂದು ಋಷಿಗಳು ಸ್ತುತಿಯ ಮಾಡಿ ವಸುದೇವಸುತ ಕೃಷ್ಣ ಸೀತಾಪತೆ 10 ಬುದ್ಧಾವತಾರ ಕೃಷ್ಣ ಸೀತಾಪತೆ 11 ದಾಮೋದರನೆಂದು ನಿಮ್ಮ ದೇವತೆಗಳೆಲ್ಲ ಕರೆಯೆ ಆ ಮಹಾ ಕಲ್ಕ್ಯ್ಕನಾದ ಸೀತಾಪತೆ 12 ಸಂಕರುಷಣ ದೇವ ನಿಮ್ಮ ಕಿಂಕರರು ನಾವೆಲ್ಲರಯ್ಯ ಪಂಕಜಾಸನವಂದ್ಯ ರಾಮ ಸೀತಾಪತೆ 1 3 ವಾಸುದೇವ ನಿಮ್ಮ ಪಾದಕ್ಕೆ ವಂದನೆಯ ಮಾಡುವೆನಯ್ಯ ದೋಷರಾಶಿ ನಾಶಮಾಡು ಸೀತಾಪತೆ 1 4 ಸುರರು ಎದ್ದು ನಿನ್ನೆ ಪೊಗಳುತ್ತಿರೆ ಉದ್ಧಾರ ಮಾಡಿದ ದೇವ ಸೀತಾಪತೆ 15 ಅನುದಿನ ನಿನ್ನ ಕರೆಯೆ ಅನಿಮಿತ್ತಬಂಧು ಕೃಷ್ಣ ಸೀತಾಪತೆ 16 ಮನೋಹರುಷ ನೀಡಿದ ರಾಮ ಸೀತಾಪತೆ 17 ಅಧೋಕ್ಷಜ ಲೋಕಗಳಿಗೆ ಆಧಾರಭೂತನಾ ಗಿರುವೆ ವೇದವೇದ್ಯರಾಮ ಸೀತಾಪತೆ 18 ಬೋಧನೆಯನ್ನು ಮಾಡಿದ ಸೀತಾಪತೆ 19 ಅಚ್ಯುತ ವಿಶ್ವಾಮಿತ್ರ ಅತಿಶಯ ಯಾಗವ ಕಾಯ್ದ ಭಕ್ತವತ್ಸಲ ರಾಮ ಸೀತಾಪತೆ 20 ಜನಾರ್ದನರೂಪನಾಗಿ ಜಾನಕಿಯ ತಂದ ಜಾಹ್ನವೀಜನಕ ರಾಮ ಸೀತಾಪತೆ 21 ಉಪೇಂದ್ರನೆ ಉದ್ಧÀವಗೆ ಉಪದೇಶವನೆ ಮಾಡಿ ಅಪರಿಮಿತಪದವಿ ಕೊಟ್ಟ ಸೀತಾಪತೆ 22 ಕಾಲ ತಪವ ಮಾಡಿ ಚರಿಸುವರಿಗೆ ಮೋಕ್ಷವಿತ್ತೆ ಸೀತಾಪತೆ 2 3 ರÀಕ್ಷಿಸಯ್ಯ ಕೃಷ್ಣ ರಾಮ ರಕ್ಷಿಸಯ್ಯ ಹಯವದನ ಪಕ್ಷಿವಾಹನ ರಾಮ ಸೀತಾಪತೆ 24
--------------
ವಾದಿರಾಜ
ಕೇಳಿದಾಗಲೇ ಹೇಳಬಹುದೇನೋ ಬ್ರಹ್ಮಾನುಭವಮಿದು ಪ ಹಾಳುವಾದವಲಾ ವಿಚಾರಿಸಲೇಳು ವ್ಯಸನಕೆ ಸಿಲ್ಕಿ ಕುಣಿಯುವ ಅ.ಪ ಖೂಳ ಕಪಟರಿಗೆಂತು ಅನುಭವಶಾಲಿಗಾಗಿಹ ಪರತರಾನ್ವಯ ಸುಳ್ಳಮಳ್ಳರಿಗಾಗದಹುದಣ್ಣ ವೇದಾಂತಸಾರಸ ಮೂಲ ಪ್ರಣವ ವಿಚಾರಕಹುದಣ್ಣ ಯಾರಾದಡಾಗಲೀ ನೀಲಜ್ಯೋತಿಯ ಕಾಣದೆ ಬರಿ ಶೂಲ ಶೀಲಕೆ ಸಿಲ್ಕಿ ಕುಣಿಯುತ ಆಲಿಸೆಂದು ನಮಸ್ಕರಿಸುತಿಹ ಜಾವಿದ್ಯದ ಪೋಲಿ ಜನಗಳು 1 ಪಂಡಿತರಿಗೇನದು ಕಂಡು ತಿಳಿಯಣ್ಣ ದೂರವಿಲ್ಲವು ಅಂಡದೊಳಗಿಹ ಪಿಂಡವೇ ಬ್ರಹ್ಮಾಂಡ ವೇದಾಂತಾರ್ಥ ಸಮ್ಮತಿ ಭಂಡರಿಗೆ ಬಹುಭಾಷೆಗಹುದೇನ ಕುಂಡಲೀಪುರ ತತ್ಪ್ರಯಾಣವು 2 ಓದಿ ವಿಕ್ರಯವನ್ನು ಮಾಡ್ಯಾರು ಓಂಕಾರ ಬೀಜದ ಹಾದಿಯನು ತಾವು ಕಾಣದೋಡ್ಯಾರೊ ರಾ ಜಾಧಿರಾಜರೂ ಕಾವಿ ಜಗಳವ ಕುಂತು ನೋಡ್ಯಾರು ವೇದಾಂತಿಗಳೂ ನಿಜ ಜ್ಞಾನಪುತ್ಥಳಿಯನ್ನು ಕಂಡ್ಯಾರು ಆದಿಮಧ್ಯಾಂತಗಳರಿಯದ ವಾದಿಗಳಿಗೆಂತಕ್ಕು ತತ್ವದ ಬೋಧೆಯೊಳಗಿಹುದು ಆದಿತತ್ವವು 3 ಕವಿಗಳೆಷ್ಟೋ ಕಷ್ಟಪಟ್ಯಾರು ಅವಸಾನಕರಂ ಭವದ ಬಲೆಯೊಳು ಕಟ್ಟಿಕುಟ್ಯಾರು ಆಗಲ್ಲಿ ಸುಜನರು ಜ್ಞಾ ನವೈರಾಗ್ಯವನು ಕೊಟ್ಯಾರು ಶಿವನು ತಾನೆಂತೆಂಬ ಅದ್ವೈತವನು ಆಡಲ್ಕಡಕಲಹುದೇ ಭುವನದೊಳು ಪಂಚಾಕ್ಷರೋ ನಿಜತ್ರಿಣೆಯಸತಿ ಮೋಕ್ಷೆಚ್ಛೆ ಕವಚಂ4 ನಾಗನಗರಿಪುರೀಶ ಕಾಣಣ್ಣ ಆಧ್ಯಾತ್ಮದನುಭವ ಕಾಗಿ ನಿನ್ನೊಳ ಹುಡುಕಬೇಕಣ್ಣ ಹಂಸಾಶ್ರಯದಿ ನಿನ್ನೊ ಳಗಿದೆಲ್ಲವು ಹುಡುಕಿ ನೋಡಣ್ಣ ಭೋಗಿಶಯನ ಶ್ರೀ ತುಲಸೀರಾಮನ ರಾಗವಿರಹಿತನಾಗಿ ಭಜಿಸಿದಡಾಗ ನಿನ್ನೊಳಗಂಕುರಿಪುದ 5
--------------
ಚನ್ನಪಟ್ಟಣದ ಅಹೋಬಲದಾಸರು
ಕೇಳು ಪೊರೆ ಶಾಂತ ತಾಳು ರಂಗಾ ನಿನ್ನಾಳು ನಾನಿರುವೆ ಕೃಷ್ಣಾ ಪ ಆಳೋ ಅರಸನೇ ಅ.ಪ. ಗಾಣ ಎಳೆಯುವ ಕ್ವಾಣನಾದೆನೋ ಕಾಣವೋ ನಯನಾ ಕಾಣಿ ವೇಣುಗೋಪಾಲ 1 ಮಾಯಾ ಮಗನಿಗೆ ನಾಯನಾಗಿರುವೆ ಮಾಯಾ ಕಾಯೋ ನರಹರಿ 2 ಬೇಡುವರು ಧನ ಕಾಡಿ ಎನ್ನನು ನೋಡು ಫಣಿಶಯನಾ ನಾಡಿಗೊಡೆಯಾ ಕೈ ಜೋಡಿಸುವೆನಯ್ಯಾ 3 ಬೇಗ ತವದಾಸನಾಗಿ ಮಾಡಿಕೋ ಸಾಗರಶಯನಾ ಈಗ ಭವಭಯ ನೀಗಿಸೈಯ್ಯ ಕೈ ಸಾಗದಾಯಿತು ಭಾಗವತಪ್ರಿಯಾ 4 ಆಶಾ ಬಿಡಿಸಿ ನೀ ಲೇಸು ಕೊಡು ಹನುಮೇಶವಿಠಲನೇ ಘಾಸಿಯಾದೆನು ಪೋಷಿಸಯ್ಯ ರಮೃಶ ಪಂಢರಿವಾಸ ವಿಠಲ 5
--------------
ಹನುಮೇಶವಿಠಲ
ಕೈಕೊಂಡ - ನೃಹರಿ ಕೈಕೊಂಡ ಪ ಕೈಕೊಂಡ ಪೂಜೆಯ ನೃಹರಿ | ತ್ರೈಲೋಕ್ಯಕನಾಥನು ಅಸುರಾರಿ | ಆಹತೋಕನ ಸಲಹಲು | ಏಕಮೇವನ ಲೀಲೆಕೈಕೊಂಡ ಅವತಾರ | ಆ ಕಂಬೋದ್ಭವನಾಗಿಅ.ಪ. ಭಕ್ತಿ ಭಾವದಿ ಪರಾಶರ | ಬಹುತಪ್ತ ಭಾವದಿ ಕೃಷ್ಣೇ ತೀರ | ದಲ್ಲಿಸಕ್ತನಿರೆ ಧ್ಯಾನ ಗೋಚರ | ನಾಗಿವ್ಯಕ್ತನು ಷೋಡಶಕರ | ಆಹದೃಪ್ತ ದಾನವ ಧ್ವಂಸಿ | ದೀಪ್ತಾನಂತ ತೇಜಮೂರ್ತಿ ಕಾಣಿಸಿದನ | ವ್ಯಕ್ತನಾಗಿದ್ದಂಥ 1 ಕಟಿಸೂತ್ರ ಸ್ಮರ ಕೋಟಿ ಲಾವಣ್ಯಕರ ಪಾಶ ಅಸಿಕುಂತ | ವರದಾ ಭಯವು ಹಸ್ತ 2 ಕಂಬು ಚಕ್ರ ಚರ್ಮಕರ | ಮತ್ತೆಅಂಬುಜ ಶಾಂಙÁ್ರ್ಞದಿಧರ | ಗದಸಂಭೃತ ತುಳಸಿಯ ಹಾರ | ಮತ್ತೆಇಂಬಿನ್ವ್ಯೊ ಜಯಂತಿ ಹಾರ | ಆಹಅಂಬುಜದಳ ನೇತ್ರ | ಇಂಬಾಗಿ ಕರಪಾತ್ರತುಂಬ ಪೀಯುಷಧಿ | ಪೊಂಬಸಿರ ವಂದ್ಯನು 3 ಶ್ರೀವತ್ಸ ಲಾಂಛನ ಭೂಷ | ತನ್ನಭ್ರೂವಿಲಾಸದಿ ಬ್ರಹ್ಮ ಈಶ | ರಿಗೆತಾವೊಲಿದೀವ ಆವಾಸ | ಯೆನುತವ ವೇದಂಗಳು ಅನಿಶ | ಆಹಮಾವಿನೋದಿಯ ಗುಣ | ಸಾವಕಾಶಿಲ್ಲದೆಸಾರ್ವದ ಪೊಗಳುತ್ತ | ಭಾವದೊಳ್ಹಿಗ್ಗುವವು 4 ಪೊತ್ತು ರೂಪವ ಬಲಪಾದ | ಚಾಚುತ್ತ ರಕ್ಕಸನೊಡಲಗಾಧ | ಇಟ್ಟುವತ್ತುತ ತೊಡೆಯಲ್ವಿನೋದ | ದ್ವಯಹಸ್ತ ನಖದಿ ಉದರ ಬಗೆದ | ಆಹಕಿತ್ತುತ ಕರುಳನ್ನ | ಕತ್ತಿನೊಳ್ಹಾಕುತಭಕ್ತನ ಸಂಬಂಧ | ಎತ್ತಿ ತೋರ್ದ ಜಗಕೆ 4 ಪಂಚ ಮೋಕ್ಷಪ್ರದ ಹರಿ | ಆಯ್ತುಪಂಚಾಮೃತಭಿಷೇಕ ಅವಗೆ | ಮತ್ತೆಪಂಚಕಲಶಾರ್ಚನವು ಆವಗೆ | ಆಯ್ತುಪಂಚ ಕುಂಭಾಭಿಷೇಕವಗೆ | ಆಹಸಂಚಿಂತಿಸುತ ಹೃ | ತ್ಪಂಕಜದೊಳು ನೋಡೆಸಂಚಿಂತಾಗಮ ನಾಶ | ಕೊಂಚವು ಪ್ರಾರಬ್ಧ 6 ಶಾಲಿಗ್ರಾಮದ ಶಿಲ ಏಕ | ಪೊತ್ತುಪೋದಕ ಬಾಹು ಅಲೀಕ | ಶತಶಾಲೀವಾಹನವೆಂಬ ಶಕ | ದೊಳುಜ್ವಾಲಾ ನರಹರಿ ನಾಮಕ | ಆಹಯೇಳು ಐದೊರ್ಷದ | ಭಾಳ ತಪಕೆ ಮೆಚ್ಚಿಶೀಲ ದ್ವಿಜ ದಂಪತಿ | ಗೊಲಿದು ಪೇಳಿದ ಹೀಗೆ 7 ಭೀಮಕ ರಾಜಗೆ ಪೇಳು | ತೃಣಜಾಲವ ಹಾಕೆ ನೀರೊಳು | ಅಲ್ಲಿಜ್ವಾಲೆ ಉದ್ಭವಿಸಲು ಬಲು | ನೀರಮೇಲಕ್ಕೆ ಒಳಗಿಂದ ಬರಲು | ಆಹತೋಳೆರಡಲಿ ರಾಜ | ಮೇಲೆತ್ತೆ ಬರುವನುತಾಳ ಮೇಳ್ವೈಭವ | ದೊಳಗೆ ಸ್ಥಾಪಿಸಲೆಂದು 8 ಅಂಗಹೀನರೆ ಕೇಳಿ ಆವ | ನಿಮ್ಮಭಂಗಿಪ ಮೂಕಾಂಧ ಭಾವ | ನೀಗಿಶೃಂಗಾರ ರೂಪ ಸ್ವಭಾವ | ನರಸಿಂಗ ಕೊಡುವೆನು ಸೇವ | ಆಹ ಹಿಂಗದೆ ಕೊಡುವೆನು | ಅಂಗಜ ಪಿತ ನರಸಿಂಗಪುರವೆಂದು | ಸಂಗೀತವಾಗಲಿ 9 ವತ್ಸರ ಸೌಮ್ಯವು ಪುಷ್ಯ | ದಿನದರ್ಶ ವ್ಯಾಸತೀರ್ಥ ಶಿಷ್ಯ | ಆದರ್ಶ ದಾಸರ ದಿನ ಭವ್ಯ | ಭಕ್ತವತ್ಸಲ ಸ್ವೀಕಾರ ಆಲ್ಪ್ಯ | ಆಹಉತ್ಸವ ಕೊಳ್ಳುತ | ಉತ್ಸಾಹವೆನಗಿತ್ತುಮತ್ಸ್ಯಾದಿ ದಶರೂಪಿ | ಕೃತ್ಸ್ನ ಕಾರುಣ್ಯನು 10 ಪರಾಶರಗೊಲಿದ ಸುಶೀಲ | ಖಗವರನು ಭೂದೇವಿಯು ಬಲ | ಎಡವರಲಕ್ಷ್ಮೀ ಪ್ರಹ್ಲಾದ ಬಾಲ | ಸುರವರರಿಂದ ಸ್ತುತ್ಯ ವಿಶಾಲ | ಆಹಗುರು ಗೋವಿಂದ ವಿಠ್ಠಲ | ಗುರು ಬಿಂಬ ನರಸಿಂಗಶರಣರ ಅಪಮೃತ್ಯು | ಹರಿಸಿ ಸಂತತ ಕಾಯ್ವ11
--------------
ಗುರುಗೋವಿಂದವಿಠಲರು
ಕೈಲಾಸದ ಹುಲಿಯೇ ಕಲಿಕಲುಶವ ಕಳೆಯೊಕಾಳಿಯಾಗಿಳಿಯೇ ಪ ಕಾಲಕಾಲಕೆ ನಿನ್ನ ಕಾಲಿಗೆರಗುವೆ ಕರುಣಾಲಯತೋರೋ ಕರುಣಾಳುಗಳರಸನೆ ಅ.ಪ. ತುಳಸಿಗೆ ಕಳಸೀದರೆನ್ನ ತುಳಸಿಯ ತಾರದೆ ನಾ ಹೊಲಸಿನೊಳಳುತಿರೆ ಘಳಿಗೆಯಾ ತಾಳದೆ ಘಳಿಸಿದೆ ತುಳಸಿಯಾ ಕಳಸವ ಕಳ್ಳ ನಾ ಗೆಳೆಯನೆ ಕಳವಳಿಗಳು ಕಳುಹಿಸಿ ಕಾಳ್ವಗೈಸುವ ಕಾಳಿರಮಣ ನಿನ್ನ ಧೂಳಿ ಧರಿಸುವಂತೆ ಖೂಳನಾ ಮಾಡದೆ 1 ಚಲುವ ಚನ್ನಿಗ ನೀನಹುದೋ ಚಂಚಲ ನಯನಾ ಕರುಣಾ ಚಲ ನೀನಹುದೊ ಚಾಲೂವರಿಯಲು ಎನಗೆ ಕಾಲವು ತಿಳಿಯದು ಶೂಲಿ ಚಂಚಲ ಎನ್ನ ಸಂಚಿತಗಾಮಿ ವಂಚಿಸದೆ ಕಾಯ್ವುದೊ ಇದೇ ಕೊಡುವುದೋಕಂಬು ಕಂಧರಮಣಿ ಹಂಚುವುಗಾಣದೆ ಚಂಚಲೂ ನಯನದಿ ಸುರವಂಚಕನಾಗಿ ಪ್ರಪಂಚದಿ ಶರಪಂಚನ ಚಿಂತಿಸಿಸಂತೆಯಾನರುಹಿದ 2 ಅಕಳಂಕ ಮಹಿಮನೆ ದೋಷದೂರ ನೀ ಗುಣವಂತನೇ ಸಹಸ ಬಲವಂತನೆ ಕಾಂತಿಯ ತಂದನೆ ಕಾಂತಿಯುಳ್ಳ ಕಂತಿಯು ಧರಿಸಿದ ದಿಗಂತ ನಿಷ್ಕಿಂಜನರ ಕಾಂತನೆ ಭುಜಬಲ ಮಹಬಲವಂತನೆ ಕುರುಕಂತನೆ ಅಂತು ಇಂತು ತಂತು ಬಿಡದೆ ನಿಜ ಕುಂತಿಯ ಮಗನನ ಕಂತೆಯುಪೂಜಿಪ ಮಂತ್ರಿಯೆನಿಸಿ ಸುಖತಂತ್ರ ಪಠಿಸಿ ಶೃತಿಪಂಶವಿಂಶತಿ ದ್ವಿಪಿಂಚಕಲ್ಪವ ಮಿಂಚಿನಂದದಿ ತಪವಗೈದು ಪಂಚಪದವಿಯ ಪೊ0ದುಕೊಂಡು ಪಂಚ ಬಾಣನ ಪಿತನು ಯನಿಸಿದ ಮಾಂಗಲ್ಯ ಲಕುಮಿಯ ರಮಣ ಯೆನ ತಂದೆವರದಗೋಪಾಲವಿಠ್ಠಲನ ಆತಂಕವಿಲ್ಲದೇ ಚಿಂತಿಸುವ ನಾರಾಯಣಾಚಾರ್ಯನೇ3
--------------
ತಂದೆವರದಗೋಪಾಲವಿಠಲರು
ಕೈವಲ್ಯಪತಿ ವಿಠಲ | ಇವಳ ನೀ ಸಲಹೋ ಪ ದೇವದೇವೊತ್ಮತವ | ದಾಸ್ಯಕಾಂಕ್ಷಿಪಳಾ ಅ.ಪ. ಗುರುಗಳೊಂದಗೆ ಯಾತ್ರೆ | ಭರದಿ ಸ್ವಪ್ನದಿಗೈದು |ಮರಳಿ ಕೊಲ್ಹಾಪುರದ | ಶಿರಿರಮೆಯ ಕಂಡೂ |ಮರುತ ದರ್ಶನದಿಂದ | ವರಸು ಉಪದೇಶಕ್ಕೆತರುಣಿ ಶುದ್ಧಳು ಇಹಳು | ಉರಗಾದ್ರಿವಾಸಾ 1 ತೈಜಸನು ನೀನಾಗಿ ನೈಜದಂಕಿತ ಪ್ರಾಪ್ತಿಮಾಜದಲೆ ಸೂಚಿಸಿಹೆ | ಭ್ರಾಜಿಷ್ಣು ಮೂರ್ತೇ|ಯೋಜಿಸಿದೆ ಅದಕಾಗಿ | ತರಳೆಗಂಕಿತವನ್ನುರಾಜಿಸೋ ಮನದಿ ತವ | ನೈಜರೂಪವನೂ 2 ತರತಮದ ಸುಜ್ಞಾನ | ಹರಿಗುರೂ ಸದ್ಭಕ್ತಿಮರುತ ಮತ ದೀಕ್ಷೆಯನು | ಪರಮ ವೈರಾಗ್ಯಕರುಣಿಸುತ ಸಂಸಾರ ಶರಧಿಯನೆ ದಾಂಟಿಸೊಅರವಿದೂರನೆ ಹರಿಯೆ | ಪ್ರಾರ್ಥಿಸುವೆ ನಿನ್ನಾ 3 ಕರ್ಮ ನಿಷ್ಕಾಮದಲಿ | ಪೇರ್ಮೆಯಲಿ ಚರಿಪಂತೆಭರ್ಮಗರ್ಭನ ಪಿತನೆ | ಸನ್ಮನವನಿತ್ತೂ |ನಿರ್ಮಮತೆ ನೀಡಿ | ಕರ್ಮನಿರ್ಲೇಪದಲಿಹಮ್ರ್ಯ ವೈಕುಂಠವನು | ಗಮಿಪ ತೆರಮಾಡೋ 4 ಭಾವುಕರ ಪರಿಪಾಲ | ಭೂವೈಕುಂಠಲೋಲದೇವದೇವೋತ್ತಮನೆ | ಗೋವಿಂದ ಮೂರ್ತೇ |ನೀ ವೊಲಿಯದಿಲ್ಲ ಗುರು | ಗೋವಿಂದ ವಿಠ್ಠಲನೆಸೇವಕಳ ಪೊರೆಯಲ್ಕೆ | ಪ್ರಾರ್ಥಿಸುವೆ ಹರಿಯೇ 5
--------------
ಗುರುಗೋವಿಂದವಿಠಲರು
ಕೊಟ್ಟಿಗೋತ್ಸವ ಗೀತೆ ಕೊಟ್ಟೊಗೋತ್ಸವ ನೋಡಿ ಸೃಷ್ಟಿಗೀಶ್ವರನ ಪ. ವಾಸುದೇವನ ಸಹಸ್ರಸ್ತಂಭಮಂಟಪವ ದಾಸರು ಬಂದು ಶೃಂಗಾರವ ಮಾಡಿ ದೇಶದ ಮೇಲುಳ್ಳ ಬೊಂಬೆಗಳನು ರಚಿಸಿ ಲೇಸಾದ ಮೇಲುಕಟ್ಟುಗಳ ಕಟ್ಟಿದರು 1 ಸೃಷ್ಟಿಗೀಶ್ವರನಾದ ರಂಗನಾಥನಿಗೆ ಕೊಟ್ಟಿಗೋತ್ಸವವನ್ನು ನಡೆಸಬೇಕೆನುತ ಕಟ್ಟಿ ಕಂಕಣವನ್ನು ನಾಲ್ಕುವೇದಗಳಿಂದ ಭಟ್ಟರು ಓದಿ ಪೇಳಿದರು ಸಂಭ್ರಮದಿ 2 ವಜ್ರದ ಕಿರೀಟವಿಟ್ಟು ರತ್ನದಂಗಿಯ ತೊಟ್ಟು ಅರ್ಜುನಸಖ ಸಂಭ್ರಮದಲಿ ಪೊರಟು ಸ್ವರ್ಗದ ಬಾಗಿಲೊಳಗೆ ತಾ ನಿಂದು ಮೂರ್ಜಗವೆಲ್ಲ ಮೋಹಿಸುತಲೆ ಬಂದು 3 ಮಂದಹಾಸದಲಿ ನಿಂದು ಮಂಟಪದಲಿ ಬಂದ ಆಳ್ವಾರರಿಗಾಸ್ಥಾನವಿತ್ತು ಚಂದದಿಂದ ದಿವ್ಯ ಪ್ರಬಂಧವ ಕೇಳಿ ಒಂದುಅಂಕಣ ಬಿಡದೆ ಬಂದ ಶ್ರೀರಂಗ 4 ಸಂಕ್ರಾಂತಿಯಲಿ ಶಂಕರನ ಪ್ರಿಯನು ಶಂಕೆ ಇಲ್ಲದೆ ಆಭರಣವನು ಧರಿಸಿ ಪಂಕಜಮುಖಿಯರೊಡಗೊಂಡು ಹರುಷದ ಲಂಕಾರವಾಗಿ ಬಂದನು ಮಂಟಪಕೆ 5 ಮತ್ತೆ ಮರುದಿನದಲ್ಲಿ ಭಕ್ತವತ್ಸಲನು ಮುತ್ತಿನಅಂಗಿ ಮುಂಡಾಸನಳವಡಿಸಿ ಮುತ್ತಿನಛತ್ರಿ ಚಾಮರ ಸೂರೆಪಾನದಿ ಮುತ್ತರಸಿಯ ಮಂಟಪಕೆ ನಡೆತಂದ 6 ಅರ್ಥಿಯಿಂಬಂದು ತಾ ಅಶ್ವವನೇರಿ ಮತ್ತೆ ಬೇಟೆಯಮೃಗವನೆ ಕೊಂದು ಸಂ ಕ್ರಾಂತಿಯ ಪಾರ್ವೇಟೆಯನಾಡಿ ಸಂತೋಷದಿ ಬಂದ 7 ನಾರಿವೇಷವ ಆಳ್ವಾರರಿಗೆ ಧರಿಸಿ ಪೇರಿಯ ತಾ ಬಿಟ್ಟು ತೇಜಿಯನೇರಿ ಚೋರತನವ ಮಾಡಿದ ಭಕ್ತರಿಗೆ ಮೂಲಮಂತ್ರವ ಪೇಳಿ ಮುಕ್ತಿಯನಿತ್ತ 8 ಮಿಂದು ಮಡಿಯನುಟ್ಟು ಅಂದು ರಾತ್ರಿಯಲಿ ಹ ನ್ನೊಂದು ವಿಧ ಭಕ್ಷ್ಯಗಳನು ತಾ ಗ್ರಹಿಸಿ ಬಂದ ಆಳ್ವಾರರಿಗೆ ಮುಕ್ತಿಯನಿತ್ತು ಬಂದು ಆಸ್ಥಾನದಿ ನಿಂದ ಶ್ರೀರಂಗ 9 ಭಕ್ತರು ಮಾಡಿದ ಪ್ರಬಂಧವನೆಲ್ಲ ಭಕ್ತಿಯಿಂದಲೆ ಪೇಳಿದ ಆಚಾರ್ಯರಿಗೆ ಯುಕ್ತಿ ತೋರಿದ ಪರಾಶರವ್ಯಾಸರಿಗೆ ಬ್ರಹ್ಮ ರಥವನಿತ್ತ ಬ್ರಹ್ಮಾಂಡರೂಪ 10 [ಶೌ]ರಿಯು ತಾನಿರಲು ಮೇಘಮಂಡಲದಂತೆ ತೋರುವುದು ತಾರಕೆಯಂತೆ ಮೈಯುಡುಗೆ ವಾರಿಜನಾಭನ ಮುತ್ತಿನಂಗಿಯ ನೋಡು ವವರಿಗೆ ತಾ ಆನಂದವಾಗಿಹುದು 11 ಕ್ಷೀರಸಾಗರದಲ್ಲಿ ಪವಡಿಸಿಹ ಹರಿಗೆ ಕ್ಷೀರಬಿಂದುಗಳು ಮೈಯೊಳಗೆ ಬಿದ್ದಂತೆ ವಾರಿಜನೇತ್ರಗೆ ವಜ್ರದನಾಮವು ಧರಿಸಿದರು ಹೇಮದ ಪಾದಹಸ್ತಗಳ 12 ಮುತ್ತಿನಂಗಿಸೇವೆ ನೋಡಬೇಕೆನುತ ಹತ್ತುಸಾವಿರ ಪ್ರಜೆ ಬಂದು ನಿಂತಿರಲು ಇತ್ತು ಕಾಣಿಕೆಯನು ನೋಡಿ ವೆಂಕಟರಂಗನ ಮುಕ್ತರಾದೆವೆಂದು ಭಕ್ತರು ನುಡಿದರು 13
--------------
ಯದುಗಿರಿಯಮ್ಮ
ಕೊಂಡಜ್ಜಿ ಶ್ರೀ ಜನಾರ್ದನ ಸ್ವಾಮಿ ಸ್ತೋತ್ರ ಎಂಥಾ ಸುಂದರನೊ ಶ್ರೀಕಾಂತನೂ ||ಅ|| ಸಂತರ ಮನೋರಥ ಸಂತತ ಪಾಲಿಸಿಪಂಥಾವ ಗೆಲಿಪ ಮಹಾಂತನೋ - ಶ್ರೀಕಾಂತನೂ ಅ.ಪ. ಮಾನಿನೀಯಳ ಬಿಟ್ಟು | ಮೌನಿಯಂದದಿ ನೀನುಕಾನನವನೆ ಸೇರಿ ನೆಲೆಸೀರ್ಪುದೂ | ಮುನಿಜನ ವಂದ್ಯಾ 1 ತೊಂಡ ಜನರು ನಿನ್ನ | ಬಂಡುಣಿಯಂದದಿಪುಂಡು ಮಾಡುವರೆಂದು ಬಂದೆಯಾ | ಪುಂಡರಿಕಾಕ್ಷಾ 2 ಹಿಂಡು ಭಕ್ತರು ತಮ್ಮ | ದಿಂಡು ಮಂಡಿಪರೆಂದು ಕೊಂಡಜ್ಜಿಯಲಿ ನೆಲಿಸೀದ್ಯಾ | ಪಾಂಡವ ಪ್ರೀಯಾ 3 ವೇಲಾಪುರಿಗೆ ಪೋಗ | ಲೊಲ್ಲೆನೆಂದೆನುತಲಿಇಲ್ಲೇ ನೆಲಸಿ ಪೂಜೆಗೊಂಬುದು ಫಾಲಾಕ್ಷ ಪ್ರಿಯನೇ 4 ಎಲ್ಲಿಪೋದರೂ ಬಿಡ | ಲೊಲ್ಲರೂ ನಿನ್ನ ಜನಸಲ್ಲಿಸೆನ್ನಯ ಮನೋಭೀಷ್ಟವ | ಹೇ ಜನಾರ್ಧನಾ 5 ಆರು ಕಾಯುವರಿಲ್ಲ | ಸಾರಿದೆ ತವ ಚರಣಪೋರನಾಮಯ ಹರಿಸಯ್ಯಾ | ನಾರದ ವಂದ್ಯಾ 6 ಗುರುಗಳಂತರ ಗುರು | ಗೋವಿಂದ ವಿಠಲನೆಪರಿಪರಿ ನಿನ ಕೀರ್ತಿ ನುಡಿಸಯ್ಯಾ | ಸುರವರ ವಂದ್ಯಾ7
--------------
ಗುರುಗೋವಿಂದವಿಠಲರು
ಕೊಂಡಿರ್ಯಾ ನೀವು ಕೊಂಡಿರ್ಯಾ ಮಂಡಲದೊಳು ವಸ್ತು ಕೊಂಡಿರ್ಯಾ ಧ್ರುವ ಕೊಳಬೇಕಾದರ ನೀವು ತಿಳಿದುಕೊಂಡು ಬನ್ನಿ 1 ತಿಳಿಯದಿದ್ದರೆ ಖೂನ ಕೇಳಿ ಸದ್ಗುರುವಿನ 2 ಬೆಲೆಯು ಹೇಳುವದಲ್ಲ ನೆಲೆಯ ತಿಳಿಯುವದಲ್ಲ 3 ಕೊಳಗ ಎಣಿಸುವುದಲ್ಲ4 ತೂಕ ಮಾಡುವುದಲ್ಲ ಲೆಕ್ಕ ಇಡುವುದಲ್ಲ 5 ಇಟ್ಟು ಮಾರುವದಲ್ಲ ಕೊಟ್ಟರ್ಹೋಗುವುದಲ್ಲ 6 ಪಂಡಿತರಿಗೆ ಪ್ರಾಣ ಕೊಂಡವರಿಗೆ ತ್ರಾಣ 7 ಹೇಳಿದ ನಾ ನಿಮಗೊಂದು ಸುಲಭವಾಗಿಂದು 8 ಒಮ್ಮನವಾದರ ಸುಮ್ಮನೆಬಾಹುದು 9 ಸಾಧುಸಜ್ಜನರಿಗೆ ಸಾಧ್ಯವಾಗುದಿದು 10ಸಾರಿ ಚೆಲ್ಲೇದ ಮಹಿಪತಿ ವಸ್ತುಮಯಮಿದು11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೊಡು ತಾಯೆ ವರವ ಧೃಡವಾಗಿರುವ ಕೊಡು ತಾಯೆ ವರವಾ ಪ. ಕೊಡೆ ವರ ತಡಮಾಡದೆ ಧೃಡ ಭಕ್ತಿ ಎಂಬ ಮಾಂಗಲ್ಯ ಭಾಗ್ಯ ಧೃಡವಾಗಿರುವಂತೆ ಅ.ಪ. ಪರಿಪರಿ ಧ್ಯಾನಿಸೆನ್ನ ಮನಮಂದಿರವೆಂಬ ವರಗೃಹದಲಿ ಯೆನ್ನಯ ಭಕ್ತಿಮಂಟಪದಿ ಹರದಿ ಲಕುಮಿ ನಿನ್ನ ಪೂಜಿಸಿ ನಮಿಸಲು ವರ ಅಘ್ರ್ಯಪಾದ್ಯ ಆಚಮನವಿತ್ತು ನಲಿವೆ 1 ನವವಿಧ ಭಕ್ತಿಯೆಂಬ ನವರತ್ನ ಮಂಟಪದಿ ನವವಧು ಹರಿಗೆ ನೀನೆಂದು ಕುಳ್ಳಿರಿಸಿ ನವವಿಧ ಪಂಚಾಮೃತ ಸ್ನಾನಗೈಸಿ ನವನೀತಚೋರ ನಿನಗೆ ವಸ್ತ್ರಾಭರಣವನಿಟ್ಟು ನವವಿಧ ಭಕುತಿಲಿ ಪೂಜಿಪೆ 2 ಜಾಜಿ ಮಲ್ಲಿಗೆ ರೋಜ ಸಂಪಿಗೆ ರಾಜಿಪಲಕ್ಷ್ಮಿಗೆ ಮಲ್ಲಿಗೆ ದಂಡೆ ಮುಡಿಸಿ ಜಡೆಗೆ ಕಮಲ ಕೆಂಪಿನ ತಿರುಪಿನ ಹೂವ ತಿರುಗಿಸಿ 3 ಅರಿಶಿನ ಕುಂಕುಮ ಪರಿಮಳ ಗಂಧದಿ ವರಮಹಾಲಕ್ಷ್ಮಿಗೆ ಪೂಜಿಸುವೆ ವರಲಕ್ಷ್ಮಿಗೆ ಪರಿಪರಿ ಪುಷ್ಪ ಅಷ್ಟೋತ್ತರಗಳಿಂದರ್ಚಿಸೆ ಕೊಡು ವರ ದೃಢಭಕ್ತಿಯೆಂದು ಬೇಡುವೆ 4 ಷಡ್ರಾಸಾನ್ನ ಪಾಯಸ ಭಕ್ಷ್ಯಗಳ ಷಡ್ವಿಧ ದದಿಘೃತ ಪಾಲು ಸಕ್ಕರೆ ಬಗೆಬಗೆ ಉಂಡೆಗಳ ಷಡ್ವಿದ ಫಲಗಳನರ್ಪಿಸಿ ಧೂಪ ದೀಪದಿ ವರ ಅಷ್ಟ ಮಂಗಳಾರತಿ ಬೆಳಗಿ ಪಾಡುತ ನಮಿಸುವೆ 5
--------------
ಸರಸ್ವತಿ ಬಾಯಿ
ಕೊರವಂಜಿ ಪದ ಬಾರೆ ಸತ್ಯಭಾಮೆ ತೋರೆ ನಿಮ್ಮ ಸುಹಸ್ತದ ಠೇವೆ ಧ್ರುವ ಸರ್ಕನೆ ಬಾರವ್ವಾ ಅರಿಕ್ಯುಳ್ಳ ಗರತಿ ಕರವ ಕೊರವತಿ ತಾರ್ಕಣ್ಯ ಬರುತಾದ ಪರಮ ಸುವಾರ್ತಿ ತರ್ಕರಹಿತ ವಸ್ತು ಕರಕೊ ಸುಮೂರ್ತಿ 1 ಓಯವ್ವ ಅವ್ವ ಬಾರೆ ನಮ್ಮವ್ವ ದೈವುಳ್ಳ ಗರತಿ ನೀನವ್ವ ದೈವ ಬರುದೆ ನಿನ್ನೊಳಗವ್ವ ಕೈದೋರೆ ಕೈದೋರೆ ಕೈದೋರೆ ನಿಮ್ಮ 2 ಕೈದೋರೆ ಕೈದೋರೆ ಕೈದೋರೆ ನಿಮ್ಮ ಕೈಯ ಲಕ್ಷಣ ನೋಡಿ ಹೇಳುವೆನಮ್ಮ ಅಯ್ಯ ಬರುತಾನೆ ಆಶೇಲಿ ನಿಮ್ಮ ಕೈಗೊಟ್ಟು ಕೇಳೆ ನಿಜ ಗುಹ್ಯವರ್ಮ 3 ಸುಳ್ಳು ಮಾತನಾಡಿ ಒಡಲ ಹೊರಳವಲ್ಲ ಬಲ್ಲಷ್ಟು ಬೊಗಳುವೆ ವಿಷಯ ದಾಸ್ಯವಳಲ್ಲ ಉಳ್ಳಷ್ಟು ಹೇಳುವೆ ಕೇಳೆ ಶಿವ ಸೊಲ್ಲ ಹೇಳುವ ಮಾತಿದು ಘನ ಗುರು ತಾ ಬಲ್ಲ 4 ಕೊರವಂಜಿ ಮಾತಿದು ಕಿವಿಗೊಟ್ಟು ಕೇಳಮ್ಮ ಬರುತಾನ ಉದರಲಿ ಹುಟ್ಟಿ ಸಗುಣ ನಿಮ್ಮ ತಾರಿಸುವ ಸ್ವಾಮಿ ಪತಿತ ಪಾವನ ನಿಮ್ಮ ಹರಷದೋರುವ ನಿತ್ಯಾನಂದೋ ಬ್ರಹ್ಮ 5 ಎಂದ ಮಾತನೆ ಕೇಳಿ ಬಂದಳು ಭಾವೆಮ್ಮ ಚೆಂದ ಉಳ್ಳ ಸುರಸ ವಾಕ್ಯ ಕೇಳಿದಳೊಮ್ಮೆ ಬಂದು ಹರುಷದಿ ಪೂರ್ಣ ಸಂದಿಸಿಟ್ಟಳು ಪ್ರೇಮ ಒಂದೆ ನಿಜಸುಮಾತ್ಹೇಳ್ಯೆಂದಳು ನೇಮ 6 ಎಲ್ಲಿಂದ ಬಂದೆವ್ವ ಸೊಲ್ಲ ಬೀರುತ ಶಿವ ಬಲ್ಲ ಮಹಿಮಳೆಂದು ನಾನರಿಯೆನವ್ವ ಇಲ್ಲೆವೆ ಕಂಡೆ ನಾ ಸೊಲ್ಲಿನ ಮಹಿಮರು ಎಲ್ಲ ನೆಲೆನಿಭೇಳೌವ್ವ 7 ಸರಿಯ ಬಂದರ ನಿನ್ನ ಮರಿಯೆನವ್ವ ಎಂದು ಖರೆ ಉಳ್ಳ ಮಾತನೆ ಹೇಳೆ ನಿಜ ಒಂದು ಹಿರಿಯರಗೀ ಮಾತು ಸರಿಯ ಬಾವ್ಹಾಂಗಿಂದು ಬೀರವ್ವ ನಿಜಸಾರವಿಂದು 8 ಲಕ್ಷ ಎಂಬತ್ತುನಾಲ್ಕು ಗ್ರಾಮವ ನೋಡಿ ಲಕ್ಷಿಸುತ ಬಂದ ಲಕ್ಷಣ ನಿಜಗೂಡಿ ಲಕ್ಷುಮಿ ಕರದೋರುತದ ನಿಮ್ಮೊಳೊಡಮೂಡಿ ಅಕ್ಷಯಾನಂದ ಬರುತಾನೆ ಇದರಿಡಿ 9 ಕರ ಕೊಟ್ಟಳು ಸುಶೀಲೆ ವರ ಕೃಪೆಯಲಿ ಕೊರವಂಜಿ ಮಾತಲಿ ಅರಿತಳು ತಾ ತನ್ನಲಿ ಪರಮಾನಂದ ಲೀಲೆ ಬೆರದಳು ಕೇಳಿ 10 ನುಡಿಯುವ್ವ ಸಲಲಿತವಾದ ನಿಜವಾಕ್ಯ ಬಡುವಂತೆ ಹರುಷವು ನೋಡಿ ತ್ರಯಲೋಕ್ಯ ಬಡಸವ್ವ ನನಗಿಂದು ಇದೆ ನಿಜ ಮುಖ್ಯ ಕುಡಲಿಕ್ಕೆ ನಿನಗಿದು ಶಕ್ಯ 11 ಮನದಂತೆಯಾದರ ನೆನದೇನವ್ವ ನಿಮ್ಮ ಅನುಕೂಲಾಗುವ ಪುಣ್ಯ ಪೂರ್ವಾರ್ಜಿತ ನಮ್ಮ ಸಾನುಕೂಲಾಗುವಂತೆ ಬೇಡಿಕೊಳ್ಳಮ್ಮ ನೆನಿ ಎಕನಾತಿ ಎಲ್ಲಮ್ಮ 12 ಒಡಮೂಡಿ ಬಂದರ ಉಡಿಯ ತುಂಬೇನವ್ವ ಜಡಿತಾಭರಣದುಡಿಗಟ್ಟೆ ನಿನಗವ್ವ ಹಿಡಿಯದೆ ಅನುಮಾನ ನುಡಿ ನಿಜ ಸಾರವ್ವ ಕುಡಲಿಕ್ಕೆ ನಿಧಾನದವ್ವ 13 ಕೈಯ ಲಕ್ಷಣದಲಿ ಶ್ರೇಯ ತೋರುತಲ್ಯದ ದಯ ಉಳ್ಳ ಮಹಿಮದ ಸೋಹ್ಯ ಬೀರುತಲ್ಯದ ಭಯವಿಲ್ಲದ ಭಾಗ್ಯ ಅಚಲ ತಾನಾಗ್ಯದ ಜಯಜಯಕಾರ ಭಾಸುತದ 14 ಪುಣ್ಯ ಪ್ರಭೆಯ ಚೆನ್ನಾಗಿ ಭಾಸುತಲ್ಯದೆ ಕಣ್ಣಿಗೆ ಸುಚಿನ್ಹ ಹೊಳವುತದೆ ಚಿನ್ನುಮಯದ ಸುಪುತ್ಥಳಿ ಬರುತದೆ ಬಣ್ಣ ಬಣ್ಣದ ಸುಖ ಬೀರುತದೆ 15 ಅಂಗದೊಳಗ ನಿಮ್ಮ ರಂಗ ಬರುತಾನಮ್ಮ ಕಂಗಳಿಗಿದರಿಡುತದೆ ಹರುಷವು ನಿಮ್ಮ ಭವ ಬಂಧದ ದುಷ್ಕರ್ಮ ಮಂಗಳಕರಾನಂದೊ ಬ್ರಹ್ಮ 16 ನಿನ್ನ ಭಾಗ್ಯಕ ಸರಿ ಇಲ್ಲೆ ಸಂಜೀವನಿ ಚೆನ್ನಾಗಿ ಕೇಳೆ ನೀ ಭಾವೆಗುಣಮಣಿ ಧನ್ಯವಾಯಿತು ನಿನ್ನಂದೆವೆ ಯತಿಮುನಿ ನಿನ್ನೊಳಗುಂಟು ದೇವಶಿಖಾಮಣಿ 17 ಭಾವೆ ನಿನ್ನಿಂದ ಪಾವನ್ನವಾಯಿತು ಜಗ ದೇವಾಧಿದೇವ ಮೂಡುವ ನಿನ್ನೊಳಗೀಗ ಕಾವಕರುಣ ಪ್ರತ್ಯಕ್ಷವಾಗುವ ಯೋಗ ಸುವಿದ್ಯ ಭಾಸುವ ದಿವ್ಯಭೋಗ 18 ಉಂಡ ಊಟ ಕಂಡ ಕನಸು ಪಿಂಡಲಕ್ಷಣ್ಹೇಳುವೆ ಮಂಡಲೊಳಗ ಮಂಡಿಸಿಹ್ಯ ಮಹಿಮೆ ನೀನಗ್ಹೇಳುವೆ ಹಿಂಡದೈವದೊಡಿಯ ನಿನ್ನೊಡಲೊಳಗ ತಾಳುವೆ ಪಂಡಿತರಿಗೆ ಪ್ರಿಯವಾದಾಗ್ಯ ಖಂಡನೀನೆ ಬಾಳುವೆ 19 ನೀನೆ ಜಗಕ ತಾರಿಸುವ ದೈವದೋರಿಕುಡುವೆ ನೀನೆ ಭಕ್ತಜನರ ಜನ್ಮಸಾರ್ಥಕವು ಮಾಡುವೆ ಜ್ಞಾನಗಮ್ಯವಾದ ವಸ್ತುಹಿಡದು ನೀನೆ ಕುಡುವೆ ನಿತ್ಯ ಆಡುವೆ 20 ಅಮ್ಮ ನಿಮ್ಮೊಳು ಘಮ್ಮನ್ಹೊಳುವ ತಮ್ಮ ಬರುತಾನ ಸುಮ್ಮಾನಿಹ್ಹಾ ಸಮೀಪಲೆ ಧಿಮ್ಮ ಹಿಡಿದ ಹಮ್ಮಿನೊಳು ಘುಮ್ಮವಾದರು ಬ್ರಹ್ಮಾದಿಗಳೆ ನಮ್ಮ ನಿಮ್ಮದೆಂಬು ಭ್ರಮೆ ಸುಮ್ಮನ್ಯಾಕಿದೊ ಅಮ್ಮಕೇಳೆ 21 ಬಯಕಿ ಲಕ್ಷಣ ನಿನ್ನ ಹೇಳ್ಹೆನವ್ವಾ ತಾಯಿ ಮಾಯಿಕ ಗುಣ ಸುಟ್ಟು ತಿಂದೇನೆಂಬುದು ಬಾಯಿ ಕೈಕಚ್ಚಿಲೆ ಶುದ್ದಿಲ್ಲಾದವರ ತಾಳದು ಸೋವಿ ಐರಾವತ ಬರುತಾನ ನಿನ್ನೊಳು ಪನ್ನಂಗಶಾಯಿ 22 ಬಾಹ್ಯನಿಷ್ಟರ ಕಂಡು ಬದಿಗೆ ಬರಗುಡಿ ನೀನು ಅಹಂಭಾವಕ ಹೇಸಿ ವಾಕರಿಸುವೆ ನೀನು ಗುಹ್ಯ ಹೇಳುವೆ ನಾನು ಸಾಹ್ಯ ಮಾಡುವ ಶ್ರೀಗುರು ತಾನು 23 ಕಾಮಕ್ರೋಧ ಕರದು ತಿಂದೇನೆಂಬುದು ಬಯಕಿ ನೇಮದಿಂದಲಿ ಮದ ಮತ್ಸರನೆ ನೂಕಿ ಪ್ರೇಮವಿಲ್ಲದವರ ಎಂದಿಗಾದರ ಸೋಕಿ ವರ್ಮಿಕರಿಗೆ ನೀ ಕೈಯಗುಡುವಾಕಿ 24 ಆಸಿ ಎಂಬುದು ಅಟ್ಟುಅರದೇನೆಂಬುದು ಬ್ಯಾಗ ಹುಸಿನುಡಿವೆಂಬದು ಹುರವಾದೀಗ ಹಸನಾದ ಬಯಕೀದು ಋಷಿ ಮುನಿಗಳ ಯೋಗ ಲೇಸು ಲೇಸು ನಿನ್ನ ಅಂತರಂಗ 25 ಧನ್ಯವಾದ ರಾಜಯೋಗವ ಬಯಸುದು ಉನ್ಮನವಾಗಿ ಊರ್ಜಿತವಾದೇನೆಂಬುದು ಸ್ವಾನುಭವದ ಸುಖ ಸೂರ್ಯಾಡೇನೆಂಬುದು ಭಿನ್ನ ಭೇದಕ ಕಣ್ಣ ತ್ಯರಿಯದಿದು 26 ವಾಸುದೇವನ ಭಕ್ತಿ ಆಶ್ರೈಸೇನೆಂಬುದು ಶ್ವಾಸೋಚ್ಛ್ವಾಸಕ ಒಮ್ಮೆ ಬಯಸುವುದು ವಿಷಯ ಪ್ರಪಂಚಕ ಹೇಸಿ ತಾ ಜರೆವುದು ಕುಸುಮನಾಭನ ಸೇವೆ ಇಚ್ಛಿಸುವದು 27 ಒಮ್ಮೆ ಸರಸ್ವತಿ ಕೂಡ ಸರಸಾಡೇನೆಂಬುದು ಒಮ್ಮೆ ಲಕ್ಷುಮಿ ಕೂಡ ಲೋಲಾಡೇನೆಂಬುದು ಒಮ್ಮೆ ಪಾರ್ವತಿ ಕೂಡ ಪವಡೀಸೆನೆಂಬುದು ಒಮ್ಮೆ ಏನುನೊಲ್ಲ್ಯೆನೆಂಬುದು 28 ಹೇಳೇನೆಂದರೆ ನಿನ್ನ ಬಯಕಿಯ ಉಲ್ಹಾಸ ತಿಳಿಯದಿನ್ನೊಬ್ಬರಿಗ ಗರ್ಭದ ಸುವಾಸ ಉಲವುತದೆ ನಿನ್ನೊಳು ಸುಪ್ರಕಾಶ ಥಳಥಳಗುಡುತಿಹ್ಯ ಬಾಲವೇಷ 29 ಧನ್ಯ ಧನ್ಯ ನಿನ್ನ ಗರ್ಭಹೊಳುವ ಹೊಂಬಣ್ಣವು ಒಡಲು ನಿನ್ನ ಪುಣ್ಯ ಪಾವನ್ನವು ಧನ್ಯ ಧನ್ಯ ನಿನ್ನ ದರುಷಣದ ಜೀವನವು ಧನ್ಯ ಧನ್ಯ ನಿನ್ನ ಕಂಡ ಜನರ ಜೀವಪ್ರಾಣವು 30 ಭಾವೆ ನಿನ್ನಿಂದ ಖ್ಯಾತಿಪಡೆದ ಪ್ರಹ್ಲಾದನು ದೇವ ದೇವ ಬಂದು ಸ್ತಂಭದೊಳು ಮೂಡಿದನು ಆವಾವ ಠಾವಿನೊಳು ಬಂದು ರಕ್ಷಿಸಿದನು ಜೀವ ಜೀವ ತಾನೆ ಅಗಿ ಪ್ರಾಣನುಳಹಿದನು 31 ನಿನ್ನ ಬಲಗೊಂಡು ದ್ರೌಪದಿಯ ಖ್ಯಾತಿಪಡೆದಳು ಪುಣ್ಯ ಉಳ್ಳ ಮಹಿಮನಂಘ್ರಿ ಕಣ್ಣಾರ ಕಂಡಳು ಚೆನ್ನಾಗಿ ಬಂದು ಸ್ವಾಮಿ ಲಜ್ಜೆಗಾಯ್ದು ಸಭೆಯೊಳು ಬಣ್ಣ ಬಣ್ಣ ವಸ್ತ್ರ ಪೂರಿಸಿದಾನೇಕಗಳು 32 ಸ್ತುತಿಯು ಮಾಡಲು ನಿನ್ನ ಯತಿಮುನಿಗಳವಲ್ಲ ಗತಿಯ ಪಡೆದರು ಸಕಲ ಮುನಿಜನರೆಲ್ಲ ಅತಿ ಹರುಷವು ಕೂಡಿದರು ಜಗದೊಳಗ್ಯಲ್ಲ ಹಿತದೋರುತಿದೆ ವಸ್ತು ಮಯವೆಲ್ಲ 33 ಹೊಳೆವ ಸುಳಿವ ಚೆಲುವ ನಿನ್ನೊಳಗ ನಲುವನೆ ಕಳವಿಲೊಯಿದ ವೇದನುಳುಹಿದವನು ಬೆಳೆವನೆ ಭಾರ ತಾಳಿದವನು ಉಲುವನೆ ನೆಲವ ಗೆದ್ದ ಬಲಿಯು ನಿನ್ನೊಳಗೆ ಒಲುವನೆ 34 ಸೀಳಿ ದೈತ್ಯನ ಕೊಂದ ಶೂರ ಘಮಗುಡತಾನೆ ಅಳದು ಭೂಮಿಯ ಕೊಂಡು ಬೆಳದವ ಬರುತಾನೆ ತಿಳಿದು ಪಿತರ ಸೂಡುಕೊಂಡವ ಬರುತಾನೆ ಬಲುಪರಾಕ್ರಮದವ ತೋಳುತಾನೆ 35 ತಾಂ ಸಂಚರಿಸ್ಹ್ಯಾನ ನಿನ್ನೊಳಗ ಮೂಡಿ ಬರುತಾನೆ ಬ್ಯಾಗೆ ನಗುತ ಬರುತಾನೆ ಈಗ ಕೈಯಗೊಟ್ಟು ಬರುತಾನೆ ನಿನಗೆ 36 ಸಾಧೀಸಿ ಕೇಳೆ ಕಿವಿಗೊಟ್ಟು ಒದುಗುವ ತಾಂ ಇದರಿಟ್ಟು ಉದಿಯವಾಗುವ ದಯವಿಟ್ಟು ಸದ್ಬಕ್ತರಿಗೆ ಕೈಯಗೊಟ್ಟು 37 ಹುಟ್ಟುವ ಶಿಶುವಿನ ಘಟಣಿಯ ಬಹಳ ಗುಟ್ಟೊಡಿಯಲು ತಾಂ ಮುಟ್ಟನು ತಾಳ ಕಟ್ಟುವ ದೈತ್ಯರ ದಿಟ್ಟ ಮಾ ಸಾಳ ದೃಷ್ಟಿಸಿ ನೋಡುವ ನಿಷ್ಠರ ಮೇಳ 38 ಶಿಶುವಿನ ಲಕ್ಷಣ ಬಲು ಅಗಾಧ ಪರಿ ಮಾಟವು ಋಷಿಗಳ ಬೋಧ ಹಸು ನೀರಡಿಸರವುದು ಶ್ರೀಪಾದ ಬಸುರಿನ ಬಯಕಿದು ಬಲುಸುಸ್ವಾದ 39 ಘಮಗುಡುತದೆ ಅನಾಹತದ ಧ್ವನಿಯು ಕ್ರಮ ತಿಳಿವದು ಸುಯೋಗದ ಮನಿಯು ಧಿಮಿಗುಡುತದ ಆನಂದದ ಖಣಿಯು ಭ್ರಮ ಬಿಡಿಸುವ ಘನ ಚಿಂತಾಮಣಿಯು 40 ಹುಟ್ಟಿ ಬರುತಾನಿವ ಶಿಷ್ಟರ ಮನಿಲಿವ ದುಷ್ಟ ಮರ್ದನ ದೇವ ನಿಷ್ಠರಿಗೆ ಕಾವ ಎಷ್ಟೆಂದ್ಹೇಳಲವ್ವ ಸೃಷ್ಟಿಗಧಿಕನಿವ ಮುಟ್ಟಿ ಮುದ್ರಿಸುವ ದಿಟ್ಟೆದೆ ಕೂಸವ್ವ 41 ವರ್ಣಿಸಲಾಗದು ಶಿಶುವಿನ ವಿವರಣ ದಣಿಯಿತು ಕೊಂಡಾಡಿ ವೇದಸುಪುರಾಣ ಖೂನ ತಿಳಿಯದು ತಾನು ಶಾಸ್ತ್ರಕ ಸಂಪೂರ್ಣ ದ್ಯಾನ ಮೋನಕ ದೂರಗಮ್ಯ ಸ್ಥಾನ 42 ಗುಟ್ಟು ತಿಳಿಯದ ವಸ್ತು ಹುಟ್ಟಿಬಾಹುದು ಕೇಳಿ ಉಂಟಾಗುವದು ನಿನ್ನೊಳು ನೆನದಾಗಳೆ ಘಟ್ಯಾಗಿ ಅನುಭವಿಸುತ ನೀನೆ ಬಾಳೆ ದೃಷ್ಟಿಯೊಳೀಗುಟ್ಟು ಆರೀಗ್ಹೇಳೆ 43 ಬಸುರು ಬಯಕೆಂಬುದು ಹೆಸರಿಸಲಳವಲ್ಲ ಹಸನಾಗಿ ಅನುಭವಿಸುವ ಪುರುಷನೆ ಬಲ್ಲ ವಾಸುದೇವನ ಕಾಣದಿಹ್ಯದೆ ಕಣ್ಣಲ್ಲ ಆಸಿ ಅಳಿದವರೆ ತಾಂ ತಿಳಿದರೆಲ್ಲ 44 ಹುಟ್ಟುವ ಲಕ್ಷಣ ಕೇಳೆ ನೀ ಕಿವಿಗೊಟ್ಟು ಮುಟ್ಟಿ ಮುದ್ರಿಸಿಹ್ಯ ಗುರು ಕಟಾಕ್ಷವ ಕೊಟ್ಟು ಇಟ್ಟುಕೊ ಈ ಮಾತು ಆರಿಗ್ಹೇಳೆ ಬಿಟ್ಟು ಗಂಟು ಕಟ್ಟಿದ ಮಾತು ಹೇಳೆಬಿಟ್ಟು 45 ಆಲಕ್ಷವೆಂಬ ಸುನಕ್ಷತ್ರದಲಿ ಪುಟ್ಟಿ ಸುಲಕ್ಷಣದಲಿ ಬರುತಾನೆ ಜಗಜಟ್ಟಿ ನೆಲಯುಗೊಂಡಾಡಿಸಿ ಮನಮುಟ್ಟಿ 46 ಜನ್ಮನಾಮೆಂಬುದು ಕೂಸಿನ ನಿರ್ಗುಣ ಸಮಸ್ತರಿಗೆ ನಡವ ನಾಮವೆ ಸಗುಣ ಬ್ರಹ್ಮಾನಂದದಿ ಲೋಲ್ಯಾಡುವ ಪರಿಪೂರ್ಣ ಕಮಲನಯನ ಸ್ವಾಮಿ ರಮಾರಮಣ 47 ಕೂಸು ಎಂದರ ತಾನು ಕೂಸು ಎನಲಾಗದು ವಾಸವಾಗ್ಯಾಡುದು ವಿಶ್ವಲಿದು ಹೆಸರನೇಕಪರಿಯಲಿ ಕರಿಸಿಕೊಂಡು ಲೇಸು ಲೇಸಾಗಿ ತಾ ಆಡುವುದು 48 ಹಿಂದ ಅಡಿದ ಆಟ ಮಂದದೆ ಆಡುದು ಎಂದಿಗ್ಯದರ ಗುಟ್ಟು ತಿಳಿಯಗುಡುದು ಒಂದಿಸಿದವರ ತನ್ನೊಳು ಕೂಡಿಕೊಂಬುದು ಒಂದೆ ವಸ್ತುವಾಗಿ ತೋರುವುದು 49 ಹೇಳುವೆ ಕೇಳೆ ಶಿಶುವಿನ ಆಟ ತಿಳಿಯಲು ಜಗದೊಳು ಬಲು ಅವ್ಹಾಟ ನೆಲಿ ತಿಳಿದವರಿಗೆ ತೋರುದದು ನೀಟ ನಲಿನಲಿದಾಡುವ ಸಲಲಿತದಾಟ 50 ಒಮ್ಮೆ ನೀರನೆ ಚಲಿಪಿಲಿ ಮಾಡುವ ಒಮ್ಮೆ ಬಾಗಿ ಜಗನೆಗುವ ಒಮ್ಮೆ ಹಲ್ಲಿಲೆ ಬೇರನೆ ಅಗಳುವ ಒಮ್ಮೆ ಬರುತಲಿ ಗುರುಗುಡುವ 51 ಒಮ್ಮೆ ಬಲು ಗಿಡ್ಡಾಗಿ ತೋರುವ ಒಮ್ಮೆ ಪರಾಕ್ರಮ ಹಿಡುವ ಒಮ್ಮೆ ವನದೊಳಗಾಡುತ ಹೋಗುವ ಒಮ್ಮೆ ಕಡವ ಬೆಣ್ಣೆಯ ಮೆಲುವ 52 ಒಮ್ಮೆ ಬತ್ತಲೆ ತ್ರಿಪುರದಲಿ ಸುಳಿವ ಒಮ್ಮೆ ಏರುವ ತಾ ಹಯವ ಒಮ್ಮೊಮ್ಮಾಗುವ ತಾನೆವೆ ಸಗುಣವ ಒಮ್ಮೊಮ್ಮಾಗುವ ನಿರ್ಗುಣವ 53
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೊಲ್ಹಾಪುರದ - ವಾಸಿನೀ | ಹೇ ಮಹಾಲಕ್ಷ್ಮಿಸೊಲ್ಲ ಲಾಲಿಸೇ ಮಾನಿನೀ ಪ ಬಲ್ಲವರಲ್ಲಿಗೆ ನಿಲ್ಲದೆ ತೆರಳಿಸೆಖುಲ್ಲರ ದಲ್ಲಣ | ನಲ್ಲರಿಸೆ ಮನ ಅ.ಪ. ಭೃಗುಮುನಿಯೂ ತಾ ಬರುತಾ | ವಕ್ಷಘಾತವಾಗಲು ತವ ತಾಣ - ತಾಡಿತ |ಅಗಡ ಮುನೀಗೆ ಪ್ರೀತಾ | ನಾಗುತಲಕುಮಿಗೆ ಅವನು - ಆದ್ರುತದೃಗಜಲಜಿಗಿಸುತ | ಹಗರಣಗೆಯ್ಯುತಜಗಳವ ನಟಿಸುತ | ನಗಧರನಲಿ ನೀನುಜಗದೊಡೆಯನ ಮನ | ಬಗೆಯನು ತಿಳಿಯುತಸೃಗಾಲ ಪುರಕಾಗಿ ಆಗಮ ನಿನ್ನದೂ 1 ಇಂಥಹ ನಿಮ್ಮ ಆಟವೂ | ಭಕ್ತರ ಮುಕ್ತಿಪಂಥವೆನಿಪ - ಮಾರ್ಗವೂಸಂತರ ಅಂತರಂಗವೂ | ನಿರ್ಮಲಿನ ಮುಕ್ತಿಕಾಂತೆಯೊಡನೆ ಆಟವೂ |ಅಂತರಂಗದಲಿಪ್ಪ ಗ್ರಂಥಿಸು ಭೇದನಸಂಚಿತಗಳು ನಾಶ | ಮುಂಜೆನ ನಿರ್ಲೇಪಅಂತರಂಗದಿ ಹರಿ | ಕಾಂತಿಯ ದರ್ಶನಎಂತು ನಾ ಪೇಳಲಿ | ಪಂಥಕೀರ್ತಾಳೀ 2 ಕುಂಡಲ ಕಪೋಲೆ | ಕಿರೀಟ ಮೌಳೇತಿಲಾಲಜ ಕರೆ ಕೋಮಲೇ ||ಕೇಳಿಲಿ ಯಮುನಾ ಕೂಲೇ | ಹರಿಯೊಡನೆ ಲೀಲೇತೂಳಿದಾನಂದ ಸುಜಾಲೇ ||ಕಾಲಕೂಟ ಸಮ | ಕೀಳು ವಿಷಯದಲಿಬೀಳುವುದೆನ ಮನ | ಲಾಲಿಸು ಹೇ ತಾಯೇಶೀಲನೆನ ಹರಿ ಗುರು | ಗೋವಿಂದ ವಿಠಲನ ||ಲೀಲೆಯ ತೋರು | ವಿಶಾಲ ಹೃದಯಳೇ 3
--------------
ಗುರುಗೋವಿಂದವಿಠಲರು
ಕೋಣ ಕೇಳಲೋ ಕೋಣ ನೀನು ಕೋಣನಲ್ಲವು ಬ್ರಹ್ಮ ಕೋಣ ಪ ಶಾಸ್ತ್ರ ಪುರಾಣವ ಕೋಣ ನೀನು ವಿಸ್ತರವೋದಿದೆ ಕೋಣವಸ್ತು ತಿಳಿಯಲಿಲ್ಲ ಕೋಣ ನಿನ್ನ ಪುಸ್ತಕ ಬಟ್ಟೆಯಲ್ಲೋ ಕೋಣ 1 ಎಲ್ಲವನೋದಿದೆ ಕೋಣ ನಾನು ಬಲ್ಲೆನೆನುತಿಹೆ ಕೋಣಬಲ್ಲೆನು ನಿನ್ನ ಕೋಣ ನೀನು ಬಲ್ಲಿಡೆ ಬಲ್ಲೆಯೋ ಕೋಣ2 ಹೆಂಡಿರು ಮಕ್ಕಳು ಕೋಣ ಪ್ರಪಂಚ ಯಮನಾಳು ಕೋಣಖಂಡಿಸಿ ತಿಳಿ ನೀನು ಕೋಣ ಪ್ರಾಣ ಕೊಂಡವರವರೀಗ ಕೋಣ3 ಎಲ್ಲಿಂದ ಬಂದೆಯೋ ಕೋಣ ನೀನೆಲ್ಲಿಗೆ ಹೋಗುವೆ ಕೋಣಬಲ್ಲವಿಕೆ ನಿನಗಿಲ್ಲ ಕೋಣ ನೀ ಎಲ್ಲರ ಹೊಡೆಗೆಡೆ ಕೋಣ 4 ಅರಿ ಕೋಣ ಇನ್ನು ಚಿದಾನಂದನರಿಯದಿದ್ದಡೆ ಕೋಣ5
--------------
ಚಿದಾನಂದ ಅವಧೂತರು
ಕೋಲ ಕೋಲೆನ್ನ ಕೋಲ ಕೃಷ್ಣ ನೀಮದನಗೋಪಾಲನಾಗಿಮೆರೆದಿಯಲೊ ಕೃಷ್ಣ ಪ. ಅಂಬರ ತಕ್ಕ ಸುರುಳಿಯ ಮುಂಡಾಸಮುರಿಗಿಯವಂಕಿ ನಡುವಿಟ್ಟುಮುರಿಗಿಯವಂಕಿ ನಡುವಿಟ್ಟು ರುಕ್ಮಿಣಿಯವರಪುತ್ರ ಪ್ರದ್ಯುಮ್ನಗೆ ಉಡುಗೊರೆ1 ಮುತ್ತಿನಾಭರಣ ಹೆಚ್ಚಿನ್ಹೆಚ್ಚಿನ ಜವಳಿಮತ್ತೆ ಕೃಷ್ಣಯ್ಯನ ಸಭೆಯೊಳು ಮತ್ತೆ ಕೃಷ್ಣಯ್ಯನ ಸಭೆಯೊಳು ಇಟ್ಟೆವಪಾರ್ಥನು ಕೊಟ್ಟ ಉಡುಗೊರೆ 2 ಬೆಳಕಿನಂತೊಪ್ಪುವ ಥಳಥಳಿಸುವ ಜವಳಿ ನಳಿನಾಕ್ಷಿಯರು ಕುಳಿತ ಸಭೆಯಾಳು ನಳಿನಾಕ್ಷಿಯರು ಕುಳಿತ ಸಭೆಯಾಳಗೆ ಇಟ್ಟೆವಕುಳಿತ ಜನಕೆಲ್ಲ ಉಡುಗೊರೆ 3 ಅಂದವಾದ ಬಲು ಚಂದ ಚಂದದ ಜವಳಿ ತಂದೆ ಕೃಷ್ಣಯ್ಯನ ಸಭೆಯೊಳು ತಂದೆ ಕೃಷ್ಣಯ್ಯನ ಸಭೆಯೊಳಗೆ ಇಟ್ಟೆವಬಂದ ಜನಕೆಲ್ಲ ಉಡುಗೊರೆ 4 ಸಾಸಿವೆ ಬಣ್ಣದ ಸೀರೆ ಕುಸುಬೆ ಬಣ್ಣದ ಕುಪ್ಪುಸ ಲೇಸಾದ ಅಡಿಕೆ ನಡುವಿಟ್ಟುಲೇಸಾದ ಅಡಿಕೆ ನಡುವಿಟ್ಟು ರುಕ್ಮಿಣಿಯದಾಸಿಯರಿಗೆಲ್ಲ ಉಡುಗೊರೆ 5 ಹತ್ತೆಂಟು ಸಾವಿರ ಸುತ್ತುವ ಮುಂಡಾಸ ಮತ್ತ ಬೆಟ್ಟಡಕಿ ನಡುವಿಟ್ಟುಮತ್ತ ಬೆಟ್ಟಡಕಿ ನಡುವಿಟ್ಟು ರಂಗಯ್ಯನ ಭೃತ್ಯರಿಗೆಲ್ಲ ಉಡುಗೊರೆ6 ಸುಳಿಬಳ್ಳಿಯಂತೊಪ್ಪುವ ಬಿಳಿ ಚೀಟಿನ ಜೂಲು ಎಳೆ ಮಾವುಗಳ ನಡುವಿಟ್ಟುಎಳೆ ಮಾವುಗಳ ನಡುವಿಟ್ಟು ರಂಗಯ್ಯನ ಗಿಳಿಗಳಿಗೆಲ್ಲ ಉಡುಗೊರೆ 7 ಅಕ್ಕರದಿಂದ ಹೊಸ ಚಿಕ್ಕ ಚೀಟಿನ ಜೂಲುತಕ್ಕ ಕುಲಾಯಿ ಮುರುವಿಟ್ಟುತಕ್ಕ ಕುಲಾಯಿ ಮುರುವಿಟ್ಟು ರುಕ್ಮಿಣಿಯ ಬೆಕ್ಕಿಗೆ ಕೊಟ್ಟ ಉಡುಗೊರೆ 8 ಅಷ್ಟೂರಿಗೆ ಉಡುಗೊರೆ ತಕ್ಕಷ್ಟು ಕೊಟ್ಟೆವಕೃಷ್ಣಯ್ಯನ ಮನಕೆ ಬರಲಿಲ್ಲಕೃಷ್ಣಯ್ಯನ ಮನಕೆ ಬರಲಿಲ್ಲ ಕುಬ್ಚಿಎಂಬೊ ಸೊಟ್ಟ ಸ್ತ್ರೀಯಳ ಕರೆಸಿಲ್ಲ9 ಎಲ್ಲರಿಗುಡಗೊರೆ ಬಲ್ಲಷ್ಟು ಕೊಟ್ಟೆವಚಲುವನ ಮನಕೆ ಬರಲಿಲ್ಲಚಲುವನ ಮನಕೆ ಬರಲಿಲ್ಲ ಗೋಕುಲದಗೊಲ್ಲ ನಾರಿಯರ ಕರೆಸಿಲ್ಲ10 ತರಹ ತರಹದ ಜವಳಿ ದುಂಡು ಮುತ್ತಿನ ಪದಕಪೆಂಡಿ ಸರಗಳ ನಡುವಿಟ್ಟುಪೆಂಡಿ ಸರಗಳ ನಡುವಿಟ್ಟು ರಾಮೇಶನಿನ್ನ ಪಂಡಿತರಿಗೆಲ್ಲ ಉಡುಗೊರೆ 11
--------------
ಗಲಗಲಿಅವ್ವನವರು
ಕೋಲ ಕೋಲೆನ್ನಿ ಕೋಲ ಕೋಲ ಕೋಲೆನ್ನಿ ಕೋಲಕೋಲೆಂದು ಹರಿಯ ಪಾಡುವರು ಎಷ್ಟಪ. ನಾಗಶಯನನ ಮುಂದೆ ಪೂಗಿ ಫಲಗಳ ಇರಿಸಿನಾಗವೇಣಿಯರು ಸಾಗುವರು ಎಷ್ಟ 1 ಪಂಕಜಾಕ್ಷನ ಮುಂದೆ ಕುಂಕುಮ ಅರಿಷಿಣ ಪಿಡಿದುಕಂಕಣದ ಕೈಯ ಶಂಕಿನಿಯರೆಷ್ಟ2 ಅಂಬುಜಾಕ್ಷನ ಮುಂದೆ ತಾಂಬೂಲ ತಬಕಗಳುಸಂಭ್ರಮದಿ ಧರಿಸಿದ ರಂಭೆಯರು ಎಷ್ಟ3 ಮಂದಗÀಮನೆಯರ ಮುಂದೆಗಂಧ ಕಸ್ತೂರಿ ಪುನಗುಛsÀಂದದಲಿ ಧರಿಸಿ ಮುಂದಾಗÀುವರೆಷ್ಟ4 ಚಲ್ವ ರಂಗನ ಮುಂದೆ ಮಲ್ಲಿಗೆ ಹೂವಿನ ಝಲ್ಲೆಗಳ ಧರಿಸಿದ ನಲ್ಲೆಯರು ಎಷ್ಟ 5 ಬುಕ್ಕಿಟ್ಟು ಮೊದಲಾಗಿ ವಿಶಿಷ್ಠ ಪರಿಮಳ ಧರಿಸಿಕೃಷ್ಣರಾಯನ ಮುಂದೆ ನಡೆವೋರು ಎಷ್ಟ6 ಕ್ಯಾದಿಗೆ ಸಂಪಿಗೆ ಊದಿನ ಖಡ್ಡಿಗಳುಮುದದಲಿ ಧರಿಸಿ ಮುಂದಾಗುವರಷ್ಟ7 ಉತ್ತತ್ತಿಕದಳಿ ಜಂಬುದ್ರಾಕ್ಷ ಚೂತÀ ಫಲ ಹೊತ್ತುಹರುಷದಲ್ಲಿ ಮಿತ್ರೆಯರು ಸಾಗುವರೆಷ್ಟ8 ಹಾಲು ಮೊಸರಿನ ಕುಂಭ ಬಾಲೆಯರು ಧರಿಸುತ ಸಾಲು ಸಾಲಾಗಿ ಸಾಗುವರೆಷ್ಟ 9 ಬೆಂಡು ಬತ್ತಾಸ ದುಂಡುಗಡಲೆ ಕಬ್ಬುತಂಡ ತಂಡದಲಿ ಹಿಡಿದವರು ಎಷ್ಟ10 ರಂಗರಾಯನ ಮುಂದೆ ಗಂಗೋದಕ ಧರಿಸಿಶೃಂಗಾರದಿಂದ ಸಾಗಿದವರು ಎಷ್ಟ11 ಚಲ್ವರಮಿಅರಸಗೆ ಸಲ್ಲಿಸಬೇಕೆಂದುಕಲ್ಲು ಸಕ್ಕರೆ ಹೊತ್ತ ನಲ್ಲೆಯರು ಎಷ್ಟ 12
--------------
ಗಲಗಲಿಅವ್ವನವರು