ಒಟ್ಟು 1537 ಕಡೆಗಳಲ್ಲಿ , 101 ದಾಸರು , 1126 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಂದಗೋಪನ ಕಂದ ನಾನುವೃಂದಾರಕೇಂದ್ರ ಖಳಕುಲ ಮರ್ದನಪ. ಎಂದೆಂದು ಎನ್ನ ನಂಬಿದ ಭಕುತರಿಗೆ ಸುತ್ತಿಂದಬಂದ ಕ್ಲೇಶಗಳನ್ನೆಲ್ಲ ಖಂಡಿಸಿತಂದೆ ಮಕ್ಕಳ ಪೊರೆವಂತೆ ಪಾಲಿಸುತಿಹೆಕಂದರ್ಪನಾಣೆ ಇದು ಎನಗೆ ಬಿರುದು 1 ಅಂದಂದು ಅವರು ಬೇಡಿದ ಇಷ್ಟಂಗಳನಿತ್ತೆಸಂದೇಹವಿಲ್ಲ ಸಂತತ ಸಲಹುವೆಮಂದಜನರೊಡನಾಡಿ ಮರುಳುಗೊಳದಿರು ಮನುಜ ಚೆಂದದಿಂದೆನ್ನ ಪೂಜೆಯನು ಮಾಡು 2 ಇಂದ್ರ ಗರ್ವಿಸಲವಗೆ ಸಾಂದ್ರ ಸುರತರುವ ಆನಂದನವನವನು ಪೊಕ್ಕು ಕಿತ್ತುತರಲುಒಂದಾಗಿ ರಣಕೆ ಬಂದು ನಿಂದಮರರನು ಕರುಣದಲಿಅಂದು ಪಾಲಿಸಿದೆ ಭಕ್ತರ ಬಂಧುವೆನಿಸಿ 3 ಇಂದುಮುಖಿ ಸಭೆಯಲ್ಲಿ ಕರೆಯಲಾಕ್ಷಣದೊಳಗೆಬಂದವಳ ಅಭಿಮಾನವನು ಕಾಯ್ದೆಇಂದುಧರ ಭಸ್ಮನುಪದ್ರದಲಿ ಬಳಲುತಿರೆಬಂದೊದಗಿ ಶಿವನÀ ಕಾಯಿದವನರಿಯಾ4 ಅಂಧಂತಮವ ದಾಟಿ ಅನಂತಾಸನಕೆ ಪೋಗಿಒಂದು ನಿಮಿಷದೊಳಗೆ ದ್ವಿಜನ ಸುತನ ತಂದೆಸಿಂಧುವಿನೊಳಗೆ ದೈತ್ಯನ ಕೊಂದು ಸಾಂದೀಪ -ನಂದನನÀ ಯಮನಪುರದಿಂದ ತಂದೆ 5 ನೃಪರ ಬಹುಬಲ ಜರಾ -ಸಂಧನ ಗಧೆಯ ಗಾಯದಿ ಕೊಲಿಸಿಅಂದವನ ದೆಸೆಯಿಂದ ನೊಂದ ನೃಪರನು ಬಿಡಿಸಿಕುಂದದುಡುಗೊರೆಯ ನಾ ಕೊಡಿಸಿ ಮೆರೆದೆ6 ಹಿಂದಾಗಜೇಂದ್ರನಿಗೊದಗಿದವನಾರು ಪಿತನಿಂದನೊಂದ ಪ್ರಹ್ಲಾದನ್ನ ಕಾಯ್ದವರದಾರುಮಂದರಗಿರಿಯನೆತ್ತಿ ಸುರರಿಗಮೃತ ಉಣಿ-ಸಿಂದಿರೆಯನಾಳ್ದ ಹಯವದನನರಿಯಾ7
--------------
ವಾದಿರಾಜ
ನಂದತೀರ್ಥರಾನಂದದಿ ಭಜಿಸಿರೊ ಬಂದು ಸಲಹಬೇಕೆಂದು ಬೇಡುತ ಪ ಶ್ರದ್ಧೇ ರಮಣನು ಮಧ್ಯಗೇಹರ ಶುದ್ಧಕುಲದೊಳು ಉದ್ಭವಿಸಿದ 1 ಗೋಪ್ರದಾಯಕ ವಿಪ್ರವರ್ಯಗೆ ಕ್ಷಿಪ್ರದಲ್ಲಿ ಸುಪ್ರಜ್ಞೆಯಿತ್ತ 2 ದೂಷ್ಯವಾದ ದುರ್ಭಾಷ್ಯ ಖಂಡಿಸಿ ಶಿಷ್ಯರಿಗೆ ಸದ್ಭಾಷ್ಯ ಪೇಳಿದ 3 ಯವನ ನೃಪತಿಯ ಭವನಕೆ ಪೋಗಿ ಅವನ ಅರ್ಧರಾಜ್ಯವನೆ ತಂದ 4 ದೇವಗಂಗೆಯು ಪಾವನಾಂಶನ ಸೇವೆಮಾಡಿ ತಾ ಪಾವನಳಾದ 5 ಸಿರಿ ಸ್ವಾಮಿ ನೃಹರಿಯ ಪ್ರೇಮಬಲದಿ ನಿಸ್ಸೀಮರಾದ 6
--------------
ವಿದ್ಯಾರತ್ನಾಕರತೀರ್ಥರು
ನದಿಗಳು ಭಾಗೀರಥ್ಯಾದಿ ನದಿಗಳ ತಾರತಮ್ಯ ನಿಜ ಭಾಗವತ ತಿಲಕ ನಿಮಿರಾಜಗೊಲಿದು ವಸಿಷ್ಠ ರಾಗದಲಿ ಕೇಳಿ ಜನರಯ್ಯಾ ಪ ಒಂದು ದಿನ ಗೋದಾವರಿಯ ತಟದಿ ನಿಮಿರಾಜ ಸಂದು ಯಜ್ಞವ ಮಾಡುತಿರಲಾಗ ಪರಮೇಷ್ಠಿ ನಂದನೆನಿಪ ವಶಿಷ್ಠ ಮಹಮುನಿ ನಡೆತಂದ ಮೇಧಾಗಾರಕೆ ಬಂದ ಯತಿವರನ ಮಣಿಪೀಠದಲಿ ಕುಳ್ಳಿರಿಸಿ ಸುಂದರಾಧಿಪ ಬೆಸಸಿದಾ 1 ವ್ರತಿಪತಿ ವಶಿಷ್ಠ ವೈಷ್ಣವಕುಲ ಶಿರೋರತುನ ಶ್ರುತಿಶಾಸ್ತ್ರ ಸರ್ವಜ್ಞ ಗಂಗಾದಿ ಪುಣ್ಯತೀ ಮತ್ಪಿತನೆನುತ ಪದಕೆರಗುವಾ ಕ್ಷಿತಿಪನೋಕ್ತಿಯ ಕೇಳುತಾನಂದ ಶರಧಿಯೊಳು ಗತನಾಗಿ ರೋಮ ಲಕ್ಷಣ ಕಳೇವರದಿ ಪುಳ ನೃಪತಿಗಿಂತೆಂದನು 2 ಕೇಳು ಜನನಾಥ ಮಹಭಾಗ ನಿನ್ನಯ ಪ್ರಶ್ನ ದೇಳಿಗೆಗೆ ಎನ್ನ ಸಂತೋಷ ಕಲ್ಪತರು ತ ಶಿಷ್ಯರೊಳು ಮೌಳಿಮಣಿ ನೀನಹುದು ನಿಖಿಳ ನದಿಗೊಳಿಪ್ಪ ಶ್ರೀಲೋಲನ ಸುಮೂರ್ತಿಗಳು ತಾರÀತಮ್ಯ ಸುವಿ ಮಾನವ ಇದನಾಲಿಪುದು ನೀನೆಂದನು 3 ಹರಿಪಾದನಖದ ಸಂಸ್ಪರ್ಶ ಮಾತ್ರದಿಂದಲಿ ಸುರತರಂಗಿಣಿ ಶ್ರೇಷ್ಠಳೆನಿಸುವಳು ನದಿಗಳೊಳು ದೊರೆಮೆನಿಪನಾ ತೀರ್ಥಕೆ ಸರಿತಾಗಗಣ್ಯ ಗೋದಾವರಿ ನಳಿನಿಗಿಂ ಕೊರತೆಯೆನಿಪಳೈ ವತ್ತು ಗುಣದಲಿ ಶಂಖ ಚರಣ ಸುಗದಾಬ್ಜ ಶೋಭಿತ ವೀರನಾರಾಯಣ- ರಸೆನಿಪನಾ ಸಲಿಲಕೆ 4 ಹರಜಟೋದ್ಭವ ಕುಶಾವರ್ತಿಗೆ ಸಹಸ್ರಗುಣ ಚಾರು ಕಂ ಬುರಲಿ ವಾರುಚಿ ಧನುರ್ಧಾರಿ ಯಮನಂದನಲಿ ವಿಹರಿಸುತಿಹನಾಜಲದೊಳು ತುರುಗಾಯ್ದ ದೇವನಂಗಜ ನದಿಗೆ ಈರೈದು ವಾಗ್ದೇವಿ ಶರಧಿಯೊಳು ಪು ಗೋದ ರಂಗನಾಥನೆನಿಪ 5 ಆ ಯಮಳನದಿಗಳಿಗೆರಡು ಗುಣಾಧಮ ಸರಯು ತೋಯಾಧಿಪತಿ ರಾಮ ಸರಯು ನೀರೆಂದು ಗುಣ ವಿಹಾಯ ಸಮಮಣಿತನಯಳೆ ಸ್ಥಾಯಕೆ ಚತುರ್ಬಾಹು ವಿಷ್ಣು ಕಾವೇರಿಗೆ ನಾಯಕ ವರಾಹದೇವಾ6 ಸಿಂಧು ಭವನಾಶಿಗೀರ್ವರು ಸಮರು ಕ್ಷೀರಾಬ್ಧಿ ಮಂದಿರ ನೃಸಿಂಹರಲ್ಲಿಹರು ಭವನಾಶನಿಗೆ ತಂದೆಯೆನಿಪ ತ್ರಿವಿಕ್ರಮ ಒಂದೆನಿಸುವುವು ನಾಲ್ಕು ನದಿಗಳು ಗುಣಗಳಿಂದ ಮುಂದಿಹ ಪದದಿ ಪೇಳ್ವೆ ಪೆಸರು ಹರಿರೂಪ ನೆಲ ತಮ್ಮಿಂದೀರಗಿಂತೆಂದನೂ 7 ವಾಜಿವದನು ಮಂಝರಾನದಿಯೊಳಿಹನು ನವ ರಾಜೀವನಯನ ಶ್ರೀಧರ ಭೀಮರಥಿಯೊಳಿಹ ವಿರಾಜಿಪ ಮಲಾಪಹಾರಿ ಭಾಜನದೊಳಿಪ್ಪ ದುಷ್ಟ ಜನರನು ಮರ್ದಿಸುವ ಶ್ರೀ ಜನಾರ್ದನ ನಾಲ್ಕು ನದಿಗಳು ದ್ವಿಗುಣದಿಂದಾ ನಿತ್ಯ ನೈಜಭಕ್ತಿ ಜ್ಞಾನದಿ 8 ಭೀಮರಥಿ ಸಮ ಪಿನಾಕಿನಿಯೊಳಗೆ ಕೇಶವನು ಭೂಮಿಯೊಳು ಪೃಥಕು ಪೃಥಕು ಸುಖ ಜ್ಞಾನದಿ ಶ್ರೀ ಮನೋರಮ ಕೇಶವಾದಿ ರೂಪಗಳಿಂದ ಸ್ವಾಮಿಯೆನಿಸುವನಲ್ಲ ಸ್ನಾನಾದಿ ಸತ್ಕರ್ಮ ಮೋಕ್ಷ ಗಳೀವನೊ 9 ಈ ನದಿಗಳೆರಡು ಗುಣ ಪುಷ್ಕರಣಿನಿಚಯ ನ್ಯೂನವೆನಿಪವು ಮುಕ್ತಿ ದತ್ತಾತ್ರಯನು ಕೃಷ್ಣ ಮಾನಸ ಸರೋವರದೊಳು ಜ್ಞಾನಾತ್ಮ ವಾಮನನ ಶ್ರೀ ಭೂ ಸಹಿತ ಪ್ರಸ ನ್ನಾನನಾಬ್ಜದಿದರೆ ಜಘನಸ್ಥಿತಾಭಯ ಸು ಧೇನಿಪುದು ಎಂದಾ 10 ದೇವಖಾತಗಳು ಶತಗುಣಕಡಿಮೆ ಮಾನಸ ಸ ರೋವರಕೆ ಇತರ ಪುಷ್ಕರಣಿಗಳಿಗಲ್ಪಗುಣ ಪಾವನವಗೈವ ಕ್ಷುದ್ರಾ ಪ್ರಾವಹಿಗಳೀರೈದು ಗುಣದಿ ಕಡಿಮೆ ಲಕ್ಷ್ಮೀ ದೇವಿಪತಿ ನಾರಾಯಣನ ಚಿಂತಿಸೆಂದು ನೃಪ ಭವನೋವ ಪರಿಹರಿಪುದೆಂದು 11 ಈ ಸಲಿಲತೀರ್ಥಂಗಳೆರಡು ಗುಣದಿ ತಟಾಕ ಶೇಷಪರ್ಯಂಕ ಅಚ್ಯುತನಿಹನು ಸಜ್ಜನರ ವಾಸವಾಗಿಹನು ಚಕ್ರಿ ಘೋಷಗೈವ ಧರಾಂತಕೂಪಗಳೊಳಿರುತಿಹ ನಾ ಕೇಶನದಿಗಳ ತಾರÀತಮ್ಯ ರೂಪಗಳನುಪ ಪಾಸನಗೈವುದೆದೆಂದು 12 ಈ ತೆರದಿ ನಿಮಿರಾಜಗೋಸುಗ ವಶಿಷ್ಠಮುನಿ ತಾ ತಿಳಿದ ಕಥಾತಿಶಯ ಪರಮ ವಿಬುಧರು ಧ ಪ್ರೀತಿಯಿಂದಾಚರಿಸಲು ಶೀತಾಂಶು ಕಮಲಾಪ್ತರುಳ್ಳನಕ ಸುರಪತಿ ನಿ ಕೇತನದಿ ವಿವಿಧ ಭೋಗಗಳಿತ್ತು ಶ್ರೀ ಜಗ ಸಂಪ್ರೀತಿಯಿಂದನುರಾಗದೀ 13
--------------
ಜಗನ್ನಾಥದಾಸರು
ನಂದಿಯನೇರಿ ಬರುತಿಹ ಸುಂದರನ್ಯಾರೆ ಪೇಳಮ್ಮಯ್ಯ ಪ. ಚಂದ್ರಚೂಡ ಗಂಗಾಧರ ಶಂಕರ ಸುಂದರ ಗೌರೀರಮಣ ಕಣಮ್ಮಾ ಅ.ಪ. ಕರದಿ ತ್ರಿಶೂಲ ಧರಿಸಿದನಾರೆ ಪೇಳಮ್ಮಯ್ಯ ವರ ಡಮರುಕಪಾಲ ಪಿಡಿದಿಹನಾರೆ ಪೇಳಮ್ಮಯ್ಯಾ ಕರುಣವ ತೋರುತ ಸಕಲರ ಮನ ಮಂದಿರದಲಿ ಪೊಳೆಯುವ ಗಿರಿಜಾ ರಮಣ ಕಣಮ್ಮ 1 ಗಜ ಚರ್ಮಾಂಬರ ಧರಿಸಿಹನಾರೆ ಪೇಳಮ್ಮಯ್ಯ ತ್ರಿಜUನ್ಮೂರುತಿ ನೊಸಲಿಗೆ ಭಸ್ಮವ ಧರಿಸಿಹನಾರೆ ಪೇಳಮ್ಮಯ್ಯ ಋಜುಗುಣದೊಡೆಯಗೆ ರಜತಾದ್ರಿನಿಲಯ ನಿಜ ಪಾರ್ವತೀರಮಣ ಕಣಮ್ಮಾ 2 ಶೇಷನಾಭರಣವ ಧರಿಶಿಹನಾರೆ ಪೇಳಮ್ಮಯ್ಯ ಸೋಸೀಲಿ ಮೂಗಣ್ಣವನಾರೆ ಪೇಳಮ್ಮಯ್ಯ ವಾಸುಕಿಶಯನ ಶ್ರೀ ಶ್ರೀನಿವಾಸನ ವಾಸ ಶಂಭೋ ಶಂಕರನು ಕಣಮ್ಮಾ 3
--------------
ಸರಸ್ವತಿ ಬಾಯಿ
ನನ್ನ ಗುರು ಯೆಂತಪ್ಪ ದೊಡ್ಡವನೋ [ಘನ್ನ] ಸೀತಾಮನೋಹರ ಪ ನಿನ್ನೆಯೆನಗೊದಗಿದ ದು:ಖದಿ ಬನ್ನಬಡಿಸುವದಾಗಿ ಅಳುತಿರೆ ಚನ್ನಕೇಶವನಾಗಿ ತಾನೆ ಪ್ರ ಸನ್ನನಾದ ಮಹಾತ್ಮ ಜಯಜಯ1 ಭಗವದಾಜ್ಞೆಯನನುಗೊಳಿಸದಲೆ ಕುಗುಣ ಕುಚಿತದೊಳಿರಲು ಬಂದದ ಸಿಗಿದು ಹೊಡೆದು ಬಿಸಾಡಿದಾ ನಮ್ಮ ಸಗುಣ ಸಾಕ್ಷಾತ್ಕಾರ ನಿರ್ಗುಣ2 ದುರ್ಗುಣವು ದುಸ್ಸಂಗ ದುವ್ರ್ಯಾವಾರದೊಳು ದುರ್ಗತಿಕುಮತಿ ನಾನಧಿಕನಾಗಿರೆ ಸ್ವರ್ಗನಾಯಕ ಬಂದುಮೆನ್ನುಪ ಸರ್ಗಮಳಿದ ಮಹಾನುಭಾವಾ 3 ಅರಿಯದರಿಲಿಕೆ ಅರಿಗಳಾರನೂ ಹರಿಯೆ ತಾನಾಗೈದು ತೋರಿದ ಪರಮಗುರು ಶ್ರೀ ತುಲಸಿರಾಮನ ಚರಣ ಸೇವಕನಾದೆನಹುದೆಲೊ 4
--------------
ಚನ್ನಪಟ್ಟಣದ ಅಹೋಬಲದಾಸರು
ನಂಬಿ ಭಜಿಸಿರೈಯ್ಯಾ ಶರಣರು ಪ ನಂಬಿ ಭಜಿಸಿರೈಯ್ಯಾ ಶರಣರು|ಅಂಬುಧಿವಾಸ ಶ್ರೀ ದೇವನಾ| ಹಂಬಲ ಬಿಡಿ ಅನ್ಯ ಮಾರ್ಗದಾ| ಅಂಬುಜಾಂಬಕ ಪರದೈವನು ಗಡಾ| 1 ತ್ರಿಮೂರ್ತಿಯೊಳು ಮಿಗಿಲಾರೆಂದು ನೋಡಾ| ಲಾ ಮುನಿಯಮರರು ಕಳುಹಲು| ಪರದೈವವೆಂದನು ಗಡಾ|2 ದೇವಾ|ಸುರರೆಲ್ಲ ತವಕದಿ ಕುಳಿತಿರೇ| ಇಂದಿರೆ ಬಂದು|ಹರಿಗೆ ಮಾಲೆಯ ಹಾಕಿದಳು ಗಡಾ 3 ಶ್ರೀ ಚರಣವ ತೊಳೆಯಲು| ಸುರನದಿ ಬರೆ| ಮೃಢ ಶಿರಸದಿ ಧರಿಸಿದ ಗಡಾ4 ಮೂರಕ ಮೂರ ಮೂರುತಿಯಾಗಿ ಗುಣ| ಮೂರಕದೂರವದೆನಿಸುವಾ| ಸಾರಿದವರಾ ಕಾವಾ ಮಹಿಪತಿಸುತ| ಸಾರಥಿಯಾಗಿ ರಕ್ಷಾಪ ಗಡಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಂಬಿದೆ ನಿನಪಾದ ಅಂಬುಜಾಕ್ಷನ ಪ್ರಿಯಬೆಂಬಿಡದಲೆ ಯೆನ್ನ | ಕಾಯೋ |ಬೆಂಬಿಡದಲೆ ಯನ್ನ ಕಾಯೆಂದು ನಿನ್ನನುಹಂಬಲಿಸೂವೆ ಮೋಹನ್ನರಾಯಾ ಪ ದೋಷರಾಶಿಯನೀಗಿ | ದಾಸನ್ನ ಮಾಡಿದಋಷ್ಯಂಶರಾಗಿಹ ನಿಮ್ಮಾ |ಋಷ್ಯಂಶರು ವಿಜಯ ದಾಸರ ಪ್ರೇಮಕ್ಕೆಆಶ್ರಯನಾಗಿಪ್ಪ ಮೋಹನ್ನ 1 ಹೆಮ್ಮೆಯ ಪಡುವೆ ನಾ ನಿಮ್ಮವರವನೆಂದುದುರ್ಮಮತೆಯ ನೀಗೋ ಎನ್ನಾ |ದುರ್ಮಮತೆಯು ನೀಗಿ | ಭರ್ಮಗರ್ಭನ ಪಿತನಪೇರ್ಮೆ ದೊರಕಿಸೊ ಎನಗೆ ಮುನ್ನಾ 2 ಅಂಬುಜಾಂಬನಂಘ್ರಿ | ಅಂಬುಜ ತೋರೆಂದುಹಂಬಲಿಸಿ ಬೇಡುವೆ ನಿನಗೆ |ಹಂಬಲಿಸಿ ಬೇಡುವೆ | ಶಂಬರಾರಿಯ ತೇಜನಂಬಿ ಬಂದಿಹೆ ನಿನ್ನ ಅಡಿಗೇ 3 ವಿಷಯಧುಯ್ಯಲಿನಿಂದ | ಕ್ಲೇಶವಧಿಕವಯ್ಯ ವಿಷದಂತೆ ಕಾಣಿಸೊ ಜೀಯ |ವಿಷದಂತೆ ಕಾಣಿಸಿ | ಶೇಷವಿಲ್ಲಾಧಾಂಗೆ |ದೋಷವಳಿಸಿ ಕಾಯೊ ಜೀಯಾ 4 ನಿನ್ನ ವಂಶಜನಾಗಿ | ನಿನ್ನವರವನಾಗಿಉನ್ನಂತ ಮಹಿಮ ಶ್ರೀಹರಿಯಾ |ಉನ್ನಂತ ಮಹಿಮನು | ಅನ್ನಂತನ ಪಾದಕಾಣದಿದ್ದವನಿರೆ ವ್ಯರ್ಥ 5 ಪಂಚಾಶದ್ವತ್ಸರ | ಹಂಚಿಪೋಗುವ ಮುನ್ನಪಂಚರೂಪಾತ್ಮಕ ಹರಿಯಾ |ಪಂಚರೂಪಾತ್ಮ ವಿ | ರಿಂಚಿಪಿತನ ಪಾದಹಂಚಿಕಿಂದಲಿ ತೋರೊ ಮೋಹನ್ನ 6 ಉರುಗಾದ್ರಿವಾಸ ವಿಠಲಾತ್ಮಕನು ಶಿರಿಗುರುಗೋವಿಂದ ವಿಠ್ಠಲನ |ಗುರಗೋವಿಂದ ವಿಠಲನ ಚರಣಾರವಿಂದವತೋರಿ ಪೊರೆ ನಮ್ಮ ಹಿರಿಯಾ 7
--------------
ಗುರುಗೋವಿಂದವಿಠಲರು
ನಂಬಿರೋ ಮನವನುದಿನಾ ಪ ನಂಬಿರೋ ಮನವನುದಿನಾ | ನಂಬಿದರಿಂಬಾಗುವನಾ 1 ಸುರಮುನಿರಂಜನು ಸುರರಿಪು ಭಂಜನಾ | ನಿರುಪಮ ಕಂಜನಯನ ವದನಾ 2 ಈರೆರಡಾಸ್ಯನ ಪಿತ ಪದ್ಮಾಸ್ಯನೆ | ಈ ರೈದಾಸ್ಯನ ಕೊಂದವನಾ 3 ಅಸುರನ ಕಂದನ ನುಳಹಿದಾ ನಂದನ | ವಸುದೇವ ಬಂಧನ ಹರಿಸಿದನಾ 4 ಇಹಪರ ವಂದ್ಯನ ದೇವಕಿ ಕಂದನ | ಮಹಿಪತಿ ನಂದನ ಜೀವನಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಂಬು ನಂಬು ಶ್ರೀನರಹರಿ ಪಾದವÀ ನರನೇ ಪಾಮರನೆ ಪಾತಕ ಕೃಷ್ಣಾ ಮೂರ್ತಿಯನ್ನೇ ಪ ಸಾಧು ಸಜ್ಜನ ಸಂತರ ಸಲಹುವ ಸಕಲ ಲೋಕ ಕರ್ತನಾ ಮೇದಿನಿ ಭಕ್ತರ ಮನದಲಿ ಚರಿಸುವ ಮಂಗಳ ಮಹಿಮನ ಆದಿಮೂರುತಿ ಆನೇಕ ಚರಿತಾ ಅನಂತ ಅವತಾರನಾ ಅನುದಿನ ಮರೆಯದೆ ನೀ ಯಿನ್ನಾ 1 ಶ್ರೀನಿವಾಸ ಆಶ್ರಿತ ಜನಪೋಷಕ ಶಾಶ್ವತನಾಗಿಹನಾ ಗಾನಲೋಲ ಶ್ರೀವೇಣುನಾದನ ಕರಿರಾಜ ವರದನ ದಾನವಾಂತಕನ ದಶರಥತನಯನ ದೇವಾದಿದೇವನ್ನ ಮಾನವ ಮದನ ಜನಕನಾದನಾ 2 ಭೂಸುರ ನಾಯಕನ ಮಾಧವ ಗೋವಿಂದನ ಮುಕ್ಕುಂದನಾದ ಅವನಾ 'ಹೆನ್ನೆವಿಠ್ಠಲನಾ’ 3
--------------
ಹೆನ್ನೆರಂಗದಾಸರು
ನಂಬು ನರಮೃಗನಾ|ಮನುಜಾ| ಅಂಬುಧಿವಾಸ ಶ್ರೀ ದೇವನಾ ಪ ಕುಟಿಲ ಶಠಸುರನುಪಟಳ|ಘಟಿಸೆ ಖಟಮ ನವ್ಯಾಟಪ್ತ ಬಾಯೆನೆ ಶರಣಾ| ಖಟಖಠಾನೆಂದು ವಿಸ್ಫುಟವಾಗಿ|ಸ್ತಂಬ| ಛಟಛಟಾನೆನೆ ಬ್ರಮ್ಹಾಂಡ | ಘಟಪಟುವಂತೆ ಯಾರ್ಭಟದಿಂದಲೊಗೆದನಾ1 ಅರಿಯನರದವನ ಕರಳು ಸರಧರಿಸಿ| ಭರದಿ ಪೊರೆದೆ ಡಂಗುರನಾ ಹರನಾ ಗುರುಮಹೀಪತಿ ಪ್ರಭು ಚರಣಚರನೆನಿಸಿದ| ಸ್ಮರಹರ ಅಜಸುರ ಪರರೊಡೆಯನಾ2
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಂಬುಗೆ ಪಡಿಯಿರೋ ದೇವರ ದೇವನಾ ಪ ಧಾಮ ಸಾರ್ವಭೌಮ ತಾಮರಸ ಸಖ ಆ ಮಹಾಕುಲೋದ್ದಾಮ ಆಹವ ಭೀಮ| ಸ್ವಾಮಿ ಸಕಲರ ಕಾಮಿತಾರ್ಥವ ನೇನಿ ಮುನಿಜನ ಪ್ರೇಮಿ| ಚರಿತ ನಿಸ್ಸೀಮಿಯಾ1 ಧಾಟಿಯಲಿ ನರನಾಟಕ ವಿಡಿದ ಆಟವಾಡಲು ನೀಟಾ| ಕೋಟಿ ಕೋಟಿ ನಿಶಾಟ ದರ್ಪೋಚ್ಚಾಟ ಮಾಡಿದ ಸ್ಪೋಟಾ| ನೀಟ ಶರಣ ಮುಕುಟಿಗಿತ್ತನು ಪೀಠಾ| ಧೀಟ ಶ್ರೀ ಜಟೆ ಜೂಟ ವಂದಿತ ಪಾಟರಹಿತ ಸ್ಪರಾಟನಾ 2 ಅಂದು ಇಂದೇ-ನೆಂದಿಗಾದರ ವಂದೇ ದಯದಿಂದ| ಛಂದ ಛಂದದ-ಲಿಂದ ಭೋಕ್ತರ ಬಂಧು ಭಕ್ತರ ವೃಂದ| ಸುಂದರಾನನ ಕುಂದರದನ ಸುಮಂದ ಹಾಸಾನಂದ| ಇಂದಿರೈರಸ ತಂದೆ ಮಹಿಪತಿ ಕಂದ ಪ್ರೀಯ ಮುಕುಂದನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಮಾಮಿ ದಿವ್ಯ ತರಂಗೆ ಶಿವೆಗಂಗೆ ಕೃಪಾಪಾಂಗೆ ನಮಾಮಿ ಪ ದಯಾಸಾರೆ ಸುಧಾಕಾರೆ ಧಿಯಾದೊರೆ ಗುಣಾಕರೆ ತ್ರಯೀವಾಣಿ ಮಹಾವೇಣಿ ಸುರೂಪಿಣಿ ನಮಾಮಿ 1 ಶುಭಂ ದೇಹಿ ಕೃಪೆ ಪಾಹಿ ಶುಭೇ ಭಾಗೀರಥೀ ಸತೀ ಪರಂಪಾರೇ ಜಲಾಧಾರೆ ಜಿತಕ್ಷೀರೆ ನತಾಮರೆ ನಮಾಮಿ 2 ಗಿರೀಶಾಂಕಾತ್ ಪರಂಶೈಲಾತ್ ಧರಾಂ ಪ್ರಾಪ್ತೇ ಪುನೀಹಿಮಾಂ ಮಹಾಭೂತೆ ಸುವಿಖ್ಯಾತೇ ಧರಾನಾಥೇ ಸತಾಂಗತೇ ನಮಾಮಿ 3 ವರಂಧೇನುಪುರಸ್ತೋಹಂ ಭಜೆ ದೇವೀಂ ಭವಾಪಹಾಂ ಕನ್ಯಾಂ ಸುಪಾವನಾಂ ನಮಾಮಿ 4
--------------
ಬೇಟೆರಾಯ ದೀಕ್ಷಿತರು
ನಮಿಸುವೆನು ನಮಿಸುವೆನು | ವಿಜಯದಾಸರಿಗೇ ಪ ಅಮಮ ಮಹಿಮೆಗಳ್ನಿಮ್ಮ | ವರ್ಣಿಸಲು ಅಳವೇ ಅ.ಪ. ಕವಚ ವಿಜಯವ ಪಠಿಸಿ | ಅವನಿಯೊಳು ಸಜ್ಜನರುಬವಣೆಗಳ ಕಳಕೊಂಡು | ಸುಖದಿಂದ ಜೀವಿಪರೋ |ಅವರನುಗ್ರಹದಿಂದ | ಭವಣೆ ಎನೆ ಮದ್ಭಯವುಸವೆದು ಪೋಗುತ ಗ್ರಂಥ | ಮುದ್ರಣವ ಮುಂಬರಿಸಿದೆ 1 ಹಯಾಸ್ಯ ನಂಘ್ರಿಯಲಿಕಾರ್ಯಮುಂಬರಿಸಿರುವ | ಮಹ ಕಾರುಣ್ಯ ಮೂರ್ತೇ 2 ಹರಿಗುರು ಗೋವಿಂದ | ವಿಠಲ ಚರಣಬ್ಜವನುಪರಿಪರಿಯಲಿಂದತುತಿಸಿ | ಮರಳಿ ಕಾಂಬುವ ಸುಹವನಾವರ ವಿಜಯ ದಾಸಾರ್ಯಾ | ಕರುಣಿಸೆನೆ ಬಿನ್ನಪವಕರಗತವ ಮಾಡುವುದು | ಉರುಕರುಣ ಸಂಪನ್ನಾ 3
--------------
ಗುರುಗೋವಿಂದವಿಠಲರು
ನಮೋ ನಮೋ ನಾರಾಯಣ ನಮೋ ಶ್ರುತಿ ನಾರಾಯಣ ನಮೋ ಬಾದರಾಯಣ ನರನ ಪ್ರಾಣ ಪ ಶಿವನ ಮೋದದಲಿ ಪಡೆದೆ ಶಿವರೂಪದಲಿ ನಿಂದೆ ಶಿವನೊಳಗೆ ಏರಿದೆ ಶಿವನಿಗೊಲಿದೆ ಶಿವಗೆ ನೀ ಮಗನಾದೆ ಶಿವ ತಾತನೆನೆಸಿದೆ ಶಿವನ ಮಗನಾ ಪಡೆದೆ ಶಿವನ ಕಾಯ್ದೆ1 ಶಿವಗೆ ಸಹಾಯಕನಾದೆ ಶಿವನ ಕಂಗಡಿಸಿದೆ ಶಿವನ ಧನುವನು ಮುರಿದೆ ಶಿವನೊಲಿಸಿದೆ ಶಿವನ ಜಡ ಮಾಡಿದೆ ಶಿವನ ಒಡನೆ ಬಂದೆ ಶಿವಮುನಿಗೆ ಉಣಿಸಿದೇ ಕೇಶವನೆನಿಸಿದೇ 2 ಶಿವನ ಜಡೆಯೊಳಗಿದ್ದ ಶಿವಗಂಗೆಯ ಪೆತ್ತೆ ಶಿವನ ಕೂಡಲಿ ಕಾದಿದವನ ಭಾವ ಶಿವ ಭಕ್ತನ್ನ ನಿನ್ನವನಿಂದ ಕೊಲ್ಲಿಸಿದೆ ಶಿವನ ಶೈಲವನೆತ್ತಿದವನ ವೈರಿ3 ಶಿವ ನುಂಗಿದದ ನುಂಗಿದವನ ಒಡನಾಡುವ ಶಿವ ಪರಾಶಿವ ನಿನ್ನ ಶಿವ ಬಲ್ಲನೇ ಯವೆ ಇಡುವನಿತರೊಳಗೆ ಧವಳ ಹಾಸಾ4 ಶಿವನ ಮೇಲಿದ್ದ ಸಹಭವೆ ರಮಣ ಸರ್ವದಾ ಶಿವನೊಳಗಿಳಿದ ಶಿಷ್ಯನಿವ ಹರಾತೀ ತಲ್ಪ ಶಿವ ಸಮಾನಿಕ ರೂಢ ಶಿವನ ಮನೆ ತೊಲಗಿಸುವ ಶಿವ ಬಾಂಧವಾ 5 ಶಿವನ ಧೊರಿಯೆ ಜ್ಞಾನ ಶಿವ ಹಚ್ಚುವದೆ ಕೊಡು ಶಿವಮಣಿ ಎನಿಸುವ ಸ್ತವ ಪ್ರಿಯನೇ ವಾಹನ ವೈರ ಶಿರವ ತರಿಸಿದೆ ದೇವ ಶಿವ ಪ್ರತಿಷ್ಠಿಸಿದೆ ಶಿವಗೆ ಕಾಣಿಸದಿಪ್ಪೆ6 ಶಿವನ ಸೋಲಿಸಿದವನ ಜವಗೆಡಿಸಿದೆ ಶಿವನು ಕುದರಿಯ ಹೆರವ ಅವನು ಕಾಯಿದ ಗೋವ ಶಿವನವತಾರ ಶಸ್ತ್ರವನು ಹಳಿದೆ 7 ಶಿವನಧರ್Àನಾಗಿ ದಾನವನು ಕೊಂದ ಮಹಿಮಾ ಶಿವಋಷಿ ಪೇಳಿದ ಯುವತಿ ರಮಣಾ ಶಿವನ ವೀರ್ಯವ ಧರಿಸಿದವನ ಮುಖದಲಿ ಉಂಬ ಅವರ ಬೆಂಬಲವೇ ಯಾದವಕುಲೇಶಾ 8 ಶಿವಗೆ ತ್ವಂಚ ಬಾಹುಯೆಂದು ಪೇಳಿ ಮೋಹ ದಿವಿಚಾರಿಗಳ ತಮಸಿಗೆ ಹಾಕುವೆ ಶಿವಮೂರುತಿ ನಮ್ಮ ವಿಜಯವಿಠ್ಠಲರೇಯ ಶಿವನಾಳು ಮಾಡಿ ಆಳುವ ದೈವವೇ9
--------------
ವಿಜಯದಾಸ
ನರ ಹರಿನಾಮವ ನೀ ನೆನೆದರೆ| ಧರಿಯೊಳು ಸಾಲದೇ ಇಹಪರ ದೋರದೆ| ಬರದೇ ಸಾಯಾಸ ಬಡುವರೇ ಪ ಆದಿ ಯುಗಂಗಳಲಿ ತಾಪಸರು| ಸಾದರ ಬಹುದಿನದಿಂದಾ| ಸಾಧಿಸುವಗತಿ ಕೊಡುವ ನೊಂದೆ ಕ್ಷಣದಿ| ಶ್ರೀಧರ ತಾ ದಯದಿಂದಾ1 ಸಂತರ ಸಂಗದಿ ಶ್ರವಣವ ಮಾಡಿ| ಆಂತರ್ಭಾವನೆ ಬಲಿಸೀ| ಭ್ರಾಂತ ನೀನಾಗದೆ ಅನ್ಯ ಸಾಧನದಲಿ| ಸಂತತ ಕೀರ್ತನೆ ಬೆರೆಸೀ2 ಸಾವಿರಕೊಂದೆ ಈ ನುಡಿ ನಿಜವೆಂದು| ಸಾವಧವನಾದವ ಮನುಜಾ| ಭಾವಿಸು ಗುರುಮಹಿಪತಿ ಪ್ರಭು|ನುಡಿಸಿದ| ಆವನಂಬವನೇ ದನುಜಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು