ಒಟ್ಟು 7503 ಕಡೆಗಳಲ್ಲಿ , 128 ದಾಸರು , 4808 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ಮರಿಸು ಸಂತತ ಹರಿಯನು ಮನವೇ ಪ ಸ್ಮರಿಸು ಸಂತತ ಹರಿಯ ಕರುಣಾಳುಗಳ ದೊರೆಯ ಸರಸಿಯೊಳಗಂದು ಕರಿಯ ನರನ ಸಂಗರದೊಳಗೆ ಕಾಯ್ದು ದೊರೆಯ ಜಗದೀಶ ಅ.ಪ. ಪರ ಸೌಖ್ಯ ದಾನಿಗಳರಸನೆಂದು ಸಾನುರಾಗದಿ ನಂಬಿದ ಜನಕೆ ಸುರ ಮೋದ ಸಲಿಸುವ ಶ್ರೀಮ ಪತಿ ಸಾಮ ಗಾನ ಲೋಲನ ಪ್ರಸಾದಾ ಪಾದಾ 1 ಎಲ್ಲೆಲ್ಲಿ ನೋಡೆ ಮತ್ತಲ್ಲಲ್ಲಿ ನೆಲೆಸಿಹನು ಬಲ್ಲಿದನು ಭಾಗ್ಯವಂತ ನಂಬಿದವರಿ ಗಲ್ಲದೆ ಒಲಿಯ ಭ್ರಾಂತಾ ದುಷ್ಟ ಜನ ರೊಲ್ಲ ನಿಶ್ಚಯ ಮಹಂತಾರೊಡೆಯ ಕೈ ವಲ್ಯದಾಯಕನ ಇಂಥಾ ಪಂಥಾ 2 ಅಣುವಿನೊಳಗಣುವಹನು ಘನಕೆ ಘನತರನಹನು ಅಣು ಮಹದ್ವಿಲಕ್ಷಣಾ ಕಲ್ಯಾಣ ಗುಣಜ್ಞಾನ ಘನಲಕ್ಷಣಾ ಸಂಪೂರ್ಣ ಮನ ಮುಟ್ಟಿ ಕರೆದಾಕ್ಷಣಾ ಬಂದೊದಗಿ ಕುಣಿವ ಲಕ್ಷ್ಮೀ ವಕ್ಷನಾ ಅನಪೇಕ್ಷನಾ 3 ಚೆಲುವರೊಳಗತಿ ಚೆಲುವ ಸುಲಭರೊಳಗತಿ ಸುಲಭ ಒಲಿವ ಸರಿ ಬಂದ ತೆರದಿ ಗುಣಕರ್ಮ ಕುಲಶೀಲಗಳನೆಣಿಸನರಿದೀ - ಭಕುತಿ ಫಲವ ಕೊಡೆ ತಾ ತವಕದಿ ಶಬರಿ ಎಂ ಶರಧಿ ಭರದೀ 4 ನೋಡಿ ನೋಡಿಸುತಿಹನು ಮಾಡಿ ಮಾಡಿಸುತಿಹನು ನೀಡಿ ನೀಡಿಸುವ ಪಿಡಿವಾ ಪಿಡಿಸುವನು ಬೇಡಿ ಬೇಡಿಸುವ ಬಡವರೊಡೆಯ ಕೊಂ ಡಾಡುವರ ಒಡನಾಡುವಾ ಈ ಮಹಿಮೆ ಗೀಡೆಂದು ಆವ ನುಡಿವಾ ಕೆಡುವಾ 5 ಕೋದರಾದ್ಯಮರ ವ್ರಾತಾ ಸಹಿತ ಮಹ ದಾದಿ ಪೃಥ್ವಂತ ಭೂತಾದೊಳು ನಿಲಿಸಿ ಕಾದುಕೊಂಡಿಹ ವಿಧಾತಾ ಅಂಡತ್ರಿದ ಶಾಧಿಪನ ಸೂತ ಸಚ್ಚರಿತಾ 6 ನಿಗಮ ಸಂಚಾರ ಶ್ರೀ ಜಗನ್ನಾಥವಿಠಲರೇಯಾ ತನ್ನ ಪಾ ದಗಳ ಧ್ಯಾನಿಪರ ನೋಯಾಗೊಡದಂತೆ ಮಾಯಾ ರಮಣ ನಮ್ಮ ನಗಲಿ ಸೈರಿಸನು ಪ್ರಿಯಾ ಧ್ಯೇಯಾ 7
--------------
ಜಗನ್ನಾಥದಾಸರು
ಸ್ಮರಿಸುಮನವೆ ನೀ ದೇವಕಿ ಕಂದನ ಧ್ರುವ ಪಾಲನ ಕುರುಳರ ನಾಶನ 1 ಉರಗಶಯನನ ಗರುಡವಾಹನನ 2 ಸಿರಿಯ ಲೋಲನ ಪರಮ ಪಾವನನ 3 ಸುರರಾಜವಂದ್ಯನ ಕರಿರಾಜಪ್ರಿಯನ 4 ಗಿರಿಯನೆತ್ತಿದನ ತುರುಗಳಗಾಯದ್ದವನ 5 ಸಾರ ಸಂಜೀವನ 6 ಭಂಜನ ದುರಿತ ನಿವಾರಣ 7 ಸರ್ವಾರ್ಥಕಾರಣ ಹರುಷದ ಜೀವನ 8 ಪರಿಪೂರ್ಣವಿಹನ ಪೂರಿತ ಕಾಮನ 9 ಗುರುಶಿರೋರತ್ನನ ಕರುಣಲೋಚನ 10 ಸ್ಮರಿಸು ಮನವೆ ನೀ ಮಹಿಪತಿ ಈಶನ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ಮರಿಸುವ ನರನೇ ಧನ್ಯ ಸನ್ಮಾನ್ಯ ಪ ಸ್ಮರಿಸುವರಿಗೆ ಸುರತರುಕಲ್ಪ ವಿಭರಾಮ ಪುರದಿ ಶ್ರೀಹರಿ ಧ್ಯಾನಪರ ಶ್ರೀ ಕೃಷ್ಣಾಚಾರ್ಯರ ಅ.ಪ ಭರತ ಭೂಮಿಯೊಳವತರಿಸಿ ದೇವಾಂಶದಿ ಪುರುಹೂತನಂತೆ ಗಜಾಂತ ವೈಭವದಿಂದ ಮೆರೆಯುತ ತಮ್ಮಯ ಚರಣಾರಾಧಕರನು- ದ್ದರಿಸಲೋಸುಗದಿ ಸಂಚರಿಸುತ ಮುದದಿ ಸಂದರುಶನದಿಂಧಾಘವ ಕಳೆದು ಬಲು ಕರುಣದಲಿಷ್ಟಾರ್ಥವ ಗರಿದು ಬಹು ಶರಣು ಜ- ನರ ಪೊರೆವ ಭೂಸುರರೊಳು ಮರುತ ಮತಾಬ್ಧಿ ಚಂದಿರನೆನಿಸಿದವರ 1 ವರ್ಣಿಸಲೊಶವಲ್ಲ ಚರಣಯುಗ್ಮಾರಭ್ಯ ಶಿರಪರಿಯಂತರ ಗುರುಗಳಾಕೃತಿಯನ್ನು ನಿರುತ ಧ್ಯಾನಿಪರಿಗೆ ಪರಮ ಮಂಗಳವೀವ ಪರಿಶೋಭಿಸುವ ರತ್ನಾಭರಣದಿಂದೋಪ್ಪುವ ಸ್ವರ್ಣತುಲಸಿ ಮುಕ್ತಹಾರ ಭೂಷಿತ ಕಂಧರ ಸುಂದರವಾದ ಮುಖದೊಳು ಮಂದಸ್ಮಿರ ಕಸ್ತೂರಿಯಂತೆ ಪರಿಮಳಾನ್ವಿತ ಶರೀರ ಮಂತ್ರಾಲಯ ಗುರುರಾಘವೇಂದ್ರರ ಕರುಣಾಸುಪಾತ್ರರ2 ಚಿರಕಾಲ ಶೇವಿಪ ಪರಮ ವಂಧ್ಯರಿಗೆಲ್ಲ ವರಪುತ್ರ ಸೌಖ್ಯವ ಕರುಣಿಸುವರು ಸತ್ಯ ಅಪರಿಮಿತ ಮಹಿಮರೆಂದರಿಯದೆ ಇವರನ್ನು ಜರಿಯಲಾಕ್ಷಣದಲಿ ಅರಿತು ಭೀಕರವಾದ ಉರಗರೂಪವ ತೋರುತ ತ್ಯಜಿಸಿ ಮತ್ತೆ ನಿಜರೂಪದಿಂದಿರುತ ನೋಳ್ಪರಿಗತ್ಯಾಶ್ಚರ್ಯ ಸದ್ಗುಣ ಭರಿತ ಕಾರ್ಪರ ನರಹರಿಯ ಪರೋಕ್ಷದಿ ನಿರುತ ಸುಖಿಪರಂಘ್ರಿ 3
--------------
ಕಾರ್ಪರ ನರಹರಿದಾಸರು
ಸ್ಮರಿಸುವರಘಹರ ರಾಘವೇಂದ್ರ ಗುರುಆರುಮೊರೆ ಇಡುವೆನು ತವಪದದಲ್ಲೀ ಪ ಸುರತರು ನಿನ್ನನು | ನಿರುತದಿ ನುತಿಸುವವರವನೆ ಕರುಣಿಸು | ಗುರು ರಾಘವೇಂದ್ರ ಅ.ಪ. ಕೃತ ಯುಗದೊಳು ತಾ | ಮುನಿ ಕಶ್ಯಪನಸುತನಲಿ ಮೋದದಿ | ಸುತನಾಗಿ ಜನಿಸುತ |ಪಿತನತಿ ಬಾಧೆಗೆ | ಅಳುಕದೆ ಮನ್ಮಥಪಿತನಧಿಕೆಂದು ಬಹು | ಸಾರಿದೆ ಗುರುವರ 1 ಜನಪ ಪ್ರತೀಪನ | ಸುತ ವರನೆನಿಸುತಜನಿಸುತ ಪ್ರೀತಿಲಿ | ದ್ವಾಪರದಲ್ಲೀ |ಘನಬಲ ಬಾಹ್ಲೀಕ | ನೆನಿಸುತ ನೀನೂಅನಿರುದ್ಧ ಮೂರ್ತಿಯ | ಸೇವಿಸಿ ಮೆರೆದೆ 2 ನ್ಯಾಯಾ ಮೃತ ಚಂ | ದ್ರಿಕೆಗಳ ರಚಿಸುತಮಾಯ ಮತವನು | ಪರಿಪರಿ ಜೆರೆಯುತ |ಕಾಯ ಜನಯ್ಯನ | ಕೀರ್ತಿಯ ಬೀರುತತೋಯಜಾಕ್ಷ ಹರಿ | ಅಧಿಕೆಂದು ಸಾರಿದೆ 3 ಸಂಗವ ತೊರೆದು | ಸುಧೀಂದ್ರರ ಕರಜನೆತಂಗಾತೀರದಿ | ಮಂತ್ರಾಲಯದಲಿ |ಮಂಗಳ ಮಹಿಮನ | ಧ್ಯಾನವ ಗೈಯುತತುಂಗ ವಿಕ್ರಮ ಹರಿ | ಪರನೆಂದು ಸಾರಿದೆ 4 ವಾತನ ಮತ ವಿ | ಸ್ತರಿಸಿದ ಧೀರನೆದ್ವೈತ ದುಂದುಭಿಯ | ಮೊಳಗಿಸಿದಾತನೆ |ದೂತರ ಪ್ರಿಯ ಗುರು | ಗೋವಿಂದ ವಿಠಲನಪ್ರೀತಿಲಿ ಭಜಿಸುವ | ದಾಸಾಗ್ರಣಿಯೇ 5
--------------
ಗುರುಗೋವಿಂದವಿಠಲರು
ಸ್ಮರಿಸುವುದು ಗುರು ಸಂತತಿಯನೂ ಪ ನಿತ್ಯ | ಗುರುವರ್ಯ ಸಂತತಿಯ ಹರಿಕರುಣವೂ ದೊರಕಿ | ಸರ್ವ ಆಮಯ ಹರವು ಪರಮ ಪುರುಷಾರ್ಥಕ್ಕೆ ವರ ಮಾರ್ಗವೆಂದೆನಿಪ ಸದ್ಭಕ್ತಿ ಜ್ಞಾನಪ್ರದವು ಅ.ಪ. ಆದಿ ಮೂರುತಿ ಹಂಸ | ಪಾದಾನುವರ್ತಿ ವಿಧಿಆದಿವಿಧಿ ಸುತರು ಸನ | ಕಾದಿ ಪದ ಪದ್ಮಗಳಮೋದದಿಂ ಭಜಿಪ ದೂ | ರ್ವಾಸ ತತ್ಕರಜ ಸುಜ್ಞಾನ ನಿಧಿಗಳ ಪಾದವ ||ಆದರದಿ ಗರುಡವಾಹನ ತೀರ್ಥ ಕೈವಲ್ಯರಾದರಿಸಿ ಜ್ಞಾನೇಶ ತತ್ಕರಜ ಪರತೀರ್ಥಪಾದಾಬ್ಜ ಸೇವಿಸುವ ಸತ್ಯ ಪ್ರಾಜ್ಞ ಕರಜ ಪ್ರಾಜ್ಞ ತೀರ್ಥರು ಯತಿಗಳ 1 ಅಚ್ಯುತ ಮಾಧವ ತೀರ್ಥ | ಆಕ್ಷೋಭ್ಯ ತೀರ್ಥರೂತತ್ಕರಜ ಪರವಾದಿ | ಗಜಸಿಂಹ ಜಯತೀರ್ಥಯತಿಗಳಾ ವಿದ್ಯಾಧಿ | ರಾಜ ಸತ್ಕವೀಂದ್ರರು ವಾಗೀಶ ರಾಮಚಂದ್ರ 2 ಅತ್ಯಂತ ಮಹಿಮರೆನೆ | ವಿಭುದೇಂದ್ರ ವಿದ್ಯೆನಿಧಿಮತ್ತವರ ಕರಜಾತ | ರಘುನಾಥ ರಘುವರ್ಯಭೃತ್ಯ ವೇದವ್ಯಾಸ | ತೀರ್ಥ ವಿದ್ಯಾಧೀಶ ವೇದನಿಧಿ ಸತ್ಯವ್ರತರ ||ಸತ್ಯನಿಧಿ ಸತ್ಯನಾಥಾಖ್ಯ ಸತ್ಯಾಭಿನವಸತ್ಯ ಪೂರ್ಣಾಖ್ಯ ಯತಿ | ಸತ್ಯ ವಿಜಯಾರ್ಯ ವರಸತ್ಯ ಪ್ರಿಯ ತೀರ್ಥಾಖ್ಯ | ಸತ್ಯ ಬೋಧಾಖ್ಯಮಹ ಸತ್ಯ ಸಂಧಾಖ್ಯ ಮುನಿಯ 3 ಸತ್ಯವರ ಸತ್ಯಧರ್ಮಾಖ್ಯ ಸತ್ಯಸಂಕಲ್ಪಸತ್ಯ ಸಂತುಷ್ಟಾಖ್ಯ | ಸತ್ಯ ಪರೆಯಣ ತೀರ್ಥ ಸತ್ಯ ಕಾಮಾಖ್ಯ ಯತಿ | ಸತ್ಯೇಷ್ಟ ಕರಜರೆನೆ ಸತ್ಯ ಪರಾಕ್ರಮ ತೀರ್ಥರ || ಸತ್ಯ ವೀರಾಖ್ಯಯತಿ | ಸತ್ಯಧೀರಾಖ್ಯರಂತತ್ಕರಜ ಶಿರಿಸತ್ಯ | ಜ್ಞಾನಾಖ್ಯ ಅಗ್ನ್ಯಂಶದುಸ್ತಿಮಿರ ಮಾಯ್ಮತದ | ಮಾರ್ತೆಂಡರೆಂದೆನಿಪ ಶಿರ ಸತ್ಯ ಧ್ಯಾನಾಖ್ಯರ4 ನಿತ್ಯ ಗುರು ಗೋವಿಂದ ವಿಠಲ ತಾ ಪೊರೆವ ಸತ್ಯ 5
--------------
ಗುರುಗೋವಿಂದವಿಠಲರು
ಸ್ಮರಿಸುವೆನು ಗುರುರಾಯ ವರಮಂತ್ರ ಪುರಾಧಿಪ ಪೊರೆಯೊ ಎನ್ನನು ಜೀಯಾ ತವ ಮಹಿಮ ವರ್ಣಿಸ ಲರಿಯ ಮುರಹರಪ್ರೀಯಾ ಅಧ ಮಾಧಮನ ಮಮ ಪರಿಯ ನೀ ಬಲ್ಲೆಯ್ಯಾ ತೋರಯ್ಯಾ ದಯ ವರದ ಚರಿತೆಯ ಅರುಹುವದಕೆ ಪರವಾಕ್ಯರಣಿಯನು ಪಾಲಿಸಿ ನಿರುತ ಹರಿಗುರು ಚರಣದಲಿ ರತಿ ತ್ವರಿತ ಕರುಣಿಸು ರಾಘವೇಂದ್ರನೆ ಪ ಹಿಂದೆ ಕೃತಯುಗದಲಿ ಪ್ರಹ್ಲಾದ ನಾಮದಿ ತಂದೆ ಹಿರಣ್ಯಾಕ್ಷನಲಿ ಸರ್ವೋತ್ತಮನು ಹರಿ ದ್ವಂದ್ವ ಕರ್ಮವನಲಿ ಅರ್ಪಿಸಲು ಮಹದಾ ನಂದ ಪೊಂದುವರಲ್ಲಿ ಎಂದು ಪೇಳುತಿರೆ ಮಂದ ದೈತ್ಯವನಂದ ಮಾತಿಗೆ ಬಂಧನಾದಿಗ ಳಿಂದ ಶಿಕ್ಷಿಸೆ ಬಂದ ದುರಿತವನಂದು ಕಳೆದಾ ಕಂದನನು ಹರಿಪೊರೆಯೆ ದಿತಿಜನು ಒಂದೂ ತಿಳಿಯದೆ ಮಂದಿರ ಗೋವಿಂನೆಲ್ಲಿಹ ನೆಂದು ಕೇಳುತ ಮಂದರರೋದ್ಧಾರ ನಿಲ್ಲದಿಹ ಸ್ಥಳ ವಂದೂ ಇಲ್ಲವೂ ಎಂಂದು ಸಾರಿದೆ ತಂದು ತೋರಿಸು ಸ್ತಂಭದಲಿ ತವ ಇಂದಿರಾಪತಿಯೆಂದು ಗರ್ಜಿಸೆ ಕಂದನಾಡಿದ ಮಾತುಗಳನು ನಿಜ ವೆಂದು ನರಹರಿ ಪೊರೆದೆ 1 ಶ್ರೀಶನಾಜ್ಞೆಯ ವಹಿಸಿ ದ್ವಿತೀಯಾವತಾರದಿ ವ್ಯಾಸರಾಯನು ಎನಿಸಿ ಬ್ರಹ್ಮಣ್ಯರÀಲಿ ಸ ನ್ಯಾಸವನು ಸ್ವೀಕರಿಸಿ ಸರ್ವಜ್ಞ ಶಾಸ್ತ್ರಾಭ್ಯಾಸವನು ಪೂರೈಸಿ ವ್ಯಾಸತ್ರಯ ರಚಿಸಿ ದೇಶದೇಶಗಳನ್ನು ಚರಿಸುತ ಆ ಸಮಸ್ತ ಕುವಾದಿಗಳ ಮತ ನಾಶಗೊಳಿಸಿ ರ ಮೇಶ ಶ್ರೀ ವೆಂಕಟೇಶನನು ಬಹುದಿನವು ಪೋಜಿಸಿ ವಾಸಿಸುತ ಗಜರಾಮ ಪುರಧಾಧೀಶರಾಯನ ಕುಹಯೋಗವ ಪುರಂದರ ದಾಸರಿಂದೊಡಗೂಡಿ ಕೃಷ್ಣನುಪಾಸನೆಯ ಭಕ್ತಿಯಲಿ ಗೈಯುತ ವಾಸುದೇವನ ಶಿಲ್ಪ ಶಾಸ್ತ್ರದ ಶಾಸನಕೆ ಪ್ರತಿಯಾಗಿ ನಿಲ್ಲಿಸಿ ತೋಷಿಸಿದ ಸೌಭಾಗ್ಯ ವೈಭವ 2 ಪದುವ ಸಂಭವ ಜಾತ ಶ್ರೀ ರಾಘವೇಂದ್ರ ಸು ಪದವ ಪಡೆದ ಪ್ರಖ್ಯಾತ ಜಯತೀರ್ಥ ಮುನಿಕೃತ ಸುಧೆಗೆ ಪರಿಮುಳ ಗ್ರಂಧ ರಚಿಸಿ ಮೆರೆದಾತ ಬಧಿರ ಮೂಕಾಂಧ ವ್ಯಂಗ್ಯರು ವಿಧ ವಿಧಿದ ಘನರೋಗಗ್ರಸ್ತರು ಸದಯ ನೀಗತಿಯೆಂದು ಸೇವಿಸೆ ತ್ರಿದಶ ಭೂರುಹದಂತೆ ಸಲಹುವಿ ಕುಧರ ತೀರದಿ ಮೂಲ ರಘುಪತಿ ಪದವ ಪೂಜಿಸುತಲಿ ಸಜೀವದಿ ಮುದದಿ ವೃಂದಾವನ ಪ್ರವೇಶಿಸಿ ಪದುಮನಾಭ ಶ್ರೀ ಶಾಮಸುಂದರ ಮಧು ವಿರೋಧಿಯನು ಧ್ಯಾನಿಸುತ ಶಿರಿ ಸದನನು ವಲಿಸುತ್ತ ಕರುಣಾ ನಿಧಿಯು ಭಜಕರ ಪೊರೆವ ಮಹಿಮೆಯ 3
--------------
ಶಾಮಸುಂದರ ವಿಠಲ
ಸ್ಮರಿಸುವೊ ಜನರಿಗೆ ಸಲಹುವ ದೊರೆಗಳಿನ್ನುಂಟೇವೆಂಕಟೇಶಾ ಪ ಕರುಣಾನಿಧಿ ಮಹಾಮಹಿಮ ನೀನೆಂದು ನಾ ನಂಬಿದೆವೆಂಕಟೇಶಾ ಅ.ಪ. ಬರಿದು ದಂಡಿಸಿ ನಿನ್ನ ಪದ ಹೊಂದುವ ಬಗೆ ತೋರೋವೆಂಕಟೇಶಾ ಬಾಧೆಯ ತಾಳದೆ ಹಾದಿಯ ತಪ್ಪಿದೆ ವೆಂಕಟೇಶಾ 1 ಮಾರಿ ಮುಸುಕಿ ಎನ್ನ ಗಾರು ಮಾಡದೆ ವೆಂಕಟೇಶಾಘೋರ ಜಾರದ ವಾರಿಧಿಯಲಿ ನಾ ಮುಳುಗಿದೆ ವೆಂಕಟೇಶಾ 2 ಪಾರುಗಾಣದೆ ನಿನ್ನ ಮರೆಹೊಕ್ಕೆನೋ ವೆಂಕಟೇಶಾನಾನಾಗಿ ನಿನ್ನ ಗಣ್ಮ್ರತಗರಿಯೊ ವೆಂಕಟೇಶಾ 3 ಚೋರರ ಬಾಧೆಗೆ ಚೀರಿ ಚೀರುತಲಿಹೆನೊ ವೆಂಕಟೇಶಾದೂರ ನೋಡದಿರು ದಾಸರ ದೂತ ವೆಂಕಟೇಶಾ 4 ಹತ್ತು ಒಂಬತ್ತು ವತ್ಸರದಿಂದ ಕುಂಭಿಯೊಳಿದ್ದೆ ವೆಂಕಟೇಶಾಇನ್ನೆಂತು ಪೊಗಳಲಿ ನಿನ್ನ ಕರುಣವು ಬಾರದೆ ವೆಂಕಟೇಶಾ 5 ಕುಂಕುಮ ಅಂಕಿತ ಪದಪಂಕಜ ಶೋಭಿತ ವೆಂಕಟೇಶಾಕಂದನೆಂದು ಪೊರೆಯದಿರೆ ಬಿರಿದುಂಟೆ ವೆಂಕಟೇಶಾ 6 ಜ್ಞಾನದಿ ನಿನ್ನ ಧ್ಯಾನಿಪಲೊಲ್ಲೆ ವೆಂಕಟೇಶಾತೇಜ ತಂದೆವರದಗೋಪಾಲವಿಠಲ ವೆಂಕಟೇಶಾ 7
--------------
ತಂದೆವರದಗೋಪಾಲವಿಠಲರು
ಸ್ಮರಿಸೆನ್ನ ಮನವೇ ಯಾದವ ರಾಯನಾ| ಸರಸಿಜೊವನುತ ಭಕುತರ ಪ್ರೀಯನಾ ಪ ವರನಿಗ ಮೋಯಿದವನಾ ಶೀಳಿ ಎಳಹಿದವನಾ| ಶರಧಿ ಮಥನ ಗೋಸುಗನ ಪೊತ್ತನಾ ಧರಣಿಯಾ ತನ್ನ ಕೋರೆ ದಾಡಿಲಿರಿಸಿದಿಹನಾ| ಶರಣ ಪ್ರಲ್ಹಾದನ ಸುಸ್ಮರಣೆ ಗೊಲಿದನಾ1 ಭೂಸುರೋತ್ತಮನಾಗಿ ದಾನವ ಬೇಡಿದನಾ| ಹೇಸದೇ ಕ್ಷತ್ರಿಯರ ಕುಲ ಕೊಂದನಾ| ವಾಸು-ಕ್ಯಾ ಭರಣನ ಧನುವ ಮುರಿದವನಾ| ವಾಸವಾತ್ಮಜ ಮಿತ್ರ ದೇವಕಿ ಕಂದನಾ2 ಪತಿವೃತೆ ನಾರಿಯರ ವೃತಭಂಗ ಮಾಡಿದನಾ| ಸಿತ ಹಯವೇರಿದ ಶ್ರೀ ಜಗದೀಶನಾ| ಪತಿತ ಪಾವನನಾದಾ ಅನಂತಾವತಾರನ| ನುತ ಗುರು ಮಹಿಪತಿ ನಂದನ ಪ್ರೀನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸ್ಮರಿಸೆಲವೋ ಸ್ಮರಿಸೆಲವೋ ಮನವೇ | ನಿರುತದಿ ಗುರುಮಹೀಪತಿ ಪಾದಾ ಪ ಆದ್ಯಾತ್ಮದಘನ ವಿದ್ಯೆಯ ಸಾಧಿಸಿ | ಸಿದ್ಧರ ನಡುವೆ ಪ್ರಸಿದ್ಧರಾದವರ 1 ನೆಟ್ಟನೆ ಶರಣರ ಪುಟ್ಟಿಸಿರಧಿಕಾ | ಬಿಟ್ಟುಪದೇಶವ ಕೊಟ್ಟು ಸಾಕುವರಾ 2 ಧಾರುಣಿಯೊಳು ಸಂಸಾರ ಮಾಡಿದರ | ಸಾರಸಜಲದಂತೆ ರಚಿಸಿದರಾ 3 ಯೋಗಧಾರುಣದಿ ಸಾಗಿಪದಿನಗಳು | ಭಾಗವತಾಗ್ರಣಿ ಎನಿಪಶ್ರೀಗುರುಪಾದಾ4 ವಿತ್ತಜನರು ತಂದಿತ್ತರೆ ಹಿಡಿಯದೆ | ನಿತ್ಯವ್ಯಯವ ಪವಡಿಸುತಿಹರವರಾ5 ಯುಕ್ತದಿ ವಿಷಯಾಸಕ್ತಿಯತ್ಯಜಿಸಿ | ವಿ ರಕ್ತಿ ಬೆಳಿಸಿ ಸುಮುಕ್ತಿ ಪಡೆದವರಾ 6 ಸ್ವಸ್ಥದಿ ನಾಲ್ಕು ಅವಸ್ಥೆಯ ಮೀರಿ | ಸ ಮಸ್ತರಲಿ ನಿಜ ವಸ್ತು ಕಂಡವರಾ7 ಕಾಖಂಡಕಿ ಸ್ಥಳ ಶ್ರೀಕರವಂದ್ಯೆ | ನಿ ರಾಕರಿಸದೆ ಅಂಗೀಕರಿಸಿದರಾ 8 ಎಂದೆಂದಿಗೂ ಹೊರಗೊಂದಿನ ಹೋಗದೆ | ಮಂದಿರದೊಳಗಾನಂದದಲಿಹರಾ9 ತಾಪತೃಯದಾ ಭವಪರಿಹರಿಸುತ | ತಾಪೋರೆದನು ಗುರು ಶ್ರೀಪತಿಗುರುಪಾದಾ 10 ಅಂಕಿತ-ಗುರುಶ್ರೀಪತಿ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸ್ಮರಿಸೊ ಮನವೆ ಸಿರಿಲೋಲ ಶ್ರೀ ಕೃಷ್ಣನ ಸ್ಮರಿಸಲೊದಗುವ ಸ್ವಾಮಿ ಶ್ರೀ ವಿಷ್ಣುವಿನ ಧ್ರುವ ಸ್ಮರಿಸಿ ಕರಿರಾಜ ಸೆರೆಯಿಂದ ಬಿಡಲಿಲ್ಲವೆ ದುರಿತವನು ಗೆದ್ದರುಷಬಡಲಿಲ್ಲವೆ 1 ಪರಿ ಹರಿ ಮಹಿಮೆ ತಿಳಿಯಲಿಲ್ಲವೆ2 ಸ್ಮರಿಸಿ ದ್ರೌಪದಿ ಅಪತ್ತುಗಳಿಲಿಲ್ಲವೆ ಮೊರೆಯಗೇಳಿ ಕೃಷ್ಣ ಸುಳಿಯಲಿಲ್ಲವೆ 3 ಸ್ಮರಿಸಿ ಪಾಂಡವ ಸತ್ವವು ನಡೆಲಿಲ್ಲವೆ ಅರಗಿನ ಮನೆಯೊಳು ಉಳಿಲಿಲ್ಲವೆ 4 ಸ್ಮರಿಸು ಮಹಿಪತಿ ಮನವ ನಿಜಗೊಲಿಲ್ಲವೆ ಗುರು ಚರಣ ಸ್ಮರಿಸಿ ನೆಲೆಗೊಳಲಿಲ್ಲವೆ5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ಮರಿಸೊ ಮನವೇ ಹರಿಯ ನರಹರಿಯ ಅರಸಾಗ್ಯಾಳುವ ಸಿರಿಯ ಧ್ರುವ ಕರಿಯ ಕೇಳಿದ ಮೊರಿಯ ನೀನರಿಯ ಸುರರ ಬಿಡಿಸಿದ ಸರಿಯ ಧರೆಯೊಳಗಿದು ಖರಿಯ ಯುಗಮೊರಿಯ ಹೊರೆವನು ತಾ ಪರೋಪರಿಯ 1 ಸರ್ವದೈವಕೆ ಹಿರಿಯ ಮುರ ಅರಿಯ ಹರ ಹೃದಯದಲಿ ಪರಿಯ ಸ್ಮರಿಸುವದೀ ಪರಿಯ ದುರಿತ ಕರುಣಕಿಲ್ಲೀತನ ಸರಿಯ 2 ಸೆರಗವಿಡಿದು ಹರಿಯ ಪರಿಪರಿಯ ಅರಿಯೋ ನವವಿಧ ಪರಿಯ ಶರಣಾಗತರ ಸಿರಿಯ ಸುರವರ್ಯಾ ತರಳಮಹಿಪತಿ ದೊರೆಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ಮರಿಸೋ ಎಲೆ ಮನವೇ | ಜಗದಯ್ಯನಾ | ಸ್ಮರಿಸೋ ಶಿವಸುಖ ಬೆರಿಸೊ ಭವದಿಂದ | ತರಿಸೊ ಗಿರಿಜಾ ರಮಣನ ಪ ಫಣಿಯಾಗಣ್ಣಿ ನೋರಣಿಯಾ | ಸದಮಲ | ಫಣಿಯಾ ಭರಣ ಭೂಷಣಿಯಾ | ಮುಕುತಿಯಾ | ಹೋಣೆಯಾ ಕೊಡಲಿಕ್ಕೆ ದಣಿಯಾನೆಂದು ಬೇಡುವರಾ 1 ಒಡಿಯನೆನ್ನದೆ ನಡಿಯಾ | ಅಂಗಜನಾ | ಹುಡಿಯಾ ಮಾಡಿದ ನಡಿಯಾ ಶರಣೆಂದು | ಪಿಡಿಯಾಲವರಿಗೆ ಪಡಿಯಾ | ನಿತ್ತು ಹೊರೆವನಾ 2 ಯತಿಯಾ ಆನಂದ ಸ್ಥಿತಿಯಾ | ಪುಣ್ಯ | ಮೂರುತಿಯಾ ವಿಮಲ ಕೀರುತಿಯಾ | ಗುರುಮಹೀ | ಪತಿಯಾ ನಂದನ ಸಾರಥಿಯಾನಾದಿ ಮಹಿಮನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸ್ವಯಂ ಭಾನು ಉದಯವಾದ ನೋಡಿ ದಯಕರುಣಾನಂದದ ಕೃಪೆಮಾಡಿ ಧ್ರುವ ರವಿಕೋಟಿತೇಜನೆ ಬಂದ ಮೂಡಿ ಭವಭ್ರಮದ ಕತ್ತಲ್ಹೋಯಿತೋಡಿ ದೇವದೇವೋತ್ತಮನ ಪ್ರಭೆ ಕೂಡಿ ದಿವಾರಾತ್ರಿಲ್ಲದಾಯಿತು ನೋಡಿ 1 ಜ್ಞಾನ ಗಮ್ಯವಾಗಿದ್ದ ಸುವಸ್ತ ಕಾಣಬಾವ್ಹಾಯಿತು ಮನಸ್ವಸ್ತ ಮನದಿಂದೆವೆ ಆಯಿತು ಮನಸ್ವಸ್ತ ಘನಮಯವೆ ತೋರಿತು ಸಮಸ್ತ 2 ತಾನೆ ತನ್ನಿಂದುದಯವಾದ ಪೂರ್ಣ ನಾನಾವೆಂಬುದ್ಹೋಯಿತನುಮಾನ ಆನೇಕಲಿದೋರಿತು ಇದೆ ಖೂನ ದೀನ ಮಹಿಪತಿ ಸ್ವಹಿತ ಸುಧನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಸುಖ ನೋಡಿ ಸದ್ಗುರು ಕೃಪೆಯಿಂದ ವಿಶ್ವತೋಮುಖ ತೋರುವ ತಾಂ ಗೋವಿಂದ ಧ್ರುವ ಏನೆಂದ್ಹೇಳಲಯ್ಯ ಅನುಭವದ ಮಾತು ಖೂನಾಗ್ಯಾದೊಂದೇ ಶಾಶ್ವತ ಆನಂದೋಭರಿತ ಸ್ವಾನಂದ ಸುಖ ತಾನೆ ಆಗ್ಯದೆ ಸನ್ಮತ ಘನಬೆರೆದು ನೋಡುವದೀ ಸುಪಥ 1 ಮಲಕಿನ ಮನುಜರು ಮನವಿಡಬಲ್ಲರೇ ನಾಲ್ಕು ವೇದ ಸಾರುದಕ ಒಮ್ಮೆಯಾದರ ನಿಲುಕಿಸಿ ನಿಜ ನೋಡಿದರಸಾಧ್ಯ ಬೆಳಕೆ ಆಗ್ಯದ ನೋಡಿ ತಿಳಿಕೊಂಡರೆ 2 ಗುರುವಿನಿಂದಧಿಕಿಲ್ಲ ಅರಿತುಕೊಳ್ಳಿರೊ ಖೂನ ಪರಮಗತಿಯ ಸಾಧನ ಸುತತ್ವ ಜ್ಞಾನ ಬೆರೆದು ಮಹಿಪತಿ ಪೂರ್ಣ ಸದ್ಗುರು ಚರಣಕೆರಗಿ ಮನ ಪಡೆವದೀ ದಯಕರುಣಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಸ್ತ ಮಾಡಿಕೊಳ್ಳಬೇಕು ವಸ್ತು ತನ್ನೊಳಾಗದ ಹಸ್ತ ನೀಡಲಿಕ್ಕೆ ಸ್ವಾಮಿ ವಿಸ್ತರಿಸಿ ತೋರುತದೆ ಧ್ರುವ ಸಾವಧಾನವಾಗಲಿಕ್ಕೆ ಸಾಧಿಸಿ ಬರುತದೆ ಭಾವ ಬಲಿದು ನೋಡಲಿಕ್ಕೆ ಕಣ್ಣಮುಂದೆ ಭಾಸುತದೆ ನಿವಾತ ಕೂಡಲಿಕ್ಕೆ ತಾನೆ ತಾನಾಗ್ಯದೆ ಆವಾಗ ನೋಡಿ ನಿಜ ಠವಠವಿಸುತದೆ 1 ಆರೇರಿವೆರದು ನೋಡಿ ಗುರುವಾಕ್ಯ ಮಿರಬ್ಯಾಡಿ ಸಾರವೆ ಆದೆ ನೋಡಿ ಗುರುಸೇವೆ ಪೂರ್ಣಮಾಡಿ ದೂರ ಹೋಗಿ ನೋಡಬ್ಯಾಡಿ ತಿರುಗಿ ನಿಮ್ಮೊಳು ನೋಡಿ2 ಇದ್ದಲ್ಲೆ ಅದ ಪೂರ್ಣ ಸದ್ಗುರು ಕರುಣ ಬಿದ್ದಲ್ಲೆ ಬಿದ್ದು ಘನ ಸತ್ಯವಾದ ನಿಜಘನ ಬುದ್ಧಿವಂತರ ಮನ ಗೆದ್ದು ಅಯಿತುನ್ಮನ ಸಿದ್ಧರ ನಿಜಸ್ಥಾನ ಶುದ್ಧ ಮಹಿಪತಿ ಸುಪ್ರಾಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು