ಒಟ್ಟು 7503 ಕಡೆಗಳಲ್ಲಿ , 128 ದಾಸರು , 4808 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ವಾಮಿ ನೀನೆ ಸ್ವಹಿತ ಗುರುನಾಥ ಬ್ರಹ್ಮಾನಂದ ಸದ್ಘನ ಸದೋದಿತ ಧ್ರುವ ನೀನಹದೋ ಬಡವನಾಧಾರಿ ಸಾನುಕೂಲ ನೀನೆವೆ ಪರೋಪರಿ ಅನುದಿನದಲಿ ನೀ ಸಹಕಾರಿ ಮನೋಹರ ಮೂರುತಿ ನೀ ಶ್ರೀ ಹರಿ 1 ದಯಗುಣಕೆ ನಿಮ್ಮ ನಾ ಸರಿಗಾಣೆ ತಾಯಿ ತಂದೆ ಸಕಲ ಬಂಧು ನೀನೆ ತ್ರೈಲೋಕ್ಯವಂದ್ಯ ನೀ ದೇವನೆ ಶ್ರೇಯ ಸುಖದಾಯಕ ಎನ್ನ ನೀನೆ 2 ಶ್ರುತಿ ಸಾರುತಲ್ಯದ ನಿಮ್ಮ ಖ್ಯಾತಿ ಸ್ತುತಿ ಮಾಡಲೇನು ನಾ ಮಂದಮತಿ ಅತಿ ದೀನ ನಾ ನಿಮ್ಮ ಮಹಿಪತಿ ಪ್ರತಿಪಾಲಕಹುದೋ ನೀ ಶ್ರೀಪತಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ಬಂದನು ಸತ್ಯಭಾಮೆರುಕ್ಮಿಣಿಯರಿಂದ ಕಾಮಿತ ಫಲವ ಕೊಡುತಲೆ ಪ. ವಾಸುದೇವ ತಾಯಿ ದೇವಕಿದೇವಿಎಂಭತ್ತುಕೋಟಿ ಯಾದವರುಎಂಭತ್ತುಕೋಟಿ ಯಾದವರು ಬರುತಾರೆ ತೊಂಭತ್ತು ಮಹಲು ತೆರವಿರಲಿ 1 ಸರ್ಪಶಯನನ ಬದಿಯಲೊಪ್ಪುತ ಬಲರಾಮ ಛsÀಪ್ಪನ್ನ ಕೋಟಿ ದ್ವಿಜರಿಂದ ಛsÀಪ್ಪನ್ನ ಕೋಟಿ ದ್ವಿಜರಿಂದ ಬರುತಾರ ಎಪ್ಪತ್ತು ಮಹಲು ತರವಿರಲಿ 2 ಸೂರ್ಯ ಸೂರ್ಯ ಹೊಳೆವಂತೆ ಗರುಡನೇರಿಅಂಗಳಕ ಬಂದ ನರಹರಿ 3 ನಾಗಶಯನನು ಬಂದ ಬೇಗಆರುತಿ ತಾರೆ ನೂರು ಸೂರ್ಯರ ಬೆಳಕಿಲೆ ನೂರು ಸೂರ್ಯರ ಬೆಳಗೊ ಗರುಡನೇರಿಬಾಗಿಲಿಗೆ ಬಂದ ಯದುಪತಿ4 ಮದಗಜಗಮನೆ ಬ್ಯಾಗ ಕಡಲಾರತಿಯ ತಾರೆ ಚದುರೆ ನೀ ತಾರೆ ಫಲಗಳಚದುರೆ ನೀ ತಾರೆ ಫಲಗಳ ಐವರಿಗೆ ಎದುರಿಗೆ ಬಾರೆಂದು ಕರಿಯಮ್ಮ 5 ಕೃಷ್ಣರಾಯನು ಬಂದ ಬುಕ್ಕಿಟ್ಟು ಸೂರ್ಯಾಡೆಅಷ್ಟ ಸೌಭಾಗ್ಯ ಇವು ನೋಡಅಷ್ಟ ಸೌಭಾಗ್ಯ ಇವು ನೋಡ ಮಾಡಿದ್ದುಎಷ್ಟು ಸುಕೃತವು ಸ್ಮರಿಸಮ್ಮ6 ಮಾಧವ ರಾಮೇಶನ ಉಪಚರಿಸೆ7
--------------
ಗಲಗಲಿಅವ್ವನವರು
ಸ್ವಾಮಿ ಯಾತಕೆನ್ನೊಳುಪೇಕ್ಷೆ ಮಾಡುವಿ ದೀನನಾಥ ಸುಮ್ಮನೆ ನಿಂತು ನೋಡುವಿ ಪ. ನಡೆವನ ಕಣ್ಣ ಕಟ್ಟಿ ಕೆಡಹುವುದುಚಿತವೆ ಒಡೆಯ ನಿನ್ನಡಿಗಳ ಪೊಗಳುವ ಪಾಡಿ ನುಡಿವ ಕಾರ್ಯಕೆ ಬಾಡಿ ಬಳಲುತ ನಾ ನಿತ್ಯ ನೋಡುತ ಬಡವನ ಬಿಡದಿರು ಕಡಲಶಯನ ನಿಜ ಮಡದಿ ಸಹಿತನಾಗಿ ಶ್ರೀಶನೆ ಕೃಪೆ ಕಂಜಕರ ಶ್ರೀನಿವಾಸನೆ1 ಭಾವಜ ಪಿತ ನಿನ್ನ ಸೇವೆ ಮಾಳ್ಪರಿಗೆಂದು ನೋವ ನೀಡದೆ ಕಾವ ಬಿರುದನು ಭವ ಸಾರÀ ನೀ ಮರೆವುದು ನೀತಿಯೆ ಎನ್ನ ನೀ ವಿಧ ಮಾಳ್ಪುದು ಖ್ಯಾತಿಯೆ ಪಾವನ ಚರಿತ ಪುರಾಣ ಪುರುಷ ಮಹ ದೇವ ನೀ ಕರಪಿಡಿದೆನ್ನನು ಕರು- ಣಾವಲಂಬನವಿತ್ತು ಪೊರೆವುದು 2 ದುರುಳ ಭಾವನೆಯಿಂದ ಸರಿದು ಹೋಗುವ ಪಂಚ ಕರಣಕೆ ನೀನರಸನಲ್ಲವೆ ಭಕ್ತಾ- ಭರಣಕೆ ನಿನ್ನೊಳಿರಿಸು ಮಾರ್ಗವನಂತ:- ಕರಣಕೆ ತರಿದು ಪಾಪಗಳನು- ದ್ಧರಿಸೆನ್ನ ವೆಂಕಟಗಿರಿವರ ದೀನಾರ್ತಿ ಚಕ್ರಧರ ಸಕಲಾನಂದ ಕಾರಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ವಾಮಿ ವೆಂಕಟರಮಣ ಭೂಮಿಪಾಲಕ ದೇವ ಸಂಜೀವ ಪ ಸುರರು ಅಸುರರೆಲ್ಲ ಶರಧಿಯ ಮಥಿಸಲು ಸಿರಿಯು ಜನಿಸಿ ಬಂದು ಹರಿಯ ಸೇರಿದಳು 1 ಸತಿ ಕುಸುಮಮಾಲೆಯನು ಅತಿ ಹರುಷದಿ ಜಗತ್ಪತಿಗೆಯಿಕ್ಕಿದಳು 2 ವಾರಿಧಿಯಾಕ್ಷಣ ಧಾರೆಯನೆರೆಯಲು ವಾರಿಜಾಂಬಕ ಲಕ್ಷ್ಮಿ ಒಡನೆ ನಿಂದಿರಲು 3 ಫಣ್ಭಿಹ್ತ್ರ1ಸೆಮಣಿಯೊಳು ರಮಣಿಯನೊಡಗೊಂಡು ಗುಣನಿಧಿಯು ಒಪ್ಪಿರಲು ತರುಣಿಯರೆಲ್ಲ 4 ಪಚ್ಚವ ಧರಿಸಿ ನವ ಸ್ವಚ್ಛವಾಗಿಯೆ ತುಳಿದು ಅಚ್ಯುತ ಮಹಾಲಕ್ಷ್ಮಿಗಚ್ಚಬೇಕೆನುತ 5 ಸಣ್ಣ ಮಲ್ಲಿಗೆ ಎಣ್ಣೆ ಬಣ್ಣವಾದರಿಸಿನವ ಪುಣ್ಯವಂತೆಗೆ ಕೈಗರ್ಣವ ಕೊಡಲು 6 ಸಿರಿ ತನ್ನ ತಲೆಗೆ ಪ್ರೋಕ್ಷಿಸಿಕೊಳಲು ಹರಿಯು ಮೆಚ್ಚಿದನು 7 ಗಟ್ಟಿಯಾದರಿಸಿನವ ಬಟ್ಟಲೆಣ್ಣೆಯಗೂಡಿ ಮುಟ್ಟಲಂಜಿಯೆ ನಿಲಲು ಸೃಷ್ಟಿಪಾಲಕನ 8 ಅಂಗೈಯ ಅರಿಸಿಣವ ಮುಂಗೈಗೆ ಒರಸುತ್ತ ರಂಗನ ಸಿರಿಮೊಗವ ಕಂಗಳಿಂದೀಕ್ಷಿಸುತ 9 ಅಭಯ ಹಸ್ತವನಿತ್ತ ತ್ರಿಭುವನದೊಡೆಯನು ಅಬುಜಲೋಚನೆ ಮುಖಾಂಬುಜಕೆ ತಿಮುರಿದಳು 10 ಸತಿ ಕೈಯ ಅರಿಶಿಣವ ಪತಿಯಾದಿಕೇಶವನ ನುತಿಸಿ ಊರಿದಳು 11 ಸಿರಿಯೆನೆತ್ತಿದ ಕೈಯ ಹರಿ ತಾನು ತೋರಿಸಲು ಸಿರಿ ನಾರಾಯಣ ಎಂದು ಅರಿಶಿಣವ ತಿಮುರೆ 12 ಶಂಖವ ಧರಿಸಿದ ಪಂಕಜಾಕ್ಷನೆ ವಿಷ್ಣು ವೆಂಕಟೇಶನ ಕರಪಂಕಜಕೆ ತಿಮುರೆ 13 ಕದನದೊಳ್ ಖಳರನು ಸದೆದು ಮರ್ದಿಸಿ ಗೆಲಿದು ಮಧುಸೂದನ ಶ್ರೀವತ್ಸದೆದೆಯ ತೋರೆನುತ 14 ಚಕ್ರವ ಪಿಡಿದು ಪರಾಕ್ರಮಿಯೆನಿಸಿಯೇ ಅಕ್ರೂರಗೊಲಿದ ತ್ರಿವಿಕ್ರಮಗೆ ತಿಮುರೆ 15 ವಾಮನನನಾಗೆ ಶ್ರಮವನು ಪಟ್ಟೆನುತ ಭೂಮಿಯ ಅಳೆದ ಪಾದವಿತ್ತಲು ತಾರೆನುತ16 ಕಾದಲನು ಕಾಣುತ್ತ ಪಾದವನಿತ್ತನು ಶ್ರೀಧರನೆನುತಲಿ ಅರಸಿನವ ತಿಮುರೆ 17 ವಾಮಪಾದವ ಕಂಡು ಭಾಮಿನಿ ತಾರೆನೆಲು ಸೋಮಸನ್ನಿಭ ಹೃಷಿಕೇಶ ತಾನಿತ್ತ 18 ಪದ್ಮಬÁಂಧವ ತೇಜ ಪದ್ಮಸಂಭವ ಪೂಜ ಪದ್ಮನಾಭಗೆ ಪದ್ಮಗಂಧಿ ತಾ ತಿಮುರೆ 19 ಆ ಮಹಾ ನಾಮದ ದಾಮೋದರನ ಕಂಡು ಭಾವೆ ಮಹಾಲಕ್ಷುಮಿ ವೀಳ್ಯವ ಕೊಡಲು 20 ವಾಸುದೇವನು ತನ್ನ ಅರಸಿ ಮಾಲಕ್ಷ್ಮಿಗೆ ಪೂಸಿದನರಿಸಿನದ ಎಣ್ಣೆಯ ಮೊಗಕೆ 21 ಪಂಕಜಾಕ್ಷನ ಕಂಡು ಕಂಕಣದ ಹಸ್ತವನು ಕುಂಕುಮದೆಣ್ಣೆಯ ಸಂಕರ್ಷಣ ತಿಮುರೆ 22 ಬುದ್ಧಿವಂತೆಯ ಎಡದ ಮುದ್ದು ಹಸ್ತವ ನೋಡಿ ಉದ್ಧರಿಸಿ ನವ ಪ್ರದ್ಯುಮ್ನ ನಗುತ 23 ಅನಿರುದ್ಧ ನಗುತಲೆ ಘನಕುಚಮಂಡಲಕೆ ಅರಿಸಿನವ ತಿಮುರೆ 24 ಪುರುಷರೊಳು ಉತ್ತಮನು ಹರುಷವನು ತಾಳಿಯೆ ಅರಸಿ ಮಹಾಲಕ್ಷುಮಿಗೆ ಅರಿಸಿನವ ತಿಮುರೆ 25 ಅಧೋಕ್ಷಜನು ತನ್ನ ತುದಿವೆರಳ ಅರಿಸಿನವ ಪದುಮನೇತ್ರೆಯ ಪದದೊಳಗೆ ಮಿಡಿದಿರ್ದ 26 ನಾರಸಿಂಹನು ಸತಿಯ ಮೋರೆಯಿಂದಾರಭ್ಯ ಓರಣವಾಗಿಯೇ ಅರಿಸಿನವ ತಿಮುರೆ 27 ನೆಚ್ಚಿಯೆ ಹರಿ ತಾನು ಅಚ್ಚ ಕರ್ಪೂರದೆಲೆಯ ಅಚ್ಯುತ ಕೊಡಲು 28 ಮನದಿ ಲಜ್ಜಿತೆಯಾಗಿ ಘನಮಹಿಮ ಮುನಿವಂದ್ಯ ತನಗೆ ವಲ್ಲಭ ನಿಜನಾದನೆನುತ 29 ಆ ಪರಮಹಿಮನು ರೂಪಸಂಪನ್ನ ದ- ಯಾಪರನಾಗಿಯೆ ಉಪೇಂದ್ರ ತಾನೊಲಿದು 30 ಹರಯೆಂಬ ನಾಮದಿ ಹರದಿ ಮಾಲಕ್ಷ್ಮಿಯ ವರಸಿದ ಶ್ರೀಹರಿಯು ಹರದಿಯರ್ಪೊಗಳೆ31 ಬೆಟ್ಟದೊಡೆಯನೆನಿಸಿ ದೃಷ್ಟಿಗೋಚರವಾದ ಶ್ರೀಕೃಷ್ಣ ಮಾಲಕ್ಷುಮಿಗೆ ಆರತಿಯ ತಿಮುರೆ 32 ವರಮಹಾಲಕ್ಷುಮಿಗೆ ವರಾಹತಿಮ್ಮಪ್ಪಗೆ ಅರಸಿನದೆಣ್ಣೆಯ ರಚಿಸಿದ ಪರಿಯು 33
--------------
ವರಹತಿಮ್ಮಪ್ಪ
ಸ್ವಾಮಿ ಶ್ರೀಗುರುವಿರಲಿಕ್ಕೆ ಸಾಯಸವೆನಗಿನ್ಯಾಕೆ ಗುರುನಾಮ ನಿಧಾನಿರಲಿಕ್ಕೆ ನನಗಿಲ್ಲೆಂಬುವದ್ಯಾಕೆ ಧ್ರುವ ಅನುದಿನ ಎನಗಿರೆ ಅನುಕೂಲದ ಚಿಂತ್ಯಾಕೆ ತನುಮನದೊಳು ತಾನೆತಾನಿರಲು ಅನುಮಾನಿಸಲಿನ್ಯಾಕೆ 1 ದಾತನೊಬ್ಬ ಶ್ರೀನಾಥೆನಗಿರಲು ಯಾತಕೆ ಪರರ ದುರಾಸೆ ಮಾತುಮಾತಿಗೆ ತೋರುವ ಸದ್ಗುರು ತೇಜೋಪುಣ್ಯದ ರಾಶಿ 2 ಲೇಸಾಗೆನಗಿರೆ ಭಾಸ್ಕರ ಗುರುದಯೆ ವೇಷದೋರುವದಿನ್ಯಾಕೆದಾಸ ಮಹಿಪತಿಗ್ಯನುದಿನ ಭಾಸುತಲಿರೆ ಕಾಸಿನ ಕಳವಳಿಕ್ಯಾಕೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ಸಗುಣ ನಿರ್ಗುಣ ಬಾರಯ್ಯ ಬ್ರಹ್ಮಾನಂದ ಸುಖವು ದೋರಯ್ಯ ಧ್ರುವ ಕಣ್ಣು ಬಡೆಯುತದೆ ನಿಮ್ಮ ನೋಡೇನೆಂದು ಪುಣ್ಯಚರಣ ಸುಪ್ರಭೆದೋರೋ ನೀ ಬಂದು ಧನ್ಯಧನ್ಯಗೈಸುವದೋ ಕೃಪಾಸಿಂಧು ಎನ್ನೊಡೆಯ ನೀನಹುದೋ ದೀನಬಂಧು 1 ಅನುದಿನ ಸುಸೇವೆ ನಿಮ್ಮ ಮಾಡೇನೋ ಕ್ಷಣಕ್ಕೊಮ್ಮೆ ಸ್ವರೂಪ ನಾನೋಡೇನೋ ಘನ ಸುಖದೊಳು ನಾ ಬೆರೆದಾಡೇನೋ ನೆನೆವಂಥ ದಾಸರ ನಿಮ್ಮ ಕೂಡೇನೋ 2 ಹೃದಯದೊಳು ನಿಜವಾಗಬೇಕಿಗ ಸದಾಸರ್ವದಾ ಮಾಡೋ ಏನ್ನೊಳೀವ್ಹಾಂಗ ಪಾದಪದ್ಮಕ್ಯೋಗ್ಯ ಮಾಡೋ ಮಹಿಪತಿಗೆ ಇದೆ ಪುಣ್ಯ ನೋಡಯ್ಯ ಕುಲಕೋಟಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ಸದ್ಗುರುದಯವೆ ತಾ ನಿಜ ನೇಮ Pರಿಗಿದೇವೆ ಹಿತಗುಜ ಸಮಸ್ತ ಜನರಿಗಿದೆ ಸುಬೀಜ ಪ್ರೇಮವಿಟ್ಟವರಿಗ್ಹೊಳೆವದು ಸಹಜ 1 ಗುರು ಉಪಾಸನೆ ಎಲ್ಲಕೆ ಮೇಲು ಸುರಜನರಿಗಿದೊಂದೇ ಕೀಲು ಅರಿತವರಿಗೆ ಮುಕ್ತಿ ಬಾಗಿಲು ತ್ಯರ ತಿಳಿಯದವರಿಗಿದೇ ಸೋಲು 2 ನಂಬಿ ನಡೆಯಬೇಕು ಸದ್ಗುರುಪಾದ ಇಂದುದೋರಿಕೊಡುವದು ಸುಬೋಧ ಗುಂಭಗುರುತಾಗಿದೋರುದು ಸ್ವಾದ ಹಂಬಲಿಸಿಕೊಳಬೇಕು ಸುಪ್ರಸಾದ 3 ಗುರುಮಾರ್ಗವೆಂಬುದೆ ಸಾಕ್ಷಾತ್ಕಾರ ಸೂರೆಗೊಂಡು ಮ್ಯಾಲೆ ಸುಖಸಾಗರ ಮರುಳ ಬಲ್ಲವೇನಿದರ ವಿಚಾರ ಶರಣಜನರಿಗಿದೇ ಸಹಕಾರ 4 ಗುರುಕೃಪೆಯಾದವಗೆ ಪ್ರಾಂಜಳ ಸಾರಾಯ ಕೊಂಬುವನೆ ತಾ ವಿರಳ ಅರಿಯೋ ಮಹಿಪತಿ ನಿನ್ನೊಳು ಸಕಳ ಹರುಷವಾಗೆದಿಂತು ಈ ಸುಖಕಲ್ಲೋಳ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ಸದ್ಗುರುವೆ ನಿಮ್ಮ ದಯದಕ್ಷಿ ಸುಭಿಕ್ಷ ದ್ರುವ ನಿಮ್ಮ ಅಭಯ ಹಸ್ತ ಬ್ರಹ್ಮಾನಂದದ ಸುಪ್ರಸ್ತ ನಮ್ಮ ಜೀವಕೆ ಪ್ರಶಸ್ತ ನಿಮ್ಮಿಂದೆ ಸ್ವಸ್ತ 1 ನಿಮ್ಮ ದಯಕರುಣ ಸಮ್ಯಙÁ್ಞನದ ಸ್ಫುರಣ ನಮ್ಮ ಜನ್ಮದುದ್ಧರಣ ನಿಮ್ಮಿಂದ ಪೂರ್ಣ 2 ಸಾಹ್ಯಮಾಡುವ ನಿಮ್ಮ ಬಾಹ್ಯಾಂತ್ರದಲಿ ಸಂಭ್ರಮ ಮಹಿಪತಿಗಾನಂದೋ ಬ್ರಹ್ಮ ಇಹಪರ ಸುಪ್ರೇಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ಸದ್ಗುರುವೆ ನಿಮ್ಮ ಪಾದಕಮಲಕೆರಗುವೆ ಧ್ರುವ ಹಿಂಡುದೈವಕೆ ಪ್ರಚಂಡಮೂರ್ತಿ ಕೊಂಡಾಡುವ ನಿಮ್ಮ ಅಖಂಡ ಕೀರ್ತಿ 1 ಭಾವಭೋಕ್ತ ದೇವೋತ್ತಮ ಸೇವಿಸುವೆ ನಿಮ್ಮ ದಿವ್ಯನಾಮ 2 ಜಯ ಜಯ ಆನಂದ ಕಂದ ಧ್ಯಾಯಿಸುವೆ ನಿಮ್ಮ ಪಾದಾರವಿಂದ 3 ದಯಾಸಿಂಧು ದೇವ ದೇವ ಕಾಯೋ ಮಹಿಪತಿ ಪ್ರಾಣಜೀವ 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ಸೀತಾರಾಮ ಪತಿತ ಪಾವನ ನಾಮ ಧ್ರುವ ಅಮಿತವಾದ ಗುಣ ನಿರ್ಮಳಾಚರಣಿ ಕಮಲಭವಾರ್ಚಿತ ಕಾರ್ಮುಕಪಾಣಿ ನೇಮದಿಂದಾಡುವ ಅಮೃತವಾಣಿ 1 ಸಮಸ್ತ ಹೃದಯಾಂತ್ರ ವಿಮಲಸುಚರಿತ್ರ ಸುಮನ ಸುಗಾತ್ರ ಅಮರಜ ನೇತ್ರ ಸೋಮಶೇಖರಪ್ರಿಯ ಪುಣ್ಯಪವಿತ್ರ 2 ಸಾಹ್ಯಸಹಕಾರ ಬಾಹ್ಯಾಂತ್ರ ಸ್ಥಿರ ಸ್ವಹಿತದಾಗರ ಮಹಿಪತಿ ಮನೋಹರ ಮಹಾಮಹಿಯನ್ನುಳ್ಳನಹುದೋ ಉದಾರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿಯ ನೆನೆಯೋ ಪಾಮರ ಮನಸೆ ನೀ ತಾಮಸವನು ನೀಗಿ ಪ ಕಾಮಾದಿಗಳ ಜೈಸಾಮಹಿಮ ಸತ್ಯ ಭಾಮೇಶಗತಿಯೆಂದು ನೇಮವಹಿಸಿ ಬಿಡದೆ ನಾಮ ಪೊಗಳುವರ ಕಾಮಿತಗಳನಿತ್ತು ಪ್ರೇಮದಿಂ ಕಾಯ್ವಂಥ 1 ಗೋಪ ಗೋಪತಿ ನಮಿತ ಗೋಪಿಯ ಪ್ರಿಯಬಾಲ ಪಾಪನಿವಾರಣ ಆ ಪರಬ್ರಹ್ಮನ ಶ್ರೀಪಾದ ಪೊಗಳಲು ತಾಪತ್ರಯಂಗಳ ಲೋಪಮಾಡುವಂಥ 2 ಪರಮ ಶ್ರೀಗುರು ಎಂದು ಪರಮಾತ್ಮ ಶ್ರೀರಾಮ ಚರಣಸಾನ್ನಿಧ್ಯಕ್ಹೊಂದು ನರಕಯಾತನೆ ಗೆಲಿಸಿ ಬರುತಿರ್ಪ ಕಷ್ಟಗಳ ಪರಿಹರಿಸಿ ಕರಪಿಡಿದು ಕರುಣದಿ ಸಲಹುವ 3
--------------
ರಾಮದಾಸರು
ಹಗಲು ಸಮಯದಲಿ ಇರುಳು ನೋಡಿದ ಬಾವಿ ಗುರುಳಬಹುದೇ ನರರು ಈ ಜಗದೊಳು ಪ ಮರುಳು ಮಾಡುವ ಭವದುರುಳು ಬಂಧನದೊಳು ಸಿಗಲು ಬಯಸಬಹುದೇ ಅವಿವೇಕದಿ ಅ.ಪ ಅಡಿ ಐದು ಉದ್ದದ ಒಡಕು ಒಂಭತ್ತಿನ ಕಡು ದುಃಖ ದೇಹಕೆ ಸಿಡಿವುದು ತರವೆ ಪೊಡವೀಶನಾದರೂ ಮಡಿಯಲು ನಿನ್ನಯ ಸಡಗರವೆಲ್ಲವು ಹಿಡಿಯೊಳಗಲ್ಲವೇ 1 ಅನುದಿನದಲಿ ನೀನು ಹಣ ಹಣವೆನ್ನುತ ಕುಣಿಯುವುದನು ನೋಡಿ ಅಣಕಿಸುವರು ನಿನ್ನ ತನುಮನ ಕ್ಲೇಶವನನುಭವಿಸುತ ಸದಾ ಹಣವಗಳಿಸಲದನುಣುವರು ಬೇರಿಹರು 2 ಗೃಹಿಣಿ ಗೃಹಿಗಳೆಲ್ಲ ಕುಹಕವೆಂದರಿಯದೆ ಗೃಹವು ಎನ್ನದು ಎಂದು ಗೃಹಿಣಿ ಎನ್ನವಳೆಂದು ಬಹುವಿಧ ವೈಭವವೆನಗಿಹುದೆನ್ನುವ ಮಹದಾಗ್ರವನ್ನು ಸಹಿಸುವನೇ ಹರಿ 3 ಸಿರಿ ಸಂತತ ಗಳಿಸಲು ಅಂತಕ ತನುವನು ಸೆಳೆಯಲು ಗಳಿಸಿದ ಕಂತೆಗಳೆಲ್ಲವೂ ಎಂತು ನಿಲ್ಲಿಸುವುವು ಚಿಂತಿಸಿ ಮನದೊಳು ಹರಿಯನು ನಿಲಿಸೊ 4 ಊಹಿಸುತೆಲ್ಲವ ಈ ಮಹಿಯೊಳಗಿನ ಮೋಹವ ಜರಿಯುತ ಪಾಹಿ ಎಂದು ಆ ಮಹಾಮಹಿಮ ಪ್ರಸನ್ನ ಹರಿಯ ದಿವ್ಯ ಸ್ನೇಹಸುಜಲದ ಪ್ರವಾಹದೊಳಗೆ ನಲಿಯೊ 5
--------------
ವಿದ್ಯಾಪ್ರಸನ್ನತೀರ್ಥರು
ಹಣವೆನಲು ಹಣವಲ್ಲ ಹಣವಿಲ್ಲದವರಿಲ್ಲ ಪ ಗಣಿಸಲು ಮಹಾತ್ಮರೆ ಹಣವಂತರಯ್ಯ ಅ.ಪ ಹಣವು ವಿದ್ಯೆಯು ತಪಸು ಊಂಛ ವೃತ್ತಿಗಳು ಬ್ರಾ- ಹ್ಮಣಗೆ ಕ್ಷತ್ರಿಯರಿಂಗೆ ಶೌರ್ಯಾದಿಗಳ್ ಘನಚಮತ್ಕøತಿ ಯುಕ್ತಿಗಳು ವೈಶ್ಯರಿಗೆ ಶೂದ್ರ ಜನಕೆ ಭೂಪರಿಚರ್ಯ ಕೃಷ್ಯಾದಿಗಳೆ ಹಣವು 1 ಸಟೆ ಕಪಟ ಬಾಯಬಡುಕತನ ತಸ್ಕರ ಅಧರ್ಮಗಳಿಂದಲಿ ಘಾಸಿಯಿಂ ಗಳಿಸಿರುವ ಲೇಶವಾದರು ಪುಣ್ಯ- ರಾಶಿಯನು ಕೆಡಿಸದೇ ಲೇಸು ಮಾಡುವದೇ 2 ಅತ್ಯಾಸೆ ಪಿಶುನತೆಯು ತಾಮಸರಿಗೆ ಸತ್ಯ ಸಂಕಲ್ಪ ಗುರುರಾಮ ವಿಠಲನ ಸ- ರ್ವತ್ರ ಚಿಂತಿಸುವವಗೆ ಕೈತುಂಬ ಹಣವೂ 3
--------------
ಗುರುರಾಮವಿಠಲ
ಹಣ್ಣು ಕೊಳ್ಳಿರೋ ಪುಣ್ಯವಂತರು ಹಣ್ಣು ಕೊಳ್ಳಿರೋ ಹಣ್ಣು ಕೊಳ್ಳಿರಯ್ಯಾನ್ನಂತ ಗುಣಮಹಿಮೆಯುಳ್ಳ ಧ್ರುವ ಹಣ್ಣು ಬಂದದೆ ನೋಡ್ಯಾನಂದೋ ಬ್ರಹ್ಮಾಪಾಟಿಯಿಂದ ಕಣ್ದೆರದು ಕೊಂಡವರು ಧನ್ಯ ಧನ್ಯರೊ 1 ಹಣ್ಣಿಗೊಂದು ಹೆಸರು ಇಲ್ಲ ಇನ್ನೊಂದು ಕೊಸರು ಇಲ್ಲ ಚೆನ್ನಾಗಿ ಉನ್ಮನವಾಗಿ ಹಣ್ಣ 2 ಅಣ್ಣಗಳ ಬಂದು ಕಣ್ಣುಗೆಟ್ಟು ಹೋಗಬ್ಯಾಡಿ ಸಣ್ಣ ದೊಡ್ಡರೊಳಗಿಹ್ಯ ಹಣ್ಣ 3 ಉತ್ತುಮರುದ್ದೇಶವಾಗಿ ಮತ್ತೆ ಹತ್ತುಭಾರೆ ತುತ್ತಿಗೊಮ್ಮೆ ಬಾಯಿದೆರೆವ ಹಣ್ಣು 4 ಬಿತ್ತಿಬೆಳೆದ ಫಲವಲ್ಲ ಹೊತ್ತುಮಾರುವದಲ್ಲ ಚಿತ್ತದೊಳಗ್ಹತ್ತಿಲಿಹ ಹಣ್ಣು 5 ನಾಲ್ಕು ಮಂದಿ ತಿಳಿಯದೆ ಹೋಕಹೋದರಾರು ಮಂದಿ ಪುಕ್ಕಸಾಟಿ ದಣಿದರ್ಹದಿನೆಂಟು ಮಂದಿ ಕಾಣಿರೋ 6 ಹಣ್ಣು ಕೊಂಡು ಮಹಿಪತಿಯ ಪುಣ್ಯ ಪೂರ್ವಾಜಿತ ತಾನೆಧನ್ಯ ಧನ್ಯವಾದ ಗುರುಕೃಪೆಯಿಂದ ಕಾಣಿರೋ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹತ್ತಿಲಿಹÀ ವಸ್ತುನೋಡೊ ಮನವೆ ನಿತ್ಯ ನಿಜನಿರ್ಗುಣವ ಕೂಡೊ ಮನವೆ ಧ್ರುವ ಅತ್ತಲಿತ್ತಲಾಗದಿರು ಮನವೆ ಚಿತ್ತ ಚಂಚಲ ಮಾಡದಿರೆನ್ನ ಮನವೆ ಉತ್ತುಮ ಸುಪಥ ನೋಡು ಮನವೆ ನೆತ್ತಿಯೊಳಿಹ ಸುವಸ್ತು ಕೂಡೊ ಮನವೆ 1 ಹೋಕಹೋಗದಂತೆ ಎನ್ನ ಮನವೆ ಏಕರಸವಾಗಿ ಕೂಡೊ ಎನ್ನ ಮನವೆ ನಾಲ್ಕು ಶೂನ್ಯವ ಮೆಟ್ಟಿ ನೋಡು ಮನವೆ ಜೋಕೆಯಿಂದ ಜ್ಯೋತಿರ್ಮಯ ಕೂಡೊ ಮನವೆ 2 ಧನ್ಯವಿದು ರಾಜಯೋಗಮನವೆ ಭಿನ್ನವಿಲ್ಲದೆ ಬೆರೆದು ಕೂಡೊ ಮನವೆ ಚೆನ್ನಾಗಿ ಚಿನ್ಮಯ ನೋಡು ಮನವೆ ಅನ್ಯಪಥವಿನ್ಯಾತಕ ನೋಡು ಮನವೆ 3 ಗರ್ವಗುಣ ಹಿಡಿಯದಿರು ಮನವೆ ನಿರ್ವಿಕಲ್ಪನ ತಿಳಿದು ನೋಡು ಮನವೆ ಪೂರ್ವಪುಣ್ಯಹಾದಿ ಇದು ಮನವೆ ಸರ್ವರೊಳು ವಸ್ತುಮಯ ಒಂದೆ ಮನವೆ 4 ದೃಷ್ಟಿಸಿ ಆತ್ಮನ ನೋಡು ಮನವೆ ಪುಷ್ಟವಾಗಿ ಘನದೋರುವದು ಮನವೆ ಭ್ರಷ್ಟವಾಗಿ ಬಾಳಬ್ಯಾಡ ಮನವೆ ನಿಷ್ಠನಾಗಿ ನಿಜನೆಲೆಯಗೊಳ್ಳ ಮನವೆ 5 ಏರಿ ಆರುಚಕ್ರ ನೋಡು ಮನವೆ ಪರಮಾನಂದ ಸುಪಥ ಕೂಡೊ ಮನವೆ ಆರು ಅರಿಯದ ಹಾದಿ ಮನವೆ ತೋರಿಕೊಡುವ ಸದ್ಗುರು ಎನ್ನ ಮನವೆ 6 ಹರಿಭಕ್ತಿಯೊಳಗಿರು ಮನವೆ ಸಿರಿ ಸದ್ಗತಿ ಸುಖವ ಕೂಡೊ ಮನವೆ ಗುರುವಾಕ್ಯ ನಂಬಿ ನಡೆ ಮನವೆ ಪರಲೋಕಕ್ಕೆ ಸೋಪಾನವಿದು ಮನವೆ 7 ಪರದ್ರವ್ಯಗಲ್ಪದಿರು ಮನವೆ ಪರಸತಿಯ ನೋಡದಿರೆನ್ನ ಮನವೆ ಪರರ ನಿಂದ್ಯ ಮಾಡದಿರು ಮನವೆ ದಾರಿ ಹೋಗದಿರು ದುಷ್ಟರ ನೀ ಮನವೆ 8 ಸಜ್ಜನರ ಸಂಗ ಮಾಡೊ ಮನವೆ ಹೆಜ್ಜೆವಿಡಿದು ಪರಲೋಕ ಕೂಡೊ ಮನವೆ ಭೆಜ್ಜರಿಕೆ ಹಿಡಿಯೊ ಎನ್ನ ಮನವೆ ದುರ್ಜನರ ಸಂಗ ಮಾಡಬ್ಯಾಡೊ ಮನವೆ 9 ಕಂಗಳ ತೆರೆದು ನೋಡು ಮನವೆ ಮಂಗಳಾತ್ಮನ ಶ್ರೀಪಾದ ಕೂಡೊ ಮನವೆ ಹಿಂಗದಂತೆ ಕೂಡೊ ಬ್ಯಾಗೆ ಮನವೆ ಗಂಗೆಯೊಳು ಜಲಬೆರೆದಂತೆ ಮನವೆ 10 ಭೇದ ಬುದ್ಧಿಯ ಮಾಡಬ್ಯಾಡ ಮನವೆ ಸಾಧುಸಂತರ ಸುಬೋಧ ಕೇಳು ಮನವೆ ಭೇದಿಸಿ ತಿಳಿದುನೋಡು ಮನವೆ ಸದಮಲ ಬ್ರಹ್ಮ ಸೂಸುತಿದೆ ಮನವೆ 11 ಯುಕ್ತಿ ನಿನಗಿದು ನೋಡು ಮನವೆ ಭಕ್ತವತ್ಸಲ ಸ್ಮರಿಸು ಮನವೆ ಮುಕ್ತಿಯಿಂದಧಿಕಸುಖ ಮನವೆ ಭಕ್ತಿರಸದೊಳು ಮುಳಗ್ಯಾಡು ಮನವೆ 12 ಲೇಸು ಲೇಸು ಮಹಿಪತಿ ಸು ಮನವೆ ದಾಸನಾಗಿರುವ ವಾಸುದೇವನ ಮನವೆ ಭಾಸಿ ಪಾಲಿಪನ ಕೂಡೊ ಎನ್ನ ಮನವೆ ಭಾಸ್ಕರ ಮೂರ್ತಿಯ ನೋಡು ಮನವೆ 13
--------------
ಕಾಖಂಡಕಿ ಶ್ರೀ ಮಹಿಪತಿರಾಯರು