ಒಟ್ಟು 14277 ಕಡೆಗಳಲ್ಲಿ , 133 ದಾಸರು , 6728 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯತಿ ವರ್ಣನೆ ಕಾಶೀಮಠದ ಶ್ರೀ ಭುವನೇಂದ್ರರ ಸ್ತುತಿ ಕಂಡು ಕೃತಾರ್ಥನಾದೆ ಭುವನೇಂದ್ರರಂಘ್ರಿಯ ಕಂಡು ಕೃತಾರ್ಥನಾದೆ ಪ. ಕಂಡು ಕೃತಾರ್ಥನಾದೆ ಭೂ- ಮಂಡಲದಿ ಪೆಸರ್ಗೊಂಡು ಮೆರೆದಿಹ ಪುಂಡರೀಕದಳಾಕ್ಷ ಸತತಾ- ಖಂಡಸುಖ ಮಾರ್ತಾಂಡತೇಜರ ಅ.ಪ. ವಾರಿರುಹಭವಾಂಡದ ಭೂಮಧ್ಯ ವಿ- ಸ್ತಾರಜಂಬೂದ್ವೀಪದ ನವಖಂಡದೊಳ್ ಸಾರಭರತಖಂಡದÀ ಹಿಮಗಿರಿಯ ಪಾಶ್ರ್ವದ ತೋರ್ಪ ವಿಂಧ್ಯಾಚಲದ ಮಧ್ಯ ಭಾ- ಗೀರಥಿಯ ಪಶ್ಚಿಮ ಭೂಭಾಗದ ತೀರ ಕಾಶೀಮಠಸಂಸ್ಥಾನ ವಿ- ಚಾರಶಾಸ್ತ್ರವಿಶಾರದರ ಪದ 1 ವರ ರಾಜೇಂದ್ರ ಯತೀಂದ್ರರ ಕರಸಂಜಾ- ತರ ಗುರುಸುರೇಂದ್ರರ ಕರಕಮಲಮಧ್ಯದಿ ಧರಿಸಿರ್ದ ವಿಭುದೇಂದ್ರರ ಸರೋರುಹ ಕರಸಂಜಾತ ಮಹಾನುಭಾವರ ಕರುಣನಿಧಿ ಕಮನೀಯ ಸದ್ಗುಣ ಭರಿತ ಶ್ರೀಭುವನೇಂದ್ರರಂಘ್ರಿಯ 2 ಸುಂದರಮುಖಶೋಭೆಯ ಪೂರ್ಣಮಿ ಶುಭ ಚಂದ್ರಸನ್ನಿಭಕಾಂತಿಯ ಶೋಭಿಪ ನವ ಕುಂದರದನ್ತಪಂಕ್ತಿಯ ತಿಲಕದ ಛಾಯ ಮಂದಹಾಸಾನಂದ ಪುರಜನ ವೃಂದಪೂಜಿತಪಾದಪದ್ಮ ದ್ವಂದ್ವ ಸತತಾನಂದ ಸದ್ಗುಣ ಇಂದ್ರ ಶ್ರೀಭುವನೇಂದ್ರರಂಘ್ರಿಯ 3 ಶೃಂಗಾರರಸತೇಜರ ಯಮನಿಯಮಾದ್ಯ ಷ್ಟಾಂಗಯೋಗಸರ್ವಜ್ಞರ ಪಾಪಾತ್ಮರ ಕಂಗಳಿಗಗೋಚರ ಸತ್ಯಾವತಾರ ಮಂಗಳಾತ್ಮಕಸಂಗ ಸುಮಮನಸ ರಂಗ ಸಾಧ್ಯವೇದಾಂಕ ಕರುಣಾ ಪಾಂಗ ವಿಬುಧೋತ್ತುಂಗ ಅಂಗಜ ಭಂಗ ಶ್ರೀಯತಿಪುಂಗವರ ಪದ 4 ಎಷ್ಟೆಂದು ನಾ ಪೇಳಲಿ ಸದ್ಗುರುವರ- ರಿಷ್ಟಕೆ ತೋಷ ತಾಳಲಿ ದಾರಿದ್ರ್ಯದ ಕಷ್ಟವೆಲ್ಲ ಪರಿಹರಿಸಲಿ ದಯವಿರಲಿ ಎನ್ನಲಿ ಶ್ರೇಷ್ಠ ಗೌಡಸಾರಸ್ವತ ಸ- ಮಷ್ಟಿ ಕೊಂಕಣದೇಶವಿಪ್ರ ವಿ- ಶಿಷ್ಟ ಒಡೆತನ ಪಟ್ಟವಾಳುವ ಶ್ರೇಷ್ಠಯತಿವರರಂಘ್ರಿಕಮಲವ 5 ಆಶೆಯೊಂದುಂಟೆನಗೆ ಕಾವ್ಯವ ಓದ್ಯ- ಭ್ಯಾಸಗೈಯುವದು ಮಿಗೆ ಸನ್ನಿಧಾನದಿ ಪೋಷಿಸಿ ಎನ್ನ ಹೀಗೆ ರಕ್ಷಿಸಲು ಕಡೆಗೆ ಏಸು ಧನ್ಯನು ನಾನು ಕರುಣಾ ನಿಗಮ ವಿ- ಲಾಸರಂಘ್ರಿಗೆ ದಾಸದಾಸರ ದಾಸ ನಾನು ದಯಾಶರಧಿಯರ 6 ಸತತ ಸದ್ಯತಿಧರ್ಮದ ಪರಿಪಾಲಿಸಿ ಕ್ಷಿತಿಗತಿ ಪ್ರತಿವಾಸವನಂತೆಸೆವುತಾ ಮಿತ ಭಾಗ್ಯಸಂಪದವ ವಿಖ್ಯಾತವ ರತಿಪತಿಯ ಪಿತ ಕ್ರುತುಪಾಲಿತ ಸೂ- ನೃತಭಾಷಿತ ಲಕ್ಷ್ಮೀನಾರಾಯಣ ಸತತ ವೇದವ್ಯಾಸ ಶ್ರೀರಘು ಪತೀಚರಣಪೂಜಿತರ ಪದವನು 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಯತಿ ವರ್ಣನೆ ಕಾಶೀಮಠದ ಶ್ರೀ ಭುವನೇಂದ್ರರ ಸ್ತುತಿ ಕಂಡು ಕೃತಾರ್ಥನಾದೆ ಭುವನೇಂದ್ರರಂಘ್ರಿಯ ಕಂಡು ಕೃತಾರ್ಥನಾದೆಪ. ಕಂಡು ಕೃತಾರ್ಥನಾದೆ ಭೂ- ಮಂಡಲದಿ ಪೆಸರ್ಗೊಂಡು ಮೆರೆದಿಹ ಪುಂಡರೀಕದಳಾಕ್ಷ ಸತತಾ- ಖಂಡಸುಖ ಮಾರ್ತಾಂಡತೇಜರಅ.ಪ. ವಾರಿರುಹಭವಾಂಡದ ಭೂಮಧ್ಯ ವಿ- ಸ್ತಾರಜಂಬೂದ್ವೀಪದ ನವಖಂಡದೊಳ್ ಸಾರಭರತಖಂಡದÀ ಹಿಮಗಿರಿಯ ಪಾಶ್ರ್ವದ ತೋರ್ಪ ವಿಂಧ್ಯಾಚಲದ ಮಧ್ಯ ಭಾ- ಗೀರಥಿಯ ಪಶ್ಚಿಮ ಭೂಭಾಗದ ತೀರ ಕಾಶೀಮಠಸಂಸ್ಥಾನ ವಿ- ಚಾರಶಾಸ್ತ್ರವಿಶಾರದರ ಪದ 1 ವರ ರಾಜೇಂದ್ರ ಯತೀಂದ್ರರ ಕರಸಂಜಾ- ತರ ಗುರುಸುರೇಂದ್ರರ ಕರಕಮಲಮಧ್ಯದಿ ಧರಿಸಿರ್ದ ವಿಭುದೇಂದ್ರರ ಸರೋರುಹ ಕರಸಂಜಾತ ಮಹಾನುಭಾವರ ಕರುಣನಿಧಿ ಕಮನೀಯ ಸದ್ಗುಣ ಭರಿತ ಶ್ರೀಭುವನೇಂದ್ರರಂಘ್ರಿಯ2 ಸುಂದರಮುಖಶೋಭೆಯ ಪೂರ್ಣಮಿ ಶುಭ ಚಂದ್ರಸನ್ನಿಭಕಾಂತಿಯ ಶೋಭಿಪ ನವ ಕುಂದರದನ್ತಪಂಕ್ತಿಯ ತಿಲಕದ ಛಾಯ ಮಂದಹಾಸಾನಂದ ಪುರಜನ ವೃಂದಪೂಜಿತಪಾದಪದ್ಮ ದ್ವಂದ್ವ ಸತತಾನಂದ ಸದ್ಗುಣ ಇಂದ್ರ ಶ್ರೀಭುವನೇಂದ್ರರಂಘ್ರಿಯ3 ಶೃಂಗಾರರಸತೇಜರ ಯಮನಿಯಮಾದ್ಯ ಷ್ಟಾಂಗಯೋಗಸರ್ವಜ್ಞರ ಪಾಪಾತ್ಮರ ಕಂಗಳಿಗಗೋಚರ ಸತ್ಯಾವತಾರ ಮಂಗಳಾತ್ಮಕಸಂಗ ಸುಮಮನಸ ರಂಗ ಸಾಧ್ಯವೇದಾಂಕ ಕರುಣಾ ಪಾಂಗ ವಿಬುಧೋತ್ತುಂಗ ಅಂಗಜ ಭಂಗ ಶ್ರೀಯತಿಪುಂಗವರ ಪದ4 ಎಷ್ಟೆಂದು ನಾ ಪೇಳಲಿ ಸದ್ಗುರುವರ- ರಿಷ್ಟಕೆ ತೋಷ ತಾಳಲಿ ದಾರಿದ್ರ್ಯದ ಕಷ್ಟವೆಲ್ಲ ಪರಿಹರಿಸಲಿ ದಯವಿರಲಿ ಎನ್ನಲಿ ಶ್ರೇಷ್ಠ ಗೌಡಸಾರಸ್ವತ ಸ- ಮಷ್ಟಿ ಕೊಂಕಣದೇಶವಿಪ್ರ ವಿ- ಶಿಷ್ಟ ಒಡೆತನ ಪಟ್ಟವಾಳುವ ಶ್ರೇಷ್ಠಯತಿವರರಂಘ್ರಿಕಮಲವ5 ಆಶೆಯೊಂದುಂಟೆನಗೆ ಕಾವ್ಯವ ಓದ್ಯ- ಭ್ಯಾಸಗೈಯುವದು ಮಿಗೆ ಸನ್ನಿಧಾನದಿ ಪೋಷಿಸಿ ಎನ್ನ ಹೀಗೆ ರಕ್ಷಿಸಲು ಕಡೆಗೆ ಏಸು ಧನ್ಯನು ನಾನು ಕರುಣಾ ನಿಗಮ ವಿ- ಲಾಸರಂಘ್ರಿಗೆ ದಾಸದಾಸರ ದಾಸ ನಾನು ದಯಾಶರಧಿಯರ6 ಸತತ ಸದ್ಯತಿಧರ್ಮದ ಪರಿಪಾಲಿಸಿ ಕ್ಷಿತಿಗತಿ ಪ್ರತಿವಾಸವನಂತೆಸೆವುತಾ ಮಿತ ಭಾಗ್ಯಸಂಪದವ ವಿಖ್ಯಾತವ ರತಿಪತಿಯ ಪಿತ ಕ್ರುತುಪಾಲಿತ ಸೂ- ನೃತಭಾಷಿತ ಲಕ್ಷ್ಮೀನಾರಾಯಣ ಸತತ ವೇದವ್ಯಾಸ ಶ್ರೀರಘು ಪತೀಚರಣಪೂಜಿತರ ಪದವನು7
--------------
ತುಪಾಕಿ ವೆಂಕಟರಮಣಾಚಾರ್ಯ
ಯತಿಗಳು ಟೀಕಾಚಾರ್ಯರು ಜಯರಾಯಾ ಜಯರಾಯಾ ಪ ದಯಕರ ಸಜ್ಜನಭಯಹರ ಗುರುವರ ಅ.ಪ ವಾಸವ ನೀ ವಸುಧೀಶನ ನಿಜ ಕೂಸೆನಿಸೀಪರಿ ದೇಶದಿ ಮೆರೆದೆ 1 ಸತಿಯಳ ತ್ಯಜಿಸಿ ಯತಿರೂಪ ಧರಿಸಿ ಪÀತಿತರ ಶಾಸ್ತ್ರವ ಹತಮಾಡಿದಿ ನೀ 2 ಸುಧಾದಿಗ್ರಂಥವ ಮುದದಲಿ ರಚಿಸಿ ಬುಧಜನಸ್ತೊಮಕೆ ಒದಗಿಸಿ ಕೊಟ್ಟಿ3 ಅಲವಬೋಧರ ಮತ ಬಲವತ್ತರಮಾಡಿ ಜಲಜನಾಭನ ಮನ ಒಲಿಸಿದ್ಯೊ ಜೀಯಾ 4 ಪ್ರಮಿತಜನಗಣನಮಿತ ಪದಾಂಬುಜ ಅಮಿತಮಹಿಮ ನಿನ್ನ ನಮಿಸುವೆ ದಿನದಿನ 5 ಯಾತಕೆ ಎನ್ನನು ಈ ತೆರನೋಡುವಿ ದಾತಗುರುಜಗನ್ನಾಥ ವಿಠಲ ಪ್ರೀಯ6
--------------
ಗುರುಜಗನ್ನಾಥದಾಸರು
ಯತಿಗಳು ಶ್ರೀಜಯತೀರ್ಥರು ಕರುಣಿಸೊ ಜಯರಾಯಾ ಗುರುವರ್ಯ ಚರಣವೆ ಗತಿಯಯ್ಯ ಹೇ ಜಿಯಾ ಪ ರಘುನಾಥನ ಪುತ್ರ ಪವಿತ್ರ ರಾಘವನ ಪ್ರೀತಪ್ರಾತ್ರ ಚರಿತ್ರ ಮಘವನಾ ನೀ ನಘದೂರ ಶ್ರೀ ರಘುರಾಮನ ಕಿಂಕರನ ಅಮೋಘ ಸೇವಕನೊ 1 ಕುಕರ್ವಿಣಿಯ ತೀರಾ ಘೋರಕುವಾದಿಗಳ ಕು ಲಕುಠಾರ ಗಂಭೀರ ಸಕಲಶಾಸ್ತ್ರಸತ್ಸಾರ ಟೀಕಕರ ಕುಕವಿಶೃಗಾಲಕುಲಕಾಲಭಯಂಕರ 2 ಎರಗೋಳಾದ್ರಿಯೊಳು ಗುಹೆಯೊಳು ನಿರುತ ಪ್ರವಚನಗಳು ನಿತ್ಯದೊಳು ಮರುತಮತಾಂಬುಧಿಚಂದಿರ ಸುಂದರ ವರಸುಜ್ಞಾನಮಣಿಕಿರಣವ ತೋರಿದೆ 3 ಗುರು ಮಧ್ವಮುನಿ ತತ್ತ್ವಗ್ರಂಥದ ಕ್ಷೀರಶರಧಿಗೆ ಮಂಥಾ ವುನ್ನಂಥಾ ಮರುತನನುಗ್ರಹ ಪ್ರಗ್ರಹದಿಂದಲಿ ವರಮಥನದಿ ಇತ್ತೆ ಅಮೋಘವಸ್ತುಗಳೆಲ್ಲಾ4 ಉತ್ತಮ ಗ್ರಂಥವನಧೀ ಮಥನದಿ ಉತ್ತಮ ವಸ್ತುಗಳನಿತ್ತೆಯೊ ತತ್ತ್ವಪ್ರಕಾಶಿಕಾ ಮಹಾಲಕುಮಿಯು ಚಂದಿರನೇ ಪ್ರಮೇಯದೀಪಿಕಾ ಸುಧೆಯೇ ನ್ಯಾಯಸುಧಾಗ್ರಂಥ ಶ್ರೀ ಕೌಸ್ತುಭದಂತಿಹ ನ್ಯಾಯದೀಪಿಕಾ 5 ದುರುಳ ಮಾಯಾಖಂಡ ನಾಯುಧವೂ ಸರ್ವಜೀಯನೆ ಐರಾವತದಂತೆ ಋ ಗ್ಭಾಷ್ಯಟೀಕಾ ನ್ಯಾಯವಿವರಣವು ಉಚ್ಛೈಶ್ರವಸ್ಸು 6 ಕರ್ಮನಿರ್ಣಯ ಟೀಕಾ ವಜ್ರಾಯುಧ ಆ ಮಹಾಪಾರಿಜಾತ ವಿಖ್ಯಾತಾ ಶ್ರೀಮದ್ವಿಷ್ಣು ತತ್ತ್ವ ನಿರ್ಣಯ ಟೀಕೆಯು ಕಲ್ಪವು ಉಪನಿಷತ್ ಭಾಷ್ಯ ಟೀಕೆಯು 7 ಈಶಾವಾಸ್ಯ ಭಾಷ್ಯ ಟೀಕಾ ಸಂತಾನವೆಂಬೋ ಮಹಾವೃಕ್ಷಾ ಪ್ರ ಬಿಸಜ ಮಂದಾರ ಪ್ರಮಾಣ ಪದ್ಧÀ್ದತಿ ಹರಿಚಂದನಕೆ ಸಮನಾದ ವಾದಾವಳಿ 8 ಪಾಕಶಾಸನಾಂಶಾ ಕರುಣಿಸು ಶ್ರೀಕರಪದಪಾಂಸ ಯತೀಶಾ ನಾರ ಪತಿಯೆ ಶ್ರೀಕಾಗಿನೀ ತೀರದಿ ಏಕಾಂತದಿ ನಿಂದೆ ಲೋಕ ವಂದಿತ ದೇವಾ 9 ಮಂದಭಾಗ್ಯಜನರಾ ಪರಮಾ ನಂದದಿಂದಲಿ ನೋಡಿ ದಯಮಾಡಿ ತಂದೆಯಂದದಿ ಕಾಯ್ದಾನಂದವೀವೆ ನಿತ್ಯಾ10 ಪರಮಪಾತಕಿ ನಾನು ಗುರುವೆ ತವ ಪಾ ದ ರಕ್ಷಕವಚವ ತೊಡಿಸೊ ಉಳಿಸೋ ನಿರುತ ಶರಣರ ಕಾಯ್ವ ಶ್ರೀ ವೆಂಕಟೇಶನ ಪ್ರೀಯಾಉರಗಾದ್ರಿವಾಸವಿಠಲನ ದಾಸಾ 11
--------------
ಉರಗಾದ್ರಿವಾಸವಿಠಲದಾಸರು
ಯತಿಗಳು ಇರುವರ್ಯತಿಗಳ್ಹನ್ನೆರಡು ಮಂದಿ ರಘುವ(ರ) ಅಕ್ಷೋಭ್ಯತೀರ್ಥರ ನಡುವೆ ಕುಳಿತಿದ್ದಂಥ ಟೀಕೆ ಬರೆದ ಜಯ ಮಹರಾಯರಿವರು ಪಾಲಿಸೆನ್ನನು ಜಯರಾಯ ಪ ಎತ್ತಿನ ಜನ್ಮದಿ ಬಂದು ಶ್ರೀಮದಾನಂದತೀರ್ಥರಲ್ಲಿದ್ದು ಶಿಷ್ಯತ್ವ ವಹಿಸಿಕೊಂಡು ಬಿಟ್ಟು ಹರಿದಿನ ಮೇವು ನೀರನೆ ಪುಸ್ತಕದ ಗಂಟ್ಹೊತ್ತು ತಿರುಗುತ ತತ್ವಜ್ಞಾನವ ತಿಳಿದು ದ್ವಾದಶ ಸ್ತೋತ್ರ ಹೇ ಳುತ ಪ್ರಕಟವಾದರು 1 ಗೋವುಸುತನ ಜನ್ಮ ನೀಗಿ ಮಂಗಳವೇಡಿ ಸಾಹುಕಾರನ ಸುತನಾಗಿ ತೇಜಿಯನೇರಿ ಮಾ(ಮಹಾ?) ನದಿ ಮಧ್ಯದಲಿ ಮಂಡಿಬಾಗಿ ನೀರನು ಕುಡಿಯ- ಲಾಕ್ಷಣ ನೋಡಿ ಕರೆತರಲವರ ಗುರುಗಳ ಪಾದಕÀ್ವಂದನೆ ಮಾಡಿ ನಿಂತರು 2 ಅಕ್ಷೋಭ್ಯತೀರ್ಥರು ಆ ಮಹಿಮರ ನೋಡಿ ಕೊಟ್ಟು ಕಾಯ್ಕರದಲಿ ಜುಟ್ಟು ಜನಿವಾರವನು ಕಿತ್ತೆ ಕಾವಿಶಾಟಿಗಳನು ಉಟ್ಟು ದಂಡ ಕಾಷ್ಠವ್ಹಿಡಿದು ಶ್ರೇಷ್ಠಯತಿ ಆಶ್ರಮದಿ ಕುಳಿತಿರೆ ಹೆತ್ತವರು ಹುಡುಕುತ್ತ ಬಂದರು 3 ಕಂಡಕಂಡಂತೆ ಮಾತುಗಳಾಡಿ ಗುರುಗಳಿಗೆ ಧೋಂಡು ರಘುನಾಥನ ಕರಕೊಂಡು ಹಿಂದಕೆ ಹೋಗಿ ಹೆಂಡತಿ ಸಹಿತೆರೆದು ಪ್ರಸ್ತ ಮಂಡಿಗಿ ಮೃಷ್ಟಾನ್ನ ಉಣಿಸಿ ಚೆಂದದ್ವಸ್ತ್ರಾಭರಣ ಕೊಟ್ಟುರುಟಣೆಯ ಮಾಡಿಸ್ಯಾರತಿಯ ಬೆಳಗೋರು 4 ಸುಪ್ಪತ್ತಿಗೆಯು ಮಂಚ ಕುತ್ತಣಿ ಹಾಸಿಕೆಯಲ್ಲಿ ಇಟ್ಟು ತಾಂಬೂಲ ಬು- ಕ್ಕಿ ್ಹಟ್ಟು ಪರಿಮಳ ಗಂಧ ಸಕ್ಕರೆ ಕ್ಷೀರಗಳು ಲಡ್ಡಿಗೆ ಅಚ್ಚಮಲ್ಲಿಗೆ ಮಾಲೆ ಫಲಗಳು ರತ್ನ ಜ್ಯೋತಿ ಪ್ರಕಾಶದೊಳಗುತ್ತಮರು ಕುಳಿತಿರಲರ್ಥಿಯಿಂದಲಿ 5 ಮಡದಿ ಮಂಚಕೆ ಬಂದ ಸಡಗರವನು ನೋಡಿ ಹೆಡೆಯ ತೆಗೆದು ಕಣ್ಣು ಬಿಡುತ ವಿಷನಾಲಿಗೆಯ ಚಾಚುತಾರ್ಭಟಿಸಿ ಬರುತಿರಲ- ಸಾಧ್ಯಸರ್ಪವು ಕಡಿವುದೆನುತೆದೆ ಒಡೆದು ಕೂಗಲು ಹಡೆದವರು ಬಾಯ್ಬಿಡುತ ಬಂದರು 6 ಹಾವಾಗ್ಹರಿದು ಹುತ್ತವ ಸೇರಿಕೊಂಬುವೋದೀಗ ನಾವು ಮಾಡಿದಪರಾಧ ಕ್ಷಮಿಸಬೇಕೆನುತಲಿ ಬೇಡಿಕೊಂಡಾಕ್ಷಣದಿ ಮಗನ ನೋಡಿ ಕರೆತಂದಾಗ ಅಕ್ಷೋಭ್ಯರಾಯರಂಘ್ರಿಚರಣಕೊಪ್ಪಿಸಿ ನಾವು ಧನ್ಯರಾದೆವೆಂದರು 7 ಅತಿ ಬ್ಯಾಗದಿಂದವರಿಗ್ಯತಿ ಆಶ್ರಮವಕೊಟ್ಟು ದೇ- ವತಾ ಪೂಜೆಗಧಿಕಾರ ಮಾಡಲು ಗುರುಗಳು ಪಾಂಡಿತ್ಯದಿ (ಇ)ವರಿಗೆ ಪ್ರತಿಯು ಇಲ್ಲ- ವೆಂದೆನಿಸಿ ಮೆರೆವರು ಪತಿತರನೆ ಪಾವನವ ಮಾಡಿ ಸದ್ಗತಿಯ ಕೊಡುವ ಸಜ್ಜನ ಶಿರೋಮಣಿ 8 ಮಧ್ವರಾಯರು ಮಾಡಿದಂಥ ಗ್ರಂಥಗಳಿಗೆ ತಿದ್ದಿ ಟೀಕೆ ಟಿಪ್ಪಣಿ ಮಾಡಿ ಪದ್ಮನಾಭ ಭೀಮೇಶಕೃಷ್ಣಗೆ ಪರಮ ಭಕ್ತರೆನಿಸಿ ಮೆರೆವರು ವಿದ್ಯಾರಣ್ಯನ ಗರುವ ಮುರಿದು ಪ್ರಸಿದ್ಧರೆನಿಸೋರು ಸರುವ ಲೋಕದಿ 9
--------------
ಹರಪನಹಳ್ಳಿಭೀಮವ್ವ
ಯತಿರಾಜಂ ಭಜರೇ ಮಾನಸಪತಿತೋದ್ಧಾರಕ ಯದುಗಿರಿ ನಿಲಯ ಪಶ್ರೀಮದ ದಾಶರಥೀನುತ ಚರಣಂಯಾಮುನಾ ಮುನಿ ಸಂಭಾವಿತ ಕರುಣಂಶ್ರೀಮದನಂತಂ ಕರುಣಾಭರಣಂರಾಮಾಯಣ ಮೂಲತತ್ವ ವಿಸ್ತರಣಂ 1 ಸಕಲವೇದ ಶಾಸ್ತ್ರಾಗಮ ನಿಪುಣಂವಕುಳಾಭರಣ ಪಾದಾಂಬುಜ ಭರಣಂಮುಕುಳಿತ ವೈಷ್ಣವ ತತ್ವೋದ್ಧರಣಂ[ವಿಕಸಿತ ವಿಶಿಷ್ಟಾದ್ವೈತ ವಿಶೇಷಂ] 2 ವ್ಯಾಸ ತತ್ವಸಾರಾಬ್ಧಿ ವಿಸ್ತರಣಂವಾಸುದೇವಕೃತ ಗೀತೋದ್ಧರಣಂವಾಸವನುತ ಮಾಂಗಿರಿಹರಿ ಚರಣಂದಾಸದಾಸೀಜನ ಪಾತಕಹರಣಂ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಯತಿರಾಜ ಯತಿರಾಜ ಕ್ಷಿತಿದೇವ ತತಿನುತ ರಾಘವೇಂದ್ರ ಆದಿಯುಗದಿ ಪ್ರಹ್ಲಾದ ಸುನಾಮದಿ ಮೋಹದಿ ಭಜಿಸುತ ಮಾಧವನೊಲಿಸಿದ 1 ಘನ ವಿರಾಗ್ರಣಿ ಜನಪತಿ ಬಾಹ್ಲೀಕ ನೆನಿಸಿ ದ್ವಾಪರದಿ ಜನಿಸಿದ ಗುಣನಿಧಿ 2 ವಾಸವನಾಯಕ ದಾಸಾರ್ಯರಿಗುಪ ದೇಶಗೈದ ಗುರುವ್ಯಾಸ ಪೋಷಿಸೈ 3 ಕ್ಷೋಣಿಯೊಳಗೆ ಕುಂಭಕೋಣ ಸುಕ್ಷೇತ್ರದಿ ವೀಣೆ ವೆಂಕಟಾಭಿಧಾನದಿ ಜನಿಸಿದ 4 ದೀನ ಜನಾಮರಧೇನು ಸುಧೀಂದ್ರರ ಪಾಣಿಪದ್ಮಭವ ಮಾಣದೆ ಕಾಯೋ 5 ತುಂಗಭದ್ರ ಸುತರಂಗಿಣಿ ತೀರದಿ ಕಂಗೊಳಿಸುವ ಶತಪಿಂಗಳ ತೇಜ6 ಜಲಧಿ ಶಶಾಂಕ 7 ಬಾಲನ ಬಿನ್ನಪ ಲಾಲಿಸಿ ಪ್ರೇಮದಿ ಪಾಲಿಪುದೈ ಮಂತ್ರಾಲಯ ನಿಲಯ8 ಪರಿಮಳ ಗ್ರಂಥವ ವಿರಚಿಸಿ ದುರ್ಮತ ಮುರಿದು ಸಜ್ಜನರಿಗೊರೆದ ಮಹಾತ್ಮ 9 ಪರಿಪರಿಭವದೊಳು ಪರಿತಪಿಸುವೆನೈ ಪರಮ ಕರುಣದಲಿ ಪರಿಕಿಸಿ ಪೊರೆಯೊ 10 ಕಾಮಿತದಾಯಕ ಭೂಮಿಜೆನಾಯಕ ಶಾಮಸುಂದರನ ಪ್ರೇಮದ ಸೇವಕ 11
--------------
ಶಾಮಸುಂದರ ವಿಠಲ
ಯತಿರಾಜಾ - ಪಾಲಿಸೊ ಎನ್ನ - ಯತಿರಾಜಾ ಪ ಯತಿರಾಜಾ ಪಾಲಿಸೊ ಎನ್ನ - ಅಹಂಮತಿಯ ಕಳೆದು ಗುರುವರೇಣ್ಯ | ಆಹ ಸತತದಿ ಹರಿ ಧ್ಯಾನ | ರತನನ ಮಾಡಿ ಸದ್ ಗತಿಯ ಸೇರುವಂಥ | ಪಥದಲ್ಲಿರಿಸೊ ರಾಜಅ.ಪ. ವೀಣಾ ವೆಂಕಟ ನಾಮಾಭಿಧ | ಕುಂಭಕೋಣ ಪುರದೊಳು ಮೆರೆದಾ | ಓವಿಜ್ಞಾನಿ ಸುಧೀಂದ್ರರೊಲಿಸಿದಾ | ಬಹುಮಾನವಾಗಿ ಶಾಲು ಪಡೆದಾ | ಆಹಏನು ಇದಾಶ್ಚರ್ಯ | ಮಾನ ಉಳಿವದೆಂತುನಾನೊಂದು ಕಾಣೆ | ನೆನುತಾವಸನ ಮುಂದಿಟ್ಟ 1 ಅಂದಿನಂದಿನ ಪಾಠಕ್ಕೆಲ್ಲ | ಟೀಕೆಛಂದಾಗಿ ಬರೆದಿರುವಲ್ಲ | ನಮ್ಮಹಿಂದಿನ ಸಂಶಯವೆಲ್ಲ | ನೀಗಿಮುಂದೆ ಜರುಗಿತು ಪಾಠವೆಲ್ಲ | ಆಹಎಂದು ನಮ್ಮ ವಸನ | ಕಂದ ನಿನ್ನಯ ಮೇಲೆಹೊಂದಿಸಿ ಮುದದಿಂದ | ಬಂದೆವೆಂದರ ಶಿಷ್ಯ 2 ಗುರುವು ಪಟ್ಟರು ಬಲು ಮೋದಾ | ಸುಧಾಪರಿಮಳಾರ್ಯರೆಂಬ ಬಿರುದಾ | ಪೊಂದಿಇರಲು ಕಾಲಾಂತರದಿಂದಾ | ಪಡೆದೆವರ ಯತ್ಯಾಶ್ರಮವವರಿಂದಾ | ಆಹಮೆರೆಸಿದೆ ರಾಮರ | ವರ ವೈಭವದಿಂದದುರುಳ ಮಾಯ್ಗಳಮತ | ತರಿದಿಟ್ಟೆ ವಾದದಿ 3 ಬೇಗೆಯಿಂದಳುತಿದ್ದ ಶಿಶುವಿಗೆ | ಚೈಲಆಗಸದೊಳು ನೀನು ನಿಲಿಸಿದೆ | ಹಾಂಗೆಮಾರ್ಗದಿ ಪ್ರಸವಿಸದವಳೀಗೆ | ನೀರನುಗಮಿಸುತ ನೀನು ಪೊರೆದೇ | ಆಹನಿಗಮಾಲಯ ವಾಸ | ರಾಘವೇಂದ್ರ ಗುರುವೆಬಗೆ ಬಗೆ ಗ್ರಂಥವ | ಮಿಗಿಲಾಗಿ ರಚಿಸೀದೆ 4 ಪಂಗು ಬಧಿರ ಮೂಕ ಜನರು | ನಿಮ್ಮಹಿಂಗದೆ ಬಂದು ಸೇವಿಪರು | ಬಂದಭಂಗಗಳೆಲ್ಲ ನೀಗುವರು | ಯತಿಪುಂಗನೆ ನಿನಗೆ ಸರಿಯಾರು | ಆಹಗಂಗಾ ಜನಕ ರೂ | ಪರಿಗಳು ನಾಲ್ಕರಿಂಅಂಗಲಾಚಿಪ ಜ | ನಂಗಳ ಪೊರೆಯುವ 5 ಅಘ ಪತಿ ಗೋ | ವಿಂದನ ಮಂದಿರಬಂದು ಸೇರುವುದಕ್ಕೆ | ಅಂದ ಸೋಪಾನವು 6 ವರಹಸುತೆ ತೀರ ವಾಸಾ | ಭಕ್ತಸುರತರುವೆ ನಿನ್ನ ದಾಸಾ | ನಾಗಿಇರಿಸೊ ಭೂ ತಳಾಧೀಶ | ಬೇಡ್ವೆವರ ಒಂದ ನಾನಿನ್ನ ಅನಿಶ | ಆಹಗುರುಗೋವಿಂದ ವಿಠಲನ | ಚರಣಾರವಿಂದವನಿರುತ ಭಜಿಸುವಂಥ ವರಮತಿ ಕೊಟ್ಟನ್ನ7
--------------
ಗುರುಗೋವಿಂದವಿಠಲರು
ಯತಿವರೇಣ್ಯರ ಮನುಜ ಸತತ ಭಜಿಸೆಲೊ ಪ ಸತತ ವಿಮಲ ಚರಿತ ಸತ್ಯವತಿಯ ಸುತರ ಮನವರಿತ ಅ.ಪ ಅಜಜನಕನ ಮಹಿಮೆ ಮರೆತು ಸುಜನರೆಲ್ಲ ಬಳಲುತಲಿರೆ ಭುಜಗಶಯನನಾಜ್ಞೆಯಿಂದ ರಜತಪುರದೊಳವತರಿಸಿದ 1 ವಾಸುದೇವ ನಾಮದಿಂದ ಶೈಶವವನು ಕಳೆದು ತುರಿಯ ಆಶ್ರಮವನು ಸ್ವೀಕರಿಸಿದ 2 ಜೀರ್ಣವಾದ ನಿಗಮಾರ್ಥಗಳ ನಿರ್ಣಯಿಸಿದ ಜ್ಞಾನಾನಂದ ಪೂರ್ಣವ್ಯಾಸರೊಳ್ ಶ್ರವಣಮಾಡಿ ಪೂರ್ಣಪ್ರಜ್ಞರಾಗಿ ಮೆರೆದ3 ನರಿಯುತಕುತಿಗಳಿಂದ ಬೋಧಿಪ ದುರುಳವಾದಗಳನು ಮುರಿದು ಹರಿಸರ್ವೋತ್ತಮನೆಂದರುಹಿದ4 ಶುಕ್ತಿರಜತ ಜ್ಞಾನದಂತೆ ವಿಶ್ವವೆಲ್ಲ ಮಿಥ್ಯಾವೆಂಬೊ ಯುಕ್ತಿಗಳನೆ ಖಂಡಿಸಿ ಜಗತ್ ಸತ್ಯವೆಂದು ದೃಢದಿ ತೋರಿದ 5 ಬ್ರಹ್ಮನು ಗುಣಶೂನ್ಯನೆಂದು ದುರ್ಮತಗಳ ಹರಡುವವರ ಹಮ್ಮು ಮುರಿದು ಜಗದಿ ಶಾಸ್ತ್ರ ಮರ್ಮಗಳನು ವಿವರಿಸಿದ 6 ದೂಷ್ಯವಾದ ಇಪ್ಪತ್ತೊಂದು ಭಾಷ್ಯಗಳನು ಮುರಿದು ಶುದ್ಧ ಸಾರ ಪೇಳಿದ 7 ಶ್ರವಣ ಮನನ ಧ್ಯಾನಗಳಿಂ ಸಿರಿರಮಣನ ಜ್ಞಾನ ಪೊಂದಿ ವರ ಕರುಣವ ಪಡೆಯುವುದೇ ನಿರತ ಸುಖಕೆ ಪಥವೆಂದರುಹಿದ 8 ಹನುಮ ಭೀಮ ಮಧ್ವ ರೂಪದಿ ರಾಮ ಕೃಷ್ಣ ವೇದವ್ಯಾಸರ ನಿರತ ಸೇವೆ ಮಾಡಿ ಶ್ರೀಹರಿಯೊಲಿಮೆಯಿಂದ ಪ್ರಸನ್ನರಾದ 9
--------------
ವಿದ್ಯಾಪ್ರಸನ್ನತೀರ್ಥರು
ಯಥಾದೇವೊ ತಥಾ ಗುರೌ ಶ್ರುತಿ ಹೇಳಿದ ಸನ್ಮತಲಿರ್ಯೊ ಧ್ರುವ ವೃಥಾ ಅಭಾವ ನೀ ಹಿಡುವರೆ ಸ್ವತ:ಸಿದ್ಧವ ತಾಂ ಬಿಡುವರೆ ಸತ್ಸಂಗದಲಿ ನೋಡಿನ್ನಾರೆ ಚಿತ್ಸುಖ ಹೊಳೆವರು ಕಣ್ಣಾರೆ 1 ಮುಗಿಲಿಗೆ ಮತ್ತೆ ಮುಗಿಲುಂಟೆ ಹಗಲಿಗೆ ಹಗಲಾಗುದುಂಟೆ ಜಗ ಇಹುದಕೆ ಜಗಮುಂಟೆ ಹೀಗಾದ ಮ್ಯಾಲೆ ವಸ್ತು ಎರಡುಂಟೆ 2 ಅನುಭವಕಿದರಿಟ್ಟು ಬಾಹುದು ಖೂನ ಹೇಳವ್ಯಾವು ನೋಡು ವೇದ ದೀನ ಮಹಿಪತಿಗಿದೆ ಬೋಧ ಭಾನುಕೋಟಿತೇಜನೊಂದೇ ತಾನಾದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಯದು ಕುಲಾಂಬುನಿಧಿ ಪೀಯೂಷಕ್ಷಕರ ಪಂಚಸಾಯಕಾನಂತ ಕಮನೀಯ ರೂಪಾ ಕಮಲಾಯತಾಕ್ಷನೆ ಬ್ರಹ್ಮ, ವಾಯು, ಸುರಮುನಿ ಮುಖ್ಯಧ್ಯೇಯ ವಿಷ್ಣೋ ಪ ಗೋತ್ರಾರಿ ಪುತ್ರನಿಜಮಿತ್ರ ಸುಪವಿತ್ರ ಚಾ ಕಳತ್ರ ಶುಭಗಾತ್ರಗತಿ ಸತ್ರತ್ರಿನೇತ್ರನುತ ಸಕಲಜಗ ಸೂತ್ರ ನೋಟಕ ತೋತ್ರವೇತ್ರ ಪಾಣೆ 1 ಭವ ಭವ ಭಂಗ ವರಗೋಪಾಂಗನಾ ಅಂಗ ಸಂಗಲೀಲಾರತ ಭುಜಂಗ ಪರಿಯಂಕ ಸುರ ತುಂಗ ಗಂಗಾಜನಕ ಸರ್ವಾಂತರಂಗ ಹರಿ ಮಂಗಳಾತ್ಮಕ ತಿರುವೆಂಗಳೇಶಾ 2 ನಂದಕಂದ ಶ್ರೀ ಮುಕುಂದ ದುರಿತಾಂಧ ಅರ ವಿಂದಭಾಂಧವ ದಿತಿ- ಜವೃಂದ ವ್ಯಾಳಖಗೇಂದ್ರ ತಂದೆ ಮಹಿಪತಿ ನಂದನ ಪ್ರಿಯ ಗೋವಿಂದ ಆ ನಂದ ಕಂದನೆ ಸಿಂಧುಶಯನ ದೇವಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯಮ ತನ್ನ ಪುರದಿ ಸಾರಿದನು ಎಮ್ಮ ಕಮಲನಾಭನ ದಾಸರ ಮುಟ್ಟದಿರಿಯೆಂದು ಪ. ಭುಜದಲೊತ್ತಿದ ಶಂಖಚಕ್ರಾಂಕಿತವನ್ನು ನಿಜ ದ್ವಾದಶನಾಮ ಧರಿಸಿಪ್ಪರಾ ತ್ರಿಜಗವಂದಿತ ತುಲಸಿಯ ಮಾಲೆ ಹಾಕಿದ ಸುಜನರಂಗಣವ ಪೊಗದೆ ಬನ್ನಿರೆಂದು 1 ಗೋಪಿಚಂದನ ಬಿಟ್ಟು ದೇಹಕ್ಕೆ ಭಸ್ಮವ ಲೇಪಿಸಿ ಹರಿಹರರೊಂದೆಂಬ ಪಾಪಿಗಾಳೆಳತಂದು ಕಣ್ಣು ಕಳಚಿ ಅಂಧ ತಾಮಸಿನೊಳಗ್ಹಾಕಿ ಕಲ್ಲು ದಬ್ಬಿರೊ ಎಂದು 2 ತಾಳದಂಡಿಗೆ ನೃತ್ಯಗೀತ ಸಮ್ಮೇಳದಿ ಊಳಿಗವನು ಮಾಳ್ಪ ಹರಿದಾಸರ ಕೇಳುತಲೊಮ್ಮೆ ಕರಗಳ ಮುಗಿದು ನ - ಮ್ಮಾಳುಗಳೆನುತ ಪೇಳದೆ ಬನ್ನಿರೆಂದು 3 ಗುರುಮುದ್ರೆಯವನು ತಾನೆಂದು ಪ್ರಾಣಿಗಳ ಮಂ- ದಿರಕೆ ಪೋಗಿ ಪೋಗಿ ನಿರ್ಬಂಧಿಸಿ ಬರಿದೆ ಬೈದು ಬಳಲಿಸುವ ಪಾಪಿಗಳ ಕೊರೆದು ಕುಟ್ಟಿತಂದು ಮುರಿದು ಕೊಲ್ಲಿರೊ ಎಂದು 4 ಅನ್ಯದೈವ ಅನ್ಯಮಂತ್ರ ತಂತ್ರವ ಬಿಟ್ಟು ಪನ್ನಗಶಯನನೆ ಗತಿಯೆನುತ ಉನ್ನತ ಹರಿದಿನ ವ್ರತವನಾಚರಿಪ ಪ್ರ- ಸನ್ನರ ಗುಣವ ಕೆಣಕದೆ ಬನ್ನಿರೆಂದು 5 ಚರ್ಮಕ್ಕೆ ಸಿಡಿ ಊರಿ ಬೇವಿನುಡುಗೆವುಟ್ಟು ಚಿಮ್ಮುತ ಚೀರುತ ಬೊಬ್ಬೆಗಳಿಡುತ ಕರ್ಮ ಕೂಗುರಿಯಾಗಿ ಪ್ರಾಣಹಿಂಸೆಯ ಮಾಳ್ಪ ಬ್ರಹ್ಮೇತಿಕೋರನ ಬ್ಯಾಗನೆ ಎಳತನ್ನಿ 6 ಕೇಶವ ಹರಿ ಅಚಲಾನಂದವಿಠಲನ್ನ ಶೇಷಗಿರಿಯ ತಿರುಮಲೇಶನ ದಾಸರ ದಾಸರ ದಾಸನೆಂದೆನಿಸುವ ದಾಸರ ಗುಣವ ಕೆಣಕದೆ ಬನ್ನಿರಿ ಎಂದು 7
--------------
ಅಚಲಾನಂದದಾಸ
ಯಮರಾಯ ಪೇಳ್ದ ದೂತರಿಗೆ ಲಕ್ಷ್ಮೀ ರಮಣನ ದಾಸರಿದ್ದೆಡೆಗೆ ಪೋಗದಿರೆಂದು ಪ ವೇದ ವ್ಯಾಕರಣ ಶಾಸ್ತ್ರಗಳೋದಿ ಶ್ರಾದ್ಧವೇ ಕಾದಶಿ ದಿನದಿ ಮಾಡುತಲಿಪ್ಪರಾ ಭೇದಮತವ ಮಿಥ್ಯವೆನುತಲಿಪ್ಪ ಮಾಯ ವಾದಿಗಳೆಳ ತಂದು ನರಕದೊಳಿಡಿರೆಂದು 1 ತಿರಿಪುಂಡ್ರವನಿಟ್ಟು ಭಸ್ಮದೇಹಕೆ ಪಟ್ಟೆ ಕೊರಳಿಗೆ ರುದ್ರಾಕ್ಷಿ ಸರವ ಕಟ್ಟಿ ಕುರಿಗಳ ಕೊಯ್ದು ಯಜ್ಞವ ಮಾಳ್ಪೆವೆನುತಲಿ ಹರಿಹರರೊಂದೆಂಬರೆಳತನ್ನಿರೆಂದು 2 ಶಿವನೆ ತಾನೆಂದು ಜಾನ್ಹವಿ ತೀರದಲಿ ಪಾ ರ್ಥಿವ ಲಿಂಗನ ಪೂಜಿಪ ಅವಿವೇಕರಾ ಶಿವರಾತ್ರಿಗಳಲಿ ಆಹಾರ ಬಿಡುವವರ ಉ ರವ ನರಕದೊಳ್ಪವಣಿ ಬಿಡಿಸಿರೆಂದು 3 ಮಳೆ ಚಳಿ ಬಿಸಿಲು ಕತ್ತಲೆಯೊಳು ಬರಲು ನ ಮ್ಮಿಳೆಯದೊಳು ಸ್ಥಳವಿಲ್ಲೆಂಬರ ಕಳವಿಲವರ ದ್ರವ್ಯಗಳನಪಹರಿಸುವ ಬಲು ನೀಚರ ಪಿಡಿದೆಳೆದು ತನ್ನಿರೋ ಎಂದು 4 ಶ್ರೀ ತುಳಸಿಯ ಬಿಟ್ಟು ಹಲವು ಪುಷ್ಪದಿ ಜಗ ನ್ನಾಥವಿಠಲನ ಪೂಜಿಸುತಿಪ್ಪರಾ ಮಾತನಾಡಿ ವೇದಮಂತ್ರ ಬಿಡುವರ ಯಾತನ ದೇಹವ ಕೊಟ್ಟು ಬಾಧಿಸಿರೆಂದು 5
--------------
ಜಗನ್ನಾಥದಾಸರು
ಯಮುನಾತೀರದಿ ಕೊಳಲೂದಿ ಕೃಷ್ಣಾ ಪ. ರಮಣಿಯರ ಮನ ಸೆಳೆವನೆ ಕೃಷ್ಣಾ ಅ.ಪ. ಮನೆಗೆಲಸವು ಕೈ ಜಾರುತಲಿಹುದೇ ಸುಮಶರನೈಯ್ಯನು ಕೊಳಲೂದೆ ಸಖಿ 1 ತನ್ನಯ ಕರದೊಳ್ ರನ್ನದ ಕೊಳಲೊಳ್ ಚನ್ನಿಗರಾಗದೊಳೂದೆ ಸಖಿ 2 ಭೋಗಿಶಯನೆ ಶ್ರೀ ಶ್ರೀನಿವಾಸ ಧೊರೆ ಅನುರಾಗದಿ ಕರೆವಾ ಕೊಳಲೂದಿ ಸಖಿ ಎಮ್ಮ ಅನುರಾದಿ ಕರೆವಾಕೊಳಲೂದಿ ಸಖಿ 3
--------------
ಸರಸ್ವತಿ ಬಾಯಿ
ಯಮುನೇ ದುರಿತೋಪಶಮನೇ ಪ ಶರಣೆಂಬೆ ತವ ಪಾದಾಂಬುರುಹ ಯುಗಳಿಗೆ ದಿವಾ ಕರತನಯೆ ಸಪ್ತಸಾಗರ ಭೇದಿನೀ ಹರಿತೋಷ ಲಾಭ ಸುಂದರಿ ಸುಭಗೆ ನಿನ್ನ ಸಂ ದರುಶನಕೆ ಬಂದೆ ಭಕ್ತರ ಪಾಲಿಪುದು ಜನನಿ 1 ಮಕರಾದಿ ಮಾಸದಲಿ ವಿಖನಸಾವರ್ತ ದೇ ಶಕೆ ಬಂದು ವಿಜ್ಞಾನ ಭಕುತಿಯಿಂದಾ ತ್ರಿಕರಣದ ಶುದ್ಧಿಯಲಿ ಸಕೃತ ಸ್ನಾನದ ಗೈಯೆ ಸಕಲ ಸುಖವಿತ್ತು ದೇವಕೀಸುತನ ತೋರಿಸುವೆ 2 ಕನಕಗರ್ಭಾವರ್ತವೆನಿಪ ದೇಶದಲಿ ಸ ಜ್ಜನರ ಪಾಲಿಪೆನೆಂಬ ಅನುರಾಗದಿ ಪ್ರಣವಪಾದ್ಯಗೆ ವಿಮಲ ಮುನಿಯಂತೆ ನಿರುತ ಕುಂ ಭಿಣಿಯೊಳಗೆ ಸರಸ್ವತಿ ದ್ಯುನದಿಯಂದದಿ ಮೆರೆದೆ 3 ಜಮದಗ್ನಿ ಮುಖ್ಯ ಸಂಯಮಿಗಳನುದಿನದಿ ಆ ತಮ ತಮ್ಮೊಳಗೆ ರಮಾರಮಣ ದಾಮೋದರನ ಸುಮಹಿಮೆಗಳನು ಪೊಗಳುತಮಿತ ಮೋದದಲಿಹರು 4 ಪಿಂಗಳಾಧಿಷ್ಠಿತೆ ಶುಭಾಂಗಿ ಸುಮನವನಿತ್ತು ಕಂಗೊಳಿಸು ಎನ್ನಂತರಂಗದಲ್ಲಿ ತುಂಗ ಸುಮಹಿಮ ಜಗನ್ನಾಥ ವಿಠಲನ ಸುಗು ಣಂಗಳ ತುತಿಪುದಕೆ ಮಂಗಳ ಮತಿಯನೀಯೇ 5
--------------
ಜಗನ್ನಾಥದಾಸರು