ಒಟ್ಟು 9531 ಕಡೆಗಳಲ್ಲಿ , 132 ದಾಸರು , 5434 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಣ್ಣವರುದ್ದುಸಕಾಗಿ ಬಿನ್ನಯಿಸುವೆನು ನಾನುಎನ್ನ ಆಳುವ ದೊರೆಯೆ ನಿನ್ನ ಸ್ವಾತಂತ್ರ್ಯ ಸಂಕಲ್ಪಅರಿತವರಲ್ಲ ಚೆನ್ನಾಗಿ ಸಾಕಬೇಕು ಹರಿಯೆ ಪ. ಸಾಧುಸಂಗಗಳಿಲ್ಲ ಓದಿ ಕೇಳಿದರಲ್ಲಭೇದಅಭೇದಗಳ ಅರಿದುಯಿಲ್ಲಕ್ರೋಧ ಬಿಟ್ಟವರಲ್ಲ ಸಾಧುಗಳು ಯೋಗ್ಯತೆಲಿಹಾದಿ ಏನೀಜೀವರುಗಳಿಗೆ ಹೇ ಸ್ವಾಮಿ 1 ವಸ್ತ್ರದ ಮೂಲವು ಹತ್ತಿಯ ಕಾಳಹುದುಬಿತ್ತಿ ಬೆಳೆಸಿ ಅದರ ವ್ಯಕ್ತಿ ಮಾಡಿವಿಸ್ತರಿಸಿ ನೋಡಿಸಿದರೆ ಪಟ್ಟುವು ಆಗುವುದುವಸ್ತುಗಳ ವ್ಯಕುತಿ ನಿನ್ನಿಂದಾಗಬೇಕು 2 ಮಾಡಲರಿಯರು ತುತಿಯ ನೋಡಲರಿಯರು ನಿನ್ನಬೇಡಲರಿಯರು ತಮ್ಮ ಹಿತದ ಕಾಮಮಾಡುವರು ನಿನ್ನವರ ಮಮತೆಯಾದರು ಮನಸು-ಗೊಡು ಈಪರಿ ಜೀವಗಳಿಗೆ ಗತಿಯೇನೊ 3 ನಿನ್ನಿಂದ ಸೃಷ್ಟಿಯಾದ ಜೀವರುಗಳಿಗಿನ್ನುಇನ್ನು ಮೂರು ಬಗೆಯ ಭಕುತರೊಳಗೆಎನ್ನಿಂದ ಉತ್ತಮ ಮಧ್ಯಮಾಧಮರುಗಳುಇನ್ನಾವ ಇವರ ವಿವೇಕ ನೀ ಬಲ್ಲೆ 4 ಎನಗಿಂದುತ್ತಮರು ಎನಗೆ ಪ್ರಾರ್ಥಿಸುವರುಎನಗೆಂದವರಲೆನಗೆ ಹಿತ ಪೇಳ್ವರುಘನ ಅವರ ಮಧ್ಯಸ್ಥರನು ಹುಡುಕ ತಿಳಿಯದುಅನುವರಿತು ಅವರವರ ಗತಿಗೆ ಅನುಕೂಲನಾಗು 5 ನೀತವನು ನೀ ಬಲ್ಲೆ ಅವರವರ ಸಾಧನವುಯಾತಕೆ ಅವರಗೊಡವೆ ನಿನಗೆ ಎಂಬ್ಯನೀತವಾಗಿದೆ ನೋಡೊ ಪರಸ್ಪರ ಜೀವರಿಗೆಪ್ರಾರ್ಥನೆಯು ಎಂಬುವುದು ಮಾತು ಪುಸಿಯಲ್ಲ 6 ನಿನ್ನವರು ಆಗಿ ಪಾಡನುಬಡುತ ಇಪ್ಪುವರಕಣ್ಣಲಿಕಂಡು ನಾ ಬಿಡುವನಲ್ಲಮನ್ನಿಸು ನಿನ್ನ ಚಿತ್ತ ಮನ್ನಿಸದಲೆ ಪೋಗುಎನ್ನ ಸ್ವಭಾವವಿದೆ ಗೋಪಾಲವಿಠಲ 7
--------------
ಗೋಪಾಲದಾಸರು
ಸಂತ ಚರಣಕೆ ಭಾವದಿ ಮಣಿಯೋ | ಅಂತ ರಂಗದಿ ಬಹಯದುಕುಲಮಣಿಯೋ ಪ ಬಿಡದೇ ಮಾಡಲು ಅವರನುಸರಣಿಯೋ | ಕೊಡುವನು ನಾಮದಿ ಕನಿಭರಣಿಯೋ 1 ವರವರದ್ಹೇಳಲು ಬೋಧಕ ಹಣಿಯೋ | ದೊರೆವುದು ಸುಜ್ಞಾನತನದ ಖಣಿಯೋ 2 ಗುರುಮಹಿಪತಿ ಪ್ರಭು ವಶವರ್ತಣಿಯೋ | ಕರುಣಿಸಿ ಪುನರಪಿ ಭವದಲ್ಲಿ ದಣಿಯೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸತತ ಚಿಂತಾಮಣಿಯೆ | ಸುರರೊಳಗೆ ನಿನಗೆಣಿಯೆಸಂತರನ ಪೊರೆವಂಥ ಮುನಿಯೆ | ಸುಖ ಜ್ಞಾನ ಖಣಿಯೇ ಪ ಭವ ಭುವನ ನಿಧಿ ತಾರಕನೆ 1 ಭಾರತಿ ಮನೆ | ಕುಂಬಾರನ ವುಳಹಿದನೆಭಾರತದೊಳು ನೀನೆ | ಭೂಭಾರ ನಿಳುಹಿದವನೆ2 ಶಂಖ ಚಕ್ರಾಧರನೆ ನಿ- | ಶ್ಶಂಕ ಮಹಾಮಹಿಮನೆಶಂಕರ ಸುರಪಾಲಕನೆ | ಶಂಕ ಚಕ್ರವಿತ್ತವನೆ 3 ಘಟಿಕಾಚಲ ವಾಸ | ಉತ್ಕøಷ್ಟ ನರಹರಿಯ ದಾಸಭಟ ಜನರಿಗೆ ಬಲು ಲೇಸಾ ಅ- | ಜಟವಾಗಿ ಕೊಡುವ ಸಂನ್ಯಾಸಾ 4 ಸಿರಿ ನಿತ್ಯ ಸ್ಮರಿಸುವ ಗುರು ಶಿರೋರತ್ನಾ 5
--------------
ಮೋಹನದಾಸರು
ಸಂತರಾ ಕೂಡ ಬಾರದೇ | ಏ ಮನುಜಾ ಪ ಸಂತರಾ ಕೂಡಲಾಗೀ | ಭ್ರಾಂತತನವು ಹೋಗಿ | ಅಂತರ ಸುಖದೋರದೇ 1 ಭೃಂಗಿ ಕೀಟಕ ಕೂಡೀ | ಸಂಗದಿ ಧ್ಯಾನ ಮಾಡಿ | ಭೃಂಗಿ ತಾನಾಗಿ ಹಾರದೇ 2 ಗುರು ಮಹಿಪತಿ ಪ್ರೀಯಾ | ದೊರೆವನು ನಿನ್ನಕೈಯ್ಯಾ | ಮರಳುತನವ ಸೇರದೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಂತರಾ ಪದವಿಡಿಯೋ ಪ ಸಂತರಾ ಪದವಿಡಿಯೋ | ಭ್ರಾಂತಿಗಳೆಲ್ಲಾ ಕಡಿಯೋ | ಅಂತಭಾವನೆಯಿಂದ ತಂತುವಿಡಿದು ನಿಜ | ಶಾಂತಿಸುಖವ ಪಡಿಯೋ ಮನುಜಾ | ಶಾಂ | 1 ಡಾಂಭಿಕಾತನಗಳೆದು | ಬೆಂಬಲಗುಣವಳಿದು | ಹಂಬಲಿಸದೇ ಮನ ಸ್ತಂಭಪರಿಯ ಮಾಡಿ | ನಂಬುಗೆ ದೃಢ ತಳೆದು ಮನುಜಾ | ನಂ | 2 ನಾನಾರೆಂಬುದು ಮರೆದೀ | ಜ್ಞಾನದೆಚ್ಚರ ತೊರೆದೀ | ಕಾನನ ಹೊಕ್ಕಂತೆ ನಾನಾ ಸಾಧನದಿಂದ | ಏನ ಸುಖವ ಪಡೆದೀ ಮನುಜಾ | ಏ | 3 ಸುಲಭವೇ ಮಾನುಷ ಜನ್ಮ | ಮ್ಯಾಲ ಅಗ್ರಜ ಧರ್ಮಾ | ಚಲಿಸಲಿ ಪರಿಮತ್ತೆ ಇಳೆಯೊಳು ದೊರಕುದೇ | ತಿಳಿನಿಜಗತಿ ವರ್ಮಾ ಮನುಜಾ | ತಿ| 4 ಕೋಟಿ ಮಾತಿಗೆ ವಂದೇ | ನೀಟ ಸುಪಥವಿದೇ | ಧಾಟಿಲಿ ಮಹಿಪತಿ ಸುತ ಪ್ರಿಯನೊಲುಮೆಯಿಂದ | ಕೋಟಿಳಗಳಿನಿಳದೇ ಮನುಜಾ | ಕೋ | 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಂತರೆನಬಹುದು ಸಜ್ಜನರಿವರನಾ ಪ ಇಂಥ ಗುಣಗಳಿಂದ ಯುಕ್ತರಾಗಿಪ್ಪರ ಅ.ಪ. ಸ್ವಾಂತಸ್ಥಾ ನುತ ಸರ್ವಾಂತರಾತ್ಮಕನೆಂದು ಚಿಂತಿಸುತ ಮನದೊಳು ನಿರಂತರದಲಿ ನಿಂತಲ್ಲಿ ನಿಲ್ಲದೆ ದುರಂತ ಮಹಿಮನ ಗುಣವ ಸಂಸ್ತುತಿಸುತನವರತ ಶಾಂತರಾಗಿಹರಾ 1 ಲೇಸು ಹೊಲ್ಲೆಗಳು ಪ್ರದ್ವೇಷ ಗೇಹಗಳು ಸಂ ತೋಷ ಕ್ಲೇಶಗಳಿಗವಕಾಶ ಕೊಡದೆ ದೋಷ ವರ್ಜಿತ ಹೃಷಿಕೇಶ ಮಾಡುವನೆಂದು ಭೇಶನಂದದಲಿ ಪ್ರಕಾಶಿಸುತಲಿಹರಾ 2 ಮೇದಿನಿ ದಿವಿಜರೊಳು ಸಾಧು ಜನರೊಳು ಧರ್ಮಕರ್ಮಗಳೊಳು ಶ್ರೀದನೊಳು ಗೋವುಗಳೊಳಗೆ ದ್ವೇಷಿಪರಿಗೆ ಅ ನ್ನೋದಕಗಳೀಯದೆ ನಿಷೇಧಗಯ್ಯುತಲಿಹರಾ 3 ಎನ್ನ ಪೋಲುವ ಪತಿತರಜ್ಞಾನಿಗಳು ಜಗದೊ ಳಿನ್ನಿಲ್ಲ ಪತಿತ ಪಾವನನೆನಿಸುವ ಜಾಹ್ನವೀ ಜನಕಗಿಂದಧಿಕರ್ಯಾರಿಲ್ಲೆಂದು ಉನ್ನತೋತ್ಯಂಶದಿಂದ ಸನ್ನುತಿಸುತಿಪ್ಪವರ 4 ಸತ್ಯ ಸಂಕಲ್ಪ ಏನಿತ್ತಿದ್ದೆ ಪರಮ ಸಂ ಪತ್ತು ಎನಗೆನುತ ಸದ್ಭಕ್ತಿಯಿಂದಾ ನಿತ್ಯದಲಿ ಕೀರ್ತಿಸುತ ಪುತ್ರಿಮಿತ್ರಾದಿಗಳು ಭೃತ್ಯಾನುಭೃತ್ಯರೆಂದರ್ತಿಯಲಿ ಸ್ಮರಿಸುವರಾ 5 ಜನುಮ ಜನುಮಗಳಲ್ಲಿ ಎನಗೆ ಜನನೀ ಜನಕ ಅನುಜ ತನುಜಾಪ್ತ ಪೋದನ ಭೂಷಣಾ ಅನಿಮಿತ್ತ ಬಂಧು ಒಬ್ಬನೇ ಎನಿಸುತಿಪ್ಪ ಸ ಪರ ಸೌಖ್ಯ ರೂಪನೆಂಬುವರಾ 6 ನಾಗೇಂದ್ರಶಯನ ಭವರೋಗಾಪಹರ್ತ ಪಾ ವಜ್ರ ಅಮೋಘ ಶೌರ್ಯ ತ್ರೈಗುಣ್ಯ ವರ್ಜಿತ ಜಗನ್ನಾಥ ವಿಠಲಗೆ ಕೂಗಿ ಕೈಮುಗಿದು ತಲೆಬಾಗಿ ನಮಿಸುವರಾ 7
--------------
ಜಗನ್ನಾಥದಾಸರು
ಸಂತೆಯ ನೋಡಲು ಬಂದವನಾ | ಭ್ರಾಂತತನವ ನೋಡಿ ಮಾನವನಾ ಪ ಪರಿ ವಾಸನೆಕಾರರು ವಿಷಯದ | ಸರಕಿನ ಚಟ್ಟೆಯ ರಂಗಡಿಯು | ದುರುಳತ ನವಗುಣ ಭೂಸಿನ ರಾಶಿಯು | ನೆರೆದಿಹ ಸಂದಣಿ ಜನದೊಳಗ 1 ಇಂತಿಹ ನರದೇಹ ಪ್ಯಾಟೆಯ ಸಡಗರ | ಪ್ರಾಂತವ ಕಾಣದೆ ಮರುಳಾಗಿ | ನಿಂತಲ್ಲಿ ನಿಲ್ಲದೆ ನೋಡುತ ತಿರುಗುತ | ಕಂಥಿಯ ಕಳೆದನು ಹೆಗಲಿನಾ 2 ಗುರುಮಹೀಪತಿ ಸ್ವಾಮಿಯ ಗಡಚಿನ | ಶರಣಿರವಳಿಹುಗದೆವೆ ಮರೆದು | ಧರಿಯೊಳು ಉಣಲಿಲ್ಲ ಉಡಲಿಲ್ಲ ಬಂದಿವ | ಬರುದೆವೆ ಮುಮ್ಮಳಿ ಘಳಿಸಿದನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸತ್ತು ಚಿತ್ತಾನಂದ ಭಕ್ತಜನಬೆಂಬಲನೆ ಸತ್ಯಾತ್ಮ ಸರ್ವೋತ್ತಮ ಪ ಮೃತ್ಯುಸಂಹರ ಸರ್ಗಮತ್ರ್ಯಪಾತಾಳತ್ರಯ ಶೌರಿ ಅ.ಪ ಬದ್ಧಕುಲಹರಣ ಗೋವರ್ಧನೋದ್ಧಾರ ಕ್ಷೀ ರಾಬ್ಧಿ ಕನ್ನಿಕಾರಮಣ ಬದ್ಧಸಂಸಾರದೊಳಗೆ ಬಿದ್ದು ಬಳಲುವ ಎನ್ನ ನುದ್ಧರಿಸು ದಯಭೂಷಣ ಬಿದ್ದೆ ನಿಮ್ಮಯಪದಕೆ ಮಧ್ವಮುನಿಪ್ರಿಯನೆ ಪರಿ ಶುದ್ಧನೆಂದೆನಿಸೆನ್ನ ಶುದ್ಧಪದ್ಧತಿಗಳನು ತಿದ್ದು ಎನ್ನೊಳಗಿದ್ದು ಶುದ್ಧಚೈತನ್ಯರೂಪ ಭೂಪ 1 ಕಪಟಬುದ್ಧಿಯ ಕಳೆದು ಅಪರೂಪ ನಿಜಜ್ಞಾನ ಕೃಪೆಮಾಡು ಭಕ್ತಲೋಲ ಅಪರೋಕ್ಷಮತಿ ನೀಡಿ ಅಪಮೃತ್ಯು ಪರಿಹರಿಸು ಅಪರಿಮಿತ ಮಹಿಮ ಜಾಲ ಸುಫಲದಾಯಕ ನಿಮ್ಮ ಜಪವೆನ್ನ ಜಿಹ್ವೆಯೊಳು ಸ್ಥಾಪಿಸೈ ಭಜಕಜನಪಾಲ ಕಪಿವರದ ವನಮಾಲ ಕಪಟಗಳಕುಲಕಾಲ ಕೃಪಾದೃಷ್ಟಿನೀಡೆನ್ನೊಳು ಕೇಳು 2 ಭ್ರಷ್ಟನು ಇವನೆಂದು ಬಿಟ್ಟಿ ಬೇಸರ ಬೇಡ ಮುಟ್ಟಿಭಜಿಪೆ ತವಪಾದವ ಎಷ್ಟು ತಪ್ಪಿರ್ದರು ಸುಟ್ಟು ಸಫಲೆನಿಸೆನ್ನ ಕೆಟ್ಟ ಬವಣೆ ಕಳಿಯಭವ ಹುಟ್ಟಿ ಸಾಯುವ ಮಹಕೆಟ್ಟ ಕಷ್ಟದ ಹಾದಿ ಕಟ್ಟುಮಾಡು ಹೇ ಮಾಧವ ದಿಟ್ಟ ಶ್ರೀರಾಮ ಎನ್ನ ಇಷ್ಟದೇವರು ನೀನೆ ಶಿಷ್ಟ ಸಜ್ಜನರ ಪ್ರೇಮಿ ಸ್ವಾಮಿ 3
--------------
ರಾಮದಾಸರು
ಸತ್ಯ ಸಂಕಲ್ಪ ನೀನಹುದೆಲೊ ಜಗದೊಳು ಭೃತ್ಯವತ್ಸಲ ಹರಿಯೆ ಪ. ನಿತ್ಯ ತೃಪ್ತನೆ ವ್ಯಾಪ್ತ ಜಗದಿ ಹರಿಯೆ ದೊರೆಯೆ ಅ.ಪ. ಜನನ ಮರಣ ವಿದೂರನೆ ದೇವಕಿ ತನಯ ರುಕ್ಮಿಣೀಶ ಘನಭವ ವನಧಿಯ ದಾಟಿಸಿ ಸಲಹೋ ವನಜ ನಯನ ದೇವ ಸತತದಿ 1 ಕಮಲಾಕ್ಷ ಕಮಲೇಶ ಕಮಲಪಾಣಿ ಪದ ಕಮಲವೆನಗೆ ತೋರೊ ಕಮಲನಾಭ ಹೃತ್ಕಮಲದಿ ನಿಲ್ಲೊ ಕಮಲಮುಖನೆ ದೇವ ಶ್ರೀಹರಿ 2 ಭಕ್ತಕಮಲ ಬಂಧು ವ್ಯಾಪ್ತ ದಯಾಸಿಂಧು ಉತ್ತಮನೆ ನೀನೆಂದು ಎತ್ತ ನೋಡಲು ಸುರರೆತ್ತಿ ಕೈ ಪೊಗಳಲು ಮತ್ತೆ ನಿನಗೆ ಸರಿಯೆ ಜಗದೊಳು 3 ಶ್ರೀನಿವಾಸನೆ ಕಾಯೊ ಮಾನನಿಧಿಯೆ ಎನ್ನ ಹೀನ ಕರ್ಮವ ಕಳೆಯೊ ಶ್ರೀನಿಧಿ ದ್ರೌಪದಿ ಮಾನ ಕಾಯ್ದನೆ ಗಾನಲೋಲ ಕೃಷ್ಣ ನರಹರಿ 4 ಸಂಕರ್ಷಣನೆ ಮನ ಪಂಕಜದಲಿ ನಿಂತು ಶಂಕಿಸದಲೆ ಕಾಯೊ ಪಂಕಜಮುಖ ಹರಿ ಗೋಪಾ- ಲಕೃಷ್ಣವಿಠ್ಠಲ ಶಂಖ ಚಕ್ರಧರನೆ ಪೊರೆಯೊ ನೀ5
--------------
ಅಂಬಾಬಾಯಿ
ಸತ್ಯ ಸಂಕಲ್ಪ ಸ್ವಾತಂತ್ರ ಸರ್ವೇಶ ಸರ್ವೋತ್ತಮನೆ ಸಾರ್ವಭೌಮಾ ಪ ಭೃತ್ಯರಿಗೆ ಬಂದ ಪರಿಪರಿ ಭಯಗಳನೆ ಕಳೆದುನಿತ್ಯದಲಿ ಕಾಯ್ವ ಸ್ವಾಮೀ ಪ್ರೇಮೀ ಅ.ಪ. ಆವ ಜನುಮದ ಫಲವೊ | ಆವ ಕ್ರಿಯಗಳಿಂದಆವ ಸಾಧನದ ಬಗೆಯೋ ||ಆವುದಿಂದಾವುದಕೆ ಘಟನೆಯನು ಮಾಳ್ಪೆಯೊಆವುದೊ ನಿನ್ನಾಟವೋ ||ಆವ ಪರಿಯಿಂದಲ್ಲಿ ಜೀವಿಗಳ ಸಲಹುವಿಯೊಆವ ನಿನ್ನಾಧೀನವೋ |ದೇವ ದೇವೇಶ ನಿನ್ನ | ಭಾವ ಬಲ್ಲವರಾರೊಭಾವಜನ ಪಿತ ಕೃಪಾಳೊ | ಕೇಳೋ 1 ತೈಜಸ ಪ್ರಾಜ್ಞ ವಿಶ್ವರೂಪಗಳಿಂದಸ್ವಪ್ನ ಕಾಲದಲಿ ನೀನೂ ||ಸುಪರ್ವಾಣ ದೈತ್ಯರ ಸೃಜಿಸಿ ಮನೆಯನು ಮಾಡಿಅಪರಿಮಿತ ಕಾರ್ಯಗಳನೂ |ಸುಫಲ ದುಷ್ಕರ್ಮಗಳ ತೋರಿಸೀ ಜೀವಕ್ಕೆಕ್ಲುಪುತವಾಗಿದ್ದವೆಲ್ಲಾ |ಕೃಪೆಯಿಂದ ತೋರಿ ಬದಾಪತ್ತುಗಳ ಕಳೆವಅಪರಿಮಿತ ಸಾಗರಾ | ಶೂರಾ 2 ಎನ್ನಂಥ ಪಾಪಿಷ್ಠರಿನ್ನಿಲ್ಲ ಧರೆಯೊಳಗೆ ನಿನ್ನಂಥ ಕರುಣಿಯಿಲ್ಲಾ ||ಚೆನ್ನಗುರು ವಿಜಯರಾಯರ ಪೊಂದಿದವನೆಂದೂಮನ್ನಿಸಿ ಸಲಹಬೇಕೋ |ಘನ್ನ ಸಂಸಾರದೊಳು ಬವಣೆ ಬಂದಟ್ಟಿದರುನಿನ್ನ ಸ್ಮøತಿಯೊಂದು ಬರಲೀ |ಸನ್ನುತಾಂಗಿಯ ರಮಣ ವ್ಯಾಸವಿಠಲ ಮಧ್ವಮುನಿಗೊಲಿದೆ ಉಡುಪಿವಾಸಾ | ಶ್ರೀಶಾ 3
--------------
ವ್ಯಾಸವಿಠ್ಠಲರು
ಸತ್ಯಧ್ಯಾನತೀರ್ಥರು ಇಷ್ಟು ಸುಲಭದಲಿ ಈ ಮುದ್ದು ಯತಿ ವರರಿಗೆ ಪ್ರೇಷ್ಠತಮ ನೀ ನೊಲಿದ ಬಗೆಯೇನೋ ರಾಮಾ ಪ ಪಟ್ಟ ಪುತ್ರನ ಶ್ರೇಷ್ಠ ಪೀಠದಲಿ ಕುಳಿತಿಂದು ಮುಟ್ಟಿ ಪೂಜಿಪ ಭಾಗ್ಯಗಿಟ್ಟಹುದೆ ಏನೆಂಬೆ ಅ.ಪ. ಚಿಕ್ಕತನದಲೆ ನೂಕಿ ವಿಷಯ ವಿದ್ಯೆಗಳನ್ನು ಚೊಕ್ಕ ಶಾಸ್ತ್ರಗಳಲ್ಲಿ ಇಕ್ಕಿ ದಾಸರ ಮನವಲಿದ್ಯೋ ಕಕ್ಕಸವುಭವವೆಂದು ವೈರಾಗ್ಯ ಧರಿಸುತಲಿ ಭಕ್ತಿ ಮಾಳ್ಪುದ ನೋಡಿ ಮುಕ್ತರಾಶ್ರಯ ವಲಿದ್ಯೋ 1 ದಾನಶೂರರು ಬಹು ನಿದಾನ ವಂತರು ಹಾಗೆ ಮಾನ ಸಾಗರರೆಂದು ಜ್ಞಾನಿ ಪ್ರಾಪ್ತನೆ ವಲಿದ್ಯೋ ದೀನ ಜನ ಮಂದಾರ ಮಾನ್ಯ ಮುನಿಕುಲ ತಿಲಕ ಶೂನ್ಯವಾದಧ್ವಾಂತ ಭಾನು ವೆಂದೊಲಿದ್ಯೋ 2 ಮೋದವಿತ್ತರು ಸತ್ಯಧ್ಯಾನ ತೀರ್ಥರು ಹಿಂದೆ ಸಾಧಿಸುತ ಸುಖಮತದ ಜಯ ಭೇರಿ ಜಗದೀ ಸಾಧು ಜನರ ಜ್ಞಾನ ಖೇದವಳಿಯುತ ಪ್ರಮೋದ ವೀಯುವರೀಗೆ ಸಿದ್ದವೆಂದೊಲಿದ್ಯೋ 3 ಹಿಂದಿ ನ್ಹಿರಿಯರ ವಲವೊ ಮಂದಿ ಪುಣ್ಯವೊ ಮತ್ತೆ ತಂದೆ ಕರುಣವೊ ಕಾಣೆ ಬಂದುದೀ ಪೀಠದಲಿ ವಿಧಿ ವಿನುತ ರಾಮ ನಿನ್ನೊಲಸಿಹ ಪ್ರ ಮೋದ ತೀರ್ಥರುಸತ್ಯ ಪಾಮರರಿಗಾಗುವುದೆ ಸ್ತುತಿಸೆ 4 ಸಾಧು ಸಜ್ಜನ ಪ್ರಾಪ್ಯ ಬಾದರಾಯಣ ಶರಣು ಮೋದ ಮಯ ನಿರ್ದೋಷ ವೇದ ವೇದ್ಯನೆ ಶರಣು ಮಾಧವ ಶ್ರೀ ಕೃಷ್ಣ ವಿಠಲರಾಯನೆ ಶರಣು ಗಾಧವರ್ಜಿತ ಮಹಿಮ ಶ್ರೀ ರಾಮ ಶರಣು ಶರಣು 5
--------------
ಕೃಷ್ಣವಿಠಲದಾಸರು
ಸತ್ಯಬೋಧ ಯತಿಗಳ ಸ್ತೋತ್ರ ಯಾವನೆದುರು ಮೂರ್ಜಗದೊಳು ಲೋಕಪಾವನ್ನ ಗುರು ಸತ್ಯಬೋಧ ಯತೀಂದ್ರಗಿನ್ನು ಪ ಬಲು ಸುಂದರ ಸೀತಾ ರಘುಪತಿ - ಪಾದನಳಿನಯುಗ್ಮವ ಪೂಜಿಪ ಯತಿ - ಎಮಗೊಲಿದು ಪಾಲಿಸುವನು ಸನ್ಮತಿ - ಈಜಲಜ ಭವಾಂಡದೊಳ್ ತುಂಬಿರೆ ಕೀರುತಿ 1 ಕೂರ್ಮ - ಕಮಲಾಲಯ ದೇವಿಯ ಸಿರಿನಾಮ - ದಿಂದವಾಲಗವೀಯುವ ಗುರು ಸಾರ್ವಭೌಮಗೆ2 ಭವ ಮಾರ್ಗಣ ಗೆದ್ದ ಗಂಭೀರ - ರತಿಪತಿ ಪಿತ ಮೋಹನ ವಿಠ್ಠಲ ಕಿಂಕರಗೆ 3
--------------
ಮೋಹನದಾಸರು
ಸತ್ಯಬೋಧರಾಯಾ ಪಾಲಿಸು (ನಿನ್ನ) ಭೃತ್ಯರ ನನ ಜೀಯಾ ಸ್ತುತ್ಯ ಸುಕಾಯ ಪ ದೂರ ನೋಡದಲೆನ್ನ ಗುರುವರ ಪಾರಗೈಪುದು ಮುನ್ನ ಶ್ರೀ ರಮಾರಮಣನಾರಾಧಕರೊಳು ಧೀರ ನಿನಗೆ ಸರಿಯಾರಿಹರಯ್ಯ 1 ಮತ್ತನಾಗಿಹೆ ನಾನು ಭವದಲಿ ಸತ್ತು ಹುಟ್ಟುತಲಿಹೆನು ಚಿತ್ತಕೆ ತರದಲೆನ್ನವಗುಣಗಳ ಮತ್ತೆ ಕೈಪಿಡಿಯುತಲೆತ್ತುವುದು 2 ಶರಣು ಶರಣು ದೊರೆಯೆ ಕರುಣದಿ ಪೊರೆದನ್ಯರನರಿಯೇ ಸಿರಿ ಮಧುಕರನಾಗಿರುತಿಹ 3
--------------
ಹನುಮೇಶವಿಠಲ
ಸತ್ಯಭೋಧ ಯತಿಕುಲವರನೆ ನಿತ್ಯ ತುತಿಸಿ ವಂದಿಸುವ ತಾವಕರೊಳು ಎಣಿಸೋ ಪ ಅರ್ಥಿಜನ ಚಿಂತಾಮಣಿ ಸತ್ಕರುಣಿ ಶ್ರೀನಿವಾಸನ ಗುಣ ಸಾನುರಾಗದಲಿ ವ್ಯಾ ಖ್ಯಾನ ಪೇಳುವ ಕಾಲದಿ ಶ್ವಾನರೂಪದಿ ಪವಮಾನ ಜನರು ನೋಡೆ ಕಾಣಿಸಿಕೊಂಡನಂದೊ ತಾ ಬಂದು 1 ಬವರಗೋಸುಗ ಬಂದ ಯವನಾಧಿಪತಿ ನಿಮ್ಮ ಸುವಿಚಿತ್ರ ಮಹಿಮೆ ಕಂಡು ಪ್ರವಿನೀತನಾಗಿ ಕಪ್ಪವೆ ಕೊಟ್ಟು ನಮಿಸಿದ ಕವಿ ಆವಾ ವಿಭವಾ ವರ್ಣಿಸುವಾ 2 ಇವರು ದೇವಾಂಶರೆಂದರುಪುವಗೋಸುಗ ಬಂದು ದಿವಿಜತರಂಗಿಣಿಯು ಶಿವನಂಗಭೂರುಹ ಮೂಲ ಭಾಗದಲಿ ಉ ದ್ಭವಿಸಿ ಕಂಗೊಳಿಸಿದಳು ಕೃಪಾಳು 3 ಸ್ವಾಂತಸ್ಥ ಮುಖ್ಯ ಪ್ರಾಣಾಂತರಾತ್ಮಕ ಭಗ ವಂತನಂಘ್ರಿ ಕಮಲ ಸಂತತ ಸರ್ವತ್ರ ಚಿಂತಿಸುತಿಪ್ಪ ಮ ಹಾಂತರಿಗೇನಚ್ಚರೀ ವಿಚಾರ 4 ಚಾರು ಚರಿತ ಭೂ ಸುರವರ ಸನ್ನುತನೇ ಪರಮ ಪುರುಷ ಜಗನ್ನಾಥ ವಿಠ್ಠಲ ನಿಮ್ಮ ಪರಿಪರಿ ಮಹಿಮೆ ಎಲ್ಲಾ ತಾ ಬಲ್ಲಾ 5
--------------
ಜಗನ್ನಾಥದಾಸರು
ಸತ್ಯವಂತರ ಸಂಗವಿರಲು ತೀರ್ಥವ್ಯಾತಕೆನಿತ್ಯ ಜ್ಞಾನಿಯಾದ ಮೇಲೆ ಚಿಂತೆಯಾತಕೆ ಪ ಕಾಲ ಬದುಕಲ್ಯಾತಕೆಮಾನಿನಿಯ ತೊರೆದ ಮೇಲೆ ಭೋಗವ್ಯಾತಕೆ 1 ಮಾತು ಕೇಳದೆ ಮಲೆತು ನಡೆವ ಮಕ್ಕಳ್ಯಾತಕೆಪ್ರೀತಿಯಿಲ್ಲದೆ ಎಡೆಯಲಿಕ್ಕಿದ ಅನ್ನವ್ಯಾತಕೆನೀತಿಯರಿತು ನಡೆಯದಿರುವ ಬಂಟನ್ಯಾತಕೆಸೋತ ಹೆಣ್ಣಿಗೆ ಓತು ನಡೆಯದ ಪುರುಷನ್ಯಾತಕೆ 2 ಸನ್ನೆಯರಿತು ನಡೆಯದಿರುವ ಸತಿಯು ಯಾತಕೆಮನ್ನಣಿಂದ ನಡೆಸದಿರುವ ದೊರೆಯು ಯಾತಕೆಮುನ್ನ ಕೊಟ್ಟು ಪಡೆಯದಿನ್ನು ಬಯಸಲ್ಯಾತಕೆಚೆನ್ನ ಆದಿಕೇಶವನಲ್ಲದ ದೈವವ್ಯಾತಕೆ 3
--------------
ಕನಕದಾಸ