ಒಟ್ಟು 8611 ಕಡೆಗಳಲ್ಲಿ , 132 ದಾಸರು , 4839 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡೆನಾ ಕನಸಿನಲಿ ಗೋವಿಂದನ ಪಕಂಡೆನಾ ಕನಸಿನಲಿ ಕನಕರತ್ನದ ಮಣಿಯ |ನಂದನ ಕಂದ ಮುಕುಂದನ ಚರಣವ ಅ.ಪಅಂದುಗೆಕಿರುಗೆಜ್ಜೆ ಘಲಿರೆಂಬ ನಾದದಿಬಂದು ಕಾಳಿಂಗನ ಹೆಡೆಯನೇರಿ ||ಧಿಂಧಿಮಿ ಧಿಮಿಕೆಂದು ತಾಳಗಳಿಂದಾನಂದದಿ ಕುಣಿವ ಮುಕುಂದನ ಚರಣವ 1ಉಟ್ಟ ಪೀತಾಂಬರ ಉಡಿಯ ಕಾಂಚಿಯದಾಮತೊಟ್ಟ ಮುತ್ತಿನ ಹಾರ ಕೌಸ್ತುಭವು ||ಕಟ್ಟಿದವೈಜಯಂತಿತುಲಸಿಯ ವನಮಾಲೆಇಟ್ಟ ದ್ವಾದಶನಾಮ ನಿಗಮಗೋಚರನ 2ಕಿರುಬೆರಳಿನ ಮುದ್ರೆಯುಂಗುರ ಮುಂಗಡೆಕರದಲಿ ಕಂಕಣ ನಳಿತೋಳುಗಳ ||ವರಚತುರ್ಭುಜ ಶಂಖಚಕ್ರದಿ ಮೆರೆವನನಿರುತದಿ ಒಪ್ಪುವ ಕರುಣಾ ಮೂರುತಿಯ 3ಬಣ್ಣದ ತುಟಿ ಭಾವರಚನೆಯ ಸುಲಿಪಲ್ಲಸಣ್ಣ ನಗೆಯ ನುಡಿ ಸವಿಮಾತಿನ ||ಪುಣ್ಯ ಚರಿತ್ರನ ಪೊಳೆವ ಕಿರೀಟನಕಣ್ಣು ಮನ ತಣಿಯದಕಂಸಾರಿಕೃಷ್ಣನ4ಮಂಗಳ ವರತುಂಗಭದ್ರದಿ ಮೆರೆವನಅಂಗಜಪಿತಶ್ರೀ ಲಕ್ಷ್ಮೀಪತಿಯ ||ಶೃಂಗಾರ ಮೂರುತಿಪುರಂದರವಿಠಲನಕಂಗಳಿಂದಲಿ ಕಂಡೆ ಹಿಂಗಿತು ಭವಭಯ 5
--------------
ಪುರಂದರದಾಸರು
ಕಂಡೆನಾ..............ಸಾಸಿರನಾಮದಶೇಷಮಹಿಮ ವೆಂಕಟೇಶನ ಮೂರುತಿಯ ಪ.ಶೇಷಗಿರಿಗೆ ಕೈವಲ್ಯವೆನಿಪ ಸ್ವಾಮಿಪುಷ್ಕರಿಣಿಯವಾಸನಕಂಡೆನಾಅ.ಪ.ವಿಕಸಿತಸರಸಿಜ ಸಮಪದಯುಗಳನಅಖಿಳಜಗದೆರೆಯನನಖಶ್ರೇಣಿಗಳೊಳು ತರತರದಿ ಮೆರೆವಸುಖಮಣಿಗಳ ಕಂಡೆನಾ 1ಗುಲ್ಛಕೆ ನೂಪುರ ಭೂಷಿತ ವರಫಣಿತಲ್ಪನ ಮೂರುತಿಯಒಪ್ಪುವ ದ್ವಿಜದಂತಿಹ ಜಘನ ಕಂದರ್ಪನಯ್ಯನ ಕಂಡೆನಾ 2ಹೊಂಗನ್ನಡಿಗಳ ಹಳಿದೊಪ್ಪುವ ಜಾನುಂಗಳ ಚೆನ್ನಿಗನಬಂಗಾರ ಬಾಳೆಯ ಕಂಬದಂತೆಸೆವ ಬೆಡಂಗಿನ ತೊಡೆಯವನ ಕಂಡೆನಾ 3ಕಟ್ಟಿಹ ಕಟಹವನಿಟ್ಟ ಝಗ ಝಗಿಸುವ ಪೊಂಬಟ್ಟೆಯನುಟ್ಟವನಇಟ್ಟ ಕಿಂಕಿಣಿದಾಮ ಮಧ್ಯತ್ರಿವಳಿ ನಾಭಿಸೃಷ್ಟಿಯುದರದವನ ಕಂಡೆನಾ 4ಉರದಿ ಮೆರೆವ ಸಿರಿವತ್ಸಲಾಂಛನಕೇಯೂರ ಕೌಸ್ತುಭಧರನಸಿರಿತುಲಸಿ ಪದಕಹಾರ ಕಂಬುಕಂದರತಿರುವೆಂಗಳಯ್ಯನ ಕಂಡೆನಾ5ಅರಿಮಥÀನವ ಮಾಳ್ಪರಿ ಶ್ರುತಿಮಯವಾದವರಶಂಖೋಧೃತನವರಾಭಯ ನೀಡುವವರಗದೆಪದುಮದಪರಮಾಂಗನ ಕಂಡೆ ನಾ 6ಅಂಬುಜಮೊಗದೊಳು ಕಾಂತಿಯ ಬೀರುವಲಂಬಿತ ಕುಂಡಲನಪೊಂಬಣ್ಣದ ಸಂಪಿಗೆ ಸಂಪಿಗೆನಾಸಿಕಲುಳಿ ನಾಸಾಪುಟದವನ ಕಂಡೆನಾ 7ಮರಿಕೂರುಮನಂದದಿ ಕದಪುಗಳು ಅಮರುತ ಬಿಂಬಾಧರನಪೆರೆನೊಸಲಿನ ಭ್ರೂಲತೆ ಕಿರುನಗೆ ಕಸ್ತೂರಿ ತಿಲಕಾಂಕಿತನ ಕಂಡೆನಾ 8ಕೋಟಿಇನತೇಜದಮಕುಟವರಕರುಣನೋಟದ ಜಗಪಾಲನಹಾಟಕಗಿರಿಯ ಪ್ರಸನ್ನವೆಂಕಟ ಜಗನ್ನಾಟಕ ಸೂತ್ರಧಾರನ ಕಂಡೆನಾ 9
--------------
ಪ್ರಸನ್ನವೆಂಕಟದಾಸರು
ಕಣ್ಣಾರೆ ಕಂಡೆನಚ್ಯುತನ-ಕಂಚಿಪುಣ್ಯ ಕೋಟಿ ಕರಿರಾಜವರದನ ಪವರಮಣಿ ಮುಕುಟಮಸ್ತಕನ ಸುರ-ವರಸನಕಾದಿ ವಂದಿತ ಪಾದಯುಗನ ||ತರುಣಿ ಲಕ್ಷ್ಮೀ ಮನೋಹರನ-ಪೀತಾಂಬರದುಡಿಗೆಯಲಿ ರಂಜಿಸುವ ವಿಗ್ರಹನ 1ಕಸ್ತೂರಿ ಪೆರೆನೊಸಲವನ ತೋರಮುತ್ತಿನ ಹಾರ ಪದಕವ ಧರಿಸಿದನ ||ಎತ್ತಿದಭಯ ಹಸ್ತದವನ ತನ್ನಭಕ್ತರ ಸ್ತುತಿಗೆ ಹಾರಯಿಸಿ ಹಿಗ್ಗುವನ 2ನೀಲಮೇಘಶ್ಯಾಮಲನ ದೇವಲೋಲಮಕರಕುಂಡಲಧರಿಸಿಹನ ||ಮೂಲೋಕದೊಳಗೆ ಚೆನ್ನಿಗನ ಕಮಲಾಲಯಾಪತಿ ವೈಕುಂಠವಲ್ಲಭನ 3ಭಾನುಕೋಟಿ ತೇಜದವನಭವಕಾನನರಾಶಿಗೆಹವ್ಯವಾಹನನ ||ದಾನವರೆದೆಯ ತಲ್ಲಣನ ಮುನಿಮಾನಸೆಹಂಸನೆಂದೆನಿಸಿ ಮೆರೆವನ4ತುಂಗಚತುರ್ಭುಜದವನಶುಭಮಂಗಳ ರೇಖೆ ಅಂಗಾಲಲೊಪ್ಪುವನ ||ಶೃಂಗಾರ ಹಾರ ಕಂಧರನ ದೇವಗಂಗೆಯ ಪಿತಪುರಂದರವಿಠಲನ5
--------------
ಪುರಂದರದಾಸರು
ಕಣ್ಣಿನೊಳಗೆ ನೋಡೊ ಹರಿಯ - ಒಳ -ಗಣ್ಣಿನಿಂದಲಿ ನೋಡೊ ಮೂಜಗದೊಡೆಯ ಪ.ಆಧಾರ ಮೊದಲಾದ ಆರು - ಚಕ್ರಶೋಧಿಸಿ ಸುಡಬೇಕು ಈ ಕ್ಷಣ ಮೂರು ||ಸಾಧಿಸಿ ಸುಷಮ್ನ ಏರು ಅಲ್ಲಿಭೇದಿಸಿ ನೀ ಪರಬ್ರಹ್ಮನ ಸೇರು 1ಎವೆಹಾಕದೆ ಮೇಲೆನೋಡು - ಮುಂದೆತವಕದಿಂದಲಿ ವಾಯು ಬಂಧನಮಾಡು ||ಸವಿದು ನಾದವ ಪಾನಮಾಡು - ಅಲ್ಲಿನವವಿಧ ಭಕ್ತಿಯಲಿ ನಲಿನಲಿದಾಡು 2ಅಂಡದೊಳಗೆ ಆಡುತಾನೆ -ಭಾನು -ಮಂಡಲ ನಾರಾಯಣನೆಂಬುವನೆ ||ಕುಂಡಲಿತುದಿಯೊಳಿದ್ದಾನೆ - ಶ್ರೀ ಪು -ರಂದರ ವಿಠಲನು ಪಾಲಿಸುತಾನೆ 3
--------------
ಪುರಂದರದಾಸರು
ಕಣ್ಣೆತ್ತಿ ನೋಡಲುಬೇಡ - ಅವಳಸಣ್ಣ ಜೈತಲೆ ಕಂಡು ಮರುಳಾಗಬೇಡ ಪ.ಕಣ್ಣಿಟ್ಟ ಕೀಚಕ ಕೆಟ್ಟ -ಪರಹೆಣ್ಣಿಗಾಗಿ ರಾವಣ ತಲೆಕೊಟ್ಟಏನು ಮಾಡಿದಳಣ್ಣ ನಷ್ಟ -ಪರಹೆಣ್ಣನು ಮೋಹಿಸಿದವ ಬಲು ಭ್ರಷ್ಠ 1ದೂರದಲ್ಲಿಯ ಸುಖದಣ್ಣ - ಅವಳಚಾರು ಕಂಚುಕದೊಳಗಿನ ಕುಚವಣ್ಣಸೀರೆಯ ಬಿಗಿದುಟ್ಟ ಹೆಣ್ಣ - ಅವಳಓರೆನೋಟ ನೋಡಿ ಹಾರಬೇಡಣ್ಣ 2ಹಸಿವು ಇಲ್ಲರ ಸವಿಯೂಟ - ತನ್ನವಶಕೆ ಬಾರದ ಪರಹಸ್ವಿನ ಕೂಟದೆಸೆದೆಸೆಗಪಕೀರ್ತಿಯಾಟ - ನಮ್ಮವಸುಧೀಶ ಪುರಂದರವಿಠಲನೊಳ್ನೋಟ 3
--------------
ಪುರಂದರದಾಸರು
ಕಂದ ಹಾಲ ಕುಡಿಯೊ-ನಮ್ಮ ಗೋ-|ವಿಂದ ಹಾಲ ಕುಡಿಯೊ ಪವೃಂದಾವನದೊಳು ಬಳಲಿ ಬಂದೆಯೊ ರಂಗ ಅ.ಪಶೃಂಗಾರವಾದ ಗೋವಿಂದ-ಚೆಲುವ |ಪೊಂಗೊಳಲೂದುವ ಚೆಂದ ||ಅಂಗನೆಯರ ಒಲುಮೆಯಿಂದ-ನಮ್ಮ |ಮಂಗಳಮೂರತಿಯ ಮೋರೆ ಬಾಡಿತಯ್ಯ 1ಆಕಳೊಡನೆ ಹರಿದಾಡಿ-ನಮ್ಮ |ಶ್ರೀಕಾಂತ ಗೆಳೆಯರ ಕೂಡಿ ||ಲೋಕವಈರಡಿಮಾಡಿ-ನಮ್ಮ |ಸಾಕುವ ಪಾದವು ಬಳಲಿದುವಯ್ಯ 2ಸದಮಲ ಯೋಗಿಗಳೆಲ್ಲ-ನಿನ್ನ |ಪದವ ಬಣ್ಣಿಸುತಿಪ್ಪರೆಲ್ಲ ||ಯದುಕುಲ ಚೌಪಟ ಮಲ್ಲ-ಹಾಲ |ಹದನು ವಿೂರಿತಯ್ಯ ಪುರಂದರವಿಠಲ 3
--------------
ಪುರಂದರದಾಸರು
ಕದವನಿಕ್ಕಿದಳಿದೆಕೊ ಗಯ್ಯಾಳಿ ಮೂಳಿ ಪ.ಕದವನಿಕ್ಕಿದಳಿದಕೊ ಚಿಲಕವಲ್ಲಾಡುತಿದೆ |ಒದಗಿದ ಪಾಪವು ಹೊರಗೆ ಹೋದೀತೆಂದು ಅ.ಪಭಾರತ - ರಾಮಾಯಣ ಪಂಚರಾತ್ರಾಗಮ |ಸಾರತತ್ವದ ಬಿಂದು ಕಿವಿಗೆ ಬಿದ್ದೀತೆಂದು 1ಹರಿಯ ಪಾದಾಂಬುಜಯುಗಳವ ನೆನೆವ ಭ - |ಕ್ತರ ಪಾದದರಜ ಒಳಗೆ ಬಿದ್ದೀತೆಂದು 2ಮಂಗಳ ಮೂರುತಿ ಪುರಂದರವಿಠಲನ |ತುಂಗವಿಕ್ರಮಪಾದ ಅಂಗಳ ಪೊಕ್ಕೀತೆಂದು 3
--------------
ಪುರಂದರದಾಸರು
ಕಮಲೇಶ ನಿನ್ನ ವಿಮಲಯುಗಳಪಾದಕಮಲಕೆಅಮರರುಭ್ರಮರಗಳುಪ.ಅತಿಸುವಟು ರೂಪದಿ ವಿತರಣ ಬೇಡಲುಕ್ರತದೆಡೆ ಮೂರಡಿಕ್ಷಿತಿನೋಡೆಅತುಳಚರಿತ ವಸುಮತಿಯನಳೆಯುತಲಿದ್ವಿತಿಯ ಪದಕೆ ಅಬ್ಧಿಸತಿಯ ಪಡೆದ ಪಾದಕೆ 1ಹಲವು ಕಾಲವು ತನ್ನ ನಲ್ಲನ ಶಾಪದಿ ಅಹಲ್ಯೆಯು ತಾನಿಳೆಯಲ್ಲಿ ಕಲ್ಲಾಗಿರಲುಸುಲಭದಿ ಭಕ್ತರ ಸಲಹುವ ಬಿರುದಿಗೆಲಲನೆಯ ಮಾಡಿದ ಸುಲಲಿತ ಪಾದಕೆ 2ಚಿನ್ನತನದೊಳೆ ಉನ್ನತ ಭಕ್ತ ಧ್ರುವನ್ನ ದೃಢಮತಿಯನ್ನೆ ಕಂಡುತನ್ನ ಕರುಣದಿ ಪಾವನ ಪದವಿತ್ತ ಪ್ರಸನ್ನ ವೆಂಕಟೇಶನ ಶ್ರೀಪಾದಕೆ 3
--------------
ಪ್ರಸನ್ನವೆಂಕಟದಾಸರು
ಕರತಾರೆ ಕರತಾರೆ ಶ್ರೀನಿವಾಸನಸುರರರಸ ಸ್ವಾಮಿ ಶ್ರೀ ವೆಂಕಟೇಶನ ಪ.ಬರಹೇಳೆ ಬರಹೇಳೆ ಬೇಗ ಕರಿಗಮನೆ ರಂಗಗೆಸಿರಿರಾಣಿರಮಣ ಘನಾಂಗಗೆಅರಘಳಿಗೆ ಸರಸವಲ್ಲ ಅರಸನಿಲ್ಲದವಳೆ ಸಲ್ಲಸ್ಮರನೆಂಬೊ ಸಿರಿಕಳ್ಳ ಕರುಣ್ಯಿಲ್ಲ 1ಸುಂದರ ಸುಂದರ ಶುಭಮಂದಿರನ್ನ ದಯಾರಸಸುಂದರನ್ನ ವರಕಂಬುಕಂದರನ್ನಚೆಂದಾವರೆಗಣ್ಣವನಸಿಂಧೂರವರದನ್ನ ದೇವೇಂದ್ರಜಿತ ಪಾರಿಜಾತ ತಂದನ್ನ 2ಹೋಯಿತೆ ಹೋಯಿತೆ ಹೊನ್ನಪ್ರಾಯ ಯದುರಾಯ ಬಾರದಾಯಿತೀ ಅವಸ್ಥೆ ಹುಟ್ಟು ಹೊಂದಿಕಾಯಬೇಕೆಂದೊಮ್ಮಿಗೆ ಉದಯವಾದ ಪ್ರಸನ್ವೆಂಕಟರಾಯ ಬಂದ ಫಲಿಸಿತಾನಂದ 3
--------------
ಪ್ರಸನ್ನವೆಂಕಟದಾಸರು
ಕರವಮುಗಿದ-ಮುಖ್ಯಪ್ರಾಣ-ಕರವ ಮುಗಿದಪಕರವಮುಗಿದ ಶ್ರೀಹರಿಗೆ ತಾನೆದುರಾಗಿದುರುಳರ ಸದೆದು ನೀ ಶರಣರ ಪೊರೆಯೆಂದು ಅ.ಪಜೀವೇಶ್ವರೈಕ್ಯವು ಜಗತು ಮಿಥ್ಯವೆಂದುಈ ವಿಧ ಪೇಳುವ ಮಾಯಿಗಳನಳಿಯೆಂದು 1ಇಲ್ಲಿ ಮಾತ್ರ ಭೇದ ಅಲ್ಲಿ ಒಂದೇಯೆಂಬಕ್ಷುಲಕರನು ಪಿಡಿದು ಹಲ್ಗಳ ಮುರಿಯೆಂದು 2ತಾರತಮ್ಯಪಂಚಭೇದಸತ್ಯವೆಂದುಮಾರುತ ಮತ ಪೊಂದಿದವರನು ಪೊರೆಯೆಂದು 3ಪರಿಪರಿ ಭಕ್ತರು ಹೃದಯ ಕಮಲದೊಳುನಿರುತ ಮಾಡುವ ಪೂಜೆ ನಿನಗರ್ಪಿತವೆಂದು 4ಹರಿಯ ಮನೋಗತವರಿತು ಮಾಡುವೆನೆಂದುಪುರಂದರವಿಠಲನ ಚರಣದ ಬಳಿಯಲ್ಲಿ5
--------------
ಪುರಂದರದಾಸರು
ಕರವಮುಗಿವೇ ಕಮಲನಯನಕರುಣದಿಂದಲಿ ಪಾಲಿಸೊಕರಿವರದ ಶ್ರೀ ಕಮಲನಾಭಕರೆದು ಎನ್ನನು ಮನ್ನಿಸೊ 1ಸ್ಮರಿಸಲರಿಯೇ ಸಿರಿಯ ರಮಣಪರಮಪಾವನ ಪಾದವಾಸ್ಮರನಜನಕಶರಧಿಶಯನಇರಿಸು ಎನ್ನೊಳು ಮೋಹವಾ 2ಬಂಧು ಬಳಗ ಭಾಗ್ಯ ಭೋಗ್ಯ-ದಿಂದ ಸುಖವ ಕಾಣೆನೇದಂದಶೋಕ ಶಮನನೇ ಗೊೀವಿಂದದಾಸನ ಪ್ರಾಣನೇ 3
--------------
ಗೋವಿಂದದಾಸ
ಕರುಣಾಕರ ನೀನೆಂಬುವುದೆತಕೊ |ಭರವಸೆ ಇಲ್ಲೆನಗೆ ಪಕರಿಧ್ರುವಬಲಿಪಾಂಚಾಲಿ ಅಹಲ್ಯೆಯ |ಪೊರೆದವ ಭವದಲಿ ನೀನಂತೆ ||ಅರಿತು ವಿಚಾರಿಸಿ ನೋಡಲಿದೆಲ್ಲವು |ಪರಿಪರಿ ಕಂತೆಗಳಂತಿದೆ ಕೃಷ್ಣ 1ಕರುಣಾಕರ ನೀನಾದರೆ ಈಗಲೆ |ಕರಪಿಡಿದೆನ್ನನು ನೀ ಕಾಯೊ ||ಸರಸಿಜಾಕ್ಷನೇ ಅರಸು ನೀನಾದರೆ |ದುರಿತಗಳೆನ್ನನು ಪೀಡಿಪುದುಂಟೆ 2ಮರಣ ಕಾಲದಲಿ ಅಜಮಿಳಗೊಲಿದೆಯೊ |ಗರುಡಧ್ವಜನೆಂಬ ಬಿರುದಿನಿಂದ ||ವರಬಿರುದುಗಳ್ನಿನಗುಳಿಯಬೇಕಾದರೆ |ತ್ವರಿತದಿ ಕಾಯೋ ಪುರಂದರವಿಠಲ 5
--------------
ಪುರಂದರದಾಸರು
ಕರುಣಾಂಬುಧಿ ಪಾಲಿಸೊಶರಣಾಗತರರಸ ಮುರಾರಿ ಪ.ಹಿಂದೆ ಕ್ಲೇಶವನುಂಡು ಬಳಲಿ ನಾ ನೊಂದೆಮುಂದೆ ಕತ್ತಲೆ ಕವಿದಿದ್ಯಲ್ಲೊ ತಂದೆ 1ಒಡೆಯನಿದ್ದೊಡಲಿನ ಚಿಂತೆ ಎನಗ್ಯಾಕೆಪಡಿಯಾಸೆಲಿನ್ನೊಬ್ಬರೊಲಿಸಲ್ಯಾಕೆ 2ಜನಕಜನನಿಆಪ್ತಧನ ಧಾನ್ಯ ನೀನೆಅನುಮಾನ ಬಿಡಿಸುವ ಅನುಕೂಲದವನೆ 3ಪೋಕರ ಮುಂದೆÀಡಹಿದರಾರಕುಂದುಜೋಕೆ ಬಿರುದುದಾತಆನತ ಬಂಧು4ನಾಭಿಸುರಭಿಕಾಣದರಸುವ ಮೃಗದಂಥಈ ಭ್ರಾಂತಿ ಕಳೆಯೊ ಪ್ರಸನ್ವೆಂಕಟೇಶ 5
--------------
ಪ್ರಸನ್ನವೆಂಕಟದಾಸರು
ಕರುಣಾಸಾಗರನ ನೋಡಿರೈ ಪತರುಣಾಕರ್Àನಿಭ ಸುಪರಣವಾಹನಗುಣ-ವರಣನ ಮಾಡುವ ಕರ್ಣಹೀನಾಂಶನ ಅ.ಪನಾನಾವಿಧದ ಫಲ ದಾನಮಾಡುವ ಸುರ -ಧೇನುನಿನಗೆ ಸೋತು ಪೋಯಿತಯ್ಯಾಮಾನನಿಧಿಯೆ ಎನ್ನ ನೀನೆ ಕಾ -ನಾನಯ್ಯ ಇದಕೇನುಪಾಯಾದೀನ- ಜನ-ಮಂದಾರ- ಶಾಶ್ವತದಾನಿ ನಿನಪದಧ್ಯಾನ ಮಾಡಿಸೋ 1ಸೇವಕ - ಜನರನ್ನ ಕಾವೋನೀತನು ಎಂಬೊನೀನಿರಲುನಿತ್ಯಆವ ಭಯ ಎನಗೇನು ಇಲ್ಲಾಈ ವಿಧದಿ ಮಹಿಮವ ತೋರಿ ಮೆರೆವ 2ಪಾತಕವನಕುಲ - ವೀತಿಹೋತ್ರನು ಎನಿಸೀದಾತಗುರುಜಗನ್ನಾಥ ವಿಠಲಗತಿಜಾತರೂಪಸುಶಯ್ಯತನಯದೂತನಾದವಗೇನು ಭಯ ನಿ -ರ್ಭೀತನಾಗಿದ್ದೆಲ್ಲ ಕಾರ್ಯವ -ನೀತೆರದಿ ತಾ ಮಾಡುತಿರುವಾ 3
--------------
ಗುರುಜಗನ್ನಾಥದಾಸರು
ಕರುಣಿಸಿ ಬಾರೆಲೆ ತಾಯೆ ಮಾಧವನಾವ್ಯಾಕೃತನಕರೆತಾರೆ ನೀರೆ ಬೇಕಾದವಳನಿನಿತುವಿರಹವಾರಿಧಿಯಲ್ಲಿ ನೂಕಿ ಓಡಿರುವನಲ್ಲೆ ಸಲೆ ಪ.ಬಿಸಜಕುಟ್ಮಳಕುಚವಸೋಂಕಿಮುದದಿ ಪಿಡಿದುಶಶಿಮೊಗದಿ ಮೋಹವನಿಡುವ ನುಡಿವಎಸೆವ ಕೊನೆವಲ್ಲಲಳುಕಿಸಿ ಎನ್ನಅಧರಪೀಯೂಷವನೊಲಿದೊಲಿದು ಸವಿದಕೋವಿದಪೊಸಮದಕರಿಯ ಸೊಂಡಿಲ ತೋಳಲಮರ್ದಪ್ಪಿಮಿಸುನಿಪುತ್ಥಳಿಯ ತೆರದಿ ಮೆರೆದಅಸಿಯ ಮಾಣಿಕಳೆ ಕೇಳಸುರಹರನಾಳಿದನೀಅಸುತೊರೆವೆ ತಾನಪಕಾರೆ ನೀರೆ1ಎಂಟೆರೆಡು ಕಳೆದೋರಿ ಸವಿದೋರಿ ಸುಖಬೀರಿ ಸಲೆಕಂಠಮಾಲೆಯ ಕೊಟ್ಟನೆ ನೆಟ್ಟನೆಎಂಟೆರಡವಸ್ಥೆಗಳ ಮೇಳಿಗೆಯ ಕ್ಷಣಲವಕೆವೆಂಠಣಿಸಿ ಅಮೃತವೆರೆದ ನೆರೆದಕಂಟಕಿಯು ದಾವಳೊ ಹರಿಯನೊಯ್ದಳಕದಿಂಗಂಟಿಕ್ಕಿದಳೊ ಬಿಡದೆ ಮಡದೆಉಂಟು ಮಾಡಿದನಲಾಮಂದಮುಗ್ಥೆಗೆ ಅಸಿಕಕಂಟಕಬಲೆಯ ಕಾಣೆ ಜಾಣೆ 2ಸರಸವಾತಿನ ಜಾಣ್ಮೆಯೆಂತುಸುರುವೆನಬಲೆಹರಣಳಿಯದೆಂದು ಪೇಳೆ ಕೇಳೆನಿರುತವನ ಕಿರುವೆರಳ ಸೌಂದರ್ಯಮಂ ನೆನೆಯುತಿರುವೆ ಪುಸಿಯಲ್ಲ ಕಾಣೆ ಪ್ರಾಣೆಕರುಣಿ ಬಲುನೊಂದರೆಂದದು ತನಗೆಕುಂದುಮರೆಯದಿನಿತೆಲ್ಲ ಒರೆಯೆ ಚತುರೆಯೆಭರದಲೊಮ್ಮದೊಮ್ಮೆ ಬಂದು ಪ್ರಸನ್ನವೆಂಕಟಗಿರಿಯರಸನೆಂದನಕ್ಕ ರಸಿಕ 3
--------------
ಪ್ರಸನ್ನವೆಂಕಟದಾಸರು