ಒಟ್ಟು 9531 ಕಡೆಗಳಲ್ಲಿ , 132 ದಾಸರು , 5434 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರಮ್ಮ ಮುರಲಿಯನೂದುವನುಮಾರ ಸುಂದರ ಸುಖ ಸಾರುವ ಜಗಕೆ ಪ ಪುಂಡರೀಕಾಕ್ಷನು ಹಿಂಡುಗೋವ್ಗಳ ಕಾಯ್ದುಕಂಡ ಕಂಡವರನ್ನು ಕರೆಯುತಾನೆಚೆಂಡು ಬಗರಿ ಗೋಲಿ ಗುಂಡುಗಳನೆ ಕಟ್ಟಿತಂಡ ತಂಡವಾಗಿ ಪೋದನಮ್ಮ 1 ತಾಯಿ ಕಟ್ಟಿರುವಂಥಾ ತೋರ ಬುತ್ತಿಯ ಗಂಟುತೂಗುತ ಯಮುನೆಯ ತೀರದಲ್ಲೇತೋರ ಉಪ್ಪಿನಕಾಯಿ ಬುತ್ತಿಗಳನೆ ತಿಂದುತೀರಿದವರಿಗೆಲ್ಲಾ ತಾ ಕೊಡುವಾ 2 ಇಂದಿರೇಶನು ಕೊಟ್ಟ ತಿಂದ ಉಪ್ಪಿನಕಾಯಿಆನಂದಬಟ್ಟರು ಗೋಪನಂದನರುಹಿಂದಿನ ಪುಣ್ಯವು ಬಂದೊದಗಿತು ಎಂದುತಿಂದ ಎಂಜಲನಿಟ್ಟ ಇಂದಿರೇಶ3
--------------
ಇಂದಿರೇಶರು
ಆರಿಗಳವಲ್ಲಾತ್ಮ ಯೋಗ ಸಿದ್ಧಿಸೇರಿ ಸುಜ್ಞಾನದಲಿ ಸವಿದುಂಬಗಲ್ಲದೆ ಪ ರಜಸು - ತಾಮಸವೆಂಬ ರಯವನೆಲ್ಲವ ಕಳೆದುಗಜ ಬಜಿಸುವ ಪಂಚಭೂತಗಳರಜನಿಗೆ ಸಿಲ್ಕದೆ ಪರಬ್ರಹ್ಮನ ಬಲುನಿಜವ ತಿಳಿಯಬಲ್ಲ ನಿರ್ವಾಣಗಲ್ಲದೆ 1 ಭಿನ್ನ ಭೇದಗಳೆಂಬ ಬಲು ಸಂಶಯ ಕಳೆದುತನ್ನೊಳಗೆ ತಾ ತಿಳಿದು ತಾರಕಬ್ರಹ್ಮವಚೆನ್ನಾಗಿ ನೀ ನೋಡು ಚೆಲುವ ಕಂಗಳಿಂದತನ್ನಗ್ನಿಯೊಳಗಿರುವ ಪ್ರೌಢರಿಗಲ್ಲದೆ 2 ಅಕಾರ ಉಕಾರ ಮಕಾರ ಎಂತೆಂಬಓಂಕಾರಕೆ ಕೂಡಿ ಎರಡಿಲ್ಲದಸಾಕಾರ ಕಾಗಿನೆಲೆಯಾದಿಕೇಶವನಆಕಾರದೊಡನಾಡುವರಿಗಲ್ಲದೆ 3
--------------
ಕನಕದಾಸ
ಆರಿಗಾರೋ ಕೃಷ್ಣ ಶೂರಕುಮಾರನೆಪ. ಆರಿಗಾರೋ ನಿನ್ನ ಹೊರತು ಪೊರೆವರೆನ್ನಶೂರ ಮಾರಜನಕ ಅಕ್ರೂರವರದ ದೊರೆಯೆಅ.ಪ. ಸತಿಸುತರು ಹಿತರೇನೊ ಮತಿಭ್ರಾಂತಿಬಡಿಸುವರುಗತಿ ಯಾರೊ ಮುಂದೆ ಗರುಡವಾಹನ ದೇವ1 ಆಶಪಾಶದಿ ಸಿಲುಕಿ ಘಾಸಿಪಟ್ಟೆನೊ ಬಹಳವಾಸುದೇವನೆ ನಿನ್ನ ದಾಸನೆಂದೆನಿಸಯ್ಯ 2 ಕಾಯ ಉ-ಪಾಯ ಯಾವುದೊ ಮುಂದೆ ರಾಯ ಹಯವದನ 3
--------------
ವಾದಿರಾಜ
ಆರಿಗ್ಯಾತಕೆ ಮೊರೆಯಿಡಲಿ ಸಾರಿದವರನ ಪೊರೆವ ಶ್ರೀರಮಣ ನೀನಿರಲು ಪ ಬೆಳಸಿಗೊಬ್ಬನ ಕೇಳೆ ಮಳೆಗೆ ಮತ್ತೊಬ್ಬನೆ ಅಳತಿಗೆ ಇನ್ನೊಬ್ಬನೆ ಹಾಗೆವೆ ವಳತಿಗೊಬ್ಬರು ದೊರೆಗಳೆ ಮ್ಯಾಲೆನ್ನ ಪ್ರಳಯಕೆ ಮತ್ತೊಬ್ಬನೆ ಪರಿಪರಿ ಖಳರ ಮಾತುಗಳೇ ಸ್ವಾಮಿ 1 ಆಕಾಲ ನೀನೆವೆ ಈ ಕಾಲದಲಿ ನೀನೆ ಸಾಕುವನು ಇನ್ನೊಬ್ಬನೆ ಸ್ಥಿರವಾಗಿ ತಾಕು ತಗಲಿಲ್ಲದೆಲೆ ಬೊಮ್ಮಾದಿ ಲೋಕಪತಿಗಳ ಒಡಿಯನೇ ಈ ವ್ಯಾಳ್ಯ ಲೋಕರನ ಕಾಯಬೇಕೊ ಸ್ವಾಮಿ 2 ಕಾಸು ಒಬ್ಬರಿಗಿಲ್ಲ ಲೇಸು ತೋರದಲೇವೆ ದೇಶಕೊಬ್ಬರು ಪೋದರೋ ಪೊಟ್ಟಿಗೆ ಕೂಸುಗಳ ಮಾರುಂಡರೋ ಈ ಜನರ ಕ್ಲೇಶಬಡಸದಲೆ ಪೊರಿಯೊ ಕರುಣದಲಿ ವಾಸುದೇವವಿಠಲ ಸ್ವಾಮಿ 3
--------------
ವ್ಯಾಸತತ್ವಜ್ಞದಾಸರು
ಆರಿಲ್ಲಿಲ್ಲೋ ಮನುಜಾ | ಅರಿಲ್ಲಿಲ್ಲೋ | ಹರಿಭಕ್ತರಿಗೆ ಸರಿ ಉಂಟೇನಣ್ಣಾ | ಆರಿಲ್ಲಿಲ್ಲೋ ತಮ್ಮಾ | ಬಿರದಿನ ಘಲಗಳ ನಡೆಸುವರಯ್ಯಾ ಪ ಕಂಭದೊಳಗ ಹರಿ ಬಿಂಬವ ತೋರಿಸಿ | ಹಿರಣ್ಯ ಕನಾ | ವೆಂಬ ಶಾರ್ದೂಲ ಕರಳವ ಹಾರಿಸಿದ | ನಂಬಿದ ಪ್ರಲ್ಹಾದ ಮಾಸಾಳ ನಮಾ 1 ಕಂಡು ಸೀತಾಪತಿ ನೊಯ್ದು ರಾವಣ ನೆಂಬಾ | ಖಂಡಿಸಿ ಮದ ಸೊಕ್ಕಿದಾನಿಯನು | ತುಂಡ ಮುಂಡ ಮಾಡಿ ಪದವಿಯ ಪಡದಾ | ಚಂಡ ವಿಭೀಷಣ ಮಾಸಾಳ ನಮಾ 2 ಖಂಡ ದಾಸನಬೇಡಿ ಹೊಂದಿದ್ದ ಕಾಯನ | ಸಂದ ಬಿಡಿಸಿ ಮಲ್ಲಯುದ್ಧದಲಿ | ಮಂದರ ಧರನತಿ ಮೆಚ್ಚಿಸಿ ಮೆರೆದಾ | ನಂದ ಭೀಮಶೇನ ಮಾ-ಸಾಳ ನಮಾ 3 ಬೊಮ್ಮ ಸಾರಥಿ | ಉರಗಸ ಹದಿ ಮೇರು ಗಿರಿ ಪಾಪವು | ಹರಿಶರದಿಂದಲಿ ತ್ರಿಪುರವ ಕೆಡಹಿದ | ಸುರ ರಕ್ಷ ಮಹೇಶ ಮಾಸಾಳನಮಾ 4 ಹಿಂದಿನ ಮಾತಿಂದು ಇಂದಿಲ್ಲ ವೆನಬ್ಯಾಡಿ | ಎಂದೆಂದು ಸ್ವರ್ಗದ ಸುಖಗಳಿಗೆ | ಕುಂದವ ನಿಡುವರು ಮಹಿಪತಿ ಸುತ ಪ್ರಭು | ಹೊಂದಿದ್ದ ದಾಸರು ಮಾಸಾಳರೈಯ್ಯಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆರೀಗ ನೀ ಎನ್ನ ಕಣ್ಣು ಮುಚ್ಚಿದೆಯೊ ಕು- | ಮಾರ ಮೌನದಲಿದ್ದಿ ಮಾತನಾಡಯ್ಯಾ ಪ ಇಂದಿರಾ ಭೂದೇವಿ ಆಳಿದವನೊ | ನಂದ ಗೋಕುಲದಲ್ಲಿ ಪುಟ್ಟಿದವನೊ || ಕರಿ - | ಬಂಧನ ವಿನಾಶದ ವಿಠ್ಠಲನೊ 1 ಅಂಬರೀಷನ ಶಾಪ ಪರಿಹರನೊ | ಶಂಭು ಮೊರೆಯಿಡಲು ಕಾಯಿದವನೊ || ಕಂಭದಿಂದೊಡೆದು ಬಂದವನೊ | ತ್ರಿ - ಯಂಬಕನ ಭಕ್ತನ ಸಂಹರನೊ 2 ಬೆರಳಲ್ಲಿ ಬೆಟ್ಟವನೆತ್ತಿದವನೊ | ದುರುಳ ಕಾಳಿಂಗನ ತುಳಿದವನೊ || ಒರಳನು ಕಾಲಲ್ಲಿ ಎಳೆದವನೊ | ಸಿರಿ ವಿಜಯವಿಠ್ಠಲರಾಯನೊ 3
--------------
ವಿಜಯದಾಸ
ಆರು ನಿನ್ನಂಘ್ರಿ ಭಜಿಸುವರೈಯ್ಯಾ ಸಾರಹೃದಯರ ಪ್ರೀಯ ಸುರಮುನಿಜನ ಧ್ಯೇಯಾ ಪ ಕಮಲಭವಶಿವ ಇಂದ್ರ ನೀನಾಗೇನು ರಮೆ ಧರಾದೇವಿ ರಮಣಾದರೇನು ಯಮದೂತರೊಳಗಾದ ಆಜಮಿಳ ಪೆಸೆ ರ್ಗೊಳೆ ಸುಮನಿಸುರ ನಯ್ಯವನ ಕಾಯದಿದ್ದೊಡೆ 1 ಜಗದುತ್ಪತ್ತಿ ಸ್ಥಿತಿಲಯ ಕರ್ತನಾಗೇನು ಮಗುಳಿ ಸೂತ್ರಧಾರಿಯಾದರೇನು ಸುಗುಣ ಪ್ರಲ್ಹಾದಂಬರೀಷ ಕರಿವರ ಧ್ರುವಾದಿಗಳನುದ್ದರಿಸಿ ತಾರಿಸದಿದ್ದಡೆ 2 ಎಂದೆಂದು ಅರ್ತಜನ ಬಂದು ದೀನಾನಾಥ ತಂದೆ ಮಹಿಪತಿ ಸ್ವಾಮಿಯಂದಡೇನು ಮಂದಮತಿ ಕುಂದಘನವಂದು ನೋಡದ್ದೆ ಇಂದು ನಂದನಗೆ ಸೇವೆ ಪದಲಿಡದಿದ್ದರೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆರು ಪೇಳಿದರೊ ಜೀವಾ ನಿನಗಾರು ಪೇಳಿದರೋ ಪ ಆರು ಪೇಳಿದರೋ ಈ ಸೋರುವ ಮನೆಯೊಳು ಇರುವುದು ಒಳಿತಲ್ಲಾ ತೆರಳುವುದುಚಿತನೇ ಅ.ಪ. ದುಷ್ಟರಿರುವರೋ ಈ ಗ್ರಹದೊಳು ಕಟ್ಟಿ ಸುಲಿಯುವರೋ ಇಟ್ಟಿದ್ದ ಅನ್ನದಿ ಕೆಟ್ಟ ಕ್ರಿಮಿಗಳುಂಟು ಮುಟ್ಟಿ ಬಳಸುವರಿಲ್ಲ ಹೊಟ್ಟೆ ತುಂಬಿದೋ ಅಲ್ಲಿ 1 ಛಾಯಾವೂ ಇಲ್ಲಾ ಈ ಮನೆಯೊಳು ದಾಯಾವೂ ಇಲ್ಲಾ ಬಾಯ ಬಿಡಿಸುವರೋ ಅನ್ಯಾಯ ಮಾಡುವರೋ ಉಪಾಯದಿಂದಲಿ ಬಿಟ್ಟು ಹಯವದನನ ಶೇರೋ 2 ತರುಣರಿರುವರೋ ಈ ಮನೆಯೊಳು ಮರುಳು ಮಾಡುವರೋ ಪರುಮ ಹರುಷ ನಮ್ಮ ಹನುಮೇಶ ವಿಠಲನ ನೆರೆ ನಂಬಿ ಸ್ಮರಿಸುವ ಸ್ಥಿರ ಪದವನು ಸೇರೊ 3
--------------
ಹನುಮೇಶವಿಠಲ
ಆರು ಬಣ್ಣಿಪರಮ್ಮಶ್ರೀ ಹರಿಯ ದ್ವಾರಕೆಯ ದೊರೆಯ ಪ. ಭಾರ ಚರಿಯ ಹೇಳ ಸಿರಿಯು ಸೋತಳು 1 ಪಾದ ಬೇಡಿ ದೊರೆಯಭಾರ ಕೊಡಲಿ ಪೊತ್ತ ಹಿರಿಯ ನಾರಿ ತಂದ ಧೀರ ವರ್ಯ 2 ಚರಿಯ ನಾರಿಯರ ವೃತವನಳಿದ ಪರಿಯಏರಿದ ರಾಮೇಶ ಕುದುರೆಯ3
--------------
ಗಲಗಲಿಅವ್ವನವರು
ಆರು ಬಂದರು ಸಖಿ ತೇರಿನ ಬೀದಿಲೆಮಾರಜನಕನ ಸಾರುತ ಹೊಗಳುವರಾರೆ ಕರಿಪುರದಲಿ ಬಂದವರಾರೆ ಪ. ದುಷ್ಟ ದೈತ್ಯರ ಶಿರವ ಕುಟ್ಟಿ ತಮಸ್ಸಿಗೆ ಹಾಕಿಅಟ್ಟಹಾಸದಿಂದ ಭೇರಿ ಘಟ್ಯಾಗಿ ಹೊಯಿಸುವರಾರೆ1 ಕ್ರೂರ ದೈತ್ಯರ ಶಿರವ ಸೇರಿಸಿ ತಮಸ್ಸಿಗೆ ಭೋರೆಂಬೊ ತುತ್ತೂರಿ ಕಾಳಿ ಹಿಡಿಸುವರಾರೆ 2 ವೆಂಕಟನ ದ್ವೇಷಿಗೆ ಸಂಕಟ ಬಿಡದೆಂದುಡಂಕರದಿಂದಲೆ ಡಂಕಿಯ ಹೊಯಿಸುವರಾರೆ 3 ಖೂಳ ದೈತ್ಯರ ಶಿರವ ಸೀಳಿ ತಮಸಿಗೆ ಹಾಕಿಭಾಳಾ ರೌಸದಿಂದ ಕಾಳಿಯ ಹಿಡಿಸುವರಾರೆ4 ಭಾಗವತರ ಸುಖ ಹೀಗೆ ಉನ್ನತ ಎಂದು ಈಗ ತೋರುತ ಭರದಿ ನಾಗಸ್ವರ ಹಿಡಿಸುವರಾರೆ5 ಅಂಬುಜನಾಭನ ನಂಬಲು ಸುಖವಿತ್ತು ಬಂಬಂಬೆನುತ ಶಂಖವ ಸಂಭ್ರಮದಿ ಹಿಡಿಸುವರಾರೆ 6 ನಿರ್ಜರ ಹಂಸನೀ ಹೌದೆಂದು ಸಂಶಯ ಬಿಡಿಸುತ ಕಂಸಾಳೆ ಹೊಯ್ಸುವರಾರೆ7 ಎಷ್ಟೆಷ್ಟು ಕಾಲಕ್ಕೂ ಕೃಷ್ಣಗೆ ದೊರೆ ಎಂದುಶ್ರೇಷ್ಠಾದ ಜಾಂಗುಟಿ ಫಟ್ಯಾಗಿ ಹೊಯಿಸುವರಾರೆ8 ಕಬ್ಬು ಬಿಲ್ಲಿನಯ ಒಬ್ಬ ಜಗದೀಶನೆಂದುಅಬ್ಬರದಿ ಕರಣೆ ನಿರ್ಭಯದಿ ಹಿಡಿಸುವರಾರೆ9 ಮಿತಿಯಿಲ್ಲದೆ ಶೃತಿ ಸಾರುವ ಮಧ್ವಮvವೆÉ ಅಧಿಕವೆಂದು ಶೃತಿಯನೆÉ ಹಿಡಿಸುವರಾರೆ 10 ತಂದೆ ರಾಮೇಶನ ಹೊಂದಲು ಸುಖವೆಂದು ಸುಂದರ ಕೊಳಲನೆ ಮುಂದೆ ಊದಿಸುವರಾರೆ 11
--------------
ಗಲಗಲಿಅವ್ವನವರು
ಆರು ಬಾಳಿದರೇನು ಆರು ಬದುಕಿದರೇನುನಾರಾಯಣನ ಸ್ಮರಣೆ ನಮಗಿಲ್ಲದನಕ ಪ ಉಣ್ಣ ಬರದವರಲ್ಲಿ ಊರೂಟವಾದರೇನುಹಣ್ಣುಬಿಡದ ಮರಗಳು ಹಾಳಾದರೇನುಕಣ್ಣಿಲ್ಲದವಗಿನ್ನು ಕನ್ನಡಿಯಿದ್ದು ಫಲವೇನುಪುಣ್ಯವಿಲ್ಲದವನ ಪ್ರೌಢಿಮೆ ಮೆರೆದರೇನು 1 ಅಕ್ಕರಿಲ್ಲದವಗೆ ಮಕ್ಕಳಿದ್ದು ಫಲವೇನುಹೊಕ್ಕು ನಡೆಯದ ನಂಟತನದೊಳೇನುರೊಕ್ಕವಿಲ್ಲದವಗೆ ಬಂಧುಗಳು ಇದ್ದರೇನುಮರ್ಕಟನ ಕೈಯೊಳಗೆ ಮಾಣಿಕ್ಯವಿದ್ದರೇನು 2 ಅಲ್ಪ ದೊರೆಗಳ ಜೀತ ಎಷ್ಟು ಮಾಡಿದರೇನುಬಲ್ಪಂಥವಿಲ್ಲದವನ ಬಾಳ್ವೆಯೇನುಕಲ್ಪಕಲ್ಪಿತ ಕಾಗಿನೆಲೆಯಾದಿಕೇಶವನಸ್ವಲ್ಪವೂ ನೆನೆಯದ ನರನಿದ್ದರೇನು 3
--------------
ಕನಕದಾಸ
ಆರು ಸಂಗಡ ಬಾಹೊರೆಲೆ ಮನುಜ ನಿನಗೆ ಹಾರೈಸಿ ಬಳಲುವೆ ಬರಿದೆ ಭವದೊಳಗೆ ಪ ಗುರುಹಿರಿಯರಗ್ನಿಯ ಪರಿಮುಖದಿ ನಿನ್ನಯ ಕರಪಿಡಿದು ಮಾಂಗಲ್ಯ ಧರಿಸಿಕೊಂಡರ್ಧ ಶರೀರವೆನಿಸುವ ಸತಿಯು ಮರಣ ಕಾಲದಿ ನಯನ ತಿರುಗುವುದ ಕಂಡಂಜಿ ತಿರಿಗಿನಿಂತಳುತಿಹ್ಯಳು 1 ತನುಜಮನುಜರಿವರೆಲ್ಲ ನಿನಗತಿಹಿತ ಬಂಧು ಮಣಿದು ಸೇವಿಪರು ನಿನ್ನನುದಿನವು ಬಿಡದೆ ತನುಬಿಟ್ಟ ಕ್ಷಣದಿ ನನನಿನಗೆನುತ ಮನೆಕೀಲಿ ಘನ ಜಗಳ ಕಾಣು ಬಿದ್ದ್ಹೆಣದ ಪರಿವಿಲ್ಲದೆ 2 ಕುಲವಿದ್ಯವ್ಯವಹಾರ ಕಳವುಕೊಲೆ ನೃಪಸೇವೆ ತಲೆ ಬಾಗಿ ಜನರಲ್ಲಿ ಬಲುದೈನ್ಯ ಬಟ್ಟು ಗಳಿಸಿ ಹೂಳಿದ ದ್ರವ್ಯ ಎಳೆದೊಯ್ಯಲ್ಯಮ ನಿನ್ನ ತಲೆಯೆತ್ತಿ ನೋಡದಲೆ ನೆಲದಿ ನಿಲ್ಲುವುದು 3 ಭೂಮಿ ನಿನ್ನದು ಎಂದು ನೇಮವನು ಬರಕೊಂಡು ಕೋಮಲ ಮನೆಕಟ್ಟಿ ತಾಮಸದಿ ನಲಿವಿ ಭೂಮಿಯ ರಿಣತೀರಿ ನೀ ಮಡಿದಾಕ್ಷಣ ಬಹಿ ರ್ಭೂಮಿಯೋಳ್ಹುತಿವರೆಲೆ ಪಾಮರ ಮನುಜ 4 ಬಂಧುಬಾಂಧವರೆಲ್ಲ ಹಿಂದೆ ಉಳಿಯುವರು ಮಂದನಾಗದೆ ತಂದೆ ಶ್ರೀರಾಮ ಪಾದಾರವಿಂದಮಂ ನಂಬಿ ಭವಬಂಧವನು ಗೆಲಿಯೊ 5
--------------
ರಾಮದಾಸರು
ಆರು ಹಿತವರು ಎಂದು ನಂಬಬೇಡ ಪ ಆರಿಗಾರಿಲ್ಲ ಆಪತ್ತು ಬಂದೊದಗಿದಡೆ ಅ ಜನಕ ಹಿತದವನೆಂದು ನಂಬಬಹುದೇ ಹಿಂದೆತನಯ ಪ್ರಹ್ಲಾದನಿಗೆ ಪಿತ ಮುನಿದನುಜನನಿ ರಕ್ಷಿಪಳೆಂಬೆನೇ ತಿಳಿತಿಳಿದು ಕುಂತಿತನಯ ರಾಧೇಯನಿಗೆ ಎರಡೆಣಿಸಿದ ಮೇಲೆ 1 ಅನುಜ ಕೊಲಿಸಿದ ಮೇಲೆ2 ತನಗೆ ದೇಹಾನುಬಂಧಿಗಳೆ ಬಂಧುಗಳೆಂದುಮನದಿ ನಿಚ್ಚಳವಾಗಿ ನಂಬಬೇಡಘನ ಕೃಪಾನಿಧಿ ಕಾಗಿನೆಲೆಯಾದಿಕೇಶವನಅನುದಿನದಿ ನಂಬಿದವಗಿಹಪರದಿ ಸುಖವು 3
--------------
ಕನಕದಾಸ
ಆರುತಿ ಮಾಡಿದೆವೆ ನಾರಿಯಮಣಿಯರು ಪ ಚಾರು ಪುಸ್ತಕದಿಭೂರಿ ಶೋಭಿಪ ಪರಾಶರ ತನುಜಗೆ ಅ.ಪ. ಚಿತ್ರ ಮಂಟಪದೊಳು ಮುತ್ತಿನಂದದಿ ಕೂತುಭಕ್ತ ಪೂಜಿತನಾಗಿ ಭಾಗ್ಯವ ತತ್ವ ಪೇಳಿದವಗೆ 1 ಅಖಿಳ ದುರ್ವಾದಿ ವಿಜಯಗೆ2 ಭಾರತ ಮುಖ ಬಹುಸಾರ ಶಾಸ್ತ್ರವ ಮಾಡಿಧಾರುಣಿಯೊಳು ಮುಕ್ತಿದಾರಿ ತೋರಿದವಗೆ 3 ನಾರದ ಶುಕಪೈ ಸೇರಿ ವೈಶಂಪಾಯನದ್ವಾರಪಾಲಕರಿಂದ ನಿರುತ ಪೂಜಿತಗೆ 4 ವಾಸವೀ ತನುಜಾ ವ್ಯಾಸನ ಸ್ತುತಿಸಿದಾಭಾಷಿ ಭಾಷಿಗೆ ಇಂದಿರೇಶ ಪಾಲಿಸುವನು 5
--------------
ಇಂದಿರೇಶರು
ಆರುತೀಯ ಬೆಳಗಿರೀಗ ನಾರಿಯೇರು ಶ್ರೀನಿವಾಸಗಾರುತೀಯ ಪ. ಆರುತೀಯ ಬೆಳಗಿರೀಗ ಸಾರಸಾಕ್ಷ ಪದ್ಮಿನೀಯ ಸೇರಿ ಲಕುನಿಯಿಂದ ಮೆರೆವೊ ಮೂರುಲೋಕದೊಡೆಯ ಕೃಷ್ಣಾ ಅ.ಪ. ಮೀನನಾಗಿ ವೇದ ತಂದು ದಾನವರ ವಂಚಿಸುತ್ತ ಯಾನದಲ್ಲಿ ಭೂಮಿ ತಂದ ದೀನರಕ್ಷಕ ನಾರಸಿಂಹಗೆ 1 ಚಲುವ ಬ್ರಹ್ಮಚಾರಿಯಾಗಿ ಛಲದಿ ಕ್ಷತ್ರಿಯೇರ ಕೊಂದು ಒಲಿವ ಶಿವನ ಬಿಲ್ಲ ಮುರಿದು ನಲಿದು ಬಂದ ಗೋಪಿಕಂದಗಾ 2 ನಾರಿಯೇರ ವ್ರತವನಳಿದು ತೆÉೀಜಿಯೇರಿ ಮೆರೆವ ಧೀರ ವಾರವಾರ ಪೂಜೆಗೆಂದು ಶೂರ ಶ್ರೀ ಶ್ರೀನಿವಾಸಗಾರುತೀಯ 3
--------------
ಸರಸ್ವತಿ ಬಾಯಿ