ಒಟ್ಟು 633 ಕಡೆಗಳಲ್ಲಿ , 86 ದಾಸರು , 550 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀರಂಗನಾಥ ಕಾಯೋ ಕಾವೇರಿರಂಗ | ಕಾರುಣ್ಯಪಾಂಗಾ ಪ ಕಾಯೊ ಕಾಯೊ ಕಾವೇರಿ ನಿಲಯನೆ ಕಾಯೊ ವಾಙ್ಮನ ಪೂರ್ವಕದಿ ತವ ತೋಯಜಾಂಘ್ರಿಯ ನಂಬಿದೆನುಭವ ಮಾಯಗೆಲುವ ಉಪಾಯ ತೋರಿ ಅ.ಪ ದೇವಾಧಿದೇವ ನೀನು | ಪ್ರಣತ ಜನರಿಗೆ ದೇವತರು ಮಣಿಧೇನು | ಎಂದರಿತು ನಿಷ್ಟಿಲಿ ಧಾವಿಸಿ ಬಂದೆ ನಾನು | ರಘುವಂಶ ಭಾನು ಕಾವನಯ್ಯ ನೀನೊಲಿದು ಕರುಣದಿ ಪಾವಮಾನಿಯ ಶಾಸ್ತ್ರವರಿತು ಭಾವ ಭಕ್ತಿಲಿ ನಿನ್ನ ಪಾಡುವ ಕೋವಿದರ ಸೇವಕನ ಮಾಡಿ 1 ಪನ್ನಂಗಪತಿಶಯನ | ಶಿರಬಾಗಿ ಪ್ರಾರ್ಥಿಪೆ ಪನ್ನಂಗರಿಪುವಾಹನ | ಎನ್ನಪರಾಧವ ಮನ್ನಿಸೊ ಹಯವದನ | ವೈಕುಂಠ ಸದನ ನಿನ್ನನುಗ್ರಹ ಪೂರ್ಣಪಡೆದು ಜಗನ್ನಾಥದಾಸರ ಸನ್ನಿಧಾನದಿಂ ಬಂದೆ ತಂದೆ 2 ನೇಸರ ಕುಲಜಾತ | ವೇದೋಕ್ತಕ್ರಮದಿಂ ಭೂಸುರ ಕರಪೂಜಿತ | ಕೌಶಿಕನ ಯಜ್ಷವ ಪೋಷಕ ಪವನಪಿತ | ಪಾವನ್ನ ಚರಿತ ವಾಸುದೇವಾನಂತ ಮಹಿಮೆ | ವಿಭೀಷಣಪ್ರಿಯ ದೋಷಕಳೆಯುವ | ಭೇಷಪುಷ್ಕರಣೀಶ ಕೇಶವ ದಾಶರಧಿ ಶ್ರೀ ಶಾಮಸುಂದರ 3
--------------
ಶಾಮಸುಂದರ ವಿಠಲ
ಶ್ರೀರಮಣನೆ ಎನ್ನುದ್ಧಾರ ಮಾಡುವ ಪೂರ್ಣ ಭಾರವೇ ನಿನಗಿಹದೊ ಹೇರನೊಪ್ಪಿಸಿದಂಥ ಹಳಬ ವರ್ತಕಗೆ ಸ- ರ್ಕಾರ ಸುಂಕಗಳುಂಟೆ ವಾರಿಜ ನಯನ ಪ. ಆವ ಕಾಲಕು ಲಕ್ಷ್ಮೀಭೂವರ ತವ ಪಾದ ಸೇವಕನಾಗಿಹೆನು ನಿನ್ನಲಿ ಮನೋ- ಭಾವವಿರಿಸಿಹೆನು ನನಗುಸುರಲೇನು ಜೀವನಕೆ ನೀನಿತ್ತ ಕರ್ತು- ತ್ವಾವಲಿಗಳಿಂದೇನ ಮಾಳ್ಪದ ನೀ ವಳಗೆ ನಿಂತಿದ್ದು ನಿನ್ನ ಕ- ಲಾವಿಶೇಷದಿ ನಡಸಿ ನಟಿಸುವಿ1 ದೇಹವ ಧರಿಸಿಹೆನು ಇದರ ಸ- ನ್ನಾಹವಾಗಿರುವುದನು ಸುಖದು:ಖಗಳನು ಚೋಹಗೊಳದನುಭವಿಸಿ ಸುಖ ಸಂ- ದೋಹಗೊಳಲ್ಯಾಡುತ್ತಿರೆ ಮುಂ- ದಾಹ ಬಾಧೆಯ ಬಿಡಿಸಹಮ್ಮಮ ಮೋಹ ಬಲೆಯನು ಕಡಿದು ಸಲಹುವ 2 ಜನನಿ ಜನಕ ಗೃಹ ವನಿತೆ ಒಡವೆ ಭೂಮಿ ಧನವಸ್ತ್ರ ಧಾನ್ಯಗಳು ನಾನಾ ವಿಧ ವಿನಯದಿ ಸಂಪದವು ಸ್ವರ್ಗಾದಿ ಸುಖವು ತನುಮನಗಳೊಡಗೂಡಿ ಮನ್ಮಥ ಜನಕ ನಿನಗೊಪ್ಪಿಸಿ ನಿರಂತರ ನೆನವೆ ನಿನ್ನ ಪದಾಬ್ಜಯುಗ್ಮವ ವನರುಹಾಂಬಕ ವೆಂಕಟೇಶ್ವರ 3
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀರಮಣಿ ದಯದೋರು ಬ್ರಹ್ಮ ಸಮೀರಜನ ನೀ ಬೇಗ ಮೂರುತಾಪದ ದೂರಗೈಸಿ ಸರೋರುಹಾಕ್ಷನ ಸಾರಗೈಸುತ ಪ. ಶ್ರೀನಿವಾಸನ ಸರ್ವಸೇವೆಯ ತಾನೆ ಮಾಳ್ಪೆನೆಂದು ಭಾನುಕೋಟಿ ಸಮಾನಭಾಸ ವಿಮಾನವಾಗಿ ನಿಂದು ಮಹಾನಭೀಯ ಸಮಸ್ತ ವಸ್ತು ವಿ- ಧಾನರೂಪಿಣಿಯಾಗಿ ಭಕ್ತಜನಾನುವರ್ತಿಯ ಭಾವ ಗ್ರಹಿಸಿದ 1 ಹಾರಕಟಕ ಕಿರೀಟವರ ಕೇಯೂರ ಬಾಹುಪುರಿಯು ಚಾರುತರ ಗಂಭೀರರವ ಶೃಂಗಾರದ ನೂಪುರವ ಮಾರನೈಯ್ಯನ ಮುದ್ದು ಹಸ್ತದಿ ವಾನೈಜಾರಿಗದಾಬ್ಜರೂಪದಿ ಸೇರಿ ಶೋಭಿಪ ಶಕ್ತಿ ನಿನ್ನ ಪದಾರವಿಂದವ ನಂಬಿ ನಮಿಪೆನು 2 ಕುಂದ ನೋಡದಿಂದೂ ಹರಿ ಚಂದನಾತ್ಮಕ ವೆಂಕಟೇಶನು ಬಂದಿಲ್ಲಿಹನೆಂದು ಮುನಿಜನವೆಂದ ಮಹಿಮೆಯ ನಿಂದು ತೋರುತ ಸನ್ನಿಹಿತಳಾಗೆಂದು ಚರಣದ್ವಂದ್ವ ಪೊಗಳುವೆ 3 ,
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀರಮಾಧವಾಶ್ರೀತಜನಪಾಲಿತ ಮಾರಕೋಟಿರೂಪ ವಾರಿಧಿಶಯನ ಮುರಾರಿ ಕೇಶವ ಶ್ರೀಮ- ನ್ನಾರಾಯಣ ನೀರಜದಳಲೋಚನಪ. ಮಾನುಷತ್ವವಾಂತ ಸಮಯದಿ ಹೀನ ಭೋಗದ ಚಿಂತೆ ನಾನು ನೀನೆಂಬಾಭಿಮಾನದಿ ಮನಸು ನಿ- ಧಾನವಿಲ್ಲದೆ ಅನುಮಾನದಿಂದಿಹುದೈ ಏನು ಕಾರಣ ಹೃದಯನಳಿದೊಳು ನೀನೆ ನೆಲಸಿಕೊಂಡೀ ನರಯೋನಿಗೆ ನೀನೆ ಬರಿಸಿಯವಮಾನ ಬಡಿಸುವದು ಊನವಲ್ಲವೆ ಪದದಾಣೆ ಸತ್ಯವಿದು1 ಬಾಲಕತನದೊಳಗೆ ಕಾವ್ಯದ ಶೀಲವಿತ್ತೆಯೆನಗೆ ಕೀಳುಮಾಡದೆ ಯೆನ್ನ ಬಾಲಭೂಷಿತಂಗಳ ಕೇಳೈ ಶ್ರೀಲಕ್ಷ್ಮೀಲೋಲ ವೆಂಕಟರಾಯ ಕಾಲಕಾಲಪ್ರಿಯ ಪಾಲಿಸೊಲಿದು ಕರು- ಣಾಲವಾಲ ನತಪಾಲಶೀಲ ಮುನಿ ಜಾಲವಂದ್ಯ ವನಮಾಲದಾರಿ ಜಗ ಮೂಲಸ್ವರೂಪ ವಿಶಾಲ ಗುಣಾರ್ಣವ2 ಹಿಂದಾದುದನರಿಯೆ ಇದರಿಂ ಮುಂದಾಗುವುದು ತಿಳಿಯೆ ಹಿಂದು ಮುಂದಿಲ್ಲದೆ ಬಂಧನದೊಳು ಬಲು ನೊಂದೆನೈ ನಿನಗಿದು ಚಂದವೆ ಶ್ರೀಹರಿ ತಂದೆ ತಾಯಿ ಬಂದು ಬಾಂಧವ ಬಳಗ ನೀ ನೆಂದು ನಿನ್ನಯ ಪದದ್ವಂದ್ವವ ಭಜಿಪಾ ನಂದಸುಜ್ಞಾನದಿಂದೆಂದಿಗೂ ಸುಖ ದಿಂದಿರುವಂದದಿ ತಂದೆ ನೀ ಪಾಲಿಸು3 ಧಾರಿಣಿಗಧಿಕವಾದ ಮೆರೆವ ಕು ಮಾರಧಾರೆಯ ತಟದ ಚಾರುನೇತ್ರಾವತಿ ತೀರ ಪಶ್ಚಿಮ ಭಾಗ ಸಾರಿ ತೋರುವ ವಟಪುರದೊಳು ನೆಲಸಿಹ ವೀರ ವೆಂಕಟಪತಿ ವಾರಿಜನಾಭ ಖ- ರಾರಿ ತ್ರಿದಶಗಣವಾರವಂದ್ಯ ಭಾ- ಗೀರಥೀಪಿತ ದುರಿತಾರಿ ದೈತ್ಯಸಂ- ಹಾರಿ ಶ್ರೀಲಕ್ಷ್ಮೀನಾರಾಯಣ ಹರಿ4
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀರಾಮ ಜಯರಾಮ ಜಯ ಜಯತು ರಾಮ ಶ್ರೀರಾಮ ಜಯರಾಮ ಜಯ ಜಯತು ರಾಮ ಪ ನಮೋ ರಾಮಚಂದ್ರ ಸದಾಪೂರ್ಣಾನಂದ ನಮೋ ಸುಗುಣ ಸಾಂದ್ರ ಕೌಸಲ್ಯಕಂದ ನಮೋ ರಾಘವೇಂದ್ರ ಸೀತಾ ಕುಮುದ ಚಂದ್ರ ನಮೋ ಅಜಭವೇಂದ್ರಾದ್ಯಖಿಲ ಸುರವಂದ್ಯ 1 ನಿನ್ನ ಉದಯದಿರವಿಯು ಉನ್ನತಿಯನೈದಿಹನು ಘನ್ನತೆಯ ಪೊಂದಿಹರು ಕೌಸಲ್ಯದಶರಥರು ನಿನ್ನ ಅನುಜರು ಜಗದಿ ಪರಮ ಪಾವನ್ನರು ನಿನ್ನರಸಿ ಶ್ರೀಸೀತೆ ತ್ರೈಲೋಕ್ಯ ಮಾತೆ 2 ನಿನ್ನ ಕರುಣದಿ ಹನುಮ ಬ್ರಹ್ಮತ್ವ ವೈದಿದನು ನಿನ್ನ ನಾಮದಿ ವ್ಯಾಧ ವಾಲ್ಮೀಕನಾದ ನಿನ್ನ ಪದರಜ ಸೋಂಕಿ ಶಿಲೆಯಬಲೆಯಾದುದು ನಿನ್ನ ಪ್ರೇರಣೆಯಿಂದ ಪ್ರಣವೆ ಜ್ವಾಲಾಯಿತು 3 ನಿನ್ನ ಪ್ರೇಮದಿ ಶಬರಿ ಮುನ್ನ ಸವಿನೋಡಿ ಫಲ ನಿನ್ನ ಪದಕರ್ಪಿಸಲು ಘನಪದವಿಯಿತ್ತೆ ನಿನ್ನ ಸಖ್ಯವನೆ ಬೆರಸಿದವ ಸುಗ್ರೀವನು ಧನ್ಯವಾಗಿರುತಿಪ್ಪ ನಿಹಪರಂಗಳಲಿ 4 ನಿನ್ನ ದಾಸ್ಯವನೈದಿ ಅನಂತ ಕಪಿವರರು ಉನ್ನತೋನ್ನತ ಯೋಗ್ಯತೆಗಳ ಪಡೆದಿಹರು ನಿನ್ನ ದ್ವೇಷದಿ ರಾವಣಾದಿಗಳು ಮಡಿದರು ನಿನ್ನ ಪೊಂದಿದ ವಿಭೀಷಣ ರಾಜ್ಯಪಡೆದ 5 ಸುರರು ಕೃತ ಪುಟಾಂಜಲಿಯಲ್ಲಿ ಸ್ಥಿತರಾಗಿ ಇರುತಿಹರು ನಿನ್ನಾಜ್ಞದಿ ಇತರ ಮನುಜರ ತೆರದಿ ಪಿತನಾಜ್ಞೆ ಪಾಲಿಸಲು ವ್ರತವನೇ ಕೈಕೊಂಡು ವನಕೈದಿದೆ 6 ಜಾನಕಿಯು ಅವಿಯೋಗಿ ನಿನ್ನ ಬಳಿಯಿರುತಿರಲು ವಾನರರ ಭಲ್ಲೂಕಗಳ ಸೇನೆನೆರಹಿ ಕಾನನವ ಸಂಚರಿಸಿ ಖಳರನ್ನು ಮೋಹಿಸಿದೆ ಶ್ರೀನಿಧಿಯೆ ತವ ಲೀಲೆ ಬಹು ಚೋದ್ಯವು 7 ತಾಮಸರ ಸಂಹರಿಸಿ ಭೂಮಿ ಭಾರವನಿಳಿಸಿ ನೇಮದಿಂ ಕೈಕೊಂಡು ರಾಜ್ಯವನ್ನು ಪ್ರೇಮದಿಂ ಪಾಲಿಸಿದೆ ಪ್ರಜೆಗಳನು ವಿಧವಿಧದಿ ತಾಮರಸಜನ ಪ್ರಾರ್ಥನೆಯ ಮನ್ನಿಸಿ 8 ನಿನ್ನ ರಾಜ್ಯವೆ ಸಕಲ ಸುಖದ ಸಾಮ್ರಾಜ್ಯವು ನಿನ್ನ ಯಾಙ್ಞವೆ ವೇದವಾಣಿಯಿಂದಧಿಕವು ನಿನ್ನನಂತವತಾರಗಳ ಚರಿತೆ ಸೋಜಿಗವು ನಿನ್ನಯವತಾರಕ್ಕು ಮೂಲಕ್ಕಭೇದವು 9 ನಿನ್ನ ಮಹಿಮಾ ಜಲಧಿಯೊಳು ರಮೆಯು ಮುಳುಗಿಹಳು ನಿನ್ನ ಸ್ತುತಿಗೈವ ನಾಲ್ಮೊಗನು ನಾಲ್ಮೊಗದಿಂ ನಿನ್ನ ಧ್ಯಾನದಿ ಸದಾ ಮೋದಿಪನು ಮಾರುತನು ನಿನ್ನನೇ ಪಾಡುವರು ಅಜಪವನ ಪತ್ನಿಯರು 10 ನಿನ್ನ ನಾಮವ ಸವಿದು ಭವನು ನಲಿನಲಿಯುತಿಹ ಖಗರಾಜ ರತಿ ವರ್ಣಿಸುವರು ಚನ್ನೆ ಪಾರ್ವತಿಯು ವಾರುಣಿಯು ಸೌಪರ್ಣಿಯು ಚನ್ನಾಗಿ ಪಾಡುವರು ನಿನ್ನ ಗುಣಗಳನು 11 ಸುರರು ನಾರದಾದಿ ಋಷಿವರರು ವಂದಿಸುತ ಭಕ್ತಿಯಲಿ ನಿನ್ನ ಪದಗಳಿಗೆ ಅಂದದಲಿ ವೀಣಾ ಸುಗಾನ ಸಂಗೀತದಲಿ ಒಂದೊಂದೇ ಮಹಿಮೆಗಳ ಪೊಗಳಿ ಕುಣಿಯುವರು 12 ಸುಖತೀರ್ಥಮುನಿರಾಜ ಗುರುರಾಘವೇಂದ್ರಾರ್ಯ ಅಕಳಂಕ ವgದೇಂದ್ರ ಯತಿಸಾರ್ವಭೌಮರು ಮುಕುತಿದಾಯಕ ನಿನ್ನ ಪದಕಮಲ ಪೂಜಿಸುತ ಪ್ರಖರ ಕಿರಣದಿ ಜಗವ ಬೆಳಗುತ್ತಲಿಹರು 13 ತಾಳತಂಬೂರಿ ಸಮ್ಯಾಳದಿಂದಲಿ ಕೂಡಿ ಕಾಲುಗೆಜ್ಜೆಯ ಕಟ್ಟಿ ಮೇಲು ಸ್ವರದಿಂದ ಮೇಲಾದ ಭಕ್ತಿಯಲಿ ವಾಲ್ಗೈಸುತಿಹರು 14 ನಿನ್ನ ಲೀಲೆಯ ಕಥೆಯು ಮುಕ್ತಿಗೆ ಸತ್ಪಥವು ನಿನ್ನ ನಾಮದ ಮಹಿಮೆ ನಿಗಮಗಮ್ಯ ನಿನ್ನ ಚರಣೋದಕವು ತ್ರಿಜಗಪಾವನ್ನವು ನಿನ್ನ ನೇಮವೇ ಸೃಷ್ಟಿ ಸ್ಥಿತಿಲಯಕೆ ಕಾರಣವು 15 ನಿನ್ನ ನಾಮದಿ ಭರದಿ ಶುಕನು ಕುಣಿದಾಡುತಿಹ ನಿನ್ನ ಧ್ಯಾನದಿ ಯೋಗಿವೃಂದ ಸಂದಿಪು (ದು) ನಿನ್ನ ರೋಷದಿ ಅಜಭವಾದ್ಯರು ತೃಣರು 16 ಮೂರ್ತಿ ಕಣ್ಣಿಗಲ್ಹಾದಕರ ನಿನ್ನಂಘ್ರಿ ಸೇವೆ ಸಾಮ್ರಾಜ್ಯಗಿಂ ಪರತರವು ನಿನ್ನ ನಾಮದ ರುಚಿಯು ಅಮೃತಕಿಂತಧಿಕ 17 ನಿನ್ನ ಧ್ಯಾನವೆ ಸಕಲ ಸಾಧನದ ಸಾರವು ನಿನ್ನ ಗುಣಗಾನವೆ ಶಾಸ್ತ್ರಗಳ ಭೂಷಣವು ನಿನ್ನ ಮಹಿಮಾರಹಿತ ಕಾವ್ಯವಗ್ರಾಹ್ಯವು ನಿನ್ನ ಲೀಲಾ ರಹಿತ ಶಾಸ್ತ್ರವೆ ಕುಶಾಸ್ತ್ರ 18 ನಿನ್ನ ನಾಮಧ್ಯಾನವೇ ದೇಹ ಸಾರ್ಥಕವು ನಿನ್ನ ನಾಮವೆ ವಿವಿಧ ರೋಗನಿರ್ಮೂಲಕವು ನಿನ್ನ ನಾಮವೆ ದುರಿತರಾಶಿಗೆ ಪಾವಕವು ನಿನ್ನ ನಾಮವೆ ಸಕಲಭವಬಂಧ ಮೋಚಕವು 19 ರೇಣು ತೃಣ ಕಾಷ್ಟದಲಿ ನಿನ್ನ ದಯಪರಮೇಷ್ಠಿಯಿಂದಿರುವೆಗಳಲಿ ನಿನ್ನ ಪ್ರೇಮದಿ ನಲಿದ ಮಂದಮತಿ ವಂದ್ಯನು ನಿನ್ನಲ್ಲಿ ಮಮತೆಯಿಲ್ಲದವದೂಷಿತನು 20 ಅಜಭವಗಿರೀಶಾ ಭಜಕÀಜನ ದಾಸಾ ಸುಜನಮನತೋಷಾ ಕುಜನ ಮನಕ್ಲೇಶ ದ್ವಿಜತತಿಯ ಪೋಷ, ರಜನಿಚರನಾಶ ರಜತಪುರಧೀಶ, ಭುಜಗÀಗಿರಿ ವಾಸ 21 ತಂದೆ ತಾಯಿಯು ನೀನೆ, ಬಂಧು ಬಳಗವು ನೀನೆ ಹಿಂದು ಮುಂದು ನೀನೆ, ಎಂದೆಂದು ನೀನೆ ಬಂದಭಯ ಪರಿಹರಿಸಿ ಕುಂದದಲೆ ಕಾಯ್ವಸಂ - ಬಂಧಿಗನÀು ಆಪ್ತ ಗೋವಿಂದ ನೀನೆ 22 ಸೃಜಿಸಿದವನು ನೀನೆ ಪೋಷಿಸಿದವನು ನೀನೆ ನಿಜಗತಿಯ ಜೀವರಿಗೆ ನೀಡುವವÀನು ನೀನೆ ಅಜಪಿತನೆ ನಿನ್ನ ಪದ ಭಜನೆ ಮಾಳ್ಪವರನ್ನು ನಿಜವಾಗಿ ಕಾಪಾಡಿ ಪೊರೆವ ಪ್ರಭುನೀನೆ 23 ಕೊಡುವವನು ನೀನೆ ಕೋಳುವವನು ನೀನೆ ಅಡಿಗಡಿಗೆ ಸುಖದುಃಖ ನೀಡುವವ ನೀನೆ ಕೊಡುವದಾತನು ನೀನೆ ಕೊಟ್ಟದ್ದು ಕೊಂಡರೆ ಹೊಡಕೊಂಡು ಅಳುವದ್ಯಾತಕೆ ಮೂಢಪ್ರಾಣಿ 24 ಈ ಪೊಡವಿಯೊಳು ಮೊದಲು ನಾನು ಬಹು ಕಾಲದಿ ಕೌಪೀನ ಸಹ ಯನ್ನ ಸಂಗಡಿರಲಿಲ್ಲ ಈ ಪೊಡುವಿಯನು ಬಿಟ್ಟು ನಾ ಪೋಪಕಾಲಕ್ಕು ಈ ಪರಿಯೆ ಪೋಪೆನೆಂಬುದು ಸಟಿಯು ಅಲ್ಲ 25 ಗಾಡಿ ವಾಜಿಯು ಮತ್ತೆ ಬೆಡಗಿನ ವಸನಗಳು ಕೇಡುಯಿಲ್ಲದವಾ ಭರಣ ವಸ್ತುಗಳು ನಾಡಿನೊಳು ಬಹುಮನ್ನಣೆಯು ಯೆಂಬರೆಲ್ಲೆನ್ನ ಕೂಡಬರಬಹುದಾದುದೊಂದುಯಿಲ್ಲ 26 ಎಷ್ಟುಗಳಿಸಿದರೆನ್ನ ಹೊಟ್ಟೆಗೊಂದೇ ರೊಟ್ಟಿ ಸೃಷ್ಟಿಪತಿ ನಿನ್ನಂಘ್ರಿ ನಿಷ್ಠೆ ತೊರೆದು ಕಷ್ಟ ನಷ್ಟಗಳನ್ನು ಸಹಿಸಿ ನಿಷ್ಠ್ಠುರನಾಗಿ ದುಷ್ಟತನದಿಂದ ನಾನಿಷ್ಟುಪರಿಗಳಿಸಿ 27 ದಾನಧರ್ಮಗಳಿಲ್ಲ ವÀ್ರತನೇಮಗಳುಯಿಲ್ಲ ಆನಮಿಸಿಕೊಡಲಿಲ್ಲ ಮಾನಿ ವಿಪ್ರರಿಗೆ ಧೇನುಪಾಲನೆ ನಿನ್ನಧ್ಯಾನವನ್ನೇ ಮರೆದು ಶ್ವಾನನÀಂದದಿ ಕಾದು ಕೊಂಡು ಕುಳಿತಿಪ್ಪೆ 28 ವಾರನಾರಿಯರಲ್ಲಿ ವೇಷಧಾರಿಗಳಲ್ಲಿ ಸೊರೆಮಾಡಿದೆ ಕರ್ಣನೆನಿಸ ಬೇಕೆಂದು ಶ್ರೀರಮಾಪತಿ ನಿನ್ನ ಚರಣ ಕಮಲಗಳನ್ನು ಆರಾಧಿಪರಿಗೆ ನಾರುವ್ವಿ ಕೊಡಲಿಲ್ಲ 29 ಸತಿಸುತರು ಹಿತÀದವರು ಹಿತವ ಮೇಲ್ತೋರಿದು - ರ್ಗತಿಗೆನ್ನ ಗುರಿಮಾಡುತಿಪ್ಪರಲ್ಲದಲೇ ಪರ - ಗತಿಗೆ ಸಾಧನ ತೋರ್ಪರಾರು ಯನಗಿಲ್ಲ 30 ಈ ಮಹಾಜ್ವರದಿಂದ ನೊಂದು ನಿನ್ನನು ನೆನೆವೆÉ ನಾಮಹಾಭಕ್ತಿಯಲಿ ನಂಬಿದವನಲ್ಲ ನಾ ಮಾಡಿದ ಪಾಪರಾಶಿಗಳ ಪರಿಹರಿಸಿ ಪ್ರೇಮದಿಂದಲಿ ಪೊರೆಯೋ ಪರಮಕರುಣಿ 31 ರೋಗವನೆ ಹೆಚ್ಚಿಸು ನಿರೋಗಿಯನು ಮಾಡು ಭವ ರೋಗದಿಂದಗತೀ ಕಡೆದಾಂಟಿಸು ಯೋಗಿವರ ನಿನ್ನಿಚ್ಛೆ ಹೇಗೆÀಮಾಡಿದರುಸರಿ ಆಗದೆಳ್ಳಿನಿತು ಸಂಕೋಚವೆನಗೆ 32 ನೀಕೋಟ್ಟಕವಚವಿದು ನೀ ತೆಗೆದು ಹಾಕಲ್ಕೆ ನಾಕೆಟ್ಟುದುದುಯೇನು ಕರುಣಾಳುವೆ ಈ ಕವಚ ಕೆಲಕಾಲ ಬಿಟ್ಟಮಾತ್ರಕೆ ಮುಂದೆ ನೂಕಬೇಡೆನ್ನ ಮನ ಪಾಪಗಳ ಕಡೆಗೆ 33 ತನುಮನವು ನಿನ್ನದು ಧನಧಾನ್ಯ ನಿನ್ನದು ವನಿತೆ ನಿನ್ನವಳು ಮನೆ ಮಾರು ನಿನ್ನದು ದೇವ ಎನಗಾಪ್ತರೆಂಬುವರು ನಿನ್ನದಾಸರು ರಾಮ ಎನದೆಂಬ ವಸ್ತುವೆಲ್ಲವು ನಿನ್ನದು 34 ನಿನ್ನ ನಂಬಿದಯನೆಗೆ ಪಾಪದಂಜಿಕೆಯಿಲ್ಲ ಪುಣ್ಯದಾಶೆಯು ಇಲ್ಲ ಪರಮಪುರುಷ ನಿನ್ನ ಪ್ರೇರಣೆಯಿಂದ ಯನಿ
--------------
ವರದೇಶವಿಠಲ
ಶ್ರೀರುಕ್ಮಿಣೀರಮಣ ತಾನುಡಿಸಿದಂತೆ ನಾಂ ಧಾರುಣಿಪ ಜನಮೇಜಯಂಗೆ ಮುನಿ ಪೇಳಿಸಿದ ಹದಿನೆಂಟುಪದ್ಯಗಳೊಳಾಲಿಸುವುದು ದನುಜದಿವಿಜರೀ ಭುವಿಯೊಳವತಿರಿಸಿದರುಸುಯೋ ಧನಪಾಂಡುತನಯರಂ ಸೈರಿಸದೆಭೇದಮಂ ಕಟ್ಟಿಸಿಯರಗಿನಮನೆಯೊಳವರನಿಡಲು | ವನಜಲೋಚನನ ಕೃಪೆಯಿಮದದಂದಾಟಿಕಾ ನನದಲಿ ಹಿಡಿಂಬಬಕರಂ ಮುರಿದುದೃಪದರಾ ಪುತ್ರರಪಡೆದರಾದಿಪರ್ವದಲ್ಲಿ 1 ರಾಜಸೂಯಾಭಿಧಾನದ ಯಾಗಕಾರಣದೊ ಳಾಜರಾಸಂಧಾದಿಗಳ ಕೊಲಿಸಿನೃಪಧರ್ಮ ಜೂಜಿನಲಿಸೋಲಿಸಲು ಪಂಚಪಾಂಡವರಂ ಸ ರೋಜಾಕ್ಷಿ ದ್ರೌಪದಿಯ ಭಂಗಪಡಿಸಲ್ಕೆಪಂ- ಸಭಾಪರ್ವದಲಿ 2 ಅಡವಿಯೊಳು ವಾಸವಾಗಿರಲು ಪಾಂಡುಸುತರ್ಗೆ ಪೊಡವಿ ಸುರರರುಹಿಸಲ್ ಸತ್ಕಥೆಗಳಾಲಿಸುತ ಘೋಷಯೊಳಹಿತನ ಬಿಡಿಸಿದಂ ಗಂಧರ್ವಪತಿಯಿಂದ ಪಾರ್ಥನೀ ರಡಿಸಿ ನಾಲ್ವರುಮೂರ್ಛೆಪೊಂದಲ್ಕೆಯಕ್ಷಂಗೆ ಅರಣ್ಯಪರ್ವದೊಳಗೆ 3 ಬಂದುಮಾತ್ಸ್ಯಾಲಯದಲಜ್ಞಾತವಾಸದೊಳ ಗಂದುಪಾಂಡವರಿರಲ್ ಕೀಚಕಾಧಮನು ಸೈ- ಭೀಮಗಂಧರ್ವ ವ್ಯಾಜದಿಂದ ಕೊಂದವಾರ್ತೆಯ ಕುರುಪಕೇಳಿ ಸೇನೆಸಹಿತ ಪಾರ್ಥಗೆ ವಿರಾಟಪರ್ವದಲ್ಲಿ 4 ದೇವಕೃಷ್ಣಸಂಧಿಗೆ ತರಲ್ ಕುರುಪದು ರ್ಭಾವದೊಳಗಿರಲದಂ ತಿಳಿದುವಿದುರನ ಮನೆಯೊ ಕೌರವಸಭೆಗೆಪೋಗಿ ಈವುದೈದೂರುಗಳ ಪಾಂಡವರಿಗೆನೆ ಭೇದ ಭಾವದಿ ಸುಯೋಧನಂಸೂಜ್ಯಾಗ್ರಭೂಮಿಯಂ ತಾ ನೀವುದಿಲ್ಲವೆನೆ ಯುದ್ಧನಿಶ್ಚಯಗೈದನುದ್ಯೋಗಪರ್ವದಲಿ 5 ಕುರುಪತಿಯು ಗಂಗಾಸುತಗೆ ಪಟ್ಟಗಟ್ಟಿದಂ ಎರೆಡುಬಲಮಂ ಸೇರಿಯಿರಲರ್ಜುನಂ ತನ್ನ ವರಕೊಲ್ವದೆಂತೆನಲ್ ಹರಿವಿಶ್ವರೂಪಮಂ ತೋರಿತತ್ವವತಿಳಿಸಲು ತರುವಾಯ ಹತ್ತುದಿನಕಾದುತಿರಲಾಗಭೀ ಷ್ಮರಿಗೆಷಂಡನನೆವದಿ ಶಸ್ತ್ರಸಂನ್ಯಾಸ ವಾ ಭೀಷ್ಮಪರ್ವದಿಕಥೆಯಿದು 6 ಗುರುಗಳಿಗೆ ಪಟ್ಟಾಭಿಷೇಕವಾಯಿತುದ್ರೋಣ ದೊರೆಯಹಿಡಿತಹೆನೆಂದು ತಪ್ಪೆಸಂಶಪ್ತಕರ ನರನೊಡನೆ ಕಾದಿದರು ಪಾರ್ಥಸುತಪೊಕ್ಕುಪದ್ಮವ್ಯೂಹ- -ದೊಳುಮಡಿಯಲು ನರಪ್ರತಿಜ್ಞೆಯಗೈದು ಸೈಂಧವನ ವಧಿಸಿದನ ಸುರ ಘಟೋತ್ಕಚ ರಾತ್ರಿಯುದ್ಧದೋಳ್ ಸಂದನಾ ದಿನದಲಿದ್ರೋಣಪರ್ವದೊಳಗೆ 7 ಕುರುಸೈನ್ಯಬತ್ತಿರುವ ಶರಧಿಯೋಲಾಯ್ತು ದಿನ ಕರಸುತಗೆ ಪಟ್ಟವಂಗಟ್ಟಿ ದುರ್ಯೋಧನಂ ಹರನುತ್ರಿಪುರವ ಗೆದ್ದಕಥೆಯವಿಸ್ತರಿಸಿ ಸಾರಥಿಯ ಮಾಡಲು ಶಲ್ಯನ ನರನವಿಕ್ರಮಪೊಗಳಿ ಕರ್ಣನಬಲವನುಧಿ ಕ್ಕರಿಸೆಮಾದ್ರೇಶ್ವರಂ ಕರ್ಣನತಿ ಖಾತಿಯಿಂ ದೆರಡುದಿನ ಕಾದಿಯರ್ಜುನನಿಂದ ಮಡಿದ ಸೂತಜ ಕರ್ಣಪರ್ವದಲಿ 8 ಸೂತಜನಮರಣದಲಿ ಶಲ್ಯಗಾಯಿತು ಪಟ್ಟ ಶಕುನಿಯಂಸಹದೇವಸಂಹರಿಸಲು ಪಾತಕಿ ಸುಯೋದನಂ ಕೊಳನಪೊಕ್ಕಿರಲು ಯಮ ಜಾತಾದಿಗಳು ಪೋಗಿ ನುಡಿಸಲ್ಕೆಜಲ ಪೊರಟು ಕುರುಪನು ಶಲ್ಯಪರ್ವದೊಳಗೆ 9 ಗುರುಜಂಗೆ ಬೆಸಸಿದಂ ಕುರುರಾಯ ಪಾಂಡವರ ಶಿರವತಹುದೆನುತಲಶ್ವತ್ಥಾಮಪಾಳಯದಿ ಜೀವಬಿಡಲು ನರಭೀಮಸೇನರಾವಾರ್ತೆಯಂ ಕೇಳುತಲೆ ತರುಬಿ ಹಿಡಿದೆಳೆ ತಂದು ದ್ರೌಣಿಯಂ ಶಿಕ್ಷಿಸಲ್ ಸುಪ್ತಪರ್ವದಲಿ 10 ರಣದಿ ಮಡಿದಿರುವ ನೃಪರರಸಿಯರ್ ಅಂಧಭೂ ಪನು ಸತಿಯುಸಹಿತಲೈತರುತಿರಲ್ ಕಳನೊಳಗೆ ತಮ್ಮಪತಿಗಳನಪ್ಪಲು ಪೆಣಗಳೊಟ್ಟೈಸಿ ಸಂಸ್ಕಾರಕ್ರಿಯೆಗಳವಿದು ರನುಗೈದನನ್ನೆಗಂ ಧೃತರಾಷ್ಟ್ರನರಸಿ ಕೃ ಸ್ತ್ರೀಪರ್ವದಲಿ 11 ತನಗೆ ಕರ್ಣಸಹೋದರನೆಂಬ ವಾರ್ತೆಯಮ ಜನು ಕೇಳಿ ಶೋಕದಿವಿರಕ್ತಿಯಿಂದಿರೆ ಸಕಲ ಘನಬಂಧುವಧೆ ಮಹಾದೋಷವೆಂತೆಂದು ಭೀ ಷ್ಮನ ಕೇಳಲರುಹಿದಂ ರಾಜನೀತಿಯ ಧರ್ಮ ವನು ಕಷ್ಟಕಾಳಧರ್ಮವ ಮೋಕ್ಷಧರ್ಮವೆಂಬಿದುಶಾಂತಿಪರ್ವದಲಿ 12 ಅತಿಶಯ ದಾನಧರ್ಮದ ಲಕ್ಷಣಗಳಂ ನಿ ಯತಮಾದ ವರ್ಣಾಶ್ರಮಾಚಾರಕ್ರಮದಸಂ ತತಿಗಳಂ ಶಿವವಿಷ್ಣುಗಳಮಹಿಮೆ ಬ್ರಹ್ಮಸಾಕ್ಷಾತ್ಕಾರಸದ್ಬೋಧೆಯ ಕಥೆಗಳರುಹಿಸಿ ನದೀಸುತಧರ್ಮಜನ ಮನೋ ಪತಿ ಕೃಷ್ಣನಂ ಧ್ಯಾನಿಸುತ ಮುಕ್ತನಾದನಿದು- -ಮಾನುಶಾಸನ ಪರ್ವದಿ 13 ಗುರುಸುತನ ಬ್ರಹ್ಮಾಸ್ತ್ರಮಂಚಕ್ರದಿಂದಸಂ ಹರಿಸಿ ಕೃಷ್ಣಂಕಾಯ್ದನುತ್ತರೆಯಗರ್ಭಮಂ ನೇಮದಿಂದ ಪರಿಪರಿಸುವಸ್ತುಗಳನೆಲ್ಲ ತಂದುಯೈ ವರು ಮಹಾಸಂತಸದಿಹರಿ ಸಹಾಯದಿ ಮಾಡಿ ಸಂಪೂಜಿಸಿದರಶ್ವಮೇಧಕಪರ್ವದಿ 14 ಅಂಧಭೂಪತಿ ಕೌರವಸ್ತ್ರೀಯರುಂ ಕುಂತಿ ಗಾಂಧಾರಿ ಸಹಿತಬರೆ ತೆರಳಿದಂತಪಗೈಯ್ಯೆ ಮುವ್ವರುಪವಾಸದೊಳಿರೆ ಬಂದುದಾಕಾಳ್ಗಿಚ್ಚಿನೋಲ್ ಮಹಾಜ್ವಾಲೆಯೋಳ್ ಪೊಂದಿದರ್ ವಿದುರಧರಾತ್ಮಜನಕೂಡಿದಂ ಬಂದುಯಮಜನುಪುರದಿ ಶ್ರಾದ್ಧಗಳಮಾಡ್ದನಾಶ್ರಮ- -ವಾಸಪರ್ವದೊಳಗೆ 15 ವರುಷಗಳು ಷಟತ್ರೀಂತಿಯು ರಾಜ್ಯವಾಳುತಿರೆ ಬರುಬರುತಲುತ್ಪಾತಗಳುಪುಟ್ಟಿದವು ಯಾದ ಮಡಿದರೆಂಬವಾರ್ತೆಯನು ಕೇಳಿ ನರನು ನಡೆತಂದು ಶೋಕದೊಳುಳಿದವರನುತಾ ಕರದೊಯಿದು ವಜ್ರಾಖ್ಯನಂ ಯಿಂದ್ರಪ್ರಸ್ಥದೋಳ್ ಮುಸಲಪರ್ವದಕಥೆಯಿದು 16 ನರನಮೊಮ್ಮಗೆ ಪಟ್ಟವಂಗಟ್ಟಿಯೈವರುಂ ತೆರಳಿದರ್ಪಾಂಡವರ್ ಸತಿಸಹಿತಬರುತ ಹಿಮ ನಕುಲನುಂ ಸುರಪಸುತನು ವರಭೀಮಸೇನನುಂ ಬಿದ್ದರಾನೃಪತಿಯೋ ರ್ವರನುಕಾಣದೆಯೊಬ್ಬನೇಪೋಗುತಿರೆ ಕಷ್ಟ ಪ್ರಸ್ಥಾನಪರ್ವದೊಳಗೆ 17 ಮ್ಮಂದಿರೆಲ್ಲೆನಲವಂ ಸುರನದಿಯತೋರಲ್ಕೆ ತನ್ನವರೆಲ್ಲರ ನೋಡುತ ಪೊಂದಿದಂ ಯಮನೊಡನೆ ಪವನನೋಳ್ ಭೀಮನರ ನಿಂದನಂ ಯಮಳರಶ್ವಿನಿಯರೊಳ್ಕಲಿಮುಖ್ಯ ಸಂದೋಹದೋಳ್ ಸುಯೋಧನ ಪ್ರಮುಖರೊಂದಿದರ್ ಸ್ವರ್ಗಾರೋಹಣಪರ್ವದಿ 18 ಈಮಹಭಾರತ ಶತಸಹಸ್ರಗ್ರಂಥವನು ಹಾ ಮುನಿ ಪರಾಶರಾತ್ಮಜಪೇಳ್ದನದುವೆ ಗುರು ಸಂಕ್ಷೇಪಭಾರತವನು ಪ್ರೇಮದಿಂದಾಲಿಸುವ ಸಜ್ಜನರಿಗನುದಿನಂ ಕಾಮಿತಾರ್ಥವನಿಹಪರಂಗಳೊಳ್ಸುಖವಗುರು ರಾಮವಿಠ್ಠಲಕೊಡುವಭಾಗ್ಯವಲ್ಲೀನಗರ- -ನಿಲಯನರಹರಿಕರುಣದಿ 19
--------------
ಗುರುರಾಮವಿಠಲ
ಶ್ರೀವತ್ಸಾಂಕಿತ ಗರುಡ ತುರಂಗ ಕಾವೇರಿ ಜಲ ಪರಿವೃತ ರಂಗ ಪ. ದೇವೋತ್ತಮ ನುತ ಧರಿತ ರಥಾಂಗ ಪಾವನ ಚರಣ ಕೃಪಾಂಗ ಶುಭಾಂಗ ಅ.ಪ. ದೇವಕೀನಂದನ ಜಲದ ನೀಲಾಂಗ ಭಾವಜಪಿತ ದಯಾಜಲಧಿ ತರಂಗ ಶ್ರೀವನಮಾಲಾ ರಿಪುಮದ ಭಂಗ ಲಾವಣ್ಯಾಂಬರ ಕರುಣಾಪಾಂಗ 1 ರಾವಣ ಕುಲ ಸಂಹಾರಕ ರಂಗ ಶ್ರೀವಿಭೀಷಣ ಪೂಜಿತ ರಂಗ ಸನ್ನುತ ರಂಗ ಶ್ರೀವಸುಧಾನ್ವಿತ ಮಾಂಗಿರಿರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀಶ ವೇದವ್ಯಾಸನಾದನು ಪ ಶ್ರೀಶ ವೇದವ್ಯಾಸನಾಗಲು ಸಾಸಿರ ನಯನ ಸಾಸಿರ ವದನ ಕರ ಮಿಕ್ಕ ಸುರರೆಲ್ಲ ತು- ತಿಸಿ ಹಿಗ್ಗುತ ಹಾರೈಸಲಂದು ಅ.ಪ. ದರ್ಪಕ ಜನಕ ಸರ್ಪತಲ್ಪನಾಗಿ ತಪ್ಪದನುಗಾಲ ಇಪ್ಪ ವಾರಿಧೀಲಿ ಕಂದರ್ಪ ಹರನೈಯ ಸುಪರ್ಣರಥನಾಗಿ ಒಪ್ಪಿಕೊಂಡು ಇಪ್ಪತ್ತು ಲಕ್ಷಗಲಿಪ್ಪ ಯೋಜನದ ಅಪ್ಪನ ಅರಮನೆ ದರ್ಪಣದಂತೆ ತಾ ರಪ್ಪಥ ಮೀರಿದಂತಿಪ್ಪದು ನೋಡಿ ಸಾ- ಮೀಪಕ್ಕೆ ವಾಣೀಶ ಬಪ್ಪ ಬೇಗಾ 1 ಬಂದು ಬೆನ್ನೈಸಿದ ಮಂದಮತಿ ಕಲಿ- ಯಿಂದ ಪುಣ್ಯಮೆಲ್ಲ ಹಿಂದಾಯಿತೆನೆ ಮು ಕುಂದ ಭಕ್ತನಿಗೆ ಒಂದೆ ಮಾತಿನಲಾ- ನಂದ ಬಡಿಸಿ ಪೋಗೆಂದು ಪೇಳೆ ಅಂದು ಸುಯೋಜನಗಂಧಿ ಗರ್ಭದಲ್ಲಿ ನಿಂದವತರಿಸುತ ಪೊಂದಿದ ಅಜ್ಞಾನ ಅಂಧಕಾರವೆಲ್ಲ ಹಿಂದು ಮಾಡಿ ಸುರ- ಸಂದಣಿ ಪಾಲಿಸಿ ನಿಂದ ದೇವ 2 ಕೆಂಜೆಡೆವೊಪ್ಪ ಕೃಷ್ಣಾಜಿನ ಹಾಸಿಕೆ ಕಂಜಾಪ್ತನಂದನದಿ ರಂಜಿಸುವ ಕಾಯ ಮಂಜುಳ ಸುಜ್ಞಾನ ಪುಂಜನು ವಜ್ಜರ- ನಿತ್ಯ ಅಂಜಿದಗೆ ಸಂಜೆಯ ತೋರಿ ಧನಂಜಯ ಶಿಷ್ಯ ನೀ- ಗಂಜದಂತೆ ಕರಕಂಜವ ತಿರುಹಿ ನಿರಂಜನ ಪೇಳಿದ ಕುಂಜರ ವೈರಿಯ ಭಂಜನನು 3 ಗಂಗಾತೀರದಲಿ ಶೃಂಗಾರ ಉಪವ- ನಂಗಳದರೊಳು ಶಿಂಗಗೋಮಾಯು ಭು ಮೂಷಕ ಮಾತಂಗ ಸಾರಮೇಯ ಕೊಂಗಹಂಗ ಸರ್ವಾಂಗ ರೋಮ ಶರಭ ವಿಹಂಗ ಶಾರ್ದೂಲ ಸಾ- ರಂಗ ಕುರಂಗ ಕುಳಿಂಗ ಪಾಳಿಂಗ ಪ್ಲ ವಂಗ ತುರಂಗ ಪತಂಗ ಭೃಂಗಾದಿ ತು- ರಂಗವು ತುಂಬಿರೆ ಮಂಗಳಾಂಗ 4 ಬದರಿ ಬೇಲವು ಕಾದರಿ ಕಾಮರಿ ಮಧುಮದಾವಳಿ ಅದುಭುತ ತೆಂಗು ಕದಳಿ ತಪಸಿ ಮದಕದಂಬ ಚೂ- ತದಾರು ದ್ರಾಕ್ಷಿಯು ಮೃದು ಜಂಬೀರವು ಬಿದಿರು ಖರ್ಜೂರ ಮೋದದಿ ದಾಳಿಂಬ ತುದಿ ಮೊದಲು ಫ ಲದ ನಾನಾವೃಕ್ಷ ಪದಲತೆಯ ಪೊದೆಯು ಫಲ್ಲಸೈ ಇದೆ ಆರು ಋತು ಸದಾನಂದ 5 ವನದ ನಡುವೆ ಮುನಿಗಳೊಡೆಯ ಕಾನನ ಸುತ್ತಲು ಆ- ನನ ತೂಗುತ್ತ ಧ್ವನಿಯೆತ್ತಿ ಬಲು- ಗಾನ ಪಾಡಿದವು ಗುಣದಲ್ಲಿ ಕುಣಿದು ಖಗಾದಿ ಗಣಾನಂದದಿಂದಿರೆ ವನನಿಕರ ಮೆಲ್ಲನೆ ಮಣಿದು ನೆ- ಲನ ಮುಟ್ಟುತಿರೆ ಅನಿಮಿಷರು ನೋ ಡನಿತಚ್ಚರಿಯನು ಪೇಳೆ 6 ಮೌನಿ ನಾರದನು ವೀಣೆ ಕೆಳಗಿಟ್ಟು ಮೌನವಾದನು ಬ್ರಹ್ಮಾಣಿ ತಲೆದೂಗಿ ಗೀರ್ವಾಣ ಗಂಧರ್ವರು ಗಾನ ಮರೆದು ಇದೇನೆನುತ ಮೇನಕೆ ಊರ್ವಸಿ ಜಾಣೀರು ತಮ್ಮಯ ವಾಣಿ ತಗ್ಗಿಸಿ ನರ್ತನೆಯ ನಿಲ್ಲಿಸಿ ದೀನರಾದರು ನಿಧಾನಿಸಿ ಈಕ್ಷಿಸಿ ಎಣಿಸುತ್ತಿದ್ದರು ಶ್ರೀನಾಥನ 7 ನಮೋ ನಮೋಯೆಂದು ಹಸ್ತ- ಕಮಲ ಮುಗಿದು ನಮಗೆ ನಿಮ್ಮಯ ಅಮಲಗುಣ ನಿಗಮದಿಂದೆಣಿಸೆ ಕ್ರಮಗಾಣೆವು ಉತ್ತಮ ದೇವ ಕೂರ್ಮ ಖಗಮೃಗ ಸಮವೆನಿಸಿ ಅ- ಚಮತ್ಕಾರದಲ್ಲಿ ನಾಮಸುಧೆಯಿತ್ತ ರಮೆಯರಸ ಆಗಮನತ8 ಇದನು ಪಠಿಸೆ ಸದಾ ಭಾಗ್ಯವಕ್ಕು ಮದವಳಿ ದಘವುದದಿ ಬತ್ತೋದು ಸಾಧನದಲ್ಲಿಯೆ ಮದುವೆ ಮುಂಜಿ ಬಿಡದಲ್ಲಾಗೋದು ಶುಭದಲ್ಲಿ ಪದೆಪದೆಗೆ ಸಂಪದವಿಗೆ ಜ್ಞಾನ- ನಿಧಿ ಪೆಚ್ಚುವುದು ಹೃದಯ ನಿರ್ಮಲ ಬದರಿನಿವಾಸ ವಿಜಯವಿಠ್ಠಲ ಬದಿಯಲ್ಲೆ ಬಂದೊದಗುವ 9
--------------
ವಿಜಯದಾಸ
ಶ್ರೀಶೈಲದೊಳಗಿಪ್ಪ ಸ್ವಾಮಿ ಪುಷ್ಕರಣಿ ಇತಿ ಹಾಸವ ದಿಲೀಪನೃಪ ಬೆಸಗೊಳಲು ಕೇಳಿ ದು ಕೇಳಿ ಸಂತೋಷಿಸುವುದು ಪ ಮುನಿಕುಲೋತ್ತಮ ನೆನಿಸಿ ದುರ್ವಾಸಋಷಿ ದಿಲೀ ಪನ ಸದನವೈದಿರಲು ಕೇಳಿ ಸಂತೋಷದಲಿ ಮುಗಿದು ವಿಜ್ಞಾಪಿಸಿದನು ಋಷಿಗೆ ಅನಿಮಿಷೇಶಾ ವೆಂಕಟನ ನಾಮಧೇಯ ಕುಂ ಭಿಣಿ ಯೊಳಿಪ್ಪಾಖ್ಯಾನ ತೀರ್ಥಗಳ ವೈಭವಗ ದುರ್ವಾಸ ಪೇಳೊದಗಿದಿ 1 ಕೇಳು ರಾಜೇಂದ್ರ ವೆಂಕಟ ಪರ್ವತನು ಮೇರು ಶೈಲಾತ್ಮಜನು ವಾಯು ಶೇಷರ ಸುಸಂವಾದ ಸ್ವರ್ಣ ಮುಖರೀ ತೀರದಿ ಬೀಳಲ್ಕೆ ನೊಂದು ಪ್ರಾರ್ಥಿಸಿದ ಶೇಷನು ಎನ್ನ ಮ್ಯಾಲೆ ಮಲಗಿಪ್ಪ ತೆರದಂತೆ ದಯದಿಂ ನೀನೆ ಶೇಷಾದ್ರಿಯೆನಿಸುತಿಹುದು 2 ಈ ನಗೋತ್ತಮದಾದಿ ಮಧ್ಯಾವಸಾನ ಪ್ರ ಸೂನು ಫಲ ಸಂಯುಕ್ತ ಸಾನುಗಳ ಸುರುಚಿಕೋ ಪುಷ್ಕರಣಿ ತೀರ್ಥದ ತಟದಲಿ ಶ್ರೀನಿವಾಸನು ಬಂದು ನಿಂತ ಕಾರಣವೆನಗೆ ನೀನರುಪುವುದು ಯೆಂದು ಬೆಸಗೊಳಲು ದುರ್ವಾಸ ನೃಪಗೆ ಹರುಷೋದ್ರೇಕದಿ 3 ತೀರ್ಥೋತ್ತಮತ್ವ ಸಾಪೇಕ್ಷಿಯಿಂದಲಿ ಬ್ರಹ್ಮ ಪತ್ನಿ ಪೂರ್ವದಲಿ ಬ್ರಹ್ಮಾವರ್ತ ದೇಶದೊಳ ಪುಲಸ್ತಾಖ್ಯ ಮುನಿಪ ತತ್ತೀರದಲಿ ತಪವಗೈವೆನೆಂದೆನುತ ಬರೆ ಪುತ್ರನೆಂದರಿದು ಮನ್ನಿಸದಿರಲು ಕೋಪದಲಿ ನಿಷ್ಫಲವಯೈದಲೆಂದು ನುಡಿದ 4 ನದ್ಯೋತ್ತಮತ್ವ ಜಾಹ್ನವಿಗಿರಲಿ ಗುಣಗಳಿಂ ಸ್ವರ್ಧುನಿಯು ನೀಚಳಾದರೆಯು ಸರಿ ಲೋಕ ಪ್ರ ಪಾದ ಪ್ರಸಾದದಿಂದ ವಾಗ್ದೇವಿ ನುಡಿಗಳು ಭ ವದ್ವಂಶರೆಲ್ಲ ರಾಕ್ಷಸರಾಗಿ ಬಹಳ ವಿ ಪದಕೆರಗಿ ಬಿನ್ನೈಸಿದ 5 ಅನಭಿಜ್ಞ ಲೋಕೋಪಕಾರ ತಪವೆಂದರಿಯ ದನುಚಿತೋಕ್ತಿಗಳನಾಡಿದೆ ಮಯಾಕೃತದೋಷ ಮುನಿವರನು ಸಂಪ್ರಾರ್ಥಿಸೆ ಪುನರಪಿ ವಿಶಾಪವಿತ್ತಳು ಪ್ರಸನ್ಮುಖಳಾಗಿ ಜನಿಸಲೀ ಭವದ ಪ್ರಾಂತಕ್ಕೆವರ ವಿಭೀ ಭಗವದ್ಧ್ಯಾನಪರಳಾದಳು 6 ತೀರ್ಥೋತ್ತಮತ್ವ ಸಾಪೇಕ್ಷಯಿಂ ವಾಗ್ದೇವಿ ಮತ್ತು ತಪದಿ ಪ್ರೀತಿಗೊಳಿಸಲ್ಕೆ ದೇವದೇ ಬಿನ್ನೈಸಿದಳು ವಾಂಛಿತವನು ವ್ಯರ್ಥವಾಯಿತು ತಪವು ಬಹ್ಮ ಶಾಪದಲಿ ತೀ ರ್ಥೋತ್ತಮತ್ವವು ಕರುಣಿಸೆಂದು ಕೇಳ್ದುದಕೆ ಪ್ರ ಇನಿತೆಂದು ಕಾರುಣ್ಯಸಿಂಧು 7 ನದಿಯರೂಪಕೆ ಬ್ರಹ್ಮಶಾಪ ನಿನಗಾಯಿತ ಲ್ಲದೆ ಸರೋವರಕೆ ಬ್ಯಾರಿಲ್ಲ ಪುಷ್ಕರಣಿಗಳೊ ಸ್ವಾಮಿ ಪುಷ್ಕರಣಿ ಎನಿಸಿ ವಿಧಿಪತ್ನಿ ಶೇಷನೋದ್ದೇಶ ತ್ವತ್ ಸನ್ನಿಧಾ ನದಿ ವಾಸವಾಹೆ ಸಂದೇಹವಿಲ್ಲಿದಕೆ ಸ ಸಜ್ಜನರಿಗಖಿಳಾರ್ಥವೀವೆನೆಂದ 8 ಮೂರುವರೆ ಕೋಟಿ ತೀರ್ಥಗಳು ಭುವನತ್ರಯದೊ ಳಾರಾಧಿಸಿದರೆಯೆನ್ನ ಸ್ವಸ್ವ ಪಾಪೌಘ ಪರಿ ಧನುರ್ಮಾಸ ಸಿತಪಕ್ಷದ ಈರಾರುದಿನದಲರುಣೋದಯಕೆ ತೀರ್ಥ ಪರಿ ವಾರನೈದಿರಿ ಶುದ್ಧರಾಗುವಿರಿಯೆಂದು ತ ಪ್ರೇಷ್ಯತ್ವ ವಾಣಿಗಿತ್ತ 9 ವಾಣಿದೇವಿಯು ತೀರ್ಥರೂಪಳಾಗಲು ಕೃಷ್ಣ ವೇಣಿಸಮ ಬಕುಳ ಮಾಲಿಕೆ ತೀರ್ಥ ಭೂಮಾಭಿ ಹರಿಗೆ ನೈವೇದ್ಯರಚಿಸಿ ಪಾನೀಯ ಧೀ ಭೋಗ ಪತ್ನಿ ಪೂರ್ವದಿ ಸನ್ನಿ ಧಾನದಲ್ಲಿಪ್ಪೆನೆಂದೆನುತ ಪ್ರಾರ್ಥಿಸೆ ಶೇಷ ತಾನಿತ್ತ ಕಮಲಾಕಾಂತನು 10 ಸ್ವಾಮಿ ಪುಷ್ಕರಣಿ ನವತೀರ್ಥಮಾನಿಗಳಿಗೆ ಸು ಧಾಮವೆನಿಸುವಳು ತತ್ತನ್ನಾಮಗಳು ಪೇಳ್ವೆ ಅಗ್ನಿಯನು ಋಣವಿಮೋಚನಿ ಈ ಮಹಾ ವಾಯು ತೀರ್ಥಗಳ ಸುಸ್ನಾನಲ ಕ್ಷ್ಮೀ ಮನೋಹರನ ದರುಶನ ತತ್ವ್ರಸಾದಾತ್ರ ಅಲ್ಪಾಧಿಕಾರಿಗಳಿಗೆ 11 ಕವಿಭಿರೀಡಿತ ಪೂಜ್ಯನೆನಿಸುವನು ಪದ್ಮಸಂ ಭವನು ಪೂಜಕನೆನಿಪ ನೈವೇದ್ಯಕರ್ತೃ ಭಾ ಶರ್ವಶಕ್ರಾರ್ಕ ಮುಖ್ಯ ದಿವಿಜಗಣವಿಹರೆಂದು ಚಿಂತಿಸದೆ ಮರೆದು ಮಾ ನವರೆ ವರ್ತಿಪರೆಂದು ತಿಳಿವವನು ಘೋರ ರೌರವ ಧರಾತಳದೊಳೆಂದ 12 ಮೇರುನಂದನ ವೈಕುಂಠಾದ್ರಿಶತಯೋಜನದ ಮೇರೆಯೊಳು ಪುಣ್ಯತೀರ್ಥಗಳಿಪ್ಪವಲ್ಲೆಲ್ಲ ಮುಖ್ಯಾಮುಖ್ಯ ಭೇದದಿಂದ ನೂರೆಂಟು ತೀರ್ಥಗಳು ಮುಖ್ಯವೆನಿಸುವುವಿದರೊ ಳಾರುತ್ತಮೋತ್ತಮವುಗಳ ನಾಮ ಪೇಳ್ವೆನು ಕು ತುಂಬರ ಆಕಾಶಗಂಗ 13 ವಸುರುದ್ರ ಕಾಣ್ವಗ್ನಿ ಮನ್ವಿಂದ್ರಯಮ ಸೋಮ ಬಿಸರುಹ ಪ್ರೀಯ ನವಪ್ರಜ ಆಶ್ವಿನಿಗಳು ಶುಕ ಜಗಜ್ಜಾಡ್ಯಹರ ಬಾರ್ಹಸ್ವತಿ ದಶಪ್ರಚೇತಸ ಗರುಡ ಶೇಷವಾಸುಕಿಯು ಹೈ ಬ್ಬಸುರ ನಾರದ ವೈಶ್ವದೇವ ಸ್ವಾಹಾಸ್ವಧಾ ಹಸ್ತಿ ನಾರಾಯಣಾದಿ ಪಂಚ 14 ಶಿವರೂಪಿ ದೂರ್ವಾಸ ಪೇಳ್ದನಿನಿತೆಂದು ಜಾ ಹ್ನವಿಯೊಳಬ್ದ ಸ್ನಾನಫಲ ಧನುರ್ಮಾಸದೊಳು ವಾಗ್ದೇವಿ ಶುಕ್ಲಪಕ್ಷ ದ್ವಾದಶಿ ದಿವಸದಿ ಶುಚಿರ್ಭೂತನಾಗಿ ಸಂತೋಷದಲಿ ವಿವರಾಗ್ರಜೋದಯದಿ ಸ್ನಾನವನು ಮಾಡೆ ಐ ಶಿಷ್ಯನೆಂದರಿದು ದಯದಿ 15 ನಾರದ ಮುನೀಂದ್ರನುಪದೇಶದಿಂ ದಕ್ಷನ ಕು ಮಾರಕರು ಸಾಹಸ್ರ ತಮ್ಮ ತಮ್ಮಾಶ್ರಮದ ದಾಕ್ಷಣ್ಯವೆನಿಸುತಿಹ್ಯದು ಭೈರವಾಷ್ಟ ತೀರ್ಥ ಸಿದ್ಧಿಪ್ರದಾಯಕ ಕು ಮಾರಧಾರಿಕ ಪಶ್ಚಿಮದಲಿಹವು ಎಂಟಧಿಕ ತೀರ್ಥಾದ್ರಿಯೆನಿಸುತಿಹುದು 16 ತಾ ತಿಳಿ ಪುದಿತಿಹಾಸ ಶೌನಕಾದ್ಯರಿಗೆ ವರ ಪುಷ್ಕರಣಿಮಹಿಮೆ ಪ್ರೀತಿಯಿಂದಲಿ ತಿಳಿದು ಪಠಿಸುವವರಿಗೆ ಜಗ ನ್ನಾಥ ವಿಠಲ ಮನೋವಾಂಛಿತಗಳಿತ್ತು ಪುರು ಹೂತ ಲೋಕದಲಿ ಸುಖಬಡಿಸಿ ಪ್ರಾಂತಕೆ ತನ್ನ ಪುರವನೈದಿಪ ಕೃಪಾಳು17
--------------
ಜಗನ್ನಾಥದಾಸರು
ಸಕಲಾರ್ಥಕಿದೆ ಸುಖ ಸಾಧಿಸಿನ್ನು ನೋಡಿ ಭಕುತಿ ಭಾವದಿಂದ ಸದ್ಗುರು ಸೇವೆಯ ಪೂರ್ಣಮಾಡಿ ಧ್ರುವ ಭಾವವಿಟ್ಟು ನೋಡಿ ಖೂನ ದೇವದೇವೇಶನ ಕಾವ ಕರುಣನೇ ತೋರುತಿಹ್ಯ ತಾ ನಿಧಾನ 1 ನೋಟ ನಿಜಮಾಡಿ ನೋಡಿ ನೀಟ ನಿಜ ಧ್ಯಾನ ಘಾಟ ತಿಳಿದವರಿಗಿದೆ ಗುರುಕೃಪೆಙÁ್ಞನ 2 ಸವಿದುಣ್ಣಬೇಕು ಇದೇ ಸವಿ ಸವಿಯಿಂದ ಆವಾಗ ಮಹಿಪತಿಗಿದೆ ನೋಡಿ ಬ್ರಹ್ಮಾನಂದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಂಕೀರ್ಣ ಇದೇ ವೀಳ್ಯ ಅಡಕ್ಯೆಂಬುದು ನೋಡಿ ಹದನಿಸಿ ನಾಲ್ಕುಗುಣ ಚೂರ್ಣಮಾಡಿ ಧ್ರುವ ಅಡಕೆಂಬದನುಮಾನಪೂಟ ಒಡೆದ ಹೋಳು ಮಾಡಿ ಚೊಕಷ್ಟ ಮಡಿಚಿಮ್ಮನೆಂಬುದು ವೀಳ್ಯ ನೀಟ ತೊಡೆದು ಅಹಂ ಸುಣ್ಣ ಖಾರಟಾ 1 ಗುರುವರ್ಮ ಕಾಚೆಂಬುದು ಪೂರ್ಣ ಸುರಮುನಿ ಜನರ ನಿಧಾನ ತೋರುತಿಹ್ಯದೊಂದೆ ನಿಜ ಖೂನ ಕರಗಿಹೋಯಿತು ಮೂರೊಂದು ವರ್ಣ 2 ವೀಳ್ಯ ಮಾಡಲು ಮರ್ದನ ಕಳದ್ಹೋಯಿತು ಅದರವಗುಣ ಕಳೆ ಹೆಚ್ಚಿತು ರಂಗ ಸಗುಣ ಥಳಿಥಳಿಸುವ ಜ್ಞಾನ ಸುಬಣ್ಣ 3 ನುಂಗಿ ತಾಂಬೂಲ ರಸ ಹಲವಂಗ ಹಿಂಗಿ ಹೋಯಿತು ಭವಭಯಭಂಗ ಕಂಗಳದ್ಯರಿಯತು ಅಂತರಂಗ ರಂಗದೋರಿತ್ಯನ್ನೊಳು ಸತ್ಸಂಗ 4 ವೀಳ್ಯ ಅಡಕಿ ಮಹಿಪತಿಗೆ ನೋಡಿ ತಿಳದವರಿದೆ ನಿಜಪೂರ್ಣ ಮಾಡಿ ಕಳೆದು ಕಲ್ಪನಿ ಕೊನೆ ಆಗ್ಯೀಡ್ಯಾಡಿ ಇಳಿಯೊಳಗಿದೆ ಸವಿ ಸುಖಗೂಡಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಂಗ ವಿಡಿ ವಿಡಿ ಸಾಧು ಸಂಗ ವಿಡಿ ವಿಡಿ | ಸಂಗ ವಿಡಿಯಂಗದೊಳಗ | ಮಂಗಳುತ್ಸಾಹ ದೋರುವರಾ ಪ ಹರಿಪದ ಪರಾಗ ನುಂಡು | ಹರುಷವೇರಿ ಭವಶರಧಿಗೆ | ಹರಿಯ ಭಕುತಿ ಸೇತುಗಟ್ಟಿ | ತೋರಿಸಿ ಜನರ ತಾರಿಸುವರ 1 ವೇದ ಶಾಸ್ತ್ರಸಾರವಾದ | ಬೋಧ ಸುಧೆಯ ವೆರದು ಮರದು | ಹಾದಿದೋರಿ ಮನಕ ಗತಿಯ | ಸಾಧನವನು ಬೀರುವರ 2 ಹ್ಯಾವ ಹೆಮ್ಮೆ ಬಿಡಿಸಿ ಸಮ್ಮತಿ | ಭಾವದಿಂದ ಮಹಿಪತಿ ಸ್ವಾಮಿಯಾ | ಸಾವಧಾನದಿಂದಲಿ ಜಗತೀ | ವಲಯದೊಳರಹಿಸುವರು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಂಜೀವ ಬಾ ಈಗ ನಿನ್ನ ಲಾಹ ಭಾವವ ತೋರಿ ನೀಡೆನಗೆ ಭೋಗ ಪ. ಜಾನಕಿವರ ರಾಮ ರಾಜೇಂದ್ರನಡಿಯ ಸೇ- ವಾನು ಸಂಧಾನದಿ ಪಯೋನಿಧಿಯ ದಾಟಿ ದು- ರ್ಮಾನಿ ದಶಕಂಧರನ ಧಿಕ್ಕರಿಸಿ ವನಸಹಿತ ದಾನವರನೆಲ್ಲ ನುಗ್ಗಿಸಿ ಮುದ್ರಿಕೆಯ ಮಾನನಿಧಿಗಿತ್ತು ವಂದಿಸಿದೆ ಮಣಿವರವ ಶ್ರೀನಿವಾಸನ ಪಾದಕರ್ಪಿಸುತ ನಲಿದೆ 1 ಕಟ್ಟಾಜ್ಞೆಯಿಂದ ಕಂಗೆಟ್ಟ ನೃಪವರನು ದಯಾ- ದೃಷ್ಟಿಯಿಂದಲಿ ನೋಡಿ ದುಷ್ಟ ಬಾರ್ಹದ್ರಥನ ಮೆಟ್ಟಿ ಕಿಮ್ಮೀರ ಬಕ ಧಾರ್ತರಾಷ್ಟ್ರಾದಿಗಳ ಕುಟ್ಟಿ ಗದೆಯಿಂದ ಪುಡಿಗೈದೆ ಕ್ರೋಧವಶ ರಟ್ಟುಳಿಯ ನಡುಗಿಸುತ ಹ್ಯೊದೆ ವಾ- ಶಿಷ್ಟ ಕೃಷ್ಣಾನಂದನನೆ ತಾತ್ಸರವ್ಯಾಕೆ ಬರಿದೆ2 ಭಾಗೀರಥೀ ಜನಕ ಭಕ್ತಜನ ಭಯಮೋಕ ನಾಗಗಿರಿನಾಥನನು ನೆಲೆದೋರು ಗತಶೋಕ ಶ್ರೀಗುರುವರಾನಂದತೀರ್ಥಾರ್ಯನೀ ಪರಿಯ ನಿಖಿಳ ಪುರುಷಾರ್ಥ ನಿನ್ನಡಿಗೆ ಬಾಗಿ ಬೇಡುವೆನಯ್ಯ ಭಾರತಕೃತಾರ್ಥ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸಂತರ ಸಹವಾಸ ಮಾಡು ಮನುಜ ನೀ | ಭ್ರಾಂತ ಜನರ ಸಂಗ ವೀಡ್ಯಾಡು | ಅಂತರಂಗದಲಿ ಸುಖವ ಸೂರ್ಯಾಡು | ಅ | ನಂತನ ನಾಮವ ಕೊಂಡಾಡು ಪ ದಾವ ಗ್ರಾಮದಲ್ಲಿ ಧನ ಧಾನ್ಯ ಬನವು | ತೀವಿಕೊಂಡಿಹ ಸಂದಣಿ ಜನವು | ಆವೂರೊಳಿಲ್ಲದಿರೆ ಸಂತರನವು | ನೀ ವಾಸ ಮಾಡಬ್ಯಾಡ ಅರಕ್ಷಣವು 1 ಎಲ್ಲಿ ನೋಡಲು ದಿವ್ಯ ಪಟ್ಟಣಲ್ಲಾ | ಚಲ್ಪಗೋಪುರ ಮನುಧೊರೆರಿಲ್ಲಾ | ಅಲ್ಲಿ ಸಾಧುರ ನರಹಳಿದಲ್ಲಾ | ನಿಲ್ಲು ಕಾಲೂರಿ ಸುಖವಿಹುದೆಲ್ಲಾ 2 ಅವರಿದ್ದುದೆ ಸ್ಥಳ ವಾರಣಾಸೀ | ಅಚರ ದರುಶನ ಪುಣ್ಯದ ರಾಶೀ | ಅವರ ನೆರೆಯಲ್ಲಿ ಸ್ವರ್ಗ ಸುಖದಾಶಿ | ಈ ವಾಕ್ಯ ಮಹಿಪತಿ ಜ ನಾಲಿಸಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸತ್ಯಜ್ಞಾನ ಮುನಿರಾಯಾ ತವಸ್ಮರಣೆ ಸತತ ಕೊಡು ಜೀಯಾ ಪಜ್ಞಾನಭಕ್ತಿ ವೈರಾಗ್ಯದ ಕಣಿಯೆ ಧ್ಯಾನ ಮೌನ ಜಪ-ತಪಗಳ ನಿಧಿಯೆ ಅ.ಪಸರ್ವತ್ರದಿ ಶ್ರಿ ಹರಿಯನು ಕಾಣುತಸರ್ವಭೂತ 'ತರತನಾಗಿಸರ್ವೋತ್ತಮನು ಶ್ರೀರಾಮನ ಪೂಜಿಸಿಸರ್ವಜ್ಞಮತ ಸುದಾಂಬುಧಿಗೆ ಚಂದ್ರಮನಾದೆ 1ಭರತಾರುಣ್ಯದಿ ಪರಮಹಂಸನಾಗಿಧರ್ಮ ಸಾಮ್ರಾಜ್ಯದ ಧುರವ'ಸಿಧರ್ಮ ಸಂರಕ್ಷಣೆ ಮಾಡುತ ಧರೆಯೊಳುಪೂರ್ಣಜ್ಞರ ಧ್ವಜ ಮೆರೆಸಿದ ಧೀರಾ 2ಲೌಕಿಕವನು ಸಂಪೂರ್ಣ ತ್ಯಜಿಸಿ ನೀ-ಪರಲೋಕ ಸಾಧನ ಲೋಕಕೆ ತಿಳಿಸಿಟೀಕಾರಾಯರ ಸನ್ನಿಧಾನವ ಹೊಂದಿದಶ್ರೀಕಾಂತ ಭೂಪತಿ'ಠ್ಠಲನ ದೂತಾ 3
--------------
ಭೂಪತಿ ವಿಠಲರು