ಒಟ್ಟು 659 ಕಡೆಗಳಲ್ಲಿ , 88 ದಾಸರು , 594 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೆಂಕಟೇಶ ನೀನೆ ಧೊರೀ ಧೊರೀ ಪ ಸಂಕಟವೆಲ್ಲವ ಪರಿಹರಿಸುವಂಥ ಅ.ಪ. ಎತ್ತಿನ ಪೆಸರುಳ್ಳ ಮತ್ತ ರಕ್ಕಸನ್ನ ಕುತ್ತಿಗೆ ಕೊಡಲುತ್ತಮ ಪದವಿತ್ತೆ 1 ಅಂಜನೆಯೆಂಬೊ ಮಂಜುಕಿಸಾಲಿಯ [?] ಅಂಜದೆ ತಪಿಸಲು ಸಂಜೀವನವಿತ್ತೆ2 ಸಾಸಿರ ಮುಖವುಳ್ಳ ಶೇಷನಹಂಕಾರ ಸ್ವಸನನ ಕೈಯಿಂದ ನಾಶಮಾಡಿಸಿದಂಥ3 ಮಾಧವ ಮಾದಿಗ ಹಾದಿಯ ಮೆಟ್ಟಲು ಮಾಧವ ಅವನನ್ನು 4 ಶ್ರೀದವಿಠಲ ನಿನ್ನ ಪಾದಾಶ್ರಿತರ ಮೋದದಿ ಸಲಹೊ ಆದರಿಸೆನ್ನನು 5
--------------
ಶ್ರೀದವಿಠಲರು
ವೆಂಕಟೇಶನ ನಂಬಿರೊ ನೀವೆಲ್ಲರೂ | ವೆಂಕಟೇಶನ ನಂಬಿರೋ || ವೆಂಕಟೇಶನ ನಂಬಿ | ಮಂಕುಜನರೆ ನಿಮ್ಮ | ಸಂಕಟ ಪರಿಹರಿಸಿ ತ | ನ್ನಂಕಿತವ ನೀವ ಪ ಗುಣ ಒಂದು ನೋಡಿದಿಯಾ ಅಜಮಿಳ | ಗುಣವೇನು ಮಾಡಿದನು | ಗುಣ ಶಿರೋಮಣಿ ಮ | ರಣ ಬಂದಾಗ ಸ್ಮ | ರಣೆ ಇತ್ತು ಅವನ ನಿ | ರ್ವಾಣಕ್ಕೆ ಕರಿಸಿದಾ 1 ಕುಲದಲ್ಯಾತರವನು | ಕುಲಶಿಖಾಮಣಿ | ನಿಳಗೆ ಪೋಗಿ ಕುಡತಿ ಪಾಲಿಗೆ ಅವನಿಗೊಲಿದು ನಿ | ಶ್ಚಲ ಭಾಗ್ಯವನಿತ್ತ 2 ಗುಣ ಒಂದು ನೋಡಿದಿಯಾ | ವಾಲ್ಮೀಕಿ | ಗಣದ ಕೂಟದವನೆ | ಕ | ರುಣ ಮಾಡಿ ಅವಗೆ ಚ | ರಣವನ್ನು ತೋರಿ ಆ | ಕ್ಷಣದಲ್ಲಿ ಸಾಕೀದ 3 ಪತಿವ್ರತರ ನೋಡಿದಿಯಾ | ಗೋಪಿಯರು ಪತಿ ಧರ್ಮದಲ್ಲಿ ಇದ್ದರೇ | ಪತಿತಪಾವನ ಸಂಗತಿಯಲ್ಲಿ ಆ ನಾರಿಯರಿಗೆ | ಅತಿಶಯವಾದ ಸದ್ಗತಿಯ ಕರುಣಿಸಿದ4 ಗುಣಿ ಕುಲ ಗಣ ಮಿಕ್ಕಾದ ವ್ರತಂಗಳು | ದಣಿದು ಮಾಡಲಿಬೇಡಿರೊ | ಬಣಗುದೈವದ ಗಂಡ ವಿಜಯವಿಠ್ಠಲನ್ನ | ಮನದೊಳು ನೆನೆದರೆ ನೆನೆಸಿದ ಫಲನೀವಾ 5
--------------
ವಿಜಯದಾಸ
ವೆಂದೆನುತ ಬಂದೆನು ನಾ ಪ ಬಂದಾ ಬಂದಜನಕಾನಂದ ಕೊಡುತಲಿ ವಂದಿಸಿ ಭಜಿಪರಘಂಗಳ ಕಳೆದು ಸಲಹುವಿಯೋ ಸದ್ಗುರು ರಾಘವೇಂದ್ರಾ 1 ಭೀತರಾಗುತ ನಿನ್ನಡಿಗಳ ಸೇವಿಸಲು ಆದರದಿಂದಲವರ ಭವ-ಭಯವ ಪರಿಹರಿಸಿ ಸಲಹಿ ಉದ್ಧರಿಸುವೆ ಗುರುರಾಘವೇಂದ್ರಾ 2 ದುಷ್ಟ ಜನರು ಕೂಡಿ ಕೆಟ್ಟಯೋಚನೆ ಮಾಡಿ ಗುಟ್ಟಾಗಿ ನಿಮ್ಮ ಪರೀಕ್ಷಿಸ ಬೇಕೆಂಧು ಜೀವ ವಿದ್ದವನ ನಿರ್ಜೀವನೆನುತ ತರಲು ಸತ್ಯದಿ ನಿರ್ಜೀವನನ್ನಾಗಿ ಮಾಡಿದೆ ಪ್ರಭವೆ 3 ಕುಹಕಿ ಜನರು ಎಲ್ಲಿ ವನಕೆತುಂಡನು ತಂದು ಚಿಗುರಿಸ ಬೇಕೆನುತಲಿ ಕೇಳಲು ಕಮುಂಡದೊಳಿದ್ದ ದಿವ್ಯೋದಕ ಪ್ರೋಕ್ಷಿಸಿ ಚಿಗುರಿಸಿ ಫಲ ಮಾಡ್ದೆ ಅದ್ಭುತ ಮಹಿಮಾ 4 ಮಾವಿನರಸದೊಳು ಮುಳುಗಿ ಮೃತನಾದಾ ಬಾಲಕನಿಗೆ ಪ್ರಾಣಗಳನಿತ್ತೆ ದಯದೀ ಭುವಿಯೊಳು ನಿಮ್ಮ ಮಹಿಮೆಗೆಣೆಕಾಣೆ ಮಂತ್ರಾಲಯದೊರೆ ಗುರು ರಾಘವೇಂದ್ರಾ 5 ``ಶ್ರೀರಾಘವೇಂದ್ರಾಯ ನಮಃ'' ಎಂಬ ದಿವ್ಯನಾಮವ ಮನುಜನು ಪ್ರತಿದಿನ ಭಜಿಸುತ್ತಲಿರಲು ಘೋರ ದುರಿತಗಳೆಲ್ಲ ದೂರವ ಮಾಡಿ ನಿನ್ನ ಚರಣಸೇವಕರನ್ನು ಸಲಹುವಿಯೋಗುರುವೇ6 ಶ್ರೀ ರಘುರಾಮನ ಪ್ರಿಯಭಕ್ತನಾದ ಶ್ರೀ ಗುರು ರಾಘವೇಂದ್ರರ ಚರಣ ಭಜಿಸಿರೊ ನಂಬಿದ ಭಕ್ತರ ಬೆಂಬಿಡದೆ ಸಲಹುವ ಘನ್ನಕೃಪಾನಿಧಿ ನಮ್ಮ ಗುರು ರಾಘವೇಂದ್ರಾ 7
--------------
ರಾಧಾಬಾಯಿ
ವೇಣು ವಿನೋದ ವಿಠಲ | ನೀನೆ ಪೊರೆ ಇವನಾ ಪ ದೈನ್ಯದಲಿ ತವ ದಾಸ್ಯ | ಕಾಂಕ್ಷೆಯಲಿ ಹಯಮೊಗನೆಗಾನ ಮಾಡಲು ನಿನ್ನ | ಪಾಸು ಕೂಲಿಸಿದೇ ಅ.ಪ. ಖಂಡೀ ಭವದ್ ಬಹುಲ | ಡಿಂಡೀರ ಜೃಂಬಣಸುಚಂಡೀ ಕೃತೋ ಎಂಬ | ಶೌಂಡಪದಯತಿಯಿಂಗೊಂಡು ಸುಸ್ವಪ್ನದಲಿ | ದಂಡವತ್ತರಗಿ ಮುದ-ಗೊಂಡು ತವ ಪಾಪಗಳ | ಖಂಡಿಸೀದವನಾ 1 ತೀರ್ಥಾಭಿಷೇಕದಿ ಪು | ನೀತನಾದಗೆ ಭಾವಿವಾತಾತ್ಮ ಮಹಿಮೆಗಳ | ದ್ಯೋತಕ ಸುಗ್ರಂಥಾಪ್ರೀತಿಯಿಂ ಪಡೆದಿಹನೊ | ಮಾತುಳಾಂತಕ ಹರಿಯೆಆತು ಕೈಪಿಡಿ ಇವನ | ಧಾತಾಂಡದೊಡೆಯಾ 2 ಲೌಕೀಕವನ್ನೆಲ್ಲ ವೈಧೀಕವೆಂದೆನಿಸಿ ಈತೋಕನಿಗೆ ಸುಜ್ಞಾನ | ಭಕುತಿ ಸಂಪದನಾನೀ ಕರುಣದಿಂ ಕೊಟ್ಟು | ಪ್ರಾಕ್ಕುಕರ್ಮಾವಳಿಯನೀ ಕಳೆಯೊ ಕರುಣಾಳು | ನಾಕನದಿ ಪಿತನೆ 3 ಬೋಧ ಬೋಧ ಮೂರುತಿಯೇ 4 ಅದ್ವೈತ ಭವ | ನೋವ ಪರಿಹರಿಸಯ್ಯಗೋವಳ ಪ್ರೀಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವೇಳೆಗೊದಗಯ್ಯ | ವೇಳೆ ಬಂದು ಒದಗಿದೆ | ಪರಿಹರಿಸೊ ನೀ ಪ ಬಳಗುಳ್ಳಿಭಕುತರು ಬಳಲು ತಿರುವದ ಕಂಡು |ಕಳವಳಿಕೆಯಿಲ್ಲದೆ ಕಳೆವರೆ ಕಾಲವ 1 ಮಳಲು ಹಸಿಯನಗಲಿದಂತೆ ದಾಸರಿಗತಿಶಯವ |ದಣಿಸಿದರೆ ಬಳಿಕಾರುಳಿಸುವರೊ ? 2 ಹಲವ ಹೆತ್ತ ತಾಯಿ ಮೊಲೆ ಹಾಲನುಣಿಸದೆ |ನೆಲೆಯ ದೋರಿ ನಿನ್ನಲಿ ನಿಲಿಸಯ್ಯ ರುಕ್ಮನ 3
--------------
ರುಕ್ಮಾಂಗದರು
ವ್ಯಾಸಾರ್ಯಾ - ವ್ಯಾಸಾರ್ಯ ಪ ದೈಶಿಕಾರ್ಯ ಬ್ರಹ್ಮಣ್ಯರ ಕರಜನೆ ಅ.ಪ. ಭವ ಪರಿಹರಿಸುವೆ 1 ಭೀಕರವೆನೆ ನೃಪ | ಗಾಕುಹುಯೋಗವತಾಕುವ ಮುನ್ನವೆ | ನೀ ಕಳೆದೆಯೊ ಗುರು 2 ಪನ್ನಗ ನಗಪ ಪ್ರಪನ್ನ ಭಜಕ ನಿನ | ಗಿನ್ನುಂಟೇ ಸಮ 3 ಮಂದ ಜನರೋದ್ಧರ | ವೆಂದು ರಚಿಸಿದೇಚಂದ್ರಿಕಾದಿ ತ್ರಯ | ಸುಂದರ ಗ್ರಂಥ 4 ವ್ಯಾಸ ತ್ರಯಾಭಿಧ | ಲೇಸು ಗ್ರಂಥ ಸಂಕಾಶಿಸೆ ಬಹು ವಿಧ | ಆಸುರಿ ಮತ ಹನ5 ದಾಸ ಪಂಥ ಉಪ | ದೇಶಿಸೆ ಶ್ರೀನಿವಾಸ ನಾಯಕರ | ದಾಸರೆಂದೆನಿಸಿದೆ 6 ವಾಸವ ನಾಮಕ | ದಾಸರಿಂದ ದಿಗ್ದೇಶ ಪ್ರಸರ ಮಹಿ | ದಾಸನ ನಾಮವು 7 ಶ್ವಸನನ ಮತ ವಿ | ದ್ವೇಷಿವಾದ ಹರದೇಶ ದೇಶ ಹನು | ಮೇಶ ಪ್ರತಿಷ್ಠಿತ 8 ಸಾರ್ವ ಭೌಮ ಗುರು | ಗೋವಿಂದ ವಿಠಲನತೋರ್ವುದೆನ್ನ ಹೃದ | ಯಾ ಕಾಶದಲಿ 9
--------------
ಗುರುಗೋವಿಂದವಿಠಲರು
ಶಂಕರ ಗುರುವರ ಮಹದೇವ ಭವ- ಸಂಕಟ ಪರಿಹರಿಸಯ್ಯ ಶಿವ ಪ. ಸಂಕಲ್ಪ ವಿಕಲ್ಪಮನೋನಿಯಾಮಕ ಕಿಂಕರಜನಸಂಜೀವ ಅ.ಪ. ಭಾಗವತರರಸ ಭಾಗೀರಥೀಧರ ಬಾಗುವೆ ಶಿರ ಶರಣಾಗುವೆ ಹರ ಶ್ರೀ ಗೌರೀವರ ಯೋಗಿಜನೋದ್ಧರ ಸಾಗರಗುಣಗಂಭೀರ 1 ರಾಯ ಲಕ್ಷ್ಮೀನಾರಾಯಣ ಭಕ್ತಿಪ- ರಾಯಣ ತ್ರಿನಯನ ಪುರಹನ ಕಾಯಜಮಥನ ಮುನೀಂದ್ರ ಸಿದ್ಧಜನ- ಗೇಯಸ್ವರೂಪೇಶಾನ 2
--------------
ತುಪಾಕಿ ವೆಂಕಟರಮಣಾಚಾರ್ಯ
ಶತ್ರುಭಯ ಪರಿಹರಿಸೊ ಭೂತರಾಜ ಪ ಭವಕೆ ಭೀಕರ ಭಾವಿ ಭೀಮನ ಭಜಿಪ ಭೋಜಾ ಸುತೇಜಾ ಅ.ಪ. ಇಂದು ನೀನೆ ನಾನೆಂದು ಕಮರಿ ಕೂಪದಿ ನೊಂದೆನೊ ಭಾವಿ ನಂದಿವಾಹನ ಮಂಗಳ ಪ್ರದ ನೀಲಕಂಠಾ 1 ಇಲ್ಲೆಲ್ಲಿ ಸರ್ವಸ್ಥಳದಲ್ಲಿ ವ್ಯಾಪ್ತವಾಗಿಹ ನಿನ್ನ ಲೋಲ ಮೂರುತಿಯ ನೆನೆವೆ ಫಾಲನಯನಾ ಪಾಲಿಗೇ ಪಾಲನೆಂತೆಂದು ಕಾಲಮೀರದೆ ಚಲಿಸದೆಲೆ ಬಾರೊ ಗರಳಧಾರಿ 2 ಶ್ರೀಕೃಷ್ಣದಾಸನೆ ನಿನ್ನ ಇಷ್ಟನೆಂತೆಂದು ಮನಮುಟ್ಟಿ ಭಜಿಸುವೆನೊ ಚಾರುದೇಷ್ಣೆಪಾಲಾ ದಿಟ್ಟ ಗುರು ಕೃಷ್ಣವಂದಿತ ತಂದೆ-ವರದಗೋಪಾಲವಿಠ್ಠಲನ ಸಹಜ ಬಂದು 3
--------------
ತಂದೆವರದಗೋಪಾಲವಿಠಲರು
ಶರಣರೆಳಕಂದಿ ನೀನ್ಯಾಕೆ ಕರುಣಿಸಲೊಲ್ಲಿ | ದುರಿತ ಭಯ ಪರಿಹರಿಸಿ ಸಲಹೆನ್ನ ತಂದೆ ಪ ಬಂದರ ವಿಭೀಷಣಗ ಅಭಯಕರವಿತ್ತೇ | ಬಂಧನಕ್ಕೋಳಗಾದ ಗಜರಾಜನನು ನೆಗಹಿ | ಛಂದದಭಿಮಾನುಳಿಹಿ ದ್ರೌಪದಿಯ ಕಾಯ್ದೆ 1 ಕಲುಷವಾರಿಸಿ ಮುನಿ ಸತಿಯ ನೀನುದ್ದರಿಸಿ | ಒಲಿದು ಧ್ರುವಗಾನಂದ ಪದವಿತ್ತೆ ಧರಿಲಿ | ಸಿಲುಕಿರಲು ಲಾಕ್ಷಗೃಹದಿ ಪಾಂಡವರನುಳುಹಿ | ಲಲನೆ ಗರ್ಭದಿ ಪರೀಕ್ಷಿತನ ಕಾಯ್ದೆ ಸ್ವಾಮಿ 2 ಅವರ ದಾಸಾನುದಾಸರ ಭಾಗ್ಯವೆಮಗಿಲ್ಲಾ | ತವನಾಮಧಾರಕೆನಿಸಿದ ಬಿರುದಿಗಿಂದು | ಕುವಲಯ ಶ್ಯಾಮ ಗುರು ಮಹಿಪತಿ ಸುತ ಪ್ರಭುವೆ | ಯಮನ ಬಾಧೆಯ ಬಿಡಸೋ ಬ್ಯಾಗೊದಿಗಿ ಬಂದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಗಿರಿಯ ತಿಮ್ಮಾ | ಶರಣು ಪುರುಷೋತ್ತಮಾ | ಶರಣು ಮಹಾ ಮಹಿಮ | ಶರಣು ಪರಬೊಮ್ಮಾ | ಪರಿಹರಿಸುವದು ಹಮ್ಮಾ ಪ ವರೇಣ್ಯ | ಭಂಗ | ಹರಿಸಿದ ಶಿರಿ ರಂಗ | ವಿಹಂಗ | ತುರಗ ತುರಗ ವದನ | ಸದನ ಕರ ಮುಗಿವೆನೈಯಾ | ಕರದ ಮಾತಿಗೆ ಜೀಯಾ | ಭರದಿಂದ ಕೊಡು ಮತಿಯಾ 1 ಪಾದದಲಿ ಪೆಣ್ಣಾ | ಮೋದದಲಿ ಪೆತ್ತ ಚಿಣ್ಣಾ | ನಾದ ಬಲು ಪಾವನ್ನಾ | ಭೇದಾರ್ಥ ಜ್ಞಾನ | ಆದರಿಸೆ ಅನುದಿನಾ | ನೀ ದಯದಲಿ ಕೊಡು | ಈ ದೇಹ ನಿನ್ನ ಬೀಡು | ಯಾದುದೆ ಇತ್ತ ನೋಡು 2 ಜಲದೊಳಗಾಡಿದೆ | ಚಲಕೆ ಬೆನ್ನ ನೀಡಿದೆ | ನೆಲ ಬಂದು ನೆಗಹಿದೆ | ಖಳನನ್ನ ಕೆಡಹಿದೆ | ಇಳಿಯ ಮೂರಡಿ ಮಾಡಿದೆ | ಕುಲವ ಕೂಡಲಲಿ ಹಾರ | ಜಾರ ಚೋರ | ಅಳಿದೆ ಮುಪ್ಪುರು ಶೂರಾ | ವಿಜಯವಿಠ್ಠಲ ಪಾರಾ | ಫಲವೀವೆ ಧರಣೀಧರಾ 3
--------------
ವಿಜಯದಾಸ
ಶರಣು ಗುರು ಬ್ರಹ್ಮಣ್ಯ | ಶರಣು ಶಿರಿ ಸುರಮಾನ್ಯಪರಿಹರಿಸು ಭವತಾಪ | ಬಿನ್ನವಿಪೆ ಮುನಿಪ ಪ ಪುರುಷೋತ್ಮ ಕರಜಾತ | ಕಣ್ವತಟದಲಿ ಖ್ಯಾತನರಹರಿಯ ಪದಕಮಲ | ಭಜಕಶೀಲಶರಣ ಜನ ಸುರಕಲ್ಪ | ತರುವೆ ಎನ್ನಯ ಪಾಪಪರಿಹರಿಸೊ ಮುನಿಮೌಳಿ | ನಾನು ಪದಧೂಳಿ 1 ಯೋನಿ ಅನೇಕದಲಿ | ಬಂದಿರುವೆ ನಾಬಳಲಿಮಾನ ನಿಧಿ ನೀಯನ್ನ | ಕಾಯೊ ದಯ ಪೂರ್ಣ |ಜ್ಞಾನಾರ್ಕನೆನಿಸಿರುವ | ಮೌನಿ ತವ ಸದ್ಭಾವಪೂರ್ಣ ಹರಿ ಸುಜ್ಞಾನ | ಪಾಲಿಸೈ ನಿಪುಣ 2 ವಿಕಳ ಮತಿಯನು ಹರಿಸು | ಅಕಳಂಕನೆಂದೆನಿಸುಸುಖತೀರ್ಥ ಮತ ಸುಧೆಯ | ಉಣುವ ಪರಿಯ |ಸುಖದಿಂದ ಕರುಣಿಸುತ | ಸುಖ ಹರಿಯ ನೋಳ್ಪಂಥಪ್ರಕರಣದಲಿರಿಸೆನ್ನ | ಮೌನಿ ಕುಲರನ್ನ 3 ಸುಕೃತ ಒಂದಿರಲಿ | ನಿನ್ನ ದಯವಿರಲಿ 4 ವಿಠ್ಠಲ ಸುಪೂಜಕನೆ | ಕಷ್ಟಗಳ ಕಳೆಯುವನೆಶಿಷ್ಟ ಸಜ್ಜನ ಪಾಲ | ಹರಿಪದ ವಿಲೋಲ ಕೃಷ್ಣ ಗುರು ಗೋವಿಂದ | ವಿಠ್ಠಲನ ಪದದ್ವಂದ್ವಸುಷ್ಠು ಹೃದ್ಗುಹದಲ್ಲಿ | ಕಾಣಿಪುದು ಅಲ್ಲಿ 5
--------------
ಗುರುಗೋವಿಂದವಿಠಲರು
ಶರಣು ನಿನಗೆ ಶರಣೆಂದೆನೊ ಹರಿಯೇ ಕರುಣಿಸಿ ಕಾಯೋ ಎನ್ನಧೊರಿಯೆ ಪ ಪರಮಕೃಪಾಕರ ಪಾವನ ನರಹರಿ ಪಾಲಿಸೊ ಎನ್ನನಿ--- ಶರಣೆಂದ ವಿಭೀಷಣನ ಆದಿಭಕ್ತರ ಶ್ರಮ ಪರಿಹರಿಸಿದಂಥ ಶ್ರೀಧರಾ 1 ಭಕ್ತಾ ಪಾಂಡವ ಪಕ್ಷಾ ಬಲಿಯ ಭೂಮಿಯ ಭಿಕ್ಷಾ ಯುಕ್ತಿಲಿ ನೀ ಸಾಧಿಸಿದ ಯೋಧನೆ ಮುಕ್ತಿದಾಯಕ ದೇವ ಮುರಹರ ಮಾಧವನೆ ಮೌಕ್ತಿಕ ಮುಕುಟ ಧರಿಸಿದನೆ 2 ಸುಂದರ ಮೂರುತಿ-----ಜಗತ್ಪತಿ ಇಂದಿರಾ ಹೃದಯಾನಂದನೆ ಬಂದ ಭಕ್ತರ ಬಿಡದೆ ಅಂದಿಗೆ ನೀನೆ ಪೊರೆದೆ----ಹೆನ್ನ ವಿಠ್ಠಲಾ ಸಲಹೋ ಎನ್ನ 3
--------------
ಹೆನ್ನೆರಂಗದಾಸರು
ಶರಣು ಭಾರತಿರಮಣ ಶಮಲವರ್ಜೀತ ಚರಣ ಕೆರಗಿ ಬೇಡುವೆ ವರವ ಪಿಡಿಯೆನ್ನ ಕರವಾ ಪ ಇಪ್ಪತ್ತೊಂದು ಸಾವಿರದಾರುನೂರು ಜಪ ತಪ್ಪದೆಲೆ ಸಕಲ ಜೀವರೊಳು ಜಪಿಸಿ ಮುಪ್ಪಿಲ್ಲದ ಜನ ಪದವಿಯನೈದಿ ಭಜಕರಿಗೆ ಸುಪ್ತಿ ಸ್ವಪ್ನವ ಬಿಡಿಸಿ ಮುಕ್ತರನು ಮಾಳ್ಪೆ 1 ಪವಮಾನರಾಯಾ ನೀ ಸಲಹದಿರೆ ಪಾಲಿಸುವ ದಿವಿಜರಿನ್ನುಂಟೇನೋ ಲೋಕದೊಳಗೆ ಯವನರಿಂದಲಿ ಬಂದ ಭಯವ ಪರಿಹರಿಸಿ ನಿ ನ್ನವರ ಸಂತೈಸು ಸರ್ವಕಾಲದಲೀ 2 ಲೋಗರಿಗೆ ಬೇಡಿದಿಷ್ಟಾರ್ಥಗಳ ಕೊಟ್ಟು ಚ ನ್ನಾಗಿ ಸಂತೈಪೆನೆಂದನು ದಿನದಲೀ ಭೋಗಪುರದಲಿ ಬಂದು ನೆಲೆಸಿದೆಯ ನೀ ಪರಮ ಭಾಗವತ ತಿಲಕ ಪಾಲಕ ವೀತಶೋಕ 3 ಭಾನುನಂದನಗೆ ನೀ ಒಲಿದ ಮಾತ್ರದಲಿ ರಘು ಸೂನು ಸಂರಕ್ಷಿಸಿದ ಸುರಪತನಯಾ ವಾನÀರೋತ್ತಮ ವಾಲಿಯನು ಸದೆದ ನಿನ್ನ ದಯ ಕಮಲ ಸಂಭವನ ಪದಕೆ ಯೋಗ್ಯ 4 ಶುಚಿನಾಮಕನೆ ಎನಗೆ ಹರಿಕಥಾ ಶ್ರವಣದಲಿ ರುಚಿಪುಟ್ಟುವಂತೆ ಮಾಡುನುಗಾಲದೀ ಮುಚುಕುಂದ ವರದ ಜಗನ್ನಾಥವಿಠಲನ ಗುಣ ರಚನೆಗೈವ ಸಮರ್ಥ ನೀನೇ ಸುಕೃತಾರ್ಥ 5
--------------
ಜಗನ್ನಾಥದಾಸರು
ಶರಣು ಶರಣು ಪ ಪರಿಹರಿಸು ಕರುಣಾಳು ಬಿನ್ನಪವ ಕೇಳು ಅ.ಪ. ವಾಸವಾದ್ಯಮರನುತ ವನಜಸಂಭವನ ಸುತ ನೀ ಸಲಹೊ ಕೈಲಾಸವಾಸ ಈಶ ಕ್ಲೇಶ ಮೋದಾದಿ ಸಮ ತಿಳಿದು ಅಶ್ವತ್ಥಾಮ ಶ್ರೀಶುಕ ದುರ್ವಾಸ ಸ್ಫಟಿಕ ಸಮಭಾಸ 1 ವೈಕಾರಿಕಾದಿ ತ್ರೈರೂಪ ನಿನ್ನಯ ಕೋಪ ಶೋಕಕೊಡುವುದು ದೈತ್ಯಜನಕೆ ನಿತ್ಯ ಲೌಕಿಕಗಳೆಲ್ಲ ವೈದಿಕವಾಗಲೆನಗೆ ಮೈ ನಾಕಿ ಹೃತ್ಕುಮುದೇಂದು ಭಕ್ತಜನ ಬಂಧು 2 ಪವಮಾನತನಯ ನಿನ್ನವರಲ್ಲಿ ಕೊಡು ವಿನಯ ದಿವಸ ಸವನಗಳಲ್ಲಿ ಎನ್ನಿರುವ ನೀ ಬಲ್ಲಿ ಪವನ ದ್ವಿತಿಯರೂಪ ಸತತ ಎನ್ನಯಪಾಪ ಅವಲೋಕಿಸದಲೆನ್ನ ಸಲಹೊ ಸುರಮಾನ್ಯ 3 ಶೇಷನಂದನ ಶೇಷಭೂಷಣನೆ ನಿಶೇಷ ದೋಷರಹಿತನ ತೋರು ಕರುಣವನು ಬೀರು ಶ್ರೀ ಷಣ್ಮುಖನ ತಂದೆ ಸತತ ನೀ ಗತಿಯೆಂದೆ ಶೋಷಿಸು ಭವಾಮಯವ ಬೇಡುವೆನು ದಯವ4 ಗರ್ಗ ಮುನಿಕರಪದುಮ ಪೂಜ್ಯ ಚರಣಾಬ್ಜ ಮಮ ದುರ್ಗುಣಗಳೆಣಿಸದಲೆ ಜಗದೆ ಮೇಲೆ ನಿರ್ಗತಾಶನ ಜಗನ್ನಾಥ ವಿಠಲನ ಸ ನ್ಮಾರ್ಗವನೆ ತೋರು ಈ ದೇಹ ನಿನ ತೇರು 5
--------------
ಜಗನ್ನಾಥದಾಸರು
ಶಾಂತಿನಿಲಯ ಸುಖದ ಪ ಭ್ರಾಂತನಾದೆ ಪರಿಭವದ ತಂತು ತಿಳಿಯದಕಟ ಶ್ರೀ ಕಾಂತ ಕಾಯೊ ಪಿಡಿದು ಕರು ಣಾಂತರಂಗ ಕುಸುಮನಾಭ 1 ಉದಧಿಯಂದದುಕ್ಕಿಬರುವ ಅಧಮನಕೆ ಕಲ್ಪನೆಗಳು ಒದಗಿ ವಿಧ ವಿಧ ನೋಯಿಪು ದಿದನು ಬೇಗ ಪರಿಹರಿಸು 2 ನಂಬಿಭಜಿಪ ಭಕುತಜನರಿ ಗಿಂಬು ನೀನೆ ಅಂಬುಜಾಕ್ಷ ಇಂಬುಗೊಟ್ಟು ಸಲಹು ಸದಾ 3
--------------
ರಾಮದಾಸರು