ಒಟ್ಟು 532 ಕಡೆಗಳಲ್ಲಿ , 74 ದಾಸರು , 470 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜೋ ಜೋ ಶ್ರೀ ಕೃಷ್ಣ ಪರಮಾನಂದಜೋ ಜೋ ಗೋಪಿಯ ಕಂದ ಮುಕುಂದ ಪ.ಪಾಲುಗಡಲೊಳು ಪವಡಿಸಿದವನೆ ಒಂದಾಲದೆಲೆಯ ಮೇಲೆ ಮಲಗಿದ ಶಿಶುವೇ ||ಶ್ರೀ ಲತಾಂಗಿಯರ ಚಿತ್ತವಲ್ಲಭನೇಬಾಲ ನಿನ್ನನು ಪಾಡಿ ತೂಗುವೆನಯ್ಯ ಜೋ ಜೋ 1ಹೊಳೆಯುವ ರನ್ನದ ತೊಟ್ಟಿಲ ಮೇಲೆಢಳಿ ಢಳಿಸುವ ಗುಲಗುಂಜಿಯ ಮಾಲೆ ||ಅಳದೆ ನೀ ಪಿಡಿದಾಡೆನ್ನಯ ಮುದ್ದು ಬಾಲನಳಿನನಾಭನೆ ನಿನ್ನ ಪಾಡಿ ತೂಗುವೆನು ಜೋ ಜೋ 2ಆರ ಕಂದ ನೀನಾರ ನಿಧಾನಿಆರ ರತ್ನವೊ ನೀನಾರ ಮಾಣಿಕವೋ ||ಸೇರಿತು ಎನಗೊಂದು ಚಿಂತಾಮಣಿಯು - ಎಂದುಪೋರನಿನ್ನನು ಪಾಡಿ ತೂಗುವೆನಯ್ಯ - ಜೋ ಜೋ3ಗುಣನಿಧಿಯೇ ನಿನ್ನ ಎತ್ತಿಕೊಂಡಿದ್ದರೆಮನೆಯ ಕೆಲಸವಾರು ಮಾಡುವರಯ್ಯ ||ಮನಸಿಗೆ ಸುಖನಿದ್ರೆ ತಂದುಕೊ ಬೇಗಫಣಿಶಯನನೆ ನಿನ್ನ ಪಾಡಿ ತೂಗುವೆನು - ಜೋ ಜೋ 4ಅಂಡಜವಾಹನ ಅನಂತ ಮಹಿಮಪುಂಡರೀಕಾಕ್ಷ -ಪರಮ ಪಾವನ ||ಹಿಂಡು ದೈವದಗಂಡ ಉದ್ಧಂಢ ದೇವನಪಾಂಡುರಂಗ ಶ್ರೀ ಪುರಂದರವಿಠಲ - ಜೋ ಜೋ 5
--------------
ಪುರಂದರದಾಸರು
ತದಿಗೆಯ ದಿವಸ(ಶೇಷ ದೇವರನ್ನು ಕುರಿತು)ರಂಭೆ :ನ್ಯಾರೆಂಬುದನೆನಗೆ ಪೇಳೆಕ್ರೂರತನದಿ ತಾ ತೋರುವನೀಗ ಮ-ಹೋರಗನೆನ್ನುತ ಕೋರಿಕೆ ಬರುವದು 1ಒಂದೆರಡು ಶಿರವಲ್ಲ ಬಹುಹೊಂದಿಹವು ಸಟೆಯಲ್ಲಕಂಧರದಲಿ ಕಪ್ಪಂದದಿ ತೋರ್ಪವುಚಂದಿರಮುಖಿ ಯಾರೆಂದೆನಗರುಹೆಲೆ 2ಊರ್ವಶಿ : ಕೋಮಲಗಾತ್ರೆ ಮಹಾಮಹಿಮನು ಇವನ-ಸಾಮಾನ್ಯನೆ ಕಾಣೆಭೂಮಿಯ ಪೊತ್ತ ನಿರಾಮಯನಾದಸುಧೀಮನಿವನು ಜಾಣೆ 1ವಾಸುದೇವಗೆ ಈತ ಹಾಸಿಗೆಯವ ನಿ-ರ್ದೋಷನಿವನು ಜಾಣೆಸಾಸಿರಮುಖದ ವಿಲಾಸನಾಗಿಹ ಮಹಾ-ಶೇಷನಿವನು ಕಾಣೆ 2ಅದರಿಂದಲಿ ಕೇಳ್ ತದಿಗೆಯ ದಿವಸದಿಮಧುಸೂದನನಿವನಅಧಿಕಾನಂದದಿ ಒದಗಿಸಿ ಬರುವನುಇದೆಯಿಂದಿನಹದನ3ಎಂದಿನಂತೆ ಪುರಂದರವಂದ್ಯ ಮುಕುಂದಸಾನಂದದಲಿಅಂದಣವೇರಿ ಗೋವಿಂದ ಬರುವನೊಲ-ವಿಂದತಿ ಚಂದದಲಿ 4ಕಂಟಕಗಳು ಎಲ್ಲುಂಟೆಂಬಂತೆ ನೃಪ-ಕಂಠೀರವಗೈದಘಂಟಾನಾದದಿ ಮಂಟಪದೊಳು ವೈ-ಕುಂಠನು ಮಂಡಿಸಿದಾ 5ಕಾಂತಾಮಣಿ ಕೇಳಿಂತೀಪರಿ ಶ್ರೀ-ಕಾಂತ ನತತಂಡಸಂತವಿಸುತ ಮಹಾಂತಮಹಿಮನೇ-ಕಾಂತಸೇವೆಯಗೊಂಡ 6* * *ಪರಶಿವನನ್ನು ಕುರಿತುರಂಭೆ : ಯಾರಮ್ಮಾ ಮಹಾವೀರನಂತಿರುವನುಯಾರಮ್ಮಾ ಇವನ್ಯಾವ ಶೂರ ಯಾವಊರಿಂದ ಬಂದ ಪ್ರವೀರ ಆಹಾಮಾರಜನಕನ ವಿಸ್ತಾರಪೂಜೆಯ ವೇಳ್ಯಧೀರನಂದದಿ ತಾ ವಿಚಾರ ಮಾಡುವನೀತ 1ಕರದಿ ತ್ರಿಶೂಲವ ಧರಿಸಿ ಮತ್ತೆವರಕೃಷ್ಣಾಜಿನವನುಕರಿಸಿಹರಿಚರಣಸನ್ನಿಧಿಗೆ ಸತ್ಕರಿಸಿ ಆಹಾಜರಿಯ ದುಕೂಲವ ನಿರಿದುಟ್ಟುಕೊಂಡು ವಿ-ಸ್ತರವಾದ ತೋಷದಿ ಮೆರದು ನಲಿವ ಕಾಣೆ 2ಊರ್ವಶಿ : ಈತನೀಗ ಕಾಲಭೈರವ ಕೇಳೆಲೆಗೆ ನೀರ ಪ.ಈತನೀಗ ಪೂರ್ವದೊಳಗೆಭೂತನಾಥ ಸೇವೆಯೊಲಿದಓತು ವಿಷ್ಣುಭಕ್ತಿಯಿಂದಪೂತನಾದ ಪುಣ್ಯಪುರುಷ ಅ.ಪ.ಊರು ಇವಗೆ ಮೊದಲು ಗಂಗಾತೀರವಾಯ್ತುವೇಣುತಾ ವಿ-ಚಾರದಿಂದ ಪೊದನೈಉದಾರತನದಿ ರಾಮೇಶ್ವರಕೆಸಾರಗ್ರಹಿತ ಮುಕ್ತಿ ಪಥವನು ಕರುಣದಿಂದತೋರಿಸುವನು ವಿಷ್ಣುವೆಂದೆನುತ ಗಿರಿಯನೇರಿ ಕರುಣ ವಾರಿಧಿಯಪದಾರವಿಂದಸೇವೆಗೈದುಮಾರಪಿತನ ಭಕ್ತಿಯೊಳು ತಾ ಹೇರಿನಲಿವ ಚಾರುಚರಿತ 1ಪರಮಪುರುಷ ಹರುಷದಿಂದೀಪುರಕೆಬರುವಕಾಲದಲ್ಲಿಚರಣವನ್ನು ಬಿಡದೆ ಯಿಲ್ಲಿರುವನೈ ಮಹಾತ್ಮನೀತಸ್ಫುರಿತತೇಜೋಮೂರ್ತಿ ಈತನು ಲೋಕದೊಳಗೆಚರಿಸುವ ತ್ರಿಕಾಲಪ್ರಜÕನು ಇವನ ಗುಣವ-ನರಿವರ್ಯಾರು ಮನುಜಭುಜಂಗರಲಿಮಹತ್‍ಕಾರಣೀಕಪುರುಷನಿವ ಮಹಾ ಬಲಾಢ್ಯಕರುಣವುಳ್ಳ ವಿಷ್ಣುಭಕ್ತ 2ಶ್ರೀನಿವಾಸ ಕರುಣದಿಂಪ್ರಧಾನಿಯೆಂದು ನಡೆಸಿಕೊಡುವಏನಗೈದರೀತ ಮನದಿ ತಾನುತೋಷಪಟ್ಟು ಇರುವಕಾಣಿಕೆಗಳ ತರಿಸಿ ಇರಿಸುವ ಬೇತಾಳಪ್ರೇತನಾನಾ ಉಪದ್ರವಗಳ ಬಿಡಿಸುವ ಧನಿಯ ಆಜೆÕಏನ ದೊರಕಿತದನು ಬೇಗ ತಾನೆಬಂದು ಪೇಳಿ ಜನರಮಾನಿಸುತ ನಿಧಾನಗೊಳಿಸಿಕ್ಷೋಣಿಯೊಳಗೆ ಕೀರ್ತಿಪಟ್ಟ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ತಪ್ಪುಗಳನೆಲ್ಲ ನೀನೊಪ್ಪಿಕೊಳ್ಳೊ - ನ-|ಮ್ಮಪ್ಪ ಕಾಯಬೇಕುತಿಮ್ಮಪ್ಪನೀನೆಪಸತಿ-ಸುತ ಸಂಸಾರಗಳಿಗೆ |ಮತಿ ಹೀನನಾದೆನು ವ್ಯರ್ಥ ||ಮಿತಿಗಾಣೆನಯ್ಯ ಎನ್ನ ಪಾಪಗಳಿಗೆ |ಗತಿಯದಾವುದು ಪೇಳೊ ಮುಂದೆನಗೆ 1ಬಿಸಿಲು ಬಿರುಮಳೆ ಗಾಳಿಯೊಳಗೆ-ಬಲು-|ದೆಸೆಗೆಟ್ಟು ದೇವ ತಿರುಗಿದೆ ||ಹಸಿವು-ತೃಷೆಗಳು ಬಹು ಬಾಧಿಸಲು |ಹುಸಿಯಾಡಿದೆನಯ್ಯ ಹುಟ್ಟು ಮೊದಲು 2ಸ್ನಾನ-ಸಂಧ್ಯಾವಂದನವರಿಯೆ-ನಾನಾ-|ದಾನ-ಧರ್ಮದ ಗುರುತುಗಳಿಯೆ ||ಹೀನಜನರ ಸಂಗವ ಮರೆಯೆ-ಸು-|ಙ್ಞÕನಿಗಳನು ಬಾಯೆಂದು ಕರೆಯೆ 3ಗಂಗೆ ಅಗ್ರೋದಕಗಳ ತಂದು - ನಾ-|ಮಂಗಳಮಜ್ಜನಮಾಡಲಿಲ್ಲವೆಂದೂ ||ಹೊಂಗೇದಗೆ ಪುಷ್ಪವನೊಂದು ಶ್ರೀ-|ರಂಗಗರ್ಪಿಸಲಿಲ್ಲ ಕಾಯೊ ಬಂದು 4ಪೀತಾಂಬರದಿ ವಸ್ತ್ರಗಳಿಂದ -ದಿವ್ಯ-|ನೂತನವಾದ ಆಭರಣದಿಂದ ||ಪ್ರೀತಿಪಡಿಸಲಿಲ್ಲಾದರದಿಂದ-ಹೇ-|ಸೀತಾಪತೆ ಕೃಷ್ಣ ಹರಿಮುಕುಂದ 5ಗಂಧಾಕ್ಷತೆ ಪುಷ್ಪಗಳಿಂದ -ಬರಿ-|ಒಂದುದಳಶ್ರೀ ತುಳಸಿಯಿಂದ ||ಇಂದಿರೇಶನ ಅರ್ಚಿಸದರಿಂದ -ಬಹು-|ನೊಂದು ದೂರಾದೆ ಸದ್ಗತಿಯಿಂದ 6ಏಕಾರತಿ ದೂಪಾರತಿಯ -ಎಂದು-|ಶ್ರೀಕಾಂತ ನಿನಗೆ ನಾ ಮಾಡಲಿಲ್ಲ ||ವ್ಯಾಕುಲದಲಿ ಹೋಯಿತು ಹೊತ್ತು -ಬಂದು-|ನೀ ಕರುಣಿಸು ಲಕ್ಷ್ಮೀರಮಣ 7ಪಾಯಸ ಪಂಚಭಕ್ಷ್ಯಗಳಿಂದ -ಬಲು-|ಆಯತವಾದ ಶಾಕಗಳಿಂದ ||ತೋಯೆ ಶಾಲ್ಯನ್ನ ಸದ್ಘøತದಿಂದ -ಶ್ರೀ-|ಮಾಯಾಪತಿಗೆ ಅರ್ಪಿಸಲಿಲ್ಲ 8ಮಂಗಳಾರತಿಯ ನಾ ಮಾಡಲಿಲ್ಲ-ಜಯ-|ಮಂಗಳವೆನ್ನುತ ಪಾಡಲಿಲ್ಲ ||ಕಂಗಳ ನೋಟದಿ ನೋಡಲಿಲ್ಲ -ನರ-|ಸಿಂಗನೀ ಬಾಯೆಂದು ಕರೆಯಲಿಲ್ಲ9ಹರಿಯ ಪಾದಕೆ ಬಿದ್ದವನಲ್ಲ -ನರ-|ಹರಿಗೆ ಪ್ರದಕ್ಷಿಣೆ ಮಾಡಲಿಲ್ಲ ||ಹರಿದಿನದುಪವಾಸ ವ್ರತವು ಇಲ್ಲ -ಬಲು-|ಹರಿಯ ದಾಸರ ಸಂಗ ಎನಗಿಲ್ಲ 10ಹೋಮಾರ್ಚನೆ ಔಪಾಸನವೆಲ್ಲ |ನೇಮದಿಂದಲಿ ನಾ ಮಾಡಲಿಲ್ಲ ||ಕಾಮಾತುರನಾಗಿ ಕಂಡಕಂಡ ಕಡೆ |ಸ್ವಾಮಿಯ ಕಾಣದೆ ತಿರುಗಿದೆನೊ 11ಅತಿಥಿಗಳ್ ಬಂದರೆ ಮನೆಗೆ -ಅಂದೆ-|ಗತಿಯಿಲ್ಲವಯ್ಯ ಕೊಡುವುದಕೆ ||ಯತಿಯ ಕಂಡರೆ ನಿಂದಿಸಿದೆ-ಶ್ರೀ-|ರತಿಪತಿ ಪಿತ ನೀ ದಯ ಮಾಡೊ 12ಎಷ್ಟು ಹೇಳಲಿ ಎನ್ನವಗುಣವ -ಅವು-|ಅಷ್ಟು ಇಷ್ಟೆಂದು ಎಣಿಕೆಯಿಲ್ಲ ||ದೃಷ್ಟಿಯಿಂದ ನೋಡಿ ದಯ ಮಾಡೊ -ಶ್ರೀ-|ಬೆಟ್ಟದ ವೆಂಕಟ ಪುರಂದರವಿಠಲ 13
--------------
ಪುರಂದರದಾಸರು
ತಾರಿಸೊ ಶ್ರೀಹರಿ ತಾರಿಸೊ ಪತಾರಿಸೊ ಭವವ ನಿವಾರಿಸೊ ನಿನ್ನಡಿಯತೋರಿಸೊ ವೈಕುಂಠ ಸೇರಿಸೋ ರಂಗಯ್ಯ ಅ.ಪಪಾಪವಿನಾಶನ ಮಾಡುವಿ ನೀತಾಪಸರನುನಿತ್ಯಸಲಹುವಿ ||ವ್ಯಾಪಿಸಿ ಸರ್ವತ್ರ ನಿನ್ನವರನು ಕಾಯ್ವಶ್ರೀ ಪಾಂಡುರಂಗ ಪರಮಾತ್ಮ ಮುಕುಂದ 1ಹಿರಣ್ಯಕಶಿಪುವನು ಸೀಳಿದೆ ಅವನಕರುಳನು ಕೊರಳೊಳು ಹಾಕಿದೆ ||ದುರಳ ಬುದ್ಧಿಯ ತಳೆದ ದೈತ್ಯಾಧಮನ ಕೊಂದಕರುಣ ದಿಂದಲಿ ಕಂದಗೊಲಿದೆ ಗೋವಿಂದ 2ಅಸುರೆ ಪೂತನಿಯ ಸಂಹರಿಸಿದೆ ನೀಶಶಿಮುಖಿಯಭಿಮಾನ ಕಾಯ್ದೆ ||ಶಿಶುವಾಗಿ ಬಾಲಲೀಲೆಗಳನು ತೋರಿದೆಕುಸುಮನಾಭ ಶ್ರೀಪುರಂದರವಿಠಲ3
--------------
ಪುರಂದರದಾಸರು
ದಾರಿಯ ತೋರೊ ಮುಕುಂದ - ಹರಿ-|ನಾರಾಯಣ ಗೋವಿಂದ ಪಬಂದೆನು ಬಹುಜ್ಮನದಲಿ -ನಾ-|ಬಂಧನದೊಳು ಸಿಲುಕುತಲಿ ||ಮುಂದಿನದಾವುದು ಪಯಣ -ತೋರೊ-|ಇಂದುನೀ ಇಂದಿರೆರಮಣ1ಗತಿಯಿಲ್ಲದವರಿಗೆ ನೀನೆ -ಸದ್-|ಗತಿಯೆಂದು ಸ್ತುತಿಮಾಡಿದೆನೊ ||ಗತಿಯೆಂದು ನಂಬಿದೆ ನಿನ್ನ |ಸತುವ ತೋರು ನರಹರಿಯೆ ಗೋವಿಂದ 2ಮಡವಿನೊಳಗೆ ಧಮುಕಿದೆನೆ -ಇನ್ನು-ಕಡಹಾಯಿಸುವರ ನಾ ಕಾಣೆ ||ಹಡೆದ ತಾಯಿ - ತಂದೆ ನೀನೆ -ಕೈ-|ಹಿಡಿದು ಸಲಹೊ ಎನ್ನೊಡೆಯ ಮುರಾರಿ 3ಮಿಕ್ಕಿ ಬರುವ ಹೊಳೆಯೊಳಗೆ -ನಾನು-|ಸಿಕ್ಕಿದೆ ನಡುನೀರೊಳಗೆ ||ಕಕ್ಕುಲಾತಿನಿನಗಿರದೆ |ಭಕ್ತವತ್ಸಲ ನೀ ದಯಮಾಡೋ 4ಕುಕ್ಷಿಯೊಳಗೆ ಇಂಬಿಟ್ಟು -ಎನ್ನ-|ರಕ್ಷಿಸಿ ಸಲಹಬೇಕು ||ಅಕ್ಷಯಅನಂತ ಮಹಿಮನೆ - ನೀನು |ಪಕ್ಷಿವಾಹನನೆಪುರಂದರವಿಠಲ5
--------------
ಪುರಂದರದಾಸರು
ದೇವಕಿನಂದ ಮುಕುಂದ ಪನಿಗಮೋದ್ಧಾರ -ನವನೀತ ಚೋರ |ಖಗಪತಿವಾಹನ ಜಗದೋದ್ಧಾರ1ಶಂಖ -ಚಕ್ರಧರ - ಶ್ರೀ ಗೋವಿಂದ |ಪಂಕಜಲೋಚನ ಪರಮಾನಂದ 2ಮಕರಕುಂಡಲಧರ - ಮೋಹನವೇಷ |ರುಕುಮಿಣಿವಲ್ಲಭ ಪಾಂಡುವಪೋಷ 3ಕಂಸಮರ್ದನ - ಕೌಸ್ತುಭಾಭರಣ |ಹಂಸ -ವಾಹನ ಪೂಜಿತಚರಣ 4ವರವೇಲಾಪುರ ಚೆನ್ನಪ್ರಸನ್ನ |ಪುರಂದರವಿಠಲ ಸಕಲಗುಣ ಪೂರ್ಣ 5
--------------
ಪುರಂದರದಾಸರು
ದೇವಕಿಯುದರ ಸಂಜಾತನೆ ತ್ರುವಿಕಾವನ ಪಿತ ಕಮಲಾಕ್ಷನೆ ತ್ರುವಿಶ್ರೀ ವೈಭವಸಚ್ಚಿದಾನಂದ ತ್ರುವಿಭಾವಕಿಗೋಪಿಯ ಕಂದನೆ ತ್ರುವಿ......... ತ್ರುವಿ1ಮಧುರೆಯೊಳುದಿಸಿದ ಮಹಿಮನೆ ಜೋ ಜೋಯದುಕುಲ ತಿಲಕ ಯಾದವರಾಯ ಜೋ ಜೋ ||ಮಧುಕೈಟಭ ಮುರಮರ್ದನ ಜೋ ಜೋಚದುರನಾಗಿ ತುರುಗಳ ಕಾಯ್ದೆ ಜೋ ಜೋ 2ಗೋಕುಲಪಾಲಕ ಗೋವಿಂದ ತ್ರುವಿಶ್ರೀ ಕುಚಕುಂಕುಮಾಂಕಿತ ಕೃಷ್ಣ ತ್ರುವಿ ||ಪಾಕ ಶಾಸನ ಮುಖ್ಯ ಸುರವಂದ್ಯ ತ್ರುವಿಲೋಕವೀರೇಳ ಪೆತ್ತಾತನೆ ತ್ರುವಿ ........... ತ್ರುವಿ 3ಶ್ರುತಿಚೋರ ಸಂಹಾರಕ ದೇವ ಜೋ ಜೋಜತನದಿ ಸುರರಿಗಮೃತವಿತ್ತೆ ಜೋ ಜೋ ||ಕ್ಷಿತಿಯ ಕದ್ದೊಯ್ದನ ಸೀಳ್ದೆ ನೀ ಜೋ ಜೋಮತಿಯುತ ಬಾಲಕನತಿ ರಕ್ಷ ಜೋ ಜೋ 4ಕ್ಷಿತಿಯ ಈರಡಿಗೆಯ್ದ ವಾಮನ ತ್ರುವಿಯತಿವಂಶ ಜನನಭಾರ್ಗವರೂಪ ತ್ರುವಿ ||ಕ್ರತುವ ರಕ್ಷಕ ಕಾಕುತ್ಸ್ಥನೆ ತ್ರುವಿರತಿಪತಿಪಿತಸುರನುತ ಕೃಷ್ಣ ತ್ರುವಿ ......... ತ್ರುವಿ5ಗೋಪಿಕಾನಂದ ಮುಕುಂದನೆ ಜೋ ಜೋಭೂಪರೊಳ್ಕಾದಿ ಬಳಲಿದನೆ ಜೋ ಜೋಶ್ರೀ ಪುರುಷೋತ್ತಮ ನರಸಿಂಹ ಜೋ ಜೋಅಪಾರ ಮಹಿಮಾರ್ಣವ ದೇವ ಜೋ ಜೋ........ಜೋ ಜೋ 6ಮಣ್ಣೊಳಗಾಡಿ ನೀ ಬಂದೆಯ ತ್ರುವಿಬೆಣ್ಣೆಯ ಬೇಡೆ ಬಯ್ದೆನೆ ಕಂದ ತ್ರುವಿಕಣ್ಣ ದೃಷ್ಟಿಗೆ ಕರಗದ ಕಂದ ತ್ರುವಿಚಿಣ್ಣಸುಮ್ಮನೆ ಇರು ಶ್ರೀ ಕೃಷ್ಣ ತ್ರುವಿ ............ ತ್ರುವಿ7ತಾರಕ ಸತಿವ್ರತಹಾರಕ ಜೋ ಜೋವಾರಣ ಹಯವೇರಿ ಮೆರೆದನೆ ಜೋ ಜೋ ||ಸಾರಿದವರ ಸಂತೈಸುವ ಜೋ ಜೋಶ್ರೀ ರಮಾಕಾಂತ ಶ್ರೀ ಕೃಷ್ಣನೆ ಜೋ ಜೋ.......ಜೋ ಜೋ 8ಶರಣಾಗತ ವಜ್ರಪಂಜರ ತ್ರುವಿಕರುಣಾಕರ ಕಮಲಾಕ್ಷನೆ ತ್ರುವಿ ||ಧರಣಿಧರಶಾಯಿ ಶ್ರೀವರ ತ್ರುವಿ ||ವರದ ಶ್ರೀ ಪುರಂದರವಿಠಲನೆ ತ್ರುವಿ ........... ತ್ರುವಿ 9
--------------
ಪುರಂದರದಾಸರು
ದ್ವಂದ್ವವೆ ವಸಂತದ ಹಬ್ಬದ್ವಂದ್ವವೆ ಇಹಪರದಲ್ಲಿ ಹಬ್ಬ ಪ.ದ್ವಂದ್ವಾಮೃತ ಕ್ಷೇಮಅಭಯವಸಂತದ್ವಂದ್ವ ಜೀವೇಶರ ತಿಳಿದವ ಶಾಂತದ್ವಂದ್ವದ ನಡೆನುಡಿ ಬಲ್ಲವ ಸಂತದ್ವಂದ್ವವರಿಯದನ ಗತಿಯೆ ವಸಂತ 1ದ್ವಂದ್ವ ಶೀತೋಷ್ಣ ಸಮಾನವ ಕಂಡುದ್ವಂದ್ವ ನಿಂದಾಸ್ತುತಿ ಸರಿಯಿಟ್ಟುಕೊಂಡುದ್ವಂದ್ವವಮಾನವಹಿಡಿದರೆ ಭಂಡುದ್ವಂದ್ವ ಪಕ್ಷಿಗಳ ಬಗೆಯ ಕೇಳಿಕೊಂಡು 2ಫಾಲ್ಗುಣ ಪೌರ್ಣಿಮೆ ಬಂದಿತಿಳೆಗೆಬಾಲಕರೆಲ್ಲ ನೆರೆವುದೊಂದು ‌ಘಳಿಗೆಹೋಳಿಯನಾಡುವ ಸಂಭ್ರಮದೊಳಗೆಕಾಳಗಬೇಡಿರೊ ನಿಮ್ಮ ನಿಮ್ಮೊಳಗೆ3ಅಜೆÕೈಕ್ಯ ಪ್ರತಿಪದ ಹಿಂದಾದರಿಂದಸುಜ್ಞಾನ ದ್ವಿತಿಯಕ್ಕೆ ತೋರುವ ಚಂದ್ರಒಗ್ಗೂಡಿ ಗೆಳೆಯರೊಮ್ಮತದಿಂದಲಗ್ಗೆಕಾರರು ಮುಂದೆ ನಡೆವುದೆ ಚಂದ 4ಭಕ್ತೆಂಬೊ ಪುರದಲ್ಲಿ ಒಂಬತ್ತು ಬೀದಿ ವಿರಕ್ತಿರಂಹಸ ಬ್ರಹ್ಮದ್ಹಾದಿಯ ಐದಿವ್ಯಕ್ತವಾಗುವ ವಸ್ತು ಓದಿಕೆ ಓದಿರಿಕ್ತದ ನುಡಿಗಳು ತಮಸಿನ ಹಾದಿ 5ದಿನಪತಿ ಅಡಗಿರೆ ಮಲಗದೆ ಎದ್ದುಮನೆಯವರನು ಎಚ್ಚರಿಸಬ್ಯಾಡಿ ಸದ್ದುನೆನೆವ ವಿಷಯಗೋಡೆ ಏರುತ್ತ ಬಿದ್ದುಮನೆ ಮನೋವಾರ್ತೆಯ ಕುರುಳನೆ ಕದ್ದು 6ಹಾರುವರ ಕೇರಿಯ ಹೊಗಬ್ಯಾಡಿಕೇಳಿಬೇರೂರವರ ಬಿಟ್ಟು ಬಿಡಿ ದೂರದಲ್ಲಿದೂರುವರೊಡನಾಟ ದುರ್ದೆಶೆಫಲವು ವಸ್ತುದೋರುವ ಮನೆಯೇವೆ ಸರಸ ವೆಗ್ಗಳವು 7ಧೂಳಿ ನೀರುರಿಗಾಳಿ ಬಯಲೊಳಗಾಡಿಮ್ಯಾಲೆ ಮೂರುರಿಯೊಳು ಮತಿಗುಂದಬ್ಯಾಡಿಹಾಳು ತುರುಕರ ಕೇರಿಯೊಳು ನಿಷ್ಫಲವುಜಾಲಗಾರರ ಕೇರಿ ಹೊಕ್ಕರೆ ಫಲವು 8ಹಿಂಚಾದ ಹಿರಿಯರ ಮಾತಲೆ ನಡೆದುವಂಚಕ ಮೂವರ ಸಂಗವ ಕಡಿದುಮಿಂಚುವ ಮಾನ್ಯರ ಪ್ರೀತಿಯ ಪಡೆದುಸಂಚಿತಪ್ರಾರಬ್ಧಾಗಾಮಿಯ ಒಡೆದು9ಮುಚ್ಚಿದ ಕದವೆರಡನು ಮುರಿಹೊಯ್ದುಇಚ್ಛೆ ಮೂರೆಂಬ ನಾಯಿಗಳಜಿಹ್ವೆಕೊಯ್ದುಬೆಚ್ಚದೆ ಮನೆ ಮೆಲ್ಲನೆ ಹೊಗಿರಣ್ಣಸಚ್ಚಿದ ಗೋರಸ ಸೂರ್ಯಾಡಿರಣ್ಣ 10ಏಕಾಧಿಪತಿಯಾಜÕ ಅಭಯವು ಬೇಕುನಾಕು ಝಾವಿನ ರಾತ್ರಿ ನಲವಿರಬೇಕುಪೋಕಕಳ್ಳಾರ್ವರ ಮೆಟ್ಟ್ಯಾಳಬೇಕುಭೂಕಾಂತಗೆ ಸೇವೆಯೊಪ್ಪಿಸಬೇಕು 11ರಮಣನೊಲ್ಲದ ಆರ್ವರ ಸಂಗವಿಡಿದುರಮಿಸುವ ಬುದ್ಧಿಜಾರಿಯ ಗಟ್ಟಿವಿಡಿದುಅಮಿತ ವೈರಾಗ್ಯಹಗ್ಗದಿ ಕೈಯಕಟ್ಟಿಶ್ರೀರಮಣನಂಘ್ರಿಗೆ ಒಪ್ಪಿಸಲು ಕಾರ್ಯ ಗಟ್ಟಿ 12ಎಲ್ಲೆಲ್ಲ್ಯಜ್ಞಾನಾಹಿ ವಿಷಯ ತೇಳುಗಳುಎಲ್ಲೆಲ್ಲಿ ನಿರ್ಜಲಸೃತಿಯ ಬಾವಿಗಳುಎಲ್ಲೆಲ್ಲಿನಿರಯಕಮ್ಮರಿ ಮಿಟ್ಟೆಗಳುಎಲ್ಲ ತಪ್ಪಿಸಿ ಜ್ಞಾನ ಬೆಳದಿಂಗಳೊಳು 13ವ್ಯಾಳ್ಯವರಿತು ತತ್ವಸಂಧಿಯ ಒಲಿದುಸೂಳಿ ಮದೆಂಟರ ಕೈಸೆರೆವಿಡಿದುಕಾಲಾಖ್ಯ ತಳವಾರನಾಳಿಗೆ ಕೊಟ್ಟುಮ್ಯಾಳದ ಗೆಳೆಯರು ಸಂತೋಷಪಟ್ಟು 14ಎಂಬತ್ತು ನಾಲ್ಕು ಲಕ್ಷಾಗಾರ ಹೊಗುತಡೊಂಬಿಯಿಲ್ಲದೆ ಬಂದ ಬನ್ನವಬಡುತಕುಂಭಿಣಿಸುರ ಕುಲ ಭೂಮಿಗೆ ಬಂದುದಂಭ ಮಾಡದಲೆ ಕುರುಳ ಒಯ್ಯಿರೆಂದು 15ರಾಗ ಮತ್ಸರಗೂಡಿದರ ಕುರುಳನೊಟ್ಟಿಭೂಗಗನ ಹೊಗುವ ಕಾಮವಕಟ್ಟಿಯೋಗವಾಗಿರುವ ಹುಬ್ಬಿನ ಕ್ಷೇತ್ರದಲಿಮ್ಯಾಗ ವಿಜ್ಞಾನಗ್ನಿ ಹಾಕಬೇಕಲ್ಲಿ 16ಲೋಭ ಹೋಳಿಕೆಯ ಹೋಳಿಗೆ ತುಪ್ಪ ಸವಿದುಲಾಭಕ್ಕೆ ಕುಣಿಯಲು ವೇತ್ರರು ಹೊಯ್ದುಶೋಭನ ರಸ ಬೊಬ್ಬೆಯ ಸಾಧುಹಿಂಡುತ್ರಿಭುವನಪತಿಕಾಮನಯ್ಯನ ದಂಡು17ಸ್ವರ್ಧುನಿಜನಕನ ಗುಣಗಣಕೀರ್ತಿಊಧ್ರ್ವಸ್ವರದಿ ಹಾಡಿ ಹೊಗಳುವಅರ್ಥಿನಿರ್ಧೂಮಜ್ವಾಲೆಯ ಬೆಳಗಲಿ ಸುತ್ತಿದುರ್ದೇಹಿಗಳ ಕಿವಿಧಾರೆಯ ಕಿತ್ತಿ 18ಅವಿದ್ಯ ಕಾಮ್ಯಕರ್ಮದ ಹೋಳಿ ಸುಟ್ಟುಹ್ಯಾವಿನ ಮೈಯ ಬೂದಿಯ ಮಾಡಿಬಿಟ್ಟುಕೋವಿದರ ಚಾತುರ್ಯಕೆ ಒಡಂಬಟ್ಟು ಚಿದ್ಭಾವ ಮಂದಿರದ ಬ್ರಹ್ಮಕೆ ಲಕ್ಷ್ಯವಿಟ್ಟು 19ಹಂಗಿಲೆ ಬೆಳೆದ ವೃಕ್ಷದ ಮೂಲ ಮುರಿದೂಧ್ರ್ವಾಂಗಕ್ಕೆ ಸುತ್ತುವ ಜಾಣರ ಬಿರಿದುರಂಗು ಮುತ್ತಿನ ಮೂಗುತಿ ಹೆಣ್ಣವಿಡಿದುಶೃಂಗಾರ ಚೇಷ್ಟೆಯ ಮಾಡಿರೊಜಡಿದು20ಬೆಳಗಿನ ಝಾವದಿ ಬೂದಿ ಚಲ್ಲ್ಯಾಡಿಗೆಳೆಯರು ನೆರೆವುದೊಂದೆ ತಾಣ ನೋಡಿಜಲಜಾಕ್ಷನುದ್ಯಮದಂಗಡಿಯಲ್ಲಿನಲಿವ ಸ್ವಾನಂದದೂಟವ ಬೇಡಿಕೊಳ್ಳಿ 21ತಿರುತಿರುಗಿ ಬಂದು ದಣಿದು ನೀವಿಂದುಹರಿಯ ಮೈ ಬೆವರಿನ ಹೊಳೆಯಲ್ಲಿ ಮಿಂದುಥರ ಥರದ್ಹದಿನಾರು ವರ್ಣಗಳಿಂದತರುಣ ತರಣಿಯಂತೆ ಹೊಳೆವುದು ಚಂದ 22ಆನಂದಮಯವಾಸುದೇವನ ಕಂಡುಆನಂದಪುರದಿ ಭಕ್ತಿಯ ನೆರೆಗೊಂಡುಆನಂದ ತೀರ್ಥಗುರು ಕೃಪೆಯಿಂದಸ್ವಾನಂದದೋಕುಳಿಯಾಡುವ ಚಂದ 23ಈ ವಿಧ ಅಧ್ಯಾತ್ಮ ಹೋಳಿಯ ಭೇದಭಾವುಕ ಜನರಿಗೆ ಪರಮಾಹ್ಲಾದದೇವ ಋಷಿಕುಲದೈವ ಮುಕುಂದಕಾವನು ಕರುಣಾಬ್ಧಿಕೇಳಿಗೋವಿಂದ24ವೇದನ ತಂದ ಹಯಾಸ್ಯನ ಹೋಳಿಭೂಧರಧರಿಸಿದಮರ ಕಾರ್ಯಕೇಳಿಮೇದಿನ ತರಲಡ್ಡಾದವನೊಮ್ಮೆ ಹೋಳಿ ಪ್ರಹ್ಲಾದನಿಷ್ಠೆಗೆಹರಿಉದಿಸಿದಕೇಳಿ25ನಾನೆಂಬೊ ದಾನವೇಂದ್ರನ ಮದ ಹೋಳಿಹೀನರಿಗಾಗಿ ಕೊಡಲಿ ಹೊತ್ತಕೇಳಿಜಾನಕಿ ತಂದ ದಶಾಸ್ಯನ ಹೋಳಿಮಾನಿನಿಯರಾಳ್ದ ವಿಡಂಬನಕೇಳಿ26ಸನ್ಮಾರ್ಗ ಬಿಟ್ಟ ಖಳರ ಮತಿ ಹೋಳಿಉನ್ಮತ್ತಕಲಿಯನರಸಿ ಕೊಂದಕೇಳಿಚಿನ್ಮಯಮೂರ್ತಿ ಭೂಭಾರವ ಹೋಳಿಜನ್ಮಿಸಿಬಹುದೆಲ್ಲ ಮೋಹನಕೇಳಿ27ಅನಂತದುರಿತರಾಶಿಗಳನ್ನು ಹೋಳಿಆನಂದ ಸುಖವೀವ ನೆನೆದರೆಕೇಳಿಅನಂತ ಅನವದ್ಯಗುಣ ಪರಿಪೂರ್ಣಅನಂತಾದ್ಭುತಕರ್ಮದೀನ ದಯಾರ್ಣ28ಈಪರಿವಿಜ್ಞಾನವಸಂತದಾಟಚೌಪದಿ ರತ್ನಮಾಲಿಕೆ ಮಾಡಿ ಪಾಠಶ್ರೀಪ್ರಸನ್ವೆಂಕಟ ಕಿಟಿರೂಪಿ ಕೃಷ್ಣತಾ ಪರಿಪಾಲಿಪ ಪುರುಷವರಿಷ್ಠ 29
--------------
ಪ್ರಸನ್ನವೆಂಕಟದಾಸರು
ಧನ್ಯನಾದೆನೀದಿನ ನಿನ್ನ ಕಂಡ ಕಾರಣ ಪ.ಪನ್ನಗಾದ್ರಿವಾಸ ಸುಪ್ರಸನ್ನನಾದ್ದರಿಂದ ನಾ ಅ.ಪ.ವ್ರತನೇಮ ಜಪ ತಪ ಹಿತಮಾದುದೈ ಸುತಪಕೃತಿಪತಿ ತವ ಕೃಪಾಶತಧೃತಿಲೋಲುಪಾ 1ವಿದಿಭವಾದಿಗಳಿಂದ ವಿನಮಿತ ವಿಶ್ವಾನಂದಪದುಮನಾಭ ಗೋವಿಂದ ಪವನನಯ್ಯ ಮುಕುಂದ2ಪ್ರೀಯ ತಪೋವಾಸನನೀಯುವ ದೇವರ ದಾನತೋಯಜಾಕ್ಷಲಕ್ಷ್ಮೀನಾರಾಯಣ ಪರಾಯಣ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಂದನ ಕಂದ ಗೋವಿಂದ ಮುಕುಂದಇಂದಿರಜವಂದಿತ ಇಂದುಕುಲೇಂದ್ರ ಪ.ಗೋರಸಚೋರ ಗೋಪೀರಮಣ ಧೀರಗೋರಜಪೂರಿತಚಾರುಅಲಂಕಾರಗೋರಕ್ಷ ಕ್ರೂರಸಂಹಾರ ಉದಾರವೀರ ಸುಯಮುನಾತೀರ ವಿಹಾರ 1ಶೇಷಶೀರ್ಷನೃತ್ಯ ಹಾಸ ವಿಲಾಸವಾಸವಮದನಾಶ ವ್ರಜಪೋಷ ನಿರಾಶರಾಸಕ್ರೀಡಾಸುಖಾಧೀಶ ರಮೇಶದಾಸಾಕ್ರೂರಾಶ್ರಯ ಕಂಸವಿನಾಶ 2ಪುಣ್ಯಗುಣಾನ್ವಿತ ಸುವರ್ಣವೇಣುಗಾಯನ್ನಚಿನ್ಮಯಪನ್ನಗನಾಗನಿಲಯ ಪೂರ್ಣಮನ್ನಿಸು ನಿನ್ನ ಭೃತ್ಯನ್ನ ಪ್ರಸನ್ವೆಂಕಟ ಧನ್ಯ ಇವ ನನ್ನವನೆನ್ನೆ 3
--------------
ಪ್ರಸನ್ನವೆಂಕಟದಾಸರು
ನಂಬಿದೆ ನಿನ್ನ ಪಾದವ - ವೆಂಕಟರಮಣನಂಬಿದೆ ನಿನ್ನ ಪಾದವ || ಪನಂಬಿದೆ ನಿನ್ನ ಪದಾಂಬುಜಯುಗಳವಇಂಬಿತ್ತು ಸಲಹಯ್ಯ ಶಂಖ-ಚಕ್ರಧರನೆ . ಪತಂದೆಯು ನೀನೆ ತಾಯಿಯು ನೀನೆಬಂಧು ಬಳಗವು ನೀನೆ ||ಬಂದ ದುರಿತವೆನ್ನ ಹೊಂದಿಕೊಳ್ಳದಂತೆತಂದೆ ಸಲಹೊ ಮುಕುಂದ ಮುರಾರಿ 1ಚಿಕ್ಕಂದು ಮೊದಲು ನಾನು ನಿನ್ನಯಪಾದಹೊಕ್ಕು ಜೀವಿಸುತಿಹೆನು ||ಗಕ್ಕನೆ ಜ್ಞಾನವನಕ್ಕರೆಯಲಿ ಕೊಡುಮಕ್ಕಳ ಮಾಣಿಕ್ಯ ರುಕ್ಮಿಣಿಯರಸಾ 2ಮರೆತು ನಾ ಮಾಯೆಯೊಳು ಮುಳುಗಿದೆ ಅದನರಿತು ಅರಿಯದಾದೆ ||ಮರೆಯದೆ ಎನ್ನನು ಪೊರೆಯೆ ಕೃಪಾನಿಧಿವರದ ಶ್ರೀವೆಂಕಟಪುರಂದರವಿಠಲ3
--------------
ಪುರಂದರದಾಸರು
ನಾರದ ಕೊರವಂಜಿ1ಜಯ ಜಯ ಜಯ ಜಯ ಜಯ ಜಯ ಪ.ಶ್ರೀ ರಮಾರಮಣ ಜಯ ಶ್ರೀಕರ ಗುಣಾಬ್ಧಿ ಜಯಶ್ರೀ ರುಕ್ಮಿಣೀಶ ಜಯ ಶ್ರೀ ಶ್ರೀನಿವಾಸ ಜಯನೀರಚರಕಮಠಕಿಟಿನೃಹರಿವಟುಭೃಗುಜ ರಘುವೀರ ಯದುಪತೆಬುದ್ಧಕಲ್ಕಿ ಸ್ವರೂಪಾ ಜಯ ಜಯ1ಶ್ರೀ ಮತ್ಕಪಿಲ ಋಷಭ ಯಜÕದತ್ತ ಕಂಸ್ತುಘ್ನ ?ಕೌಮಾರ ವ್ಯಾಸ ಹಯಗ್ರೀವ ಶ್ರೀಮದ್ದಜಿತ ಜಯಸ್ವಾಮಿ ಮಹಿದಾಸ ತಾಪಸ ಉರುಕ್ರಮಶೂಲಿವ್ಯಾಮೋಹ ಧನ್ವಂತರೆ ಹಂಸ ಶುಕ್ಲಾ ಜಯ ಜಯ 2ಆನಂದ ಜ್ಞಾನ ಬಲಮಯ ಚಿತ್‍ಸ್ವರೂಪ ಜಯಅನಂತ ಮಹಿಮ ವೈರಾಜ ಪುರುಷೋತ್ತಮ ಜಯಅನಂತ ಬ್ರಹ್ಮ ರುದ್ರೇಂದ್ರಾದಿಸೇವ್ಯಜಯಅನಂತ ಜೀವಗ ಪ್ರಸನ್ವೆಂಕಟ ಕೃಷ್ಣಾ ಜಯ ಜಯ 32ಶರಣು ಮಂಗಳ ದೇವತೇವರಶರಣುಚಿತ್ಸುಖಸಾಗರಶರಣುಅಗಣಿತಗುಣಶುಭಾಕರಶÀರಣು ವೆಂಕಟ ಮಂದಿರ 4ದುರುಳದೈತ್ಯರು ಸೊಕ್ಕಿ ವರದಲಿಧರೆಗೆ ಕಂಬನಿ ತರಿಸಲುತ್ವರದಿ ಸುರರಿಗೆ ಮೊರೆಯನಿಟ್ಟಳುಧರಿಸಲಾರೆನು ಎನುತಲಿ 5ಸರಸಿಜೋದ್ಭವಭವಪುರುಹೂತರರಿದು ಚಿಂತಿಸಿ ಮನದಲಿವರಪಯೋನಿಧಿಗೈದಿ ಸ್ತುತಿಸಲುಕರುಣದಲಿ ಅವತರಿಸಿದೆ 6ಬಂದು ಧರ್ಮದ ವೃಂದ ರಕ್ಷಿಪೆನೆಂದು ದೀಕ್ಷೆಯವಿಡಿದು ನೀಅಂದಗೆಡಿಸುತ ದನುಜನಿಕರವಹೊಂದಿ ದ್ವಾರಕ ನಗರವ 7ಇಂದಿರೆಯು ನಿನ್ನಿಚ್ಛೆಯನುಸರದಿಂದ ಕ್ರೀಡಿಪಳನುದಿನÀಮಂದಜನರಿಗೆ ಮೋಹಿಸುತನರರಂದದಲಿ ತೋರಿದೆ ಹರೆ 8ದೇವಋಷಿ ನಾರದನು ಶ್ರೀಪದಸೇವೆಗÉೂೀಸುಗ ಕೊರವಿಯಭಾವದಲಿ ಜಗದಂಬೆ ರುಕ್ಮಿಣಿದೇವಿಯಳ ಬಳಿಗೈದು ತಾ 9ದೇವ ನಿನ್ನಯ ಬರವ ಬೆಸಸಿದಕೋವಿದತೆಯನು ಪೇಳುವೆಶ್ರೀವರ ಪ್ರಸನ್ವೆಂಕಟ ಕೃಷ್ಣಪಾವನ ಮತಿಯ ಕರುಣಿಸೊ 103ಶ್ರೀ ರಂಭೆ ಭೀಷ್ಮಕನಭೂರಿಪುಣ್ಯದ ಗರ್ಭವಾರಿಧಿಯಲ್ಲಿ ಜನಿಸಿನಾರಿ ರುಕ್ಮಿಣಿಯೆಂಬ ಚಾರುನಾಮದಿಕಳೆಯೇರಿ ಬೆಳೆದಳಂದವ್ವೆ 11ಜನನಿಜನಕರೆಲ್ಲ ತನುಜೆಯ ಹರಿಯಂಘ್ರಿವನಜಕೆ ಕೊಡಬೇಕೆನ್ನೆನೆನೆದು ತಾನೊಂದು ರುಕ್ಮನು ದಮಘೋಷನತನುಜಗೆ ತಂಗಿಯನು 12ಕೈಗೂಡಿಸುವೆನೆಂಬ ವೈಭವದಲ್ಲಿರೆವೈಮನಸದೊಳು ಕನ್ಯೆಯುಸುಯ್ಗರಿಯುತ ಮುರವೈರಿ ಪ್ರಸನ್ವೆಂಕಟಕೃಷ್ಣಯ್ಯನೊಳ್ ಮನವಿಟ್ಟಿರೆ 134ದನುಜಮಥನÀ ಹರಿಸೇವೆ ಇದೆಂದುಅನಿಮಿಷಮುನಿ ಧರೆಗಿಳಿದು ತಾ ಬಂದುವನಿತೆ ಕೊರವಂಜಿಯ ವೇಷವÀ ಧರಿಸಿಜನಪ ಭೀಷ್ಮಕನೋಪವನದಲ್ಲಿ ನೆಲಸಿ 14ಹಲವು ಕೊರವಿಯರ ಕೂಡಿ ಸಿಂಗರದಿಬೆಲೆ ಇಲ್ಲದುಡಿಗೆ ತೊಡಿಗೆ ಇಟ್ಟು ಮುದದಿಇಳೆಯ ಜನರು ಮೋಹಿಸುವಪರಿಇಹಳುಕೆಳದೇರ ಗಡಣದಲಿ ಚೆಲುವೆ ಒಪ್ಪಿದಳು 15ಮಂಜುಗಾವಿಯ ಸೀರೆ ನಿರಿತೆಗೆದುಟ್ಟುಕೆಂಜೆಡೆ ಬಿಟ್ಟೋರೆದುರುಬಿನ ಕಟ್ಟುಪಂಜಿನೋಲೆಯ ಮೂಗುತಿಯ ಬಲಿದಿಟ್ಟು ಗುಲಗಂಜಿ ಹೊಂದಾಳೆ ಸರಗಳಳವಟ್ಟು 16ಕಂಚುಕಪುಟ ಬಿಗುಪೇರಿದ ಕಟ್ಟುಚಂಚಲನೇತ್ರಕಂಜನ ಕಾವಲಿಟ್ಟುಮಿಂಚುವಾಭರಣಿಟ್ಟು ಪ್ರಸನ್ವೆಂಕಟ ಕೃಷ್ಣನಂ ಚಿಂತಿಸಿ ಜಯ ಜಯಯೆಂದಳುಕೊರವಿ175ಅಡಿಗಡಿಗೆ ಝಣ ಝಣರೆಂದು ನಡೆತಂದು ನಡೆತಂದುಮಡದಿ ರಾಜಬೀದಿಯಲಿನಿಂದು18ಮೃಡಗಹಿತನ ಪಟ್ಟದಾನೆ ಮಂದಗಮನೆ ಮಂದಗಮನೆಕಡುಮೌನಿ ಜನರ ಮೋಹಿನೆ 19ಚಪಲ ನೋಟಕೆ ನಾಗರಿಕರು ನೋಟಕರು ನೋಟಕರುಲಿಪಿಯ ಚಿತ್ರದೊಲು ನಿಂತಿಹರು 20ನಿಪುಣೆಕೊರವಿಶ್ರೀಪ್ರಸನ್ವೆಂಕಟ ಕೃಷ್ಣನ್ನ ಕೃಷ್ಣನ್ನಶ್ರೀಪ್ರÀ್ರಸಾದವ ಬೇಡುತಿದ್ದಳಣ್ಣ 216ಬೆಡಗಿನ ಗಮನದಿ ಎಡಬಲಕೊಲಿದುಕಡಗ ಶಂಖದ ಬಳೆ ನುಡಿಸುತ ನಡೆದುಅಡಿಗೊಮ್ಮೆ ತಿರುಮಲ ಒಡೆಯನ ನೆನೆದು ತಕ್ಕಡ ಧಿಗಿಧಿಮಿಕೆಂದುಜಡಿದುತಾಳ್ವಿಡಿದು22ತಿಗುರಿದ ಗಂಧ ಸೆಳ್ಳುಗುರಿನ ನಾಮಮೃಗಮದದ ಬೊಟ್ಟಿನ ನಗೆಮೊಗದ ಪ್ರೇಮಮಗುವನುಡಿಯಲೆತ್ತಿ ಜಗಚ್ಚರಿಯಮ್ಮಹೆಗಲ ರನ್ನದ ಬುಟ್ಟಿ ಮುಳ್ಳುವಿಡಿದಮ್ಮ 23ನಗರದ ಜನದ ಕಣ್ಣಿಗೆ ಕೌತುಕೆನಿಸಿಬಗೆ ಬಗೆ ಒಗಟು ಮಾತುಗಳನುಚ್ಚರಿಸಿನಗರಾಧಿಪತಿಯ ಮನೆಯಕೇಳಿನಡೆದುಮಿಗೆ ಪ್ರಸನ್ವೆಂಕಟ ಕೃಷ್ಣಗೆ ಕೈಮುಗಿದು 247ಬ್ರಾಹ್ಮರ ಕೇರಿಗೆ ಬಂದಳಾಕೊರವಿಪರಬ್ರಹ್ಮನ ಗುರುತ ಕೇಳುತ್ತನಮ್ಮಮ್ಮ ನಮ್ಮವ್ವೆ ನಮ್ಮಜ್ಜಿ ನೀಡೆಂದುಸನ್ಮಾನದಾಲಯವ ಪೊಗುತಾ 25ಇಂತಪ್ಪ ಸೊಬಗುಳ್ಳ ಕೊರವಿಯನು ಕಂಡುನೃಪನಂತಃಪುರದ ಸತಿಯರೈದಿಕಂತುವಿನ ಜನನಿಗೆ ಕರವೆರಡು ಮುಗಿದು ಏಕಾಂತ ಪೇಳಿದರು ಚೆನ್ನಾಗಿ 26ಓರ್ವ ಕಾಲಜ್ಞಾನ ಪೇಳ್ವ ಕೊರವಮ್ಮ ನಮ್ಮೂರ್ವಳಗೆ ತಿರುಗುತಿಹಳಮ್ಮಸರ್ವೇಶ ಪ್ರಸನ್ವೆಂಕಟ ಕೃಷ್ಣನಾಗಮದನಿರ್ವಚನ ಕರೆಸಿ ಕೇಳಮ್ಮ 278ಬಂದಳು ನೃಪನರಮನೆಗೆ ತಾನಿಂದಲ್ಲಿ ನಿಲ್ಲದೆ ಕಿಲಿಕಿಲಿ ನಗುತಾ ಕುಲು ಕುಲು ನಗುತಾ ಪ.ಬಂದ್ಹೇಳಿದ ನುಡಿಗೇಳ್ದು ಪೂರ್ಣೇಂದುವದನೆ ಮುದತಾಳ್ದುಮಂದಿರಕೆ ಕರೆಸಿದಳು ನಲವಿಂದಲಿ ಬಲು ಬೆಡಗಿನ ಕೊರವಂಜಿ 28ತಳಪಿನ ಮುತ್ತಿನ ಕಟ್ಟುಶುಭತಿಲಕದ ಹಚ್ಚೆಯ ಬಟ್ಟುಅಲುಗುವ ಮೂಗುತಿಯಬಲೆ ಸಲೆಬಳುಕುತ ಬಡನಡುವಿನ ಚಪಲೆ 29ಬಟುಗಲ್ಲದ ಮಕರಿಕಾಪತ್ರ ಪವಳದುಟಿ ದಾಡಿಮರದಗೋತ್ರವಿಟಮೃಗಸ್ಮರಶರ ನೇತ್ರ ಕೊರಳ್ದಟಿಸುವಮಣಿಮುತ್ತಿನ್ಹಾರಗಳೊಲಪಲಿ30ಇಟ್ಟೆಡೆ ಮೊಲೆಯ ಪಟ್ಟಿಕೆಯು ಶ್ರೋಣಿಮುಟ್ಟುವ ಮುಡಿಯ ಮಾಲಿಕೆಯುಬಿಟ್ಟ ಮುಂಜೆರಗಮಲಿಕೆಯು ಕಣ್ಣಿಟ್ಟ ಮೃಗಕೆ ಭ್ರೂಸ್ಮರಕಾರ್ಮುಕೆಯು 31ತೆಳ್ವೋದರದ ತ್ರಿವಳಿಯ ಜಗುಳಿಬೀಳ್ವ ಮಣಿಮುಕ್ತಾವಳಿಯಸಲ್ಲಲಿತ ಸಂಪಿಗೆ ಕಳೆಯ ಗೆಲ್ವಚೆಲ್ವೆಕೊರವಿಪುರವೀಥಿಯ ಬಳಿಯ32ಕಿಣಿ ಕಿಣಿ ರವದ ಕಿಂಕಿಣಿಯುಝಣ ಝಣತ್ಕಾರಿಪಂದುಗೆ ಮಣಿಯುಕಣಿ ಕಣಿ ಒಯ್ಯೆಂಬೊಕ್ಕಣಿಯು ಕುಚಕುಣಿ ಕುಣಿಸಿ ನಟಿಪ ನಡೆವಾಂಗನೆಯು 33ಸಿಂಗನ ಉಡಿಯಲ್ಲಿಕಟ್ಟಿಉತ್ಸಂಗದೊಳೊಲಪಿನ ದಿಟ್ಟಿರಂಗ ಶ್ರೀ ಪ್ರಸನ್ವೆಂಕಟ ಕೃಷ್ಣಾಂಗನೆಯನು ಕಾಂಬುವೆನೆಂಬ ತವಕದಿ 349ವಚನಪದುಮನಾಭನ ರಾಣಿ ರಾಣಿವಾಸದಲಿಯದುಕುಲೇಂದ್ರನ ಚರಣೋಚ್ಚಾರಣೆಯಲ್ಲಿರಲುಒದಗಿ ಬಂದಳುಕೊರವಿಕರೆಯುತ್ತ ತಾನುಚದುರ ಪ್ರಸನ್ವೆಂಕಟ ಕೃಷ್ಣನರಸಿಯನು 3510ಎಲ್ಲಿಹಳೆಲ್ಲ್ಲಿಹಳಾ ರಾಯನ ಮಗಳೆಲ್ಲಿಹಳೆ ನೀಡೆಯವ್ವನಲ್ಲೆ ಬಾ ನಲ್ಲೆ ಬಾ ನಲ್ಲೆ ಬಾ ರುಕ್ಮಿಣಿನಲ್ಲೆ ಬಾರೆ ಮುಂದಕವ್ವ 36ಬಲ್ಲೆ ನಾ ಬಲ್ಲೆ ನಿನ್ನಯ ಮನದೆಣಿಕೆಯಸೊಲ್ಲುವೆನೆ ನೀಡೆಯವ್ವನಿಲ್ಲದು ನಿಲ್ಲದಕ್ಕಿಯು ನಿನ್ನದ್ಹಸಿತ ಕೈಒಳ್ಳೆ ಕಜ್ಜಾಯ ನೀಡೆಯವ್ವ 37ಕೆಟ್ಟೋಗರಕೆ ಚಿತ್ತವಿಟ್ಟ ಕೊರವಿಯಲ್ಲಮೃಷ್ಟಾನ್ನವ ನೀಡೆಯವ್ವಶ್ರೇಷ್ಠಾದ ಶಾವಿಗೆ ಬಟ್ಟುವಿ ಪಾಯಸಹೊಟ್ಟೆ ತುಂಬ ನೀಡೆಯವ್ವ 38ಅಟ್ಟಿಟ್ಟ ಪಂಚವಿಧ ಭಕ್ಷ್ಯ ಎನಗಿಂದುಇಷ್ಟ ಕಾಣೆ ನೀಡೆಯವ್ವಇಷ್ಟುಣಲಿಕ್ಕೆನ್ನತುಷ್ಟಿಬಡಿಸಿ ಸತ್ಯಗೋಷ್ಠಿಕೇಳೆ ನೀಡೆಯವ್ವ39ಮನ್ನಣೆ ಇಲ್ಲದ ಮನೆಯ ಹೊಗುವಳಲ್ಲಕನ್ನೆ ಬಾರೆ ಮುಂದಕವ್ವಮುನ್ನ ರಕ್ಕಸನೊಯ್ದ ಮಡದಿಗೆ ಒಳಿತವನೆಲ್ಲ ಹೇಳಿದ್ದೆನವ್ವ 40ನಿನ್ನ ಪ್ರಾಣದ ಪ್ರಿಯನೊಬ್ಬನೆ ಪರದೈವಕನ್ನೆ ಕೇಳಜಕಾಮರವ್ವಕಣ್ಣಾರ ಕಾಂಬೆ ನಿನ್ನಣ್ಣನಪಾಟುಪ್ರಸನ್ನವೆಂಕಟ ಕೃಷ್ಣನಿಂದವ್ವ 4111ಚೂರ್ಣಿಕೆಈ ವಾಕ್ಯವಂಕೇಳಿತೀವಿ ತೋಷವ ತಾಳಿದೇವಿ ರುಕ್ಮಿಣಿಯಕ್ಕ ಪಾವನ ಹಾಸಂಗಿಯಿಕ್ಕಿಆವಲ್ಲಿಂ ಬಂದ್ಯವ್ವ ದೇವಲೋಕದ ಕೊರವೆಈ ಒಳ್ಳೆ ಮೆಚ್ಚು ಮಾತು ಆವಾಗನುಭವೆಂ ಮಾತೆಹೀಗೆಂದಾಸನ ಕೊಟ್ಟು ಬಾಗಿಲೊಳು ಕಾವಲಿಟ್ಟುಬೇಗ ಪ್ರಸನ್ವೆಂಕಟ ಕೃಷ್ಣನಾಗಮವ ಮನದಿ ಕೇಳ್ದಳವ್ವೆ 4212ಕುಳ್ಳಿರೆ ಕುಳ್ಳಿರೆ ಕುಳ್ಳಿರೆ ಕೊರವಂಜಿಫುಲ್ಲಬಾಣನಾನೆ ಕುಳ್ಳಿರೆಸೊಲ್ಲಮ್ಮ ಸೊಲ್ಲಮ್ಮ ಹಲವು ಮಾತಿನ ಜಾಣೆಎಲ್ಲ ಬಯಕೆಯನೆಲ್ಲ ಸೊಲ್ಲಮ್ಮ ಕೊರವಂಜಿ 43ಆದರದಾ ಮಾತ ಕೇಳುತ ಕುಳಿತಳುಯಾದವರರಸ ಮುಕುಂದನಕೋದಂಡಪಾಣಿ ತಿರುವೆಂಗಳ ಮೂರ್ತಿಯಪಾದಕೆ ಮಾಡಿದಳೊಂದನೆ ಕೊರವಂಜಿ 44ಮಣಿಮಯ ಬುಟ್ಟಿಯ ಎಡದಲಿಟ್ಟುಕೊಂಡುವನಿತೆ ಪದ್ಮಾಸನವಿಟ್ಟಳುಮಿನುಗುವ ಎಳೆನಗೆಯಣುಗನ್ನ ಮಲಗಿಸಿವನಿತೆ ರುಕ್ಮಿಣಿಯನ್ನು ಕರೆದಳು ಕೊರವಂಜಿ 45ಜಾಣೆ ಬಾರೆ ಸುಗುಜಾಣೆ ಬಾರೆ ನಾರಿಮಾಣಿಕಳೆಕಟ್ಟಾಣಿಬಾರೆವಾಣಿಪತಿಪಿತ ಪ್ರಸನ್ವೆಂಕಟ ಕೃಷ್ಣನರಾಣಿ ಬಾರೆಸುಪ್ಪಾಣಿಬಾರೆ ಕಲ್ಯಾಣಿ ಬಾರೆ ಫಣಿವೇಣಿ ಬಾರೆಶುಭಶ್ರೋಣಿ ಬಾರೆ ಎಂದು ಕರೆದಳು ಕೊರವಂಜಿ 4613ವಚನಅಮ್ಮ ರುಕ್ಮಿಣಿಯಮ್ಮ ಉಮ್ಮ್ಮಯವಟ್ಟುಮುಮ್ಮೊರದ ರತುನ ಮುತ್ತಿನ ಕಾಣಿಕಿಟ್ಟುಪರಬೊಮ್ಮಪ್ರಸನ್ವೆಂಕಟಕೃಷ್ಣನ ಅಡಿಗಳನಮ್ಮಿಸುತ ಮನೋರಥವÀ ಮನದಿ ಬೆಸಗೊಳ್ಳಲು 47ಉಂಡ ಊಟ ಕಂಡ ಕನಸು ಪುಂಡರೀಕಾಂಬಕಿಯೆತಂಡ ತಂಡದ ವಾರುತೆಗಳ ಪೇಳುವೆನು ಸಖಿಯೆಹಿಂಡುದೈವದಗಂಡಪ್ರಸನ್ವೆಂಕಟ ಕೃಷ್ಣನ ಕಣ್ಣಾರಕಂಡು ಸಾರುವಕೊರವಿಎಳ್ಳನಿತು ಸಟೆಯರಿಯೆ4815ಚೂರ್ಣಿಕೆಕಾಸಿನಾಸೆಯವಳು ನಾನಲ್ಲಭಾಷೆ ಹುಸಿದರೆ ಬಿರುದು ಬಿಸುಡುವೆನೆಲ್ಲಭಾಷೆ ಪಾಲಕರು ನಮ್ಮ ಸಿದ್ಧರೆಲ್ಲ ಲೇಸುಲೇಸೆಂದುಕೇಸಕ್ಕಿತಿಮ್ಮಯ್ಯನ ಬೆತ್ತವ ಮುಟ್ಟೆಲೆ ದುಂಡೆಎನ್ನ ಮನದ ದೈವ ಎನ್ನಕ್ಕ ಕೇಳೆಯವ್ವತಿರುಮಲೆ ತಿರುವೆಂಗಳಯ್ಯವರಅಹೋಬಲ ನರಸಿಂಗಯ್ಯಹರಿಕಂಚಿ ವರದರಾಜಯ್ಯಶಿರಿ ರಂಗದ ರಂಗರಾಯಯ್ಯಬದರಿಯ ನರನಾರಾಯಣಯ್ಯಪುಂಡರೀಕವರದ ಪಂಢರಿರಾಯ ಎಮ್ಮಉಡುಪ ಕುಲಜ ಮನ್ನಾರು ಕೃಷ್ಣಮ್ಮಒಡ್ಡಿಜಗನ್ನಾಥ ಅಲ್ಲಾಳನಾಥಯದುಗಿರಿನಾಥ ಶಿರಿಮುಷ್ಣನಾಥಕೃತಪುರದ ವೀರ ನಾರಾಯಣಕೊಲ್ಲಾಪುರದ ಕನ್ನೆ ವೇಲಾಪುರದ ಚೆನ್ನಅನಂತಶಯನ ಜನಾರ್ದನ್ನಅನವರತಪರಸನ್ನ ವೆಂಕಟ ಕೃಷ್ಣನ ಕನ್ನೆಇಂತಪ್ಪಾನೇಕ ದೈವ ಏಕವೆಂದು ಏಕಾನೇಕವೆಂದುನಂಬಿಪ್ಪೆನೆ ಕೇಳೆಯವ್ವ 4916ಇಂತಿಪ್ಪ ಎನ್ನ ಮನೆಯ ದೈವ ಅವರಂತವ ಬೊಮ್ಮರರಿಯರವ್ವ ವಿಶ್ರಾಂತಿಲಿ ಕೊಂಡಾಡುವೆನವ್ವ ನಾನುಕಂತುವಿನಣ್ಣನ ಮಗಳವ್ವ 50ಇಪ್ಪಲ್ಲಿಪ್ಪಕೊರವಿನಾನಲ್ಲ ಹೋಗಿಬಪ್ಪೆ ಹದಿನಾಲ್ಕು ಲೋಕಕೆಲ್ಲಛಪ್ಪನ್ನದೇಶಗಳ ಸುದ್ದೀನೆಲ್ಲಕೇಳಿಬಪ್ಪುವ ಕಜ್ಜವ ಕೃಷ್ಣ ಬಲ್ಲ 51ಆವಾವ ದೇಶದ ಸುದ್ದಿ ಕೇಳವ್ವ ನಿನ್ನಭಾವದ ಬಯಕೆಯನೆಲ್ಲ ಕೇಳವ್ವಶ್ರೀವರ ಪ್ರಸನ್ನವೆಂಕಟಾದ್ರಿ ಕೃಷ್ಣ ದ್ವಾರಕಿಂದಾವಾಗ ಬಪ್ಪನೆಂದು ಕೇಳವ್ವ 5217ಚೂರ್ಣಿಕೆಓಯಮ್ಮ ನಿನ್ನವರುಗಳು ಆ ಬಲಮಗು ಮದನಕಾಮಬುಡುಕ್ಕಾನೆ ಪರತಾನು ಚಿಂತಿಶೆ ಮಾಣಮ್ಮನಾ ತಿರುಕ್ಕಿ ವಂದ ದೇಶ ಐವತ್ತಾರು ಶೊಲ್ಲರೆಅಂಗ ವಂಗ ಕಳಿಂಗ ಕಾಂಬೋಜ ಭೋಟಕರ್ನಾಟಕ ಘೋಟ ಮಹಾಘೋಟಜಿನ್ನ ಮಹಾಜಿನ್ನ ಜೊನ್ನಗಕಾಶ್ಮೀರ ತುರುಷ್ಕಮಾಗಧಬಂಗಾಳ ಗೌಳ ಮಾಳವ ಮಲೆಯಾಳನೇಪಾಳ ಗೌಡ ಗುರ್ಜರ ಕೊಂಕಣದರ್ದುರಬರ್ಬರ ಸೌರಾಷ್ಟ್ರ ಮಹಾರಾಷ್ಟ್ರಸಂಬರ ಮುಂಗಿಳ ಘೋಟ ಮುಖಏಕಪಾದ ಸೌಳ ಸಂಸಾಳಕಆನರ್ತ ಹಮ್ಮೀರ ಕೊಮ್ಮೀರಮತ್ಸ್ಯಪಾಂಚಾಲರಾಜಶೇಖರ ವರಶೇಖರ ಯುಗಂಧರ ಮಧ್ಯದೇಶಲಂಬಕರ್ಣ ಸ್ತ್ರೀರಾಜ್ಯ ಆಂಧ್ರ ದ್ರವಿಡಅರವ ಕನ್ನಡ ತುಳುವ ತುಳಾಂಡಜಾಳೇಂದ್ರ ಕೈಕೇಯ ಕೌಸಲ ಕಂಚಿಕನೋಜ ಸವ್ವೀರಸಿಂಧುಕೇರಳವೈದರ್ಭ ದೇಶದೊಳ್ಕುಂಡಿನಾಪುರದೊಳ್ ನಿನ್ನಂ ಕಂಡುಮನದಂಡಲಿಕೆಗೆ ಸಾಗಿತ್ತೆನೆಲೆ ದುಂಡೆ 5318ಈ ನಾಡ ಚರಿಸಿ ನಿನ್ನರಸುತ ಬಂದೆನೆಜಾಣೆ ಬಂಗಾರವ್ವ ಕೈ ತೋರೆ 54ನಿನ್ನ ಕಾಣುತ ಹಸಿವೆ ನೀರಡಿಕೆಲ್ಲ ಹೋಯಿತುಜಾಣೆ ಬಂಗಾರವ್ವ ಕೈ ತೋರೆ 55ಸಂಧಾನಕ್ಹಾರುವನಟ್ಟಿದ್ದೆ ಮೊದಲಹುದೇನೆ ಮಂಗಳದೇವಿ ಕೈ ತೋರೆ 56ನೀ ಬರೆದೊಕ್ಕಣೆ ಯದುರಾಯನರಿತಾನುಸೌಭಾಗ್ಯವಂತೆ ಕೈ ತೋರೆ 57ರಥವನೇರಿಕೊಂಡು ಬರಹ ನೋಡಿಕೊಳ್ವಜಾಣೆ ಬಂಗಾರವ್ವ ಕೈ ತೋರೆ 58ಧ್ಯಾನದ ಕಳವಳ ಮುಸುಡುಗಂಟಿನ ಚಿಂತೆಮಾಣು ಮಂಗಳದೇವಿ ಕೈತೋರೆ 59ತ್ರಿಭುವನೇಶ ಪ್ರಸನ್ನವೆಂಕಟ ಕೃಷ್ಣತಾ ಬಹನೆಲೆ ದುಂಡಿ ಕೈ ತೋರೆ 6019ಚೂರ್ಣಿಕೆಎಲೆಲೆ ಎಳೆವೆಂಗಳೆ ಎಲೆ ಹುಲ್ಲೆಗಂಗಳೆಮಹಾಭೂಷಣದ ಮಾರುವೇಣಿ ಮಡದಿಯರಸುಪ್ಪಾಣಿಕೀರವಾಣಿ ಕಿಸಲಯಪಾಣಿಕಂಧಿಜ ಬಿಂಬವದನೆ ಕುಲಿಶಮಣಿರದನೆಮದನಕಾರ್ಮುಕೋಪಮ ಭ್ರೂಲತೆಯಳೆ ಮಹಾಲಕುಮಿಯಳೆಅರುಣವಿಧ್ರುಮಾಧರೆ ಅಬ್ಜಜಾ ಕಂಧರೆಅರ್ಧಚಂದ್ರನ ಪೋಲ್ವಡಿ ಪಣೆಯಳೆ ಅನಘ್ರ್ಯ ಚೂಡಾಮಣಿಯಳೆಸಿಂಧೂರಸೀಮಂತಿನಿಯೆಸಿರಿತಿಲಕದ ಶೋಭಿನಿಯೆನುಣ್ಗದಪುನಾಸಿಕಮಣಿಯಳೆ ನೂತನೊಜ್ರದೋಲೆಯಳೆನಿಷ್ಕ ಕಂಠಾಭರಣೆಯಳೆ ನಿತ್ಯಮಂಗಳ ಸೂತ್ರಿಯಳೆನಿಡುಜಾಲಕ ಮಾಲೆಯಳೆಬುಗುಡಿ ಚಳತುಂಬು ಕೊಪ್ಪಿನ ಕಿವಿಯಳೆಬಾವಲಿ ನಾಗೋತ್ರ ಪೊಂಬರಳೆಲೆ ಲಲಿತ ಬಾಹುಲತೆಯಳೆಲಸತ್ವನಜಕೋರಕ ಸ್ತನಿಯಳೆಕಡು ತೆಳ್ವೋದರಿ ನಿಮ್ನ ನಾಭಿಯಳೆಕಂಠೀರವಕಟಿಯಳೆ ಕರಭೋರು ಯುಗಳೆಯಳೆಅಪರಂಜಿಕಂಚುಕಾಂಬರ ಉತ್ತರೀಯಳೆಅಮೂಲ್ಯ ಕಾಂಚಿದಾಮಾಂಕಿತಳೆಬಟುಗನ್ನಡಿ ಜಾನುದ್ವಯಳೆ ಬ್ಞಣ ಪಂಚಕನ ಬತ್ತಳಿಕೆ ಜಂಘೆಯಳೆಕೋಮಲತರಾಂಘ್ರಿ ಸರಸಿಜಯುಗಳೆನೀಲಪಚ್ಚ ಪದ್ಮರಾಗ ಹೀರ ಮುತ್ತಿನ ಪೆಂಡೆಯಳೆಕಾಲಂದಿಗೆ ಮೆಂಟಿಕೆ ವೀರಮುದ್ರೆ ಕಿರಿ ಪಿಲ್ಲಿಯಳೆಮಣಿಮಯಾಂಗುಲ್ಯದ ವಲಯಾಭರಣೆ ಮದಗಜಗಮನೆಪ್ರತಿಯಿಲ್ಲದ ರನ್ನದ ಬೊಂಬೆ ಪರಬೊಮ್ಮನ ಪಟ್ಟದ ರಂಭೆಬಾಬಾ ತಾತಾ ಎಂದು ವಾಮಕರವಬೇಡಲಿತ್ತಳಾ ರುಕ್ಮಿಣಿ ತಾಯಿ 6120ಜಗದ ನಾರಿಯರ ಕೈಗಳ ಕಂಡೆನವ್ವಮೃಗಮದಗಂಧಿ ನಿನ್ಹೋಲ್ವರಿಲ್ಲವ್ವ 62ಯುಗಯುಗಾಂತರ ದೇಶ ದೇಶದಲ್ಲವ್ವಅಗಲ್ಯಾಟವಿಲ್ಲ ನಿನ್ನರಸ ನಿನಗವ್ವ 63ಸವತೇರು ಬಹಳುಂಟು ನೆಂಟರ ಜಾಣೆ ಎಲೆ ಬೀಗರ ಸುಗುಣೆಯುವತಿ ಪ್ರಸನ್ವೆಂಕಟ ಕೃಷ್ಣ ನಿನ್ನ ಪ್ರಾಣ 6421ಕಣಿ ಕೇಳೆ ಕಣಿ ಕೇಳೆ ಕಣಿ ಕೇಳೆ ಚೆಲ್ವೆಕಣಿ ಕೇಳೆ ನಿನ್ನ ಮನದಾ ಮಾತ್ಹೇಳ್ವೆಎಣಿಕೆಗೊಳ್ಳದಿರಮ್ಮಇಂದುನಾಳೆಂದುಗುಣನಿಧಿ ಗೋಪಾಲ ಬಹ ದಯಾಸಿಂಧು 65ತ್ರುಟಿಯುಗವಾಗಿದೆ ನಿನಗೀಗ ಮುಗ್ಧೆಕುಟಿಲಮಾಗಧಸಾಲ್ವ ನೆನೆವ ದುರ್ಬುದ್ಧೆಘಟಿಸದೆಂದಿಗೆ ಖಳರ ಮನೋರಥ ಸಿದ್ಧೆದಿಟವೆನ್ನವಾಕುಸುರಲೋಕ ಪ್ರಸಿದ್ಧೆ66ಹಿಂದೊಮ್ಮೆ ಖಳರು ಗೋವಿಂದ ಬಂದಾಗಮಂದಮತಿಯಲಿ ಮನ್ನಿಸದಿರಲಾಗಇಂದ್ರ ಸಿಂಹಾಸನವ ಹರಿಗೆ ಕಳುಹಿಸಿದವೃಂದ ದೈತ್ಯರಿಗೆಲ್ಲ ಭಯವ ಸೂಚಿಸಿದ 67ಜಂಭಾರಿಕುಲಿಶಕಂಜುತ ಪೋಕರೆಲ್ಲಥಂಬಿಸಿದರು ವಾಗಾಡಂಬರವೆಲ್ಲಅಂಬುಜಾಕ್ಷಗೆ ನಿನ್ನತಾತಪೂಜಿಸಿದಅಂಬುಜನಾಭ ತನ್ನೊಳುವಿಶ್ವತೋರ್ದ68ಅದನೆಲ್ಲ ಬಲ್ಲ್ಯವ್ವ ಹರಿಯ ನಿಜನಲ್ಲೆಬೆದರಿದೊಲ್ಲೋರ್ವ ನಿನ್ನ ಮಾಯವ ಬಲ್ಲೆಪದುಮಜ ಭವರ ಹೃದಯಾಬ್ಜ ನಿಯಂತ್ರೆಉದಧೀಶನಾಜÕದಿ ಸರ್ವಸ್ವತಂತ್ರೆ 69ಕೇಳಮ್ಮ ನಿನ್ನ ಹೆತ್ತವರಿಗೆ ನಿನ್ನಮೇಲೆ ಹಂಬಲ ಬಹಳ ಪಾಪಿ ನಿಮ್ಮಣ್ಣಆಲೋಚನೆಯಿಲ್ಲದೆ ನಿಶ್ಚೈಸಿದ್ದಾನೆ ಶಿಶುಪಾಲಗೆ ನಿನ್ನ ಕೊಡುತೇನಂತೈದಾನೆ 70ಆಗಲ್ಯಾಕವನಿಂದಲೀಕಜ್ಜ ಬುರ್ರಾಬೇಗ ಭೀಷ್ಮಕನಂತರ ಬಲ್ಲ ಶ್ರೀಧರ್ರಾಸಾಗರಶಯನ ತಾ ಸಮಯಕೈತರುವನೇಗಿಲಧರನು ಕೃಷ್ಣನ ಕೂಡ ಬರುವ 71ಆ ಗೌರಿ ಮೌನಿಯೆಂಬುವಳ ಪೂಜೆಯಲಿಯೋಗವಾಗಿದ್ರ್ದಾ ಕಾಪುರುಷ ಸಭೆಯಲ್ಲಿಮೇಘಮುಸುಕಿರ್ದ ಚಂದಿರನಂತೆ ನಿನ್ನಯೋಗೇಶ ಪ್ರಸನ್ವೆಂಕಟ ಕೃಷ್ಣ ನೊಯ್ವ ಚೆನ್ನ 7222ಇನಿತೆಲ್ಲ ಕೊರವಂಜಿಕರವಪಿಡಿದು ಹೇಳಿಕ್ಷಣ ಕ್ಷಣಕೊಡೆಯನ ಹೊಗಳಿನೆನಪಿಗೆ ಬೆಸಗೊಂಬೆ ಕಾಲಜ್ಞಾನದ ವಾರ್ತೆಎನಗೆ ತಿಮ್ಮಯ್ಯ ಹೇಳೆಂದು 73ಶ್ರೀ ರುಕ್ಮಿಣಿಯ ಮನದುಲ್ಲಾಸವನೆಲ್ಲಪೂರೈಸುವೆನೆಂಬ ನುಡಿಯತೋರು ಎನ್ನಯ ನಾಲಿಗೆಯಿಂದಲುಸುರುವೆವೀರ ದ್ರಾವಿಡ ವೆಂಕಟಯ್ಯ 74ಶರಣ್ಯೆಲೆ ಸತ್ಯನೆ ಶರಣ್ಯೆಲೆ ನಿತ್ಯನೆಶರಣು ಶರಣು ನಿತ್ಯಮುಕ್ತಶರಣು ಪರೇಶನೆ ಶರಣು ಅವಿನಾಶನೆಶರಣು ಪ್ರಸನ್ವೆಂಕಟ ಕೃಷ್ಣ 7523ವಚನಓ ರುಕ್ಮಿಣಿ ತಾಯಾರೆಉನ್ನ ಮನಸಿಲೆ ನಿನೈಚ್ಚ ಕಾರ್ಯಂ ಕೈಕ್ಕೂಡಿನಾಲ್ಎನಕ್ಕೆ ಎನ್ನ ಸಂತೋಷಂ ಪಣ್ಣಿರಾಯ್ಓಯಮ್ಮ ಉನ್ ಪ್ರಾಣನಾಯಗನ್ ಶ್ರೀಕೃಷ್ಣನ್ ವಂದುಪೊಟ್ಟಣೆ ಕೈ ಪಿಡಿಚ್ಚಿ ಕಲ್ಯಾಣಂ ಪಣ್ಣಿಕೊಳ್ಳರಾಂಇಂದ ವಾರ್ತೆ ತಪ್ಪಿನಾಲ್ ನಾಂ ಕೊರ್ತಿಯೇ ಅಲ್ಲೆಉನ್ ತಮಯನ್ ರುಗ್ಮಂ ವೇಕ್ಕತ್ತೆ ಕೊಲ್ಲರಂ ವರಾನುಓಯಮ್ಮ ಇಂದ ವಾರ್ತೆಯೈ ಪಣ್ಣಿಕೋ ಅª, À್ಮು 7624ಮದ್ಯಪಾನಿತಾಮಸಯವನನ ಕೊಲಿಸಿದನೆನಿದ್ರೆಗೈವ ರಾಯನಿಂದಲಿಸದ್ದಿಲ್ಲದೆ ಮಧುರೆ ಜನರ ಸಾಗರದಮಧ್ಯ ದ್ವಾರಕೆಯಲ್ಲಿಟ್ಟನೆ 77ಯವನ ಸೈನ್ಯಜಲಧಿಬತ್ತಿಸಿ ಸಾಲ್ವಾದ್ಯರಹವಣಮುರಿದು ನಿಜರ ಹೊರೆವನು ನಿನ್ನವಿವಹ ಮಾಳ್ಪೆನೆಂಬ ಮಾಗಧನು ಚೈದ್ಯ ತನ್ನಕುವರನೆಂದು ಮಾನವಿಡಿದಿಹ 78ಇನಿತರೊಳು ರಂಗರಾಯನು ಮೋಹರದಿಮಣಿರಥವನೇರಿ ಬಹನುವನಿತೆ ನಿನ್ನಂದಣವ ನೋಡುತ ಜಿಗಿವನಲ್ಲಿಂದ ಘನತರ ಮೃಗೇಂದ್ರನಂದದಿ 79ನರಿಯ ಹಿಂಡಿನೊಳಗಿನಾನೆಯ ಒಯ್ವ ತೆರದಿಹರಿನಿನ್ನಪ್ಪಿಕೊಂಡುಹಾರುವಗರುಡನಮೃತ ಕಲಶವ ಸುರರ ಗೆದ್ದುಹರುಷದಿಂದೊಯ್ಯುವಂತೆ ಒಯ್ವನು 80ಸರಸಿಯಾಬ್ಜ ಹಂಸ ಒಯ್ವವೋಲ್ ಪರಮಪುರುಷತ್ವ, ರಿಯ ತನ್ನ ರಥಕೆ ಒಯ್ವನೆಬರಿಯ ದುಗುಡವ್ಯಾಕೆ ಬಾಲಕಿಪ್ರಸನ್ವೆಂಕಟ ಕೃಷ್ಣ ನಿನ್ನ ಮೆಚ್ಚುಗಾರನೆ 81ಬಂದನೆಂಬ ನುಡಿಯು ಬರುತಿದೆಜವದಿಕೃಷ್ಣಬಹನೆಂಬ ನುಡಿಯು ಬರುತಿದೆ 8225ಚೂರ್ಣಿಕೆನೀಡೆಯವ್ವ ಎನ್ನ ಮನೆ ಗಂಡನ ಕಾಟ ಘನ್ನವವ್ವಕ್ಷಣಕೈದು ನಡೆಯವನವ್ವಒಮ್ಮಾನ ತಿರಿತಂದರೆ ಇಮ್ಮಾನ ಬೇಡುವನವ್ವಚೆಂಬಣ್ಣ ಕರಿಬಿಳಿಯಬಟ್ಟೆನಮ್ಮತ್ತೆಗಳವ್ವಆರು ಮಂದಿ ಗಂಡನ ಗೆಳೆಯರವ್ವಏಳು ಪದರು ಮೂರು ತ್ಯಾಪೆ ಗುಡಲುಂಟವ್ವಎಪ್ಪತ್ತೆರಡು ಸಾವಿರ ನುಲಿಯ ಸಿಂಬಿಗಳವ್ವಗುಡಲೊಳು ಮೂರು ಒಲೆಯುಂಟವ್ವಗುಡಲು ಬಿದ್ದರೆ ನುಲಿಗೆ ಮಾರ್ಯೆವ್ವಒಂಬತ್ತು ಗುದ್ದಿನೊಳಗೆ ಹತ್ತು ಹೆಗ್ಗಣದೋಡ್ಯಾಟವವ್ವಕೊರವನ ಕೈಯಿಚ್ಛೆ ಮೂರು ನಾಯಿಗಳವ್ವಎಣಿಕಿಲ್ಲದ ಕುತ್ತಗಳುಂಟವ್ವಕೊಬ್ಬಿನ ಸವತೇರೆಂಟು ಮಂದಿ ಕೊರವಗೆ ಮಚ್ಚೂಡುವರವ್ವಸಂಸಾರದಲೆಳ್ಳನಿತು ಸುಖವಿಲ್ಲವ್ವಅತ್ತೆಗಳಾಟ ಗಂಡನ ಬ್ಯಾಟ ಸವತಿಯರ ಕಾಟನೆರೆಹೊರೆಯವರ ನೋಟ ಮನೆಯ ಮಾಟಗತರಸದೂಟಕಂಜಿ ನಡುನಡುಗಿಮೂರೂರ ಹಾದಿ ಮೆಟ್ಟಿ ಬಂದುಆರೂರರಸಿನ ಮೊರೆ ಹೊಕ್ಕೆನೆಯವ್ವವಿದರ್ಭದೇಶದ ಕುಂಡಿನಾಪುರದೊಳು ನಿನ್ನ ಗುರುತಕೇಳಿಉಪವನದ ಪ್ರದ್ಯೋತನಾಳ್ವ ಎರಡು ಬಾವಿಯ ಮ್ಯಾಗಣಹೂವಿನ ತೋಟದ ನಡುವೆ ಬುತ್ತಿಯನುಂಡು ನಿನ್ನ ಕಂಡುಕುಂತಳಾಪುರದಲ್ಲಿ ಕುಳಿತುಂಬಬ್ರಹ್ಮಾನಂದದವರ ಭಾಗ್ಯವ ಬೇಡ ಬಂದೆನೆ ಅವ್ವಅಸುವಿಗೆ ಹಾಲನೆರೆಯವ್ವಶಿಶುವಿಗೆನವನೀತನೀಡೆಯವ್ವಬಂಗಾರೆವ್ವ ಸಿಂಗಾರೆವ್ವ ಸೋರ್ಮುಡಿಯವ್ವಮಲ್ಲಿಗೆದುರುಬು ಸಂಪಿಗೆದುರುಬುಪಚ್ಚೆ ಮರುಗ ಮುಡಿವಾಳ ಶಾವಂತಿಗೆ ತುರಬಿನವ್ವಪ್ರಸನ್ವೆಂಕಟಕೃಷ್ಣನ ತೋಳ್ತಲೆಗಿಂಬಿನವ್ವ ನೀಡೆಯವ್ವ 8326ವಚನಇಂತಾಧ್ಯಾತ್ಮವಂ ಪೇಳಿಕಂತುವಿನಯ್ಯನ ಕಾಂತೆಯಂ ಸಂತಸಪಡಿಸಿಅಂತರಂಗದಿ ಚಿಂತಾಯಕನಂ ನೆನೆನೆನೆದುಭ್ರಾಂತಿ ಪರವಶಾದಂತೆ ಕೆಂಜೆಡೆಯಂ ತೂಗಿ ತೂಗಿಅಂತದತ್ಯಂತ ತೂಳಂತುಂಬಿಇಂತೆಂದಳಾ ಕೊರವಂಜಿ 8427ಬರುತಾನೆ ಜಾಣೆ ಬರುತಾನೆಬರುತಾನೆ ಚೆಲ್ವೆ ಬರುತಾನೆ 85ಹಿಂಡುಭಂಡರೆಲ್ಲ ಕೂಡಿ ನಿನ್ನ ಮುಚ್ಚಲು ಎತ್ತಿಕೊಂಡು ಒಯ್ವ ಜಾಣ ಬರುತಾನೆಪುಂಡರೀಕಸುರಗಿ ಖಡ್ಗ ಭಿಂಡಿವಾಲ ನುಗ್ಗುಮಾಡಿದಂಡಿಸುವ ಜಾಣ ಬರುತಾನೆ 86ಕುಂಡಿನಾಪುರದಿ ನೆರೆದ ಕೊಂಡಿ ಕುಹಕರ ತಲೆಯಚಂಡನಾಡ್ವ ಜಾಣ ಬರುತಾನೆಮಂಡೆಯಲ್ಲಿ ಪಚ್ಚಚೂಡವಿಟ್ಟು ರುಕ್ಮನಭಿಮಾನಕೊಂಡೇನೆಂಬ ಜಾಣ ಬರುತಾನೆ 87ತಂಡ ತಂಡದಲ್ಲಿ ನಿನ್ನಯ್ಯನ ಸದ್ವಾಸನನ್ನಉಂಡೇನೆಂಬ ಜಾಣ ಬರುತಾನೆಲೆಂಡದಾನವಾರಿ ಪ್ರಸನ್ನವೆಂಕಟಕೃಷ್ಣ ಬೊಮ್ಮಾಂಡಪತಿ ಜಾಣ ಬರುತಾನೆ 8828ಚೆನ್ನೆ ಕೊರವಂಜಿ ಮಾತು ಶ್ರೀಕನ್ಯೆಕೇಳಿನಲಿವಾಂತುಮನ್ನಿಸಿ ಗುಣವ ಕೊಂಡಾಡಿ ಮುಕ್ತಿರನ್ನಗಾಣಿಕೆಯನು ನೀಡಿ 89ಎಲೆ ಸತ್ಯಲೋಕದ ಕೊರವೆ ನೀಬಲು ಸತ್ಯ ನುಡಿದೆ ನಾನರಿವೆಛಲದಂಕ ದೇವರದೇವ ಈಖಳರೊಳು ಒಯ್ವುದರಿದವ್ವ 90ಹರಿರಥವೇರಿ ಬಾಹೋಣ ಕಾಪುರುಷರ ಮತ ಕೆಡಿಸೋಣಗುರುಪ್ರಸನ್ವೆಂಕಟ ಕೃಷ್ಣ ಬಂದುಹೊರೆವುದುಂಟೇನವ್ವ ರಮಣಿ 9129ನಂಬಲೇನೆ ನಿನ್ನ ಮಾತು ಕೆಳದಿ ಕೊರವಮ್ಮ ನಮ್ಮಂಬುಜಾಕ್ಷ ಬಾಹನೇನೆ ದೇವಿ ಕೊರವಮ್ಮ 92ಉಡಿಯ ಕಂದನಾಣೆ ಇಡುವೆ ನಂಬೆ ರುಕ್ಮಿಣಿ ನಾನುಡಿವ ನಾಮದಾಣೆ ಇಡುವೆ ನಂಬು ರುಕ್ಮಿಣಿ 93ಎಡದ ತೋಳು ತೊಡೆಕಂಗಳುಹಾರಲೊಳಿತೇನೆ ಚಿಲಿಪಿಲಿನುಡಿವಶಕುನಎಡದ ಗೌಳಿಯ ನುಡಿಯು ಒಳಿತೇನೆ94ಕಡಲಶಯನ ನಿನ್ನ ಪ್ರಾಣದೊಡೆಯ ಬಪ್ಪನೌ ಎನ್ನಪಡೆದನಯ್ಯ ಪ್ರಸನ್ನವೆಂಕಟಕೃಷ್ಣ ತಪ್ಪನೌ 9530ನಿನ್ನಗಂಡಬೆಣ್ಣೆಗಳ್ಳ ಕನ್ನೆಗೊಲ್ಲತಿಯರ ನಲ್ಲಕಣ್ಣೆವೆ ಸನ್ನೆಗಾರ ನಂದಗೋಪ ಕುಮಾರ 96ಚಿನ್ನತನದಿ ದಶಲಕ್ಷ ಚಿನ್ನರ ಪಡೆದನು ದಕ್ಷಪೊನ್ನ ಕೊಳಲನೂದಿ ಮೂಜಗವ ಮೋಹಿಸುವ 97ಉನ್ಮತ್ತಮಾತುಳನ್ನ ತುಳಿದ ತನ್ನ ಪೆತ್ತವರೆಡರ್ಗಳೆದಮನ್ನಿಸಿ ಪಾಂಡವರÀ ಪೊರೆದ ಚಿನ್ಮಯ ಸುಖದ 98ಪೆಣ್ಗಳ್ ಹದಿನಾರುಸಾವಿರದ ನೂರೆಂಟನಾಳ್ವ ಚದುರನಿನ್ನ ಪ್ರಾಣ ಪ್ರಿಯ ಬಂದ ಪ್ರಸನ್ನವೆಂಕಟ ಕೃಷ್ಣ ಮುಕುಂದ 9931ನುಡಿ ನುಡಿಯೆಲೆ ಬಡನಡುವಿನ ಮಡದಿ ನಿನ್ನುಡಿಗುಚಿತವಕೊಡುವೆನಡಿವಿಡಿವೆ ಮನವಿಡುವನೆ ಕಡಲೊಡೆಯ ಕೈವಿಡಿವನೆ ಎನ್ನ ಕಡೆಯ ನೋಡಿ ನುಡಿವನೆ ಸವಿನುಡಿಯಕಡು ಬಲಿಭುಜ ಗಡಣಂಗಳ ನಡುವ್ಹಂಸನಪಡಿಮಿಡುಕುವೆನುಡಿ ಬೇಗೆಂದು ಪಡೆಗೂಡಿ ಹಲಿಯೊಡನಾಗಮ ನುಡಿಯೇ ನಿನ್ನುಡಿಗಮೃತವ ಪಡೆಯೇ ಮತ್ತೀಜಡಜಡಿ ಲೋಕೊಡೆಯೆ ಪ್ರಸನ್ನವೆಂಕಟ ಕೃಷ್ಣರಾಯನನುಡಿಯೆಲೆ ನುಡಿನುಡಿಯೆ ನುಡಿನುಡಿಯೆ 10032ಹರಿಬರುತಾನೆ ಗುರುತು ಗಂಟ ಕಟ್ಟೆಪಕೇಳೆ ನರಸಿಂಗನಂಗನೆಯನೊಯಿದು ಕೆಟ್ಟನರಿಗಳಾಳಬಲ್ಲವೇನೆ ನಲಿದು ನೀನುದುರುಳರಿಗೆ ದಕ್ಕಬಲ್ಲ್ಯೇನಮ್ಮ ನಿನ್ನಾಚರಣೆಯೆಲ್ಲ ಜಗದ್ವಿಡಂಬನಮ್ಮ 101ನನ್ನ ತರಳನಾಣೆ ಸಟೆಯನಾಡೆನಮ್ಮ ನಾನೊರೆದವಾಕುಸಾಕ್ಷಿ ಬರುತಾವಮ್ಮ ಮ್ಯಾಲರಕೆಯುಳ್ಳ ತಾಯಿಯಾದರೆ ನೀ ನನ್ನಕರೆಸಿ ಕೇಳೆ ನಿನ್ನ ಮನೆಗೆ ಜಾಣೆ 102ನಿನ್ನ ಹೆಸರ ತಕ್ಕ ಊಟವ ನೀಡೀಗ ನಾಹಸಿದೆನೆಂದು ಉಂಡುಕೊರವಿಬೇಗಪ್ರಸನ್ನವೆಂಕಟ ಕೃಷ್ಣನ ರಾಣಿಗೆÉ ಹಾರೈಸಿದಳು ಬಸುರು ಬುಡುಕೆಂದು 10333ಚಕ್ಕನೆ ನಿಂತಳು ಕೊರವ್ಯಮ್ಮ ಕಂಡುಫಕ್ಕನೆ ನಿಂತಳು ರುಕ್ಮಿಣಮ್ಮ ಪ್ರಾಣದಕ್ಕರ ಬಿಡಲಾರೆ ನಿನ್ನ ಗೆಳತಿ ಪ್ರೇಮಉಕ್ಕುತಿದೆ ನೀ ಹೋಗುವುದೊಳಿತೆ ಎನಲು ನಕ್ಕು 104ಶ್ರೀ ಗೋಪಾಲ ಬಾಹನಕ ನಿಲ್ಲೆ ವಿಯೋಗ ತಾಳಲಾರೆ ನೀ ಬಲ್ಲೆಹೀಗೆನೆÀ್ನ ಬೇಡಿಕೊಂಡಳು ಮರುಳೆ ನೆನೆದಾಗೆ ಬಹೆನೆಂದ್ಹೇಳಿ ತೆರಳೆ ಅನುರಾಗದಿಂದ 105ಆವ ಪರಿಂದಾರೆ ಹರಿಸೇವೆ ಮಾಡಿದೇವಋಷಿ ನಿಜಾನಂದ ತೀವಿಶ್ರೀವರ ಪ್ರಸನ್ವೆಂಕಟ ಕೃಷ್ಣನ ಮಹತೇವಿಡಿದು ಹೊಗಳುತ ಮುನಿರನ್ನ ರಾಮೆಯಾಜÕದಿ 10634ಸುರಋಷಿಪೇಳ್ದ ಒಕ್ಕಣೆಯಹರುಷದಿ ಕೇಳ್ದ ರುಕ್ಮಿಣಿಯಅರಸ ಪ್ರಸನ್ನವೆಂಕಟ ಕೃಷ್ಣನಿರುತದಿ ಜಯ ನಮಗೀವ 107ಜಯ ಜಯ ಚಿನ್ಮಯಮೂರ್ತಿಜಯ ಜಗನ್ಮಯ ಸ್ವಚ್ಛಕೀರ್ತಿಜಯ ಜಯ ಪ್ರಸನ್ವೆಂಕಟ ಕೃಷ್ಣಜಯಮೂರ್ತಿನಿನಗೆ ಶರಣು108
--------------
ಪ್ರಸನ್ನವೆಂಕಟದಾಸರು
ನಾರಾಯಣ ಗೋವಿಂದ - ಹರಿಹರಿನಾರಾಯಣ ಗೋವಿಂದ ಪನಾರಾಯಣ ಗೋವಿಂದ ಮುಕುಂದಪರತರ ಪರಮಾನಂದ ಅ.ಪಮೊದಲು ಮತ್ಸ್ಯನಾಗಿ ಉದಿಸಿ ಸೋಮನನುಸದೆದು ವೇದಗಳ ತಂದ 1ಮಂದರಗಿರಿಯಲಿ ಸಿಂಧುಮಥಿಸಿಸುಧೆತಂದು ಭಕ್ತರಿಗುಣಲೆಂದ 2ಭೂಮಿಯ ಕದಿದಾ ಖಳನನು ಮರ್ದಿಸಿಆ ಮಹಾಸತಿಯಳ ತಂದ 3ದುರುಳ ಹಿರಣ್ಯನ ಕರುಳುಬಗೆದು ತನ್ನಕೊರಳೊಳಗಿಟ್ಟಾನಂದದಿಂದ 4ಪುಟ್ಟನಾಗಿ ದಾನಕೊಟ್ಟ ಬಲಿಯ ತಲೆಮೆಟ್ಟಿ ತುಳಿದ ಬಗೆಯಿಂದ 5ಧಾತ್ರಿಯೊಳಗೆ ಮುನಿಪುತ್ರನಾಗಿ ಬಂದುಕ್ಷತ್ರಿಯರೆಲ್ಲರ ಕೊಂದ 6ಮಡದಿಗಾಗಿ ತಾ ಕಡಲನೆಕಟ್ಟಿಹಿಡಿದು ರಾವಣನ ಕೊಂದ 7ಗೋಕುಲದೊಳು ಹುಟ್ಟಿ ಆಕಳ ಕಾಯ್ದಶ್ರೀಕೃಷ್ಣನು ತಾ ಬಂದ 8ಛಲದಲಿ ತ್ರಿಪುರರ ಸತಿಯರ ವ್ರತದಫಲವನಳಿದ ಬಗೆಯಿಂದ 9ಧರೆಯೊಳುಪರಮ ನೀಚರ ಸವರಲು ಕು -ದುರೆಯನೇರಿದಕಲಿ ಚೆಂದ10ದೋಷದೂರ ಶ್ರೀಪುರಂದರ ವಿಠಲಪೋಷಿಪ ಭಕ್ತರ ವೃಂದ 11
--------------
ಪುರಂದರದಾಸರು
ನಿನ್ನನು ನಂಬಿದೆನು ನಾ ಸುಂದರ ಗೋವಿಂದನೇ | ಪನ್ನಗಾಶಯನಗೋಪಿಕಂದನೇ | ಮುಕುಂದನೆದುಷ್ಟರ ಶಿಕ್ಷಿಪಘೋರಕಾಲನೆ | ರಣಶೂರನೆ |ಶಿಷ್ಟರ ರಕ್ಷಿಪ ಭಕ್ತಪಾಲನೆ ಗುಣಶೀಲನೇ ಪಹೊಳೆವ ಮತ್ಸ್ಯಾವತಾರನೆನ್ನಿಸಿಇಳೆಯ ಭಾರವ ಕಳೆದನೆ ||ಜಲದಿವಾಸವಮಾಡಿಕೊಂಡು |ಜಲದಿನಾಲ್ದೆಸೆ ನಲಿದನೆ 1ಧರೆಯ ಬೆನ್ನಲಿ ಪೊತ್ತು ನೆಲಸಿದಕೂರ್ಮನೆ |ಸ್ಮøತಿಧರ್ಮನೇ ||ಶರದ ಸೇತುವೆ ಧರಿಸಿ ನಿಂದಾ |ಮರ್ಮವರಿತೇ | ಸುಶರ್ಮನೆ 2ರಸತಳದಿ ಕೆಸರೊಳಗೆ ಹೊರಳುವಹಂದಿಯೇ | ಭೂಮಿ ತಂದಿಯೇ ||ಬಸುರ ಬಗಿದಾ ಹೇಮನೇತ್ರನಕೊಂದೆಯೇ ಮಮ ತಂದೆಯೇ 3ಕಂಬದಲಿ ಮೈದೋರಿ ತರಳನ |ಪೊರೆದನೇ ನರಸಿಂಹನೇಕುಂಭಿನಿಯ ಬಾಧಿಸಲು ದುರುಳನ |ಕರುಳನೇ ಹರಿದೆಳದನೇ 4ಭೂಮಿಯಲಿ ಮೂರಡಿಯದಾನವ ಕೊಟ್ಟಾನೇಬಲಿಕೆಟ್ಟಾನೇವಾಮನನು ಎರಡಡಿಯ ತೀರಿಸಿ |ಮೆಟ್ಟುತಲಿವರಕೊಟ್ಟನೇ 5ಕೊರಳ ಕುತ್ತಿಯೆ ಮಾಲೆಮಾಡುತ್ತಾಹೆತ್ತವಳ ಕತ್ತರಿಸಿದೆ ||ಧರಣಿಪರ ಶಿರವದೆಭಾರ್ಗವ|ಸತ್ಯ ಭೂಮಿಯ ಸುತ್ತಿದೆ6ವನದಿ ರಾಮನ ಸತಿಯರಾವಣ ಕದ್ದನೇ ವಿಷ ಮೆದ್ದನೇ ||ವನದಿ ಕಪಿಗಳ ಕೂಡಿ ದೈತ್ಯರಕೊಂದನೆ ಸೀತೆಯ ತಂದನೇ 7ಸರಸಿಯಲಿ ಮೊರೆಯಿಡುವ ಗಜವ |ಕಾಯ್ದನೇ ಯಾದವನೇ ||ಧುರದಿ ಕಾಳಿಯ ಶಿರದಿ ನಲಿದ |ದೇವನೇ ಮಾಧವನೇ 8ಬತ್ತಲೆಯ ಬೌದ್ಧಾವತಾರನೆ |ಮೃತ್ಯು ತೆಕ್ಕಲ ಹೊಕ್ಕನೇ ||ಸತ್ಯ ಧರ್ಮವನರಿಯದಧರ್ಮರ |ಸೊಕ್ಕ ಮುರಿವನೆ ಪಕ್ಕನೆ 9, 10ಕಲಿಯುಗದ ಕಡುಪಾಪಿ ನರರನು |ಕಡುಗದಿಂದಲಿ ಕಡಿದನೇ ||ಕಾಲಭೈರವನಂತೆ ಕಲ್ಕ್ಯನು |ಕಿಡಿಯನುಗುಳುತ ಸುಡುವನೇ 11ದಾಸಜನರನು ಪೊರೆವಶ್ರೀನಿವಾಸನೇ | ಜಗದೀಶನೇ |ಶೇಷಶಯನನೆಂದೆನಿಪ |ಗೋವಿಂದನೇ | ಗುಣವೃಂದನೇ 12
--------------
ಗೋವಿಂದದಾಸ
ನೀನೆ ಗತಿಯೆಂದು ನಂಬಿದೆ ಕಾಯಯ್ಯ ಶ್ರೀನಿವಾಸ ಎನ್ನಹೀನಗುಣಗಳೆಣಿಸಲಿ ಬ್ಯಾಡ ದಯಮಾಡೊ ಶ್ರೀನಿವಾಸ 1ನಾನಾ ದುಷ್ಕøತಫಲವ ಉಂಡೆ ಇನ್ನಾರೆ ಶ್ರೀನಿವಾಸಎಂದೂ ದುರ್ವಿಷಯಕೆಮನ ಎರಗದಂತೆ ಮಾಡೊ ಶ್ರೀನಿವಾಸ 2ಸತ್ಕಥಾ ಶ್ರವಣ ಭಾಗ್ಯವ ಕೊಡುಅನುದಿನಶ್ರೀನಿವಾಸ ಎನ್ನಹೃತ್ಕಮಲದಿ ವ್ಯಕ್ತನಾಗಯ್ಯ ಶ್ರೀನಿವಾಸ 3ಪುತ್ರಕಳತ್ರಮಿತ್ರರು ನಿನ್ನ ದಾಸರೊ ಶ್ರೀನಿವಾಸ ತ್ವದ್ಭøತ್ಯಭೃತ್ಯರ ಪರಿಚಾರಕ ನಾನು ಶ್ರೀನಿವಾಸ 4ಅನಂತ ಜನ್ಮದ ಸತ್ಕರ್ಮ ನಿನಗೇವೆ ಶ್ರೀನಿವಾಸನಿತ್ಯದೀನೋದ್ಧಾರÀ ಪ್ರಸನ್ನವೆಂಕಟ ಮುಕುಂದ ಶ್ರೀನಿವಾಸ 5
--------------
ಪ್ರಸನ್ನವೆಂಕಟದಾಸರು