ಒಟ್ಟು 4612 ಕಡೆಗಳಲ್ಲಿ , 131 ದಾಸರು , 3293 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂಥ ಕೆಲಸಮಾಡಿ ಬಂದನೇ ಗೋಪ್ಯಮ್ಮ ನಿನ ಮಗ|| ಎಂಥ ಕೆಲಸ ಮಾಡಿ ಬಂದ ಕಾಂತ ಮಯೊಳಿಲ್ಲದಾಗ ಚಿಂತೆಲೇಶವಿಲ್ಲದೆ ಬಂದು ಚಿದುಗ ಬುದ್ಧಿತೋರಿ ಆಗ ಪ ಮಲಗಿ ಇರಲು | ಹೊಡಕೊಂಡು ಯಾರು ಹೋದರಂದನೆ ಈ ಮಾತು ಕೇಳಿ ಗಂಡ ಆಕಳ ಹುಡುಕ ಹೋದನೆ ಸುತ್ತಿ ಗಂಡನೆಂದು ಕೂಡೆಂದೆನ್ನ 1 ಬಟ್ಟೆ ಬಿಡಿಸಿ ಭಯವಿಲ್ಲವೆಂದನಮ್ಮ ಮಾನವುಳ್ಳ ಸ್ತ್ರೀಯರ ಸಂಗ ಸ್ನಾನಕ್ಕಾಗಿ ನದಿಗೆ ಹೋಗಿ ಸ್ನಾನಮಾಡೊ ನೀರೊಳು ನಿಂತೆನೆ ಆವೇಳೇ ಬಂದು ಕಾಣದ್ಹಾಗೆ ಶೀರಿ ತೆಗೆದನೆ ನಾನು ಕಾಣದೆ ಉಡಲು ಹೋದೆ ಕಾನನದೊಳು ಕೈಯ್ಯ ಪಿಡಿದು ಏನು ಮಾನ ಕಳದನಮ್ಮಾ 2 ಹೆಂಗಳೆರು ಎಲ್ಲ ಕೂಡಿ ಗಂಗಾಕ್ರೀಡೆನಾಡೋ ವೇಳೆ ಅಂಗವಸ್ತ್ರÀವನೆಲ್ಲ ತೆಗೆದನೆ ತೆಗೆದು ಮರದ ಟೊಂಗೆನೇರಿ ಕಾಡುತಿಹನೆ ಭಂಗ ಅಂಗವ್ರತವೆಲ್ಲ ಕೆಡಿಸಿರಂಗ ' ಹೆನ್ನೆ ವಿಠಲ’ ಶ್ರೀರಂಗಧಾಮನೆನೆಯಿರೆ 3
--------------
ಹೆನ್ನೆರಂಗದಾಸರು
ಎಂಥ ಗುರುಶಿಷ್ಯರ ಜೋಡಿಯು ನೋಡಿರಿಇಂಥವರ ಸ್ಮರಿಸಿದರೆ ಚಿಂತೆ ದೂರಾಗುವದು ಪಧ್ರುವರಾಜವಂಶದಿಂದಿಳೆಯೊಳಗೆ ಅವತರಿಸಿಸರ್ವದುರ್'ಷಯದಲಿ ವೈರಾಗ್ಯ ಬೆಳೆಸಿಬಾಲ್ಯದಲಿ ಪರಮಹಂಸಾಶ್ರಮ ಸ್ವೀಕರಿಸಿಶ್ರೀಪಾದ-ರಾಜರೆಂದೆನಿಸಿ ಮೆರೆವರು ನೋಡು 1ಶ್ರೀಶನನು ಕಂಬದಿಂದ ತಂದ ಪ್ರಲ್ಹಾದನೆವ್ಯಾಸಮುನಿಯಾಗಿ ಅವತರಿಸಿ ಬಂದುದೇಶಾಧಿಪತಿಗೆ ಬಂದಾಪತ್ತು ಪರಿಹರಿಸಿಶ್ರೀ ಪಾದರಾಜರಿಗೆ ಶಿಷ್ಯರಾದರು ನೋಡು 2ಜ್ಞಾನ ವೈರಾಗ್ಯ ಭಕ್ತಿಯು ತುಂಬಿರುವುದುದೀನಜನ ಮಂದಾರ ಭಕ್ತ ಪುರಧೇನು'ಜುೀಂದ್ರ ವಾದಿರಾಜರಿಗೆ ಗುರು ಪರಮಗುರುಭೂಮಪತಿ'ಠ್ಠಲನ ಕುಣಿಸಿದ ಮಹಾತ್ಮರು 3ಸೋದೆ ವಾದಿರಾಜರು
--------------
ಭೂಪತಿ ವಿಠಲರು
ಎಂಥ ಟವಳಿಗಾರನಮ್ಮ ಪ ನಂದ ಗೋಪ್ಯಮ್ಮ ಕೇಳೆ - ನಿನ್ನ ಮಗ ಎಂಥ ಟವಳಿಗಾರನಮ್ಮ ಅ ಹಣವ ಕೊಟ್ಟೇನೆಂದುಗುಣದಿಂದ ಎನ್ನ ತಂದಹಣವ ಕೇಳಿದರಲ್ಲಿ - ಹಣವೆ ?ತಡೆಯಲಾರದ ತಲ್ಲಣವೆ ?ಕುದುರೆ ಮೇಲಿನ ಪಲ್ಲಣವೆ ?ಇಲ್ಲ, ಬಾಯಿಗಿಟ್ಟ ಬೊಕ್ಕಣವೆ ? - ಹೋಗೆನುತಾನೆ 1 ಕೊಪ್ಪಾನೆ ಕೊಟ್ಟೇನೆಂದುಒಪ್ಪಿಸಿ ಎನ್ನ ತಂದಕೊಪ್ಪಾನ ಕೇಳಿದರಲ್ಲಿ - ಕೊಪ್ಪ ?ಊರಮುಂದಿನ ತಿಪ್ಪ ?ಕೇರಿಯೊಳಗಿನ ಕೆಪ್ಪ ?ಕೆರೆಯೊಳಗಿನ ಹುಳಿಸೊಪ್ಪ ? - ಹೋಗೆನುತಾನೆ2 ಬಳೆಯ ಕೊಟ್ಟೇನೆಂದುಬಲು ಮಾತಿನಲಿ ತಂದಬಳೆಯ ಕೇಳಿದರಲ್ಲಿ - ಬಳೆಯೆ ?ಊರ ಮುಂದಿನ ಗಳೆಯೆ ?ಗದ್ದೆಯೊಳಗಿನ ಕಳೆಯೆ ?ಕೈಕಾಲ ಹಿಡಿದು ಸೆಳೆಯೆ ? - ಹೋಗೆನುತಾನೆ 3 ವಾಲೆ ?ಕನ್ನಡಿಯ ಕಪೋಲೆ ?ಹೇಳು ಸುವ್ವಿ ಸುವ್ವಾಲೆ ?ನಿನ್ನ ಕಾಲಿಗೆ ಸಂಕೋಲೆ ? - ಹೋಗೆನುತಾನೆ 4 ಕಡಗವ ಕೊಟ್ಟೇನೆಂದುಸಡಗರದಿಂದ ತಂದಕಡಗ ಕೇಳಿದರಲ್ಲಿ - ಕಡಗ ?ಅಂಬರದ ಗುಡುಗ ?ಮುಂಗೈ ಮೇಲಿನ ಗಿಡುಗ ?ಎತ್ತಿನ ಮ್ಯಾಲಿನ ಧಡಗ ? - ಹೋಗೆನುತಾನೆ 5 ಬುಗುಡಿಯ ಕೊಟ್ಟೇನೆಂದುರಗಡು ಕಿವಿಹಿಂಡಿ ತಂದಬುಗುಡಿ ಕೇಳಿದರಲ್ಲಿ - ಬುಗುಡಿ ?ಪಾಂಡವರಾಡಿದ ಪಗಡಿ ?ಮೂಗಿಂದ ಸುರಿವ ನೆಗಡಿ ?ಛಿ ! ನೀನೆಂಥ ಧಗಡಿ ? - ಹೋಗೆನುತಾನೆ 6 ಆದಿಕೇಶವನ ಮೇಲೆಆಣೆಯಿಟ್ಟು ಕರೆತಂದಆಣಿ ಎಲ್ಲಹುದೆಂದು ತೋರ್ದಆನಂದದಿಂದಲಿ ಬೆರೆದಬೀದಿಗೆ ಬಂದು ಕರೆದಹೀಂಗೆ ಧರೆಯೊಳು ಮೆರೆದ - ಶ್ರೀ ಕೃಷ್ಣರಾಯ 7
--------------
ಕನಕದಾಸ
ಎಂಥ ದಯವಂತನೋ | ಮಂತ್ರ ಮುನಿನಾಥನೊ ಸಂತಸದಿ ತನ್ನನು | ಚಿಂತಿಪರಿಗೆ ಸುರಧೇನು ಪ ವರ ಪ್ರಹ್ಲಾದನು | ಮರಳಿ ಬಾಹ್ಲೀಕನು | ಶ್ರೀ ಗುರುವ್ಯಾಸರಾಯನೊ | ಪರಿಮಳಾಚಾರ್ಯನೊ 1 ಇರುವ ತುಂಗಾತಟದಲ್ಲಿ | ಬರುವ ತಾನು ಕರೆದಲ್ಲಿ ಕರಪಿಡಿದು ಪೊರೆವಲ್ಲಿ ಸರಿಗಾಣೆ ಧರೆಯಲ್ಲಿ 2 ದುರಿತ ಕಳೆವ ಶಕ್ತನು ತರಣಿ ನಿಭಗಾತ್ರನು | ಪರಮಸುಚರಿತ್ರನು 3 ಶಿಶುವಿಗವುಗರೆದನು | ವಸುಧಿ ಸುರರ ಪೊರೆವನು ಅಸಮ ಮಹಿಮನೊ | ಸುಶೀಲೇಂದ್ರ ವರದನೊ 4 ಭೂಮಿಯೊಳು ಖ್ಯಾತನು | ಶಾಮಸುಂದರ ಪ್ರೀತನು ಕಾಮಿತಾರ್ಥದಾತನು | ಸ್ವಾಮಿ ನಮಗೆ ಈತನು 5
--------------
ಶಾಮಸುಂದರ ವಿಠಲ
ಎಂಥ ಪಾಪಿ ನಾನು ಹರಿ ಹರಿ ಪ ಕರ್ಮ ತಿಂತಿಣಿಗಳ ಬಾಧೆಗಳನು | ಅಂತ್ಯಗಾಣದಾದೆನಯ್ಯ ಅ.ಪ ಪರಹಿತಾರ್ಥ ಮನದೊಳೆಣಿಸದೆ || ನರಕದುಃಖದೊಳು ಗೋಳಿಡಲು | ಬರುವರಾರು ಕಾಣದಿರಲು 1 ಪರ ಇರುತ ಮಾಯಾಬಲೆಯೊಳಗೆ ಬಿದ್ದೆ || ಕರೆದರಾರು ಬಾರದಿನಿತು | ಪರಿಯ ಭವಕಿಲ್ಬಿಷವನುಣುವ 2 ಶ್ವಾನನಂತೆ ನಾನು ತೊಳಲಿದೆ || ತಾನು ತನ್ನದೆಂದಧರ್ಮ ನಾ | ಏನನೆಂದರು ಕೇಳರಯ್ಯ 3 ಅನ್ಯರೆಂದು ಪರರ ನಿಂದಿಸಿ | ಪುಣ್ಯಹೀನನಾದೆನಯ್ಯ 4 ಸರ್ವವಿಧದಿ ಭಜಿಸಿ ನಿಜ | ಸರ್ವೇಶ ಶ್ರೀನಿವಾಸನೆನದೆ 5
--------------
ಸದಾನಂದರು
ಎಂಥ ಮಾತನಾಡಿದಿ ಎಲಾ ನೀನು | ಛೀ | ಸಂತನಾದ ಮೇಲೆ ಮುಂಚಿನದೇನೊ ಪ ಊರ ಮುಂದಿನ ಕೆರೆ ಭಾವಿಯ ನೀರು |ಊರೆಲ್ಲ ಬಳಕಿಗೆ ತಾವು ತರುವರು | ಪಾರಮಾರ್ಥಿಕರ ಪಾದೋದಕ ಮಾಡಲು | ನೀರೆಂದು ಅದಕಿನ್ನು ದಾರಾಡುವರು ? 1 ಕಲ್ಲಲ್ಲಿ ಲಿಂಗವ ಮಾಡಿದರೇನೊ | ಲಿಂಗವಲ್ಲದೆ ಕಲ್ಲು ಎಂಬುವರೇನೊ | ಬಲ್ಲ ಸತ್ಪುರುಷರ ಬಗೆಯನರಿತು | ತನ್ನಲ್ಲಿ ಬ್ರಹ್ಮವ ಕಂಡವನೀಗ ನರನೇನೊ 2 ಕಾಮರ ಅಡವಿಯೊಳಿರುವದಾ ತಂದು | ಕಾಮಿಸಿ ಪಾದುಕ ಮಾಡಲು ಎಂದು | ಸ್ವಾಮಿ ಸದ್ಗುರು ಭವತಾರಕ ಮೆಟ್ಟಲು | ಭೂಮಿ ಜನರಡ್ಡ ಬೀಳ್ವರಿದೇನೋ 3
--------------
ಭಾವತರಕರು
ಎಂಥÀ ಮಗನೆ ನಿಮ್ಮ ಗೋಪಮ್ಮ ಧ್ರುವ ನವನೀತ ಚೋರ ಜಾರ 1 ಎಳೆವನು ಹಾದಿ ಬೀದಿ ಯೊಳಗೆ ಸೆರಗ ಸುಳಹು ಕಂಡಾರೆಂದರೆ ತಾ ತಿರಗ 2 ಹಿಡಿದೇನೆಂದರೆ ಕೈಯೊಳು ಸಿಲುಕ ಮಾಡಿ ಮಾಡದಿದ್ಹಾಂಗ ಇವ ಬಲು ಠಕ್ಕ 3 ಹೇಳಬೇಕಿನ್ನಾರಿಗೆ ಈ ದೂರ ತಿಳಿದುಕೊಳ್ಳಮ್ಮ ಮಗನ ವಿಚಾರ 4 ಬಿಡ ಇವನೆಂದೂ ಪಿಡಿದವರ ಕೈಯ ಬಿಡದೆ ಸಲಹುತಿಹ್ಯ ಮೂಢಮಹಿಪತಿಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎಂಥವ ನಿವನಮ್ಮಾ ಬಾಲಕನಂತಿಹ ಗೋಪೆಮ್ಮಾ ಎಂಥವನಿವ ತನ್ನಂತತ ನ್ನಂತದೋರ ಗುಡದ ನಂತ ಮಹಿಮ ನರಕಾಂತಕ ದೇವಾ ಪ ವಾರಿಯೊಳಗ ಮನವಾರಿ ಕ್ರೀಡಿಸುತಿರೆ ಘೋರ ಪ್ರವಾಹದಿ ತೀರದಲೆಮ್ಮಾ ಆರು ಅರಿಯದಂತೆ ಸೀರೆನೆಗೆದು ಕೊಂಡು ಗಾರು ಮಾಡಿದ ಮರ ಸೇರಿದ ಕಾಣಮ್ಮಾ ನಾರೇರೆಲ್ಲರು ಕೂಡಿ ಸೀರೆ ಬೇಡಲು ಬಿಟ್ಟು ನೀರ ಮುಗಿದು ಕೈಯ್ಯದೋರೆರಡೆನವಾ 1 ಪುಣ್ಯ ಚರಣೆಸಳ ಗಣ್ಣ ಜಲಧರದ ಬಣ್ಣದ ಲೋಪ್ಪವ ಸಣ್ಣಪನೆಂದು ಬಣ್ಣಿಸಿ ಕರುವುತ ಹೆಣ್ಣೆಂದೊಪ್ಪುವ ತಿಣ್ಣ ಮೊಲೆಗಳನು ಉಣ್ಣೆಂದೂಡಿದಾ ಸಣ್ಣಿಸಿ ಕಳೆದ ಮುಕ್ಕಣ್ಣನ ಸಹಿನು2 ಇಂದು ವದನೆಯರು ಮುಂದಕ ಕದವನು ತಂದಿಕ್ಕಿ ಪೋಗೆರೆ ಮಂದಿರದಿಂದಾ ಸಂದಿಸ್ಯಾಗಳೆ ಆಂದದಿ ಗೋವಳ ವೃಂದ ನೆರಹಿಕೊಂಡು ಬಂದು ನೋಡಮ್ಮಾ ಛಂದದಿ ಬೆಣ್ಣೆಯನಿಂದು ಸೇವಿಸುತಿಹ ತಂದೆ ಮಹಿಪತಿ ನಂದನೋಡಿಯನು3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂಥಾ ಠೌಳಿಗಾರನಮ್ಮ ಗೋಪಮ್ಮ ನಿನ್ನ ಮಗ ನ್ನೆಂಥಾ ಠೌಳಿಗಾರನಮ್ಮ ಪ. ಎಂಥಾ ಠೌಳಿಗಾರ ಪಂಥಾದಿ ಬೆನ್ನಟ್ಟಿ ಬಂದು ನಿಂತಲ್ಲೆ ನಾನಾರೂಪವೆಂತು ತಾಳುವ ನೋಡೆ ಎಂಥಾ ಅ.ಪ. ನೀರೊಳು ಮೀಯಲು ಪೋದೆನೆ ಗೋಪಮ್ಮ ಸಾರಿ ಪಿಡಿಯಲು ಹೋದೆ ಆರು ಅರಿಯರೆಂದು ಪೊತ್ತು ಮರೆಯಾದನೇ ಗೋಪಮ್ಮ 1 ಗೋಪಿ ಧೂಳು ಕೆದರಿ ಕೋರೆ ತೋರುವನ ಖೂಳ ದೈತ್ಯನ ಸೀಳೆ ಕೇಳಿ ಕಂದನ ನುಡಿ ಭಾಳ ಕ್ರೂರ ಮೃಗ ಕೇಳಿದೊಡಲು ಭಯ ತಾಳಿ ಬಂದೆ ಇಂಥ2 ದೊರಕಿದನೆಂದೆ ತಿರುಕ ಬ್ರಹ್ಮಚಾರಿ ತಿರುಗಿ ನೋಡೆ ಥೋರ ಕೊಡಲಿ ಪಿಡಿದು ನಿಂತು ಮಾರುತಿ ಸೇವಿತನಾದ ಗಮನ ದೇವನು ಎಂಥಾ 3 ಚಿತ್ತಜನೈಯ್ಯನು ನಾನೆತ್ತ ಪೋದರು ಬಿಡ ಸುತ್ತಿ ಬಹನೆ ಕೃಷ್ಣಾ ಮುತ್ತ ತಾರೆನುತ ಕತ್ತಲೆಯೊಳು ಪೋದೆ ವಿಸ್ತರಿಸುವೆನೆಂತು ಗೋಪಿ ಇಂಥಾ 4 ಶ್ರೀಪತಿ ಶ್ರೀನಿವಾಸನ ಪಿಡಿದು ಗೋಪಾಲನ ಎಳತಂದೆ ನಿನ್ನೆಡೆಗೆ ತಾ ಪರಾರಿಯಾಗಿ ಗೋಪತಿ ಹಯನೇರಿ ಏಪರಿ ಪೋದನೊ ತಾಪತಾಳಲಾರೆ ಎಂಥಾ 5
--------------
ಸರಸ್ವತಿ ಬಾಯಿ
ಎಂಥಾ ದಯಾ ನಿಧಿಯೇ | ಸಂತತ ಭಕ್ತಿ ವಿಶ್ರಾಂತಿಯ ದೋರಿದ ಪ ಜ್ಞಾನಾಂಜ ನುಡಿದಾ | ಕಾಣಿಸಿ ಇದರ್ಹಿಡಿದಾ 1 ಮೂಲ ಮಂತ್ರದಳುದಿಂದಾ | ಹೇಳಲಿನ್ನೇನದ ಸ್ವಾನುಭವದ ಘೋಷಾ | ಫೇಳಗುಡಿಸಿ ನೋಡಿದಾ2 ಮುಂದತಿಯೊಳು ನೀಡಿದಾ | ಇಂದು ಧನ್ಯನ ಮಾಡಿದಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂಥಾ ನಿರ್ದಯನಾದ್ಯೋ ಎಲೆ ದೇವನೆ ಕಂತುಪಿತ ನಿನ್ನ ಅಂತ:ಕರುಣ ಎನ್ನ ಮೇಲೆ ಇಲ್ಲದೆ ಪ ಅಂತರಂಗದಿ ಮನದಿ ಅನುದಿನವು ಬಿಡದೆ ನಿಮ್ಮಾ ಚಿಂತನೆಯ ಮಾಡಿದರೆ ಚಿತ್ತಕರಗದೇಕೆ ಅಂಥ ಮಹಾದೋಷ ದತಿಶಯನಗೇನುಂಟ- ನಂತಗುಣ ಪರಿಪೂರ್ಣ ಆದಿನಾರಾಯಣ 1 ವಾಸುದೇವನೆ ನಿಮ್ಮ ವರ್ಣಿಸುವೆನು ವಸುಧಿಯೊಳು ಭೂಸುರರ ಪೋಷಿಸುವ ಪುಣ್ಯಪುರುಷಾ ಘಾಸಿಗೊಳಗಾಗಿ ನಿಮ್ಮ ಧ್ಯಾಸವೇಗತಿಯೆಂದು ಏಸೋ ಪರಿಯಲಿ ಭಜಿಸಿ ಈಶ ನಿನ್ನ ಕೃಪೆಯಾಗದೂ 2 ಸಕಲಲೋಕಾಧೀಶ ಸಕಲಭಾರಕರ್ತನಾಗಿ ಪ್ರಕಟ ಭಕುತರೊಳಗೆ ಪಾಲಿಸದೆ ಎನ್ನಾ ಮುಕುತಿದಾಯಕ ಹೆನ್ನ ವಿಠ್ಠಲ ನೀನೆ ಗೋವಿಂದ ಅಕಲಂಕ ಮಹಿಮ ನಿನ್ಹರುಷವನು ತೋರದಿನ್ನಾ 3
--------------
ಹೆನ್ನೆರಂಗದಾಸರು
ಎಂಥಾ ಪಾವನ ಪಾದವೋ ಕೃಷ್ಣಯ್ಯಾ ಇ-ನ್ನೆಂಥಾ ಚೆಲುವ ಪಾದವೊ ಪ. ಪಾದ ಇಂತು ಜಗದಿ ಕೇಳುಪಂಥದೊಳಿದ್ದ ಕುರುಪತಿಯ ಉರುಳಿಸಿದಅ.ಪ. ಹಲವು ಕಾಲಗಳಿಂದಲಿ ಮಾರ್ಗದಿಶಿಲೆ ಶಾಪ ಪಡೆದಿರಲುಒಲಿದು ರಜದಿ ಪಾವನಗೈದು ಕರುಣದಿಂದಬಲೆಯ ಮಾಡಿ ಸಲಹಿದ ಶ್ರೀಹರಿಯ 1 ಬಲಿಯ ದಾನವ ಬೇಡಿ ತ್ರೈಲೋಕವನಳೆದು ಏಕಾಂಘ್ರಿಯಲಿಬೆಳೆದು ಭೇಧಿಸಲಾಗ ನಳಿನಜಾಂಡವ ಸೋಕಿಚೆಲುವ ಗಂಗೆಯ ಪೆತ್ತ ಜಲಜಾಸನಾರ್ಚಿತ 2 ಚೆÉಂಡು ತರುವ ನೆವದಿ ಕಾಳಿಂಗನು-ದ್ದಂಡ ಮಡುವ ಧುಮುಕಿಚಂಡ ಕಾಳಿಂಗನ ಮಂಡೆಯೊಳು ಪಾದಪುಂಡರೀಕವನಿಟ್ಟು ತಾಂಡವನಾಡಿದ 3 ಸಂತತ ಸೌಖ್ಯವೀವ ಕಾವೇರಿಯಅಂತರಂಗದಿ ನೆಲೆಸಿಸಂತೋಷದಿಂದ ಅನಂತನ ಮ್ಯಾಲೆ ನಿಶ್ಚಿಂತೆಯೊಳು ಲಕುಮಿ ಭೂಕಾಂತೇರ ಸೇವಿಪ 4 ಒಲಿದು ಗಯಾಸುರನ ಶಿರದೊಳಿಟ್ಟುಹಲವು ಭಕ್ತರ ಪೊರೆದೆನೆಲೆಸಿ ಉಡುಪಿಲಿ ಎನ್ನ ಹೃದಯಕಮಲದಲಿತೊಲಗದೇ ಇರುತಿಪ್ಪ ಸುಲಭ ಹಯವದನ5 ನ್ನೆಂಥಾ ಚೆಲುವ ಪಾದವೊ ಪ. ಪಾದ ಇಂತು ಜಗದಿ ಕೇಳುಪಂಥದೊಳಿದ್ದ ಕುರುಪತಿಯ ಉರುಳಿಸಿದಅ.ಪ. ಹಲವು ಕಾಲಗಳಿಂದಲಿ ಮಾರ್ಗದಿಶಿಲೆ ಶಾಪ ಪಡೆದಿರಲುಒಲಿದು ರಜದಿ ಪಾವನಗೈದು ಕರುಣದಿಂದಬಲೆಯ ಮಾಡಿ ಸಲಹಿದ ಶ್ರೀಹರಿಯ 1 ಬಲಿಯ ದಾನವ ಬೇಡಿ ತ್ರೈಲೋಕವನಳೆದು ಏಕಾಂಘ್ರಿಯಲಿಬೆಳೆದು ಭೇಧಿಸಲಾಗ ನಳಿನಜಾಂಡವ ಸೋಕಿಚೆಲುವ ಗಂಗೆಯ ಪೆತ್ತ ಜಲಜಾಸನಾರ್ಚಿತ 2 ಚೆÉಂಡು ತರುವ ನೆವದಿ ಕಾಳಿಂಗನು-ದ್ದಂಡ ಮಡುವ ಧುಮುಕಿಚಂಡ ಕಾಳಿಂಗನ ಮಂಡೆಯೊಳು ಪಾದಪುಂಡರೀಕವನಿಟ್ಟು ತಾಂಡವನಾಡಿದ3 ಸಂತತ ಸೌಖ್ಯವೀವ ಕಾವೇರಿಯಅಂತರಂಗದಿ ನೆಲೆಸಿಸಂತೋಷದಿಂದ ಅನಂತನ ಮ್ಯಾಲೆ ನಿಶ್ಚಿಂತೆಯೊಳು ಲಕುಮಿ ಭೂಕಾಂತೇರ ಸೇವಿಪ 4 ಒಲಿದು ಗಯಾಸುರನ ಶಿರದೊಳಿಟ್ಟುಹಲವು ಭಕ್ತರ ಪೊರೆದೆನೆಲೆಸಿ ಉಡುಪಿಲಿ ಎನ್ನ ಹೃದಯಕಮಲದಲಿತೊಲಗದೇ ಇರುತಿಪ್ಪ ಸುಲಭ ಹಯವದನ 5
--------------
ವಾದಿರಾಜ
ಎಂಥಾ ಪಾವನ ಪಾದವೋ ಶ್ರೀರಾಮನ ದೆಂಥಾ ಚೆಲುವ ಪಾದವೋ ಪ ಸಂತತವು ಸಜ್ಜನರ ಪಾಲಿಸೆ ನಿಂತು ಧನುವನು ಧರಿಸಿ ಮೆರೆವ ಅ.ಪ ಮುನಿಪತಿ ನುಡಿ ಮನ್ನಿಸಿ ತಪೋವನಕ್ಕನುಜನೊಡನೆ ಗಮಿಸೀ ಮುನಿಯಾಜ್ಞೆಯಿಂ ಘೋರ ತಾಟಕಿಯನೆ ವಧಿಸಿ ವಿನಯದಿ ಯಜ್ಞರಕ್ಷಣೆ ಮಾಡಿ ಮುದವಿತ್ತ 1 ಘನಶಾಪವನು ಕಳೆಯೆ ಮುನಿಯಾಜ್ಞೆಯಿಂ ಘನಶಿಲೆಯ ಮೇಲಡಿಯಿಟ್ಟು ಘನತರ ಮಾನಿನಿಯನು ನಿರ್ಮಿಸಿ ಮೆರೆದ 2 ಗುಹನು ಗಂಗೆಯ ತಟದಿ ದೋಣಿಯ ತಂದು ಗಹನ ಶಂಕೆಯೊಳಂದು ಸಹಜಭಕ್ತಿಯಲಿ ನಿರ್ಮಲಗಂಗೆಯುದಕದಿಂ ದಹಹ ಪಾದರಜವನು ತೊಳೆಯಲೊಪ್ಪಿದ 3 ಹರಧನುವನು ಭಂಗಿಸಿ ಮಿಥಿಲೆಯಲಿ ವರ ವಿಕ್ರಮವ ಮೆರೆಸಿ ತರುಣಿ ಜಾನಕಿಯಂದು ಶಿರದಿ ನಿನ್ನಡಿಗಳಿ ಗೆರಗಲು ಘನ ಶಂಕೆಯಿಂ ಮಾಲೆಯರ್ಪಿಸಿದ 4 ಸಾಧುಗಳ ಪೊರೆಯೆ ಚರಣ ಪಾದುಕೆಗಳ ಶರಣ ಭರತಗಿತ್ತು ಬರಿಗಾಲಲಿ ನಡೆದ ರಘುರಾಮವಿಠಲನ5
--------------
ರಘುರಾಮವಿಠಲದಾಸರು
ಎಂಥಾ ಮಹಿಮನಿವನೆ ಗೋಪಾಲಕೃಷ್ಣ ಎಂಥ ಮಹಿಮನಿವನೆ ಪ. ಎಂಥಾ ಮಹಿಮನಿವನಂತ ಕಂಡವರಿಲ್ಲ ಕಂತು ಜನಕ ಸರ್ವರಂತರಂಗದೊಳಿಪ್ಪ ಅ.ಪ. ಕರಚರಣಗಳಿಲ್ಲದೆ ಇದ್ದರು | ಮುದುರಿ ಘುರುಘುರುಗುಟ್ಟುತಿಹುದೆ ವರಕಂಬೋದ್ಭವ ವಟು ಪರಿಶು | ಧರಿಸಿರುವನ ಚರಿಸಿ ಮಾವನ ಕೊಂದ ನಿರ್ವಾಣ ಹಯವೇರಿ ಶರಧಿಯೊಳಾಡಿ ಗಿರಿಯಡಿ ಓಡಿ ಧರೆಯನು ತೋಡಿ ಕರಳೀಡ್ಯಾಡಿ ಕರವ ನೀಡಿ ಭಾರ್ಗವ ದಶರಥ ಸುತ ಅಂಬರ ತೊರೆದ ರಾವುತ 1 ಮಂದರ | ಬೆಂಡಂತೆ ಧರಿಸಿ ವನಿತೆಯ ತಂದನೀ ಧೀರ ಘನ‌ಘರ್ಜನೆಯು ಗಂಗಾಜನಕ | ಜಮದಗ್ನಿಸುತ ವನಚಾರಿ ತುರುಪಾಲ ವನಿತೆರೊಂಚಕ ಕಲ್ಕಿ ಜನಿಸಿ ಜಲದಿ ಬೆನ್ನಲಿ ಗಿರಿಕೋರೆ ಘನ ಹೊಸಲಾಸನ ತಿರಿದನುಜನ ತರಿದ ಮಾತೆ ಕಪಿವೆರಸಿ ವೃಂದಾವನ ಚರಿಸಿ ದಿಗಂಬರ ಹರಿ ಏರಿದನೆ 2 ಸುತನಿಗಾಗಮವಿತ್ತನೆ | ಕ್ಷಿತಿಧರಧಾರಿ ಸುತನ ಮೂಗಿನೊಳ್ ಬಂದನೆ ಸುತವಾಕ್ಯ ಸತ್ಯವೆನಿಸಿ ಅತಿ ಕುಬ್ಜ ಕ್ಷಿತಿಯನಿತ್ತು ವ್ರತಧಾರಿ ವಸನ ಚೋರ ವ್ರತಭಂಗ ಏರಿ ತುರಂಗ ಸತಿಯನೆ ಪೊರೆದ ಸತಿಯಂತಾದ ಸತಿಯಳ ಸಂಗ ಸತಿಗರಿದಂಗ ಸತಿಯ ಬೇಡಿ ನೀಡಿ ಸತಿಯ ಕೂಡಿ ಜಾರ ಸತಿ ಹೆಗಲೇರಿದ 3 ವಾಸ ಜಲದಿ ಮೈ ಚಿಪ್ಪು | ಯಜ್ಞ ಸ್ವರೂಪ ಮಾನವ ಮೃಗರೂಪು ಆಸೆಬಡಕ ಮಾತೆ ದ್ವೇಷ ವನದಿ ವಾಸ ಪೋಷ ಪಾಂಡವ ಜಿನ ಮೋಸ ವಾಜಿ ಮೇಲ್ವಾಸ ನಾಸಿಕ ಶೃಂಗ ನಗಪೋತ್ತಂಗÀ ಮಾನವ ಸಿಂಗ ನೃಪರ ದ್ವೇಷ ಪೋಷಿ ಯಜ್ಞವೃಂದ ವಾಸಿ ಘಾಸಿವ್ರತ ಕಲಿಮುಖ ದ್ವೇಷಿ 4 ಅಮೃತ ಭೂಸತಿಯ ಪೊರೆದು ಪಾಪಿ ಕರುಳ್ಬಗೆದ ಜಲಪಿತ ಭೂಪರ ಕಾಡಿ ರಘುಭೂಪ ಸೋದರತಾಪ ಗೋಪ್ಯಕಲ್ಯಂತಕಾಲ ಗೋಪಾಲಕೃಷ್ಣವಿಠ್ಠಲ ಆಪಜವಾಸ ಆ ಪೃಥ್ವೀಶ ಆ ಪುತ್ರಪೋಷ ಆ ಪದ ಸರಿತ ಕೋಪಿ ಲಂಕೆ ಪುರತಾಪಿ ಗೋಪಿಕಾ ವ್ಯಾಪಿ ಮಾನಹೀನ ಘೋಟಕವಹನ 5
--------------
ಅಂಬಾಬಾಯಿ
ಎಂಥಾ ಮಹಿಮರು ನೋಡಿ - ಶ್ರೀ ರಾಘವೇಂದ್ರರು ಎಂಥಾ ಮಹಿಮರೋ ಪ ಕೊನೆಗಾಣೆನಿವರ ಅದಭುತ ಮಹಿಮೆಯನ್ನು ಅ.ಪ. ವರ ಮಂತ್ರಾಲಯದೊಳು ಬಂದು ನಿಂದಿಹರು 1 ನಿಮ್ಮ ಸ್ತುತಿಸಿ ಕೊಂಡಾಡುತಿಹರು 2 ಒಂದೇ ಮನದಿಂದ ಒಂದು ಪ್ರದಕ್ಷಿಣೆ ನಮಿಸಲು ಭವಬಂಧಗಳ ಬಿಡಿಸಿ ಆನಂದದಿ ಸಹಲುವರು 3 ಮೊದಲು ನಿಮ್ಮ ಸೇವಿಸೆ ಪಾವನಗೊಳುವರು4 ಪೀಡೆ ಪಿಶಾಚಿಗಳಿಂದ ಪೀಡಿತರಾಗುತ ನಿಮ್ಮಡಿಗೆರಗಲು ಕಡುದಯ ಮಾಡುವಿರಿ5 ಶ್ರೀರಾಘವೇಂದ್ರಾಯ ನಮಃ ಎಂಬ ದಿವ್ಯನಾಮವ ಪಠಿಸಲು ಪ್ರಭುಗಳು ಪಾವನ ಮಾಡುವರು 6 ಧರೆಯೊಳು ನಿಮ್ಮ ಸರಿಯಾರಿಹರೊ ಪ್ರಭು ಗುರುಸಾರ್ವಭೌಮರು | ಶ್ರೀ ರಾಘವೇಂದ್ರರು7
--------------
ರಾಧಾಬಾಯಿ