ಒಟ್ಟು 21316 ಕಡೆಗಳಲ್ಲಿ , 137 ದಾಸರು , 8969 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಹಿಮಾಂ ರಾಮಚಂದ್ರ ಅಚಲಾಂ ಭಕ್ತಿಂ ದೇಹಿ ಕಲ್ಯಾಣಸಾಂದ್ರ ಪ. ಶ್ರೀಹರಿ ನಾಗಾರಿವಾಹನ ಶ್ಯಾಮಲ- ದೇಹ ರಾಕ್ಷಸ ಸಮೂಹ ವಿದಾರಕ ಅ.ಪ. ಸಜ್ಜನ ಕಲ್ಪವೃಕ್ಷ ಪಾಪಾಂಕುರ- ಭರ್ಜನ ವಿಬುಧಪಕ್ಷ ಧೂರ್ಜಟಿಸಖ ದೂಷಣಾರಿ ದ್ಯುಮಣಿಕೋಟಿ- ಪ್ರಜ್ವಲಿಪ ಪರಮ ಜಗಜ್ಜೀವನಧಾಮ ಪೂರ್ಣಬ್ರಹ್ಮ ರಘುವಂ- ಜಯಾಕಾಂತ ಪ್ರಭುವೆ 1 ವರಾಹ ಪ್ರ- ಹ್ಲಾದವರದ ಗುಣಧಾಮ ಸಾಧುವಟುವೇಷವಿನೋದ ಭಾರ್ಗವ ಬಹು ಕ್ರೋಧಿ ಕ್ಷತ್ರಿಯಕುಲ ಭೇದಿ ರಾವಣಾಂತಕ ಕುವಾದಿಜನದುರ್ಬೋಧಬದ್ಧವಿ- ಶ್ರೀಧರ ರಮಾಮೋದಮಾನಸ 2 ಕಾಶಿಮಠಸ್ಥ ಯತಿ ಪರಂಪರ್ಯ- ಭೂಷಣ ಶುದ್ಧಮತಿ ಶ್ರೀ ಸುಕೃತೇಂದ್ರ ಸನ್ಯಾಸಿ ಪೂಜಿತಪಾದ ವಾಸುದೇವ ತವ ದಾಸ್ಯವ ಪಾಲಿಸು ಸುಭದ್ರ ಶ್ರವಣ ಪ- ಭವ ರುಗ್ಭೇಷಜನೆ ನರಕೇಸರಿಯೆ ಶ್ರೀ ವ್ಯಾಸ ರಘುಪತಿ 3 ಪಾರಗಾಣರು ನಿನ್ನಯ ಬ್ರಹ್ಮಾದ್ಯರು ಭೂರಿಗುಣದ ಮಹಿಮೆಯ ಸೂರಿಜನಪ್ರೀತ ಸೀತಾನಯನ ಚ- ಕೋರಚಂದ್ರನು ಮಹೋದಾರ ಶಾಙ್ರ್ಗಧರ ಮೀರಣಾತ್ಮಜವರದ ನತಮಂದಾರ ಕೈರವಶ್ಯಾಮ ರಾಮನ 4 ಪ್ರಣವರೂಪ ನಿರ್ಲೇಪ ನಿತ್ಯಾತ್ಮದು- ರ್ಜನವನೋದ್ದಹನೋದ್ದೀಪ ಮನುಕುಲಮಣಿ ಮುನಿಗಣ ಸಮಾಹಿತ ಜನಾ- ರ್ದನ ಬ್ರಹ್ಮಾದ್ಯಖಿಳ ಚೇತನರು ನಿನ್ನಾಧೀನ ಚಿದಾನಂದೈಕ ದೇಹನೆ ಭಕುತಿ ಭಾಗ್ಯವನು ಪಾಲಿಸು 5
--------------
ತುಪಾಕಿ ವೆಂಕಟರಮಣಾಚಾರ್ಯ
ಪಿಂಗಟ ಬೇಡವ್ವಾ ಪಿಂಗಟ ಸಂಗಟ ಬರುತಾದೆ ತಡಕೊಳ್ಳೆ ಪ ಕಂಗೆಡಿಸಿ ಬಲುಜವನ ದೂತರು ಭಂಗಬಡಿಪುದನು ನೀ ತಾಳೆ ಅ.ಪ ಸುಜನರ ಕಾಲ್ಕಸ ಮಾಡಿದಿ ಕುಜನರ ಮಾತಿಗೆ ಮರುಳಾದಿ ನಿಜವರಿದ್ಹೇಳಲು ಮೋರೆ ಮುರುಕಿಸಿದಿ ಅಜಾಂತಪರಿ ನೀ ಬಳಲುವಿ ನರಕದಿ 1 ನಾಶನ ಕಾಯಕ್ಕೆ ಮೋಹಿಸಿದಿ ಹೇಸದೆ ಪಾಪಕ್ಕೆ ಗುರಿಯಾದಿ ಈಶನ ದಾಸರನು ದೂಷಣ ಗೈದಿ ಸೀಸ ಕಾಸುವ ಯಮ ಯೋನಿದ್ವಾರದಿ 2 ಉನ್ನತಧಮ ತಿಳೀಲಿಲ್ಲ ಗನ್ನಗತಕವಯ ಕಳಕೊಂಡಿ ಇನ್ನೆಲ್ಲಿ ಕ್ಷೇಮ ನಿನಗ್ಹುಚ್ಚು ಇನ್ನರ ಶ್ರೀರಾಮ ಎನ್ನೂ 3
--------------
ರಾಮದಾಸರು
ಪಿಡಿ ಎನ್ನ ಕೈಯ್ಯ ರಂಗಯ್ಯ ಪ ಪಿಡಿ ಎನ್ನ ಕೈಯ ಪಾಲ್ಗಡಲ ಶಯನ ಮೋಹ ಮಡುವಿನೋಳ್ ಬಿದ್ದು ಬಾಯ್ಬಿಡುವೆ ಬೇಗದಿ ಅ ನೀರಜನಾಭಾ ನಂಬಿದೆ ನಿನ್ನ ನೀರಪ್ರದಾಭಾ ಕಾರುÀಣ್ಯ ನಿಧಿ ಲಕ್ಷ್ಮೀನಾರಸಿಂಹನ ಪರಿ ವಾರಸಹಿತ ಈ ಶರೀರದೊಳಡಗಿರ್ದು ಘೋರತರ ಸಂಸಾರ ಪಂಕದಿ ಚಾರು ವರಿವನ ದೂರ ನೋಡುವ ರೇ ರಮಾಪತೆ ಗಾರುಮಾಡದೆ ಚಾರುವಿಮಲ ಕರಾರವಿಂದದಿ 1 ಅನಿಮಿತ್ತ ಬಂಧೋ ನೀನೇ ಗತಿ ಗುಣ ಗಣಸಿಂಧೋ ವಿಧಿ ಭವಸಂಕ್ರಂ ದನ ಮುಖ್ಯ ವೇದ ಸನ್ಮುನಿ ಗಣಾರ್ಚಿತ ಪಾದಾ ಅನುಜ ತನುಜಾಪ್ತಾನುಗ ಜನನೀ ಸದನ ಸಂ ಹನÀನ ಮೊದಲಾದಿನಿತು ಸಾಕುವ ಘನತೆ ನಿನ್ನದು ಜನುಮ ಜನುಮದಿ 2 ಶ್ರೀ ಜಗನ್ನಾಥವಿಠ್ಠಲ ದ್ವಿಜರಾಜ ವರೂಥ ಓಜಕಾಮಿಕ ಕಲ್ಪ ಭೂಜ ಭಾಸ್ಕರ ಕೋಟಿ ತೇಜ ಮನ್ಮನದಿ ವಿರಾಜಿಸು ಪ್ರತಿದಿನ ಈ ಜಗತ್ರಯ ಭಂಜನನೆ ಬಹು ಸೋಜಿಗವಲಾ ನೈಜ ನಿಜನಿ ವ್ರ್ಯಾಜದಿಂದಲಿ ನೀ ಜಯಪ್ರದ ನೈಜ ಜನರಿಗೆ ಹೇ ಜಗತ್ಪತೇ 3
--------------
ಜಗನ್ನಾಥದಾಸರು
ಪಿಡಿದೆಲೆ ಬಿಡಬೇಡ್ಹುಡುಗಹುದು ಇದು ಕೆಡದ ವಸ್ತು ನಿಜ ಪಿಡಿ ಬಿಗಿದು ಪ ಎಡರುತೊಡರಿಗೆದೆಒಡೆಯದೆ ದೃಢವಿಡಿ ಜಡಭವ ತೊಡರನು ಕಡಿಯುವುದು ಅ.ಪ ಭಕ್ತಿಯಿಂದೆಂಬುವ ಗೂಟ ಜಡಿದು ಮಹ ಸತ್ಯವೆಂದೆಂಬ ಹಗ್ಗ ಸುತ್ತ ಬಿಗಿದು ಚಿತ್ತೆಂಬ ಗಂಟ್ಹಾಕು ಎತ್ತವದಲದಂತೆ ನಿತ್ಯ ಮುಕ್ತಿಸುಖ ಕೊಡುತಿಹ್ಯನು 1 ಸುಜನ ಸಂಗವೆಂಬ ಮಂದಿರದಿ ಮಹ ಭಜನವೆಂದೆಂಬುವ ಗೋದಿಲದಿ ನಿಜಧ್ಯಾನ ಮೇವು ಹಾಕಿ ಭುಜಶಾಯಿಪಾದ ನಿಜಧೇನುವನು ಕಟ್ಟಿ ಮಜದಲಿ ನಲಿಯೊ 2 ಆರಿಗೆ ಸಿಗದಂಥ ಒಡವೆಯಿದು ಸರ ದಾರನೆ ನಿನಗೆ ಸಿಕ್ಕಿಹ್ಯದು ಸಾರಸೌಖ್ಯಕ್ಕೆ ಮೂಲಧಾರನಾಗಿಹ್ಯ ಧೀರಶ್ರೀರಾಮಪಾದ ಶೂರನೆ ಬಿಡದಿರು 3
--------------
ರಾಮದಾಸರು
ಪಿಳ್ಳಂಕೇರಿಯ ವಾಸ ದಾಸ | ಕಾಯೊಮಲ್ಲಾರಿ ಮಹಿದಾಸ ದಾಸಾ ಪ ಎಲ್ಲ ಸಚರಾಚರದಿ ವ್ಯಾಪ್ತನು | ನಲ್ಲ ಕೃಷ್ಣನ ಸೇವೆ ಬಹಳದ ಸಲ್ಲಿಸಲು ಬಹುರೂಪ ತಾಳ್ದ ಪ್ರ | ಪುಲ್ಲ ವದನಾಂ ಭೋಜ ಹನುಮ ಅ.ಪ. ದಕ್ಷಿಣಾಕ್ಷಿಯ ವತ್ಸರೂಪಾ | ಸುರತ್ರ್ಯಕ್ಷಾದಿ ಸಂಸೇವ್ಯ ಭೂಪಾ |ಕ್ಷೋಭ್ಯತೀರ್ಥ ಶ್ರೀ ಯತಿಪಾ | ಗೊಲಿದುಅಕ್ಷಾರಿ ತೋರ್ದೆ ಈ ರೂಪಾ |ಕುಕ್ಷಿಯಲಿ ಪಾಪಾತ್ಮ ಪುರುಷನ | ಶಿಕ್ಷಿಸುತ ಶೋಭಿಸುತ ನಿತ್ಯಪಕ್ಷಿವಾಹನನಂಘ್ರಿ ಕಮಲವ | ಈಕ್ಷಿಸಲು ಸಹಕರಿಪ ಪ್ರಾಣಾ 1 ದುರುಳ ಅವನನ್ವಯದ | ಸಹಜಾತರನು ವಧಿಸಿ ಮೆರೆದ ಸ 2 ಸಾರ ಸಜ್ಜನರನ್ನು ಪೊರೆದ 3 ಹಂಸನಾಮಕ ಹರಿ ದ್ವಂದ್ವಾ | ಪಾದಪಾಂಸುವ ಧರಿಸಿ ಮೆರೆಯುವಾ |ಹಂಸಾಖ್ಯ ಜಪ ದಿನ ದಿನವಾ | ಪಟ್ಯತವಿಂಶತ್ಯೇಕ ಸಾಸಿರವಾ |ಹಂಸವಾಹನ ತಾತನೆನಿಸುವ | ಕಂಸಮರ್ದನ ಚರಣಕರ್ಪಿಸಿಸ್ವಾಂಶರೂಪವನಂತ ಧರಿಸುತ | ಶಂಸಿಸುವೆ ವೇದೋಕ್ತ ಅನುಕ್ತದಿ 4 ದೇವ ದೇವರ ದೇವ ದೇವಾ | ಗುರುಗೋವಿಂದ ವಿಠ್ಠಲ್ಲ ದೇವಾ |ಕಾವ ಕೊಲ್ಲುವ ಸ್ಥಿರ ಚರವಾ | ನಂಬುದಾವ ಬಲ್ಲನಿವನ ಮಹಿಮವಾ |ಭಾವಿ ಬೊಮ್ಮನೆ ರಮೆಯ ಮುಖದಿಂ | ಶ್ರೀವರನ ಮಹಿಮೆಗಳ ತಿಳಿದುಭಾವ ಶುದ್ಧಿಯ ಗೈದು ಸುಜನರ | ಸ್ವಾವಲಂಬಿಗಳೆನಿಸಿ ಪೊರೆವ 5
--------------
ಗುರುಗೋವಿಂದವಿಠಲರು
ಪೀಠಸಮರ್ಪಣೆಕಂ|| ಮಾನಸ ಪೂಜೆಯ ವಿರಚಿಸಿಶ್ರೀನಿಲಯನ ಚರಣಗಳಿಗೆ ಪಾವುಗೆಗಳ ನಾಂಆನತನಾಗುತಲೊಪ್ಪಿಸಿಭಾನುವಿನ ಪಥದಲಿಳುಹಿ ಬಿಂಬದಿ ಭಜಿಪೆಂಬಂದೀ ಪೀಠದಿ ನೆಲಸೊ ಹೃÀದಯಮಂದಿರದಿಂದಾ ಕರುಣದಿಂ ವೆಂಕಟರಾಯಾ ಪಪುರದೊಳು ವಿಮಲೆಯುತ್ಕುರುಷಣಿಯಗ್ನಿ ಯೊಳಿರುವಳು ಜ್ಞಾನೆ ದಕ್ಷಿಣದೇಶದಿನಿರುರುತಿಯೊಳು ಕ್ರಿಯೆ ವರುಣನೊಳ್ಯೋಗಾಖ್ಯೆಮರುತನೊಳ್ಪ್ರಹ್ವಿ ಸೋಮನೊಳ್ ಸತ್ಯೆುಹಳಾಗಿ 1ಈಶನೊಳೀಶಾನೆ ಮಧ್ಯದೊಳನುಗ್ರಹೋಪಾಸಿಕೆಯಾದಿಯಾಗಿರುತಿಹರುವಾಸುದೇವನೆ ನಮ್ಮನೊಲಿದು ರಕ್ಷಿಸುವರೆಸಾಸಿರ ನಾಮಸನ್ನುತನೆ ಸಂತಸದಿಂದ 2ಅನಲನೊಳ್ ಧರ್ಮ ನಿರುರುತಿಯೊಳ್ ಜ್ಞಾನವುತನುಗೊಂಡು ವೈರಾಗ್ಯ ಮರುತನೊಳುವಿನಯದಿಂದೈಶ್ವರ್ಯನೀಶದೇಶದಿ ಸೇವೆಗನುಕೂಲರಾಗಿ ಕಾದಿರುವರೆನ್ನೊಡೆಯನೆ 3ಮುಂದೆಯಧರ್ಮ ದಕ್ಷಿಣದೊಳಜ್ಞಾನವುಹಿಂದೆಡೆಯೊಳಗವೈರಾಗ್ಯ ತಾನುಇಂದುದೇಶದೊಳನೈಶ್ವರ್ಯನೊಂದಿರುವನುಇಂದೆಮ್ಮನೊಲಿದು ರಕ್ಷಿಸಲು ಗೋವಿಂದನೆ 4ಕಲಶದೊಳ್ ಗಂಗಾದಿ ನದಿಗಳು ಶಂಖದಜಲದೊಳು ಬ್ರಹ್ಮಾದಿಗಳ ತೀರ್ಥಸಂಘವುಒಲಿದಘ್ರ್ಯ ಪಾದ್ಯಾಚಮನ ಸ್ನಾನ ಶುದ್ಧಾಂಬುಗಳ ಪಂಚಪಾತ್ರೆಗಳೊಳು ನೆಲಸಿವೆ ಸ್ವಾಮಿ 5ಪುರುಷಸೂಕ್ತದಿಂದೆನ್ನ ಶರೀರದೊಳ್ಪೂಜಿಪವರಬಿಂಬದೊಳು ನ್ಯಾಸಗೈದಿಹೆನುಪರಮ ಮಂತ್ರಾಧಿದೇವತೆಗಳನೆಂಟು ಪನ್ನೆರಡಕ್ಕರದ ವಿದ್ಯೆುಂದಲು ಜಗದೀಶ 6ಗುರುವಾಸುದೇವಾರ್ಯರೂಪದಿ ಶ್ರೀರಂಗಪುರದ ಕಾವೇರಿ ತೀರದೋಳು ನೀನೆಕರುಣಿಸಿದತಿ ಗೋಪ್ಯ ಮಾರ್ಗದಿಂದರ್ಚಿಪೆತಿರುಪತಿ ಕ್ಷೇತ್ರದ ದೊರೆಯೆ ವೆಂಕಟರಾಯ 7ಓಂ ನಂದಗೋಪಪ್ರಿಯಾತ್ಮಜಾಯ ನಮಃ
--------------
ತಿಮ್ಮಪ್ಪದಾಸರು
ಪೀತಾಂಬರಧರ ದಶರಥಬಾಲಾ ಸೀತಾ ಮನೋಹರ ದಶಶಿರಕಾಲಾ ಪ ಭೀತಜನಾಶ್ರಯ ಮಣಿಮಯ ಮಾಲಾ ಶೀತಕರೋಪಮ ವದನವಿಶಾಲಾ ಅ.ಪ ಗೌತಮ ಮುನಿಸಂಪೂಜಿತ ಚರಣಾ ಖ್ಯಾತ ವಿಭೀಷಣ ಪರಮಾಭರಣಾ ಪಾತಕಹರ ದಾನವ ಸಂಹರಣಾ ವಾತಾತ್ಮಜಸಂಸೇವಿತ ಚರಣಾ1 ಮಂಗಳಮೂರ್ತಿ ಗರುಡ ತುರಂಗ ಸಂಗರಭೀಮ ಶುಭಾಂಗ ಕೃಪಾಂಗ ಗಂಗಾಧರನುತ ದಿವ್ಯರಥಾಂಗ ಮಾಂಗಿರಿರಂಗ ಮೋಹನಾಂಗ ನೀಲಾಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪುಟ್ಟಿದನು ಜಗದೀಶ | ಜಗಭಾರ ನೀಗಲುವೃಷ್ಣಿಕುಲದಲಿ ಈಶ | ದೇವಕಿಯ ಜಠರದಿಕೊಟ್ಟು ಅವಳಿಗೆ ಹರ್ಷ | ಕರುಣಾಬ್ದಿ ಭೇಶ ಪ ಅಟ್ಟಹಾಸದಿ ದೇವದುಂದುಭಿ | ಶ್ರೇಷ್ಠವಾದ್ಯಗಳೆಲ್ಲ ಮೊಳಗಲುಅಷ್ಟಮಿಯ ದಿನದಲ್ಲಿ ಬಲು ಉ | ತ್ಕøಷ್ಟದಲ್ಲಿರೆ ಗ್ರಹಗಳೆಲ್ಲವು ಅ.ಪ. ಪರಿ ದೇ-ವಕ್ಕಿಯಲಿ ಉದ್ಭವಿಸೀ | ಸಜ್ಜನರ ಹರ್ಷೀಸಿ ||ವಕ್ರಮನದವನಾದ ಕಂಸನು | ಕಕ್ಕಸವ ಬಡಿಸುವನು ಎನುತಲಿನಕ್ರಹರ ಪ್ರಾರ್ಥಿತನು ದೇ | ವಕ್ಕಿ ವಸುದೇವರಿಂದಲಿ 1 ದೇವ ಶಿಶುತನ ತಾಳೀ | ನಗುಮೊಗವ ತೋರಲುದೇವ ವಾಣಿಯ ಕೇಳೀ | ಅನುಸರಿಸಿ ಆದ ವಸುದೇವ ತನಯನ ಕೈಲೀ | ಕೊಂಡಾಗ ಬಂಧನಭಾವ ಕಳಚಿತು ಕೇಳೀ | ಶ್ರೀ ಹರಿಯ ಲೀಲೇ ||ಪ್ರಾವಹಿದ ಸರಿದ್ಯಮುನೆ ವೇಗದಿ | ಭಾವ ತಿಳಿಯುತ ಮಾರ್ಗವೀಯಲುಧೀವರನು ದಾಟುತಲಿ ಶಿಶು ಭಾವದವನನ ಗೋಪಿಗಿತ್ತನು 2 ವಿಭವ ||ತಂದು ಶಿಶು ಸ್ತ್ರೀಯಾಗಿ ಮಲಗಿರೆ | ಬಂದು ಕಂಸನು ಕೈಲಿ ಕೊಳ್ಳುತಕಂದನಸು ಹರಣಕ್ಕೆ ಯತ್ನಿಸೆ | ಬಾಂದಳಕ್ಕದು ಹಾರಿ ಪೇಳಿತು 3 ದುರುಳ ಭಯವನೆ ಪೊಂದಿ ತೆರಳುತತರಳರಸುಗಳ ನೀಗ ತನ್ನಯ | ಪರಿಜನಕೆ ಅಜ್ಞಾಪಿಸಿದ ಕಂಸ 4 ಆರೊಂದನೆಯ ದಿನದಿ | ಗೋಕುಲಕೆ ಬಂದಳುಕ್ರೂರಿ ಪೂಥಣಿ ವಿಷದಿ | ಪೂರಿತದ ಸ್ತನ ಕೊಡೆಹೀರಿ ಅವಳಸು ಭರದಿ | ಮೂರೊಂದು ಮಾಸಕೆಭಾರಿ ಶಕಟನ ಮುದದಿ | ಒದೆದಳಿದೆ ನಿಜಪದದಿ ||ಮಾರಿ ಪೂಥಣಿ ತನುವನಾಶ್ರಿತ | ಊರ್ವಶಿಯ ಶಾಪವನೆ ಕಳೆಯುತಪೋರ ಆಕಳಿಸುತ್ತ ಮಾತೆಗೆ | ತೋರಿದನು ತವ ವಿಶ್ವರೂಪ 5 ಭಂಜನ ||ಪಾನಗೈಯ್ಯುತ ದಾನ ವನ್ಹಿಯೆ | ಹನನ ವಿಷತರುರೂಪಿ ದೈತ್ಯನ ಧೇನುಕಾಸುರ ಮಥನ ಅಂತೆಯೆ | ಹನನ ಬಲದಿಂದಾ ಪ್ರಲಂಬನು6 ಪರಿ ಗೋವರ್ಧನ | ಶಂಖ ಚೂಡನ ಶಿರಮಣಿಯು ಬಲು ಅಪಹರಣ | ಅರಿಷ್ಟಾಸುರ ಹನನ ||ಹನನಗೈಯ್ಯಲು ಕೇಶಿ ಅಸುರನ | ಘನಸುವ್ಯೋಮಾಸುರನ ಅಂತೆಯೆ ಮನದಿ ಯೋಚಿಸಿ ಕಂಸ ಕಳುಹಿದ | ದಾನ ಪತಿಯನು ಹರಿಯ ಬಳಿಗೆ 7 ಬಲ್ಲ ಮಹಿಮೆಯ ಹರಿಯ | ಅಕ್ರೂರ ವಂದಿಸಿಬಿಲ್ಲಹಬ್ಬಕೆ ಕರೆಯ | ತಾನೀಯೆ ಕೃಷ್ಣನುಎಲ್ಲ ತಿಳಿಯುತ ನೆಲೆಯ | ಪರಿವಾರ ಸಹಿತದಿಚೆಲ್ವ ರಥದಲಿ ಗೆಳೆಯ | ಅಕ್ರೂರ ಬಳಿಯ ||ಕುಳ್ಳಿರುತ ಶಿರಿ ಕೃಷ್ಣ ತೆರಳುತ | ಅಲ್ಲಿ ಯಮುನೆಲಿ ಸ್ನಾನ ವ್ಯಾಜದಿ ಚೆಲ್ವತನ ರೂಪಗಳ ತೋರುತ | ಹಲ್ಲೆಗೈದನು ಗೆಳೆಯ ಮನವನು 8 ಬವರ | ಗೈವುದಕೆ ಬರ ಹರಿಹಲ್ಲು ಮುರಿಯುತ ಅದರ | ಸಂಹರಿಸಿ ಬಿಸುಡಲುಮಲ್ಲ ಬರೆ ಚಾಣೂರ | ಹೂಡಿದನು ಸಂಗರ ||ಚೆಲ್ವ ಕೃಷ್ಣನು ತೋರಿ ವಿಧ್ಯೆಯ | ಮಲ್ಲನನು ಸಂಹರಿಸುತಿರಲು ಬಲ್ಲಿದನು ಬಲರಾಮ ಮುಷ್ಟಿಕ | ಮಲ್ಲನನು ಹುಡಿಗೈದು ಬಿಸುಟನು 9 ಜಲಧಿ | ಆವರಿಸಿ ಬರುತಿರೆಹರಿಯ ಬಲ ಸಹ ಭರದಿ | ಸಂಹರಿಸಿ ಅವರನುಕರಿಯ ವೈರಿಯ ತೆರದಿ | ಹಾರುತಲಿ ಮಂಚಿಕೆಲಿರುವ ಕಂಸನ ಶಿರದಿ | ಪದಮೆಟ್ಟಿ ಶಿಖೆ ಪಿಡದಿ ||ಗರುಡನುರಗನ ಪಿಡಿದು ಕೊಲ್ಲುವ | ತೆರದಿ ಕೃಷ್ಣನು ಪಿಡಿದ ಕಂಸನ ಕರದಿ ಖಡ್ಗದಿ ಶಿರವ ನಿಳುಹಲು | ನೆರೆದ ಸುಜನರು ಮೋದಪಟ್ಟರು 10 ಮಂದ ಮೋದ ಪಡಿಸುವ 11
--------------
ಗುರುಗೋವಿಂದವಿಠಲರು
ಪುಟ್ಟಿದೆ ಭುವಿಯೊಳು ಬಹುದಿನ ಕಳೆದೆನೊಪುಟ್ಟಿಸ ಬೇಡವೆನ್ನ ಪ ಪಟ್ಟಾಭಿರಾಮನೆ ಪರಮಘಟ್ಯಾಗಿ ನಿನ್ನ ಪಾದಗಳ ನಂಬಿದೆ ದೇವ ಅ.ಪ ಎಂಭತ್ತು ನಾಲ್ಕು ಲಕ್ಷ ಯೋನಿಯಚೀಲಗಳಲಿ ಬಂದೆನೊ ಕುಂಭಿಣಿಯೊಳು ಪುಟ್ಟಿ ಬಹು ಪಾಪಗಳ ಮಾಡಿಕುಂಭೀಪಾಕದಿ ಬೆಂದೆನೊ ಅಖಿಳ ಸುರರೊಡೆಯನೆಅರ್ತಾರ್ತಿಹರನೆಂದು ಕೇಳಿ ಬಂದೆನು ನಾನು 1 ಜನಪಾಶ ಬದ್ಧನಾದೆಮೀನು ಮಾಂಸದಾಸೆಗ್ಹೋಗಿ ಸಿಕ್ಕಿದಂತೆಮೋಸ ಹೋದೆನೊ ಬರಿದೆಏಣವು ಕಿಂಕಿಣಿಧ್ವನಿಗೆ ಮರುಳಾದಂತೆಇಳೆಯೊಳು ಮಂಕಾದೆನೊಏನೆಂಬೆ ದಾಸರಿ ಕೋಡಗದಂದದಿಕುಣಿಯುವೆ ನಾನೆಲ್ಲ ಜನಗಳ ಮುಂದೆ 2 ಕಾಯ ಪೋಷಣೆಗಾಗಿ ಹೇಯಕರ್ಮಂಗಳಕಾಲ ಕಾಲದಿ ಮಾಡ್ದೆನೊಜಾಯಾದಿಗಳ ರಕ್ಷಣೆಮಾಡೆ ಅದರಿಂದಜಾಗರೂಕನಾದೆನೊನ್ಯಾಯರಹಿತನಾಗಿ ಗುರು ಹಿರಿಯರ ಪಾದಭಜನೆ ಮಾಡದೆ ಪೋದೆನೊಕಾಯಜನೈಯನೆ ಶ್ರೀಕೃಷ್ಣರಾಯನೆಕಾಯಬೇಕೆನ್ನಪರಾಧಗಳನು ದೇವ3
--------------
ವ್ಯಾಸರಾಯರು
ಪುಂಡರೀಕ ವರದ ವಿಠಲ | ಪೊರೆಯಿವನಾ ಪ ತೊಂಡ ವತ್ಸಲನೆ ಬ್ರಂ | ಹ್ಮಾಂಡಗಳ ಒಡೆಯಾ ಅ.ಪ. ಅನುವಂಶಿಕವಾಗಿ | ಆಧ್ಯಾತ್ಮ ಪರಿನಿಷ್ಠಧಾನವಾಂತಕ ಕೃಷ್ಣ | ಧೀನವತ್ಸಲನೇ |ನೀನೇಗತಿ ಎಂದೆಂಬ | ಸ್ವಾನುಭಾವದಿಇವಗೆಮಾನನಿಧಿ ತವದಾಸ್ಯ | ಧಾನಮಾಡುವುದೋ 1 ಪವನವಂದಿತದೇವ | ಕವನಶಕ್ತಿಯು ಇವಗೆದಿವಸದಿವಸಕ್ಕೆ ವೃದ್ಧಿ | ಭಾವವನೆ ಪೊಂದೀ |ಧೃವವರದ ನಿನ್ನಂಘ್ರಿ | ಸ್ತವನಮಾಳ್ವಂತೆಸಗಿಭವವನಿಧಿ ಉತ್ತರಿಸೊ | ಶರ್ವದೇವೇಡ್ಯಾ 2 ಮಧ್ವಮತ ದೀಕ್ಷೆಯಲಿ | ಶ್ರದ್ಧಾಳು ಎಂದೆನಿಸಿಸಿದ್ದಾಂತ ಪದ್ಧತಿಯ | ಶುದ್ಧಮತಿಯಿತ್ತೂಅಧ್ವೈತತ್ರಯ ತಿಳಿಸಿ | ಉದ್ದಾರ ಗೈಯುವುದೂಕೃದ್ಧಕಶ ಸಂಹಾರಿ | ಮಧ್ವವಲ್ಲಭನೇ 3 ಕರ್ಮ ಅಕರ್ಮಗಳ | ಮರ್ಮಗಳ ತಿಳಿಸುತ್ತನಿರ್ಮಲನು ಎಂದೆನಿಸೊ | ಪೇರ್ಮೆಯಲಿ ಇವನಾ |ಭರ್ಮಗರ್ಭನನಯ್ಯ | ನಿರ್ಮಮತೆ ವೃದ್ಧಿಸುತಪ್ರಮ್ಮೆಯಂಗಳ ತಿಳಿಸಿ | ಹಮ್ರ್ಯದೊಳು ತೋರೀ 4 ಭಾವಙ್ಞ ತೈಜಸನೆ | ನೀವೊಲಿದು ಪೇಳ್ದಂತೆಭಾವುಕಗೆ ಇತ್ತಿಪೆನೊ | ಈ ವಿಧಾಂಕಿತವಾ |ನೀವೊಲಿಯದಿನ್ನಿಲ್ಲ | ದೇವದೇವೋತ್ತಮನೆಕಾವಕರುಣೆಯೆಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಪುಂಡರೀಕನಯನ ಕೃಷ್ಣ ಪ ಕಂಡೆನಿಂದು ನಿನ್ನ ಬಹುದಿನ ಬಳಿಕ ಬ್ರ ಉದ್ದಂಡ ಮಹಿಮನೆ ಅ.ಪ ಪುಟ್ಟಿದಂದಿನಿಂದಾ ಕಷ್ಟವಪಟ್ಟೆನು ಗೋವಿಂದ ಸೃಷ್ಟಿಯೊಳಗೆ ನಾ ಪುಟ್ಟಿದನೇತಕೆ ಜಿಷ್ಣುಸಖನೇ ಎನ್ನ ಕೊನೆಗಾಣೆ 1 ಕರಿಗಿರೀಶ ನಿನ್ನ ಚರಣವ ನೆರೆ ನಂಬಿಹರನ್ನ ಪರಿ ಪೊರೆ ಕಂಸಾರಿಯೆ ಸ್ಥಿರ ಸಂಕಲ್ಪನೆ ಕರುಣಾಶರಧಿಯೆ 2
--------------
ವರಾವಾಣಿರಾಮರಾಯದಾಸರು
ಪುಣ್ಯ ಕ್ಷೇತ್ರವ ಸ್ಮರಿಸಿ ಧನ್ಯರಾಗಿರೋ ಪ ನಿಮ್ಮ | ಮುನ್ನೆ ಮಿಕ್ಕಾದಘ ಮಹ ಅನ್ಯಾಯ ಅಳಿದು ಅನು ಕಾರುಣ್ಯನಿಧಿ ಹರಿ ಒಲಿವಾ ಅ.ಪ. ಕ್ಷೇತ್ರ ಮಧುರೆ ಗೋಕುಲ ವೃಂದಾವನ ನಾಸಿಕ ತ್ರಿಯಂಬಕ ಮುದ್ಗಲಕ್ಷೇತ್ರ ಪರಾಶರ ಮಗನಾಶ್ರಮ ವಾರಣಾಸಿ ಭಾರದ್ವಾಜ ಕ್ಷೇತ್ರ ಅರುಣಾಚಲ ದರ್ಭಶಯನ ಮಧ್ಯಾರ್ಜುನ 1 ಸುಂದರ ಸಿಲಾಚಯ ಜಂಬುಕೇಶ್ವರ ಮಹಾನಂದಿ ಚಿದಂಬರ ವೀರ ರಾಘವ ದೇವ ಸ್ಕಂದ ನಿಬ್ಬಣಸ್ವಾಮಿ ಕಾರ್ತಿಕ ಖಗಶೇಷ ನಂದ ಯೇಕಾಂಬರೇಶ ಮಂದಾಕಿನಿ ಇಪ್ಪ ಸಾಗರ ಯಯಾತಿಗಿರಿ ಒಂದೊಂದು ಕೋಟೀಶ್ವರಾ 2 ಸಿರಿ ದ್ವಾರಕಾ ಸಿಂಹಾದ್ರಿ ನೀಲಕಂಠನಿಧಿ ವೀರ ನಾರಾಯಣವೋ ಕೇದಾರ ಕುರುಕ್ಷೇತ್ರ ಪುಷ್ಕರ ಕ್ಷೇತ್ರ ಮಾರಕಾಪುರಿ ಚನ್ನಾ 3 ಉದ್ಭವ ಆದಿ ಅನಂತ ಬಲಕ್ಷೇತ್ರ ಪುಂಡರೀಕಾಕ್ಷ ಸುಧಿಯೆಂದು ಕನ್ಯಾಕುಮಾರಿ ಮುದದಿ ಮಹಂಕಾಳಿ ಹಸ್ತಿಪಳಿನಾಥ ಪದ ಮುರಳಿ ತ್ರಿವಿಕ್ರಮ 4 ಕೂರ್ಮ ನೆಲ್ಲನಪ ಧರಣೀಧರ ಚಾಪವಾಣಿ ಕ್ಷೇತ್ರ ಶ್ರೀನಿವಾಸನೆದ ನಿಧಿ ಗೌರೀ ಮನೋಹರ 5 ಶಂಕರನ ಕ್ಷೇತ್ರ ಗೋಗರ್ಭ ಶೇತುವನ ಗಜಾರಣ್ಯ ಓಂಕಾರನಾಥ ದೇವಾ ವೇದಿ ಗೋಪಾಲನಿಧಿ ಅಲಂಕಾರ ಮುಕ್ತಿ ಕ್ಷೇತ್ರ 6 ಮಳೂರಪ್ರಮೇಯ ಶಿವಾ ಅಂತಕನಗೆ ದ್ವಾಪುರತೀರ್ಥ ನಿವರ್ತಿ ಅಂತು ಆದಿಶ್ರೀರಂಗ ನೀಲಾರಣ್ಯ ರಾಜವನ ನೈಮಿಷ ಭೋಕ್ತ 7 ಅಂದದಲಿಯಿಪ್ಪ ನಿಧಿ ಮಾಧವಸ್ವಾಮಿ ಮೇಲು ಘಟಿಕಾಚಲ ಬದರಿ ನರಸಿಂಹ ರವಿಸೇತು ಗಣ ಮುಕ್ತೇಶ್ವರ ಕಾಲದೂತ ಗೆದ್ದ ಕ್ಷೇತ್ರ ಭವಾನಿಗುಡಿ ವ್ಯಾಳನಿಧಿ ಮಹಾಲಕುಮಿ ರಘುನಾಥ ಶಿವಗಂಗೆ ಬಾಲಕೃಷ್ಣ ಕ್ಷೇತ್ರ ಕರವೀರ ಪುರ ವಿಶಾಲ ವಿಹಂಗಕ್ಷೇತ್ರ 8 ಪೇಳಿದುದಕ್ಕೆ ಆರಿಗೆ ಅಳವಲ್ಲ ನೆನಸೋದು ಮಾನವರು ಮೀಸಲಾಮನದಲ್ಲಿ ಅನಂತ ಜನುಮದ ದೋಷ ವಿ- ಪಾಲಿಸುವ ಕುಲಕೋಟಿಗಳ9
--------------
ವಿಜಯದಾಸ
ಪುಣ್ಯ ದೊರಕುವುದು ಅನು ಗಣ್ಯವಾಗಿದ್ದ ಸತಿಯಿದ್ದ ಜನರಿಗೆ ಪ ಬಡತನವಿದ್ದರು ನೆರೆಹೊರೆ ಮನೆಯಲ್ಲಿ ನುಡಿ ಬಿಚ್ಚಿ ಪೇಳದೆ ಸೌಮ್ಯಳಾಗಿ ಬಿಡದೆ ಮಾಡುವ ಗೃಹಕೃತ್ಯಂಗಳು ಜಗ ಅನುದಿನ 1 ವಿಪರೀತ ಕಾಲಗಳಟ್ಟಿದ ಕಾಲಕ್ಕು ಸ್ವಪನಾದಿಯಪ ಕಳವಳಿಸದಲೇ ಪತಿ ಸೇವೆ ಅಫಲದಲ್ಲಿ ಮಾಡಿ ಒಲಿದೊಲಿದಾಡುವ2 ಲಾವಣ್ಯ ಪುರುಷರ ಕಂಡರು ಮನದಲ್ಲಿ ಭಾವಿಸಬೇಕು ಸಹೋದರರು ಎಂದು ವಿಭೂತಿ ರೂಪವ ನಿತ್ಯ 3 ಬಂದು ತಂದರೆ ಸಾವಿರ ಮಾಡಿ ಚಿಂತಿಸಿ ಇಂದಿರೇಶನೆ ಪತಿರೂಪವೆಂದು ಅಂದದದಲಿದ್ದ ವಿಭವಾನುಸಾರ ಆ ನಂದವಾಗಿ ಸಂಸಾರದೊಳಗಿರೆ 4 ಪತಿಯ ಜನಕ ಮಾತೃ ಮಿಗಿಲಾದ ಜನರಿಗೆ ಹಿತವಂತಳಾಗಿ ನುಡಿಸಿಕೊಳುತಾ ಗಾತ್ರ ಸರ್ವದಾ ಪ್ರತಿದಿನ ಸುವಿನುವಳಾ ನಾರಿ ಅಧಿಕಾರಿ 5 ಚಕೋರ ಚಂದ್ರಮನಲ್ಲಿ ಮನಸು ಇಟ್ಟು ಸುಖಬಡುವಂತೆ ನಾನಾ ಪ್ರಕಾರ ಕಕುಲಾತಿಯಿಂದ ಕಾಮುಕಳಾಗದೆ ಮಹಾ ಭಕುತಿಯಿಂದಲಿ ಗುರು ಹಿರಿಯರ ಸಮ್ಮತ 6 ಸಂತಜನರೆಂಬ ಕ್ಷೀರಾಂಬುಧಿ ಮಧ್ಯ ಸಂತತ ಮೀನಿನಂದದಿ ಬೀಳುತಾ ಪತಿ ಧರ್ಮವಹಿಸಿ ಶ್ರೀ ಕಾಂತನ ಗುಣಕಥೆ ಕೇಳಿ ಪೊಗಳಲಾಗಿ 7 ನಾಮ ಮೊದಲು ಮಾಡಿ ಪ್ರಕೃತಿಯ ಪರಿಯಂತ ಪ್ರೇಮದಿಂದಲಿ ಗುಣಗಳ ಗುಣಿಸೀ ಕಾಮಾದಿ ಚತುರ್ವಿಧÀ ಪುರುಷಾರ್ಥ ತನ್ನಯ ಸ್ವಾಮಿಯಲಿಂದಲಿ ಸಂಪಾದಿಸುತಿಪ್ಪಾ 8 ಆವಾವ ಪ್ರಯೋಜನ ಮಾಡಲು ಸರ್ವದ ದೇವದೇವೇಶನಾಧೀನವೆಂದೂ ಭಾವದಲಿ ತಿಳಿದನ್ಯ ಕರ್ಮವ ಬಿಟ್ಟು ಪಾವನ ವಿಜಯವಿಠ್ಠಲನ ಭಕುತಿಯಿಂದಾ 9
--------------
ವಿಜಯದಾಸ
ಪುಣ್ಯ ಪಡೆಯೆ ನೀನು ಪೂರ್ಣೇಂದುವದನೆ ಪುಣ್ಯ ಪಡೆಯೆ ನೀನು ಪ ಕುಂದಣದಾರತಿ ಬೆಳಗಿ ಅಕ್ಷತೆನಿಟ್ಟು ಆ- ನಂದವಾಗಾಶೀರ್ವಾದ ಮಾಡ್ಹರಸುತಲಿ 1 ಅತಿ ಹರುಷದಿ ಗಂಡು ಸುತರನೆ ಪಡೆದು ನೀ ಪೃಥಿವಿನಾಳೆನುತ ದ್ರೌಪದಿ ಹರಸಿದಳು2 ಅಕ್ಕರದಿಂದ್ಹೆಣ್ಣುಮಕ್ಕಳ ಪಡೆದು ಪ- ಲ್ಲಕ್ಕಿನೇರೆನುತ ದೇವಕ್ಕಿ ಹರಸಿದಳು 3 ಕಟ್ಟಿದ್ದ ಮಾಂಗಲ್ಯ ಕರಿಯ ಕಾಜಿನ ಬಳೆ ಮುತ್ತೈದೆತನಕೆ ಸಾವಿತ್ರಿ ಹರಸಿದಳು 4 ಅನ್ನ ಗೋವ್ಗಳು ಕನ್ಯಾದಾನ ಮಾಡೆನುತ ಸಂ- ಪನ್ನ್ಯಾಗಿರೆನುತ ಅರುಂಧತಿ ಹರಸಿದಳು 5 ಆಯುಷ್ಯ ಆರೋಗ್ಯ ಶ್ರೇಯಸ್ಸು ಸೌಭಾಗ್ಯ ನೀ ಪಡೆ ಸುಖ ಶ್ರೀಮಹಾಲಕ್ಷ್ಮಿ ಹರಸಿದಳು 6 ಕಾಮಿತ ಫಲ ಇಷ್ಟದಾಯಕನಾದ ಶ್ರೀ ಭೀಮೇಶಕೃಷ್ಣರಾಯನ ಕರುಣದಲಿ 7
--------------
ಹರಪನಹಳ್ಳಿಭೀಮವ್ವ
ಪುಣ್ಯದ ಹಾದಿಯ ಪೇಳ್ವೆ ಪೇಳಿದಂದದಲಿರೆ ಪುಣ್ಯಲೋಕವು ನಿನಗಣ್ಣಪುಣ್ಯವ ಕೆಡುಗೊಡದಲೆ ನೀನು ನಡೆದರೆ ಪುಣ್ಯ ಪುರುಷನಹೆಯಣ್ಣ ಪ ಬಿಸಿಲೊಳಗಿದ್ದವರ ನೀನು ನೆರಳಿಗೆ ಕರೆದರೆ ಬಹಳ ಸುಖವು ನಿನಗಣ್ಣಹಸಿದು ಬಂದವರಿಗೆ ತುತ್ತನಿಕ್ಕಲು ನಿನಗೆ ಅರಕೆಯಿಲ್ಲದ ಅನ್ನವಣ್ಣ 1 ನೀರಡಸಿದವರಿಗೆ ನೀರನ್ನು ಎರೆದರೆ ನಿನಗೆಂದು ಕಷ್ಟವಿಲ್ಲಣ್ಣದಾರಿ ತಪ್ಪಿದವರಿಗೆ ದಾರಿಯ ತೋರಿಸೆ ಧಾವತಿ ನಿನಗಿಲ್ಲವಣ್ಣ 2 ಮನೆಯಿಲ್ಲದವರಿಗೆ ಮನೆಯ ಕೊಟ್ಟೊಡೆ ನಿನಗೆ ಮುಂದಿಹುದು ಮನೆಯಣ್ಣಇನಿತು ವಸ್ತ್ರವಿಲ್ಲದವಗೆ ವಸ್ತ್ರವನು ಕೊಡೆ ಏನು ವಿಪತ್ತು ನಿನಗಾಗದಣ್ಣ 3 ಬಡವರನು ಮುಂದಂತೆ ತಂದರು ನೀನೀಗ ಬಲವಂತನಾಗುವೆಯಣ್ಣನುಡಿಯಲು ಒಳ್ಳೆಯ ವಾಕ್ಯವ ನೀನೀಗ ನೋಯದಂತಿರುವೆ ಮುಂದಣ್ಣ4 ವನಗುಡಿ ಕೆರೆಬಾವಿ ಧರ್ಮ ಮಳಿಗೆ ಹಾಕೆ ಒಲಿವನು ಶಿವನು ನಿನಗಣ್ಣಘನ ಚಿದಾನಂದ ಸತ್ಪುರುಷರ ಸೇರಲು ಘಟ್ಟಿ ಮುಕ್ತಿಯು ನಿನಗಣ್ಣ5
--------------
ಚಿದಾನಂದ ಅವಧೂತರು