ಒಟ್ಟು 12057 ಕಡೆಗಳಲ್ಲಿ , 135 ದಾಸರು , 6158 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶರಣು ಶರಣುಶರಣು ದಶರಥ ರಾಮದೂತಗೆ ಪ ಶರಣು ಕುರುಕುಲಾಧೀಶಗೆಶರಣು ವೈಷ್ಣವ ಮತ ವಿಲಾಸಗೆಶರಣು ಮುಖ್ಯಪ್ರಾಣಗೆ ಅ ವಾರಿಧಿಯನು ವೇಗದಿ ದಾಟಿ ವನವ ಕಿತ್ತಿದಾತಗೆಮೇರೆಯಿಲ್ಲದೆ ಅಸುರರ ಸಂಹರಿಸಿದ ರಣಶೂರಗೆವಾರಿಜಾಕ್ಷಿ ಸೀತಾದೇವಿಗೆ ವರದ ಮುದ್ರಿಕೆಯನಿತ್ತಗೆಧೀರತನದಲಿ ಅಕ್ಷಕುಮಾರನ ಪ್ರಾಣವನು ಕೊಂಡಗೆ 1 ರಾಜಸೂಯವ ರಚಿಸಬೇಕೆಂದು ರಾಜರ ಸೀಳಿದಾತಗೆರಾಜಮುಖಿಯಳ ರಕ್ಷಿಸಿ ಮೃಗರಾಜಗೆ ಒಲಿದಾತಗೆತ್ರಿಜಗವಂದಿತ ದೇವಗೆ ಸಜ್ಜನಪ್ರಿಯ ಎನಿಪಗೆರಾಜ ಧರ್ಮಗೆ ಅನುಜನಾದಗೆ ರಾಜಪೂಜಿತ ರಾಜಗೆ2 ಧಾರಿಣಿಯೊಳು ದುರ್ವಾದಿ ದೈತ್ಯರ ಗಂಟಲಗಾಣವಾದಗೆಮೂರೇಳು ಮತವನೆಲ್ಲ ಮುರಿದ ಧೀರ ಮಧ್ವರಾಯಗೆಸಾರ ತತ್ತ್ವಗಳನೆಲ್ಲ ಶೋಧಿಸಿ ಸೂರೆ ಮಾಡಿದಾತಗೆಊರ್ವಿಯೊಳು ವರ ದೇವತಾದಿಕೇಶವ ದೊರೆ ದಾಸಗೆ 3
--------------
ಕನಕದಾಸ
ಶರಣು ಶಾರದೆ ವಾಣಿ ಪಡರಮಾನಂದದ ಕೇಣಿ ಸುರಸಕಲ ಕೀರ್ವಾಣಿ ಕಲ್ಯಾಣಿ 1 ವಿದಿತ ಸುವಿದ್ಯದಾನಿ ಸದಮಲ ಸುಪ್ರವೀಣಿ ಮದಮತ್ತಗಜಗಾಮಿನಿ ಕಲ್ಯಾಣಿ 2 ಸ್ಪಹಿತ ಸುಖಕಾರಿಣೀ ಸಹಕಾರಿ ನಿರಂಜನ ಮಹಿಪತಿಸುತ ಸ್ವಾಮಿನೀ ಕಲ್ಯಾಣಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶಾರದೆ ವಾಣೀ ಸರಸಿ ಜಾಸನ ರಾಣಿ ಶರಣು ವಿದ್ಯಾಂಬುಧಿಯೆ ಸರ್ವಗುಣಗಣನಿಧಿಯೇ ಶರಣು ಧೀನೋದ್ಫರಣಿ ಶುಭ್ರಾಂಬರಾವರಣಿ ಭವ ತಾರಣೀ ಶರಣಿ ಶೃತಿ ವಿಖ್ಯಾತೆ ಸಲೆ ಜಗತ್ರಯ ಮಾತೆ ಶರಣು ಶ್ರೀ ಧವಳಾಂಗೆ ಸುರವರಾರ್ಜಿತ ತುಂಗೆ ಶರಣು ಮಹಿಪತಿ ಕಂದ ನಾಸ್ಯದಿ ನೆಲಿಸಿಛಂದ ಸಲಹಮ್ಮ ಕರುಣದಿಂದ 1
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶಿರೀಶ ಹರೇ ಪ ಭುವನದಲಿ ಶೃತಿ-ಯಡಗೇ| ಯವಿಗಳಾಡಿಸದೇ| ಜವದಲಿ ಬಂದು ನೀ ತಮನನು ಕೊಂದೇ| ಕಾವೋದೋ ಎನ್ನಾ ಮತ್ಸ್ಯರೂಪಾ 1 ಸುರಸುರರು ಕೊಡಿ| ಶರಧಿಯ ಮಥಿಸುದಕಿ| ಕರುಣದಿ ಬೆನ್ನವನಿತ್ತೆ ನೀನಗತಿ| ಕಾವೋದು ಎನ್ನ ಕಮಠೆ ರೂಪಾ 2 ಹಿರಣ್ಯಾಕ್ಷನ ಕೊಂದು| ಧರೆಯನು ದಂತದಲೆ| ಧರಿಸಿದೆ ನೀ ಅನವರತಗಳಿಂದಲೇ| ಕಾವುದೋ ಎನ್ನ ವರಹಾ ರೂಪ 3 ಛಲದಿ ಪ್ರಹ್ಲಾದ ಕರಿಯೇ| ಕುಲಿಶ ಸಮುಗುರುದಲೆ| ಮೆಳೆತನ ಸೀಳಿದೆ ಕರಳ್ಳೊನಮಾಲೆ| ಕಾವುದೋ ಎನ್ನ|ನರಹರಿ ರೂಪ 4 ಚಂಡ ಬಲಿವವರದನೇ| ದಂಡ ಕಾಷ್ಟಕರನೇ| ಕುಂಡಲ ಸುಕಮಂಡಲ ಭೂಷಿತನೇ| ಕಾವುದೋ ಎನ್ನ ವಾಮನ ರೂಪ 5 ಸುಜನರ ಪ್ರತಿ-ಪಾಲಾ ರಾಜಾಕುಲಾಂತಕನೇ| ರಾಜಿಸುತಿಹ ವರ ಪರಶುಧರನೇ| ಕಾವುದೋ ಎನ್ನಾ ಭಾರ್ಗವರೂಪಾ6 ಋಷಿಯ ಮಖ ಕಾಯಿದು ಶಶಿಧರಧನು ಮುರಿದೇ| ದಶಮುಖ ಕುಂಭಕರ್ಣರ ಮರ್ದಿಸಿದೆ| ಕಾವುದೋ ಎನ್ನಾ ರಾಘವ ರೂಪ7 ಎಣೆಗಾಣದ ಮಡುವಿನಲಿ| ಫಣಿವರ ಫಣಿಮ್ಯಾಲ| ಕುಣಿದೆ ಆನಂದದಿ ಕೊಳಲನೂದುತ್ತಲೇ| ಕಾವುದೋ ಎನ್ನಾ ಯಾದವ ರೂಪ8 ಮೂರೆನಿಪ ಪುರದಲಿ| ನಾರೇಶ ದೃತವಳಿದೇ| ಭೂರಿ ಸಜ್ಜನ ಹೃದ್ವ ನಜ್ಜದೊಳಾಡಿದೇ| ಕಾವುದೋ ಎನ್ನಾ ಬೌದ್ದ ಸ್ವರೂಪಾ9 ಸಲಹಬೇಕೆಂದು ಜಗವಾ| ಇಳೆಯಾ ಭಾರರ ತರಿದೇ| ಸುಲಲಿತ ಕುದುರೆಯ ಏರಿ ಮೆರೆದೆ| ಕಾವಿದೋ ಎನ್ನ ಕಲ್ಕಿಸ್ವರೂಪ 10 ಸಹಕಾರಿ ಭಕ್ತರಿಗೇ| ಮಹಿಮೆ ದೋರಿದೆ ಹೀಗೆ| ಮಹಿಪತಿ ಸುತ ಪ್ರಭು ಸಲಹು ನೀಯೆನಗೆ| ಕಾವುದೋ ಎನ್ನಾ ಅನಂತರೂಪ 11
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶಿರೀಶ ಹರೇಗೋವಿಂದಾ ಪ ದಾನವ ಕುಲಸಂಹಾರಕಾ ದೀನ ತಾರಕಾ ದೀನ ತಾರಕಾ ಪರಮ ಪಾವನ ರೂಪಾ 1 ಈರೇಳು ಲೋಕದ ಜೀವನಾ ವರಪಾವನಾ ವಿನುತ ದಯಚರಣಾ2 ಭಯಹರ ಆನಂದಸಾಗರಾ ದಯ ಸಾಗರಾ ದಯಸಾಗರಾ ಗರುಡಗಮನ ವರ ಫಣಿಶಯನಾ3 ದುರಿತ ಕುಲಾಂಬುಧಿ ಶೋಷಣಾ ಖರದೋಷಣಾ ಖರದೋಷಣಾ ತನು ಪರ್ವತ ಕುತಿಲಿಶಾ4 ಸುರವರ ಮುನಿಜನ ಪಾಲನಾ ಧರಿಲೋಲನಾ ಧರಿ ಲೋಲನಾ ರಾಯಣ ಸರಜ ನೇತ್ರಾ5 ರವಿಕೋಟಿ ನಿಧನಂದ ನಂದನಾ ಭವಬಂಧನಾ ಪತಿ ಜನಕಾ6 ಅಸಮ ಪಯೋಧರ ಸುಂದರಾ ದಶಕಂಧರಾ ದಶಕಂಧರಾ, ಮರ್ಧನ ನಿರುಪಮ ಚರಿತಾ7 ಸಕಲ ವ್ಯಾಪಕ ಯದುನಾಯಕಾ ಸುಖದಾಯಕಾ ಸುಖದಾಯಕಾ ಮಹಿಪತಿ ನಂದನ ಪ್ರೀಯಾ8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶೇಷಾಚಲ ನಿವಾಸಗೆ | ಶರಣು ವರಹ ತಿಮ್ಮಪ್ಪಗೆ | ಶರಣು ತಿರುವೆಂಗಳೇಶಗೆ ಪ ಮಾಧವ | ನರಹರಿ ಮಧುಸೂದನಾ | ಅಚ್ಯುತ | ಗಿರಿಜನುತ ನಾರಾಯಣಾ 1 ಕ್ಷೀರ ವಾರಿಧಿಶಯನ ವಾಮನ | ಗೋಪಿ ಜನ | ನವನೀತ | ಚೋರ ರಿಪು ಸಂಹಾರ ಹರಿ ದಾಮೋದರ 2 ಗರಳ ತಲ್ಪನೆ | ಕರುಣಾಳುಗಳ ಒಡೆಯನೆ | ಸಿರಿ ವಿಜಯವಿಠ್ಠಲನ | ಚರಣ ಕಮಲಕೆ ನಮೋ ನಮೋ 3
--------------
ವಿಜಯದಾಸ
ಶರಣು ಶ್ರೀ ಗಣನಾಥ ಮೂಷಿಕೇಂದ್ರ ವರೂಢ ಶರಣು ವಿದ್ಯದ ಸತ್ರ ಲಂಬೋದರ ಶುಭಗಾತ್ರ ಶರಣು ವರದೋರ್ದಂಡ ಶುಂಡ ಮಂಡಿತ ಗಂಡ ಕುಂಡಲ ವಕ್ರತುಂಡಾ ಶರಣೂ ಸುರನರಧೇಯ ಸಿದ್ದೀಂದಿರಾ - ಪ್ರೀಯ ಶರಣು ವಿಘ್ನವಿನಾಶ ಏಕದಂತ ಪ್ರಕಾಶ ಶರಣು ಮಹಿಪತಿ ನಂದನಗ ನೀಡುವಾನಂದ ಶರಣು ಪಾರ್ವತಿಯ ಕಂದಾ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶ್ರೀ ಗುರುರಾಯ | ಶರಣು ಬುಧ ಜನಪ್ರೀಯ | ಶರಣು ಪಾವನ | ಶರಣು ನಮ್ಮಯ್ಯ ಪ ಧರಣಿಯೊಳಗ ವಿದ್ಯ ದಾವರಣವಿಕ್ಷೇಪದಿ ಹರಿಯ ಭವ ಜನುಮ ಮರಣ ಬಲಿಗೆ ಸಿಲುಕಿ | ಹರಣ ಹಾಕುತಿದೆ ನೋಡೀ ಕರುಣದಿಂದ ಭಯ ನೀಡಿ | ತರಣೋಪಾಯ ದೋರಿ ದೀನೋದ್ಧರಣ ಮಾಡಿ ಹೊರೆದೇ 1 ನರದ ಹುಳುವ ತಂದು ಮಂದಿರದೊಳಿಟ್ಟು | ತನ್ನಂಗ ತೆರದಿ ಮಾಳ್ಪಾ ಭೃಂಗಿಯ ತೆರದೆ ನಂಬಿದವರಾ | ಕರೆದು ಬೋಧಾಮೃತದ ನುಡಿವೆರದು ಚಿನುಮಯಾನಂದ ಮರದ ಠಾವ ತಪ್ಪಿಸಿ ಎಚ್ಚರದೊಳು ನಿಲಿಸಿದೇ 2 ಮುಕುತಿ ಸಾಧನವಾದಾ ಭಕುತಿ ನವ ವಿಧ ಶಾಸ್ತ್ರ | ಯುಕುತಿ ಪ್ರಾಬಲ್ಯ ವಿರಕ್ತಿಯನಗಿಲ್ಲಾ | ಶಕುತ ಗುರು ಮಹಿಪತಿಯ ಭಕುತ ನೆನಿಸಿದಕಿನ್ನು ಅಕುತೋ ಭಯ ಹೊಂದುವಾ ಶಕುತಿ ನೀಡಯ್ಯಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶ್ರೀ ಗುರುಲಿಂಗ ಶರಣು ಮುನಿಜನಸಂಗ ಶರಣುಭವ ಭಯ ವಿಭಂಗಾ ಪ ಪಾವನಿ ಜಾನ್ಹವಿಯ ತೀರದಲಿ ಕಾಶೀ | ಪುರ ವಿಶ್ವನಾಥನೆನಿಸೀ | ಹರುಷದಲಿ ನಿಂದು ಮತ್ತೊಂದು ರೂಪದಲಿ ತೆರಳಿ | ಧರೆಯ ದೇಶವ ನೋಡುತಾ ಬರುತಾ 1 ಮೊದಲೆ ತಾ ಕೃಷ್ಣ - ವೇಣಿ ಮ್ಯಾಲುತ್ತರವಾಹಿನಿ | ಸದಮಲ ಸುಖ ಕಾರಿಣೀ | ಇದ ನರಿತು ನಡಿ ಮಧ್ಯೆ - ಉತ್ತರೇಶ್ವರ ನೆನಸಿ | ಮುದದಿಂದ ಬಂದು ನಿಂದು || 2 ಸಖನ ದರುಶನ ನೆವದಿ ಬರುತಿರಲು ನಾ ನಿಮ್ಮ ಪ್ರಕಟದಲಿ ಕಂಡೆ ನಿಂದು | ಭಕುತಿಯಚ್ಚರ ನೀಡು ಗುರು ಮಹೀಪತಿ ಸ್ವಾಮಿ | ಸಕಲ ಸುರರಾಜ ಮಾದ್ಯ ಧನ್ಯಾ || 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶ್ರೀ ನಂದನೇಶ್ವರ | ಪಾಲಿಸು ಜಗದೀಶ್ವರ | ಶರಣು ಶ್ರೀ ನಂದನೇಶ್ವರ ಪ ಶರಣು ಶ್ರೀ ಗುರುವರ ಗಂಗಾಧರ | ಕರ ಕಪಾಲಧರ ಹರ ಮೃತ್ಯುಂಜಯ ಅ.ಪ. ತಂದೆ ನಿನ್ನಯ ಪಾದವ | ಮರೆತಿಹುದರಿಂದ | ನಿಂದ ಹಲವಂಗದಲಿ ಭವಭವದಿ || ನೊಂದು ಬಂದೆ ನಾನಿಂದೀ ಭವದೊಳು | ಹೊಂದಿ ತವಾಂಘ್ರಿಯನಂದದಿ ಭಜಿಸುವೆ 1 ಭೇದ ಬುದ್ಧಿಯ ಮಾನವರು | ವೇದ ಶಾಸ್ತ್ರದ| ಹಾದಿಯರಿಯದ ಮತ್ಸರರು || ಸಾಧುಗಳೊಡನೆ ವಿರೋಧವನೆಣಿಸುವ | ಬಾಧಕರಾದರು ಹೇ ದಯಾನಿಧಿಯೇ 2 ತೊಡಕುಗಳನ್ನೆ ಬಿಡಿಸಿ | ಬಾಧೆಗಳ ವಾರಿಸಿ | ಕಡು ದುಷ್ಟಾತ್ಮರ ಶಿಕ್ಷಿಸಿ | ಎಡೆಬಿಡದೆನ್ನ ಮನೋರಥ ಸಲಿಸುತ | ದೃಢತರ ಭಕುತಿಯ ಕೊಡು ಕೃಪೆಯಿಂದಲಿ 3 ಪಾದ | ಮುಕುತಿ ಸಂಪದ ಪಾಲಿಸೊ || ಶಕುತಿಯೊಳಗೆ ನೀ ಯುಕುತಿಯಿಂದ ನಿಜ | ಸುಖದ ಪದವಿಯೊಳು ಪ್ರಕಟದಿ ಪೊರೆಯೈ4 ಯೋಗಿಗಳರಸ ನೀನೆಂಬ | ಬಿರುದುಗಳ ತೋರಿಸು- | ತೀಗೆನ್ನಪರಾಧವ ಕ್ಷಮಿಸೆಂಬ || ರಾಗದ ನುಡಿಯೊಳೆನ್ನಾಗಮನವೊಪ್ಪಿಸು- | ತೀಗ ಸದಾನಂದ ಯೋಗಾಂತರ್ಗತ 5
--------------
ಸದಾನಂದರು
ಶರಣು ಶ್ರೀ ಪಾರ್ವತಿದೇವಿಗೆ ಶರಣು ಶಾಂಭವಿಗೌರಿಗೆ | ನಮ್ಮ ಶರ್ವಾಣಿಗೆ ಪ ಲಂಬ ಕರ್ಣನ ಬಿಂಬಛಿದ್ರನ ಸಂಭ್ರಮದಿ ಪಡೆದಮ್ಮಗೆ ಶಂಬರಾರಿಯ ಅಂಬಿಗಾಹರ ನಂಬಿದಾ ಪಟ್ಟದರಸಿಗೆ 1 ಅಮಿತ ಮಹಿಮಳೆ ಜ್ಯೋತಿ ಆದಿಶಕ್ತಿ ದುರ್ಗಾಂಬೆಗೆ ಹೇಮವರ್ಣ ಭವಾನಿಗೆ 2 ಹೊಡೆವ ಮೃಡಾಣಿಗೆ ಸ್ಮರಿಸದವರನ ಕಾಯ್ವಳೆ 3
--------------
ಹೆನ್ನೆರಂಗದಾಸರು
ಶರಣು ಶ್ರೀ ವೈಕುಂಠನಾಮಕ ಶರಣು ಶ್ರೀ ಪುರುಷೋತ್ತಮ ಶರಣೂ ಶ್ರೀಧರ ಗರುಡವಾಹನ ಶರಣು ವೇಂಕಟನಾಯಕ ಪ ಮಾಧವ ಪದುಮಯನಾಭ ಜನಾದರ್Àನ ಧರಣಿಧರ ಕರಿವರದ ವಾಮನ ವೈರಿಹರ ಬಲಿಭಂಜನ 1 ಅಚ್ಯುತ ಶೈಲಧರ ನಾರಾಯಣ 2 ನಿಖಿಳ ಸುರಗಣ ಸೇವಿತ ವಿರಿಂಚಿ ಸನ್ನುತ ವಿಜಯವಿಠ್ಠಲ ನಮೋ ನಮೋ3
--------------
ವಿಜಯದಾಸ
ಶರಣು ಸಹಜಭಾವ ಸಿರಿಯರ ಜೀವ ಶರಣು ಶರಣು ದೇವ ದೇವ ಪ ಶರಣು ನಿನ್ನ ಚರಣಸೇವೆ ಕರುಣಿಸೆನಗೆ ನಿರುತದಭವ ಪರಮಪಾವನ ನಿಮ್ಮ ಚರಿತ ಕರುಣಿಸೆನ್ಹøದಯಕ್ಕೆ ಸತತ ಪೊರೆಯೊ ಪ್ರೇಮದಿ ದುರಿತಪರ್ವತ ತರಿದು ತೊರೆಸಿ ಜಗದ ಮಮತೆ ಅ.ಪ ಸಾರ ಸುರಸಮೂಹಸೇವಿತ ಮಾರಾರಿವಿನುತ ಕ್ಷೀರವಾರಿಧಿ ಸುತೆಯ ಪ್ರಿಯನಾಥ ಸನಕಾದಿನಮಿತ ಸೇರಿ ಭಕ್ತರಗಣದಲಿ ಗುಪ್ತ ನಲಿಯುವಿ ಮಮತೆ ತೋರಿ ಎನ್ನನು ಮಾಡು ಪಾವನ ಮೀರದ ಸಂಸಾರಬಂಧನವಾರಿಯ ದಾಂಟಿಸುಯೀಕ್ಷಣ ಸೇರಿಸದೆ ಎನ್ನ ಮಾಯಾಜಾಲದಿಂ ಸೇರಿಸು ನಿಜಜ್ಞಾನ ದಯದಿ 1 ವೇದವೇದಂಗಳಿಗೆ ಅಗೋಚರ ವೇದಂಗಳಾಧಾರ ವೇದವೇದ್ಯಮಳೈರ್ಕ ಪರತರ ವೇದಗಳ್ಹಿತಕರ ವೇದವೇದಾಂಗ ಶ್ಯಾಮಸುಂದರ ವೇದಾದಿ ಮನೋಹರ ವೇದವಿದ್ಯೆ ಬೋಧಿಸಯ್ಯ ವೇದಸಾಧನ ತೋರಿಸಯ್ಯ ವೇದಮಂತ್ರ ಸಿದ್ಧಿಸಯ್ಯ ವೇದವೇದಾಂತದೊಳು ಗೌಪ್ಯವಾದ ತತ್ವದ ಮೂಲ ತಿಳಹಿ ವಾದಬುದ್ದಿಯ ನೀಗಿಸಿ ನಿಮ್ಮ ಪಾದಭಕ್ತಿಯ ಕರುಣಿಸಭವ 2 ಭುವನತ್ರಯದ ಪರಮ ಸುಸೂತ್ರ ವಾರಿಜನೇತ್ರ ಭುವನತ್ರಯದ ಪಾವನ ಸ್ತೋತ್ರ ಪರಮಪವಿತ್ರ ಭುವನಜಾತೆಯ ಮೋಹದ ಮಿತ್ರ ವನರುಹ ಗಾತ್ರ ಭುವನದ್ಹತ್ತವತಾರ ದೇವ ಭುವನವೀರೇಳು ಹೊತ್ತು ಆಳುವ ಜಯವ ಪೊಂದಿಸಿ ನಿಮ್ಮಯ ಕರುಣದೊರಕಿಸಿ ದಯದಿ ಮುಕ್ತಿಯ ಕೊಡು ಶ್ರೀರಾಮ 3
--------------
ರಾಮದಾಸರು
ಶರಣು ಹೈಮವತೀಶ ಶಿವಶಂಭು ಅವಿನಾಶ | ಶರಣು ಧನಪತಿ ಮಿತ್ರ ಪಾವನತರಚರಿತ್ರ | ಶರಣು ದಾನವವಿಪಕ್ಷಾ || ಶರಣು ಕರ್ಪೂರ ಗೌರಾಂಗ ಗುಣಮಂದಾರ | ಶರಣು ಶೃತಿಪೃತಿಪಾದ್ಯಯೋಗಿಮನಕಾಭೇದ್ಯ | ಶರಣು ಆನಂದ ಕಂದಾ ||
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಹೊಕ್ಕೆನು ನಿನ್ನ ಚರಣ ಕಮಲಕ್ಕೆ ನಾ ಗುರುಸತ್ಯಬೋಧರಾಯಾ ಕರುಣಿಗಳರಸನೆ ತರಳನ ಮೊರೆ ಕೇಳಿ ಪೊರೆವುದು ಎನ್ನ ಜೀಯಾ ಪ ಬೇಡಿಕೊಳ್ಳಲು ಬಾಯಿಬಾರದೋ ನಾ ಹಿಂದೆ ಮಾಡಿದಪರಾಧವ ನಿನಗೀಡೆ ದಯಮಾಡೆ 1 ಪುಟ್ಟದ ಪುಟಕ್ಕಿಕ್ಕಿದ ಚಿನ್ನದಂತಿಹ ಶ್ರೇಷ್ಠ ವೈಷ್ಣವ ಕುಲದಿ ಇಡುವುದೆನ್ನೊಳು ದಯಾಳು 2 ಮರುತ ಮತವ ನಂಬಿ ನಡೆವರ ಪದಧೂಳಿ ಧರಿಸುವ ಭಾಗ್ಯವನೇ ಗುರುವರ್ಯ ಕರುಣಿಸು ಹನುಮನಯ್ಯನ ಪಾದಸರಸಿಜಭೃಂಗ ನೀನು ಸುರಧೇನು 3
--------------
ಹನುಮೇಶವಿಠಲ