ಒಟ್ಟು 19445 ಕಡೆಗಳಲ್ಲಿ , 133 ದಾಸರು , 8422 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೇಡುವೆನು ಶ್ರೀಕೃಷ್ಣ | ಕಾಡುತಿಹ ಭವರೋಗಓಡಿಸುವುದು ತಡೆಯದೇ ಪ ನಾಡಾಡಿ ದೈವಗಳ | ಬೇಡ್ವನಲ್ಲವೊ ಕೃಷ್ಣನೋಡೆನ್ನ ದಯದಿಂದ | ಸಾರ್ವಭೌಮಾ ಅ.ಪ. ಪರ ಕಂಬು ಚಕ್ರಾಂಕಿತನೆನಂಬಿಹೆನೊ ನಿನ್ನ ಪದವ ||ಕುಂಭಿಣಿಯ ಪರಿಪಾಲ | ಅಂಭ್ರಣಿಯ ಸುವಿಲೋಲಇಂಬಿಟ್ಟು ವದಗಿಸುತ | ಸಂಭ್ರಮದಿ ಕಾಯೋ | ಕರುಣೀ 1 ಪ್ರೇರ್ಯ ಪ್ರೇರಕ ನೀನೆ | ಬಾಧ್ಯ ಬಾಧಕ ನೀನೆಸೇವ್ಯ ಸೇವಕನೆ ಹರಿಯೇ ||ವಾಪ್ಯ ವ್ಯಾಪಕ ಸ್ವಾಮಿ | ಪೋಷ್ಯ ಪೋಷಕ ರೂಪಿಕಾರ್ಯ ಕಾರಣ ರೂಪನೇ ||ಭಾವ್ಯನೇ ನಿನ್ನಿಂದ | ಧಾರ್ಯ ಈ ಜಗವೆಲ್ಲವೀರ್ಯ ಔದಾರ್ಯ ಶೌರ್ಯ ||ಪೂಜ್ಯ ಪೂಜಕನೆನಿಪ | ಬಹಿರಂತರಾತ್ಮಕನೆಪ್ರಾಪ್ಯ ಪ್ರಾಪಕ ನಿನ್ನ | ಪ್ರಾಪ್ತಿಯನೆ ತಿಳಿಸೋ | ಸ್ವಾಮಿ 2 ತಾರತಮ್ಯ ಜ್ಞಾನ ಸದ್ | ವೈರಾಗ್ಯ ಹರಿ ಭಕುತಿಬಾರಿ ಬಾರಿಗೆ ಬೇಡುವೇ ||ಸೂರಿ ಸಂಗವ ನೀಯೊ | ದೂರಗೈ ದುಸ್ಸಂಗಮಾರಪಿತ ದಯಾಪಾಂಗನೆ ||ಕಾರುಣಿಕ ನೀನೆಂದು | ಸಾರಿರುವ ತವಪಾದದೂರ ಮಾಡಲಿ ಬೇಡವೊ ||ಆರು ಕಾಯುವರಿಲ್ಲ | ವಾರೀಜ ಜಾಂಡದೊಳುಧೀರ ಗುರು ಗೋವಿಂದ | ವಿಠಲ ಬಹು ಆಪ್ತಾ | ಗೋಪ್ತಾ 3
--------------
ಗುರುಗೋವಿಂದವಿಠಲರು
ಬೇಡುವೆನೊಂದು ಬೇಡತಕ್ಕುದು ಎಂದು ಬೇಡ ವರಗಳೆನಗೆ ನೀಡು ಅದನೊಂದ ಪ ಬೇಡ ಸುಖವು ಕೃಷ್ಣ ಬೇಡ ಫಲವಿಫಲ ಬೇಡ ಮಾನಾಪಮಾನ ಬೇಡ ಜಯಾಪಜಯ ಅ.ಪ ನಿದ್ರೆಸುಖವು ಬೇಡ ಭದ್ರಭೋಜನ ಬೇಡ ತಿದ್ದಿದ ವಾಸ್ತುವುಬೇಡ ಮಧುರವು ಬೇಡ ಸದನ ವಿತ್ತವು ಬೇಡ ಹೃದಯದಿ ರಾಮನಾಮ ಪರಿಹರಿಸಲು ಬೇಡ 1 ನರಕ ಬಾಧೆಯ ಪರಿಹರಿಸಲು ಬೇಡ ದುರಿತ ಸಂತತಿಗಳ ತೊರೆಯಿಸ ಬೇಡ ಸುರಲೋಕ ಸಾಮ್ರಾಜ್ಯ ವರವನೀಯಲು ಬೇಡ ನಿರುತ ನಿನ್ನಯ ಪದ್ಮ | ಚರಣವ ತೋರೆಂದು2 ಮಾವಿನಕೆರೆರಂಗ ಶ್ರೀವನಿತಾ ಸಂಗ ಭಾವಜಪಿತರಂಗ ಗರುಡ ತುರಂಗ ಭಾವನೆಗೈದು ಯೆನ್ನ ಸರ್ವಜನ್ಮದೆ ನಿನ್ನ ದಿವ್ಯನಾಮವ ಭಜನೆಗೈವ ಬುದ್ಧಿಯು ಮಾತ್ರ 3 ನೀ ಮರೆಯದಿರಯ್ಯ ನಾಮರೆಯುವನಯ್ಯ ಕಾಮಿತವೊಂದಿದ ನೀಡೊ ಮುಕುಂದ ಸೋಮಧರ ವಂದಿತ ರಾಮದಾಸಾರ್ಚಿತ ಭೀಮವಿಕ್ರಮರೂಪ ಅಮಿತಕಲಾಪಾ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೇಡೆಲೊ ಜೀವಾ ಜನಿಸಲೆ ಬೇಡೋ ಪ ಬೇಡ ನಿಜಸುಖ ದೊರೆಯದು ನೋಡೋ ಅ.ಪ ಹೆಣ್ಣೋ ಗಂಡೋ ಆಗಿ ಮೆರೆಯುವೆಮಣ್ಣು ಹೊನ್ನಿಗೆ ನೀ ಹಾತೊರೆಯುವೆಉಣ್ಣುತ ಪ್ರಾರಬ್ಧವ ಬಾಯ್ದೆರೆಯುವೆಹಣ್ಣಾಗುವೆ ನೀ ಪರೀಕ್ಷೆ ಮಾಡೊ 1 ಆರು ಹಗೆಗಳು ಗಡ ಮುತ್ತುವವೊಮೂರು ತಾಪಗಳು ಕಡು ಹೊತ್ತುವವೊನೂರೊಂದೊಗಟಗಳಿರದೊತ್ತುವವೊಪಾರಾಗಲು ಬಿಡವೆಂದಿಗು ಕೇಡೋ 2 ಹುಟ್ಟು ಸಾವುಗಳ ಸುಳಿಯಲಿ ಸುತ್ತುವೆಒಟ್ಟು ಮರಳಿ ಸಂಚಿತವನು ಬಿತ್ತುವೆ ಗಟ್ಟಿಸಿ ಗದುಗಿನ ವೀರನಾರಾಯಣನೆಹುಟ್ಟಿಸಬೇಡೆಂದಿಚ್ಛಿಸಿ ಬೇಡೋ 3
--------------
ವೀರನಾರಾಯಣ
ಬೇರೊಬ್ಬರನು ಕಾಣೆನೋ ಪ ಗರ್ಭದೊತ್ತಿನಲಿ ಇರಿಸಿದವರಾರೋ ಕೈಕಾಲಸುತ್ತಿನರದಲಿ ಬಿಗಿದವರಾರೋ ನೇತ್ರವನು ರಚಿಸಿದವರಾರೋ ತುಂಬಿ ತುತ್ತುಗಳ ನಡಸಿದವರಾರೋ 1 ನೇಮದಲಿ ಕಲ್ಪಿಸಿದವರಾರೋ ಪಲ್ಲವೋರಣದಿ ಪವಣಿಸಿದವರಾರೋ ನಿರ್ಮಿಸಿ ನವದ್ವಾರವನು ತಿದ್ದಿದವರಾರೋ ಪಾಪಗಳ ಕಾವಲನೆ ಮಾಡಿದವರಾರೋ 2 ನೀಲ ಕುರುಳಿಸಿದವರಾರೋ ಪಲ್ಲವಿಸಿ ಪಸರಿಸಿದರಾರೋ ಅಲ್ಲಿ ತೊಟ್ಟಿಲೊಳಿಕ್ಕಿದವರಾರೋ ಮೈಮರೆತಿಹರು ಮೂಢಜನರು 3 ಪ್ರತಿಬಿಂಬಿಸುತ ಪರಿಪೂರ್ಣನೆನಿಸಲಾರೋ ನೆಂಬುದಲ್ಲದೆ ಮತ್ತದಾರೋ ಅಂಬರೀಶನೆ ಸಾಕ್ಷಿಯಲ್ಲದಾರೋ 4 ಪತ್ತು ಬಿಡಸದೇನೋ ನೀ ಪರೀಕ್ಷಿಸಿದ ಮಾತ್ರದಿಂದೆನ್ನ ಪಾಪಗಳು ಪೋಗವೇನೋ ಶ್ರೀ ಲಕ್ಷ್ಮೀ ರಮಣಗರಿದೇನೋ 5
--------------
ಕವಿ ಪರಮದೇವದಾಸರು
ಬೇಸಾಯ ಮಾಡಬೇಕು ಬೇಸಾಯ ಮಾಡಬೇಕು ಪ ಹೃದಯವೆಂಬ ಕ್ಷೇತ್ರದಲಿ ಬೇಸಾಯ ಮಾಡಬೇಕು ಅ.ಪ ಮಧ್ವಾಚಾರ್ಯರವರ ಗ್ರಂಥಗಳೆಂಬ ಸರೋವರ ತುಂಬಿಹುದು ಬುದ್ಧಿ ಜಲವ ವರಗುರುಗಳೆಂಬ ತೂಬಿನಲಿ ತರಲಿಬೇಕು ಶುದ್ಧ ಧರ್ಮದಾಚರಣೆಗಳೆಂಬ ನೇಗಿಲ ಪಿಡಿಬೇಕು ಪರಿ ನೆಲವನುಳಲಿಬೇಕು 1 ತತ್ವಜಲವು ಹರಿದೋಡದ ಪರಿಯಲಿ ತೆವರಿ ಹಾಕಬೇಕು ಸುತ್ತಲು ದುರ್ಜನ ನರಿಗಳ ತಡಿಯಲು ಬೇಲಿ ಹಾಕಬೇಕು ಉತ್ತಮ ರೀತಿಯ ಭಕುತಿ ಪೈರುಗಳ ನಾಟಿ ಮಾಡಬೇಕು ಮತ್ತೆ ಪೈರುಗಳು ಒಣಗದಂತೆ ಜಲವನು ಹಾಯಿಸುತಿರಬೇಕು 2 ಬೆಳೆಯುವ ವಿಷಯದ ಅನುಭವದಾಸೆಯ ಕಳೆಯು ಕೀಳಬೇಕು ಕೊಳೆವೆಯ ರೋಗಕೆ ಸಜ್ಜನ ಸಂಘದ ಔಷಧಿ ಕೊಡಬೇಕು ಕಲಿಪುರುಷನ ತಲೆಯೆಂಬ ಗೊಬ್ಬರವ ತುಳಿಯುತಲಿರಬೇಕು ಕುಳಿತೆಡೆಯಲಿ ವರಭಕುತ ಪ್ರಸನ್ನನು ಕೊಡುವ ಮುಕುತಿ ದವಸ 3
--------------
ವಿದ್ಯಾಪ್ರಸನ್ನತೀರ್ಥರು
ಬೊಮ್ಮ ಕೃಷ್ಣನ ಹಾಡುತ ಪಾಡುತಜನರೆಲ್ಲ ಉತ್ಕøಷ್ಟರಾಗಿಹರಮ್ಮ ಪ. ಪ್ಯಾಟಿಯ ಎದುರಾಗಿ ಕೋಟೆಬಾಗಿಲ ಕೋಟ ಸೂರ್ಯರ ಬೆಳಕಿಲೆ ಕೋಟ ಸೂರ್ಯನ ಬೆಳಕಿಲೆ ಹೊಳೆವಂಥಹಾಟಕಾಂಬರÀನ ಅರಮನೆ 1 ಪನ್ನಗ ಶಯನನ ಅರಮನೆ2 ಭಾಗವತ ಪ್ರಿಯಸಾಗರ ಶಯನನ ಅರಮನೆ ಸಾಗರ ಶಯನನ ಅರಮನೆಯ ಬಾಗಿಲೊಳು ಹೋಗಿ ಬರುವವರು ಕಡೆಯಿಲ್ಲ3 ನಾಗಶಯನನ ಮನೆ ಬಾಗಿಲು ಮುಂದೆಸೋಂಗ್ಹಾಕಿ ನಿಂತ ಕೆಲವರುಸೋಂಗ್ಹಾಕಿ ನಿಂತ ಕೆಲವರು ಸಭೆಯೊಳು ಹೋಗಬೇಕೆಂಬೊ ಭರದಿಂದ 4 ದಾಸರು ಬಗೆಬಗೆ ಸೋಸಿಲೆ ತಳವೂರಿಶ್ರೀಶ ರಾಮೇಶನ ಅರಮನೆ ಮುಂದೆಶ್ರೀಶ ರಾಮೇಶನ ಅರಮನೆ ಮುಂದಿನ್ನು ಕೂಸೆತ್ತಿಕೊಂಡು ನಿಂತ ಕೆಲವರು5
--------------
ಗಲಗಲಿಅವ್ವನವರು
ಬೊಮ್ಮ ಗಟ್ಟಿಯಲಿದ್ದ ನಮ್ಮ ಪ್ರಾಣೇಶನು ಹ- ನುಮನೆಂಬುವ ಹರಿಭಜಕನೀತ 1 ರಮ್ಮೆರಮಣನಾದ ರಾಮಸೇವಕನಂಘ್ರಿ ಒಮ್ಮೆ ನೋಡಲು ದೋಷದೂರವಾಗ 2 ಕರ ಜೋಡಿಸಿ ಮುಗಿದು ಕೊಂ- ಡಾಡುತೀತ ನಗುವ ಮಹಿಮೆಯನು 3 ಆಡಿದ್ವಚನ ಸತ್ಯಮಾಡುವ ಭಕುತರು ಬೇಡಿದ್ವರಗಳ ಚೆಲ್ಲಾಡುವನು 4 ಹರುಷದಿಂದಲಿ ತಾ ಕಿಂಪುರುಷಖಂಡದಿ ತಪಾ- ಚರಿಸುತಿದ್ದನು ಮಹಾಪುರುಷನೀತ 5 ಅರಸರಂತಕನಾದ ಪರಶುರಾಮನ ಗೆದ್ದ ಅರಸನಂಘ್ರಿಗಳನು ಸ್ಮರಿಸಿಕೊಂಡು 6 ಸುಗ್ರೀವನಲ್ಲಿ ಪರಮನುಗ್ರ(ಹ) ಮಾಡುತಲಿ ದ- ಶಗ್ರೀವನಲ್ಲಿ ಬಂದನಾಗ್ರ(ಹ)ದಿಂದ 7 ನಖ ಶಿರದಿಂದುದ್ದವ ಮಾಡಿ ಉರಿವೀಲಂಕೆಗೆ ತಾನಂಕುರವನಿಟ್ಟ(?) 8 ಮರನಕಿತ್ತಕ್ಷಕುಮಾರನ ಮುರಿದು ತಾರ ಮರನ ಕರೆದು(?) ತಂದಮರನಾದನು 9 ವರದಿ ಬೆಳದ ಕುಂಭಕರಣನ ಕೊಂದು ಕಟ್ಟಿ ಸ್ಥಿರಪಟ್ಟವನು ವಿಭೀಷಣರಿಗಿಟ್ಟ 10 ಮಾತೆಕೊಟ್ಟಂಥ ರತ್ನರಾಕಟೆಯನ್ನು ತಂದು ಭೂತಳದೊಡೆಯಗಿಟ್ಟ ಪ್ರೀತಿಯಿಂದ 11 ಜೊತೆಮುತ್ತಿನ ಹಾರ ಕೊಡಲು ಜಾನಕಿ ರಘು- ನಾಥಗ್ವೊಲಿದು ಅಜಪದವಿನಿಟ್ಟ 12 ಸೀತಾಚೋರನ ಪ್ರಾಣಘಾತಕನು 13 ಅಂಜನಾತ್ಮಜ ದೊಡ್ಡ ಸಂಜೀವನವ ತಂದು ಕೊಂದಕಪಿಗಳ ಪ್ರಾಣ ಪಡೆದನೀತ 14 ಕಂಜಾಕ್ಷಿಯಳ ಕರೆತಂದು ಕೂಡಿಸಿ ರಾಮ- ಗಂಜದೆ ಎಡೆಯ ಕದ್ದೊಯ್ದೆಂಜಲುಂಡ 15 ರೋಮ ರೋಮಕೆ ಕೋಟಿ ಲಿಂಗ ಧರಿಸಿದ ಸು- ಜ್ಞಾನಿಗಳೊಡೆಯ ಮುಖ್ಯಪ್ರಾಣದೇವ 16 ರಾಮ ಲಕ್ಷ್ಮಣ ಸೀತಾದೇವೇರಿಂದ್ವೊಡಗೂಡಿ ಈ ಮಹಾಸ್ಥಳದಿ ನಿಂತ ಮಹಾತ್ಮನು 17 ಭೀತಿ ಇಲ್ಲದಲೆ ಭೀಮೇಶ ಕೃಷ್ಣ(ನ) ನಿಜ ದೂತನೆನಿಸಿದ ಪ್ರಖ್ಯಾತನೀತ 18
--------------
ಹರಪನಹಳ್ಳಿಭೀಮವ್ವ
ಬೊಮ್ಮಗಟ್ಟಿರಾಯ ಪಾಲಿಸೋ ನಮ್ಮ ನೀ ಮಾರಾಯ ಧರ್ಮ ಕಾಮ್ಯಾರ್ಥ ಕೊಡುವೊ ಕರುಣಾಂಬುಧಿ ಪ ನಿಗ್ರ(ಹ) ಮಾಡುತ ಪರಮಾಗ್ರ(ಹ) ದಲಿ ಸೀಗ್ರ (ಶೀಘ್ರ?) ದಿಂದಲಿ ದಶಗ್ರೀವನ ಲಂಕ- ದುರ್ಗದಲ್ಲಾಡಿದ್ಯಗ್ನಿಯ ಒಡಗೂಡಿ 1 ರಾಮಪಾದಾಂಬುಜ ಸೇವಕ ಸೇತುವೆ ಪ್ರೇಮದಿ ಕಟ್ಟಿ ನಿಂತನು ರಣದಿ ನೇಮದಿಂದಲಿ ಸಂಜೀವನ ತಂದಾತ ವಾಹನನಾದ ತ್ರಿಧಾಮದೊಡೆಯಗೆ 2 ವಾತಾತ್ಮಜ ರಘುನಾಥಗೆ ನೀ ನಿಜ- ದೂತನೆನಿಸಿ ಬಹು ಪ್ರೀತಿಯಲಿ ಭೂತಳದೊಳು ಪ್ರಖ್ಯಾತಿಯ ಪಡೆದೆ ನಿ- ರ್ಭೀತನಾದ ಭೀಮೇಶಕೃಷ್ಣನ ಪ್ರಿಯ 3
--------------
ಹರಪನಹಳ್ಳಿಭೀಮವ್ವ
ಬೋಧ ಘನ ಗಂಭೀರ ಗುಣಸುಜನ | ಪಾದ ಯೋಗ ಸಾಂಖ್ಯಗಳಾದ ಸೀಮೆಯಲಿ ನಲಿದಾಡಿ ತುರ್ಯದಲಿ ಮನೆಮಾಡಿ | ಸಹಜಾವಸ್ಥೆ ಗೂಡಿ | ಆ ಮಹಾ ಪದದಿಂದ ಪರಿಹರಿಸಿ ಭವಬಂಧ | ಕಾಮಿತಾರ್ಥವ ನೀವ ದೀನರುದ್ಧರಿಸುವ | ಶ್ರೀ ಮಹಿಪತಿ ಸ್ವಾಮಿ ನಂದನೋಡಿಯನು ನೇಮಿ ಹರಿಕಥಾನಂದ ಪ್ರೇಮಿ |
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬೋಧ ಪ ಶ್ರೀನಿವಾಸನ ನಾಮ ಲೀಲೆಯಸಾನುರಾಗದಿ ವಾಣಿಜಾಣೆಸೂನೂನ ಪಾಪವ ಹಾನಿಯ ಮಾಡುತ 1 ಹತ್ತು ನಾಲ್ಕು ಸುತ್ತದೇಶದಿಚಿತ್ರ ಚರಿತನ ವೃತ್ತಿ ನಿತ್ಯದಿವಿಸ್ತರಿಸಿ ಹೇಳುತ ಚಿತ್ತದಿ ಸುಖಿಸುವಿ 2 ಇಂದಿರೇಶನ ತಂದು ತೋರುವಿಎಂದು ನಿನ್ನನು ಪೊಂದಿ ಬಂದೆನಂದನ ಕಂದನ ಬಂದೀಗ ತೋರಿಸು 3
--------------
ಇಂದಿರೇಶರು
ಬೋಧ ಸದ್ಗುರು ಜಿತಮದನ ಪ ಬಾದರಾಯಣ ವೈದೇಹಿ ಚರಣಾಬ್ಜಾ ರಾಧಕ ನಮಿಪೆ ಸನ್ಮೋದವಿತ್ತು ಕಾಯೊ ಅ.ಪ. ಶ್ರೀ ಮಧ್ವ ಮತವಾರಿಧಿ ಸೋಮ | ದ್ವಿ ಜ ಸನ್ನುತ ಗುಣಧಾಮಾ ಕಾಮಿತಜನ ಕಲ್ಪಭೂಜ ವಿಬುಧ ಸು ಪ್ರೇಮ ಸಂಯಮಿಕುಲೋದ್ಧಾಮ ದಯಾಂಬುಧೇ ಗೋಮಿನೀವಲ್ಲಭನ ಪದಯುಗ ತಾಮರರಸಗಳನನುದಿನದಿ ಬಿಡ ದೇ ಮನಾಬ್ಜದಿ ಭಜಿಸುತಿಪ್ಪಮ ಹಾ ಮಹಿಮ ತುತಿಸಿಬಲ್ಲನೆ 1 ದೀನಜನರ ಬಂಧು ನಿನ್ನಾ | ಪಾದ ಕಾನೆರಗುವೆ ಸುಪ್ರಸನ್ನಾ ದಾನ ಮಾನಗಳಿಂದ ಜ್ಞಾನಿಜನರಿಗೆ ಮ ಹಾನಂದ ಬಡಿಸುತ ಸಾನುರಾಗದಿ ನಿತ್ಯಾ ಶ್ರೀ ನಿಕೇತನ ಪರಮ ಕಾರು ಣ್ಯ ನಿವಾಸ ಸ್ಥಾನನೆನಿಪ ಮ ಹಾನು ಭಾವ ಭಗವತ್ಪದಾಂಭೋ ಜಾನುಗರೊಳೆನ್ನೆಣಿಸಿ ಪಾಲಿಸು 2 ಸತ್ಯಪ್ರಿಯರ ಕರಕಮಲ | ಜಾತ ನಿತ್ಯ ನಿರ್ಜಿತ ಘೋರ ಶಮಲಾ ಚಿತ್ತಜಪಿತ ಜಗನ್ನಾಥ ವಿಠಲನ ಚಿತ್ತಾನುವರ್ತಿಗಳಾಗಿ ಸಂಚರಿಸುತಾ ಅತ್ಯಧಿಕ ಸಂತೋಷದಲಿ ಪ್ರತ್ಯರ್ಥಿಗಳಿಗುತ್ತರಿಸಿ ಮಿಗೆ ಪುರು ಷೋತ್ತಮನೆ ಪರನೆಂದು ಡಂಗುರ ವೆತ್ತಿ ಹೊಯ್ಸಿ ಕೃತಾರ್ಥನೆನಿಸಿದ 3
--------------
ಜಗನ್ನಾಥದಾಸರು
ಬ್ಯಾಗ ಬರುವೇನೆಂದು ಸಾಗಿ ಮಧುರೆಗೆ ಹೋದ ಹ್ಯಾಗೆ ಮಾಡುವೊಣುದ್ಧವ ಭಾಗವತಪ್ರಿಯಗಿನ್ನು ಬಾಗಿ ನಮಿಸುತ ನಾವು ಉದ್ಧವ ಪ ಗೋಕುಲವಾಸ ಬಿಟ್ಟ್ಯಾಕೆ ತೆರಳಿದ ಸ್ವಾಮಿ ಈ ಕಾರ್ಯವನು ತಿಳುಹಿಸೊ ಶ್ರೀಕರ ಕಮಲಾರ್ಚಿತ ಚರಣಧ್ವಜವಜ್ರ- ರೇಖಪಾದವ ಚಲಿಸಿದ ಪಾಕಶಾಸನಪ್ರಿಯನು ಪರಮ ನಿರ್ದಯ ಮಾಡಿ ಉದ್ಧವ 1 ಯಂತ್ರಮಾಯದಲಿ ಶ್ರೀಕಾಂತನೊಲಿಸುವುದಕ್ಕೆ ಮಂತ್ರವನು ಮಾಡರಿಯೆವೊ ಅಂತರಂಗದಲಿ ಅನಂತಗುಣ ಸ್ತುತಿಸಲೇ- ಕಾಂತ ಭಕ್ತರಲ್ಲವೊ ನಿಂತು ನಿತ್ಯಾನಂದಮೂರ್ತಿಯ ನೋಡದಲೆ ಉದ್ಧವ 2 ಅತಿಕ್ರೂರನೆನಿಸುವಕ್ರೂರ ಬಂದು ನಮಗ- ಹಿತಮಾಡಿ ಪೋದನಲ್ಲೊ ಮತಿಹೀನರಾಗ್ಹರಿಯ ರಥವ ನಿಲಿಸದಲೆ ಮುಂ- ದೆತನ (ಯತ್ನ ?) ಮರಿಯದೆ ನಿಂತೆವೊ ಪೃಥಿವಿ ಒಳಗಿಂಥ ಗೋಪಿಕಾಸ್ತ್ರೀಯರೆಂದು ಭಾಳಪ- ಉದ್ಧವ 3 ಸಕ್ಕರೆಯಂಥ ಸವಿಮಾತನಾಡುತ ನಮಗೆ ದಕ್ಕಿದಕ್ಕದಲ್ಹೋದನೊ ಮತ್ತೇನು ಪೇಳೋಣ ಮಂದಭಾಗ್ಯರು ಹರಿಯ ದಕ್ಕಿಸಿಕೊಳ್ಳದ್ಹೋದೆವೊ ಸಿಕ್ಕರೆ ಧನವು ಶತಸಾವಿರ ಕೊಪ್ಪರಿಗೆ ಅಷ್ಟ- ಉದ್ಧವ 4 ಮಡದಿಯರು ಕೇಳಿಗೆ ಮಧುರಾಪಟ್ಟಣದಂಥ ಚೆದುರೆಯರು ನಾವಲ್ಲವೊ ಮದನನಾಟಕೆ ಮದಗಜಗಮನೇರಿಗಿನ್ನು ಮುದದಿ ಮರುಳಾಗಿಪ್ಪನೊ ವಿಧಿ ಬರೆದನೇನೆಂದರೀ ನಮ್ಮ ಪಣೆಯಲ್ಲಿ ಉದ್ಧವ 5 ಮಲ್ಲರನೆ ಮಡುಹಿದ್ದ ಮಾವನ್ವೈರಿಯು ನಮ್ಮ ಕೊಲ್ಲಿ ಪೋದಂತಾಯಿತೊ ಸಲ್ಲ ನಡತೆಯ ಸೊಟ್ಟಕುಬ್ಜೆಗೆ ಕಡೆಯು ನಾ- ವಲ್ಲವೆಂದವಗೆ ಪೇಳೊ ನಿಲ್ಲದ್ಹೋಗ್ಹಿಂದಕೆ ಸುಳ್ಳಲ್ಲೊಂದು ಬೆರೆಸದಲೆ ಉದ್ಧವ 6 ಕಲ್ಲಾಗದೀವಿಧಿಯ ಕಾಮನಪಿತನಗಲಿ ಸೊಲ್ಲು ಸೊಲ್ಲಿಗೆ ಬಳಲ್ದೆವೊ ಮಲ್ಲಿಗ್ವೊಣಗಿದ ದಾರದಂತೆ ಗೋವ್ರಜಮೂಲೆ- ಯಲ್ಲಿ ನಾವಿರಲಾರೆವೊ ಎಲ್ಲಿ ಬಂದೊದಗಿತೀ ಬಿಲ್ಲ ್ಹಬ್ಬನಮಗೆ ಭೀ- ಉದ್ಧವ 7
--------------
ಹರಪನಹಳ್ಳಿಭೀಮವ್ವ
ಬ್ಯಾಡೋ ಒಬ್ಬರ ಮನೆಗೆ ನೀ ಪೋಗ ಬ್ಯಾಡೋ ಒಬ್ಬರ ಮನೆಗೆ ಪ ಗಾಡಿಕಾರನೆ ಕೃಷ್ಣ ಚಾಡಿ ಮಾತನು ಕೇಳಿ ಗಾಡನೆ ಕಿವಿಮುಚ್ಚಿ ಓಡಿಸಿದೆ ಗೋಪಿಯರ ಅ.ಪ ಕಟ್ಟಿದ್ದ ತುರುಕರುಗಳ ಬಿಚ್ಚಿ ಪೋಗುವದಿದು ನಿಶ್ಚಯವೆಂದು ಪೇಳ್ವರೊ ಸ್ವಚ್ಛ ಕರುಗಳ ಕಣ್ಣುಮುಚ್ಚಿ ಪಾಲೆಲ್ಲ ಕುಡಿದ ಅಚ್ಯುತನಿಗೆ ಬುದ್ಧಿ ಮತ್ತೆ ನೀ ಪೇಳೆಂಬರು 1 ಮಕ್ಕಳೆಲ್ಲರು ಕಯ್ಯೊಳು ಬಟ್ಲಲಿ ಅವ- ಲಕ್ಕಿಯ ತಿನ್ನುತಿರಲು ಘಕ್ಕನೆ ಬಡಿಯೆ ದಿಕ್ಕು ದಿಕ್ಕಿಗೆ ಚಲ್ಲೆ ಬಿಕ್ಕಿ ಬಿಕ್ಕಿ ಅಳುತಾರೆ ಗೋಪಕ್ಕ ನೀನೋಡೆಂಬರು 2 ವಾಸುದೇವಗೆ ಹರಕೆಯ ಮಾಡಿ ನವ- ನೀತ ಮೀಸಲು ಮಾಡಿರೆ ಮೀಸಲಳಿದು ಕೋತಿ ಮಾರ್ಜಾಲಗಳಿಗುಣಿಸಿ ನೀತಿ ಪೇಳುವ ಶ್ರೀನಾಥ ನೋಡೆಂಬರು 3 ಗೊಲ್ಲ ಬಾಲಕಿಯರೆಲ್ಲ ಪಾಲ್ಮೊಸರು ಮಾರೆ ಮೆಲ್ಲನೆ ಪೋಗುತಿರಲು ಗುಲ್ಲು ಮಾಡದೆ ಕವಣೆ ಕಲ್ಲಿಂದ ಕುಂಭ ಒಡೆಯೆ ಚಲ್ಲಿ ಪಾಲ್ಮೊಸರು ಸೂರೆ ನಲ್ಲೆ ನೀ ನೋಡೆಂಬರು4 ಮತ್ತೆ ಕೇಳಮ್ಮ ಯಶೋದೆ ನಾವೆಲ್ಲ ಆಣಿ ಮುತ್ತು ಪೋಣಿಸುತಿರಲು ಸುತ್ತ ಮುತ್ತಲು ನೋಡಿ ಮುತ್ತು ಸೂರೆ ಮಾಡಿದ ಕರ್ತೃ ಶ್ರೀ ಕಮಲನಾಭ ವಿಠ್ಠಲನ ನೋಡೆಂಬರು5
--------------
ನಿಡಗುರುಕಿ ಜೀವೂಬಾಯಿ
ಬ್ರಹ್ಮ ತಾವೆಂದು ಭಾವಿಸಿರೋ ಭಾಗ್ಯರಿರಾಬ್ರಹ್ಮತಾವೆಂದು ಭಾವಿಸಿದವರುಂಟು ಪ ಕಪಿಲ ನಾರದನು ಗೌತಮನು ಕಣ್ವನುನಿಪುಣ ಕೌಶಿಕನು ನಿರ್ಮಲನು ಅಗಸ್ತ್ಯಾಉಪಮಾನ್ಯ ಶಿಖಿ ಪಂಚ ದೂರ್ವಾಸರಂತಿವರು ಬ್ರಹ್ಮ ತಾವೆಂದು ಭಾವಿಸುವರು 1 ವ್ಯಾಸ ಶ್ರೀವತ್ಸ ಶುಕನು ಶೌನಕನುವಾಶಿಷ್ಟ ಅತ್ರಿ ಗಾರ್ಗೇಯನು ಕಶ್ಯಪನುದಾಸ ಪ್ರಹ್ಲಾದ ಬಕದಾಲ್ಬ್ಯ ಜಮದಗ್ನಿಭಾಸುರರಿಂತಿವರು ಬ್ರಹ್ಮತಾವೆಂದು ಭಾವಿಸುವರು 2 ಸನಕ ಸನಂದನ ಸನತ್ಸುಜಾತನುಮುನಿಯು ತೃಣಬಿಂದು ಮಾರ್ಕಾಂಡೇಯ ರೋಮಶನುಘನ ವಾಮದೇವ ದತ್ತಾತ್ರೇಯ ವಡಬನುಚಿನುಮಯರಿವರು ಬ್ರಹ್ಮತಾನೆಂದು ಭಾವಿಪರು3 ನಿತ್ಯ ತಾವೆಂದು ಭಾವಿಸುವರು 4 ಭವ ಮೂಲ ಹರಿವುದುಬ್ರಹ್ಮ ಬೇರೆನಲು ಬಹುಜನ್ಮವೇ ಬಹುದುಬ್ರಹ್ಮತಾವೆಂದು ಭಾವಿಸಿ ನೀವು ನಿತ್ಯಬ್ರಹ್ಮ ಚಿದಾನಂದ ತಾವಾಗುವಿರಿ ಸತ್ಯ 5
--------------
ಚಿದಾನಂದ ಅವಧೂತರು
ಬ್ರಹ್ಮ ಸುಖದಲಿ ನಲಿದಾಡುವೆ ಧ್ರುವ ನಮೋ ಶ್ರೀ ಗಣನಾಯಕನಿಗೆ ನಮೋ ನಮೋ ಶ್ರೀ ಸರಸ್ವತಿಗೆ ನಮೋ ನಮೋ 1 ಸದ್ಗುರುವಿಗೆ ನಮೋ ಶ್ರೀ ಸ್ವಾಮಿಗೆ ನಮೋ ನಮೋ 2 ಇಷ್ಟದೈವಕೆ ನಮೋ ಮಹಿಮಗೆ ನಮೋ ನಮೋ 3 ಸೂತ್ರಾಂತ್ರಿಗೆ ನಮೋ ಸುಪಥಕೆ ನಮೋ ನಮೋ 4 ಸುಸರ್ವ ದೈವಕೆ ನಮೋ ರೂಪಕೆ ನಮೋ ನಮೋ 5 ಶಕ್ತಿಗೆ ನಮೋ ಮುನಿಗಳಿಗೆ ನಮೋ ನಮೋ 6 ಸುಭಾಗವತರಿಗೆ ನಮೋ ನಮೋ ನಮೋ 7 ಸುಮಹಿಮರಿಗೆ ನಮೋ ಸುತೀರ್ಥಕ್ಷೇತ್ರಕ್ಕೆ ನಮೋ ನಮೋ 8 ಸುಪುಣ್ಯಶ್ಲೋಕರಿಗೆ ನಮೋ ಸಜ್ಜನರಿಗೆ ನಮೋ ನಮೋ 9 ತ್ರೈಲೋಕ್ಯನಾಥಗೆ ನಮೋ ಸರ್ವೋತ್ಮಗೆ ನಮೋ ನಮೋ 10 ಸುಕರುಣಿಗೆ ನಮೋ ಭಕ್ತವತ್ಸಲಗೆ ನಮೋ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು