ಒಟ್ಟು 11370 ಕಡೆಗಳಲ್ಲಿ , 137 ದಾಸರು , 5713 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸತ್ಯಧರ್ಮ ಸದ್ಗುರುವರ ರಕ್ಷಿಸು ಪ ಭೃತ್ಯ ನೀನಾಗೆಂದು ಕೃತ್ಯ ವಿಪರ್ಯಯ ವೆತ್ತಣಿಸದೆ ಕೃತಕೃತ್ಯನ ಮಾಡಿಂದು ಅ.ಪ ಸತ್ಯವರರ ವರ ಕುವರನೆ ನೀನತ್ಯುತ್ತಮ ಸುಖ ಚಿನ್ನ ಯತ್ಯಾಶ್ರಮ ಸದ್ಧರ್ಮಾಚರಣದಿ ನಿತ್ಯಾರ್ಜಿತ ರಾಮ ಭೃತ್ಯಜನಕೆ ಸದ್ಬುದ್ಧಿ ಬೋಧಿಸಿ ಕೃತಕೃತ್ಯರ ಮಾಡುತಲಿ ಸುನಾಮ ಯಥಾರ್ಥಪಡಿಸಿ ಕ್ಷಿತಿಗುತ್ತಮನೆಸಿದ 1 ಭದ್ರಾತೀರನೆ ಇತ್ತು ಸುಭದ್ರಗಳ್ ನಿದ್ರಾರಹಿತರಿಗೆ ಆದ್ರಾಂತಃಕರುಣನೆ ಸೌಹಾರ್ದದಿ ಭದ್ರಾರಮಣನಲಿ ಛಿದ್ರರಹಿತ ಶಿಲೆ ಮಧ್ಯದಿ ಪಡೆದು ಸುಭದ್ರಾಪತಿ ಸಖ ಮುದ್ರಾಧರನೆ 2 ಶ್ರೀ ನರಹರಿ ಪದ ನೀನನುದಿನದಲಿ ಧ್ಯಾನಮಾಡುತ ಬಾಹ್ಯ ಜ್ಞಾನವಿಲ್ಲದೆ ಅನುಮಾನ ವಿಪರ್ಯಯ ಹೀನಗೈಸಿ ಸಾಕ್ಷಿ ಮಾನದಿಂದ ಕೊಟ್ಯಾರ್ಭುದ ರವಿಪ್ರಭೆ ಕಾಣುತ ಪ್ರತಿಮುಖವೋಲ್ ಏನು ಇದಕೆ ಅನುಮಾನವಿಲ್ಲ ಹಂ ಮನಿಯವನೆನ್ನುವೆ ನೀ ಸರಿಲಿಂಗರೂಪಧರ3
--------------
ಪ್ರದ್ಯುಮ್ನತೀರ್ಥರು
ಸತ್ಯಧ್ಯಾನತೀರ್ಥರು ಇಷ್ಟು ಸುಲಭದಲಿ ಈ ಮುದ್ದು ಯತಿ ವರರಿಗೆ ಪ್ರೇಷ್ಠತಮ ನೀ ನೊಲಿದ ಬಗೆಯೇನೋ ರಾಮಾ ಪ ಪಟ್ಟ ಪುತ್ರನ ಶ್ರೇಷ್ಠ ಪೀಠದಲಿ ಕುಳಿತಿಂದು ಮುಟ್ಟಿ ಪೂಜಿಪ ಭಾಗ್ಯಗಿಟ್ಟಹುದೆ ಏನೆಂಬೆ ಅ.ಪ. ಚಿಕ್ಕತನದಲೆ ನೂಕಿ ವಿಷಯ ವಿದ್ಯೆಗಳನ್ನು ಚೊಕ್ಕ ಶಾಸ್ತ್ರಗಳಲ್ಲಿ ಇಕ್ಕಿ ದಾಸರ ಮನವಲಿದ್ಯೋ ಕಕ್ಕಸವುಭವವೆಂದು ವೈರಾಗ್ಯ ಧರಿಸುತಲಿ ಭಕ್ತಿ ಮಾಳ್ಪುದ ನೋಡಿ ಮುಕ್ತರಾಶ್ರಯ ವಲಿದ್ಯೋ 1 ದಾನಶೂರರು ಬಹು ನಿದಾನ ವಂತರು ಹಾಗೆ ಮಾನ ಸಾಗರರೆಂದು ಜ್ಞಾನಿ ಪ್ರಾಪ್ತನೆ ವಲಿದ್ಯೋ ದೀನ ಜನ ಮಂದಾರ ಮಾನ್ಯ ಮುನಿಕುಲ ತಿಲಕ ಶೂನ್ಯವಾದಧ್ವಾಂತ ಭಾನು ವೆಂದೊಲಿದ್ಯೋ 2 ಮೋದವಿತ್ತರು ಸತ್ಯಧ್ಯಾನ ತೀರ್ಥರು ಹಿಂದೆ ಸಾಧಿಸುತ ಸುಖಮತದ ಜಯ ಭೇರಿ ಜಗದೀ ಸಾಧು ಜನರ ಜ್ಞಾನ ಖೇದವಳಿಯುತ ಪ್ರಮೋದ ವೀಯುವರೀಗೆ ಸಿದ್ದವೆಂದೊಲಿದ್ಯೋ 3 ಹಿಂದಿ ನ್ಹಿರಿಯರ ವಲವೊ ಮಂದಿ ಪುಣ್ಯವೊ ಮತ್ತೆ ತಂದೆ ಕರುಣವೊ ಕಾಣೆ ಬಂದುದೀ ಪೀಠದಲಿ ವಿಧಿ ವಿನುತ ರಾಮ ನಿನ್ನೊಲಸಿಹ ಪ್ರ ಮೋದ ತೀರ್ಥರುಸತ್ಯ ಪಾಮರರಿಗಾಗುವುದೆ ಸ್ತುತಿಸೆ 4 ಸಾಧು ಸಜ್ಜನ ಪ್ರಾಪ್ಯ ಬಾದರಾಯಣ ಶರಣು ಮೋದ ಮಯ ನಿರ್ದೋಷ ವೇದ ವೇದ್ಯನೆ ಶರಣು ಮಾಧವ ಶ್ರೀ ಕೃಷ್ಣ ವಿಠಲರಾಯನೆ ಶರಣು ಗಾಧವರ್ಜಿತ ಮಹಿಮ ಶ್ರೀ ರಾಮ ಶರಣು ಶರಣು 5
--------------
ಕೃಷ್ಣವಿಠಲದಾಸರು
ಸತ್ಯಂಬೋಧರ ಸ್ಮರಣೆ ನಿತ್ಯಮಾಡುಅತ್ಯಂತ ಕರುಣಾಳು ಅ'ುತ ಮ'ಮಾವಂತ ಪಸತ್ಯಬೋಧರ ಸ್ಮರಣೆ ನಿತ್ಯದಲಿ ಮಾಡಿದರೆ'ಷ್ಣು ಸರ್ವೋತ್ತಮದ ಜ್ಞಾನ ಪ್ರಾಪ್ತಿಕಷ್ಟಗಳ ಪರಿಹರಿಸಿ ಇಷ್ಟಾರ್ಥಗಳ ಕೊಟ್ಟುಭಕ್ತಿ ವೈರಾಗ್ಯ ಭಾಗ್ಯವನು ಕೊಡುವಾ 1ಸತ್ಯಪ್ರಿಯತೀರ್ಥರ ಕರಕಮಲದಿಂ ಜನಿಸಿಉತ್ತರಾದಿಮಠದ ವೈಭವವ ಬೆಳಿಸಿ'ಷ್ಣು ಸರ್ವೋತ್ತಮತ್ವದ ತತ್ವಜಯಭೇರಿಎತ್ತ ನೋಡಿದರತ್ತ ಸತ್ಯಬೋಧರಕೀರ್ತಿ 2ಪಾಪಿಷ್ಠರಿಂದ ಆಪತ್ತು ಜೀವಕೆಬಂತುಸಂಚಾರ ಕೆಲಕಾಲ ಸಂಕಟಮಯವಾಯ್ತುಶಾಪಾನುಗ್ರಹಶಕ್ತರಾದ ಶ್ರೀಪಾದರುಭೂಪತಿ'ಠ್ಠಲನ ಅಪರೋಕ್ಷ ಪಡೆದವರು 3
--------------
ಭೂಪತಿ ವಿಠಲರು
ಸತ್ಯಬೋಧರಾಯಾ ಪಾಲಿಸು (ನಿನ್ನ) ಭೃತ್ಯರ ನನ ಜೀಯಾ ಸ್ತುತ್ಯ ಸುಕಾಯ ಪ ದೂರ ನೋಡದಲೆನ್ನ ಗುರುವರ ಪಾರಗೈಪುದು ಮುನ್ನ ಶ್ರೀ ರಮಾರಮಣನಾರಾಧಕರೊಳು ಧೀರ ನಿನಗೆ ಸರಿಯಾರಿಹರಯ್ಯ 1 ಮತ್ತನಾಗಿಹೆ ನಾನು ಭವದಲಿ ಸತ್ತು ಹುಟ್ಟುತಲಿಹೆನು ಚಿತ್ತಕೆ ತರದಲೆನ್ನವಗುಣಗಳ ಮತ್ತೆ ಕೈಪಿಡಿಯುತಲೆತ್ತುವುದು 2 ಶರಣು ಶರಣು ದೊರೆಯೆ ಕರುಣದಿ ಪೊರೆದನ್ಯರನರಿಯೇ ಸಿರಿ ಮಧುಕರನಾಗಿರುತಿಹ 3
--------------
ಹನುಮೇಶವಿಠಲ
ಸತ್ಯಭೋಧ ಯತಿಕುಲವರನೆ ನಿತ್ಯ ತುತಿಸಿ ವಂದಿಸುವ ತಾವಕರೊಳು ಎಣಿಸೋ ಪ ಅರ್ಥಿಜನ ಚಿಂತಾಮಣಿ ಸತ್ಕರುಣಿ ಶ್ರೀನಿವಾಸನ ಗುಣ ಸಾನುರಾಗದಲಿ ವ್ಯಾ ಖ್ಯಾನ ಪೇಳುವ ಕಾಲದಿ ಶ್ವಾನರೂಪದಿ ಪವಮಾನ ಜನರು ನೋಡೆ ಕಾಣಿಸಿಕೊಂಡನಂದೊ ತಾ ಬಂದು 1 ಬವರಗೋಸುಗ ಬಂದ ಯವನಾಧಿಪತಿ ನಿಮ್ಮ ಸುವಿಚಿತ್ರ ಮಹಿಮೆ ಕಂಡು ಪ್ರವಿನೀತನಾಗಿ ಕಪ್ಪವೆ ಕೊಟ್ಟು ನಮಿಸಿದ ಕವಿ ಆವಾ ವಿಭವಾ ವರ್ಣಿಸುವಾ 2 ಇವರು ದೇವಾಂಶರೆಂದರುಪುವಗೋಸುಗ ಬಂದು ದಿವಿಜತರಂಗಿಣಿಯು ಶಿವನಂಗಭೂರುಹ ಮೂಲ ಭಾಗದಲಿ ಉ ದ್ಭವಿಸಿ ಕಂಗೊಳಿಸಿದಳು ಕೃಪಾಳು 3 ಸ್ವಾಂತಸ್ಥ ಮುಖ್ಯ ಪ್ರಾಣಾಂತರಾತ್ಮಕ ಭಗ ವಂತನಂಘ್ರಿ ಕಮಲ ಸಂತತ ಸರ್ವತ್ರ ಚಿಂತಿಸುತಿಪ್ಪ ಮ ಹಾಂತರಿಗೇನಚ್ಚರೀ ವಿಚಾರ 4 ಚಾರು ಚರಿತ ಭೂ ಸುರವರ ಸನ್ನುತನೇ ಪರಮ ಪುರುಷ ಜಗನ್ನಾಥ ವಿಠ್ಠಲ ನಿಮ್ಮ ಪರಿಪರಿ ಮಹಿಮೆ ಎಲ್ಲಾ ತಾ ಬಲ್ಲಾ 5
--------------
ಜಗನ್ನಾಥದಾಸರು
ಸತ್ಯವತಿಸೂನು ವೇದವ್ಯಾಸ ಲಕುಮಿಶಾ | ನಿತ್ಯ ನಿನ್ನ ನೆನೆಸುವ ಭೃತ್ಯರೊಡನೆ ಪೊಂದಿಸು ದೇವ ಪ ವಾಸುಕಿ ಇಲ್ಲಿ ಮದನಾರಿಯ ವಲಿಸಿ | ತನ್ನ ಬದುಕುವಗೋಸುಗ ಉಪಾಯದಲಿ ನಿಂದರೆ | ವೈರಿ ತಾರಕನ್ನ ಸದೆದು | ಇಂದ್ರಾದ್ಯರ ಕೂಡ ಮುದದಿಂದ ಸ್ಥಿರವಾಗಿ ಮೆರೆದ 1 ಷಣ್ಮೊಗನು ಸತತ ತಾನು ಅನ್ನದಾನ ಮಾಡುತ ಹಾ | ವನ್ನನಾಗುದಕ್ಕೆ ಪ್ರಸನ್ನ ಮೋದದಲಿ | ನಿನ್ನ ಪೊಲಿಸಿಲ್ಲಿಗೆ ಬಾಹಾ | ದೆನ್ನ ಭಕುತಿಗೆ ಮೆಚ್ಚಿ | ವಾಸುದೇವ 2 ಕಲಿಯುಗದೊಳಗೆ ವಿಪ್ರಕುಲದಲಿ ಮಾರುತಿ ಎನಿಸಿ | ಬಲು ಮಾಯಿಗಳ ಮೋಹನ ಶಾಸ್ತ್ರವಳಿದು ಬದರಿಯ | ಬಳಿಗೆ ಬಂದು ಶಿಲಾಪ್ರತಿಮೆಗಳನೆ ಪಡೆದು ತಂದು | ಪೊಳೆವಂದದಲಿ ಇಳೆಯೊಳಗೆನಲು 3 ಅಂದಿನಾರಭ್ಯ ಪಾರ್ವತಿನಂದನ ಕುಕ್ಕೆಪುರದಲ್ಲಿ | ನಿಂದು ಸರ್ವರಿಂದ ಪೂಜೆ ಚಂದದಿ ಕೊಳುತಾ | ಮಂದ ಕುಷ್ಟರೋಗಗಳ ಹಿಂದುಮಾಡಿ ಓಡಿಸಿ | ಗೋ ಪಾದ ಧ್ಯಾನದಿಂದ ಲೋಲಾಡುತಲಿರೆ 4 ಮರುತದೇವ ಸಂಪುಟಾಕಾರವಾದ ನೀನದರೊಳು | ಚಾರು ಸಿಲೆ ರೂಪವಾದ ಪಾರಾಶರ ಋಷಿ | ಧಾರುಣಿಗೆ ರಹಸ್ಯವ ತೋರಿಕೊಳುತಲಿ | ಮಾರ ಗೊಲಿದ ವಿಜಯವಿಠ್ಠಲಾ 5
--------------
ವಿಜಯದಾಸ
ಸತ್ಯವರ ಯತಿಗಳ ಸ್ತೋತ್ರ ಮೂರ್ತಿ ಪ ಅಂದು ನರಹರಿ ಯತಿಯು ತಂದದ್ದು ನಾ ಕರ್ಣ-ದಿಂದ ಕೇಳಿ ಬಲ್ಲೆ ನಾ ಕಂಡದ್ದು ಇಲ್ಲ ||ಇಂದೆಮ್ಮ ಗುರು ಸತ್ಯಸಂಧ ಸುತರಿಗೊಲಿದುಬಂದ ರಾಮನ ಕಣ್ಣಿಂದ ಕಂಡೇ 1 ಅವರೊಯ್ದರಿವರೊಯ್ದರೆಂಬ ಮಾತುಗಳ್ ಪುಸಿಅವನ ಸತಿಯು ತನ್ನ ತವರು ಮನೆಗೆ ||ತವಕದಿಂದಲಿ ಕರದೊಯ್ಯೆ ಗುರುಗಳ ತಪಕೇಭುವನ ತಲ್ಲಣಿಸಲು ಭುವನೇಶ ಬಂದ 2 ಆಗ ಶ್ರೀ ರಘುನಾಥ ಯೋಗಿಗೊಲಿದುಸಾಗಿ ಬಂದುದು ನಾ ಕೇಳಿ ಬಲ್ಲೆ ಈ ನ- ||ಮ್ಮ ಗುರು ಸತ್ಯವರ ಯೋಗಿಗೊಲಿದು ರಾಮಬೇಗ ಬಂದುದು ಚೆನ್ನಾಗಿ ಕಣ್ಣಿಲಿ ಕಂಡೆ 3 ನಾಮಗೊಂಡಲು ಈ ಭೂಮಿದೇವಿ ಇಲ್ಲಿತಾ ಮಗಳ ಅಳಿಯನ್ನ ಕರೆದು ಒಯ್ದು ||ಪಾಮರರಿಗೆ ಪೋದರೆಂದೆಂಬ ಭ್ರಮೆಯ ತೋರಿಈ ಮುನಿಯ ಮಾನಸ ಹಂಸನಾಗಿದ್ದ 4 ಒಂದು ಮಾಸವುಪವಾಸ ಮಾಡಿದವರ್ಗೆಬಂದೊದಗುವ ಜಗದೊಳಗೆ ಖ್ಯಾತ ||ಸಂದೇಹವಿಲ್ಲದೆ ಅನಶನ ವ್ರತವನ್ನುಒಂದು ತಿಂಗಳು ಮಾಡಿ ಇಂದಿರೇಶನ ತಂದ 5 ನಳನಾಮ ಸಂವತ್ಸರ ಫಾಲ್ಗುಣ ಬಹುಳ ದ್ವಾದಶಿನಳಿನಾಕ್ಷ ರಾಮಸ್ವಾಮಿಯು ಹೊರಟು ||ಖಳರ ಖಂಡಿಸಿ ತಾನು ಇವರ ಭಾವಕೆ ಮೆಚ್ಚಿಲಲನೆ ಸಹಿತವಾಗಿ ಭುವನೇಶ ಬಂದ6 ಗಂಗಾದಿ ಸಕಲ ತೀರ್ಥಗಳಲ್ಲಿ ಮಿಂದು ಶ್ರೀರಂಗಾದಿಯಲ್ಲಿ ಮೋಹನ ವಿಠಲನ್ನ ||ಸಂಗೀತೆಗೆ ಸರ್ವದಾಧಿಕ ಫಲಸಂಘಟಿಸುವದು ಸಜ್ಜನರು ಕೇಳಿ 7
--------------
ಮೋಹನದಾಸರು
ಸತ್ಯಸಂಕಲ್ಪ ತ್ವಚಿತ್ತಾನುಸಾರ ತ್ವ ಚಿತ್ತ ವೃತ್ತಿಯು ನಿನಗೆ ಸರ್ವÀತ್ರದಿ ಪ ಉತ್ತಮೋತ್ತಮ ನೀನೆಗತಿ ಎಂ- ಉತ್ತರಿಸು ಭವಶರಧಿಯಲಿ ಎತ್ತಿ ಕಡೆಹಾಯಿಸುವುದೀಗಲೆ ಅ.ಪ ಜಗದಾಖ್ಯವೃಕ್ಷಕ್ಕೆ ಆದಿಕಾರಣನಾಗಿ ಜಗದೇಕವಂದ್ಯ ನೀನಾಧಾರನೋ ತ್ವಗಾದಿ ಜ್ಞಾನೇಂದ್ರಿಯಗಳೆಂಬೀ ಐದು ಬಿಳಲುಗಳೂ ಪಡೂರ್ಮಿಗಳೂ ಮೇಧ ಹೊದಿಕೆಗಳು ಪಂ ಮನ ಅಹಂಕಾರವೆಂದು ಪೊಟ್ಟರೆಗಳು 1 ಪ್ರಾಣಾದಿಪಂಚಕವು ಕೂರ್ಮ ಕೃಕಳಾದಿ ಪಂಚವಾಯುಗಳು ಪರ್ಣಗಳು ಹತ್ತೆನಿಸಿ ವೃಕ್ಷಕೆ ದುಃಖ ಸುಖವೆಂಬೆರಡು ಮೋಕ್ಷಗಳೆಂಬÉೂ ರಸಗಳು ಪಕ್ಷಿಗಳು ವಿಹರಿಸುತಲಿಹವು ಕರ್ಮಫÀಲವನು ಕಟಾಕ್ಷವಿಲ್ಲದೆ 2 ಅಡಿ ಮೇಲಾಗಿಹ ಗಿಡದೊಡೆಯ ನೀ ಗಿಡದೊಳು ಅಡಿಗಡಿಗೆ ಜೀವರೊಡಗೂಡಿ ಬಂದವರನು ನಿನ್ನೊಡಗೂಡಿ ಒಂದೇ- ಕಡೆಯಾಡುತಿಹ ಬಡಜೀವಿ ನಾನಯ್ಯ ಪಡೆದ ಫಲವದು ಬೆಂಬಿಡದೆ ಭೋಗಕೆ ಬರುತಲಿಹುದಯ್ಯ ಬಡಿದು ಉಣಿಸುವೆಯೊ ಬಿಡದಿರುವೆ ಎನ್ನೊಡೆಯಾ ಒಡೆಯ ನಿನ್ನೆದುರಿನಲಿ ನಾ ಪರಿಹರಿಸಿ ರಕ್ಷಿಸೊ ಮೃಡನುತ ಶ್ರೀ ವೇಂಕಟೇಶಾ 3
--------------
ಉರಗಾದ್ರಿವಾಸವಿಠಲದಾಸರು
ಸತ್ರಾಜಿತ ಕುಮಾರಿ ಗೃಹಕೆ ಪಕ್ಷಿವಾಹನ ತನ್ನ ಅಚ್ಛದ ಸತಿಯ ಕಾರಣನೆಲ್ಲೂ ಭಾಮೆ ಇಚ್ಛೆಯಿಂದಲಿ ಬಂದನಿಲ್ಲೆ 1 ಮಚ್ಛಲೋಚನೆ ನಗುತ ಅಚ್ಚಮುತ್ತಿನ ದ್ವಾರ್ಯ ಮುಚ್ಚುಕದವ ತೆಗೆಯದೆ ಭಾಮೆ ಅಚ್ಚುತನ ಕೂಡ ವಿನಯದಿ 2 ಮದಗಜಗಮನೆ ಕೇಳೆ ಗಜವರದನು ನಾನೆ ಕದವ ತೆಗೆಯೆ ಕಮಲಾಕ್ಷಿ ಭಾಮೆ ಮುದದಿ ನೋಡೆನ್ನ ನಿರೀಕ್ಷೆ 3 ಗಜವರದನೆ ಗಜವ ವಧೆ ಮಾಡಿದವನು ನಿನ್ನ ನೆಲೆಯ ಬಲ್ಲವರು ನಾವಲ್ಲ ಕೃಷ್ಣ ಕದವ ತೆಗೆಯೋರ್ಯಾರಿಲ್ಲ4 ಉದಕÀದೊಳು ಮುಣುಗಿ ಬ್ಯಾಗ ಮದಕದಿಂದ್ಹಯನ ಕೊಂದು ತವಕದಿ ವೇದವ ತಂದೆ ನಾನು ಭಾಮೆ ಮತ್ಸ್ಯ ನಾನೆ 5 ಹೊಳೆವೊ ಮತ್ಸ್ಯನಾದರೆ ಶರಧಿ ಹುಡುಕುತ ಹೋಗೊ ನಿನಗಾವಾಸಸ್ಥಾನಯಿದಲ್ಲ ಕೃಷ್ಣ ಜಲವೆನ್ನ ಮನೆಯೊಳಗಿಲ್ಲ 6 ಅಂಬುಧಿ ಮಥಿಸಿ ಅಮೃತ ತಂದು ಸುರರಿಗಿಟ್ಟು ಮಂದರವ ಬೆನ್ನಲಿ ತಾಳಿದೆನೆ ಭಾಮೆ ಸುಂದರ ಕೂರ್ಮನು ನಾನೆ 7 ಸುರರಸುರರ ಯುದ್ಧ ಬಿಟ್ಟು ಮೋಹಿನ್ಯಾಗಲ್ಲಿ ನಡೆ ನಾ ಸ್ತ್ರೀರೂಪ ನೋಡೋಳಲ್ಲ ಕೃಷ್ಣ ಛಲದಿಂದ್ವಂಚಿಸು ಹೋಗವರನೆಲ್ಲ 8 ಮಣ್ಣು ಕೆದರುತಲ್ಹೋಗ್ಹಿ- ರಣ್ಯಾಕ್ಷನ್ನ ಸೀಳಿ ಮನ್ನಿಸ್ಯವನಿಯ ತಂದೆ ನಾನೆ ಭಾಮೆ ವರಾಹ ನಾ ಬಂದೀನೆ 9 ವರಾಹ ನೀನಾದರೆ ಗರಿಗಂಹರವ ಸೇರೊ ಮನೆಗೆ ಬರುವೋದುಚಿತಲ್ಲ ಕೃಷ್ಣ ಮೆಲುವ ಬೇರೆನ್ನ ಮನೆಯೊಳಿಲ್ಲ 10 ತರಳ ಕರೆಯಲು ಕಂಬ ಒಡೆದಸುರನ ಒಡಲ ಕಡು ಕೋಪವನ್ನು ತಾಳಿದನೆ ಭಾಮೆ ವರಲಕ್ಷ್ಮೀನರಸಿಂಹ ನಾನೆ 11 ಕರುಳಾಧಾರಕ ಕೇಳೊ ಕರಾಳವದನಕ್ಕಂಜುವೆನು ಕಡುಕೋಪ ಎನ್ನೊಳು ತರವಲ್ಲ ಕೃಷ್ಣ ತರಳರಂಜುವರು ಲಕ್ಷ್ಮೀನಲ್ಲ 12 ಅಂಜೋದ್ಯಾತಕೆ ಚಿಕ್ಕ ಕÀಂದ ವಟುವು ಚೆಲ್ವ ಸುಂದರ ವಾಮನನು ನೋಡೆ ಭಾಮೆ ಬಂದೆನ್ನ ಗುಣವ ಕೊಂಡಾಡೆ 13 ಕಪಟ ರೂಪದಿ ದಾನ ತ್ರಿಪಾದ ಭೂಮಿ ಬೇಡಿದ ವಿಪರೀತ ಮಾಯವ ಕಂಡವಳಲ್ಲ ಕೃಷ್ಣ ಅಪರ್ಮಿತ ಗುಣ ಬಲಿ ಬಲ್ಲ 14 ಸರಸಿಜಮುಖಿ ಕೇಳೆ ನಿರುತ ಜಪತಪಾಚರಿಸಿ ಪರಶುರಾಮನು ನಾ ಬಂದೆನೆ ಭಾಮೆ ಶರಥ ಮಾಡದಿರೆನ್ನೊಳು ನೀನೆ 15 ನಿರುತ ನಿಷ್ಠೆಯ ಬಲ್ಲೆ ಗುರುತು ಮಾತೆಯ ಕೊಂದೆ ಸರಸವಾಡುವೋಳು ನಾನಲ್ಲ ಕೃಷ್ಣ ಶರಥÀ ಕ್ಷತ್ರಿಯರಲ್ಲಿದು ಹೋಗೆಲ್ಲ 16 ಎರಡೈದು ಶಿರಗಳ ಕಡಿದು ಜಾನಕಿದೇವಿ ಒಡಗೊಂಡಯೋಧ್ಯವನಾಳಿದೆನೆ ಭಾಮೆ ಪೊಡವಿಗೊಡೆಯ ರಾಮ ನಾನೆ 17 ಅಡವಿ ಅರಣ್ಯ ತಿರುಗಿ ಮಡದಿಗಪನಿಂದ್ಯವ ಕಟ್ಟಿ ಅಡವಿಗಟ್ಟ್ಯಂತಃಕರಣವಿಲ್ಲ ಕೃಷ್ಣ ಬಿಡು ನಿನ್ನ ಸುಳ್ಳು ವಚನವಿದೆಲ್ಲ 18 ಯದುವಂಶದೊಳು ಜನಿಸಿ ವಧೆಮಾಡಿ ದೈತ್ಯರ ನಿರ್ಭಯದಿಂದ ಬೆಳೆದೆನೆ ಭಾಮೆ ಮಧು ಮುರಾಂತಕÀ ಕೃಷ್ಣ ನಾನೆ 19 ಕಲಹ ಮಾಡುತ ಕಾಲ- ಯಮನಿಂದಲೋಡಿ ಬಂದು ನಿರ್ಭಯದಿಂದ ಬೆಳೆಯಲು ನಿಂದೆಲ್ಲ ಕೃಷ್ಣ ಮಲಗಿದ ಮುಚುಕುಂದ ಬಲ್ಲ 20 ನಿಗಮ ನಿಂದ್ಯವ ಮಾಡಿ ಬಗೆಯಿಂದ ತ್ರಿಪುರರ ಚೆದುರೆಯರನು ಒಲಿಸಿದೆನೆ ಭಾಮೆ ಸುಗುಣ ಶರೀರ ಬೌದ್ಧ ನಾನೆ 21 ತ್ರಿಪುರ ಸತಿಯರನೆಲ್ಲ ವಶಮಾಡಿದಂಥ ಶೂರ ವಸನರಹಿತಾಗಿ ತಿರುಗೋದÀಲ್ಲ ಕೃಷ್ಣ ಶಶಿಮುಖಿಯರು ನಗುವರೆಲ್ಲ 22 ಚೆಲುವ ತುರುಗನೇರಿ ಹೊಳೆವೋ ಕತ್ತಿಯ ಶೂರ ಖಳರ ಮರ್ದನ ಮಾಡುವೆನೆ ಭಾಮೆ ಥಳಥಳಿಸುವ ಕಲ್ಕ್ಯ ನಾನೆ23 ಕಲಿಯ ಸಂಹಾರ ಕೇಳೊ ನಿನ್ನ ಕತ್ತಿಗಂಜುವರ್ಯಾರೊ ಕಟಿಪಿಟ್ಯೆನ್ನೊಳು ತರವಲ್ಲ ಕೃಷ್ಣ ಕಲಿಗಳೆನ್ನರಮನೆಯೊಳಿಲ್ಲ 24 ಜಾಂಬವಂತನ್ನ ಗೆದ್ದು ತಂದೆ <
--------------
ಹರಪನಹಳ್ಳಿಭೀಮವ್ವ
ಸತ್ಸಂಗ ಮಾಡೊ ಮನವೆ ಚಿತ್ಸುಖ ನೋಡಲಿಕೆ ಅತಿಸೂಕ್ಷ್ಮಾನಂದ ಸುಪಥ ಅತಿಶಯಾನಂದ ಸದ್ಗತಿ ಸುಮೋಕ್ಷದಾಯಕ ಹಿತದೋರಿಕೊಡುವ ಸದ್ಗುರುನಾಥ ಧ್ರುವ ತೊಡಕಿ ಮಿಡುಕಬ್ಯಾಡ ಹಡಕಿ ವಿಷಯದೊಳು ಗಡಕವಾಗಿ ಕೆಡುಕ ಬುದ್ಧಿಯಿಂದ ಕೆಡುದೇನ ಬಡದ ಭವಣೆ ಬಟ್ಟು ತಾವು ಕೊಡುವರೇನ ಹಾಕಿ ವೈವಯಮನ ಬ್ಯಾಗೆ ಗುರುದಯಕರುಣ 1 ಸಿಲ್ಕಿಮಾಯ ಮಲ್ಕಿನೊಳು ಅಳ್ಕಿ ಆಲಪರಿಯಬ್ಯಾಡ ಬಲ್ಕಿ ಮಾಡಿಕೊಳ್ಳಿ ನೀ ಸುಜ್ಞಾನ ಕ್ಷುಲ್ಲಕ ಬುದ್ಧಿಗಾಗಿ ನಿನ್ನ ತನುವಿನೊಳಗೆ ಖೂನ ನುಲ್ಕಿ ಸುಟ್ಟ ಮಲ್ಕಿನಂತೆ ಜನಕಾಲಂಬ ತೋರಿ ನೀನು ಜಲಕಮಲದಂತಿರನುದಿನ ನಿಲ್ಕಿ ನೆಲೆಗೊಂಬುದಿದು ತಳಕು ತನ್ನೊಳಗದೆಯೆಂದು ನಾಲ್ಕುವೇದ ಸಾರುತಿದೆ ಪೂರ್ಣ2 ಮಾನವ ಜನ್ಮ ನಿರ್ತದಿಂದ ಅರ್ತು ಕೂಡಿ ಕರ್ತು ನಿಜಾನಂದ ಗುರುಬೋಧ ಥರಥರದಿ ತೋರಿ ಪೂರ್ಣ ಸಾರ್ಥಕ ಮಾಡುವದಿದು ತೀರ್ಥಪುಣ್ಯ ಸರ್ವಕ್ಷೇತ್ರವಾದ ಅರ್ಥಿಯಿಂದವಿಡಿದು ಗುರು ಪಡಿಯೊ ನಿನ್ನ ಸ್ವಹಿತದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸತ್ಸಂಗದ ಫಲ ಸದ್ಭಾವಿಯಾದವ ಸೇವಿಸಿಕೊಂಬುವನೈ | ಮತ್ಸರ ಮದದಲಿ ಯಚ್ಚರಗೊಳದಾಧಮ ಬದಿಲಿದ್ದೆ ನೈ ಪ ಬದಿಲಿಹ ಮಂಡೂಕಗೇನೈ | ಶ್ರೀಮಂತರು ಹಾಲವಕರಕೊಂಬರು | ಉಣ್ಣಿಗೆ ಫಲವೇನೈ 1 ಬಿದಿರು ಬೊಬ್ಬುಹಳಿಗೇನೈ | ಆಗಮಜ್ಞರ ವಿದ್ಯಾ ವ್ಯುತ್ಪನ್ನಗಲ್ಲದೇ ಜಡಮತಿಗಳಿಗೇನೈ | 2 ಭೂಗತ ಧನವದು ವಂಶಜಗವಲ್ಲದೇ | ಕಾದಿಹ ಫಣಿಗೇನೈ | ನುಡಿಯಿದು ನಂದನು ಸಾರಿದನೈ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸತ್ಸಂಗದಿಹುದು ನೇಮ ಧ್ರುವ ಸಾಧು ಸಮಾಗಮ ಸಮಾಗಮ ಛೇದಿಸುವದು ಭವಭ್ರಮ 1 ತರಣೋಪಾಯಿದು ಒಂದೆ ಇದು ಒಂದೆ ನಿರ್ಣೈಸದೆ ಮೊದಲಿಂದೆ 2 ಸಾಧನಿದೆ ಸ್ವಹಿತ ಇದೆ ಸ್ವಹಿತ ನವನೀತ 3 ಸರಿ ಈ ಸಾಧನಕಿಲ್ಲ ಸಾಧನಕಿಲ್ಲ ಗುರು ಶರಣಾಗತ ಬಲ್ಲ 4 ಸಾಧನದಿ ಸುವಸ್ತ ಸುವಸ್ತ ಸಾಧಿಸಿತು ಮಹಿಪತಿಗೆ ಸಾಭ್ಯಸ್ತ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸತ್ಸಂಗದೊಳಗಿರಿಸೋ ಮಮದೇವ ಆಹ ಮತ್ಸರ್ವವ್ಯಾಪೀಶ ತ್ರಿಗುಣಪ್ರಭಾವಾ ಪ ನಿಸ್ಸಂಗ ನಿರ್ಮೋಹ ನಿಶ್ಚಲಾತ್ಮಕ ಪಾದ ತತ್ಸೇವೆಯೊಳಗಿರಿಸೊ ಕರುಣ ಪ್ರಭಾವಾ 1 ಅಧಮರಾಶ್ರಯದೊಳಗೆ ಅಧಿಕನಾಗಿರುತಿರುವೆ ಇದು ಬಿಡಿಸಿಯೆ ಪರಮಪದದೊಳಗೆ ಯಿರುವಾ 2 ನಿಜಪದಾಶ್ರಯನ ಮಾಡೊ ಭುಜಗಾಸನನೆ ರಂಗಾ ಭಜನೆಯೊಳಗಿರುತಿರಿಸು ಶ್ರೀ ತುಲಶಿರಾಮಾ 3
--------------
ಚನ್ನಪಟ್ಟಣದ ಅಹೋಬಲದಾಸರು
ಸತ್ಸಂಗವು ಲೇಸು ಸ್ವಹಿತಕೆ ಧ್ರುವ ನೆರಿಲವರನುದಿನ ಬಾಳುದು ಲೇಸು ಸರಸ ಸುಮಾತನೆ ಕೇಳುದು ಲೇಸು 1 ನೋಡಿದವರಾಚರಣೆಯ ಲೇಸು ಮಾಡಿದವರನು ಸರಣಿಯ ಲೇಸು 2 ಮಹಿಪತಿಗಿದೆ ಸುಖದೋರಿತು ಲೇಸು ವಿಹಿತಕ ವಿಹಿತಾಯಿತು ಬಲುಲೇಸು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸದಮಲ ಸುಂದರ ಪೀಠಕೆ ಪ ಇಂದು ಸುಂದರಮುಖಿ ಮಂದಗಮನೆ ಸಖಿ ಚಂದ್ರ ಬಿಂಬಾಧರೆ ಸುಂದರಿ ವೈಯಾರಿ ಮಂದಾರ ಮಾಲೆಯೆ 1 ನೀರಜನೇತ್ರೆಯೆ ಚಾರುದಸುಗಾತ್ರಿಯೆ ಮಾರಹರನ ಸಖ ಮೋಹನ ಮಿತ್ರೆಯೆ ಕೀರವಾಣಿಯೆ 2 ಸುರವರ ಪೂಜಿತೆ ನರವರ ವಂದಿತೆ ಶರಣಾಗತ ಪರಿಪಾಲಿನಿ ಭಾಮಿನಿ ರಾಮ ವಲ್ಲಭೆ 3 ದಿವ್ಯ ಮಂಗಳರೂಪೆ ಭವ್ಯ ಕಲಾಲಾಪೆ ಸರ್ವ ಸುಗುಣಮಣಿ ಹಾರಿಣಿ ರಮಣಿ ಭೂಮಿ ನಂದಿನಿ 4 ಮಾನಿನಿ ಕಾಮಿನಿ ಜ್ಞಾನ ಸಂವರ್ಧಿನಿ ಜಾನಕಿ ಜನನಿ ಮಾನವೇಶ್ವರಿ5
--------------
ಬೇಟೆರಾಯ ದೀಕ್ಷಿತರು