ಒಟ್ಟು 18608 ಕಡೆಗಳಲ್ಲಿ , 136 ದಾಸರು , 8432 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾಳು ಸೌಖ್ಯದಿಂ ತನಯನೆ ಬಾಳು ಸೌಖ್ಯದಿಂ ಪ ಲೀಲೆಯೊಳನುದಿನ ಸಂತಸವಾಂತು ನೀಂ ಅ.ಪ. ಮುರಹರ ಪರಮಾಯುಷ್ಯವ ನೀಯಲಿ ಪೊಂದುತ ನಲಿಯುತ 1 ಇಂದ್ರನಂತೆ ವರ ಭೋಗವ ಪೊಂದುತ ಮಂದಿರಕಾನಂದವನಿತ್ತು 2 ಧರ್ಮ ಕಾರ್ಯವನ್ನಾಚರಿಸುತ ನೀಂ ಪೊಂದುತ ಸುಜನರ ಸೇವಿಸಿ 3 ಕೀರ್ತಿವಂತ ನೀನಾಗಿರು ಸರ್ವದ ಆರ್ತರನ್ನು ರಕ್ಷಣೆಯ ಗೈಯುತ 4 ಶಾರದೆ ನಿನ್ನಯ ಸೇರಲಿ ಸತತಂ ನಿತ್ಯವು ಸಲಹಲಿ ನಿನ್ನನು 5 ಅನ್ನಧಾನ ಧೇನುದಾನವ ಗೈಯುತ ಕನ್ಯಾದಾನವ ವಿರಚಿಸುತ ಮನ್ನಿಸಿ ಹಿರಿಯರ ಗುರುಗಳ ಸೇವಿಸಿ 6 ಮಾನವಂತ ನೀನಾಗಿರು ಸರ್ವದ ಜ್ಞಾನವಂತನಾಗಿರು ನಿರತಂ ಧೇನುಪುರೀಶನ ಶ್ರೀಶನ ಸ್ಮರಿಸುತ 7
--------------
ಬೇಟೆರಾಯ ದೀಕ್ಷಿತರು
ಬಾಳೆ ಕಿತ್ತಳೆ ಜಂಬುದ್ರಾಕ್ಷಿ ರಸಾಲ ಫಣಸ ಖರ್ಜೂರ ಫಲಗಳ ಬಾಲಕೃಷ್ಣಗೆ ಮನುಜಾ ಸಾಯಂಕಾಲ ಪ್ರಾರ್ಥಿಪುದು ಪ ಪರಮಪುರುಷನು ಪೂಜೆಕಾಲದಿಸುರರು ಕರ್ಮಗಳಿಗೆ ಚಿಂತಿಸಿಪರಿಚರಿಸುವ ಪುರುಷ ಮಾಧವಚರಣ ಪೊಂದುವನು 1 ನಾನು ಮಾಡುವ ಕವಿತೆ ಎಲ್ಲವವೇಣು ಬಾಲನ ಮುಂದೆ ಪೇಳುವೆಸಾನುರಾಗವ ಮಾಡಲೆನ್ನೊಳುಮೌನಿ ನಾರದರು 2 ಇಂದಿರೇಶನ ಮುಖವ ನೋಡುತನಂದಗೋಪಗೆ ಈ ಸುಶೃತಿಗಳಿಂದವೃಂದ ಚರಿಸುತ ತತ್ವಾದಾಂಬುಜದ್ವಂದ್ವಕರ್ಪಿಸುವೆ 3
--------------
ಇಂದಿರೇಶರು
ಬಿಂಕವ್ಯಾತಕ್ಕೆನಮ್ಮ ಕೂಡ ಬಿಂಕವ್ಯಾತಕ್ಕೆಅಕಳಂಕ ರುಕ್ಮಿಣಿಯರಮನೆಗೆ ಅಹಂಕಾರದಲಿ ಮುಯ್ಯ ತಂದು ಪ. ವಾತನೊಡಗೂಡಿ ಜನಿಸಿ ಆತನಮದುವೆ ಮಾಡಿಕೊಂಡೆನೀತಿಯೇನ ನಿನಗೆ ದ್ರೌಪತಿಈ ಮಾತು ಕೇಳಿ ಮಂದಿ ನಗರೆ 1 ಹುಟ್ಟು ಹೊಂದು ನಾರಿ ನೀನುಎಷ್ಟೊಂದು ಗರವು ನಮ್ಮ ಕೂಡಯಾಕೆ ಕೃಷ್ಣನ ಅರಸಿ ರುಕ್ಮಿಣಿಗೆಒಂದಿಷ್ಟರೆ ದೋಷ ತೋರ ಸಖಿಯೆ2 ಜನನ ಮರಣವೆಂಬೆರಡು ಜಾಣಿ ರುಕ್ಮಿಣಿಬಲ್ಲಳೇನ ಜನನಿ ಬೊಮ್ಮಗ ಎನಸಿತಾನೆ ಜಗದಿ ಖ್ಯಾತಿ ತುಂಬಿಲ್ಲವೇನ ಈ ಜಗದಿ ಖ್ಯಾತಿ ತುಂಬಿಲ್ಲವೇನ 3 ನಿತ್ಯ ನಿತ್ಯ ಮೂರುತಿ ಕೃಷ್ಣನ ಭಜಿಸಿನಿತ್ಯ ತೃಪ್ತಳು ಎನಿಸುತಿಹಳು 4 ಅತ್ತಿಗೆಯರೆಂಬೊ ದಿವ್ಯ ಅರ್ಥನಾಮವ ಜಪಿಸಿಮತ್ತೆ ರಾಮೇಶನ ಅರಸಿಯರಿಬ್ಬರಭೃತ್ಯಳಾಗಿ ಭಾಗ್ಯವ ಪಡಿಯೆ5
--------------
ಗಲಗಲಿಅವ್ವನವರು
ಬಿಗಿಯದಿರು ಬಿಗಿಯದಿರು ಎಲೆ ಮಾನವಾಧಿಗಿ ಧಿಗಿ ಧಿಗಿಯೆನುತ ನಿನಗೇಕೆ ಗರ್ವ ಅ ವಿರಕ್ತಿಯಲಿ ಹನುಮನೆ ವಿವೇಕದಲಿ ವಸಿಷ್ಠನೆಶೂರತನದಲಿ ಶಂತನುತನಯನೇನೊಸ್ವರದಲಿ ತುಂಬುರನೆ ಗೀತದಲಿ ನಾರದನೆಪರಾಶರ ಮುನಿಯೆ ವ್ರತತಿ ಪಟ್ಟದಲ್ಲಿ 1 ಚೆಲುವಿನಲಿ ರಾಮನೆ ಸತ್ಯದಿ ಹರಿಶ್ಚÀ್ಚಂದ್ರನೆಛÀಲದಲ್ಲಿ ಋಷಿ ವಿಶ್ವಾಮಿತ್ರನೇನೋಬಲದಲ್ಲಿ ವಾಲಿಯೇ ಹಲಧರನೆ ಹಿರಣ್ಯಕನೆಬಿಲು ವಿದ್ಯದಲಿ ಪರಶುರಾಮನೇ ನೀನು 2 ತ್ಯಾಗದಲಿ ಕರ್ಣನೇ ಭೋಗದಲಿ ಶತಮಖನೆಯೋಗದಲಿ ಶುಕಸನಕ ಜನಕನೇನೋಭಾಗ್ಯದಲಿ ಬಲಿಚಕ್ರವರ್ತಿಯೋ ದಶಶಿರನೊದೀರ್ಘದಲಿ ಮೇರುವೇ ಮಂದರವೆ ನೀನು 3 ಶಕ್ತಿಯಲಿ ಕಾಲನೆ ಭುಕ್ತಿಯಲಗಸ್ತ್ಯನೆಮುಕ್ತಿ ಪಡೆವಲ್ಲಿ ಖಟ್ಟಾಂಗರಾಯನೇನೊ 4 ಶಾಪದಲಿ ಬ್ರಹ್ಮನೆ ತಾಪದಲಿ ಸೂರ್ಯನೆಕೋಪದಲಿ ಮಹೇಶನೇನೋ ನೀನುತಪದಲ್ಲಿ ಹನುಮನೆ ವ್ರತದಿ ರುಕ್ಮಾಂಗದನೆಕೃಪೆಯಲ್ಲಿ ಶ್ರೀ ಕೃಷ್ಣದೇವನೆ ನೀನು 5
--------------
ವ್ಯಾಸರಾಯರು
ಬಿಚ್ಚದಿರು.ಬಿಚ್ಚದಿರು ಮುಚ್ಚು ಈ ಬಾಯಿ ಬಿಚ್ಚಿದ ಬಳಿಕದಕೆ ಎಚ್ಚರವೆ ಇಲ್ಲ ಪ ಅಲ್ಲ ಅಹುದೆಂಬುವುದು ಎಳ್ಳಷ್ಟು ಇದಕಿಲ್ಲ ಸುಳ್ಳುಹೇಳುವುದೆಲೊ ಅಳತೆಯೆ ಇಲ್ಲ ಜೊಳ್ಳು ಮಾತುಗಳ್ಹೇಳಿ ಮಳ್ಳು ಮಾಡಿ ಜನರಲ್ಲಿ ಬಲ್ಲವೆನಿಸಿಕೊಂಬ ಸೊಲ್ಲೆ ಹುಡುಕುವುದು 1 ಸಲ್ಲದೀ ಆತ್ಮದ ಇಲ್ಲದ ಸುದ್ದಿಯನು ಎಲ್ಲಿತನಕಲು ಬೇಸರಿಲ್ಲದ್ಹೇಳುವುದು ಅಲ್ಲ ಅಹುದೆಂಬುದನು ಎಲ್ಲಬಲ್ಲಂಥ ಸಿರಿ ನಲ್ಲನ ಪಾದಕ್ಕೆ ಅಲ್ಲೆನಿಸುತಿಹ್ಯದು 2 ಮುಚ್ಚುಮರೆಯಿದಕಿಲ್ಲ ಎಚ್ಚರಮೊದಲಿಲ್ಲ ಕಿಚ್ಚಿನೋಳ್ಬಿದ್ಹೋಗ್ವ ನೆಚ್ಚಿಕಿಲ್ಲ ಕಾಯ ಅಚ್ಯುತ ಶ್ರೀರಾಮನಂ ಮುಚ್ಚಿಭಜಿಸಿ ಭವದುರುಲು ಬಿಚ್ಚಿಸಿಕೊಳ್ಳೊ 3
--------------
ರಾಮದಾಸರು
ಬಿಟ್ಟನ್ಯಭಜನೆಯ ಕಂಡು ಪ ಹೊಚ್ಚಿ ಸುಳಿದಟ್ಟಿ ಸುಡುವ ಅಡವಿಗಿಚ್ಚಿನ ಭಯಕೆ ಬೆಚ್ಚಿ ಅರಗಿನ ಮನೆಯ ಹೊಗುವವನಂತೆ ಅಚ್ಚರಿಯೆನಿಸೆ ದಹಿಪ ತಾಪತ್ರಯಕ್ಕಳುಕಿ ತುಚ್ಛ ದೈವಗಳ ಮರೆಯೊಗುವ ಮನುಜರಕಂಡು 1 ಉರಿಯ ಮಳೆಗರೆಯುತಿರೆ ತೃಣಗೇಹವನು ಹೊಕ್ಕು ಹರಣವನುಳುಹಿಕೊಂಬೆನೆಂಬಂತೇ ಉರುಬೆ ನಾನಾ ರೋಗಗಳುಳುಹಲು ಹಲವು ದೈವಗಳಿ ಗೆರಗಿ ಜೀವನಕೆ ಕಳಕಳಿಪ ಮನುಜರ ಕಂಡೂ 2 ಮುಗಿಲಗಲ ಧರೆ ಜರಿಯುತಿರೆ ಹುಲ್ಲಿನಣಬೆಯೊಡ್ಡಿ ಮಿಗೆ ಬಾಳ್ವೆನೆಂಬ ಮರುಳನಂದದೀ ಉಗಿದಸಿಯ ಮೃತ್ಯುವಿನ ಭಯಕೆ ನಾನಾದೇವ ತೆಗಳಮರೆಯೊಗುವ ಮನುಜರ ಕಂಡು 3 ಘುಡು ಘುಡಿಸಿ ಸಿಡಿಲೆರಗುತಿರೆ ತನ್ನ ಕೈ ವಿಡಿದ ಕೊಡೆಯ ಮರೆಗೊಂಡುಳಿವೆನೆಂಬಂತೇ ಮುಡಿವಿಡಿದೆಳೆವ ಕಾಲನ ಭಯಕೆ ನಾನಾದೈವ ದಡಿವಿಡಿದೆರಗಿ ಹಲು ಬಿಡುವ ಮನುಜರ ಕಂಡು 4 ಯಾತಮುಳಿದರೆ ಜಗದಲುಳಿದವರಾರು ಮ ತ್ತೀತನುಳುಹಿದನನು ಕೊಂದವನಾವ ಇ ದೇತಕರಿಯರೋ ನರರು ಅಕಟಕಟ ವೈಕುಂಠ ನಾಥ ಪರಿಪೂತನ ಪದಕಮಲವ ಭಜಿಸರೆಂದು 5 ನೀರಡಿಸಿ ಜಾಹ್ನವಿಯ ತೀರದಲಿ ಭಾವಿಯಾ ನೀರ ಕುಡಿವ ಮಾನವನ ತೆರದೀ ಹರಿಯ ಚರಣವಿರಲು ಭೂರಿದೈವಂಗಳಿನ್ನೇಕೆ ಭಜಿಸುವೆ ಮನುಜ ಹರಿ ಕಾರುಣ್ಯನಿಧಿ ವೈಕುಂಠವಲ್ಲಭ ಬೇಲೂರ ಚೆನ್ನಿಗರಾಯ ಕೃಪಾನಿಧಿಯಿರಲು 6
--------------
ಬೇಲೂರು ವೈಕುಂಠದಾಸರು
ಬಿಟ್ಟಿರಲಾರೆ ಬಾ ಗೋವಿಂದಾ ಸೃಷ್ಟಿಶಾನಂದ ಪ ಬಿಟ್ಟಿರಲಾರೆ ಮನಮುಟ್ಟಿ ಭಜಿಪೆನಯ್ಯ ಅಷ್ಟಮಹಿಷೇರ ಸಹಿತ ನಾಟ್ಯವಾಡುತ ಬೇಗ ಬಾ ಅ.ಪ ಗೊಲ್ಲರ ಮನೆ ಪೊಕ್ಕು ಪಾಲ್ಬೆಣ್ಣೆಗಳ ಮೆದ್ದು ಚೆಲ್ವ ಲಲನೇರ ಗಲ್ಲ ಮುದ್ದಾಡುತ ಬೇಗ 1 ಮಂದಗಮನೆಯರ ಮಂದಹಾಸದಿ ಅಪ್ಪಿ ದ್ವಂದ್ವ ಕುಚದಲ್ಲಿಟ್ಟ ನಂದಜ ಕರಗಳಿಂದ 2 ಮಿರಿಮಿರಿ ಮಿಂಚುವ ಕಿರೀಟ ಕುಂಡಲ ಧರಿಸಿ ವಾರೆ ನೋಟದಿ ನಾರೇರ ಮನ ಸೆಳೆವ 3 ಸುಮನಸರೊಂದಿತ ಯಮುನಾ ಪುಳಿನದಿ ವಿಮಲ ವೇಣುಸ್ವರದಿ ಕಮಲಾಕ್ಷಿಯರೊಲಿಸಿದ 4 ಶ್ರೀವತ್ಸ ಕೌತ್ಸುಭ ಪವಳ ಮುತ್ತಿನಹಾರ ನ್ಯಾವಳ ಸರಿಗಿಟ್ಟು ಗೋವಳರೊಡಗೂಡಿ 5 ತುತ್ತೂರಿ ಝಾಂಗಟೆ ಒತ್ತಿ ಪಿಡಿದಿಹ ಕಹಳೆ ಬತ್ತೀಸ ರಾಗದಿ ತತ್ಥೈವಾದ್ಯದೀ 6 ಎತ್ತಿ ಪಿಡಿದಿಹ ಛತ್ರಿ ಸುತ್ತು ಮಾಗಧ ಮಂದಿ ಸ್ತೋತ್ರವ ಮಾಡೆ ನೇತ್ರೋತ್ಸವ ತೋರುತ 7 ದಿವಪನ ಸೋಲಿಪ ನವ ಪೀತಾಂಬರ ಧರಿಸಿ ಭುವನವ ಮೋಹಿಪ ನವ ಸುವಿಶೇಷನೆ 8 ವಿಜಯ ರಾಮಚಂದ್ರವಿಠಲರಾಯನೆ ನಿಜ ಪರಿವಾರದಿಂ ಭಜಕರ ಪಾಲಿಪ 9
--------------
ವಿಜಯ ರಾಮಚಂದ್ರವಿಠಲ
ಬಿಟ್ಟು ಬನ್ನಿರೊ ಸಂಸಾರದ್ಹಂಬಲ ಪ. ಸೃಷ್ಟಿಪತಿಯ ಸೇರಿ ನೀವು ಸುಖಿಸಬನ್ನಿರೊ ಅ.ಪ. ಹೆಂಡಿರುಮಕ್ಕಳು ಎಂಬೋ ಹಂಬಲ ಬೇಡಿರೊಕೊಂಡವರಲ್ಲ ಕೊಡುವರಲ್ಲ ಮುಂದಿನ ಗತಿಯನು 1 ಎಷ್ಟು ಮಾಡಿ ಗಳಿಸಿ ತಂದರು ಸಾಲದೆಂಬರೊನಷ್ಟಮಾಡಿ ಇವನ ಬದುಕು ಎಲ್ಲ ತಿಂಬರು 2 ನಡುಬೀದಿಯಲಿ ಇವನ ಎಳೆದು ಸೆಳೆವರೊಕಡೆಗಣ್ಣು ಕುಡಿಹುಬ್ಬು ನೋಟದಿಂದಲಿ 3 ಉಂಡು ಉಟ್ಟು ಗುಂಡಿನಂತೆ ಮನೆಯಲಿರುವರೊಚಂಡ ಯಮನದೂತರು ಬಂದು ಎಳೆದು ಒಯ್ವರೊ4 ಮುಟ್ಟಿ ಭಜಿಸಿರೊ ಹಯವದನನಂಘ್ರಿಯನೆಟ್ಟನೆ ಮುಕ್ತಿಮಾರ್ಗ ತೋರಿಕೊಡುವೆನೊ 5
--------------
ವಾದಿರಾಜ
ಬಿಟ್ಟು ಬರಲಾರಳಮ್ಮಯ್ಯಪಟ್ಟಮಂಚವ ಭಾವೆಬಿಟ್ಟರೆ ರುಕ್ಮಿಣಿ ಕೃಷ್ಣನ ಬೆರೆದಾಳೆಂಬೊ ಅಂಜಿಕೆಯಿಂದ ಪ. ಪಾದ ಸಿಕ್ಕಿತೋ ಸಿಗದೆಂದುಚಿಕ್ಕ ಚನ್ನಿಗಳ ಕೈವಶಚಿಕ್ಕ ಚನ್ನಿಗಳ ಕೈವಶವಾಗದಂತೆಜಪ್ಪಿಸಿಕೊಂಡು ವಟವಾದಳೆ 1 ಶಂಬರಾರಿ ಪಿತನ ತಂಬುಲಸಿಗದೆಂದು ಚುಂಬನದ ಸಮಯ ಚಿಗಿಳೀತುಚುಂಬನದ ಸಮಯ ಚಿಗಿಳೀತು ಎಂತೆಂಬೊಹಂಬಲದಿ ಒಳಗೆ ಕುಳಿತಳೆ2 ನಲ್ಲೆ ರಂಗಯ್ಯನ ಎಲ್ಲೆಲ್ಲಿ ಬಿಡಲೊಲ್ಲೆಎಲ್ಲ ನಾರಿಯರ ನೆರವಿಕೊಂಡುಎಲ್ಲ ನಾರಿಯರ ನೆರವಿಕೊಂಡು ಮನೆಯೊಳುನಿಲ್ಲಗೊಡರೆಂಬೊ ಭಯದಿಂದ3 ಒಗೆತನ ನಗೆಗೀಡಾಯಿತು ನೋಡೆ ಈ ಬಗೆ ಎಲ್ಲೆ ಕಾಣೆ ಜಗದೊಳು ಈ ಬಗೆ ಎಲ್ಲೆ ಕಾಣೆ ಜಗದೊಳು ರುಕ್ಮಿಣಿ ತಗಿ ನಿನ್ನನಡತೆ ತರವಲ್ಲ4 ಅನಂತ ಮಹಿಮಗೆ ಇನ್ನೆಂಥ ಕಾವಲತನ್ನ ನಿಜರೂಪ ಅವರಲ್ಲಿತನ್ನ ನಿಜರೂಪ ಅವರಲ್ಲಿ ರಮಿಸೋದುತನ್ನ ಮನದಲ್ಲಿ ನಿಜ ಮಾಡಿ5 ಸಾಗರಶಾಯಿ ಮನಕೆ ಹ್ಯಾಂಗೆ ಬಂದೀತುಎಂದು ಹೀಗೆ ಕೈ ಮುಗಿದು ತಲೆಬಾಗಿಹೀಗೆ ಕೈ ಮುಗಿದು ತಲೆಬಾಗಿ ರುಕ್ಮಿಣಿಆಗೊಂದು ಮನದ ಬಯಕೆಲ್ಲ6 ಎಷ್ಟು ಜಪಿಸಿ ನೀನು ಠಕ್ಕಿಸಿ ಕೃಷ್ಣನ ಇಟ್ಟಾನೆ ರಮಿಯ ಎದಿಮ್ಯಾಲೆ ಇಟ್ಟಾನೆ ರಮಿಯ ಎದಿಮ್ಯಾಲೆ ರುಕ್ಮಿಣಿ ಇಷ್ಟರ ಮ್ಯಾಲೆ ತಿಳಕೊಳ್ಳ7
--------------
ಗಲಗಲಿಅವ್ವನವರು
ಬಿಟ್ಹ್ಯಾಗೆ ಇರಲಿನ್ನೀ ಚರಣ | ರಂಗ ಪ. ವಿಠ್ಠಲನಾ ಪುಟ್ಟ ಚರಣ ಬಿಟ್ಟು ಗೋಕುಲ ಪುಂಡಲೀಕನಿಗೊಲಿಯುತ ಇಟ್ಟಿಗೆ ಮೇಲ್ಹೊಂದಿ ನಿಂತಂಥ ಚರಣ ಅ.ಪ. ಭಕ್ತರಿಗೊಲಿಯುವ ಚರಣಾ | ವೇದ ಉಕ್ತಿಗೆ ನಿಲುಕದ ಚರಣಾ ಹತ್ತಿ ಪಾರ್ಥನ ರಥ ಮತ್ತೆ ಭೀಷ್ಮನಿಗೊಲಿದು ಹಸ್ತದಿ ಚಕ್ರವ ಪಿಡಿದು ಬಂದಾ ಚರಣ 1 ಬಲಿಯನ್ನು ತುಳಿದಂಥ ಚರಣಾ | ಮೂರು ಇಳೆಯನಳೆದ ಪುಟ್ಟ ಚರಣ ಕುಲಕೋಟಿ ಉದ್ಧಾರಗೈವಂಥ ಗಂಗೆಯ ಚಲುವ ಉಂಗುಟದಲ್ಲಿ ಪಡೆದ ಕೋಮಲ ಚರಣ 2 ಹಸ್ತಿ ಕರೆಯೆ ಬಂದ ಚರಣಾ | ಲಕ್ಷ್ಮಿ ವತ್ತುವೋ ಮೃದುತಳ ಚರಣಾ ಚಿತ್ತದೆ ಚಿಂತಿಪ ಭಕ್ತರ ಮನದೈವ ತೆತ್ತಿಗನಾಗಿ ಐವರ ಪೊರೆದಾ ಚರಣ3 ಭೀಮ ತೀರಾ ವಾಸ ಚರಣಾ | ಭಕ್ತ ರಾಮಯ ಹರಿಸುವ ಚರಣಾ ಕಾಮಜನಕ ಪಾಂಡುರಂಗವಿಠ್ಠಲನೆಂದು ಪ್ರೇಮದಿಂ ಭಜನೆಗೊಂಬುವ ಸ್ವಾಮಿ ಚರಣಾ 4 ಬಿಟ್ಟಿರಲಾರೆ ನೀ ಚರಣ | ಮನದಿ ಕಟ್ಟಿ ಹಾಕೂವೆ ನಾ ನೀ ಚರಣ ದಿಟ್ಟ ಶ್ರೀ ಗೋಪಾಲಕೃಷ್ಣವಿಠ್ಠಲ ಚರಣ ಇಟ್ಟು ಹೃತ್ಕಮಲದಿ ಪೂಜಿಪೆ ನೀ ಚರಣ 5
--------------
ಅಂಬಾಬಾಯಿ
ಬಿಡದೆ ನಿಮ್ಮನು ಪೂಜಿಸುವ ದಾಸರಿಗೆಪ ತಡೆಯದೆ ವೈಕುಂಠವಹುದು ಸೋಜಿಗವೆ ಅ.ಪ. ಬಡತನವಾಗೆ ಬಾಲತ್ವದ ಸಖನೆಂದುಮಡದಿ ಪೋಗೆನ್ನೆ ಕುಚೇಲ ಬಂದುಪಿಡಿತುಂಬ ಅವಲಕ್ಕಿಯ ತಂದು ಕೊಡಲಾಗಕಡು ಮೆಚ್ಚಿ ಅವನಿಗೆ ಸೌಭಾಗ್ಯವನಿತ್ತೆ 1 ಕುಡುತೆ ಪಾಲ್ಕುಡಿದು ಪೊಡವಿಯನು ಮೆಟ್ಟಿ ಪಾಪಿಷ್ಠನನು ಕೆಡಹಿದೆಬಡವರಾಧಾರಿಯೆಂಬ ಬಿರುದನು ಪಡೆದೆ 2 ಕಡಲಶಯನನೆ ಕುಬುಜೆ ತಂದ ಗಂಧಕೆ ಮೆಚ್ಚಿಒಡನೆ ಅವಳನು ಸುರೂಪಿಯ ಮಾಡಿದೆಸಡಗರದಿ ಅನವರತ ಬಿಡದೆ ಪೂಜಿಸುವಂಥದೃಢಭಕ್ತಗೇನುಂಟು ಏನಿಲ್ಲ ಸಿರಿಕೃಷ್ಣ 3
--------------
ವ್ಯಾಸರಾಯರು
ಬಿಡದೆ ಭಜಿಸೊ ಮನವೆ ದೃಢಭಾವದಿ ಪೂರಿಸೊ ಶ್ರೀಪಾದಾರಾಧಿಸೊ ಧ್ರುವ ನಿತ್ಯಾನಿತ್ಯ ಆವದೆಂದುದ್ದಿತ್ಯರ್ಥ ಶೋಧಿಸೊ ಪಥ್ಯವಾಗುವ ಸತ್ಯಶಾಖತ್ವಪಥವ ಸಾಧಿಸೊ ಕೃತ್ಯಾಕೃತ್ಯವಾಗುವ ನಿತ್ಯನಿಜವು ಭೇದಿಸೊ ಉತ್ತಮೋತ್ತಮವಾದ ವಸ್ತುಮಯದೊಳು ನೀ ಸಂಧಿಸೊ 1 ಇದೆ ನೋಡು ಹಿತವು ನಿನ್ನು ಸುಪಥಸಾಧÀನ ಸಾಧಿಸಿಗೊಡುವ ಸ್ವಾಮಿ ಸದ್ಗುರು ಪತಿತಪಾವನ ಭೇದಿಸಿ ನೋಡಲಕ್ಕೆ ನಿನ್ನೊಳಗಾಗುವದು ಉನ್ಮನ ತಾಂ ನಿಧಾನ 2 ಬೆರಿಯೊ ಭಾವಭಕುತಿವಿಡಿದು ಹಿಡಿಯೊ ಹರಿ ಪಾದವ ಸಾರ ಸವಿಯೊ ಸುಖವ ಅನಭವಾಮೃತವ ಹರಿಯೊ ಪಾಶ ಬೀಳುವ ಭವಜನ್ಮಮೃತ್ಯುವ ನೆರಿಯೊ ಮಹಿಪತಿಸ್ವಾಮಿ ವಸ್ತು ಪರಾತ್ಪರವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಿಡಬಾರದೋ ಶ್ರೀನಾಥನ ನಾಥನ ಪ್ರಖ್ಯಾತನ ಪ ಕಡು ದುಃಖದಿ ಮೊರೆಯಿಡಲು ಗಜೇಂದ್ರನು ತಡಮಾqದೆÀ ಬಂದಾತನ ಆತನ ಪೊರೆದಾತನ1 ಮೊರೆಯನು ಲಾಲಿಸಿ ತರುಣಿ ದ್ರೌಪದಿಗೆ ವರ ವಸವನನಿತ್ತಾತನ ಆತನ ಪೊರೆದಾತನ 2 ಶೇಷಶಯನ ನಮ್ಮ ವಾಸುದೇವವಿಠಲ ದೋಷರಹಿತನೆಂಬಾತನ ಆತನ ಪರಮಾತ್ಮನ 3
--------------
ವ್ಯಾಸತತ್ವಜ್ಞದಾಸರು
ಬಿಡಬೇಕು ಸ್ತ್ರೀಸಂಗ ಬ್ರಹ್ಮನಾಗುದಕೆಬಿಡದಿರಲು ಕೆಡುತಿಹನು ಬಿಡೆಯವಿಲ್ಲಯ್ಯ ಪ ಕಣ್ಣುಗಳು ತಿರುಹಲಿಕೆ ಕಾಲುಕೈಯುಡುಗುವುದುನುಣ್ಣನೆಯ ಗಂಟೊಲಿಯೆ ಎದೆಗುಂದುವುದು ಅಯ್ಯ ಸಣ್ಣ ಹಲ್ಲನು ಕಾಣೆ ಸರಿವುದು ಶಿವಧ್ಯಾನನುಣ್ಣನೆಯ ಮುಖಕ್ಕೆ ನುಗ್ಗಹುದು ದೃಢ ಚಿತ್ತ 1 ಕಿರುನಗೆಯ ಕಾಣಲು ಕಳಚಿಹೋಹುದು ಬುದ್ಧಿಸೆರಗು ಸಡಿಲಲು ಸೈರಣೆಯು ಅಡಗುವುದು ಅಯ್ಯತಿರುಗಾಡುತಿರಲು ತಿಳಿವಳಿಕೆ ಹಾರುವುದು ಮು-ಕುರ ಮುಖ ಕಾಣಲು ಮುಳುಗುವುದು ಅರಿವು ಅಯ್ಯ 2 ಗಾಳಿಯದು ಹಾಯಲಿಕೆ ಗತವಹುದು ಅನುಭವವುಬೀಳೆ ಅವರ ನೆರಳು ಬಯಲಹುದು ಬೋಧನೆಯುಬಾಲ ನುಡಿಗಳ ಕೇಳೆ ಬೀಳುವುದು ಬಲ್ಲವಿಕೆಬಾಲೆಯರ ಸಂಗವದು ಭವದ ತಿರುಗಣೆಯಯ್ಯ 3 ನವನೀತ ಪುರುಷನು ನಾರಿಯೇ ಅಗ್ನಿಯುನವನೀತ ಕರಗದೆ ಅಗ್ನಿಯೆದುರಿನಲಿಯುವತಿ ಸನಿಹದಲಿರಲು ಎಲ್ಲಿ ಬ್ರಹ್ಮವು ನಿನಗೆಶಿವನಾಣೆ ಸತ್ಯವಿದು ಸುಳ್ಳೆಂದಿಗೂ ಅಲ್ಲ 4 ಪಾತಕದ ಬೊಂಬೆಯು ಫಣಿವೇಣಿಯರ ರೂಪಘಾತಕವು ತಾನಹುದು ಯೋಗಗಳಿಗೆಯಲಯ್ಯಮಾತು ಬಹಳವದೇಕೆ ಮಹಿಳೆಯನು ತ್ಯಜಿಸಿದರೆದಾತ ಚಿದಾನಂದನು ತಾನೆ ಅಹನಯ್ಯ5
--------------
ಚಿದಾನಂದ ಅವಧೂತರು
ಬಿಡಬೇಡ ರಂಗಯ್ಯ ಬಡವನೂ ಪಿಡಿಕಯ್ಯ ಒಡೆಯ ನಿನ್ನಡಿ ಪಿಡಿದೆ ದಯೆಮಾಡೊ ಜೀಯ ಪ ಕಡಲಣುಗಿಯಣ್ಮನೇ ಕಡೆಹಾಯ್ಸೊ ಕಷ್ಟದಿಂ ಕಡುಮುದದಿ ಕೊಂಡಾಡಿ ಬೇಡುವೆನೊ ದೊರೆಯೆ ಅ.ಪ ಸಪ್ತ ಋಷಿಗಳು ಸತತ ಗುಪ್ತದಿಂ ಧ್ಯಾನಿಸುತ ತೃಪ್ತರಪ್ಪರು ಅಪ್ತ ನಿನ್ನ ನುತಿಸಿ ಅಪ್ಪ ನೀನವರಿಂದೆ ವಿಪ್ರತ್ವವಂ ತೋರಿ ಅಪ್ರತಿಮ ತಾರಕ ಬ್ರಹ್ಮ ಬೋಧಿಸಿದೆ 1 ಉತ್ತರೆಯ ಬಸುರೊಳಗೆ ಬ್ರಹ್ಮಾಸ್ತ್ರ ಬಾಧಿಸಲು ಅತ್ಯಗತ್ಯದಿ ಪ್ರಭುವೆ ಚಕ್ರ ಪಿಡಿದು ಸುತ್ತೆತ್ತಲಾಶಿಶುವ ಸಂರಕ್ಷಣೆಯಗೈದೆ ಉತ್ತಮೋತ್ತಮ ದೈವ ನೀನೆ ಜಗದಯ್ಯ 2 ಅಂಬರೀಷನ ಮೇಲೆ ಜಂಭದಿಂ ಮುನಿ ಮುನಿಯೆ ಕಂಬುಧಾರಿಯೆನೀಂ ಸುನಾಭ ಕಳುಹಿ ಬೆಂಬಿಡದೆ ಸುತ್ತಿಸಲು ಇಂಬಿನಿಂ ಪದಪಡಿಯೆ ಸಂಭ್ರಮದಿ ಕಾಯ್ದಂಥ ಸದ್ಭಕ್ತ ಬಂಧು 3 ಗಜರಾಜನಂ ಸರದಿ ಮೊಸಳೆ ಪೀಡಿಸುತಿರಲು ನಿಜರಥಾಂಗವ ಕಳುಹಿ ನಕ್ರನಂ ಸೀಳಿ ಅಜಪಿತನೆ ನೀನವರ ವಕ್ರ ಹರಿಸುತ ಕಾಯ್ದೆ ತ್ರಿಜಗಾದಿ ನಾಥನೇ ಭಕ್ತಪಾಲ 4 ಶರಣ ರಕ್ಷಣೆಗಾಗಿ ನೀಂ ಸುದರ್ಶನ ಪಿಡಿದೆ ವರದ ವೇಂಕಟರಮಣ ವೈಷ್ಣವೋದ್ಧರಣ ಕರುಣಿ ನನ್ನಪರಾಧವಪರಿಮಿತವಿದೆ ಕ್ಷಮಿಸು ತರಳನಂ ಕಾಪಾಡು ಜಾಜೀಶ ನೋಡು 5
--------------
ಶಾಮಶರ್ಮರು