ಒಟ್ಟು 11932 ಕಡೆಗಳಲ್ಲಿ , 136 ದಾಸರು , 6615 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಘವೇಂದ್ರರು ಸುಂದರ ಗುರು ರಾಘವೇಂದ್ರರೆಂತೆಂಬುವೋ ಕರ್ಮಂದಿಗಳರಸನೆ ವಂದಿಸುವೆ ಪ ಸನ್ನುತ ಮಹಿಮರೆಂದು ನಾ ಬೇಡುವೆ ಅ.ಪ. ಪರಮ ಕರುಣೀ ನಿಜ ಚರಣ ಸೇವಕರನ್ನು ಉದ್ಧರಿಸುತಲನುದಿನ ಪೊರೆವನೆಂದೂಕರವ ಪಿಡಿದು ತ್ವರ ಪರಿಪರಿಯಲಿ ನಿನ್ನಾತಪೊರೆಯುವೆ ಕೈ ಪಿಡಿಯೆಂದು ಕರೆಯುವೆಧರೆಯೊಳಗೆ ನಿಮ್ಮಯ ಸರಿ ಧ್ವರೆಗಳ ಕಾಣೆ ಮ-ದ್ಗುರುವೆ ಯನ್ನಂಥ ಪಾಮರ ನರನ ಕಾಯೋದು ನಿಮಗಾಶ್ಚರ್ಯವೇವರಯೋಗಿವರ್ಯನೆ ನಿರುತ ಬೃಂದಾವನದಿ ರಾಜಿಪೊಮೆರೆವ ಮಂಗಳ ಚರಣ ತವಪದಸ್ಮರಿಪೆ ಸಂತತ ನೀಡು ತ್ವರಿತದಿಹರುಷದಲಿ ನಿರ್ಜರರ ತರುವೆ 1 ಪಾದ ಚಾರು ಭೂರಿ ಕಿಟೀತಜಧೀರ ನಿನ್ನನು ಸಾರಿದವರನು ಪಾರುಗಾಣಿಪನೆಂದು ಡಂಗುರಸಾರುತಲಿದೆಯದು ವೀರಸಲಿಸೊ 2 ಏಸೇಸು ಜನ್ಮದಿ ಕ್ಲೇಶವನನುಭವಿಸಿಘಾಸಿ ಮಾಡೆನೊ ಮನದಾಶೆಯಿಂದಾಹೇಸಿ ವಿಷಯಂಗಳು ಲೇಸುತಿಳಿದು ಮರೆಮೋಸಾದಿ ದುಷ್ಟರ ಸಹವಾಸದಿ ಸೇರಿದೆಮಂದಹಾಸಾದಿ ಸಂತೈಸು ರವಿ ಸಂಕಾಶಜನಹೃದೋಷ ಸಾಗರದಿಕಾಷಾಯವಸನ ಭೂಷಿತಾಂಗ ವ್ಯಾಸಮುನಿ ಭರದೀಗಜರಾಮಪುರದೀಶ ಮುಖರಿಗೆ ತೋಷ ನೀ ಗರದಿಈ ಸಮಯ ಸ್ತುತಿಸುವೆನುಶ್ರೀ ಸಮೀರ ಮತಾಬ್ಧಿ ಚಂದಿರಈಶಗೆದುರ ರತೀಶ ಸನ್ನುತಶ್ರೀಶ ಗುರು ಇಂದಿರೇಶನಂಘ್ರಿಗೆದಾಸ್ಯ ಭಾವ ರಹಸ್ಯ ತೋರಿದೆ 3
--------------
ಗುರುಇಂದಿರೇಶರು
ರಾಘವೇಂದ್ರಸ್ವಾಮಿಗಳ ಸ್ತೋತ್ರ ಕಂಡು ಧನ್ಯನಾದೆ ಗುರುಗಳ - ಕಣ್ಣಾರೆ ನಾಕಂಡು ಧನ್ಯನಾದೆ ಈ ಗುರುಗಳ ಪ ತುಂಗಾತಟದಿ ಬಂದು ನಿಂತ ಪಂಗು ಬಧಿರಾದ್ಯಂಗ ಹೀನರಅಂಗಗೈಸಿ ಸಲಹುವಾ - ನರಸಿಂಗನಂಘ್ರಿ ಭಜಕರಿವರ 1 ಗುರುವರ ಸುಗುಣೇಂದ್ರರಿಂದಪರಿಪರಿಯಲಿ ಸೇವೆಗೊಳುತವರಮಂತ್ರಾಲಯ ಪುರದಿ ಮೆರೆವಪರಿಮಳಾಖ್ಯ ಗ್ರಂಥಕರ್ತರ 2 ಸೋ ಅಹಂ ಎನ್ನದೆ ಹರಿಯ ದಾಸೋ ಅಹಂ ಎನ್ನಲು ಒಲಿದು ವಿಜಯಮೋಹನ ವಿಠ್ಠಲನ್ನ ಪರಮಸ್ನೇಹದಿಂದ ತೋರುವವರ 3
--------------
ಮೋಹನದಾಸರು
ರಾಜ ರಾಜರ ಗಂಡ ರಾಜಗೋಪಾಲ ಪ. ಅರ್ಥಿಲೆ ಏರಿ ಕುಳಿತ ಮತ್ತೆ ಗೋಪಾಲ 1 ಬಂದ ಜನರ ಸಹಿತ ತಂದೆ ಗೋಪಾಲ 2 ವಿಪ್ರರಿಂದಲೆ ಕುಳಿತ ಅಪ್ಪ ಗೋಪಾಲ3 ಬೆಳಕು ತುಂಬಿಸಿ ತಾನು ಕುಳಿತ ಗೋಪಾಲ 4 ಅರ್ಥಿಲೆ ಏರಿ ಕುಳಿತ ಮತ್ತೆ ಗೋಪಾಲ5 ಮೂರ್ತಿ ಗೋಪಾಲ 6 ಬಂದ ಜನಕೆ ಆನಂದವ ಪಡಿಸುತ ಚಂದ್ರನಂತಲೆ ಕುಳಿತ ಬಂದು ರಾಮೇಶ 7
--------------
ಗಲಗಲಿಅವ್ವನವರು
ರಾಜವದನೆ ನೀ ಗುರು- ರಾಜರಿರುವ ಸಂಭ್ರಮ ನೋಡೆ ಪ ರಾಜಿಸುವ ಮುಖನ ಪೂಜಿಸುವ ಯತಿವರನೆ ಅ.ಪ ದೂಷಿತ ದುರ್ಜನರ ತಾಸು ಬಾಳದಂತೆ ವಿ- ಶೇಷದಿಂದ ಭಜಿಸುವರ ಪೋಷಿಸುವ ಯತಿವರನೆ 1 ಪಾದ ನಂಬಿದವರಿಗೆ ಮೋದವೀವ ದೇವನೆ ಬೀದಿಬಿಡುವ ನಂಬಿದವರ ವಾದಿರಾಜ ದೊರೆವರನೆ 2 ಅಜಪದಕೆ ಅರ್ಹನೆಂದು ಗಜವರದನ ದಾಸನೆಂದು ಭಜನೆ ಮಾಡುವ ನಿಜವ ಪೇಳುವ ವಿಜಯವಿಠಲನ ಸೇವಕರಿವರೇ 3
--------------
ವಿಜಯದಾಸ
ರಾಜಿಯಿದ್ದೋರೆಲ್ಲ ಕೇಳ್‍ಬಹುದಣ್ಣ ಪೂಜೆ ಮಾಡೋ ಇದ ಹೇಳತೀನಣ್ಣ ಪ ಸಾಜದ ಹಾದಿಲಿ ಬಾಳ್ಯವ್ರಣ್ಣ ಅ.ಪ ಹಾಸಿಗೇಲಿ ತಿಂಡಿ ತಿನಬಾರ್ದಣ್ಣ ಮೋಸದ ಯೋಚನೆ ಯಿರಬಾರ್ದಣ್ಣ ಕಾಸಿಗೆ ಸುಳ್ಳ ಯೋಳ್ಬಾರದಣ್ಣ 1 ನಾಮ ಇಬೂತಿಯ ಅಣೆಗಚ್ರಣ್ಣ ರಾಮಾ ನಿನ್ಪಾದ್ವೇಗತಿಯೆನ್ನಣ್ಣ 2 ಮಣ್ಣಿನ ಭೂಮಿಯ ನಂಬದಿರಣ್ಣ ಸಣ್ಣ ಕೃಷ್ಣನೇ ಗತಿಯೆನ್ನಣ್ಣ 3 ನೋಡುವ ಕಣ್ಗಳ ಮನದಲಿಡಣ್ಣ ನೋಡದರಲಿ ಹೊಳೆ ಹೊಳೆವಾಬಣ್ಣ 4 ಅದರ ಮೇಲೆಳ್ಡು ಕಾಲ್ಗಳ ನೋಡಣ್ಣ ಮದನ ಗೋಪಣ್ಣನು ಕಾಣುವನಣ್ಣ 5 ಮಡಿಯ ಪೀತಾಂಬ್ರದವುಡಗೆಯ ನೋಡಣ್ಣ ಹಿಡಿದೆತ್ತಿದ ಕೈಕೊಳಲನು ನೋಡು 6 ಮುಡಿಯ ಕಿರೀಟದ ಹೊಳಪನು ನೋಡು ನಡುಹಣೆಯ ನಿಡು ತಿಲಕವ ನೋಡು ಕಡೆನೋಟದ ಕಣ್ಮಿಂಚನು ನೋಡು 7 ಅಂಬರದಂತೆ ಸರೀರವ ನೋಡು ನಂಬಿಕೆಯಲಿ ಸರಣಾರ್ತಿಯ ಮಾಡು 8 ಬೋಗಾನಂದವ ಪಡಿತೀಯಣ್ಣ ಕೂಗಿಗೆ ಬರುವನು ಮಾಂಗಿರಿಯಣ್ಣ 9
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಾಜೀಸುವದು ನಾಭಿಯಾ ಸುರಗಂಗೆಯಂ ಶೇಧೀಭಿಯಾ ಪ ನೇತ್ರನ್ನದಯ ಪೂರ್ಣದಾ ಕಮಲಂ ಹಾರಿಸಿ ನೀಡುವ ಬುದ್ದಿ ವಿಮಲಂ ನೇ ಶ್ರೀ ವೆಂಕಟೇಶಂ ಸದಾ1 ಪೊಗಳಲಿಲ್ಲ ಮತಿ ಸಲ್ಲದೇ ಆಶ್ರಯಸಿ ನೆಲೆಗೊಳ್ಳದೇ ಭವಕಾದೆ ಪರಿಹಾರ ದಾ ಪರಿಯಂ ಕಾಣದೆ ಬೇಡಿ ಕೊಂಬೆ ಧೋರಿಯಂ ಶ್ರೀ ವೆಂಕಟೇಶಂ ಸದಾ 2 ಪಟನಾದೆ ನೆರೆ ಭಾಗ್ಯದೀ ನಡಲಂ ದೀಗಳಿ ಪಶ್ಚಾತ್ತಾಪ ಒಡಲಂ ಮನವಿಲ್ಲ ವೈರಾಗ್ಯ ದೀ ಮುಸುಕಿಷ್ಟು ದನಿವಾರ ದಾ ಕಡಲಂ ಮನಿಯೆ ಕಾಯೋ ಸಾಖರದಿಡಲಂ ಶ್ರೀ ವೆಂಕಟೇಶಂ ಸದಾ3 ಬಿದಿರೀಸಿ ವಢ ಮಾಡಿದೇ ಕೊನಿಯಿಂದ ಕಲಕ್ಯಾಡಿದೆ ಮುದವಿತ್ತೆ ಭಕ್ತಂಗದಾ ಮರಳಂ ಕಾವದು ಭಕ್ತಿಗಿಲ್ಲ ಹುರಳಂ ಶ್ರೀ ವೆಂಕಟೇಶಂ ಸದಾ 4 ಕಾಂತಿಚರಣಾಂಬುಜಭಾವ ಭಕ್ತಿಂದಲಿ ಶರಣಂ ಪೊಕ್ಕವರಿಂಗೆ ಜನ್ಮಮರಣಂ ಹರಿಸೂವದಯದಿಂದಲಿ ಸ್ಮರಣಂ ಮಾಡಲು ಪಾಪಹರಣಂ ಸಲೆ ಸಾಧ್ಯಸುರ ಸಂಪದಾ ಕರುಣ ಬೀರುತ ಕಾಯೋಯನ್ನಹರಣಂ ಶ್ರೀವೆಂಕಟೇಶಂ ಸದಾ 5 ಮಾನವ ತನುಂಪಡದೀಗ ಸದ್ಗತಿಯಾ ಗಡ ಹೊಂದಿ ವಿಷಯೇಚ್ಛೆಯಾ ಅಪರಾಧವನು ಗಣಿ ಸದಾ ಪಿತನಂ ತನ್ನಯ ಕಾಯೋ ಜ್ಞಾನ ಚ್ಯುತ ನಂ ಶ್ರೀ ವೆಂಕಟೇಶಂ ಸದಾ 6 ಮೆಚ್ಚಿ ಸುಮನ ನರಿಯೆನು ಯಂತ್ರಿಪ್ಪ ದಾಂನರಿಯೆನು ಗಜವಂ ತಾರಿಸಿದಂತೆಯನ್ನ ವೃಜಿನಂ ದಾಟೀ ಸುವಾ ಬಿರದಾ ಕುಜನಂ ಸೇರಿದಂತೆ ಯನ್ನಂ ಕಾಯೋದ್ವಿಜನಂ ಶ್ರೀ ವೆಂಕಟೇಶಂ ಸದಾ 7 ಸದನಂ ಸುದ್ಗುಣ ಗಾಣದಬ್ಜವದನಂ ಸ್ಪರ್ಧಿಸುತಿದನುಜರಾ ಕದನಂ ಕರ್ಕಶವಾಗಿ ಸೌಖ್ಯ ಪ್ರದನಂ ಭಾವಿಸುತಿಹ ಮನುಜರಾ ಸುಕುಮಾರ ಘನ ಶಾಮದಾ ಇದನಂ ಬಣ್ಣಿಪರಾರು ವೇದವಿದಿನಂ ಶ್ರೀ ವೆಂಕಟೇಶಂ ಸದಾ8 ಶಿಖಿ ಕೇತನಾ ಕಾಯ ಭಂಡಿಯವಾಧನು ಪ್ರಾರ್ಥನಾ ಪರಬ್ರಹ್ಮ ತುರುಗಾಯ್ವನೆಂದು ಪೊಗಳ್ವಾರಿಂತರಿವರೈ ಚರಿತದಾ ಗುರು ಮಹಿಪತಿ ಕಂದಸಲಹೋ ಸ್ಮರಿಸಲು ಅಷ್ಟಕವಾ 9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರಾಧಾಕೃಷ್ಣ ದಯದಿ ನೋಡೆನ್ನ ಪ ಯದುಕುಲ ಚಂದ್ರ ಬಹುಗುಣ ಸಾಂದ್ರ ಅ.ಪ. ಗೋಪಿ ಕುಮಾರ ಗೋಪಾಲಧೀರ ತಾಪ ವಿದೂರ ಕೃಪಾಸಾರ 1 ಬೃಂದಾವನಾನಂದ ಗೋವಿಂದ ಶೂರ ಕಂದರ್ಪ ಕೋಟಿ ಸೌಂದರ್ಯಸಾರ 2 ಏಕಾಂತ ಭಕ್ತ ಪ್ರಿಯ ಲಕ್ಷ್ಮೀಕಾಂತ ವೈಕುಂಠನಾಥಾಶ್ರಿತ ಪಾರಿಜಾತ 3
--------------
ಲಕ್ಷ್ಮೀನಾರಯಣರಾಯರು
ರಾಧಾಕೃಷ್ಣ ಮುರಾರಿ ಜಯ ಜಯ ವೇದ ವೇದ್ಯನೆ ವಿಷ್ಣು ಜಯ ಜಯ ಮೋದತೀರ್ಥ ಸುವಂದ್ಯ ಜಯ ಜಯ ಮಾಧವಾ ಮಧುಸೂದನಾ ಪ ಶ್ರೀಧರಾ ಪ್ರದ್ಯುಮ್ನ ಜಯ ಜಯ ಮತ್ಸ್ಯ ಜಯ ಜಯ ಕೂರ್ಮ ಜಯ ಜಯ ಭೂಧವ ದಾ-ಮೋದರಾ 1 ನಾರಸಿಂಹ ಉ-ಪೇಂದ್ರ ಜಯ ಜಯ ಚಾರುವಾಮನ ಪೋರ ಜಯ ಜಯ ಶ್ರೀ ತ್ರಿವಿಕ್ರಮ ವೀರ ಜಯ ಜಯ ಭಾರ್ಗವಾ-ದ್ವೀಜ ಪೋಷಕಾ 2 ರಾಮ ಲೋಕೋ-ದ್ಧಾರ ಜಯ ಜಯ ಬುದ್ಧ ಜಯ ಜಯ ಶ್ರೀಮನೋಹರ ಕಲ್ಕಿ ಕಲಿವೈರಿ 3 ಈಶ ರಸ ಅನಿ-ರುದ್ಧ ಜಯ ಜಯ ದೋಶಹರ ಸಂ-ಕಷ್ರ್ಣ ಜಯ ಜಯ ಶ್ರೀಶಹರಿ ಹೃಷಿಕೇಶ ಜಯ ಜಯ ಕೇಶವಾ ನಾರಾಯಣಾ 4 ಬಾದರಾಯಣ-ದತ್ತ ಜಯ ಜಯ ವೇಧ ಅಚ್ಚುತ-ಕಪಿಲ ಜಯ ಜಯ ಮಧ್ವಗುರು ಮಹಿ-ದಾಸ ಜಯ ಜಯ ಅಧೋಕ್ಷಜ 5 ಶ್ರೀ ಜನಾರ್ಧನ-ಋಷಭಜಯ ಜಯ ನೈಜತೇಜಾ ನಂತ ಜಯ ಜಯ ವಾಜಿವದನ ಇಂ-ಇಂದ್ರ ಜಯ ಜಯ ರಾಜ ಭಕುತರ ಭೋಜ ಸುರರಾಜ 6 ಅಜ ಧನ್ವಂತ್ರಿ ಜಯ ಜಯ ಪೃಶ್ನಿ ಗರ್ಭ ಮುಕುಂದ ಜಯ ಜಯ ಚೆನ್ನ ಬೋಧಕ ಹಂಸ ಜಯ ಜಯ ಶಿಂಶುಮಾರ ಸುಮೋಹಿನಿ 7 ಪಾಂಡುರಂಗ ವಿ-ಠೋಬ ಜಯ ಜಯ ತೊಂಡವತ್ಸಲ-ವರದ ಜಯ ಜಯ ಗಂಡುಗಲಿ ತಿ-ಮ್ಮಪ್ಪ ಜಯ ಜಯ ರಂಗನಾಥ ಪ-ರಾದ್ಯನಂತನೆ 8 ವಿಶ್ವತೈಜಸ-ಪ್ರಾಜ್ಞ ಜಯ ಜಯ ಶಶ್ವದೇಕನೆ-ತುರಿಯ ಜಯ ಜಯ ಶ್ರೀಶ “ಶ್ರೀ ಕೃಷ್ಣ-ವಿಠಲ” ಜಯ ಜಯ ಗೋವಿಂದಾ ಪುರು-ಷೋತ್ತಮಾ 9
--------------
ಕೃಷ್ಣವಿಠಲದಾಸರು
ರಾಧೆ ಗೋಪಾಲ ಕೃಷ್ಣ ರಾಧೆಗೋಪಾಲ ರಾಧೆ ಗೋಪಾಲ ಕೃಷ್ಣ ರಾಧೆಗೋಪಾಲ ಪ ನಂದನಕಂದ ಮುಕುಂದಮುರಾರೆ ಇಂದಿವರಾಕ್ಷ ಗೋವರ್ದನಧಾರೆ ವೃಂದಾವನ ಸಂಚಾರ ವಿಹಾರೇ ಸಿಂಧುಶಯನ ಕ್ಷೀರಾಬ್ಧಿವಿಹಾರ 1 ಚಕ್ರಧರ ವೇಣುವಿನೋದ ಶಂಕರಾದಿ ವಂದಿತ ದಿವ್ಯಪಾದ ಬಿಂಕದಿಂದ ಕೊಳಲೂದುವನಾದ ಪಂಕಜಾದಿಗಳು ನಲಿವ ಸುಸ್ವಾದ 2 ಮಂದರಧರÀ ಗೋವರ್ಧನ ಧಾರಿ ಮಂದೆ ಗೋವತ್ಸವ ಕಾಯ್ವ ಶೌರಿ ಇಂದಿರೆಯರಸ ಶ್ರೀಹರಿಯೆ ಮುರಾರಿ ನಂದಯಶೋದೆಯ ಮೋಹದ ಶೌರಿ3 ವೃಂದಾವನದೊಳು ನಿಂದ ಗೋವಿಂದ ಮಂದಹಾಸ ಮುಖನಗೆ ಮೊಗದಿಂದ ಸುಂದರ ಗೋಪಿಯರೊಡಗೂಡಿ ಬಂದ ಮಂದರಧರ ಆನಂದ ಮುಕುಂದ 4 ಕಾಮನಪಿತ ಶ್ರೀ ಕಂಜಜನಾಭ ಕಾಮಿತ ಫಲಗಳ ಕರುಣಿಪ ಶ್ರೀಧ ಕಮಲನಾಭ ವಿಠಲ ನಿಮ್ಮ ಪಾದ ಕರುಣದಿ ನೆನೆವರ ಸಲಹುವಮೋದ 5
--------------
ನಿಡಗುರುಕಿ ಜೀವೂಬಾಯಿ
ರಾಮ ವರಶರಸಮರೈಕ ಶೂರ ರಾಮ ಶರಧಿಮದವಿದಾರ ಪ. ಸದಯ ಹೃದಯ ಪದ್ಮಾವತೀಪ್ರಿಯ ಪದ್ಮದಳೇಕ್ಷಣ ವೈದೇಹೀರಮಣಅ.ಪ. ಮಂದರಧರ ಗೋವಿಂದ ಸದಾನಂದ ಮಂದಸ್ಮಿತ ವದನಾರವಿಂದ 1 ನೀಲಮೇಘ ವರಶ್ಯಾಮಶರೀರ ಪಾಲಿತ ಭಕ್ತಜನ ಮಂದಾರ 2 ಕರುಣಾಕರ ರಮಾವರ ಭವದೂರ ವರಶೇಷಗಿರಿವರ ಶ್ರೀಧರ 3
--------------
ನಂಜನಗೂಡು ತಿರುಮಲಾಂಬಾ
ರಾಮ ಗೋವಿಂದ-ಹರಿ-ಕೃಷ್ಣ ಗೋವಿಂದ ಕೃಷ್ಣ ಗೋವಿಂದ- ಹರಿ-ರಾಮ ಗೊವಿಂದ ಪ ರಾಮ ರಾಮ ಕೃಷ್ಣಕೃಷ್ಣ _ ಕೃಷ್ಣಕೃಷ್ಣ ರಾಮರಾಮ ರಾಮ ಕೃಷ್ಣ ರಾಮರಾಮ _ ಕೃಷ್ಣ ರಾಮ ಕೃಷ್ಣ ಕೃಷ್ಣ ಅ.ಪ. ಮತ್ಸ್ಯಕೂರ್ಮ ಭೂವರಾಹ _ ಜೈ ಜೈ ವಾಮನ ನಾರಸಿಂಹ ತ್ರಿವಿಕ್ರಮ _ ಶರಣು ಉಪೇಂದ್ರ 1 ಬುದ್ಧ ಕಲ್ಕಿ _ ಭೃಗುಜ ಜಯೇಶ ವಾಸುದೇವ ಹೃಷಿಕೇಶ _ ಕೇಶವಾಚ್ಯುತ 2 ಅಧೋಕ್ಷಜ ಅನಿರುದ್ಧ ಶ್ರೀಧರ ವೇದವ್ಯಾಸ ಕಪಿಲದತ್ತ _ ಮಧುಸೂದನ 3 ತೈಜಸ ಪ್ರಾಜ್ಞತುರ್ಯ-ಬ್ರಹ್ಮ ಧಾಮ ಪೃಶ್ನಿಗರ್ಭ ಮಹಿದಾಸ _ ಪುರುಷೋತ್ತಮ 4 ಅಜಪರಶ್ರೀನಿವಾಸ _ ಸಾಸಿರಾನಂತ ಶಿಂಶುಮಾರ _ ಸಚ್ಚಿದಾನಂದ 5 ನಾರಾಯಣ ಜನಾರ್ದನ _ ಹಂಸ ಪ್ರದ್ಯುಮ್ನ ಮಾಧವ 6 ಅಪ್ಪ ಉರಗಾದ್ರಿ ವಾಸ _ ವೆಂಕಟೇಶ ಅಪ್ರಮೇಯ ರಂಗನಾಥ _ ಪಾಂಡುರಂಗ 7 ಸತ್ಯವ್ಯಕ್ತ ಸತ್ಯನೇತ್ರ _ ಸತ್ಯಪರ ಭಿನ್ನ ನಿತ್ಯತೃಪ್ತ _ ಸತ್ತದಾತ _ ಪುರುಷ ಮಹಾಂತ 8 ಲಕ್ಷ್ಮೀರಮಣ ಕೃಷ್ಣವಿಠಲ _ ಮುಕ್ತರಾಶ್ರಯ ಲಕ್ಷ್ಯಮಾಡೆ ಮುಕ್ತಿ ಕೊಡುವ _ ಭಕ್ತವತ್ಸಲ9
--------------
ಕೃಷ್ಣವಿಠಲದಾಸರು
ರಾಮ ಜಾನಕೀರಮಣ ರಾಜೀವದಳನಯನ ಧಾಮ ನಿಧಿವಂಶ ಸೋಮನಿಗೆ ಪ ಪದುಮಶಾಲೆಯೊಳಗೆ ಪದುಮಗದ್ದುಗೆ ಹಾಕಿ ಪದುಮನಾಭನು ಬಂದು ಕುಳಿತನು ಪದುನುನಾಭನು ಬಂದು ಕುಳಿತನು ಎಡದಲ್ಲಿ ಪದುಮಾಕ್ಷಿ ಪದುಮ ಸಾಧನೆ ಲಕುಮಿ ಒಪ್ಪಿದಳು. 1 ವಾರುಣಿ ಗಿರಿಜೆ ಮೀನಕೇತನ ರಾಣಿ ಇಂದ್ರಾಣಿ ಮಿಕ್ಕಾನಲಿದಾಡುತಲಿ ಮೀನಕೇತನ ರಾಣಿ ಇಂದ್ರಾಣಿ ನಕ್ಕು ನಲಿದಾಡುತಲಿ ಆನಂದದಿ ಬಂದು ಕುಳಿತರು ತಮ್ಮ ಠಾಣೆಗೆ 2 ಚಿನ್ನದ ತಳಿಗೇಲಿ ಎಣ್ಣೆ ಅರಿಶಿಣ ಗಂಧ ಸಣ್ಣ ಕುಂಕುಮ ಜಾತಿ ಕಸ್ತೂರಿ ಪೊಂಗಳಸ ಸಣ್ಣ ಕುಂಕುಮ ಜಾತಿ ಕಸ್ತೂರಿ ಪೊಂಗಳಸ ಹೆಣ್ಣುಗಳ ಮಧ್ಯೆ ಇಳಿಸಿದರು3 ತಂದೆ ತಾತನ ಬಳಿಯ ಮಂದಾಕಿನಿ ವಾಗ್ವಿಯ- ರೊಂದಾಗಿ ಒಡಗೂಡಿ ರಂಗಯ್ಯನ ಕೈಗೆ ಒಂದಾಗಿ ಒಡಗೂಡಿ ರಂಗಯ್ಯನ ಕೈಯೊಳಗೆ ತಂದು ಅರಿಶಿಣ ಎಣ್ಣೆ ಗಂಧವಿತ್ತು4 ತಡಮಾಡಲಾಗದು ಕಡಲಶಯನ ನಿಮ್ಮ ಮಡದಿಯಂಗಕ್ಕೆ ತೊಡೆವುದೆನಲು ಮಡದಿಯಂಗಕ್ಕೆ ತೊಡೆವುದು ಎನಲಾಗಿ ಕಡು ಹರುಷದಿ ಸತಿಯಳ ನೋಡಿದನು 5 ಎನ್ನರಸಿ ಹೊನ್ನರಸಿ ಪ್ರಾಣದರಸಿ ಪಟ್ಟದರಸಿ | ಕನ್ಯೆ ಶಿರೋಮಣಿ ಪಾವನ ದೇಹಿ || ಕನ್ಯೆ ಶಿರೋಮಣಿ ಪಾವನ ದೇಹಳೆ ನಿನ್ನ | ಕನ್ನಡಿ ಮುಖವ ತೋರರಿಷಿಣವ ನಾ ಹಚ್ಚುವೆ 6 ತಂದೆ ನಂದನರಿಗೆ ಬಂಧು ಬಳಗ ಸುತ್ತ | ಹೊಂದಿದ ಜನರಿಗೆ ಹಲವರಿಗೆ || ಹೊಂದಿದ ಜನರಿಗೆ ಹಲವರಿಗೆ ಕದನ | ತಂದು ಹಾಕುವಳೆಂದು ಹಚ್ಚಿದನು 7 ತೂಗಿಸಿಕೊಂಬುವಳೆ ದೌತ್ಯಕ್ಕೆ ಸಲ್ಲುವಳೆ | ಬಾಗಿಲ ಕಾಯಿಸುವಳೆ ಬಲ್ಲಿದರ || ಬಾಗಿಲಕಾಯಿಸುವಳೆ ಬಲ್ಲಿದರನು ಬಿಡದೆ | ಸಾಗರನ ಮಗಳು ಎಂದು ತೊಡೆದನು 8 ಇಂದಿರಾದೇವಿ ಬಾ ಮಂದಿರಾಂಬುಜ ರಾಮ | ಸುಂದರ ಶ್ರೀವಾರಿ ಮಂಗಳಗಾತ್ರೆ || ಸುಂದರ ಶ್ರೀನಾರಿ ಮಂಗಳಗಾತ್ರೆ ಯೆಂದು | ಅಂಗಜ ಜನಕನು ನಗುತಲಿದ್ದ 9 ರಮಣಿಯ ದೇಹಕ್ಕೆ ಕಮಲನಾಭನು ಎದ್ದು | ವಿಮಲಕಸ್ತೂರಿ ಗಂಧವರಿಷಿಣ ಎಣ್ಣೆ || ವಿಮಲ ಕಸ್ತೂರಿ ಗಂಧವರಿಷಿಣ ಎಣ್ಣೆಯ | ಕ್ರಮದಿಂದ ಲೇಪಿಸಿ ಊಟಣಿಸಾರಿ 10 ಸಾಕಾರಗುಣವಂತಿ ತ್ರಿಲೋಕದ ಜನನಿ | ನಾಕಜವಂದಿತಳೆ ನಾಗಗಮನೆ || ನಾಕಜವಂದಿತಳೆ ನಾಗಗಮನೆ ಏಳೂ | ಶ್ರೀಕಾಂತನ ಸೇವೆಯ ಮಾಡೆಂದರು 11 ಅಂದ ಮಾತನು ಕೇಳಿ ಗಂಧ ಅರಷಿಣ ಕೊಂಡು | ನಿಂದು ಸಮ್ಮುಖದಲ್ಲಿ ರಂಗನ ನೋಡಿ | ನಿಂದು ಸಮ್ಮುಖದಲ್ಲಿ ರಂಗನ ನೋಡಿ ಹಿಗ್ಗಿ | ಚಂದ್ರವದನೆ ಪತಿಗೆ ಹಚ್ಚಿದಳು 12 ಗೋವಳರ ಎಂಜಲು ಆವಾಗ ತಿಂದವನೆ | ಮಾವನ್ನ ಕೊಂದವನೆ ಮಾಯಾಕಾರ || ಮಾವನ್ನ ಕೊಂದವನೆ ಮಾಯಾಕಾರನೆ ನಿನ್ನ | ಸೇವೆಗೆ ಶಕ್ತಳೆನುತ ಹಚ್ಚಿದಳು 13 ಬೆಣ್ಣೆ ಮೊಸರು ಕದ್ದು ಹೆಣ್ಣುಗಳ ಕೆಡಿಸಿ | ಮುನ್ನೆ ತೊತ್ತಿನ ಮಗನ ಮನಿಯ ಉಂಡ || ಮುನ್ನೆ ತೊತ್ತಿನ ಮಗನ ಮನಿಯಲುಂಡ ಹಿಂದೆ | ಹೆಣ್ಣಾಗಿ ಇದ್ದವನೆಂದು ಹಚ್ಚಿದಳು 14 ಎನ್ನರಸ ಚೆನ್ನರಸ ಪ್ರಾಣದರಸ ಪಟ್ಟಣದರಸ | ಭಿನ್ನವಖಿಳ ಜೀವಕ್ಕೆನ್ನ ಒಡೆಯ || ಭಿನ್ನವಖಿಳ ಜೀವಕ್ಕೆನ್ನ ಒಡೆಯ ಸಲಹಿಂದು | ಚೆನ್ನಾಗಿ ಅರಿಷಿಣ ಗಂಧ ಹಚ್ಚಿದಳು 15 ನಿತ್ಯ ಕಲ್ಯಾಣ ಪುರುಷೋತ್ತಮ ಸರ್ವೇಶ | ಸತ್ಯಸಂಕಲ್ಪ ಸಿದ್ಧ ಅಪ್ರಮೇಯಾ || ಸತ್ಯಸಂಕಲ್ಪ ಸಿದ್ಧ ಅಪ್ರಮೇಯನೆಂದು | ಮಿತ್ರೆ ಸರ್ವಾಂಗಕ್ಕೆ ಹಚ್ಚಿದಳು 16 ದೇವಿ ದೇವೇಶಗೆ ಈ ಉರುಟಣೆಯಿಲ್ಲ | ಆವಾವ ಬಗೆ ಎಲ್ಲ ತೋರಿಸುತ್ತ || ಆವಾವ ಬಗೆ ಎಲ್ಲ ತೋರಿ ವಧು-ವರಗಳಿಗೆ | ಹೂವು ಬಾಸಿಂಗವ ರಚಿಸಿದರು17 ಅಸುರ ವಿರೋಧಿ ವಸುದೇವನಂದನ | ಪಶುಪತಿ ರಕ್ಷಕ ಪರಮ ಪುರುಷ || ಪಶುಪತಿ ರಕ್ಷಕ ಪರಮ ಪುರುಷ ಎಂದು | ಹಸನಾಗಿ ಲೇಪಿಸಿ ಇತ್ತ ಜನರ 18 ಶೃಂಗಾರವಂತೇರು ರಂಗ ಶ್ರೀಲಕುಮಿಗೆ | ಮಂಗಳಾರತಿ ಎತ್ತಿ ಹರಸಿದರು || ಮಂಗಳಾರತಿ ಎತ್ತಿ ಹರಸಿ ದೇವರಮನೆಗೆ | ಅಂಗನೆಯಳ ಸಹಿತ ನಡೆಯೆಂದರಾಗ 17 ಎತ್ತಿಕೊಂಡನು ರಂಗ ಚಿತ್ತದ ವಲ್ಲಭೆಯ | ಮತ್ತೆ ಸುಗಂಧಿಯರು ಹೊಸ್ತಿಲೊಳಗೆ || ಮತ್ತೆ ಸುಗಂಧಿಯರು ಹೊಸ್ತಿಲೊಳಗೆ ನಿಂದು | ಪತ್ನಿಯ ಹೆಸರು ಪೇಳೆಂದರು ಆಗ 20 ಬೇಗ ಮಾರ್ಗವ ಸಾರಿ ತೂಗಲಾರನು ಇವಳ | ಸಾಗಿ ಪೋಗುವನೆಂದು ಪೇಳುತಿರಲು || ಸಾಗಿ ಪೋಗುವನೆಂದು ಪೇಳುತಿರಲು ಸ್ತ್ರೀ ಕೂಟ | ತೂಗವದೆಂತು ನಾಳೆ ನುಡಿಯೆಂದರು 21 ನಕ್ಕು ಸಂತೋಷದಲಿ ರುಕ್ಮಿಣಿ ಎಂದನು | ಅಕ್ಕಯ್ಯ ಪೇಳೆಂದು ಹೆಮ್ಮಕ್ಕಳೆಲ್ಲ || ಅಕ್ಕಯ್ಯ ಪೇಳೆಂದು ಹೆಮ್ಮಕ್ಕಳೆಲ್ಲ ಎನಲು | ಚಕ್ರಪಾಣಿ ಎಂದು ಪೇಳಿದಳು ಲಕುಮಿ 22 ಗಂಡ ಹೆಂಡತಿ ಪೋಗಿ ದಂಡ ಪ್ರಣಾಮಮಾಡಿ | ಮಂಡಲದ ಚರಿತೆ ತೋರಿದರು ಆಗ || ಮಂಡಲದ ಚರಿತೆ ತೋರಿ ವಧು-ವರಗಳಿಗೆ | ಕಂಡವರಿಗೆ ಮದುವೆಯೆನಿಸಿದರು 23 ದಂಪತಿಗಳು ಒಲಿದು ಇಂಪಾಗಿ ಉರುಟಣಿ | ಸೊಂಪಾಗಿ ಮಾಡಿದರು ಅನೇಕವಾಗಿ || ಸಂಪತ್ತು ಕೊಡುವನು ವಿಜಯವಿಠ್ಠಲರಾಯಾ 24
--------------
ವಿಜಯದಾಸ
ರಾಮ ನಿನ್ನಯ ದಿವ್ಯ ನಾಮವೇ ಗತಿಯೆಂಬೆ ಪಾಮರನೆಂದೆನ್ನ ಪಾಲಿಸು ತಂದೆ ಪ. ಸುರರಾಜನಂಗಸಂಗವಗೈದು ಶಿಲೆಯಾದ ವರಮುನಿ ಗೌತಮನರಸಿಯು ನಿನ್ನ ಚರಣಾರವಿಂದ ಸಂಸ್ಪರ್ಶಮಾತ್ರದಿ ದಿವ್ಯ ತರುಣಿಯಾಗಿಹಳೆಂಬ ಪರಿಯ ನಂಬಿದೆನು 1 ಪ್ರಥಮ ವರ್ಣವು ಪಾಪ ತತಿಗಳ ತರಿವುದು ಜತನ ಮಾಡುವುದನ್ಯ ವರ್ಣವೆಂದೆನುತ ನಿತ್ಯ ಸಂಸ್ತುತಿಮಾಳ್ಪವದರಿಂದಾ- ಶ್ರಿತ ಕಲ್ಪತರು ನೀನೆ ಗತಿಯೆಂಬೆ ನಿರತಾ 2 ನಿತ್ಯ ನಿರ್ನಾಮಗೊಳಿಸು ಪನ್ನಗಾಚಲನಾಥ ಪರಿಪೂರ್ಣ ಕೃಪೆಯಿಂದ ಮನ್ನಿಸಿ ಮನಸನ್ನು ನಿನ್ನಲ್ಲಿ ಇರಿಸು 3
--------------
ತುಪಾಕಿ ವೆಂಕಟರಮಣಾಚಾರ್ಯ
ರಾಮ ನಿಮ್ಮ ನಾಮಧ್ಯಾನ ಜಿಹ್ವೆ ಮೇಲೆ ನಿಲಿಸು ಪ ಜಗದಭಿಮಾನ ಬಿಡಿಸಿ ಸುಗುಣ ಸಂತಸಂಗ ಪಾಲಿಸಿ ಸುಗುಣಾಂತರಂಗ ನಿನ್ನ ಸಗುಣ ಪೊಗಳಿಸೆನ್ನ ಮುಖದಿ 1 ಮದಮತ್ಸರಗಳನು ಬಿಡಿಸಿ ಸದಮಲ ಜ್ಞಾನಾನಂದದಿರಿಸಿ ಸದಮಲಾತ್ಮ ನಿಮ್ಮ ಮೂರ್ತಿ ಸದಾಯೆನ್ನ ನೇತ್ರದೊಳ್ನಿಲಿಸು 2 ಕಾಮಿತಂಗಳ ಕಡೆಹಾಯ್ಸಿ ಭೂಮಿ ಸೀಮೆ ಮೋಹ ತೊರೆಸಿ ಸ್ವಾಮಿ ಮಮಪ್ರಾಣದಾರ್ಯ ಶ್ರೀ ರಾಮದಾಸನೆನಿಸು ಒಲಿದು 3
--------------
ರಾಮದಾಸರು
ರಾಮ ಪೀಠಮಾಶ್ರಯ ಕಾಮಕೋಟಿ ಮೋಹನಾಂಗಕ ಶ್ರೀ ಪ ಸೂರ್ಯಕುಲ ಮಾಲಿಕಾಮಣಿ ಆರ್ಯವಂಶ ದಿವ್ಯ ಮೌಕ್ತಿಕ ಶ್ರೀ 1 ಇಂದು ಸುಂದರಾಸ್ಯ ರಾಘವ ಶ್ರೀ 2 ವೈರಿವನ ದಾವಪಾವಕ ವೀರ ವರರಘು ನಂದನ ಶ್ರೀ 3 ಭೂಮಿಸುತ ಪ್ರಾಣನಾಯಕ, ಮಾಮಿತಾರ್ಥ ಫಲದಾಯಕ 4 ಭಾನು ಶತಕೋಟಿಭಾಸುರ ಧೇನುಪುರನಾಥ ಶ್ರೀಕರ 5
--------------
ಬೇಟೆರಾಯ ದೀಕ್ಷಿತರು