ಒಟ್ಟು 6481 ಕಡೆಗಳಲ್ಲಿ , 135 ದಾಸರು , 4307 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದೇ ಕೇಳ್ ಭಾಗವತಧರ್ಮ ಸ್ವರೂಪಾನಂದದಾಮರ್ಮ ತಿಳಿಯದಾಮೂಢಮನುಜರಿಗೂ ತಿಳಿಸುವಾ ಸುಲಭದಾಧರ್ಮ ಸದಾ ತನ್ನಂತರಂಗದಲಿ ಮನನವಾಮಾಡಿ ಬೋಧೆಯನು ಸದÀಮಲಾತ್ಮಾನುಭವವ ಪಡೆವುದಿದುವೇ ಅಳೀ ನೀ ಭೇದಭಾವನೆಯಾನಿಕಾಯಾ ಅಳೀ ನೀ ತಿಳೀ ನೀ ನಿರ್ವಿಕಲ್ಪಾನಂದವಿಭುವೆ ನಾನೆ ಇದÉನೆಂದು ಸ್ವರೂಪಾ ಇದೋ ಮಿಥ್ಯಾ ಜಗವಿದೆಲ್ಲ ತಿಳೀ ನೀನೆ ಕನಸಿನಂತೆ ಬೋಧಾ ಸ್ವರೂಪಾ
--------------
ಶಂಕರಭಟ್ಟ ಅಗ್ನಿಹೋತ್ರಿ
ಇದೇ ನಮ್ಮ ವೃತ್ತಿ ಸದ್ಗುರುಭಾವಭಕ್ತಿ ಧ್ರುವ ಇದೇ ನಮ್ಮ ಮನೆಯ ಸದ್ಗುರು ಸ್ಮರಣಿಯ ಇದೇ ನಮ್ಮ ವರ್ತನೆಯು ಸದ್ಗುರು ಪ್ರಾರ್ಥನೆಯು 1 ಇದೇ ನಮ್ಮ ಗ್ರಾಮ ಸದ್ಗುರು ದಿವ್ಯನಾಮ ಇದೇ ನಮ್ಮ ಸ್ತೋಮ ಸದ್ಗುರು ಆತ್ಮಾರಾಮ 2 ಇದೇ ನಮ್ಮ ಭೂಮಿ ಸದ್ಗುರು ಘನಸ್ವಾಮಿ ಇದೇ ನಮ್ಮ ಸೀಮಿ ಸದ್ಗುರು ಅಂತರ್ಯಾಮಿ 3 ಇದೇ ನಮ್ಮ ದೇಶ ಸದ್ಗರು ಉಪದೇಶ ಇದೇ ನಮ್ಮಭ್ಯಾಸ ಸದ್ಗುರು ಜಗದೀಶ 4 ಇದೇ ನಮ್ಮ ವಾಸ ಸದ್ಗುರು ಸಮರಸ ಗ್ರಾಸ ಸದ್ಗುರು ಪ್ರೇಮರಸ 5 ಇದೇ ನಮ್ಮ ವ್ಯವಸನ ಸದ್ಗುರು ನಿಜಧ್ಯಾಸ ಇದೇ ನಮ್ಮ ಆಶೆ ಸದ್ಗುರು ಸುಪ್ರಕಾಶ6 ಇದೇ ನಮ್ಮಾಶ್ರಮ ಸದ್ಗುರು ನಿಜದ್ಯಾಸ ಇದೇ ನಮ್ಮುದ್ದಿಮೆ ಸದ್ಗುರು ಸಮಾಗಮ 7 ಇದೇ ನಮ್ಮ ಭಾಗ್ಯ ಸದ್ಗತಿ ಸುವೈರಾಗ್ಯ ಇದೇ ನಮ್ಮ ಶ್ರಾಧ್ಯ ಸದ್ಗುರು ಪಾದಯೋಗ್ಯ 8 ಇದೇ ನಮ್ಮ ಕುಲವು ಸದ್ಗುರು ದಯದೊಲವು ಇದೇ ನಮ್ಮ ಬಲವು ಸದ್ಗುರು ದಯಜಲವು 9 ಇದೇ ನಮ್ಮಾಭರಣ ಸದ್ಗುರು ದಯ ಕರುಣ ಇದೇ ದ್ರವ್ಯ ಧನ ಸದ್ಗತಿ ಸಾಧನ 10 ಕಾಯ ಸದ್ಗುರುವಿನುಪಾಯ ಇದೇ ನಮ್ಮ ಮಾಯ ಸದ್ಗುರುವಿನ ಅಭಯ 11 ಇದೇ ನಮ್ಮ ಪ್ರಾಣ ಸದ್ಗುರು ಚರಣ ಇದೇ ನಮ್ಮ ತ್ರಾಣ ಸದ್ಗುರು ದರುಶನ 12 ಇದೇ ನಮ್ಮ ಜೀವ ಸದ್ಗುರು ವಾಸುದೇವ ಇದೇ ನಮ್ಮ ದೇವ ಸದ್ಗುರು ಅತ್ಮಲೀವ್ಹ 13 ಇದೇ ನಮ್ಮ ನಾಮ ಸದ್ಗುರು ಸದೋತ್ತಮ ಇದೇ ನಮ್ಮ ನೇಮ ಸದ್ಗುರು ಸರ್ವೋತ್ತಮ 14 ಇದೇ ನಮ್ಮ ಕ್ಷೇತ್ರ ಸದ್ಗುರು ಬಾಹ್ಯಂತ್ರ ಗಾತ್ರ ಸದ್ಗುರು ಘನಸೂತ್ರ 15 ಇದೇ ನಮ್ಮ ತೀರ್ಥ ಸದ್ಗುರು ಸಹಿತಾರ್ಥ ಇದೇ ನಮ್ಮ ಸ್ವಾರ್ಥ ಸದ್ಗುರು ಪರಮಾರ್ಥ 16 ಇದೇ ನಮ್ಮ ಮತ ಸದ್ಗುರು ಸುಸನ್ಮತ ಪಥ ಸದ್ಗುರುಮಾರ್ಗ ದ್ವೈತ 17 ಇದೇ ನಮ್ಮ ವೇದ ಸದ್ಗುರು ಶ್ರೀಪಾದ ಇದೇ ನಮ್ಮ ಸ್ವಾದ ಸದ್ಗುರು ನಿಜಬೋಧ 18 ಇದೇ ನಮ್ಮ ಗೋತ್ರ ಸದ್ಗುರು ಸರ್ವಾಂತ್ರ ಸೂತ್ರ ಸದ್ಗುರು ಚರಿತ್ರ 19 ಇದೇ ಸದ್ಯ ಸ್ನಾನ ಸದ್ಗುರು ಕೃಪೆ ಙÁ್ಞನ ಇದೇ ಧ್ಯಾನ ಮೌನ ಸದ್ಗುರು ನಿಜಖೂನ 20 ಇದೇ ಜಪತಪ ಸದ್ಗುರು ಸ್ವಸ್ವಸೂಪ ಇದೇ ವೃತ್ತುದ್ಯೋಪ ಸದ್ಗುರು ಸುಸಾಕ್ಷೇಪ 21 ಇದೇ ನಿಮ್ಮ ನಿಷ್ಠಿ ಸದ್ಗುರು ಕೃಪಾದೃಷ್ಟಿ ಇದೇ ನಮ್ಮಾಭೀಷ್ಠಿ ಸದ್ಗುರು ದಯಾದೃಷ್ಟಿ 22 ಇದೇ ಪೂಜ್ಯಧ್ಯಕ ಸದ್ಗುರು ಪ್ರತ್ಯಕ್ಷ ಇದೇವೆ ಸಂರಕ್ಷ ಸದ್ಗುರು ಕಟಾಕ್ಷ 23 ಇದೇ ನಮ್ಮ ಊಟ ಸದ್ಗುರು ದಯನೋಟ ಇದೇ ನಮ್ಮ ಆಟ ಸದ್ಗುರು ಪಾದಕೂಟ 24 ಮಾತೃಪಿತೃ ನಮ್ಮ ಸದ್ಗುರು ಪರಬ್ರಹ್ಮ ಭ್ರಾತೃಭಗಿನೀ ನಮ್ಮ ಸದ್ಗುರು ಪಾದಪದ್ಮ 25 ಇದೇ ಬಂಧು ಬಳಗ ಸದ್ಗುರುವೆ ಎನ್ನೊಳಗೆ ಇದೇ ಸರ್ವಯೋಗ ಬ್ರಹ್ಮಾನಂದ ಭೋಗ26 ಇದೇ ಸರ್ವಸೌಖ್ಯ ಮಹಿಪತಿ ಗುರುವಾಕ್ಯ ಇದೇ ನಿಜ ಮುಖ್ಯ ಸದ್ಗತಿಗಿದೆ ಐಕ್ಯ 27
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ನೋಡಿರೋ ನಿಜನೋಡಿರೋ ಧ್ರುವ ನೋಡಿನೋಡಿ ನೋಡಿ ನೋಡುದರೊಳು ಕೂಡಿ ನೋಡುವದೇನೆಂದು ನೋಡಿ ನೋಡಿದ ಮ್ಯಾಲಿನ್ನು ಮೂಡಿಬಂದರ ಘನ ನೋಡುವದೇ ಖೂನ ಮಾಡಿ ಮಾಡಿದ ಮಾಟವು ಕೂಡಿಬಂದರೆ ಕೈಯ ನಾಡಗೂಡ ಹೇಳಬ್ಯಾಡಿ ಗೂಢ ಗುಹ್ಯದ ಮಾತು ಒಡೆದು ಹೇಳುವದಲ್ಲಾ ನೋಡಿ ನಿಮ್ಮೊಳು ಬೆರೆದಾಡಿ 1 ಓದಿದರೋದಬೇಕಿದೊಂದೇ ಅಕ್ಷರ ಭೇದಿಸುವಂತೆ ಬ್ರಹ್ಮಾಂಡ ಇದೇ ಸಾಧಿಸಿನ್ನು ಮೂಲವ ತಿಳಿಯದೆ ಓದುವದ್ಯಾಕೆ ಉದ್ದಂಡ ಹಾದಿ ತಿಳಿಯದಿದ್ದರೆ ಹೇಳಿಕೊಡುವನು ಸದ್ಗುರು ಘನಪ್ರಪಂಚ ಭೋದಿಸಿ ಬ್ರಹ್ಮಾನುಸಂಧಾನದ ಸುಖ ಉದಯ ಮಾಡುವ ಅಖಂಡ 2 ನಾನ್ಯ ಪಂಥವೆಂಬ ಮಂತ್ರದನುಭವ ಚನ್ನಾಗ್ಯಾಗಬೇಕು ಖೂನ ಇನ್ನೊಂದು ಬ್ಯಾರೆಂಬ ಭಿನ್ನವಳಿದ ಮ್ಯಾಲೆ ತನ್ನೊಳಾಯಿತು ಸಮ್ಯಕಙÁ್ಞನ ಧನ್ಯ ಧನ್ಯ ಧನ್ಯ ಧನ್ಯಗೈಸುವದಿದು ಕಣ್ಣಾರೆ ಕಾಂಬೊ ಸಾಧನ ಉನ್ಮತವಾಗದೆ ಸನ್ಮತದೋರದು ಇನ್ನೊಬ್ಬರ ಕೇಳುವದೇನ 3 ಸರ್ವಮಿದಂ ಖಲು ಬ್ರಹ್ಮವೆಂಬುವ ಮಾತು ದೋರ್ವಾಂಗೆ ನೆಲೆಗೊಳಬೇಕು ಸರ್ವ ಸಾಕ್ಷಿ ಸರ್ವಾಧಾರವು ತಿಳಿಯದೆ ಗರ್ವಿತಲ್ಯಾಡುವ ಮಾತು ಹೋತು ಗುರ್ವಿನಂಘ್ರಿಗಿನ್ನು ಗುರುತವ ಕೇಳದೆ ಮವ್ರ್ಹಿನೊಳೀಹುದು ಮುಸುಕು ನಿರ್ವಿಕಲ್ಪನ ನಿಜ ಸ್ಮರಿಸುವಾಂಗೆ ಕಣ್ಣ ದೆರ್ವದಿದೊಂದೇ ಸಾಕು 4 ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ಎಂದು ಗುರುವಿಗೆ ಕೇಳಿ ನಿಜ ವಂದ ದೇಹದ ಒಳಗಿಹ್ಯ ದ್ಯಾವರ ತಿಳಿದರ ಜನ್ಮಕೆ ಬಂದುದು ಚಂದ ಸೋಹ್ಯ ಸೊನ್ನೆಯ ಗುಹ್ಯವ ತಿಳಿದರ ಭವ ಮೂಲದಿಂದ ಬಾಹ್ಯಾಂತ್ರ ಪರಿಪೂರ್ಣ ಭಾಸುತಲ್ಯದೆ ಮಹಿಪತಿಗಿದೆ ಬ್ರಹ್ಮಾನಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ನೋಡು ನಿನ್ನ ನಿಜವಾದ ಸ್ವರೂಪ ಜೀವ ಇದೇ ಸಕಲ ಜಗದ ಕಾರಣಾ ಬ್ರಹ್ಮ ಪೂರಣ ಪ ಅನಿಸುವಿಕೆಯು ಇಲ್ಲದಿರುವಾ ತೋರಿಕಿಲ್ಲದಾ ಬರಿ ಇರವಿದೇ ಮನಸಿಲ್ಲದೆ ಬೆಳಗುತಿರುವ ನಿದ್ರೆಹೊದ್ದದಾ ಬರಿ ಅರಿವಿದೆ ಘನ ನಿರಾಕಾರವೇ 1 ವಿಷಯಜನಿತ ದುಃಖಸುಖದ ಸುಳಿವು ತೋರದ ಘನಾನಂದವೇ ಶೇಷ ಮಾತ್ರನಾಗಿ ಸದಾ ಶಾಂತಿರೂಪದ ನಿರ್ವಿಕಾರ ನೀ ಹಸನಾಗಿ ತಿಳಿದುಕೊಳ್ಳು ಬೋಧವಾ ನೀನದೆ ಎಂಬುದ ಈ ಸತ್ಯಸ್ವರೂಪವೇ 2 ಸ್ವರೂಪಾತ್ಮ ಮಾತ್ರ ಪರಮಸತ್ಯನಾಗಿಹ ನಿತ್ಯನಾಗಿಹ ಬರೀ ತೋರಿ ಅಡಗುತಿರುವ ಜಗವು ಭ್ರಾಮಕಾ ಮಿಥ್ಯಾಭಾಸಕ ಗುರುವರ್ಯ ಶಂಕರಾತ್ಮಬೋಧನಾವೇದಾಂತಸಾರವಾ ಪರಮಾತ್ಮ ಜ್ಞಾನವಾ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಇದೇ ಪರಮಾರ್ಥ ಪ್ರಾಪ್ತಿಗೆ ಸೋಪಾನ ತಿಳಿ ಇದರಲ್ಲಿ ಬೇಡಿನ್ನು ಅನುಮಾನ ಇದೇ ಬಕುತಿಮಾರ್ಗವೇ ಸುಲಭ ಸೋಪಾನ ತಿಳಿ ವೈರಾಗ್ಯಜ್ಞಾನಾದಿಗಳ ತಾಣಾ ಪ ಸಂಸಾರದೊಳಗಿರ್ದ ಜೀವಂಗೆ ಸುಖದುಃಖದಿ ಬಳಲುವ ಮನುಜಂಗೆ ಕಂಸಾರಿ ಶ್ರೀ ಕೃಷ್ಣನಾಮವೊಂದೇ ಪಾಪ ಸಂಹಾರಿ ಪರಶಿವನಾಮವೊಂದೇ ಈ ಸಂಸಾರ ದಾಂಟುವಾ ನಿಜತಾಣಾ1 ನಿಷ್ಕಾಮ ಮನದಿಂದ ಭಜಿಸಲ್ಕೆ ಬಹು ದುಷ್ಕರ್ಮ ಫಲವೆಲ್ಲ ತೊಲಗಲ್ಕೆ ಶ್ರೇಷ್ಠ ವೈರಾಗ್ಯವು ನೆಲೆಸಲ್ಕೆ ಬಲು ಜಿಜ್ಞಾಸೆ ಮನದಲ್ಲಿ ಜನಿಸಲ್ಕೆ ಈ ಪರಮಾತ್ಮಧ್ಯಾನ ಮಹಾಸಾಧನಾ 2 ಆತ್ಮಜ್ಞಾನದ ಬೋಧನೆಗೊಂಡು ಪರಮಾತ್ಮನ ರೂಪವೆ ತಾನೆಂದೂ ಬರಿ ತೋರ್ಕೆ ಜಗವೆಲ್ಲ ಪುಸಿ ಎಂದೂ ಪರಮಾತ್ಮನೆ ನಿತ್ಯನು ನಿಜವೆಂದೂ ಪರಜ್ಞಾನವ ನೀಡಲ್ಕೆ ಈ ಸಾಧನ 3 ಪರಮಾರ್ಥನುಭವಿಗಳ ಸಂಗ ನೆರೆದೊರಕುತಲಿರುತಿರೆ ಭವಭಂಗ ವರ ಭಕ್ತಿ ಮಾರ್ಗದಿ ದೊರಕುವದೆಂದ ಇದೆ ಪರಮಾರ್ಥ ಪ್ರಾಪ್ತಿಗೆ ಮೂಲವೆಂದ ಇದೆ ಗುರುಶಂಕರಾನಂದಕೃಪೆಯಿಂದ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಇದೇ ಪೂರ್ಣಪದಾ ತಿಳಿ ಜೀವಾ ಆತ್ಮಸ್ವರೂಪಾ ನೋಡು ನೀ ಈ ಜಗಕೆಲ್ಲ ಆಧಾರಾ ಪರಮಪದವದೇ ನೊಡು ನೀ ಪ ತೋರುವೀ ಜೀವರಾಧಾರ ತೋರದಾ ಪೂರ್ಣಾಜ್ಞಾನರೂಪ ಅದೇ ಕಲ್ಪನೆರಹಿತ ಅದ್ವೈತ ಪರಮಪದವದೇ ನೋಡು ನೀ 1 ಮನವಾಣಿಗೆ ಸಿಗದ ಆ ಸ್ಥಿತಿ ಪೂರ್ಣಾ ಪರಮಾತ್ಮನೈ ಅದೇ ನೀನಿಹೆ ಜೀವಾ ತಿಳಿಯಿದನಾ ಗುರು ಶಂಕರನಾ ಬೋಧನಾ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಇದೇ ಭಕುತಿ ಮತಿಗೆ ಮುಕುತಿ | ಇದಕ್ಕಧಿಕವಾಗಿಪ್ಪ ವಿಧಿಗಳೆಲ್ಲಿಯಿಲ್ಲಾ ಪ ರತುನ ಗರ್ಭದೊಳಗೆ ತಿಳಿ | ರತುನ ಸಮಕ್ಷೇತ್ರಗಳಿಗೆ | ರತುನವೆನ್ನಿ ಯತಿವಂಶ | ರÀತುನ ಮಧ್ವಮುನಿಮಾಡಿದಾ 1 ಪದ ಜೀವಸ್ತರಿಗದೆ ಪಾ | ಪ ಜನರು ಕೃಷ್ಣರಾಯನ ಪಾದವ ನೋಡಿ ನಿತ್ಯಾ | ಸಾಧನಿ ಮನ ಮಾಡಿರಯ್ಯಾ 2 ಏಳು ಒಂದು ಮಠದ ಲೋಕರಂಸೆ ಸದನವೆನ್ನಿ | ಪೇಳಲೇನು ಅವರೇ ಯಿಲ್ಲಿ ಊಳಿಗವ ಮಾಡುತ್ತಿಪ್ಪರು 3 ಮೇರೊ ಪರ್ವತ ತುಲ್ಯವಿದೆ | ವಾರಿಜನೆ ಮಧ್ವರಾಯ | ಈ ರಜತ ಪೀಠವೆ ಮಂದಿರ ಶತಕೋಟಿ ಎನ್ನೀ4 ಮೆರೆವ ಮಧ್ವತೀರ್ಥ ಬಾಹಿರ | ವರಣ ಉದಕವೆನ್ನಿ ಇಲ್ಲಿ | ಚರಿಸುವಂಥ ಸುಗುಣ ತೃಣಾ ದ್ಯರು ಮುಕುತಿ ಯೋಗ್ಯರಹುದು5 ಉಡಪಿ ಯಾತ್ರೆ ಮಾಡಿದವನು | ಪೊಡವಿ ತುಂಬ ಯಾತ್ರೆ | ಬಿಡದೆ ಚರಿಸಿದವನೆ ಎಂದು | ಮೃಡನು ಇಲ್ಲಿ ಸಾರುತಿಪ್ಪಾ 6 ಉಬ್ಬಿ ಸರ್ವ ಇಂದ್ರಿಯಂಗಳಾ | ಹಬ್ಬವಾಗಿ ಸುಖಿಪದಕೆ | ಊರ್ಬಿಯೊಳಗೆ ಉಡುಪಿ ಯಾತ್ರೆ | ಅಬ್ಬದಲೆ ದೊರಕದಯ್ಯಾ 7 ಹಿಂಗಿ ಪೋಗದಕೆ ಇದೇ | ಅಂಗವಲ್ಲದೆ ಬೇರೆ ಇಲ್ಲ | ರಂಗ ಸುಲಭಸಾಧ್ಯಾವಾಹಾ 8 ನೂರು ಕಲ್ಪಧರ್ಮ ಮಾರನಯ್ಯ ವಿಜಯವಿಠ್ಠಲನ | ಸಾರಿ ತಂದು ಕೊಡುವಾ9
--------------
ವಿಜಯದಾಸ
ಇದೇ ಭಕ್ತವರ್ಯನ ಲಕ್ಷಣ ಪಾವನವಿದು ಕಾಣಾ ಪರಮಾತ್ಮನ ರೂಪ ಚರಾಚರದ ಜಗದಲ್ಲಿ 1 ಇದೇ ಪರಿಯಲಿ ಸ್ವರೂಪದಲ್ಲಿ ಜಗವೆಲ್ಲಾ ಕಾಂಬಾ ಆತ್ಮರೂಪ ಭಗವಂತನೆ ಸತ್ಯ ಮಿಕ್ಕವೆಲ್ಲಾ ಮೀಥ್ಯ ಲಕ್ಷ್ಯವೆಲ್ಲಾ ತನ್ನೋಳ ತಿರುಗಿಸಿ ಆನಂದವ ಪಡೆವ ಕಾಣುವನಿವ ಪರಮಾತ್ಮ ಸರ್ವಾತ್ಮ 2 ಸಂಸಾರದಲಿ ವಿಷಯದ ಭೋಗ ಪ್ರಾರಬುಧದಲಿಪಡೆ ಮಾಯೆಮಾತ್ರವಿದು ಎನ್ನುತ ತಿಳಿವಾ 3 ನಿಜಾಸಕ್ತಿ ಪಡೆಯದಲೇ ನಿರುತ ತನ್ನಯ ಹೃದಯಾಂತ ಪರಮಾತ್ಮನ ನೆನೆವ ದೇಹಾದಿಗಳ ಈ ಪರಿಣಾಮಗಳಿಗೇ ಮೋಹಗೊಳಲಾರ ಕಾಮನೆಯಾ ಬೀಜಾಂಕುರವೆಂದೂ ನಾಟದು ಇವನಲ್ಲೀ ಕಾಣುವನಿವ ಪರಮಾತ್ಮ ಸರ್ವಾತ್ಮ ಪ್ರಭೂಶಂಕರನ ರೂಪಾ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಇದೇ ಸಮಯ ಹರಿಯೇ ಇದೇ ಸಮಯ ಪ ಕಮಲ ತೋರಿ ಸದಾ | ಬಿಡದೆ ಎನ್ನ ಮುದದಿ ಪೊರೆವುದಕೆ ಅ.ಪ ನಾನಾ ಯೋನಿಯಲಿ ಬಂದು ಜ್ಞಾನ ದುರ್ಲಭನಾಗಿ | ಹೀನನಾದವಗೆ ಸುಜ್ಞಾನ ಪಾಲಿಸುವುದಕೆ 1 ಆಶಾಪಾಶಕೆ ಸಿಲುಕಿ ಶ್ರೀಶನ ಮರೆತೆನೋ | ಲೇಸು ದಾರಿಯ ತೋರಿ ದಾಸನ ಕಾಯುವುದಕೆ 2 ಸಂತರ ಸಂಗವ ಸಂತತ ಪಾಲಿಸಿ ಅಂತರಂಗದಿ ನಿನ್ನ ಚಿಂತನೆ ಕೊಡುವುದಕೆ 3 ಹಿಂದಿನ ಸುಕೃತದಿ ಬಂದೆ ಭೂಸುರನಾಗಿ | ಮುಂದಿನ ಪದಕ್ಕಾಗಿ ಕುಂದದೆ ಸಲಹುವುದಕೆ 4 ಪತಿ ವಿಜಯವಿಠ್ಠಲ ವೆಂಕಟ | ತಾಪವ ಕಳೆದೆನ್ನ ಕಾಪಾಡುವುದಕೆ 5
--------------
ವಿಜಯದಾಸ
ಇದೇ ಸಾಧಿಸಿನೋಡಿ ಮನ ಉನ್ಮನÀಮಾಡಿ ಘನಸುಖ ಭೇಧಿಸಿದರ ಭಾಸುತದೆ ತನ್ನೊಳು ತಾನೆ ಕೌತುಕಧ್ರುವ ನೋಡಿ ನೋಡಿ ಖೂನ ಅರುಹು ಇಲ್ಲದೆ ಜನದೊಳು ಬರುದೆ ಹೇಳ್ಯಾಡುದೇನ ನಿರ್ವಿಕಲ್ಪನ ನಿಜನೆಲೆನಿಭವರಿತು ನೋಡಿ ಸ್ಥಾನ ಸರ್ವಸಾಕ್ಷಿ ಸರ್ವಾತೀತವೆಂಬ ವಸ್ತು ನೋಡಿ ಪೂರ್ಣ 1 ಕಣ್ಣಿನ ಕೊನೆ ಮುಟ್ಟಿ ಕರಗಿ ಮನವು ನೋಡಿ ಪೂರ್ಣ ಬೊಧ ಸಣ್ಣ ದೊಡ್ಡವರೊಳಗಿದೆ ಒಂದು ಸಾರುತಿದೆ ವೇದ ಧನ್ಯ ಧನ್ಯಗೈಸುವ ನಿಜ ಪುಣ್ಯ ಗುರುಪಾದ ಚನ್ನಾಗ್ಯನುಭವದಿಂದ ನೋಡಲಿಕ್ಯಾಗದು ಸ್ವಾದ 2 ಸುರಿಮಳಿಗರೆವುತಲ್ಯದೆ ಸ್ವಸುಖದಾನಂದೊ ಬ್ರಹ್ಮ ತೆರೆತಿಳಿಯಲಿಕ್ಕೆ ಗುರು ಶರಣ ಹೋಗಬೇಕು ಇದೇ ವರ್ಮ ಹರುಷಗೈಸಿದ ನೋಡಿ ಪತಿತಪಾವನ ಸದ್ಗುರು ನಮ್ಮ ತರಳ ಮಹಿಪತಿಗಿದೆ ನಿತ್ಯಭಿನವದ ನೋಡಿ ಸಂಭ್ರಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಹೌದು ಭವತರಿಯುವ ಶಸ್ತ್ರ ಪದೇ ಪದೇ ಸಿರಿವರನ ಸ್ತೋತ್ರ ಪ ಅಧಮಮತಿಯ ಬಿಟ್ಟು ಸದಮಲ ಮನದಿಂ ವಿಧವಿಧ ಹರಿಯೆಂದೊದುರುತ ಕಾಣುವುದೆ ಅ.ಪ ದಾನಧರ್ಮಯಜ್ಞ ಇವು ಯಾಕೊ ಸ್ನಾನ ಮೌನ ಜಪ ಮತ್ತ್ಯಾಕೊ ನಾನಾ ಮಂತ್ರ ತಂತ್ರ ಗೋಜ್ಯಾಕೆಬೇಕೊ ಕ್ಷೋಣಿ ತಿರುಗಿ ಬಹು ದಣಿಲ್ಯಾಕೊ ನಾನಾಪರಿಯಲಿಂದ ದೀನದಯಾಪರ ಗಾನಲೋಲನ ಭಜನಾನಂದ ಪಡೆವುದೆ1 ವೇದಪುರಾಣ ಪುಣ್ಯ ಶಾಸ್ತ್ರಗಳ್ಯಾತಕೊ ಸಾಧನಸಿದ್ಧಿಗಳ ಬಲವ್ಯಾಕೋ ಭೇಧಯೋಗದ ಬಹು ಬೋಧಗಳ್ಯಾತಕೊ ಓದಿಓದಿ ದಿನಗಳಿಲ್ಯಾಕೊ ವೇದಗಮ್ಯದಾದಿ ಮೂರುತಿ ಶ್ರೀ ಪಾದವರಿತು ಆರಾಧಿಸುತಿರುವುದೆ 2 ಕಾಶಿ ಕಂಚಿ ಕಾಳಹಸ್ತಿ ತಿರುಗಲ್ಯಾಕೊ ಸಾಸಿರದೈವಕೆ ಬಾಗುವುದ್ಯಾಕೊ ಮಾಸಪಕ್ಷ ವ್ರತ ನೇಮಗಳ್ಯಾತಕೊ ಘಾಸಿಯಾಗಿ ದೇಹ ದಂಡಿಸಲ್ಯಾಕೊ ಶೇಷಶಯನ ನಮ್ಮ ಶ್ರೀಶ ಶ್ರೀರಾಮನ ಲೇಸಾದ ನಾಮವೊಂದೆ ಧ್ಯಾಸದಿಟ್ಟು ನುಡಿ 3
--------------
ರಾಮದಾಸರು
ಇದೇವೆ ಗುರುಕೃಪೆಯದಾಟಗಳು ಧ್ರುವ ಮನಯೋಗದ ಗೋಲ್ಹಾಟಗಳು ಅನುದಿನ ಅನಿಮಿಷ ನಯನದ ನೋಟಗಳು ಜ್ಞಾನ ಸಮುದ್ರದ ಲೋಟಗಳು ಏನೇಂದ್ಹೇಳಲಿ ಸ್ವಾನಂದದ ಸುಖ ಅನಂದೋಬ್ರಹ್ಮದ ಆಟಗಳು 1 ಸೊನ್ನೆಯ ಸೂಟಿಗಳು ತಾಳಮೃಂದಗವು ಭೇರಿಡುತಿಹ್ಯ ಕೇಳುವ ಧಿಮಿಧಿಮಿಟಗಳು ತಲ್ಲೀನದಿ ಶ್ರುತಿಘೋಷಾಲಿಸುವನೀದೃಶ್ಯದ ಉದಾಟಗಳು ತಿಳಿಯಲು ಬಲು ಆವ್ಹಾಟಗಳು 2 ಬಲ್ಲವೇನು ನರಕೀಟಗಳು ದೇವದೇವೋತ್ಮನ ನೋಟಗಳು ದಯಕರುಣದಿ ಜೀವನ ¸ದ್ಗೈಸುವ ಭವನಾಶನ ಕೃಪಾದೃಷ್ಟಿಗಳು ಧನ್ಯಧನ್ಯ ಕುಲಕೋಟಿಗಳು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇವೆ ಬಂದದಾ ಖೂನವು | ಇದೇವೆ ಸಾರ್ಥಕ ಜನುಮವು ಪ ಹೊತ್ತು ಹೋಗದ ಬೀದಿ ಮಾತುಗಳಾಡದೆ ಚಿತ್ತಕ ಆಲೇಶ ತರಗುಡನು ಉತ್ತಮರೊಳುಕೂಡಿ ಶ್ರೀಹರಿ ಮಹಿಮೆಯಾ ನಿತ್ಯ ಕಥಾಮೃತ ಸೇವಿಪನು 1 ಹಾಲವನೆರೆದರೆ ಸರಕನೆ ಕುಡಿಯದ ಬಾಲಕನಂದದಿ ಈ ಮನವು ಕಾಲಕಾಲಕ ಸದ್ಭೋದವ ಕೇಳಿಸಿ ಮ್ಯಾಲ ಸ್ವಹಿತ ಕೊಡುವನು 2 ಉದರದ ಧಾವತಿಗನುದಿನ ಬೆರತಿರ ಇದರೊಳಗೆಚ್ಚರ ಹಿಡಿದಿಹನು ಮದಮತ್ಸರಳಿದು ಗುರುಮಹಿಪತಿ ಪದ ಪದುಮದಹಿಷ್ಠೆಯ ಜಡಿದಿಹನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದ್ರಪ್ರಸ್ಥದಲ್ಲೆ ಕುಂತಿ ನಂದ(ನ) ರಾಜಸೂಯ್ಯಾಗವನು ಆ- ನಂದದಿ ಮಾಡಿಂದಿರೇಶಗರ್ಪಿಸಿದನು 1 ಮಂದಬುದ್ಧಿ ಕೌರವನು ಚೆಂದನೋಡಿ ಸೈರಿಸದೆ ಪಾಂಡವರ ಪಟ್ಟಣದಿಂದ್ಹೊರಗ್ಹಾಕುವೆನೆಂದನು 2 ಘಾತಕ ದುರ್ಯೋಧನ ತನ್ನ ಮಾತುಳ ಶಕುನಿಯ ಕೇಳಿ ಪ್ರೀತಿಂದೆ ಪಾಂಡವರ ಕರೆಸಿ ದ್ಯೂತವಾಡಿದ 3 ಆಗ್ರಾದಿಂದಾಟಗಳ ಸೋಲಿಸಿ ಶೀಘ್ರದಿಂದ್ವನವಾಸವ ಚರಿಸಿ ಅಜ್ಞಾತ್ವಾಸೊಂದೊ(ದ್ವ?) ರುಷವೆಂದು ಪ್ರತಿಜÉ್ಞ ಮಾಡಿದ 4 ಸೋತು ಧರ್ಮ ಸಕಲೈಶ್ವರ್ಯ ಸಾದೇವ ನಕುಲ ಭೀಮರ ಪಾರ್ಥ ದ್ರೌಪದಿಯ ಪಣಕಿಟ್ಟು ಕೂತನಾಗಲೆ 5 ಆನೆ ಕುದುರೆ ಅಷ್ಟೈಶ್ವರ್ಯ ಬ್ಯಾಗೆ ತನ್ನಿರಿ ಭಂಡಾರವನು ಹೋಗಿ ದ್ರೌಪದಿ ಕರೆಯಿರೆಂದು ಹೇಳಿದನಾಗ 6 ಕರವ ಮುಗಿದು ನಿಂತು ಇಂದು ನಮ್ಮ ರಾಜಸಭೆಗೆ ಬನ್ನಿರೆಂದರು 7 ದಾಯವಾಡಿ ಸೋತರಿನ್ನುಪಾಯವಿಲ್ಲೀಗೆ 8 ಇಂದಿರೇಶನ ದಯವು ನಮ್ಮಲ್ಲಿದ್ದ ಕಾರಣದಿಂದೀಗ ದುರಿತ ಬಯಲಾಗುವುದ್ಹ್ಯಾಗೆಂದು ನುಡಿದಳು 9 ಚಂದ್ರ ಜ್ಯೋತಿಯಂತೆ ಹೊಳೆವೊ ಮಂದಗಮನೆ (ಇ)ಂದು ವದನೆ ದುಂಡು ಮಲ್ಲಿಗೆಶಿರವ ಬಾಗಿ ಬಂದು ನಿಂತಳು 10 ಕಂಡು ದುರ್ಯೋಧನ ದ್ರೌಪದಿ ನಿನ್ನ ಗಂಡರಡವಿಗೈದುವೋರು ಹೆಂಡತ್ಯಾಗಿರೆನ್ನ ಬಳಿಗೆ ಬಾರೆ ಎಂದನು 11 ಕೆಂಡ ತುಂಬಿದ ಕೊಂಡದೊಳು ಕಂಡೂ ನೀ ಹಾರುವರೇನೊ ತುಂಡು ಮಾಡಿ ಕಡಿವೋರೈವರು ಬ್ಯಾಡೋಯೆಂದಳು 12 ಪತಿಗಳಿಂದೆ ರಹಿತಳೆ ದ್ರೌಪದಿಯೆ ನೀನತಿ ಹರುಷದಿಂದೆ ಸತಿಯಾಗಿ ಬಾಳ್ಹಿತದಿಂದೆನ್ನಕೂಡೇಯೆಂದನು 13 ಪತಿಯಿಂದೆ ರಹಿತಳು ಭಾನುಮತಿಯೋ ಧೃತರಾಷ್ಟ್ರ ಗಾಂಧಾರಿ ಸುತಹೀನರಾಗುವರತಿ ಬ್ಯಾಗೆ ಮತಿಗೇಡಿ ಕೇಳೊ 14 ಪಟ್ಟೆ ಮಂಚಕ್ಕೊಪ್ಪುವ್ಯಂತೇ ಬಾರೇಯೆಂದನು 15 ಅಷ್ಟ ಬಡವರೈವರು ನಿನ ಶಿರ ಕುಟ್ಟಿ ಯಮಪಟ್ಟಣಕ್ಕೆ ಅಟ್ಟಿ ರಾಜ್ಯಕ್ಕಧಿಕಾರ್ಯವರು ಕೇಳೋಯೆಂದಳು 16 ಹೇಮ ಇಚ್ಛ ಮಾಡಿದ್ದೇನೀಗೆನ್ನ ಕೂಡೆ ಎಂದನು 17 ಹುಚ್ಚು ಹಿಡಿದಿತೇನೋ ನಿನಗೆ ಉಚ್ಚು ಬಡಿದು ನಿನ್ನ ಹಲ್ಲು ನುಚ್ಚು ಮಾಡಿ ಕೊಲ್ಲೋರೈವರು ಬ್ಯಾಡೋಯೆಂದಳು 18 ಬಡನಡುವಿನ ವೈಯಾರಿ ಕಡುಚೆಲ್ವೆ ದ್ರೌಪದಿಯೆ ಎನ್ನ ತೊಡೆಯಮ್ಯಾಲೆ ಒಪ್ಪುವ್ಯಂತೆ ಬಾರೆಯೆಂದನು 19 ಕಡುಪಾಪಿ ನೀ ನುಡಿವೋ ನಾಲಿಗೆ ಕಡಿದು ಭೀಮನ ಗದೆಯು ನಿನ್ನ ಉರ ಭೇದಿಸುವೋದನು ನೋಡೇನೆಂದಳು 20 ಅಂಗನೆ ನಿನ್ನಂಗಸಂಗವಾಗದಿದ್ದರೆ ನಿನ್ನ ಮಾನ- ಭಂಗ ಮಾಡಿ ಬತ್ತಲೆ ನಾ ನಿಲಿಸೇನೆಂದನು 21 ಪುಂಡ ಖಳ ನಿನ್ನುದರ ಓಕುಳಿಕೊಂಡಮಾಡೋಕುಳಿಯನಾಡಿ ಚೆಂಡನಾಡಲು ನಿನ್ನ ಶಿರವ ನೋಡೇನೆಂದಳು 22 ಪಾಪಿ ದುಶ್ಶಾಸನನು ಬಂದು ದ್ರೌಪದಿಯ ಮುಂದೆ ನಿಂತು ನೂತನದ ನಿರಿಯ ಪಿಡಿದು ಸೆಳೆಯುತಿದ್ದನು 23 ನಿಲ್ಲೊ ಪಾಪಿ ನಿನ್ನ ರಕ್ತ ಎರೆದು ಹಲ್‍ಹಣಿಗಿಯಲ್ಹಿಕ್ಕಿ ಎಲ್ಲ ಕರುಳ್ವನಮಾಲೆಯ ಮಾಡಿ ಮುಡಿವೆನೆಂದಳು 24 ಮಂಗಳ ಮೂರುತಿ ಮಾರಜನಕ ಎನ್ನ ರಕ್ಷಿಸೆಂದು ಕರವ ಮುಗಿದು ನಿಂತಳು 25 ಮಡುವಿನಲ್ಲೆ ಮುಚ್ಛನಾಗಿ ಬಿಡದೆ ವೇದವ ತಂದು ಕ್ಷೀರ- ಕಡಲ ಕಡೆದ ಕೂರುಮ ಎನ್ನ ಕಾಯೋಯೆಂದಳು 26 ಕಡುಕ್ರೂರ ವರಾಹಾವತಾರ ಹಿಡಿದು ಹಿರಣ್ಯಾಕ್ಷನ ಕಂಬ ವೊಡೆದು ಬಂದಾರ್ಭಟಿಸುವ ಸಿಂಹ ಕಾಯೊ ಎಂದಳು 27 ಬಡವನಾಗಿ ಬಲಿಯ ದಾನ ಬೇಡಿಕೊಂಡ್ವಾಮನನೆ ದೊಡ್ಡ ಕೊಡಲಿ ಪಿಡಿದು ಕ್ಷತ್ರಿಯರನೆ ಕಡಿಬ್ಯಾಗೆಂದಳು 28 ಹತ್ತು ತಲೆಯ ರಾವಣನ ಹತವಮಾಡಿದ್ದವನೆ ಗೋಪೀ ಪುತ್ರನಾದ ಕೃಷ್ಣ ಎನ್ನ ರಕ್ಷಿಸೆಂದಳು29 ಬತ್ತಲಿದ್ದ ಬೌದ್ಧ ನೀ ಬಿಟ್ಟೊ ್ವಸ್ತ್ರ ಎನಗುಡುಗೊರೆಯ ಕೊಟ್ಟು ಹತ್ತಿ ತೇಜಿ ಹರುಷದಿಂದ ಬಾರೋಯೆಂದಳು 30 ಕ್ಷೀರಸಾಗರದಲ್ಲೆ ನೀ ಶ್ರೀಲಕ್ಷ್ಮೀ ಸಹಿತ ಇದ್ದರೇನು ಭೂ ವೈಕುಂಠವಾಸಿ ಎನ್ನ ಕಾಯೋಯೆಂದಳು 31 ಅನಂತಾಸನದಲ್ಲೆ ಆದಿಲಕ್ಷ್ಮೀ ಸಹಿತಾಗಿದ್ದರೇನು ಸೇತೂ(ಶ್ವೇತ?) ದ್ವೀಪವಾಸಿಯೆನ್ನ ಕಾಯೋಯೆಂದಳು 32 ಮಧುರಾ ವಾಸಿ ವೃಂದಾವನ ಗೋವ್ರಜದಲ್ಲಿದ್ದರೇನೊ ಕೃಷ್ಣ ಒದಗಿಬಂದೀಗೆನ್ನಭಿಮಾನ ಕಾಯೋಯೆಂದಳು 33 ಬ್ಯಾಗೆ ಬಿಟ್ಟೀಗೆನ್ನ ಬಳಿಗೆ ಬಾರೋಯೆಂದಳು 34 ಕಾಂತ ಅಕ್ಷಯವೆಂದ ವಸ್ತ್ರಾನಂತವಾದುವು 35 ಕೆಂಪು ಹೂವು ಇರುವಂತಿಗೆಯು ಪಂಚಪೈಠಣಿ ಪಗಡಿ ಬಣ್ಣ ಚಿಂತಾಕು ಪೈಠಣಿಯ ನಿರಿ ಸೆಳೆಯುತಿದ್ದನು 36 ಕರಿಯ ಹೂವು ಕಡ್ಡಿಪೈಠಣಿ ಸೆರಗು ಜರದ ಚಾರಖಾನಿ ಪರಿಪರಿ ಪತ್ತಲಗಳ ತಾ ಸೆಳೆಯುತಿದ್ದನು 37 ಬಿಳಿಯ ಹೂವು ಬಟ್ಟ ಮುತ್ತಿನ ಹೊಳೆವೊ ನಿಂಬಾವಳಿಯು ಚಂದ್ರ ಕಳೆಯ ಸೀರೆಗಳನೆ ಪಿಡಿದು ಸೆಳೆಯುತಿದ್ದನು 38 ಸೂರೂತಿ ಸುಗುತೀಯ ಬಣ್ಣ ಭಾರಿ ಬಾಳೆಪಟ್ಟೆಗಳನು ದ್ವಾರ್ಯಾಮನಿ ಖಂಬಾವತಿ ಸೀರೆ ಸೆಳೆಯುತಿದ್ದನು 39 ತಬಕಾದ್ಹೂವೆಳ್ಳ್ಹೂವು ಗೆರೆ ಸಾಸಿವೆಯ ಚಿಕ್ಕಿ ಸರಪಳ್ಯಂಚು
--------------
ಹರಪನಹಳ್ಳಿಭೀಮವ್ವ
ಇಂದ್ರಲೋಕವ ಪೋಲ್ವ ದ್ವಾರಕೆಯಿಂದ ನಮ್ಮನು ಸಲಹಲೋಸುಗಸಿಂಧುವಿನ ಮಾರ್ಗದಲಿ ತೌಳವ ಜನರ ದೇಶಕ್ಕೆಬಂದು ಮಧ್ವಾಚಾರ್ಯರ ಕೈ-ಯಿಂದ ಪೂಜೆಯಗೊಂಬ ಕೃಷ್ಣನಮಂದಹಾಸದ ಮುದ್ದುಮೊಗ ಸೇವಿಪಗೆ ಸಂಪದವು1 ಪಾದ ಮನೋಹರೋರುದ್ವಂದ್ವ ಶ್ರೀಕೃಷ್ಣನ ಮೂರ್ತಿಯ ನೋಳ್ಪರ ನಯನ ಸುಕೃತಫಲ2 ನಿತ್ಯದಲಿ ಗೋಘೃತದ ಮಜ್ಜನಮತ್ತೆ ಸೂಕ್ತ ಸ್ನಾನ ತದನು ಪ-ವಿತ್ರ ಮಂತ್ರ ವಿಚಿತ್ರ ತರವಹ ಕಲಶದಭಿಷೇಕವಸ್ತ್ರಗಂಧ ವಿಭೂಷಣಂಗಳವಿಸ್ತರಿಪ ಶ್ರೀತುಲಸಿ ಪುಷ್ಪದಿಭಕ್ತಿಭರಿತರು ಮಾಡುವಾರಾಧನೆಯನೇನೆಂಬೆ 3 ಸುತ್ತ ಸುಪ್ತಾವರಣದರ್ಚನೆವಿಸ್ತರಿಪ ಸ್ತೋತ್ರಗಳ ಗಾನ ವಿ-ಚಿತ್ರರ ನೈವೇದ್ಯವು ಸುವೀಳೆಯ ಧೂಪ ದೀಪಗಳುರತ್ನದಾರ್ತಿಗಳ ಸಂಭ್ರಮಛತ್ರ ಚಾಮರ ನೃತ್ಯಗೀತಾ-ದ್ಯುತ್ಸವಗಳೊಪ್ಪಿಹವು ದೇವನ ಮುಂದೆ ದಿನದಿನದಿ 4 ಅಪ್ಪಮೊದಲಾದಮಲ ಭಕ್ಷ್ಯವತುಪ್ಪ ಬೆರೆಸಿದ ಪಾಯಸವ ಸವಿ-ದೊಳ್ಪ ಶಾಕಗುಡಂಗಳನು ಕಂದರ್ಪನಪ್ಪನಿಗೆಅರ್ಪಿಸುವರನುದಿನದಿ ರಸ ಕೂ-ಡಿಪ್ಪ ಪಕ್ವಫಲಾದಿಗಳು ರಮೆಯಪ್ಪಿಕೊಂಡಿಪ್ರ್ಪಚ್ಯುತಗೆ ಪೂಜಿಸುವ ಯೋಗಿಗಳು 5 ಸಿರಿ ನೆಲಸಿಹುದು ಶ್ರೀಕೃಷ್ಣನ ಮನೆ ಶೃಂಗಾರ 6 ಶುಭ ವಾಕ್ಯಗಳ ನಮಗೆನಿಷ್ಠಸುಜನರು ತಟ್ಟನೆ ಮನ-ಮುಟ್ಟಿ ನೆನೆವರಿಗಿಷ್ಟ ಅಖಿಳವಕೊಟ್ಟು ಸಲಹದೆ ಸೃಷ್ಟಿಯೊಳು ನೀಗಿಪ್ಪೊ ಗುಣಪುಷ್ಪ 7 ಏನನೆಂಬೆನು ಕೃಷ್ಣ ದೀನರ ದೊರೆಯು ನೀನೆಂದಾದ ಕಾರಣಮಾನವರ ಸುರಧೆÉೀನುತನ ನಿನಗಿಂದು ಸೇರಿತಲಹೀನತೆಯ ಪರಿಹರಿಸಿ ಭಾಗ್ಯಾಂಭೋನಿಧಿಯೆ ನಿಜರ್ಗೀವ ನಿನ್ನ ಮ-ಹಾನುಭಾವದ ಬಲುಮೆಗೆಣೆಗಾಣೆನು ಮಹಾಪ್ರಭುವೆ 8 ಭಾಪು ದಿವಿಜರ ದೇವರಾಯನೆಭಾಪು ಭಜಕರಅಭೀಷ್ಟವೀವನೆಭಾಪು ಹರಿನೀಲೋತ್ಪಲನೆ ಶ್ಯಾಮಲನೆ ಕೋಮಲನೆಭಾಪು ಹಯವದನಾಖಿಲೇಶನೆಭಾಪು ಸುಜನರ ಪಾಪ ನಾಶನೆಭಾಪು ಕೃಷ್ಣಾಲಸತ್ರೈಪಾಲಕನೆ ಬಾಲಕನೆ 9
--------------
ವಾದಿರಾಜ