ಒಟ್ಟು 1028 ಕಡೆಗಳಲ್ಲಿ , 104 ದಾಸರು , 903 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಣ್ಣಿಸುತ ಮಕ್ಕಳನು ಹರಸುವಳು ತಾುಎಣ್ಣೆ ಉಣಿಸುತ ತನ್ನ ಚಿನ್ನ ಚಿಕ್ಕರುಗಳಿಗೆ ಪಆಯುಷ್ಯವಂತನಾಗು ಆಸ್ತಿಕನು ನೀನಾಗುಭಕ್ತವತ್ಸಲ ಹರಿಯಭಕ್ತನಾಗುನಿತ್ಯನಿರ್ಮಲನಾಗು ನೀತಿವಂತನು ಆಗುಸತ್ಯನಿಷ್ಠನಾಗು ಸಿರವಂತನಾಗೆಂದು 1ಶೂರನೀನಾಗು ಬಲುಧೀರ ನೀನಾಗಯ್ಯಾಧೈರ್ಯದಿಂದ ಸತ್ಕಾರ್ಯ ನಿರತನಾಗುದುರುಳರನು ದೂರಿರಿಸು ಪರರ ಪೀಡಿಸದಿರುಕಾರುಣ್ಯ ನಿಧಿಯಾಗಿ ಸುಜನರನು ಪೊರೆಯೆಂದು2ದೇಶವನು ಪ್ರೀತಿಸು ದುರಾಶೆಗೊಳಗಾಗದಿರುಕರ್ಯಠನು ಆಗದಿರು ಧರ್ಮ ಬಿಡಬೇಡಾಉದ್ಯೋಗಪತಿಯಾಗು ಜಿಪುಣ ನೀನಾಗದಿರುಭೂಪತಿ'ಠ್ಠಲನ ಭಕ್ತ ನೀನಾಗೆಂದು 3
--------------
ಭೂಪತಿ ವಿಠಲರು
ಬಂದನಿದಕೋ ರಂಗ ಬಂದನಿದಕೋ ಸುಂದರಾಂಗನು ನಮ್ಮ ಮಂದಿರಕೆ ಈಗಾ ಪ. ಮುಗಳುನಗೆ ಮುಖದಲ್ಲಿ ಮುಂಗುರುಳು ನವಿಲುಗರಿ ಕಂಬು ಕಂಠಾ ಝಗ ಝಗಿಪ ಕುಂಡಲವು ಕಸ್ತೂರಿ ತಿಲಕ ಫಣಿ ನಗಧರನು ನಮ್ಮ ಮನಸೂರೆಗೊಂಬುದಕೇ 1 ಕರದಲಿ ಕಂಕಣವು ಬೆರಳಲ್ಲಿ ಉಂಗುರವು ಕೊರಳಲ್ಲಿ ನವರತÀ್ನ ಮುತ್ತಿನಹಾರಗಳೂ ಕಿರುಗೆಜ್ಜೆ ನಡುವಿನಲಿ ವಲಿವೋ ಪೀತಾಂಬರವು ವರ ವೇಣು ವಯ್ಯಾರದಿಂದ ಊದುತಲೀ 2 ಸುರರ ವಂಚನೆಗೈದು ವರ ಋಷಿಗಳನೆ ಜರಿದು ಸಿರಿಗಗೋಚರನೆನಿಸಿ ಪರಮ ಪುರುಷಾ ವರಧಾಮತ್ರಯಗಳನೂ ಮರದೆಮ್ಮ ಗೋಕುಲದಿ ಚರಿಯ ತೋರೀ 3 ಇಂದಿರೇಶನು ನಮ್ಮ ವೃಂದಾವನದೊಳಿಪ್ಪ ಮಂದಿಗಳ ಮನ ಸೆಳೆದು ಮಾರಜನಕಾ ಒಂದೊಂದು ರೂಪಿನಲಿ ಗೋಪಿಕಾ ಸ್ತ್ರೀಯರೊಳು ಬಂದು ಬೆರೆಯುವ ಮದನಕಲೆ ನಿಪುಣ ಚೆಲುವಾ 4 ಗೋವರ್ಧನೋದ್ಧಾರ ಗೋವಳರ ವಡಗೂಡಿ ಗೋಪಿ ಬಾಲಾ ಗೋವಿಂದ ಗೋಪಾಲಕೃಷ್ಣವಿಠಲ ನಮ್ಮ ಪೂರ್ವ ಪುಣ್ಯದ ಫಲದಿ ಭೂವನಿತೆ ಪಾಲಾ 5
--------------
ಅಂಬಾಬಾಯಿ
ಬಂದನೇಳೆ ದೇವಿ ರಂಗ ಮನೆಗೇ| ಇಂದು ಮುಖಿ ನಿನ್ನ ಮನದಾ ನಂದ ಕೊಡಲು ಪ ಭಾಗವತ ರೊಡಗೂಡಿ| ಭಕ್ತಿರಂಗದೊಳಾಡಿ ಸುಖವ ಸೂರ್ಯಾಡಿ 1 ಗರುಡವಾಹನ ಪರಾಕೆಂಬ ಶೃತಿ ಭಟರು| ಮೂರಾರು ಸಾಲ ಪಂಜಿನ ಬೆಳಗಿನಿಂದ 2 ಸಕಲ ಸುಂದರ ರಾಶಿಯೆ ಎನಿಪ ಮೋಹನರೂಪ| ಅಕಳಂತಕ ಬ್ರಹ್ಮಾದಿ ಸುರರೊಡೆಯಾ 3 ದುರಿತ ಹರನೆಂಬ| ಬಿರದ ಜಾಂಗಟೆ ಶಂಖ ಕೌಸಾಳರವದಿ 4 ತನ್ನ ಭೃತ್ಯರ, ಭೃತ ಭೃತ್ಯನ ಕರೆದು| ಮನ್ನಿಸುವ ಮಹಿಪತಿ ಸುತಪ್ರಾಣ ಪದಕಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಂದವನಾರಯ್ಯ ನೀನು ಒಂದಿನ ರಾತ್ರಿಲಿ ನಂದನಂದನು|ಹೊರಗಿಂದಲಿ ಬರಲು|ಚೆಂದದಿ ರುಕ್ಷಿಣಿ ಮನದೊಳರಿತು ನುಡಿ|ಎಂದಳು ಸರಸದಲಿ ಈಗ|ನೀನು- ಪ ಇರುಳುಮಧ್ಯದಲಿ ಧೀರತನದಲಿ| ಸಾರಿಸಾರಿಕದನೋತ್ತುತಲಿ| ಧ್ವನಿಯ ದೋರದೆ ಗುರುತವ ಮರೆಯಿಸಿ| ದ್ವಾರದಿಸುಳಿವವನು|ನೀನು 1 ಅಡಿಯಿಡದೆವೆ ಮೈ ಅಡಗಿಸಿಕೊಂಡು| ದೃಢದಲಿ ಅಬಲೆಯಕಂಡು| ಎಡಬಲನೊಡದೆ ಬಾಯ್ದೆರೆದು ಬೇಡುವ| ಪೊಡವಿಹಾರುವನೇನೋ|ನೀನು.....2 ಕೊರಳಗೊಯ್ಕನೋ ವನಚಾರಕನೋ| ತುರುಗಳ ಕಾಯ್ವವನೋ| ಮರುಳು ಮಾಡಿ ನಾರಿಯರ ಠಕ್ಕಿಸಿ| ದುರುಳವಾಜಿಯನೇರಿಪನೋ|ನೀನು....3 ಎಂದಮಾನಿನಿ ನುಡಿ ಬೆಡುಗವ ಕೇಳಿ| ನಿಂದಹರುಷ ತಾಳಿ| ಬಂದೆನಾ ಗುರುಮಹಿಪತಿ ಪ್ರಭು ಎನಲೋಡಿ| ಬಂದೆರಗಿದಳೀಗ|ನೀನು...... 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಂದಾ ಬಂದಾ ಉಡುಪಿಲಿ ನಿಂದ ನಿಂದಾ ಪ. ಬಂದ ಗೋಪೇರ ವೃಂದಗಳ ತಾ ನಂದು ದಣಿಸುತ ಸುಂದರಾಂಗನು ಮಂದರೋದ್ಧರ ಬೃಂದೆಯಿಂದಲಿ ಅ. ಮುದ್ದುಸುರಿಸುತ ಗೋಕುಲದೊಳಿರೆ ಕದ್ದು ಬೆಣ್ಣೆಯ ತಿಂದನೆನುತಲಿ ಸುದ್ದಿ ತಾಯಿಗೆ ಪೇಳಿ ಸತಿಯರು ಗದ್ದಲದಿ ತನ್ನ ಗಾರು ಮಾಡಲು ಮುದ್ದು ಯತಿಗಳು ಎದ್ದು ಪೂಜಿಸಿ ಮುದ್ದಿ ಬೆಣ್ಣೆ ನೇವೇದ್ಯವಿಡುತಿರೆ ಸದ್ದು ಇಲ್ಲದೆ ತಿಂದು ಸುಖದಲಿ ಇದ್ದೇನೆಂಬುವ ಬುದ್ಧಿಯಿಂದಲಿ 1 ಭಾರವಿಳುಹಲು ಕೋರೆ ಭೂಮಿಯು ನಾರದಾದ್ಯರ ನುತನು ತಾ ಬರೆ ನಾರಿಯರು ಮನ ಬಂದ ತೆರದಲಿ ಜಾರ ಚೋರನೆನುತ್ತ ಬೈಯ್ಯಲು ಧೀರ ಯತಿಗಳು ಸೇರಿ ಪರಬೊಮ್ಮ ಶ್ರೀರಮಣನೆನ್ನುತ ಸ್ತುತಿಸುವೋ ವಾರುತಿಗೆ ಮೈದೋರಿ ಭಕುತರ ಪಾರಿಗಾಣಿಪೆನೆಂಬ ನೆವದಲಿ 2 ಹಸಿದುಗೋಪರÀ ಯಜ್ಞವಾಟಕೆ ಅಶನ ಬೇಡಲು ಕಳುಹೆ ಗೊಲ್ಲರ ಪಸುಳರಿಗೆ ನೈವೇದ್ಯವಿಲ್ಲದೇ ವಶವೆ ಕೊಡಲೆಂದೆನ್ನೆ ಋಷಿಗಳು ವಸುಧಿಪತಿ ಸರ್ವೇಶನೆಂದರಿ ದಸಮಯತಿಗಳು ಕ್ಷಣ ಕ್ಷಣಕ್ಕೆ ಷ ಡ್ರಸದ ಆರೋಗಣೆಯ ಮಾಡಿಸೆ ಕುಶಲದಲಿ ಮೃಷ್ಟಾನ್ನ ಭುಜಿಸಲು 3 ಬಾಲ ಕಂದಗೆ ತೊಡಿಗೆ ತೊಡಿಸಲು ಲೀಲೆಯಿಂದಲಿ ಗೋಪಿದೇವಿಯು ಕಾಳ ಮಡುವಿಲಿ ಧುಮಿಕಿ ಎಲ್ಲವ ಕಳೆದು ಬರೆ ಆಟಗಳ ಪರೆವೆಲಿ ಶೀಲಯತಿಗಳು ವಾರ ವಾರಕೆ ಬಾಲ ತೊಡಿಗೆ ಶೃಂಗಾರಗೈಯ್ಯಲು ಆಲಯವ ಬಿಟ್ಟೆಲ್ಲಿ ಪೋಗದೆ ಓಲಗವ ಕೈಕೊಳ್ವೆನೆನ್ನುತ 4 ಗೋಪಜನ ಗೋವ್ಗಳನೆ ಕಾಯಲು ಗೋಪಿಯರು ತನ್ನ ಗುಲ್ಲು ಮಾಡಲು ಪಾಪಿ ಕಂಸ ಅಟ್ಟುಳಿಯ ಪಡಿಸಲು ಭೂಪತಿಯ ಪದವಿಲ್ಲದಿರಲು ಈ ಪರಿಯ ಬವಣೆಗಳ ತಾಳದೆ ಗೋಪ್ಯದಿಂದಿಲ್ಲಡಗಿ ನಿಂತು ಗೋಪಾಲಕೃಷ್ಣವಿಠಲ ಯತಿಗಳ ಗೌಪ್ಯಪೂಜೆಯಗೊಂಬ ವಿಭವಕೆ 5
--------------
ಅಂಬಾಬಾಯಿ
ಬಂದು ನಿಲ್ಲೋ ದಯಾನಿಧೇ ಬಂದು ನಿಲ್ಲೋ ಪ ಬಂದು ನಿಲ್ಲೋ ನಿನಗೊಂದಿಸುವೆನು ಗೋ ವಿಂದ ಗೋವಳರಾಯ ಸಂದೇಹಗೊಳಿಸದೆ ಅ.ಪ ಸದೋಷಕ ನಾನು ಸದಾ ನಿರ್ಮಲ ನೀನು ಪದೆಪದೆಗೆ ಪೇಳುವುದುಚಿತವಲ್ಲ 1 ಮನದೊಳು ಪೊಳದು ಚಿಂತನೆಗೆ ನೆಲೆಯಾಗಿ ಘನಮಹಿಮನೆ ಮಧ್ವಮುನಿ ಮನ ಮಂದಿರ 2 ಕಡೆಗೋಲು ನೇಣಪಿಡಿದ ಪರಮಾನಂದ ಉಡುಪಿಯ ಶ್ರೀ ಕೃಷ್ಣ ವಿಜಯವಿಠ್ಠಲರೇಯ3
--------------
ವಿಜಯದಾಸ
ಬಂದು ನಿಲ್ಲೋ ಶ್ರೀಹರೇ-ಬಂದುನಿಲ್ಲೊ ಪ ಇಂದು ಹಿಂದು ನೀನೆಂದಿಗು ತಂದೆ ಗೋ- ವಿಂದ ಅನಿಮಿತ್ತಬಂಧು ಕಣ್ಣಮುಂದೆ ಅ.ಪ ಸ್ವಾಂಶದಿಂದ ಅಭಿವ್ಯಕ್ತಿಯಾದೆ ಪಂ- ಚಾಂಶತೋರಿ ಸರಸ ಜನನ ಮಾಡಿದೆ ಸ್ವಾಂಶನಾಗಿ ಅವತರಿಸಿ ಮೆರೆವ ಸ- ರ್ವಾಂಶದಿಂದಿಹ ತ್ರಿಂಶ ರೂಪನೇ 1 ಸ್ವಗತಭೇದವಿವರ್ಜಿತನೆನಿಸಿ ತ್ರಿಗುಣಮಯದಿ ಬ್ರಹ್ಮಾಂಡ ನಿರ್ಮಿಸಿ ಅಗಣಿತಮಹಿಮಾಧಾರನಾಗಿ ನಿಂದು ಮಿಗೆ ಶೋಭಿಸುವ ವಿರಾಟಮೂರುತಿಯೆ2 ಕಾರಣನೆನಿಸಿದ ಕರ್ಮನಿವೃತ್ತಿಗೆ ಸಾರವಾದ ಜ್ಞಾನಯೋಗ ಮಾರ್ಗವ ನಾರದಾದಿ ಮಹಾಮುನಿಗಳಿಗರುಹಿದ ನರನಾರಾಯಣ ಬದರಿ ಆಶ್ರಯನೇ 3 ಹಂಸಕಪಿಲ ದತ್ತಾತ್ರೇಯ ರೂಪನೆ ಹಂಸರಹಸ್ಯಗಳೆಲ್ಲವ ಪೇಳಿ ಸಂಶಯ ಬಿಡಿಸಿದೆ-ಜೀವಪರಮಾತ್ಮರ ಅಂಶಗಳರುಹಿದ ಹಂಸಮೂರುತಿಯೆ4 ಅಜಪಿತ ನೀ ಗಜರಾಜನ ಸಲಹಿದೆ ಭಜಿಸಿದ ವಾಲಖಿಲ್ಯರ ಕಾಯ್ದೆ ಅಜಹತ್ಯವು ವೃತ್ರವಧೆಯಿಂದ ಕಾಯ್ವ ಬಿ- ಡೌಜನ ಸಲಹಿದ ಗಜರಾಜ ವರದಾ5 ಪುರುಹೂತನ ಅಹಂಕಾರ ಖಂಡಿಸಿ ಕಿರುಬೆರಳಲಿ ಗೋವರ್ಧನಗಿರಿ ಎತ್ತಿ ಪರಿಪಾಲಿಸಿ ಗೋಬೃಂದವನೆಲ್ಲವ ಸುರರಿಂದ ಪೊಗಳಿಸಿಕೊಂಡೆ ಗೋವಿಂದ6 ಬುಧರರಿಯುಲು ಆ ವೇದ ವಿಭಾಗಿಸೆ ಉದಯಿಸಿ ಮುದದಿಂದ ಬದರಿಯ ಸದನದಿ ಬೋಧಿಸುತ್ತಲಿಹ ಬಾದರಾಯಣನೇ7 ಅಖಿಳಾಂಡಕೋಟಿಬ್ರಹ್ಮಾಂಡನಾಯಕ ವಿಕುಂಠಳೆಂಬೊ ಉದರದಿ ಜನಿಸಿ ಲಕುಮಿರೂಪಿಯಾದ ಸುಂದರಿಯ ಕೂಡ ಭೂ- ವೈಕುಂಠ ನಿರ್ಮಿಸಿದ ವೈಕುಂಠಮೂರುತಿಯೆ 8 ಸತ್ಯವ್ರತನೆಂಬೊ ಮನುವಿನುದ್ಧರಿಸಿ ಉತ್ತಮ ಔಷಧಿಗಳೆಲ್ಲವ ಸಲಹಿದೆ ದೈತ್ಯನಾದ ಉನ್ಮತ್ತನ ಕೊಂದು ಶ್ರುತಿಯ ತಂದಿತ್ತ ಮತ್ಸ್ಯಮೂರುತಿಯೆ 9 ಸುರಭಿನೆವನದಿ ಶರಧಿಮಥಿಸೆ ತಾ ಭರದಿ ಬೆನ್ನೊಳು ಧರಿಸಿಹೆ ಮಂದರ ಗಿರಿಧರನೆನಿಸಿದೆ ಕಮಠರೂಪನೆ 10 ಪ್ರಳಯ ಜಲಧಿಯೊಳು ಇಳೆಯನು ಕದ್ದಾ ಖಳಹಿರಣ್ಯನಾ ಶಿರವ ಚೆಂಡಾಡಿ ಜಲಧಿಯ ಶೋಧಿಸಿ ಇಳೆಯನು ತಂದು ಜಲಜಸಂಭವಗಿತ್ತ ಕ್ರೋಢರೂಪನೆ 11 ದುರುಳತನದಿ ತನ್ನ ತರಳನ ಬಾಧಿಪ ಹಿರಣ್ಯಕಶಿಪುವಿನ ಉದರವ ಬಗೆದು ಶರಣನಿಗಭಯವ ಕರುಣಿಸಿ ತೋರಿದ ಸರ್ವವ್ಯಾಪ್ತನೆಂದರುಹಿದ ನರಹರಿಯೇ12 ಬಲಿಯಿಂದಪಹೃತವಾದ ಸಾಮ್ರಾಜ್ಯವ ಸುಲಭದಿಂದಲಿ ಪುರಂದರಗಿತ್ತು ಸಲಹಿದೆ ಒಲಿದು ಬಲಿಯ ಭಕ್ತಿಗೆ ನೀ ಬಾ- ಗಿಲ ಕಾಯ್ದ ವಟು ವಾಮನನೆ 13 ದುರುಳತನದಿ ಆ ಹೈಹಯರೆಂಬ ನರಪರದುರ್ಮದ ಮರ್ದಿಸಲೋಸುಗ ನೃಪರ ಶಿರವನೆಲ್ಲ ತರಿದು ನಿಗ್ರಹಿಸಿದ ಭಾರ್ಗವ ಮೂರ್ತೇ 14 ಶರಧಿ ಬಂಧಿಸಿ ಸೇತುಕಟ್ಟಿ ಕಪಿ- ವೀರರೊಡನೆ ಆ ರಾವಣನಡಗಿಸಿ ಭೂ ಭಾರವನಿಳುಹಿಸಿ ಭೂಮಿಜೆಯನು ತಂದ ಅ- ಸುರ ಮರ್ದನ ದಾಶರಥಿ ರಾಘವ 15 ವಸುಮತಿಭಾರವನಿಳುಹಲೋಸುಗ ವಸುದೇವಸುತ ಶ್ರೀಕೃಷ್ಣನೆನುತಲಿ ಶಿಶುಪಾಲಾದಿಗಳಾಂತಕನೆನಿಸಿದ ಶಶಿಮುಖಿರುಕ್ಮಿಣಿ ಸಹಿತ ಶ್ರೀಕೃಷ್ಣ 16 ವೇದ ಕರ್ಮಗಳಿಗನರ್ಹರೆಲ್ಲರು ಸಾದರದಿಂದಲಿ ಅಧಮರೆಸಗುತಿರೆ ವೇದವಿರುದ್ದವಾದಗಳಿಂದಲೇ ಮೋಹವ ತೋರಿದೆ ಬುದ್ಧಸ್ವರೂಪನೆ17 ದುರುಳತನದಿ ಇಳೆಯಾಣ್ಮರುಗಳು ಕ್ರೂರತನದಿ ಪರಪೀಡಕರಾಗಿರೆ ಪರಿಹರಿಸಲು ಭೂಭಾರಕ್ಕಾಗಿ ಅವ- ತರಿಸಿ ಮೆರೆಯುವ ಕಲ್ಕಿರೂಪನೆ 18 ಏಕರೂಪ ಅನೇಕರೂಪನೆ ಏಕಮೇವ ನೀ ಪ್ರಕಟ ಮಾಡುವೆ ಪಿನಾಕಿ ಪ್ರಮುಖರು ಏಕದೇಶದಿ ಸಾಕಲ್ಯವ ತಿಳಿಯರೊ 19 ದೋಷದೂರ ಶೇಷಾಚಲವಾಸ ಪೋಷಿಸೊ ನಿನ್ನಯ ದಾಸಜನರ ಸರ್ವ ದೋಷಕಳೆದು ಮನೋಕಾಶದಲಿ ನಿಲ್ಲೊ ಶೇಷಗಿರೀಶ ಶ್ರೀ ವೆಂಕಟೇಶನೆ 20
--------------
ಉರಗಾದ್ರಿವಾಸವಿಠಲದಾಸರು
ಬದುಕಿಸೀ ಪಶುಗಳನೂ ಭಗವಂತ ನೀನು ಪ ಕದಲಿಸೀರೋಗವ-ಕರುಣಿಗಳರಸನೆ ಅ.ಪ. ಗೋವುಗಳೆಲ್ಲಾ ಹೊಟ್ಟೆ-ನೊವಿನಿಂ ಕಂಗೆಟ್ಟು ಮೇವನುಬಿಟ್ಟ ವಿದಾವರೊಗವೋ ಕಾಣೆ 1 ಹೊಟ್ಟೆ ಕಳೆದು ಕಂಗೆಟ್ಟುಧಾತುಗಳೆಲ್ಲಾ ಕೆಟ್ಟು ಜೀವಂಗಳ ಬಿಟ್ಟುಬಿಡದಮುನ್ನ 2 ನಾಲಿಗೆ ನೀಡವು ಕಾಲು ಕೆಟ್ಟವು ಕಂ ಣಾಲಿ ಕೆಂಣಾಲಿ ಕೆಂಪಾದವು ಮೂಲವೆ ತಿಳಿಯದು3 ಗೋವುಗಳಿಗೆ ಭೂದೇವರುಗಳಿಗೆಲ್ಲ ದೇವ ನೀನಲ್ಲವೆ-ದೇವಕೀ ತನಯನೆ 4 ಸತ್ತವರಿಗೆ ಜೀವವಿತ್ತು ಬದುಕಿಸಿದೆ ಮೃತ್ಯುದೇವತೆ ನಿನ್ನ ತೊತ್ತಹಳಲ್ಲವೆ 5 ದಾಸನು ನಾನೆಂಬ ವಾಸಿಯುಳ್ಳರೆ ಬೇಗ ವಾಸಿಯ ಮಾಡಯ್ಯ ನೀ ಮೋಸವ ಮಾಡದೆ 6 ಇಷ್ಟದಿನೆನೆವರ ಕಷ್ಟವ ಕಳೆವ ಪುಲಿ ಬೆಟ್ಟದೊಳಿಹ ವರದ ವಿಠಲ ಕೃಷ್ಣನೀ 7
--------------
ಸರಗೂರು ವೆಂಕಟವರದಾರ್ಯರು
ಬದುಕಿಸೀ ಪಶುಗಳನ್ನು ಭಗವಂತ ನೀನು ಪ ಬದುಕಿಸೀ ಪಶುಗಳ ಭವರೋಗ ವೈದ್ಯನೆ ಕದಲಿಸೀ ರೋಗವ ಕರುಣಿಗಳರಸನೆ ಅ.ಪ ಗೋವುಗಳೆಲ್ಲಾ ಹೊಟ್ಟೆ ನೋವಿಂ ಕಂಗೆಟ್ಟು ಮೇವನು ಬಿಟ್ಟವಿದಾವ ರೋಗವೋ ಕಾಣೆ 1 ಹೊಟ್ಟೆ ಕಳೆದು ಕೆಂಗೆಟ್ಟಧಾತುಗಳೆಲ್ಲಾ ಕೆಟ್ಟು ಜೀವಂಗಳ ಬಿಟ್ಟ ಬಿಡದ ಮುನ್ನ 2 ನಾಲಿಗೆ ನೀಡವು ಕಾಲು ಕೆಟ್ಟವು ಕಂ ಣ್ಣಾಲಿ ಕೆಂಪಾದವು ಮೂಲವೆ ತಿಳಿಯದು 3 ಗೋವುಗಳಿಗೆ ಭೂದೇವರುಗಳಿಗೆಲ್ಲ ದೇವ ನೀನಲ್ಲವೆ ದೇವಕೀ ತನಯನೆ 4 ಸತ್ತವರಿಗೆ ಜೀವವಿತ್ತ ಬದುಕಿಸಿದೆ ಮೃತ್ಯು ದೇವತೆ ನಿನ್ನ ತೊತ್ತಹಳಲ್ಲವೆ 5 ದಾಸನು ನಾನೆಂಬ ವಾಸಿಯುಳ್ಳರೆ ಬೇಗ ವಾಸಿಯ ಮಾಡಯ್ಯ ನೀ ಮೋಸವ ಮಾಡದೆ 6 ಇಷ್ಟದಿ ನೆನೆವರ ಕಷ್ಟವ ಕಳೆವ ಪುಲಿ ಬೆಟ್ಟದೊಳಿಹ ವರದ ವಿಠಲ ಕೃಷ್ಣನೀ 7
--------------
ವೆಂಕಟವರದಾರ್ಯರು
ಬಂಧನ ಬಿಡಿಸು ಶ್ರೀಶಾ ಇಂದಿರೇಶಾ ಪ. ಇಂದು ಈ ಭವದಲ್ಲಿ ನೊಂದು ನೊಂದೆನೊ ದೇವಾ ಗೋವಿಂದಾ ಪಾಲಿಸಬೇಕಯ್ಯಾ ಗೋಗಳರಾಯ ಅ.ಪ. ಇಂದಿರೇಶನೆ ನಿನ್ನ ಒಂದಿನಾದಿ ನಾನು ದೈನ್ಯದಿ ಭಜಿಸದೆ ಸುಂದರ ಮೂರುತಿ ನೀನು ಯನ್ನ ಹೃದಯ ಮಂದಿರದಲ್ಲಿ ಸಂದರುಶನ ಕೊಡೊ ಇಲ್ಲಿ 1 ಸದೋಷಿಯು ನಾನು ದೋಷರಹಿತ ನೀನು ಶೇಷಶಯನ ನಿಮ್ಮ ನಾಮವೇ ಭೂಷಣ ಸ್ವರಮಣನೀ ನಿನ್ನ ಸ್ಮರಣೆಯಾ ಮಾಡದೆ ಹಾಳು ಮಾತುಗಳಿಂದ ಹೊತ್ತುಗಳದೆ ಮುಕುಂದಾ 2 ಮತ್ಗ್ಯಾದ್ಯನಂತವತಾರ ನೀನು ತುಚ್ಛದೈತ್ಯಸ ಸಂಹಾರ ಇಚ್ಛಾದಿಂದಲಿ ನೀನು ಸುರರಿಗಾಧಾರ ಕಾಳಿಯಮರ್ದನ ಕೃಷ್ಣಧೀರ ಗಂಭೀರಾಸುತಸುಕುಮಾರಾ 3
--------------
ಕಳಸದ ಸುಂದರಮ್ಮ
ಬನ್ನಿರಿ ಬನ್ನಿರಿ ದಾಸರೊಂದಾಗಿ ಚನ್ನ ಕೇಶವನರಮನೆಗೆ ಮುಂದಾಗಿ ಪ ಬನ್ನಿರಿ ಹರುಷದಿ ಪೋಗುವಾ ಬೇಗದಿ ಸನ್ನುತ ತಾತನ ಮೆನೆಯೊಳಗಿರುವಾ ಅ.ಪ. ನಿತ್ಯ ನೀಲಾಂಜನೆ ಪರಮ ಪಾವನನ ಭೃತ್ಯರ ಸಲಹುವ ಬರ ಶ್ರೀಧರನ ಪ್ರತ್ಯುಪಕಾರವ ಬೇಡದೆ ಸಲಹುವ ಸತ್ಯನಾರಾಯಣ ದೇವರ ಗುಡಿಗೆ 1 ನಗಧರ ರಂಗನ ಖಗವಾಹನನ ಜಗದೊಳು ಮೆರೆಯುವ ಗೋವಳ ಹರಿಯ ಅಗಣಿತಮದನನ ಸನಕ ವಂದಿತನ ಭೃಗಕುಲ ಶ್ರೇಷ್ಠನ ದೇವರ ಗುಡಿಗೆ 2 ತರಳರ ಸಲಹುವ ಭಜಕರ ಪೊರೆಯುವ ಪರಿಪರಿ ರೂಪದಿ ಮೆರೆಯುವ ಪರಿಯ ಪರಮಾತ್ಮನನ್ನು ಭಕ್ತಿಯಲಿ ಕೀರ್ತಿಸಲಾಗ ಸರಸದಿ ದಾಸರಿಗೊಲಿವ ಕೇಶವನ 3
--------------
ಕರ್ಕಿ ಕೇಶವದಾಸ
ಬರುದೆ ಭ್ರಮೆಯಗೊಂಡ್ಯೊ ಮರುಳ ಮನುಜ ನೀನು ಧ್ರುವ ಎರವ್ಹಿನ ಮನೆಯೊಳು ಮರಹು ಮರೆಯಗೊಂಡು ಗರವು ಹಿಡಿದು ನಿನ್ನ ಕುರುಹು ತಿಳಿಯಲಿಲ್ಲ ಹರೆದು ಭ್ರಾಂತಿಗೆ ಬಿದ್ದು ಸೊರಗಿ ದಣಿದೆಲ್ಲ 1 ಏನು ಮರುಳಗೊಂಡ್ಯೊ ಹೀನಯೋನಿಯ ಮುಖಕೆ ಕಾನನದೊಳು ಪೊಕ್ಕು ಖೂನ ತಿಳಿಯದೆ ನಿನ್ನ ಜನುಮಜನುಮ ಬಂದ್ಯೊ ಜ್ಞಾನಶೂನ್ಯದಲಿ 2 ನಾನು ನನ್ನದು ಎಂದು ಏನು ಗಳಿಸಿಕೊಂಡ್ಯೊ ಸ್ವಾನುಭವದ ಸುಖ ಅನುಭವಿಸದೆ ಹೋಗಿ ಸ್ವಾನ ಸೂಕರಯೋನಿ ಮುಖಸೋಸಿದೆಲ್ಲ 3 ಹೊನ್ನು ಹೆಣ್ಣಿನ ಸವಿಯು ಬಣ್ಣಿಸಿ ನೀ ಬಯಸಿದಲ್ಲ ಮಣ್ಣೇ ಮಾಣಿಕವೆಂದು ದಣ್ಣನೆ ದಣುವರೆ ಕಣ್ಣಗೆಟ್ಟರೆ ಬ್ಯಾಡೊ ತನ್ನೊಳರಿಯದೆ 4 ಮುತ್ತಿನಂಥ ಜನುಮ ವ್ಯರ್ಥಗಳಿಯಬ್ಯಾಡ ಪಾದ ಬೆರ್ತು ಮಹಿಪತಿ ಪೂರ್ಣ ಸಾರ್ಥಕ ಮಾಡಿಕೊಳ್ಳೊ ಗುರುತುವರಿತು ನೀ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಲಗೊಂಬೆ ಚೆನ್ನರಾಯ ಭಕ್ತರ ಪ್ರಿಯ ಪ ವೇದ ವಾದಗಳಲ್ಲಿ | ಕಾಡುವ ಜನರಲ್ಲಿಓದುವ ವಿದ್ಯೆಗಳಲ್ಲಿ | ವಾದವ ಗೆಲಿಸಯ್ಯ 1 ಆರು ವೈರಿಗಳಲ್ಲಿ | ಅಷ್ಟ ಗಜಂಗಳಲ್ಲಿಮೂರು ಏಳರಲ್ಲಿ | ಮುಂದೆ ನೀ ಗೆಲಿಸಯ್ಯ2 ಪರಮ ಭಕ್ತಿಯೊಳ್ನಿನ್ನ | ಚರಣಕೆರಗುವೆ ಮುನ್ನಸಿರಿಯ ಪಾಲಿಪ ಚೆನ್ನ | ವರದ ಕೇಶವ ರನ್ನ3
--------------
ಕನಕದಾಸ
ಬಲು ಚಂದ ಮಹದಾನಂದ ಶ್ರೀಹರಿ ಭಜನೆ ಪ ಬಲು ಚಂದ ಬಲು ಚಂದ ಮಹದಾನಂದ ಜಲಜನಾಭನ ನಾಮ ನಲಿನಲಿದ್ಹೊಗಳ್ವುದು ಅ.ಪ ಬಲಿಯ ಕಾಯ್ದನ ನಾಮ ಬಲು ಚಂದ ಲಲನೆಗೊಲಿದನ ಧ್ಯಾನ ಆನಂದ ಕಲುಷಹರಣ ಕರಿಪಾಲನೆಂದೊದರಲು ಗಳಿಲನೆ ಪರಿಹಾರ ಭವಬಂಧ 1 ಮಾವಮರ್ದನನಾಮ ಬಲು ಚಂದ ಗೋವಳರೊಡೆಯನ ಧ್ಯಾನ ಆನಂದ ಗೋವುಪಾಲನೆಂದು ಭಾವಿಸಿ ಕೂಗಲು ಸಾವು ಹುಟ್ಟು ಇಲ್ಲ ಎಂದೆಂದು 2 ಕಾಮಪಿತನ ನಾಮ ಬಲು ಚಂದ ಕಾಮಿತಾರ್ಥನ ಧ್ಯಾನ ಆನಂದ ಭೂಮಿಗಧಿಕ ನಮ್ಮ ಸ್ವಾಮಿ ಶ್ರೀರಾಮನ ಪಾದ ನೇಮದಿ ನುಡಿಯೆ ಮುಕ್ತಿಪದ ಆನಂದ 3
--------------
ರಾಮದಾಸರು
ಬಲ್ಲವರೆ ಬಲ್ಲರು ಎಲ್ಲವರು ಅರಿಯರುಪುಲ್ಲಲೋಚನ ಪರಬ್ರಹ್ಮನೆಂಬುದನು ಪ ಅಜಜ್ಞಾನಾಧಿಕ ಬಲ್ಲ ಅನ್ನಲಸ್ನೇಹಿತ ಬಲ್ಲಗಜ ಚರ್ಮಾಂಬರ ಬಲ್ಲ ಗರುಡ ಬಲ್ಲಭುಜಗೇಶ್ವರ ಬಲ್ಲ ಭೂರಿಲೋಚನ ಬಲ್ಲತ್ರಿಜಗದಧಿಪತಿ ತ್ರಿವಿಕ್ರಮನೆಂಬುದನು1 ಶುಕಯೋಗೀಶ್ವರ ಬಲ್ಲ ಸುಗುಣ ನಾರದ ಬಲ್ಲಭಕುತ ಪ್ರಹ್ಲಾದ ಬಲ್ಲ ಬಲಿಯು ಬಲ್ಲರುಕುಮಾಂಗದ ಬಲ್ಲ ಋಷಿ ಪರಾಶರ ಬಲ್ಲಮಕರಕುಂಡಲಧರ ಪರಾತ್ಪರನೆಂಬುದನು 2 ಚಕ್ರಧರ ಕರ್ಮಹರನೆಂಬುದನು 3 ವಿದೇಹ ಬಲ್ಲಶಶಿಮಿತ್ರನೇತ್ರ ಸರ್ವೋತ್ತಮನೆಂಬುದನು 4 ವಾಗಿನಿಂದಕ್ರೂರ ಬಲ್ಲ ವಚನಿ ಶೌನಕ ಬಲ್ಲಯೋಗಿ ಕಪಿಲ ಬಲ್ಲ ಭೃಗು ಬಲ್ಲನುತ್ಯಾಗಿ ಧರ್ಮಜ ಬಲ್ಲ ರಣದೊಳರ್ಜುನ ಬಲ್ಲಕಾಗಿನೆಲೆಯಾದಿಕೇಶವ ಕೈವಲ್ಯನೆಂಬುದನು 5
--------------
ಕನಕದಾಸ