ಒಟ್ಟು 238 ಕಡೆಗಳಲ್ಲಿ , 59 ದಾಸರು , 202 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂತು ವರ್ಣಿಪೆ ನಮ್ಮಮ್ಮಾ | ಯಂತ್ರೋದ್ಧಾರಕÀನಾಗಿ ಮೆರೆವನಾ ಪ ಕೋತಿ ರೂಪದಲಿ ಬಂದು | ಭೂತಳಕೆ ಬೆಡಗು ತೋರಿ || ಈ ತುಂಗಭದ್ರೆಯಲ್ಲಿ | ಖ್ಯಾತಿಯಾಗಿಪ್ಪ ಯತಿಯಾ1 ಸುತ್ತಲು ವಾನರ ಬದ್ಧ | ಮತ್ತೆ ವಲಯಾಕಾರ ಮಧ್ಯ || ಚಿತ್ರಕೋಣ ಅದರೊಳು | ನಿತ್ಯದಲಿಯಿಪ್ಪ ಯತಿಯಾ 2 ವ್ಯಾಸ ಮುನಿರಾಯರಿಂದ | ಈ ಶಿಲೆಯೊಳಗೆ ನಿಂದು || ಶ್ರೀಶ ವಿಜಯವಿಠ್ಠಲನ್ನ | ಏಸು ಬಗೆ ತುತಿಪನ್ನ 3
--------------
ವಿಜಯದಾಸ
ಎನ್ನ ಬಿನ್ನಪ ಸಖಿ ಚನ್ನಾಗಿ ತಿಳಿಸೆ ಚನ್ನಿಗರರಸ ಪೋರನ್ನ ಕೃಷ್ಣನ ಮುಂದೆ ಪ ಜನನಿ ಜನಕ ಚಿಕ್ಕತನದಿಂದ ತನಗತಿ ಜನರೊಳು ಘನ ಧರ್ಮ ಧನ ಗಳಿಸಿದರಂತೆ ಅನುಸ್ಮøತಿ ಎನಗಿನ್ನು ಇನಿತಿಲ್ಲವು ಪೇಳೆ 1 ಅಂದಿಂದಾತನ ಮೊಗ ಚಂದಾಗಿ ನೋಡಿಲ್ಲವೆ ಒಂದು ಬಾರೆನ್ನ ತಾನು ಬಂದು ತೋರನೆ ಮಂದಿ ಪೇಳುವದು ಕೇಳ್ಯಾನಂದಿಸುವೆನಲ್ಲದೆ ಮುಂದೇನು ಗತಿಯೆಂದು ಇಂದುಮುಖಿಯೆ ಪೇಳೆ2 ದಿನಗಳೊದಗಿದವೆ ಜನರೆಲ್ಲ ಕಂಡಂತೆ ಬಿನಗು ಮಾತುಗಳನು ಎನಗಂಬರೆ ಎನಗೇನು ಇದರಿಂದ ತನಗೆ ಆ ಕೀರುತಿ ಮನಮುಟ್ಟಿ ನೀ ಪೇಳೆ ವನಜಾಕ್ಷಗೆ ಸಖಿ3 ಪರಿ ಪರಿ ಭೂಷಣ ಸರಿ ಬಂದರೆ ಉಪಚರಿಸುವಂತೆ ದೊರಿಯರ ಸತಿಯರ ನರರ ದೃಷ್ಟಿಯ ಬಾಧೆ ಪರಿಚಾರಕರಿಟ್ಟು ಪರಿಹರಿಸ ಪೇಳೆ 4 ಆ ಸುದತಿಯರನ್ನ ಲೇಸಾಗಿ ಭೋಗಿಸೆ ನಾ ನಸೂಯ ಅದರಿಂದ ಲೇಶ ಮಾಡೆ ವಾಸುದೇವವಿಠಲ ಈ ಸಮಯದಲಿ ಎನ್ನ ತಾ ಸುಮುಖದಿಂದ ನೋಡೆ ನಾ ಸುಖಿ ಸಖಿಯೆ5
--------------
ವ್ಯಾಸತತ್ವಜ್ಞದಾಸರು
ಎನ್ನ ಮೋಹನ ತುಪಾಕಿಯನು ಪಿಡಿದು ಹಸ್ತದಲಿ ಚೆನ್ನಾಗಿ ಶೃಂಗರಿಸುವೆ ಪ ಭಿನ್ನಭಾವನೆಯ ಕಳಿದುಳಿದು ಕೋವಿಗೆ ಮತ್ತೆ ಇನ್ನು ಜೋಡಿಲ್ಲವೆಂದು ಇಂದುಅ.ಪ. ಪ್ರೇಮರಸವೆಂಬ ಜಲದಲಿ ತೊಳೆದು ಶುಚಿಮಾಡಿ ನೇಮವೆಂದೆಂಬ ನಿರ್ಮಲವಾಗಿಹ ಆಮಹಾಕನಕ ರಜತದ ಭೂಷಣವ ತೊಡಿಸಿ ಕಾಮವನು ಸುಟ್ಟು ಮಸಿಮಾಡಿ ತುಂಬುವೆನದಕೆ ಎನ್ನೆ 1 ಹಮ್ಮಮತೆಯೆಂಬ ಗುಂಡನು ಅದರಮೇಲಿರಿಸಿ ಒಮ್ಮನಸು ಎಂಬ ಗಜದಿಂದ ಜಡಿದು ಒಮ್ಮೆ ಗುರುವಾಕ್ಯರಂಜಿಕೆಯ ಕಿವಿಯೊಳಗರದು ಬಿಮ್ಮನೇ ಬಿಗಿದು ಈಕ್ಷಿಸಿ ನೋಡುವೆ ಎನ್ನ 2 ಮೆರೆವ ಸುಜ್ಞಾನ ಜ್ಯೋತಿಯ ಬತ್ತಿಯನು ಕೊಳಿಸಿ ಭರದಿ ಬರುತಿಹ ಅಷ್ಟಮದ ಕರಿಗಳಾ ತರಿದಾರು ವೈರಿವರ್ಗಕೆ ಕೆಡಹಿ ಗುರಿಯಿಂದ ಗುರುವಿಮಲಾನಂದ ರಸಭರಿತನಾಗಿರುವಂಥ 3
--------------
ಭಟಕಳ ಅಪ್ಪಯ್ಯ
ಎಲ್ಲಿ ಗತಿಯು ನಾರಿಯ ಕೂಡಿದವಗೆಎಲ್ಲಿ ಗತಿಯು ತಿಳಿಯೋಬಲ್ಲವನಾದರೆ ಸತಿಯ ಬಿಟ್ಟು ಸದ್ಗುರು ಹೊಂದಲು ಮನೆಯು ಪ ಮೊದಲೇ ಕೋತಿಯು ಮದ್ಯವನುಕುಡಿಸೆ ಮನೆಗೆ ಬಹುದೇಅದರ ತೆರೆದಿ ಪಾಮರನಿಗೆ ಸ್ತ್ರೀಯಕೂಡಿಸಬಹುದೇ 1 ಕಣ್ಣೆಯಿಲ್ಲದವನೀಗಕುಣಿಯ ಬೀಳುವನಲ್ಲಕಣ್ಣು ಎರಡು ಇದ್ದವನುಬೀಳೆ ಪಾಪವಲ್ಲವೆ 2 ಮುಕ್ತಿ ಬೇಕಾದರೆ ತನಗೆ ಸು-ದತಿಯ ಬಿಡಬೇಕುಶಕ್ತಿ ಚಿದಾನಂದ ಶುದ್ಧ ಬ್ರಹ್ಮವನೀತ ಕೂಡಲಿಬೇಕು 3
--------------
ಚಿದಾನಂದ ಅವಧೂತರು
ಎಲ್ಲಿ ಮತಿಯು ಎಲ್ಲಿ ಗತಿಯು ಎಲ್ಲವೀಗ ಹುಸಿಯು ಕಂಡ್ಯಎಲ್ಲವಿಹುದು ಬಹುದು ಬಹಳ ಸಂಸ್ಕಾರಿಯೊಬ್ಬಗೆ ಪ ಭಕ್ತಿಯನ್ನು ಮಾಡುವರು ಹಲವು ಮಂದಿ ನೋಡಲಿಕೆಭಕ್ತಿಯಿಹುದು ತಾನೀಗ ಅದರೊಳೊಬ್ಬಗೆಮುಕ್ತಿಮಾತ ಕೇಳುವರು ಮುಗಿದ ಕೈಗಳಿಂದಮುಕ್ತಿ ಮೇಲೆ ಚಿತ್ತವಿಹುದು ಅದರೊಳೊಬ್ಬಗೆ1 ಕಣ್ಣುಗಳ ಮುಚ್ಚಿಕೊಂಡು ನೋಡವರು ಆತ್ಮನಕಣ್ಣು ಕುಳಿತು ಕಾಣಬಹುದದರೊಳೊಬ್ಬಗೆಹುಣ್ಣಿಮೆಯ ಬೆಳಕಿನಂತೆ ಹರಹಿಯಿಹುದು ಎಂಬರುತಣ್ಣನೆಯ ಕಳೆಯು ತೋರುವುದದರೊಳೊಬ್ಬಗೆ2 ಜ್ಞಾನಗಳ ಹೇಳುವರು ಜ್ಞಾನಿಗಳೊ ಎಂಬಂತೆಜ್ಞಾನ ನಿಶ್ಚಯಹುದು ತಾನು ಅದರೊಳೊಬ್ಬಗೆಮಾನನಿಧಿ ಚಿದಾನಂದ ತಾನೀಗ ಎನುತಲಿಹರುತಾನೆ ತಾನಾದ ನಿಜವು ಅದರೊಳೊಬ್ಬಗೆ 3
--------------
ಚಿದಾನಂದ ಅವಧೂತರು
ಎಲ್ಲಿದ್ದರೇನು ಶ್ರೀ ಹರಿಗಲ್ಲದವನು ಪ ನಿಲ್ಲದೆ ಜಪಿಸಿದರೆ ಸಲ್ಲುವನೆ ಸದ್ಗತಿಗೆ ಅ.ಪ ಕಪ್ಪೆ ಕಮಲದ ಬಳಿಯೆ ತಪ್ಪದೆ ಅನುಗಾಲ | ಅರೆ ಘಳಿಗೆ ಬಿಡದೆ || ಬಪ್ಪದಿಂದಲಿ ಅದರ ಪರಿಮಳದ ಸೊಬಗ ನೀ- | ಕಪ್ಪೆ ವಾಸನೆಗೊಂಡು ಹರುಷಪಡಬಲ್ಲುದೆ 1 ಹಾಲುಕೆಚ್ಚಲು ಬಳಿಯೆ ತೊಣಸಿ ಹತ್ತಿಕೊಂಡು | ಕಾಲವನು ಕಳೆವ ಬಗೆ ಬಲ್ಲಿರೆಲ್ಲ || ವೇಳೆವೇಳೆಗೆ ಹಸುವ ಕರೆದುಂಬ ನರನಂತೆ | ಕೀಳು ತೊಣಸಿಯು ಉಂಡು ಹರುಷಪಡಬಲ್ಲ್ಲುದೆ2 ತುಳಸಿ ಸಾನ್ನಿಧ್ಯದಲಿ ನೀರುಳ್ಳಿಯನು ಹಾಕಿ | ಹೊಲಸು ಹೋಗ್ವುದೆ ಹಲವು ಕಾಲಿದ್ದರೆ || ಸಿರಿ ವಿಜಯವಿಠ್ಠಲನ ಬಳಿಯಲಿದ್ದರೇನು ದೂರಿದ್ದರೇನು 3
--------------
ವಿಜಯದಾಸ
ಎಷ್ಟು ಸುಸ್ವರ ಊದುತಿಹನಮ್ಮ ಶ್ರೀಕೃಷ್ಣ ಕೊಳಲನ ಪ ಎಷ್ಟು ಸುಸ್ವರ ಊದುತಿಹನೋ ಗೋಷ್ಠಿಯೊಳು ಗೋವುಗಳಕಿವಿಗಳು ನೆಟ್ಟನಿಲ್ಲಿಗೆ ಕೇಳಿ ಮೋದದಿ ಕಟ್ಟಿದೆಲೆ ಕಣ್ಣಿಗಳಹರಿವವೊಅ.ಪ ತರಣಿ ತನುಜನ ತೀರದಲ್ಲಿಹನೆ ಕೊರಳೊಳಗೆ ಕೌಸ್ತುಭಹರಳಿನಿಂದ ಜಗವ ಬೆಳಗುವನೆ ಕುರುಳು ಕುಣಿಸುತಬಾಲಬಿಂಬದಿಕರ್ಣಕುಂಡಲ ಗಂಡ ಸುಪ್ರಭ ಮರುಳು ಮಾಡುತಮೂರು ಲೋಕವಸಿರಿಯ ಮೋಹಿಪ ಪರಮ ಪುರುಷನು1 ನಗ ಮುರಿಗೆ ತೋಡೆ ಸುಹಾರಭೂಷಿತಉರದಿ ಕುಳಿತಿಹ ಸಿರಿಯ ಮೋಹಿಪ 2 ಅರಗೀಮನೆ ಬಾಂಧವರು ಬೇಕೆ ನಿಜ ಪತಿಗಳೆಮ್ಮನುಮೀರಿ ಪೋದರು ಅಂದರೆನಲೇಕೆ ಮಾರನಯ್ಯನ ಮುರಲಿಸುಸ್ವರಸಾರಿ ಮನಸಪಹಾರ ಮಾಡಿತು ನಾರಿ ಮಣಿಯರೆ ಕ್ಷಣವುತಡೆಯದೆವಾರಿಜಾಸನ ವನಕೆ ತೆರಳಿರೆ 3 ಎಷ್ಟು ಜನ್ಮದ ಪುಣ್ಯವಿರುತಿಹದೆ ಈ ಮುರಲಿ ಬಾಲನಪುಟ್ಟತುಟಿಯಲಿ ಸುಧೆಯ ಸುರಿಸುವದೇಸೃಷ್ಟಿರವ ಬಳ್ಳಿಮನದಲಿ ವೃಷ್ಟಿಹಿಡಿಸದೆ ಕುಸುಮಫಲಗಳುವೃಷ್ಟಿಯಿಂದಲೆ ಹೊರಗೆ ಚೆಲ್ಲುತ ಅಭೀಷ್ಠೆ ಸುರಿಸುತಪೇಳುತಿಹವೊ 4 ಅರುಣನಂದಧಿ ಅದರ ಸೌಭಗವೊ ವನ ನಿಲಯ ಮೃಗಗಳುತೊರೆದು ವೈರವ ಸುತ್ತು ನಿಂತಿಹವೋ ಹರುಷದಲೆ ಮನತೊರೆದು ನಿಲ್ಲಲು ಇಂದಿರೇಶನ ತರುಣಿಯರು ಪೋಗೋಣ ನಡೆಯಿರಿ 5
--------------
ಇಂದಿರೇಶರು
ಏಕಾದಶಿ ನಿರ್ಣಯ ಅನಲು [ಸಮನೆ] ಮನೆಗೆ ಪೇಳಬಂದ ಅನಾಥಬಂಧು ಹಯವದನ ಗೋವಿಂದ ಪ. ತನ್ನ ನಂಬಿದವರ ತಾಪತ್ರಯವಳಿದು ಉನ್ನಂತ ಪದವೀವ ದಿನತ್ರಯವನ್ನು 1 ವೃದ್ಧಿಮಾತ್ರ ಅರುಣೋದಯದ ಕೆಳಗೆ [ಶುದ್ಧಿದಂ] ಘಳಿಗೆ ಸಾಕುಯೆಂದು 2 ಅತಿವೃದ್ಧಿ ಒಂದುಘಳಿಗೆಯ ಕೆಳಗೆ ವಿಂ ಶತಿ [ಫಣಫಲ] ದೊಳಗೆ [ಶುದ್ಧಿ] ಬೇಕೆಂದು 3 ತಿಥಿ ವೃದ್ಧಿಆದಾಗೆ ಹತ್ತು [ಫಣಪಲ] ತಿಥಿಕ್ಷಯದಲ್ಲಿ ಅದರೊಳು [ಶುದ್ಧಿ] ಬೇಕೆಂದು 4 ಇಂದು ದಶಮಿ ಶಾಖವ್ರತವ ಮಾಡಿ ನೀವು ಒಂದು ಬಾರಿ ಭೋಜನ ಮಾಡಿರೊಯೆಂದು 5 ತಾಂಬೂಲಚರ್ವಣ ಸಲ್ಲ ಸ್ತ್ರೀಸಂಗ ಹಂಬಲವನ್ನು ನೀವು ಬಿಡಿರಿಯೆಂದು 6 ನಾಳೆ ಏಕಾದಶೀ ಉಪವಾಸ ಜಾಗರ ಆಲಸ್ಯ ಮಾಡದೆ ಆಯತಾಕ್ಷಗೆಯೆಂದು 7 ಫಲಹಾರವು ಸಲ್ಲ ಭೋಜನವು ಸಲ್ಲದು ಜಲಪಾನ ಸಲ್ಲ ಮೆಲಸಲ್ಲದೆಂದು 8 ನಾಲ್ಕುಹೊತ್ತಿನ ಆಹಾರವ ಬಿಡುವುದು ಹದಿ ಜಾಗರ ಮಾಡಿರೊಯೆಂದು 9 ಪೇಳ ಅರ್ಧದ್ವಾದಶಿಬಂದಾಗ ನೀವೆಲ್ಲ ಒಲುಮೆಯಿಂದ ಪಾರಣೆಯ ಮಾಡಿರೊಯೆಂದು10 ಇಂತು ತಿಥಿತ್ರಯ ಮಾಡುವ ಜನರನ್ನು ಸಂತತ ಪೊರೆವ ಶ್ರೀಕಾಂತ ಹಯವದನ 11
--------------
ವಾದಿರಾಜ
ಏನಿದ್ದರೇನಯ್ಯಾ ಜ್ಞಾನವಿಲ್ಲದ ಮೇಲೆ ಪ ದೀನರಕ್ಷಕ ನಿನ್ನ ಧ್ಯಾನ ಮಾಡದವನೆ ಅ.ಪ. ಸತಿಸುತ ಬಾಂಧವರು ಬಹಳಿದ್ದರೇನು ಗತಿ ಕಾಣಿಸುವರೇನೋ ದೇವರ ದೇವ ಪತಿತಪಾವನ ನಿನ್ನ ಅತಿಭಕುತಿಯಿಂದ ಸ್ತುತಿಸಿ ಹಿಗ್ಗದಂಥ ಪಾಮರ ಮನಿಜನೆ 1 ಕ್ಷೇತ್ರಮಾನ್ಯಗಳೇಸಿದ್ದರೇನು ಪಾತ್ರೆ ಪದಾರ್ಥಗಳ್ ಗೃಹದಿ ತುಂಬಿದ್ದರೇನು ಪಾತ್ರಂಗಳ ನೋಡಿ ದಾನಧರ್ಮಂಗಳ ಮಾಡಿ ಮಹ ಯಾತ್ರೆಗಳ ಚರಿಸದೆ ಗಾತ್ರವ ಪೋಷಿಪಗೆ 2 ರಾಶಿ ವಿದ್ಯವಿರಲು ಅದರಿಂದ ಫಲವೇನು ಕೋಶವು ಕೊರೆಯಿಲ್ಲದೆ ಇರುತಿರ್ದರೇನೊ ವಿನುತ ಶ್ರೀ ರಂಗೇಶವಿಠಲನೊಳು ಲೇಶ ಭಕುತಿಯಿಲ್ಲದ ಹೇಸೀಕೆ ಮನದವನೆ 3
--------------
ರಂಗೇಶವಿಠಲದಾಸರು
ಏನು ಗತಿ ಎನಗಿನ್ನು ಏನು ಗತಿಯೋ ನೀನು ಸಿರಿ ಕೃಷ್ಣ ಪ ಕಾಯ ಮೊದಲಾದ ಬದುಕುಗಳೆಲ್ಲ ಸ್ಥಿರತರಗಳಲ್ಲೆಂದು ತೋರಿಸಲು ಪರಮ ಭಕುತಿಯು ಪುಟ್ಟಿ ಮೊದಲೆ ನಾ ನಿನ್ನ ಪದ ಮರೆದು ಬಿಡುವೆನು ತಡಿಯದೇ ಕರುಣಿ 1 ಹೀಗೆ ತೋರದೆ ಪೋದರೆ ಎನಗೆ ಹಂಬಲವು ಆಗುವುದು ಸತ್ಯಲೋಕಗಳ ತನಕ ಭೋಗಗಳು ಕೊಟ್ಟರೆ ಮರೆವೆ ಅದರಿಂದ ನಾ ಕೂಗುವೆನು ಕೊಡದಿದ್ದರೆ 2 ಪಾಮರನ ಮಾಡಲೆನ್ನನು ತಿಳಿಯದಲೇವೆ ಸೀಮೆ ಇಲ್ಲದ ಪಾಪ ಮಾಡುವೆನೊ ಪ್ರೇಮದಲಿ ಪಾಂಡಿತ್ಯ ನೀಡಿದರೆ ಭಕುತ ಜನ ಸ್ತೋಮ ನಿಂದಿಸುವೆನಯ್ಯಾ 3 ಧನದಿಂದ ಹೀನನ್ನ ಮಾಡೆ ಲೋಕದಲಿನ್ನು ಜನರು ಕೊಡುವುದು ಎಲ್ಲ ಎನಗೆ ಕೊಡಲೆಂಬೆ ಧನವು ನೀ ಕೊಡಲು ಬಲು ಮದದಿಂದ ಕೆಟ್ಟು ಸ- ಜ್ಜನಕೆ ಕಾಸೊಂದು ಕೊಡಿನೊ 4 ಏಸು ಪರಿಯಲಿ ಪೇಳಿದರು ಕೇಳೆನ್ನ ನಿಜ ವಾಸನಿಯು ತನಗೆ ತಾನಿಟ್ಟಾಹದೈ ವಾಸುದೇವವಿಠಲ ನೀ ಎನ್ನಯ ಮನದಲ್ಲಿ ವಾಸವನು ಮಾಡಿ ಬೋದÉೈಸದನಕೆÀ5
--------------
ವ್ಯಾಸತತ್ವಜ್ಞದಾಸರು
ಏನೆಂಬೆನು ಪವಮಾನ ದೇವನಲಿ ಶ್ರೀನಿವಾಸ ಕರುಣಾ ತಾನಾಗೀತನಕಡೆಯಲಿ ಬಹ ಲಕ್ಷ್ಮೀಮಾನ, ದೀನ ಶರಣಾ ಪ. ದುರುಳ ದಶಾಸ್ಯನ ಸೆರೆಯೊಳಗಿಕ್ಕಿದ ಸುರವರನಣುಗನನೂ ನೆರೆಯದೆ ಮಾರುತಿ ಇರುವ ನಿಮಿತ್ತದಿ ಕರಿಸಿದ ರವಿಜನನು ತಿರುಗಿ ದ್ವಾಪರದಿ ಬರಲಾರ ರವಿಜನ ನರನಿಂದೊರಸಿದನು ಎರಡು ಯುಗದೊಳೀ ತೆರದಲಿ ಭಾರತಿ ವರನನು ಸೇರಿದನು 1 ಶ್ರೀಕರ ಜೀವರಿಗೇಕೀ ಭಾವವ ಪೋಕ ಮೃಗಗಳಂದೂ ಕಾಕರಟನದಂತೊರೆವದನರಿತು ದಿ- ವೌಕಸಗಣಬಂದು ಶ್ರೀಕಮಲಾಸನ ವಂದ್ಯನೆ ಸಲಹೆನೆ ಸಾಕುವ ತಾನೆಂದೂ ಈ ಕಲ್ಯಾಣ ಗುಣಾಢ್ಯನ ಭೂಮಿಗೆ ತಾ ಕಳುಹಿದನಂದು 2 ಅದರಿಂ ತರುವಾಯದಲಿ ಸುಖಾಂಭುದಿ ಒದಗಿದ ತ್ವರೆಯಿಂದ ಪದುಮನಾಭ ಮೂರುತಿಯ ಕೆಲದಿ ನಿಂ- ದದುಭುತ ಭರದಿಂದಾ ವಿಧಿಭವ ಲೋಕಾದ್ಯಧಿಕೃತ ಪುಣ್ಯಾ ಸ್ಪದ ತೋರುವೆನೆಂದಾ ವಿಧಿ ಪದ ಯೋಗ್ಯನ ಚದುರತನಕೆ ಮೆಚ್ಚಿ ಪೂರ್ಣಾನಂದ 3 ವರ ವೈಕುಂಠವ ರಜತ ಪೀಠ ಸ- ತ್ಪುರದೊಳಗಿರಿಸಿಹನು ವಿರಜೆಯ ಮುನಿಕಡತ ಸರಸಿಗೆ ಕರೆಸಿದ ಮುರದಾನವಹರನು ಚರಣಾಂಬುಜಕಿಂಕರವರ ಚಂದ್ರೇ- ಶ್ವರನಲಿ ಕರುಣವನು ಇರಿಸಿ ಭಜಿಪ ಸುರತರುವೆನಿಸಿದ ಶ್ರೀ- ವರನ ಮಹಾತ್ಮೆಯನು 4 ಜ್ಞಾನಾನಂದಾಂಬುಧಿ ಶೇಷಾದ್ರಿಯ ಶ್ರೀನಿವಾಸನಿವನು ತಾನಾಗಿಲ್ಲಿಗೆ ಬಂದಿಹ ಭಕ್ತಾ- ಧೀನ ದಯಾಕರನು ಮಾನಸಗತ ಮಾಲಿನ್ಯವ ಕಳೆದನು ಮಾನವ ಬಿಡಿಸುವನು ನಾನಾಭೀಷ್ಟವ ನಿರವಧಿ ಕೊಡುತಿಹ ಮೌನಿ ಜನಾರ್ಚಿತನು 5
--------------
ತುಪಾಕಿ ವೆಂಕಟರಮಣಾಚಾರ್ಯ
ಏಳಯ್ಯ ಸದ್ಗುರುರಾಯ | ಈಗ ಏಳು ತುರಗ ಸೂತನುದಯಿಸುವ ಸಮಯ ಪ ಎದ್ದು ಶಿಷ್ಯರ ಕರೆಯಬೇಕು | ಗುರು ಇದ್ದ ದೋಷವ ಕಳೆಯಬೇಕು ಪರಿ ಶುದ್ಧರ ಮಾಡಿ ನೀನುದ್ಧರಿಸಬೇಕು 1 ಭಾಗವತ ಶಾಸ್ತ್ರವಿಚಾರ ಮುರೆರಡು ವಿಧ ಭೇದ ತಾರತಮ್ಯ ಸಾರುತ ಸಲಹೋ ಶಿಷ್ಯಪರಿವಾರ 2 ಪದಸುಳಾದಿಗಳ ಕೇಳಬೇಕು | ಕೇಳಿ ಅದರೊಳಿರುವ ತತ್ವವಿವರಿಸಬೇಕು ಮದಡತನವ ಕಳೆಯಬೇಕು ನಿನ್ನ ಪದ ನಂಬಿದವರಿಗೆ ಮುದಗರಿಯ ಬೇಕು 3 ಸತ್ಯನಾರಾಯಣ ಕಥೆಯ | ಬಹುವಿಸ್ತಾರವಾಗಿ ನೀ ಬಿತ್ತರಿಸಯ್ಯ | ಭೃತ್ಯರಾ ಮಾಯೆ ಓಡಿಸಯ್ಯ ಅಜ್ಞಾನ ಜ್ಞಾನ ಭಕ್ತಿ ವೈರಾಗ್ಯ ಸಂಪತ್ತು ನೀಡಯ್ಯ 4 ಒಂದೂರು ನಿಲಯನೆ ಏಳೊ ಶಾಮ ಸುಂದರವಿಠಲನ ಮಂದಿರನಾಳೋ ಬಂದ ನಿಂದೆಗಳೆಲ್ಲ ಹೂಳೋ ನಿನ್ನ ಪೊಂದಿದ ನಮ್ಮನ್ನು ಅಗಲಿದೆ ಆಳೊ 5
--------------
ಶಾಮಸುಂದರ ವಿಠಲ
ಓಂ ನಮೋ ನಾರಾಯಣಾಯ ತೇ ನಮೋ ನಮೋ ನಮೋ ಪ ಓಂ ನಮೋ ಓಂಕಾರಾದಿ ನೀ ಘನ್ನ ಮಹಿಮ ಅಷ್ಟಾಕ್ಷರಾತ್ಮಕನೆ ಅ.ಪ ಪ್ರಣವ ಪ್ರತಿಪಾದ್ಯ ನೀ ಅಷ್ಟಾಕ್ಷರದೊಳು ವಿಶ್ವತÉೈಜಸ ಪ್ರಾಜ್ಞ ತುರ್ಯಾತ್ಮ ಅಂತರಾತ್ಮ ಪರಮಾತ್ಮ ಜ್ಞಾನಾತ್ಮ ವರ್ಣಾತ್ಮಕ ನೀ ಓಂಕಾರದೊಳು ಅಉ ಮನಾದಬಿಂದು ಘೋಷ ಶಾಂತ ಅತಿಶಾಂತದೊಳು ಪ್ರತಿಪಾದ್ಯಮೂರುತಿ ಹರೆ1 ಪ್ರಣವದೊಳು ಆದಿವರ್ಣದಿಂದಭಿವ್ಮಕ್ತಿ ಕಾಲಗಳ್‍ವ್ಯಕ್ತವೊ ಪ್ರಾಣ ಲಕುಮಿಯಭಿಮಾನಿಗಳನಂತ ವೇದಗಳಿಂ ವಿಶ್ವಮೂರುತೀ ಹರೆ2 ವಯ್ಯ ಕವರ್ಗ ವರ್ಗವೈದು ಪಂಚಭೂತಗಳಂ ವರ್ಣದೊಳಭಿಮಾನಿಗಳ್ ಭೂತಕ ಗಣಪ ಪ್ರಹವವಾಯು ತೈಜಸ ಮೂರುತೇ3 ಪ್ರತಿಪಾದ್ಯನೆ ಮಕಾರ ವಾಚ್ಯ ಶ್ರೀ ಪ್ರಾಜ್ಞ ನಿನ್ನಿಂದಭಿ- ವ್ಯಕ್ತಿ ಚವರ್ಗ ಪಂಚಕ ಜ್ಞಾನೇಂದ್ರಿಯ ವೈದು ಸೂರ್ಯ ಪ್ರಾಣ ದಿಗ್ದೇ- ವತೆಗಳಿಹರು ಪ್ರತಿಗಾಣಿನೊ ಶ್ರೀ ಪ್ರಾಜ್ಞಮೂರುತಿ ಹರೆ4 ನಾದವಾಚ್ಯಪ್ರತಿಪಾದ್ಯ ತುರ್ಯನೆ ಅಭಿವ್ಯಕ್ತ ಪಂಚವರ್ಣ ಟವರ್ಗ ಕರ್ಮೇಂದ್ರಿಯಗಳ್ ಶ್ರೀ ತುರ್ಯ ಮೂರುತೆ 5 ಬಿಂದುವಾಚ್ಯ ಪ್ರತಿಪಾದ್ಯ ನೀನಾತ್ಮ ಬಿಂದುವಿಂದ ತವರ್ಗ ಪೊಂದಿಕೊಂಡಿಹುದು ತನ್ಮಾತ್ರಪಂಚಕ ಪಂಚವಾಯುಗಳಿಹರಯ್ಯ ಬಂಧ ಮೋಚಕ ನೀ ಕಾರಣ ಹರೆ 6 ಘೋಷದಿಂದಲಭಿವ್ಯಕ್ತಿ ಪಂಚಮನೋ ವೃತ್ತಿಗಳದರಭಿಮಾನಿ ಓಷಧೀಧರ ಖಗಪ ಶೇಷೇಂದ್ರ ಕಾಮರು ಪಕಾರ ಪಂಚವರ್ಣ ದೋಷರಹಿತ ಮನೋಧಾಮದಿ ನೀ ದೊರೆ 7 ಕಾರಾದಿ ಸಪ್ತವರ್ಣ ಸಪ್ತಧಾತುಗಳಲ್ಲಿ ಪರಿ ಅರಿಯೆನೊ ಹರಿಯೆ 8 ಅತಿ ಶಾಂತದೊಳು ಪ್ರತಿಪಾದ್ಯನಾಗಿಹೆ ಜ್ಞಾನಾತ್ಮ ಹಕಾರಾದಿ ತ್ರೈವರ್ಣ ಅದರಿಂದ ಗುಣಕ್ರಿಯವೊ ತತುಕ್ರಿಯ ಜಾಗೃತ ಸ್ವಪ್ನ ಸುಷುಪ್ತಿ ವಿಶ್ವಾದಿರೂಪದಿಂದ ಉರಗಾದ್ರಿವಾಸವಿಠಲ ಮೂರುತೇ 9
--------------
ಉರಗಾದ್ರಿವಾಸವಿಠಲದಾಸರು
ಕರಿಮುಖದ ಗಣಪತಿಯ ಚರಣಕ್ವಂದನೆ ಮಾಡಿ ಶಾರದೆಗೆ ಶಿರಬಾಗಿ ಬೇಡಿಕೊಂಬುವೆ ನಾನು ಒಲಿದೆನಗೆ ವರವ ಕೊಡುಯೆಂದು 1 ಭವ ನಾರಂದ ಸುಜನರ್ವಂದಿತ ವಾಯು ಮುದದಿಂದ ಮುದ್ದು ಮಾಲಕ್ಷ್ಮಿ ನಾರಾಯಣರ ಅಂಬುಜ ಪಾದಕ್ಕೆರಗಿ ನಮೋಯೆಂಬೆ 2 ಪದುಮನಾಭ ಹರಿಗೆ ನಿಜ ಭಕ್ತರಾದಂಥ ಬುಧ ಬೃಹಸ್ಪತಿಗಳ ಕಥೆಯ ಪೇಳುವೆ ನಾನು ಮುದದಿಂದ ಕೇಳಿ ಜನರೆಲ್ಲ3 ಇರುತಿದ್ದ ಬಡವ ಬ್ರಾಹ್ಮಣ ಒಂದು ಪಟ್ಟಣದಿ ಮಡದಿ ಮಕ್ಕಳು ನಾಲ್ಕು ಮಂದಿ ಸುತರು ಸೊಸೆಯರೊಡಗೂಡಿಕೊಂಡು ಸುಖದಿಂದ 4 ಒಬ್ಬೊಬ್ಬ ಸುತಗಿಬ್ಬಿಬ್ಬರು ಗಂಡಸು ಮಕ್ಕಳು ವಿಧ್ಯುಕ್ತದಿಂದ ಜಾವಳ ಜುಟ್ಟು ಉಪನಯನ ಶುದ್ಧಾತ್ಮರಾಗಿ ಇರುತಿಹರು 5 ಪ್ರಾತಃಕಾಲದೊಳೆದ್ದು ನಾಲ್ಕು ಮಂದಿ ಸುತರು ಗೋಪಾಳ ಜೋಳ ನಾಲ್ಕು ಸೇರು ಕಾಳು ತಂದ್ಹಾಕೋರು ಅರ್ಧಗ್ರಾಸವನು 6 ಮೂರು ಪಾವು ಹಿಟ್ಟು ಮುಂಜಾನೆಗೆ ಇಟ್ಟು ಗ್ರಾಸ ಮುದ್ದೆ ಅಂಬಲಿ ಕಾಲ ಕಳೆವೋರು 7 ಒಂದಾನೊಂದಿನದಲ್ಲಿ ಬಂದರಿಬ್ಬರು ದ್ವಿಜರು ಮಂದಿರದ ದ್ವಾರದಲಿ ನಿಂತು ಕೂಗುತಿರೆ ಬಂದಳೊಬ್ಬಿ ್ಹರಿಯ ಸೊಸೆ ತಾನು 8 ದಾರು ಬಂದವರು ನಿಮ್ಮ ನಾಮವೇನೆಂದೆನುತ ಬಾಗಿ ಶಿರಗಳನೆ ಚರಣಕ್ವಂದನೆ ಮಾಡಿ ಭಾಳ ಭಕ್ತಿಂದ ಕರೆದಳು 9 ದಾರಾದರೇನಮ್ಮ ಬಾಯಾರಿ ಬಳಲುತಲಿ ಮೂರು ನಿರಾಹಾರ ಮಾಡಿ ಬಂದೆವು ನಾವು ಆಹಾರ ನೀಡಿ ಕಳಿಸೆಂದ್ರು 10 ಭಿಕ್ಷಕೆ ಹೋದವರು ಈ ಕ್ಷಣದಿ ಬರುವೋರು ಅರೆಕ್ಷಣ ನೀವು ತಡೆದರೆ ಜೋಳದ ಭಕ್ಷ್ಯವನೆ ಮಾಡಿ ಬಡಿಸುವೆನು 11 ಹೊತ್ತು ಭಾಳಾಯಿತು ಹಸ್ತವು ನಮ್ಮೊ ್ಹಟ್ಟೆ ತುತ್ತನ್ನ ಹಾಕಿದರೆ ಈಗ ನಾವದನುಂಡು ತೃಪ್ತರಾಗ್ಹರಸಿ ನಡೆದೇವು 12 ಮಡಿವುಟ್ಟು ಮಾಡಿದೆನು ಮುಂಜಿಮನೆಗಳಿಗಡಿಗೆ ತಡೆಯದೆ ಸ್ನಾನಮಾಡಿ ಬನ್ನಿರೆಂದು ನುಡಿದಳು ಬ್ಯಾಗ ಪತಿವ್ರತೆ 13 ನಾಲ್ಕು ಭಕ್ಕರಿಯೊಳಗೆ ಎಂಟರ್ಧವನು ಮಾಡಿ ಎಂಟುಮಕ್ಕಳಿಗೆ ಬಡಿಸೋ ಗ್ರಾಸವನು ಸಂತೋಷದಿಂದ ಬಡಿಸುವೆನು 14 ಸ್ನಾನ ಸಂಧ್ಯಾನವ ಮಾಡಿ ಬಂದೇವೆನಲು ತಾನು ಎಡೆಮಾಡಿ ಎರಡೆರಡು ಭಕ್ಕರಿಯ ನೀಡಿದಳು ಭಾಳ ಭಕ್ತಿಂದೆ 15 ಬೆಣ್ಣೆ ಬೆಲ್ಲ ತುಪ್ಪ ಕರಣೆ ಕರಣೆ ಕೆನೆಮೊಸರು ನುಣ್ಣನೆ ತವ್ವೆ ಅರೆದಕೊಬ್ಬರಿ ಖಾರ ಉಣ್ಣಿರೆಂದ್ಹಾಕುತಿರಲಾಗ 16 ಸಡಗರದಲದನುಂಡು ಕುಡಿದು ಮ್ಯಾಲ್ ಮಜ್ಜಿಗೆಯ ಒಡೆದಡಿಕೆಯೆಲೆ ಕೊಟ್ಟು ಕೇಳುತ ನಿಮ್ಮ ನಡೆವೊ ನಾಮೇನು ಹೇಳೆಂದ್ಲು 17 ಇಂದುಸುತ ಸುರರ ಗುರುವೆಂದು ಪೇಳುವರ್ ನಮಗೆ ಬಂದೆವು ನಾವು ಬುಧ ಬೃಹಸ್ಪತಿಗಳು ಆ- ನಂದವಾಯಿತು ನಮಗೆಂದ್ರು 18 ಅನ್ನ ಬೇಕಾದರೆ ಅಡಿಗೆ ಒಲೆಗೋಡೆಯಲಿ ನ- ಮ್ಮನ್ನ ಬರೆದು ಪೂಜೆ ಮಾಡಿದರೀಗ ಅನ್ನವನು ನಾವು ಕೊಡುವೆವು 19 ಭಾಗ್ಯ ಬೇಕಾದರೆ ಬರೆದು ಪೆಟ್ಟಿಗೆಮ್ಯಾಲೆ ಭಾಳ ಭಕ್ತಿಂದ ಪೂಜೆ ಮಾಡಿದರೆ ಭಾಗ್ಯ ಕೊಡುವೆವೆಂದ್ಹೇಳಿ ನಡೆದರು 20 ಸುಣ್ಣಸಾರಣೆಮಾಡಿ ಬಣ್ಣ ಚಿತ್ರವ ಬರೆದು ಚೆನ್ನಾಗಿ ಬರೆದು ಬುಧ ಬೃಹಸ್ಪತಿಗಳನೆ ಮನ್ನಿಸಿ ಪೂಜಿಸಿದಳಾಗ 21 ಹಚ್ಚಿಟ್ಟು ಗಂಧಾಕ್ಷತೆ ಪುಷ್ಪಗಳ ಉತ್ರಾಣಿ ಅಕ್ಕಿ ಮಂತ್ರಾಕ್ಷತೆ ಮಾಡಿ ಭಕ್ತಿಂದೆ ಪೂಜಿಸಿದಳಾಗ 22 ಗೋಪಾಳಕ್ಕ್ಹೋದಲ್ಲಿ ಗೋಧಿ ಅಕ್ಕಿ ಬ್ಯಾಳೆ ಹಾಕುವರು ನಾಲ್ಕು ಬೀದಿಯಲಿ ಅದು ಗಂಟು ತಾವ್‍ಕಟ್ಟಿ ಹೊತ್ತರ್ಹೆಗಲಲ್ಲಿ 23 ಹಿಡಿಜೋಳ ಬೇಡಿದರೆ ಪಡಿಜೋಳ ಹಾಕುವರು ಬಡವರು ನೀವು ಬನ್ನಿರೆಂದು ಕರೆದು ಹಿಡಿಹಿಡಿ ರೊಕ್ಕ ಕೊಡುವೋರು 24 ಭರದಿಂದ ಬಂದಾಗ ಸುರುವಿದರು ಧಾನ್ಯವನು ಬರೆದಂಥ ಗೊಂಬೆ ನೋಡಿ ಕೇಳುತ ಅದರ ವಿವರವನು ಹೇಳಬೇಕೆನುತ 25 ಇವರು ಬುಧ ಬೃಹಸ್ಪತಿಗಳೆಂಬೊ ದೇವತೆಗಳು ಇವರು ಬಂದೆನ್ನ ಮನೆಯಲ್ಲೂಟವನುಂಡು ಒಲಿದ್ವರವ ಕೊಟ್ಟು ನಡೆದರು26 ಇಂಥÀವರ ಪುಣ್ಯದಿಂದೀ ಧಾನ್ಯ ದೊರಕಿದವು ನಿ ರಂತರದಿ ನಮ್ಮ ಮನೆಯಲ್ಲಿಟ್ಟವರನು ಸಂತೋಷದಲಿ ಪೂಜಿಸುವಣೆಂದ್ರು 27 ಭಾಳ ಅನ್ನವ ಮಾಡು ಜೋಳ ಭಕ್ಕರಿ ಮಾಡು ಬ್ಯಾಳೆಯ ತವ್ವೆ ಬೆಲ್ಲ ಪಲ್ಯವು ಬೆಣ್ಣೆ ಮಾಡಿ ನೈವೇದ್ಯಕ್ಕಿಡುಯೆಂದ್ರು&ಟಿbs
--------------
ಹರಪನಹಳ್ಳಿಭೀಮವ್ವ
ಕರುಣಿಸೆನ್ನ ಗುರು ಮಂತ್ರಾಲಯ ನಿಲಯಾ ಶ್ರೀ ನರಹರಿ ಗತಿ ಪ್ರೀಯಾ ಪ. ಹರಿಶಯ ಮರುತರ ಆವೇಶಕೆ ನಿಲಯಾ ನಂಬಿದೆ ಶುಭಕಾಯಾ ಅ.ಪ. ತರಳತನದಿ ಶ್ರೀ ನೃಹರಿ ಶಾಂತನಾಗೇ ಸುರರೆಲ್ಲರು ನಿಮಗೇ ಎರದÀು ಕೀರ್ತಿ ಹಿರೆತನವಹಿಸಿದ ರಾಗೇ ಅದರಂದದಿ ಈಗೇ ವರ ಯತಿಗಳು ಹರಿದಾಸರು ವಂದಾಗೇ ಅಘ ನೀಗೇ ಧರೆ ಕಲ್ಪ ಧ್ರುಮವೆಂದು ನಿಮ್ಮ ಬಳಿಗೇ ವಪ್ಪಿಸುವರು ಅಡಿಗೇ 1 ಎಮ್ಮ ಗುರುಗಳಿಂದ್ಹೇಳಿದ ನುಡಿ ಮರೆದೇ ನಿಮ್ಮಡಿಗೆರವಾದೇ ಸಮ್ಮತದಲಿ ಮೃತ್ತಿಕೆಯನು ಸೇವಿಸದೇ ಹಮ್ಮಿನಲಿ ಮೈಮರೆದೇ ನಿಮ್ಮ ಸುಕೀರ್ತಿಯ ತಿಳಿಸು ತಿಳಿಯದಾದೇ ಅತಿ ಭಕ್ತಿಯ ಜರಿದೇ ನಿಮ್ಮ ಕರುಣವಿರಲದರಿಂದೀಗರಿದೇ ತನುಮನವಪ್ಪಿಸಿದೇ 2 ಕೃತಿ ದ್ವಿದಳಾತ್ಮಕದಪರಾಧ ಪಡಿಸಿತು ಬಹು ಬಾಧ ಸಂದಿತು ಕಾಲವು ಮುಂದರಿಯುವ ಮೋದ ಸಂದಿಸಿತುತ್ಸಹದಾ ನಂದಕೆ ಕಲಿ ಮಲ ತೊಳೆಯಲು ಮೌನದಾ ಪರಿ ಅರಿತೆ ಸುಭೋಧಾ ಕುಂದೆಣಿಸದೆ ಪೊರೆದೆನ್ನ ನಿಮ್ಮಗಾಧಾ ಕೃಪೆತೋರಲು ಬಹು ಮೋದಾ 3 ಎಲ್ಲಿ ನೋಡಲಲ್ಲಲ್ಲಿ ನಿಮ್ಮ ವಾಸಾ ಪುರಗಳು ಜನ ತೋಷಾ ಸೊಲ್ಲು ಸೊಲ್ಲಿಗೇ ನುತಿಪ ಗಾನ ಘೋಷಾ ಮಹಿಮೆಗಳ ಪ್ರಕಾಶ ವಲ್ಲದಾಯಿತ್ಯಾತಕೊ ಎನಗಭಿಲಾಷಾ ಬಲ್ಲವರೀಪರಿ ಮಾಡುವರೇ ಮೋಸಾ ಸದ್ಭಕ್ತರಲಾಭಾಸಾ 4 ಒಂದು ದಿನದ ಮೃತ್ತಿಕೆ ಜಲ ಸೇವಿಂದ ಪೊಂದಿದೆ ನಿಮ್ಮ ಪದಾ ಒಂದಾಗಲಿ ಗುರುವೆನಿಸಿದರೆಲ್ಲರದಾ ಮನವಮ್ಮನ ವಾದಾ ನಂದವು ಶ್ರೀ ನರಹರಿ ತಾ ಪರಿಕಿಸಿದಾ ನಂದವು ಬಹು ಮೋದಾ ಸಂದಲಿ ಗೋಪಾಲಕೃಷ್ಣವಿಠಲನಿಂದಾ ಎಣಿಸದೆ ಬಹು ಕುಂದಾ 5
--------------
ಅಂಬಾಬಾಯಿ