ಒಟ್ಟು 293 ಕಡೆಗಳಲ್ಲಿ , 66 ದಾಸರು , 258 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉ. ದಾಸವರ್ಯ ಸ್ತುತಿ ವಿಜಯದಾಸರು ಬಾಲೆಯರ ಪಾಲಿಸೈ ದೀನಜನ ಪಾಲ ವಿಜಯಾಖ್ಯ ರಾಯಾ ಪ ಅಚ್ಚರವಲ್ಲ ಜೀಯಾ ಅ.ಪ. ಘನ ವ್ಯಾಧಿಯಂ ಪೀಡಿತಳಾಗಿ ಸೇವಿಸೆ ನೀನಾಗಿ ವಲಿದು ಅಭಯವನಿತ್ತು ನಿನ್ನ ದಾಸನೆಂದುಪದೇಶಿಶಿ ಜರಿದು ದೂರ ನೋಡುವರೇ ಪರಮ ಕರುಣಾಶರಧಿ ನಿನ್ನ ದ್ವಂದ್ವಗಳಿಗಭಿವಂದಿಪೆ 1 ಅನ್ಯಳಲ್ಲವೋ ರಾಯಾ ನಿನ್ನ ಪರಮ ಪ್ರೀತ್ಯಾಸ್ಪದನ ತನುಜಳೋ ಸದ್ಭಕುತಿಯುಳ್ಳವಳು ಸಲ್ಲೇಲ ಸಂಪನ್ನೆ ಸತ್ಯಭೇದ ಜ್ಞಾನ ಸಚ್ಚಿತ್ತಪುರಿರಾಜನಿಂದ ಪಡೆದು ನಿನಗೆ ಸರಿಯಾಗಿ ತೋರಿದ ಬಳಿಕ 2 ಬಹೂಪರಿಯಿಂದ ಬೇಡುವೆನೊ ತವಚರಣ ನಂಬದ ಶರಣೆಯೆಂತೆಂದು ಕಣ್ತೆರೆದು ಕರುಣಿಸೊನಿನ್ನ ಶರಣರೊಳು ಶರಣಾಧಮನಯ್ಯ ಉದಾಶಿಸದೆ ಸಲಹು ತಂದೆವರದಗೋಪಾಲವಿಠ್ಠಲನ ಪ್ರೀಯಾ 3
--------------
ತಂದೆವರದಗೋಪಾಲವಿಠಲರು
ಉಪೇಂದ್ರ ಹರಿ ವಿಠಲ ಕೃಪೆಯಲಿಂದಲಿ ಇವನಕಾಪಾಡ ಬೇಕೆಂದು ಪ್ರಾರ್ಥಿಸುವೆ ಹರಿಯೇ ಅ.ಪ. ಹರಿಗುರೂ ಭಕ್ತಿಯುತ | ತರಳ ನಿರುವನು ಹರಿಯೆಸುರರಾಜ ಭೋಗಗಳ | ಕರುಣಿಸುತ ಇವಗೇ |ಒರೆದು ತತ್ವ ಜ್ಞಾನ | ಮರಳಿ ಭಕ್ತ್ಯಭಿವೃದ್ಧಿಕರುಣಿಸುತ ಕಾಪಾಡೊ | ಕರಿವರದ ಹರಿಯೆ 1 ವಿಯದಧಿಪ ಸುತನಿಗೆ | ಭಯವ ಪರಿಹರಗೈದುದಯದಿಂದ ಪೊರೆದಂತೆ | ಕಾಯಬೇಕೋಹಯವೇರಿ ಇಂದ್ರಿಯದ | ಜಯಸೂಚಿ ಸ್ವಪ್ನದಲಿಭಯಕೃತೂ ಭಯನಾಶ | ಅಭಯನೀಯೋ2 ಪಿತೃ ಮಾತೃ ಸೇವೆಯಲಿ | ರತನನ್ನ ಮಾಡುತಲಿಹಿತ ಆಹಿತ ವೆರಡನ್ನು | ಸಮತೆಯಲಿ ಉಂಬಾಮತಿಯನ್ನೆ ಕರುಣಿಸುತ | ಕೃತಕಾರ್ಯನೆಂದೆನಿಸಿಸತತ ತವ ಸಂಸ್ಕøತಿಯ | ಇತ್ತು ಪೊರೆ ಇವನಾ 3 ಕಾಕು ಪಾದ | ಪಂಕಜವ ತೋರೋ 4 ಪಾವಮಾನಿಯ ಪ್ರೀಯ | ಶ್ರೀವರನೆ ಈಶಿಯವಕೋವಿದನ ಗೈಯ್ಯತ್ತ | ಭುವಿಯೊಳಗೆ ಮೆರೆಸೋಗೋವಿದಾಂಪತಿಯೆ ಗುರು | ಗೋವಿಂದ ವಿಠ್ಠಲನೆನೀ ವೊಲಿಯದಿನ್ನಾರು | ಕಾವರನು ಕಾಣೇ 5
--------------
ಗುರುಗೋವಿಂದವಿಠಲರು
ಎತ್ತಿದರಾರತಿ ಮುತ್ತೈದೆಯರು ಬೇಗ ಅರ್ಥಿಯಿಂದಲಿ ಪಾಡಿ ಅಚ್ಚುತನರಸಿಗೆ ಪ ಇಂದಿರಾದೇವಿ ಸುಗಂಧ ಸುಂದರಿ ನಮ್ಮ ಮಂದಿರದೊಳು ನಲಿದಾಡುತಲಿಹ ತಾಯೆ ಚಂದಿರವದನೆ ಸುಂದರಿ ಶಾಂತಿ ಜಯಮಾಯೆ ಇಂದಿರೇಶನ ಪಟ್ಟದರಸಿ ವರ ಲಕ್ಷುಮಿಗೆ 1 ಕರುಣದಿ ವರಗಳ ಕರೆದು ಕೊಡುವಳೆಂಬ ಬಿರುದು ನಿನ್ನದು ತಾಯೆ ಕೊಡುವರ ಅಭಯವ ಗರುಡಗಮನನ ವಕ್ಷಸ್ಥಳದಲಿ ವಾಸಿಸು- ತಿರುವ ಸೌಭಾಗ್ಯದ ಖಣಿಯೆ ರಕ್ಷಿಸು ಎಂದು2 ಪದ್ಮಮುಖಿಯೆ ಪದ್ಮಪಾಣಿಯೆ ಪದ್ಮಾಕ್ಷಿ ಪದ್ಮಲೋಚನೆ ಪದ್ಮಸಂಭವೆ ಪೊಳೆವ ಹೃ- ತ್ಪದ್ಮದಿ ಕಮಲನಾಭ ವಿಠ್ಠಲನ ತೋರಿಪದ್ಮನೇತ್ರೆಯೆ ಶ್ರೀ ಪದ್ಮಾಲಯೆ ಪೊರೆ ಎಂದು3
--------------
ನಿಡಗುರುಕಿ ಜೀವೂಬಾಯಿ
ಎಂಥ ಸುಂದರವಾದ ವೃಂದಾವನಾನಿಂತು ನೋಡಲು ಮನಕೆ ಸಂತೋಷವಾಗುವದು ಪಶ್ರೀ ರಾಘವೇಂದ್ರ ಗುರುಸಾರ್ವಭೌಮರ ದಿವ್ಯಧೀರ ಗಂಭೀರ ಸುಮನೋಹರ ಸುಮೂರ್ತಿರಾರಾಜಿಸುತಿಹುದು ಮುಗಳುನಗೆ ಮುಖದಿಂದಾಶರಣಾಗತರಿಗೆಲ್ಲ ಅಭಯ ಹಸ್ತವ ನೀಡಿ 1ಪ್ರೇರಕರು ತಾವಾಗಿ ಪ್ರೇರ್ಯರೊಬ್ಬನ ಮಾಡಿಕಾರಾಗಿರನ ಕನಸು ಮನಸಿನಲಿ ಪೋಗಿಇರಬೇಕು 'ೀಗೆಂಬ ವೃಂದಾವನದಿ ಚಿತ್ರತೋರಿಸುತ ಅಂತರಂಗದಿ ನಿಂದು ಮಾಡಿಸಿದ 2ಅಡಿಗಡಿಗೆ ಮ'ಮೆಯನು ತೋರಿಸುತ ಗಲಗಲಿಗೆನಡೆತಂದು ಶ್ರೀ ಮಠವ ಹ'್ಮುಕೊಂಡಿಹರುಸಡಗರದಿ ಭಕುತರಿಂ ಸೇವೆಕೊಳ್ಳುತಲಿಹರುಬಡವರಿಗೆ ಭಾಗ್ಯ ನಿಧಿಯು ಬಂದಂತೆ ಆಯ್ತು 3ಅಲ್ಲಿ ಮಂತ್ರಾಲಯವು ಇಲ್ಲಿ ಗಾಲವಕ್ಷೇತ್ರಅಲ್ಲಿ ತುಂಗಾ ಇಲ್ಲಿ ಕೃಷ್ಣವೇಣಿಅಲ್ಲಿ ಪ್ರಹ್ಲಾದರಾಜ ಯೋಗ ಮಾಡಿದನು ಇಲ್ಲಿತಪವ ಗೈದಿಹರು ಗಾಲವ ಮರ್ಹಗಳು 4ಅಲ್ಲಿ ರಾಯರಬಂಡಿ ಇಲ್ಲಿ ಋಗಳ ಬಂಡಿಅಲ್ಲಿ ಮಂಚಾಲೆಮ್ಮಾ ಇಲ್ಲಿ ಜಗದಂಬಾಅಲ್ಲಿ ಹೊಳೆದಾಟಿದರೆ ಪಂಚಮುಖಿಪ್ರಾಣೇಶಇಲ್ಲಿ ಹೊಳೆ ದಾಟಿದರೆ ಸಂಜೀವ ಪ್ರಾಣೇಶ 5ಕಲಿಯುಗದ ಸುರಧೇನು ಕಲ್ಪತರು ಗುರುರಾಯಗಲಗಲಿಯ ಭಾಗ್ಯ'ದು ಬಂದು ನಿಲಿಸಿಹನುಕಲುಷವರ್ಜಿತರಾಗಿ ದರುಶನವ ಮಾಡಿದರೆಕರೆದು ಈಪ್ಸಿತವ ಕೊಡುವ ಪರಮ ಕರುಣಾಳು 6ಪಾಪಿ ಕೋಪಿಷ್ಠರಿಗೆ ಸೇವೆ ದಕ್ಕುವದಿಲ್ಲಮಾಂ ಪಾ' ಪಾ' ಎಂಬುವ ಭಕುತರಾತಾಪತ್ರಯವ ಕಳೆದು ಸುಪ'ತ್ರರನು ಮಾಡಿಭೂಪತಿ'ಠ್ಠಲನ ಅಪರೋಕ್ಷ ಮಾಡಿಸುವ 7
--------------
ಭೂಪತಿ ವಿಠಲರು
ಎಂದಿಗೆ ನಿಮ್ಮ ಪದ ಕಾಂಬೆನೊ | ಗುರು ಎಂದಿಗೆ ನಿಮ್ಮ ಪದ ಕಾಂಬೆನೊ ಪ. ಎಂದಿಗೆ ನಿಮ್ಮ ಕಾಂಬೆ ಅಂದಿಗೆ ಮುಕ್ತಳಹೆ ಅ.ಪ. ಸಕಲ ಶಾಸ್ತ್ರಗಳನೆ ಶೋಧಿಸಿ | ಬಹು ಅಕಳಂಕ ತತ್ವವ ಸಾಧಿಸಿ | ಬೇಗ ಮುಕುತಿ ಯೋಗ್ಯರಿಗೆಲ್ಲ ಸುಖವ ತೋರುವ ಗುರು 1 ಮನದಿ ನೆಲಸಿ ಲೀಲೆ ತೋರುತ | ದೃಢ ಮನದಿ ಮನಸಿಜನ ಗೆಲ್ಲುತ | ದೇವ ಮನಸಿಜನಯ್ಯನ ಮನಸಿನೊಳ್ ತೋರುತ 2 ಕಷ್ಟಪಡುವುದು ಕಾಣುತ | ಬಹು ತುಷ್ಟರಾಗಿ ಅಭಯ ನೀಡುತ | ಮನ ಮುಟ್ಟಿ ರಕ್ಷಿಪೆನೆಂದು ಇಷ್ಟು ಸಲಿಪ ಗುರು 3 ನರಹರಿ ಧ್ಯಾನಿಪ ಶ್ರೀ ಗುರು | ಬಹು ಕರುಣಾಳುವೆ ದೇವತರು | ನಿಮ್ಮ ಅರಘಳಿಗೆ ಬಿಟ್ಟು ಇರಲಾರೆ ಧರೆಯೊಳು 4 ಮುಕ್ತಿ ಸೌಭಾಗ್ಯವ ನೀಡುವ | ಬಹು ಶಕ್ತರಹುದು ನಿಮ್ಮ ಭಾವವ | ನಾನು ಎತ್ತ ಯೋಚಿಸೆ ಕಾಣೆ ಸತ್ಯವಚನವಿದು 5 ಆನಂದಪಡಿಸುವ ಶ್ರೀ ಗುರು | ನಿಮ್ಮ ಏನೆಂದು ಸ್ತುತಿಹಲಿ ಪಾಮರರು | ನಿಮ್ಮ ಕಾಣರು ಜಗದಲಿ ಏನೆಂಬೆ ಮಹಿಮೆಯ 6 ಗೋಪಾಲಕೃಷ್ಣವಿಠ್ಠಲನ | ಶುಭ ರೂಪವ ತೋರುವ ಕಾರುಣ್ಯ | ದೇವ ಪರಿ ನಿಮ್ಮ ಸ್ತುತಿಸಿ ನಾ ಪಾರು ಕಾಂಬೆನು 7
--------------
ಅಂಬಾಬಾಯಿ
ಎನ್ನ ಕಂಗಳಿಗೆ ತೋರೊ ಶ್ರೀಕೃಷ್ಣಪ. ಕರಿಯ ಮೊರೆ ಲಾಲಿಸಿದಿ ಬೇಗನೆನೆರೆದ ಸಭೆಯಲಿ ದ್ರೌಪದಿಗೆ ಅಭಯವನಿತ್ತಿ ಅಡವಿಅರಣ್ಯದಿ ಅಹಲ್ಯೆಯ ಸಲಹಿದಿಮುಚುಕುಂದನ ರಕ್ಷಿಸಿದಿ 1 ಸೂರ್ಯನುದಿಸುತ ಅಂತ್ಯಕಾಲದಿಶರತಲ್ಪದಲಿ ಅವಗೆ ತೋರಿದಿಶರಣು ಕಾಳೀಪಣೆಯ ಮೇಲಿಟ್ಟ ಮುದ್ದುಚರಣವ ತೋರೊ ರಂಗನಾಥ 2 ಪುಟ್ಟ ಪ್ರಹ್ಲಾದನ ಸಲಹಿದಿಪಟ್ಟವನು ವಿಭೀಷಣನಿಗೆ ಸ[ಲಿಸಿ]ದಿನೆಟ್ಟನಡವಿಲಿ ಬಂದ ಧ್ರುವನಆದರಿಸಿ ಕಾಯ್ದಿ ರಂಗನಾಥ 3 ಘನವಾಗಿ ಕ್ಷೀರಾಬ್ಧಿಯಲಿ ನಿಂತಿಉನ್ನಂತವಾಗಿದ್ದ ಸತ್ಯಲೋಕವನಾಳಿದಿ ಪ್ರಸನ್ನನಾಗಿಕ್ಷ್ವಾಕು ಕಾಯಗೆಒಲಿದ ಪಾದವ ತೋರೊ ರಂಗನಾಥ 4 ಎಷ್ಟು ಹೇಳಲಿ ನಿಮ್ಮ ಮಹಿಮೆಯಸೃಷ್ಟಿಸ್ಥಿತಿಲಯವನ್ನು ಅಳೆದೀ ಪುಟ್ಟ ಪಾದವ ಎನ್ನ ಮನದಲಿಇಟ್ಟು ದಯಮಾಡೊ ಶ್ರೀಕೃಷ್ಣ ರಂಗನಾಥ 5 ದÀಕ್ಷಿಣಮುಖವಾಗಿ ಪವಡಿಸಿದಿ ದೇವಶಿಖಾಮಣಿ ಏಳೈ ಬಂದ ಭಕ್ತರಿ-ಗೆಲ್ಲ ಅಭಯ ಹಸ್ತವ ಕೊಡುವಿರಾಜೀವನೇತ್ರ ಹಯವದನ[ರಂಗನಾಥ] 6
--------------
ವಾದಿರಾಜ
ಏನು ಪುಣ್ಯವ ಮಾಡಿದೆನೋ ಮುನ್ನೆ | ಧನ್ಯಗೈಸಿದ ಗುರು ಮಹೀಪತಿ ತಾನು ಪ ವಿಜಯಗ್ಹೇಳಿದ ಹರಿ ಗೀತೆಯಲಿ | ಸುಜನ ಸಂತರೊಳು ದುರ್ಲಭನೆನಲಿ 1 ಎನ್ನಯ ಸಿರದಲಿ ಅಭಯಕರವಿಟ್ಟು | ಚೆನ್ನಾಗಿ ಹೇಳಿದ ಸುಜ್ಞಾನ ಗುಟ್ಟು 2 ಕಣ್ಣುದೆರೆಸಿ ಭಕ್ತಿ ಮಾರ್ಗದಲಿ | ಸಣ್ಣವನೆಂದು ಚಿದ್ಭನದೋರಿಸಲಿ 3 ಇನ್ನೊಬ್ಬರಾಶೆ ಏತಕೆ ಎನಗಿನ್ನು | ಎನ್ನ ಹಂಬಲಿಸಿದಾಶೆಯ ಕಾಮಧೇನು 4 ತಂದೆ ತಾಯಿ ಗುರು ಬಂಧು ಬಳಗಾಗಿ | ಕಂದಗೊಲಿದ ನಿಂದು ತನ್ನಯ ಹೊಣೆಯಾಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಪುಣ್ಯವ ಮಾಡಿದೆನೋ ಮುನ್ನೆ | ಧನ್ಯಗೈಸಿದ ಗುರು ಮಹೀಪತಿ ತಾನು ಪ ವಿಜಯಗ್ಹೇಳಿದ ಹರಿ ಗೀತೆಯಲಿ | ಸುಜನ ಸಂತರೊಳು ದುರ್ಲಭನೆನಲಿ 1 ಎನ್ನಯ ಸಿರದಲಿ ಅಭಯಕರವಿಟ್ಟು | ಚೆನ್ನಾಗಿ ಹೇಳಿದ ಸುಜ್ಞಾನ ಗುಟ್ಟು 2 ಕಣ್ಣುದೆರೆಸಿ ಭಕ್ತಿ ಮಾರ್ಗದಲಿ | ಸಣ್ಣವನೆಂದು ಚಿದ್ಭನದೋರಿಸಲಿ 3 ಇನ್ನೊಬ್ಬರಾಶೆ ಏತಕೆ ಎನಗಿನ್ನು | ಎನ್ನ ಹಂಬಲಿಸಿದಾಶೆಯ ಕಾಮಧೇನು 4 ತಂದೆ ತಾಯಿ ಗುರು ಬಂಧು ಬಳಗಾಗಿ | ಕಂದಗೊಲಿದ ನಿಂದು ತನ್ನಯ ಹೊಣೆಯಾಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಪುಣ್ಯವ ಮಾಡಿದೆನೋ ಮುನ್ನೆ | ಧನ್ಯಗೈಸಿದ ಗುರು ಮಹೀಪತಿ ತಾನು ಪ ವಿಜಯಗ್ಹೇಳಿದ ಹರಿ ಗೀತೆಯಲಿ | ಸುಜನ ಸಂತರೊಳು ದುರ್ಲಭನೆನಲಿ 1 ಎನ್ನಯ ಸಿರದಲಿ ಅಭಯಕರವಿಟ್ಟು | ಚೆನ್ನಾಗಿ ಹೇಳಿದ ಸುಜ್ಞಾನ ಗುಟ್ಟು 2 ಕಣ್ಣುದೆರೆಸಿ ಭಕ್ತಿ ಮಾರ್ಗದಲಿ | ಸಣ್ಣವನೆಂದು ಚಿದ್ಭನದೋರಿಸಲಿ 3 ಇನ್ನೊಬ್ಬರಾಶೆ ಏತಕೆ ಎನಗಿನ್ನು | ಎನ್ನ ಹಂಬಲಿಸಿದಾಶೆಯ ಕಾಮಧೇನು 4 ತಂದೆ ತಾಯಿ ಗುರು ಬಂಧು ಬಳಗಾಗಿ | ಕಂದಗೊಲಿದ ನಿಂದು ತನ್ನಯ ಹೊಣೆಯಾಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಪುಣ್ಯವ ಮಾಡಿದೆನೋ ಮುನ್ನೆ | ಧನ್ಯಗೈಸಿದ ಗುರು ಮಹೀಪತಿ ತಾನು ಪ ವಿಜಯಗ್ಹೇಳಿದ ಹರಿ ಗೀತೆಯಲಿ | ಸುಜನ ಸಂತರೊಳು ದುರ್ಲಭನೆನಲಿ 1 ಎನ್ನಯ ಸಿರದಲಿ ಅಭಯಕರವಿಟ್ಟು | ಚೆನ್ನಾಗಿ ಹೇಳಿದ ಸುಜ್ಞಾನ ಗುಟ್ಟು 2 ಕಣ್ಣುದೆರೆಸಿ ಭಕ್ತಿ ಮಾರ್ಗದಲಿ | ಸಣ್ಣವನೆಂದು ಚಿದ್ಭನದೋರಿಸಲಿ 3 ಇನ್ನೊಬ್ಬರಾಶೆ ಏತಕೆ ಎನಗಿನ್ನು | ಎನ್ನ ಹಂಬಲಿಸಿದಾಶೆಯ ಕಾಮಧೇನು 4 ತಂದೆ ತಾಯಿ ಗುರು ಬಂಧು ಬಳಗಾಗಿ | ಕಂದಗೊಲಿದ ನಿಂದು ತನ್ನಯ ಹೊಣೆಯಾಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಪುಣ್ಯವ ಮಾಡಿದೆನೋ ಮುನ್ನೆ | ಧನ್ಯಗೈಸಿದ ಗುರು ಮಹೀಪತಿ ತಾನು ಪ ವಿಜಯಗ್ಹೇಳಿದ ಹರಿ ಗೀತೆಯಲಿ | ಸುಜನ ಸಂತರೊಳು ದುರ್ಲಭನೆನಲಿ 1 ಎನ್ನಯ ಸಿರದಲಿ ಅಭಯಕರವಿಟ್ಟು | ಚೆನ್ನಾಗಿ ಹೇಳಿದ ಸುಜ್ಞಾನ ಗುಟ್ಟು 2 ಕಣ್ಣುದೆರೆಸಿ ಭಕ್ತಿ ಮಾರ್ಗದಲಿ | ಸಣ್ಣವನೆಂದು ಚಿದ್ಭನದೋರಿಸಲಿ 3 ಇನ್ನೊಬ್ಬರಾಶೆ ಏತಕೆ ಎನಗಿನ್ನು | ಎನ್ನ ಹಂಬಲಿಸಿದಾಶೆಯ ಕಾಮಧೇನು 4 ತಂದೆ ತಾಯಿ ಗುರು ಬಂಧು ಬಳಗಾಗಿ | ಕಂದಗೊಲಿದ ನಿಂದು ತನ್ನಯ ಹೊಣೆಯಾಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಪುಣ್ಯವ ಮಾಡಿದೆನೋ ಮುನ್ನೆ | ಧನ್ಯಗೈಸಿದ ಗುರು ಮಹೀಪತಿ ತಾನು ಪ ವಿಜಯಗ್ಹೇಳಿದ ಹರಿ ಗೀತೆಯಲಿ | ಸುಜನ ಸಂತರೊಳು ದುರ್ಲಭನೆನಲಿ 1 ಎನ್ನಯ ಸಿರದಲಿ ಅಭಯಕರವಿಟ್ಟು | ಚೆನ್ನಾಗಿ ಹೇಳಿದ ಸುಜ್ಞಾನ ಗುಟ್ಟು 2 ಕಣ್ಣುದೆರೆಸಿ ಭಕ್ತಿ ಮಾರ್ಗದಲಿ | ಸಣ್ಣವನೆಂದು ಚಿದ್ಭನದೋರಿಸಲಿ 3 ಇನ್ನೊಬ್ಬರಾಶೆ ಏತಕೆ ಎನಗಿನ್ನು | ಎನ್ನ ಹಂಬಲಿಸಿದಾಶೆಯ ಕಾಮಧೇನು 4 ತಂದೆ ತಾಯಿ ಗುರು ಬಂಧು ಬಳಗಾಗಿ | ಕಂದಗೊಲಿದ ನಿಂದು ತನ್ನಯ ಹೊಣೆಯಾಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಪುಣ್ಯವ ಮಾಡಿದೆನೋ ಮುನ್ನೆ | ಧನ್ಯಗೈಸಿದ ಗುರು ಮಹೀಪತಿ ತಾನು ಪ ವಿಜಯಗ್ಹೇಳಿದ ಹರಿ ಗೀತೆಯಲಿ | ಸುಜನ ಸಂತರೊಳು ದುರ್ಲಭನೆನಲಿ 1 ಎನ್ನಯ ಸಿರದಲಿ ಅಭಯಕರವಿಟ್ಟು | ಚೆನ್ನಾಗಿ ಹೇಳಿದ ಸುಜ್ಞಾನ ಗುಟ್ಟು 2 ಕಣ್ಣುದೆರೆಸಿ ಭಕ್ತಿ ಮಾರ್ಗದಲಿ | ಸಣ್ಣವನೆಂದು ಚಿದ್ಭನದೋರಿಸಲಿ 3 ಇನ್ನೊಬ್ಬರಾಶೆ ಏತಕೆ ಎನಗಿನ್ನು | ಎನ್ನ ಹಂಬಲಿಸಿದಾಶೆಯ ಕಾಮಧೇನು 4 ತಂದೆ ತಾಯಿ ಗುರು ಬಂಧು ಬಳಗಾಗಿ |ಕಂದಗೊಲಿದ ನಿಂದು ತನ್ನಯ ಹೊಣೆಯಾಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಂಜ ಬಿಂಬಾನನೆ ಕಂಜ ಸತ್ಕೂಲಪರ ಕಂಜ ಸಾಸಿರ ಶಿರನಾ | ತಂದು ತೋರೇ ಪ ಕೂಡಾ ನಿತ್ಯದಿ ಕ್ರೀಡಿಪನಾ | ನೆತ್ತಿಯೊಳನುಹಾನೆ ಇಪ್ಪಳ ಸಂಗಡ ಅತ್ತಿತ್ತಗಲ ದವನಾ | ಚಿತ್ತೆದೊಲ್ಲಭ ನೈಯನಾ | ಬಂದ ಸತ್ಯ ಶಾಶ್ವತನ ತೋರೆ 1 ಚಿನಿಗಡಿದ ಕುವರನಾ | ಹಿರಿಯಳಿಯನಾ ತಂದೆಯಾ ಪಿತನಾ | ವನವ ಶರಭಿ ಧಾನ | ಶ್ರೀ ವನಜನಾಭನಾ ತಂದು ತೋರೆ 2 ಸರಸಿಜ ಸಖ ಸುತನಾ | ಅಸುರನ ಮಾತೆಯರಸನಾ | ಕರದಿಂದ ಸಂದಿದ್ದ ದೇಹಿಯ ಕೊಳೆ ಭಕ್ತರ ದುರಿತರ್ಹಿಸಿದನಾ | ಗುರುವರ ಮಹಿಪತಿ ಸುತನ ಅಭಯವಿತ್ತು ಪೊರೆವನ ತಂದು ತೋರೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಟ್ಟಿದಳು ಕಂಕಣವ ನಾರಿ ಲಕುಮಿವಿಷ್ಣು ಮೂರುತಿ ಕರಕೆ ವೈಕುಂಠರಾಣಿ ಪ.ಅವಿಯೋಗಿಯಾದ ಶ್ರೀ ಸತಿಯ ಸೇವೆಗೆ ಒಲಿದುಪವಮಾನನೊಡೆಯ ವರ ಬೇಡೆನ್ನಲುಭುವನೇಶ ನಿನ್ನ ಕೃಪೆ ಪೂರ್ಣಳಾನೆಂದೆನುತಹವಣೆಯಿಂ ಕೇಳ್ದಳೆರಡೊರವ ಲೋಕೋದ್ಧಾರಿ 1 ಶರಣಾಗತ ರಕ್ಷಕನು ಎಂಬ ಬಿರುದೊಂದುಶರಣಾಗತ ವತ್ಸಲನು ಎಂಬುದೊಂದುಧರಿಸು ಈ ಬಿರುದು ಹರಿ ವರವು ಅದೆ ಎನಗೆನಲುಕಿರುನಗೆಯ ನಗುತ ಒಲಿದನು ಸತಿಯ ನುಡಿಗೆ 2 ನಾರಿರನ್ನಳೆ ನಿನ್ನ ಕೋರಿಕೆಯ ತೆರನಂತೆಆರಾಧನೆಯ ಮಾಳ್ಪ ಶರಣರಿಗೆ ಒಲಿವೆತೋರಲೀ ಬಿರುದುಗಳು ನಿನ್ನ ಕರಗಳಲೆಂದುಶ್ರೀ ರಮೆಯ ಕರಕೆ ಕಂಕಣಗಳನೆ ತೊಡಿಸಿದನು 3 ನಾರಿ ಈ ಕಂಕಣವ ನಿನಗ್ಯಾಕೆ ಅರ್ಪಿಸಲುತೋರದೆನ್ನುತ ನಟನೆಗೈವನಿತರೊಳ್‍ಕ್ಷೀರಸಾಗರ ಮಥನ ಕಾಲದಲಿ ಜನಿಸುತಲಿಶ್ರೀ ರಮೇಶಗೆ ಒಲಿದು ಮಾಲೆ ಹಾಕಿದಳು 4 ಭಕ್ತಿ ಪ್ರೇಮಕೆ ಒಲಿದು ಭಕ್ತವತ್ಸಲ ಅಭಯಹಸ್ತವನು ಶಿರದಲ್ಲಿ ಇಡಲು ನಾರಿಚಿತ್ತದಲಿ ಆನಂದಪುಳಕಾಂಕುರಿತಳಾಗಿಚಿತ್ತದೊಲ್ಲಭನ ಮುಖಕಮಲ ವೀಕ್ಷಿಸುತ 5ಈಕ್ಷಿಸಲು ಶ್ರೀ ಹರಿಯ ಕರಕಮಲ ಲಕ್ಷಣವಲಕ್ಷ್ಮಿ ಬೆರಗಾಗಿ ಮುನ್ನಿನಕಿಂತ ಅಧಿಕಅಕ್ಷಯದ ಸಾಮುದ್ರಿ ಲಕ್ಷಣವ ಕಾಣುತಲಿಪಕ್ಷಿವಾಹನನ ಮೊಗ ಈಕ್ಷಿಸುತ ನಗುತ 6 ನೀನಿತ್ತ ವರದಾನ ಕಂಕಣದ ಬಂಧನವನಿನಗರ್ಪಿಸುತ ಧನ್ಯಳಾಗ್ವೆನೆಂದುಆನಂದದಲಿ ಮಾಡಿ ಕಂಕಣವ ಕಟ್ಟಿದಳು 7 ಜಗವನಾಡಿಸುವಂಥ ಸೂತ್ರವನೆ ಹದಿನಾರುಬಗೆ ಕಲೆಗಳೆಂಬ ಎಳೆ ಮಾಡಿ ಹಳದಿಮಿಗೆ ಕಾಂತಿ ಬಣ್ಣದಲಿ ಮಂಗಳಾಕಾರದಜಗಕೆ ವಿೂರಿಸಿದಂಥ ಕಂಕಣವ ಕಟ್ಟಿದಳು 8 ಕರಿ ಕೆಂಪು ಬಿಳುಪು ವರ್ಣವು ಪ್ರಳಯ ಕಾಲದಲಿಇರಲಾರದೆಂದು ತ್ಯಜಿಸುತ ಹಳದಿಯವರಕಾಂತಿ ಬಣ್ಣವನು ಪೂಸಿ ಮಂಗಳವದನೆಸರದಿಂ ಮೂರು ಗ್ರಂಥಿಯ ಬಿಗಿದಳಾಗ 9 ಪರಿ ಏನು ಪೇಳೆಂದು ಸರಸದಲಿ ಹರಿ ಕೇಳೆ ಹರಿಣಾಕ್ಷಿಯು ಪರಮ ಪುರುಷನೆ ನೀನು ಅರಿಯದಿನ್ನುಂಟೆ ಕೇಳ್ ಸರಸವಾಣಿಯಲಿ ಪೇಳ್ಪೆನು ದೇವ ದೇವ 10 ಒಂದು ಮುಕ್ತಿಯ ಗ್ರಂಥಿ ಒಂದು ಕರ್ಮದ ಗ್ರಂಥಿ ಒಂದು ಅಜ್ಞಾನ ನಿನ್ನ ಬಂಧಕರ ಗ್ರಂಥಿ ಇಂದಿರೇಶನೆ ಇದರ ಗುಟ್ಟು ಅರುಹುವÉ ಕೇಳು ಒಂದೊಂದು ವಿವರಗಳ ವಂದ್ಯ ಬ್ರಹ್ಮಾದಿ 11 ಕರ್ಮಗ್ರಂಥಿಯು ಬ್ರಾಹ್ಮಣರ ಯಜ್ಞದುಪವೀತ ಕರ್ಮ ಬಿಡುಗಡೆ ಇದು ಯತಿರತ್ನಗಳಿಗೆ ನಿಮ್ಮ ಬಂಧಕರ ಗ್ರಂಥಿ ಅಜ್ಞಾನಿ ಹೃದಯಕ್ಕೆ ನಿಮ್ಮ ಕೃಪೆಯಿಂದ ಬಿಡುಗಡೆ ಕೇಳು ಜೀವರಿಗೆ 12 ಮುಕ್ತರಿಗೆ ಸಂಸಾರ ಮತ್ತೆ ಬರದಂದದಲಿ ಕತ್ತರಿಸಿ ಲಿಂಗವನು ಕಾಯ್ದು ನಾನು ಚಿತ್ತಜಾಪಿತನೆ ನಿನ್ನಸ್ತಕೊಪ್ಪಿಸಿ ಬಿಗಿದು ಸುತ್ತಿ ಕಗ್ಗಂಟು ಹಾಕಿರುವೆ ನೀ ಗ್ರಂಥಿ 13 ಬಿಚ್ಚಲಾರೆಯೊ ನೀನು ಬಿಚ್ಚಲಾರೆನೊ ನಾನು ಬಿಚ್ಚಿಕೊಳಲಾರರೊ ಮುಕ್ತ ಜನರು ಅಚ್ಯುತನೆ ಇದೆ ನಿನಗೆ ಹೆಚ್ಚಿನಾ ಬಿರುದು ನಾ ಮೆಚ್ಚಿ ಕಟ್ಟಿರುವೆ ನೀ ಗ್ರಂಥಿ ಕಂಕಣವ 14 ಎರಡು ಗ್ರಂಥಿಯ ತೊಡಕು ಹರಿದು ಭಕ್ತರ ಕಾಯ್ದು ಪರಮ ಆನಂದ ಮುಕ್ತರಿಗೆ ಶರೆ ಮಾಡಿ ಮೆರೆಯೊ ಶರಣಾಗತರ ರಕ್ಷಕನೆ ಎಂದೆನುತ ಸಿರಿ ಮುತ್ತಿನಾರತಿಯನೆತ್ತಿದಳು 15 ಸಿರಿಹರಿಯ ಏಕಾಂತ ಸರಸ ವಚನಗಳಿದನು ಅರಿತವರು ಯಾರೆಂಬ ಅನುಮಾನ ಬೇಡಿ ಹರಿಶಯನನಾದವನು ಅರಿತು ಧೈರ್ಯದಿ ಜಗದಿ ಹರಹಿದುದ ಸಜ್ಜನರು ಅರಿತು ಆನಂದಿಸಲಿ 16 ಸಿರಿ ಒಲಿಯೆ ಶ್ರೀಹರಿಯು ತ್ವರಿತದಲಿ ಒಲಿಯುವನು ಮರುತ ಒಲಿಯಲು ಸಿರಿಯು ತಾ ಒಲಿವಳು ಗುರುವು ಒಲಿಯಲು ಮರುತ ಮರುಕ್ಷಣದಿ ಒಲಿಯುವನು ಅರಿವುದಿದರಿಂ ಗುರುವ ಒಲಿಮೆ ಅಧಿಕೆಂದು 17 ಪರಮ ಸುಜ್ಞಾನದಿಂದರಿತು ತತ್ವಾರ್ಥಗಳ ಶರಣ ನಾ ನಿನಗೆನಲು ವಾತ್ಸಲ್ಯದಿ ಸಿರಿಯರಸ ತನ್ನಭಯ ಹಸ್ತ ಶಿರದಲಿಟ್ಟು ಶರಣರನು ಪಾಲಿಸುವ ಮುಕ್ತಿ ಪದವಿಯನಿತ್ತು 18 ಹರಿಸಿರಿಯ ಲೀಲೆಗಳ ಗುರುಕರುಣ ಬಲದಿಂದ ಅರುಹಿದ ಮಹಿಮೆ ಧರೆಯಲ್ಲಿ ಮೆರೆದು ಪರಮ ಮಂಗಳ ಕೊಡಲಿ ನಿರುತ ಸದ್ಭಕ್ತರಿಗೆ ಕರುಣಾಳು ಗೋಪಾಲಕೃಷ್ಣವಿಠ್ಠಲನ ದಯದಿ 19
--------------
ಅಂಬಾಬಾಯಿ