ಒಟ್ಟು 650 ಕಡೆಗಳಲ್ಲಿ , 76 ದಾಸರು , 493 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಧ್ಯಾಯ ನಾಲ್ಕು ಮೃಗಯಾಯೈ ಹಯಾರೂಢಂ ಗಹನೆ ಹಸ್ತಿನಾಹೃತಂ ಪದ್ಮಾವತೀ ಕಟಾಕ್ಷೇಷು ತಾಡಿತಂ ನËಮಿ ಶ್ರೀಪತಂ ವಚನ ಅಂದಿಗಾವೇಂಕಟನು ಇಂದು ಪೋಗಲಿಬೇಕೆಂದು ಸ್ಮರಿಸಿದ ಆ ಕ್ಷಣದಿ ಚೆಂದಾದ ಮೈ ಬಣ್ಣದಿಂದ ಇರುವುದು ಸ್ವರ್ಣ ಬಿಂದುಗಳು ಅಲ್ಲಲ್ಲೆ ಮೇಲ್ಗರಿಯಂ ಒಂದೊಂದು ಚಂದದರÀಳಲೆಯು ದೂರದಿಂದ ಹೊಳೆಯುವುದು 1 ಮತ್ತೆ ಸರಗಳನೆಲ್ಲ ಮತ್ತೆ ಪರಿಮಿತಿಯಿಲ್ಲ ಉತ್ತಮಾಶ್ವವ ತಾನು ಮತ್ತೆ ಮೇಲೆ ಸುತ್ತಿದನು ಕೌಸ್ತುಭ ಶಕ್ತವಸ್ತ್ರಾ2 ಊಧ್ರ್ವಪುಂಡ್ರಾಂಕಿತನು ಆಗಿ ಅಕಳಂಕಕೇಸರ ಕುಂಕುಮಾಂಕಿತ ಶ್ರೀಗಂಧ ಪೊಂಕದಲ್ಲಿ ಪಂಕಜಗಳಿಗೆ ಟೊಂಕದಲಿ ಏಲೆ ಅಡಿಕೆಸಣ್ಣ ಕೊಂಕು ಇಲ್ಲದ ಕನ್ನಡಿ ಕಟ್ಟಿದನು ವಸ್ತ್ರಾದಿಂದÀ 3 ಕಂಠದಲಿ ಇಟ್ಟು ಜರತಾರಿ ಒಂಟಿ ಚಾದರವನ್ನು ಕಂಠದಲಿ ಚಲ್ಲರಿಪುಕಂಟ- ಕಾಗಿರುವಂಥ ಒಂಟಿ ಬಂಟನಾಗಿ ಅಂಟರಾ ಬಿಗಿದು ನೂರೆಂಟು ವೈಕುಂಠನಾಥನು ಎಂಬ ಬಂಟನ ಕುದುರೆ ಹೊರಗ್ಹೊಂಟಿತಾಗ 4 ವೇಂಕಟನು ವನದಲ್ಲಿ ಘನವಾದ ಮದ್ದಾನೆಯನು ಹತ್ತಿ ನಡೆದ ವನಜ ಓಡುತ್ತ ಮುಂದೆ ಸಮ್ಮುಖವಾಗಿ ವಿನಯದಿಂದಲಿ ಸೊಂಡೆಯನು ಮೇಲೆತ್ತಿ ಗರ್ಜನವ ಮಾಡುತಲೆ 5 ಕಂಡು ಗಡಬಡಿಸಿದರು ಮುಗ್ಗುತಲೆ ಒಡಗೂಡಿ ಅಡಗಿದರು ಬೇಗ ದೃಢಭಕ್ತಿ ನಡೆದು ಅಲ್ಲಿಂದ ಹಣಹಣಿಕೆ ನೋಡ್ಯಡಗಿದರು ನಡೆಸಿದನು ಕುದರೆ 6 ಒದರಿದಳು ಅಮ್ಮಯ್ಯ ಏರಿ ನಮ್ಮೆದುರಿಗೆ ಚದುರನಾಗಿ ಮಧುರ ಹೆದರೆ ಬೇಡಿರಿ ನೀವು ಚದುರ ವೃತ್ತಾಂತವನು ಕೆದರಿ ಕೇಳಿರಿ ಅವನ ಇದರಿಗ್ಹೋಗಿ 7 ಬಂದು ಪುರುಷನ ನೋಡಿ ಇಂದು ಇಲ್ಲಿಗೆ ನೀನು ಬಂದ ಗಮನ ತಂದೆತಾಯಿಗಳ್ಯಾರು ಬಂಧು ಮಂದಿ ಎಲ್ಲರು ಏನೆಂದು ಕರೆವರು ನಿನಗೆ ಚಂದಾಗಿ ಕುಲಗೋತ್ರ ಒಂದು ಬಿಡದಲೆ ನಮ್ಮ ಮುಂದೆ ನೀಪೇಳು 8 ಇಂದು ನಮ್ಮ ಮುಂದೆ ಕೇಳಿರಿ ನಮ್ಮ ಕ್ರಮದಿಂದ ಹೇಳುವೆನು ಬಂಧು ತಾ ಬಲರಾಮ ಇಂದು ಸುಭದ್ರೆಯೆಂದೆನಿಸುವಳು ತಂಗಿ ಸುಂದರಾರ್ಜುನ ನಮ್ಮ ಹೊಂದಿರ್ದ ಬೀಗ 9 ಕೃಷ್ಣ ಪಕ್ಷದಲ್ಲಿ ನಾ ಕರೆವರು ಯೆನಗೆ ಕಿವಿಯಲ್ಲಿ ಇಟ್ಟು ಬಹುಸಂತೋಷ ಪೇಳಿರಿ ಎನಲು ಥಟ್ಟನೆ ನುಡಿದಳು ದಿಟ್ಟಪದ್ಮಾವತಿಯು ಸ್ಪಷ್ಟತಾನೆ 10 ಸುವಿವೇಕದ ವೃತ್ತಾಂತ ಶ್ರೀಕರಾತ್ರಿಯ ಗೋತ್ರ ಧರಣೀ ದೇವಿ ವಸುಧಾನ ತಾ ಖೂನ ಪದ್ಮಾವತಿಯು ನೀ ಕೇಳಿ ಆಕೆಯಮೇಲೆ ಸ್ವಲ್ಪ ಪುತ್ರಿ ತಾ ಕೋಪವನು ಎಂದಳಾ ಕಾಲದಲಿ ಹರಿ ವಿವೇಕದಲಿನುಡಿದ11 ಧ್ವನಿ ರಾಗ :ಶಂಕರಾಭರಣ ಭಿಲಂದಿತಾಳ ಇಷ್ಟು ಎನ್ನ ಮೇಲೆ ಏಕೆ ಸಿಟ್ಟು ಮಾಡುವಿ ಬಟ್ಟ ಕುಚದ ಬಾಲೆ ಬಹಳ ನಿಷ್ಠುರಾಡುವಿ 1 ಧಿಟ್ಟ ಪುರುಷ ನೀನು ನಡತೆಗೆಟ್ಟು ಇರುವರೆ ಖೊಟ್ಟಿ ಕುದುರೆಯೇರಿ ಮೈಯ ಮುಟ್ಟ ಬರುವರೆ 2 ಮೆಚ್ಚಿ ಬಂದೆ ನಿನಗೆ ನಾನು ಹೆಚ್ಚಿನ್ಹೆಂಗಳೆ ಇಚ್ಛೆ ಪೂರ್ಣಮಾಡು ನೀನು ಮಚ್ಚಕಂಗಳೆ 3 ಹೆಚ್ಚು ಕಡಿಮೆ ಆಡದೀರು ಹೆಚ್ಚಿನಾತನೆ ಎಚ್ಚರಿಲ್ಲ ಮೈಯ ಮೇಲೆ ಹುಚ್ಚು ಪುರಷನೆ4 ಏನು ಹೆಚ್ಚು ಕಡಿಮೆ ಆಡಿದೇನು ಅನುಚಿತ ನೀನು ಕನ್ಯಾ ನಾನು ವರನು ಏನು ಅನುಚಿತ 5 ಮೂಢನೀನು ಇಂಥ ಮಾತು ಆಡೋದುಚಿತವೆ ಬೇಡ ಅರಸಗ್ಹೇಳಿ ನಿನಗೆ ಬೇಡಿ ಬಿಗಿಸುವೆ 6 ಮಡದಿ ನಿನ್ನ ಕಡೆಯುಗಣ್ಣು ಕುಡಿಯ ಹುಬ್ಬುಗಳ್ ಕಡಿಯದಂಥ ಬೇಡಿ ಎನಗೆ ಕಡೆಗೆ ಅಲ್ಲವೆ 7 ಇಂದು ಪ್ರಾಣವ ತಂದೆ ಕಂಡರೀಗ ನಿನ್ನ ಕೊಂದು ಹಾಕುವ 8 ಜಾಣೆ ನಿನ್ನ ಬಿಡೆನು ಎನ್ನ ಪ್ರಾಣ ಹೋದರೂ ಪ್ರಾಣದರಸಿ ಎನಿಸು ಪಟ್ಟರಾಣಿಯಾಗಿರು 9 ಇಂದು ವ್ಯರ್ಥವು ಹಂದಿನಾಯಿ ಹದ್ದು ಕಾಗೆ ತಿಂದು ಬಿಡುವವು 10 ಎನ್ನ ಫಣಿಯಲ್ಲಿದ್ದ ಲಿಖಿತ ಮುನ್ನ ತಪ್ಪದು ಚನ್ನವಾಗಿ ನಿನ್ನಕೂಡಿ ಇನ್ನು ಇರುವುದು11 ಸೊಲ್ಲ ಕೇಳಿ ಸಿಟ್ಟಿನಿಂದ ನಿಲ್ಲೋ ಎಂದಳು ಎಲ್ಲ ಗೆಳತೆರಿಂದ ಕೂಡಿಕಲ್ಲು ಒಗೆದಳು 12 ಕಲ್ಲು ತಾಗಿ ಕುದುರೆ ಭೂಮಿಯಲ್ಲಿ ಬಿದ್ದಿತು ಬಲ್ಲಿ ದಾನಂತಾದ್ರೀಶನಲ್ಲಿ ಸ್ಮರಿಸಿತು 13 ವಚನ ಆ ಕುದುರೆಯನು ಆಗುತ ವಿವೇಕದಲಿ ಪರಿ ಆಯಿತೀಕಾಲದಲ್ಲೀ ಲೋಕದಲಿ ಕಾಲಬೀಳದಲೆ ಆಕಾಲ ದಲಿ ಹೊರಟೆ ಆ ಕಾರಣದಿಂದೆನಗೆ ಸಂಕಟವು ಸೋಕಿತಿ ಮಾಡಿದ ಕರ್ಮಫಲ ದೊರೆಯದಿರದು 1 ಗಿರಿಯೇರುತಲೆ ತಾನು ಮೂಕತನದಲಿ ಶೇಷಾಯಿಯಂತೆ ಮುಂದಕೆ ಅನೇಕ ಕರೆದು ಕೊಡುವವನ ಶ್ರೀ ಕರುಣದಿ ಆಯಿತು ನಾಲ್ಕು ಅಧ್ಯಾಯ 2
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಮೂರು ಜನ್ಮನಾಕಾಶನಂದಾ ವಸುಧಾನಾಗ್ರಜಾ ನಿಜಾನ್ ಪದ್ಮಾವತೀ ಪದ್ಮಭವಾ ವನಕ್ರೀಡಾರತ್ಯಾವತಾತ್ ವಚನ ಸಂದರ್ಶನಾದದ್ದು ತಂದೆಯ ಕಥೆಸ್ಮøತಿಗೆ ತಂದು ಅದು ವಿಸ್ತಾರದಿಂದ ಪೇಳುವೆನು ಸುಧರ್ಮನೆಂದು ಇರವನು ಅವಗೆ ಮುಂದೆ ಇಬ್ಬರು ಸುತರು ಚಂದದಲಿ ಆಕಾಶನೆಂದು ತೊಂಡಮಾನಸೆನಿಸುವನು 1 ವ್ಯಾಕುಲದಿ ಹೀಗೆ ಇಲ್ಲೆಂದು ಶೋಕದಲಿ ಕಣ್ಣೀರು ಹಾಕಿ ಸ್ಮರಿಸಿದ ದೇವಲೋಕ ಗುರುವ ಯಾಕೆ ಸ್ಮರಿಸಿದೆ ಎನ್ನನೀಕಾಲದಲಿ ಏನುಬೇಕು ಬೇಡಲೋನೀನು ನಾ ಶೋಕವನು ನುಡಿದಾ2 ಪಾಪಿಷ್ಠ ಏನು ಇದ್ದೇನು ನಾನು ಮಾಡಿದ ಪೇಳೋ ಹೀನಬುದ್ಧಿ ಕೊಲಿಸಿದೆನೇನು ಏನು ಕಾರಣ ಸಂತಾನ ಕಣ್ಣಿಲಿ ಕಾಣೆ ನಾನು ಅಯ್ಯಯ್ಯೊ 3 ಮಕ್ಕಳಾಡಿದರೆ ಬಹಳಕ್ಕರತೆ ಜೀವಕ್ಕೆ ಮಕ್ಕಳಿಲ್ಲದೆ ಮತ್ತೆ ಮಿಕ್ಕರಸ ಮಕ್ಕಳಿÀಂದಲೆ ಹಬ್ಬ ಹುಣ್ಣಿಮೆಯು ಉಲ್ಲಾಸ ಮಕ್ಕಳಿಂದಲೆ ಮುಂಜಿ ಮದುವೆಯ ಧರೆಯೊಳಗಿಲ್ಲ ಮಕ್ಕಳಿಂದಲೆ ಇಹವು ಮಕ್ಕಳಿಂದಲೆ ಪರವು ಮಕ್ಕಳಿಲ್ಲೆನ್ನ ಭಾಗ್ಯಕ್ಕೆ ಅಯ್ಯಯ್ಯ 4 ನೋಡಿಲ್ಲ ಮಕ್ಕಳಾಡಿದ ಮಾತು ನಕ್ಕು ಕೇಳಿಲ್ಲ ನಾ ಮಕ್ಕಳಿಂದಲೆ ಕೂಡಿ ಅಕ್ಕರದಿ ಉಣಲಿಲ್ಲ ಮಕ್ಕಳನು ಎತ್ತಿ ಮುದ್ದಿಕ್ಕಿದವನಲ್ಲ ಮಕ್ಕಳಿಲ್ಲದ ಮನುಜ ಲೆಕ್ಕದಾವದರೊಳಗೆ ಬೆಕ್ಕು ಮೊದಲಾದಂಥ ಮಿಕ್ಕ ಪ್ರಾಣಿಗಳೆಲ್ಲ ಮಕ್ಕಳಾಡಿದ ಬಹಳ ಚಕ್ಕಂದವನು ನೋಡಿ ಸೌಖ್ಯ ಪಡುತಿಹದಯ್ಯ ಧಿಕ್ಕರಿಸು ಎನ ಜನ್ಮ ಅದಕ್ಕಿಂತ ವ್ಯರ್ಥ 5 ಮುನ್ನ ನಮ್ಮೊಳಗಾರು ಉಣ್ಣದಲೆ ಈ ಬದುಕು ಮಣ್ಣು ಪಾಲಾಗುವದು ಘನ್ನ ಈ ಚಿಂತಿಯಲಿ ಬಣ್ಣಗೆಟ್ಟೆನು ಕುದ್ದು ಸುಣ್ಣಾದೆನಯ್ಯ ಉಭಯಕುಲ ತಾರಿಸುವಂಥ ನಾನು ಅಣ್ಣತಮ್ಮರ ಒಳಗೆ ಪುಣ್ಯ ಇಲ್ಲೊಬ್ಬನಲಿ ಪುಣ್ಯಗುರುವೆ 6 ರಾಗ:ಶಂಕರಾಭರಣ ಆದಿತಾಳ ಇಂಥ ಮಾತಿಗೆ ಜೀಯ ಹೀಗಂತ ನುಡಿದನು ಚಿಂತೆ ಮಾಡಬೇಡ ಭೂಕಾಂತ ಎಂದನು 1 ಪುತ್ರ ಕಾಮೇಷ್ಟಿಮಾಡು ಭಕ್ತಿಯಿಂದಲಿ ಪುತ್ರನಾಗುವನು ನಿಮಗೆ ಸತ್ಯ ನೀ ತಿಳಿ 2 ಗುರುವಿನ ಮಾತುಕೇಳಿ ಪರಮ ಹರುಷದಿಂದಲಿ ಅರಸ ಬ್ರಾಹ್ಮಣರನೆಲ್ಲ ಕರೆಸಿದಾಗಲೇ 3 ಮುಂದೆ ಯಜ್ಞ ಮಾಡಬೇಕು ಎಂದÀು ತ್ವರದಲಿ ಒಂದು ಭೂಮಿ ಶೋಧಿಸಿದನು ಚಂದದಲಿ 4 ಚಲುವ ನೇಗಿಲ ಜಗ್ಗಿ ಎಳೆವ ಕಾಲಕೆ ಹೊಳೆವ ಪದ್ಮ ಬಂತು ಅಲ್ಲಿ ಸುಳಿದು ಮೇಲಕೆ 5 ಇರುವಳೊಬ್ಬಳಲ್ಲಿ ಮತ್ತೆ ಪರಮಸುಂದರಿ ಅರಸನೋಡಿ ಬೆರಗಿನಿಂತ ಸ್ಮರಿಸಿ ಪರಿಪರಿ 6 ಕಾಣಿಸಿದಲೆ ಗಗನದಲಿ ವಾಣಿಯಾಯಿತು ಕಾಣದಿದ್ದರೂ ಈಗ ಸಕಲಪ್ರಾಣಿ ಕೇಳಿತೊ 7 ಇನ್ನು ಚಿಂತೆ ಮಾಡಬೇಡ ಧನ್ಯ ಅರಸ ನೀ ನಿನ್ನ ಮಗಳು ಎಂದು ಚೆನ್ನಾಗಿ ತಿಳಿಯೋ ನೀ8 ಕ್ಲೇಶ ಹಿಂದೆ ಬಿಡುವಿಯೊ ಮುಂದೆ ಮುಂದಕಿನ್ನು ಆನಂದ ಬಡವಿಯೊ9 ಗಗನ ವಾಣಿಯನ್ನು ಕೇಳಿ ಅರಸ ಬಗೆಯಲಿ ಮಗಳ ನೆತ್ತಿಕೊಂಡನಾಗ ಮುಗಳು ನಗೆಯಲಿ 10 ತಂದೆ ಮಗಳ ಜನ್ಮ ಪದ್ಮದಿಂದ ತಿಳಿದನು ಮುಂದೆ ಪದ್ಮಾವತಿಯೆಂದು ಕರೆದನು11 ಮಗಳಕಾಲಗುಣದಿ ಮುಂದೆ ಮಗನು ಆದನು ಅವನ ಕರೆದ ವಸುಧಾನನೆಂದು ಗಗನರಾಜನು 12 ತಕ್ಕವಾಗಿ ಅರಸಗ್ಹೀಗೆ ಮಕ್ಕಳಾದರು ಸೌಖ್ಯದಿಂದ ಮುಂದೆ ದಿನದಿನಕ್ಕೆ ಬೆಳೆದರು13 ಬಂತು ಯೌವನವು ಭೂಕಾಂತ ಪುತ್ರಿಗೆ ಬಂತು ಆಗ ಮತ್ತೆ ಬಹಳ ಚಿಂತೆ ಅರಸಗೆ 14 ಇಂಥ ಮಗಳಿಗಿನ್ನು ತಕ್ಕಂಥ ಪುರುಷನು ಪ್ರಾಂತದೊಳಗೆ ಇಲ್ಲದಿವ್ಯ ಕಾಂತಿ ಮಂತನು 15 ಎಂತು ನೋಡಲಿನ್ನು ಹುಡುಕಿ ಶ್ರಾಂತನಾದೆನು ಚಿಂತೆಯೊಳಗೆ ಬಿದ್ದು ಮುಂದೆ ಪ್ರಾಂತಗಾಣೇನು 16 ಅಂತರಂಗದೊಳಗೆ ಹೀಗಂತ ಅನುದಿನ ಚಿಂತಿಸಿದನು ಮರೆತು ಅನಂತಾದ್ರೀಶನ17 ವಚನ ಚಂದಾದ ಕುಸುಮಗಳ ಕೂಡಿ ಮುಂದೆ ಇಂದು ಮುಖಿಯು ನೋಡುತಲೆ ಮುಂದೆ ತೆಗೆದು ತ್ವರದಿಂದ ಆಭರಣಗಳ ಮುಂದೆ ತರಿಸಿದಳು1 ಕೆತ್ತಿಸಿದ ರಾಗುಟಿಯ ಒತ್ತಿ ಮೊದಲ್ಹಾಕಿ ಹತ್ತೊತ್ತಿದಳು ಸಾಲ್ಹಿಡಿದು ಇತ್ತಿತ್ತು ಮತ್ತೆ ತುದಿಗೆ ಅತ್ತಿತ್ತ ಮತ್ತ ಮೇಲರಿಸಿನವ ಚಿತ್ತಗೊಟ್ಟಚ್ಚಿದಳು ಚಿತ್ತಾರ ಬರೆದಂತೆ ಮತ್ತ ಗಜಗಮನೆ 2 ಥಳಥಳನೆ ಜಾತಿಯಿಂದ್ಹೊಳೆವ ಮುತ್ತಿನ ಭವ್ಯ ಎಳೆಯ ಇಮ್ಮಡಿ ಮಾಡಿ ನಳಿನಾಕ್ಷಿ ಬೈತಲಗೆ ಅಳತೆಯಿಂದ್ಹಾಕಿದಳು ತಳಪಿನಲಿ ಎಡಬಲಕೆ ಎಳೆದು ಕಟ್ಟಿದಳ್ಹಿಂದೆ ಹೆರಳಿಗ್ಹಾಕಿ ತೊಳೆದ ಮುತ್ತಿನ ಬುಗಡಿ ಪೊಳೆವ ಮೀನ್ಬಾವಲಿಯು ಝಳಿ ಝಳಿತವಾಗಿರುವ ಗಿಳಿಗಂಟಿ ಚಳತುಂಬುಗಳ ನಿಟ್ಟು ಕರ್ಣದಲಿ ಉಳಿದ ದ್ರಾಕ್ಷಾಲತೆಯ ಎಳೆದು ಬಿಗಿದಳು ಮೇಲೆ ಸುಳಿಗುರಳಿನಲ್ಲಿ 3 ಇದ್ದ ಮುತ್ತುಗಳ್ಹಚ್ಚಿ ತಿದ್ದಿ ಮಾಡಿದ ನತ್ತು ಉದ್ರೇಕದಿಂದಿಡಲು ಮುದ್ದು ಸುರಿವುತ ಮುಂಚೆ ಇದ್ದ ಮುಖ ಮತ್ತೆ ಎದ್ದು ಕಾಣಿಸಿತು ಪ್ರದ್ಯುಮ್ನ ಚಾಪದಂತೆರಡÀು ಹುಬ್ಬುಗಳ ಮಧ್ಯೆ ನೊಸಲಿನ ಮೇಲೆ ಶುದ್ಧ ಕಸ್ತೂರಿಯನ್ನು ತಿದ್ದಿ ತಿಲಕವನಿಟ್ಟು ತಿದ್ದಿದಳು ಕಾಡಿಗೆಯ ಪದ್ಮಲೋಚನಗಳಿಗೆ ಪದ್ಮಜಾತೆ 4 ಚಂದ್ರಗಾವಿಯನ್ನುಟ್ಟು ಚಂದಾದ ಕುಪ್ಪಸವ ಮುಂದೆ ಬಿಗಿ ಬಿಗಿತೊಟ್ಟು ಮುಂದಲೆಗೆ ಶೋಭಿಸುವ ಚಂದ್ರಸೂರ್ಯರನಿಟ್ಟು ಚೆಂದಾಗಿ ಬೈತಲೆಗೆ ಚಂದಿರವ ಸುರಿದಳು ಚಂದ್ರಮುಖಿಯು ಪರಿ ಗೀರು ಗಂಧವನು ಕೈಗ್ಹಚ್ಚಿ ಮುಂದೆ ಕೊರಳಿಗೆ ಒರಿಸಿ ಚಂದ್ರಸರ ಮುಂದೆ ಹಾಕಿದಳು 5 ಮೇಲಿಟ್ಟು ಚಿಂತಾಕವನು ಕಟ್ಟಿ ತಾಯತ ಬಟ್ಟಕುಚಗಳ ಏಕಾವಳಿಯ ಇಟ್ಟು ಪುತ್ಥಳಿ ಸರವು ಅಷ್ಟು ಸರಗಳನೆಲ್ಲ ಮೆಟ್ಟಿ ಮೇಲ್ಮೆರೆವಂಥ ಶ್ರೇಷ್ಠ ಸರಿಗಿಯತರಿಸಿ ಇಟ್ಟಳಾಕೆ6 ಟೊಂಕದಲಿ ಒಡ್ಯಾಣ ಮುಂದಲಂಕರಿಸಿದಳು ಪೊಂಕದಿಂದಿಟ್ಟು ಅಕಳಂಕ ಕೊಂಕವನು ಮಾಡುತಲೆÉ ಕಿಂಕಿಣಿಪೈಜಣ ಇಟ್ಟಳಾಕೆ7 ಪಿಲ್ಲೆ ಮೇಲಾದ ಮುಸುಕಿಕ್ಕಿ ಬಹು ಬಾಲೆಯರು ಕೊಟ್ಟ ಕೂಡಿ ಭಾಳ ಹರುಷದಿ ಹೊರಟಳಾಕಾಲದಲ್ಲಿ. 8 ವಚನ ಪರಿ ಗಜಗಮನದಿಂದಾ ವನ ಮದನ ಸತಿಯಂತಿಪ್ಪ ತರುಣಿರೂಪವ ತಾಳಿ ವನಮಧ್ಯದಲ್ಲಿ ತಾಂ ಬೆಸಗೊಂಡಳು ಯಾರಲೆ ಬಾಲೆ ನೀ ಬಾಲಚಂದ್ರ ಲಲಾಟೆ ಕಾಳಾಹಿ ವೇಣೀ ನೀ ಜಾತೆಯರ ಕೂಡಿ ಬಳಗವು ಕಾಂತನ್ಯಾರು ಪೇಳೆಂದು 1 ಧ್ವನಿ ಕೇಳೆ ಕುಸುಮಕ್ಕೆ ನಾ ಬಂದೆ ತಿಳಿಯೆ ಮಾತಿನರಗಿಳಿಯೆ 1 ಅಸಮ ತೋಂಡಮಾನನೆಂಬುವನು ನಮ್ಮ ಕಕ್ಕನು 2 ನಾ ಖೂನವನು ಪೇಳಿದೆ ಸಾರಿ ಪೇಳಿದೆ &ಟಿ
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಮೂರು ಪದ ಸಾವಿರ ಬುಧರÀರನೆಲ್ಲ ಮೀರಿ ಪರಮೇಶ್ವರಗೆ ಹಾರ ಹಾಕುವೆನೆಂದು ಪಾರಿಜಾತದ ಕುಸುಮ ಪಾರ್ವತಿಯು ತಾತರಿಸಿ ಪೂರ್ವದಲಿ ಮಾಡಿದಳ ಪೂರ್ವ ಮಾಲೆಯ ಭಕ್ತಿಪೂರ್ವಕವಾಗಿ ಚಾರುತರವಾಗಿಹ ಅಲಂಕಾರಗಳ ನಿಟ್ಟು ಶೃಂಗಾರ ಭರಿತಳು ಆಗಿ ಪಾರಿಜಾತದ ಹೂವಿನ ಹಾರಕೈಯಲಿ ಪಿಡಿದು ಚಾರು ಸಖಿಯಲ್ಲಿ 1 ಚಂದ್ರವದನೆಯ ಬಹಳ ಛಂದಾದ ಮುಖನೋಡಿ ಚಂದ್ರಮನು ಇದುಕಾಂತಿ ನಂದು ಒಯ್ದಳು ಈಕೆ ಮುಂದಿವಳನೊಯ್ಯಬೇಕೆಂದು ಕುಚಗಳ ಕಂಡು ಇಂದ್ರ ತಾ ಯನ ನಾ ಗೇಂದ್ರನ ಶಿರವೆಂದ ಮುಂದದರ ಸೊಂಡೆ ಇದು ಯೆಂದು ಕರಗಳಿಗೆಂದಾ ಮಂದಗತಿ ಮತ್ತಾದರರಿಂದ ನಡಗಿಯ ಕಂಡು ಸುಂದರಿಯ ಆಹುಬ್ಬು ಕರಿದರ್ಪ ತಾ ಕಂಡು 2 ಎರಳೆ ನೋಟವ ಕಂಡು ಎರಳೆವಾಹನ ನುಡಿದ ಯರವಿಂದವಯವಕ್ಹಿಗ್ಗಿ ಹೊರಳು ವಳು ಯಂತೆಂದು ಕೊರಳವನು ಕಂಡು ಹರಿ ಕರದಲೊಪ್ಪುವಯೆನ್ನ ವರಪಾಂಚಜನ್ಯವಿದು ಸರಿಯೆಂದು ನುಡಿದಾ ಗುರುಳು ಗೂದಲದವಳ ಹೆರಳವನು ನೋಡಿಹರಿ ಇರುಳ ಮಲಗುವಯನ್ನ ಸರಳ ಹಾಸಿಗೆಯೆಂದು ಸುರರು ಎಲ್ಲರು ಪರಿ ಪರಿಯಿಂದ ನುಡಿದರನುಸರಿಸಿಯಿದರಂತೆ 3 ಪದ ಮುಂದೆ ಆ ಪಾರ್ವತಿ ಬಂದು ಕುಳಿತಳಲ್ಲೆ ಬಂದ ಶಿವನು ತಾ ಬಾಲಕನಾಗಿ 1 ಲೀಲೆಯಿಂದಲಿ ತೊಡೆಯ ಮೇಲೆ ಮಲಗಿದನಾಗ ಬಾಲೆ ಹೀಗೆಂದಳು ಎಲ್ಲರಿಗೆ 2 ಮುನ್ನೆತ್ತಿದವರಿಗ್ಹಾಕುವೆ ಮಾಲೆ 3 ಅಂದಮಾತನು ಕೇಳಿ ಇಂದ್ರ ಬಂದನು ಆಗ ಮುಂದೆ ಆ ಬಾಲನೆತ್ತುವೆನೆಂದು4 ಚನ್ನಿಗನಂತಾದ್ರೀಶನ ಹಿಂದಕೆ ಮಾಡಿ ಸಣ್ಣ ಬಾಲನ ತಾ ಮುಂದಕೆ ಕರೆದಾ 5 ಪದ ಸಣ್ಣಬಾಲನೇ ಬಾರೋ ಹಣ್ಣು ಕೊಡುವೆ ನಿನಗಿನ್ನು ಕೈತಾರೋ ಪ ಚಂಡು ಬೊಗರಿ ಗೋಲಿಗುಂಡು ನಾ ಕೊಡುವೆ ಬೆಂಡು ಬತ್ತಾಸವ ಕೊಂಡು ನಾ ಕೊಡುವೆ 1 ಚಿಣಿಕೋಲು ಮತ್ತೆ ಈಕ್ಷಣ ತಂದು ಕೊಡುವೆ ಮನಸಿಗೊಪ್ಪುವ ಚಿಂತಾಮಣಿ ತಂದು ಕೊಡುವೆ 2 ನಡಿಯೋ ನಿನಗೆ ದೊಡ್ಡ ಗುಡಿಯ ತೋರಿಸುವೆ ಒಡೆಯ ನಂತಾದ್ರೀಶನಡಿಯ ತೋರಿಸುವೆ 3 ಪದ್ಯ ಮತ್ತೇ ಮತ್ತೀಪರಿಯ ಒತ್ತಿ ಒದರಿದರೇನು ವ್ಯರ್ಥ ಬಾಲನು ಕಣ್ಣೆತ್ತಿ ನೋಡಲುವಲ್ಲ ಒತ್ತಿ ತೋಳುಗಳ್ಹಿಡಿದು ಎತ್ತಿನೋಡಿದನಾಗ ಯತ್ನದಿಂದಲ್ಲಿಯೆ ತಿತ್ತಿದಮ್ಮನೆ ದಣಿದು ಮತ್ತ ದೇವೇಂದ್ರ ಬಲು ಮೆತ್ತಗಾದ ವ್ಯರ್ಥ ಈ ಬಾಲಕನ ಎತ್ತಿ ನಗೆಗೀಡು ಈವತ್ತು ಆಯಿತು ಎಂದು ವೃತ್ರಾರಿ ತಾ ಮುಂದೆ ಅತ್ಯಂತ ಕೋಪದಲಿ ಎತ್ತಿದನು ವಜ್ರವನು ಎತ್ತಿದಾ ಕೈಬರದೆ ಮತ್ತಲ್ಲಿ ನಿಂತಿಹುದು ಚಿತ್ರದಲ್ಲಿಯ ಗೊಂಬೆ ಹಸ್ತದಂತೆ 1 ಪದ ಆಯಿತು ಈ ಪರಿಯು ದೇಹಕೆ ಆಯಾಸವೇ ಸರಿಯ ಪ ಮತ್ತೆ ಅಗ್ನಿಯು ಅಲ್ಲೆ ಬಾಲನ ಎತ್ತದೆ ದಣಿವುತಲೆ ಶಕ್ತಿ ಎತ್ತಿದ ಮೇಲೆ ಮತ್ತಾ ಶಕ್ತಿ ನಿಂತಿತು ಅಲ್ಲೆ1 ದಂಡಧರನು ಆಗ ಯೆತ್ತದೆ ಭಂಡಾದನು ಬೇಗ ದಂಡ ನೆತ್ತಿದನಾಗ ಎತ್ತಿದ ದಂಡ ನಿಂತಿತುಹಾಗೆ 2 ಮತ್ತೆ ನೈರತಿ ಅಲ್ಲೆ ಬಾಲನ ಎತ್ತದೆ ದಣಿವುತಲೆ ಕತ್ತಿಯೆತ್ತಿದ ಮೇಲೆ ಮುಂದಾ ಕತ್ತಿನಿಂತಿತು ಅಲ್ಲೆ 3 ಪಾಶಧರನು ಆಗ ಬಹು ಕಾಸೋಸಿ ಬಿಟ್ಟು ಬೇಗ ಪಾಶವೆತ್ತಿದನಾಗ ಮುಂದಾ ಪಾಶನಿಂತಿತು ಹಾಗೆ 4 ವಾಯು ಬಂದನಲ್ಲೆ ಬಳಲಿದ ಕಾಯಕ್ಲೇಶದಲ್ಲೆ ಕಯ್ಯನೆತ್ತಿದ ಮೇಲೆ ಮತ್ತಾಕೈಯು ನಿಂತಿತು ಅಲ್ಲೆ 5 ಸತ್ವರ ಬರವುತಲೆ ಕುಬೇರ ನಿಸ್ಸತ್ವನಾದನಲ್ಲೆ ಶಸ್ತ್ರಯೆತ್ತಿದ ಮೇಲೆ ಮುಂದಾ ಶಸ್ತ್ರ ನಿಂತಿತು ಅಲ್ಲೆ 6 ಶೂಲಧರನು ಅಲ್ಲೆ ಮತ್ತಾ ಬಾಲನಯೆತ್ತದಲೆ ಶೂಲನೆತ್ತಿದ ಮೇಲೆ ಮುಂದಾಶೂಲ ನಿಂತಿತು ಅಲ್ಲೆ7 ಬುಧಜನಕನು ಅಲ್ಲೆಬರವುತ ಗದಗದ ನಡುಗುತಲೆ ಗದೆಯನೆತ್ತಿದ ಮೇಲೆ ಮುಂದಾಗದೆಯು ನಿಂತಿತು ಅಲ್ಲೆ8 ಗೋಣನಲ್ಲಾಡುವ ತಲೆಯತ್ತಿದ ಹರಿ ತಾನು ಚಕ್ರವು ಮೇಲೆಖೂನದಿ ಅದು ಅಲ್ಲೆ ಆಯಿತು ಗೋಣವು ತಿರುವುತಲೆ 9 ಅಲ್ಲೆ ಪೂಷಣ ಬೇಗ ಕರಕರ ಹಲ್ಲು ತಿಂದನಾಗ ಹಲ್ಲು ಬಿದ್ದವಾಗ ತೋರಿದ ಎಲ್ಲ ದೇವತೆಗಳಿಗೆ 10 ಕೂಸನೆತ್ತದಾಗಿ ಎಲ್ಲರು ಮೋಸವಾದರು ಹೋಗಿ ಆ ಸ್ವಯಂವರಕಾಗಿ ಅನಂತಾದ್ರೀಶನ ಸಹಿತಾಗಿ 11 ಪದ್ಯ ಅಂಬುಜೋದ್ಭವ ತಾನು ಸ್ತಂಭಿತಾಗಿಸುರ ಕ ದಂಬವನು ಕಾಣುತಲೆ ಸಾಂಬನ ಮಹಿಮೆಯಿದು ಅಂಬಿಕೆಯ ತೊಡೆಯ ತಲೆಗಿಂಬು ಮಾಡಿಹ ಬಾಲ ಸಾಂಬನಿವನಹದೆಂದು ಸಂಭವಿಸಿದಾಗ ನಂಬಿ ಸ್ತುತಿ ಮಾಡಿದನು ಸ್ತಂಭೀತರು ಎಂದೆನಿಸಿ ಕೊಂಬುವರು ಎಲ್ಲಾರು ನಂಬಿ ಸ್ತುತಿಸಿದರು ಆ ಸಾಂಬಗೀಪರಿಯು ಪದ ಸಾಂಬಸದಾಸಿವನೆ ರಕ್ಷಿಸು ಬಾಲಕನೇ ಸಾಂಬಸದಾಶಿವನೆಂಬುವ ಬಾಲಕ ನೆಂಬುವದರಿಯದೆ ಸ್ತಂಭಿತರಾದೆವು ನಂಬಿಗೆ ತಿಳಿಯದೆ ನಂಬಿದೆವೋ ಜಗ ದಂಬೆಯ ತೊಡೆ ತಲೆ ಗಿಂಬು ಇಟ್ಟವನೆ ಪ ಪಟುತರನಾದಂಥವನೆ ತಿಳಿಯದೋ ನಿನ್ನ ಘಟಿತ ಘಟನೆ ಹರನೆ ಸ್ಫಟಿಕ ಸನ್ನಿಭ ಧೂರ್ಜಟಿಯೆ ನಿನಗೆ ಸಂ ಘಟಿತಳಾದ ಈ ಕುಟಿಲ ಕುಂತಳೆಯು ಹಟದಲಿ ಗೆಲವುದುವ ಹಟವೊಂದಿದು ಈ ಸ್ಪುಟವಾಯಿತು ಸಂಕಟ ಪರಿಹರಿಸು 1 ಸರ್ವರನೆಲ್ಲಾ ತರಿಸಿ ಸರಸ ಮಾಡಿದೆಯೊ ಗರ್ವವ ಪರಿಹರಿಸಿ ಉರ್ವಿಯೊಳಗೆ ನಿನಗಿರ್ವರಾರು ಸರಿ ಸರ್ವರನ್ನು ಮೀರಿರುವ ದೇವನೆ ಸರ್ವಪ್ರಕಾರದಿ ಸರ್ವರ ಅವಯವ ಪೂರ್ವದಂತಾಗಲಿ ಪಾರ್ವತಿಪ್ರಿಯನೇ 2 ಭೋ ಶಿಶುವರ ರೂಪ ಬೇಗನೆ ಬಿಡು ಈ ಸಮಯಕ್ಕೆ ಕೋಪ ಈ ಶಶಿವದನೆಯ ಆಶೆಗೆ ವ್ಯರ್ಥದಿ ಮೋಸಹೋಗಿ ಕಾಸೋಸಿ ಬಟ್ಟೆವು ಘಾತಿ ಮಾಡಬೇಡಾಸೆಯ ಪೂರಿಸು ಶ್ರೀ ಅನಂತಾದ್ರೀಶ ಪ್ರಿಯನೆ 3 ಪದ್ಯ ವಿರಳಾಟ ಈ ಸ್ತುತಿಗೆ ಮರುಳಾಗಿ ತಾನು ಗರಳ ಗೊರಲಿಸಾ ಮೂರುತಿಯ ಸರಳ ಮಾಡೆಲ್ಲವರು ಗುರುಳು ಗೂದಲದವ ಸರಳಾದವ ತೊಡೆಯಲ್ಲಿ ಹೊರಳೆದ್ದು ತೋರಿಸಿದ ಸರಳ ನಿಜರೂಪ ವಿರಳೆ ನೋಟದಲಿರುವ ತರಳೆ ಆ ಪಾರ್ವತಿಯು ಹೊರಳಿ ನೋಡುತಲೆದ್ದು ಹರಳಿನುಂಗರ ಕೈಯ್ಯ ಹೆರಳಿನೊಳಗಿರುವಂಥ ಅರಳಿದ್ಹೂವಿನ ದಿವ್ಯ ಸರಳ ಮಾಲೆಯ ಅವನ ಕೊರಳಿಗ್ಹಾಕಿದಳು 1 ಗಂಭೀರ ವಾದ್ಯಗಳೇಳು ಸಾರಿ ನುಡಿದವು ಆಗ ಸಾವಿರಬುಧರ ಎಲ್ಲ ವೃಷ್ಟಿಸೂರಿಮಾಡಿದರು ಚಾರ್ವನಂತಾದ್ರಿಯಲ್ಲಿರುವ ದೇವನ ಬಿಟ್ಟು ಸಾರ ಪರಮೇಶ್ವರಗೆ ಹಾರ ಹಾಕುವೆನೆಂಬ ಪಾರ್ವತಿಯ ಅಭಿಲಾಷೆ ಪೂರ್ಣವಾದಲ್ಲೆ ಸಂಪೂರ್ಣ ಸಾಂಬ ಮೂರುತಿಯ ದಯೆಯಿಂದ ಮೂರು ಅಧ್ಯಾಯ
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಮೂರು ಪೂತನಾ ಅಸುಹಾರಿಣಿ ನಮಃ ಪದ್ಯ ಪೊಡವಿಯಲಿ ಎಲ್ಲರಿಗೆ ಒಡಿಯನಾಗಿರುವಂಥ ಖಡು ಪಾಪಿ ಕಂಸಗೆ ಬಿಡದೆ ಪ್ರತಿವರ್ಷಕ್ಕೆ ಕೊಡತಕ್ಕ ಕಪ್ಪವನು ಕುಡಬೇಕು ಎಂತ್ಯೆಂದು ನಡದು ತಾ ಮಥುರೆಯಲಿ ಖಡುನಂದಗೋಪಾ| ಒಡಿಯನಪ್ಪಣಿಯಿಂದ ಗಡಬಡಿಸೆ ಪೂತನಿಯು ಹುಡುಗರನ್ನು ಹುಡುಕುತಲೆ ಬಡಿವಾರ ತೋರುತಲೆ ನÀಡದು ಬಂದುಳು ಹಾದಿ ಹಿಡಿದು ಗೋಕುಳಕೆ|| 1 ಧಡಿಯ ದಿವ್ಯಾಂಬರವು ಶಡಗರದಿ ಉಟ್ಟಿಹಳು ಕಿಡಿಯಂಥ ಕುಪ್ಪುಸವು ದೃಢ ಬಿಗಿದು ತೊಟ್ಟಿಹಳು| ಬಿಡÀದೆ ಸರ್ವಾಭರಣ ಜಡದಿಹಳು ತಾ ಮಿಂಚು ಹೊಡದಂತೆ ತೋರುವಳು ಉಡುರಾಜ ಮುಖಿಯು| ಎಡಬಾರಿ ದುರಬಿನಲಿ ದೃಢವಾಗಿ ಮಲ್ಲಿಗಿಯು ಮುಡಿದಿಹಳು ಉರದಲ್ಲಿ ದೃಢವಾದ ಕುಚವೆರಡು ನಡವುದಾ ಕಾಲಕ್ಕೆ ನಡಗುತಿಹವು 2 ಬಿಂಬೋಷ್ಟಿ ಮಾಯ ಅವಲಂಬಿಸುತ ಗೋಕುಲದ ತುಂಬ ಬೆಳಕವು ಮಾಡಿ ಜಂಭದಲಿ ಬರುತಿಹಳು ಗಂಭೀರಳಾಗಿ ತನಗುಂಭ ತಿಳಿಗುಡದೆ ಕುಚ ಕುಂಭಗಳವಳಗ ವಿಷ ತುಂಬಿಟ್ಟು ಕೊಂಡು ಅಂಬುಜಾಕ್ಷಿಯ ಕಂಡು ಸಂಭ್ರಮದಿ ಗೋಕುಲದ ಜಗದಂಬಿಯೊ ಎಂದೂ 3 ಮುಂದ ಆ ಪೂತನಿಯು ನಂದಗೋಪನ ಮನಿಗೆ ಬಂದು ದೇವೇಚ್ಛಿಯಲಿ ನಂದನಂದನನ ಕಣ್ಣಿಂದ ನೋಡಿದಳಾಗ ಛಂದದ್ಹಾಸಿಕೆಯಲಿ ಛಂದಾದ ಲೌಕೀಕದ ಕಂದನಂತೆ| ಮುಂದವನ ತೊಡಿಯ ಮ್ಯಾಲೆ ಛಂದಾಗಿ ಧರಿಸಿದಳು ಕಂದರ್ಪನೈಯನೆ ಕಂದನಾಗಿರುವನೆಂತ್ಯೆಂದು ತಿಳಿಯದೆ ನಿದ್ರಿ ಯಿಂದಿರುವ ಸರ್ಪ ಕರದಿಂದ್ಹಿಡಪರಿ ರಜ್ಜು ಎಂದುಬ್ಯಾಗೆ 4 ಶ್ರೀನಿವಾಸನ ಜನನಿ ಮೌನ ಹಿಡಿದಳು ಕಪಟತನ ತಿಳಿಯದೆ ಬುದ್ಧಿಹೀನ ಪೂತನಿಯು ಸ್ತನಪಾನ ಮಾಡಿಸಿದಳಾ ದಾನವಾರಿಗೆ ಅವನು ಪ್ರಾಣಸಹಿತಾಗಿ ವಿಷಪಾನ ಮಾಡಿದನು| ದ್ರೂಣನಾಗಿರುವವನ ಪಾಣಿಯಲಿ ಸಿಕ್ಕು ಗತಿಗಾಣದಲೆ ಉತ್ಕøಷ್ಟ ವಾಣಿಯಿಂದಲೆ ಒದರಿ ಭ್ರೂಣಹನನಕ ಬಹಳ ಜಾಣಿ ಎಂತ್ಯೆನಿಸುವಳು ಪ್ರಾಣ್ಹೋಗಿಬಿದ್ದಳಾ ಪ್ರಾಣಿ ಪೂತನಿಯು. ಪದ:ರಾಗ :ಶಂಕರಾಭರಣ ಅಟತಾಳ, ಸ್ವರಷಡ್ಜ ಬಿದ್ದಾಳು ಪ್ರಾಣ ಹೋಗಿ ಪೂತನಿ ಜನ್ಮಗೆದ್ದಾಳು ಬಾಲಕ ಘಾತಿನಿ| ಬಂತುದೆವಾಯಿತು ಮತ್ತಲ್ಲೆ|| 1 ಗಿರಿಯಂತೆ ಆ ದೇಹ ಇರುವೋದು ಆರು ಹರದಾರಿ ಪರಿಯಂತೆ ಬಿದ್ದಿಹದು| ಕರಚರಣಗಳ್ಹರವಿ ಇರವದು ಅಲ್ಲಿ ಇರವೂ ವೃಕ್ಷಗಳೆಲ್ಲಾ ಮುರದಿಹದು|| 2 ಎರಡು ಕಣ್ಣುಗಳು| ದಾಡುವರಲ್ಲೆ ನದಿಗಳು|| 3 ಭಾವಿಯಪರಿ ತೋರುವುದು ಹೇಳುವದಿನ್ನು ಉಳದಿಹುದು ದಾನವಾರಿಯಕೊಂಡು ಕರದಿಂದ ವಿಷಪಾನ ಮಾಡಿಸಿದ ಕಾರಣಿದಿಂದ | ಹಾನಿತನಗೆ ಬಂತು ತ್ವರದಿಂದ| ಅಚುತಾನಂತಾದ್ರೀಶ ಕರದಿಂದ|5 ಪದ್ಯ ಬಾಲಕಾಕಿಯ ಎದಿಯಮ್ಯಾಲೆ ನಿರ್ಭಯದಿಂದ ಲೀತಿಯನ ಮಾಡುತಿಹ ಬಾಲಿಯರು ಬ್ಯಾಗ ಆ ಬಾಲಕನ ಕರಕೊಂಡು ಮ್ಯಾಲೆ ಗೋಮೂತ್ರದಲಿ ಬಾಲಗ್ಯರದರು ಅವರು ಭಾಳ ಸಂಭ್ರಮದಿ| ಕಾಲ ಆ ಕಾಲಕಿಟ್ಟರು ನಂದ ಬಾಲಕರನೆನಿಸುವ ಜಗತ್ಪಾಲಕಗ ರಕ್ಷಾ|| 1 ಬಾಲ ನಿನ್ನನ್ನು ಜಗತ್ಪಾಲಕನು ರಕ್ಷಿಸಲಿ| ಪದಾಗಳು ಆ ಮೂರು ಪಾದದವ ರಕ್ಷಿಸುತಾ ಜಂಘವನು ಮತ್ತ ಶ್ರೀರಂಗ ತಾ ರಕ್ಷಿಸಲಿ ಜಾನುವನು ರಕ್ಷಿಸಿ ಜಾನ್ಹವಿಜನಕಾ | ಉರುಗಳಾ ರಕ್ಷಿಸಲಿ ಉರ್ವೀಶ ಹರಿತಾನು ನಾಭಿಯನು ಶ್ರೀಪದ್ಮನಾಭ ಸಂರಕ್ಷಿಸಲಿ ಹೃದಯಗತ ಶ್ರೀ ಹರಿಯು ಭುಜಗಳನು ರಕ್ಷಿಸಲಿ ಭುಜಗಶಯನಾ||2 ಕಂಠವನು ಮತ್ತ ವೈಕುಂಠಪತಿ ರಕ್ಷಿಸಲಿ ಮುಬವನ್ನು ರಕ್ಷಿಸಲಿ ಮುಕುಟವರ್ಧನ ಹರಿಯು| ಶಿರವನ್ನು ರಕ್ಷಿಸಲಿ ಶಿರಿಯರಮಣನನು ತಾನು ಅಂಗಜನ ಜನಕ ಸರ್ವಾಂಗ ರಕ್ಷಿಸಲಿ| ಜಲಜಾಕ್ಷಿಯರು ಹೀಂಗ ಹಲವು ದೇವತಿಗಳನ ಬಲಗೊಂಡು ಮತ್ತವರ ಬಲದಿ ರಕ್ಷೆಯ ನೀಡಲು| ಜಲಜಮುಖಿ ಜನನಿ ತನ್ನ ಚಲುವ ಬಾಲಕಗ ತಾ ಮೊಲಿಕೊಟ್ಟು ಮಂಚದಲಿ ಮಲಗಿಸಿದಳವನಾ| ಖಳಕಂಸಗಾ ಕಪ್ಪುಗಳ ಕೊಟ್ಟು ನಂದ ತಾ ಇಳದ ಮನಿಯಲಿ ಇರಲು ತಿಳದು ಆ ಸುದ್ದಿ ತನ್ನ ಸ್ಥಳವನ್ನು ಬಿಟ್ಟು ಆ ಸ್ಥಳಕ ಬಂದನು ಪರಮ ಗೆಳೆಯ ವಸುದೇವ ಮನದೊಳಗ ಹಿಗ್ಗುತಲೆ|| 3 ಆರ್ಯಾ ಜಾಣನು ಆತನ ಕಾಣುತಲ್ಯದ್ದನು ಪ್ರಾಣಬರಲು ದೇಹದ ಪರಿಯು| ಪ್ರಣಾಮಮಾಡಿ ಆ ಪ್ರಾಣಯನಪ್ಪಿದ ಪಾಣಿಹಿಡಿದು ಗೋಕುಲ ಧೊರಿಯು|| 1 ಆಮ್ಯಾಲಿಬ್ಬರು ಪ್ರೇಮದಿ ಕುಳಿತರು ಕ್ಷೇಮವಿಚಾರ ಮಾಡುತಲೆ| ಆಮ್ಯಾಲ ಶೌರಿಯು ಕೋಮಲ ಹೃದಯದಿ ತಾ ಮಾತಾಡಿದ ಪ್ರೇಮದಲೆ|| 2 ಪದ:ರಾಗ:ಶಂಕರಾಭರಣ ತಾಳ:ಭಿಲಂದಿ ಸ್ವರ:ಪಂಚಮ ಸಕಲ ಜನರು ನಂದಗೋಪ ಸುಖದಲಿರುವರೆ ಸಖನೆ ನಿನ್ನ ಮನಿಗೆ ಭಾವುಕರು ಬರುವರೆ|| ಪ ದೃಷ್ಟ ವಿಷಯನಾದಿ ನೀ ಅದೃಷ್ಟಯೋಗದಿ| ವೃಷ್ಟಿ ಮಾಡಿದಿ|| 1 ನಿನಗ ಪುತ್ರನಾದ ಸುದ್ದಿ ಎನಗ ಮುಟ್ಟಿತು | ನನಗೆ ಕಡೆಯ ಪುತ್ರನವನೆ ನಿನಗೆ ಒಪ್ಪಿತು|| 2 ಸಕಲರಿಂದ ಕೂಡಿ ಅವನು ಸುಖದಲಿರುವನೆ ಸಕಲ ಜನರಿಗ್ಯವನು ಪ್ರಾಣಸಖನು ಆದನೆ|| 3 ಅಲ್ಯೆ ಗೋಗಳೆಲ್ಲ ರೋಗ ಇಲ್ಲದಿರುವವೆ| ಹುಲ್ಲು ನೀರಿನಿಂದ ಸೌಖ್ಯದಲ್ಲಿ ಇರುವವೆ|| 4 ಚನ್ನಿ ಗಾನಂತಾದ್ರೀಶನ್ನ ನೆನುವರೆ 5 ಆರ್ಯಾ ಛಂದಾಗ್ಯವ ಹೀಗೆಂದ ಮಾತು ಆನಂದಗೋಪ ತಾ ಕೇಳುತಲೆ| ಮುಂದಾ ಶೌರಿಯಮುಂದ ನುಡದನು ಮಂದಹಾಸ್ಯದಲಿ ನಗುವುತಲೆ|| 1 ಪದ, ರಾಗ :ಮುಖರಿ ತಾಳ :ಆದಿ ದುಃಖವು ಸುಖಕಾರಿಯೆ ಪ ಎನಗೆ ತಿಳಿನೀನು|| 1 ಹಿಂದಿನ ದುಃಖ ಹಿಂದೆ ಹೋಯಿತು | ತಿಳಿ ಮುಂದ ನಿನಗೆ ಸೌಖ್ಯವಾದೀತು|| 2 ಚಿಂತಿಮಾಡಲಿ ಬ್ಯಾಡಾ ವಸುದೇವಾ| ಚಲುವಾನಂತಾದ್ರೀಶನೆ ದಯ ಮಾಡಿರುವಾ|| 3 ಆರ್ಯಾ ನಂದ ಗೋಪನಾನಂದ ವಚನಗಳ ಛಂದದಿ ಕೇಳುತ ವಸುದೇವಾ | ಮುಂದ ನುಡದ ಹೀಗಂದು ಮತ್ತ ತ್ವರದಿಂದ ತನ್ನ ಹೃದ್ಗತ ಭಾವಾ || 1 ಪದ ರಾಗ:ಸಾರಂಗ ಆದಿತಾಳ ಸ್ವರ:ಷಡ್ಜ ಭಿಡಯಾ ಬಿಟ್ಟ ಹೇಳುವೆ ಎನ್ನ ನುಡಿಯು ಲಾಲಿಸಿ|| ಪ ಉತ್ತಮ ಕೇಳಿನ್ನಾಮಗನಾ ಉತ್ಪತ್ತಿ ಕಿವಿಯಿಂದ ಕೇಳಿ| ಉತ್ಪನ್ನವಾದಾವು ಬಹಳ ಉತ್ಪಾತಗಳು|| 1 ಕಂಸನ ಅಂಜಿಕೆಯಿಂದ ಸಂಶಯ ಬಿಡುವÀಲ್ಲದಿನ್ನು| ಸಂಸಾರದೋಳ್ಸುಖವು ಸ್ವಲ್ಪಾ ಸಂಶಯವೆ ಭಾಳಾ||2 ಮುಟ್ಟಿತು ಕಂಸಗ ಕಪ್ಪ ಭೆಟ್ಟಿ ಆಯಿತು ನಿಮ್ಮನು| ಘಡ್ಯಾಗಿ ಅನಂತಾದ್ರೀಶನ ಮುಡ್ಡಿ ಭಜಿಸುತ|| 3 ಪದ್ಯ ಯಾದವನ ಮಾತಿಗ್ಯನು ಮೋದವನು ಬಟ್ಟು ನಂದಾದಿಗಳು ಗೋಕುಲದ ಹಾದಿಯನು ಹಿಡಿದು ಪರಮಾದರದಿ ನಡದರು. ಅಗಾಧವಾಗಿಹ ದೇಹ ಹಾದಿಯಲಿ ಬಿದ್ದಿಹುದು ಹಾದಿಯನು ಕಟ್ಟಿ| ಆ ದೇಹ ನೋಡುತ ಅಗಾಧ ಬಟ್ಟವರು ಅಲ್ಯಾದದ್ದು ಮನದಲ್ಲಿ ಶೋಧಿಸ್ಯಂದರು ಹೀಗೆ | ಸಾಧು ವಸುದೇವ ಹುಸಿ ಆದದ್ದು ಉಂಟೇ| 1 ಪರಿ ಅವರು ಕೊಡಲಿಯನು ಕೊಂಡು ಕಡಕಡದು ಈ ದೇಹವನು ಸುಡಲು ದೂರದಲಿಟ್ಟು ಕಡೆ ಬಿಡದೆ ಆಕಾಶಕ್ಕೆ ಅಡರಿತಾಗೆ| ಖಡುಪಾಪಿ ಪೂತನಿಯು ಕುಡಲು ವಿಷ ಮೊಲಿಯನ್ನು ಕುಡುದು ಸದ್ಗತಿಕೊಟ್ಟ ತಡವಿಲ್ಲದಲೆ ಹರಿಯು ದೃಢಭಕ್ತಿಯಿಂದಲೆ ಕಡಿಗೆ ಕ್ಷೀರಾದಿಗಳು ಕೊಡಲು ಸದ್ಗತಿಯನ್ನು ಕುಡವದೇನÀದು|| 2 ಶೌರಿಸಖನಂದ ಪರಿವಾರ ಸಹಿತಾಗಿ ತಾ ಈ ರೀತಿ ಉತ್ಪಾತ ಮೀರಿ ಮನಿಯಲಿ ಬಂದು ಪೂರ್ವದಲಿ ಆಗಿಹ ಅಪೂರ್ವ ವೃತಾಂತವನು ಪೂರ ಕೇಳ್ಯಾಶ್ಚರ್ಯ ಪೂರಿತನು ಆಗಿ ವೈರಿ ಪೂತನಿಯ ಸಂಹಾರಿಯಾ ಕರಕೊಂಡು| ಚಾರುಮುಖ ನೋಡಿ ಸುಖಪೂರನಾದಾ | ಈ ರೀತಿ ಚರಿತವನು ಆರು ಕೇಳುವರು ಅವರ ಘೋರ ದುರ್ಷಟವೆಲ್ಲ ದೂರಾಗಿ ಹೋಗುವದು ಶುಭಚನ್ಹ ಚಾರ್ವನಂತಾದ್ರೀಶ ಮೂರುತಿಯು ಮುಗಿಸಿದಿದು ಭಾಗವತ ದಶಮಸ್ಕಂಧ 3 ಪೂತನಾದಧೋ ನಾಮ ತೃತಿಯೋಧ್ಯಾಯಃ| || ಶ್ರೀ ಕೃಷ್ಣಾರ್ಪಣಮಸ್ತು|| || ಮೂರನೆಯ ಅಧ್ಯಾಯವು ಸಂಪೂರ್ಣ||
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಮೂರು ವಚನ ಪ್ರಹ್ಲಾದ ಹೀಗೆ ಬಾಲಕರಿಗ್ಹೇ ಳುವಾಗ ಕೇಳುತಲದನು ಬೇಗಶಂಡಾಮರ್ಕ- ರ್ಹೋಳಗಿ ಹೇಳಿದರು ಚಂದಾಗಿ ದೈತ್ಯನಾಗಲಾಕ್ಷಣದಲ್ಲಿ ಬೇ ಆಗ ಪ್ರಹ್ಲಾದನಾ ಬೇಗ ಕರೆ ಕಳಿಸುತಲೆ ಹೀಗೆಂದ ಕ್ರೋಧ ಭರಿತನಾಗಿ ತಾನು 1 ರಾಗ ಆವಾತ ಬಲನಿನಗೆ ಪ ನಾನೊಬ್ಬನೆ ಬಲ ಅ.ಪ ಕುಲಭೇದ ಮಾಡುವಿಯೋ ಹುಟ್ಟಿ ನೀಕುಲಕಂಟನಾದ್ಯೋ1 ಕೆಟ್ಟರಲ್ಲಾ ಕಡುದೈತ್ಯ ಜಾಲಿಗಿಡನಾಗಿ ಹುಟ್ಟಿದ್ಯೋ 2 ಇದ್ದರೇನು ಬಿಡದೆ ಆ ಕೊಡಲಿಗೆ ಕಾವಾದ್ಯೋ 3 ವಚನ ನಾ ಮಾತುಗಳು ವಿರಸಾದ ಸರಿಸಿ ಅವನಲಿ ಸ್ನೇಹ ಸ್ಮರಿಸಿ ಅವನಲಿ ಭಕ್ತಿಸುರ ಹರುಷದಿಂದಲಿ ನುಡಿದ ಹರಿ ಹಿರಣ್ಯ ಕಶಿಪುವಿಗೆ ರಾಗ ಅವನೆ ಎನಗೆ ಬಲವು ಪ ಶ್ರೀ ವೈಕುಂಠ ಭುವನಕ್ಕೆ ಒಡೆಯಾ ಅ.ಪ ಕುಲಗಳಿಗೊಡೆಯ 1 ಅವನೆ ಪಾಲಿಸಿ ನಾಶವನು ಅವನೆ ಸರ್ವೋತ್ತಮನವನೆ ಎನ್ನೊಡೆಯಾ 2 ಸರ್ವರಲ್ಲಿ ಇಡು ಸ್ನೇಹವ ಪಾದ ಅನಂತಾದ್ರಿಗೊಡೆಯ ನಾಗಿರುವಾ 3 ರಾಗ ಮಗನಮೇಲೆ ಖಡ್ಗ ಹಿಡಿದನು 1 ಮಾತಾಡಿದ್ಹೇಳೆಲೊ ನೀನು 2 ಹರಿಯನ್ನೇ ಕೊಂಡಾಡುವೆಯಲ್ಲಾ ಆಹರಿಯ ಹೊರತು ಗತಿಯೆನಗಿಲ್ಲಾ 3 ಕಡಿದು ಬಿಡುವೆ ನಿನ್ನನ್ನು ನಾನು ಹಿಂದೆ ಕಡಿದೇನು ಮಾಡಿದಿ ಎಲೋ ನೀನು 4 ಕಂಡಂಜುವನಲ್ಲವೆಲೊ ನಾನು 5 ಸ್ಥಿರವೆಂಬುದನರಿಯೆಯೋ 6 ಶ್ರೀಹರಿವಶವಾಗಿಹುದು 7 ಅವನಿದಿರುವಾ ಸ್ಥಳವಾವುದು 8 ಕೊಡುವ ನೆನಗವತಾನು 9 ಮೂರ್ಖ ತಿಳಿ ನೀನು 10 ಪ್ರಕಟನಾಗುವ ಅನಂತಾದ್ರೀಶಾ 11 ವಚನ ದೃಢವಾದ ಕಂಬವನು ದೃಢಮುಷ್ಠಿ ಕಡುಶಬ್ಧ ತಡವಿಲ್ಲ ಹೋಯಿತು ಒಳಗೆಹಿಡಿ ಬ್ರಹ್ಮಾದಿಗಳು ಪೊಡ ನಡುವೆ ಬಂದಿತು ಎಂದು ಸಿಕ್ಕಲ್ಲೇ ಅಡಗಿದರು ಆಗ ಪಟುತರ ಶ್ರೀಹರಿಯುಕುಟಿ ಮಹಾಕಠಿನ ನರಮೃಗನಾಗಿ ಭಟರು ಇರುವಲ್ಲೆ ಆರ್ಭ ಸಂಹನನ ನರನುನರ ಸಿಂಹ ಜಿಹ್ವೆನಲಿದಾಡುವದು ದೈತ್ಯಸಿಂಹ ನಡುಗಿದನು ರಾಗ ಶೌರ್ಯದಿಂದ ಯುದ್ಧವೆಂಬೋ ಕಾರ್ಯ ಮಾಡಿದಾ 1 ಗದೆಯ ಸಹಿತ ಕೈಯ ಹರಿಯು ವದಗಿ ಹಿಡಿದನು 2 ಖಡಗಚರ್ಮ ಹಿಡಿದು ಬಂದ ನಡೆದು ಮುಂದಕ್ಕೆ 3 ತಕ್ಕವಾಗಿರುವ ಹೊಸ್ತಿಲಕ್ಕೆ ನಡೆದನು 4 ಹೃದಯದಲ್ಲಿ ಸೀಳಿದಾ 5 ಕೊಂದು ಎಲ್ಲ ಸರಳ ಮಾಡಿದಾ 6 ಸ್ತುತಿಸಿ ಪುಷ್ಟವೃಷ್ಟಿಕರೆದುರು7 ಭಯನಿವಾರಣನ ದಯದಿ ಭಯವ ಕಳೆದರು 8 ನುಡಿದವಾಗ ತೀವ್ರದಿಂದಲಿ 9 ಗಾಯನವ ಮಾಳ್ಪರು 10 ಸಾಹಿತ್ಯದಿಂದಲಿ11 ಮೂರ್ತಿ ಕಂಡು ದೂರ ನಿಂತರು 12 ಸಂತತಾನಂತದ್ರೀಶನಂತ ತಿಳಿಯರು 13 ವಚನ ಸಂಪೂರ್ಣ ಕೇಳ್ವರೂ ಅವರು ದುರಿತ ತೋರುವನು ಪ್ರತ್ಯಕ್ಷ ಚಾರ್ವನಂತಾದ್ರೀಶ ನಾರಸಿಂಹನು ಮಾಡಿರುವಲ್ಲಿ ಪೂರ್ಣವಾಯಿ ದಯದಿಂದ ಮೂರು ಅಧ್ಯಾಯ 1
--------------
ಅನಂತಾದ್ರೀಶ - ಕಥನಕಾವ್ಯಗಳು
ಅಮ್ಮನ ತೊಡೆಯ ಮೇಲೆ ನಮ್ಮ ಕೃಷ್ಣ ಸುಮ್ಮನೆ ಮಲಗಿಹನು ಪ ಸುಮ್ಮೊನದಿ ಸುಖದಿಂ ನಲಿದಾಡುತ ಅ.ಪ ಮಣ್ಣ ಮೆದ್ದುದ ಕಂಡು ಗೋಪಿದೇವಿ ಚಿಣ್ಣನ ಬಾಯಿನೋಡೆ ಕಣ್ಣಿಗೆ ಬ್ರಹ್ಮಾಂಡ ತೋರಿಸಿದಂಥ ಪರಬ್ರಹ್ಮ 1 ತರಳ ತರಲೆ ಮಾಡೆ ತಾಯಿಯು ಹೊರಳೆಗೆ ಕಟ್ಟಲಾಗಿ ಸುರತರುಗಳ ಮುರಿದು ನಿಜತರವ ಗೈದ ನಿತ್ಯಾತ್ಮ 2 ಕಾಲಲೊದೆದು ಕೊಂದು ಧಾತಾ ದೇವೇಂದ್ರರ ಶಿರಬಾಗಿಸಿದ ಪೂತಗುಣ 3 ಹಾಲುಕೊಡೆನೆ ಬಾಲ ಸಂಜೆಗೆ ಹಸುವ ಕರೆವೆನೆನಲು ಲೀಲೆಯಿಂ ಕಣ್ಣ ಮುಚ್ಚಿ ಕತ್ತಲೆ ಕವಿಸಿದ ದೈವ 4 ಗೋಪೀಜನಗಳೊಡನೆ ಗೋಪಾಲನು ಸ್ತ್ರೀಲೋಲನಾಗಿ ಕುಣಿದು ರಥಾಂಗಪಾಣಿ 5 ನವನೀತ ಚೌರ್ಯಮಾಡಿದ ನಾರೀಜನರ ವಸ್ತ್ರಾಪಹರ ಗೈದ ಅವನೀಭಾರವ ಕಳೆದ ಮಾಯಾಮೂರ್ತಿ ದೇವಶಿಖಾಮಣಿ6 ಭೂಮಿಪಾಲನೆ ಮಾಡಿದ ಹಿಂಸಕರ ವಂಶವಳಿಪ ಹಂಸಲೋಲ ಜಾಜಿಶ್ರೀಶ 7
--------------
ಶಾಮಶರ್ಮರು
ಅರಿತುಕೊಳ್ಳಿರೋ ನಿಮ್ಮ ಆತ್ಮವಸ್ತುವನುಪರಮ ಗುರು ಕರುಣದಿ ನೀವು ನಿಮ್ಮನು ಪ ಬಿದಿಗೆ ಚಂದ್ರನು ಆವುದೆಂದು ಕೇಳಲಿಕೆಅದಕೋ ಶಾಖಾಗ್ರ ಎಂದೆನಲು ಅರಿದಂತೆವಿಧಿಸಿ ಗುರುಮುಖದಿ ವಿವರಿಸಿ ಕಂಡು ಅರಿದುಸದಯಲಾನಂದ ತಾವೆಂದು ಭಾವಿಪುದು 1 ಊರು ಆವುದು ಎಂದು ಕೇಳುತಿರಲಿಕೆಊರದಕೋ ಗುಡ್ಡದ ಮೇಲೆನಲು ಅರಿದಂತೆಧೀರ ಗುರು ಮುಖದಿ ದಿಟ್ಟಿಸಿ ಕಂಡು ಅರಿತುಸಾರ ಸಂಪತ್ತು ತಾವೆಂದು ಧ್ಯಾನಿಪುದು 2 ಅರಸು ಅವನು ಎಂದು ಕೇಳುತಿರಲಿಕೆಅರಸ ಅಲ್ಲಿಹನೆಂದು ನಡೆವವನೆ ಅರಿತಂತೆಪರಮ ಗುರು ದಯದಿ ಪಾಟಿಸಿ ಕಂಡು ಅರಿದುಪರಮ ಗುರು ಚಿದಾನಂದ ತಾವೆಂದು ಭಾವಿಪುದು 3
--------------
ಚಿದಾನಂದ ಅವಧೂತರು
ಅರ್ಚಿಸೊ - ಮನುಜ - ನೀನರ್ಚಿಸೊ ಪ ನಿಚ್ಚಟ ಮರೆಯದೆ ಅ.ಪ. ವಾರಿಧಿ ಮಧ್ಯದಿ ಅಂದೂ | ಮಹಾಗರಳ ಉದ್ಭವಿಸಿತು ಮುಂದೂ | ನೋಡುಸುರಾಸುರರೆಲ್ಲರು ಬಂದೂ | ಭಾಳಮೊರೆಯ ನಿಟ್ಟರು ಕೇಳೊ ಅಂದೂ | ಆಹಭರದಿಂದ ಬರುತಲೆ | ಗುರು ಪವನನ ಪಾದಸ್ಮರಿಸದೆ ಗರಳವ | ಭುಜಿಸಲು ಬಂದನ 1 ಉದುಭೂತ ವಿಷದ ಪಾತ್ರೆಯನೂ | ಹರಮುದದಿ ಹಸ್ತದಿ ಕೊಂಡು ಅವನು | ನೋಡಿಅದುಭೂತ ವಿಷದ ಜ್ವಾಲೆಯನು | ತಾನುಬೆದರಿ ಯೋಚಿಸಿದನು ಶಿವನು | ಆಹಅದನರಿತು ಶಿರಿಯರಸ ಪದುಮಾಕ್ಷ ಕೃಷ್ಣನುಮುದದಿ ಅಭಯವಿತ್ತು | ಸದಯವ ತೋರಿದ 2 ಸೇವ್ಯ | ಕೇಳೊಮಂತ್ರೋದ್ಧಾರಗೆ ಪೇಳ್ದತ್ವರ್ಯ | ಆಹಮಂತ್ರಿ ಹನೂಮಂತ | ಮರ್ಧಿಸಿ ಇತ್ತಂಥಸ್ವಂತ ವಿಷವನುಂಡು | ಪಂಥವಗೆಲಿದನ 3 ಕಂಟಕ ಕಳೆದನು ಶಿವನು | ವಿಷಕಂಠನೆನೀಸಿದನವನು | ದಶಕಂಠ ಹರನ ನಾಮವನ್ನು | ಅವಕುಂಠಿತನಾಗದೆ ಇನ್ನು | ಆಹಕುಂಟಿಸಿ ಈಂಟಿಸಿ | ಧಿಮಿಧಿಮಿಕೆನ್ನುತಸೊಂಟದಿ ಕೈಯಿಟ್ಟು | ನಾಟ್ಯವನಾಡ್ವನಾ 4 ಪರಿ ಸ್ಮರಿಸೆ5
--------------
ಗುರುಗೋವಿಂದವಿಠಲರು
ಅಲ್ಲಿ ಇಲ್ಲಿ ಮೊಸರನು ಚೆಲ್ಲಿ ಮೆಲ್ಲನೆ ಬಂದವ ಎಲ್ಲಿಹನಮ್ಮ ಪ ಬಲ್ಲಿದರಲ್ಲಿ ಬಲ್ಲಿದನಂತೆ ಇಲ್ಲಿಗೆ ಬಂದವ ಎಲ್ಲಿಹನಮ್ಮ ಅ.ಪ ಗೆಜ್ಜೆ ಪಾಡಗ ಕಡಗ | ಝಣ ಝಣ ಭಜ್ಜರ ರವವನು ಬೀರುವನಮ್ಮ ಸಜ್ಜನು ಬಲ್ಲವ ಅವನಮ್ಮ 1 ಹೊಂಗೊಳಲೂದುತ ಓಡುವನಮ್ಮ ಮಾಂಗಿರಿರಂಗನೆ | ಅವನೆನ್ನುವರಮ್ಮ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಅಲ್ಲಿಂದಲ್ಲೆದೆಮಾ ಅಲ್ಲಿಂದಲ್ಲೆದೆ ಘನಗುರುಮಹಿಮೆ ಧ್ರುವ ಅಲ್ಲಿಂದಲ್ಲಿದ್ದು ತಿಳಿಯದು ಲೋಕಾ 1 ಅಲ್ಯಾವನಾದರ ಅಲ್ಲೆವೇ ತಿಳಿದಾ 2 ಬಲ್ಲಮಹಿಮರ ಬಲಗೊಂಡು ಕೇಳಿ 3 ಒಳಗಲ್ಲ ಹೊರಗಲ್ಲ ಒಳಿತಾಗಿ ಕೇಳಿ4 ಕೆಳಗಲ್ಲ ಮ್ಯಾಲಲ್ಲ ತಿಳಿದುಕೊಂಡು ನೋಡಿ 5 ಹಿಂದಲ್ಲ ಮುಂದಲ್ಲ ಸಂಧಿಸಿ ನೋಡಿ 6 ಎಡಕಲ್ಲ ಬಲಕಲ್ಲ ಪಡಕೊಂಡು ನೋಡಿ 7 ದೂರಲ್ಲ ಸಾರ್ಯಲ್ಲ ಅರಿತಿನ್ನು ನೋಡಿ 8 ಬೆಡಗಿನ ಮಾತಲ್ಲ ಕಡಗಂಡು ನೋಡಿ 9 ಸ್ಥೂಲಲ್ಲ ಸೂಕ್ಷ್ಮಲ್ಲ ಭೇದಿಸಿ ನೋಡಿ 10 ಮನದಿರಗಿ ಉನ್ಮನವಾಗಲಿಕ್ಕೆ 11 ಕಣ್ಣದಿರಗಿ ಕಣ್ಣ ನೋಡಲಿಕ್ಕೆ 12 ಎಚ್ಚತ್ತು ಅಲ್ಲಿವೆ ಯೋಚಿಸಲಿಕ್ಕೆ 13 ಅರವಿನ ಮುಂದ ಮರವಿನ ಹಿಂದ 14 ಜಾಗ್ರ ನಿದ್ರಿ ಮಧ್ಯ ಅರುವಾಗಲಿಕ್ಕೆ 15 ಗುರುಕೃಪೆಯಿಂದಲಿ ಗುರುತಿಟ್ಟು ನೋಡಿ16 ಸಾಧಕನಾದರ ಸಾಧಿಸಬಹುದಿದು 17 ಭೇದಿಸೇನೆಂದರೆ ಭೇದಿಸಬಹುದಿದು 18 ಸೂರ್ಯಾಡೇನಂದರ ಸೂರ್ಯಾಡಬಹುದಿದು 19 ಖೂನಹೇಳಿದ ಮ್ಯಾಲ ಙÁ್ಞನೇನಬಹುದು 20 ಹೆಜ್ಜೆ ಹೇಳಿದ ಮ್ಯಾಲ ಸಜ್ಜನ ಅವನೀಗ 21 ಚೆನ್ನಾಗ್ಹೇಳಿದ ಮ್ಯಾಲ ಮನ್ನಿಸಬಹುದಿದು 22 ಗುರುತಹೇಳಿದ ಮ್ಯಾಲ ಗುರುಸ್ವರೂಪ ತಾಂ 23 ಸರಗಹೇಳಿದ ಮ್ಯಾಲ ಶರಣೆಂಬುದಾತಗ 24 ಅಲ್ಲಿಂದಲ್ಲೆಂಬುದನುಭವಾಗಬೇಕು 25 ಅನುಭವದೋರಿದ ಘನಗುರು ನಮ್ಮಯ್ಯ 26 ಲೇಸು ಲೇಸು ನಮ್ಮ ಭಾಸ್ಕರ ಗುರುದಯ 27 ಭಾಸುತ ಭಾಸ್ಕರಕೋಟಿ ತೇಜಾದನು 28 ದಾಸಮಹಿಪತಿಗೆ ಲೇಸು ಲೇಸಾಯಿತು 29
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅವನಿಯೊಳವತರಿಸಿದ ವ್ಯಾಸರಾಯ ಭೂಸುರಜನವರ್ಯ ಸುವಿನೋದವ ಪಡೆದರು ಸುರನರಜನರು ಪ ಪವನಸುತರ ಮತ ಭುವಿಯಲಿ ಸುಲಭದಿ ವಿವರಿಸಿ ಜನರಿಗೆ ಪ್ರವಚನವೆಸಗಲು ಅ.ಪ ಗುರು ಬ್ರಹ್ಮಣ್ಯರ ವರಪದ ಕಮಲಗಳ ಪರತÀರ ಭಕುತಿಯಲಿ ಪರಿಪರಿ ಸೇವಿಸಿ ಗುರುಕರುಣದಲಿ ಹರುಷವ ಪೊಂದುತಲಿ ವರವ ಪಡೆದ ಭೂಸುರ ರಾಮಾರ್ಯರ ವರಸತಿಯುದರದಿ ವಹ್ನಿಪುರದೊಳವ ತರಿಸುವ ಧರೆಯೊಳು ಸುಜನಗಣವನು ದ್ಧರಿಸಲು ಮುದದಲಿ ಸಿರಿಪತಿಭಕುತನು 1 ಅತಿಬಾಲ್ಯದಿ ಗುರ್ವಾಜ್ಞೆಯನನುಸರಿಸಿ ಯತಿಯಾಶ್ರಮವಹಿಸಿ ಕ್ಷಿತಿಯೊಳಪರೋಕ್ಷಜ್ಞಾನಿಗಳೆಂದು ಪ್ರಥೆಯನು ಪೊಂದಿದ ಲಕ್ಷ್ಮೀನಾರಾಯಣ ಯತಿಯಲಿ ಶಾಸ್ತ್ರಾಮೃತ ಪಾನ ಮಾಡುತ ಅತಿ ಸುಲಭದ ಶ್ರುತಿಗಳ ಸಾರವ ಕ್ಷಿತಿ ಸುರರೊಳಗತಿ ಹಿತದಲಿ ಅರುಹಲು 2 ಗಜಗಹ್ವರ ದೇಶದ ನರಪತಿಗಳಿಗೆ ನಿಜವರ ಕರುಣದಲಿ ವಿಜಯಾಭ್ಯುದಯಗಳನು ಸತತ ಪೊಂದಿಸುತ ರಜತಕನಕ ನವಮಣಿಗಣಯುತ ವಾ ರಿಜವನು ಪೋಲುವ ಸಿಂಹಾಸನದಲಿ ಸುಜನ ಸಮೂಹಕೆ ನಿಜಪದಯುಗಳಾಂಬುಜ ಸೇವೆ ನೀಡಲು 3 ನಂದತೀರ್ಥರ ವರಶಾಸ್ತ್ರಗಳನ್ನು ಚಂದದಿ ವಿವರಿಸಲು ಚಂದ್ರಿಕಾ ನ್ಯಾಯಾಮೃತ ಮೊದಲಾದ ಗ್ರಂಥಗಳನು ರಚಿಸಿ ಮಂದಜನಕೆ ಮುಚುಕುಂದನ ಶುಭಗುಣ ವೃಂದಗಳನು ಸುಖದಿಂದ ಬೋಧಿಸಲು ಅಂದಪದಗಳನು ರಚಿಸುತ ಶುಭಗುಣ ಸಾಂದ್ರನ ಭಜನಾನಂದ ಪೊಂದಿಸಲು 4 ವಿಜಯೀಂದ್ರ ವಾದಿರಾಜ ಮೊದಲಾದ ನಿಜವರ ಶಿಷ್ಯರುಗಳ ವ್ರಜಕೆ ಶಾಸ್ತ್ರಾರ್ಥಗಳನು ಬೋಧಿಸುತ ಪುರಂದರ ಸುಜನ ಶಿರೋಮಣಿ ಕನಕ ಪ್ರಮುಖ ಪೂಜಿತ ಪದಯುಗಳಾಂಬುಜ ಯತಿಶೇಖರ ವಿಜಯಸಾರಥಿಯು ಪ್ರಸನ್ನನಾಗಲೆಂದು 5
--------------
ವಿದ್ಯಾಪ್ರಸನ್ನತೀರ್ಥರು
ಅವನೆ ಧನ್ಯನೆಲಾ ಜಗದೊಳು ಇವನೇ ಮಾನ್ಯನೆಲಾಪ ಆವ ಪರಿಯಲಿಂದಾದರು ತನ್ನಯ ಭಾವ ಶುದ್ಧಿಯಲಿ ಭಗವತ್ಪರನಾದವನೆ ಧನ್ಯ 1 ಆತ್ಮೇಂತರ ಸಂಸ್ಕøತಿಯೊಳಿದ್ದು ಸ್ವಾತ್ಮಲಾಭ ಸಿದ್ಧಿಯ ಸಾಧಿಸಿಕೊಂಡವನೆ 2 ಶ್ರೀದವಿಠಲನ ಸಾಕ್ಷಾತ್ಕರಿಸಿ ಸೇವ್ಯ ಚಿತ್ಸುಖಮಯವಾದುದವನೇ ಧನ್ಯನೆಲಾ 3
--------------
ಶ್ರೀದವಿಠಲರು
ಅವನೆವೆ ದಾನವನು ನೋಡಿರೋ | ಅವನವೇ ದಾನವನು ಪ ದಾವನು ಸಾಕುವ ದೇವರ ಮರೆದು | ಅವಿವೇಕತನದಲಿ ಜೀವಿಸುತಿಹಾ ಅ.ಪ ವಿಷಯದ ಸಂಭ್ರಮದಾ ಸ್ಥಿರಪಟ್ಟಾ | ವಸುಧಿಲಿ ಬಗದಾವಾ | ಆಶನ ವ್ಯಸನದೊಳು ಪಶುವಿನ ಪರಿಯಲಿ | ನಿಶಿದಿನ ಗಳೆವುತ ದೆಶೆಗೆಟ್ಟು ಹೋದಾ 1 ಸಾಧು ಸಂಗಕ ದೂರಾ ಶ್ರವಣದ | ಹಾದಿಗೆಂದಿಗೆ ಬಾರಾ | ಸಾಧಿಸಿ ಕುವಿದ್ಯಾವಾದಾ ಆಟಗಳನು | ಸಾದರ ನೋಡುತಾ ತಾ ದಿನಗಳೆವಾ 2 ಗುರು ಮಹಿಪತಿ ಬೋಧಾ ನಂದನು | ಸಾರಿದನಾ ಹಿತವಾದಾ | ಹರಿನಾಮಾವೆಂದಿಗೆ ಸ್ಮರಿಸು ಮುಖದೊಳು | ನರದೇಹವೆಂಬುದು ಬಾರದು ನೋಡಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅವನೆವೆ ಧನ್ಯ ನೋಡಿ ಅವನ ದರುಶನ ಮಾಡಿ ಪ. ಹರಿಧ್ಯಾನ ಹೃದಯದಲ್ಲಿ | ಹರಿನಾಮ ಜಿವ್ಹದಲಿ | ಹರಿಕಥೆ ಶ್ರವಣದಲ್ಲಿ| ಹರಿಯಾ ಸೇವೆ ಅಂಗದಲ್ಲಿ1 ಹರಿಭಕ್ತಿಯೊಳು ಕೂಡಿ | ಹರಿ ಕೀರ್ತನೆಯ ಮಾಡಿ | ಹರಿ ಪ್ರೇಮ ತುಳಕಾಡಿ | ಹೊರಳುವ ನಲಿದಾಡಿ 2 ತಂದೆ ಮಹಿಪತಿ ದಯಾ ದಿಂದ ಪಡೆದು ವಿಜಯಾ ಹೊಂದುವ ತಿಳಿದು ನೆಲಿಯಾ ಛಂದವಾದಾ ಪುಣ್ಯಕಾಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅವನೆವೆ ಯೋಗ್ಯ ನೋಡಿರೈ ಭಕುತಿಗೆ | ಸಾಯಾಸವಿಲ್ಲದ ಯೈದನವನಿಯೊಳಗ ಮುಕುತಿಗೆ ಪ ನಿತ್ಯ ಶ್ರವಣ ಮಾಡಲೆಂದು ಬ್ಯಾಸರಾ | ಹ್ಯಾವ ಹೆಮ್ಮೆಯಲ್ಲಿ ಕಳಿಯ ವ್ಯರ್ಥವಾಸರಾ | ನೋವ ಮಾಡುತಿರಲು ತಾಪತ್ರಯದ ತೂರಾ | ಬಳಲ ಆವಗಿರುವ ಕೂಡಿಕೊಂಡು ಹರಿಯ ದಾಸರಾ 1 ನ್ಯೂನ ನೋಡದೆ ಪರರ ಸದ್ಗುಣವನೆ ಕೊಂಬನು | ದಂಭ | ಮಾನ ತೊರೆದು ಸ್ತುತಿಯ ನಿಂದ್ಯ ಸರಿಯ ಕಾಂಬನು | ಜ್ಞಾನದಿಂದ ಪಡೆದು ಗುರುಹಿರಿಯರಿಂಬನು | ತ್ವರಿತ | ಸ್ವಾನುಭವದ ಸೌಖ್ಯಸಾರ ಸವಿಯನುಂಬನು 2 ಬಲಿದು ಭಾವನಿಂದ ತಿಳಿದು ಸ್ವಹಿತುಪಾಯನು ದೃಢದಿ | ಹುಲು ಮನಿಜರಿದಿರ ಹೋಗಿ ದೆರಿಯ ಬಾಯನು | ತಳೆದು ವೇಷದಿಂದ ದಣಿಸವಾವ ಕಾಯನು | ಹೃದಯ | ದೊಳನವನ ನಲುವ ಗುರುಮಹಿಪತಿ ಪ್ರೀಯನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು