ಒಟ್ಟು 165 ಕಡೆಗಳಲ್ಲಿ , 47 ದಾಸರು , 145 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲ್ಲ ವಾರ್ತೆಯ ಹೇಳ ಮನ್ನಿಸಿನಮ್ಮ ಫುಲ್ಲನಾಭನ ಗುಣ ವರ್ಣಿಸಿ ದೂತೆ ಪ. ಗೆಜ್ಜೆ ಘಿಲ ಘಿಲಕೆಂದು ಬಂದಳು ದೂತೆಗುಜ್ಜಿ ದ್ರೌಪತಿಗೆರಗಿ ನಿಂತಳುನಮ್ಮ ಅರ್ಜುನಗೆ ಅತಿ ದಯವೆಂದಳು ನಿರ್ಜರೇಶನ ಕಂಡೆನೆಂದಳು1 ಕಳಕಳಿಯ ಸೂಸುತ ತನ್ನ ಥಳ ಥಳ ಮುಖಕಮಲ ಹೊಳೆವುತದೂತೆನಳಿನ ತೋಳಿನ ವಸ್ತ ಝಳ ಝಳಿಸುತಬಂದು ಕುಳಿತಳೆ ಮಾತಿನ ಚಪಲೆ 2 ನಡೆದು ಅಚ್ಯುತನಲ್ಲೆ ಹೋದೆಯಾ ಕೃಷ್ಣನ ಅಡಿಗೆರಗಿ ಮುಖ ನೋಡಿದೆಯನಯ ನುಡಿಯ ಮಾತುಗಳನೆ ಆಡಿದೆಯ ನಿಮ್ಮ ಒಡೆಯರ ಭಕುತಿ ಕೊಂಡಾಡಿದೆಯ ದೂತೆ 3 ಶಾಂತ ಮೂರುತಿ ನಿನ್ನ ನೋಡಿದನೇನಐವರಿಗೆ ಅಂತಃಕರುಣ ಭಾಳ ಮಾಡಿದನೇನಎನ್ನ ಅಂತರಂಗದ ಮಾತು ನುಡಿದೆಯೇನಲಕ್ಷ್ಮಿಕಾಂತನ ಗುಣ ಕೊಂಡಾಡಿದೆಯ ದೂತೆ4 ಎನ್ನ ದ್ರೌಪತಿ ಕಳುಹ್ಯಾಳೆಂದೇನೆ ಸ್ವಾಮಿನಿನ್ನ ಮಾತುಗಳ ಮನಕೆ ತಂದಾನೇನ ಕೃಷ್ಣ ಎನ್ನ ಪ್ರಾಣವು ಐವರದೆಂದನೇನಇನ್ನುದಯದ ಸುಗ್ಗಿ ಸುದ್ದಿ ತಂದೇನ ದೂತೆ 5 ಭಾವೆ ರುಕ್ಮಿಣಿಪಾದ ನೋಡಿದೆಯ ನೀನುಭಾವ ಭಕುತಿಯಲಿ ವಂದನೆ ಮಾಡಿದೆಯ ನಿಮ್ಮ ಮೋಹ ದ್ರೌಪತಿಗಿರಲಂದೆಯ ಮುಯ್ಯಾ ತಾಹೊ ವಿಸ್ತಾರವ ಕೊಂಡಾಡಿದೆಯ 6 ಪಾದ ಕಂಡೆಯಘೃತ ಹಾಲು ಸಕ್ಕರೆ ಸವಿದುಂಡೆಯ ವಸ್ತ್ರ ವೀಳ್ಯ ರಾಮೇಶನಿಂದ ಕೊಂಡೆಯನಿನ್ನ ಕಣ್ಣು ಹಬ್ಬವ ಮಾಡಿಕೊಂಡೇನ ದೂತೆ 7
--------------
ಗಲಗಲಿಅವ್ವನವರು
ಎಷ್ಟು ಜಾಣಳೆ ಸುಭದ್ರಾ ಎಷ್ಟು ಜಾಣಳೆ ನಷ್ಟ ಮಾತು ನಿನ್ನದುನಾವು ಅಷ್ಟು ತಾಳಿಕೊಂಡೆವಲ್ಲ ಪ. ಮಾನ್ಯ ಮಾನ್ಯರೊಳಗೆ ನೀನು ಕನಿ ರುಕ್ಮಿಣಿಗೆಧಿಕವಾಗಿಎನ್ನ ಹೀನ ನುಡಿದು ಹರಿಯ ನೀಬೆನ್ನ ಬಿದ್ದು ಬಂದುಕುಳಿತೆ1 ಫುಲ್ಲ ಮಲ್ಲಿಗಿ ಹಾಂಗಕುಳಿತೆ2 ಅಷ್ಟು ಜನರೊಳಗೆ ಎನಗೆ ನಿಷ್ಠುರವಾಡಿ ಬಹಳ ಕೃಷ್ಣರಾಯರ ಬದಿಲೆ ನೀನುಶ್ರೇಷ್ಠಳಾಗಿ ಬಂದು ಕುಳಿತಿ 3 ನೋಡ ಬಂದ ಜನರೊಳಗೆ ಆಡಿಕೊಂಡಿ ಅಕ್ಕನ ಬಹಳ ಮೂಡಲಗಿರಿವಾಸಗೆ ಮಾರಿ ಬಾಡಧಾಂಗೆ ತೋರಿಕೊಂಡಿ 4 ಮಾನ ಬಿಟ್ಟು ಮಂದಿಯೊಳಗೆ ನಾನಾ ಮಾತು ಎನಗೆ ಆಡದಿನೀನು ರಾಮೇಶನಂಫ್ರಿಯಲಿಮೌನ ದಿಂದ ಬಂದು ಕುಳಿತಿ 5
--------------
ಗಲಗಲಿಅವ್ವನವರು
ಏನು ಸಾಧಿಸುವದೇನರಿದು ಙÁ್ಞನಗಮ್ಯ ಗುರುಮಾರ್ಗದೊರೆಯಲರಿಯದು ಧ್ರುವ ನೀತಿಶಾಸ್ತ್ರವನೋದಿ ಪಂಡಿತನಾಗಲಿಬಹುದು ಶ್ರುತಿ ಸ್ಮøತಿಗಳ ತಿಳಿದು ತರ್ಕಸ್ಯಾಡಲಿಬಹುದು ಅತಿ ಬಲ್ಲತನದಿ ಯತಿಯನಿಸಿಕೊಳ್ಳಲಿಬಹುದು ಕ್ಷಿತಿಯೊಳು ಮೆರೆಯಲಿಬಹುದು ಸುತತ್ವ ಜ್ಞಾನಖೂನ ದೊರೆಯಲರಿಯದು 1 ಗೃಹತ್ಯಾಗಮಾಡಿ ಸಂನ್ಯಾಸಿ ಅಗಲಿಬಹುದು ದೇಹ ದಂಡಿಸಿ ವನವಾಸಿಯಾಗಲಿಬಹುದು ಗುಹ್ಯಗೊಪೆಯಲಿ ಸೇರಿ ತಪಸಿಯೆನಿಸಲಿಬಹುದು ಬಾಹ್ಯನಿಷ್ಠೆಯದೋರಬಹುದು ಸೋಹ್ಯ ಸದ್ಗುರುಮಾರ್ಗ ದೊರೆಯಲರಿಯದು 2 ಹಲವು ಕುಟಿಲದ ವಿದ್ಯವನು ಸಾಧಿಸಲಿಬಹುದು ಜಲದೊಳಗೆ ಮುಳಗಿ ಮಂತ್ರವನು ಜಪಿಸಲಿಬಹುದು ಸೀಲಿ ಸಾಲ್ವಳಿಯ ಸುಶಕುನ ಪೇಳಲಿಬಹುದು ಮ್ಯಾಲೆ ಜನರಂಜಿಸಲಿಬಹುದು ಮೂಲ ಮುಕ್ತಿ ಕೀಲ ತಿಳಿಯಲರಿಯದು 3 ಪೃಥ್ವಿಯನೆ ತಿರುಗಿ ಬಹುಭಾಷೆಯಾಡಲಿಬಹುದು ಮತಿವಂತನಾಗಿ ಕವಿತ್ವಮಾಡಲಿಬಹುದು ಗೀತರಾಗವು ಜಂತ್ರದೊಳು ನುಡಿಸಲಿಬಹುದು ಚದುರಂಗ ಪಗಡ್ಯಾಡಿ ಗೆಲಬಹುದು ಮತ್ತ ಮನ ಬೆರೆವ ಘನಸುಖವು ದೊರೆಯಲರಿಯದು 4 ಶೂರತನದಲಿ ಪರಾಕ್ರಮ ಹಿಡಿಯಲಿಬಹುದು ಧೀರಗುಣದಲಿ ಮಹಾಧೀರನೆನಿಸಲಿಬಹುದು ನೂರ್ಬಲದ ಪೌರುಷಲಿ ರಾಜ್ಯನಾಳಲಿಬಹುದು ಸಿರಿಸೌಖ್ಯದೊಳಿರಲಿಬಹುದು ಸಾರ ಸುಜ್ಞಾನಸುಖ ದೊರೆಯಲರಿಯದು 5 ಪರ್ವತಾಗ್ರದಲೇರಿ ಧರೆಗೆರಗಲಿಬಹುದು ಹರಿವ ನದಿಯನೆ ಹಾರಿ ಹೋಗಲಿಬಹುದು ಮೊರೆವುತಿಹ್ಯ ಸರ್ಪದಾ ವಿಷವು ಧರಿಸಲಿಬಹುದು ಕ್ರೂರ ಮೃಗದೊಳು ತಿರುಗ್ಯಾಡಬಹುದು ಪಥ ದೊರೆಯಲರಿಯದು 6 ಪೊಡವಿಯೊಳು ಹವಲು ವಿದ್ಯವ ಸಾಧಿಸಲುಬಹುದು ಬಡದ ಬವಣಿಯ ಬಟ್ಟು ನಾಡ ಶೋಧಿಸಬಹುದು ಗೂಢ ವಿದ್ಯದ ಮಾತು ಆಡಿ ತೋರಿಸಬಹುದು ಹಿಡಿದು ಮೌನವ ಕೂಡಬಹುದು ಮೂಢಮಹಿಪತಿ ಒಡಿಯನ ಕೃಪೆ ಪಡೆವದೆ ದುರ್ಲಭವು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ರಂಗನ ಮಹಿಮೆಯ ಏನೆಂದ್ಹೇಳಲಿ ಪ ಘನ್ನಸಿರಿವಿಧಿ ಧ್ಯಾನಕೆ ನಿಲುಕದ ಅಗಣಿತ ಮಹಿಮೆಯ ಅ ಎಲ್ಲವ ಬಲ್ಲನು ಎಲ್ಲವ ಮಾಡುವ ಎಲ್ಲರ ಒಡೆಯನು ಇಲ್ಲದ ಸ್ಥಳವಿಲ್ಲ ಬಲ್ಲವರಿಲ್ಲವೆ ಫುಲ್ಲನಾಭನ ನಲ್ಲನು ಲಕ್ಷ್ಮಿಗೆ ಗೊಲ್ಲನು ಆದನೆ 1 ಅಂಗನೆ ಲಕ್ಷ್ಮಿಯ ಸೊಗಸಿಗೆ ನಿಲುಕದ ಅಂಗನೆ ಇಲ್ಲದೆ ಮಗನನು ಪಡೆದವ ಹಿಂಗದ ತಾನೆ ಅಂಗನೆ ಯಾದವ ರಂಗನ ಗೋಕುಲ ಹೆಂಗಳ ಕೂಡಿದನೆ2 ತಂದೆಯ ಕೊಂದನು ಕಂದನ ಸಲಹಿದ ಕಂದನ ಕೊಂದನು ತಂದೆಯ ಸಲಹಿದ ಬಂಧುಗಳೆನ್ನದೆ ಕೊಂದನು ವಂಶವ ತಂದೆಯು ಇಲ್ಲದೆ ಕಂದನು ಆಗುವನೇ 3 ದಾನವ ನೀಡಿದ ದಾನಿಯ ತುಳಿದನು ಮಾನವ ತೆಗೆದಾ ಹೀನನ ಸಲಹಿದ ದೀನರ ಸಲಹುವ ದಾನವರಳಿವನು ಜ್ಞಾನಿಗಮ್ಯನು ಮಾನಸ ಹಂಸನ 4 ಹಸಿವೆಯ ಅರಿಯದ ಅಸಮದೇವನು ಸೊಸಿಯು ನೀಡಿದ ಶಾಖವ ತಿಂದನೆ ಪಶುಪತಿ ಋಷಿಯನು ವಶವಾಗಿ ಮಾಡಿದ ಮಾಸದಮಹಿಮನು 5 ನಾಲ್ಮೊಗನಯ್ಯನು ಸುಳ್ಳನು ಹೇಳುತ ಕಳ್ಳನು ಆದನು ಗೊಲ್ಲರ ಭಕ್ತರಿಗೆ ಮೆಲ್ಲನೆ ಕುರುಕುಲ ಎಲ್ಲವ ಸವರಿದ ಬಲ್ಲಿದ ಕೃಷ್ಣಗÉ ಇಲ್ಲವೆ ಸಮರಧಿಕ 6 ಜಗವನು ಮಾಡುವ ಜಗವನು ಪಾಲಿಪ ಜಗವನು ಅಳಿಸುವ ಮಗುವಾಗಿ ಬಂದನೆ ಜಗಜೀವ ಭಿನ್ನನು ಜಗದೊಳು ವ್ಯಾಪ್ತನು ನಗುತಲಿ ಬಾಯಲಿ ಜಗವನು ತೋರಿದನೆ7 ಯಾಗವ ನಡೆಸಿದ ಯಾಗವ ಕೆಡಿಸಿದ ಯೋಗವ ಚರಿಸುತ ಯೋಗವ ಬೋಧಿಪನೆ ಬಾಗುವ ಭಕ್ತರ ನೀಗುವ ಕಲುಷವ ಆಗಮವಂದಿತ ಸಾಗರಶಯನನೆ8 ಹತ್ತವತಾರವ ನೆತ್ತಿದ ಮಹಿಮನು ಉತ್ತಮ ಭಕುತರ ತೆತ್ತಿಗನಾದನೆ ಬತ್ತಲೆ ಶಿಶುವಾಗಿ ಬಿತ್ತಿದ ಮೋಹವ ಬೆಸ್ತರಕುವರಿಗೆ ಆತ್ಮಜನಾದವನೆ9 ಚಕ್ರವಪಿಡಿದವ ನಕ್ರನ ತರಿದವ ಶಕ್ರನಕಾಯ್ದವ ವಕ್ರೆಯ ಕೂಡಿದನೆ ರಕ್ಕಸಯವನನ ಠಕ್ಕಿಲಿ ಅಳಿಸುತ ಭಕ್ತನಪೊರೆದಾ ಯುಕ್ತಗಳೊಡೆಯನೆ 10 ನಾರೆಂದೊದರಿದ ಉರುತರ ಪಾಪಿಯ ಭರದಿಂಪೊರೆಯೊ ಕರುಣಾಸಾಗರನೆ ನರಹರಿದೇವನು ಪರಿಪರಿರೂಪನು ಪರಿಪರಿಲೀಲೆಗೆ ಮೇರೆಯೆ ಇಲ್ಲಾವೇ 11 ವಾರಿಯಲಾಡುವ ಭಾರವ ಹೊರುವಾ ಕೋರೆಯ ತೀಡುವ ಘೋರವ ತೋರುವನೇ ವೀರರತರಿಯುವ ಕ್ರೂರರಸವರುವ ಜಾರನು ಆಗುವ ವೈರಿಗಳ್ವಂಚಿಪ ಏರುವ ತೇಜಿಯನೆ 12 ಅದ್ಬುತ ರೂಪವ ಕದನದಿ ತೋರಿದ ಬದರಿಯನಿಲಯಗೆ ತುದಿಮೊದಲಿಲ್ಲಾವೆ ಉದರದಿ ಮಗುವನು ಮುದದಿಂಸಲಹಿದ ಮುದಮುನಿ ಪ್ರಿಯನು ಹೃದಯದಿ ವಾಸಿಪನೆ 13 ವಿಷವನು ಕುಡಿದಾ ವೃಷಭವಾಹನ ಅಸುರನ ಭಯದಿಂ ಘಾಸಿಲಿ ಓಡುತಿರೇ ಮೋಸದಿ ಯುವತಿಯ ವೇಷವ ಧರಿಸುತ ಪಶುಪತಿ ಸಲಹಿದನೇ 14 ಭರದಿಂ ರಥವೆತ್ತಿ ನರನಂ ಕಾಯ್ದನು ಧರಣಿಯ ಒತ್ತುತ ಕುರುಪನ ಕೆಡಹಿದನೇ ಮರೆಸುತ ರವಿಯನು ಪೊರೆದನು ಚೇಲನ ಸುರವರಪೋಷಕ ಸಿರಿಪತಿ ಚದುರನ 15 ಗಂಗೆಯಪಡೆದ ಮಂಗಳ ಮಹಿಮನು ಹಿಂಗದೆ ಗೋಪರ ಸಂಗಡ ಆಡಿದನೇ ತಿಂಗಳ ಬೆಳಕಲಿ ಶೃಂಗರ ಸೊಬಗನು ಹೆಂಗಳ ಕೂಡುತ ಸಂಗೀತ ಪಾಡಿದನೆ 16 ಕಾಳಿಯ ಫಣೆಯಲಿ ಕಾಳಿಂದೀಶನು ತಾಳಕೆ ಕುಣಿಯುತ ಕೊಳಲನ್ನೂದಿದನೆ ಘೂಳಿಗಳಳಿಯುತ ನೀಲಳತಂದವ ಊಳಿಗ ಮಾಡಿದನೇ 17 ನಾರಿಯು ಮೊರೆಯಿಡೆ ಸೀರೆಯನೀಡಿದ ವಾರಿಜಾಕ್ಷನು ಸೀರೆಯ ಚೋರನೆ ನೀರೊಳು ಮುಳುಗಿದ ಪೋರರಿಗೆಲ್ಲ ತೋರಿದ ಜಗವನು ಸೂರಿಗಳೊಡೆಯನೆ 18 ಗರುಡನ ಏರುವ ಧರಣಿಯ ರಮಣನು ಏರುತಹುಡುಗರ ತುರುಗಳ ಕಾಯ್ದನೆ ಮಾರನಪಡೆದ ಮುರಹರಕೃಷ್ಣನು ಗಿರಿಯನು ಎತ್ತುತ ಹರುಷವ ಬೀರಿದನೇ 19 ಶೃತಿಗಳು ಪೊಗಳುವ ವ್ಯಾಪ್ತನ ನಿತ್ಯನ ಪಾತಕ ಹೋಗುವುದೇ ಅಂತಕ ಗತಿ ಮತಿ ಪ್ರೇರಕ ದಾತನು ಎಂತೆನೆ ಪ್ರೀತಿಲಿ ಸಲಹುವನೆ 20 ಮಜ್ಜಿಗೆ ಕಡೆಯುವ ರಜ್ಜುವಿನಿಂದಲಿ ಮೂರ್ಜಗನಯ್ಯನು ಕಟ್ಟಿಸಿಕೊಂಡಾನೆ ಲಜ್ಜೆಯ ಬಿಡುತಲಿ ಗೆಜ್ಜೆಯ ಕಟ್ಟುತ ಘರ್ಜಿಸಿ ಪಾಡಲು ಹೆಜ್ಜೆಯ ತೋರುವನೆ 21 ದಾಸರ ಪೋಷಿಪ ಶೇಷಗಿರೀಶನ ವಿಶೇಷವೆ ಬಣ್ಣಿಸೆ ಶೇಷಗೆ ಆಗದೆ ದೋಷವು ಇಲ್ಲದ ವಾಸುದೇವನೆ ತೋಷವ ನೀಡುವ ಸಾಸಿರ ನಾಮಕನೆ22 ಜಯಮುನಿ ಅಂತರ ವಾಯುವಿನಲ್ಲಿಹ ಜಯಕೃಷ್ಣವಿಠಲನು ಜೀಯನೆ ಜಗಕೆಲ್ಲ ನಯಭಯದಿಂದಲಿ ಹಯಮುಖನೊಲಿಸಲು ಭಯವನು ಹರಿಸುತ ನ್ಯಾಯದಿ ಪಾಲಿಪನೇ 23
--------------
ಕೃಷ್ಣವಿಠಲದಾಸರು
ಏಳು ಚೆನ್ನಿಗರಾಯ ನನ್ನೀನಾಗರ ಏಳು ಪ. ಏಳೆನ್ನ ಕಣ್ಮಣಿಯೇ ಕಾಳಿಮರ್ಧನಕೃಷ್ಣ ಅ.ಪ. ಮಾರನೆಯ ದಿನದಲ್ಲಿ ನೀ ಹಾರುತ್ಯಾರುತ ಬಂದು ಸೀರೆ ಸೆರಗನು ಪಿಡಿದು ಬೆಲ್ಲವನು ಬೇಡಲು ಕೇಳಿಕೊಳ್ಳವುದೇಕೆ ಹಗಲುಗಳ್ಳನೆ ಹೋಗು ಒಳಿತು ಚೋರರಿಗೆಲ್ಲ ಕೇಳಿ ಕೊಳಲೆಂದೆ 1 ಚೋರ ನೀನೆಂದುದಕ್ಕೆ ಈ ಸೀರೆಯನು ಜರಿವರೇ ಚೋರನಲ್ಲವೇ ನೀನು ಮಧ್ವರ ಹೃದಯ ಕದ್ದ 2 ಜಾರ ನೀನೆಂದುದಕೆ ಕರೆಕರೆಗೊಳಿಸುವರೆ ಜಾರೆಯಾಸಹುದು ನೀನಲ್ಲ ಜಾರರಮಣ 3 ಕಂಡದನು ಆಡಿದರೆ ಕಡುಕೋಪವ್ಯಾತಕೆ ಹಿಂಡು ಗೋವಳಲೊಡೆಯ ಪುಂಡನೀನಹುದು 4 ಮಜ್ಜನವ ಮಾಡಿಸುವೆ ಸುಳಿಗುರುಳ ತಿದ್ದುವೆ ಸಜ್ಜಾದ ಚಂದನದ ಚಂದ್ರಮನ ಫಣಿಯಲಿಡುವೆ 5 ಗೊಲ್ಲಬಾಲರು ಈಗ ಕರೆಯಲು ಬರುವರು ಮೆಲ್ಲಗೆ ಎದ್ದು ನೀ ಬೆಲ್ಲವನು ಮೆಲ್ವ ಬಾಲಕೃಷ್ಣ 6 ಮಧ್ವೇಶ ನೀನೇಳು ಮುದ್ದು ಮೊಗದವನೆ ಏಳು ಹದ್ದುವಾಹನ ಏಳೂ ಹಾಲಕುಡಿಯೇಳು 7 ಹಾಲು ಬೆಲ್ಲವ ಸವೆದು ಸುಧೆಯನು ಸುರಿಸೇಳೋ ಪಾಲಗಡಲ ಶಯನ ಶಯನದಿಂದೇಳೋ 8 ಮುನಿಸು ಏಕೇಕೆ ರಮಣ ಮುಸುಕನು ತೆಗೆದೇಳು ತಿನಿಸು ತಿಂಡಿಯ ಕೊಡುವೆ ತನಿವಣ್ಣ ಕೊಡುವೆ 9 ಚಿನ್ನದಾ ಒಂಟೆಳೆಯ ರನ್ನಧಾಭರಣ ಭಿನ್ನ ಭಿನ್ನವಾದ ಆಭರಣಗಳಿಡುವೆ ಕೃಷ್ಣ 10 ಹೆಚ್ಚೇನು ಪೇಳಲಿ ಮಗಸಾಮ್ರಾಜ್ಯದ ದೊರೆತನವು ನಿನ್ನದೊ ಸ್ವಚ್ಚಾಗಿ ಹೇಳುವೆನು ಫಲಿಸೇಳು ಕೃಷ್ಣಾ 11 ಬಾಧಿಸದೆ ಜಾಗವನು ಬಿಟ್ಟೇಳೊ 12 ಏನು ಬಯಸಿದ ಕೊಡುವೆ ಮನಬಯಕೆ ಪೂರೈಸೊ ಮನದನ್ನನೇ ಎನ್ನ ಕಾಳಿಮರ್ಧನಕೃಷ್ಣ 13
--------------
ಕಳಸದ ಸುಂದರಮ್ಮ
ಏಳುತಲಿ ಎದ್ದು ಎಚ್ಚರಿಸುತ ನೀ ನೆನೆಯೊ | ಪಾಲಿಸುವ ಮೂಲೋಕ ಪರಮಾತ್ಮನಾ ಪ ಮೂರೊಂದು ಪದರದ ಚೀಲದೊಳು ಥಳಥಳಸಿ ದೋರುತಿಹ ರತ್ನ ಪರಿಚಿದ್ರೂಪನಾ | ಅರಿಗಳ ವಡೆದ ಘನ ತ್ರಿವೇಣಿ ತೀರದಲಿಹ | ಧೀರಯೋಗಿಯ ಕಂಗಳಾನಂದನ 1 ಬೇರು ಮೇಲಾಗಿ ಕೊಂಬುಗಳು ಕೆಳಗಾದ ಸಂ | ಸಾರ ವೃಕ್ಷವ ತ್ರಿಗುಣಮಯದಿಂದಲಿ || ವಾರಿಜಭವಾಂಡ ಪಿಂಡಾಂಡಗಳ ಪರಿಪರಿಯ | ತೋರಿ ತೋರದಲಿಪ್ಪ ನಿರ್ಲಿಪ್ತನಾ2 ನೋಡಿಸುವ ಕೇಳಿಸುವ ವಾಸಿಸುವ ಪರಿಮಳವ | ಆಡಿಸುವ ಕರಚರಣ ನುಡಿನುಡಿಸುವ | ರೂಢಿಯೊಳು ಸೂತ್ರಧಾರಕನಾಗಿ ಅಷ್ಟದಳದ | ಲಾಡುತಿಹ ಮಹೀಪತಿ ಸುತಪ್ರಭು ಭಕುತಿಯಲಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಒಂದು ದಿನ ನಾರದಮುನಿ ಗೋಕುಲದಿ ಇಂದಿರೇಶನ ಲೀಲೆಯಾ ನಿಂದು ನಭದಲಿ ನೋಡುತಾ | ಮೈಯುಬ್ಬಿ ಬಂದನಾ ವೈಕುಂಠಕೆ 1 ಸಿರಿದೇವಿ ಸಖಿಯರೊಡನೆ | ವನದಲ್ಲಿ ಪರಿಪರಿಯ ಕ್ರೀಡೆಯೊಳಿರೇ ಅರವಿಂದ ನಯನೆಯನ್ನೂ | ಕಂಡನಾ ಸುರಮುನಿಯು ಸಂಭ್ರಮದಲೀ 2 ಜಗನ್ಮೋಹನಾಕಾರಳೂ | ಶ್ರೀ ಹರಿಯ ಜಗ ಸೃಷ್ಟಿಗನುಕೂಲಳೂ ಬಗೆ ಬಗೆಯವತಾರಳೂ | ಕ್ಷಣ ಹರಿಯ ಅಗಲದಂತಿರುತಿಪ್ಪಳೂ 3 ಹರಿಗೆ ಗುಣದಿಂ ಕಿರಿಯಳೂ | ಮತ್ತೆಲ್ಲ ಪರಿಯಲ್ಲಿ ಹರಿಗೆ ಸಮಳೂ ಶರಣೆಂದವರ ಕಾಯ್ವಳೂ | ಬೊಮ್ಮಾದಿ ಸುರರ ಸೃಜಿಸುವ ಶಕ್ತಳೂ 4 ನಾಕ ಸ್ತ್ರೀಯರನೆ ಕೂಡೀ | ವನದಲ್ಲಿ ಲೋಕನಾಯಕಿ ರಮಿಸುತಾ ಶ್ರೀಕಾಂತನಗಲದವಳೂ | ಮುನಿಗೆ ತ ನ್ನೇಕರೂಪವ ತೋರ್ದಳೂ 5 ನೊಡಿ ನಮಿಸಿದನು ಸಿರಿಯಾ | ಹರಿಗುಣವ ಹಾಡಿ ಪಾಡಿದನು ಮೈಯ್ಯಾ ಮೂಡೆ ರೋಮಾಂಚ ಕೈಯ್ಯಾ | ಮುಗಿಯುತಲಿ ನೋಡಿದನು ಸಿರಿಯ ದಣಿಯಾ 6 ಪಲ್ಲವಾಧರೆ ನಗುತಲಿ | ತನ್ನ ಕರ ಪಲ್ಲವದಿ ಕೃಪೆಯ ಮಾಡೀ ಎಲ್ಲಿಂದ ಬಂದೆ ಮುನಿಪಾ ವಿಷಯವೇ ನೆಲ್ಲ ಪೇಳೆಂದೆನ್ನಲೂ 7 ಏನ ಪೇಳುವೆನೆ ತಾಯೆ | ನಿನ ಪತಿಯ ನಾನಾ ವಿಧ ಚರ್ಯೆಗಳನೂ ನಾನರಿಯಲಾರೆ ನಮ್ಮಾ | ನವನೀತ ಚೋರನಾಗಿರುವನಮ್ಮಾ 8 ನಾಕ ಭೂಲೋಕ ತಿರುಗೀ | ಭುವಿಯೊಳಗೆ ನಾ ಕಂಡೆ ಗೋಕುಲವನೂ ಹೇ ಕಮಲೆ ಕೇಳು ಅಲ್ಲೀ | ನಿನ ಪತಿಯು ಆಕಳಾ ಕಾಯುತಿಹನೂ 9 ಬಿಟ್ಟು ವೈಕುಂಠವನ್ನೂ | ಪ್ರಾಯ ಸತಿ ದಿಟ್ಟೆ ನಿನ್ನನು ತೊರೆದನೂ ಹುಟ್ಟಿ ಗೊಲ್ಲರ ಕುಲದಲೀ | ಬೆರತನಾ ಕೆಟ್ಟ ಹೆಂಗಳೆಯರಲ್ಲಿ 10 ನಳಿನಜಾಂಡವ ಸಾಕುವಾ | ಜಗದೀಶÀ ಗೋಪಿ ಬೈ ಗಳನು ತಾ ಕೇಳುತಿಹನೂ 11 ಮದನಮೋಹನರೂಪನೂ | ಗೊಲ್ಲತೆರ ಅಧರಾಮೃತವ ಸವಿವನೂ ಎದೆ ಗಂಟು ಪಿಡಿಯುತಿಹನೂ | ಚಂಡೆಂದು ಗದರಿಸಲು ನುಡಿಯುತಿಹನೂ 12 ಸಂಪೂರ್ಣ ಕಾಮ ತಾನು | ವನದಲ್ಲಿ ಗುಂಪು ಸ್ತ್ರೀಯರ ಕೂಡ್ವನೂ ಸಂಪನ್ನ ಭೋಗಿಸುವನೂ | ಕೊಳಲ ಪಿಡಿ ದಿಂಪುಗಾನವ ಗೈವನೂ 13 ವನದ ಸೊಬಗೇನುಸುರುವೇ | ಶ್ರೀರಮಣಿ ದನಕರುವ ಕಾಯುತ್ಹರಿಯಾ ವನವನವ ತಿರುಗುತ್ತಿರೇ | ಕೊಳಲ ಧ್ವನಿ ವನವೆಲ್ಲ ತುಂಬಿರುತಿರೇ 14 ತಿಳಿಯುದಕ ಯಮುನೆ ಮಳಲು | ದಿಣ್ಣೆಯಲಿ ಕೊಳಲೂದೆ ಹರಿ ಕೇಳಲೂ ಮೊಳೆತವಾ ಬಂಜೆ ಮೋಟೂ | ಮೃಗಪಕ್ಷಿ ಕುಳಿತು ಮೈಮರೆತು ಕೇಳೇ 15 ಓಡಿ ಬರುತಲಿ ತುರುಗಳೂ | ಬಾಲವ ಲ್ಲಾಡಿಸದೆ ಕಣ್ಣುಮುಚ್ಚಿ ಮಾಡಿಟ್ಟ ಪ್ರತಿಮೆಯಂತೆ | ಕಾಣುತಿರೆ ಆಡಿಸದೆ ಸರ್ಪ ಹೆಡೆಯಾ 16 ಶೃಂಗಾರ ಕೊಳಲನೂದೆ | ಜಡ ಚೇತ ನಂಗಳಾಗುತ ಚಿಗುರಲೂ ಅಂಗ ಮರೆಯುತ ಜೀವಿಗಳ್ | ಜಡದಂತೆ ಕಂಗಳನುಮುಚ್ಚಿನಿಲ್ಲೆ 17 ಅಷ್ಟ ಐಶ್ವೈರ್ಯದಾತಾ | ನಾರಿಯರ ತುಷ್ಟಿಪಡಿಸುತಲಿ ಖ್ಯಾತಾ ಶಿಷ್ಟ ಜನರನು ಪೊರೆಯುತಾ | ರಕ್ಕಸರÀ ಹುಟ್ಟಡಗಿಸುವನು ವಿಹಿತಾ 18 ಪೇಳಲಳವಲ್ಲವಮ್ಮಾ | ಶ್ರೀ ಹರಿಯ ಲೀಲೆ ಜಾಲಗಳ ಬ್ರಹ್ಮಾ ನೀಲಗಳರರಿಯರಮ್ಮಾ | ಆನಂದ ತಾಳಿದೆನು ಕೇಳೆ ರಮ್ಮಾ 19 ಇಷ್ಟು ಗೋಕುಲದಿ ನೋಡೀ | ಕಾಣದಿ ನ್ನೆಷ್ಟೋ ಎನ್ನುತಲಿ ಪಾಡೀ ಗುಟ್ಟು ಪೇಳಲು ಬಂದೆನೂ | ಸಿರಿದೇವಿ ಸಿಟ್ಟಾಗಬೇಡವಿನ್ನೂ 20 ಪರನಾರಿಯರ ಬೆರೆಯುತಾ | ಶ್ರೀ ಕೃಷ್ಣ ಮರೆತು ನಿನ್ನನು ಸುಖಿಸುತಾ ಪರಿ ಯೊಚಿಸಮ್ಮಾ | ಆಜ್ಞೆ ಕೊಡು ತ್ವರಿತದಲಿ ಪೋಪೆನಮ್ಮಾ 21 ಹರಿಚÀರ್ಯವೆಲ್ಲ ಕೇಳಿ | ಶ್ರೀ ತರುಣಿ ಪರಮ ಆನಂದ ತಾಳೀ ಬೆರಗಾದ ಪರಿತೋರುತಾ | ಮುನಿವರಗೆ ಪರಿ ಏನು ಮುಂದೆ ಎನಲೂ 22 ಸನ್ನುತಾಂಗನ ಕೂಡಲೂ | ಭೂತಳದಿ ಇನ್ನೇನುಪಾಯವೆನಲೂ ಪನ್ನಂಗ ವೇಣಿ ಉದಿಸೂ | ಭೀಷ್ಮಕಗೆ ಇನ್ನು ನೀ ಕುವರಿ ಎನಿಸೂ 23 ಎಂತೆಂತು ಹರಿಯಚರ್ಯೆ | ಸಿರಿಕಾಂತೆ ಅಂತಂತು ನಿನ್ನ ಚರ್ಯೆ ಸಂತೋಷಪಡಿಸಿ ಎಮ್ಮಾ | ಸಲಹಮ್ಮ ಶಾಂತೆ ನಾ ಪೋಪೆನಮ್ಮಾ 24 ಮತ್ತೊಮ್ಮೆ ನೋಳ್ಪೆನೆಂದೂ | ಗೋಕುಲದ ಹತ್ತಿರದಿ ನಭದಿ ನಿಂದೂ ಸುತ್ತು ಮುತ್ತಲೂ ನೊಡಲೂ | ಸಿರಿದೇವಿ ವ್ಯಾಪ್ತಳಾಗಲ್ಲಿ ಇರಲೂ 25 ವನದಿ ಹರಿವಕ್ಷದಲ್ಲೀ | ಸಿರಿದೇವಿ ಘನ ವೇಣೂರೂಪದಲ್ಲೀ ವನಲಕ್ಷ್ಮೀರೂಪದಲ್ಲೀ | ಗೋಪಿಯರ ಪ್ರಣಯ ಪ್ರಕಾಶದಲ್ಲೀ 26 ಎಲ್ಲೆಲ್ಲಿ ಸೌಂದರ್ಯವೋ | ಉಲ್ಲಾಸ ಎಲ್ಲೆಲ್ಲಿ ವೈಭವಗಳೋ ಎಲ್ಲೆಲ್ಲಿ ಹರಿಲೀಲೆಯೋ | ಸಿರಿದೇವಿ ಅಲ್ಲಲ್ಲಿ ತಾನಿರುತಿರೆ 27 ಸಿರಿ ಹರಿಯ ಚರಿಯ ನೊಡಿದ ಪ್ರತಾಪಾ ಧರೆಗಿಳಿದು ನಮಿಸಿ ನಿಂದಾ | ಕ್ಷಮಿಸೆಂದು ಸಿರಿ ಹರಿಗೆ ಸ್ತೋತ್ರಗೈದಾ 28 ಸಿರಿಹರಿ ವಿಯೋಗವಿಲ್ಲಾ | ಆವಾವÀ ಕಾಲ ದೇಶದಲ್ಲೀ ಅರಿಯದಜ್ಞಾನ ನುಡಿಯಾ | ಮನ್ನಿಸೋ ಮಾಯಾ 29 ಜಯ ಜಯತು ಸುರವಂದ್ಯನೇ ಜಯ ಜಯತು ದುಷ್ಟಹರಣ | ಗುಣ ಪೂರ್ಣ ಜಯ ಜಯತು ಶಿಷ್ಟ ಶರಣಾ30 ಸ್ತುತಿಸುತಂಬರಕಡರಿದಾ | ಸುರಮುನಿಪ ಚ್ಯುತದೂರನತಿ ವಿನೋದಾ ಪತಿತರನು ಕಾಯ್ವ ಮೋದಾ | ಸುಖತೀರ್ಥ ಯತಿಗೊಲಿದು ಉಡುಪಿಲ್ನಿಂದಾ 31 ಆಪಾರ ಮಹಿಮ ಶೀಲಾ | ಸರ್ವೇಶ ಗೋಪಿಕಾ ಜನ ವಿಲೋಲಾ ಆಪನ್ನ ಜನರ ಪಾಲ | ಗುರುಬಿಂಬ ಗೋಪಾಲಕೃಷ್ಣವಿಠಲಾ 32
--------------
ಅಂಬಾಬಾಯಿ
ಒಲ್ಲೆನವ್ವಾ ಲಕುಮಿಯ ನಲ್ಲ ಬಾರದಿದ್ದರೆತನುಹೊರೆಯನೊಲ್ಲೆನವ್ವಾ ಪ ಭಾರ ಹುವ್ವಿನಭಾರ ಸೈರಿಸಲಾರೆನೆಮಾರನಯ್ಯನು ಬಾರದಿದ್ದರೆಮಾರನಂಬಿಗೆ ಗುರಿಯ ಮಾಡಿ 1 ಎಲ್ಲ ದೇವರ ವಲ್ಲಭನೆಂದುಒಲಿದ ಮನ ನಿಲ್ಲದೆನಿಲ್ಲದೆ ರಂಗ ಪೋದ ಮಧುರೆಗೆಬಿಲ್ಲ ಹಬ್ಬದ ನೆವನ ಮಾಡಿ 2 ಮಂದಾನಿಲನ ಸಹಿಸಲಾಗದುನೊಂದೆ ಶುಕಪಿಕ ರವಗಳಿಂದಚಂದ್ರಕಿರಣದಿ ಬೆಂದೆ ಇನ್ನೀವೃಂದಾವನವೇಕನನಗಲಿ 3 ಮುನ್ನ ಆಡಿದ ಮಾತ ಮರೆತುಎನ್ನ ಮನದೊಳಗೀಡಾಡಿವನ್ನಜಾಕ್ಷನು ಬಾರ ಪುರದವನ್ನಿತೆಯರನು ಮೆಚ್ಚಿ ಪೋದ 4 ಪೊಂಗೊಳಲ ಧ್ವನಿಗೆ ಸಿಲುಕಿಭಂಗಗೆಟ್ಟೆನಂಗಜನಿಂದಲಿಪೆಂಗಳಿಗುಚಿತವಲ್ಲ ಇದುರಂಗವಿಠಲನ ತೋರದಿದ್ದಡೆ 5
--------------
ಶ್ರೀಪಾದರಾಜರು
ಕಣ್ಣಿನಾಕರಿರಟ್ಟ ಸುಟ್ಟುಬೂದಿಯ ಮಾಡಿ ನಿನ್ನ ಈಕ್ಷಿಪ ಶುಭ್ರ ದೃಷ್ಟಿಯ ನೀಡೊ ಪ ಪುಣ್ಯಪುರುಷನೆ ಬಿಂಬಪೂರ್ಣ ಮಂಗಳ ಶೌರಿ ಧನ್ಯ ಮಾಡೆನ್ನ ಮುನ್ನ ನಿಲ್ಲಲಿ ಸÉಳಿಯೊ ಅ.ಪ ವಿಷಯಸುಖ ದುರ್ಗುಣದ ಪಂಕದಲಿ ಮನನೆನೆದು ವಿಷಕ್ರಿಮಿಯಂತಿಹದೊ ಇದಕೆ ಮದ್ದು ಸನ್ನುತ ಹರಿಯೆ ವಿರಜ ಮಾಡೊ ಮನವ 1 ಭಾವಸೂತ್ರಗಳಿಂದ ವಿಧಿಭವರೆ ಮೊದಲಾದ ಜೀವರನು ಆಡಿಸುವ ಶ್ರೀಶ ಎನ್ನ ಪಾವನ್ನ ಗುಣನಿಧಿಯೆ ಶ್ರೀ ವೇಣುಗೋಪಾಲ ದೇವ ಅಜಮಿಳಪಾಲ ಪೂತ ಭಾವದಿ ನಿಲಿಸೊ 2 ಕಾತುರವಪಡುತಿಹೆನೊ ಅಸುರಕರ್ಮದಿ ಸಿಕ್ಕಿ ಪಾತಕಿಗಳ ಸಹವಾಸ ಬಿಡಿಸಿ ಕಾಯೊ ಆತುಮಕೆ ಅತಿಮಿತ್ರ ಜಯೇಶವಿಠಲ ನಿನ್ನೊಲುಮೆಪಾತ್ರರಲಿ ಇಟ್ಟೆನ್ನ ಕಾಪಾಡು 3
--------------
ಜಯೇಶವಿಠಲ
ಕದನ ಕಠೋರಿ ಬಂದುಕಾಲುಕೆದರ ಬ್ಯಾಡ ಮದನನ ಮಾತಿಗೆ ಇದುರೇನ ಎಲ್ಲ ನೀ ನೋಡ ಪ. ಓಡಿ ಬಂದವಳೆಂದು ಆಡಿದೆ ನೀ ಎನಗೆತಿರುಗಿ ಆಡಿದಲ್ಲೆ ಏನೂ ಹುರುಳಿಲ್ಲ ಎಲೆ ನೋಡೆತಿರುಗಿ ಆಡಿದಲ್ಲೆ ಏನೂ ಹುರುಳಿಲ್ಲ ಸುಭದ್ರ ನೋಡಿಕೋನಿನ ಮನದಲ್ಲೆ ಎಲ್ಲ ನೋಡೆ1 ಅಣ್ಣನ ವಂಚಿಸಿ ಓಡಿ ಬಂದವಳೆಂದುಎನ್ನನೆ ನುಡಿದೆ ಸುಭದ್ರಾ ಎಲೆ ನೋಡೆಎನ್ನನೆ ನುಡಿದೆ ಸುಭದ್ರಾನಿನ್ನಂತೆ ಸನ್ಯಾಸಿಯೊಡನೆ ಬರಲಿಲ್ಲ ಎಲ್ಲಿ ನೋಡೆ2 ಅತ್ತೆಯ ಮಗಳೆಂದು ಹತ್ತೆಂಟು ತಾಳಿದೆ ಒಂದುತ್ತರ ನಿನಗೆ ಕೊಡತೇನ ಎಲೆ ನೋಡೆಒಂದುತ್ತರ ನಿನಗೆ ಕೊಡತೇನ ಸುಭದ್ರಾಚಿತ್ತಕ್ಕೆ ಹೋಗಿ ನಡುವಂತೆ ಎಲೆ ನೋಡೆ 3 ಒಂದು ನುಡಿದು ಹನ್ನೊಂದು ನುಡಿಸಿಕೊಂಡೆಕುಂದದಂಥsÀವಳೆ ನಿನ್ನ ಬಣ್ಣ ಎಲೆ ನೋಡೆಕುಂದದಂಥsÀವಳೆ ನಿನ್ನ ಬಣ್ಣ ಸುಭದ್ರಾಬಂದದಾರಿ ಹಿಡಿದು ತಿರುಗಿ ಹೋಗೆ 4 ಬಾಳುವರ ಮನೆ ಮುಂದೆ ಕೋಳಿ ಕೂಗಿದಂತೆವೀಳ್ಯವ ಕೊಟ್ಟು ಯಾತರಿಂದ ಎಲೆನೋಡೆವೀಳ್ಯವ ಕೊಟ್ಟು ಯಾತರಿಂದ ಹೊಡೆಸಿಕೊಂಡಿನಿಲ್ಲದೆ ಹೋಗೆ ಮನೆತನಕ ಎಲೆ ನೋಡೆ 5 ಕುದುರೆಯ ಸಂಗಡ ಕುರಿ ಹುಲ್ಲು ಮೆಯ್ದರೆಕುದುರೆ ಹಿಂಗಾಲಿಲೆ ಒದೆಯದೆ ಎಲೆ ನೋಡೆಕುದುರೆ ಹಿಂಗಾಲಿಲೆ ಒದೆಯದೆ ಸುಭದ್ರಾಸುದತೆ ರುಕ್ಮಿಣಿಗೆ ಸರಿಯೇನೆ ನೋಡೆ6 ಆನೆಯ ಸಂಗಡ ಆಡು ಹುಲ್ಲು ಮೆಯ್ದೆರೆ ಆನೆ ಹಿಂಗಾಲಿಲೆ ಒದೆಯದೆ ಎಲೆ ನೋಡೆಆನೆ ಹಿಂಗಾಲಿಲೆ ಒದೆಯದೆ ಸುಭದ್ರಾನೀ ರಾಮೇಶನ ಮಡದಿಯ ಸರಿಯೇನೆ ಎಲೆ ನೋಡೆ 7
--------------
ಗಲಗಲಿಅವ್ವನವರು
ಕಲಿರಾಯ ಬಂದಿಹನು ಕಾಣಿಕೆಯ ಪಿಡಿದು ಚೆಲುವಿನಿಂದನುಸರಿಸಿ ಕುಲವನುದ್ಧರಿಸಿ ಪ ಮೂರು ಯುಗದೊಳು ತಾನು ಸೇರಿಕೊಂಡನು ವನವ ಚೋರರಾಯರ ಸಂಗ ಬೇಡವೆನುತ ವೀರನಾಗಿಯೆ ಬಂದ ನಾಲ್ಕನೆಯ ಯುಗದೊಳಗೆ ಸಾರಿ ಬನ್ನಿರೊ ನಮ್ಮ ದೊರೆಯ ಮನ್ನಿಸಲು 1 ಮದಮುಖರ ಕಾಣುತಲೆ ಮುದದಿಂದ ಮನ್ನಿಸುತ ಕದನಕರ್ಕಶರನ್ನು ಕಾಮಿಸುವನು ಒದಗಿದನ್ಯಾಯಗಳನೊಲಿಸಿಕೊಂಬನು ತಾನು ಬೆದರಿಕೆಯು ಬೇಡ ನೀವಿದಿರುಗೊಳ ಬನ್ನಿ 2 ಸತ್ಯವೆಂಬುದನೆಲ್ಲ ಹತ್ತಿಸಿದ ಬೆಟ್ಟವನು ಮಿಥ್ಯ ನಿರ್ಮಳಕೆಲ್ಲ ಕುತ್ತಿಗೆಗೆ ಬಂತು ಒತ್ತಿಯಾಳುವ ಧರ್ಮ ಸತ್ತು ಹೋದನು ಹಿಂದೆ ಮೃತ್ಯು ಭಯ ನಮಗಿಲ್ಲ ಹತ್ತಿರಕೆ ಬನ್ನಿ 3 ತಪ್ಪಿ ಹೋಯಿತು ಶಾಸ್ತ್ರ ತಪ್ಪಾಯ್ತು ಪೌರಾಣ ಮುಪ್ಪು ಬಂದುದು ವೇದ ಕಪ್ಪಾದನಗ್ನಿ ತುಪ್ಪನ್ನ ಬೇಡವಗೆ ಇಪ್ಪ ಭಯಗಳು ಹೋಯ್ತು ಒಪ್ಪಿ ಕಾಣಿಸಿಕೊಂಡು ಸುಖಿಯಪ್ಪ ಬನ್ನಿ 4 ಸ್ನಾನವೆಂಬುದು ಯೆಲ್ಲ ಮಾನಿನಿಯ ಅಡಿಗೆಯೊಳು ಮೌನ ಜಪಗಳನೆಲ್ಲ ಕೃಷಿಕೊಂಡನು ಹಾನಿಯಾದರು ಯಜ್ಞಹೀನರಾದರು ಪಿತೃಗ ಳೇನ ಮಾಡುವರಿವರು ಅನುಮಾನ ಬೇಡೆನುತ 5 ದಯಯೆನಿಪವನು ಹೋಗಿ ಕೊಯ್ಸಿಕೊಂಡನು ಕೊರಳ ಭಯವಿಲ್ಲ ಹಿರಿಯರೂ ವ್ಯಯವ ಸೇರಿದರು ನಯನೀತಿ ಹೇಳುತಿಹ ಗುರುವಿನೊಳು ಕಣ್ಣಿಲ ್ಲ ಜಯವಾಯ್ತು ದೇಶದೊಳು ಹೊಯ್ಸಿ ಡಂಗುರುವ 6 ಶಿವನು ದುರ್ಗವ ಬಲಿದ ಜವನು ದಂಡವನಿಟ್ಟ ಬವಣೆಬಡುವನು ಕಮಲಭವನು ತನ್ನೊಳಗೆ ಹವಣನರಿಯದೆ ವಿಷ್ಣು ತವಕಿಸುವ ಮನದೊಳಗೆ ಕವಲು ಮನ ಬೇಡಿರಲು ಬಹುದು ಇವನೊಳಗೆ 7 ಪತಿಯ ಮರೆತಳು ಸತಿಯು ಸುತ ಮತಿಯ ತಪ್ಪಿದನು ಯತಿ ಸತತ ಮನದೊಳಗೆ ಖತಿಗೊಂಬನು ಚತುರವರ್ಣಾಶ್ರಮವ ಜೊತೆಯಾಗಿ ನಡೆಸುತಿಹ ಮತಿಯುತನು ದೃಢವೆಂದು ಕಾಯವನುಸರಿಸಿ8 ತಾಯಿ ತಂದೆಯ ಕೊಂದು ಜೀವ ಹಾನಿಯ ಮಾಡಿ ಬಾಯ ಹೊಯ್ದರು ಕೇಳ ಬಡವರನ್ನು ಮಾಯವಾದಿಯ ಮಾತು ಕೂಡಿಸುವ ಜೀವವನು ರಾಯರಾಯರ ಮುಂದೆ ನಡೆಸುತ್ತಲಿಹರು 9 ಆಡಿಗಾರರ ತಂದು ನಾಡ ಊಳಿಗಕಿಡುವ ನೋಡಿದನ್ಯಾಯ ಮಾತುಗಳ ಹಿಡಿತರುವನು ಕೂಡಿಸುವ ಜೀವವನು ಎಳೆನೀರು ಸಕ್ಕರೆಯು ಬೇಡಿದಿಷ್ಟಾರ್ಥದೊಳು ನೋಡಿ ನಡೆಸುವನು 10 ಕೆಟ್ಟನೀತಿಯ ಒಳಗೆಯಿಟ್ಟುಕೊಂಡರೆ ನಿಮ್ಮ ಗಟ್ಟಿಬಡಿಸುವ ದೊರೆಯು ದೃಷ್ಟಿಯಲಿ ನೋಡ ಕಷ್ಟವಿಲ್ಲದೆ ಸುಖದಿ ಹೊಟ್ಟೆಯನು ಹೊರಕೊಂಡು ಸೃಷ್ಟಿಯೊಳು ವರಪತಿಯ ಮುಟ್ಟಿ ಸೇವಿಪುದು 11 ಕಾಲದರಸಿನ ನೋಡಿ ಮೂಲ ಪಡಕೊಂಬುವರು ಆಲಸ್ಯವನು ಬಿಟ್ಟು ಸೇವಿಸುವುದು ಶಾಲು ಸಕಲಾಭರಣ ತೋಲಾಗಿ ಬರುತಿಹುದು ಜಾಲರೂಪವದಾಗಿ ಮನಕೆ ತೋರುವುದು 12 ತಾಯಿ ತಂಗಿಯರನ್ನು ಮೋಹಿಸಲು ದೊರೆರಾಯ ಬಾಯಹೊಯಿಯೆಂದೆನುತ ನೋಯನುಡಿ ಪೇಳ ಆಯವಾಗಿಹ ಪುರುಷ ಸಾಯಲಾಕ್ಷಣ ಬಂದು ಕಾಯವನು ಬಳಸುವನು ಮೋಹವನು ತೋರಿ13 ಹೀಗೆಂದು ಚರನೋರ್ವ ಕೂಗಿ ಕರೆಯಲು ಬಂದು ಅಗಲೇ ಎದ್ದು ಇದಿರಾಗಿ ಪರಿಜನವು ಬೇಗದೊಳಗನುಸರಿಸಿ ಭೋಗವನು ಕೈಕೊಂಡು ರಾಗದೊಳಗಿದ್ದರಾ ಭವಜಲದ ನಡುವೆ 14 ಹೇಡಿಗಳು ಬರಬೇಡಿ ಮೂಡ ಗುಡ್ಡೆಯ ಸೇರಿ ಕಾಡಫಲವನು ಮೆದ್ದು ಕೋಡಗಲ್ಲಿನೊಳು ಆಡುತಿಹ ವರಾಹತಿಮ್ಮಪ್ಪನ್ಹತ್ತಿರದಿ ಬೇಡಿಕೊಳ್ಳಿರೊ ಎನುತ ನೋಡಿ ನಗುತಿಹರು 15
--------------
ವರಹತಿಮ್ಮಪ್ಪ
ಕಾದಿರುವೆನೋ ಕೃಷ್ಣ ಕಾದಿರುವೆನೋ ಪ ಮೋದಕ ನಿನ್ನ ನೆನಪಿನ ದೇಗುಲದಲ್ಲಿ ಆದಿನ ಕಾದಿದ್ದ ರಾಧೆ ಶಬರಿಯೊಲು ಅ.ಪ ಹಗಲಿರುಳೂ ನಿನ್ನ ಸ್ಮರಣೆಯ ಮಾಡುತ ಬಗೆಬಗೆಯಲು ನಿನ್ನ ಬಾಹ್ಯದಲೂ ನಿನ್ನ ನಗಧರ ಕಾಣಲು ಕಾದಿಹೆನೋ ಚ- ನ್ನಿಗ ನಿನ್ನ ನೆನೆನೆನೆದು ಹಾಡುವೆನೋ 1 ನನ್ನೀ ಸ್ಮರಣೆಯ ನುಡಿ ನುಡಿಯಲ್ಲೂ ಚಿನ್ಮಯ ನೀ ಕುಣಿದಾಡುತಿಹೆ ನನ್ನಯ ಪೂಜೆಯ ಆಡಿ ಅಡಿಯಲ್ಲೂ ಎನ್ನಯ್ಯ ಸಾಮೀಪ್ಯವಾಗಿರುವೆ 2 ಜಾಜಿಪುರಿಯ ಚೆನ್ನಕೇಶವ ನಿನ್ನ ಮೋಜಿನ ಚಿತ್ರವ ಚಿತ್ತದಿ ನಿಲಿಸಿಹೆ ಈಜಿಸಬೇಡಯ್ಯ ಸಾಕು ಸಂಸಾರ ಪಾದ ತೋರೊ ಪವಡಿಸುವೆ3
--------------
ನಾರಾಯಣಶರ್ಮರು
ಕಾಲ ತಪ್ಪಿದರು ಸಾವಕಾಲ ತಪ್ಪದೋ ಯಾವ ಜೀವ ಜಂತುಗಳಿಗೂ ಕಾಯವಿಡಿದು ಬಂದ ಬಳಿಕ ಪ ಜನಿಸಿ ತಂದೆತಾಯ ಕರ ದೊಳಿರಲಿ ಸ್ತನವನುಂಡು ಭರದಿನಿದ್ರೆ ಗೈಯುರ್ತಿಲಿ ನೆರೆದಬಾಲರೊಡನೆ ಆಡಿ ಚರಿಸುತಿರಲಿ ಬಾಲಕತ್ವ ತೆರಳಿ ಜವ್ವನವು ಬಂದು ರಮಣಿಯನ್ನೆ ವರಿಸಿ ಇರಲಿ 1 ಕರಿ ಹತ್ತಿ ಮೆರೆಯುತಿರಲಿ ದೊರೆಗಳೊಡನೆ ಚರಿಸುತಿರಲಿ ಮೇರು ಗಿರಿಯ ಶಿರದೊಳಿರಲಿ ಶರಧಿ ಮಧ್ಯ ಪುರದೊಳಂಲರಣ್ಯದೊಳಗೆ ತಿರುಗುತಿರಲಿ ಅತಳ ಸುತಳ ವಿತಳವನ್ನೆ ಪೊಕ್ಕುಇರಲಿ 2 ಕಾಯವಿದುವೆ ತನ್ನ ಪೆತ್ತ ತಾಯಿತಂದೆಗಳಿಗೋ ಜಾಯೆ ಸುತರ ಗೃಧ್ರ ಭಲ್ಲುಕಾದಿಗಳಿಗೋ ಪುಲಿಗೋ ವಾಯಸಾದಿ ಕ್ರಿಮಿಗೋ ಕೀಟಕಾದಿಗಳಿಗೋ ಲಕ್ಷ್ಮೀರಮಣನೊಬ್ಬ ಬಲ್ಲನಿದನು 3
--------------
ಕವಿ ಪರಮದೇವದಾಸರು
ಕಾಳಿಂಗನಾ ಮೆಟ್ಟೆ ನಾಟ್ಯವಾಡಿದ ಕಂಜನಾಭ ಕೃಷ್ಣನು ಪ ಕಾಳಿಂಗನಾ ಮೆಟ್ಟಿ ಆಡಿದ ಭರದಲ್ಲಿಶ್ರೀವತ್ಸ ಉರದಲ್ಲಿ ಕೊರಳಲ್ಲಿ ವನಮಾಲೆತರಳತನದಲ್ಲಿ ಯಮುನೆಯ ಮಡುವಿನಲ್ಲಿಆಡುತ್ತ ಪಾಡುತ್ತ ಅ.ಪ. ಕಾಲಲಿ ಗೆಜ್ಜೆ ಘಲುಘಲು ಘಲುಕೆನ್ನೆಫಾಲದಿ ತಿಲಕವು ಹೊಳೆ ಹೊಳೆಯುತ್ತಜ್ವಲಿತ ಮಣಿಮಯ ಲಲಿತ ಪದಕಹಾರಜ್ವಲಿತ ಕಾಂತಿ ಬೆಳಗುತ ದಿಕ್ಕುಗಳಲ್ಲಿ 1 ಸುರರು ತಥ್ಥೈತಥ್ಥೈಯೆನ್ನಲುನಾರದ ತುಂಬುರ ಸಿದ್ಧರು ವಿದ್ಯಾ-ಧರರು ಅಂಬರದಲ್ಲಿ ಆಡುತ್ತ ಪಾಡಲು 2 ಯೋಗಿಗಳೆಲ್ಲ ಜಯ ಜಯ ಜಯಯೆನ್ನೆಭೋಗಿಗಳೆಲ್ಲ ಭಯಭಯ ಭಯವೆನ್ನೆನಾಗಕನ್ಯೆಯರು ಅಭಯ ಅಭಯವೆನ್ನೆನಾಗಶಯನ ಸಿರಿಕೃಷ್ಣ ಜನನಿಯ ಕಂಡುಬೇಗನೆ ಬಿಗಿದಪ್ಪಿ ಮುದ್ದನು ತೋರಿದ3
--------------
ವ್ಯಾಸರಾಯರು
ಕೀರ್ತನೆಗಳು ಅಪರಾಧಿ ನಾನಲ್ಲ ಅಪವಾದಯನಗಿಲ್ಲಾ ಪ. ಕಪಟನಾಟಕ ಕೃಷ್ಣ ಯನಗೆ ನೀನಪರಾಧಿ ಅ.ಪ. ನೀನು ಆಡಿಸಲು ಜೀವಗಳನುದಿನದ ಬೊಂಬೆ ಆನೆ ಬಲ್ಲೆನೆ ಬ್ಯಾರೆ ಪಥವನೊಂದಾ ನೀನಿಟ್ಟ ಸೂತ್ರದಂತಿರಲು ಕೈಕಾಲುಗಳು ನೀನು ಮುಗ್ಗಿಸಲು ಮುಗ್ಗುವ ಜೀವ ನಾನಾದೆ 1 ಒಂಬತ್ತು ಬಾಗಿಲುವುಳ್ಳ ಪಟ್ಟಣದೊಳಗೆ ತುಂಬಿದಿಪ್ಪತ್ನಾಲ್ಕು ಮೊನೆಯಾಳ್ಗಳ ನಂಬಿಸಿ ಕಾವಲು ನೀನು ಎನ್ನೊಳಗಿದ್ದು ಕಂಬುದಾ (?) ಯೇರಿ ಕೊಲಿಸುವುದು ನಿನಗನ್ಯಾಯ 2 ಅಂತರಾತ್ಮಕ ನೀನು ಒಳಗಿದ್ದಾ ಬರಿ ತಂತ್ರಿಯೆಂದೆನ್ನ ಕೊಲ್ಲಿಸುವರೇನೊ ಹೇಳೋ ಕಂತುವಿನ ಜನಕ ಲಕ್ಷ್ಮೀರಮಣ ಕಾಯಬೇ- ಕೆಂತೆಂದೆನ್ನ ಅಚಲಾನಂದವಿಠಲ ಪುರಂದರ ವಿಠಲ ಅಂಕಿತದಲ್ಲೂ ಇದೆ.
--------------
ಅಚಲಾನಂದದಾಸ