ಒಟ್ಟು 91 ಕಡೆಗಳಲ್ಲಿ , 34 ದಾಸರು , 83 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚಿಕ್ಕವನೇನೆ ಮಿಕ್ಕಾದಂಥ | ಮಕ್ಕಳಿಲ್ಲೇನೆ, ನಿಮ್ಮವರೊಳು ||ದಿಕ್ಕಿಲ್ಲವೇನೆ, ಇವಗೆ ತಕ್ಕ |ಬುದ್ಧಿಯ ಕಲಿಸುವವರಿನ್ನು ಪ ತಂಡ ತಂಡದಿ ಬರುತಿಹ ನಮ್ಮನ |ಕಂಡು ಆಡುವ ಆಟಕಿಯ ಬಿಟ್ಟು ||ಚೆಂಡು ಪುಟಿದು ಬಂತು ಬಚ್ಚಿಟ್ಟಿರ್ಯಾಕೆಂದು |ದುಂಡ ತೋಳಗಳೆತ್ತಿ ಭಂಡು ಮಾಡುವನಿವ 1 ಶಿಶುವೆಂದು ಎತ್ತಪ್ಪಿಕೊಂಡು ಮುದ್ದಿಡಲು |ದಶನಗಳಿಂದಧರ ನೋಯಿಸಲು ||ಆಶೆಯಲಸುವ ಪೀರಿದವನಿವನೆಂದಂಜಿ |ಸೊಸಿಯನ್ನಬ್ಬರಿಸಿ ಬೀದಿಯೊಳಂದು 2 ಆರಿಲ್ಲದಾಗೊಬ್ಬವನನ್ನು ಬಾಲಕನೆಂದು |ದ್ವಾರವಿಕ್ಕಿ ನೀರೆ ಮೇಲಿರಿಸಿ ||ಬಾರಯ್ಯ ಮುದ್ದು ಕೊಡಯ್ಯ ಎನೆ ಹದಿ- |ನಾರು ವರುಷದವನಾದ ರುಕ್ಮಭೂಷಾ 3
--------------
ರುಕ್ಮಾಂಗದರು
ತಾತ್ವಿಕ ಹಿನ್ನೆಲೆಯ ಹಾಡುಗಳು (ಸರ್ವೋತ್ತಮತ್ವ ವರ್ಣನೆ) ಸಕಲವು ತ್ವದಧೀನವು ಶ್ರೀಶನೀ ಕೇಳು ಪ. ಸಕಲವು ತ್ವದಧೀನ ಸಾಕಯ್ಯ ಸತ್ಯಮಾನ ವಿಖನ ಸಗಣಧಾಮ ವಿಶ್ವಗುಣಾಭಿರಾಮ ಅ.ಪ. ಕಮಲ ಸಂಭವ ಮುಖರು ಶ್ರೀಶ ತ್ವತ್ಪಾದ ವಿಮಲ ಪದ್ಮ ಸೇವಕರು ಅಮಿತ ಗುಣಾಂಬುಧಿ ಆಡುವಿ ನಿರುತದಿ ದುರಿತ ಬೀಜ ಶ್ಯಾಮ ಸುಂದರ ರಾಜ 1 ದೇಹ ಗೇಹಾದಿಗಳೆಲ್ಲ ಸುವರ್ಣ ಪಕ್ಷಿ ವಾಹ ನಿನ್ನೊಶ ಭೂನಲ್ಲ ಮೋಹದಿ ತನ್ನದೆಂದು ಜೋಹಗೊಂಡ ಪರಿಗೆ ಬಾಹದಿರದು ಕೇಡು ಬಿಡದೆಂದು ನಗೆಗೇಡು 2 ಪರಮ ಕೃಪಾಳು ನಿನ್ನ ಪಾದವ ನಂಬಿ ಮರೆದೆ ದುರ್ಮಾನವನ್ನ ಉರಗ ಗಿರೀಂದ್ರನೋಳ್ಮೆರೆವ ಮಹಾತ್ಮನೆ ಶರಣ ಜನ ಮಂದಾರ ಸೇರಿಸು ಕೃಪಾಧಾರ3
--------------
ತುಪಾಕಿ ವೆಂಕಟರಮಣಾಚಾರ್ಯ
ತಾನಾ ತಂದನಾನಾ ತಾನಾ ತಂದನಾನಾ ತಾನಾ ತಂದನಾನಾ ತಾನಾ ತಂದನಾನಾ ಧ್ರುವ ಬಲ್ಲೆ ಬಲ್ಲೆನೆಂಬರು ಬಲ್ಲರಿಯದಿಹದನು ಬಲ್ಲರೆ ನೀವಿನ್ನು ಹೇಳುವುದು ತಾನಾ 1 ಕಣ್ಣು ಕಾಂಬುವದೇನು ಕಣ್ಣಿನೊಳಿಹುದೇನು ಕಣ್ಣು ಕಾಂಬುವ ಗತಿ ತಿಳಿಯುವುದು ತಾನಾ 2 ಕಿವಿಯ ಕಿವಿಯೆಂಬುದೇನು ಕಿವಿಯ ಕೇಳುವುದೇನು ಕಿವಿಯ ಕೇಳುವ ಗತಿ ತಿಳಿಯುವದು ತಾನಾ 3 ಮೂಗು ಮೂಗೆಂಬುದೇನು ಮೂಗಿನೊಳಾಡುವದೇನು ಆಡುವ ಗತಿಗಳ ತಿಳಿಯುವದು ತಾನಾ 4 ಬಾಯಿ ಬಾಯೆಂಬುದೇನು ಬಾಯಿಯೊಳ ನುಡಿವದೇನು ಬಾಯಿ ನುಡಿವ ಗತಿ ತಿಳಿಯುವದು ತಾನಾ 5 ದೇಹ ದೇಹೆಂಬುದೇನು ದೇಹದೊಳಿಹುದೇನು ದೇಹದೊಳಿಹ ವಸ್ತು ತಿಳಿಯುವದು ತಾನಾ 6 ಪ್ರಾಣವೆಂಬುದೇನು ಕರಣವೆಂಬುದೇನು ತತ್ತ್ವವೆಂಬುದೇನು ತಿಳಿಯುವದು ತಾನಾ 7 ಜೀವ ಅಂಬುದೇನು ಜೀವಭಾಗಗಳೇನು ಜೀವ ಶಿವದ ಗತಿ ತಿಳಿಯುವದು ತಾನಾ 8 ಆರುವ್ಹೆಂಬುದೇನು ಮರವ್ಹುವೆಂಬುದೇನು ಇದರೊಳು ಖೂನ ಕುರುಹು ತಿಳಿಯುವುದು ತಾನಾ 9 ಕನಸುವೆಂಬುದೇನು ಕನಸು ಕಾಂಬುವದೇನು ಕನಸು ಹೇಳುವದೇನು ತಿಳಿಯುವುದು ತಾನಾ 10 ಹಗಲು ಎದ್ದಿಹದೇನು ಇರಳು ಮಲಗುವದೇನು ಇದರ ಹಗರಣವನು ತಿಳಿಯುವದು ತಾನಾ 11 ಹುಟ್ಟಿ ಬಾಳುವದೇನು ಸತ್ತು ಹೋಗುವದೇನು ಸತ್ತು ಹುಟ್ಟುವದೇನು ತಿಳಿಯುವದು ತಾನಾ 12 ಹೆಣ್ಣು ಗಂಡೆಂಬುವದೇನು ಹೆಣ್ಣು ಗಂಡು ಕೂಡುವದೇನು ಕೂಡುವದೇನೆಂದು ತಿಳಿಯುವದು ತಾನಾ 13 ಅನುಭವ ಗತಿಗಳ ತಿಳಿಯಲು ಆತ್ಮದೊಳು ತಿಳಿಯಲು ಜನ್ಮವು ಅಳಿಯುವದು ತಾನಾ 14 ಆತ್ಮ ಅನುಭವವು ತಿಳಿಯುವದು ಗುರುಕೃಪೆಯು ತಿಳಿಯಲು ಜೀವನ್ಮುಕ್ತಿಯು ತಾನಾ 15 ಮಹಿಪತೆಂಬ್ಹೆಸರನು ಕರೆದರೊ ಎಂಬುವದೇನು ಓ ಎಂಬುವದೆನಗಿನ್ನು ತಿಳಿಯಿತು ತಾನಾ 16 ಇಂತು ಪರಿಯಾಯವು ತಿಳುಹಿದ ಗುರುರಾಯ ಎನ್ನೊಳು ಭಾಸ್ಕರ ಗುರು ತಾನೆ ತಾನಾ 17
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಿಳಿದು ಕೊಳ್ಳಿರಿ ಜಾಣರೆಲ್ಲಾ ಅಹಂ ಅಳಿದು ನಿಂತಿರುವಂತ ಸತ್ಯಾತ್ಮ ಬಲ್ಲಾ ಪ ಆದ್ಯಂತ ವಿಸ್ತಾರಮೆಲ್ಲಾ ಇದನು ಕೇ ಳೀದರ್ಜುನÀಗೇಳಿದ ಕಳ್ಳಗೊಲ್ಲ ಅ.ಪ ಎಂಟಾರುಗಳ ನೀನು ಕಂಡೂ ಅಲ್ಲಿ ಟಂಟಣಿಸುವದೇನನುಭವದಿ ನೀನುಂಡೂ ತುಂಟರೈವರಕಡೆಗೊಂಡು ಜ್ಞಾನ ಮಂಟಪದೊಳಗೆ ಆಡುವ ಬಾರೊ ಚೆಂಡೂ 1 ನಾರದಾದಿಗಳೆಲ್ಲ ಬಂದೂ ಆಹ ಮೀರಿದ ಶ್ರೀರಂಗಧಾಮನೊಳು ನಿಂದೂ ಸಾರಿದರು ನಿಜನಾಮವೆಂದೂ ಇದನು ಯಾರಾದರು ಭಜಿಸಿ ಗೋಪ್ಯದೊಳಗೆಂದು 2 ಪರದೊಳಗೆ ನೀ ಬೆರೆದಾಡೊ ಸತ್ಯ ಶರಣರಿಗೊಲಿವ ಹರಿಯಹುದಿದು ನೋಡೋ ನರಹರಿ ಭಜನೆಯ ಮಾಡು ನನ್ನ ಗುರುವೆ ತುಲಸಿ ನಿನ್ನೊಳಿಹುದೈನೆ ನೋಡೋ 3
--------------
ಚನ್ನಪಟ್ಟಣದ ಅಹೋಬಲದಾಸರು
ತೀರ್ಥವು ಬೇಡಾ ಕ್ಷೇತ್ರವು ಬೇಡಾ ಜಪ ತಪ ಯೋಗವು ಬೇಡಾ ಪ ಪರ ಉಪಕಾರ ಶಾಸ್ತ್ರ ಪುರಾಣಗಳು ಬೇಡಾ | ಸ್ವಾಮಿ ಸದ್ಗುರು ಭವತಾರಕನ ಭಜಕರ ಪಾದವ ನೀ ಬಿಡಬೇಡಾ 1 ಸತ್ಯವು ಸಂಸಾರವು ಜಗವಿದು ಮಾಡೆಂಬರು ನೋಡೀಜನರು | ಮಿಥ್ಯವು ಸರ್ವವು ಜಗದೀಶನನು ತಿಳಿಯೆಂಬುವರಾ ಸಜ್ಜನರು || ಜಾಗ್ರದಿ ಸ್ವಪ್ನದಿ ಬಳಲುತ ನಲಿವುತ ಚರಿಸುವರಾ ಕಾರ್ಮಿಕರು | ತುರ್ಯಾವಸ್ಥೆಯೋಳ್ ಮರೆದು ತಮ್ಮನು ಇರುತಿಹರಾ ಸಾಧುವರು2 ಸಾರ ನಿವೃತ್ತಿಯ ಅರಿವುದೆ ಜೀವನ್ಮುಕ್ತಿ || ಇದರ ಹಂಚಿಕೆ ಮಾಡುತ್ತಿಹುದೇ ಅದುವೆ ಶಾಸ್ತ್ರದ ಯುಕುತೀ | ಸದಮಲ ಬೋಧಾನಂದವೆ ಬಲಿದರೆ ನಿಜವೇ ತಾ ಅವ್ಯಕ್ತಿ 3 ಅನುದಿನ ಮೂರ್ತಿ ಭವತಾರಕ ಭಜಕರ ಕೇಳೋ ನಿನ್ನ ಖೂನಾ 4 ಸಂಸಾರವ ಸದ್ಧರ್ಮದಲಿ ಸಾಧು ಸಂತರಂತೆ ನೀ ಮಾಡೊ | ಸಂಶಯವಳಿದು ಸರ್ವವು ಶಿವನೆಂದರಿದು ಅವರೊಳು ಕೂಡೊ | ಸತ್ತು ಹುಟ್ಟುವ ಕಟ್ಟಳೆಗಳನು ಕಿತ್ತಿ ಈಡ್ಯಾಡೊ | ನಿತ್ಯದಿ ಭವತಾರಕನ ಭಜಕರ ಸಂಗದಲಿ ಲೋಲ್ಯಾಡೊ 5 ಗುರು ವರನಲಿ ಸತ್ಪುರುಷರ ಬಳಿಯಲಿ ಅರಸಬಾರದು ಇಷ್ಟಾ | ಕುಲ ವಯ ಕ್ರಿಯಾ ಕರ್ಮವ ತಾಪತ್ರಯಗಳನೆಣಿಸುವ ಭ್ರಷ್ಟಾ | ಅನುಭವ ಜ್ಞಾನದಿ ಬೋಧದಿ ಲಕ್ಷ್ಯವೀಕ್ಷಿಸುವವನೆ ಶ್ರೇಷ್ಠಾ | ಇನಿತನು ಬಿಟ್ಟು ನಿಂದಿಸುವವನೆ ಭವದಲಿ ಬಡುವನು ಕಷ್ಟಾ 6 ಮೂರ್ತಿ ಭವತಾರಕ ಭಜಕರ ಸೂರ್ಯನ ಬಲ್ಲದೆ ಗೂಗಿ 7 ಭವ ದೋಷವು ಅಳಿವಹುದೇ? | ಗುರು ಭವತಾರಕ ಭಜಕರ ಬೋಧವು ಧರೆಯೊಳು ನರರಿಗೆ ಇಹುದೇ ? 8 ಮಾತು ಸತ್ಯವಾದರೆ ಆತಗೆ ಶಿವನೆನು- ತಿಹರೀ ಜಗ ಜನರೂ | ಭೂತಭವಿಷ್ಯತ್ ಹೇಳಲು ಭಕ್ತಿಯೊಳಾತಗೆ ನಡಕೊಂಬುವರೂ | ಭೂತಳದೊಳು ಭವತಾರಕ ಭಕ್ತರ ನೀತಿ ಮರೆತ ಪಾಮರರೂ | ನೂತನ ಖ್ಯಾತಿಯ ಕೊಂಡಾಡುತ ಬಹು ಪಾತಕಕೆಳಿ ಎಂಬುವರೂ 9 ಕರ ಭವ ಮೂರ್ತಿ ಭವತಾರಕ ಭಜಕರು ಇದ್ದ ಸ್ಥಿತಿಯನರಿಯರು 10 ಆಡುವರಾಟವ ಬಾಲರ ಮನೆಯಲಿ ಮಾಡುತ ಬ್ರಹ್ಮಾಂಡವನೂ |ನೋಡರು ಹಿರಿಯರು ಸಟೆಯೆಂದೇ ದಿಟ ಮಾಡುವರಿಹದಾಟವನೂ | ಪಾಡಲ್ಲೆನುತಲಿ ತಿಳಿದವರೊಳು ಬೇಡುವರಾ ನಾಕವನೂ | ರೂಢಿಯೊಳಗೆ ಭವತಾರಕ ಭಜಕರು ನೋಡರು ಪುಸಿಯೆಂದದನೂ 11 ನಿತ್ಯ ಪೂರ್ಣ ಭವತಾರಕನಂಘ್ರಿಯ ಹೊಂದದೆ ತಿಳಿಯದು ಗುಟ್ಟೂ 12 ಸಂಚಿತ ಪ್ರಾರಬ್ಧ ಕ್ರಿಯಮಾಣಾ ಜನರಿಗೆ ಬರೆದನು ಬ್ರಹ್ಮಾ | ಮುಂಚೆ ಶಿರವನು ನೀಗಿದಾ ಬರದವರಾರೊ ಆತಗೆ ತಮ್ಮಾ | ಮಿಂಚಿನಂತೆ ಜೀವನಕೆ ತಗಲುವಾ ಮಾಡುವ ಕರ್ಮಾ ಧರ್ಮಾ | ಹಂಚಿಕೆ ತಿಳಿಯದೆ ನುಡಿವರು ಮರುಳರು ವಂಚನೆ ಬಿಡು ಇದು ವರ್ಮಾ 13 ದೇವ ನೈವೇದ್ಯವು ಖೊಬ್ಬರಿ ಸಕ್ಕರಿ ಪನಿವಾರವು ನೋಡಿ | ಆವ ಕುಲದವನಾದರೂ ಏನು | ಇಲ್ಲದ ಹಂಚಿಕೆ ಮಾಡೀ ಭಾವಿಸಿ ಮೃಷ್ಟಾನ್ನವನಿಟ್ಟರೂ ಕುಲಧರ್ಮದಲ್ಲಿ ನೋಡೀ | ಕೇವಲ ಭವತಾರಕನ ಭಜಕರ ಮುಂದೆ ರಹಸ್ಯವ ಮಾಡೀ 14
--------------
ಭಾವತರಕರು
ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ಗುರುನಾಥ ತ್ರಾಹಿ ತಾರಕಬ್ರಹ್ಮ ಸಾಯೋಜ್ಯತ ತ್ರಾಹಿ ಅನಾಥ ಬಂಧು ಸಾಕ್ಷಾತ ತ್ರಾಹಿ ದೀನಾನಾಥ ತ್ರಾಹಿ ತ್ರಾಹಿ 1 ಮಾಡಲರಿಯೆ ನಾನಿಮ್ಮ ನಿಜಸ್ತುತಿ ಹಿಡಿಯಲರಿಯೆ ದೃಢ ಸದ್ಭಕ್ತಿ ಪೊಡವಿಯೊಳು ನಾ ಮೂಢಮಂದಮತಿ ಕೂಡಿಕೊಂಬೊ ದಯಮಾಡೋ ಶ್ರೀಪತಿ 2 ಮೊದಲಿಗಾಡುವ ಬಾಲಕವೃತ್ತಿ ತೊದಲುನುಡಿ ತಾಯಿಗತಿ ಪ್ರೀತಿ ಇದೆ ಪರಿಯಲೊಪ್ಪಿಸಿಕೊಂಬ ಸ್ತುತಿ ಮೇದಿನಿಯೊಳು ನಿಮ್ಮ ಖ್ಯಾತಿ 3 ಆಡಿಸಿದಂತೆ ಆಡುವೆ ನಾ ನುಡಿ ನಡೆಸಿಕೊಂಬುದು ಸನ್ಮತ ಮಾಡಿ ಕೊಡುವಂತೆ ಮಾನ್ಯ ಸಂತರೊಡಗುಡಿ ಮಾಡೊ ದಯ ನಿಮ್ಮಭಯನೀಡಿ 4 ತ್ರಾಹಿ ತ್ರಾಹಿಯೆಂಬೆ ತನು ಮನರ್ಪಿಸಿ ತ್ರಾಹಿಯೆಂಬೆ ಶಿರಸಾಷ್ಟಾಂಗ ನಮಿಸಿ ಕಾಯೊ ಮಹಿಪತಿಯ ಕರುಣಿಸಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಯದಿಂದಲಿ ನೋಡೊ ಎನ್ನಾ ಹಯವದನ್ನಾ ಶ್ರೀಹರಿ ಪ ವರಗಳ ನೀಡಿ ಅ.ಪ. ಭಕುತದಿ ಕೂಡಿ ಆಡುವೆ ನೀ ನಿತ್ಯ ಸುಜನರಿಗೆ ಕಾಡಿ ಕೆಣಕುವ ಈ ಖೋಡಿ ಅನುದಿನ ಸಾಮಗಾನ ಪ್ರೇಮಾ ಬ್ರಹ್ಮಾದಿಗಳಿಗೆ ಕಾಮಿತಪ್ರದ ರಾಮಾ ಪರಿಪೂರ್ಣ ರಾಮಾ 1 ಶಾಮಸುಂದರ ಶಕಟಾಸುರಮರ್ದನ ಸಾಮಜವರದನೆ ಮಾತುಳಾಂತಕ ಮದನ ಜ£ಕÀನೆ ಕರುಣಿಸಿ ಎನ್ನನು 2 ಏನು ಬಲ್ಲೆನು ನಾನು ನಿನ್ನ ಮಹಿಮೆಯನ್ನು ದೀನ ಸುರಧೇನು ಬಣ್ಣಿಸಲಳವೆ ನಿನ್ನ ಮಹತ್ತನ್ನು ಮುನಿಮೌನಿವರರಿಂದ ಅನಘನೆನಿನ್ನಮಿತ ಗುಣಗಣನ ಕಾಣದೆ ಲಕುಮಿ ಮನದಲ್ಲಿ ಅನುವು ತಪ್ಪೆ ನಿತ್ಯ 3 ಹಾಟಕಾಂಬರಧರ ಶ್ರೀವತ್ಸಲಾಂಛನ ಜಟಾಮಕುಟ ಕುಂqಲ ಕೈಟಭಾಂತಕನೆ ಕಡಲಮಂದಿರ ಕುಟಿಲ ಕಟುಮತಿ ಖಳರನು ಶಿಕ್ಷಿಸಿ ಕೈಯ್ಯ ಬಿಡದೆ ಎನ್ನಾ ಮಾನಿಧಿವಿಠಲ ಕಾಲಿಗೆ ಬೀಳುವೆ 4
--------------
ಮಹಾನಿಥಿವಿಠಲ
ದುರಿತ ದುರ್ಗತಿಗೆ ಆವಾನಂಜನೊ ಹರಿಯ ಕರುಣವೆಂಬ ಕವಚ ತೊಟ್ಟಿರಲಿಕ್ಕೆ ಪ ಮಲಗಿ ಹೊರಳನೇಕೆ ಕುಳಿತುಕೊಂಡಿರನೇಕೆ ಬಲುದೂರ ತಿರುಗಾಡಿ ಬಪ್ಪನೇಕೆ ಮಲಿನ ವಸನವ ಪೊದ್ದು ಮೋರೆ ತೊಳಿಯನೇಕೆ ಪಾದ ನೆಳಲು ಸೇರಿದವ 1 ಸ್ನಾನ ಸಂಧ್ಯಾ ಮೌನ ಮಾಡದೆ ಇರನೇಕೆ ಕಾನÀನದಲಿ ಬಂದು ಸೇರನೇಕೆ ದಾನ ಧರ್ಮಂಗಳ ಮಾಡದೆ ಇರನೇಕೆ ದಾನವಾರಿಯ ಕಾಣುತಲಿಪ್ಪವ 2 ಮಡಿ ಉಡದೆ ಉಣನೇಕೆ ಅಡಿಗೆ ನೇಮನವೇಕೆ ಅಡಿಗಡಿಗೆ ಜಪಮಣಿ ಎಣಿಸನೇಕೆ ನಡೆಯುತ ಪಥದೊಳು ತಿನ್ನಲ್ಲಾ ಮೆಲ್ಲನೇಕೆ ಪೊಡವೀಶ ಶ್ರೀ ಹರಿಯ ಅಡಿಗಳ ಬಲ್ಲವಾ 3 ಓದದೆ ಇರನೇಕೆ ವೇದ ಪಠಿಸನೇಕೆ ವೇದಮಂತ್ರ ರಚಿಸದರನೇತಕೆ ಓದನವೀಯದೆ ಬಾಳುತಲಿ ಇರನೇಕೆ ಮಾಧವನ ಚರಣಾರಾಧನೆ ಮಾಳ್ಪ 4 ತೀರ್ಥ ತಿರುಗನೇಕೆ ಯಾತ್ರಿ ಚರಿಸನೇಕೆ ವ್ಯರ್ಥ ದಿವಸವೆಂದು ಅನಿಸಲೇಕೆ ಆರ್ಥಿಯನ್ನು ನೋಡಿ ಆಟ ಆಡುವನೇಕೆ ತೀರ್ಥಪದನ ದಿವ್ಯತೀರ್ಥ ಬಯಸುವವ 5 ವ್ರತವು ಮಾಡನೇಕೆ ಕಥಿಯ ಕೇಳನೇಕೆ ಸತಿಯ ಸಂಗಡ ನಿತ್ಯರಮಿಸನೇಕೆ ಚತುರ ಸಾರೆ ಉಂಡು ಹಾಗೇ ಇರನೇಕೆ ಪತಿತಪಾವನನಂಘ್ರಿ ಮತಿಯಲ್ಲಿ ನೋಳ್ಪನಾ6 ದುರಿತವೆಂಬೋದೆಂತು ಬಿಳಿದೊ ಹಸರೊ ಕೆಂಪೊ ಕರದೊ ಮತ್ತಾವದೋ ಅದರ ವರ್ಣಾ ದುರಿತಾರಿ ವಿಜಯವಿಠ್ಠಲನ್ನದಾಸಗೆ ತನ್ನ- ತೊರೆದು ಕಾಣೊ ಹಣೆ ನೋಡದೆ ಮಹಾ 7
--------------
ವಿಜಯದಾಸ
ನನಗೆ ಹೊತ್ತು ಹೋಗದೆ ನಾನೆಯೆ ಆಡುವೆನನಗೆ ಹೊತ್ತು ಹೋಗದೆ ಪ ಈಶನ ಅವತಾರವಾಗಿ ಜೀವನ ಅವತಾರವಾಗಿಈಶನಾಗಿ ಜೀವ ಬೊಂಬೆಯನಾಡುವೆ1 ಜೀವರ ಹುಟ್ಟಿಸಿಯೆ ಜೀವರ ಬೆಳೆಸಿಯೇಜೀವರಲಿ ಲಯಿಸುವೆ ತ್ರೈಮೂರ್ತಿಯಾಗುವೆ 2 ಎಚ್ಚರವನೆ ಕೊಟ್ಟು ಎಚ್ಚರವನೆ ಕೊಟ್ಟುಎಚ್ಚರವನೆ ತಿಳುಹಿ ನಿಚ್ಚಳ ಚಿದಾನಂದನನು ಮಾಡುವೆ3
--------------
ಚಿದಾನಂದ ಅವಧೂತರು
ನೀ ಕೈಯ ಬಿಡಬೇಡವೋ ನರಹರಿ ಪ ನೀ ಕೈಯ ಬಿಡಬೇಡ ನಾಕೆಟ್ಟರೂ ಬೇಡ ನೀ ಕೊಟ್ಟ ಫಲವಿನ್ನು ಸಾಕೋ ಮಾಂಗಿರಿರಂಗ ಅ.ಪ ನನ್ನ ಕಾಯುವ ಭಾಗ ನಿನ್ನದಾಗಿರಲಯ್ಯ ಇನ್ನಾವುದನು ಕೇಳ್ವುದೆನ್ನ ಭಾವದೊಳಿಲ್ಲ ಸನ್ನುತಾಂಗ ಕೃಷ್ಣ ಪನ್ನಗಶಯನ [ಉನ್ನತದಿ ಸದಾ ಭಜಿಸುವೆನು ನಿನ್ನ] 1 ಆಡುವಾ ನುಡಿಗಳು ನೋಡುವಾ ನೋಟವು ಮಾಡುವ ಕಾರ್ಯವು ನಿನ್ನದಾಗಿರಲು ಮೂಡಿಸು ಮನದಲ್ಲಿ ತವಪಾದಭಕ್ತಿಯ ಜೋಡಿಸಿ ಕೈಗಳ ಮುಗಿವೆನೋ ರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೃತ್ಯವನವಧರಿಸು ನಿರುಪಮ ನೃತ್ಯವನವಧರಿಸು ಪ ನರ್ತನಕರ್ತುವು ನೀನೆಯಾಗಲು ಅ.ಪ ಪ್ರಥಮದಿ ಸ್ವರವುಂ ಹೊರಡಲು ತಾಳವು ಮಿಥುನದಿ ನಾಂದಿಯ ಮಾಡಲು ವಿಧಿಯಿಂ1 ಮರ್ದಳನಾದವು ಮೂಡಲು ಹಾಗೆ ಮಾನಿನಿ ನಿಲಲು 2 ರಂಗವು ರಂಜಿಸಿ ರಾಗಗಳಿಂದಲು ಮಂಗಳನಾಟ್ಯವು ಮುಂಗುಡಿಸಾಗಲು 3 ರಾಗದ ಭೇದಗಳ್ ರೂಢಿಗಳಾಗುತ ಸಾಗಲು ಲಯಗತಿಸಹಿತದಿ ಬೆಳೆದು 4 ಆಡುವ ನೃತ್ಯವರ್ನರ್ಪಿಪೆ ತಿರುಪತಿನಾಡಿನ ವೆಂಕಟನಾಥನೆ ಲಾಲಿಸು 5
--------------
ತಿಮ್ಮಪ್ಪದಾಸರು
ನೋಡಿದೆನು ಉಡುಪೀ ನಿವಾಸನ ನೋಡಿದೆನು ಯಾದವೇಶನ ನೋಡಿದೆನು ಮಾನಿಸ ವೇಷನ ನೋಡಿದೆನೊ ಲಕುಮೇಶನ ಪ ಪರಶುರಾಮನು ಭೂಮಿ ಸುರರಿಗೆ ಸರವು ಧಾರುಣಿ ಧಾರಿಯಾ ಎರದು ಕೇಸರಗಿರಿಯ ಪಡುಮೂಲ ಶರನಿಧಿಯನು ಶರದಲೀ ಭರದಿ ಬಿಡಿಸಿದ ಶೂರ್ಪಕಾರದ ತೆರದಿ ನೆಲ ನೀ ಧರುಣಿಗೆ ಪರಮ ಸಾಹಸ ರಾಮಭೋಜನು ಅರಸನಾದುದು ನೋಡಿದೆ 1 ಯಾಗಗೋಸುಗ ರಾಮ ಭೋಜನು ನೇಗಿಲಿಯ ಕೊನೆಯಿಂದಲಿ ಆಗ ಭೂಮಿಯ ಶೋಧಿಸÀಲು ಬಂದು ನಾಗ ಬಂದಿತು ಮೃತವಾಗಿ ತೂಗಿ ಶಿರವನು ಭೃಗು ಕುಲೇಶಗೆ ಬಾಗಿ ನೆನೆಯಲು ಸಂಕೇತಾ ಸಾಗಿ ಭೂಮಿಪಾಲ ರಿಪು ಚನ್ನಾಗಿ ಒಲಿದದು ನೋಡಿದೆ 2 ತಿಳುಹಿದನು ಪೂರ್ವದಲಿ ಈ ಫಣಿ ಖಳನು ಕಾಣೊ ಇವನಿಂದು ಅಳಿದು ಪೋದದು ಲೇಸು ಭೂಸುರ ಕುಲಕೆ ಸಂತೋಷವಾಯಿತು ಒಲುಮೆಯಲಿ ಸತ್ಕಾರ ವಿಧ ವೆ ಗ್ಗಳವಾಗಿ ಸುಯಾಗವ ಸುಲಭ ಮನದಲಿ ಮಾಡೆನಲು ನಿ ಶ್ಚಲ ಭಕುತಿಲಿ ಸ್ತುತಿಸಲು 3 ಇಂದಿರಾಪತಿ ಕರುಣಿಸೆಂದು ಅಂದಿಗಾ ರಾಮ ಭೋಜನು ಒಂದು ಕ್ರೋಶದ ಅಗಲ ರಜತಾ ಚಂದದಾಸನ ಮಾಡಿಸಿ ತಂದು ದೇವನ ಕುಳ್ಳಿರಿಸಿ ಆ ನಂದದಲಿ ಓಲಾಡುತಾ ಕುಂದದಲೆ ಮೇಧವನು ಮುಗಿಸಿ ಗೋ ವಿಂದನ ಪ್ರೀತಿಪಡಿಸಿದಾ 4 ಭೂತಳದೊಳು ರಜತಪೀಠಾಖ್ಯ ಖ್ಯಾತಿ ಆಯಿತು ಸರ್ವದಾ ಆ ತರುವಾಯದಲ್ಲಿ ಭಾರ್ಗವ ಭೂತನಾಥನ ನಂದದಿ ವಾತ ಭಕ್ಷನ ನಡುವೆ ನಿಂದನು ಮಾತುಯಿದು ಪುಶಿಯಲ್ಲವೊ ಪೂತುರೆ ಮೋಹಕವೆ ತೋರಿದ ಜಾತ ರಹಿತಗೆ ನಮೋ ನಮೋ 5 ಪರಿ ಇರಲು ಗಂಗೆಯ ಕಾಂತ ಮಹಾ ತಪವನೆ ಮಾಡಿ ಸಂತತ ಗೋಪಾಲಕೃಷ್ಣನ ಸಂತೋಷವನು ಬಡಿಸಿದಾ ಚಿಂತೆಯಲಿ ವಿದೂರನಾದನು ಮುಂತೆ ನಡೆದ ಕಥೆ ಕೇಳಿ ಕಂತುಹರನನ ಒಲಿಸಿ ಉಡುಪಾ ಕಾಂತ ವರವನೆ ಐದಿದಾ 6 ಮೂರು ಯುಗದಲಿ ಈ ಪರಿಯಾಗೆ ಮಾರುತ ಮಧ್ಯಗೇಹನ ಚಾರು ಮನೆಯಲಿ ಜನಿಸಿ ವೈಷ್ಣವಾ ಚಾರ್ಯ ಈ ದುಶ್ಯಾಸ್ತ್ರವ ಹಾರಿಸಿದ ಹರುಷದಲಿ ರುಕ್ಮಿಣಿ ದ್ವಾರಕೆಲಿ ಪೂಜೆ ಮಾಡಿದ ಮೂರುತಿಯ ಸ್ಥಾಪಿಸಿದ ಲೀಲೆಯು ಆರು ಬಣ್ಣಿಸಲಾಪರು 7 ಇದೇ ರಜತಪೀಠ ಅಜಕಾನನವಿದೆ ಇದೇ ಉಡುಪಿ ಇದೇ ಶಿವಕುಲ್ಲ್ಯ ಅದರ ಬಳಿಯಲಿಯಿಪ್ಪ ತೀರ್ಥವ ಅದುಭುತವ ವರ್ಣಿಸುವೆನು ಇದೇ ಅನಂತ ಸರೋವರವು ಮ ತ್ತಿದೇ ವಾರುಣ್ಯಚಂದ್ರಮತೀರ್ಥ ಇದಕೆ ಮಧ್ವಸರೋವರ ವೆಂ ಬದು ಕಾಣೊ ಶ್ರುತಿ ಉಕ್ತಿಲಿ 8 ಸಕಲ ದೇಶದ ಜನರು ತ್ರಿವಿಧ ಸುಖವಾರಿಧಿಯೊಳು ಸೂಸುತಾ ಅಖಿಳ ವೈಭವದಿಂದ ಬಪ್ಪ ಅಕಟ ಸಂದಣಿಗೇನೆಂಬೆ ಸೂರ್ಯ ಬಂದ ಕಾ ಲಕೆ ಕೃಷ್ಣನ ನೋಡುವೆನೆಂದು ಚಕ್ಕನೆ ನಿಲ್ಲದೆ ಬಂದು ನೆರದಂದು ಮುಕ್ತಾರ್ಥ ಹರಿಪ್ರೇರಕಾ 9 ಸಜ್ಜನರ ಸಿರಿಚರಣ ರಜದಲಿ ಮಜ್ಜನವ ಗೈವುತ ಹೆಜ್ಜಿಹೆಜ್ಜಿಗೆ ಕೃಷ್ಣ ಕೃಷ್ಣ ಅಬ್ಜನಾಭ ನಾರಾಯಣ ಮೂಜಗತ್ಪತೆ ಎಂದು ಸ್ತೋತ್ರ ನಿ ರ್ಲಜ್ಜನಾಗಿ ಪಠಿಸುತಾ ರಜ್ಜುಪಾಣಿಯ ಬಹಿರದಿಂದ ನಿ ವ್ರ್ಯಾಜ್ಯ ಭಕುತಿಲಿ ನೋಡಿದೆ 10 ಮೊದಲು ನಮಿಸಿದೆ ಚಂದ್ರಶೇಖರ ಪದುಮಗರ್ಭನ ಮಗನೆಂದು ಅದರ ತರುವಾಯದಲ್ಲಿ ಮಾಯಿಯ ಸದಬಡೆದ ಪೂರ್ಣಬೋಧರು ಸದಮಲಾ ಕುಳುತಿಪ್ಪ ಸ್ಥಾನವ ಒದಗಿ ನೋಡಿ ಕೊಂಡಾಡುತಾ ಮದನ ಜನಕಾನಂತ ಸ್ವಾಮಿಯ ಪದಯುಗಳವನು ನೋಡಿದೆ11 ರತುನ ಗರ್ಭದೊಳಧಿಕವಾದ ತೀ ರಥವಿದು ಮಧ್ವಾಖ್ಯದಿ ಸತತ ಬಿಡದಲೆ ಇಲ್ಲಿ ಭಾಗೀ ರಥಿವಾಸ ನದಿಗಳ ಕೂಡಿ ನುತಿಸಿ ಮೆಲ್ಲನೆ ಮುಟ್ಟಿ ಮಿಂದು ಮತ್ತೆ ಕರ್ಮದ ಚರಿಯವ ಹಿತ ಮನಸಿನಲ್ಲಿ ಮಾಡುವಂಥ ಕೃತ ಕಾರ್ಯವನು ನೋಡಿದೆ 12 ಅಲ್ಲಿಂದ ನವರಂಧ್ರಗಳು ಕಂಡು ಪುಲ್ಲಲೋಚನ ಕೃಷ್ಣನ ಸೊಲ್ಲಿನಿಂದಲಿ ಪಾಡಿ ಭಾರತಿ ವಲ್ಲಭನ ಕೊಂಡಾಡುತಾ ಮೆಲ್ಲ ಮೆಲ್ಲನೆ ದ್ವಾರವನೆ ಪೊಕ್ಕು ನಿಲ್ಲದಲೆ ಸಮೀಪಕೆ ಬಲ್ಲವನು ಗುಣಿಸುತ್ತ ಭಕುತ ವ ತ್ಸಲನಂಘ್ರಿ ನೋಡಿದೆ13 ಮೂರು ಬಗೆ ಭೂಷಣವ ಧರಿಸಿದ ಮೂರುತಿ ಇದೇ ಕಾಣಿರೊ ಪಾರುಗಾಣರು ಈತನ ಅವ ತಾರ ಗುಣಕ್ರಿಯೆ ಮಹಿಮೆಯಾ ವಾರಿಜೋದ್ಭವ ಶಿವ ಮುಖಾದ್ಯರು ಸಾರಿ ಹಾಹಾ ಎಂಬರೊ ಧಾರುಣಿಗೆ ಇದೇ ದೈವ ನವನೀತ ಚೋರನ ಕೊಂಡಾಡಿದೆ 14 ತ್ರಾಹಿ ತ್ರಯಾವಸ್ಥೆ ಪ್ರೇರಕ ತ್ರಾಹಿ ತ್ರಯಗುಣ ವಿರಹಿತಾ ತ್ರಾಹಿ ತ್ರಯಧಾಮ ವಾಸ ಸರ್ವೇಶ ತ್ರಾಹಿ ತ್ರಯ ರೂಪಾತ್ಮಕಾ ತ್ರಾಹಿ ತ್ರಯವನು ಗೆದ್ದ ಪ್ರಸಿದ್ಧ ತ್ರಾಹಿ ತ್ರಯವನು ಕೊಡುವನೆ ತ್ರಾಹಿ ತ್ರಯಗಣ್ಣ ವನಪಾಲಕ ತ್ರಾಹಿ ತ್ರಯಲೋಕಾಧಿಪಾ 15 ಪಾಹಿಪರಮಾನಂದ ಗೋವಿಂದ ಪಾಹಿ ಪರತರ ಪರಂಜ್ಯೋತಿ ಪಾಹಿ ಪತಿತ ಪಾವನ್ನ ಮೋಹನ್ನಾ ಪಾಹಿ ಪಾಲಾಂಬುಧಿಶಾಯಿ ಪಾಹಿ ಜಗದತ್ಯಂತ ಭಿನ್ನಾ ಪಾಹಿ ನಿರ್ಭಿನ್ನ ಸ್ವರೂಪ ಪಾಹಿ ನಖಶಿಖ ಜ್ಞಾನ ಪೂರ್ಣನ ಪಾಹಿ ಎನ್ನಯ ಪ್ರೇಮನೆ 16 ನಮೋ ನಮೋ ಚತುರಾತ್ಮ ಗುಣನಿಧಿ ನಮೋ ನಮೋ ಪುನ್ನಾಮಕ ನಮೋ ನಮೋ ವಟಪತ್ರಶಾಯಿ ನಮೋ ನಮೋ ಪುಣ್ಯಶ್ಲೋಕನೆ ನಮೋ ನಮೋ ಸಮಸ್ತ ಸರ್ವಗ ನಮೋ ನಮೋ ಸರ್ವ ಶಬ್ದನೆ ನಮೋ ನಮೋ ಅವ್ಯಕ್ತ ವ್ಯಕ್ತಾ ನಮೋ ನಮೋ ನಾರಾಯಣ 17 ಜಯ ಜಯತು ಕರಿವರದ ವಾಮನ ಜಯತು ನಾರದ ವಂದ್ಯನೆ ಜಯ ಜಯತು ಪ್ರಹ್ಲಾದ ರಕ್ಷಕ ಜಯ ಜಯತು ಪಾರ್ಥನ ಸಾರಥೆ ಜಯ ಜಯತು ಅಂಬರೀಷ ಪರಿಪಾಲಾ ಜಯತು ಪರಾಶರನುತಾ ಜಯ ಜಯತು ಪಾಂಚಾಲಿ ಮಾನ ಕಾಯ್ದನೆ ಜಯ ಜಯತು ಗೋಪಿಕಾ ವಲ್ಲಭಾ18 ಇನಿತು ಬಗೆಯಲಿ ತುತಿಸಿ ದೇವನ ಮನದಣಿಯ ಕೊಂಡಾಡುತಾ ಕ್ಷಣಬಿಡದೆ ತನ್ನ ನೆನೆಸಿದವರಿಗೆ ಹೊಣೆಯಾಗಿ ಪಾಲಿಸುವನು ಜನುಮ ಜನ್ಮದಲಿಂದ ಮಾಡಿದ ಘನದುರಿತ ಪರ್ವತಗಳು ಚಿನಿಗಡೆದು ಸಾಧನವೆಲ್ಲ ವೇಗ ತನಗೆ ತಾ ಮಾಡಿಸುವನು 19 ವ್ಯಾಧ ಭೂಸುರ ವೇಷವು ಭೇದ ಮಾಡಿದ ನಾರಾಯಣಿ ಸುಪ್ರಸಾದ ನಿರ್ಮಲರೂಪವು ಆದಿವಾರವು ವಿಡಿದು ಎರಡು ಐದು ದಿನ ಪರಿಯಂತವು ಶ್ರೀಧರೇಶನು ವೇಷ ಧರಿಸಿದ್ದು ಸಾಧು ಸಂಗಡ ನೋಡಿದೆ20 ಉದಯಕಾಲದ ಪೂಜೆಯಾಗಲು ಮುದ ನಿರ್ಮಾಲ್ಯ ವಿಸರ್ಜನೆ ಇದೆ ಪೂರೈಸಲು ಮತ್ತೆ ಪಂಚ ಸುಧ ಪೂಜೆ ಉದ್ವಾರ್ಥನೆ ಒದಗಿಯಾಗಲು ಮೇಲೆ ಸುಧ ವಿಧುದಂತೆ ಬೆಣ್ಣೆ ಶರ್ಕರ ಇದೆ ಮಹ ಪೂಜೆ ನೋಡಿದೆ 21 ಗಂಧ ಪರಿಮಳ ತುಲಸಿ ಪುಷ್ಪಾ ನಂದ ಭೂಷಣ ಧರಿಸಿಪ್ಪ ಒಂದು ಕೈಯಲಿ ದಾಮ ಕಡಗೋ ಲಂದದಲಿ ತಾಳಿದಾ ಮಂದರಿಗೆ ಇದು ಸಾಧ್ಯವಲ್ಲವು ಮುಂದೆ ಯತಿಗಳು ಮಂತ್ರವ ಮಂದ ನಗಿಯಲಿ ಪೇಳುತಿಪ್ಪ ಚಂದವನು ನಾ ನೋಡಿದೆ 22 ಎತ್ತುವ ಧೂಪಾರತಿಗಳು ಹತ್ತೆಂಟು ಬಗೆ ಮಂಗಳಾ ರುತ್ತಿ ನಾನಾ ನೈವೇದ್ಯ ಷಡುರಸ ಮೊತ್ತಂಗಳು ಪರಿವಿಧಾ ಉತ್ತಮ ಶಾಖಾದಿ ಘೃತದಧಿ ತತ್ತಕ್ರಫಲ ಪಕ್ವವು ಸುತ್ತಲು ತಂದಿಟ್ಟು ಅರ್ಪಿ ಸುತ್ತಲ್ಲಿಪ್ಪುದು ನೋಡಿದೆ 13 ಮಂತ್ರ ಘೋಷಣೆ ಭಾಗವತಜನ ನಿಂತು ಗಾಯನ ಮಾಡಲು ಅಂತವಿಲ್ಲದೆ ವಾದ್ಯಸಂದಣಿ ಚಿಂತಿಸುವ ನಿಜದಾಸರು ವಂತು ವಾಳೆಯಿಲ್ಲದಾ ಜನ ಸಂತೋಷದಲಿ ನಲಿವುತಾ ತಂತ್ರ ಸಾರೋಕ್ತದ ಪೂಜೆ ಅತ್ಯಂತವನು ನಾ ನೋಡಿದೆ 24 ತೀರ್ಥ ಪ್ರಸಾದ ಗಂಧ ಅಕ್ಷತೆ ಅರ್ಥಿಯಲ್ಲಿ ಕೊಡುವರು ವ್ಯರ್ಥವಲ್ಲಿವು ಇಲ್ಲಿ ಒಂದು ಮು ಹೂರ್ತವಾದರು ಎಂದಿಗೂ ಶುಭ ಪ ದಾರ್ಥ ಬಡಿಸಲು ಉಂಡು ಕೃ ತಾರ್ಥನಾದೆನು ಜ್ಞಾನವಧಿಕ ಸಾರ್ಥಕರನ ನೋಡಿದೆ25 ತರಣಿ ಮಕರಕೆ ಬರಲು ಗೋಪಾಲ ಮೆರೆವ ವೈಭವವೆಂಬೆನೇ ಗಜ ತುರಗ ಹರಿ ಗರುಡ ಶ್ರೀ ಹನುಮಂತನಾ ವರ ರೂಢನಾಗಿ ಮೆರೆದು ಆಮೇಲೆ ಮಿರುಗುವ ರಥವನೇ ಏರಿ ಪರಮ ವೇಗದಿ ಚತುರ್ವೀಧಿಯ ತಿರುಗಿ ಬಪ್ಪದು ನೋಡಿದೆ 26 ಓಕಳಿಯ ಸಂಭ್ರಮವೆ ಪೇಳಲು ಗೋಕುಲಕೆ ಸಮನೆನಿಸಿತು ವಾಕು ಕೇಳ್ ಸುರ ಮುನಿಗಳೊಡನೆ ಲೋಕಕ್ಕಾಶ್ಚರ್ಯ ತೋರುತಾ ಸೋಕಿ ಸೋಕದ ಹಾಸೆ ಓಕುಳೀ ಹಾಕಿ ಆಡುವ ಲೀಲೆಯ ಈ ಕಲಿಯುಗದಲ್ಲಿ ಸೋಜಿಗ ಈ ಕಥೆಯಾದುದು ನೋಡಿದೆ 27 ವಾಲಗ ಎಡಬಲದಲಿ ಪಂಜು ಕಟ್ಟಿಕೆಕಾರರು ರಂಜಿಸುವ ಪಲ್ಲಕ್ಕಿ ಸೇವಿಪ ರಂಜಳವಾಗಿ ಒಪ್ಪಲು ಕುಂಜರಾರಿಯ ಪೀಠದಮೇಲೆ ಕಂಜಲೋಚನ ಕುಳ್ಳಿರೆ ನಿ ರಂಜನದಲಿ ಪೂಜಿಸುವ ಮತಿ ಪುಂಜ ಯತಿಗಳ ನೋಡಿದೆ 28 ಶ್ರುತಿ ಪುರಾಣಗಳುಪನಿಕ್ಷತ್ ವೊ ಸತು ಶಾಸ್ತ್ರ ಪ್ರಬಂಧವು ಭಾಗವತ ಸುಸಂ ಗೀತಿಯಲಿ ರಾಗ ಭೇದವು ಶ್ರುತಿ ಕಥಾಭಾಗ ಪದ್ಯ ಅಷ್ಟಕ ಮಿತಿಯಿಲ್ಲದಲಿಪ್ಪ ಪ್ರಸಂಗ ತತುವ ಮಾರ್ಗದಿ ನುಡಿವ ಬಲು ಉ ನ್ನತ ಮಹಿಮರ ನೋಡಿದೆ 29
--------------
ವಿಜಯದಾಸ
ನೋಡಿರೆ ನೋಡಿರೆ ನಂದನ ಕಂದನ| ಆಡುವ ಆಟದ ಘನ ಮಹಿಮೆಯನು| ರೂಢಿಲಿ ಶಿಶುವೆಂದವರ ನುಡಿ ಮಾಡುವ ಬಲುಕುಂದಾ ಪ ದುರುಳತನವ ಬಲು ಮಾಡಲೈಶೋಧೆಯು| ತರಳನ ಚರಣವ ನೆರೆ ಕಟ್ಟಿದರೆ| ಒರಳವ ನೆಳೆದೊಯ್ದಾ ಭರದಲಿ ಮರಗಳ ನಡ ಮುರಿದಾ 1 ಸಿಕ್ಕಿದ ಗೋವಳನೆನುತಲಿ ಬಾಲೇರು| ಅಕ್ಕರದಲಿ ಹಿಡಿದೆಳೆತರಲವರಾ| ಮಕ್ಕಳ ರೂಪವನು ಆಗುತೆ ಠಕ್ಕಿಸಿ ಹೋಗುವನು2 ತಂದೆ ಮಹಿಪತಿ ನಂದನ ಪ್ರಭುವಿನಾ| ನಂದನ ಲೀಲೆಯ ಹೇಳಲೆನ್ನಳವೇ| ಒಂದಲ್ಲ ಎರಡಲ್ಲ ನೆಲೆಯನು ಇಂದುಧರನೇ ಬಲ್ಲ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡಿರೋ ನಿಜ ನೋಡಿರೋ ನೋಡಲು ಗುರುಸೇವೆ ಮಾಡಿರೋ ಧ್ರುವ ನೋಡದರೊಳಗೊಂದಡಗ್ಯಾದೆ ಅಡಗಿದಕೊಂದು ಮನೆ ಮಾಡ್ಯಾದೆ ಮಾಡಿದರೊಳಗೊಂದು ಮೂಡ್ಯಾದೆ ಮೂಡಿದಕೊಂದು ಗೂಢವಾಗ್ಯಾದೆ 1 ಆಡುವೆರಡು ಮಧ್ಯಾನಾಡ್ಯಾದೆ ನಾಡಿ ಮಧ್ಯೊಂದು ಕೂಡಿಹದ್ಯಾದೆ ಕೂಡಿದ ಹಾದಿಗೊಂದು ಮಾಡ್ಯಾದೆ ಮಾಡಿದಕೊಂದು ಕೈ ಗೂಡ್ಯಾದೆ 2 ಮುಂದ ನೋಡಲು ಹಿಂದವಾಗ್ಯಾದೆ ಹಿಂದನೋಡಲು ಮಂದವಾಗ್ಯಾದೆ ಹಿಂದ ಮುಂದ ತಾನೆ ತುಂಬ್ಯಾದೆ ಕಂದ ಮಹಿಪತಿಗಾನಂದಾಗ್ಯಾದೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪಾಪಾತ್ಮ ನಾನಲ್ಲ ಪಾಪವೆನದಿನಿತಿಲ್ಲ ಪ ಶ್ರೀಪತಿಯೆ ನಿನಗೆ ನೀನೇ ಮಾಡಿಕೊಂಡೆ ಅ ವರದನು ಕರದಲಿ ಉಷ್ಣಜಲ ಮೃತ್ತಿಕೆಯತರಲು ಕೈ ಸುಟ್ಟಾಗ ಪಣೆಯ ಠೊಣೆದು ಬೈದೆಮರಳಿ ನಾಚಿಕೆ ಇರದೆ ಚರಣಕೆ ಪಾವುಗೆ ತಂ-ದಿರಿಸಿದಪರಾಧ ಎನ್ನದೊ ನಿನ್ನದೊ ದೇವ 1 ಬಂದ ಭೃಗು ಮುನಿ ಎದೆಯನೊದೆಯೆ ಆತಗೆ ಪಾಪಅಂದು ಮೂದಲಿಸಿ ಬೈದವರಿಗೆ ದೋಷನಿಂದುದೇ ಹಣೆಯೊಳಗೆಸೆಯೆ ಭೀಷ್ಮಂಗಘವುಹೊಂದಿದಾ ಪಾಂಡವರಿಗೆ ಕುಂದು ಬಂದಿತೆ ದೇವ2 ಕುರುಡನಿಗೆ ದಾರಿಯನು ತೋರದೆ ಆತಗೆ ಮುನಿದುದರಿಗೆ ನೂಕಿದಡೆ ಅವನು ಏನು ಮಾಡುವನುಶಿರಕೆ ತಪ್ಪಾಗಿ ಗುರಿಯಿಡಲದು ಸರಳ ತಪ್ಪೆಅರಸನಾಳ ಕೊಂದಡೆ ಆರೇನು ಮಾಡುವರು 3 ಕುಣಿಸಿದರೆ ಆಡುವುದು ಬೊಂಬೆ ಸೂತ್ರಮುಖದಿಇನಿತುಂಟೆ ಕಪಟನಾಟಕ ಸೂತ್ರಧಾರಿಇನಿತಾಡಿಸಿದರಾಡುವೆ ಪಾಪ ಪುಣ್ಯಂಗಳಿಂದಎಣಿಕೆಗಾನಲ್ಲ ನೀನಲ್ಲದಿಲ್ಲ 4 ತಂದೆತಾಯಿಗಳು ತಮ್ಮ ಕಂದಗೆ ಸರ್ಪಮುಖದಿಂದ ಕಚ್ಚಿಸಲು ಆ ತಪ್ಪು ಕಂದನದೆಮುಂದರಿಯದಜ್ಞಾನಿಯೆಂದು ಕ್ಷಮಿಸೆಲ್ಲವನು ತಂದೆ ವೇಲಾಪುರದ ಆದಿಕೇಶವನೆ5
--------------
ಕನಕದಾಸ