ಒಟ್ಟು 152 ಕಡೆಗಳಲ್ಲಿ , 39 ದಾಸರು , 133 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೈಯ ತೋರೋ ರಂಗ ಕೈಯ ತೋರೋ ಪ. ಕೈಯ ತೋರೋ ಕರುಣೆಗಳರಸನೆ ಅ.ಪ. ಶರಧಿ ಮಥನದಿ ದೇವಾಸುರರಿಗೆ ಮೋಹಿನಿಯೋಲ್ ಸುರರಿಗೆ ಸುಧೆಯಿತ್ತು ಸುರರಿಗಾಸರೆಯನಿತ್ತಾ 1 ಶಿರಮಂ ಸದ್ಗತಿವೊಂದಿಸಿ ಹರನಂ ನಲವಡಿಸಿದ 2 ಹರನ ವರದಿ ಭಸ್ಮಾಸುರ ಗರ್ವಿತನಾಗಿ [ಆ] ಹರನಂ ಬೆನ್ನಟ್ಟಿ ಬರೆ ದುರುಳನ ದಂಡಿಸಿದಾ 3 ತರಳಧ್ರುವ ತಾಯ ಬಿರುನುಡಿಗೆ ಮನನೊಂದು ಶರಣೆನೆ ಮೈದೋರಿ ತರಳನ ಮೈದಡಹಿದ4 ಕಂದ ಪ್ರಹ್ಲಾದನ ತಂದೆಯುಗ್ರದಿ ಜಡಿಯೆ ಕಂಬದಿಂ ಬಂದು ಖಳನ ಕರುಳನು ಕಿತ್ತೆಸೆದಾ 5 ಮೊಸಳೆ ಬಾಯೊಳು ಸಿಕ್ಕಿ ಬಸವಳಿದು ಬಾಯ್ಬಿಡುತಿರೆ ಎಸೆದ ಚಕ್ರದಿ ಸೀಳಿ ನಕ್ರನ ಕರಿಯನುದ್ಧರಿಸಿದ 6 ಚಕ್ರಧರ ರುಕ್ಮಿಣಿಯ ಕೈಪಿಡಿದ7 ತರುಣಿಯಭಿಮಾನವ ನೆರೆಕಾಯ್ದು ನರನಿಗೆ ವರಸಾರಥಿಯಾಗಿ ತೇರನೆ ನಡೆಸಿದ 8 ವರಶೇಷಗಿರಿಯಲ್ಲಿ ಸ್ಥಿರವಾಗಿ ಶರಣರ ಕರೆದಾದರಿಸಿ ವರಗಳ ಕೊಡುತಿಪ್ಪ 9
--------------
ನಂಜನಗೂಡು ತಿರುಮಲಾಂಬಾ
ಗಂಗಾ ಜನಕ ವಿಠಲ | ಅಂಗನೆಯ ಪೊರೆಯೋ ಪ ಮಂಗಳಾಂಗನೆ ದೇವ | ರಂಗ ಭವಹಾರೀ ಅ.ಪ. ವೈರಾಗ್ಯ ಭಾಗ್ಯಗಳ | ಹಾರೈಸುವಂತೆಸಗೋಸಾರಸುಖ ಸಾಂದ್ರ ಹರಿ | ಮಾರಮಣ ದೇವಾ |ಘೋರ ಭವವೆನಿಪ ಕೂ | ಪಾಠ ದಾಟಿಸೊ ಹರಿಯೆಕಾರುಣ್ಯ ಶರಧಿತವ | ಓರೆ ನೋಟದಲೀ1 ಗಣನೆಗೊಳಗಾಗದಿಹ | ಜನನ ಮರಣವು ಬರಲಿತನು ಮನದ ಸಂತಾಪ | ಅಣು ಬೃಹತು ಇರಲೀಗುಣ ಪೂರ್ಣ ಶ್ರೀಹರಿಯೆ | ಗಣನೆಗದು ಸಿಗದ ತೆರಅನನುತನೆ ನಿನ್ನ ಕಾರುಣ್ಯ ಒಂದಿರಲೀ 2 ಅಂಗನೆಗೆ ಸ್ವಪ್ನದಲಿ | ಗಂಗೆ ಮೀಯಿಸಿ ಬಾಲಸಂಗದಲಿ ಧವಳಾಖ್ಯ | ಗಂಗೆ ಸೋಪಾನಾಭಂಗ ವಿಲ್ಲದೆ ಯೇರಿ | ಮಂಗಳಾಂಗೆರ ಕಂಡುಶಿಂಗರದಿ ಪೂಜಿಸಿಹ | ಅಂಗನಾ ಮಣಿಯಾ 3 ಉಚ್ಚ ನೀ ಚಂಗಳನು | ಸ್ವಚ್ಛ ತಿಳಿಸುತ್ತಿವಳಕೃಚ್ಛ್ರಕೇ ಒಲಿಯುತ್ತ | ಲಕ್ಷ್ಮೀ ರಮಣಾಅಚ್ಚ ಭಕುತಿ ಜ್ಞಾನ | ನಿಚ್ಚಳದ ಮನವಿತ್ತುಸಚ್ಚಿದಾನಂದಾತ್ಮ | ಉಚ್ಚಳೆಂದೆನಿಸೋ 4 ವಿಷ್ಣು ಪದಿಧರಸಖನೆ | ದಶರಥಾತ್ಮಜ ಹರಿಯೆಯಶವಂತೆ ಗೃಹಿಣಿ ತವ | ಎಸೆವಪದ ಬಿಸಜವನು ಹಸನು ಸೇರಿಸೊಗುರೂ ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಗಾಡಿಯೆತ್ತಲಿಂದ ಬಂದುದೆ ಮಾತ ನಾಡಲರಿಯದಿಪ್ಪ ಹೊಚ್ಚ ಹೊಸ ಹರೆಯದ ಮುಗುದೆಗೀ ಪ ಬಳುಕೆ ಸಿಂಹಮಧ್ಯ ಬಟ್ಟಮೊಲೆಗಳು ಮರೆ ತೋರವಾದ ಬಳವಿ ಮುಡಿಯೊಳಲರು ಹೊಯ್ಯನಿಳೆಯಲುದುರಲು ಜಲಜಮುಖದಿ ಬೆಮರುದೋರೆ ವಲಯಹಾರ ಉರದಿ ಘಲಿರು ಘಲಿರೆನೆ ಆವಕಡೆಯು ಕುಲುಕಿ ಕುಲುಕಿ ನಡೆವ ಈ 1 ಮಿಸುಪ ಮಂದಹಾಸ ಮುಖದಿ ಮಸಗಿದಂತ ಕಾಂತಲಜ್ಜೆ ಮುಸುಕೆ ಮಿಸುಪ ಕದಪಿನಲ್ಲಿ ಎಸೆವ ಓಲೆ ಢಾಳಿಸಿ ಸಸಿನೆ ತಿದ್ದಿ ಉರದಿ ಜರಿಯ ವಸನವನ್ನು ಸಂತವಿಸುತ ಕುಸುರಿಲಂಗ ದಂದವನ್ನು ಎಸಸಿ ಬಿಡುವ ನಡೆವ 2 ಕರವನೊಯ್ಯಗೊಲಿದು ಉರಗಗಿರಿಯ ಮೇಲೆ ಬಾಲಚಂದ್ರ ನಿರಲು ಸೆರಗ ಮರೆಯಮಾಡಿ ಮರಳಿ ಮರಳಿ ನೋಡುತಾ ಸ್ಮರನತಾತ ಸುರನಗರದೆರೆಯ ವೈಕುಂಠಲಕ್ಷ್ಮಿಯರಸನೊಡನೆ ನೆರೆದ ಪರಿಯ ಸಿರಿಯ ಗರುವ ಗಮನದಾ 3
--------------
ಬೇಲೂರು ವೈಕುಂಠದಾಸರು
ಗಾಡಿಯೆತ್ತಲಿಂದ ಬಂದುದೇ ಮಾತ ನಾಡಲರಿಯದಿಪ್ಪ ಹೊಚ್ಚಹೊಸ ಹರೆಯದ ಮುಗುದೆಗೀ ಪ ಬಳುಕೆ ಸಿಂಹಮಧ್ಯ ಬಟ್ಟ ಮೊಲೆಗಳದುರೆ ತೋರವಾದ ಬಳಲುಮುಡಿಯೊಳಲರು ಒಯ್ಯನಿಳೆಯೊಳುದುರಲೂ ಜಲಜಮುಖದಿ ಬೆವರುದೋರೆ ವಲಯತೋರಹಾರ ಉರದಿ ಘಲಿರು ಘಲಿರನುಲಿವ ಕುಲುಕಿ ಕುಲಕಿ ನಡೆವ ಯೀ 1 ಮಿಸುಪ ಮಂದಹಾಸ ಮುಖದಿ ಮಸಗಿದಂತ ಕಾಂತಿ ಲಜ್ಜೆ ಮುಸುಕೆ ಮಿಸುಪ ಕದಪಿನಲ್ಲಿ ಎಸೆವ ಓಲೆ ಢಾಳಿಸೆ ಸಸಿನೆ ತಿದ್ದಿ ಉರದಿ ಜರಿವ ವಸನವನ್ನು ಸಂತವಿಸುತ ಉಸುರಿಲಿಂದ ಗಂಧವನ್ನು ಎಸಸಿಬಿಡುವ ನಡೆವ ಯೀ 2 ಕರವನೊಯ್ಯನೊಲಿದು ರೋಜಗಿರಿಯ ಮೇಲೆ ಬಾಲಚಂದ್ರ ನಿರಲುಸೆರಗಮರೆಯಮಾಡಿ ಮರಳಿಮರಳಿನೋಡುತಾ ಸ್ಮರನತಾತ ಸುರನಗರ ದೆರೆಯ ಲಕ್ಷ್ಮಿಯರಸನೊಡನೆ ನೆರೆದಪರಿಯ ಸಿರಿಯ ಗರುವಗಮನದಾ ಯೀ 3
--------------
ಕವಿ ಲಕ್ಷ್ಮೀಶ
ಗಾಳಿಗಿಟ್ಟ ದೀಪಕಾಣಿರೋ ಈ ಸಂಸಾರ ಗಾಳಿಗಿಟ್ಟ ದೀಪಕಾಣಿರೋ ಪ ಗಾಳಿಗಿಟ್ಟ ದೀಪಕಾಣಿರೋ ಬೀಳು ಜಗದ ಬಾಳು ಎಲ್ಲ ನೀಲಶಾಮನ ಪಾದನಂಬಿ ಕಾಲನಾಳಿನ ದಾಳಿ ಗೆಲಿಯಿರೋ ಅ.ಪ ಸೂತ್ರಬೊಂಬೆಯಂತೆ ಕುಣಿಯುವ ಈ ದೇಹವೆಂಬ ತುಂಬಿ ತುಳುಕುವ ಆ ಗಾಳಿ ನಿಮಗೆ ಸೂತ್ರಧಾರಿಯ ಭಜಿಸಿ ಭವದ ಯಾತ್ರೆ ಜಯವ ಪೊಂದಿರಯ್ಯ 1 ಮಾಯೆಯಿಂದ ಕಲ್ಪಿಸಿರುವ ಈ ಮಾಯಕಲ್ಪ ಮಾಯೆಯೊಳಗೆ ಲಯಿಸುತಿರುವ ಆ ಮಾಯಗಾರ ಮಾಯದಾಟ ಆಡುತಿರುವ ತಿಳಿರೋ ನಿಜವ ಮಾಯತುಂಬಿ ಮಾಯಬೆಳಗಿ ಮಾಯಜಗವೆನಿಸಿ ತೋರ್ಪ ಮಾಯಮಹಿಮನ ಮರೆಯಬಿದ್ದು ಮಾಯಮೃತ್ಯು ಗೆಲ್ಲಿರಯ್ಯ 2 ವಿಷಮಕನಸಿನಂತೆ ತೋರುವ ಈ ಇಂದ್ರಜಾಲ ಹಸನಗೆಡಿಸಿ ನಿಮಿಷದಡಗುವ ಈ ಹೇಯ ಮಲ ಅಸಮಸುಖಕೆ ಬೆಂಕಿಹಚ್ಚುವ ಪಾಪಕೊಂಡವ ಅಸಮಜ್ಞಾನದಿಂದ ದಾಂಟಿ ವಸುಧೆಗಧಿಕ ಶ್ರೀರಾಮಪಾದ ಕುಸುಮಕ್ಹೊಂದಿ ನಿರ್ಮಲೆನಿಸಿ ಎಸೆವಮೋಕ್ಷ ಪಡೆಯಿರಯ್ಯ 3
--------------
ರಾಮದಾಸರು
ಗುರುವೆ ನಿಮ್ಮನು ನಾ ಮೊರೆಹೊಕ್ಕೆನಲ್ಲದೆ ಅರಿಯೆ ಅನ್ಯರನಿನ್ನು ಪೊರೆಯಿರೀಗ ಪ. ಸಿರಿಯರಸನ ತೋರಿ ಗುರುವೆ ಕರುಣಿಸಿರಿ ತರತಮ್ಯ ತಿಳಿಸುತ ಹರಿಸಿರಿ ಭವದುಃಖಅ.ಪ. ಬಂದೆನು ಭವದೊಳು ನಿಂದೆನು ತಾಪದಿ ಹಿಂದು ಮುಂದರಿಯದೆ ಕುಂದಿದೆನು ಬಂದು ಕರುಣದಿ ಆನಂದವ ನೀಡುತ ನಂದಕಂದನ ಲೀಲೆಯಿಂದ ರಕ್ಷಿಸಿದಿರಿ1 ಮುಸುಕಿದ ಅಜ್ಞಾನ ಹಸನಾಗಿ ತೊಲಗಿಸಿ ಕುಶಲದ ಮತಿಯಿತ್ತು ಪಾಲಿಸುತ ಬಿಸಜಾಕ್ಷನು ದಯ ಎಸೆವ ಕರುಣದಿಯಿತ್ತು ಘಸಣೆಗೊಳಿಸದಲೆ ವಸುಮತಿಯೊಳು ಪೊರೆವ 2 ಕಷ್ಟವಪಡಲಾರೆ ಸೃಷ್ಟಿಯೊಳಗಿನ್ನು ತಟ್ಟದೆ ಎನ್ನ ಮೊರೆ ಮನಸಿಗೀಗ ಕೊಟ್ಟು ಅಭಯವನು ಘಟ್ಯಾಗಿ ಪೊರೆಯಿರಿ ಕೆಟ್ಟ ಕಲ್ಮಷ ಕಳೆದು ಸೃಷ್ಟಿಗೊಡೆಯನ ತೋರಿ 3 ತಲ್ಲಣಿಸುತಿಹೆ ಕ್ಷುಲ್ಲ ದೇಹದಿ ಬಂದು ಒಲ್ಲೆನು ಈ ದುಃಖಭವ ಎಲ್ಲ ಮನಸು ನಿಮ್ಮ ಪಾದದಲಿರುವುದು ತಲ್ಲಣಗೊಳಿಸದೆ ಪೊರೆಯಿರಿ ಗುರುದೇವ 4 ತಂದೆ ಮುದ್ದುಮೋಹನವಿಠ್ಠಲನೆಂಬೊ ಇಂದಿರೇಶನ ಅಂಕಿತದಿ ಮೆರೆವೊ ಸುಂದರ ಗೋಪಾಲಕೃಷ್ಣವಿಠ್ಠಲನ ಎಂದೆಂದಿಗೂ ಮನಮಂದಿರದಲಿ ಕಾಂಬ 5
--------------
ಅಂಬಾಬಾಯಿ
ಗೋವಿಂದ ಹರಿ ಗೋವಿಂದ ಪ ಗೋವಿಂದ ಪರಮಾನಂದ ಮುಕುಂದಅ ಮಚ್ಛ್ಯಾವತಾರದೊಳಾಳಿದನೆ - ಮಂದರಾಚಲ ಬೆನ್ನೊಳು ತಾಳಿದನೆಅಚ್ಛ ಸೂಕರನಾಗಿ ಬಾಳಿದನೆ - ಮದಹೆಚ್ಚೆ ಹಿರಣ್ಯಕನ ಸೀಳಿದನೆ1 ಕುಂಭಿನಿ ದಾನವ ಬೇಡಿದನೆ - ಕ್ಷಾತ್ರ-ರೆಂಬುವರನು ಹತ ಮಾಡಿದನೆಅಂಬುಧಿಗೆ ಶರ ಹೂಡಿದನೆ - ಕಮ-ಲಾಂಬಕ ಗೊಲ್ಲರೊಳಾಡಿದನೆ 2 ವಸುದೇವನುದರದಿ ಪುಟ್ಟಿದನೆ - ಪಲ್‍ಮಸೆವ ದನುಜರೊಡೆಗುಟ್ಟಿದನೆಎಸೆವ ಕಾಳಿಂಗನ ಮೆಟ್ಟಿದನೆ - ಬಾ-ಧಿಸುವರ ಯಮಪುರಕಟ್ಟಿದನೆ 3 ಪೂತನಿಯ ಮೈ ಸೋಕಿದನೆ - ಬಲುಘಾತದ ಮೊಲೆಯುಂಡು ತೇಕಿದನೆಘಾತಕಿಯನತ್ತ ನೂಕಿದನೆ - ಗೋಪವ್ರಾತ ಗೋಗಳನೆಲ್ಲ ಸಾಕಿದನೆ4 ಸಾಧಿಸಿ ತ್ರಿಪುರರ ಗೆಲಿದವನೆ - ಮ್ಲೇಚ್ಛರಛೇದಿಸೆ ಹಯವೇರಿ ಕೆಲೆದವನೆಸಾಧುಸಂತರೊಡನೆ ನಲಿದವನೆ - ಬಾಡದಾದಿಕೇಶವ ಕನಕಗೊಲಿದವನೆ 5
--------------
ಕನಕದಾಸ
ಗೌರೀದೇವಿ ಮಾತಾಡೇ ಎನ್ನ ಮೌನದ ಗೌರೀ ಯಾತಕಚಲಮನ ಸೋತವನೊಡನೆ ಮಾತಾಡೇ ಗೌರಿ ಮಾತಾಡೇ ಪ ನಸುನಗೆ ಮುಖವಿದು ಬಾಡಿ ಕೆಂದುಟಿಯು ಎಸೆದಿರಲು ನಾನೋಡಿ ವಸುಧೆಯೊಳಗೆ ನಾ ಜೀವಿಸಲಾರೆ ಘಸಘಸವ್ಯಾತಕೆ ತುಂಬಿತÀು ಅರಗಿಣಿ 1 ಕ್ಷಣ ಬಿಟ್ಟಿರಲಾರೆ ಅಮ್ಮ ಷಣ್ಮುಖ ಗಣಪರ ತಾಯೆ ನೀ ಬಾರೇ ವಸುಧೆಯೊಳಗೆ ನಾ ಜೀವಿಸಲಾರೆ ಘಸಘಸವ್ಯಾತಕೆ ತುಂಬಿತು ಅರಗಿಣಿ 2 ಕ್ರೋಧವ್ಯಾತಕೆ ಎನ್ನೊಳು ಗೌರೀ ಏನಪ- ರಾಧವು ಇದ್ದರು ತಾಳೇ ಪಾದ ಕಿಂಕಿಣಿಯೇ ಆದರಿಸುವೆ ನಾ ಆದರಿಸುವೆನೇ 3
--------------
ಶ್ರೀದವಿಠಲರು
ಜೋಜೋ ಕಂದÀರ್ಪಕೋಟಿ ಲಾವಣ್ಯಜೋಜೋ ವೃಂದಾರಕ ಶಿರೋರನ್ನ ಪ . ಜೋಜೋ ನಂದನ ಸುಕೃತದ ಫಲವೆಜೋಜೋ ಮುನಿಮನಮಧುಪ ಕಮಲವೆಅ.ಪ. ಪೊನ್ನ ತೊಟ್ಟಿಲ ಮೇಲೆ ಮಣಿಮಯವಾದ ವಿತಾನ್ನವ ಕಟ್ಟ್ಟಿ ಪಟ್ಟೆಯ ಮೇಲ್ವಾಸಿನಲಿಚಿನ್ನ ಶ್ರೀಕೃಷ್ಣನ ಮಲಗಿಸಿ ಗೋಕುಲದಕನ್ನೆಯರೆಲ್ಲ ತೂಗುತ ಪಾಡಿದರೆ 1 ಶಶಿಯ ಚೆಲುವ ಪೋಲ್ವ ಮೊಗದ ಚೆನ್ನಿಗನೆಎಸೆವ ಕಿರುಡೊಳ್ಳಿನ ಸೊಬಗ ಬಾಲಕನೆಪೊಸಕೆಂದಾವರೆಯಂದದಿ ಮೃದುಪದನೆಬಿಸರುಹನಯನ ಬಿಡದಿರೆಮ್ಮ ಕಂದ 2 ಪೂತನಿ ಅಸುವನೀಂಟಿದ ಪೋತ ಶಿಶುವೆವಾತದೈತ್ಯನ ಗೆಲಿದದುಭುತ ಬಾಲಭೂತಗಳನಂಜಿಸುವರ್ಭಕನೆಓತೆಮ್ಮ ಶಿಶುಗಳ ಸಲಹೊ ಶ್ರೀಹರಿಯೆ 3 ಅಮೃತವನೂಡಿ ಸುರರ ಬೆಳೆಸಿದನೆಭ್ರಮಿತನಾದ ಕರಿವರನ ಕಾಯ್ದವನೆಸುಮುಖತನದಿ ಪರೀಕ್ಷಿತನ ಪೊರೆದನೆಮಮತೆಯಿಂದೆಮ್ಮ ಶಿಶುಗಳ ನೀ ಸಲಹೊ 4 ಪೊಳೆÀವ ಮೂಲರೂಪದಿ ತೋರಿದೆ ನೀ-ನುಳಿದ ಶಿಶುಗಳಂತೆ ಶಿಶುವೆನ್ನಬಹುದೆಲಲನೆ ಬೇಡಿಕೊಳ್ಳೆ ತನ್ನ ತಾನೆ ಶಿಶು-ಗಳ ಭಾವವಿಡಿದೆಯೆಂದೆಂಬರು ನಿನ್ನ5 ಈ ಮಹಿಯೊಳು ಹರಿ ಶಿಶುವಾಗೆ ತನ್ನ ಮ-ಹಿಮೆಯ ತುತಿಸುವ ಶ್ರುತಿವನಿತೆಯರುವ್ಯಾಮೋಹದಿ ಬಂದು ಲಲನೆಯರಾದರುಆ ಮುಗ್ಧೆಯರು ಪಾಡುತ ತೂಗಿದರೆ 6 ನೀ. ಶಿಶುವಾದರೆ ನಿನ್ನುದರದೊಳಿರ್ದ ಶ್ರುತಿಮುಕ್ತರು ಶಿಶುಗಳೆಂತಾಹರೊವೇಷಧರನಾಗಿ ಶಿಶುಗಳ ವಾಸಿನೊಲಿದೆವಾಸುದೇವ ನಮ್ಮ ಬಿಡದಿರು ಶ್ರೀ ಕೃಷ್ಣ 7 ಆವಳಿಸಲು ನಿನ್ನ ಗರ್ಭದೊಳಗೆ ಭುವ-ನಾವಳಿ ಗೋಪಗೋಪಿಯರನ್ನು ತೋರಿದೆಶ್ರೀವರ ನೀನೆಲ್ಲರ ತಂದೆಯಲ್ಲದೆಭಾವಜ್ಞರ ಮತದಿ ಶಿಶುವೆಂತಪ್ಪೆ 8 ಹಯವದನನಾಗಿ ವೇದವÀ ತಂದುಪ್ರಿಯಸುತ ಚತುರಮುಖಗೆ ಪೇಳಿದಖಿಳ ವಿ-ದ್ಯೆಯ ಖನಿ ನೀನೀಗಳೇನೆಂದು ನುಡಿಯಲ-ರಿಯದ ಬಾಲಕನಾದ ಬಗೆ ಪೊಸತಯ್ಯ
--------------
ವಾದಿರಾಜ
ಜ್ಞಾನವಾವುದು ಅಜ್ಞಾನವಾವುದು ಮಾನವಾವುದು ದುಮ್ಮಾನವಾವುದು ಪ ಹರಿಯ ಸ್ಮರಣೆಯಿರಲದೊಂದು ಜ್ಞಾನವಲ್ಲವೆ ಕೊರಳ ಸೆರೆಯ ಕಾಣದಿಪ್ಪುದಜ್ಞಾನವಲ್ಲವೆ ಪರರ ಸತಿಯ ತೊರೆವುದೊಂದು ಮಾನವಲ್ಲವೆ ಪರರ ಸೇವೆಗಿರುವದವಮಾನವಲ್ಲವೆ 1 ಧನ್ಯರನ್ನು ಮನ್ನಿಸುವುದು ಜ್ಞಾನವಲ್ಲವೆ ಹೊನ್ನ ಹುದಿದು ಅನ್ನ ತೊರೆವುದಜ್ಞಾನವಲ್ಲವೆ ಅನ್ಯರೊಡವೆ ಕಳುವುದವಮಾನವಲ್ಲವೆ 2 ಹಸಿದವರನು ಕಂಡು ಯಿಕ್ಕಲು ಜ್ಞಾನವಲ್ಲವೆ ಹುಸಿಕನಾಗಿ ಅಸತ್ಯ ಮಾಳ್ಪುದು ಅಜ್ಞಾನವಲ್ಲವೆ ಹಸನವಾಗಿ ನಡೆವ ಕೃತ್ಯ ಮಾನವಲ್ಲವೆ ಎಸೆವ ಜೂಜು ತಪ್ಪಲವಮಾನವಲ್ಲವೆ 3 ಸ್ಥಿರವಿದಲ್ಲವೆಂಬ ಜೀವಿ ಜ್ಞಾನಿಯಲ್ಲವೆ ನರಕ ಭಯವ ಮರೆವ ಜಡನಜ್ಞಾನಿಯಲ್ಲವೆ ಹಿರಿಯರಿಂದ ಅನಿಸಿಕೊಂಬುದು ಮಾನವಲ್ಲವೆ ಬರಿಯ ಕ್ಷುದ್ರವೆಸಗಲವಮಾನವಲ್ಲವೆ 4 ಕ್ರೋಧವನ್ನು ತೊರೆದ ಮನುಜ ಜ್ಞಾನಿಯಲ್ಲವೆ ವೇದವನ್ನು ಜರೆದ ನರನಜ್ಞಾನಿಯಲ್ಲವೆ ಸೋದರರು ಕೂಡಿಯಿರಲು ಮಾನವಲ್ಲವೆ ಮಾದಿಗರ ಸಂಗವದವಮಾನವಲ್ಲವೆ 5 ಗುರು-ಹಿರಿಯರನುಸರಿಸೆ ಜ್ಞಾನವಲ್ಲವೆ ಸಿರಿಯ ವೇಶ್ಯಸ್ತ್ರೀಗೆ ಕೊಡಲಜ್ಞಾನವಲ್ಲವೆ ದೊರೆಯು ಕರೆದು ಉಚಿತವೀಯೆ ಮಾನವಲ್ಲವೆ ತಿರುಕರಂತೆ ತಿರಿವುದು ಅವಮಾನವಲ್ಲವೆ 6 ವರಾಹತಿಮ್ಮಪ್ಪ ಒಲಿದರದು ಜ್ಞಾನವಲ್ಲವೆ ಮರೆದು ಕ್ಲೇಶಕೆರಗುವುದಜ್ಞಾನವಲ್ಲವೆ ಕರೆದು ಪರರಿಗಿಕ್ಕುವುದು ಮಾನವಲ್ಲವೆ ಕರೆಕರೆಯ ಮಾತು ಅವಮಾನವಲ್ಲವೆ 7
--------------
ವರಹತಿಮ್ಮಪ್ಪ
ತಂಗಿ ಮೊಸರ ಸುತ್ತ ಚೆಲ್ಲಿದ ಮುದ್ದುರಂಗ ಬೆಣ್ಣೆಯ ಮೆದ್ದ ಬಲ್ಲಿದ ಪ. ಪುಟ್ಟ್ಟಿದಾಗಲೆ ಮೂಲರೂಪವ ತೋರಿಅಟ್ಟಿದ ಸುಜನರ ತಾಪವಕೊಟ್ಟ ನಮಗೆ ಜ್ಞಾನದೀಪವ ಕೃಷ್ಣತೊಟ್ಟ ದುರ್ಜನರೊಳು ಕೋಪವ1 ಯಶೋದೆಯ ಮೊಲೆವಾಲನುಂಬಾಗ ನಸುಬಿಸಿನೀರನೆ ಎರೆಸಿಕೊಂಡಾಗಶಿಶುವು ಪೂತಣಿಯ ಕೊಂದಿತೆಂಬಾಗ ರ-ಕ್ಕಸರಿಗೆ ಇವ ಬಲುದಿಮ್ಮಿಗ 2 ಇಂದಿರೆಯನು ಬಿಗಿದಪ್ಪಿದ ಸಖವೃಂದಾರಕರೊಳಗೊಪ್ಪಿದಕಂದರ ಕಲ್ಲಿಂದ ಜಪ್ಪಿದ ತಾಯಿಹಿಂದಟ್ಟಿ ಬರಲೋಡಿ ತಪ್ಪಿದ3 ಪುಟ್ಟ ಕೃಷ್ಣನ ಕಟ್ಟಬೇಕೆಂದು ತಂ-ದೊಟ್ಟಿ ಹಗ್ಗಗಳ ತಂದುಬೆಟ್ಟವಾಗಿರಲು ದುರ್ಜನರ ಕೊಂದು ಈಗಗಟ್ಟಿಮಾಡಿದಳಿವ ಹರಿಯೆಂದು4 ಒರಳನೆಳೆದ ಬಲುಮತ್ತಿಯ ದೊಡ್ಡಮರನ ಕಿತ್ತಿದ ನೋಡಿವನರ್ಥಿಯತರಳಾಕ್ಷಿ ಕೃಷ್ಣನ ನೆತ್ತಿಯ ಬೆಣ್ಣೆಸುರಿಯೆ ಪಾಡಿದಳವನ ಕೀರ್ತಿಯ5 ಗಗನಕೆ ಏರಿ ವಾತನ ಕೊಂದ ನೀರೊ-ಳಗೆ ಪೊಕ್ಕು ತಂದೆಯ ಕರೆತಂದಖಗನಂತೆ ಕಡಹದಮರದಿಂದ ಹಾರಿವಿಗಡ ಸರ್ಪನ ಹೆಡೆಯೇರಿ ನಿಂದ6 ತುಳಿದಹಿತಲೆಯನು ಬಿಚ್ಚಿದನಾಗಲಲನೆಯರುಕ್ತಿಗೆ ಮೆಚ್ಚಿದ ಅಲರು ಮಳೆಯ ಸುರಿಯ ಹಚ್ಚಿದ ಕೃಷ್ಣಖಳರಳಕೆಗಳ ಕೊಚ್ಚಿದ 7 ನಂದನ ರಾಣಿಗೆ ಮೆಚ್ಚಿದ ತಾಯಚಂದದ ಕೈಗಳಿಂದುಚ್ಚಿದಇಂದೆನ್ನ ಮನೆಯೊಳು ಸಚ್ಚಿದಾ-ನಂದ ಹಿಡಿಯೆ ಕೈಯ್ಯ ಕಚ್ಚಿದ 8 ಕಣ್ಣೊಳು ಪಾಲನುಗುಳಿ ಪೋದ ಈಚಿಣ್ಣಗೆ ನೋಡಿದೆ ವಿನೋದಮಣ್ಣಮೆದ್ದಖಿಳವ ತೋರಿದ ಕೃಷ್ಣಸಣ್ಣ ಬಾಯನು ಮುಚ್ಚಿ ಮಗುವಾದ 9 ಕುಸುಮವೆತ್ತ ಖಡುಗ ವೆತ್ತ ಈಹಸುಗೂಸು ಎತ್ತ ಪರ್ವತವೆತ್ತಹಸಿವು ತೃಷೆಯ ಬಿಟ್ಟು ಗಿರಿಯ ಪೊತ್ತ ಈಶಶಿಮುಖಿ ಜನಕಿವನು ಸುಖವಿತ್ತ10 ಮೂರು ಲೋಕವಾಳುವ ಸಖಿಯರ ಗಂಡ ನೀಲ-ವರ್ಣನು ತೊಂಡರತೊಂಡ ಬಾಲಕನೀತಸರ್ವೇಶ ಕಂಡಾ ಇವಕೀಳೆಂದವ ಜಗದಲಿ ಭಂಡ 11 ಅರಳೆಲೆ ಮಾಗಾಯಿ ಮುಂಗೈಯ್ಯಲಿಟ್ಟುಸರಭಂಗಿ ಕೂಡಿ ತ್ರಿಭಂಗಿಯವರವೇಣುವನು ತನ್ನಂಗೈಯಲಿಟ್ಟ-ಧರದಲ್ಲೂದಿದ ನಮ್ಮ ರಂಗಯ್ಯ12 ಪಶುಪಕ್ಷ್ಷಿಗಳು ತರತರದಲ್ಲಿಎಸೆವ ಗೀತವ ಕೇಳಿ ವನದಲ್ಲಿಹಸುಳೆಯ ನೆನೆಯುತ್ತ ಮನದಲ್ಲಿ ಪರ-ವಶವಾದುವು ಆಕ್ಷಣದಲ್ಲಿ13 ಕೊಳಲೂದಿ ಸುರರನ್ನು ಸೋಲಿಸಿದ ರಾಗಕಲೆಗಳಿಂದೆಲ್ಲವ ಒಲಿಸಿದಇಳೆಯೊಳು ಗೀತವ ಕಲಿಸಿದ ಇಂತುಒಲಿದು ವಿಠಲ ನಮ್ಮ ಪಾಲಿಸಿದ14 ತÀರುಲತೆಗಳು ಪುಳಕಿತವಾಗೆ ಈಚರ ಪ್ರಾಣಿಗಳೆಲ್ಲ ಸ್ಥಿರವಾಗೆಹರಿಯ ವೇಣುನಾದ ಹೊಸಬಗೆ ಅತಿಹರುಷವ ನೋಡಲೈದಿದೆವೀಗ 15 ಚೆಲ್ಲಿದ ಕೈಯಿಂದಮಲ ನೀರ ನಮ್ಮೆಲ್ಲರ ನೀರಿಗಂಜನು ಧೀರನಲ್ಲ ನಾವಂದ ಮಾತನು ಮೀರನಿವಸುಲಭನೊಮ್ಮೆ ಮೊಗವ ತೋರ 16 ಪಾಲನೊಲೆಯೊಳಿಟ್ಟು ಪೋದೆವು ಈಕಾಲಭೂಷಣ ಕೈಗಾದವುಬಾಲರ ಕೆಲರು ಮರೆತು ಪೋದೆವು ಗೋ-ಪಾಲ ಸಂಗಕ್ಕೆ ಮರುಳಾದೆವು 17 ಉಂಬುವರಿಗೆ ಬಡಿಸಲಿಲ್ಲ ಪತಿಎಂಬುವನಾಜ್ಞೆಯೊಳಗೆ ನಿಲ್ಲದೆನಂಬಿದೆವು ನಾವು ಹರಿಯಲ್ಲದೆ ಅನ್ಯರೆಂಬುದು ಭಕ್ತ ವರ್ಗಕೆ ಸಲ್ಲದೆ18 ಧೇನು ಮಾತ್ರದಿಂದ ಫಲವೇನು ಕಾಮ-ಧೇನು ಶ್ರೀಕೃಷ್ಣನ್ನ ಕರೆದೆನುಮಾನಿನಿ ಮೊದಲು ಕರೆವಧೇನು ಬಿಟ್ಟುಜಾಣೆ ಸೇರಿದಳು ಕೃಷ್ಣನ ಪದವನು 19 ಶಿಶುವ ಬಿಟ್ಟೊಬ್ಬಳು ನಿಜಕನ್ಯೆತನದೆಸೆಯ ತೋರಿಸಬಂದಳಚ್ಚುತನ್ನಎಸೆವ ಶ್ರೀಪತಿ ತನ್ನ ರಮಣನು ಎಂದುಸುಟಳು ಮೊದಲಾಳ್ದ ಗಂಡನ 20 ಲಲನೆ ಕಣ್ಣಂಜನವಬಿಟ್ಟಳು ಜ್ಞಾನಚೆಲುವನಂಜನಕೊಡಂಬಟ್ಟಳುಒಲೆಯಪಾಲಗ್ನಿಗೆ ಕೊಟ್ಟಳು ಕೃಷ್ಣ-ಗೊಲಿದಧರ ಮನವಿಟ್ಟಳು21 ಇಂತು ತೊರೆದು ವಿಷಯಂಗಳ ಆ ಶ್ರೀ -ಕಾಂತನೆ ಕಾವ ಜಗಂಗಳಚಿಂತೆಯ ತೊರೆದೆವು ಮಂಗಳ ಲಕ್ಷ್ಮೀ -ಕಾಂತನೆ ಕಾಯೊ ಜಗಂಗಳ 22 ಕೇಶಿಯೆಂಬ ದೈತ್ಯನ ಕೊಂದ ಖಳನಾಶದಲಿ ಸದಾ ಮುಕುಂದಆ ಸಮಯದಲಿ ಅಕ್ರೂರ ಬಂದ ಅವಂಗೆಲೇಸÀಪಾಲಿಸಿ ಕೃಷ್ಣ ನಡೆತಂದ 23 ಮಧುರೆಯಲಿ ಮಲ್ಲರ ಸೋಲಿಸಿದ ತನ-ಗಿದಿರಾದ ಕಂಸÀನನೊರೆಸಿದಕದನಕೋಲಾಹನೆನಿಸಿದ ನಮ್ಮಮದನಶರಕೆ ಗುರಿಮಾಡಿದ24 ಎಲ್ಲ ದೇವರನಿವ ಮೀರಿದ ಸಖಿಬಲ್ಲವರಿಷ್ಟವ ಬೀರಿದಕಲ್ಲಕಂಬದಿ ಬಂದು ತೋರಿದ ಖಳರೆÉಲ್ಲಿದ್ದರಲ್ಲಿಗೆ ಹಾರಿದ 25 ದಯದಿಂದ ಸಖನಮಗಾದವ ಚೆಲ್ವಹಯವದನ್ನ ಕೃಪೆಯಾದವನಯದಿ ಜಲವ ಪೊಕ್ಕು ಪೋದವ ವೈ-ರಿಯ ಕೊಂದು ವೇದವ ಕಾಯ್ದವ 26
--------------
ವಾದಿರಾಜ
ತಾ ಕಾಯುತಿದ್ದ ಕೃಷ್ಣನು ಗೋಪಾಲರನೂಗೋಕುಲದಲ್ಲಿ ಗೂಢನೂ ಪುೀಕುಂಭಿನಿಯೊಳಗಿರುತಿಹ ದುಷ್ಟರನೂಕುವ ಬಿಲದಲಿ ಅನುಪಮ ಧೀರಾ ಅ.ಪಅಸಿತ ಪಕ್ಷವು ಬಂದುದೂ ಮಾಸಗಳೊಳುಎಸೆವೇಕಾದಶಿಯೆಂಬುದು ಬರಲು ಅಂದುಬಸವಾಸುರಾನಾ ಬಡಿದು ತಾನಂದು ವ್ರಜದಿ ವಸುಧೇಶ ನಿದ್ದನೊಲಿದು ಅಸುರನು ಅಳಿಯಲು ಆ ವ್ರಜವುಳಿಯಲು ಹಸುಗಳು ಹೆಚ್ಚಲು ಹರಿ ತಾನಲಿಯಲು ವಸಗೆವ್ರಜದೊಳಗೆ ಬಹುಮಸಗೆ ಹೆಸರಾಗೆ 1ದ್ವಾದಶೀ ದಿವಸಾದಲ್ಲಿ ಉದಯಕಾಲವಾದುದು ''ತದಲ್ಲಿ ಶ್ರೀಕೃಷ್ಣನಿಗೆಬೋಧವಾಗಲು ಬೇಗದಲಿ ಬಾಲರು ಸಹಾ ಮಾಧವಾ ಮುದದಿಂದಲಿಕಾದಿರೆ ಗೋವ್ಗಳ ಕಾನನಮಧ್ಯದಿಕಾದಲು ಬಂದಾ ಕೇಶಿಯನುದಯದಿಕಾದಿ ಅಸುವಸಿಗಿದಿ ವೊದ'ದೀ ಈ 'ಧದಿ 2ವೃಂದಾಖ್ಯವಾದವನಾದಿ ಗೋಪಾಲಕರಾ ವೃಂದದಾ ವರಸ್ತೋಮವಾಮದಿ ನಿಂದಿದ್ದನಾಗಾಕಂದರ್ಪಕೋಟಿತೇಜದಿ ಕುಂಭಿನಿಯನ್ನು ಹೊಂದಿಸಿದನು ಹರುಷದಿ ಮಂದರಧಾರನು ಮಂಜುಳ ಮ'ಮನು ನಿಂದಿಹ ನೀರನು ನಿಜಗುಣಧಾಮನು ಅಂದು ಅಜಬಂಧು ತಾನೆಂದೂ ಅಲ್ಲಿನಿಂದು3ಘನ ನೀಲಾಳಕದ ವೃಂದ 'ುಶ್ರಿತವಾದಾಮಣಿಮಯ ಮಕುಟದಿಂದಾ ಮೂಡುವ ಕಾಂತಿಪಣೆಯಲ್ಲಿ ಮೊಳೆಯುವಂದಾ ಕಸ್ತುರಿತಿಲಕ ಗಣನೆಗೆ ಬರುವ ಛಂದಾ ಗುಣಿಸುವರಾರಿದ ಗುಣನಿಧಿಯೊಪ್ಪಿದ ಪ್ರಣತಪ್ರೇಮದ ಪದ ಮುಖ ಪದ್ಮದಗುಣನೂ ಗುರುತರನೂ 'ನಯವನೂ 'ವರಿಪನೂ 4ಸಿಂಗಾರಿಯ ಸೋಲಿಸುವಾ ಸುಭ್ರುವದಿಂದಾಮಂಗಳವಾದ ಮುಖದ ಮನ್ನಿಸುತಿಹಕಂಗಳ ಕೋಡಿವರಿವಾ ಕಟಾಕ್ಷವನ್ನೂ ಸಂಗಿಸಿದ ಸುಸ್ಮಿತವಾ ತೊಂಗುತ ತೋರಲು ತನ್ನಾಸಿಕವೂರಂಗಿಸಿ ರಾಜಿಸೆ ರದನಚ್ಛದವೂಹೊಂಗೆ ುೀರಂಗೆ ನೋಳ್ಪಂಗೆ ಭವ'ಂಗೆ 5ಕುಂಡಲಗಳ ಕಾಂತಿಯೂ ಕರ್ನಾಗಳಲ್ಲಿಮಂಡಿತವಾಗಿ ಮತ್ತೆಯೂ ಮುಕುರದಂಥಾಗಂಡ ಸ್ಥಳಗಳಲ್ಲಿಯೂ ಗೋಚರಿಸುತ ದಿಂಡಾಗಿ ತೋರೆ ದೀಪ್ತಿಯೂ ಪುಂಡರೀಕಾಕ್ಷನು ಪೊಳೆಯುತಲಿದ್ದನು'ಂಡುತ ಖಳರನು ಹೆದರುವ ಜನರನುಕಂಡೂ ಕರಕೊಂಡೂ ಕೈಕೊಂಡೂ ಹುರಿಗೊಂಡೂ6ವೇಣುವ 'ವರಿಸಲು 'ೀರನಾ ಮುದ್ದೂತಾನೊಂದು ತೇಜ ತೋರಾಲು ಅಂಗುಲೀಗಳುಅನುಕೂಲಗಳಾಗಾಲು ಉಂಗುರಗಳೊಳು ಮಾಣಿಕ್ಯಗಳು ಮೂಡಲುಭಾನುವ 'ುೀರಲು ಬಾಹುಗಳೊಪ್ಪಲುಗಾನಗಳಾಗಲು ಗೋವ್ಗಳು ಕೇಳಲುತಾನು ತೋರಿದನು ಜಾಣುವನು ಜಗಧರನೂ 7ಭೋಗಿಯ ಭೋಗದ ಹಾಗೆ ಬಾಹುಗಳಿರೆತೂಗಿ ಜಾನುಗಳ ತಾಗೆ ಕೇಯೂರಗಳರಾಗ ರಂಜಿತಗಳಾಗೆ ಕಂಕಣವಲಯ ಯೋಗದಿಂದಿರೆ 'ೀಗೆಆಗಿನ ಕಾಲದಲಮರಿದ ಶೃಂಗದುೀಗುರು ಕೃಷ್ಣನ ಇಷ್ಟ ಕೊಳಲಿನಯೋಗೀ ಇಹಭಾಗೀ ಗತರಾಗೀ ಗುರಿಯಾಗೀ8ಕಂಬುಕಂಧರದಿಂದಲೂ ಅಲ್ಲಿರುತಿಹತೊಂಬೆ ತಾರಹಾರಗಳು ಲಕ್ಷ್ಮಿಯು ತಾನುಇಂಬೀನುರದಲಿರಲು ಕೌಸ್ತುಭಕಾಂತಿ ತುಂಬಿ ನಾಭಿಯ ತಾಕಲುಅಂಬುಜ ಸಂಭವನಾಲಯ'ರಲುಜೃಂಭಿಸಿ ಮಾಲೆಯು ಜೋಲಿಡುತಿರಲೂನಂಬೀ ಬಹುತುಂಬೀ ುಹವೆಂಬೀ ಜಗದಿಂಬೀ 9ಕಟಿತಟದತಿಶಯವು ಕಾಂಚಿಯಧಾಮಾಸ್ಪುಟವಾಗಿ ಸ್ವರ್ಣವಸ್ತ್ರವು ಊರುಗಳಲ್ಲಿಗೆಘಟಿಸಿರೆ ಗೂಢವಾದವೂ ಜಾನುಗಳಿಂದ ಪಟು ಜಂಘೆ ಪುದುಗಿಹವೂಕಟಕಗಳಿಂದಲು ಕಡುಚೆಲುವೆನ್ನಲುಅಟಸುತಲಡಿಗಳು ಅತಿಮೃದುವೆನ್ನಲುದಿಟನೂ ನರನಟನೂ ಭವತಟನೂ ಪಟುತರನೂ 10ಕಮಲ ಸೋಕಲು ಕಂದುವ ಲಕ್ಷ್ಮೀಯಕರಕಮಲಕೆ ಕಾಂತಿಯನೀವ ಯೋಗಿಯ ಹೃದಯಕಮಲದಿ ಕುಳಿತಿರುವ ುೀ ದಿವ್ಯಪಾದ ಕಮಲವಕಾಣಿಸುವಾಕಮಲೆಯ ಕಾಂತನ ಕಮಲಜ ಜನಕನ ಕಮಲವ ಕಾವನ ಕಾಂತಿಯ 'ುೀರ್ವನಕ್ರಮವೂ ಕಾಮದವೂ ಶ್ರಮ ಶಮವೂ ಶೋಭನವೂ 11ಬಲಿಯ ಬಳಿಗೆ ಬಂಜವು ಭಾಗ್ಯವನಿತ್ತುಸಲ'ದ ಸೌಮ್ಯಗಳಿವು ಬ್ರಹ್ಮನು ಬಂದುತೊಳೆಯಲು ಬಂದು ತೋರುತಿದ್ದವು ಆ ಪಾದಗಳೆ ಇಳೆಯೊಳಗಿರುತಿಹವೂಕಲಿಮಲಹರಗಳು ಕಲಿಗಳ ಕಾವವುತಾಳಿದವು ನಾಗನ ತದ್ವಶವಾಗಲುಸಿಲುಕೀ ಸಿರಿತುಳುಕೀ ಅಘಕಲಕೀ ಅವು ನಿಲುಕೀ 12ಅಂಕುಶವರ'ಂದವು ಧ್ವಜವಜ್ರವಂಕೀತವಾಗಿಯಾಢ್ಯಾವು ಲಕ್ಷ್ಮಿಯ ಕುಚಕುಂಕುಮವನ್ನು ಕದ್ದವು ಭೂ'ುಗೆ ಪಾದ ಪಂಕಜಗಳು ಬಂದಾವುಕಿಂಕರರಭಿಮತ ಕಂಕೆಯನಟ್ಟುತಮಂಕುಗಳೆನಿಸುತ ಮಲೆವರ ಮುರಿಯುತಶಂಕೆ ಸಲೆ ಕೊಂಕೆ ಹೊರೆುಂಕೆ ಸಿರಿಸೋಂಕೆ13ಈ ರೀತಿಯಲಿ ಈಶನು ಇರುತಲಿರೆನಾರದ ಬಂದು ನಿಂದನು ಕಾಣುತ ಕೃಷ್ಣಕಾರುಣ್ಯ ನಿಧಿ ಕೇಳ್ದನು ಕ್ಷೇಮಗಳನು ತೋರುತ ರೂಪವ ತಾನುವಾರಿಜನೇತ್ರನು ವರದವರೇಣ್ಯನು'ುೀರದೆ ಮುನಿಯನು ಮಾತನು ನುಡಿದನುಸಿರೀ ಅನುಸಾರೀ ಬಗೆದೋರೀ ಮುರವೈರೀ 14ಅರಿತನು ಆತನನುವ ಆ ಕಂಸಗಾಗಅರು' ತೋರಿಸಿದರ್ಥವ ಅದು ತನ್ನ ಕಾರ್ಯನೆರವೇರುವತಿಶಯವ ತಾನಾಗಿ ಮುನ್ನ ಪಿರಿದಾಗಿ ಪ್ರೇರಿಸಿರುವಕರುಣಾವನಧಿಯು ಕಾರ್ಯವ ತೋರಿಯುಮುರಹರಮೂರ್ತಿಯು ಮುಂದಿರುವಲ್ಲಿಯುಅರಿತೂ ಅಲ್ಲಿಕುಳಿತೂ ಬರೆಹೊತ್ತೂ ುದಿರಿತ್ತು 15ಕಾಣುತ ಮುನಿಕೃಷ್ಣನ ಮಾನಸದಲ್ಲಿಧ್ಯಾನಿಸಿದನು ದೇವನ ತಾ ಬಂದುದನ್ನುತಾನು ತೋರಿಸಲು ತತ್ತ್ರಾಣ ಬಂದಾಗ ನ'ುಸಿ ಪ್ರಾಣೇಶಗತಿಪ್ರ'ೀಣಾಕೃಷ್ಣಾ ಕಂಸಗೆ ಹೊದ್ದುವ ರೀತಿಗೆಶ್ರೀನಿಧಿಯಾದಗೆ ಸೂಚಿಸಿ ಸ್ವಾ'ುಗೆತಾನು ಅಜಸೂನು ಅರು'ದನು ಅರಿತದನೂ 16ಮಾನುಷಮೂರ್ತಿಯಾಗಿಯೆ ಭೂ'ುಗೆ ಬಂದುಆನತರನು ಆಳಿಯೆ ಅರ್ಥವ ಸಲಿಸಿಧೇನುವಾಗಿಹೆ ಧೊರೆಯೆ ಯೆನ್ನುತ 'ೀಗೆ ಆನತನಾಗುತಲಿಯೆಮಾನಸಪುತ್ರನು ಮಾತನು ನುಡಿದನುಶ್ರೀನಿಧಿ ತಿರುಪತಿ ವೆಂಕಟರಮಣನುತಾನೂ ತಾಳಿದನೂ ಮಾನಸನೂ ಮಾಡ್ದುದನೂ 17
--------------
ತಿಮ್ಮಪ್ಪದಾಸರು
ತಿಳಿಯದು ಆರಿಗೆ ನಳಿನಾಕ್ಷನ ಘನ ವಿಲಸಿತಮಹಿಮೆ ಸುಲಭವಲ್ಲಮಮ ಪ ಒಳಗು ತಾನೆ ಹೊರಗು ತಾನೆ ಒಳಗ್ಹೊರಗೊಂದಾಗಿ ಬೆಳಗುವ ತಾನೆ ಬಳಗ ತಾನೆ ಬಂಧು ತಾನೆ ಹಲವು ಜೀವರ ಸಲೆರೂಪನು ತಾನೆ 1 ಹಸಿವು ತಾನೆ ತೃಷೆಯು ತಾನೆ ಹಸಿತೃಷೆ ತೀರಿಪ ಸೂತ್ರನು ತಾನೆ ಎಸೆವ ತತ್ವಮಸಿ ಮಹವಾಕ್ಯವ ಕುಶಲದಿ ನುಡಿಸುವ ಈಶನು ತಾನೆ 2 ರಕ್ಷಕ ತಾನೆ ಶಿಕ್ಷಕ ತಾನೆ ಸಾಕ್ಷಿಯಾಗಿ ನ್ಯಾಯ ವೀಕ್ಷಿಪ ತಾನೆ ಸೂಕ್ಷ್ಮಜ್ಞಾನವಿತ್ತಕ್ಷಯದ್ಹೊರೆಯುವ ಮೋಕ್ಷಕರ್ತ ಶ್ರೀರಾಮ ತಾನೆ 3
--------------
ರಾಮದಾಸರು
ತೆರಳಿದರೋ ತಂದೆ ಮುದ್ದು ಮೋಹನರೂಮರಳಿ ಬಾರವ ಪುರಿ ನರಹರಿ ಪೂರಕೇ ಪ ತರಳತನಾರಭ್ಯ ದ್ವಾದಶ ವತ್ಸರಪರಿಸರಾಗಮ ಪಠಿಸಿ ನಿಪುಣನೆನಿಸೀ |ಇರಲು ಬಂದರು ಮುದ್ದು ಮೋಹನ್ನದಾಸರುಕರಿಗಿರಿ ನರಹರಿ ರಥವ ಉತ್ಸವಕೇ 1 ಕರಿಗಿರಿ ಸನಿಯದ ನರಸಿಪುರದೊಳಿದ್ದವರಸುಬ್ಬರಾಯಾಖ್ಯ ಭರದಿಂದ ಬರುತಾ |ಗುರು ಮುದ್ದು ಮೋಹನರ ಪದಪಾಂಸು ಶಿರದಲ್ಲಿಧರಿಸಿ ಬಿನ್ನವಿಸಿದರುಪದೇಶ ಕೊಂಡಿರೆಂದೂ 2 ಪರಿಕಿಸಲೋಸುಗ ಅರುಣ ಉದಯ ಮುನ್ನಕರಿಗಿರಿ ಪುರಬಿಟ್ಟು ತೆರಳಲು ಅವರೂ |ಭರದಿ ಅಡ್ಡೈಸುತ ಗುರುಪಾದದಲಿ ಬಿದ್ದುವರ ಉಪದೇಶವ ಕೈಗೊಂಡ ಧೀರಾ 3 ಶುಭ ಅಂಕಿತವಾ |ತಂದೆ ಮುದ್ದು ಮೋಹನ್ನ ವಿಠ್ಠಲನೆಂದುಛಂದೋಗಮ್ಯನೆ ದಿವ್ಯ ನಾಮವನಿತ್ತರು 4 ದಾಸ ದೀಕ್ಷೆಯ ಪೊತ್ತು ದಾಸ ಕೂಟವ ನೆರಸಿಶೇಷಗಿರೀಶನೆ ಸರ್ವೇಶನೆನುತಾಎಸೆವ ಅಂಕಿತ ಮಂತ್ರ ಉಪದೇಶಗೈಯ್ಯುತ್ತದಾಸರ ಕ್ಲೇಶವ ಹರಿಸೀದ ಗುರುವೇ 5 ವರಚೈತ್ರ ಪಂಚಮಿ ವರುಷವು ವಿಕ್ರಮಶರಣರ ಪೊರೆಯಲು ಕರಿಗಿರಿಯಲ್ಲೀ |ಗುರು ಮುಖ್ಯ ಪ್ರಾಣ ಪ್ರತೀಕವ ನಿಲಿಸುತಆರು ಮೂರನೆ ದಿನ ಹರಿಯ ಸೇರುವೆ ನೆನುತಾ 6 ನರಲೀಲೆ ಕೊನೆಗೈದು ಪರಮ ಪುರುಷಹರಿಶಿರಿಯರಸಗೆ ಪ್ರೀತೆ ಪಾತ್ರನೆನಿಪಾನೂ |ವರ ಗುರು ಗೋವಿಂದ ವಿಠಲನ ಚರಣವಸ್ಮರಿಸಿ ಹಿಗ್ಗುತ ಪೊರಟ ನೀರಿಕ್ಷಿಸುತಾ7
--------------
ಗುರುಗೋವಿಂದವಿಠಲರು
ತ್ರ್ಯಕ್ಷಾಂಶ ಸಂಭೂತ | ಅಕ್ಷೋಭ್ಯ ಕರಜಾತಕುಕ್ಷಿಯೊಳಗೆ ಖ್ಯಾತ | ಟೀಕಾರ್ಯರೆಂಬಾತ ಪ ಮರುತ ಮತಾಬ್ಧಿ ಸೋಮ | ಹರಿಗುಣ ಗಣಸ್ತೋಮಬರೆದು ವಿಬುಧಸ್ತೋಮ | ಪೊರೆದ ನಿಸ್ಸೀಮಾ ಅ.ಪ. ಎರಗೋಳ ಗುಹೆಯಲ್ಲಿ | ಮರುತ ಮತ ಗ್ರಂಥದಲಿನಿರುತ ಬಹು ಆಸಕ್ತ | ಟೀಕೆಗಳ ಕರ್ತಾ 1 ವೃಷಭದಾಕೃತಿ ಧರಿಸಿ | ಅಸುಪತಿಯ ಸೇವಿಸೀಎಸೆವ ಗ್ರಂಥಗಳ್ಹೊತ್ತು | ಜನ್ಮ ಸ್ಮøತಿ ಪೊತ್ತೂ 2 ಭೋಗಿ ಆವೇಶಿತನೆಯೋಗಿ ಕುಲ ಕಮಲಾಪ್ತ | ಮಾಯಿ ಮತ ಹರ್ತಾ 3 ವೇನ ಮತ ದುಧ್ರ್ವಾಂತ | ಕಳೆಯಲ್ಕೆ ಸುಧೆ ಗ್ರಂಥಜ್ಞಾನ ಸೂರ್ಯನೆ ಇತ್ತೂ | ಕಳೆದೆ ಆಪತ್ತೂ4 ಗೋವುಗಳ ಪಾಲ ಗುರು | ಗೋವಿಂದ ವಿಠಲದೇವ ಗುಣಗಳ ಜಾತ | ಬರೆದ ವಿಖ್ಯಾತಾ 5
--------------
ಗುರುಗೋವಿಂದವಿಠಲರು