ಒಟ್ಟು 252 ಕಡೆಗಳಲ್ಲಿ , 54 ದಾಸರು , 221 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏರ ರಂಗಕಿಷನ್ ದಾರಿ ಚೂಪರಾ ಮಾರ ಸುಂದರ ಪ ಮೊರೆ ಗಾಣರೆ ವಶವೊ ಮಾರಜನಕನೇ ಅ ಸುಜನ ಭಜಕನೆ 1 ರಾರಯನುಚು ಮೇರೆ ಮೂಮೆ- ಕರಿಯಲೇದೆರಾ ಕೋರ ಅನುಚು ತೇರೆ ಚರಣ-ಲೇದು ಕಾದುರಾ 2 ಓಡಿಬನ್ನಿ ಸುಜನರೆಲ್ಲ ಭಜನೆ ತ್ರಿಜಗ ಪೂಜಿತನೆಂಬೊ ಅಜನಪಿತನಗೂಡುವಾ 3 ಧರೆಯೊಳಧಿಕ ಮಧುರ ನಗರ ಪುರಿಯವಾಸನೇ ಯನ್ನ ಭವವಿನಾಶನೇ ಕೋಟಿ ರವಿಪ್ರಕಾಶನೆ ನಿನ್ನ ಚರಣ ಗುರುವು ತುಲಶಿರಾಮದಾಸನೇ 4
--------------
ಚನ್ನಪಟ್ಟಣದ ಅಹೋಬಲದಾಸರು
ಏಳಯ್ಯ ಸದ್ಗುರುರಾಯ | ಈಗ ಏಳು ತುರಗ ಸೂತನುದಯಿಸುವ ಸಮಯ ಪ ಎದ್ದು ಶಿಷ್ಯರ ಕರೆಯಬೇಕು | ಗುರು ಇದ್ದ ದೋಷವ ಕಳೆಯಬೇಕು ಪರಿ ಶುದ್ಧರ ಮಾಡಿ ನೀನುದ್ಧರಿಸಬೇಕು 1 ಭಾಗವತ ಶಾಸ್ತ್ರವಿಚಾರ ಮುರೆರಡು ವಿಧ ಭೇದ ತಾರತಮ್ಯ ಸಾರುತ ಸಲಹೋ ಶಿಷ್ಯಪರಿವಾರ 2 ಪದಸುಳಾದಿಗಳ ಕೇಳಬೇಕು | ಕೇಳಿ ಅದರೊಳಿರುವ ತತ್ವವಿವರಿಸಬೇಕು ಮದಡತನವ ಕಳೆಯಬೇಕು ನಿನ್ನ ಪದ ನಂಬಿದವರಿಗೆ ಮುದಗರಿಯ ಬೇಕು 3 ಸತ್ಯನಾರಾಯಣ ಕಥೆಯ | ಬಹುವಿಸ್ತಾರವಾಗಿ ನೀ ಬಿತ್ತರಿಸಯ್ಯ | ಭೃತ್ಯರಾ ಮಾಯೆ ಓಡಿಸಯ್ಯ ಅಜ್ಞಾನ ಜ್ಞಾನ ಭಕ್ತಿ ವೈರಾಗ್ಯ ಸಂಪತ್ತು ನೀಡಯ್ಯ 4 ಒಂದೂರು ನಿಲಯನೆ ಏಳೊ ಶಾಮ ಸುಂದರವಿಠಲನ ಮಂದಿರನಾಳೋ ಬಂದ ನಿಂದೆಗಳೆಲ್ಲ ಹೂಳೋ ನಿನ್ನ ಪೊಂದಿದ ನಮ್ಮನ್ನು ಅಗಲಿದೆ ಆಳೊ 5
--------------
ಶಾಮಸುಂದರ ವಿಠಲ
ಒಂದು ದಿನ ನಾರದಮುನಿ ಗೋಕುಲದಿ ಇಂದಿರೇಶನ ಲೀಲೆಯಾ ನಿಂದು ನಭದಲಿ ನೋಡುತಾ | ಮೈಯುಬ್ಬಿ ಬಂದನಾ ವೈಕುಂಠಕೆ 1 ಸಿರಿದೇವಿ ಸಖಿಯರೊಡನೆ | ವನದಲ್ಲಿ ಪರಿಪರಿಯ ಕ್ರೀಡೆಯೊಳಿರೇ ಅರವಿಂದ ನಯನೆಯನ್ನೂ | ಕಂಡನಾ ಸುರಮುನಿಯು ಸಂಭ್ರಮದಲೀ 2 ಜಗನ್ಮೋಹನಾಕಾರಳೂ | ಶ್ರೀ ಹರಿಯ ಜಗ ಸೃಷ್ಟಿಗನುಕೂಲಳೂ ಬಗೆ ಬಗೆಯವತಾರಳೂ | ಕ್ಷಣ ಹರಿಯ ಅಗಲದಂತಿರುತಿಪ್ಪಳೂ 3 ಹರಿಗೆ ಗುಣದಿಂ ಕಿರಿಯಳೂ | ಮತ್ತೆಲ್ಲ ಪರಿಯಲ್ಲಿ ಹರಿಗೆ ಸಮಳೂ ಶರಣೆಂದವರ ಕಾಯ್ವಳೂ | ಬೊಮ್ಮಾದಿ ಸುರರ ಸೃಜಿಸುವ ಶಕ್ತಳೂ 4 ನಾಕ ಸ್ತ್ರೀಯರನೆ ಕೂಡೀ | ವನದಲ್ಲಿ ಲೋಕನಾಯಕಿ ರಮಿಸುತಾ ಶ್ರೀಕಾಂತನಗಲದವಳೂ | ಮುನಿಗೆ ತ ನ್ನೇಕರೂಪವ ತೋರ್ದಳೂ 5 ನೊಡಿ ನಮಿಸಿದನು ಸಿರಿಯಾ | ಹರಿಗುಣವ ಹಾಡಿ ಪಾಡಿದನು ಮೈಯ್ಯಾ ಮೂಡೆ ರೋಮಾಂಚ ಕೈಯ್ಯಾ | ಮುಗಿಯುತಲಿ ನೋಡಿದನು ಸಿರಿಯ ದಣಿಯಾ 6 ಪಲ್ಲವಾಧರೆ ನಗುತಲಿ | ತನ್ನ ಕರ ಪಲ್ಲವದಿ ಕೃಪೆಯ ಮಾಡೀ ಎಲ್ಲಿಂದ ಬಂದೆ ಮುನಿಪಾ ವಿಷಯವೇ ನೆಲ್ಲ ಪೇಳೆಂದೆನ್ನಲೂ 7 ಏನ ಪೇಳುವೆನೆ ತಾಯೆ | ನಿನ ಪತಿಯ ನಾನಾ ವಿಧ ಚರ್ಯೆಗಳನೂ ನಾನರಿಯಲಾರೆ ನಮ್ಮಾ | ನವನೀತ ಚೋರನಾಗಿರುವನಮ್ಮಾ 8 ನಾಕ ಭೂಲೋಕ ತಿರುಗೀ | ಭುವಿಯೊಳಗೆ ನಾ ಕಂಡೆ ಗೋಕುಲವನೂ ಹೇ ಕಮಲೆ ಕೇಳು ಅಲ್ಲೀ | ನಿನ ಪತಿಯು ಆಕಳಾ ಕಾಯುತಿಹನೂ 9 ಬಿಟ್ಟು ವೈಕುಂಠವನ್ನೂ | ಪ್ರಾಯ ಸತಿ ದಿಟ್ಟೆ ನಿನ್ನನು ತೊರೆದನೂ ಹುಟ್ಟಿ ಗೊಲ್ಲರ ಕುಲದಲೀ | ಬೆರತನಾ ಕೆಟ್ಟ ಹೆಂಗಳೆಯರಲ್ಲಿ 10 ನಳಿನಜಾಂಡವ ಸಾಕುವಾ | ಜಗದೀಶÀ ಗೋಪಿ ಬೈ ಗಳನು ತಾ ಕೇಳುತಿಹನೂ 11 ಮದನಮೋಹನರೂಪನೂ | ಗೊಲ್ಲತೆರ ಅಧರಾಮೃತವ ಸವಿವನೂ ಎದೆ ಗಂಟು ಪಿಡಿಯುತಿಹನೂ | ಚಂಡೆಂದು ಗದರಿಸಲು ನುಡಿಯುತಿಹನೂ 12 ಸಂಪೂರ್ಣ ಕಾಮ ತಾನು | ವನದಲ್ಲಿ ಗುಂಪು ಸ್ತ್ರೀಯರ ಕೂಡ್ವನೂ ಸಂಪನ್ನ ಭೋಗಿಸುವನೂ | ಕೊಳಲ ಪಿಡಿ ದಿಂಪುಗಾನವ ಗೈವನೂ 13 ವನದ ಸೊಬಗೇನುಸುರುವೇ | ಶ್ರೀರಮಣಿ ದನಕರುವ ಕಾಯುತ್ಹರಿಯಾ ವನವನವ ತಿರುಗುತ್ತಿರೇ | ಕೊಳಲ ಧ್ವನಿ ವನವೆಲ್ಲ ತುಂಬಿರುತಿರೇ 14 ತಿಳಿಯುದಕ ಯಮುನೆ ಮಳಲು | ದಿಣ್ಣೆಯಲಿ ಕೊಳಲೂದೆ ಹರಿ ಕೇಳಲೂ ಮೊಳೆತವಾ ಬಂಜೆ ಮೋಟೂ | ಮೃಗಪಕ್ಷಿ ಕುಳಿತು ಮೈಮರೆತು ಕೇಳೇ 15 ಓಡಿ ಬರುತಲಿ ತುರುಗಳೂ | ಬಾಲವ ಲ್ಲಾಡಿಸದೆ ಕಣ್ಣುಮುಚ್ಚಿ ಮಾಡಿಟ್ಟ ಪ್ರತಿಮೆಯಂತೆ | ಕಾಣುತಿರೆ ಆಡಿಸದೆ ಸರ್ಪ ಹೆಡೆಯಾ 16 ಶೃಂಗಾರ ಕೊಳಲನೂದೆ | ಜಡ ಚೇತ ನಂಗಳಾಗುತ ಚಿಗುರಲೂ ಅಂಗ ಮರೆಯುತ ಜೀವಿಗಳ್ | ಜಡದಂತೆ ಕಂಗಳನುಮುಚ್ಚಿನಿಲ್ಲೆ 17 ಅಷ್ಟ ಐಶ್ವೈರ್ಯದಾತಾ | ನಾರಿಯರ ತುಷ್ಟಿಪಡಿಸುತಲಿ ಖ್ಯಾತಾ ಶಿಷ್ಟ ಜನರನು ಪೊರೆಯುತಾ | ರಕ್ಕಸರÀ ಹುಟ್ಟಡಗಿಸುವನು ವಿಹಿತಾ 18 ಪೇಳಲಳವಲ್ಲವಮ್ಮಾ | ಶ್ರೀ ಹರಿಯ ಲೀಲೆ ಜಾಲಗಳ ಬ್ರಹ್ಮಾ ನೀಲಗಳರರಿಯರಮ್ಮಾ | ಆನಂದ ತಾಳಿದೆನು ಕೇಳೆ ರಮ್ಮಾ 19 ಇಷ್ಟು ಗೋಕುಲದಿ ನೋಡೀ | ಕಾಣದಿ ನ್ನೆಷ್ಟೋ ಎನ್ನುತಲಿ ಪಾಡೀ ಗುಟ್ಟು ಪೇಳಲು ಬಂದೆನೂ | ಸಿರಿದೇವಿ ಸಿಟ್ಟಾಗಬೇಡವಿನ್ನೂ 20 ಪರನಾರಿಯರ ಬೆರೆಯುತಾ | ಶ್ರೀ ಕೃಷ್ಣ ಮರೆತು ನಿನ್ನನು ಸುಖಿಸುತಾ ಪರಿ ಯೊಚಿಸಮ್ಮಾ | ಆಜ್ಞೆ ಕೊಡು ತ್ವರಿತದಲಿ ಪೋಪೆನಮ್ಮಾ 21 ಹರಿಚÀರ್ಯವೆಲ್ಲ ಕೇಳಿ | ಶ್ರೀ ತರುಣಿ ಪರಮ ಆನಂದ ತಾಳೀ ಬೆರಗಾದ ಪರಿತೋರುತಾ | ಮುನಿವರಗೆ ಪರಿ ಏನು ಮುಂದೆ ಎನಲೂ 22 ಸನ್ನುತಾಂಗನ ಕೂಡಲೂ | ಭೂತಳದಿ ಇನ್ನೇನುಪಾಯವೆನಲೂ ಪನ್ನಂಗ ವೇಣಿ ಉದಿಸೂ | ಭೀಷ್ಮಕಗೆ ಇನ್ನು ನೀ ಕುವರಿ ಎನಿಸೂ 23 ಎಂತೆಂತು ಹರಿಯಚರ್ಯೆ | ಸಿರಿಕಾಂತೆ ಅಂತಂತು ನಿನ್ನ ಚರ್ಯೆ ಸಂತೋಷಪಡಿಸಿ ಎಮ್ಮಾ | ಸಲಹಮ್ಮ ಶಾಂತೆ ನಾ ಪೋಪೆನಮ್ಮಾ 24 ಮತ್ತೊಮ್ಮೆ ನೋಳ್ಪೆನೆಂದೂ | ಗೋಕುಲದ ಹತ್ತಿರದಿ ನಭದಿ ನಿಂದೂ ಸುತ್ತು ಮುತ್ತಲೂ ನೊಡಲೂ | ಸಿರಿದೇವಿ ವ್ಯಾಪ್ತಳಾಗಲ್ಲಿ ಇರಲೂ 25 ವನದಿ ಹರಿವಕ್ಷದಲ್ಲೀ | ಸಿರಿದೇವಿ ಘನ ವೇಣೂರೂಪದಲ್ಲೀ ವನಲಕ್ಷ್ಮೀರೂಪದಲ್ಲೀ | ಗೋಪಿಯರ ಪ್ರಣಯ ಪ್ರಕಾಶದಲ್ಲೀ 26 ಎಲ್ಲೆಲ್ಲಿ ಸೌಂದರ್ಯವೋ | ಉಲ್ಲಾಸ ಎಲ್ಲೆಲ್ಲಿ ವೈಭವಗಳೋ ಎಲ್ಲೆಲ್ಲಿ ಹರಿಲೀಲೆಯೋ | ಸಿರಿದೇವಿ ಅಲ್ಲಲ್ಲಿ ತಾನಿರುತಿರೆ 27 ಸಿರಿ ಹರಿಯ ಚರಿಯ ನೊಡಿದ ಪ್ರತಾಪಾ ಧರೆಗಿಳಿದು ನಮಿಸಿ ನಿಂದಾ | ಕ್ಷಮಿಸೆಂದು ಸಿರಿ ಹರಿಗೆ ಸ್ತೋತ್ರಗೈದಾ 28 ಸಿರಿಹರಿ ವಿಯೋಗವಿಲ್ಲಾ | ಆವಾವÀ ಕಾಲ ದೇಶದಲ್ಲೀ ಅರಿಯದಜ್ಞಾನ ನುಡಿಯಾ | ಮನ್ನಿಸೋ ಮಾಯಾ 29 ಜಯ ಜಯತು ಸುರವಂದ್ಯನೇ ಜಯ ಜಯತು ದುಷ್ಟಹರಣ | ಗುಣ ಪೂರ್ಣ ಜಯ ಜಯತು ಶಿಷ್ಟ ಶರಣಾ30 ಸ್ತುತಿಸುತಂಬರಕಡರಿದಾ | ಸುರಮುನಿಪ ಚ್ಯುತದೂರನತಿ ವಿನೋದಾ ಪತಿತರನು ಕಾಯ್ವ ಮೋದಾ | ಸುಖತೀರ್ಥ ಯತಿಗೊಲಿದು ಉಡುಪಿಲ್ನಿಂದಾ 31 ಆಪಾರ ಮಹಿಮ ಶೀಲಾ | ಸರ್ವೇಶ ಗೋಪಿಕಾ ಜನ ವಿಲೋಲಾ ಆಪನ್ನ ಜನರ ಪಾಲ | ಗುರುಬಿಂಬ ಗೋಪಾಲಕೃಷ್ಣವಿಠಲಾ 32
--------------
ಅಂಬಾಬಾಯಿ
ಓಂ ನಮೋ ಮಹೀಪತಿ ಸದಾನಂದ ಗುರುಮೂರ್ತಿ | ಸನ್ನುತ ನಿಮ್ಮ ಖ್ಯಾತಿ ಪೊಗಳಲಾಪೆನೆ ಕೀರ್ತಿ ಪ ತನ್ನ ತಾ ಮರೆದವರಾ | ನೀನು ಕೊಟ್ಟು ಎಚ್ಚರಾ | ಮುನ್ನಿ ನಂದದಿ ಮಾಡಿ | ಓಡಿಸಿದೇ ಭವದೂರಾ 1 ಸಹಜ ಬೀರುವ ವಚನಾ | ಅದೇ ಉಪದೇಶ ಜ್ಞಾನಾ| ಇಹ ಪರಕ ನಿಧಾನಾ | ಮಾಡುವದು ಸಾವಧಾನಾ2 ವೇದ ಸಿದ್ಧಾಂತದಲ್ಲಿ | ರಾಜಯೋಗ ಮನೆಯಲ್ಲಿ | ಬೋಧಿಸುವ ವಸ್ತು ನೀನೇ | ಸರಿಗಾಣೆ ನಾನೆಲ್ಲಿ3 ಏನು ಪುಣ್ಯವೋ ಎನ್ನಾ | ಅದೇ ಬಾಲಕ ನಿನ್ನಾ | ತಾನೇನ ಸಾಧುವೆನಗ | ಇರಲು ನಿಮ್ಮ ದಯಾಘನಾ 4 ದಾಸರಾ ದಾಸನೆಂದು | ಇನ್ನು ನೋಡದೆವೆ ಕುಂದು | ಭಾಸಿ ಪಾಲಿಸು ಕೃಷ್ಣಗ ಎಂದೂ | ಕೈಯ್ಯಾ ಬಿಡೆನೆಂದು5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಓಡಿ ಓಡಿ ಬಾ ಅಂಕದೊಳಾಡೋ ಕೂಸೇ ಬಾ ಪ ನೋಡುವೆ ನಿನ್ನ ರಾಮರ ಮುಖದಿ ಕೂಡಿ ಕರುಣಿಯೆ ಬಾ ಅ.ಪ. ಚೆಂಡು ಕೊಡುವೆನು ಬಾ ಗೋಲಿಗುಂಡು ಕೊಡುವೆನು ಬಾದುಂಡು ಕರದೊಳ್ ಗುಂಡು ಬಿಂದುಲಿ ಉಂಗುರನೀಡುವೆ ಬಾ 1 ಬೆಣ್ಣೆ ಕೊಡುವೆನು ಬಾ ಬಾಳೆಹಣ್ಣು ಕೊಡುವೆನು ಬಾಸಣ್ಣ ಸಣ್ಣ ಹೆಜ್ಜೆನಿಕ್ಕುತ ಮನ್ಮಥಪಿತನೆ ಬಾ 2 ನಾರಿವತ್ಸೆ ಬಾ ಮುತ್ತಿನ ಹಾರ ಹಾಕುವೆ ಬಾಪಾರಿಜಾತ ಮುಡಿಸಿದ ರುಕ್ಮಿಣಿಧೀರ ಕೃಷ್ಣನೆ ಬಾ 3 ಮುರಳೀಧರನೆ ಬಾ ಮುಂಗುರಗಳ ಭೂಷಿತ ಬಾಪರಿಪರಿವಸ್ತ್ರವನಿಟ್ಟು ನೋಡುವೆ ಮರಳಿ ಮರಳಿ ಬಾ 4 ನಂದನ ಕಂದನೆ ಬಾ ಮನಕಾನಂದಪಡಿಸುತ ಬಾನಿಂದಿರಲಾರೆ ನಿನ್ನನು ನೋಡದೆ ಇಂದಿರೇಶನೆ ಬಾ 5
--------------
ಇಂದಿರೇಶರು
ಓಡಿ ಬಾ ನಿನ್ನ ಎತ್ತಿ ಮುದ್ದಾಡುವೆ ನಾಗಶಯನ ರಂಗನೇ ಪ. ನಾಗಶಯನ ರಂಗನೆ, ನಾಗಶಯನ ರಂಗನೇ ಅ.ಪ. ಕುಣಿ ಕುಣಿಯುತ ಗೆಜ್ಜೆ ಝಣ ಝಣರೆನೆÀ್ನ ಕೃಷ್ಣಾ ಫಣಿಶಾಯಿ ನಿನ್ನ ನಾ ಕ್ಷಣದಲ್ಲಿ ಬಿಗಿದೂ 1 ಚಿನ್ನರೊಡನೆಗೂಡಿ ಮಣ್ಣನೆ ಮೆಲ್ಲದಿರೂ ಕೃಷ್ಣಾ ಅಣ್ಣಯನೊಡನಾಡೊ ಚಿನ್ನ ಗೋಪಾಲನೇ 2 ಗೋಪಿಯರೊಡನಾಡಿ ಗೋಕುಲಾಂಬುಧಿ ಚಂದ್ರ ಗೋಪಾಲಕೃಷ್ಣವಿಠಲ ಗೋವಳರೊಡೆಯ 3
--------------
ಅಂಬಾಬಾಯಿ
ಓಡಿ ಬಾರೋ ರಂಗಯ್ಯ ಓಡಿ ಬಾರೋ ಕೃಷ್ಣಯ್ಯ ಪ. ನೋಡಿ ನಿನ್ನ ಮುತ್ತನೀಡುವೆ ಹಾಡಿ ಜೋಗುಳವ ಪಾಡುವೆ ಅ.ಪ. ಮೊಸರು ಭಾಂಡ ಒಡೆದು ಬೆಣ್ಣೆ ಹಸುಳೆ ಮೆದ್ದು ಬಾಯೆಲ್ಲಾ ರಸಿಕಸಿಯಾಗಿರುವ ಮೈಗೆ ಬಿಸಿ ನೀರೆರೆವೆನೊ ರಂಗ 1 ಬಿಸಿ ದೋಸೆಯ ಕೊಡುವೆನೆ ಮೊಸರೋಗರವ ಉಣಿಸಿ ನಿನಗೆ ಹಸುರಂಗಿಯ ತೊಡಿಸುವೆ ಕೃಷ್ಣಾ 2 ಮುದ್ದು ಮುದ್ದಾದ ಪಾದ ಹೆಜ್ಜೆನಿಟ್ಟು ಬಾರೆಲೊ ಮುದ್ದೆ ಬೆಣ್ಣೆ ಹಣ್ಣು ಕೊಟ್ಟು ಮುದ್ರೆಯುಂಗುರವನಿಟ್ಟು ನೋಡುವೆ 3 ಅಣ್ಣ ಬಲರಾಮನೊಡನೆ ಚಿಣ್ಣ ಆಡಬಾರೆಲೊ ಚಿಣ್ಣಿಕೋಲು ಚಂಡು ಬುಗುರಿ ಚಿಣ್ಣ ಕೊಡುವೆನೋ ಕೃಷ್ಣಾ 4 ಶೃಂಗಾರವ ಮಾಡುವ ಶ್ರೀ ಶ್ರೀನಿವಾಸ ಬಾರೆಲೊ ಮುದ್ದು ಕಂಗಳಿಗೆ ಕಪ್ಪನ್ಹಚ್ಚಿ ರಂಗ ನಿನ್ನ ನೋಡುವೆದಣಿಯ5
--------------
ಸರಸ್ವತಿ ಬಾಯಿ
ಓಡಿಬಾ ಬಾ ರಂಗ ಆಡುಬಾ ನೀಲಾಂಗ ಪಾಡಿ ಪೊಗಳುವೆ ರಂಗ ಶ್ರೀಪಾಂಡುರಂಗ ಪ ಬೇಡುವೆನೊ ಮಾರಾಂಗ ನೋಡಿನಲಿವೆನೊರಂಗ ನೀಡು ವರಂಗಳ ರಂಗ ಶ್ರೀಕರಾಂಗ ಅ.ಪ ಬಡ ಮೌನಿಗಳು ನಿನ್ನ ಪಿಡಿಯ ಬಂದಿಹರೆನ್ನ ತೊಡೆಯ ಮೇಲಿರೋ ಚಿನ್ನ ಮುದ್ದುಮೋಹನ್ನ ಬೆಡಗ ತೋರುತೆ ಚೆನ್ನ ಚೆಲುವ ಬಾ ರನ್ನ ಒಡೆಯ ಮಾಂಗಿರಿಯ ಚೆನ್ನಿಗ ನಂಬಿಹೆನೊ ನಿನ್ನ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಓಡಿಬಾರೊ ರಂಗನಾಥ ಪ್ರಿಯಾ ಪ ನೋಡೀ ಕೂಡೀ ಆಡೀ ಪಾಡುವೆ ಅ.ಪ ಮಾಡಬಾರದೆಲ್ಲ ಮಾಡಿ ಬಂದೆ ಬಂದೆ [ಓಡಿಬಂದು] ನಿಂದೆ ಕಂದಾ ತಂದೆಯೆ 1 ಏತಕೆನ್ನ ಮೇಲೆ ಇಷ್ಟು ಕೋಪ ಕೋಪಾ [ಆರ್ತರ] ಪಾಲಿಸ ಭೂಪಾ ಶ್ರೀಶನೆ2 ಗುರುವು ತುಲಸಿರಾಮ ದಾಸಪ್ರೇಮಾ ಪ್ರೇಮಾ [ವರ] ಕಾಮೀ ನಾಮ ಶ್ಯಾಮನೆ 3
--------------
ಚನ್ನಪಟ್ಟಣದ ಅಹೋಬಲದಾಸರು
ಓಡಿಬಾರೋ ಶ್ರೀ ಮನ್ಮಥ ಜನಕನೆ ನೀಡುವೆ ತನುಮನವಾ ಪ. ನೋಡಿ ಮುದ್ದಾಡಿ ಕೊಂಡಾಡಿ ನಾ ಬೇಡುವೆಈಡಿಲ್ಲದ ನಿನ್ನೊಡನಾಡುವ ಸುಖ ಅ.ಪ. ಕಾಡಿನ ಸುಖಕೆ ಮತ್ತೀಡಿಲ್ಲ ಧರೆಯೊಳುಮಾಡುವೆ ಶಪಥವನುಹಾಡಿಪಾಡಿ ಕೈಜೋಡಿಸಿ ಕುಣಿಯುತಮಾಡಿದೆವೊ ನಾವ್ ರಾಸಕ್ರೀಡೆಯ 1 ನಿರಂಜನ ಮೂರ್ತೆ 2 ನೀರಜನಾಭನೆ ತೋರೋಕರಪಲ್ಲವಮೀರಿವೆ ಹೃದಯ ಸಂತಾಪಗಳುಮಾರ ಮೋಹನ ಸಾರುವೆ ನಿನ್ನಯಜಾರ ಬುದ್ಧಿಯ ತಾಪವ ನೀಗಿಸು 3 ಕಮಲ ವಿಹಂಗಮರಾಜ 4 ನೀನೇ ದಯಾಪರ ನೀನೇ ಭಕ್ತೋದ್ಧಾರನೀನೇ ಗತಿ ಪರನಾರೆರಿಗೆಪಾಣಿಮುಗೆವೆಯಮ್ಮ ವಾಣಿಯ ಲಾಲಿಸಿ ವೇಣುನಾದ ತೋರೊ ತಂದೆ ಶ್ರೀನೃಹರೇ 5
--------------
ತಂದೆ ಶ್ರೀನರಹರಿ
ಕಡಲಶಯನ ಹರಿಯ ತೊಡೆಯಲ್ಲಿ ಮಡದ್ಯೇರಿಬ್ಬರು ಕುಳಿತು ಪ ಪನ್ನಂಗಶಯನ ಕೇಳೆ ಸ್ವಾಮಿ ನೀ ಎನ್ನ ಮನೆಗೆ ಏಳೊ ನಿನ್ನ ಪಾದಕ್ಕೆ ಎರಗುವೆನೆಂದು ಭಾಮೆ ಕೈ- ಯನ್ನು ಮುಗಿದಳಾಗ 1 ಎನ್ನ ಮನೆಯಲ್ಲಿದ್ದ ಶ್ರೀಹರಿ- ಯನ್ನು ಕರೆಯಲವರ ಕಣ್ಣೇಸೆನುತಲಿ ಕರ್ಣಿ(ನ್ಯೆ?) ರುಕ್ಮಿಣಿ ಕೋಪ- ವನ್ನು ಧರಿಸಲಾಗ 2 ಎಷ್ಟು ಹಣವ ನೀನು ಕೃಷ್ಣಗೆ ಕೊಟ್ಟು ಕೊಂಡಿ ಹೇಳೆ ದಿಟ್ಟತನದ ಮಾತಾಡೋ ರುಕ್ಮಿಣಿ ನಿನ್ನ ಶ್ರೇಷ್ಠತನವೇನ್ಹೇಳೆ 3 ಹತ್ತು ಆರು ಸಾವಿರದಷ್ಟ ಭಾರ್ಯೇರವೊಳಗೆ ಸತ್ಯಭಾಮೆ ಉತ್ಕøಷ್ಟ ಚೆಲುವೆಯೆಂದು ಕೃಷ್ಣ ನಿನ್ನಲ್ಲಿಹನೆ4 ಹದಿನಾಲ್ಕು ಲೋಕದಲಿ ಹರಿ ಪಾದಾಂಬುಜವ ಕಾಂಬುವೋರಿಲ್ಲೆ ಯದುನಾಥನ ಎದೆ ಮ್ಯಾಲ್ಹತ್ತಿರುವೋದು ಇದು ಸೋಜಿಗವಲ್ಲೆ 5 ಇಷ್ಟೆ ಸೋಜಿಗವೆಂದು ಆಡಲು ದಿಟ್ಟೆ ನಿನಗೆ ಅರಿದೆ ಅಷ್ಟದಿಕ್ಪಾಲಕರನೆ ಓಡಿಸಿ ವೃಕ್ಷ ಕಿತ್ತು ಒದರು(ರುವು?) ದಲ್ಲೆ 6 ಜಲಪ್ರಳಯ ಕಾಲದಲಿ ಜನರಿಲ್ಲದ ಅಂಧಕಾರದಲಿ ಎಲೆಯಾಗಾ ಪರಮಾತ್ಮನ ಮನವ ನೀ ಮೊ- ದಲೆ ಒಲಿಸಿಕೊಂಡೆ 7 ಕಾದು ಸೇವಿಸೆ ಹರಿಯ ಪಾದದ- ಲ್ಲಾದರವಿಲ್ಲದಲೆ ದಾನ ಮಾಡುತ ಮುನಿಹಿಂದಟ್ಟಿದರ್ಹರಿ ಹ್ಯಾಗೆ ಬರುವನ್ಹೇಳೆ 8 ಮೂರು ಲೋಕದ ದೊರೆಯ ಮೂರೆಲೆ ತುಳಸಿ- ಸರಿಯ ಮಾಡಿ ಮುಕುತಿದಾಯಕ ಕೈವಶವಾ- ಗಿರಲು ನೀ ಸಕಲ ಮಾಯವ ಬಲ್ಲೆ 9 ಪಟ್ಟದ್ವೊಲ್ಲಭೆ ನಾನು ಕೃಷ್ಣಗೆ ಮೆಚ್ಚಿ ಬಂದೆಯೆ ನೀನು ಅಚ್ಚುತ ತಾ ಪರಮಾನುಗ್ರ(ಹ)ವ ಮಾಡಿ ಬಂ- ದಿಚ್ಛೆಲಿರುವ ತಾನು10 ಮಾತಾಪಿತರು ಅನುಜನನ್ವಂಚಿಸಿ ಈತಗ್ವಾಲೆಯ ಬರೆದು ಯಾತಕಂಜಿಕೆ ವಲಿಸ್ಯೋಡಿ ಬಂದವಳೆಂದು ಕೀರ್ಹೊಗಳುವುದಲ್ಲೆ 11 ತಂದು ಕೊಡಲು ಮಣಿಯ ಸಭೆಯೊಳು ಅಂದು ತಗ್ಗಿಸಿ ತಲೆಯ ನಿಂದ್ಯದ ಮಾತಿಗೆ ತಂದು ನಿಮ್ಮಯ್ಯ ಮುಂದಿಟ್ಟು ಪೋದನೆ ನಿನ್ನ 12 ಕೇಳೊ ಕೇಳೊ ನುಡಿಯ ನೀನೀ- ರೇಳು ಲೋಕದ ಒಡೆಯ ಹೇಳೋ ಬುದ್ಧಿ ನಿನ್ನಯ ವಲ್ಲಭೆ ಮಾತಾ- ಡೋಳೊ ನಿರ್ಭಿಡೆಯ 13 ರಕ್ಕಸಾಂತಕ ಕೇಳೊ ನಿನ್ನ ಚಿಕ್ಕವಲ್ಲಭೆ ಮ(ಹಿ)ಮೆ ಉಕ್ಕಿ ಉಕ್ಕಿ ಎನ್ನ ಮ್ಯಾಲೆ ಬರಲು ನಿನ- ಗಕ್ಕರ ತೋರುವುದೆ 14 ಆರ್ಯಳೆಂದು ನಾನು ತಾಳಿದೆ- ನಕ್ಕ ರುಕ್ಮಿಣಿ ಮಾತ ಏರಿ ಏರಿ ಏನ್ನಮ್ಯಾಲೆ ಬರಲು ಇದು ನ್ಯಾಯವೇನೊ ನಿನಗೆ 15 ನಾಲ್ಕು ತೋಳಿನಿಂದ ಆಲಿಂಗಿಸಿ ಕಾಂತೆಯರಿಬ್ಬರನು ಯಾತಕಿಂಥ ಕದನವು ಘನವಾಯಿತು ಸಾಕು ಸಾಕುಯೆನುತ16 ವಾರಿಜಾಕ್ಷ ಕೇಳೋ ನಾರದ- ರ್ಹೂಡಿದರೀ ಜಗಳ ಪಾರಿಜಾತ ಸರಿಸವತಿಗೆ ಕೊಟ್ಟ- ರಿನ್ಯಾರು ಸೈರಿಸೋರ್ಹೇಳೊ 17 ನಂದನವನ ತರುವ ನಾ ತಂದಿಟ್ಟೆನಂಗಳದಲ್ಲೆ ಅಂದಿಬ್ಬರನಾನಂದವ ಬಡಿಸಿದ ಚೆಂದದಿಂದಲಿ ನಗುತ 18 ಭಾಮೆ ರುಕ್ಮಿಣಿ ಸಹಿತ ನಡುವೆ ಭೀಮೇಶ ಕೃಷ್ಣನು ಕುಳಿತ ಕಾಮನಯ್ಯನ ಚರಿತ್ರೆಯ ಪಾಡ- ಲಮೃತ ಪಾನವು ನಿರುತ 19
--------------
ಹರಪನಹಳ್ಳಿಭೀಮವ್ವ
ಕಂಡು ಧನ್ಯನಾದೆ ಭೂಮಂಡಲದೋಳ್ ಪ ಶ್ರೀ ಗುರುಸಾರ್ವಭೌಮ ರಾಘವೇಂದ್ರರಾ 1 ಕಲಿಯುಗದೋಳ್ ಭಕ್ತಜನರಾ ಉದ್ಧರಿಸಬೇಕು ಎಂಬ ಮನದಿ ವರಮಂತ್ರಾಲಯದೊಳ್ ಬಂದು ನಿಂದಿಹ ಯತಿವರರಾ 2 ಮಂಗಳಮೂರುತಿ ರಾಘವೇಂದ್ರರ ಬೃಂದಾವನ ಮನದಣೆಯೆ 3 ವಿಶಿಷ್ಟ ಜನರ ಕಷ್ಟಗಳನು ನಿಮಿಷಮಾತ್ರದಿ ಕಳೆದು ಸಲಹುವ ಶ್ರೇಷ್ಟ ಗುರುಗಳ ದಿವ್ಯವಾದ ದರ್ಶನ ಭಾಗ್ಯಾ ದೊರೆಕಿತಿಂದು 4 ಆದಿವ್ಯಾಧಿಗಳೆಲ್ಲ ಹರಿಸಿ ಅಂಧ ಬಧಿರ ಮೂಕತ್ವ ತೊಲಗಿಸಿ ಬಂದ ದುರಿತಗಳೆಲ್ಲ ಓಡಿಸಿ ಕಂದನಂದದಿ ಸಲಹುವ ಗುರುಗಳಾ5 ದಿನದಿನದೊಳ್ ಇವರ ಮಹಿಮೆ ಅಧಿಕವಾಗುತಿರಲು ಕಂಡು ಹಿಂಡು ಹಿಂಡಾಗಿ ಬರುತಲಿಹರೂ 6 ಹೆಜ್ಜೆ ಹೆಜ್ಜೆಗೆ ವಂದಿಸುತಲೀ ದಂಡೆ ಮುಡಿ ಉರುಳುತಲೀ ಮಂಡೆಬಾಗಿ ನಮಿಸತಲಿ ಬಿಡದೆ ರಾಯರ ಕೊಂಡಾಡುತಲೀ 7 ಜನರೆನರವ ಕೊಡುತಾ ಕೊಡುವ ದಾತಾ 8 ನಿತ್ಯ ನಿತ್ಯದಿ ಬ್ರಾಹ್ಮಣರ ವೇದ ಪುರಾಣ ನಡೆಯುತಿರುವುದು ಕೇಳಿ ಭಕ್ತಿಯಿಂದ ಜನರಾನಂದ ಭರಿತರಾಗುತಿಹರು 9 ಕೇಳುತಿಹುದು ಮಂತ್ರಘೋಷ ಪೇಳುತಿಹ ಪುರಾಣ ರಹಸ್ಯ ನೀಡುತಿಹರು ಗುರೂಪದೇಶ ಎಮಗಾಯಿತಿಂದು ಬಹುಸಂತೋಷ10 ಗುರುಗಳ ಮನಸಾರಾ11 ಬಂದ ಭಕ್ತಬೃಂದಕೆಲ್ಲ ಬೇಡಿ ದೊರಗಳ ನೀಡುತ ಸಲಹಿ ಉಣಿಸಿದಣಿಸಿ ಹರಸಿ ಅವರ ಆನಂದದಿಂದ ಕಳುಹುತಿಹರು 12 ಭಕ್ತರಸವ ಪಾನಮಾಡಿಸಿ ಮುಕ್ತಿ ಮಾರ್ಗಕೆ ದಾರಿ ತೋರಿಸಿ ಕರ್ತೃ ಶ್ರೀಹರಿ ಹೊರತುಯಿಲ್ಲೆಂದು ಸತ್ಯವಾಕ್ಯ ವ್ಯಾಕ್ತಪಡಿಸುತಿಹರು13 ಭಕ್ತಜನರ ಪೊರೆಯಲಿವರ ಸರಿಗಾಣೆನೀಧರೆಯೊಳಗೆ ತಂದೆಯಂದದಿ ಬಿಡದೆ ಕಾಯ್ವರು ಸಾರ್ವಭೌಮ ಶ್ರೀ ರಾಘವೇಂದ್ರರು 14 ಎಷ್ಟು ಜನ್ಮದ ಸುಕೃತದ ಫಲವೋ ಶ್ರೇಷ್ಟಗುರುಗಳ ದರ್ಶನವಾಯಿತು ಕಂಗಳಿಂದಲಿ ಕಂಡು ಮನದ ಕ್ಲೇಶವೆಲ್ಲ ಪರಿಹಾರವಾಯಿತು 15 ಹಿಂದೆ ಪ್ರಹ್ಲಾದರಾಜರೆನಿಸಿ ಬಂದು ಮಂಚಾಲೆಯಾಂಬಿಕೆ ದರ್ಶನ ಕೊಂಡು ಗುರುಗಳ ದರ್ಶನ ಮಾಡಿಸೆಂದು ಭಕ್ತಿಲಿಜನ ಬೇಡುತಿಹರು 16 ದೇಶ ದೇಶದ ಜನರಿಗೆಲ್ಲ ವಿಸ್ತಾರದಿಂದ ಎಲೆಗಳ್ಹಾಕಿ ಭಕ್ಷ್ಯ ಪಾಯಸಾನ್ನಗಳನು ತೃಪ್ತಿಯಿಂದ ಉಣಿಸುತಿಹರು 17 ಶ್ರೀ ರಾಘವೇಂದ್ರಾಯ ನಮಃ ಎಂದರೆ ದುರಿತಗಳೆಲ್ಲವದೂರಮಾಳ್ವರು ಸ್ಮರಣ ಮಾತ್ರದಿ ಸಕಲಪಾಪಗಳೆಲ್ಲ ನಾಶಗೊಳಿಸೋರು18 ಗುರುವಾರ ಪೂಜಾ ಸಂಭ್ರಮದಿಂದ ನಮಗಾಯಿತು ಇಂದು ಮುಂದೆ ನಮಿಸಲು ಭಕ್ತವೃಂದಾ 19 ಜಯ ಜಯತು ಗುರುರಾಜ ಜಯ ಜಯತು ಸುರಭೂಜ ಜಯತು ಶ್ರೀ ರಾಘವೇಂದ್ರಾ ಜಯ ಜಯತು ಜಯ ಜಯತು ಜಯ ಜಯಾ 20
--------------
ರಾಧಾಬಾಯಿ
ಕಂಡು ನಮಿಸಿದೆ ನಿನ್ನ | ಕಡಗೋಲ ಪಿಡಿ- ದುದ್ದಂಡ ದೇವವರೇಣ್ಯ ತಾಪತ್ರಯಗಳಘ ಹಿಂಡು ಓಡಿಸು ರನ್ನ ಪೊರೆ ಸುಪ್ರಸನ್ನ ಪ. ಕಂಡೆ ನಿನ್ನಯ ಬಾಲರೂಪವ ಪುಂಡರೀಕದಳಾಯತಾಕ್ಷನೆ ಕುಂಡಲೀಶಯ ನಿನ್ನ ಚರಣದಿ ದಂಡವಿಕ್ಕುವೆ ಗೋಪಿಬಾಲ ಅ.ಪ. ಜನನ ಮರಣದಿ ನೊಂದೆ | ಶ್ರೀ ಜಾನಕೀಪತೆ ಪ್ರಣತ ಜನರಿಗೆ ತಂದೆ | ನೀ ಕಾಯದಿದ್ದರೆ ಘನವೆ ನಿನಗಿದು ಎಂದೆ | ಪಾಲಿಪುದು ಮುಂದೆ ಜನಮ ಜನುಮದ ಕರ್ಮಗಳ ನಾ ಅನುಭವಿಸಿ ಪೂರೈಸಲಾಪೆನೆ ಘನಮಹಿಮ ದಯ ಮಾಡಿದಲ್ಲದೆ ಕೊನೆಯ ಕಾಣೆನು ವಿಷಯ ವಾಸನೆ ವನಜ ಸಂಭವ ಪವನ ರುದ್ರಾ ದ್ಯನಿಮಿಷಿರಿಗಿನಿತಿಲ್ಲ ಮಹಿಮೆಯು ನಿನಗೆ ವಿೂರಿದರುಂಟೆ ದನುಜದಲ್ಲಣ ದಯದಿ ಸಲಹೊ 1 ಕಾಮಪಿತ ಮಧ್ವೇಶ | ಸೌಂದರ್ಯ ಸಾರ ತಾಮಸರ ವಿಧ್ವಂಸ | ಸಜ್ಜನರ ಕಾಯುವ ಕೋಮಲಾಂಗನೆ ಶ್ರೀಶ | ಲಕ್ಷ್ಮೀ ನಿವಾಸ ಹೋಮಕುಂಡದಿ ಪುಟ್ಟಿದಾ ಸತಿ ಕಾಮಿಗಳ ಉಪಟಳಕೆ ಸಹಿಸದೆ ಶ್ರೀ ಮನೋಹರ ಕಾಯೊ ದ್ವಾರಕೆ ಧಾಮ ನೀ ಗತಿ ಎನುತವರಲೆ ಪ್ರೇಮದಿಂದಕ್ಷಯವನಿತ್ತ ನಾಮ ಮಂಗಳ ನಿರ್ಮಲಾತ್ಮಕ ಸೋಮಶತಪ್ರಭ ಸೌಮ್ಯರೂಪ ತ್ರಿ- ಧಾಮ ಭಕ್ತರ ಕಾಮಿತಾರ್ಥನೆ 2 ಆದಿಮಧ್ಯವಿದೂರ | ಆನಂದ ಪೂರ್ಣ ಸಾಧು ಮನದಿ ವಿಹಾರ | ಸರ್ವಜ್ಞರಾಯರ ಹಾದಿ ತೋರಿಸೊ ಧೀರ | ಸುಜ್ಞಾನಸಾರ ವೇದ ಶಾಸ್ತ್ರಗಳರ್ಥವರಿಯೆನು ಮಾಧವನೆ ಮಮಕಾರದಲಿ ನಾ ಹಾದಿ ತಿಳಿಯದೆ ನೊಂದೆ ಅಜ್ಞತೆ ಹೋದಡಲ್ಲದೆ ನಿನ್ನ ಕಾಣುವ ಮೋದ ಬರುವುದೆ ಮಧ್ವವಲ್ಲಭ ಭೇದ ಮತಿ ಕೊಡು ತಾರತಮ್ಯದಿ ನೀ ದಯದಿ ಒಲಿದೆನ್ನ ಮನದಲಿ ಆದರದಿ ನೆಲೆಸಿನ್ನು ಪೊಳೆಯೊ 3 ಕಡಲಶಯನನೆ ಶ್ರೀಶ | ಕಡಗೋಲ ಕೈ ಪಡುಗಡಲ ತೀರದಿ ವಾಸ | ಕಮಲೇಶ ನಾ ನಿ- ನ್ನಡಿಯ ಕಂಡೆನು ನಾಶ | ರಹಿತನೆ ಪ್ರಕಾಶ ಎಡೆಬಿಡದೆ ನಿನ್ನಸ್ಮರಿಪ ಧ್ಯಾನವ ಕೊಡುತ ಮಧ್ಯದಿ ತಡೆವ ಸಂಸೃತಿ ತಡೆದು ಸಂತ ಚಿಂತನೆಯ ದೃಢ ಒಡಲೊಳಗೆ ನೆಲೆಸಯ್ಯ ಬಿಡದೆ ಪತಿ ಸತಿ ಪಿತ ಕಡಲವಾಸನೆ ಕಡಲ ಬಂಧನ ಕಡಲ ಮಧ್ಯದಿ ಪುರವ ರಚಿಸಿದೆ ಕಡು ದಯಾಂಬಯಧೆ ಕಾಯೊ ಸತತ 4 ಅಷ್ಟಯತಿ ನುತಪಾದ | ಸುಖ ತೀರ್ಥ ಹೃದಯ ದೀಷ್ಟಿತನೆ ಸನ್ಮೋದ | ಸಜ್ಜನರ ಮನದಾ ಭೀಷ್ಟವೀವ ಪ್ರಮೋದ | ಕರುಣಿ ಸುಪ್ರಸೀದ ಕೊಟ್ಟೆ ಮನು ಮುನಿಗಳಿಗೆ ಜ್ಞಾನವ ತುಷ್ಟಿಪಡಿಸುತÀ ಸುರರ ಸುಧೆಯಲಿ ಕುಟ್ಟಿ ಅಸುರನ ಕೋರೆದಾಡಿಲಿ ಕುಟ್ಟಿ ಅರಸರ ಕಟ್ಟಿ ಜಟೆಯನು ಮಟ್ಟಿ ಕಂಸನ ಬಿಟ್ಟು ವಸನವ ದಿಟ್ಟ ಕಲ್ಕಿ ಗೋಪಾಲಕೃಷ್ಣ ವಿಠ್ಠಲನೆÀ ಶ್ರೀ ಉಡುಪಿಲೋಲ5
--------------
ಅಂಬಾಬಾಯಿ
ಕಥನಕಾವ್ಯಗಳು ಶ್ರೀ ವೆಂಕಟೇಶ ಪಾರಿಜಾತ ಅಧ್ಯಾಯ ಒಂದು ಶ್ರೀಪತಿರ್ಭೃಗುಣಾ ಸರ್ವಲೋಕೋತ್ಕøಷ್ಟ ಇತೀ ಪಿತ: ಗೋಕ್ಷೀರ ಸಿಕ್ತ ಸರ್ವಾಂಗೋ ವಲ್ಮೀಕಸ್ಥ: ಶುಭಂ ದಿಶೇತ | ಶ್ರೀಸಹಿತ ಶ್ರೀವೆಂಕಟೇಶಗೆ ಸಾಸಿನಾರತಿ ಮಾಡಿ ಬೇಡುವೆ ಭಾಷೆ ಭಾಷೆಗೆ ಎನಗೆ ಬುದ್ಧಿವಿಕಾಸ ಕೊಡುಯಂದು ಕರಮುಗಿದು ಬೇಡುವೆ ದಾಶರಥಿ ನಿಜದಾಸ ಕಲ್ಲೊಳ್ಳೀಶಗೊಂದಿಸುವೆ 1 ಸಂತತಿಗೆ ನತಿಸುವೆ ಐಜಿ ವೆಂಕಟರಾಮವರ್ಯರ ಪೂಜೆಯಲ್ಲಿರುವೆ ಜಗತಿಯಲಿ ಜನಿಸಿ ಅವರಾ ಪೂಜಿತಾಖ್ಯವು ವಹಿಸಿದವರನು ಪೂಜಿಸುವೆ ಬಿಡದೆ2 ಪೊಂದಿ ಆ ಗುರು ಪುತ್ರರಾಗಿರುವ ವಿಷ್ಣುತೀರ್ಥರನು ನಮಿಪೆ ಮತ್ತೆ ಸ್ವೋತ್ತಮರಾಗಿ ಇರುವ ಗುರುಗಳಿಗೊಂದಿಸುತ ಸ ರ್ವೋತ್ತಮಾನಂತಾದ್ರಿ ರಮಣನ ಮಹಿಮೆ ಪೇಳುವೆನು3 ವಚನ ಬುದ್ಧಿ ಪೂರ್ವಕ್ಹಿಂ ಸಂಪೂರ್ಣ ಸರ್ವ ದೇವೋತ್ತಮನು ಇರುವನ್ಯಾರೆಂದು ತಿಳಿ ಸರ್ವಲೋಕದಲಿ ಕೇಳಿ ಪೂರ್ವದಲ್ಲಿ ಪೋದ ಪೂರ್ವಿಕನÀ ಮನೆಯಲ್ಲಿ ಗರ್ವ ಅವನಲ್ಲಿ ಕಂಡು ಇರುವ ನಡೆದನಲ್ಲಿ 1 ನೋಡಿದನು ಆಗಲ್ಲಿ ಪ್ರೌಢೆ ಪಾರ್ವತಿಯು ಮಾತಾಡಿದಳು ನಾಚುತಲಿ ಬೇಡಬಿಡು ಪ್ರಾಣೇಶ ನೋಡು ಭೃಗು ಮುನಿಬಂದ ಬೇಡಿಕೊಂಬುವೆನೊ ಗಾಢನೆ ಕಣ್ಕೆಂಪು ಮಾಡಿ ಮುನಿಯಿದ್ದಲ್ಲಿ ಓಡಿಬಂದನು ಪೂಜೆಯ ಬೇಡ ಈ ಲೋಕದಲಿ ನೋಡಿ ಲಿಂಗವ ಪೂಜೆ ಮಾಡಲಿ ಜನರು 2 ಪರಿ ಶಾಪ ಮೆಟ್ಟಿದನು ವೈಕುಂಠ ಥಟ್ಟನೆ ಮತ್ತಲ್ಲಿ ದಿಟ್ಟ ದೇವನ ಕಂಡ ಪಟ್ಟದರಸಿಯಕೂಡಿ ಧಿಟ್ಟಾಗಿ ಮಲಗಿರಲು ಸಿಟ್ಟಿಲÉೂದ್ದನು ಒಳ್ಳೆ ಪೆಟ್ಟು ಅವನೆದಿಗೆ ಮುಟ್ಟಿ ಮುನಿ ಪಾದವನು ತುಷ್ಟನಾಗಿ 3 ಧ್ವನಿ ಮೇಲಿಷ್ಟು ಸಿಟ್ಟು ಕಾರಣ ಪೇಳಿಷ್ಟು ತಪ್ಪಿತು ಕ್ಷಮಿಸಿಷ್ಟು 1 ಎಳ್ಳುಕಾಳಷ್ಟು ನೊಂದು ಕೊಂಡಿದ್ದಾವು ಎಷ್ಟೋ 2 ಧರೆಯೊಳಗೆ ದ್ವಿಜರಿಗೆ ಸರಿಯಾರು ಇಲ್ಲೆಂದು ಬರುವುದು ಭಯ ಬಹಳಷ್ಟು ವರದಾನಂತಾ ದ್ರೀಶನ ಪರಮ ಭಕ್ತರಿಗೆ ಬರಬಾರದೆಂದಿಗೂ ಸಿಟ್ಟು 3 ವಚನ ಇಂದಿರಾಪತಿಯು ಹೀಗೆಂದು ಮುನಿಪಾದಂಗಳÀÀÀ ಚಂದದಿಂದಲಿ ಒತ್ತಿತ್ವರದಿಂದ ಉಷ್ಣೋದಕವನು ತಂದು ತೊಳೆಯುತ ಇಂದು ಪಾವಿತನಾದೆನೆಂದು ಹರುಷದಲ್ಲಿ ಮುಂದೆ ಭೃಗುಮುನಿಯು ಮುಕುಂದನ ಸರ್ವರಿಂದಧಿಕ ಸತ್ಯತಿಳಿರೆಂದ ಮುನಿಗಳೆಲ್ಲ ಮುಂದೆ ವೈಕುಂಠದಲಿ ಇಂದಿರಾದೇವಿ ಗೋವಿಂದನಾಟವ ಕಂಡಂದಳೀ ಪರಿಯು1 ರಾಗ:ಮೋಹನ ಕಲ್ಯಾಣಿ ಆದಿತಾಳ ಹರಿಯೆ ಪೋಗುವೆ ನಾನು ಮುನ್ನಿರುತಿರು ಒಬ್ಬನೇ ನೀನು ತಿರುಕನಾಗಿ ಇರುತಿರುವ ಭೂಸುರನು ಭರದೊಳೊದ್ದ ನಿನ್ಹಿರಿಯತನವೇನು ಪ ನಿನ್ನ ಶ್ರೀವತ್ಸವಿದು ಬಹು ಮಾನ್ಯವು ಎಂದೆನಿಸುವುದು ಮಾನ್ಯ ವಾಗಿಹುದು 1 ಬಡವ ಬ್ರಾಹ್ಮಣರಿಂದ ನೀ ಕಡೆಗೆ ಕೂಡಿರು ಚಂದಾ ಮಡದಿಯ ಹಂಬಲ ಬಿಡುದೂರದಿಂದ ತಡಮಾಡದೆ ನಾ ನಡದೆ ಗೋವಿಂದಾ 2 ಇನ್ನೆನ್ನ ಗೊಡವ್ಯಾಕೊ ಬಿಡು ನಿನ್ನ ಸಂಗತಿ ಸಾಕು 3 ಎನ್ನ ವೈರಿಗಳ ಮನ್ನಿಸುವ್ಯಾಕೋ ನನ್ನಿಚ್ಛೆಯಲಿ ನಾ ಇನ್ನಿರಬೇಕೊ 4 ಹಿಂದಕೆ ಕುಂಭೋದ್ಭವನು ಎನ್ನ ತಂದೆಯ ನುಂಗಿದ ತಾನು ಅಂದಿಗೆ ಎನಗಾನಂದವು ಏನು 5 ಮತ್ತೆನ್ನ ಸೊಸೆಗವರು ಬಹು ಭಕ್ತಿಯಲಿ ಪೂಜಿಸುವರು ವೈರಿಯವರ್ಹೊರತು ಇನ್ಯಾರು 6 ಹುಡುಗ ಬುದ್ಧಿಯು ಎಂದು ನಾ ಕಡೆಗೆ ಬಲ್ಲೆನು ನಿಂದು ಮಡುವ ಧುಮುಕಿ ಕಲ್ಪಡೆಯ ಪೊತ್ತಿಹುದು ಪಿಡಿದು ಭೂಮಿಯ ಕಂಭ ಒಡೆದು ಬಂದಿಹುದು 7 ಬಡವ ಬ್ರಾಹ್ಮಣನಾದಿ ಚಪಗೊಡಲಿಯ ಕೈಯಲಿ ಪಿಡಿದಿ ಮಡದಿಯ ಕಳಕೊಂಡು ತುಡುಗ ನೀನಾದಿ ಹಿಡಿದು ಬತ್ತಲೆ ಖೊಟ್ಟಿ ಕಡವನೇರಿದಿ 8 ಎಷ್ಟು ಪೇಳಲೆ ನಿನಗೆ ನೀನೆಷ್ಟು ಮಾಡಿದಿ ಹೀಗೆ ಅಷ್ಟು ಮನಸಿನೊಳಗಿಟ್ಟುನೂ ಆಗ ಕಟ್ಟಕಡಿಗೆ ಬಲು ಸಿಟ್ಟು ಬಂತೆನಗೆ 9 ಎಲ್ಲರಿಗುತ್ತಮ ನೀನು ಎಂದಿಲ್ಲಿದ್ದೆ ಮೋಹಿಸಿನಾನು ಬಲ್ಲಿದನಂತಾದ್ರಿಯೊಳಿರು ನೀನೆ 10 ರಾಗ:ಸಾರಂಗ ಆದಿತಾಳ ಪರಿ ಕಲಹ ಮಾಡಿ ತ್ವರಿತದಿಂದ ನಡೆದಳು ಕರವೀರಪುರಕೆ ಪ ಪರಮಾತ್ಮನು ತಾ ಮುಂದೀಪರಿ ಚಿಂತಿಸುತಿಹನು ಸಿರಿಯಿಲ್ಲದ ವೈಕುಂಠ ಸರಿಬಾರದು ಎನಗೆ1 ದೀನನಾದೆನು ಹಾ ನಾನು ಕಾಣುವೆನೆಂದು ಪ್ರಾಣ ನಿಲ್ಲದು ಪಟ್ಟದ ರಾಣಿಯ ಬಿಟ್ಟು 2 ಇನ್ಹ್ಯಾಂಗೆ ಇರಲಿ ಇನ್ನಾಕೆಯ ಹೊರತು ಕಣ್ಣಿಗೆ ವೈಕುಂಠಾರಣ್ಯ ತೋರುವುದು ಇನ್ನೆಲ್ಹೋಗಲಿ ಎಂದು ಬಂದ ತನ್ನಿಂದ ತಾನು3 ಶ್ರೀ ವೈಕುಂಠಕಿಂತ ಶ್ರೀ ವೆಂಕಟಗಿರಿಯು ಅಧಿಕವೆಂದು ಭಾವಿಸೀ ಪರಿಯು ಆವತ್ತಿಗೆ ಬೇಗಲ್ಲೇ ತಾ ವಾಸಕೆ ನಡೆದ ದೇವ ತಿಂತ್ರಿಣೆಯೆಂಬೋ ಆ ವೃಕ್ಷವಕಂಡ 4 ಅಡಗಿದ ಮೆಲ್ಲನೆ ಪೋಗಿ ಅಲ್ಲ್ಯಾದೇಶದಲೊಬ್ಬ ಜೋಳಾಖ್ಯನು ಎಲ್ಲರಿಂದಲಿ ತನ್ನ ಪುರದಲ್ಲೆ ಇರುವಾ5 ಶಿವನ ಕರುವಿನ ಮಾಡಿ ತಾನಾಕಳಾಗಿ ಅವನ ತಾಯಿಯು ಲಕ್ಷ್ಮೀ ಅವನ ಮಾರಿದಳು ಕೊಂಡ 6 ನಿತ್ಯ ವರಸಾಧು ಗುಣದಿಂದ ಸರಸಾಗಿ ಕೂಡಿ ಚರಿಸಿ ಬರುವುದು ವೇಂಕಟಗಿರಿಗ್ಹೋಗಿ ನಿತ್ಯ7 ಬಂದ ಕಾರಣವೇನು ಎಂದು ಸ್ಮರಿಸುತಲಿ ಇಂದಿರೇಶಗೆ ಭಕ್ತಿಯಿಂದ ಕ್ಷೀರವನು ಚಂದಾಗಿ ಕರೆವುದು ಬಂದು ಹುತ್ತಿನಲಿ 8 ಹಿಂಡದು ತನ್ನ ಕರುವಿನ ಪರಿ ರಾಜನ ಹೆಂಡತಿಯ ಆಗ ಚಂಡ ಕೋಪದಿ ಗೋಪನ ಕಂಡಂದಳು ಹೀಗೆ 9 ವಚನ ನೀ ಏನು ಮಾಡುವಿನಿತ್ಯ ಕುಡಿವುದೋ ವತ್ಸ ಏನುಮಾಡು ಪ್ರಾಣಕೊಂಬುವೇನು ತಾನು ಗಾಭರಿಗೊಂಡು ಧ್ಯಾನಿಸುತ ಆ ರಾಜ ಮಾನಿನಿಗೆ ನುಡಿದ ಬಹು ದೀನನಾಗಿ 1 ರಾಗ:ದಂತಿ ಆದಿತಾಳ ಅರಿಯೆ ತುರುಗಳ ಕಾಯ್ಕೊಂಡು ಬರುವೆ ನಾ ಇದಹೊರ್ತು ಪ ಕಟ್ಟುವರ್ಯಾರೊ ಅರಿಯೆ ಬರಿದೆ ನೀ ಎನ್ನ ಮೇಲೆ ಹರಿಹಾಯುವದ್ಯಾಕೆ ಅರಿಯೆ 1 ಪಾಲಾಗುವುದೊ ಅರಿಯೆ ಸರಸಾಗಿ ತಿಳಿನೀನು ನೆರೆಯೊರೆಯವರನಾ ಅರಿಯೆ 2
--------------
ಅನಂತಾದ್ರೀಶ - ಕಥನಕಾವ್ಯಗಳು
ಕದನ ಕಠೋರಿ ಬಂದುಕಾಲುಕೆದರ ಬ್ಯಾಡ ಮದನನ ಮಾತಿಗೆ ಇದುರೇನ ಎಲ್ಲ ನೀ ನೋಡ ಪ. ಓಡಿ ಬಂದವಳೆಂದು ಆಡಿದೆ ನೀ ಎನಗೆತಿರುಗಿ ಆಡಿದಲ್ಲೆ ಏನೂ ಹುರುಳಿಲ್ಲ ಎಲೆ ನೋಡೆತಿರುಗಿ ಆಡಿದಲ್ಲೆ ಏನೂ ಹುರುಳಿಲ್ಲ ಸುಭದ್ರ ನೋಡಿಕೋನಿನ ಮನದಲ್ಲೆ ಎಲ್ಲ ನೋಡೆ1 ಅಣ್ಣನ ವಂಚಿಸಿ ಓಡಿ ಬಂದವಳೆಂದುಎನ್ನನೆ ನುಡಿದೆ ಸುಭದ್ರಾ ಎಲೆ ನೋಡೆಎನ್ನನೆ ನುಡಿದೆ ಸುಭದ್ರಾನಿನ್ನಂತೆ ಸನ್ಯಾಸಿಯೊಡನೆ ಬರಲಿಲ್ಲ ಎಲ್ಲಿ ನೋಡೆ2 ಅತ್ತೆಯ ಮಗಳೆಂದು ಹತ್ತೆಂಟು ತಾಳಿದೆ ಒಂದುತ್ತರ ನಿನಗೆ ಕೊಡತೇನ ಎಲೆ ನೋಡೆಒಂದುತ್ತರ ನಿನಗೆ ಕೊಡತೇನ ಸುಭದ್ರಾಚಿತ್ತಕ್ಕೆ ಹೋಗಿ ನಡುವಂತೆ ಎಲೆ ನೋಡೆ 3 ಒಂದು ನುಡಿದು ಹನ್ನೊಂದು ನುಡಿಸಿಕೊಂಡೆಕುಂದದಂಥsÀವಳೆ ನಿನ್ನ ಬಣ್ಣ ಎಲೆ ನೋಡೆಕುಂದದಂಥsÀವಳೆ ನಿನ್ನ ಬಣ್ಣ ಸುಭದ್ರಾಬಂದದಾರಿ ಹಿಡಿದು ತಿರುಗಿ ಹೋಗೆ 4 ಬಾಳುವರ ಮನೆ ಮುಂದೆ ಕೋಳಿ ಕೂಗಿದಂತೆವೀಳ್ಯವ ಕೊಟ್ಟು ಯಾತರಿಂದ ಎಲೆನೋಡೆವೀಳ್ಯವ ಕೊಟ್ಟು ಯಾತರಿಂದ ಹೊಡೆಸಿಕೊಂಡಿನಿಲ್ಲದೆ ಹೋಗೆ ಮನೆತನಕ ಎಲೆ ನೋಡೆ 5 ಕುದುರೆಯ ಸಂಗಡ ಕುರಿ ಹುಲ್ಲು ಮೆಯ್ದರೆಕುದುರೆ ಹಿಂಗಾಲಿಲೆ ಒದೆಯದೆ ಎಲೆ ನೋಡೆಕುದುರೆ ಹಿಂಗಾಲಿಲೆ ಒದೆಯದೆ ಸುಭದ್ರಾಸುದತೆ ರುಕ್ಮಿಣಿಗೆ ಸರಿಯೇನೆ ನೋಡೆ6 ಆನೆಯ ಸಂಗಡ ಆಡು ಹುಲ್ಲು ಮೆಯ್ದೆರೆ ಆನೆ ಹಿಂಗಾಲಿಲೆ ಒದೆಯದೆ ಎಲೆ ನೋಡೆಆನೆ ಹಿಂಗಾಲಿಲೆ ಒದೆಯದೆ ಸುಭದ್ರಾನೀ ರಾಮೇಶನ ಮಡದಿಯ ಸರಿಯೇನೆ ಎಲೆ ನೋಡೆ 7
--------------
ಗಲಗಲಿಅವ್ವನವರು