ಒಟ್ಟು 157 ಕಡೆಗಳಲ್ಲಿ , 48 ದಾಸರು , 142 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಣ್ಣ ಹಬ್ಬವಾಯಿತು ಎನಗಿಂದು ಧನ್ಯಧನ್ಯಗೈಸಿದ ದೀನಬಂಧು ಧ್ರುವ ತುಂಬಿತುಳುಕುತಲ್ಯದ ಬ್ರಹ್ಮಾನಂದ ಹಂಬಲಿಟ್ಟು ನೋಡನುಭವದಿಂದ ಗುಂಭಗುರತವಾಗದೇ ನಿಜಾನಂದ ನಂಬಿ ನಡಿಯಲಿಕ್ಕಿದೆ ಬಲು ಚಂದ 1 ಕಣ್ಣು ಮುಟ್ಟಿನೋಡಲು ಖೂನಗೊಟ್ಟು ಪುಣ್ಯ ಹೊಳೆಯುತಲ್ಯದೆ ಎದುರಿಟ್ಟು ಎನ್ನ ಮ್ಯಾಲೆ ಸದ್ಗುರು ದಯವಿಟ್ಟು ಚಿನ್ನುಮಯದೋರಿದ ನಿಜಗುಟ್ಟು 2 ಹೇಳಲಿನ್ನೇನದನುಭವಸುಖಾ ಥಳಥಳಗುಡುತದೆ ಕೌತುಕಾ ಕೇಳಿಕೋ ಬೇಕಿದುವೆ ಗುರುಮುಖಾ ಹೇಳಿಕುಡುವ ಮಹಿಪತಿಗುರು ಥೋಕಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂದನೆಂದೆನಿಸಿದ ಕೌಸಲ್ಯದೇವಿಗೆ ರಾಮ ಎನಬಾರದೆ ಇಂದಿರಾಪತಿ ರಾಮಚಂದ್ರಗೆ ಶ್ರೀರಘುರಾಮ ಎನಬಾರದೆ 1 ಶಿಶುವಾಗಿ ಅವತಾರ ಮಾಡಿದ ದಶರಥನಲಿ ರಾಮ ಎನಬಾರದೆ ಋಷಿಯಜ್ಞ ಸಲಹಿ ರಕ್ಕಸರನೆ ಕೊಂದ ಶ್ರೀರಾಮ ಎನಬಾರದೆ 2 ಸಾತ್ವಿಕ ದೈವವೆ ತಾಟಕಾಂತಕ ಶ್ರೀರಾಮ ಎನಬಾರದೆ 3 ಪಾದನಖವು ಸೋಕಿ ಪಾದನಾಶನವಾಗೆ ರಾಮ ಎನಬಾರದೆ ಶ್ರೀಪತಿ ಕರುಣದಿ ಶಿಲೆಯು ಸ್ತ್ರೀಯಾಗಲು ರಾಮ ಎನಬಾರದೆ 4 ಸಕಲ ಸದ್ಗುಣ ಪೋಗಿ ಮಿಥಿಲಾ ಪಟ್ಟಣದಿ ರಾಮ ಎನಬಾರದೆ ತ್ರಿಪುರ ಸಂಹಾರ ತ್ರಿನೇತ್ರನ ಧನುವೆತ್ತಿ ರಾಮ ಎನಬಾರದೆ 5 ಚೆಲ್ವೆ ಜಾನಕಿ ಮಲ್ಲಿಗೆಯ ವನಮಾಲೆಯು ರಾಮ ಎನಬಾರದೆ ವಲ್ಲಭಗ್ಹಾಕಲು ಫುಲ್ಲಲೋಚನೆ ಸೀತಾರಾಮ ಎನಬಾರದೆ 6 ಮಂಗಳ ಮಹಿಮೆ ಸೀತಾಂಗನೆ ಕೊರಳಿಗೆ ರಾಮ ಎನಬಾರದೆ ಮಾಂಗಲ್ಯ ಬಂಧನ ಮಾಡಿದ ಮಹಾತ್ಮನು ರಾಮ ಎನಬಾರದೆ 7 ಜಗದೇಕ ಸುಂದರಿ ಜಾನಕಿಯನೆ ಗೆದ್ದ ರಾಮ ಎನಬಾರದೆ ಜಗದೀಶ ಜನಕಗೆ ಜಾಮಾತನೆನಿಸಿದೆ ರಾಮ ಎನಬಾರದೆ 8 ಮುದ್ದು ಜಾನಕಿ ಕೂಡಿ ಅಯೋಧ್ಯಕೆ ಬರುತಿರೆ ರಾಮ ಎನಬಾರದೆ ಮಧ್ಯ ಮಾರ್ಗದಿ ಬಂದಿದ್ದನು ಭಾರ್ಗವ ರಾಮ ಎನಬಾರದೆ 9 ತನ್ನ ತಾನೇ ಗೆದ್ದು ಧನ್ಯನೆಂದೆನಿಸಿದಿ ರಾಮ ಎನಬಾರದೆ ಬ್ರಹ್ಮ ಶಂಕರರಿಂದಿನ್ನು ಉತ್ತಮನಾದ ರಾಮ ಎನಬಾರದೆ 10 ಪಟ್ಟಗಟ್ಟಲು ಪರಮೋತ್ಸವ ಕಾಲಕ್ಕೆ ರಾಮ ಎನಬಾರದೆ ದುಷ್ಟ ಕೈಕೆಯ ನಿಷ್ಠೂರ್ವೊಚನವ ಕೇಳಿದ ರಾಮ ಎನಬಾರದೆ 11 ಆ ಲಕ್ಷುಮಿಯ ಮಾತಲಕ್ಷ್ಯವ ಮಾಡದೆ ರಾಮ ಎನಬಾರದೆ ಲಕ್ಷ್ಮಣ ಲಕ್ಷ್ಮಿ ಕೂಡ್ವನವಾಸ ತಿರುಗಿದ ರಾಮ ಎನಬಾರದೆ 12 ಸತಿ ಆದೇನೆಂದಸುರೆಯ ರಾಮ ಎನಬಾರದೆ ನಾಶÀರಹಿತ ಕಿವಿ ನಾಸಿಕನಳಿಸಿದ ಶ್ರೀ ರಾಮ ಎನಬಾರದೆ 13 ದಂಡಕಾರಣ್ಯದಿ ಕಂಡು ಮಾರೀಚನ್ನ ರಾಮ ಎನಬಾರದೆ ಹಿಂದ್ಹೋಗೆ ರಾಘವ ಬಂದ ರಾವಣನಲ್ಲೆ ರಾಮ ಎನಬಾರದೆ 14 ಘಾತಕ ರಾವಣ ಜಗನ್ಮಾತೆನೊಯ್ಯಲು ರಾಮ ಎನಬಾರದೆ ಸೋತು ಜಟಾಯು ಯುದ್ಧವ ಮಾಡಿ ತಾ ಬೀಳಲು ರಾಮ ಎನಬಾರದೆ 15 ಒಲಿದು ಸುಗ್ರೀವಗೆ ವಾಲಿ ವಧೆಯ ಮಾಡಿ ರಾಮ ಎನಬಾರದೆ ವಾನರಗಳ ಕೂಡಿ ವಾರಿಧಿಕಟ್ಟಿದ ಶ್ರೀರಾಮ ಎನಬಾರದೆ16 ಲೋಕ ಮಾತೆಯ ಲಂಕಾನಾಥ ತಾ ಒಯ್ದಾಗ ರಾಮ ಎನಬಾರದೆ ಸೀತಾಕೃತಿಯನಿಟ್ಟಶೋಕ ವನದೊಳು ರಾಮ ಎನಬಾರದೆ 17 ಮಂಡೋದರಿಯ ಗಂಡನ್ನ ದಶಶಿರಗಳ ರಾಮ ಎನಬಾರದೆ ಚೆಂಡನಾಡಿದ ಕೋದಂಡ ಪಾಣಿಯ ಶ್ರೀರಾಮ ಎನಬಾರದೆ 18 ಪ್ರೀತಿಂದ್ವಿಭೀಷಣಗೆ ಪಟ್ಟವಗಟ್ಟಿ ರಾಮ ಎನಬಾರದೆ ಸಿಂಧು ದಾಟಿದ ರಾಮ ಎನಬಾರದೆ 19 ಆದಿ ಲಕ್ಷುಮಿ ಕೂಡಿ ಹೋದನಯೋಧ್ಯಕೆ ರಾಮ ಎನಬಾರದೆ ಶ್ರೀದೇವಿ ಸಹಿತ ಪಟ್ಟಣ ಹೊಕ್ಕ ಪಟ್ಟಾಭಿರಾಮ ಎನಬಾರದೆ20 ಭರತ ಸುಮಿತ್ರ ಕೌಸಲ್ಯಗೆ ಸುಖವಿಟ್ಟ ರಾಮ ಎನಬಾರದೆ ಮುಕ್ತಿದಾಯಕ ಮುಂದೆ ಬಿಡದೆ ಕಾಪಾಡುವ ರಾಮ ಎನಬಾರದೆ21 ಪತ್ನಿ ವಾರ್ತೆಯ ತಂದ ಪವನಸುತಗೆ ಒಲಿದ ರಾಮ ಎನಬಾರದೆ ಸತ್ಯ ಲೋಕದ ಆಧಿಪತ್ಯವ ಕೊಟ್ಟ ಶ್ರೀ ರಾಮ ಎನಬಾರದೆ22 ರಾಮ ರಾಮನು ಎಂದು ಕÀರೆಯೆ ಭಕ್ತಿಯ ನೋಡಿ ರಾಮ ಎನಬಾರದೆ ಪ್ರೇಮದಿ ತನ್ನ ನಿಜಧಾಮವ ಕೊಡುವೋನು ರಾಮ ಎನಬಾರದೆ 23 ಅರಸಾಗಯೋಧ್ಯವನಾಳಿ ಯದುಕುಲದಲಿ ರಾಮ ಎನಬಾರದೆ ಹರುಷದಿ ಭೀಮೇಶ ಕೃಷ್ಣನಾಗ್ಯುದಿಸಿದ ರಾಮ ಎನಬಾರದೆ 24
--------------
ಹರಪನಹಳ್ಳಿಭೀಮವ್ವ
ಕರೆದರೆ ಓ ಓ ಎನಬಾರದೆ ಮರೆತರು ಕೂಗಿನ ದನಿಕೇಳದೆ ರಂಗ ಪ ಶರಣಜನರು ಸಾಸಿರವಿದ್ದರೇನೋ ಮೊರೆಯಿಡುವವ ಕಂಡರರಿವಾಗದೇನೋ ಅ.ಪ ಲಕ್ಷಜೀವಿಗಳನ್ನು ರಕ್ಷಿಸುವವನೆಂದು ವಕ್ಷದೊಳಿರುವ ಶ್ರೀಲಕ್ಷ್ಮಿ ಹೇಳುವಳು ಪಕ್ಷಿರಾಜನ ಫಣಿಯಕ್ಷನಂಗನೆಯರು ಅಕ್ಷರ ಲೋಕಾಧ್ಯಕ್ಷನೆನುವರು 1 ಯೋಗವನರಿಯೆನು ಯಾಗವನರಿಯೆನು ತ್ಯಾಗ ಮಾಡುವ ಬುದ್ಧಿ ಎಳ್ಳನಿತಿಲ್ಲ ರಾಗ ರಚನೆಗಳ ಅರಿವೆನಗಿಲ್ಲ ನಾಗಶಯನ ಕಾಯೋ ಮಾಂಗಿರಿರಂಗ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಾರ್ತಿಕೇಯನ ಮಾಡೋ ನೀ ಧ್ಯಾನ ಪ ನೀರಜ ನಯನನ ತಾರಕ ಮಂತ್ರನ ಮಾಡೋ ನೀ ಧ್ಯಾನ 1 ನಿಗಮಗಳಿಗೆಟಕದ | ಜಗದೇಕ ದೇವನ ಅಗಣಿತಮಹಿಮನ | ಮಾಡೋ ನೀ ಧ್ಯಾನ 2 ನಿತ್ಯಾನಂದನ | ಭೃತ್ಯರ ಪೊರೆವನ ಸತ್ಯ ಸ್ವರೂಪನ | ಮಾಡೋ ನೀ ಧ್ಯಾನ 3 ದುಷ್ಟ ಖಳರ ಎದೆ | ಮೆಟ್ಟಿ ಶಿಕ್ಷಿಸುವನ ಕುಷ್ಠ ವಿನಾಶನ | ಮಾಡೋ ನೀ ಧ್ಯಾನ 4 ದಾಸರ ಕಾವ ಪಾವಂ | ಜೇಶನ ಸ್ಕಂದನ ಭೂಸುರ ಪ್ರೀಯನ | ಮಾಡೋ ನೀ ಧ್ಯಾನ 5
--------------
ಬೆಳ್ಳೆ ದಾಸಪ್ಪಯ್ಯ
ಕೆಡುವೆಯೇಕೋ ಮನುಜ ಕೆಡುವೆಯೇಕೋ ಪ ಪೊಡವಿಯಾ ಸುಖ ಸ್ಥಿರವದೆಂಬ ದೃಢವನಾಂತು ನೀ ಅ.ಪ ಧನವಗಳಿಸಲೇಂ ಮನುಜಾ ಮನೆಗಳೀಡಾಡೆ ಎನಿತು ಬಳಗಮಿರ್ಪೊಡೇನು ತನುವಿನಾಸೆಯಿಂ 1 ಮರೆವೆಯೇತಕೋ ಮನುಜಾ ಅರಿಯಲೆನ್ನುತಾ ಬರಿಯ ಮಾಯೆಯೀ ಪ್ರಪಂಚ ಚಿರವೆಂದೆನ್ನುತಾ 2 ರಂಗಮಾಲೋಲನಾ ಮಾಂಗಿರೀಶನ ನೆನೆ[ದರೆ] ಹಿಂಗದೇ ಭವಬಂಧಗಳನು | ಭಂಗಗೈಯನೇ 3 ಕಾಲದೂತ ರಂಗ ಕಾಲಿನಿಂದೊದೆಯುವಾಗ ಬಾಲರಾಮದಾಸ[ನುತನ] ನಲಿದು ನೆನೆಯದೆ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕೇಳು ಕಂಡ್ಯಾ ಒಂದು ಮನವೇ | ಕೇಳು ಕಂಡ್ಯಾ ಪ ಕೇಳು ಕಂಡ್ಯಾ ವಂದ | ಪ್ರೇಮ ಭಾವದಿಂದ ಬಾಳು ದೀಪರಿಂದ ನಿನಗೆ ಬಂದಕೀದೆ ಛಂದ 1 ವಿಡಿದು ಗುರುಪಾದಾ ಪಡಿಯೋ ನಿಜಬೋಧಾ | ಕಡಿದು ಕಾಮ ಕ್ರೋಧ | ನೀಗು ವ್ಯವಾಧಾ 2 ಅನ್ಯ ಮಾರ್ಗ ನೋಡಾದಿರುವ ಬಲಿದೃಢಾ | ಘನಗುರು ಗೂಢಾ | ವಿದ್ಯೆ ಸಾಧಿಸೆಲೋ ಮೂಢ 3 ದೊಡ್ಡವ ನಾನೆಂಬ ದೋರದೆÉ ನೀಡಂಭ | ಜಡ್ಡಾಗದೇ ಗುಂಭಿ | ನಿಜ ನೋಡಿ ನಿರಾಲಂಬ 4 ಮಹಿಪತಿ ಜನಸೊಲ್ಲ ಹಾದಿಯಂತಿದಲ್ಲ ಮಹಿಮನೇ ಬಲ್ಲನಿದರ ಸವಿಸುಖವೆಲ್ಲ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಖರೆ ತವಧ್ಯಾನ ಹರಿ ಬೇಗ ಮಾಡೆನ್ನಗೆ ನಿಜಮನನ ಪ ಬಾಗಿವಂದಿಪೆ ನಾ ನಿಮ್ಮ ಚರಣ ಭವ ರೋಗ ದಯದಿ ಮಾಡು ನಿವಾರಣ ಅ.ಪ ಜಾಗರಮಾಡಿದರಹುದೇನು ನಿತ್ಯ ಭಾಗವತನೋದಿದರಹುದೇನು ಯಾಗಮಾಡಿದರಹುದೇನು ಮಹ ಯೋಗ ಬಲಿಸಿದರಹುದೇನು ಸೋಗು ಹಾಕಿ ಬೈರಾಗಿ ಆಗಿ ಇಳೆಯ ಭೋಗವ ತ್ಯಜಿಸಿದರಹುದೇನು 1 ಸ್ನಾನಮಾಡಿದರಹುದೇನು ಬಹು ದಾನಮಾಡಿದರಹುದೇನು ಮೌನಮಾಡಿದರಹುದೇನು ಕೌ ಪೀಣ ಧರಿಸಿದರಹುದೇನು ಜ್ಞಾನ ಬೋಧಿಸುತ ನಾನಾದೇಶಗಳ ಮಾಣದೆ ತಿರಿಗಿದರಹುದೇನು 2 ಜಪವಮಾಡಿದರಹುದೇನು ಬಲು ಗುಪಿತ ತೋರಿದರಹುದೇನು ತಪವ ಗೈದರಹುದೇನು ಮಹ ವಿಪಿನ ಸೇರಿದರೆ ಅಹುದೇನು ಚಪಲತನದಿ ಸದಾ ಅಪರೋಕ್ಷನುಡಿದು ನಿಪುಣನೆನಿಸಿದರೆ ಅಹುದೇನು 3 ಸಾಧುವೆನಿಸಿದರೆ ಅಹುದೇನು ಚತು ಸ್ಸಾಧನಮಾಡಿದರಹುದೇನು ವೇದ ಪಠಿಸಿದರೆ ಅಹುದೇನು ಅಣಿ ಮಾದಿ ಅಷ್ಟಸಿದ್ಧಿ ಅಹುದೇನು ಓದಿತತ್ತ್ವಪದ ಛೇದಿಸಿ ಬಿಡದೆ ಬೋಧಕನೆನಿಸಿದರೆ ಅಹುದೇನು 4 ಕೋಶನೋಡಿದರೆ ಅಹುದೇನು ಬಹು ದೇಶ ನೋಡಿದರೆ ಅಹುದೇನು ಆಸನಹಾಕಿದರಹುದೇನು ಮಂತ್ರ ಅ ಭ್ಯಾಸ ಮಾಡಿದರೆ ಅಹುದೇನು ದಾಸಪ್ರಿಯ ಭಯನಾಶ ಶ್ರೀರಾಮ ನಿಮ್ಮ ಧ್ಯಾಸವೊಂದಿರೆ ಮುಕ್ತಿ ಸಿಗದೇನು 5
--------------
ರಾಮದಾಸರು
ಗುರುವೇ ಗುರುವೇ ಗುರು ಗುರುವೇ ಮಹಾಗುರು ಗುರುವೇ ಶ್ರೀ ಗುರುವೇ ಪ ನಿರಂಜನ ನಿಷ್ಕಲಂಕ ಗುರುವೇಪ್ರತ್ಯಾಗಾತ್ಮ ಪರಾತ್ಪರಾತ್ಪರ ಪ್ರತ್ಯಯರಹಿತ ಗುರುವೇ 1 ನಿರ್ವಿಕಲ್ಪ ನಿರಾಕಾರ ನಿರ್ಗುಣ ನಿರ್ಮಾಯನೇ ಗುರುವೇನಿರ್ವಿಕಾರ ನಿದ್ರ್ವಂದ್ವ ನಿಜಾಕಾರ ನಿರುಪಮಾತ್ಮ ಗುರುವೇ 2 ಪೂಜ್ಯಮಾನ ಸುರಾಸುರ ಸಿದ್ಧಾಯಿಂ ಪೂಜಾರ್ಪಿತ ಗುರುವೇಈ ಜಗದೇಕ ನಾಥನೆ ಚಿದಾನಂದ ತೇಜಃಪುಂಜ ಗುರುವೇ 3
--------------
ಚಿದಾನಂದ ಅವಧೂತರು
ಚರಣದಾಸರ ಸದುಹೃದಯ ನಿವಾಸನೆ ಸಿರಿರಾಮ ಪರಮ ಪಾವನೆ ವರಜಾಹ್ನವೀ ಜನಕನೆ ಸಿರಿರಾಮ ಪ ಶರಣಜನರ ಮೇಲ್ನುಡಿಯೋಳ್ಸಂಚಾರನೆ ಸಿರಿರಾಮ ನೆರೆನಂಬಿ ಭಜಿಪರ ಭವಮಲಹರಣನೆ ಸಿರಿರಾಮ ಕರುಣದೊದೆದು ಯುವತಿಕುಲವನುದ್ಧರಿಸದನೆ ಸಿರಿರಾಮ ವರದ ವಾಸುಕಿಶಾಯಿ ಜಗದೇಕ ಬಂಧುವೇ ಸಿರಿರಾಮ 1 ಧುರಧೀರವಾಲಿಯ ಗರುವನಿವಾರನೆ ಸಿರಿರಾಮ ಮರೆಬಿದ್ದ ಸುಗ್ರೀವನ ದು:ಖಪರಿಹಾರನೆ ಸಿರಿರಾಮ ಪರಮಭಕ್ತ್ಹನುಮಗೆ ಕರವಶನಾದನೆ ಸಿರಿರಾಮ ಶರಣುಬಂದಸುರಗೆ ಸ್ಥಿರಪಟ್ಟವಿತ್ತನೆ ಸಿರಿರಾಮ 2 ಶರಧಿಮಥನಮಾಡಿ ಸುರರ ರಕ್ಷಸಿದನೆ ಸಿರಿರಾಮ ಹರನಕೊರಳ ಉರಿ ಕರುಣದ್ಹಾರಿಸಿದನೆ ಸಿರಿರಾಮ ವರಗಿರಿನಂದನೆಮನ ಸೂರೆಗೈದನೆ ಸಿರಿರಾಮ ಸರುವದೇವರದೇವ ಅದ್ಭುತಮಹಿಮನೆ ಸಿರಿರಾಮ 3 ಕರಿಯ ರಕ್ಷಣೆಗಾಗಿ ಕಾಸಾರಕ್ಕಿಳಿದನೆ ಸಿರಿರಾಮ ತರುಣಿಮೈಗಾವಗೆ ಚರನಾಗಿ ನಿಂತನೆ ಸಿರಿರಾಮ ಚರಣದಾಸರಮನೆ ತುರಗವ ಕಾಯ್ದನೆ ಸಿರಿರಾಮ ಪರಮಭಾಗವತರನರೆಲವ ಬಿಟ್ಟಿರನೆ ಸಿರಿರಾಮ 4 ಅನುಪಮ ವೇದಗಳಗಣಿತಕ್ಕೆ ಮೀರಿದನೆ ಸಿರಿರಾಮ ಸನಕಸನಂದಾದಿ ಮನುಮುನಿ ವಿನಮಿತನೆ ಸಿರಿರಾಮ ವನರುಹ ಬ್ರಹ್ಮಾಂಡ ಬಲುದರದಿಟ್ಟಾಳ್ವನೆ ಸಿರಿರಾಮ ಮನಮುಟ್ಟಿ ಭಜಿಪರ ಘನಮುಕ್ತಿ ಸಾಧ್ಯನೆ ಸಿರಿರಾಮ 5
--------------
ರಾಮದಾಸರು
ತಪ್ಪುವುದೇ ಬ್ರಹ್ಮಕೆ ಗುರಿಯು ನೀನುತಪ್ಪಿದರು ತಾನು ತಪ್ಪದು ಅರಿಯೋ ನೀನು ಪ ಕರವ ಭೂಮಿಗೆ ಬಡಿಯಲು ಪೆಟ್ಟಹೊರಗನೆ ಮಾಡುವುದು ಆವ ಪರಿಪರಿಪೂರ್ಣ ಬ್ರಹ್ಮ ತುಂಬಿರಲು ನೀನುಪರವೆಂದು ಕಾಣೆ ಸಂಶಯವೆ ನಿಜವಿರಲು 1 ಗುಡ್ಡಕೆ ಗುರಿಯ ನೋಡಿದೆ ಅದುಅಡ್ಡಬಿಟ್ಟು ಬೇರೆ ನಿಲ್ಲುವುದೆ ನೋಡೆಖಡ್ಡಿಕೊಳ್ಳದು ಬ್ರಹ್ಮವಾಡೆ ನಿನ್ನದೊಡ್ಡ ಬ್ರಹ್ಮವೆನಲು ಸಂಶಯ ನೋಡೆ 2 ಆಕಾಶ ನೋಡುವುದೇ ತಾನು ಆಆಕಾಶ ನೋಡಲು ನೂಕು ನುಗ್ಗೇನುಏಕ ಚಿದಾನಂದ ನೀನು ಜಗದೇಕ ಬ್ರಹ್ಮವೆಂದು ನಿನ್ನ ನೀನೇ ಕಾಣ 3
--------------
ಚಿದಾನಂದ ಅವಧೂತರು
ತೇನಮೋ ಜಗದೇಕನಾಥ ರಮಾ ಮಾನಸಾಂಬುಜರಾಜಹಂಸಾಯ ವಿಷ್ಣವೇ ಪ ಜಗದೇಕವೀರ ಜನನಾದಿ ದೂರಾ ಸುಗುಣ ವಿಸ್ತಾರ ಸುಖಮಯ ಶರೀರ 1 ಗಾನರಸಲೋಲ ಕನಕಮಯಚೇಲ ಆನತೋದ್ಧರಣ ಅಮೃತಾಬ್ಧಿಶಯನ 2 ಚಂದ್ರಾರ್ಕನಯನ ಚಾರುತರ ಕಥನ ಇಂದ್ರಾರಿ ಮಥನ ಇಭವೈರಿವದನ ಇಂದ್ರ ಸಂಕ್ರಮಣ ವೇಲಾಪುರಿಸದನ ವಂದ್ಯಾಖಿಲಜನ ವೈಕುಂಠ ರಮಣ3
--------------
ಬೇಲೂರು ವೈಕುಂಠದಾಸರು
ನಮಿಸುವೆ ಕೇಶವ ರಂಗನ ನಮಿಸುವೆ ಪ್ರಣವ ಸ್ವರೂಪನ ಪ ಸನಕ ಸುಸೇವಿತ ಕೃಷ್ಣನ1 ಸರಸದಿ ದಾಸರಿಗೊಲಿಯುವ ಹರಿಯ ಪರಮ ಪಾವನ ಮೂರ್ತಿಯ 2 ಪನ್ನಗಶಯನನ ಹರಿ ಮಾಧವನ ಚನ್ನಿಗ ಕೇಶವ ದೇವನ 3 ದೂರ್ವಾಪುರ ಮಧ್ಯದಿ ನೆಲೆಸಿರುವ ಸರ್ವಜಗದೇಕಾತ್ಮನ 4
--------------
ಕರ್ಕಿ ಕೇಶವದಾಸ
ನರಸಿಂಹ ಪಾಹಿ ಲಕ್ಷ್ಮೀ ನರಸಿಂಹ ಪ ನರಸಿಂಹ ನಮಿಪೆ ನಾ ನಿನ್ನ ಚಾರುಚರಣಕಮಲಕೆ ನೀ ಎನ್ನ ಕರವ ಪಿಡಿದು ನಿಜ ಶರಣನೆಂದೆನಿಸೊ ಭಾ ಸುರ ಕರಣಾಂಬುಧೆ ಗರುಡವಾಹನ ಲಕ್ಷ್ಮೀ ಅ ತರಳ ಪ್ರಹ್ಲಾದನ್ನ ನುಡಿಯಾ ಕೇಳಿ ತ್ವರಿತದಿ ಬಂದ್ಯೊ ಎನ್ನೊಡೆಯ ನಾನು ಕರುಣಾಳೊ ಭಕ್ತರ ಭಿಡೆಯ ಮೀರ ಲರಿಯೆ ಎಂದೆಂದು ಕೆಂಗಿಡಿಯ ಅಹ ಭರದಿಂದುಗುಳುತ ಬೊಬ್ಬಿರಿದು ಬೆಂಬತ್ತಿಕ ರ್ಬುರ ಕಶ್ಯಪುವಿನ ಹಿಂಗುರುಳ ಪಿಡಿದೆ ಲಕ್ಷ್ಮೀ 1 ಪ್ರಳಯಾಂಬುನಿಧಿ ಘನಘೋಷದಂತೆ ಘುಳಿ ಘುಳಿಸುತಲಿ ಪ್ರದೋಷ ಕಾಲ ತಿಳಿದು ದೈತ್ಯನ ಅತಿರೋಷದಿಂದ ಪ್ಪಳಿಸಿ ಮೇದಿನಿಗೆ ನಿದೋಷ ಅಹ ಸೆಳೆಸೆಳೆಯುತ ಚರ್ಮಸುಲಿದು ಕೆನ್ನೆತ್ತರೋ ಕುಳಿಯನಾಡಿದೆ ದಿಶಾವಳಿಗಳೊಳಗೆ ಲಕ್ಷ್ಮೀ 2 ಕ್ರೂರ ದೈತ್ಯನ ತೋರಗರುಳಾ ತೆಗೆ ದ್ಹಾರ ಮಾಡಿದೆ ನಿಜಕೊರಳ ಕಂಡು ವಾರಿಜಾಸನ ಮುಖದಯರ್ಕಳ ಪುಷ್ಪ ಧಾರಿಗೆರೆದು ವೇಗ ತರಳಾ ಆಹ ಸೂರಿ ಪ್ರಹ್ಲಾದಗೆ ತೋರಿ ತವಾಂಘ್ರಿ ಸ ರೋರುಹಾವನು ಕಾಯ್ದೆ ಕಾರಣ್ಯನಿಧಿ 3 ಜಯಜಯ ದೇವವರೇಣ್ಯ ಮಹ ದ್ಭಯ ನಿವಾರಣನೆ ಅಗಣ್ಯ ಗುಣಾ ಶ್ರಯ ಘೋರ ದುರಿತಾರಣ್ಯ ಧನಂ ಜಯ ಜಗದೇಕ ಶರಣ್ಯ ಅಹ ಲಯವಿವರ್ಜಿತ ಲೋಕ ತ್ರಯ ವ್ಯಾಪ್ತ ನಿಜಭಕ್ತ ಪ್ರಿಯ ಘೋರಮಯ ಹರ ದಯ ಮಾಡೆನ್ನೊಳು ಲಕ್ಷ್ಮೀ 4 ಕುಟಲ ದ್ವೇಷದವನು ನೀನಲ್ಲ ನಿನ್ನಾ ರ್ಭಟಕಂಜಿದರು ಸುರರೆಲ್ಲ ನರ ನಟನೆ ತೋರಿದ್ಯೋ ಲಕ್ಷ್ಮೀನಲ್ಲ ನಾ ಪಾ ಸಟಿ ಕಾಣೆನಪ್ರತಿಮಲ್ಲ ಅಹ ವಟಪತ್ರಶಯನ ಧೂ ರ್ಜಟಿವಂದ್ಯ ಜಗನ್ನಾಥ ವಿಠಲ ಕೃತಾಂಜಲಿಪುಟದಿ ಬೇಡುವೆ ಲಕ್ಷ್ಮೀ5
--------------
ಜಗನ್ನಾಥದಾಸರು
ನರಿಯುವುದಸದಳವು ಪ ಪರಿಪರಿವಿಧದೊಳು| ರೂಪವ ಧರಿಸುತ್ತ || ಧರಣಿ ಭಾರವನ್ನೆಲ್ಲ| ಪರಿಹಾರ ಮಾಡುವ ಅ.ಪ ಕೂರ್ಮರೂಪವ ತಳೆದೆ || ವರಹನು ನೀನಾದೆ | ನರಹರಿಯಾದೆ ನೀ|| ಮೂರಡಿ ಭೂಮಿಯ | ವಟುವಾಗಿ ಬೇಡಿದೆ 1 ಕಾಕುಸ್ಥ ರಾಮನಾದೆ || ಕಲ್ಕಿರೂಪದಿ ಬಂದು | ಧರೆಂiÀiನುದ್ಧರಿಸಿದೆ 2 ಜಗದಾದಿ ದೇವ ನೀನು | ಏನನ್ನುವೆ | ಜಗದೇಕನಾಯಕನು || ಜಗವನÀುದ್ಧರಿಸುವ | ಜಗನ್ನಿಯಾಮಕ ನೀನು || ಅಗಣಿತ ಮಹಿಮನು 3 ಪ್ರಣವ ಸ್ವರೂಪ ನೀನು || ಅಣುರೇಣು ತೃಣಕಾಷ್ಠ | ಭರಿತನಾಗಿಹ ನೀನು || ಜನನಮರಣವಿರ | ಹಿತನಾದ ದೇವನು 4
--------------
ವೆಂಕಟ್‍ರಾವ್
ನಾನೇನು ಮಾಡಲಯ್ಯ ಎನ್ನಯ ಮನ ನಿನ್ನ ಧ್ಯಾನಿಸಲೊಲ್ಲದೂ ಪ ಶ್ರೀನಿವಾಸನ ದಯ ಕಾಣುವೋಧ್ಹ್ಯಾಂಗಿನ್ನು ನೀನೆ ದಯಮಾಡೋ ಗುರು ರಾಘವೇಂದ್ರ ಅ.ಪ ಕೀರ್ತಿಸದೆ ನಿನ್ನ ವ್ಯರ್ಥ ಚಿಂತೆಯ ಮಾಡಿ ಪಾರ್ಥಸಾರಥಿ ಮಾರ್ಗಕ್ಹೊರ್ತಾದೆ ನಾ ಮರ್ತೆ ನಿಜಸೌಖ್ಯವನು ಬೆರ್ತೆ ಅನ್ಯರ ಸತಿಯ ಸಾರ್ಥಕಾಗದೇ ಪೋಯಿತೆನ್ನ ಆಯು 1 ಮಾಂಸದಾಸೆಗೆ ಮೀನು ಹಿಂಸೆಪಡುತಿರುವಂತೆ ಕಂಸಾರಿ ಪ್ರಿಯ ಹಂಸರೊಂದಿತ ಎನ್ನ ಸಂಶಯವ ಪರಿಹರಿಸಿ ಸಂಶಾಂತ ಮತಿ ನೀಡೋ ಸಂಶಯ ದೂರನೇ 2 ಎಷ್ಟು ಪೇಳಲಿ ಎನ್ನ ದುಷ್ಟ ಕರ್ಮಗಳನ್ನು ಜೇಷ್ಟ ದೂತನೆ ಎನ್ನ ಕಷ್ಟ ಬಿಡಿಸೋ ವೃಷ್ಣಿಸಖಪ್ರಿಯ ಮನ ತೃಷ್ಣಗಳನೆ ಕಳೆದು ಶ್ರೇಷ್ಠಾ ನರಹರಿ ಚರಣಾಭೀಷ್ಟವ ನೀಡೋ 3
--------------
ಪ್ರದ್ಯುಮ್ನತೀರ್ಥರು