ಒಟ್ಟು 35 ಕಡೆಗಳಲ್ಲಿ , 17 ದಾಸರು , 34 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆಗಲಿ ಹರಿಕೃಪೆ ಭಾಗವತರ ಸಂಗನೀಗುವೆ ನಿಮ್ಮ ದುರಿತಗಳಿರ ಪ.ಹರಿನಂಟರೋಲೈಸಿ ಜ್ಞಾನಾಸ್ತ್ರ ಗಳಿಸುವೆಹರಿನಾಮ ವಜ್ರಕವಚ ತೊಡುವೆಹರಿನಿರ್ಮಾಲ್ಯದ ಉತ್ತಮಾಂಗಾಭರಣವಿಟ್ಟುನೆರೆನಿಮ್ಮ ನಾಮ ನಿರ್ನಾಮವ ಮಾಳ್ಪೆ1ಶ್ರೀಲೋಲನಂಘ್ರಿ ಸಮ್ಮದ ಸೈನ್ಯವ ಕೂಡಿತಾಳ ದಂಡಿಗೆ ಗೀತಾಯುಧಗಳಿಂದಕಾಲಕಾಲಕೆ ನಿಮ್ಮ ಮೇಳವ ಮುರಿದಾಡಿಹಾಳು ಮಾಡುವೆ ಕೈಯಲಿಕಡ್ಡಿಕೊಡುವೆ2ಇಕ್ಷುಸ್ವಾದಾದರೆ ಬೇರಸಹಿತ ನೀವುಭಕ್ಷಿಸಬೇಡಿ ಬಾರದೆ ಮರಳಿಪಕ್ಷಿಗಮನ ಪ್ರಸನ್ನವೆಂಕಟೇಶನಪಕ್ಷದವರಹಗೆಹೊಲ್ಲಸಲ್ಲ3
--------------
ಪ್ರಸನ್ನವೆಂಕಟದಾಸರು
ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ ಪ.ವೇದ ಶಾಸ್ತ್ರ ಪಂಚಾಗ ಓದಿಕೊಂಡು ಪರರಿಗೆಬೋಧನೆಯ ಮಾಡವುದುಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 1ಚಂಡ ಭಟರಾಗಿ ನಡೆದು ಕತ್ತಿಢಾಲು ಕೈಲಿ ಹಿಡಿದುಖಂಡ ತುಂಡು ಮಾಡುವುದುಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 2ಅಂಗಡಿಗಳನ್ನೆ ಹೂಡಿ ವ್ಯಂಗ್ಯ ಮಾತುಗಳಾಡಿಭಂಗಬಿದ್ದು ಗಳಿಸುವುದುಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 3ಕುಂಟಿ ತುದಿಗೆ ಕೊರಡುಹಾಕಿ ಹೆಂಟೆಮಣ್ಣು ಸಮಮಾಡಿರೆಂಟೆ ಹೊಡೆದು ಬೆಳೆಸುವುದುಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 4ಬೆಲ್ಲದಂತೆ ಮಾತನಾಡಿ ಎಲ್ಲರನ್ನು ಮರುಳು ಮಾಡಿಸುಳ್ಳು ಬೊಗಳಿ ತಿಂಬುವುದುಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 5ಕೊಟ್ಟಣವ ಕುಟ್ಟಿಕೊಂಡು ಕಟ್ಟಿಗೆಯ ಹೊತ್ತುಕೊಂಡುಕಷ್ಟಮಾಡಿ ತಿಂಬುವುದುಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 6ತಾಳದಂಡಿಗೆ ಶೃತಿ ಮೇಳ ತಂಬೂರಿ ಹಿಡಿದುಕೊಂಡುಸೂಳೆಯಂತೆ ಕುಣಿಯುವುದುಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 7ಸನ್ಯಾಸಿ ಜಂಗಮ ಜೋಗಿ ಜಟ್ಟಿ ಮೊಂಡ ಭೈರಾಗಿನಾನಾ ವೇಷ ಹಾಕುವುದುಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 8ಹಳ್ಳದಲ್ಲಿ ಕುಳಿತು ಕೊಂಡು ಕಲ್ಲು ದೊಣ್ಣೆ ಹಿಡುದುಕೊಂಡುಕಳ್ಳತನವ ಮಾಡುವುದುಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 9ಅಂದಣ ಪಲ್ಲಕ್ಕಿ ಏರಿ ಮಂದಿ ಮಾರ್ಬಲ ಕೂಡಿಚಂದದಿಂದ ಮೆರೆಯುವುದುಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 10ಉನ್ನಂತಪುರಂದರ ರಾಯನ ಧ್ಯಾನವನುಮನಮುಟ್ಟಿ ಮಾಡುವುದುಮುಕ್ತಿಗಾಗಿ ಆನಂದಕಾಗಿ* 11
--------------
ಪುರಂದರದಾಸರು
ಕಂಡೆ ತಿರುಪತಿ ವೆಂಕಟೇಶನಕಾರಣಾತ್ಮಕಸಾರ್ವಭೌಮನಕಾಮಿತಾರ್ಥವನೀವ ದೇವನ ಕರುಣನಿಧಿಯೆಂದೆನಿಸಿ ಮೆರೆವನ ಪಕೋಟಿ ಸೂರ್ಯ ಪ್ರಕಾಶವೆನಿಪ ಕಿರೀಟವನು ಮಸ್ತಕದಿ ಕಂಡೆನುನೋಟಕ್ಕಚ್ಚರಿಯೆನಿಪ ನಗೆಮೊಗನೊಸಲೊಳಗೆ ತಿರುಮಣಿಯ ಕಂಡೆನುಸಾಟಿಯಿಲ್ಲದ ಶಂಖ-ಚಕ್ರವ ಚತುರ ಹಸ್ತದಲೀಗ ಕಂಡೆನುಬೂಟಕದ ಮಾತಲ್ಲ ಕೇಳಿ-ಭೂರಿದೈವದ ಗಂಡನಂಘ್ರಿಯ 1ತಪ್ಪುಗಾಣಿಕೆ ಕಪ್ಪುಗಳನು ಸಪ್ತಲೋಕಗಳಿಂದ ತರಿಸುವಉಪ್ಪು ವೋಗರವನ್ನು ಮಾರಿಸಿಉಚಿತದಿಂದಲಿ ಹಣವ ಗಳಿಸುವ ||ಇಪ್ಪತ್ತು ದುಡ್ಡಿಗೆ ಸೇರು ತೀರ್ಥವ ಒಪ್ಪದಿಂದಕ್ರಯ ಮಾಡಿ ಕೊಡಿಸುವಸರ್ಪಶಯನನ ಸಾರ್ವಭೌಮನ ಅಪ್ಪವೆಂಕಟರಮಣನಂಘ್ರಿಯ 2ಉರದಿ ಶ್ರೀದೇವಿ ಇರಲು ಕಂಡೆನುಉನ್ನತದ ಕೌಸ್ತುಭವ ಕಂಡೆನುಗರುಡಕಿನ್ನರನಾರದಾದಿಗಳಿರಲು ಎಡಬಲದಲ್ಲಿ ಕಂಡೆನು ||ತರತರದಿ ಭಕ್ತರಿಗೆ ವರಗಳ ಕರೆದುಕೊಡುವುದ ನಾನು ಕಂಡೆನುಶರಧಿಶಯನನ ಶೇಷಗಿರಿವರಸಿರಿಪುರಂದರವಿಠಲನಂಘ್ರಿಯ3
--------------
ಪುರಂದರದಾಸರು
ತಪ್ಪುಗಳೆಲ್ಲ ಪರಿಹರಿಸುವ ನಮ್ಮಪ್ಪನಲ್ಲವೆ ನೀನುಒಪ್ಪಿದ ಬಳಿಕವಗುಣ ನೋಡದ ತಿಮ್ಮಪ್ಪನಲ್ಲವೆ ನೀನು ಪ.ಬೆಳಗಿನ ಜಾವದಿಹರಿನಿನ್ನ ಸ್ಮರಣೆಗೆಹಳವಿಗೆಗೊಳ್ಳದ ತಪ್ಪುಮಲಮೂತ್ರವಿಸರ್ಜನೆಯ ಮೃತ್ತಿಕೆಯಲಿಮಲಿನವ ತೊಳೆಯದ ತಪ್ಪುತುಲಸಿ ವೃಂದಾವನ ಗೋಸೇವೆಗೆಅಲಸಿಕೆ ಮಾಡುವ ತಪ್ಪುನಳಿನಸಖೋದಯಕಘ್ರ್ಯವ ನೀಡದಕಲಿವ್ಯಾಸಂಗದ ತಪ್ಪು 1ದಿನದಿನ ಉದಯದಿ ಸ್ನಾನವ ಮಾಡದತನುವಂಚನೆಯ ತಪ್ಪುಕ್ಷಣ ಶ್ರೀ ಹರಿಗುಣ ಜಿಜ್ಞಾಸಿಲ್ಲದಮನವಂಚನೆಯ ತಪ್ಪುಮುನಿಸುರ ಭೂಸುರರಾರಾಧಿಸದಧನ ವಂಚನೆಯ ತಪ್ಪುವನಜಾಕ್ಷನೆ ನಿನ್ನಪಾದವಿಮುಖ ದುರ್ಜನ ಸಂಸರ್ಗದ ತಪ್ಪು 2ಕಣ್ಣಲಿ ಕೃಷ್ಣಾಕೃತಿ ನೋಡದೆಪರಹೆಣ್ಣಿನ ನೋಟದ ತಪ್ಪುನಿನ್ನ ಕಥಾಮೃತ ಒಲ್ಲದೆ ಹರಟೆಯಮನ್ನಿಸುವ ಕಿವಿ ತಪ್ಪುಅನ್ನವ ನಿನಗರ್ಪಿಸದಲೆ ಹರುಷದಿಉಣ್ಣುವ ನಾಲಿಗೆ ತಪ್ಪುಚಿನ್ಮಯ ಚರಣಕ್ಕೆರಗದೆಉನ್ಮತ್ತರ ನಮಿಸುವ ತಲೆ ತಪ್ಪು 3ಶ್ರೀ ನಿರ್ಮಾಲ್ಯದ ವಿರಹಿತ ಸುರಭಿಯಘ್ರಾಣಿಪನಾಸಿಕತಪ್ಪುಆನಂದದಿ ಸಂಕೀರ್ತನೆ ಮಾಡದಹೀನವಿವಾದದ ಬಾಯ ತಪ್ಪುಶ್ರೀನಾಥಾರ್ಚನೆ ಇಲ್ಲದೂಳಿಗಮಾಣದಿರುವ ಕೈ ತಪ್ಪುಶ್ರೀನಾರಾಯಣ ವೇಶ್ಮನಿಗೈದದನಾನಾಟನಪಾದತಪ್ಪು4ಯಜ್ಞಾತ್ಮಗೆ ಯಜ್ಞಾರ್ಪಿಸದೆ ಸುಖಮಗ್ನಾದ ಮೇಢ್ರದ ತಪ್ಪುಅಗ್ರದ ಕರ್ಮವ ಶೌಚವ ಜರಿದ ಸಮಗ್ರ ಗುಹ್ಯಕೃತ ತಪ್ಪುಅಜ್ಞಾನ ಜ್ಞಾನದಿ ಕ್ಷಣಲವಶತವೆಗ್ಗಳಘ ಗಳಿಸುವ ತಪ್ಪುಯಜೆÕೀಶ ಪ್ರಸನ್ವೆಂಕಟ ಕೃಷ್ಣ ನಾಮಾಗ್ನಿಗೆ ತೃಣವೀ ತಪ್ಪು 5
--------------
ಪ್ರಸನ್ನವೆಂಕಟದಾಸರು