ಒಟ್ಟು 70 ಕಡೆಗಳಲ್ಲಿ , 16 ದಾಸರು , 67 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾದ ಧ್ರುವ ಸಕಲಾತ್ಮನೆಂದು ಶ್ರುತಿ ಪ್ರಕಟಿಸಿ ಪೇಳುತಿದೆ ವಿಕಟಿತಗೊಂಬುದೇನು ಕಾಕ ಬುದ್ಧಿಂದ 1 ಚೆನ್ನಾಗಿ ಸಾರುತಿದೆ ನಾನ್ಯ:ಪಂಥವೆಂಬ ಮಂತ್ರ ಭಿನ್ನವಿಲ್ಲದೆ ನೋಡು ನಿನ್ನೊಳಗೀಗ 2 ಸರ್ಕನೆ ಮಾಡಿಕೊಂಬುದು ಆರ್ತಿ ಉಳ್ಳವರ ಸಂಗತಿ ಬ್ಯಾಗ ತರ್ಕಿಸಬ್ಯಾಡಿತರ ಕೂಡ ಮರ್ಕಟ ಬುದ್ಧಿಂದ 3 ಇಡಿದು ತುಂಬಿಹ್ಯ ವಸ್ತು ಪಡಕೋ ಗುರುಕೃಪೆಯಿಂದ ಎಡಬಲ ನೋಡದೆ ಈಗ ಕೂಡು ನೀ ಬ್ಯಾಗೆ 4 ಪಾದ ಭೇದಿಸೊ ನೀ ಬ್ರಹ್ಮಬೋಧ ಸಾಧುಸದ್ಗೈಸುವದಾ ಸದ್ವಸ್ತುದ 5 ಎಲ್ಲಾರೊಳಿಹ ನಮ್ಮ ಫುಲ್ಲಲೋಚನ ಶ್ರೀಕೃಷ್ಣ ಸುಲಭವಾಗಿಹ ಬಲ್ಲವರಿಗೆ 6 ಬಾಹ್ಯಾಂತ್ರ ಪರಿಪೂರ್ಣ ಮಹಿಪತಿ ಗುರುನಿಧಾನ ಇಹಪರಾನಂದ ಘನ ಸಾಯೋಜ್ಯ ಘನ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪಾದುಕೆಗಳ ಭಾಗ್ಯಶ್ರೀಗುರುವು ಶ್ರೀರಂಗಪಟ್ಟಣಕಾಗಿ ಬಿಜಯಂಗೈದು ಮಠದಲಿಯೋಗಪೀಠದಲಿರ್ದ ಸಮಯದಿ 'ಪ್ರಕುಲ ಬಂದುಆಗ ಚಾತುರ್ಮಾಸ್ಯ ಒದಗಿರಲಾಗಿ ಪ್ರಾರ್ಥನೆಗೈದ ಕಾರಣರಾಗರ'ತನು ವಾಸುದೇವನು ನೆಲಸಿದನು ದಯದಿ 1ತೀರಿ ವ್ರತವನು 'ಶ್ವರೂಪದ ದಾರಿಯಲಿ ಸಂಚರಿಸಿ ಪುನರಪಿಮಾರಹರನಾಲಯದ ಮುಂದಣ ಮಠಕೆ ಬಂದಿರುತಾಸಾರಿ ಸಾಯಂಕಾಲದಲಿ ಕಾವೇರಿಯಲಿ ಸ್ನಾನವನು ಮಾಡಿಯೆನಾರೆಯಣನಾಮವನು ಸ್ಮರಿಸುತ ಬಹುದ ನಾಂ ಕಂಡೆಂ 2ಕಂಡ ಬಳಿಯಲೆ ಭಕ್ತಿಭಾವದಿ ದಂಡದಂತಾನೆರಗೆ ಕೃಪೆುಂಮಂಡೆಯೆತ್ತೇಳಾರು ನೀನೆಂದಾಗ ಮಂದಲಿಸಿಪುಂಡಾರೀಕಾಂಬಕನ ದಾಸನೆ ಗಂಡುಗಲಿಯಾಗಿಹೆಯ ಕ್ಷೇಮವೆಕಂಡೆ'ಂದಿಗೆ ಬಹುದಿವಸಕೆಂದಾಗ ನುಡಿಯುತಿರೆ 3ಆ ಬಳಿಯ ಮನೆುರಲು ಮಾಳಿಗೆ ಶೋಭಿಸುತ ಬೆಳುದಿಂಗಳಿಗೆ ಬಲುಗಾಬರಿಯ ಸಂದಣಿ ಮಹಾನವ'ುಯ ಮಹೋತ್ಸವದಾಕಾಬರಿದ ಮೇಲಿದ್ದ 'ಪ್ರನು ತಾ ಭುಜಿಸಿ ತಾಂಬೂಲಶೇಷವತೂಬಿರಿಯೆ ಮುಕ್ಕುಳಿಸಿ ಗುರುಶಿರದೊಳಗೆ ಬಿದ್ದುದದು4ಹರಹರಾಗುರುಕೃಪೆಯೆಕೋಪವುಬರಬಹುದುನಿನಗೆನುತನುಡಿಯಲು ಗುರುವು ಕಂಡಾ ಬಳಿಯ ಕೇಶವಮೂರ್ತಿಯೆಂಬವನುಅರಿಯದಾದೈ ಮೇಲೆ ಕುಳಿತೀ ಬರುವ ಯತಿಗಳ ನ್ಯಾಯವೇಯೆಂದರುಹಲಾ ದ್ವಿಜಬೆದರಿ ಧುಂ'ುಕ್ಕಿದನು ಭೂತಳಕೆ 5ತಪ್ಪಿದೆನು ದಮ್ಮೈಯ ಗರ್ವವನೊಪ್ಪಿಕೊಳಬೇಕೆನಗೆ ಗತಿಯೇನಪ್ಪುದೋ ಕಂಗಾಣದಾದೆನು ವಾಸುದೇವಾರ್ಯಾತಪ್ಪಿದೆನು ತಪ್ಪಿದೆನು ತಪ್ಪಿದೆ ತಪ್ಪಿದೆನು ತಪ್ಪಿದೆನೆನುತ್ತಲಿಧೊಪ್ಪನಡಗೆಡ'ದರ ತನುವನು ನೋಡ್ದ ಗುರುವರನು 6ತಂದೆ ಬಾ ಯನ್ನಯ್ಯ ಬೆದರದಿರೆಂದಭಯವನು ಕೊಡುತ ಕರುಣಾಸಿಂಧು ವಾಗಮೃತದಲಿ ನೆನಸಿದ ಪರಿಯನೇನೆಂಬೆಕಂದನಪ್ಪನು ಸುಗುಣವಂತನು ಮುಂದಣೀ ದಿವಸಕ್ಕೆ ನಿನಗೆನುತೆಂದು ಮತ್ತವರಾಡಿದುಕ್ತಿಯನೆಂತು ಬಣ್ಣಿಪೆನು 7ಸಹಜ ತಂಬುಲ ಶಿರದ ಮೇಲಕೆ ಬಹುದು ಗುರುಕೃಪೆ ರೂಪವೆತ್ತೀ''ತ ಪ್ರಾಯಶ್ಚಿತ್ತಗೈದುರು 'ರತಿಯನು ಕಲಿಸಿಸಹಜ ಸುಖಸಂ'ತ್ಪದ' ತಾ ಬಹುದುನೊದಗಿಸಿತಾಗಿ ಮುಂದೀಬಹು ಜನರ ಗ್ಠೋಯನು ಬಿಡಿಸಿದುದೆಂದರುತ್ತರವಾ 8ಇರುವುದನುಚಿತ ಜನಸಮೂಹದಿ ಬರುವುದನುಚಿತ ಬರದ ಮಾರ್ಗದಿಕರದು ಮನ್ನಿಸಿ ಜನರ ಕ್ಷೇಮವ ಕೇಳ್ವುದನುಚಿತವುಅರಿಕೆದಟ್ಟಿತು ಮನಕೆ ಗುರು ತಾನುರುಹು ಸಂನ್ಯಾಸವನು ಥೂಯೆಂದಿರದೆ ಮೋರೆಯ ಮೇಲೆ ತಾನುಗುಳಿದನು ಸಿದ್ಧ'ದೂ 9ಪ್ರೇಷೆ ತಾ ಜ್ಞಾನಕ್ಕೆ ಮಾತೃವು ಪ್ರೇಷೆಯೇ ಜ್ಞಾನಕ್ಕೆ ತಂದೆಯುಪ್ರೇಷೆ ಭವಸಾಗರವ ದಾಂಟಿಪ ನಾವೆ ಸುಖಕರವೂಪ್ರೇಷೆ ಸರ್ವೋತ್ಕರುಷವಪ್ಪುದು ಪ್ರೇಷೆಯನ್ನುಚ್ಚರಿಸಿ ಮತ್ತಭಿಲಾಷೆುಂ ಜನಸಂಗಗೈಯ್ಯಲ್ಕಾಯ್ತೆ ನಿಗ್ರಹವೂ 10ಭಲರೆ ಗುರುವರ ಧನ್ಯನಾದೆನು ಮರೆತೆ ತಪ್ಪಿದೆ ಮುಂದೆ ಜನರೊಳಗಿರೆನು ಗುಹೆಯನು ಪೊಕ್ಕು ಮೌನವ್ರತ ಸಮಾಧಿಯಲಿುರುವವೋಲ್ ವೈರಾಗ್ಯವನು ನೀ ಕುರುಣಿಸಿದೆಯೆಂದೆನುತ ನಗುತಲಿಹರುಷದಿಂ ಕಾವೇರಿಗೈತಂದನು ಗುರೂತ್ತಮನು11ಸಾ'ರದ ಸಂಖ್ಯೆಯಲಿ ಮೃತ್ತಿಕೆ ುೀವುದಕ್ಕೆನ್ನುವನು ನೇ'ುಸಿಭಾ'ಸುತ ಪ್ರಣವವನು ಸ್ನಾನವ ಮಾಡಿ ನಿಯಮದಲಿಭಾವವಳಿಸಿ ಕಮಂಡಲವ ಜಲಕೀವ ಸಮಯದಲುಗುಳ್ದ 'ಪ್ರನಭಾವದಲಿ ನಡುಗದಿರು ಸುತನಹನೆಂದ ಗುರುವರನು 12ಏನನೆನ್ನುವೆನಾ ದ್ವಿಜನು ಸುತ 'ೀನನತಿ ಯತ್ನಗಳ ಮಾಡುತಭಾನು'ಂಗೆರಗುತ್ತಲಿದ್ದನು ಪುತ್ರಕಾಮುಕನುಏನು ಕೃಪೆಯೋ ತಿಂಗಳೆರಡಕೆ ಮಾನಿನಿಯು ತಾ ಗರ್ಭದಾಳಿಯೆಸೂನುವನು ತಾ ಪಡೆದಳೀ ಗುರು ಪೇಳ್ದ ದಿವಸದಲಿ 13'ುಂದು ಕಾವೇರಿಯಲಿ ಗುರುವರ ಬಂದು ಮಠಕಾಕ್ಷಣವೆ 'ಪ್ರರಸಂದಣಿಯ ನೆರೆ ಕಳು'ಯೆನಗಪ್ಪಣೆಯ ಕೊಡಲಾಗಿಬಂದು ಮನೆಯೊಳಗಿದ್ದು ರಾತ್ರಿಯು ಸಂದ ಬಳಿಕಾನೈದಿ ನದಿಯೊಳು'ುಂದು ಗುರವರಗೆರಗಲೈದಿಯೆ ಕಾಣೆ ನಾನಲ್ಲಿ 14ಸ್ನಾನಕೈದಿದರೇನೊ ಬಂದರೆ ಕಾಣುವೆನು ನ'ುಸುವೆನುಯೆಂದೇನಾನು ನೋಡಿದೆ ಬಾರದಿರೆ ಮಧ್ಯಾಹ್ನ ಪರಿಯಂತಭಾನು'ಂಗಘ್ರ್ಯವನು ಕೊಟ್ಟು ಮಹಾನುಭಾವರ ನೆನನೆನದು ದುಂಮಾನದಿಂದಿರುತಿದ್ದೆ ಸಾಯಂಕಾಲ ಪರಿಯಂತ 15ಇರುಳಿಗೂ ಬರದಿರಲು ಪಾದುಕೆುರಲು ಪೂಜಿಸಿ ನ'ುಸಿಯಗಲಿದಪರಮ ತಾಪದಿ ಕುದಿದು ರೋದನಗೈದೆ ಪಂಬಲಿಸಿಗುರುವರನೆ ನಿನ್ನಂಘ್ರಿಕಮಲದ ದರುಶನವು ಮರೆಯಾಯ್ತೆ ದೀನನಕರೆದು ಮನ್ನಿಸಿ ಕಾಯ್ದೆಯಲ್ಲೈ ವಾಸುದೇವಾರ್ಯಾ 16ಏನು ಗತಿ ಮುಂದೆನಗೆ ಮಾರ್ಗವದೇನನುಗ್ರ'ಸಿಪ್ಪ ಮಂತ್ರ 'ದೇನು ಜಪಿಸುವ ಮಾನವೆಂತಿದರರ್ಥವೇನಹುದುನಾನರಿಯದವನೆಂಬುದನು ನೀ ಜ್ಞಾನದ್ಟೃಯೊಳರಿದು ರಕ್ಷಿಸುದೀನನನು ಕೈ'ಡಿದು ಬಿಡುವರೆ ವಾಸುದೇವಾರ್ಯಾ 17ಭವಸಮುದ್ರದಿ ಮುಳುಗುತೇಳುತ ಲವಚಿ ತೆಗೆವರ ಕಾಣದಳಲುತಕ'ದು ತಮ ಕಂಗಾಣದಿರೆ ನೀನಾಗಿ ದಯತೋರಿಭವಭವಾಂತರದುರಿತಗಳ ಪರಿಭ'ಸಿಯಭಯವನಿತ್ತು ಸಲ'ದದಿ'ಜವಂದ್ಯನೆಯಗಲಿದೈ ಶ್ರೀ ವಾಸುದೇವಾರ್ಯಾ 18ಅರಿಯೆ ಹೃತ್ಕಮಲದಲಿ ಭಾ'ಪ ಪರಿಯನಿದಿರಿಟ್ಟಿರಲು ನೀ ಶುಭಕರದ ಮೂರುತಿಯಾಗಿ ಗ್ರಂಥಾರ್ಥಗಳ ಶೋಧಿಸಿಯೆಅರಿಯಬೇಕೆಂಬಿಚ್ಛೆ ಬರಲಿಲ್ಲುರುವ ನಿನ್ನಯ ವಾಗಮೃತ ರಸಸುರಿಯೆ ತಾನೇ ಪಾನಗೈಯುತ ಮತ್ತನಾಗಿದ್ದೆ 19ಜೀ'ಸುವೆ ನಾನೆಂತು ಧರೆಯೊಳು ಪಾವನದ ಮೂರುತಿಯ ಕಾಣದೆಭಾವದಲಿ ಸುಖಗೊಳಿಪ ವಾಕ್ಸುಧೆಯರತ ಕಾರಣದಿಂದೇವ ಮರೆಯಪರಾಧ'ದ್ದರು ಕಾವ ಕರುಣೆಗೆ ಕೋಪವೇ ಸಂಜೀವ ನೀ ಭುವನಕ್ಕೆ ತೋರೈ ವಾಸುದೇವಾರ್ಯಾ 20ಮೊರೆುಡುತಲೀ ರೀತಿುಂದಿರುತಿರಲು ಪಾದುಕೆಗಳಿಗೆ ನ'ುಸುತಬರಲು ಪಲ್ಲವ ಬಾಯ್ಗೆ ಗುರುಕೃಪೆುಂದ ತಾನಾಗಿತಿರುಪತಿಯ ವೆಂಕಟನೆ ಮೂರ್ತಿಯ ಧರಿಸಿ ಯತಿವರನೆನಿಸಿದುದನಾಹರುಷದಿಂ ಪಾಡಿದೆನು ಕೀರ್ತನ ನೆವದಿ ಮೈಮರೆದೂ 21
--------------
ತಿಮ್ಮಪ್ಪದಾಸರು
ಬಾಟ ಪಕಡೊ ಸೀದಾ | ನ ಘಡೆ ತೇಥೆ ಬಾಧಾ ಇದುವೆ ಗುರು ನಿಜಬೋಧ | ಸ್ವಸುಖ ಸಮ್ಮತವಾದಾ ಧ್ರುವ ಬಂದಗೀ ಕರ್ತಾ ಕರಕೇ ಝೂಟಾ | ತಿಳಿಯದು ನಿಜ ಘನದಾಟಾ ಮರ್ಮನ ಕಳತಾ ಕರಣೀ ಖೋಟಾ ಕೇಳಿ ಶ್ರೀ ಗುರುವಿಗೆ ನೀಟಾ 1 ಜಾನಭೂಜಕರ ಚಲನಾ ಭಾಯಿ ಲಕ್ಷ ಲಾವುನೀ ಗುರುಪಾಯೀ ಇದು ಎಲ್ಲರಿಗೆ ದೋರುದೇನಯ್ಯ ಹೇ ಸಮಝೆ ವಿರಲಾ ಕೋಯೀ2 ತಿಳಿದು ನೋಡಿ ಶ್ರೀ ಗುರುಕೃಪೆಯಿಂದಾ ಹುವಾ ಖುದಾಕಾ ಬಂದಾ ಮಹಿಪತಿಗಾಯಿತು ಬಲು ಆನಂದಾ ಹರೀ ಮ್ಹಣಾ ಗೋವಿಂದಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭೂತರಾಜರ ಸ್ತೋತ್ರ ಭೂತರಾಜರ ಸ್ತುತಿಸಿ ಖ್ಯಾತಿಗೊಳ್ಳೊ ಪ ಪ್ರೀತಿ ಇವರಲಿ ಅಧಿಕ ವಾದಿರಾಜರಿಗೆ ಅ.ಪ. ಆತನಾಜ್ಞೆಯಿಂದ ಧರಿಸಲುಕೋತಿಯಂತೆ ಹುಬ್ಬು ಏಕೆ ಹಾರಿಸುವೆಜ್ಯೋತಿ ಸ್ವರೂಪಕ್ಕೆ ಬೂದಿಯು ಮುಸುಕಲುಪಾತಕಿಯು ತಾ ಮುಟ್ಟಿ ಬೊಚ್ಬಿ ಬಾರಿಸನೆ 1 ಗುರುಸೇವೆ ಇವರಂತೆ ಮಾಡ್ದವರು ಯಾರುಂಟುಗುರುಕೃಪಾ ಇವರಂತೆ ಪಡೆದವರು ಯಾರೊಅರಿತು ನೋಡಲು ನಿರುತ ರತಿಗೆ ಕಾರಣವುಂಟುನರಕುರಿ ಇದರ ಮರ್ಮವ ತಿಳಿವದುಂಟೆ 2 ಇಂದಿಗೂ ಸೋದೇಲಿ ಇವರದೇ ಗುರುಪೂಜೆಸುದ್ದಿ ಸುಳ್ಳೆಂದವಗೆ ದೆಬ್ಬೆ ಪೂಜಾಸದ್ದಿಲ್ಲದಿವರಡಿ ಸ್ಮರಿಸುವುದೇ ಗುರುಪೂಜಾತಂದೆ ಶ್ರೀ ನರಹರಿ ಒಪ್ಪುವಾ ಪೂಜಾ 3
--------------
ತಂದೆ ಶ್ರೀನರಹರಿ
ಮಗುಟ ವಿಶ್ವದೊಳೊಬ್ಬನೆ ಪ್ರಗಟ ಭಾಸ್ಕರ ಗುರು ದಯನೋಟ ರಸಕಾಯ ಸವಿದುಂಬೂಟ ಧ್ರುವ ಭಾಸ್ಕರ ಗುರು ನಿಜದಯ ಲೇಸುದೋರುವ ವಿಜಯ ಭಾಸ್ಕರ ಗುರು ಅಭಯ ಹಸನಾದ ಪುಣ್ಯೋದಯ 1 ಭಾಸ್ಕರ ಕರುಣಾಕಟಾಕ್ಷ ಭಾಸುದು ಘನಪ್ರತ್ಯಕ್ಷ ಭಾಸ್ಕರ ಗುರು ನಿಜ ಭಿಕ್ಷ ಹಸನಾಗಿ ಮಾಡುವಾ ಸಂರಕ್ಷ 2 ಭಾಸ್ಕರ ಗುರು ನಿಜಬೋಧ ಭಾಸುವ ಘನಸರ್ವದಾ ಭಾಸ್ಕರ ಗುರು ಪ್ರಸಾದ ಸ್ವಸುಖದೋರುವ ಸಂವಿಸ್ವಾದ(?) 3 ಭಾಸ್ಕರ ಗುರು ಉಪದೇಶ ಭಾಸಲು ಬಲು ಸಂತೋಷ ಭಾಸ್ಕರ ಗುರುವರೇಶ ಈಶನಹುದೊ ಸರ್ವೇಶ 4 ಭಾಸ್ಕರ ಗುರುಕೃಪೆ ಙÁ್ಞನ ಲೇಸಾಗಿ ತೋರುವದುನ್ಮನ ಭಾಸ್ಕರ ಗುರುದಯ ಕರುಣ ದಾಸ ಮಹಿಪತಿಗಾಭರಣ5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾತೆಂದೆನಬ್ಯಾಡಿ ಧ್ರುವ ಎಲ್ಲಿ ನೋಡಿದರೆ ತಾ ಅಲ್ಲಿಗಲ್ಲಿಗಿಹ್ಯ ಎಲ್ಲ ಕಡೆಯಲ್ಲೇಕೋಮಯವೊ ಸುಲ್ಲಭವಾಗಿಹ್ಯಬಲ್ಲ ಜ್ಞಾನಿಗೆ ಭಾಸುತಿಹ್ಯ ಫುಲ್ಲಲೋಚನ ಪ್ರಾಣದೊಲ್ಲಭನು 1 ಎತ್ತ ನೋಡಿದರತ್ತ ಸುತ್ತಸುತ್ತಲಿಹ್ಯ ನಿತ್ಯವಾಗಿಹ್ಯ ಹೃತ್ಕಮಲದಲಿ ತುತ್ತಾಯಿತ ತಾ ಮಾಡಿ ನಿತ್ಯಸಲಹುವ ಹತ್ತಿಲೆ ಹೊಳೆಯುತ ಚಿತ್ತದಲಿ 2 ಹಿಂದೆನೋಡಿದಿರಿಹ ಮುಂದೇನೋಡಿದಿರಿಹ್ಯ ಸಂಧಿಸಿಹನು ಅಂತರಾತ್ಮದಲಿ ತಂದೆ ತಾಯಿಯು ಬಳಗಾಗಿಹ್ಯ ತಾನೆ ಎಂದಿಗೆ ಅಗಲದೆ ಅನುದಿನದಲಿ 3 ಜನವನದೊಳಗಿಹ್ಯ ಜನಾರ್ಧನ ತಾನು ತನುಮನದೊಳು ಥಳಥಳಸುತಲಿ ಅನುಮಾನವಿಲ್ಲದೆ ಅನಿಮಿಷದಲಿ ನೋಡಿ ಆಣುರೇಣುದಲಿ ಪರಿಪೂರ್ಣನು 4 ಸಾರಿಚಲ್ಲೆದ ಪರಬ್ರಹ್ಮಸ್ವರೂಪವಿದು ಸೂರ್ಯಾಡಬಹುದು ಸುಜ್ಞಾನಿಗಳು ತೋರದು ಎಂದಿಗೆ ಗುರುಕೃಪೆಯಿಲ್ಲದೆ ತರಳಮಹಿಪತಿ ವಸ್ತುಮಯವಿದು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮುಕ್ತಿ ದೊರಕಿತು ಗುರುಕೃಪೆಯಿಂದಲಿ ಪ ಒಮ್ಮನದಿಂದಲಿ ವಿವರಿಸಿ ನೋಡಲುಕರ್ಮ ಬ್ರಹ್ಮಾಗಿ ತೋರಿತಕ್ಕ |ಅಮ್ಮಾ ಅಮ್ಮಾ ಈ ಮಾತು ಏನಂತ ಹೇಳಲಿನಿರ್ಮಳ ನಿಜ ವಸ್ತು ಕಾಣ ಬಂತಕ್ಕ 1 ಮಾತು ಮಾತಿನಲಿ ಸಪ್ತಧಾತುವಿನಲಿಮತ್ತೊಂದು ತೋರಿದ ಭುವನದಲಿ |ಎತ್ತ ನೋಡಿದರತ್ತ ವಸ್ತುವೇ ಪರಿಪೂರ್ಣವಿಚಾರದಿಂದಲಿ ಅನುಭವದಿಂದಲಿ2 ಇಂದು ಜ್ಞಾನಬೋಧಗೆ ಆನಂದವಾಯಿತುಸಂದೇಹ ಹೋಯಿತು ಮನಸಿನಲಿ |ಎಂದಿಗೂ ಅಳಿಯದ ಸೌಭಾಗ್ಯ ದೊರಕಿತುತಂದೆ ಗೋವಿಂದನ ವಾಕ್ಯದಲಿ 3
--------------
ಜ್ಞಾನಬೋದಕರು
ಲೋಕನೀತಿಯ ಪದಗಳು ಕೇಶವನ ದಾಸರಿಗೆ ಘಾಸಿಯುಂಟೆ ವಾಸವನ ವಜ್ರಕೆ ಗಿರಿನಿಕರದಂಜಿPಯೆ ಪ ಇದ್ದಲಿಯನು ಗೊರಲಿ ಮೆದ್ದು ಜೀವಿಪದುಂಟೆ ಮದ್ದಾನೆಗಳಿ ಗಲ್ಪ ನರಿಯ ಭಯವೇ ಅಬ್ದಗಳು ಮರುತನೊಳು ಯುದ್ಧ ಬಯಸುವದುಂಟೆ ಸಿದ್ಧರಿಗೆ ಭವಪಾಶ ಪದ್ಧತಿಯು ಉಂಟೆ 1 ಗುರುಕೃಪೆಯ ಪಡೆದವಗೆ ಪರಸೌಖ್ಯ ತಪ್ಪದೇ ಹರಿಯ ಸ್ಮರಿಸುವ ನರಗೆ ನರಕ ಭಯವೇ ಉರಗ ನಭಚರನೆದುರಲ್ಲಿಪ್ಪದೆ ನರಚಂಡಕರಕರ ಕಂಡು ಅರುಳುವುದೆ ಕುರುಕುಮುದಾ 2 ಮೇರುವಿಗೆ ಛಳಿ ಭಯವೇ ವಾರಿಧಿಗೆ ಮಳಿ ಭಯವೇ ಮಾರನ್ನ ಗೆದ್ದವಗೆ ನಾರಿ ಭಯವೇ ತಾರಕಾ ಪ್ರೀಯ ಶಿರಿಗೋವಿಂದವಿಠಲಗೆ ಸೇರಿರುವ ಶೂರರಿಗೆ ಆವ ಭಯವೈಯ್ಯಾ 3
--------------
ಅಸ್ಕಿಹಾಳ ಗೋವಿಂದ
ವೈಷ್ಣವನಾರೆಂದು ದೃಷ್ಟಿಸಿ ಸೃಷ್ಟಿಯೊಳು ವಿಷ್ಣುನರಿತವನೆ ವೈಷ್ಣವನು| 1 ಭಕ್ತಿರಸದೊಳು ಮುಣುಗಿ ಭಕ್ತಿಗೈದುವ ಗತಿಯ ಯುಕ್ತಿ ತಿಳಿದವನೆ ವೈಷ್ಣವನು 2 ಹರಿ ಪರಂದೈವೆಂದು ಹರಿಯ ಕೊಂಡಾಡುತಲಿ ಹರಿಯ ನೆನೆಯುವನೆ ವೈಷ್ಣವನು 3 ಹರಿ:ಓಂ ತತ್ಸದಿತಿಯೆಂಬ ಹರಿವಾಕ್ಯವನು ಅರಿತವನೆ ಪರಮ ವೈಷ್ಣವನು 4 ಹರಿಧ್ಯಾನ ನೆಲೆಗೊಂಡು ಹರಿನಾಮ ಬಲಗೊಂಡು ಹರಿಯ ಸ್ಮರಿಸುವವನೆ ವೈಷ್ಣವನು 5 ಪರದೆ ಇಲ್ಲದೆ ಪಾರ ಬ್ರಹ್ಮಸ್ವರೂಪನು ಗುರುತ ಕಂಡವನೇ ಪರಮ ವೈಷ್ಣವನು6 ಗುರುಕೃಪೆಯಿಂದ ಪರಗತಿ ಸಾಧನವು ಮುಟ್ಟಿ ಅರಿತು ಬೆರೆದನೆ ಪರಮ ವೈಷ್ಣವನು 7 ಮೂಲ ಮೂರುತಿಗ್ಯಾಗಿ ಮೇಲಗಿರಿಯನೇರುವ ಕೀಲ ತಿಳಿದವನೆ ವೈಷ್ಣವನು 8 ಉಂಟಾಗಿ ಇರುಳ್ಹಗಲಿ ಗಂಟ್ಹಾಕಿ ಹರಿಪಾದ ಬಂಟನಾದವನೆ ವೈಷ್ಣವನು 9 ಕಂಟಕ ನೀಗಿ ಮೂರು ಬಲೆಯನು ದಾಟಿ ಮೀರಿ ನಿಂದವನೇ ವೈಷ್ಣವನು 10 ಆಶಿಯನೆ ಜರಿದು ನಿರಾಶೆಯನು ಬಲಿದು ಹರಿದಾಸನಾದವನೆ ವೈಷ್ಣವನು 11 ದ್ವಾದಶನಾದವನು ಸಾಧಿಸಿ ಕೇಳುತಲಿ ಭೇದಿಸಿದವನೆ ವೈಷ್ಣವನು 11 ಅನುದಿನ ಘನಸುಖವು ಅನುಭವಿಸುವನೆ ವೈಷ್ಣವನು 12 ವಿಷ್ಣುಭಕ್ತಿಯ ಸುಖವು ಮುಟ್ಟಿ ಮುದ್ರಿಸಿ ಪುಷ್ಟವಾಗಿದೋರುವನೆ ವೈಷ್ಣವನು 13 ವಿಷ್ಣುಮೂರ್ತಿಯ ಧ್ಯಾನ ದೃಷ್ಟಾಂತ ಮಹಿಪತಿಗೆ ಕೊಟ್ಟಾ ಗುರು ಪರಮ ವೈಷ್ಣವನು 14
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶ್ರೀ ಗುರುಕರುಣವು ಸೋಜಿಗವು ಕೌತುಕವು ಧ್ರುವ ಗುರುಹಸ್ತ ಪರುಷಸದೃಶ ನಿದರುಶÀದೋರುತಿಹ್ಯ ಅಗಣಿತ ತೇಜೋಮಯ ಪ್ರಕಾಶ ಇದು ಅನಿಮಿಷ ನೇತ್ರಲಿ ನೋಡುವದು ನೋಡುವದು ಘನ ಮಹಿಮೆಯೊಳು ಬೆರದಾಡುವದು ಬೆರದಾಡುವದು ತನ್ನೊಳು ತಾ ನಲಿದಾಡುವದು ನಲಿದಾಡುವದು ಅನುಭವ ಸುಖ ಸೂರ್ಯಾಡಿ ಸದ್ಗತಿ ಮುಕ್ತಿಯನೆ ಪಡೆವದು ಶ್ರೀಗುರುದಾಸರು 1 ಗುರುವುಪದೇಶ ಜ್ಞಾನಪ್ರಕಾಶ ಅತಿಸಂತೋಷ ಛೇದಿಸುವುದು ಭವಪಾಶ ಇದು ನಿದ್ರಸ್ಯ ಕರ್ನಲಿ ಕೇಳ್ವದು ನಿದ್ರಸ್ಯ ಕರ್ನಲಿ ಕೇಳ್ವದು ಲಯ ಲೀಲೆಯೊಳು ಆಲಿಸುವದು ಆಲಿಸುವದು ಪರಿಪರಿ ಶ್ರುತಿಗ್ಹೇಳೆನಿಸುವದು ಹೇಳೆನಿಸುವದು ಪತಿತಜೀವನ ಪಾವನಗೈಸುವದು ಸದ್ಗುರು ಮಹಿಮೆಯ ತಿಳಿಯದು ತಿಳಿಯದೀ ಶ್ರೀಗುರು ದಾಸರು 2 ಗುರು ನಿಜಬೋಧ ಬಲು ಅಗಾಧ ಪರಮ ಆಹ್ಲಾದ ತಿಳಿದವ ಜನ್ಮಕ ವಿರಹಿತವಾದ ಇದು ಅತಿಸೂಕ್ಷ್ಮಗತಿ ಭೇದಿಸುವದು ಭೇದಿಸುವದು ಗುರುಪಾದವೆಗತಿ ನಿಶ್ಚೈಸುವದು ನಿಶ್ಚೈಸುವದು ಸಮ್ಯಕಙÁ್ಞನವು ಸಾಧಿಸಿ ಆತ್ಮದಿ ಜೀವನ್ಮುಕ್ತನಾಗುವದು ಸದ್ಗುರು ಪಾದವು ಸಾಧಿಸಿ ಸಾಧಿಸಿ ಶ್ರೀಗುರುದಾಸರು 3 ಗುರುಕೃಪೆಜ್ಞಾನನ ಅಳಿವುದಙÁ್ಞನ ತಿಳಿವದು ಯಾತನ ಕಳೆವದು ಜನ್ಮ ಜರಾಮರಣ ಇದು ಪೂರ್ವ ಕಲ್ಪನೆಯು ಕಲ್ಪನೆಯು ಆತ್ಮಙÁ್ಞನದ ವರ್ತನೆಯು ವರ್ತನೆಯು ಸಾಯಸವಳಿದು ಯತ್ನವು ಪ್ರಯತ್ನವು ಶ್ರೀಗುರು ಭಕ್ತಿಯು ಮಾಡಿರಯ್ಯ ಮಾಡಿರಯ್ಯ ಸದ್ಗುರುದಾಸರು4 ಗುರುಙÁ್ಞನ ದೀಕ್ಷಾ ಕರುಣಾ ಕಟಾಕ್ಷ ಸದ್ಗತಿಮೋಕ್ಷ ತೋರುತಿಹ್ಯ ಗುರುತಾನೆ ಪ್ರತ್ಯಕ್ಷ ಇದು ಭಾಸ್ಕರ ಗುರು ಕೃಪಾದೃಷ್ಟಿಯು ಅಮೃತದ ದೃಷ್ಟಿಯು ಜೀವನ ಸಂತುಷ್ಟಿಯು ಮುರಿಯಿತು ಮಹಿಪತಿ ಹುಟ್ಟುವ ಹೊಂದುವ ಬಟ್ಟೆಯು ತ್ರಾಹಿ ತ್ರಾಹಿ ಗುರುನಾಥ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶ್ರೀ ವೆಂಕಟೇಶ ಸ್ತೋತ್ರ(2) ವೈಕುಂಠವಾಸ ಹರಿ ಶ್ರೀ ಕಂಠನುತ ನಿನ್ನ ಸಾಕಾರರೂಪ ತೋರೋ ಯಾಕಿಂತು ನಿರ್ದಯವು ಈ ಕುಮತಿ ಮೇಲಿನ್ನು ನೀ ಕರುಣಿಸೀಗ ಕಾಯೊ 1 ವಾಕು ಲಾಲಿಸುತ ನೀ ಬೇಕೆಂದು ಬೆಟ್ಟದಲ್ಲಿ ಲೋಕದ ಜನರನ್ನು ಸಾಕುತ್ತ ನಿಂತಿರುವ ಆಕಳ ಕಾಯ್ದ ದೇವಾ 2 ಕನಸು ಮನಸೀನಲ್ಲಿ ವನಜಾಕ್ಷ ನಿನ ದಿವ್ಯ ಘನರೂಪವನ್ನೆ ತೋರೊ ಅನುರಾಗದಿಂದ ಸಲಹೋ 3 ವೆಂಕಟಗಿರಿನಿಲಯ ಮಂಕುಮತಿಯ ಬಿಡಿಸಿ ಸಂಕಟಗಳನೆ ಹರಿಸೊ ಶಂಖಚಕ್ರಾಂಕಿತನೆ ಪಂಕಜಪಾದ ಮನ ಪಂಕಜದೊಳಗೆ ತೋರೊ 4 ಪದ್ಮಾಕ್ಷ ಪದ್ಮಮುಖ ಪದ್ಮಾನಾಭನೆ ನಿನ್ನ ಪದ್ಮ ಪಾದವೆ ಗತಿಯೊ ಪದ್ಮಾವತಿಪ್ರಿಯ ಪದ್ಮಹಸ್ತಾನೆ ನಿನ್ನ ಪದ್ಮಾದಿ ನಿನ್ನ ತೋರೊ 5 ಸೃಷ್ಟಿ ಸ್ಥಿತಿ ಲಯಕೆ ಕರ್ತಾನೆ ಎನ್ನ ಮನ ದಿಷ್ಟಾವ ಸಲಿಸಿ ಕಾಯೋ ಥಟ್ಟಾನೆ ಮನಕೆ ತೋರೊ 6 ತತ್ವಾಧಿಪತಿಗಳೊಳು ವ್ಯಾಪ್ತಾನಾಗಿರುತಿರ್ದು ಕರ್ಮ ಮಾಳ್ಪೆ ಎತ್ತಾ ನೋಡಿದರು ಸುರರರ್ಥಿಯಿಂ ಸ್ತುತಿಸುವರೊ ನಿತ್ಯಾಮೂರುತಿ ನೀ ಎಂದೂ 7 ನಿಗಮಾದಿ ವೇದದಿಂ ಬಗೆಬಾಗೆ ಸ್ತುತಿಸಿ ಕೊಂ ಬಗಣೀತ ಮಹಿಮ ದೇವಾ ಖಗರಾಜ ವಾಹನನೆ ನಗೆಮೊಗದ ಚೆಲುವ ಪ ನ್ನಗಶಾಯಿ ಸಲಹೊ ಎನ್ನ 8 ನಿತ್ಯಾ ತೃಪ್ತಾನೆ ಹರಿ ನಿತ್ಯಾ ಪ್ರಾಪ್ತಾನೆ ಸಿರಿ ನಿತ್ಯಾ ವಿಯೊಗಿ ದೇವಾ ನಿತ್ಯ ನಿರ್ವೀಕಾರ ನಿತ್ಯಾ ಕಲ್ಯಾಣಪೂರ್ಣ 9 ಜೀವಾಂತರಾತ್ಮಕನೆ ಜೀವಾ ನಿಯಾಮಕನೆ ಜೀವಾದಿ ಭಿನ್ನ ದೇವಾ ಜೀವೇಶ ಜೀವರಿಂ ಸೇವ್ಯಾನೆಂದೆನಿಪ್ಪೆ ಜೀವಾರ ಕರ್ಮಕರ್ತ 10 ಸತ್ವಾರಜೋತಮದಿ ನಿತ್ಯಾ ಸೃಷ್ಟೀಸುತಲಿ ವ್ಯಾಪ್ತಾನಾಗಿರುವೆ ಜಗದಿ ಸತ್ಯಾಮೂರುತಿ ಜಗತ್ಕರ್ತಾ ಕಾರಣರೂಪ ಸತ್ಯಾಧಿಪತಿಯ ವಂದ್ಯ 11 ಆದಿಯಲಿ ಅಸುರ ತಾ ವೇದ ಕದ್ದೊಯ್ಯೆ ಛೇದೀಸಿ ತಮನ ಕೊಂದೂ ನಿಗಮ ತಂದಾದರದಿ ಸುತಗಿತ್ತೆ ಶ್ರೀಧರನೆ ಮಚ್ಛರೂಪಿ 12 ಸುರರೆಲ್ಲ ಕಂಗೆಟ್ಟು ಮೊರೆ ಇಡಲು ನಿನ್ನ ಬಲು ಕರುಣೆಯಿಂದಾಲಿ ಬಂದೂ ಗಿರಿ ಎತ್ತಿ ಅಮೃತವ ಸುರರೀಗೆ ತಂದಿತ್ತ ವರ ಕೂರ್ಮರೂಪಿ ಸಲಹೊ 13 ಆದಿಹಿರಣ್ಯಾಕ್ಷ ಮೇದಿನಿಯ ಕದ್ದೊಯ್ಯೆ ಛೇದೀಸಿ ಅವನ ಕಾಯಾ ಆದರಿಸಿ ಧರಣಿಯನು ಆ ದಿವಿಜರಿಗೆ ಇತ್ತೆ ವರಾಹ ಕಾಯೊ 14 ದುಷ್ಟಾದಾನವ ಸುತನು ಅಟ್ಟೂಳಿಪಡಿಸುತಿರೆ ಸೃಷ್ಟೀಶ ಪೊರೆಯೊ ಎನಲು ಪುಟ್ಟಿ ನೀ ಸ್ಥಂಭದಲಿ ಕುಟ್ಟೀ ಅಸುರನನ್ನು ಪುಟ್ಟಾನ ಕಾಯ್ದ ನೃಹರಿ 15 ಇಂದ್ರಾಲೋಕಾವನು ಬಲೀಂದ್ರಾನಾಕ್ರಮಿಸಿರಲು ಪೇಂದ್ರಾ ನೀನಾಗಿ ಬಂದೂ ಇಂದ್ರಾರಿಗೇಸುತಲ ಚಂದಾದಿತ್ತು ನೀ ನಿಂದ್ರಾಗೆ ಸ್ವರ್ಗವಿತ್ತೆ 16 ಪಿತನ ಆಜ್ಞೇಗೆ ಪತಿವ್ರತೆ ಮಾತೆ ಶಿರವಳಿದು ಮತಿವಂತನೆನಿಸಿ ಮೆರೆದೇ ಖತಿಯಿಂದ ಕ್ಷತ್ರಿಕುಲ ಹತಗೈಸಿ ಮೆರೆದ ಅ ಪ್ರತಿ ಭಾರ್ಗವಾನೆ ಕಾಯೋ 17 ಸೇತು ಬಂಧನಗೈದು ಖ್ಯಾತ ರಾವಣನೊರಸಿ ಸೀತೇಯ ತಂದ ರಾಮಾ ಮಾತೆ ವಚನಕಾಯ್ದೆ ವಾತಾತ್ಮಜನ ಪೊರೆದೆ ಪ್ರೀತಿಯಿಂದೆನ್ನ ಕಾಯೊ 18 ವನದಲ್ಲಿ ನಿಂತು ಘನಧ್ವನಿಯಿಂದ ಕೊಳಲೂದಿ ವನಜಾಕ್ಷಿಯರನೆ ಕಾಯ್ದೆ ಮುನಿವಂದ್ಯ ಶ್ರೀ ಕೃಷ್ಣ ಮುನಿನಾರದಗೊಲಿದೆ ಸನಕಾದಿ ವಂದ್ಯ ಸಲಹೋ 19 ತ್ರಿಪುರಾಲಲನೆಯಾರ ವ್ರತಭಂಗವನೆಗೈದು ನಿಪುಣಾನೆಂದೆನಿಸಿ ಮೆರೆದೆ ಬುದ್ಧ ತ್ರಿಪುರಾರಿ ವಂದ್ಯ ಹರಿ ಕೃಪೆಮಾಡಿ ಸಲಹೊ ಎನ್ನ 20 ಕಲಿಬಾಧೆ ವೆಗ್ಗಳಿಸೆ ಛಲದಿಂದ ದುಷ್ಟರನು ತಲೆಯಾ ಚೆಂಡಾಡಿ ಮೆರೆದೆ ಬಲವಂತ ಹಯವೇರಿ ಕಲಿದೈತ್ಯರನು ಕೊಂದೆ ನಳಿನಾಕ್ಷ ಕಲ್ಕಿ ಕಾಯೊ 21 ಭಕ್ತಾವತ್ಸಲನಾಗಿ ಮುಕ್ತಾಜೀವರ ಕಾಯ್ವೆ ಶಕ್ತಾವಂತನೆ ಸ್ವಾಮಿ ಮುಕ್ತೀದಾಯಕ ನೀನೆ ಮುಕ್ತಾಶ್ರಯನು ನೀನೆ ಮುಕ್ತಾರಿಗೊಡೆಯ ನೀನೆ 22 ಬಂದೇಯೊ ಭಕ್ತರನು ಚಂದಾದಿಂದಲಿ ಪೊರೆಯ ಬೇ ಕೆಂದೂ ನೀ ನಾಗಗಿರಿಗೆ ನಂದಾಕಂದಾನೆ ಹರಿ ಇಂದಿರೆಯರಸ ಬಹು ಸುಂದಾರ ಶ್ರೀನಿವಾಸ 23 ಹಿಂದೇ ಮಾಡೀದ ಪುಣ್ಯ ಬಂದೂ ತಾ ಒದಗಿಗೋ ವಿಂದಾನ ಗಿರಿಯ ಯಾತ್ರೇ ಸಂದೀಸೆ ವೇಂಕಟನ ಸಂದಾರುಶನದಿಂದ ದುರಿತ 24 ಜಯ ಗುರುಗಳಂತರ್ಯ ಜಯ ನಾಗಶಯನ ಹರೆ ಜಯ ವೆಂಕಟಾದ್ರಿನಿಲಯ ಜಯ ತಂದೆ ಮುದ್ದುಮೋಹನ ದಾಸವರದ ಜಯ ಪದ್ಮನಾಭ ಜಯ ಭೋ 25 ಸ್ವಾಮೀ ಕಾಸಾರದತಿ ಪ್ರೇಮಾದಿ ನೆಲಸಿ ಸುರ ಕಾಮೀತವೀವ ಪ್ರಭುವೇ ಸ್ವಾಮಿ ಶ್ರೀ ವೇಂಕಟನೆ ನೇಮಾದಿಂದಲಿ ಭಜಿಪೆ ಕಾಮೀತವೀಯೊ ದೇವಾ 26 ಇಷ್ಟೂ ಬಿನ್ನಪವನ್ನು ಕೃಷ್ಣಾಮೂರುತಿ ಕೇಳಿ ಕಷ್ಟಾವ ಬಿಡಿಸಿ ಕಾಯೋ ದಿಟ್ಟಾ ಶ್ರೀ ಗೋಪಾಲಕೃಷ್ಣವಿಠ್ಠಾಲಾನೆ ಶ್ರೇಷ್ಠಾ ಶ್ರೀ ಗುರುವರದನೇ 27 ಸೀತಾಪತಿವಿಠಲ ದಾಸಳ ನಿರ್ಯಾಣ ಪದ 266 ಮಾಧವನಾ ಪುರ ಸೇರಲು ಬೇಗ ಪ. ಪುಟ್ಟಿದಾರಭ್ಯದಿ ನಿಷ್ಟೆನೇಮದೊಳಿದ್ದು ಕಷ್ಟಪರಂಪರೆ ಸಹಿಸುತ ಜಗದಿ ಹರಿಯ ಕರುಣದಿ ಗುರುಕೃಪೆ ಪಡೆದಿ 1 ಹಿರಿಯೂರೆನ್ನುವ ಪುರ ವರ ವೇದಾವತಿ ತೀರ ಪರಮ ಸಾತ್ವಿಕರಲ್ಲಿ ಜನುಮ ತಳೆದಿ ತುಳಸಿಯ ವರದಿ ಮುದ್ದಿನಿಂ ಬೆಳೆದಿ 2 ಶಿಷ್ಟ ಸಂಪ್ರದಾಯ ಕಟ್ಟಿನೊಳಗೆ ನಿನ ಗಷ್ಟಮ ವರುಷದಿ ಮದುವೆಯ ಮಾಡಿ ಹರುಷವಗೂಡಿ ಹರಿಯ ಕೊಂಡಾಡಿ 3 ಸತಿ ರುಕ್ಮಿಣೀಬಾಯಿ ಹೆಸರಿನಿಂ ಬಾಳ್ವೆಯ ಬಹು ಅಲ್ಪಕಾಲ ಕೊಟ್ಟನೆ ಸಿರಿಲೋಲ ಮುಸುಕಿತು ಮಾಯಜಾಲ 4 ಸಂಸಾರ ಕೈಕೊಂಡು ವಂಶಕೊಬ್ಬನ ಪಡೆದು ಕಂಸಾರಿ ಕರುಣದಿ ಇರುತಿರೆ ನೀನು ವಿಧಿ ತಂದೊಡ್ಡಿದನು 5 ಎರಡು ವರ್ಷದ ಮಗುವ ಕರದಲ್ಲಿ ಕೈಕೊಂಡು ಪರಿಪರಿ ಕಷ್ಟದಿ ಶಿಶುವ ಬೆಳೆಸಿದೆ ವಿದ್ಯೆ ಕಲಿಸಿದೆ ಪುತ್ರಗ್ಹರಸಿದೆ 6 ಒಬ್ಬ ಆ ಮಗನರ್ಥಿ ಸಂಸಾರವನೆ ಕಂಡು ಉಬ್ಬಿ ಹರುಷಾದಲ್ಲಿ ಇರುತಿರೆ ನೀನು ಮೊಮ್ಮಕ್ಕಳನು ಪಡೆದೆ ನಾಲ್ವರನು 7 ಘಟಿಸುತ ಸ್ವಪ್ನದಿ ಸೇವೆಗೈಯ್ಯೆಂದು ಅಭಯವನಂದು ಕೊಡಲು ದಯಸಿಂಧು 8 ಮರುದಿನ ಮನೆಯಲ್ಲೆ ಭರದಿ ಸೇವೆಯ ಕೊಂಡು ಹರಿವಾಯುಗಳನಿಟ್ಟು ಸುತ್ತುವರಿಯುತ್ತ ಎಡವಿ ಬೀಳುತ್ತ ಪ್ರದಕ್ಷಿಣೆ ಬರುತಾ 9 ಒಲಿದು ಆ ಭಕ್ತಿಗೆ ವರನೇತ್ರವಿತ್ತನು ನಳಿನನಾಭನ ಭಕ್ತ ಘಟಿಕಾಚಲನಿಲಯ ಭಾರತಿಪ್ರೀಯ ದಿವಿಜರ ಒಡೆಯ 10 ಭಕ್ತಿ ವಿರಕ್ತಿ ಜ್ಞಾನವು ಚಿತ್ತದಿ ಮೂಡಿ ಸೋತ್ತಮರಾದ ಶ್ರೀ ವಿಬುಧರ ದಯದಿ ಮೋಕ್ಷಸಾಧನದಿ ದಿನಗಳ ಕಳೆದಿ 11 ಶ್ರವಣ ಕೀರ್ತನ ಸ್ಮರಣೆ ಮನನಾದಿಗಳನೆಲ್ಲ ತವಕದಿ ಕೈಕೊಂಡು ಮೋದದಿ ಮೆರೆದಿ ಕಷ್ಟವ ಮೆರೆದಿ ಹರಿಗುರು ದಯದಿ 12 ಪ್ರಥಮ ಯಾಮದಲೆದ್ದು ಜಿತಮನದಿಂದ ಶ್ರೀ ಪತಿಯ ಸ್ತೋತ್ರಗಳನ್ನು ವದನದಿ ಸತತ ಪರಿಯಂತ 13 ಉಚ್ಛಸ್ವರದಿ ನೀನು ಪಾಡಿದ್ಹಾಡುಗಳಿಂದು ಅಚ್ಚಳಿಯದೆ ನಮ್ಮ ಸ್ಮರಣೆಯೊಳ್ನಿಂತು ಹರುಷವನಾಂತು ಮರೆಯುವುದೆಂತು 14 ವೃದ್ಧಾಪ್ಯ ತಲೆದೋರೆ ಇದ್ದೊಬ್ಬ ಪುತ್ರನು ಪದ್ಮನಾಭನ ಪುರ ಸೇರಿ ನಿನ್ನಗಲಿ ದುಃಖದಿ ಬಳಲಿ ತೊಳಲಿದೆ ಬಳಲಿ 15 ಪೌತ್ರರಿಬ್ಬರು ನಿನ್ನ ಹೆತ್ತಮ್ಮನಂದದಿ ಚಿತ್ತದಿ ತಿಳಿದಿನ್ನು ಸಲಹುತ್ತಿರಲು ಹರಿದಯ ಬರಲು ದುಃಖ ಮರೆಯಲು 16 ಕಲ್ಯಾಣನಗರದಿ ಕಿರಿಯ ಮೊಮ್ಮಗನಿರೆ ಆಹ್ಲಾದದಿಂದ ನೀನವನಲ್ಲಿ ಇರಲು ಸದ್ಗುರು ಬರಲು ಜ್ಞಾನವೆರೆಯಲು 17 ಹರಿದಾಸಕೂಟದ ವರ ಅಂಕಿತವ ಕೊಂಡು ಗುರುಕರುಣವ ಪೊಂದಿ ನೀ ನಮಗೆಲ್ಲ ಸನ್ಮಾರ್ಗಕ್ಕೆಲ್ಲ ಮೊದಲಾದೆಯಲ್ಲ 18 ಶ್ರೀ ತಂದೆ ಮುದ್ದುಮೋಹನದಾಸರ ದಯದಿ ಸೀತಾಪತಿವಿಠ್ಠಲನ್ನ ಒಲಿಸಿದೆ ಧ್ಯಾನದೋಳ್ತಂದೆ ಆನಂದಪಡೆದೆ 19 ಕಂಚಿ ಕಾಳಹಸ್ತಿ ಶ್ರೀ ರಂಗಯಾತ್ರೆಯ ಸಂಚಿಂತನೇಯಿಂದ ಗೈದೆಯೆ ನೀನು ಗಳಿಸಿದೆ ಇನ್ನು ಭಕುತಿಯ ಪೊನ್ನು 20 ಉಡುಪಿ ಮಂತ್ರಾಲಯ ಸೇತು ರಾಮೇಶ್ವರ ಕಡು ಭಕ್ತಿಯಲಿ ತಿರುಪತಿ ಕ್ಷೇತ್ರ ಚರಿಸಿ ಕಷ್ಟವ ಸಹಿಸಿ ಶ್ರೀ ಹರಿಗೆ ಅರ್ಪಿಸಿ 21 ಕಡುಕೃಪೆಯಿಂದಂದು ಕಣ್ಣನ್ನೆ ಕೊಟ್ಟಂತ ಮೃಡಪಿತ ಘಟಿಕಾಚಲೇಶನ್ನ ಕೂಡಿ ಕಣ್ತುಂಬ ನೋಡಿ ತನುವನೀಡಾಡಿ 22 ಅಂತರಂಗದ ಬಿಂಬ ಸರ್ವಾಂತರ್ಯಾಮಿ ಎಂ ತೆಂಬಂಥ ಚಿಂತನೆ ಸಂತತಗೈದೆ ಅಭಿಮಾನ ತೊರೆದೆ ದ್ವಂದ್ವ ಸಹಿಸಿದೆ 23 ವ್ರತನೇಮ ಜಪತಪ ಸತತದಿಗೈಯ್ಯುತ್ತ ಕ್ಷಿತಿವಾರ್ತೆಗೆಳಸಾದೆ ಮನವನ್ನೆ ಸೆಳೆದು ಹರಿಪಾದಕ್ಕೆರದು ಹಿತವನ್ನೆ ಮರೆದು 24 ಭಾಗವತಾದಿ ಸಚ್ಛಾಶ್ತ್ರ ಶ್ರವಣಗೈದು ಜಾಗ್ರತಳಾದಿ ಭೂಸುರರ ಸೇವೆಯಲಿ ಸೂಕ್ಷ್ಮಧರ್ಮದಲಿ ಪುಣ್ಯಗಳಿಸುತಲಿ 25 ಸತತಬಿಂಬಕ್ರಿಯ ವ್ರತವಂದೆ ಕೈಕೊಂಡು ಜತನದಿ ಮರೆಯದೆ ಪ್ರತಿಕಾರ್ಯದಲ್ಲಿ ಅರ್ಪಿಸಿ ಹರಿಯಲ್ಲಿ ಇದ್ದೆ ಮೋದದಲಿ 26 ಮುಖ್ಯಪ್ರಾಣನ ದಯ ಮುಖ್ಯಮಾಡುತ ಇನ್ನು ಅಕ್ಕರೆ ಭಕ್ತಿಯ ತೋರಿದೆ ನೀನು ಬೆನ್ನು ಬಿಡದವನು ನಿನ್ನ ಸಲಹಿದನು 27 ಭಾರತಿಪತಿ ಮುಖ್ಯಪ್ರಾಣಾಂತರ್ಗತನೆಂಬ ವಾರುತಿ ಇಲ್ಲದ ವಚನವೆ ಇಲ್ಲಾ ನಿನ್ನ ಈ ಸೊಲ್ಲ ಮರೆಯಲೊಶವಲ್ಲ 28 ಶ್ರೀ ರಾಮಚಂದ್ರನ ಆರಾಧನೆಯಗೈದು ಸಾರತತ್ವವ ತಿಳಿದು ಸಾಧಿಸಿ ಪಥವ ಸಹಸ್ರಾರು ಜಪವ ಗೈದೆ ತಪವ 29 ನೀ ಹಾಡಿದ ಸ್ತೋತ್ರ ನಿನ್ನ ಸನ್ಮಾರ್ಗವ ನನ್ನೆಯಿಂದಲಿ ಎರೆದೆ ಹೆಣ್ಣು ಮಕ್ಕಳಿಗೆ ಸ್ಮರಿಸುವರೀಗೆ ಸತ್ಕೀರ್ತಿಯದಾಗೆ 30 ಹರಿ ಗುರು ವರತತ್ವ ದಿವಿಜರಭಿಮಾನಿಗಳ ನಿರುತದಿ ಚಿಂತಿಸಿ ಸಾಧನಗೈದೆ ಕಾಲವ ಕಳೆದೆ ಹರಿಪಾದಕ್ಕೆರೆದೆÀ 31 ಬಿಂಬಾನು ಸಂಧಾನ ಚತುರಳಾಗಿ ನೀನು ಸಂಭ್ರಮದಿಂದ ಶ್ರೀ ಮಧ್ವಶಾಸ್ತ್ರದಲಿ ಮನಸ ನೀಡುತಲಿ ಸುಖ ಸುರಿಯಲಿ 32 ಒದ್ದು ತಾಪತ್ರಯ ಸದ್ಗುರು ಕೃಪೆ ಪೊಂದಿ ಗೆದ್ದೆ ನೀ ಸುಲಭದಿ ಭವದ ಬಂಧನವ ಪಡೆದೆ ಹರಿ ದಯವ ಕೊಟ್ಟಿತೆ ಮುದವ 33 ಪೇಳಲೋಶವೆ ಹೇ ದಯಾಳು ನಿನ್ನಯ ಗುಣ ಬಾಳಿದೆ ಧರೆಯೊಳು ತೊಂಬತ್ತೈದೊರುಷ ವೃದ್ಧಾಪ್ಯದೋಷ ನಿನಗಿಲ್ಲ ಲೇಶ 34 ಇಂದ್ರಿಯಂಗಳು ಎಲ್ಲ ಒಂದು ಕುಗ್ಗದೆ ಒಬ್ಬ ರಿಂದಲು ಸೇವೆಯ ಕೊಳದೆ ಲವಲವಿಕೆ ಯಿಂದಿರುವ ಬಯಕೆ ಸಲಿಸೀತೆ ಮನಕೆ 35 ಕಿರಿಯ ಮೊಮ್ಮೊಗ ರಮಾಕಾಂತನಲ್ಲಿರುತಿರೆ ಕರೆಹೇಳಿ ಕಳುಹಿದ ಹರಿ ತನ್ನ ಪುರಕೆ ಕ್ಲಿಪ್ತಕಾಲಕ್ಕೆ ಆಗೆ ಮನವರಿಕೆ 36
--------------
ಅಂಬಾಬಾಯಿ
ಶ್ರೀಗುರುಕೃಪೆಯಿಂದ ದಯದಿಂದ ನೀಗಿದೆ ನಾ ಭವಬಂಧ 1 ಘನದಯದೊಲವಿಂದ ಒಲವಿಂದ ತಾನೆ ತಾನಾದ ಮುಕುಂದ 2 ಮಹಿಪತಿಗಾಯಿತಾನಂದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಕಲಾರ್ಥಕಿದೆ ಸುಖ ಸಾಧಿಸಿನ್ನು ನೋಡಿ ಭಕುತಿ ಭಾವದಿಂದ ಸದ್ಗುರು ಸೇವೆಯ ಪೂರ್ಣಮಾಡಿ ಧ್ರುವ ಭಾವವಿಟ್ಟು ನೋಡಿ ಖೂನ ದೇವದೇವೇಶನ ಕಾವ ಕರುಣನೇ ತೋರುತಿಹ್ಯ ತಾ ನಿಧಾನ 1 ನೋಟ ನಿಜಮಾಡಿ ನೋಡಿ ನೀಟ ನಿಜ ಧ್ಯಾನ ಘಾಟ ತಿಳಿದವರಿಗಿದೆ ಗುರುಕೃಪೆಙÁ್ಞನ 2 ಸವಿದುಣ್ಣಬೇಕು ಇದೇ ಸವಿ ಸವಿಯಿಂದ ಆವಾಗ ಮಹಿಪತಿಗಿದೆ ನೋಡಿ ಬ್ರಹ್ಮಾನಂದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸತ್ಯಾದ ನಡಿ ಹಿಡಿರೋ ಮನಜರು ಸತ್ಯದಾ ನಡಿಗಿನ್ನು ಮತ್ತೊಂದು ಭಯವಿಲ್ಲ ಧ್ರುವ ಸತ್ಯದಾನಡಿಗಿನ್ನು ಸತ್ಯ ನುಡಿಯಲು ಬೇಕು ಸತ್ಯಂ ಸತ್ಯ ಶರಣರೆಲ್ಲಾ ಎತ್ಯಾಡಿಸುವಂತೆ ಮೈಯೊಳಗಿಹ ಕಾವನೈಯನ ಮರಿಯಬ್ಯಾಡಿ 1 ಹುಸಿಯಾಡಿ ನೀವಿನ್ನು ಘಾಸಿಗೆ ಬೀಳಲಿ ಬ್ಯಾಡಿ ವ್ಯಸನಕಾಗಿ ಬಿದ್ದು ದೆಶೆಗೆಟ್ಟು ಹೋಗಬ್ಯಾಡಿ 2 ಅಶೆಯಕೊಟ್ಟು ನಿರಾಶಯೆ ಮಾಡಲಿಬ್ಯಾಡಿ ಘಾಸಿ ಮಾಡಲಬ್ಯಾಡಿ 3 ಘಟ್ಟಿಸಿ ಒಬ್ಬರ ಹೊಟ್ಟೆಹೊರಿಯಬ್ಯಾಡಿ ಸಿಟ್ಟಿಲಿ ನೆಂಟರು ತುಟ್ಟಿಸಿ ಬಿಡಬ್ಯಾಡಿ4 ಗುಟ್ಟಿನೊಳಿಹ ಮಾತು ತುಟ್ಟಿಗೆ ತರಬ್ಯಾಡಿ ಹೊಟ್ಟೆಲೆ ಹಡೆದವರ ಕಟ್ಟಿಗೆ ತರಬ್ಯಾಡಿ 5 ಲೆತ್ತಪಗಡಿ ಅಡಿ ಹೊತ್ತುಗಳಿಯಬ್ಯಾಡಿ ತುತ್ತುಕುಡಿಯೊಳಿದ್ದಾ ಪತ್ತಬಡಲಿಬ್ಯಾಡಿ 6 ಹರಿಹರ ಭಕ್ತಿಗೆ ಬ್ಯಾರೆ ನೋಡಲಿಬ್ಯಾಡಿ ಗುರುಕೃಪೆ ಪಡೆದಿನ್ನು ಗುರುತಿಟ್ಟು ನೋಡಿರೋ 7 ಅನ್ನಬೇಡಿದವ ಗಿಲ್ಲೆನ ಬ್ಯಾಡಿ ಹೊನ್ನು ಹೆಣ್ಣಿನ ಮ್ಯಾಲೆ ಕಣ್ಣಿಟ್ಟು ಕೆಡಬ್ಯಾಡಿ 8 ಅಂತರಾತ್ಮದ ಪರಮಾತ್ಮನ ತಿಳಕೊಳ್ಳಿ ಸ್ವಾತ್ಮ ಸುಖದ ಸವಿ ಸೂರ್ಯಾಡಿಕೊಳಲಿಕ್ಕೆ 9 ಸ್ವಹಿತ ಸುಖದ ಮಾತು ಸಾಧಿಸಿಕೊಳಲಿಕ್ಕೆ ಮಹಿಪತಿ ಹೇಳಿದ ಮಾತು ಮನ್ನಿಸಿ ತಿಳಿಕೊಳ್ಳಿ 10
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸದ್ಗುರು ಭಕ್ತಿ ಲೇಸು ಲೇಸು ಸದ್ಭಕ್ತಿಗೊಂದು ಗುರುಕೃಪೆಯೆ ಲೇಸು ಧ್ರುವ ಒಂದೆ ಸುಪಥ ಲೇಸು ಹೊಂದಿ ಬಾಳುವದು ಲೇಸು ಪಾದ ಕಾಂಬುವದೆ ಲೇಸು 1 ನಡೆ ನುಡಿ ಒಂದೆ ಲೇಸು ದೃಢಭಾವನೆಯು ಲೇಸು ಪಿಡಿಯುವನು ಸಂಧಾನಧ್ಯಾತ್ಮದ ಲೇಸು 2 ಗುರುದೈವೆಂಬುದೆ ಲೇಸು ಅರಿತು ಬೆರೆವುದು ಲೇಸು ಸರಕ್ಕನೆ ಸಾಧಿಸಿಕೊಂಬಾನುಭವ ಲೇಸು 3 ಒಳಮುಖನಾಗುವದೆ ಲೇಸು ತಿಳಿಯುವಾತನ ಮನ ಲೇಸು ಬೆಳಗಿನೊಳಿಹ್ಯ ಬೆಳಗು ಹೊಳೆವ ಲೇಸು 4 ತನ್ನ ತಾ ತಿಳಿವದೆ ಲೇಸು ಉನ್ಮನವಾಗುದೆ ಲೇಸು ಪಾದ ನಂಬುದೆ ಲೇಸು 5 ಅರ್ತರೆ ಗುರುವಾಕ್ಯ ಲೇಸು ಬೆರ್ತರೆ ಗುರುಪಾದ ಲೇಸು ನಿರ್ತದಿಂದಾಗುವ ಪೂರ್ಣ ಗುರ್ತವೆ ಲೇಸು 6 ಗುರುಶರಣ್ಹೋಗುದೇ ಲೇಸು ಕರುಣ ಪಡೆವದೆ ಲೇಸು ತರಳ ಮಹಿಪತಿಗಿದೆ ಸುಖವೆ ಲೇಸು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು