ಒಟ್ಟು 96 ಕಡೆಗಳಲ್ಲಿ , 24 ದಾಸರು , 74 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಅಷ್ಟಾಕ್ಷರ ವಾಮನಮಂತ್ರ ಅಮಲ ಗುಣಪರಿಪೂರ್ಣ ಅಮೃತಸಖ ಚಿನ್ಮಯನೆ ವಾಮನ ಸುಮಂಗಳನೆ ನಮೋ ನಮೋ ನಮಸ್ತೆ ಪ ಅಮಿತ ಸುಂದರರೂಪ ಕಮಲಾದಿ ಸ್ತ್ರೀಯರಿಗು ಬ್ರಹ್ಮಾದಿ ಭಕ್ತರಿಗು ಸ್ವಾಮಿ ಸರ್ವಾಶ್ರಯನೆ ಅ ಪ ಸರ್ವದಾ ಸರ್ವತ್ರ ಸರ್ವ ಸ್ವಾಮಿಯು ನೀನು ಕೇವಲ ಸುನಿಷ್ಕಳನು ಸರ್ವ ಉತ್ಕøಷ್ಟ ಸರ್ವ ವೇದಾದಿಗಳಿಂ ಸರ್ವಜ್ಞ ನೀ ಜÉ್ಞೀಯ ಸರ್ವವಂದ್ಯನೆ ನಮೋ ಪ್ರಣವ ಪ್ರತಿಪಾದ್ಯ 1 ಉದಿತಭಾಸ್ಕರನಿಭ ಸ್ವಕಾಂತಿಯಲಿ ಜ್ವಲಿಸುವೆ ಸುದರ್ಶನವು ಶಂಖವು ಗದಾ ಜ್ಞಾನಮುದ್ರೆ ಪದುಮೆ ಸಹ ಸರ್ವ ಜಗದಂತರ್ಬಹಿವ್ರ್ಯಾಪ್ತ ಅಜ ಮಂತವ್ಯ ವಿಷ್ಣು 2 ಔದಾರ್ಯದಲಿ ಬಲಿಯ ಬೇಡಿ ಇಳಿಸಿ ಉಳಿಸಿ ಪಾದದಿಂದಲಿ ವಿಯದ್ಗಂಗೆಯನು ಪಡೆದೆ ಒದಗಿಸಿದೆ ಇಂದ್ರನಿಗೆ ಸ್ವರ್ಗಾಧಿಪತ್ಯವನು ಪದುಮಜನ ಪಿತ ನಮೋ ಪ್ರಸನ್ನ ಶ್ರೀನಿವಾಸ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಕ್ರೋಧನ ನಾಮ ಸಂವತ್ಸರ ಸ್ತೋತ್ರ 157 ಕ್ರೋಧನ ಸಂವತ್ಸರ ನಿಯಾಮಕ ಸ್ವಾಮೀಶ್ರೀ ಪದುಮಾಲಯಪತಿ ನಾರಸಿಂಹನ ಪಾದ ಕೃತಿ ನಡೆಸಿ ಶರಣರ ಕಾಯ್ವ ಪ ಈ ಸಂವತ್ಸರ ರಾಜಾ ಶುಕ್ರ ಮಂತ್ರೀ ಶನಿಯು ಶನೈಶ್ಚರನೇ ಸೈನ್ಯಾರ್ಘ ಮೇಘ ಸಸ್ಯಪತಿ ರಸಪಗುರು ನಿರಸ ಸಸ್ಯಪ ಮಂಗಳ ಸುಸೌಖ್ಯ ಬಹುಕ್ಷೀರ ಧಾನ್ಯ ವೃಷ್ಟಿದ ಚಂದ್ರ 1 ಕಾಡು ಕಿಚ್ಚು ಮೊದಲಾದ ಅಗ್ನಿಭಯ ರೋಗ ಪೀಡೆ ಜನರಲ್ಲು ರಾಜರಲು ಪರಸ್ಪರ ಅಡಿಗಡಿಗೆ ಸ್ನೇಹಹಾನಿ ಸೈನ್ಯಕಲಹ ದುಷ್ಟಭಯ ಕಳೆದು ಭಕ್ತರ ಕಾಯ್ವ ಹರಿ 2 ತತ್ವದೇವರ್ಗಳು ಸಭಾರ್ಯಾ ರವಿಸೋಮರು ಶಿವಾಶಿವ ವರ ಸಮೀರ ಇವರುಗಳಿಂ ಸೇವ್ಯ ಶ್ರೀ ಶ್ರೀಯುಕ್ ಪ್ರಾಣಯಮ್ಮೊಳ್‍ಜ್ವಲಿಸಿಕಾಯ್ವ ಸರ್ವಗ ವೇಧಪಿತ ಪ್ರಸನ್ನ ಶ್ರೀನಿವಾಸ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಗುರು ಮೂರ್ತಿಯನು ನಂಬಿ ಧ್ಯಾನಿಸಿ ಜನರು | ನೀಗಿ ಚಂಚಲ ಚಿತ್ತದಾ ಭಾಗವತ ಧರ್ಮದಿಂದರ್ಚಿಸಲು ಕರುಣ ಮಳೆ | ಭವ ಪಾಶದೆಶೆಯಿಂದ ಪ ಎಳೆಯ ಮಾದಳಿರ ಸೋಲಿಸುವ ಮೃದುತರ ಬೆರಳ ನಖ ಚಲುವ ಪಾದಾ | ನಳ ನಳಿಪ ಪವಳ ಮಣಿಯಂತೆ ಹರಡಿನ ಸೊ.... ವಿಲಸಿತದ ಜಂಘೆದ್ವಯದಾ | ನಿಚ್ಚಳದ ಜಾನೂರದ ಸ್ಪುರದಾ | ವಲುಮೆಮಿಗೆ ತನು ಮಧ್ಯ ಸಂಪಿಗೆಯ ಗಂಭೀರನಾಭಿ ಕಿರು ಡೊಳ್ಳು ತ್ರಿವಳಿ ವಾಸನೆಯ ಛಂದಾ 1 ಪುತ್ಥಳಿಯ ಹಲಗಿ ಕಾಂತಿಯ ಲೊಪ್ಪುತಿಹ ಉರದ | ವತ್ತಿಡದ ಕೊರಳ ಮಾಟಾ| ಮಣಿ ಬಂಧ | ಮತ್ತ ಊರ್ಪರಿಯಕಟಾ | ಮೊತ್ತದೋರ್ವಂಡ ಭುಜ ಶ್ರವಣ ನುಣ್ಗದಪುಗಳು | ಹೆತ್ತ ಪಲ್ವಧರ ನೀಟಾ | ಸೂರ್ಯ ಪರಿನಯನ | ವೆತ್ತ ಭ್ರೂಲತೆ ಪೆರ್ನೊಸಲ ಸುಕೇಶಿಯ ಜೂಟಾ 2 ಮಣಿ ತೇಜದೊಳೆ ಯುಗ್ಮ ಕುಂಡಲಗಳು | ನವರತ್ನ ಹಾರ ಮಂಡಿತ ಪದಕ ವಡ್ಯಾಣ | ಠವ ಠವಿಸುತಿಹ ಸರಳು | ಬವರದೊಳು ಚಿತ್ತ ತೆತ್ತೀಸ ತಾಯಿತ ಕಡ ವಜ್ರ ದುಂಗುರಗಳು | ತವಕದೊಳ್ ನಿರೆ ಹಾಕಿ ದಂಬರವ ಮೌಲಿಕದ | ಕಾಲ ಕಡಗ ಅಂದುಗೆಗಳು 3 ದ್ವಿನಯನ ಮಧ್ಯ ರಾಜಿಸುವ ಮಂಟಪದೊಳಗ ಧ್ಯಾನ ಸಿಂಹಾಸನದಲಿ | ಸಾನು ರಾಗದಲಿ ಕುಳ್ಳಿರಿಸಿ ಚರಣ ದ್ವಯವ ಜ್ಞಾನ ಗಂಗೋದಕದಲಿ | ಮಾನಸದಿ ಅಭಿಷೇಕವನೆ ಮಾಡಿ ಸಲೆ ಪೂಸಿ ಆನಂದ ವಸ್ತ್ರ ಗುಣಲಿ | ಮೌನದಲಿ ಲಯಲಕ್ಷಿ ಗಂಧಾಕ್ಷತೆಯ ಸುಮನ ತಾನಿಟ್ಟು ಬೆಳಗಿ ಧೂಪದಿ ಏಕಾರತಿಗಳಲಿ 4 ಬಳಿಕ ಕಸ್ತೂರಿಯ ಕೇಶರದ ಚಂದನ ಪೂಸಿ | ಕಳೇವರಕ ವಪ್ಪಿಲಿಂದಾ | ಥಳ ಥಳನೆ ರಂಜಿಸುವ ಬಟ್ಟ ಮುತ್ತಿಶಾಶೆ ಗಳನಿಟ್ಟು ಬೇಗ ಛಂದಾ | ಚಲುವ ಮಲ್ಲಿಗೆ ಕುಂದರ್ಕೆ ಜಾಜಿ ಕೇತಕಿಯು ನಳಿನ ಮೊದಲಾದರಿಂದಾ | .....ರ ಮಾಲೆಯಾ ಹಾಕಿ ಪರಿಮಳದಿ ಧೂಪವನು | .....ಸಂಚಿತ ದಶಾಂಗದಿ ಚಕ್ಷು ಜ್ಯೋತಿಯಿಂದಾ 5 ವರಶಾಂತಿ ಶಕ್ತಿ ಯರ್ಚಿಸಿ ಕುಳ್ಳಿರಿಸಿ ಪುರುಷಾರ್ಥ ದೀಪಂಗಳು | ಮೆರೆಯುತ ಪ್ರಜ್ವಲಿಸಿ ತರುವಾಯ ಕನಕಮಯ | ಹರಿವಾಣ ಬಟ್ಟಲುಗಳು | ಪರಮಾನ್ನ ಪಂಚಭಕ್ಷಗಳನ್ನ ಸೂಪಘೃತ ಪರಿ ಪರಿಯ ಶಾಖಂಗಳು | ಸುರಸ ಪಾಲು ಮೊಸರು ತನಿವಣ್ಣಲುವಗಾಯಿಕೇಸರ | ಧರಿಯೊಳಗ ಲೇಹ ಪೇಹ ಮೊದಲಾದ ಭೋಜ್ಯಂಗಳು 6 ಇನಿತು ಅರ್ಪಿಸಿ ಸ್ವಾದುದಕ ಕೈದೊಳೆದು | ಗುಣದಿತ್ತು ತಾಂಬೂಲವಾ | ಅನುಭವದಾರತಿಯು ಪುಷ್ಪಾಂಜುಳಿ ನಮನ ಪ್ರದ ಕ್ಷಿಣ ಗೀತ ನೃತ್ಯ ಮುದವಾ | ಘನ ತೀರ್ಥಸು ಪ್ರಸಾದವ ಕೊಂಡು ಸೂರ್ಯಾಡಿ ಅನುವಾಗಿ ಸಖ್ಯದನುವಾ | ಮನುಜ ಜನ್ಮಕ ಬಂದು ಗುರು ಮಹಿಪತಿ ಸ್ವಾಮಿ | ಘನದಯವ ಪಡಕೊಂಡು ಪಡೆಯೋ ಮುಕ್ತಿಯ ಸ್ಥಳವಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀ ನರಸಿಂಹ ಮಂತ್ರ ಜಯ ಜಯ ಜಯ ನರಸಿಂಹ ಜಯ ಜಯ ಮಹಾಲಕ್ಷ್ಮೀರಮಣ ಜಯ ನಿರಾಮಯ ಸರ್ವೋತ್ಕøಷ್ಟ ಆಹ ಜಯ ಕಮಲಜ ಮೃಡಾದ್ಯಮರವಂದ್ಯನೆ ನಮೋ ಭಯಬಂಧಹರ ಭಕ್ತ ಜನರ ರಕ್ಷಕ ಸ್ವಾಮಿ ಪ ಅರದೂರ ಗುಣಪರಿಪೂರ್ಣ ಉಗ್ರವೀರನೆ ಮಹಾವಿಷ್ಣು ಉರುಕಾಂತಿ ಸರ್ವತೋಮುಖನೆ ಆಹ ನರಸಿಂಹ ಭಯಕರಾಶ್ರಿತಜನರ ರಕ್ಷಕ ಶರಣಾದೆ ನಿನಗೆ ನಾ ಮೃತ್ಯುಮಾರಕ ನಮೋ 1 ಸೃಷ್ಟಾ ಪಾತಾ ಅತ್ತ ತ್ರಾತಾ ದುಷ್ಟ ದೈತ್ಯರಿಗತಿ ಕ್ರೂರ ಶ್ರೇಷ್ಠ ಅಸಮಬಲರೂಪ ಆಹ ಇಷ್ಟಭಕ್ತನ ಕಾಯೆ ಕಂಬದಿಂದಲಿ ಬಂದು ತ್ಕøಷ್ಟ ಪ್ರಜ್ವಲಿಪ ನಖದಿ ಸೀಳ್ದೆ ಭ್ರಷ್ಟನ 2 ವಿಶ್ವಸ್ಥ ಬಹಿರಂತವ್ರ್ಯಾಪ್ತ ವಿಶ್ವ ವಿಷ್ಣು ವಷಟ್ಕಾರ ಸರ್ವಜ್ಞ ನಿರ್ದೋಷ ಸುಗುಣಿ ಆಹ ಅಮಿತ ಸಕಾಂತಿಯಿಂ ಜ್ವಲಿಸುವೆ ವಿಶ್ವತೋಮುಖ ಸರ್ವಸಾಕ್ಷಿಸ್ವತಂತ್ರ 3 ನರನಲ್ಲ ನರರೂಪಧಾರಿ ನೀ ಮೃಗವಲ್ಲವು ಸಿಂಹವದ್ರೂವ ನರಮೃಗಗಳಲಿ ನೀ ಸಮನು ಆಹ ಧರೆ ದಿವಿ ಪಾತಾಳ ಜಂತು ಸರ್ವಾಂತಸ್ಥ ಉರು ಜ್ಞಾನ ಬಲರೂಪ ಅನಂತ ನೀ ಏಕ 4 ನ ಎಂದರೆ ಸರ್ವವಂದ್ಯ ರ ಎಂದರೆ ಸುಖ ಜ್ಞಾನ ಸಿಂ ಎಂದರೆ ಗುಣಸಾರ ಆಹ ಇಂದಿರಾಪತಿ ಮಹದೈಶ್ವರ ರೂಪನು ಹ ಎಂದರೆ ನೀನು ಪೂರ್ಣ ನಿರ್ದೋಷ 5 ಭೂತಾದಿ ದುಷ್ಟ ಗ್ರಹಗಳ ಖದ್ರೂಜಾದಿ ಸರ್ವ ವಿಷವ ನೀ ದಯದಿ ಪರಿಹರಿಪೆ ಆಹ ಭಕ್ತ ಜನರಿಗೆ ನೀ ಶುಭವಿತ್ತು ಅಕಾಲ ಮೃತ್ಯುವ ತರಿವ ರಕ್ಷಕ ನಮೋ ಎಂಬೆ 6 ದ್ವಾತ್ರಿಂಶ ಚತುರ್ವಿಂಶಾಕ್ಷರದ ಮಂತ್ರ ಗಾಯತ್ರಿ ಪ್ರತಿಪಾದ್ಯ ವೃತತಿಜಾಸನ ಮಂತ್ರ ಋಷಿಯು ಆಹ ಅಧಿಕಾರಿಗಳು ಇದನು ಶ್ರವಣ ಪಠಣ ಮಾಡೆ ಭೀತಿ ಮೋಹವÀ ಬಿಡಿಸಿ ನಿಖಿಳೇಷ್ಟವೀವೆ 7 ಜಯ ಜಯ ನರಸಿಂಹಸ್ವಾಮಿ ಜಯ ಜಯ ಸರ್ವಜ್ಞ ಭೂಮನ್ ಜಯ ಮಹಾ ತೇಜೋಬಲವೀರ್ಯ ಆಹ ಜಯ ಪುರುಷೋತ್ತಮ ವೇಧಾದಿ ಸುರರಿಂದ ಇಜ್ಯಪೂಜ್ಯನು ದೃಢಭಕ್ತಿಯಿಂ ಮುದದಿ 8 ನಾರ ಉರು ಗುಣಸಿಂಧು ನರಸಿಂಹ ಸುಪ್ರೀತನಾಗೊ ಚಿರಜ್ಞಾನ ಭಕ್ತಿಯ ಸತತ ಆಹ ಪರಮರಿಲ್ಲದ ಬಲಿ ನಿನ್ನಲಿ ಧ್ಯಾನ ತೀವ್ರ ಪ್ರೇರಿಸು ಎನಗೆ ಅನಂತ ಅನುತ್ತಮ 9 ಪ್ರೋದ್ಯಾರ್ಕನಿಭ ದೀಪ್ತವಾದ ವರ್ತುಲ ಉರು ನೇತ್ರತ್ರಯವು ಹಸ್ತದ್ವಯವು ಜಾನುವರೆಗೂ ಆಹ ಸುದರ್ಶನಿ ಶಂಖಿ ಮಹಾಲಕ್ಷಿಯುತ ಕೋಟಿ ಆದಿತ್ಯಾಧಿಕತೇಜ ಉತ್ಕøಷ್ಟ ಶಕ್ತ 10 ಕಮಠ ಕ್ರೋಡ ನೃಹರಿ ಮಾಣವ ಪರಶ್ವಿ ಸುಧನ್ವಿ ಬುದ್ಧ ಕಲ್ಕಿ ಶರಣ ಆಹ ವನರುಹನ ತಾತ ಪ್ರಸನ್ನ ಶ್ರೀನಿವಾಸ ಅನಿಷ್ಟಹ ಇಷ್ಟದ ಎನಗೆ ದಯವಾಗೊ 11
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ರಮಣ ಸರ್ವೇಶ ತ್ವಚ್ಚರ- ಣಾರವಿಂದವ ನಂಬಿರುವನಲಿ ಘೋರ ಭಾವವ ತಾಳ್ದ ಹೂಣನ ದೂರ ಓಡಿಸುವ ಭಾರ ನಿನ್ನದು ಪರಮ ಕರುಣಾ ವಾರುಧಿಯೆ ನೀನಲ್ಲದೆನಗೆ- ಸಾರಥಿ 1 ಸುಗುಣ ಸಜ್ಜನ ಶಿರೋಮಣಿ ಮಗುವು ಪ್ರಹ್ಲಾದನ ಪದಾಂಬುಜ ಯುಗವ ನೆನೆವುದನರಿತು ತತ್ಪಿತನೆಂದು ರೋಷದಲಿ ನೆಗೆದು ಬಂಡೆಯ ಝಳಪಿಸುತ ಬರೆ ಧಗಧಗಿಸಿ ಕಂಬದಲಿ ತೋರುತ ಬಗೆದಿ ದೈತ್ಯನ ಕರುಳ ಜಯ ಜಯ ವಿಜಯಸಾರಥಿ 2 ದೋಷಿ ದೈತ್ಯಾವೇಷದಿಂದಲಿ ವಾಸವಾದಿ ಸಮಸ್ತ ದಿವಿಜರ ಘಾಸಿಗೊಳಿಸಿದ ದಶಶಿರನ ತದ್ವಂಶಜರ ಸಹಿತ ನಾಶಗೈದು ನಿರಾಪರಾಧಿ ವಿ- ಭೀಷಣಗೆ ಸಾಮ್ರಾಜ್ಯವಿತ್ತ ಪ- ರೇಶ ಸೀತಾಕಾಂತ ಜಯ ಜಯ ವಿಜಯಸಾರಥಿ 3 ಪೂತನಾ ಬಕ ಶಕಟ ಧೇನುಕ ಪಾತಕಿ ಶಾರಿಷ್ಠ ಕೇಶಿಕಿ- ರಾತ ಕಂಸಾಂಬಷ್ಟ ಮುಷ್ಟಿಕ ಮಲ್ಲ ಚಾಣೂರ ಕಾತರದ ಶಿಶುಪಾಲ ಮುಖ್ಯರ ಘಾತಿಸಿದ ಗರುಡಧ್ವಜನೆ ಪುರು- ಹೂತ ಸುತನನು ಕಾಯ್ದೆ ಜಯ ಜಯ ವಿಜಯಸಾರಥಿ 4 ಅತ್ಯಧಿಕ ಕೋಪದಲಿ ಪ್ರಜ್ವಲಿ ಕಮಲ ಜೌಸ್ತ್ರವ ನುತ್ತರೆಯ ಗರ್ಭದಲಿ ಬಿಡದೆ ಸುತ್ತಿಕೊಂಡಿರಲು ಸತ್ಯಭಾಮಾಕಾಂತ ಕರುಣದಿ ತೆತ್ತಿಯನು ಕಾಪಾಡಿದಖಿಳೋ- ತ್ಪತ್ತಿರಕ್ಷಣಕಾರಿ ಜಯ ಜಯ ವಿಜಯಸಾರಥಿ 5 ಇರುವೆ ಮೊದಲು ಬ್ರಹ್ಮಾಂತರಾಗಿಹ ಸುರನರಾಸುರ ಮುಖ ಪ್ರಪಂಚ ದೊ- ಳಿರುವೆ ಸರ್ವೇಂದ್ರ್ರಿಯ ನಿಯಾಮಕ ಸರಿವ ಕೃತ್ಯವನು ಅರಿತು ಮಾಡಿಸಿ ನೋಡಿ ನಗುತಿಹ ಪರಮ ಮಂಗಳ ಚರಿತ ನೀ ಯನ- ಗಿರಲು ಭಯವ್ಯಾಕಿನ್ನು ಜಯ ಜಯ ವಿಜಯಸಾರಥಿ 6 ಆದರೀ ತೆರದಿಂದ ನಿನ್ನಯ ಪಾದ ಪಂಕಜಗಳನು ಪೊಗಳಿದ- ರಾದುದೊಂದಾಶ್ಚರ್ಯ ನೋಡಲಿ ಸುಜನರಾದವರು ಮೋದ ಭೋದಿ ದಯಾಬ್ಧಿ ವೆಂಕಟ ಭೂಧರೇಶನೆ ಸತತ ನಮ್ಮನು ಕಾದಿರುವೆ ಕಮಲೇಶ ಜಯ ಜಯ ವಿಜಯಸಾರಥಿ7
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀ ರುಧಿರೋದ್ಗಾರಿ ಸಂವತ್ಸರ ಸ್ವಾಮಿ ಧನ್ವಂತರಿ ಸ್ತೋತ್ರ 155 ಆನಂದ ಚಿನ್ಮಾತ್ರ ವಪುಷ ಸರ್ವಾಧಾರ ಅನಘ ಕೂರ್ಮಹÀಯ ಶೀಷ್ರ್ಯ ಸ್ತ್ರೀರೂಪ ಅಜಿತ ಆನಮೋ ರುಧಿರೋದ್ಗ್ಗ್ಗಾರಿ ಸಂವತ್ಸರ ಸ್ವಾಮಿ ಅನುತ್ತಮ ಸರ್ವೋತ್ತಮ ಧನ್ವಂತರಿ ರಮೇಶ ಪ ರಾಜಗುರು ಮಂತ್ರಿಗುರು ಸÉೀನಾಧಿಪತಿ ಬುಧನು ರಾಜಿಸುವರು ಸೂರ್ಯೇಂದು ಕವಿ ಭೂಮ ರವಿಜ ಪ್ರಜ್ವಲಿಸಿ ನೀ ಇವರೊಳ್ ಕೃತಿಯ ನಡೆಸಿ ಲೋಕ ಪ್ರಜೆಗಳಿಗೆ ಮಳೆ ಬೆಳೆ ಸೌಖ್ಯವಿತ್ತು ಪÉೂೀಷಿಸುವಿ 1 ದೇಶದೇಶ ರಾಜ್ಯಾಧಿಪರ್ಗಳ ಪರಸ್ಪರ ಸಂಶಯ ದುರ್ಮನವ ಆಗಾಗ ಶಾಂತ ಮಾಡುವುದು ಮೋಸಗಾರ ಕುಜನರು ಚೋರ ಕ್ರೂರರು ಮಾಳ್ಪ ಹೊಸ ಹೊಸ ಚಟುವಟಿಕೆ ಪರಿಹರಿಸಿ ಕಾಯೋ ಲೋಕವನು 2 ವೇದವ್ಯಾಸವಿರಚಿತ ಸಾತ್ವಿಕ ಪುರಾಣಗಳ ಯಥಾರ್ಥ ಪೇಳಿದೆ ದುಷ್ಟಾರ್ಥ ಪೇಳಿ ಜನರ ಮೋಹಿಸಿ ಸಾಧು ಸ್ತ್ರೀಪುರುಷರ ಪ್ರೌಢಕನ್ಯೆ ಬಾಲರ ವಂಚಿಪ ಧೂರ್ತರನು ಅಡಗಿಸಿ ಸತ್ಯಧರ್ಮ ಸಂತಾನ ಬೆಳೆಸೋ 3 ರಾಜ ಸಚಿವನು ಬೃಹಸ್ಪತಿಯಂತರ್ಗತನಾದ ರಾಜರಾಜೇಶ್ವರನೆ ನೀ ಅಂದು ಮಾನವಿಗೆ ಮದುವೆ ಉಜ್ವಲ ತಪಸ್ವಿಗೆ ಪುತ್ರರ ಒದಗಿಸಿದಿ ಇಂದು ನಿಜ ಭಕ್ತಸುತ ಕಾಮ ಪರಕಾಮ ಜನರಿಗೆ ಒಲಿಯೋ 4 ಹಿಂದಿನ ಇಂದಿನ ಸ್ವಕರ್ಮ ಪರಕರ್ಮ ಲಬ್ಧ ಮಾಂದ್ಯ ನರತ್ವಕೆ ಚರ್ಮ ಸೂತಕ ಗರ್ಭಿ ವ್ಯಾಧಿಪೀಡಿತ ಸಜ್ಜನರಿಗೆ ಸುಖವೀಯೋ ವೇಧಪ ಪ್ರಸನ್ನ ಶ್ರೀನಿವಾಸ ರುಧಿರೋಧ್ಗಾರಿ ಸ್ವಾಮಿ 5
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ವಿಷ್ಣು ತೀರ್ಥ ಅಣು ವಿಜಯ ಅರಣ್ಯಕಾಚಾರ್ಯ ಶ್ರೀವಿಷ್ಣು ತೀರ್ಥಾರ್ಯರ ಚರಣಸರಸೀರುಹದಿ ಶರಣಾದೆ ಸತತ ಹೊರ ಒಳಗೆ ಪ್ರಜ್ವಲಿಪ ಅನಘಗುಣ ಪರಿಪೂರ್ಣ ಸಿರಿವರ ಹರಿಕೃಪಾ ಪ್ರಸಾದವೊದಗಿಸುವ ಪ ಪಾದ ಸೇವಿಸಿದ ಫಲವಾಗಿ ಭಾಗೀರಥಿ ಬಾಳಾಚಾರ್ಯರಲಿ ಜನಿಸಿ ವೇಂಕಟರಾಮಾರ್ಯ ಐಜಿಯವರ ಸುಪವಿತ್ರ ಮುಖ ಪಂಕಜದಿಂದ ಕಲಿತರು ಸಚ್ಛಾಸ್ತ್ರ 1 ಜಯತೀರ್ಥ ನಾಮದಲಿ ಮೊದಲೆರಡು ಆಶ್ರಮ ನಿಯಮದಿ ಚರಿಸಿ ಈ ವೈರಾಗ್ಯ ನಿಧಿಯು ಸತ್ಯಸಂಧರಸುತ ಸತ್ಯವರ ತೀರ್ಥರಿಂ ತುರೀಯಾಶ್ರಮಕೊಂಡ ವಿಷ್ಣು ತೀರ್ಥಾರ್ಯ 2 ಏನು ಧನ್ಯರೋ ಸತ್ಯಧರ್ಮತೀರ್ಥರು ಮತ್ತು ಸೂರಿ ಈರ್ವರಿಗೆ ಅನಘಮಧ್ವಸ್ಥ ಶ್ರೀ ಹಂಸ ವೇದವ್ಯಾಸ ತಾನೇ ಸತ್ಯವರ ದ್ವಾರ ಉಪದೇಶ ಕೊಟ್ಟ 3 ಪೂರ್ವಾಶ್ರಮ ನಾಮ ಜಯತೀರ್ಥಾಂಕಿತದಲ್ಲಿ ತತ್ವಪ್ರಕಾಶಿಕ ಸುಧಾ ಟಿಪ್ಪಣಿಯ ಭಾಗವತ - ಸಾರೋ ದ್ಧಾರವ ಶೋಡಶಿ ಚತುರ್ದಶಿ ಬರೆದಿಹರು 4 ತತ್ವಬೋಧಕ ಸ್ತೋತ್ರ ಬಿನ್ನಹ ರೂಪವು ಆಧ್ಯಾತ್ಮ ರಸರಂಜಿನಿ ಅಮೃತಫÉೀಣ ಭಕ್ತಿಯಲಿ ಪಠಿಸಲು ಅಪರೋಕ್ಷ್ಯ ಪುರುಷಾರ್ಥ ಸಾಧನವಾಗಿಹುದನ್ನು ರಚಿಸಿಹರು ಇವರು 5 ಹದಿನಾರು ಪ್ರಕರಣ ಶೋಡಶಿ ಎಂಬುzರÀಲಿ ಹದಿನಾಲ್ಕು ಪ್ರಕರಣ ಚತುರ್ದಶಿಯಲ್ಲಿ ಬಂಧ ಮೋಕ್ಷಾಂತ ಶೋಡಶಿಯಲ್ಲಿಹುದು ಭಕ್ತಿ ಶುಚಿಯಲಿ ಪಠನೀಯ ರಹಸ್ಯವು 6 ಬಂಧಕವು ಬಂಧ ನಿವೃತ್ತಿಯು ಬಿಂಬ ಪ್ರತಿಬಿಂಬ ಭಾವವು, ಬಿಂಬಸಂಸ್ಥಾಪನವು ಅವಸ್ಥಾತ್ರಯ ನಿರ್ಮಾಣ ಆರನೆಯದು 7 ಪ್ರಾಣವ್ಯಾಪಾರವು ಭೋಜನ ಪ್ರಕರಣವು ಇಂದ್ರಿಯ ವ್ಯಾಪಾರವು ತತ್ವಕಾರ್ಯಹತ್ತು ತನು ಅಧಿಷ್ಠಾನ ರಥಾಧಿ ಪ್ರಕರಣವು ಹನ್ನೆರಡಲಿ ಬೋಧ್ಯ ಜಾಗೃತ್ ಪ್ರಕರಣವು 8 ಸ್ವಪ್ನವು ಸುಷುಪ್ತಿಯು ಗಮನಾಗಮನವು ಶುಭ ಮೋಕ್ಷ ಪ್ರಕರಣ ಷೋಡಶವು ಇನ್ನು ಚತುರ್ದಶಿಯಲಿ ಜೀವಹೋಮ ಮೊದಲಾಗಿ ರತ್ನಗಳು ಗುರು ಪ್ರಸಾದ ಲಾಭ ಪರ್ಯಂತ 9 ಜೀವಹೋಮ - ಉಪನಯನ ಸೂರ್ಯಗತಿ ಯಜ್ಞ ಪವಿತ್ರತಮ ವೇದಾಧ್ಯಯನ ಭಿಕ್ಷಾಟನ ವೈಶ್ವಾನರ ಪ್ರಿಯ ಭೋಜನ ಪಾಪಲೇಪ ಜೀವ ಪ್ರಯಾಣ ಮಾರ್ಗವು ನವಮ 10 ಹತ್ತನೆಯದು ಬ್ರಹ್ಮಯಜ್ಞಲಯ ಚಿಂತನಾಕ್ರಮ ಶುದ್ಧಯಜ್ಞ `ಸ್ವರೂಪಯಜ್ಞ' ಸುಲಭಪೂಜಾ ಹದಿನಾಲ್ಕಲಿ ಗುರುಪ್ರಾಸಾದ ಲಾಭದಲಿ ಆದಿತ್ಯಗ ಮಧು ಸುಖ ಪೂರ್ಣ ವಿಷಯ 11 ಯೋಗ್ಯ ಆಧಿಕಾರಿಗೆ ಮಾತ್ರ ಈಸೌ - ಭಾಗ್ಯಪ್ರದ ಜ್ಞಾನ ಪುಷ್ಠಿಕರಣ ಯುಗುಳ ಮಾತ್ರೆಗಳನ್ನ ವಿನಿಯೋಗಿಸುವುದು ಅಯೋಗ್ಯರಿಗೆ ಸರ್ವಥಾ ಕೊಡಕೂಡದು 12 ಕೃತ ಕೃತ್ಯ ಧನ್ಯಮನದಿಂದಲಿ ಈ ಮಹಾನ್ ಐದಿಹರಿಪುರಲಯವ ಚಿಂತನೆಮಾಡಿ ಹದಿನೇಳ್ ನೂರಿಪ್ಪತ್ತೆಂಟು ಶಕ ಮಾಘ ತ್ರಯೋದಶಿ ಕೃಷ್ಣದಲಿ ಕೃಷ್ಣನ ಸೇರಿದರು 13 ಮತ್ತೊಂದು ಅಂಶದಿ ವೃಂದಾವನದಿಹರು ಭಕ್ತಿಯಿಂ ಸ್ಮರಿಸಿದರೆ ಬಂದು ಸಲಹುವರು ಮಾದನೂರು ಕ್ಷೇತ್ರಸ್ಥ ವೃಂದಾವನ ಸೇವೆ ಭಕ್ತಿಯಲಿ ಮಾಳ್ಪರು ದೇಶ ದೇಶ ಜನರು 14 ಬೃಹತೀಸಹಸ್ರ ಪ್ರಿಯ ಮಹಿದಾಸ ಜಗದೀಶ ಬ್ರಹ್ಮಪಿತ ಭಕ್ತಪಾಲಕ ಪರಮ ಹಂಸ `ಮಹಿಸಿರಿ' ಶ್ರೀ ಪ್ರಸನ್ನ ಶ್ರೀನಿವಾಸನ ಮಹಾಭಕ್ತಿ ಶ್ರೀ ವಿಷ್ಣು ತೀರ್ಥಾರ್ಯರೇ ಶರಣು 15 ಪ || ಸಂಪೂರ್ಣಂ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಕರ ಅಷ್ಟಾಕ್ಷರ ಮಂತ್ರ ಗುಣವಾರಿನಿಧಿ ಅನಘ ಉತ್ತಮಮಹಾ ಪ್ರಭುವೆ ನಿನಗೆ ನಮೋ ಶ್ರೀಕರ ನಾರಾಯಣನೆ ಶರಣು ಪ ಉತ್ತಮೋತ್ತಮಗುತ್ತ ಮೋತ್ತ ಮೋದೀತ ಚೇತನಾಚೇತನರಿಗುತ್ತಮಾಶ್ರಯನು ಉತ್ತಮ ಉಮೇಶಾದಿ ಭಾರತಿಗುತ್ತಮ ವಾಯು ಆತಗುತ್ತಮೆ ಸಿರಿಗೆ ಉತ್ತಮೋತ್ತಿಷ್ಠ 1 ಶ್ರೀ ಎಂದರೆ ಜ್ಞಾನಸುಖಪೂರ್ಣೆ ಲಕ್ಷ್ಮಿಸ್ಥ ಕ ಎಂದರಾನಂದಶತ ಸುಖಾಂತಸ್ಥ ರ ಎಂದರೆ ಸ್ವರತ ಸುಖಪ್ರದ ಸುಖಾಶ್ರಯನು ಇಂದಿರೇಶನೆ ಎನಗೆ ಸೌಭಾಗ್ಯವೀಯೊ 2 ಸ್ವಾಹಾ ಆತ್ಮನು ಸ್ವವಶ ಸರ್ವವಶಿ ಶ್ರೀಪನು ಹರಿ ಹಂಸ ನಿರ್ದೋಷ ಬ್ರಹ್ಮ ನಾರಾಯಣ ಅಹರ್ನಿಶಿ ಈ ರೀತಿ ನಿನ್ನ ಸ್ಮರಿಸುವ ಜನಕೆ ನಿಖಿಳ ಐಶ್ವರ್ಯವೀವೆ 3 ಕಂಬು ಅರಿ ಶಂಖನಿಧಿ ಪದ್ಮನಿಧಿ ದಿವ್ಯ ಹಸ್ತಗಳಲಿ ಶೋಭಿತವಾಗುಂಟು ದ್ರವ್ಯ ಹಾಟಕ ರತ್ನ ಧನ ಕೊಡುವ ಕರಗಳು ದೇವಿ ಶ್ರೀ ಹ್ರೀ ಸಹ ಗರುಡಾಂಶಸಂಸ್ಥ 4 ಮೀನಾದಿರೂಪ ತ್ವದ್ ಮಸ್ತಕಾದ್ಯಂಗದಿ ಇನಗಮಿತದೀಪ್ತ ಆಭರಣ ಜ್ವಲಿಸುತಿವೆ ಶ್ರೀನಿವಾಸನೆ ಸ್ವರ್ಣವರ್ಣ ನಮೋ ಶರಣು 5
--------------
ಪ್ರಸನ್ನ ಶ್ರೀನಿವಾಸದಾಸರು
ಸೀತಾರಾಮ ಶ್ರೀರಘುರಾಮ ಕಾ ಕುತ್ಸ್ಥರಾಮ ಕರುಣಾಳು ರಾಮ ಪ ಉತ್ತಮ ಗುರುಗಳಿಗೆ ಭಕ್ತಿಯಿಂದಲೆ ಎರಗಿ ಭಕ್ತವತ್ಸಲನ ಚರಿತ್ರೆ ಪೇಳುವೆನು 1 ಆದಿಮೂರುತಿಮಹಿಮೆ ವೇದಂಗಳರಿಯದು ಎನ್ನ ಭೇದಬುದ್ಧಿಗೆ ಇದು ಬೋಧವಾಗುವುದೆ 2 ಪತಿತಪಾವನ ನಿಮ್ಮ ಸ್ತುತಿಯ ಮಾಡುವುದಕ್ಕೆ ಮತಿಯ ಪಾಲಿಸಿ ಸದ್ಗತಿಯ ಕೊಡೆನೆಗೆ 3 ಆದಿಸೃಷ್ಟಿಯಲಿ ಆದುದು ಈ ಆತ್ಮ ಬಾಧೆಯ ಪಡುತಿಹುದು ಭವರೋಗದಲಿ 4 ಜನನ ಮರಣವೆಂಬ ಜಾಡ್ಯವನು ಬಿಡಿಸಿ ನಿನ್ನ ಚರಣದೊಳಿರಿಸೆನ್ನ ಕರುಣವಾರಿಧಿಯೆ 5 ಹೃಷಿಕೇಶವ ಎನ್ನ ಹೃದಯದೊಳಗೆ ಇದ್ದು ವಿಷಯಕೆ ಎನ್ನನು ವಶವ ಮಾಡುವರೇ 6 ದೆ ಮನ್ನಿಸಿ ರಕ್ಷಿಸೊ ಪನ್ನಗಶಯನ 7 ಪಾರ್ಥಸಾರಥಿ ನಿಮ್ಮ ಪಾದವ ನಂಬಿದೆ [ಅರ್ಥಿಯಿಂ] ಪಾವನ ಮಾಡೆನ್ನ ಪರಮಪುರುಷನೆ 8 ನಿಮ್ಮ ಪಾದದ ಭಕ್ತಿ ನಿಮ್ಮ ಪಾದದ ಸ್ತುತಿ ನಿಮ್ಮ ಪೊಗಳುವ ಮತಿಗತಿಯ ಕೊಡೆನಗೆ 9 ತಂದೆತಾಯಿಯು ನೀನೇ ಬಂಧುಬಳಗವು ನೀನೆ ಆ ನಂದದಿಂದಲಿ ಕಾಯೊ ಇಂದಿರಾರಮಣ 10 ಸುರರೆಲ್ಲ ಪೋಗಿ ಮೊರೆಯಿಡಲಾಗಿ ಅರಿತನು ಭೋಗಿಶಯನ ತಾನಾಗಿ11 ವಸುಧೆಯ ಭಾರವನಿಳುಹುವೆನೆಂದು ದಶರಥನುದರದಿ ಜನಿಸಿ ತಾ ಬಂದು 12 ಪಂಕಜನೇತ್ರ ಪರಮಪವಿತ್ರ [ಸು]ಕೋಮಲಗಾತ್ರ ಕೌಸಲ್ಯಪುತ್ರ 13 ಪುತ್ರರ ನೋಡಿ ಸಂತೋಷಗೂಡಿ ಅರ್ತಿಯಿಂದಲೆ ಚೌಲ ಉಪನಯನ ಮಾಡಿ 14 ನೋಡಿ ಕೌಶಿಕನ ಚಿಂತೆಯ ಮಾಡಿ ಕೂಡಿ ಅನುಜನ ಮುನಿವರನೊಡನೆ ವೋಡಿ 15 ಕರೂಶದೇಶಕೆ ಬಂದು ತಾಟಕಿಯನು ಕೊಂದು ಮ ಹ ಸ್ತ್ರೀಯೆಂದು ಆನಂದದಿ ಗ್ರಹಿಸಿ 16 ಮಾರೀಚನ ಹಾರಿಸಿ ಕ್ರತುವನ್ನು ಪಾಲಿಸಿ ತೋರಿಸಿ ಗಂಗೆಯ ಆನಂದದಿಂ ಸ್ತುತಿಸಿ 17 ಮಾಡಿ ಶಿಲೆಯ ಪಾವನ ಮಿಥಿಲಪುರಕೆ ವೋಡಿ ನೋಡಿ ಧನುವ ಮುರಿದು ಜಾನಕಿ ಕೂಡಿ 18 ಮಾರ್ಗದಲ್ಲಾಗ ಭಾರ್ಗವನ ಆಗ್ರಹವ ಬೇಗ ಮುರಿದು ತಾ ಶೀಘ್ರದಿಂ ಬಂದ 19 ಸತಿ ಸಹಿತನಿಂದು ರಾಜ್ಯ ಗ್ರಹಿಸುವೆನೆಂದ ಮಾತೆಗಾನಂದ 20 ಮಾತೆಗೆ ವಂದಿಸಿ ಸೀತೆಯನೊಡಗೊಂಡು ಸು ಮಿತ್ರೆಜಾತನ ಸಹಿತ ರಘುನಾಥ ತಾ ಪೊರಟ 21 ಪೋಗಿ ಜನಕನಿಗಾಗಿ ವನಕೆ ತಾ ಯೋಗಿ 22 ಬೇಗ ಭರತನಿಗಾಗಿ ಪಾದುಕೆಗಳ ಅನು ರಾಗದಿಂದಿತ್ತು ಯೋಗದಿಂ ಪೋಗಿ 23 ಅತ್ರಿಮಹಾಮುನಿ ಇತ್ತ ಆಭರಣವ ವಸ್ತ್ರವ ಗ್ರಹಿಸಿದ ಪುರುಷೋತ್ತಮನು 24 ವಿರಾಧನ ಕೊಂದು ಹರುಷದಿಂ ಬಂದು ಕರುಣದಿಂದ ನಿಂದು ಋಷಿಗಳಿಗಭಯವ[ನಿತ್ತು] 25 ದನುಜೆನಾಸಿಕವರಿದು ಖರದೂಷಣರ ತರಿದು ತಾನೊಲಿದು ಸತಿಗೆ ಗುಹೆಯಲ್ಲಿ ನಲಿದು26 ಬಂದು ರಾವಣ ಜಾನಕಿಯ ಕದ್ದೊಯ್ಯಲಂದು ಕೊಂದು ಮಾರೀಚನ ಗೃಧ್ರಗೆ ಮೋಕ್ಷಾವ [ನಿತ್ತು] 27 ಕಬಂಧನ ಗೆಲಿದು ಪಂಪಾತೀರದಿ ನಲಿದು ಶಬರಿಯಿತ್ತ ಫಲವನ್ನು ಸವಿದು ಹರಿಗೆ ತಾನೊಲಿದು 28 ಕುಟ್ಟಿ ವಾಲಿಯ[ನು] ರವಿಜಗೆ ಪಟ್ಟವ ಕಟ್ಟಿ ಸೃಷ್ಟಿಜಾತೆಯನರಸಲು ಕಪಿಗಳನಟ್ಟಿ 29 [ಭರದಿವಾನರ] ಕೈಲಿ ಉಂಗುರವಿರಿಸೆ ಆ ಮಾರುತಿ ಕಪಿಗಳುವೆರಸಿ ಜಾನಕಿ[ಯ]ನರಸೆ 30 ಶರಧಿಯನ್ಹಾರಿ ಸೀತೆಯ ನೋಡಿ ಗುರುತನು ತೋರಿ ದುರುಳನೊಡನ್ಹೋರಿ ಮಣಿಯ ತಂದನಾಧಾರಿ 31 ವನವನ್ನು ಮುರಿದು ಅಕ್ಷನ ತರಿದು ಅಸ್ತ್ರಕ್ಕೆ ಅ [ವನೊ]ಲಿದು ರಾವಣನೆದುರಲ್ಲಿ ನಲಿದು 32 ಪುರವೆಲ್ಲ ಸುಟ್ಟು ವಿಭೀಷಣನ ಗುಟ್ಟು ಬಾಲ ಶರಧಿಯೊಳಿಟ್ಟು ಕಪಿಗಳ ಸೇರಿದನಷ್ಟು 33 ಭಂಗಿಸಿ ಮಧುವನವ ಭರದಿಂದ [ರಾಮನೆಡೆಗೆ] ಲಂಘಿಸಿ ಮಾತೆಯ ಕಂಡೆವೆಂದೊಂದಿಸಿ ಮಣಿಯನಿರಿಸೆ 34 [ವರರಾಮ] ತಾ ನೋಡಿ ವ್ಯಸ ಮಾಡಿ ಹರಿಯನ್ನು ಕೂಡಿ ಆಲಿಂಗನೆ ಮಾಡಿ 35 ಹರಿಗನ ಕೂಡಿ ಭರದಿಂದಲೋಡಿ ಶರಧಿಯ ನೋಡಿ ಯೋಚನೆ ಮಾಡಿ 36 ವರುಣನ ವಂದಿಸಿ ವಿಭೀಷಣನ ಮನ್ನಿಸಿ ಶರಧಿಯ ಬಂಧಿಸಿ ಅಂಗದನ ಸಂಧಿಗೆ ಕಳುಹಿಸಿ 37 ಇಂದ್ರಜಿತುವೊಡನೆ ಛಂದದಿಂದಲೆ ಕಾದಿ ಬಂದ ಸರ್ಪಾಸ್ತ್ರವ ಖಗನಿಂದ ಬಿಡಿಸಿ 38 ಹಂಗಿಸಿ ರಾವಣನಕಿರೀಟವ ಮೈಯೆಲ್ಲ ನಡುಗಿಸಿ ಭಂಗಿಸಿ ತಾ ಜಗದೊಡೆಯನೆಂದೆನಿಸಿ 39 ಕುಂಭನಿಕುಂಭ ಕುಂಭಕರ್ಣರ ಕೊಂದು ಕುಂಭಿನಿಯೊಳು ನಿಂದನಂಬುಜನಾಭ 40 ಪತಿತಪಾವನ [ನನುಜನ] ಪಿತಾಮಹಾಸ್ತ್ರದಿ ಕಟ್ಟೆ ಹಿತದಿಂದೌಷಧಿ ತಂದ ಮಾರುತನ ಕುಮಾರ 41 ಮಾಯೆ ಸೀತೆಯನರಿ[ಯದೆ] ಮೋಹಪಡು ತ ಉ ಪಾಯದಿಂದಲೆ ಬಂದ ಮಾಯಾವಿಯೆಡೆಗೆ 42 ತಮ್ಮ ಲಕ್ಷ್ಮಣ ತಾನು ಹೆಮ್ಮೆಯಿಂದಲೆ ಕಾದಿ ಒಮ್ಮೆ [ಲೆ] ಅಸ್ತ್ರಗಳ ಸುಮ್ಮಾನದಿಂ ಬಿಟ್ಟು 43 ಸತ್ಯಮೂರುತಿ ಪವಿತ್ರ ತಾನಾದರೆ ಅಸ್ತ್ರವೆ ಶತ್ರುವ ಜಯಿಸಲೆಂದನಾಗ 44 ಎಂದು ಬಾಣವಬಿಡೆ ಇಂದ್ರಜಿತುವ ಕೊಂದು ಆ ನಂದದಿಂ ಲಕ್ಷ್ಮಣನ ಹೊಂದಿತಾ ಬಾಣ 45 ವಿರೂಪಾಕ್ಷ ಯೂಪಾಕ್ಷ ಶೋಣಿತಾಕ್ಪನ ಕೊಂದು ಮ ಕರಾಕ್ಷನ ಕೊಂದ ಮಹಾನುಭಾವರಾವಣನ 46 ಮೂಲಬಲವನ್ನೆಲ್ಲ ಲೀಲೆಯಿಂದಲೆ ನಿ ರ್ಮೂಲನ ಮಾಡಿ[ದ] ಲೀಲಾವಿನೋದದಿ 47 ಬಂಧುಗಳೆಲ್ಲರು ಮರಣ ಪೋಗಲು ಕಂಡು ಬಂದ ರಾವಣನು ತಾನು ಒಂದೆಮನಸಿನಲಿ 48 ಯಾರು ಇಲ್ಲದಾಗ ಚೋರತನದಲ್ಲಿ ನಾರಿಯ ಕದ್ದೊಯ್ದ ಧೀರ ಬಾರೆಂದ [ರಾಮ] 49 ಅಸ್ತ್ರಕ್ಕೆ ಅಸ್ತ್ರವ ಒತ್ತಿ ಬಿಡಲು ಆಗ ಮತ್ತೆ ಆಕಾಶವ ಮುತ್ತಿತು ಬಾಣ 50 ರಾಮರಾವಣರ್ಯುದ್ಧ ನೋಡಿ ಮಹಾಸುರರೆಲ್ಲ ಪ್ರೇಮದಿಂದಲೆ [ಹರಸಿದರು] ಆನಂದಗೂಡಿ 51 ಕತ್ತರಿಸಿದ [ರಾವಣನ]ಶಿರ ಮತ್ತೆ ಬೆಳೆಯಲು ನೋಡಿ ಚಿತ್ತದಿಂ ನೆನೆದು [ರಾಮ] ಬ್ರಹ್ಮಾಸ್ತ್ರದಿಂ ಕಡಿದ 52 ದಶಕಂಠನೆಂತೆಂಬ ಹಸನಾದ ವೃಕ್ಷವ ದಶರಥಸುತವಾತ ಬಂದು ಮುರಿಯಿತು 53 ರಾವಣನೆಂತೆಂಬ ವಾರಣ[ದ ಕೋಡ] ವೀರ ರಾ ಘವನೆಂಬ ಕೇಸರಿಯು ಮುರಿಯಿತು 54 ಪುಲಸ್ತ್ಯಪುತ್ರನೆಂಬ ರಾಜವೃಷಭವನ್ನು ಇಕ್ಷ್ವಾಕು [ಕುಲದ] ವ್ಯಾಘ್ರವು ಭಕ್ಷಿಸಿತಾಗ 55 [ಆಮಹಾ] ರಾಕ್ಷಸೇಂದ್ರನೆಂಬ ಜ್ವಲಿಸುವ ಅಗ್ನಿಯ [ಶ್ರೀ] ರಾಮಜೀಮೂತವು ಬಂದು ಕೆಡಿಸಿತು 56 ಸುರರೆಲ್ಲ ಜಯವೆಂದು ಪುಷ್ಪಗಳರಳನ್ನು ಕರೆಯಲು ಶಿರದಲ್ಲಿ ಧರಿಸಿದ [ತಾ] ಪರಮಪುರುಷನು 57 ರಾಕ್ಷಸೇಂದ್ರ [ವಿಭೀಷಣ]ಗೆ ಮಾಡಿ ರಾಜ್ಯಾ ಭಿಷೇಕವ ಮೂರ್ಜಗದಲಿ ಕೀರ್ತಿ ಪಡೆದ ರಾಘವ 58 ತಂದೆಗೆರಗಿ ಅಗ್ನಿತಂದ ಸೀತೆಯ ನೋಡಿ ಆ ನಂದದಿಂದಲೆ ಕೂಡಿನಿಂದ ರಾಘವನು 59 ಅಜಭವಸುರರೆಲ್ಲ ಭುಜಗಶಯನನ ನೋಡಿ ನಿಜವಾಗಿ ಸ್ತೋತ್ರ ಮಾಡಿದರು ನಿರ್ಮಲದಿ 60 ವೇದವನಿತ್ತು ಅಜನಿಗೆ ಭಾರವ ಹೊತ್ತು [ಆ] ಧಾರುಣಿಯ ತಂದು ಕಂಬದಿಂ ಬಂದು 61 ದಾನವ ಬೇಡಿ ಕ್ಷತ್ರಿಯಕುಲವನೀಡಾಡಿ ಜಾನಕಿಯ ತಂದು ಪ್ರಲಂಬನ ಕೊಂದು 62 ಕಾಳಿಯ ಒತ್ತಿ ಕುದುರೆಯ ಹತ್ತಿ ಜಗ ವೆಲ್ಲ ಸುತ್ತಿ ನಿಮ್ಮ ದರ್ಶನ ಮುಕ್ತಿ 63 ಜಗದೋದ್ಧಾರ ದುರಿತಕ್ಕೆ ದೂರ ಜಗಕೆ ಆಧಾರ ದುಷ್ಟರಿಗೆ ಕ್ರೂರ 64 ಪೃಥುವಿಯ ಪಾಲ ದಿಟ್ಟಗೋಪಾಲ ಸತ್ಯದಲಿ ಶೀಲ ರುಕ್ಮಿಣೀಲೋಲ 65 ಅರಿ ನಿ ಸ್ಸೀಮ ಭಕ್ತರಾಪ್ರೇಮ 66 ವಿಶಾಲನೇತ್ರ ಪರಿಪೂರ್ಣಗಾತ್ರ [ವ ರ] ಸೀತಾಕಳತ್ರ ಸುಗ್ರೀವಮಿತ್ರ 67 [ರಾಜ] ದಶರಥ ಬಾಲ ಜಾನಕೀಲೋಲ ಮೂರ್ಜಗಪಾಲ ಕೀರ್ತಿವಿಶಾಲ 68 ಸತ್ಯಮೂರುತಿ ಪವಿತ್ರ ನೀನೆ ಜಗಕೆ ಕರ್ತನೂ ಕಾರಣಮೂರ್ತಿಯೂ ನೀನೆ 69 ನಂದನಕಂದ ಮುಕುಂದ ಗೋವಿಂದ ಇಂದಿರಾರಮಣ ನೀನೆಂದು ಪೊಗಳಿದರು 70 ಪುಷ್ಪಕವನು ಏರಿ ಲಕ್ಷ್ಮೀಸಹಿತವಾಗಿ [ರಾಮ]<
--------------
ಯದುಗಿರಿಯಮ್ಮ
ಸುರಮುನಿವಂದ್ಯಜಯತುಗಣನಾಥ ಪ ಅಗಜೆಯರಸ ಕುಮಾರ ಹರಿಪೂಜಿತ ಜಗದ ಜೀವರುದ್ಧಾರ ಸಿದ್ಧಿ ವರದಾಕಾರ ಜಯತು ಜಯತು 1 ಗಮನ ಶಿರದಿ ಮಣಿಗಣ ಮಕುಟ ಜ್ವಲಿಸೆ ಗಜವದನ ಕರದಿ ಪಾಶಾಂಕುಶವ ಧರಿಸಿ ಭಕ್ತರಿಗಿಷ್ಠ ವರಗಳನು ಪಾಲಿಸುತಲಿರುವ ಗಣನಾಥ 2 ಅಡಿಗಡಿಗೆ ನೆನೆಗಡಲೆ ಗೊನೆಯ ಬಾಳೆಯ ಹಣ್ಣು ಮೂರ್ತಿ ಜಯತು ಜಯತು 3
--------------
ಕವಿ ಪರಮದೇವದಾಸರು
139-3ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಹರಿದಾಸ ಶ್ರೇಷ್ಠವರ ಕರುಣಿ ಪುರಂದರಾರ್ಯಗುರುಮಹಂತರು ಕೃಪಾನಿಧಿಯು ವಿಜಯಾರ್ಯಈರ್ವರನು ಸಂಸ್ಮರಿಸಿ ಗೋಪಾಲದಾಸರುಪರಮದಯ ತೋರಿದರು ಆಚಾರ್ಯರಲ್ಲಿ1ಹರಿದಾಸ ಪಂಥದಲಿ ಆಚಾರ್ಯರು ಸೇರಿಹರಿವಾಯು ಸೇವೆಯು ಸಜ್ಜನೋದ್ಧಾರಧರೆಯಲ್ಲಿ ಮಹತ್ಕಾರ್ಯ ಆಗುವುದು ಎಂದುಅರಿವರು ಗೋಪಾಲದಾಸರು ಮೊದಲೇ 2ಹರಿದಾಸಗೋಷ್ಠಿಯು ವೆಂಕಟಾಚಲ ಯಾತ್ರೆಚರಿಸೆ ವೆಂಕಟ ರಮಣನಾಲಯದಲ್ಲಿಶ್ರೀ ಶ್ರೀನಿವಾಸನು ಈ ಆಚಾರ್ಯಗೆನೇರವಾಗಿ ತಾನೆ ಕೊಟ್ಟಿಹ ಪ್ರಸಾದ 3ನೆನೆದರು ಈಗ ಗೋಪಾಲದಾಸಾರ್ಯರುತನ್ನ ರೂಪದಿ ಅಂದುಬಂದು ವಾತ್ಸಲ್ಯದಿಅನ್ನ ನಾಮಾವೆಂಕಟಕೃಷ್ಣ ಜಗದೀಶಅನ್ನ ಕೊಟ್ಟು ಒಲಿದಿಹನು ಆಚಾರ್ಯಗೆ 4ಪುರಂದರದಾಸಾರ್ಯರು ಒಲಿದು ದಯದಿ ತಾನೆಯಾರಿಗೆ ತಿಮ್ಮಣ್ಣಾರ್ಯರದ್ವಾರ ಉಪದೇಶಅನುಗ್ರಹ ನಾಮಾಂಕಿತವ ಇತ್ತರೋ ಆನರಸಿಂಹ ದಾಸಾರ್ಯರ ಪುತ್ರರು ಇವರು 5ಹರಿದಾಸರ ಪುತ್ರರಿವರು ಯೋಗ್ಯರು ಎಂದುಹರಿದಾಸಪದ್ಧತಿ ಆರಾಧನಾಕ್ರಮಶಾಸ್ತ್ರ ಜಿಜ್ಞಾಸೆಅನುಸಂಧಾನರೀತಿಯೂಅರುಪಿದರು ಆಚಾರ್ಯರಿಗೆ ದಾಸಾರ್ಯ 6ನೆರೆದಿದ್ದರೂ ಗೋಪಾಲದಾಸಾರ್ಯರಪರಮಪ್ರೀತಿ ಪಾತ್ರ ಈಮಹಂತರುವರದ ಗೋಪಾಲರು ತಂದೆ ಗೋಪಾಲರುಗುರುಗೋಪಾಲದಾಸಾದಿಸೂರಿಗಳು7ಭಾರತೀಪತಿ ಅಂತರ್ಗತಹರಿಶ್ರೀಶಗುರುಗಳ ಒಳಗಿದ್ದು ಜ್ಞಾನೋಪದೇಶಹರಿದಾಸತ್ವದ ವರನಾಮಾಂಕಿತವಕಾರುಣ್ಯದಿಈವಅಧಿಕಾರಿಗಳಿಗೆ8ವನರುಹೇಕ್ಷಣ ಯಜÕನಧಿಷ್ಠಾನ ಯಜÕನವನಜಪಾದ ದ್ವಯವು ಮನವಾಕ್ಕಿಲಿಹುದುಅನಿಲ ಸೋಕಿದ ತೂಲರಾಶಿಯಂದದಲಿಏನು ಮೈಲಿಗೆಯಾದರು ಸುಟ್ಟು ಪೋಪುವು 9ತುಳಸಿದಳ ನಿರ್ಮಾಲ್ಯ ಹರಿಗೆ ಅರ್ಪಿತವಾದ್ದುಜಲಸ್ನಾನ ತರುವಾಯ ಧ್ಯಾನ ಸ್ನಾನಜಲಜನಾಭನ ದಿವ್ಯನಾಮ ಸಂಕೀರ್ತನೆಎಲ್ಲ ಮೈಲಿಗೆ ದೋಷ ಪರಿಹರಿಸುವುವು 10ಶೀಲ ತನುಮನದಿಂದಗುರುಪರಮಗುರುದ್ವಾರಮಾಲೋಲ ಪ್ರಿಯತಮ ಜಗದೇಕ ಗುರುವೆಂದುಗಾಳಿದೇವನು ಮಧ್ವ ಭಾವಿಬ್ರಹ್ಮನ ಸ್ಮರಿಸಿಕಾಲಿಗೆ ಎರಗಿ ಶ್ರೀಹರಿಯ ಚಿಂತಿಪುದು 11ವಾಯುದೇವನ ಒಲಸಿಕೊಳ್ಳದ ಜನರಿಗೆಭಯಬಂಧ ನಿವೃತ್ತಿಯು ಸದ್ಗತಿಯು ಇಲ್ಲಮಾಯಾಜಯೇಶನಪರಮಪ್ರಸಾದವುವಾಯು ಒಲಿದರೆ ಉಂಟು ಅನ್ಯಥಾ ಇಲ್ಲ 12ಬಲಜ್ಞಾನಾದಿಗಳಲ್ಲಿ ಹ್ರಾಸ ಇಲ್ಲವು ಇವಗೆಎಲ್ಲ ಅವತಾರಗಳು ಸಮವು ಅನ್ಯೂನಶುಕ್ಲಶೋಣಿತಸಂಬಂಧವು ಇಲ್ಲವೇ ಇಲ್ಲಇಳೆಯಲಿ ಜನಿಸಿಹ ಹನುಮ ಭೀಮ ಮಧ್ವ 13ಮಾತರಿಶ್ವಸೂತ್ರಪವಮಾನ ಮುಖ್ಯ ಪ್ರಾಣತ್ರೇತೆಯಲಿ ಹನುಮ, ದ್ವಾಪರದಲಿ ಭೀಮಈತನೇ ಕಲಿಯುಗದೆ ಮಧ್ವಾಭಿದಾನದಿಬಂದಿಹನು ಸಜ್ಜನರ ಉದ್ಧಾರಕಾಗಿ 14ರಥನಾಭಿಯಲಿ ಅರವೋಲ್ ಪ್ರಾಣನಲಿ ಸರ್ವವೂಪ್ರತಿಷ್ಠಿತವು ಜೀವರ ದೇಹಕಾಧಾರತತ್ವದೇವಾದಿಗಳ ವರಿಷ್ಟ ಚೇಷ್ಟಕನುಈ ವಾಯುವೇ ಬ್ರಹ್ಮಧಾಮನಾಗಿಹನು 15ಬ್ರಹ್ಮಧಾಮನುಜೀವೋತ್ತಮವಾಯು ಆದುದರಿಂದಬ್ರಹ್ಮ ಸುಗುಣಾರ್ಣವ ಸರ್ವೋತ್ತಮ ವಿಷ್ಣೂನಅಹರ್ನಿಶಿಸ್ಮರಿಪುದು ಈ ಬ್ರಹ್ಮಧಾಮನಲಿಬ್ರಹ್ಮಪ್ರಸಾದ ಆಕಾಂಕ್ಷಿ ಅಧಿಕಾರಿ 16ಬ್ರಹ್ಮಗುಣಪೂರ್ಣಹರಿಗೋಪಾಲ ವೆಂಕಟನೆಬ್ರಹ್ಮಾಂಡ ಸರ್ವವ ಪಾಲಿಸುವ ಪ್ರಭುವುಅಹೋರಾತ್ರಿ ಏಳುದಿನ ಗಿರಿ ಎತ್ತಿ ಮಳೆ ತಡೆದಮಹಾದ್ರಿಧೃಕ್ ಅನ್ನಾದ ಅನ್ನದ ಜಗನ್ನಾಥ 17ಗೋವರ್ಧನಗಿರಿ ಎತ್ತಿ ಜನ ಪಶು ಕಾಯ್ದಶ್ರೀವರ ಗೋಪಾಲ ವಿಠ್ಠಲ ರುಕ್ಮಿಣೀಶದಿವ್ಯ ಮಂದಿರದಲ್ಲಿ ಭೀಮರತಿಯ ತೀರದಲಿದೇವ ನಿಂತಿಹ ಶ್ರೀನಿವಾಸ ಜಗನ್ನಾಥ 18ಶ್ರೀನಿವಾಸ ವೆಂಕಟನೆ ಗೋಪಾಲ ವಿಠ್ಠಲನುತನ್ನ ಭಕ್ತನಿಗೊಲಿದು ಪಂಢರೀಪುರದಿತಾನೆ ಬಂದು ಅಲ್ಲೇ ನಿಂತು ಭಕ್ತರು ಮಾಳ್ಪಗಾನ ಸೇವಾ ಕೇಳುತ ಪಾಲಿಸುತಿಹನು 19ಸರ್ವಕ್ಷರ ಉತ್ತಮನು ಸರ್ವೇಶಸರ್ವ ಐಶ್ವಯಾದಿ ಸಚ್ಛಕ್ತಿ ಪೂರ್ಣಶಿವ ಸುರಪುರಿಗೆ ಸುಖಜ್ಞಾನಾದಿಗಳನೀವದೇವಿ ಶ್ರೀ ಲಕ್ಷ್ಮೀಶ ಠಲಕ ವಿಠ್ಠಲನು 20ಜಡಭವ ಅಂಡದ ಸೃಷ್ಟ್ಯಾದಿ ಕರ್ತನಿವತಟಿತ್ಕೋಟಿಅಮಿತ ಸ್ವಕಾಂತಿಯಲಿ ಜ್ವಲಿಪಜಡಜ ಭವಪಿತ ಡರಕ ಜಗನ್ನಾಥ ವಿಠ್ಠಲನುನೋಡಲಿಕೆ ಕಾಣುವ ಅವನಿಚ್ಛೆ ದಯದಿ 21ಜಲದಲ್ಲಿ ಜಲರೂಪ ಜಲಜೇಕ್ಷಣನಿಹನುಜಲದಲ್ಲಿ ನೀ ಮುಳುಗಿ ಮೇಲೇಳುವಾಗಜ್ವಲಿಸುವ ಶಿರೋಪರಿ ಜಗನ್ನಾಥ ವಿಠ್ಠಲನುಒಳನಿಲುವ ಹೊರಕಾಂಬ ಎಲ್ಲರ ಸ್ವಾಮಿ 22ಇಂಥಾಸುವಾಕ್ಯ ಧಾರಾನುಗ್ರಹವಹಿತದಿ ಗೋಪಾಲದಾಸಾರ್ಯರು ಎರೆಯೆಮುದಬಾಷ್ಪ ಸುರಿಸುತ್ತ ಶ್ರೀನಿವಾಸಾಚಾರ್ಯಭಕ್ತಿಯಲಿ ನಮಿಸಿದರು ಗುರುಚರಣಗಳಿಗೆ 23ವಾಸುದೇವನ ಒಲಿಸಿಕೊಂಡ ಐಜೀಯವರುಈಶಾನುಗ್ರಹ ಪಡೆದ ದಾಸಾರ್ಯರುಗಳುಆ ಸಭೆಯಲಿ ಇದ್ದ ಹರಿಭಕ್ತ ಭೂಸುರರುಆಶೀರ್ವದಿಸಿದರು ಆಚಾರ್ಯರನ್ನು 24ಉತ್ಕøಷ್ಟ ನಿಗಮಘೋಷಗಳು ಮಂಗಳಧ್ವನಿಹರಿನಾಮ ಕೀರ್ತನ ಸುಸ್ವರ ಸಂಗೀತದಾರಿಯಲಿ ಎದುರ್ಗೊಂಡ ಶುಭಕರ ಶಕುನವುಹೊರಟರಾಚಾರ್ಯ ವಿಠ್ಠಲ ದರ್ಶನಕೆ 25ವಾರಿಜಾಸನ ಪಿತನು ಪೂರ್ಣಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರುಪುರಂದರವಿಜಯಗೋಪಾಲ ದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 26- ಚತುರ್ಥ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
139-4ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಗುರುಗಳು ಏಕಾಂತದಲ್ಲಿ ಇತ್ತ ಉಪದೇಶಮರೆಯದೇ ಅನುಸರಿಸಿ ಭೀಮರತಿಯನ್ನುಸೇರಿ ವಿಹಿತದಿ ಸಂಕಲ್ಪಾದಿಗಳ ಮಾಡಿನೀರಲ್ಲಿ ಇಳಿದರು ಶ್ರೀನಿವಾಸಾಚಾರ್ಯ 1ಸರ್ವ ಜಗತ್ಪಾಲ ಶ್ರೀ ಪಾಂಡುರಂಗವಿಠ್ಠಲನುಪ್ರವಾಹ ಸುಳಿಯಿಂದ ಬಡುಗಾತ್ರ ಭಕ್ತನ್ನಕಾಯ್ವುದಕೆ ಗಂಡಾ ಶಿಲಾ ನಿರ್ಮಿಸಿದ ಅಲ್ಲಿದೇವಗುರುಸ್ಮರಣೆಯಿಂ ಇಳಿದರಾಚಾರ್ಯ2ನರಸಿಂಹ ವಿಠ್ಠಲದಾಸರು ತಂದೆಯಗುರುಗಳು ಗೋಪಾಲ ವಿಠ್ಠಲ ದಾಸರಪರಮಗುರುಗಳುವಿಜಯವಿಠ್ಠಲ ದಾಸರಪುರಂದರದಾಸರಾಜರ ಸ್ಮರಿಸಿದರು3ತೀರ್ಥಾಭಿಮಾನಿಗಳ ಭಾರತೀಪತಿಯಪದುಮೆ ಪದ್ಮೇಶ ಫಂಡರಿ ನಾಥ ಹರಿಯಮೋದಚಿನ್ಮಯ ಜಗನ್ನಾಥನ ಸ್ಮರಿಸುತ್ತಉದಕಪ್ರವಾಹದೊಳು ತನುವ ಅದ್ದಿದರು4ಸೀನಪ್ಪ ಶ್ರೀನಿವಾಸ ಶ್ರೀನಿವಾಸಪ್ಪ ಈಶ್ರೀನಿವಾಸಾಚಾರ್ಯ ಒಂದು ಸಲ ಮುಳುಗೇಳೆತನುಗತ ಒಳ ಹೊರಗಿನಕಲುಷಕಳೆದವುಪುನಃ ಮುಳಗೇಳಲು ಸುಪವಿತ್ರರಾದರು 5ಪುನಃ ಮುಳುಗಿ ಎದ್ದು ಅ ಘ್ರ್ಯವ ಅರ್ಪಿಸಲುಇನನ ಮಂಡಲದಿ ವರವಾಯು ಅಧಿಷ್ಠಾನದಲಿಶ್ರೀ ನಾರಾಯಣ ಸರ್ವಜನ ಹಿತಕರನಆನಂದ ಚಿನ್ಮಾತ್ರ ವಪುಷನ್ನ ಸ್ಮರಿಸಿದರು 6ಋಕ್ಸಾಮ ವೇದಗಳಿಂದ ವಾಣೀವಾಯುಸುಖಪೂರ್ಣ ನಾರಾಯಣನ ಸ್ತುತಿಸುವರುಆಕಳಂಕ ಉನ್ನಾಮಸಾಮನಾಮ ಹೀಂಕಾರಶ್ರೀಕೃತಿಪತಿ ಪ್ರದ್ಯುಮ್ನಾದಿ ಸ್ವರೂಪ 7ಸಪ್ತಕಾಲದಿ ಸಪ್ತಸಾಮ ಪ್ರತಿಪಾದ್ಯನುಸಪ್ತಸ್ವರೂಪನು ಆದಿತ್ಯಾಂತಸ್ತಪ್ರದ್ಯುಮ್ನವಾಸುದೇವವರಾಹನಾರಾಯಣಅನಿರುದ್ಧ ನರಸಿಂಹ ಸಂಕರುಷಣ 8ಪರಮಗುರುವಿಜಯದಾಸಾರ್ಯರ ಪ್ರೇರಣೆಯಿಂದಗುರುಗಳು ಗೋಪಾಲದಾಸಾರ್ಯರುಅರುಪಿದಅನುಸಂಧಾನಕ್ರಮದಿಂದಲೇಗುರುತಮ ಸಮೀರನಲಿ ಹರಿಯ ಸ್ಮರಿಸಿದರು 9ಸೂರ್ಯನೊಳಿಪ್ಪಸಮೀರಅಧಿಷ್ಠಾನಸ್ಥಸೂರಿಜನ ಪ್ರಾಪ್ಯ ಋಕ್ ಸಾಮಾದಿಸ್ತುತ್ಯಸೂರ್ಯತೇಜಃ ಪುಂಜ ಸ್ಫೂರ್ತಿದ ಜಗತ್ಕರ್ತ ಶ್ರೀಶ್ರೀನಾರಾಯಣಗಘ್ರ್ಯ ಅರ್ಪಿಸಲು ಒಲಿದ 10ಝಗಝಗಿಪ ತೇಜಸ್ಸು ಶಿರೋಪಕಂಡರುಮೂಗಿನಿಂದೊಂದಡಿ ಶಿರದ ಮೇಲೆಜಗನ್ನಾಥವಿಠ್ಠಲ ಎಂದು ಪ್ರಜ್ವಲಿಸಿತುಹೇಗೆ ವರ್ಣಿಸುವೆ ಆ ಅದ್ಭುತ ದೃಶ್ಯ 11ಸರ್ವ ಜಗದ್ರಕ್ಷಕ ವಿಠ್ಠಲನು ತತ್ಕಾಲಪ್ರವಾಹವ ತಡೆಯಲು ನಿರ್ಮಿಸಿದ ಶಿಲೆಯುಪ್ರಜ್ವಲಿಪ ಈ ದಿವ್ಯ ಹರಿನಾಮ ಅಂಕಿತಕ್ಕೆಐವತ್ತು ಅಂಗುಲ ಹಿಂದೆ ನಿಂತಿತ್ತು 12ಕ್ಷಣಮಾತ್ರದೊಳಗೆ ಈತಟಿತ್ಕೋಟಿನಿಭಜ್ಯೋತಿಫಣೆಮುಂದೆ ನಿಂತಿತು ಆಗ ಆಚಾರ್ಯಚೆನ್ನಾಗಿ ನೋಡಿದರುಹರಿಇಚ್ಛಾಶಕ್ತಿಯಿಂಶ್ರೀನಿವಾಸವಿಜಯಗೋಪಾಲ ವಿಠ್ಠಲನ13ಶ್ರೀ ಶ್ರೀನಿವಾಸನೇವಿಜಯವಿಠ್ಠಲನಾಗಿಶ್ರೀ ಶ್ರೀನಿವಾಸ ಗೋಪಾಲ ವಿಠ್ಠಲನಾಗಿಶ್ರೀ ಶ್ರೀನಿವಾಸ ಶ್ರೀ ಜಗನ್ನಾಥ ವಿಠ್ಠಲನಾಗಿಶಿರಿ ಜಗನ್ನಾಥ ದಾಸಾರ್ಯರು ನೋಡಿದರು 14ಶ್ರೀ ಶ್ರೀನಿವಾಸನೆ ಪ್ರಸನ್ನನು ಆಗಿತೋರಿಹನು ಜಗನ್ನಾಥ ವಿಠಲನೆನಿಸಿತಿರುಪತಿ ಶ್ರೀನಿಧಿಯೇ ಪಂಡರಿ ವಿಠ್ಠಲನುಸೂತ್ರನೋಡಿ ನಸ್ಥಾನ ತೋಪಿ15ಶ್ರೀ ರುಕ್ಮಿಣೀಪತಿ ಪರಂಜ್ಯೋತಿ ಪರಂಬ್ರಹ್ಮಉರುಅಖಿಳಸಚ್ಛಕ್ತ ಜಗನ್ನಾಥ ವಿಠ್ಠಲಶಿರಿ ಜಗನ್ನಾಥದಾಸರ ಹೃದಯ ¥ದ್ಮದೊಳುಸೇರಿದನು ಜ್ವಲಿಸುತಿಹ ಸರ್ವೋತ್ತಮ ಅಲ್ಲಿ 16ಎಂಟುಅಕ್ಷರಮೂಲಮಂತ್ರದಿ ನಾರಾಯಣನವಿಠ್ಠಲ ಹಯಗ್ರೀವ ವೆಂಕಟೇಶಾದಿಷಡಕ್ಷರಿ ವಿಷ್ಣು ರಾಮ ಕೃಷ್ಣಾದಿಗಳಕ್ರೋಡನರಸಿಂಹಾದಿಗಳನು ಜಪಿಸಿದರು17ಗುರುಪರಮಗುರುಪೇಳ್ದ ರೀತಿಯಲಿ ಜಪಚರಿಸಿಶ್ರೀ ರುಕ್ಮಿಣಿ ವಿಠ್ಠಲ ಮಂದಿರಕೆ ಪೋಗಿಪುರಂದರಾರ್ಯರ ನಮಿಸಿಗುರುಪರಮಗುರುಗಳಸ್ಮರಿಸಿ ಒಳಪೊಕ್ಕರು ವಿಠ್ಠಲನ್ನ ನೋಡೆ 18ಶ್ರೀ ಮಧ್ವರಮಣ ನಿನ್ನ ಅದ್ವಿತೀಯ ಮಹಿಮೆಈ ಮಹೋತ್ತಮಕೃತಿಪುರಂದರದಾಸರದುಅಮಲ ಭಕ್ತಿಯಲ್ಲಿದನ್ನ ಅರ್ಥ ಅರಿತು ಪಠಿಸಿಶ್ರೀಮಂದಿರದೊಳು ಪ್ರವೇಶ ಮಾಡಿದರು 19ತ್ರಿಜಗದೀಶನಪಾದಪದ್ಮಗಳ ನೋಡುತ್ತನಿಜಭಕ್ತಿ ಭಾವದಲಿ ಸಾಷ್ಟಾಂಗ ನಮಿಸಿಅಜಭವೇಂದ್ರಾದಿ ಸುರವಂದ್ಯನ್ನ ಕೇಶಾದಿರಾಜೀವಪಾದಾಂತ ದರುಶನ ಮಾಡಿದರು20ಜ್ವಲಿಸುವ ಕಿರೀಟ ಸುಳಿಗುರುಗಳು ಫಣಿಯ ತಿಲಕಬಿಲ್ಲುವೋಲ್ ಸುಂದರ ಭ್ರೂ ಮುಖಕಮಲಜಲಜೇಕ್ಷಣ ಮುಗುಳುನಗೆಯು ತಟಿದಂದಿಪೊಳೆವ ಕುಂಡಲಕರ್ಣ ಕಂಬುಗ್ರೀವ 21ವನಮಾಲೆ ಎಳೆ ತುಳಸಿದಳ ಹಾರ ಕೊರಳಲ್ಲಿಘನಬಾಹು ವಿಸ್ತಾರವಕ್ಷ ಶ್ರೀವತ್ಸಸ್ವರ್ಣಮಣಿ ಗ್ರೈವೇಯಕೌಸ್ತುಭರತ್ನವುಕಣ್ಣಾರ ಕಾಣಲಾನಂದ ಸೌಂದರ್ಯ 22ಮೂರುಗೆರೆ ಉದರದಲಿವನರುಹನಾಭಿಯುಕರಗಳು ಕಟಿಯಲ್ಲಿ ಶಂಖಾರವಿಂದಪುರುಟಮಣಿ ಗಣಸೂತ್ರ ಪೀತಾಂಬರ ಉಡಿಸ್ಫುರದ್ರತ್ನ ನೂಪುರ ಸಮಪಾದದ್ವಯವು 23ತಟಿತ್ಕೋಟಿನಿಭ ತನ್ ಕಾಂತಿಯಲಿ ಜ್ವಲಿಸುವಸಾಟಿಯಿಲ್ಲದ ಸುಂದರಾಂಗ ಶ್ರೀರಮಣವಿಠ್ಠಲ ಕೃಪಾನಿಧಿ ಶರಣಜನ ಪಾಲನ್ನಹಾಡಿ ಸ್ತುತಿಸಿದರು ಜಗನ್ನಾಥ ದಾಸಾರ್ಯ 24ಫಣಿಪಶಾಯಿಯ ಅನಂತ ಪದ್ಮನಾಭನು ತನ್ನಆನಂದಲೀಲೆಯಲಿ ಜಗವ ಪಡೆಯುವನುಆನಂದಲೀಲೆಯಲಿ ಅವತಾರ ರೂಪಗಳತಾನೇ ಪ್ರಕಟಿಸಿ ಸಜ್ಜನರ ಪಾಲಿಸುವ 25ದೇಶಗುಣಕಾಲ ಅಪರಿಚ್ಛಿನ್ನನು ಅನಂತನುಶ್ರೀಶಸರ್ವೇಶ ಚಿನ್ಮಯನುಅನಘಐಶ್ವರ್ಯ ಪೂರ್ಣಜಗದೇಕ ಪಾಲಕನುಅಸಮ ಸರ್ವೋತ್ತಮನು ಸುಖಮಯನು ಸುಖದ 26ಮೀನಕೂರ್ಮಸ್ತ್ರೀ ಅಜಿತ ಧನ್ವಂತರಿಕ್ರೋಢಶ್ರೀನಾರಸಿಂಹ ವಟುಭೃಗು ರಾಮರಾಮಕೃಷ್ಣ ಜಿನಸುತ ಕಲ್ಕಿ ಠಲಕ ವೆಂಕಟರಮಣಆನಂದಚಿತ್ತನು ಅನಂತ ಅವತಾರ 27ದಾಸೋಹಂ ತವ ದಾಸೋಹಂ ಎಂದುದಾಸವರ್ಯರು ಬಿನ್ನೈಸಿ ಸ್ತುತಿಸಿದರುನಸುನಗುತ ವಾತ್ಸಲ್ಯದಿಂದ ವಿಠ್ಠಲನುವಿಶೇಷಾಪರೋಕ್ಷ ಅನುಗ್ರಹಿಸಿದನುದಯದಿ 28ಸೌದಾಮಿನಿಗಮಿತ ವಿದ್ಯುತ್ ಕಾಂತಿಯಿಂದದಿಕ್ಕು ವಿದಿಕ್ಕುಗಳ ರಂಜಿಸುವರೂಪದಿಂದ ಪಾಲ್ಗಡಲಲಿ ಆವಿರ್ಭವಿಸಿದ ಶ್ರೀಇಂದಿರೆಯೆ ರುಕ್ಮಿಣಿ ಸೌಂದರ್ಯಪೂರ್ಣೆ 29ಮಾಯಾಜಯಾಕೃತಿಶಾಂತಿ ಸೀತಾಲಕ್ಷ್ಮಿತೋಯ ಜಾಲಯ ಚಿತ್ಪ್ರಕೃತಿ ಭೂದುರ್ಗಾತೋಜಯಾಕ್ಷಿವೇದವತಿದಕ್ಷಿಣಾ ಶ್ರೀಜಯಂತಿ ಸತ್ಯಾರುಕ್ಮಿಣಿ ಸುಂಧುಕನ್ಯಾ 30ಸರ್ವ ಜಗಜ್ಜನನಿಯು ಸರ್ವ ವಿಧದಲಿ ಹರಿಯಸೇವಿಸುತಿಹಳು ಸದಾ ನಿತ್ಯಾವಿಯೋಗಿನಿದೇವದೇವೋತ್ತಮ ರಾಜರಾಜೇಶ್ವರನು ವಿಠ್ಠಲನುದೇವಿ ಶ್ರೀ ರಾಜರಾಜೇಶ್ವರಿಯು ರುಕ್ಮಿಣಿಯು 31ಜ್ವಲಿಸುವ ಮುತ್ತು ನವರತ್ನದಿ ಕಿರೀಟಒಳ್ಳೆ ಪರಿಮಳ ಹೂವು ಮುಡಿದಂತ ತುರುವುಫಾಲದಲಿ ಶ್ರೇಷ್ಠತಮ ಕಸ್ತೂರಿ ತಿಲಕವುಪೊಳೆವ ಪೂರ್ಣೇಂದು ನಿಭ ಮೂಗುಬೊಟ್ಟು 32ಅಂಬುಜಾಕ್ಷಿ ದಿವ್ಯ ಮುತ್ತಿನ ತೋಡುಗಳುಗಂಭೀರ ಸೌಭಾಗ್ಯದ ಕೃಪಾನೋಟಕಂಬುಕಂಠದಿ ಮಂಗಳಸೂತ್ರಕರಯುಗದಿಅಂಬುಜವರಕೊಡುವಅಭಯಹಸ್ತಗಳು33ಕಂಧರದಲಿ ಪರಿಮಳಕಮಲಮಾಲಾಪೀತಾಂಬರ ದಿವ್ಯ ಕುಪ್ಪಸ ಮೇಲ್ಪಟ್ಟೆವಸ್ತ್ರವು ಸ್ವರ್ಣಸರ್ವಾಭರಣ ಭೂಷಣವುಪಾದಉಂಗುರ ಪೆಂಡೆ ಕಂಡು ನಮಿಸಿದರು34ಜಗನ್ನಾಥ ವಿಠ್ಠಲನೂ ಜಗನ್ಮಾತೆ ರುಕ್ಮಿಣಿಯೂಜಗನ್ನಾಥದಾಸರಿಗೆ ಔತಣ ಮಾಡಿದ್ದುಜಗತ್ತಲ್ಲಿ ಭಕ್ತಜನರೆಲ್ಲ ಪೇಳ್ತಿಹರುಜಗದೀಶ ಪಂಢರೀ ವಿಠ್ಠಲನ ಮಹಿಮೆ 35ಕೇಶವ ನಾರಾಯಣಮಾಧವಗೋವಿಂದಶ್ರೀಶ ವಿಷ್ಣು ಮಧುಸೂದನ ತ್ರಿವಿಕ್ರಮಈಶ ವಾಮನ ಶ್ರೀಧರ ಹೃಷಿಕೇಶರಮೆಯರಸಪದ್ಮನಾಭದಾಮೋದರ36ಸಂಕರುಷಣ ವಾಸುದೆವ ಪ್ರದ್ಯುಮ್ನ ನಮೋಅಕಳಂಕ ಅನಿರುದ್ಧ ಪುರುಷೋತ್ತಮನಿಷ್ಕಳಅಧೋಕ್ಷಜನರಸಿಂಹಅಚ್ಯುತಶ್ರೀಕರ ಜನಾರ್ದನ ಉಪೇಂದ್ರ ಹರಿಕೃಷ್ಣ 37ರಮಾಪತಿ ರಮಾಯುತನು ಶ್ರೀಹರಿಯ ರೂಪಗಳಬ್ರಹ್ಮವಾಯು ವಾಣೀಭಾರತಿ ಉಮೇಶಉಮಾ ತತ್ವದೇವದಿಕ್ಪಾಲಕರು ಗಂಗಾಕರ್ಮಮಾನಿ ಪುಷ್ಕರಾದಿಗಳೊಳ್ ತಿಳಿದರು 38ಭೋಜನ ಪದಾರ್ಥದಲು ತದ್ಗತ ಶಬ್ದಂಗಳಲುಭೋಜ್ಯಗಳ ಬಡುಸುವರಲ್ಲೂ ಕ್ಷೇತ್ರದಲ್ಲೂಭೋಜಭಿಮಾನಿಗತ ಖಂಡಾಖಂಡಗನುಭಜನೀಯ ಸ್ಥೂಲಭುಕ್ ಅವ್ಯಯನ ಕಂಡರು 39ಕರುಣಾಬ್ಧಿ ಶ್ರೀ ಹರಿಯ ಔದಾರ್ಯ ಏನೆಂಬೆಶ್ರೀ ಶ್ರೀನಿವಾಸನು ಅಂದು ತಿರುಪತಿಯಲ್ಲಿಶಿರಿ ವಿಜಯಾರ್ಯರ ರೂಪದಿ ಪ್ರೇರಿಸಿಧಾರೆಯೆರಿಸಿದ ಆಯಸ್ ಗುರುಗಳ ಕೈಯಿಂದ 40ಶ್ರೀ ಶ್ರೀನಿವಾಸನ ಮಹಾದ್ವಾರಕೆದುರಾಗಿಹಾರೆ ಕಲ್ಲುಮಂಟಪ ಆಗ್ನೇಯ ದಿಕ್ಕುಎರಡನೆಯದೋ ಮೂರನೆಯದೋ ಅಂಕಣದ ಖೋಲಿಹರಿದಾಸರು ಇದ್ದ ಮುಖಾಮಿ ಬಿಡಾರ 41ಎಳೆಕೆಂಪು ರೋಜ ಊದಾವರ್ಣದಿ ಅಂಚುಬಿಳಿರೇಷ್ಮೆ ವಸ್ತ್ರವ ಮೇಲ್ ಹೊದ್ದುಕೊಂಡುಮಲಗಿ ಚಲಿಸದೆ ನಿತ್ರಾಣನಾಗಿದ್ದವಗೆಒಲಿದು ಆಯುರ್ದಾನ ಮಾಡಿಸಿದ ಕರುಣಿ 42ಗುರುಗಳು ಗೋಪಾಲದಾಸರ ರೂಪದಿಂದ ಬಂದುಶಿರಿವರನು ತಾನೇನೆ ಅನ್ನಪ್ರಸಾದಕರದಲ್ಲಿ ಇತ್ತನು ಅವನೇವೆಇಂದುಶಿರಿಸಹ ಅಮೃತಾನ್ನ ಔತಣವನ್ನಿತ್ತ 43ಶಿರಿಯ ವಾತ್ಸಲ್ಯ ದಯೆ ಏನೆಂದು ಪೇಳಲಿಚಾರುದೇಷ್ಣಾಹ್ವಯ ತನ್ನಸುತ ಈಗವರಗೋಪಾಲದಾಸರುಅವರಶಿಷ್ಯರಿವರೆಂದು ಪ್ರೀತಿಯಲಿ ಔತಣ ಮಾಡಿಹಳು 44ಈ ರೀತಿ ಹರಿಶಿರಿ ಇತ್ತ ಔತಣ ಮತ್ತುಹರಿಯ ಕೈಯಿಂದ ಹರಿಗರ್ಪಿತ ಮಾಲಾದಿಹರಿಪ್ರಸಾದವ ಕೊಂಡು ಫಂಡರಿಪುರದಿಂದಹೊರಡಲಾದರು ಜಗನ್ನಾಥದಾಸಾರ್ಯ 45ನರಸಿಂಹಾದಾಸಾರ್ಯರಾದ ತನ್ನ ತಂದೆಗೆಗುರುಗಳುಪುರಂದರದಾಸಾರ್ಯರೆಂದುಪರಮಗುರುವಿಜಯದಾಸಾರ್ಯರ ಗುರುಯೆಂದುಚರಣವಂದಿಸಿ ಹೊರಡೆ ಅಪ್ಪಣೆ ಕೊಂಡರು46ಪರಮಗುರು ವಿಜಯದಾಸಾರ್ಯರ ಸ್ಥಳಕೆಸ್ಮರಣೆ ಪೂರ್ವಕ ಮನಸಾ ಪೋಗಿ ಸನ್ನಮಿಸಿಗುರುಗಳಚರಣಆಕಾಂಕ್ಷಿಗಳು ತ್ವರಿತದಿಹೊರಟರು ಶ್ರೀ ಜಗನ್ನಾಥನ್ನ ಸ್ಮರಿಸುತ್ತ 47ವಾರಿಜಾಸನ ಪಿತನು ಪೂರ್ಣ ಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 48- ಇತಿ ಪಂಚಮ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
139-6ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಸ್ವರ್ಣಪುರಿಯಲಿ ಜಗತ್ ಪ್ರಖ್ಯಾತ ಸ್ವಾಮಿಗಳುಘನಮಹಿಮ ಸೂರಿವರ ಸತ್ಯಬೋಧಾರ್ಯರಸನ್ನಮಿಸಿ ಈ ಮಹಾಮೂರ್ತಿಗಳಾಹ್ವಾನದಿದಿನ ಕೆಲವು ನಿಂತರು ಜಗನ್ನಾಥ ಆರ್ಯ 1ಮೂರ್ಜಗವು ಅರಿವುದು ಸತ್ಯ ಬೋಧರ ಮಹಿಮೆವಾಜಿಮುಖ ಕೋಡ ನೃಹರಿ ರಾಮಪ್ರಿಯರುಪ್ರಜ್ವಲಿಪ ಸೂರ್ಯನ್ನ ರಾತ್ರಿಯಲಿ ತೋರಿಹರುಭಜಕರಸುರಧೇನುನಿವ್ರ್ಯಾಜ ಕರುಣೆ2ಶಿಷ್ಯರ ಸಹ ಜಗನ್ನಾಥದಾಸರು ತಮ್ಮನಿಯಮಗಳ ತಪ್ಪದೇ ಭಾಗವತಧರ್ಮಕಾಯವಾಙ್ಮನ ಶುದ್ಧಿಯಲಿ ಜ್ಞಾನ ಭಕ್ತಿಸಂಯುತದಿ ಮಾಳ್ಪುದು ಕಂಡರು ಮುನಿಗಳು 3ಹರಿದಾಸವರ ಜಗನ್ನಾಥದಾಸಾರ್ಯರಲಿಹರಿಯ ಒಲಿಮೆ ಅಪರೋಕ್ಷದ ಮಹಿಮೆನೇರಲ್ಲಿ ತಾ ಕಂಡು ಬಹುಪ್ರೀತಿ ಮಾಡಿದರುಹರಿಪ್ರಸಾದದ ಸವಿಯ ಅರಿತ ಆ ಗುರುಗಳು 4ಸ್ವರ್ಣಪುರಿಯಿಂದ ಜಗನ್ನಾಥದಾಸಾರ್ಯರುದಿಗ್ವಿಜಯದಿಂದಲಿ ಶಿಷ್ಯ ಜನಗುಂಪುಸೇವಕರ ಸಹ ಊರು ಊರಿಗೆ ಪೋದರುಆ ಎಲ್ಲ ಕ್ಷೇತ್ರದಲು ಧರ್ಮ ಪ್ರಚಾರ 5ಧರ್ಮ ಪ್ರಚಾರ ಹರಿಭಜನೆ ಪೂಜಾದಿಗಳುನಮಿಸಿ ಬೇಡುವವರ ಅನಿಷ್ಟ ಪರಿಹಾರಕರ್ಮಜ ದಾರಿದ್ರ್ಯಾದಿಗಳ ಕಳೆದು ಸಂಪದವಧರ್ಮ ಆಚರಣೆ ಬುದ್ಧಿಯ ಒದಗಿಸಿದರು 6ಸುರಪುರಾದಿ ಬಹು ಸ್ಥಳದಲ್ಲಿ ಪ್ರಮುಖರುಹರಿಭಕ್ತರು ಮಂಡಲೇಶ್ವರರು ಇವರಚರಣಕೆರಗಿ ಬಹು ಅನುಕೂಲ ಕೊಂಡರುಹರಿವಾಯು ಒಲಿಮೆ ಎಷ್ಟೆಂಬೆ ದಾಸರಲಿ 7ವರಪ್ರದ ವರದಾ ತೀರದಲಿ ಸಶಿಷ್ಯಧೀರೇಂದ್ರ ಯತಿವರ್ಯರ ಕಂಡು ನಮಿಸಿಆ ರಿತ್ತಿ ಕ್ಷೇತ್ರದಲಿ ವಾಸಮಾಡಿಹರುಧೀರೇಂದ್ರ ತೀರ್ಥರ ಅನುಗ್ರಹ ಕೊಂಡು 8ಸೂರಿಕುಲ ತಿಲಕರು ಉದ್ದಾಮ ಪಂಡಿತರುಧೀರೇಂದ್ರ ಗುರುಗಳು ಕಾರುಣ್ಯಶರಧಿಊರೊಳಗೆ ಹನುಮನ ಗುಡಿ ಇಹುದು ಪಾಶ್ರ್ವದಿಇರುವ ರಸ್ತೆಯ ಮೇಲೆ ದಾಸರ ಮನೆಯು 9ಸೋದಾಪುರ ಪೋಗೆ ತ್ರಿವಿಕ್ರಮ ದೇವರಮಂದಿರದ ಧ್ವಜಸ್ತಂಭದಲ್ಲಿವಾದಿರಾಜರು ಹಂಸಾರೂಢರಾಗಿರುವವರ್ಗೆವಂದಿಸಿ ತ್ರಿವಿಕ್ರಮರಾಯಗೆ ನಮಿಸಿದರು 10ಬದರಿಯಿಂದಲಿ ಈ ಸರಥ ತ್ರಿವಿಕ್ರಮನಭೂತರಾಜರ ಕೈಯಿಂದೆತ್ತಿ ತರಿಸಿಸೋದಾಪುರದಲ್ಲಿ ಪ್ರತಿಷ್ಠೆ ಮಾಡಿಹರುವಾದಿರಾಜರು ಭಾವಿಸಮೀರ ಲಾತವ್ಯ 11ಜಗನ್ನಾಥದಾಸರು ತ್ರಿವಿಕ್ರಮಗೆ ವಂದಿಸಿಅಗಾಧ ಸುಪವಿತ್ರೆ ಧವಳಗಂಗಾಸ್ನಾನಭಕುತಿಯಿಂ ಮಾಡಿ ಶಿವಹನುಮ ಕೃಷ್ಣರಿಗೆಬಾಗಿ ಅಶ್ವತ್ಥಸ್ಥರಿಗೆ ನಮಿಸಿದರು 12ಬಯಲಲ್ಲಿ ವೃಂದಾವನಗಳಲಿ ಗುರುಗಳಿಗೆವಿನಯದಿ ವಂದಿಸಿ ಭೂತನಾಥಗೆ ಬಾಗಿಶ್ರೀವ್ಯಾಸ ದೇವನಿಗೆ ಸನ್ನಮಿಸಿ ವೇದವೇದ್ಯರಿಗು ವಾದಿರಾಜರಿಗು ನಮಿಸಿದರು 13ಚತುದ್ರ್ವಾರ ಗೃಹದಲ್ಲಿ ಪಂಚವೃಂದಾವನವುಮಧ್ಯ ವೃಂದಾವನದಿ ಶ್ರೀವಾದಿರಾಜರುವೃಂದಾವನ ಮಹಿಮೆ ಚೆನ್ನಾಗಿ ತಿಳಿಯದಕೆಭಕ್ತಿ ಶ್ರದ್ಧೆಯಲಿ ನೋಡಿ ವೃಂದಾವನಾಖ್ಯಾನ 14ಹರಿಹರ ಕ್ಷೇತ್ರವು ಮದ್ದೂರು ಅಬ್ಬೂರುಪುರುಷೋತ್ತಮ ಬ್ರಹ್ಮಣ್ಯರ ವಂದಿಸಿಶ್ರೀರಂಗನಾಥನಿಗೆ ಎರಗಿ ಮಹಿಷೂರುಗರಳುಂಡ ಈಶ್ವರನ ಕ್ಷೇತ್ರಕ್ಕೆ ಪೋದರು 15ಕೇಶವನ ಪೂಜಿಸುತ ಪರ್ವತ ಗುಹೆಯಲ್ಲಿವಾಸಮಾಡುವ ಮಹಾ ಕರುಣಾಂಬುನಿಧಿಯುದಾಸಜನಪ್ರಿಯ ಶ್ರೀ ಪುರುಷೋತ್ತಮರಂಘ್ರಿಬಿ¸ಜಯುಗಳದಿ ನಾ ಶರಣು ಶರಣಾದೆ 16ಮಹಿಷೂರು ರಾಜ್ಯದ ಸರ್ಕಾರಿನಲ್ಲಿಮಹೋನ್ನತ ಸ್ಥಾನ ವಹಿಸಿದಧಿಕಾರಿಮಹಾಪಂಡಿತರುಗಳ ಸಭೆಯನ್ನು ಕೂಡಿಸಿವಿಹಿತದಿ ದಾಸರ ಪೂಜೆ ಮಾಡಿದನು 18ನಿರ್ಭಯದಿ ದಾಸರು ಘನತತ್ವ ವಿಷಯಗಳಸಭ್ಯರಿಗೆ ತಿಳಿಯದಿದ್ದವು ಸಹ ವಿವರಿಸಿದಸೊಬಗನ್ನು ಕಂಡು ವಿಸ್ಮಿತರು ಆದರು ಆಸಭೆಯಲ್ಲಿ ಕುಳಿತಿದ್ದ ದೊಡ್ಡ ಪಂಡಿತರು 19ಭಾಗವತಧರ್ಮದ ಪದ್ಧತಿ ಅನುಸರಿಸಿಭಗವಂತನ ಭಜನೆ ಸಭ್ಯರ ಮುಂದೆಆಗ ದಾಸರ ಅಪರೋಕ್ಷದ ಮಹಿಮೆರಂಗನೇ ಸಭ್ಯರಿಗೆ ತೋರಿಸಿಹನು 20ದಾಸರು ಶಿಷ್ಯರೊಡೆ ಯಾತ್ರೆ ಮಾಡಿದ್ದುಮೈಸೂರು, ಕೊಂಗು, ಕೇರಳ, ಚೋಳ, ಪಾಂಡ್ಯದೇಶಗಳು ಎಲ್ಲೆಲ್ಲೂ ಮರ್ಯಾದೆ ಸ್ವೀಕರಿಸಿಈಶಾರ್ಪಣೆ ಸರ್ವ ವೈಭವವೆನ್ನುವರು 21ಶ್ರೀಪಾದರಾಜರ ನಮಿಸಿ ವೆಂಕಟಗಿರಿಸುಪವಿತ್ರ ಘಟಿಕಾದ್ರಿ ಶ್ರೀಕಂಚಿಉಡುಪಿಶ್ರೀಪನ ಇಂಥಾ ಕ್ಷೇತ್ರಗಳಿಗೆ ಪೋಗಿಸ್ವಪುರಕ್ಕೆ ತಿರುಗಿದರು ಪೂಜ್ಯ ದಾಸಾರ್ಯ 22ಶ್ರೀಪಾದರಾಜರು ಪವಿತ್ರ ವೃಂದಾವನದಿಶ್ರೀಪತಿ ನರಹರಿ ಶಿಂಶುಮಾರನ್ನರೂಪಗುಣ ಕ್ರಿಯಾಮಹಿಮೆ ಧ್ಯಾನಿಸುತ ಇಹರುತಿರುಪತಿಮಾರ್ಗನರಸಿಂಹ ತೀರ್ಥದಲಿ23ಪುರುಷೋತ್ತಮರ ಸುತ ಬ್ರಹ್ಮಣ್ಯರ ಕುವರಶ್ರೀಕೃಷ್ಣ ಪ್ರಿಯತರ ವ್ಯಾಸಯತಿರಾಜಸೂರಿಕುಲ ಶಿರೋರತ್ನ ಶ್ರೀಪಾದರಾಜರಲಿಭಾರಿವಿದ್ಯೆಕಲಿತು ಪ್ರಖ್ಯಾತರಾದರು24ಹರಿರೂಪ ಗುಣಕ್ರಿಯ ಮಹಿಮೆಗಳ ಚೆನ್ನಾಗಿಪರಿಪರಿ ಸುಸ್ವರ ರಾಗದಲಿ ಕೀರ್ತನೆಸಂರಚಿಸಿ ಪಂಡಿತರು ಪಾಮರರು ಸರ್ವರಿಗುವರಸಾಧು ತತ್ವ ಬೋಧಿಸಿಹರು ದಾಸರು25ವಾರಿಜಾಸನ ಪಿತನು ಪೂರ್ಣ ಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 26- ಇತಿ ಸಪ್ತಮ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
139-7ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಹಂಸನಾಮಕ ಪರಂಬ್ರಹ್ಮ ವಿಧಿಸನಕಾದಿವಂಶಜ ಗುರುಗಳಲಿ ಜಗದೇಕ ಗುರುವುದಶಪ್ರಮತಿ ಈ ಮಧ್ವ ಮುನಿಯ ಪೀಳಿಗೆ ಜಾತವ್ಯಾಸಮುನಿ ಯೋಗಿವರ್ಯರಿಗೆ ಆ ನಮಿಪೆ 1ವ್ಯಾಸರಾಯರ ಮುಖ ಕಮಲದಿಂದುಪದೇಶದಾಸತ್ವ ಹೊಂದಿದರು ಪುರಂದರದಾಸಾರ್ಯದಾಸಶ್ರೇಷ್ಠರು ದಯಾನಿಧಿಯು ಈಪುರಂದರದಾಸಾರ್ಯರೇ ನಾರದರ ಅವತಾರ 2ಪುರಂದರಾರ್ಯರಹಸ್ತಕಂಜಸಂಜಾತರುಧೀರ ಭೃಗು ಅವತಾರ ವಿಜಯದಾಸಾರ್ಯಹರಿದಾಸವರ ವಿಜಯದಾಸರ ಶಿಷ್ಯರುಸೂರಿಸುರವರ್ಯ ಗೋಪಾಲ ದಾಸಾರ್ಯ 3ವಿಶ್ವೋಪಾಸಕರು ವರಗಣೇಶಾಂಶರುಈಶಾನುಗ್ರಹಿ ಗೋಪಾಲ ದಾಸಾರ್ಯಬೇಸರವಿಲ್ಲದೆ ಸ್ಮರಿಪ ಸಜ್ಜನರ ಪಾಲಿಪರುದಾಸತ್ವ ಜಗನ್ನಾಥದಾಸರಿಗಿತ್ತವರು 4ಸೂರಿಕುಲತಿಲಕನು ಜಗನ್ನಾಥ ದಾಸಾರ್ಯಈರೆರಡು ಮುಖ್ಯ ಜನ್ಮವಕೊಂಡಹಿಂದೆಗುರುಯುಕ್ ಪುರಂದರಾರ್ಯರವತ್ಸಗುರುರಾಯ ಸೇವಾರತಮದ್ರದೇಶಾಧಿಪ ಈ ರೀತಿ ಮೂರು 5ಮಾರೀಚ ದಿತಿ ಪೌತ್ರ ಮೊದಲನೆಯದಲ್ಲಿಧೀರ ಪ್ರಹ್ಲಾದನಿಗೆ ಭ್ರಾತ ಸಂಹ್ಲಾದಹರಿಅಧೋಕ್ಷಜನ್ನೊಲಿಸಿ ಕೊಂಬ ಮಾರ್ಗವ ಅರಿತನಾರದಾನುಗ್ರಹಿಯು ಉಪದೇಶಕೇಳಿ6ಹರಿಯ ಸೇವಿಸುವುದಕೆ ಶಿಷ್ಯರುದ್ಧಾರಕ್ಕೆಪ್ರಾರಬ್ಧ ಕರ್ಮವು ತೇದು ಹೋಗಲಿಕೆಧರೆಯಲ್ಲಿ ಪುನರ್ಜನ್ಮ ಕೊಂಡನು ಬ್ಯಾಗವಟ್ಟನರಸಿಂಹ ದಾಸರ ಮಗನೆನಿಸಿಕೊಂಡು 7ಸೂರಿಕುಲ ಶಿರೋಮಣಿ ವರದೇಂದ್ರ ಯತಿವರರುಶ್ರೀರಾಘವೇಂದ್ರರ ಸ್ಮರಿಪುದಿವರಲ್ಲಿಭಾರಿಪಂಡಿತ ಶ್ರೀನಿವಾಸ ಇವರಲ್ಲೋದಿಪೌರ ವಿದ್ಯಾರ್ಥಿಗಳಿಗೆ ಪಾಠ ಪೇಳ್ದ 9ಗರುವಕೊಳಗಾಗಿ ಈ ಶ್ರೀನಿವಾಸಾಚಾರ್ಯಕರುಣಾಶಾಲಿಗಳು ವಿಜಯದಾಸರನ್ನಕ್ಷುದ್ರ ಮಾತುಗಳಾಡಿ ಸ್ವೋತ್ತಮಾಪರಾಧದಿಂಘೋರವ್ಯಾಧಿ ಕೊಂಡು ಕುಗ್ಗಿದನು ತೀವ್ರ 10ಪರಿಪರಿ ಔಷಧೋಪಚಾರಗಳು ಸೋತುಹರಿಗುರು ಕ್ಷೇತ್ರಾಟನ ಸೇವಾದಿಗಳುಹರಿವಾಯುಸ್ತುತಿಕ್ಷೀರಅಭಿಷೇಕಫಲದಿಂಅರಿತನು ಅಪರಾಧಕ್ಷಮೆಬೇಡೆ ಹೊರಟ11ತ್ವರಿತದಲಿ ವಿಜಯಾರ್ಯರಲ್ಲಿ ಶರಣಾಗಿಕರುಣದಿ ಕ್ಷಮಿಸಿ ಉದ್ಧರಿಸಬೇಕೆಂದಕರುಣಿಸಮ ಚಿತ್ತರು ಶರಣನಿಗೆ ಹೇಳಿದರುಗುರುಗಳು ಗೋಪಾಲದಾಸರ ಕಾಣೆಂದು 12ತನ್ನಲ್ಲಿ ಗುರುಗಳು ಕಳುಹಿಸಿ ಬಂದಿಹನುದೀನನು ನಿಜ ಶರಣಾಗಿಹನು ಎಂದುಘನಮೂಮಂತ್ರ ಸಹ ಧನ್ವಂತರಿ ಜಪಿಸಿಧನ್ವಂತರಿಗೆ ಬಿನ್ನೈಸಿದರು ದಾಸರು 13ವಿಜಯಗೋಪಾಲ ವೆಂಕಟ ಜಗನ್ನಾಥನ್ನಪೂಜಿಸಿ ನೈವೇದ್ಯಾನ್ನ ಜೋಳದರೊಟ್ಟಿಭುಜಿಪುದಕೆ ಕೊಡುತ ಹರಿಗುರುಗಳ ಸ್ಮರಿಸುನಿಜ ಭಕ್ತಾಯುಷ್ಪ್ರದ ಸತ್ಪತಿ ಎಂದು 14ದ್ರವ ಮಾತ್ರ ಕೊಂಬ ಆ ರೋಗಿ ತಿಂದನು ರೊಟ್ಟಿದ್ರಾವಿಕ ಆಯಿತು ರೋಗ ದಿನ ದಿನದಿದೈವಾನುಗ್ರಹವಾಯ್ತುಗುರುಅನುಗ್ರಹದಿಂದಶ್ರೀ ವೆಂಕಟ ಶೈಲಾಧಿಪನು ಒಲಿದ 15ರೋಗ ನಿವೃತ್ತ ಆಚಾರ್ಯ ದಾಸರ ಸಹಪೋಗಿ ವೆಂಕಟಗಿರಿಯಲ್ಲಿ ಶ್ರೀನಿಧಿಗೆಭಕುತಿಯಿಂ ಸನ್ನಮಿಸಿ ಮಲಗೆ ನಿತ್ರಾಣದಲಿಬೇಗ ಗಜವರದಹರಿಬಂದು ತಾ ಪೊರೆದ16ಶ್ರೀನಿಧಿಃ ಸರ್ವ ಭೂತಾನಾಂ ಭಯಕೃದ್ಭಯನಾಶನನು ವಿಜಯಾರ್ಯರ ರೂಪದಲಿ ಪೇಳೆದಾನ ಎರೆದರು ಗೋಪಾಲ ದಾಸಾರ್ಯರುತನ್ನ ಆಯುಷ್ಯದಲಿ ನಲವತ್ತು ವರ್ಷ 17ರೊಟ್ಟಿ ಕೊಟ್ಟಾಗಲೇಗುರುಪ್ರೇರಣೆಯಂತೆಕೊಟ್ಟಿದ್ದರು ಆಯುಷ್ಯ ಆಚಾರ್ಯಗೆದಿಟವಾಗಿ ಜಗಕೆ ತಿಳಿಸೆ ವೆಂಕಟ ಈಗಕೊಡಿಸಿದನು ಆಯುರ್ದಾನದ ಧಾರೆ 18ಘನ್ನ ಹರಿಗುರು ಭಕ್ತಿ ಶಿಷ್ಯ ವಾತ್ಸಲ್ಯವಏನೆಂಬೆ ನಮ್ಮಗುರುಗೋಪಾಲ ದಾಸರದಾನಕ್ಕೆ ಎಣೆಯುಂಟೆ ಎಲ್ಲಾದರೂ ಯಾರೂತನ್ನ ಆಯುಷ್ಯವ ಕೊಡುವರೆ ಅನ್ಯರಿಗೆ 19ಏನೆಂಬೆಅನಿಮಿತ್ತ ಬಂಧುವೆಂಕಟಪತಿಯದೀನ ದಯಾಳತ್ವ ಆಚಾರ್ಯನಿಗೆತಾನೇವೆ ಗೋಪಾಲದಾಸರ ರೂಪದಿತಂದುಅನ್ನ ಕೊಟ್ಟ ಆಯುಷ್ಯವ ಕೊಡಿಸಿದವ 20ಶ್ರೀನಿವಾಸಾಚಾರ್ಯ ಹರಿತನ್ನ ದಾಸರಿಗೆತಾನೆ ಬಂದೊಲಿವುದು ನೇರಲ್ಲಿ ಕಂಡುತನ್ನನ್ನು ಹರಿದಾಸರಲಿ ಓರ್ವ ಮಾಡೆಂದುವಿನಯದಿಂ ಗೋಪಾಲದಾಸರ ಬೇಡಿದನು 21ವಿಜಯಗೋಪಾಲನ್ನವಿಜಯದಾಸರ ಸ್ಮರಿಸಿನಿಜ ಶಿಷ್ಯಾಚಾರ್ಯನಿಗೆ ಉಪದೇಶಿಸಿದರುಅಜಪದಾರ್ಹನು ಮಧ್ವನಲ್ಲಿ ಜ್ವಲಿಸುವಶ್ರೀತಶ್ರೀ ಜಗನ್ನಾಥ ಎಂದು ಧ್ಯಾನಿಸು ಎಂದು 22ಪೋಗಿ ಪಂಢÀರಪುರ ಭೀಮರತಿಯಲ್ಲಿಸ್ವಗುರು ಆದಿ ಹನ್ನೆರಡು ಸ್ಮರಿಸುಬಾಗು ಮಧ್ವಾಂತಸ್ಥ ಹರಿಗೆಮಜ್ಜನಮಾಡುಜಗನ್ನಾಥ ಹರಿತೋರ್ವ ಪೊಳೆವ ಹರಿನಾಮ 23ಝಗಿ ಝಗಿಪ ತೇಜಸ್ಸು ಶಿರೋಪರಿ ಕಂಡನುಮೂಗಿನೊಂದೊಂದಡಿ ಶಿರದ ಮೇಲೆ&ಟಜquo;ಜಗನ್ನಾಥ ವಿಠಲ&ಡಿಜquo; ನಾಮ ಪ್ರಜ್ವಲಿಸಿತುಜಗನ್ನಾಥ ತನ್ನಿಚ್ಛೆಯಿಂದಲೇ ತೋರ್ದ 25ಜಡಜ ಭವಪಿತ ಡರಕ ಜಗನ್ನಾಥ ವಿಠಲನನೋಡಿದರು ಜಗನ್ನಾಥದಾಸ ಆಚಾರ್ಯಪೊಡವಿಗೊಡೆಯನುವಿಜಯಗೋಪಾಲ ಜಗನ್ನಾಥವಿಠ್ಠಲ ಪ್ರಸನ್ನನಾದನು ಶ್ರೀನಿವಾಸ 26ವೆಂಕಟಗಿರಿನಾಥ ಪಂಢರಿ ಜಗನ್ನಾಥಅಕಳಂಕ ಗುಣನಿಧಿ ವಿಠಲಪ್ರಸನ್ನನಾಗಿದಾಸರು ಮೂಲ ಮಂತ್ರಾದಿಗಳಿಂದಏಕಾಗ್ರ ಚಿತ್ತದಲಿ ಭಜಿಸಿ ಸ್ತುತಿಸಿದರು 27ಪುರಂದರದಾಸಾರ್ಯರ ವಂದಿಸಿ ಅವರಿಂದವಿರಚಿತ ಶ್ರೀಮಧ್ವ ರಮಣ ನಿನ್ನಭಾರಿತತ್ವವಕೊಂಡಕೀರ್ತನೆ ಹಾಡುತ್ತಶ್ರೀಕರ ವಿಠಲನ ಮಂದಿರದೊಳು ಪೊಕ್ಕರು 28ವಿಶ್ವವಿಷ್ಣು ವಷಟ್ಕಾರಾದಿ ನಾಮನುದಾಸಪ್ರಿಯಜನ ವಿಠ್ಠಲ ರುಕ್ಮಿಣಿಯಕೇಶವಾದಿಪಾದಾಂತ ಸಂಸ್ತುತಿಸಿ ನಮಿಸಿದರುದಾಸರು ಶರಣು ತಾನೆನ್ನುತ ಮುದದಿ 29ಏನೆಂಬೆ ವಿಠ್ಠಲನ ರುಕ್ಮಿಣಿಯ ವಾತ್ಸಲ್ಯಅನುಪಮ ಔತಣ ದಾಸರಿಗೆ ಮಾಡಿಅನುತ್ತಮ ಪ್ರಸಾದ ಮಾಲಾದಿಗಳ ಕೊಟ್ಟುಅನುಗ್ರಹಿಸಿ ಕಳಿಸಿದರು ದಾಸರ ಸ್ವಪುರಕೆ 30ಮಳಖೇಡ ಕೃಷ್ಣ ಮಂತ್ರಾಲಯಕೆ ಪೋಗಿಅಲ್ಲಿರುವಗುರುದೇವತಾ ನಮನ ಮಾಡಿಗೋಪಾಲದಾಸ ಉದ್ಧಾರಕರ ಬಳಿಬಂದುಕಾಲಿಗೆರಗಿದರು ಕೃತಕೃತ್ಯ ಭಾವದಲಿ 31ವಾಸುದೇವಗೆ ಪ್ರಿಯ ಐಜಿ ಮಹಾತ್ಮರುವ್ಯಾಸತತ್ವಜÕ ಹರಿದಾಸ ಯತಿವರರುಸಸೋದರ ಪರಿವಾರ ಗೋಪಾಲದಾಸಾರ್ಯರಬಿಸಜಾಂಘ್ರಿ ಸನ್ನಮಸಿ ಹೊರಟರಲ್ಲಿಂದ 32ಚೀಕಲ ಪರಿವಿಯಲಿ ಏಕಾತ್ಮ ನರಹರಿಯಅಕಳಂಕ ದೃಢಭಕ್ತಿಯಿಂದ ಪೂಜಿಸುವಆ ಕರುಣಿ ವಿಜಯದಾಸರ ಕಂಡು ನಮಿಸಿಚಿಕ್ಕಂದಿ ಸ್ವಪುರ ಮಾನವಿಯಯೈದಿದರು 33ಮನುತೀರ್ಥ ತಟದಲ್ಲಿ ಮೀಸಲಾಗಿವರಿಗೆಅನ್ಯರಾಕ್ರಮಿಸದೇ ರಕ್ಷಿಸಲ್ಪಟ್ಟಮನೆಯಲ್ಲಿ ನರಹರಿಯ ಹನುಮನ್ನ ಪೂಜಿಸುತದಿನದಿನದಿ ಪ್ರವಚನ ಭಜನೆ ಮಾಡಿದರ 34ವಾರಿಜಾಸನ ಪಿತನು ಪೂರ್ಣಪ್ರಜÕರ ಹೃತ್‍ಸ್ಥಶಿರಿಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥದಾಸಾರ್ಯ ಶರಣು 35- ಅಷ್ಟಮ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
139-8ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಮಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಪ್ರಾಣೇಶ ಶ್ರೀಶವಿಠ್ಠಲ ದಾಸರುಗಳಿಗೆಇನ್ನು ಅನೇಕರಿಗೆ ಶಿಷ್ಯತ್ವ ಇತ್ತುಪುನಃ ಶಿಷ್ಯರ ಸಹ ಕ್ಷೇತ್ರಾಟನ ಮಾಡಿಸ್ವರ್ಣಪುರಿಯೈದಿದರು ಸತ್ಯಬೋಧರಲಿ 1ಕರ್ಜಗೀ ದಾಸಪ್ಪಗೆ ಶ್ರೀದಾಂಕಿತ ಕೊಟ್ಟುಶ್ರೀಜಗನ್ನಾಥದಾಸರು ಮುಂದು ಹೊರಟುಕರ್ಜಗೀ ಸಮೀಪದಲಿ ವರದಾತೀರದಲಿತ್ರಿಜಗಖ್ಯಾತ ಧೀರೇಂದ್ರರ ನಮಿಸಿದರು 2ಹರಿಹರ ಕ್ಷೇತ್ರವು ಮದ್ದೂರು ಅಬ್ಬೂರುಪುರುಷೋತ್ತಮ ಬ್ರಹ್ಮಣ್ಯರ ವಂದಿಸಿಶ್ರೀರಂಗಪಟ್ಟಣದಿ ರಂಗನ್ನ ಸೇವಿಸಿಗರಳುಂಡೇಶ್ವರನÀ ದರ್ಶನ ಮಾಡಿದರು 4ಮಂಡಲೇಶ್ವರರೇನು ರಾಜಪ್ರಮುಖರು ಏನುಪಂಡಿತೋತ್ತಮರೇನು ದಿವಾನುಗಳು ಏನುಅಂಡಕೋಟಿನಾಯಕಹರಿಯ ದಾಸರಿವರನ್ನಕೊಂಡಾಡಿ ಮರ್ಯಾದೆ ಮಾಡಿದರು ಎಲ್ಲೂ 5ಉಡುಗೊರೆಗಳು ಕನಕರತ್ನಾಭರಣಗಳುನಡೆಯಬಾರದು ಎಂದು ಪಲ್ಲಕ್ಕಿ ವಾಹನವುಈಡುಂಟೆ ಜಗನ್ನಾಥದಾಸರಿಗೆ ಮೈಸೂರುಮಾಡಿದ ಮರ್ಯಾದೆ ರಂಗನ ಅನುಗ್ರಹವು 6ಮೈಸೂರು ಕೊಂಗು ಕೇರಳ ಚೋಳ ಪಾಂಡ್ಯದೇಶಗಳಿಗೆ ಪೋಗಿಉಡುಪಿಕಂಚಿಶ್ರೀ ಶ್ರೀನಿವಾಸನ ಕ್ಷೇತ್ರ ಘಟಿಕಾಚಲವುಈಶಾನುಗ್ರಹವು ಮರ್ಯಾದೆ ಎಲ್ಲೆಲ್ಲೂ 7ಜಯಜಯ ಜಗತ್ರಾಣ ಮಧ್ವ ನಾಮಾಭಿದಪದ್ಯಾವಳಿಯು ಶ್ರೀಪಾದರಾಜರದುದಿವ್ಯ ಫಲಶ್ರುತಿ ಇದಕೆ ಜಗನ್ನಾಥದಾಸಆರ್ಯರು ಬರೆದಿಹರು ಸಜ್ಜನರು ಪಠಿಸಿ 8ತೀರ್ಥಾಭಿಮಾನಿಗಳ ತದಂತಸ್ಥ ಹರಿರೂಪಕ್ಷೇತ್ರ ವಾರ್ತೆಗಳನ್ನು ತತ್ವ ಬೋಧಿಸುವಕೀರ್ತನೆಗಳ ಮಾಡಿ ಹರಿಗರ್ಪಿಸಿದರುಓದಿದರೆ ಕೇಳಿದರೆ ಇಹಪರದಿ ಸುಖವು 9ಹರಿವಾಯು ಸುರವೃಂದ ಗುರುವೃಂದ ಪ್ರೀತಿಕರಭಾರಿಶುಭಫಲಪ್ರದವು ತತ್ವ ಸುವ್ವಾಲೆಹರಿಕಥಾಮೃತಸಾರ ವರ್ಣಿಸಲಶಕ್ಯವುಉರುಮಹಾಸೌಭಾಗ್ಯಾಕಾಂಕ್ಷಿಗಳು ಓದಿ 10ಹರಿಸಮೀರರು ತಾವೇ ಶ್ರೀಪಾದರಾಜರಲುಶಿರಿವ್ಯಾಸರಾಜ ಶ್ರೀವಾದಿರಾಜರಲುಪುರುಂದರದಾಸರಲು ನಿಂತು ಸ್ವಪ್ನದಿ ಪ್ರೇರಿಸೆಹರಿಕಥಾಮೃತಸಾರ ಬರೆದ ದಾಸಾರ್ಯ 11ಪ್ರಾರಂಭ ಹರಿಕಥಾಮೃತಸಾರ ಸ್ವಾದಿಯಲಿಶಿರಿವ್ಯಾಸವಾದಿರಾಜ ವೇದವೇದ್ಯರ ಮುಂದೆವರಚಿಪ್ಪಗಿರಿಯಲ್ಲಿ ವಿಜಯದಾಸರ ಮತ್ತುಶಿರಿಕೃಷ್ಣ ಸನ್ನಿಧಿಯಲಿ ಸುಶುಭಮಂಗಳವು 12ಗುರುಶ್ರೀಶವಿಠಲ ದಾಸಾರ್ಯರು ಕುಂಟೋಜಿರಾಯರೆಂಬುವ ಸೂರಿಕುಲ ತಿಲಕಾಗ್ರಣಿಯುಹರಿಕಥಾಮೃತಸಾರ ಮಂಗಳವ ಚಿಪ್ಪಗಿರಿಯಲ್ಲಿ ಮಾಡಿಹರು ನಮೋ ನಮೋ ಇವರ್ಗೆ 13ಹರಿಕಥಾಮೃತಸಾರ ಫಲಶ್ರುತಿ ಅನೇಕವುಸೂರಿವರ್ಯರು ಹರಿದಾಸರು ಹಾಡಿಹರುಭರಿತ ರಚನೆಗಳ ಗ್ರಂಥ ಪದ್ಯಂಗಳಬರೆದಿಹರು ಜಗನ್ನಾಥದಾಸಾರ್ಯಸೂರಿ 14ಶ್ರೀ ದಪ್ರಾಣೇಶಾದಿ ದಾಸಶಿಷ್ಯರ ಕೂಡಿಮೋದಮಯ ನರಹರಿ ಹನುಮಗುರುವೃಂದಆರಾಧಿಸಿ ಬರುವವರ ಉದ್ಧರಿಸುತ್ತಮುದದಿಂ ಕುಳಿತರು ಮಾನವೀಯಲ್ಲಿ 15ವರುಷ ಎಂಭತ್ತೆರಡು ತಿಂಗಳು ಒಂದುಆರುದಿನ ಮೂವತ್ತೇಳು ಘಟಿಕ ಅರ್ಧಧರೆಯಲ್ಲಿಹರಿಇಚ್ಛಾ ಸೇವಾರತರಾಗಿತೆರಳಿದರು ಜಗನ್ನಾಥದಾಸ ಹರಿಪುರಕೆ 16ಶಾಲಿಶಕ ಹದಿನೇಳು ನೂರಮೂವತ್ತೊಂದುಶುಕ್ಲ ಸಂವತ್ಸರ ಭಾದ್ರಪದ ಶುದ್ಧಮೂಲಾನಕ್ಷತ್ರ ರವಿವಾರ ನವಮಿಯಲ್ಲಿಮಾಲೋಲ ಸಹ ಜ್ವಲಿಸುತ್ತ ತೆರಳಿದರು 17ಅಮೃತ ಸೈಷಸೇತುಃ ನರಸಿಂಹ ಸ್ತಂಭದಲಿಇರುತಿಹನು ಅಲ್ಲೊಂದು ಅಂಶದಿ ಇಹರುಶ್ರೀ ರಾಘವೇಂದ್ರ ವೃಂದಾವನ ಶ್ರೀ ಸತ್ಯಬೋಧರ ಸಾನ್ನಿಧ್ಯ ಸ್ತಂಭದ ಮುಂದೆ 18&ಟಜquo;ಜ&ಡಿಜquo; ಯೆನಲು ಜಯ ಸಂಸಾರ ಭಯಹರವು&ಟಜquo;ಗ&ಡಿಜquo; ಯೆನಲು ಸರ್ವಪೀಡೆ ಪರಿಹಾರ&ಟಜquo;ನ್ನಾ&ಡಿಜquo; ಯೆನ್ನೆ ಸರ್ವೋತ್ತಮಸ್ವಾಮಿ ಸುಖವೀವ&ಟಜquo;ಥ&ಡಿಜquo; ಎನಲು ಅನ್ನಧನವಿತ್ತು ರಕ್ಷಿಸುವ 19ಜಯಜಯತು ಶ್ರೀ ಹಂಸವಿಧಿ ಮಧ್ವ ವ್ಯಾಸಮುನಿಜಯಜಯತುಪುರಂದರವಿಜಯದಾಸಾರ್ಯಜಯಜಯತು ಗೋಪಾಲದಾಸಾರ್ಯ ಜಯಜಯತುಜಯಜಗನ್ನಾಥ ದಾಸಾರ್ಯ ಜಯಜಯತು 20ವಾರಿಜಾಸನ ಪಿತನು ಪೂರ್ಣಪ್ರಜÕರ ಹೃತ್‍ಸ್ಥಶಿರಿಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥದಾಸಾರ್ಯ ಶರಣು 21- ನವಮ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು