ಒಟ್ಟು 209 ಕಡೆಗಳಲ್ಲಿ , 51 ದಾಸರು , 192 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನ್ನ ಕೈ ಬಿಡಬೇಡವೋ ಪ ರಿನ್ನಾರ ಕಾಣೆನು ಪನ್ನಗಶಯನನೆ ಅ.ಪ ತಂದೆ ಅನಾಥರ ಬಂಧು ಕಾಪಾಡಯ್ಯ 1 ಭುವನವಿಖ್ಯಾತನೆಂದೆನಿಸಿ ಕಾಯ್ದವ ನೀನೆ 2 ಸ್ಥಿರ ಸುಖದೊಳು ಕಾಯ್ದೆ ಕರುಣಿಗಳರಸನೆ 3 ಇಂಬಿಟ್ಟು ಭಕುತನ ಸಂಭ್ರಮದೊಳು ಕಾಯ್ದೆ 4 ಶರಣನ ಸಲಹಿದ ಪರಮ ಪುರುಷ ನೀನೆ 5 ಜೋಕೆಯೊಳ್ ನಿಜದಿ | ಸಾಕಿದೆ ಕರುಣಾಳು 6 ಕೃಪೆಯೊಳವಳಿಗೊಲಿಖಿಲವಸ್ತ್ರವನಿತ್ತೆ 7 ಸಂತೈಸಿ ಮತ್ತೆ ಪಾಂಡವರನ್ನು ಸತ್ಯಾತ್ಮರೆನಿಸಿದೆ 8 ಕುಡುತೆ ದಾಸ ವಿದುರನಿಗೆ ಲೇಸ ಮುಕ್ತಿಯ ಕೊಟ್ಟೆ 9 ವಂದ್ಯನೆಂದೆನಿಸಿದೆ ಇಂದಿರಾ ವರದನೆ 10 ದೃಢಭಕ್ತಿಗೊಲಿದಿತ್ತೆ ತಡೆಯದಿಷ್ಟಾರ್ಥವ 11 ನೀನೇನು ತೋರದೇನು || ಏನು ಗತಿಯೆನಗಿನ್ನು ನೀನೊಲಿಯದಿಲ್ಲಿನ್ನು 12 ಲೀಲೆಯಿಂದನುದಿನ ಸಲಹೊ ಸದಾನಂದ 13
--------------
ಸದಾನಂದರು
ಎನ್ನಪರಾಧವ ಮನ್ನಿಸಿ ಪೊರೆ ಸುಪ್ರ- ಸನ್ನ ಕುಮಾರ ದೇವ ಪ ನಿನ್ನಂಥ ಕರುಣಾಳು ಇನ್ನಿಲ್ಲ ಲೋಕದೊ-ಳೆನ್ನನುದ್ಧರಿಸು ದೇವಾಅ.ಪ ನೀರಜನೇತ್ರ ಮಯೂರವಾಹನ ಭಕ್ತೋ-ದ್ಧಾರ ಶಂಕರನ ಸುತಾ | ಶೂರಾಖ್ಯ ಪೂರ್ವಸುರಾರಿಗಳಂತಕ ಮಾರನಾಕಾರದಾತಾ , ಪುನೀತಾ 1 ಕಂಬು ಕಂಧರಶರಜ ಮು-ಕುಂದನ ಸಖ ಚಿದ್ರೂಪ ಪ್ರತಾಪ 2 ಈಶನ ಸುತ ಕಮಲಾಸನಾರ್ಚಿತ ರವಿ-ಭಾಸ ಸೇನಾನಿ ಧೀರಾ ದೋಷರಹಿತ ಪಾವಂಜೇಶನೆ ತವಪಾದ ದಾಸರ ಕುಲ ಉದ್ಧಾರ | ಗಂಭೀರ 3
--------------
ಬೆಳ್ಳೆ ದಾಸಪ್ಪಯ್ಯ
ಎಲೊ ರಂಗ ಎಲೋ ರಂಗನೇ ಸಲಹೊ ಶುಭಾಂಗನೆ ಪ ಜಯಕರ ಶ್ರೀಹರಿಯೆ ದಯವಂತನಾಗಯ್ಯ ಭಯ ಭಕ್ತಿಯಲಿ ನಿಮ್ಮ ದಯವ ಬೇಡುವೆನಯ್ಯ 1 ನಿನ್ನ ಭಕ್ತನು ನಾನು ಬನ್ನಬಡಿಸುವಿ ಯಾಕೋ ಮುನ್ನಿನ ಭಕ್ತರಂತೆನ್ನನು ಸ್ಮರಿಸಯ್ಯ 2 ಶರಣೆಂದು ವಿಭೀಷಣಗೆ ಕರುಣಿಸಿ ಲಂಕೆಯ ಸ್ಥಿರಪಟ್ಟ ಕೊಟ್ಟಂಥ ಕರುಣಾಳು ಮೊರೆ ಕೇಳೊ 3 ಯತಿವರನ ಯಾಗವ ಹಿತದಿ ರಕ್ಷಿಸಿದಂಥ ಪತಿತಪಾವನ ಎನ್ನ ಹಿತದಿಂದ ಕಾಯೆಲೊ 4 ಸತತ ನಿಮ್ಮಯ ಪಾದಸ್ತುತಿಯೊಳಿರಿಸಿ ಎನ್ನ ಮೃತ್ಯುಬಾಧ್ಹರಿಸಯ್ಯ ಕ್ಷಿತಿವರ ಶ್ರೀರಾಮ 5
--------------
ರಾಮದಾಸರು
ಏಕೆ ಚಿಂತಿಪೆ ನೀ ಎಲೆ ಕೋತಿಮನವೆ ಪಾದ ಗಟ್ಟ್ಯಾಗಿ ನಂಬದಲೆ ಪ ಹಿತದ ಭಕ್ತನು ಎಂದು ಮತಿಹೀನ ಭಸ್ಮಗುರಿ ಹಸ್ತವರವಿತ್ತ್ಹರನು ಮತಿದಪ್ಪೋಡುತಿರೆ ಗತಿನೀನೆ ಹರಿಯೆನಲು ಅತಿದಯದಿಂ ಶಿವನ್ನುಳಿಸಿ ಕೃತ್ತಿಮನ್ನಳದ ಹರಿ ಪತಿತಮಹಾತ್ಮರಿಯೆ 1 ಘುಡುಘುಡಿಸಿ ಹಿರಣ್ಯನು ಜಡಮತಿ ಹರಿಯೆಲ್ಲಿ ಗಡ ತೋರೀ ಕಂಬದಿ ಎಂದಾರ್ಭಟಿಸಿ ಬರಸೆಳೆಯೆ ನಡುನಡುಗಿ ಪ್ರಹ್ಲಾದ ಜಡಜಾಕ್ಷ ಪೊರೆಯೆನಲು ಮೂಡಿ ಕಂಬದಿ ಖಳನ ಒಡಲ ಬಗೆದದ್ದರ್ಹಿಯೆ 2 ಕುರುಪನ ಸಭೆಯೊಳಗೆ ಮೊರೆಯಿಟ್ಟ ದ್ರೌಪದಿಗೆ ಕರುಣದಕ್ಷಯವಿತ್ತು ಪೊರೆದ ಪರಮಾತ್ಮ ಕರುಣಾಳು ಶ್ರೀರಾಮ ಚರಣದಾಸರ ನೆರ ಅರೆಘಳಿಗೆ ಬಿಟ್ಟಿರನು ನಿರುತ ನೀ ಸ್ಮರಿಸೋ 3
--------------
ರಾಮದಾಸರು
ಏನೆಂದರು ಸರಿ ಬೀಳ್ವದು ನಮ್ಮ ಶ್ರೀನಿವಾಸನ ಮಹಿಮಾನುಸಂಧಾನದಿಂ ಪ. ಶಯ್ಯದಿಂದೇಳುತ ಶಾರೀರದಾಲಸ್ಯದಿಂ- ದಯ್ಯ ಅಪ್ಪ ಅಮ್ಮನೆಂಬುವರಾ- ಜೀಯನ ಗುಣನಾಮಕನುವಾಗಿ ತಿಳಿದರೆ ಕಯ್ಯ ಪಿಡಿದು ಕಾವ ಕರುಣಾಳು ರಾಜಗೆ 1 ಅಪತತ್ವದಲಿ ನಿಂತು ಅಪ್ಯಾಯನ ಮಾಳ್ಪ ತಪ್ಪನೆಂಬುದಕಿದು ಕಾರಣವು ಮುಪ್ಪುರಹರನಯ್ಯನು ಪೆತ್ತ ದೊರೆಯನು ಒಪ್ಪಲಾರದೆ ಅಮ್ಮ ಅಯ್ಯನೆಂಬುವ ನಾಮ 2 ಕುರಿಯೊ ಮರಿಯೊ ಎಂಬ ದಾತಗೆ ಭಿನ್ನ ಹ- ವರವುದು ಹರಿಗೆ ಮೂಜನವೆಲ್ಲವು ಕುರಿಯಂತೆ ವಶ್ಯವಾಗಿರುವುದು ಭವಬಂಧ ಹರಿದ ಜ್ಞಾನದ ಮುಳ್ಳಮುರಿಯೆಂಬ ಭಾವದಿಂ 3 ಮೂರಾರು ಪುರಾಣ ಮೂಲ ರಾಮಾಯಣ ಭಾರತ ಪಂಚರಾತ್ರಾದಿಗಳು ಸೇರಿ ಪೇಳುವುದೆಲ್ಲ ಸಿರಿಯರಸನ ನಾಮ ವಾರಿಧಿಯೊಳಗಿನ ತೆರೆಗಳಂದದಿ ತೋರ್ಪ 4 ನಾದ ಬಿಂದು ವರ್ಣದಾತನುದಾತ್ತ ಸ್ವ ರಾದಿ ಸಕಲ ಶಬ್ದ ವಾಚ್ಯ- ನಾದ ಶ್ರೀದೇವಿಯರಸ ವೆಂಕಟರಾಜನರಿವಂಥ ಹಾದಿಯ ತಿಳಿದರಗಾಧ ಮಹಿಮಾ ನಿನ್ನ 5
--------------
ತುಪಾಕಿ ವೆಂಕಟರಮಣಾಚಾರ್ಯ
ಏನೇನು ಬೇಕಯ್ಯ ಶ್ರೀ ಹರಿಯೆ ನಿನಗೇ ನೀನೆ ಗತಿಯೆಂದು ಸರ್ವಸ್ವವೊಪ್ಪಿಸುವೇ ಪ ತರಳನಾಗಿಹ ಧೃವನು ಘೋರ ತಪವಂಗೈಯ ಹರುಷದಿಂ ಬಾಲಕಗೆ ವರ ಪದವಿಯಿತ್ತೇ ಕರುಣಾಳು ಶ್ರೀ ಹರಿಯೇ ನಿಂನ ಮೆಚ್ಚಿಸಲಿಕ್ಕೆ ಉರುತರದ ತಪವು ಬೇಕೇನೊ ನಾನರಿಯೇ 1 ದೊರೆಯು ರುಕುಮುಂಗದನು ಯೇಕಾದಶೀವ್ರತವ ಸರಸದಿಂದಾಚರಿಸೆ ನಿಜಭಕ್ತಗೊಲಿದೇ ಕರುಣಾಳು ಶ್ರೀಹರಿಯ ನಿನ್ನ ಮೆಚ್ಚಿಸಲಿಕ್ಕೆ ಉರುತರದ ವ್ರತವು ಬೇಕೇನೊ ನಾನರಿಯೇ 2 ತರಳ ಪ್ರಲ್ಹಾದ ತಾ ಹರಿನಾಮ ಕೀರ್ತಿಸಲು ದುರುಳ ತಾತನ ಕೊಂದು ಕಂದನನು ಪೊರೆದೆ ಕರುಣಾಳು ಶ್ರೀ ಹರಿಯೆ ನಿಂನÀ ಮೆಚ್ಚಿಸಲಿಕ್ಕೆ ಉರುತರದ ಕೀರ್ತನೆಯು ಬೇಕೋ ನಾ ನಾನರಿಯೇ 3 ಭರದಿ ದುಶ್ಯಾಸನನು ಮಾನವಂ ಕಳಯುತಿರೆ ಸರಳೆಗೇ ನೀನೊಲಿದು ಅಕ್ಷಯವನಿತ್ತೇ ಕರುಣಾಳು ಶ್ರೀಹರಿಯೆ ನಿನ್ನ ಮೆಚ್ಚಿಸಲಿಕ್ಕೆ ಉರುತರದ ಸ್ತೋತ್ರಗಳು ಬೇಕೋ ನಾನರಿಯೇ4 ಧರಣಿಸುತೆ ಜಾನ್ಹಕಿಯೆ ಹುಡುಕಲ್ಕಿ ವಿಕ್ರಮದಿ ಶರಧಿಯನು ದಾಟಿದಗೆ ಭರದಿಂದಲೊಲಿದೇ ಕರುಣಾಳು ಶ್ರೀಹರಿಯ ನಿನ್ನ ಮೆಚ್ಚಿಸಲಿಕ್ಕೆ ಉರುತರದ ದಾಸ್ಯತ್ವ ಬೇಕೋ ನಾನರಿಯೇ 5 ನಿರುತದಾಸರು ನಿನ್ನ ಸೇವೆಯನು ಮಾಡಲ್ಕೆ ಕರುಣದಿಂ ದಾಸರಿಗೆ ಪ್ರತ್ಯಕ್ಷನಾದೇ ಕರುಣಾಳು ಶ್ರೀ ಹರಿಯ ನಿನ್ನ ಮೆಚ್ಚಿಸಲಿಕ್ಕೆ ಉರುತರದ ಸೇವೆ ಬೇಕೇನೊ ನಾನರಿಯೇ 6 ವರ ದುರ್ವಾಪುರದಲ್ಲಿನಿತ್ತು ಮೆರೆಯುವಿಯೆಂದು ಸಿರಿ ಚನ್ನಕೇಶವನೆ ಪರಮಾತ್ಮನಂದೂ ಕರುಣಾಳು ಶ್ರೀ ಹರಿಯೆ ನಿನ್ನ ನಂಬುತಲಿಂದು ಮರೆಹೊಕ್ಕೆ ಕಾಯೋ ಶ್ರೀ ಈಶ ಸರ್ವೇಶಾ 7
--------------
ಕರ್ಕಿ ಕೇಶವದಾಸ
ಏಳಯ್ಯ ಸುಬ್ರಹ್ಮಣ್ಯ ಬೆಳಗಾಯಿ- ತೇಳಯ್ಯ ಸುಬ್ರಹ್ಮಣ್ಯ ಕೋಳಿ ಕೂಗುವದು ವನಜಾಳಿಸೌರಭ್ಯ ತಂ- ಗಾಳಿ ಬೀಸುವದು ಕರುಣಾಳು ತವಚರಣವ- ಕೀಲಾಲಜಾಪ್ತನೀಗ ಕಾಲಕಾಲದಿ ಭಕ್ತಜಾಲವನು ಜಯಗೊಳಿಸಿ ಪಾಲಿಸುವ ಪಾರ್ವತೀಬಾಲ ಭಾಸ್ಕರತೇಜ ಲೋಲಲೋಚನೆಯ ಸಹಿತ 1 ಇಂದು ಸಂಕ್ರಮಣ ದಿನ ಬಂದಿಹರು ಭಕ್ತಜನ- ವೃಂದ ಕಾಣಿಕೆ ಕಪ್ಪ ತಂದು ನಿಂದಿಹರು ಬಲ- ಸಲಹೆಂದು ಸ್ತುತಿಸೆ ಕಂದರ್ಪಸಾಹಸ್ರ ಸೌಂದರ್ಯ ಮೂರ್ತಿಯನು ಚಂದದಿಂ ಕಾಣುವಾನಂದ ಮಾನಸರು ಗೋ- ಸ್ಕಂದ ಕರುಣಾಸಿಂಧುವೆ 2 ಪೃಥ್ವಿಯೊಳಗುತ್ತಮ ಪವಿತ್ರ ಪಾವಂಜಾಖ್ಯ ಕ್ಷೇತ್ರಾಧಿವಾಸ ಲೋಕತ್ರಯ ವಿಭೂಷಣ ಪ- ಕಾರ್ತಿಕೇಯ ನಮೋಸ್ತುತೇ ಭೃತ್ಯವತ್ಸಲ ಭವಭಯಾಬ್ಧಿಕುಂಭಜ ಭಜಕ- ಪ್ರೋತ್ಸಾಹ ಪಾವನಚರಿತ್ರ ಸುತ್ರಾಮನುತ ಮೃತ್ಯುಂಜಯನೆ ಪುತ್ರನೆ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಏಳಯ್ಯ ಸುಬ್ರಹ್ಮಣ್ಯ ಬೆಳಗಾಯಿ- ತೇಳಯ್ಯ ಸುಬ್ರಹ್ಮಣ್ಯ ಕೋಳಿ ಕೂಗುವದು ವನಜಾಳಿಸೌರಭ್ಯ ತಂ- ಗಾಳಿ ಬೀಸುವದು ಕರುಣಾಳು ತವಚರಣವ- ಕೀಲಾಲಜಾಪ್ತನೀಗ ಕಾಲಕಾಲದಿ ಭಕ್ತಜಾಲವನು ಜಯಗೊಳಿಸಿ ಪಾಲಿಸುವ ಪಾರ್ವತೀಬಾಲ ಭಾಸ್ಕರತೇಜ ಲೋಲಲೋಚನೆಯ ಸಹಿತ1 ಇಂದು ಸಂಕ್ರಮಣ ದಿನ ಬಂದಿಹರು ಭಕ್ತಜನ- ವೃಂದ ಕಾಣಿಕೆ ಕಪ್ಪ ತಂದು ನಿಂದಿಹರು ಬಲ- ಸಲಹೆಂದು ಸ್ತುತಿಸೆ ಕಂದರ್ಪಸಾಹಸ್ರ ಸೌಂದರ್ಯ ಮೂರ್ತಿಯನು ಚಂದದಿಂ ಕಾಣುವಾನಂದ ಮಾನಸರು ಗೋ- ಸ್ಕಂದ ಕರುಣಾಸಿಂಧುವೆ2 ಪೃಥ್ವಿಯೊಳಗುತ್ತಮ ಪವಿತ್ರ ಪಾವಂಜಾಖ್ಯ ಕ್ಷೇತ್ರಾಧಿವಾಸ ಲೋಕತ್ರಯ ವಿಭೂಷಣ ಪ- ಕಾರ್ತಿಕೇಯ ನಮೋಸ್ತುತೇ ಭೃತ್ಯವತ್ಸಲ ಭವಭಯಾಬ್ಧಿಕುಂಭಜ ಭಜಕ- ಪ್ರೋತ್ಸಾಹ ಪಾವನಚರಿತ್ರ ಸುತ್ರಾಮನುತ ಮೃತ್ಯುಂಜಯನೆ ಪುತ್ರನೆ3
--------------
ತುಪಾಕಿ ವೆಂಕಟರಮಣಾಚಾರ್ಯ
ಏಳು ಏಳು ಏಳು ಲೋಕದ ಒಡಿಯನೆ | ಏಳು ಗೋವಳರಾಯ ಗೋಪೇರಿಗತಿ ಪ್ರಿಯಾ | ಅಪ್ರಾಕೃತ ಕಾಯಾ ಸುರಮುನಿ ಗೇಯಾ | ಏಳು ಗೋಪಾಲಕೃಷ್ಣ ಪ ಪುರಂದರನ ದಿಶೆಯಲ್ಲಿ ಗರುಡಾಗ್ರಜನು ಬರಲು | ಶರಧಿ ತೆರೆ ತಗ್ಗಿದವು ಉರಗ ಪೆಡೆ ಪಸರಿಸಿದಾ | ಹರಿದು ಪೋಯಿತು | ಕಾಳ | ಸುರ ವೈರಿಗಳು ಅಡಗಲು | ಅರಳಿದವು ಅರವಿಂದ | ಝಂಕರಿಸಿ ಶುಕಪಿಕ ಮೃಗಾದಿ ಯೆ-| ಕರುಣಾಳುಗಳ ದೇವನೆ 1 ಮೇರೆ ತಪ್ಪಿ ಬಂದಾ ರಥಸಹಿತ ಭಾಸ್ಕರನು ದಿಶದಿಶೆಗೆ ಕಿರಣಗಳ | ಹರಹಿಕೊಳುತಾ | ಹರಿ ಗುರುವೆ ಪೇಳಲಳವೆ | ಕಲಿಸಿ ಮಂದಿರದೊಳಗೆ ಎಳೆಬಾಳೆ | ಶೃಂಗರಿಸಿದರು ಅರವಿಂದನಾಭ ಚೆಲುವ 2 ಪರಮ ಮಂಗಳವಾದ ದ್ವಾರ ದ್ವಾರಗಳಿಗೆ | ವಿರಚಿಸಿತು ಕಳಿತೆ ತೋರಣ ಕನ್ನಡಿ ಮಲಕು | ಭರದಿಂದಲಿ ಬಿಗಿದು ಮೇಲ್ಕಟ್ಟು ಚಿತ್ತರದ ಗೊಂಬೆ | ಪರಿಚಾರವು ವಪ್ಪಲು | ಹಿರಿದು ಹೂವಿನ ಮಾಲೆ ಕಟ್ಟಿದವು | ಮಕರವು ತುರ ತೊ ಗರು ಪೊಗಳು ಕಾದೋದಕವು ತಂದಿರೆ | ಅರಸಾದ ಆದಿದೈವ3 ಪರಮ ಭಾಗವತರು ಬತ್ತೀಸರಾಗದಲಿ | ಸ್ವರಮಂಡಲಾ ತಾಳ ತಂಬೂರಿ ಕಿನ್ನುರಿಗ ಸರವೇಣಿ ನಾನಾ ಗೀತ | ಪರಿ ಪರಿ ಕೊಂಡಾಡುತಿರಲು | ಕುಣಿಯುತಿದೆ ಸುರನಿಕರ ಪರಿಪಾಲಿಕ 4 ಸುರ ನರೋರಗ ಯಕ್ಷಗರುಡ ಸಿದ್ಧ ವಿದ್ಯಾ | ಕಿನ್ನರ ಸಾಮ | ಪರಮೇಷ್ಟಿ ವಾಲಗಕೆ ಬಂದು ಎ- ದುರು ನಿಂದು ತುತಿಪನಾಹಕೊ ಭರಿತಾಭರಣವಿಟ್ಟು | ಸರಸ್ವತಿ ಭಾರತಿ ಗಿರಿಜೆ ಸುರನಾರಿಯರು ತಮ್ಮ | ಹರಿವಾಣ | ದಾರುತಿಯ ಪಿಡಿದು ನಿಂದೈಧಾರೆ ಶರಣಾಗತ ವತ್ಸಲಾ 5 ಕರಿ ತುರಗ ರಥಪಾಯದಳವು ದಟ್ಟಡಿಯಾಗಿ | ನೆರದಿದೆ ಸಭೆಯಲಿ ಸಪ್ತಾಂಗದವರುಂಟು | ಅರಿ ಶಂಖಗದಾ ಪದುಮಖೇಟ ನಂದನ ಮುಸಲಾ | ಪರಶು ನೇಗಲ ಸುಶಕ್ತಿ ಪರಿಪರಿಯ ದಿವ್ಯಾಯುಧವ ತಮತಮಗೆ | ಧರಿಸಿ ಸಂತೋಷದಲಿ ದಾತಾರ ನಿನ್ನಯ ಬರುವ ಹಾರೈಸಿ | ವೈರಿಗಳು ನೋಡುತಲಿ ಹಾರೆ ಕುರುವಂಶ ವಿನಾಶಕಾ 6 ಸುರಿಗೆ ಪಾರಿಜಾತದ ಮಲ್ಲಿಗೆ | ಸುರವನ್ನೆ ಬಕುಳ ಪಾರಿ ಭದ್ರ ಸಂಪಿಗೆ | ಮರುಗ ಮಲ್ಲಿ ಜಾಜಿ ಕಾಂಜಿ ಶಾವಂತಿಗೆ ಕರವೀರ ನಂದಾವರ್ತ | ಅರಗುಂದ ಕುಂತಾತಸಿದವನ ಮುಡಿವಾಳ | ಈರವಂತಿಕೆ ಕೇತಿಕಾ ಸರ್ವ ಕುಸುಮಗಳಿಗೆ | ಶಿರೋರತನವಾದ ಎಳದುಳಸಿ ಹಾರಗಳಿಗೆ | ಅರಿಗಳ ಮಸ್ತಕಾಂಕುಶಾ7 ಚರಣದಂದಿಗೆ ಪೆಂಡೆ ಪೊಂಗೆಜ್ಜಿ ಮಣಿಮಯದ | ಸರಪಳಿಯು ತೊಡೆದು ಬಿರುದಾವಳಿಗಳು ಪೀತಾಂ | ಕಾಂಚಿ ದಾಮಾ | ಸರಿಗೆ ನ್ಯಾವಳಹಾರ ತುಳಸಿ ಕೌಸ್ತಭ ಪದÀಕ | ಸಿರಿವತ್ಸ ಕನಕಕುಂಡಲ ನೊಸಲ ಮೃಗನಾಭಿ | ಕರದಾಭೂಷ ಫಣಿಮಕುಟ ಧರಿಪಾ ದೇವಿ ನಿನ್ನ | ದರುಶನ ಭಕ್ತರಿಗೆ ಲಾಭಾ 8 ಸಿರಿ ಏಳಲೀಸಳೊ ಹತ್ತವತಾರವನು ಧರಿಸಿದ ದಣವಿಕಿಯ | ಕರಿ ಕಾಯಲಿ ಬಂದ ಭರದ ಉನ್ನತವು | ರಣದೊಳಗೆ ಪಾರ್ಥನ್ನ ರಥದ ತುರುಗವ ನಡಿಸಿದ ಲಜ್ಜೆಯ | ಸುರತ ಕ್ರೀಡೆಯಲಿ ಸ್ತ್ರೀಯರೋಳಾದಂಜಿಕಿಯೊ | ವರವ ಕೊಡು ಎಂದು ಬಂದು ಮಮ ಭಕ್ತರ ಭಯವೊ | ಸಿರಿ ವಿಜಯವಿಠ್ಠಲ ಉಡುಪಿಯ ಕೃಷ್ಣ ನಿನಗೆ | ದರಿಲ್ಲವೆಂಬೊ ಘನವೊ9
--------------
ವಿಜಯದಾಸ
ಏಳು ನಿದ್ದೆಯು ಸಾಕು ರಂಗನಾಥ ಪ ತಾಳು ತಾಳೆನಲೇಕೆ ಮಾಂಗಿರಿ ನಿವಾಸ ಅ.ಪ ಜಗವ ಪೋಷಿಪಚಿಂತೆ | ಮಿಗಿಲಾದ ದೇವಂಗೆ ಸೊಗಸಾದ ನಿದ್ದೆಯಾಪರಿವುಂಟೇ ನಗಜಗವ ಪೊತ್ತವನ ಬಳಗವು ಏನೆಂಬೇ ನಗೆಬೇಡ ಕಣ್ತೆರೆಯೊ ಮಾಂiÀiಕಾರ 1 ನಿದ್ದೆಗೆಡಿಸಲು ಪಾಪ ಇದ್ದರೆ ನನಗಿರಲಯ್ಯ ಸದ್ದಿಲ್ಲದಿಹುದೇ ಭಕ್ತರು ಹಾಡಿ ಕುಣಿಯೇ ಒದ್ದಮುನಿಗಾ ಪಾಪವಿದ್ದಿತೇ ಕರುಣಾಳು ಎದ್ದು ಬಾ ಬಾರೈಯ ಮಾರನಯ್ಯ 2 ಬಲ್ಲೆ ಬಲ್ಲೆನು ನಿನ್ನ ಚೆಲ್ಲಾಟಗಳನೆಲ್ಲ ಬೆಲ್ಲವನು ಕಂಡಿರುವೆ ಮುತ್ತದಿಹುದೇ ಸಿರಿ ಮಾಂಗಿರಿಯ ರಂಗ [ಒಲ್ಲೆನದೆ ಈಯಯ್ಯ ಎನಗು ಬೆಲ್ಲದಸವಿಯ]3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಏಳು ಶ್ರೀ ಗುರುರಾಯ ಏಳು ಪರಮಪ್ರಿಯ ಏಳು ಮಂಗಳಕಾಯ ಭಕ್ತಜನಪ್ರಿಯ ಏಳಯ್ಯ ಬೆಳಗಾಯಿತು ಪ. ಬಳಲಿ ಬಂದಿರುವಂಥ ಬಾಲ ಶಿಷ್ಯಂದಿರನು ಸುಲಲಿತದ ಪ್ರಿಯ ವಾಕ್ಯದಿಂದ ಸಂತೈಸಿ ಮಲಿನ ಮನವನೆ ತಿದ್ದಿ ಸುಜ್ಞಾನ ಬೋಧಿಸಿ ನಳಿನನಾಭನ ಪಾದಕೊಪ್ಪಿಸಲಿಬೇಕು 1 ಶುದ್ಧಾಂತಃಕರಣದಿಂ ಪೊದ್ದಿರುವ ಶಿಷ್ಯರನು ಉದ್ಧಾರಗೈಯಲಂಕಿತಗಳಿತ್ತು ಸಾರ ತತ್ವಾಮೃತವನುಣಿಸಿ ಪದ್ಮನಾಭನ ದಾಸರೆಂದೆನಿಸಬೇಕು 2 ಎದ್ದು ಸ್ನಾನವಗೈದು ತಿದ್ದಿ ನಾಮವನ್ಹಚ್ಚಿ ಪದ್ಮಾಕ್ಷಿ ತುಳಸಿ ಮಾಲೆಗಳ ಧರಿಸಿ ಗದ್ದುಗೆಯೊಳು ಕುಳಿತು ಹೃದ್ವನಜಸ್ಥಾನ ಪದ್ಮಪಾದವ ಮನದಿ ಸ್ಮರಿಸಬೇಕು 3 ಹಿಂದ್ಯಾರು ಪೊರೆದರು ಮುಂದ್ಯಾರು ಕಾಯ್ದರು ತಂದೆ ನೀವಲ್ಲದಿರೆ ಪೊಂದಿದರಿಗೆ ತಂದೆ ಮುದ್ದುಮೋಹನದಾಸವರ ಎಮ್ಮೊಳು ಕುಂದನೆಣಿಸದೆ ಕಾಯೊ ಕರುಣಾಳು ಗುರುವೆ 4 ಆಪನ್ನ ರಕ್ಷಕನೆ ಗೋಪಾಲಕೃಷ್ಣವಿಠ್ಠಲನಂಘ್ರಿ ಕಮಲ ಕೃಪಾಳು ತೋರು ನೀ ಕೃಪೆಮಾಡು ಕಣ್ತೆರದುಶ್ರೀ ಪದ್ಮಜಾತರೊಂದಿತನ ದಾಸಾರ್ಯ 5
--------------
ಅಂಬಾಬಾಯಿ
ಓ ದೇವ ನೀನೆಂಥ ಕರುಣಾಳೊ ಮಾದೇವ ನೀನೆಂಥ ಕರುಣಾಳೊ ಪ ಕಾಲನ ಕಾಲಲೊದ್ದು ಬಾಲನಿಗಾಯುಷ್ಯ ಪಾಲಿಸಿದೆ ನೀನೆಂಥ ಕರುಣಾಳೊ 1 ಸುರೇಂದ್ರ ಪ್ರಮುಖರ ಪೊರೆಯಲು ಗರಳವ ಕೊರಳೊಳು ಧರಿಸಿದೆ ಕರುಣಾಳು 2 ಘೋರ ಭವಾಂಬುಧಿ ತಾರಣೋಪಾಯವ ಬೀರಿದೆ ಜಗಕೆಲ್ಲ ಕರುಣಾಳು 3 ಕ್ಷೀರವ ಬೇಡಲು ಕ್ಷೀರೋದಧಿಯನಿತ್ತೆ ಪೋರನಿಗೆ ಇನ್ನೆಂಥ ಕರುಣಾಳು 4 ಶ್ರೀಕಾಂತ ಹಿತ ಸಖ ಶ್ರೀಕಂಠ ನಿನ್ನಂಥ ನಾ ಕಾಣೆ ಧರೆಯೊಳು ಕರುಣಿಗಳ 5
--------------
ಲಕ್ಷ್ಮೀನಾರಯಣರಾಯರು
ಕಟ್ಟಿದಳು ಕಂಕಣವ ನಾರಿ ಲಕುಮಿವಿಷ್ಣು ಮೂರುತಿ ಕರಕೆ ವೈಕುಂಠರಾಣಿ ಪ.ಅವಿಯೋಗಿಯಾದ ಶ್ರೀ ಸತಿಯ ಸೇವೆಗೆ ಒಲಿದುಪವಮಾನನೊಡೆಯ ವರ ಬೇಡೆನ್ನಲುಭುವನೇಶ ನಿನ್ನ ಕೃಪೆ ಪೂರ್ಣಳಾನೆಂದೆನುತಹವಣೆಯಿಂ ಕೇಳ್ದಳೆರಡೊರವ ಲೋಕೋದ್ಧಾರಿ 1 ಶರಣಾಗತ ರಕ್ಷಕನು ಎಂಬ ಬಿರುದೊಂದುಶರಣಾಗತ ವತ್ಸಲನು ಎಂಬುದೊಂದುಧರಿಸು ಈ ಬಿರುದು ಹರಿ ವರವು ಅದೆ ಎನಗೆನಲುಕಿರುನಗೆಯ ನಗುತ ಒಲಿದನು ಸತಿಯ ನುಡಿಗೆ 2 ನಾರಿರನ್ನಳೆ ನಿನ್ನ ಕೋರಿಕೆಯ ತೆರನಂತೆಆರಾಧನೆಯ ಮಾಳ್ಪ ಶರಣರಿಗೆ ಒಲಿವೆತೋರಲೀ ಬಿರುದುಗಳು ನಿನ್ನ ಕರಗಳಲೆಂದುಶ್ರೀ ರಮೆಯ ಕರಕೆ ಕಂಕಣಗಳನೆ ತೊಡಿಸಿದನು 3 ನಾರಿ ಈ ಕಂಕಣವ ನಿನಗ್ಯಾಕೆ ಅರ್ಪಿಸಲುತೋರದೆನ್ನುತ ನಟನೆಗೈವನಿತರೊಳ್‍ಕ್ಷೀರಸಾಗರ ಮಥನ ಕಾಲದಲಿ ಜನಿಸುತಲಿಶ್ರೀ ರಮೇಶಗೆ ಒಲಿದು ಮಾಲೆ ಹಾಕಿದಳು 4 ಭಕ್ತಿ ಪ್ರೇಮಕೆ ಒಲಿದು ಭಕ್ತವತ್ಸಲ ಅಭಯಹಸ್ತವನು ಶಿರದಲ್ಲಿ ಇಡಲು ನಾರಿಚಿತ್ತದಲಿ ಆನಂದಪುಳಕಾಂಕುರಿತಳಾಗಿಚಿತ್ತದೊಲ್ಲಭನ ಮುಖಕಮಲ ವೀಕ್ಷಿಸುತ 5ಈಕ್ಷಿಸಲು ಶ್ರೀ ಹರಿಯ ಕರಕಮಲ ಲಕ್ಷಣವಲಕ್ಷ್ಮಿ ಬೆರಗಾಗಿ ಮುನ್ನಿನಕಿಂತ ಅಧಿಕಅಕ್ಷಯದ ಸಾಮುದ್ರಿ ಲಕ್ಷಣವ ಕಾಣುತಲಿಪಕ್ಷಿವಾಹನನ ಮೊಗ ಈಕ್ಷಿಸುತ ನಗುತ 6 ನೀನಿತ್ತ ವರದಾನ ಕಂಕಣದ ಬಂಧನವನಿನಗರ್ಪಿಸುತ ಧನ್ಯಳಾಗ್ವೆನೆಂದುಆನಂದದಲಿ ಮಾಡಿ ಕಂಕಣವ ಕಟ್ಟಿದಳು 7 ಜಗವನಾಡಿಸುವಂಥ ಸೂತ್ರವನೆ ಹದಿನಾರುಬಗೆ ಕಲೆಗಳೆಂಬ ಎಳೆ ಮಾಡಿ ಹಳದಿಮಿಗೆ ಕಾಂತಿ ಬಣ್ಣದಲಿ ಮಂಗಳಾಕಾರದಜಗಕೆ ವಿೂರಿಸಿದಂಥ ಕಂಕಣವ ಕಟ್ಟಿದಳು 8 ಕರಿ ಕೆಂಪು ಬಿಳುಪು ವರ್ಣವು ಪ್ರಳಯ ಕಾಲದಲಿಇರಲಾರದೆಂದು ತ್ಯಜಿಸುತ ಹಳದಿಯವರಕಾಂತಿ ಬಣ್ಣವನು ಪೂಸಿ ಮಂಗಳವದನೆಸರದಿಂ ಮೂರು ಗ್ರಂಥಿಯ ಬಿಗಿದಳಾಗ 9 ಪರಿ ಏನು ಪೇಳೆಂದು ಸರಸದಲಿ ಹರಿ ಕೇಳೆ ಹರಿಣಾಕ್ಷಿಯು ಪರಮ ಪುರುಷನೆ ನೀನು ಅರಿಯದಿನ್ನುಂಟೆ ಕೇಳ್ ಸರಸವಾಣಿಯಲಿ ಪೇಳ್ಪೆನು ದೇವ ದೇವ 10 ಒಂದು ಮುಕ್ತಿಯ ಗ್ರಂಥಿ ಒಂದು ಕರ್ಮದ ಗ್ರಂಥಿ ಒಂದು ಅಜ್ಞಾನ ನಿನ್ನ ಬಂಧಕರ ಗ್ರಂಥಿ ಇಂದಿರೇಶನೆ ಇದರ ಗುಟ್ಟು ಅರುಹುವÉ ಕೇಳು ಒಂದೊಂದು ವಿವರಗಳ ವಂದ್ಯ ಬ್ರಹ್ಮಾದಿ 11 ಕರ್ಮಗ್ರಂಥಿಯು ಬ್ರಾಹ್ಮಣರ ಯಜ್ಞದುಪವೀತ ಕರ್ಮ ಬಿಡುಗಡೆ ಇದು ಯತಿರತ್ನಗಳಿಗೆ ನಿಮ್ಮ ಬಂಧಕರ ಗ್ರಂಥಿ ಅಜ್ಞಾನಿ ಹೃದಯಕ್ಕೆ ನಿಮ್ಮ ಕೃಪೆಯಿಂದ ಬಿಡುಗಡೆ ಕೇಳು ಜೀವರಿಗೆ 12 ಮುಕ್ತರಿಗೆ ಸಂಸಾರ ಮತ್ತೆ ಬರದಂದದಲಿ ಕತ್ತರಿಸಿ ಲಿಂಗವನು ಕಾಯ್ದು ನಾನು ಚಿತ್ತಜಾಪಿತನೆ ನಿನ್ನಸ್ತಕೊಪ್ಪಿಸಿ ಬಿಗಿದು ಸುತ್ತಿ ಕಗ್ಗಂಟು ಹಾಕಿರುವೆ ನೀ ಗ್ರಂಥಿ 13 ಬಿಚ್ಚಲಾರೆಯೊ ನೀನು ಬಿಚ್ಚಲಾರೆನೊ ನಾನು ಬಿಚ್ಚಿಕೊಳಲಾರರೊ ಮುಕ್ತ ಜನರು ಅಚ್ಯುತನೆ ಇದೆ ನಿನಗೆ ಹೆಚ್ಚಿನಾ ಬಿರುದು ನಾ ಮೆಚ್ಚಿ ಕಟ್ಟಿರುವೆ ನೀ ಗ್ರಂಥಿ ಕಂಕಣವ 14 ಎರಡು ಗ್ರಂಥಿಯ ತೊಡಕು ಹರಿದು ಭಕ್ತರ ಕಾಯ್ದು ಪರಮ ಆನಂದ ಮುಕ್ತರಿಗೆ ಶರೆ ಮಾಡಿ ಮೆರೆಯೊ ಶರಣಾಗತರ ರಕ್ಷಕನೆ ಎಂದೆನುತ ಸಿರಿ ಮುತ್ತಿನಾರತಿಯನೆತ್ತಿದಳು 15 ಸಿರಿಹರಿಯ ಏಕಾಂತ ಸರಸ ವಚನಗಳಿದನು ಅರಿತವರು ಯಾರೆಂಬ ಅನುಮಾನ ಬೇಡಿ ಹರಿಶಯನನಾದವನು ಅರಿತು ಧೈರ್ಯದಿ ಜಗದಿ ಹರಹಿದುದ ಸಜ್ಜನರು ಅರಿತು ಆನಂದಿಸಲಿ 16 ಸಿರಿ ಒಲಿಯೆ ಶ್ರೀಹರಿಯು ತ್ವರಿತದಲಿ ಒಲಿಯುವನು ಮರುತ ಒಲಿಯಲು ಸಿರಿಯು ತಾ ಒಲಿವಳು ಗುರುವು ಒಲಿಯಲು ಮರುತ ಮರುಕ್ಷಣದಿ ಒಲಿಯುವನು ಅರಿವುದಿದರಿಂ ಗುರುವ ಒಲಿಮೆ ಅಧಿಕೆಂದು 17 ಪರಮ ಸುಜ್ಞಾನದಿಂದರಿತು ತತ್ವಾರ್ಥಗಳ ಶರಣ ನಾ ನಿನಗೆನಲು ವಾತ್ಸಲ್ಯದಿ ಸಿರಿಯರಸ ತನ್ನಭಯ ಹಸ್ತ ಶಿರದಲಿಟ್ಟು ಶರಣರನು ಪಾಲಿಸುವ ಮುಕ್ತಿ ಪದವಿಯನಿತ್ತು 18 ಹರಿಸಿರಿಯ ಲೀಲೆಗಳ ಗುರುಕರುಣ ಬಲದಿಂದ ಅರುಹಿದ ಮಹಿಮೆ ಧರೆಯಲ್ಲಿ ಮೆರೆದು ಪರಮ ಮಂಗಳ ಕೊಡಲಿ ನಿರುತ ಸದ್ಭಕ್ತರಿಗೆ ಕರುಣಾಳು ಗೋಪಾಲಕೃಷ್ಣವಿಠ್ಠಲನ ದಯದಿ 19
--------------
ಅಂಬಾಬಾಯಿ
ಕಮಲಕಮಲಾಧರನೆ ಕಮಲಭವ ವಂದಿತನೆ ಕಮಲ (?) ನುತನೇ ಕಮಲಶತ ಹಿತಕರನೆ ಪ ಕಮಲಬಾಣನ ಪಿತನೇ ಕಮಲದಳ ಲೋಚನನೇ ಕಮನೀಯನುಪ್ಪವಡಿಸಾ ಹರಿಯೇ ಅ.ಪ ಸಲಹಲೀ ಲೋಕಗಳ ಬಹುವೆನಿಪ ದಾನವರ ಗೆಲಿದು ಪಾಲ್ಗಡಲ ನಡುವಲದ ನೆಲೆವನೆಯ ತಲೆವಣಿಯ ಕಾಂತಿಗಳ ಮಿಗೆ ಜ್ವಲಿಪ ಬೆಳಗುಗಳಿಂದ ಫಲಿತ ಪುಳಕಗಳು ಮಿಗೆ ಬಲಿದ ನಿದ್ರೆಗಳ ಶ್ರೀಲಲನೇಶನುಪ್ಪವಡಿಸ1 ಸಿರಿ ಮುರಿಯುತಿದೆ ಶರಧಿಯೇಳ್ಗೇ ಉದಯಕೆ ಕರೆಯುತಿದೆ ಗಿಳಿವಿಂಡು ಕೊರುಗುತಿವೆ ಕೋಕಗ ಗರೆಯುತಿದೆ ಕೋರಕಂ ವೋಲಗಕೆ ಕರುಣಾಳು ಉಪ್ಪವಡಿಸಾ 2 ತೋರುತಿದೆ ಇನಬಿಂಬ ದೂರುತಿದೆ ಕುಮುದ ಸೊಂ ಪೇರುತಿದೆ ವನರುಹಂ ಬೀರುತಿದೆ ಕಡು ಚೆಲ್ವ ಸೋರುತಿದೆ ಮಕರಂದ ತೋರುತಿದೆ ತನಿಗಂಪ ಪಾರುತಿವೆÉ ಭ್ರಮರಂಗಳೂ ಚೀರುತಿವೆ ಪಕ್ಷಿಗಳು ಮೀರುತಿವೆ ಜನರವಂ ಪೂರ್ಣಧನು ಉಪ್ಪವಡಿಸಾ3 ಆಡುವರೆ ನರ್ತನವ ಪಾಡುವರೆ ಗಾನಗಳ ನೀಡುವರೆ ಪನ್ನೀರ ತೀಡುವರೆ ಸುರಭಿಗಳ ಮಾಡುವರೆ ಸಿಂಗರವ ಪೂಡುವರೆ ಹಾರಗಳನೂ ಕೋಡುವರೆ ಕಾಣಿಕೆಯ ಬೇಡುವರೆ ಸಂಪದವ ಸೂಡುವರೆ ಕುಸುಮಗಳ ನೋಡುವರೆ ಸಮಯಗಳ ಗಾಡಿಮಿಗಲುಪ್ಪವಡಿಸಾ 4 ದೇವ ಸಂಸ್ತುತಲೀಲ ದೇವ ಮುನಿನುತ ಶೀಲ ದೇವತತಿಗನುಕೂಲ ದೇವರಿಪುವನಜಾಲ ಚೇಲ ದೇವ ಗುಣಗಣಜಾಲ ದೇವಪುರಿ ಶ್ರೀಲೋಲ ದೇವ ನಲಿದುಪ್ಪವಡಿಸಾ 5
--------------
ಕವಿ ಲಕ್ಷ್ಮೀಶ
ಕರಪಿಡಿದು ಕಾಯೊ ಶ್ರೀ ಕರುಣಾಳು ಧನ್ವಂತ್ರಿ ವರ ವೆಂಕಟಾದ್ರಿವಾಸ ಪ. ತರಳೆ ಸೇವೆಯ ಕೊಂಡು ಪರಿಪರಿಯ ಬಗೆಯಿಂದ ವರ ಕೃಪೆಯ ಮಾಡೊ ಸ್ವಾಮಿ ಪ್ರೇಮಿ ಅ.ಪ. ಆವ ಪರಿಯಿಂದ ಜಗದೊಳು ನೋಡೆ ಕಾವರಿ ನ್ನಾವರುಂಟೆಲೊ ದೇವನೆ ಪಾವಮಾನಿಯ ಪ್ರೀಯ ಪರಿಪರಿಯ ಪಾಪ ಫಲ ದೀವಿಧದ ಬವಣೆಯನ್ನೇ ನೀ ವಿಚಾರಿಸಿ ಕಾಯೊ ನಿನ್ನ ಶರಣ್ಹೊಕ್ಕಮೇ- ಲಾವ ಸಂಶಯ ಕಾವನೇ ಪಾವಕನ ತೆರದಿ ಭಸ್ಮವ ಮಾಡಿ ದುಷ್ಕರ್ಮ ಜೀವಕ್ಹಿತ ಕೊಡು ಪ್ರೀತನೇ | ಇನ್ನೇ 1 ಸುರರ ವ್ಯಾಕುಲ ಬಿಡಿಸಿ ಅಮರ ಪಕ್ಷವ ವಹಿಸಿ ವರ ಸುಧೆಯನವರಿಗುಣಿಸೀ ದುರುಳ ಸಂಘವ ಕೊಲಿಸಿ ಸುರ ರಾಜ್ಯಸ್ಥಿರಪಡಿಸಿ ಪರಿಪರಿಯ ಸೌಖ್ಯ ಸುರಿಸೀ ಮೆರೆದೆಯೋ ಗುಣಸಿಂಧು ನಿನ್ನ ಸೇವಕಳೆಂದು ಪರಿಕರಿಸಿ ನೀನೀಕ್ಷಿಸೀ ಪರಿ ಕಾಣೆ ಹರಿಸು ಭಯ ಶ್ರೀ ನರಹರೇ | ಶೌರೇ 2 ಬರಿದು ಮಾಡದೆ ಎನ್ನ ಬಿನ್ನಪವ ಪೊರೆಯ ಬೇ- ಕರವಿಂದ ದಳ ನೇತ್ರನೇ ಗುರು ಹಿರಿಯರುಕ್ತಿಯಲ್ಲದೆ ಎನ್ನದೆಂಬುವೋ ಗರುವ ನುಡಿಯಲ್ಲ ನೀನೇ ಚರಣ ಸೇವಕರ ಪೊರೆವಂಥ ವಿಶ್ವಾತ್ಮಕನೆ ಪರಿಹರಿಸು ಕ್ಲೇಶಗಳನೇ ಕರುಣಿ ಶ್ರೀ ಗೋಪಾಲಕೃಷ್ಣವಿಠ್ಠಲ ಶೇಷ- ಗಿರಿನಿಲಯ ಭಕ್ತ ಪ್ರೀಯಾ | ಜೀಯಾ 3
--------------
ಅಂಬಾಬಾಯಿ