ವಂದಿಸು ಗುರು ಸತ್ಯಸಂಧ ಮುನಿಯಾ
ವೃಂದಾವನಕೆ ಹರುಷದಿಂದ ಎಂದೆಂದು ಪ
ಗಂಗಾ ಪ್ರಯಾಗ ಗಯಾ ಶ್ರೀಶೈಲಹೋಬಲ ಭು
ಜಂಗಾದ್ರಿ ಮೊದಲಾದ ಕ್ಷೇತ್ರಗಳನು
ಇಂಗಿತಜ್ಞರ ಸಹಿತ ಸಂಬಂಧ ಗೈಸಿ ವರಮಹಿಷ
ತುಂಗಾತಟದಿ ವಾಸವಾಗಿಪ್ಪ ಯತಿವರಗೆ 1
ಭೂದೇವನುತ ಸತ್ಯಬೋಧ ಮುನಿವರ ಕರ
ವೇದಿಕದೊಳುದ್ಭವಿಸಿದ ಕಲ್ಪವೃಕ್ಷ
ಸಾಧುಜನರಿಗೆ ಬೇಡಿದಿಷ್ಟಾರ್ಥಗಳ
ಮೋದದಿ ಕೊಡುವ ಮಹಿಮರ ಕಂಡು 2
ಶ್ರೀ ಮನೋರಮನ ಅತಿವಿಮಲತರ ಶಾಸ್ತ್ರ
ನಾಮಾವಳಿಗೆ ಸುವ್ಯಾಖ್ಯಾನ ರಚಿಸಿ
ಧೀಮಂತ ಜನರಿಗುಪದೇಶಿಸಿ ನಿರಂತರ
ಧಾಮ ಜಗನ್ನಾಥ ವಿಠಲನ ಒಲುಮೆ ಪಡೆದವರಿಗೆ 3