ಒಟ್ಟು 65 ಕಡೆಗಳಲ್ಲಿ , 22 ದಾಸರು , 59 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಯವುಂಟೆ ಹರಿಯ ಭಕುತರಿಗೆ ಪ ತತ್ವಗಳರಿಯುತ ಕೃತ್ಯವ ಮಾಡುವ ಸಾತ್ವಿಕರಾಗಿರುವ ಸುಜನರಿಗೆ1 ಕಾಲ ವ್ಯರ್ಥಮಾಡದೆ ಪುರು ಪಾರ್ಥಪ್ರದನ ಪದನ ಭಜಿಪರಿಗೆ 2 ಕಾಮ ಕ್ರೋಧಗಳ ಬಿಟ್ಟ ಮನದಿ ಶ್ರೀ ರಾಮನ ಚರಣಗಳ ಭಜಿಪರಿಗೆ 3 ಸಾಧು ಸಂಗದಲಿ ಮೋದವಗೊಳ್ಳುತ ಮಾಧವನನು ಸತತ ನೆನೆವರಿಗೆ 4 ಚಿನ್ಮಯ ರೂಪ ಪ್ರಸನ್ನ ಶ್ರೀಕೃಷ್ಣನ ಉನ್ನತ ಮಹಿಮೆಗಳ ಸನ್ನುತಿಸಲು 5
--------------
ವಿದ್ಯಾಪ್ರಸನ್ನತೀರ್ಥರು
ಭಾಗವತ 342 ಆಗಮದಸಾರ ಶಾಸ್ತ್ರವಿಚಾರ ಪೌರಾಣ ಯೋಗತತ್ವಗಳ ಶೃಂಗಾರವೆನಿಸುತಿಹ ಶ್ರೀ ಭಾಗವತಮಂ ಪೇಳ್ವೆಸಂಕ್ಷೇಪದಿಂದ ಹನ್ನೆರಡು ಪದ್ಯಂಗಳಾಗಿ ಗುರುಸುತನ ಬಾಣದುಪಹತಿಗೆ ಮೊರೆಯಿಡುವಉ ತ್ತರೆಯ ಗರ್ಭವ ಶೌರಿರಕ್ಷಿಸಲ್ ಬಳಿಕಧರೆ ರಾಜ್ಯವಾಳುತಿರೆವಿಷ್ಣುರಾತಂ ವರಶಮೀಕಾತ್ಮಜನ ಶಾಪಬರೆತಾಕೇಳಿ ಪರಮವೈರಾಗ್ಯದಿ ಕುಶಾಸ್ತರಣದೊಳಿರಲ್ ಪ್ರಥಮಸ್ಕಂಧದೋಳ್ ತಿಳಿವುದು 1 ಸಾರವಾಗಿಹ ಭಕ್ತಿಯೋಗಮಂ ಪೂರ್ವದೋಳ್ ನಾರದಗೆ ವಿಧಿವೇಳ್ದ ಸೃಷ್ಟಿಯಕ್ರಮಂ ಪ್ರಳಯ ತನ್ನಪುರಮಂ ತೋರಿಸಿ ಚಾರುಭಾಗವತ ತತ್ವೋಪದೇಶದಿ ಸೃಷ್ಟಿ ಗಾರಂಭ ಮಾಡಿಸಿದನೆಂದು ಶುಕಮುನಿವರಂ ತಿಳಿವುದು 2 ವಿದುರ ಮೈತ್ರೇಯ ಸಂವಾದಮಂ ಸೃಷ್ಟಿಯ ಭ್ಯುದಯವಂ ಸ್ವಾಯಂಭುವಿನಜ ನನವಹರೂ ಪದ ಹರಿಯಚರಿತ ಸನಕಾದಿಗಳ್ ಜಯವಿಜಯರಿಗೆ ಕೊಟ್ಟ ಶಾಪತೆರನು ಉದಿಸಿದಂಹರಿಕರ್ದಮಂಗೆ ಕಪಿಲಾಖ್ಯದಿಂ ವಿದಿತವಾಗಲ್ ತಾಯಿಗರುಹಿದಂಸಾಖ್ಯಯೋ ತೃತೀಯಸ್ಕಂಧದೋಳ್ ತಿಳಿವದು 3 ಶಿವನ ವೈರದಿನಕ್ಷಯಾಗವಂ ಮಾಳ್ಪುದಂ ತವಕದಿಂ ಕೆಡಿಸಿ ಶಂಕರನು ಕರುಣಿಸುವದಂ ಧೃವಚರಿತಮಂಗವೇನರಚರಿತ್ರೆಗಳ್ ಪೃಥುಚಕ್ರವರ್ತಿ ಜನನ ಅವನಿಗೋರೂಪಿಯಾಗುತ ಸಕಲವಸ್ತುಸಾ ರವಕೊಡುವದುಂ ಪ್ರಚÉೀತಸರುಪಾಖ್ಯಾನಮಂ ತವೆಪುರಂಜನನುಪಾಖ್ಯಾನಮಂ ಯಿದುಚತುರ್ಥ ಸ್ಕಂಧದೋಳ್ ತಿಳಿವದು 4 ವರಪ್ರಿಯ ವ್ರತಚರಿತೆಯಾಗ್ನೀಧ್ರಚರಿತೆಯುಂ ಹರಿಯ ಋಷಭಾವತಾರದ ಮಹಾಮಹಿಮೆಯಂ ಭೂಗೋಳವಿಸ್ತಾರವು ಎರಡನೆ ಖಗೋಳದೋಳ್ ವಾಯ್ವಾದಿಮಂಡಲವಿ ವರಗಳುಂ ನರಕಾದಿ ವರ್ಣನೆಯ ಸಂಖ್ಯೆಯುಂ ಯಿದುಪಂಚಮಸ್ಕಂಧದೋಳ್ ತಿಳಿವದು 5 ಯರ ಜನನಮಂ ವಿಶ್ವರೂಪಾಖ್ಯಭೂಸುರಂ ವೃತ್ರಾಸುರನ ಕೊಲ್ವುದುಂ ಭರದಿ ಬೆನ್ಹತ್ತಿಬಹ ಬ್ರಹ್ಮಹತ್ಯವ ಸುರಪ ಧರಣಿಜಲ ವೃಕ್ಷಸ್ತ್ರೀಯರಿಗೆ ಭಾಗಿಸಿದುದಂ ತಿಳಿವದೂ 6 ವಿಧಿಯವರದಿ ಹಿರಣ್ಯಕಶ್ಯಪನು ಗರ್ವದಿವಿ ಬುಧರಂ ಜಯಿಸುವದುಂ ತರಳ ಪ್ರಹ್ಲಾದನ ನರಸಿಂಹನಾಗಿ ಹರಿಯು ಮದಮುಖನ ಸೀಳ್ವುದಂಪ್ರಹ್ಲಾದನೃಪನಜಗ ರದಮುಖದಿ ವರ್ಣಾಶ್ರಮದ ಧರ್ಮಕೇಳ್ವುದಂ ತಿಳಿವದು 7 ಮನುಗಳ ಚರಿತ್ರೆಗಳ್ ಗಜರಾಜ ಮೋಕ್ಷವಂ ದನುಜ ದಿವಿಜರು ಶರಧಿಯಂಮಥಿಸೆವಿಷವರು ಹರಿಸುರರಿಗೀಯ್ಯೆ ಅನಿಮಿಷರ ಗೆದ್ದು ಬಲಿ ಶತಕ್ರತುವಮಾಳ್ಪುದಂ ವನಜಾಕ್ಷ ವಟುವೇಷದಿಂ ದವಗೆಲ್ವುದಂ ತಿಳಿವದು 8 ಇನವಂಶ ರಾಜರಚರಿತ್ರೆಯೋಳಂಬರೀ ಷನ ಮಹಿಮೆ ಯಿಕ್ಷಾ ್ವಕುರಾಜನಚರಿತ್ರ ರಾ ಚಂದ್ರವಂಶಾನುಚರಿತಂ ವನಿತೆಯುಂ ಪುರುಷನಾಗಿದ್ದಿಳನ ಚರಿತಶು ಕ್ರನ ಮಗಳ ಶರ್ಮಿಷ್ಠೆಯರಚರಿತೆಯದುವೂರು ನವಮಸ್ಕಂಧದೋಳ್ ತಿಳಿವದು 9 ಹರಿ ದೇವಕೀ ಪುತ್ರನಾಗಿ ಗೋಕುಲದಿ ಪರಿ ಪರಿಲೀಲೆಗಳತೋರಿ ದುಷ್ಟರಂಸದೆದುತಾಂ ಪಿತೃಮಾತೃಗಳಸೆರೆಯಬಿಡಿಸಿ ವರವುಗ್ರಸೇನಂಗೆ ಪಟ್ಟಮಂಗಟ್ಟಿಸಾ ಗರದಿ ಪುರವಂರಚಿಸಿ ಬಲುತರುಣಿಯರ ಕೂಡಿ ತಿಳಿವದು 10 ನೆಸಗಿದಂ ಯದುಕುಲಕೆ ಹರಿಯಸಂಕಲ್ಪದಿಂ ಪರಮಾತ್ಮತತ್ವಬೋಧೆಯನರುಪಿದಂ ಮುಸಲದಿಂ ಯಾದವರಕ್ಷಯವೈದಲನ್ನೆಗಂ ಬಿಸಜನಾಭಂ ರಾಮನೊಡನೆ ತಾತೆರಳಿದಂ ಕರೆದೊಯಿದನೇಕಾದಶಸ್ಕಂಧದೊಳ್ 11 ಪರೀಕ್ಷಿತ ಮಹಿಪಾಲತಾಂ ಕೇಳಿದಂ ಶುಕನಿಂದಸಕಲಮುಂ ಕಲಿಕಾಲ ಸೂತಶೌನಕಾದಿಗಳಿಗಿದನು ಪೇಳಿದಂ ಬಾದರಾಯಣನ ಕೃಪೆಯಿಂದಲಿದ್ವಿ ಜಾಳಿ ಹರುಷದ ಕಡಲೊಳೀಜಾಡಿದುದುರಮಾ ಲೋಲನ ಮಹಾಲೀಲೆಯವತಾರಮದ್ಭುತಂ- -ದ್ವಾದಶಸ್ಕಂಧವಿದುವೆ 12 ಇಂತೀ ಪರಿಭಾಗವತ ಶಾಸ್ತ್ರಮಂ ಸಂತರಡಿಗಳಿಗೆರಗಿ ಪೇಳ್ದೆ ಸಂಕ್ಷೇಪದಿಂ ಕಂತುಪಿತಗÀುರುರಾಮವಿಠಲತಾಂಹೃದಯದೋಳ್- -ನಿಂತುನುಡಿಸಿದತರದೊಳು ಸ್ವಾಂತನಿರ್ಮಲರಾಗಿ ಪಠಿಸುವರಿಗನುದಿನಂ ಚಿಂತಿತಾರ್ಥಂಗಳಿಹಪರಸೌಖ್ಯವಿತ್ತುಶ್ರೀ ಕಾಂತ ಗುರುರಾಮವಿಠಲ ಪೊರೆವಜಯ- -ಜಯಮನಂತಮಹಿಮಂಗೆನಿರತಂ 13
--------------
ಗುರುರಾಮವಿಠಲ
ಭೂತೇಶನುತ ವಿಠಲ | ಕಾಪಾಡೊ ಇವನಾ ಪ ಓತ ಪ್ರೋತನು ಆಗಿ | ದಾತನೀನಿರುವೇ ಅ.ಪ. ಪಾದ | ದಾಸ್ಯವನೆ ಕಾಂಕ್ಷಿಸುವವಾಲಿಭಂಜನ ರಾಮ | ಪಾಲಿಸೋ ಇವನಾ 1 ತೈಜಸನೆ ನೀನು ಗುರು | ರಾಜರೂಪಿಲಿ ತೋರಿನೈಜೋಪದೇಶವನು | ಪೊಂದುವುದು ಎನುತಾ |ಮಾಜದಲೆ ಪೇಳಿರಲು | ವಾಜಿವದನನೆ ನಿನ್ನಬ್ರಾಜಿಷ್ಣು ನಾಮದಲಿ | ಅಂಕನವ ಗೈದೇ 2 ದಾಸ ದಾಸರ ಗುಣಾ | ದಾಸನೆಂದೆನಿಸುತ್ತಕೇಶವನ ಗುಣನಾಮ | ಸೂಸಿಕೊಂಡಾಡಿ |ಲೇಸಾದ ಆನಂದ | ಭಾಸಿಸುತ್ತಲಿ ಗುಹಾ ವಾಸನನು ಕಾಂಬಂಥ | ಮಾರ್ಗದನು ಆಗೋ 3 ಮಧ್ವಮತ ತತ್ವಗಳು | ಬುದ್ಧಿಯಲ್ಲಿ ಸ್ಛುರಿಸುತ್ತಶುದ್ಧಭಾವದಿ ಮನನ | ಸಿದ್ಧಿಸುತಲಿವಗೇ |ಅದ್ವೈತ ತ್ರಯಜ್ಞಾನ | ಶ್ರದ್ಧೆ ಭಕ್ತಿಯ ಉದಿಸೆಮಧ್ವರಮಣನೆ ಹರಿಯೆ | ಉದ್ಧಾರ ಮಾಡೋ4 ಸರ್ವಜ್ಞಾ ಸರ್ವೇಶ | ಸರ್ವಾಂತರಾತ್ಮಕನೆದರ್ಪಿಜೀವಿಯ ಪೊರೆಯೆ | ಪ್ರಾರ್ಥಿಸುವೆ ಹರಿಯೇ |ದುರ್ವಿ ಭಾವ್ಯನೆ ಗುರು | ಗೋವಿಂದ ವಿಠ್ಠಲನೆಅವ್ಯಾಜ ಕರುಣನಿಧಿ | ಭಿನ್ನಪವ ಸಲಿಸೋ5
--------------
ಗುರುಗೋವಿಂದವಿಠಲರು
ಮುದ್ದು ವೆಂಕಟ ವಿಠಲ | ಬುದ್ಧಿ ಪ್ರೇರಕನೇ ಪ ಉದ್ವೇಗ ಕಳೆದು ಸ | ದ್ವಿದ್ಯ ಪ್ರದನಾಗೋ ಅ.ಪ. ಭವ ಕೂಪದಿಂದೆತ್ತಿಓದಿ ಕರೆದ್ಯೊದುದನ | ಭಾವುಕಗೆ ತಿಳಿಪೇ 1 ಮಾನವ ಮನದಿ | ಶಂಕಿಸುತ್ತಿರಲೂಕೊಂಕುಗಳ ಪರಿಹರಿಪ | ವೆಂಕಟೇಶ ನಾನುಅಂಕನವ ದಯೆಗೈಸಿ | ಸಂಕಟವ ಕಳೆದಾ 2 ಸೃಷ್ಟಿ ಸ್ಥಿತಿ ಸಂಹಾರ | ಅಷ್ಟ ಕರ್ತೃಕ ಹರಿಯೆಪುಷ್ಠತವ ಮಹಿಮೆಗಳ | ಶಿಷ್ಟನಿಗೆ ತೋರೀಕಷ್ಟಗಳ ಪರಿಹರಿಸಿ | ಸುಷ್ಠು ಪಾಲಿಪುದಿವನಜಿಷ್ಣು ಸಖ ಭ್ರಾಜಿಷ್ಣು | ಕೃಷ್ಣ ಮೂರುತಿಯೇ 3 ಭವ ಬಂಧ ಕಳೆಯೋಮಧ್ವಶಾಸ್ತ್ರದಿ ಮನವು | ಸುವಿಚಾರಗೈವ ಪರಿಶ್ರೀ ವರನೆ ಕೃಪೆಗೈದು | ತತ್ವಗಳ ತಿಳಿಸೋ 4 ಪತಿ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಯತಿವೃಂದ ಜಯತೀರ್ಥ ಜಯತೀರ್ಥ ಪ ಭವ | ಭಯಹರ ಗುರುವರ ಅ.ಪ ಕಾಗಿಣಿ ತಟ ಸ್ಥಿತ | ಮೇಘನಾಥಪುರ ಆಗರವೆನಿಸಿದ ಯೋಗಿವರೇಣ್ಯ 1 ತತ್ವಗಳರ್ಥವ | ಪುಸ್ತಕ ಭಾರವ ಎತ್ತಿನ ರೂಪದಿ | ಪೊತ್ತ ಮಹಾತ್ಮ 2 ಮರುತ ಸುಶಾಸ್ತ್ರಕೆ | ವಿರಚಿಸಿ ಟೀಕೆಯ ಮುರಿದು ಕುಭಾಷ್ಯವ | ಮೆರೆದ ಮಹಂತ 3 ನೆರೆನಂಬಿದೆ ಶ್ರೀ | ಹರಿನಾಮವ ನಿರುತಗರಿದು ಪೊರಿ | ನರನವತಾರಿ 4 ಭೀಮ ಭವಾಟವಿ | ಧೂಮ ಶ್ರೀ ಶಾಮಸುಂದರ ಪ್ರೇಮದ ದಾಸ 5
--------------
ಶಾಮಸುಂದರ ವಿಠಲ
ಲಕ್ಷ್ಮೀನಾಥ ವಿಠಲ | ರಕ್ಷಿಸೊ ಇವನಾ ಪ ಇಕ್ಷುಚಾಪನ ಪಿತನೆ | ಅಕ್ಷರನೆ ದೇವಾ ಅ.ಪ. ನಿತ್ಯ ತೃಪ್ತಾತ್ಮಾಅರ್ಥಿಯಲಿ ಲಕ್ಷ್ಮಿಯನು | ಭಕ್ತಿಯಿಂ ಸೇವಿಸುತಪ್ರಾರ್ಥಿಸುವ ತವಪ್ರೀತಿ | ಲಕ್ಷ್ಮಿವಲ್ಲಭನೇ 1 ಅಪ್ರಮೇಯನ ಪತ್ನಿ | ಲಕ್ಷ್ಮಿಯನೆ ತುತಿಸುತ್ತಸುಪ್ರಸಾದವ ಕೊಂಡು | ಗೃಹಕಾಗಿ ತೆರಳೀಅಪ್ರತಿಮ ಸಂತಸದಿ | ಹರಿಯ ಕೊಂಡಾಡುತ್ತಅಪ್ಪವೆಂಕಟನನ್ನು | ಹಾಡಿ ಹೊಗಳಿದನಾ 2 ವೇದಾಂತ ವೇದ್ಯ ಹರಿ | ವೇದ್ಯವಾಗಲಿ ಇವಗೆಮೋದ ತೀರ್ಥರ ಮತದ | ಸಾದು ತತ್ವಗಳುಹಾದಿಯಾಗಲಿ ಮುಕುತಿ | ಸಾಧನ ಸುಮಾರ್ಗಕ್ಕೆಬಾದರಾಯಣ ದೇವ | ಮಾಧವನೆ ಹರಿಯೆ 3 ಕರ್ಮಮರ್ಮವ ತಿಳಿಸಿ | ದುಷ್ಕರ್ಮ ಪರಿಹರಿಸಿನಿರ್ಮಮನ ಮಾಡಯ್ಯ | ಬ್ರಹ್ಮಾದಿ ವಂದ್ಯಪ್ರಮ್ಮೆಯಂಗಳ ಬೋದ | ಸಲ್ಲಲಿತವಾಗಿರಲಿಅಮ್ಮಹಾ ಪರದೈವ | ಹರಿಯೆಂದು ತಿಳಿಸೊ4 ಅದೈತ ತ್ರಯದರಿವು | ಬುದ್ದಿಗೇ ನಿಲುಕಿಸುತಸಿದ್ಧಾಂತ ಪಥವೆಂಬ | ಹೆದ್ದಾರಿ ನಡಸೋಕೃದ್ಧಬಳಮರ್ದನನೆ | ಮುದ್ದು ನರಹರಿದೇವಅದ್ವಿತೀಯನೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವರದೇಶವಿಠಲರ ಹಾಡು ದಾಸರಾಯರ ದಿವ್ಯ ಚರಣ ಭಜಿಸಿ |ಶ್ರೀಶ ಪ್ರಾಣೇಶ ದಾಸಾರ್ಯ ಗುರುವರ್ಯ ಪ ಪಾದ ಭಜಿಪ ಸದ್ಭಕ್ತರ |ಏಸು ಜನ್ಮದ ಪಾಪರಾಶಿ ಪರಿಹರ ವೋ ||ಶ್ರೀಶನಲಿ ಸದ್ಭಕ್ತಿ ಲೇಸಾಗಿ ಪುಟ್ಟುವದು |ಲೇಶ ಸಂಶಯವಿಲ್ಲ ಆಲಸವು ಸಲ್ಲ 1 ಮರುತ ಮತ ತತ್ವಗಳ ಥೆರೆಗಳಿಂಸೂಸುತ |ಧರಣಿ ದ್ವಿಜರಿಗೆ ರಾಮನಾಮ ಮೃತ ||ನಿರುತ ಭಜಿಸಲು ಜ್ಞಾನ ವೈರಾಗ್ಯ ತರಮಣಿಯ |ಹರಿಭಕುತಿ ಧೇನುವಂ ನೀಡ್ವ ಪಾಲ್ಗಡಲೆನಿಪ 2 ಸುಜ್ಞಾನವೆಂಬಂಥ ಕಿರಣಗಳ ಪಸರಿಸುವ |ಅಜ್ಞಾನ ತಿಮಿರವನು ದೂರೋಡಿಪ |ಸೂಜ್ಞರೆಂಬುವ ತಾವರೆಗಳರಳಿಸುವಂಥ |ಅಜ್ಞ ಕುಮುದಗಳ ಬಾಡಿಸುವ ಭಾಸ್ಕರ ನೆನಿಪ 3 ನಮಿತ ಜನ ಭವತಾಪ ಕಳೆದು ಸದ್ಭಕ್ತಿಯಿಂ |ಬಮಿತ ಆಹ್ಲಾದವನು ಬೀರುವಂಥ ||ಶಮದಮಾದಿಗಳ ಚಂದ್ರಿಕೆಯಿಂದ ಶೋಭಿಸುವ |ವಿಮಲ ಹರಿಜನ ಚಕೋರಕೆ ಚಂದ್ರನೆಂದೆನಿಪ 4 ದಾಸ ಕುಲತಿಲಕ ಪ್ರಾಣೇಶರಾಯರ ಕವನ |ಶ್ರೀಶ ಕಥೆಗಳ ರಾಶಿ ಮೀಸಲಾಗಿರಲು |ಆಸು ಭಕ್ತರಿಗೆ ಸಂತೋಷಗೊಳಿಸಲು ಸರ್ವ |ದೇಶದಲಿ ಮೆರಿಸಿ ಸತ್‍ಕೀರ್ತಿಯನು ಪಡೆದಂಥ 5 ಈ ಗುರುಗಳ ಪಾದಕ್ಕೆರಗಿದ್ದ ಶಿರಧನ್ಯ |ಈ ಗುರುಗಳೀಕ್ಷಿಸಿದ ನೇತ್ರ ಧನ್ಯ ||ಈ ಗುರುಗಳ ವಾಣಿ ಕೇಳಿದ ಕಿವಿಧನ್ಯ |ಈ ಗುರುಗಳನು ಮನದಿ ನೆನೆವ ನರಧನ್ಯ 6 ರಾಗ ದ್ವೇಷಾದಿಗಳ ಗೆದ್ದು ಸದ್ಭಕ್ತಿಯಂ |ಶ್ರೀಗುರು ಪ್ರಾಣೇಶ ಭಜಕರೆನಿಪ |ನಾಗ ಪರ್ಯಂಕ ವರದೇಶ ವಿಠಲನ ಪ್ರಿಯಯೋಗಿ ವರದೇಂದ್ರ ಮುನಿಗಳ ಪಾದಭೃಂಗ 7
--------------
ಶ್ರೀಶಪ್ರಾಣೇಶವಿಠಲರು
ವರ್ಣಿಸಲಳವೆ ಕರುಣಾಳು ಗುರುವರ ನಿಮ್ಮ ವರ್ಣವರ್ಣದ ಚರಿತೆ ಗುಣಗಣಗಳ ಪ. ವರ್ಣಪ್ರತಿಪಾದ್ಯ ದೇವತೆಗಳಿಗೆ ಅಳವಲ್ಲ ಇನ್ನಿದನು ಪಾಮರರು ಅರಿಯುವರೆ ಜಗದಿ ಅ.ಪ. ಪ್ರತಿಪ್ರತಿ ಕಲ್ಪದಲಿ ಅತಿಶಯದ ತಪಚರಿಸಿ ಪತಿತಪಾವನ ಹರಿಯ ಮನ ಮೆಚ್ಚಿಸಿ ಕ್ಷಿತಿಯೊಳಗೆ ಅವತರಿಸಿ ದೇವಾಂಶರೆಂದೆನಿಸಿ ಪತಿತರನು ಪಾವನವಗೊಳಿಪ ಘನಮಹಿಮ 1 ಭಕ್ತರು ಕರೆದಲ್ಲಿ ಆಸಕ್ತಿಯಿಂ ಬಂದು ಯುಕ್ತಯುಕ್ತಗಳಿಂದ ತತ್ವಗಳನರುಹಿ ಮುಕ್ತಿಗೊಡೆಯನ ಮಾರ್ಗ ಮುಕ್ತಾರ್ಥ ಜನಕರುಹಿ ಮುಕ್ತಿಪಥ ಸವಿತೋರ್ವ ಶಕ್ತಿ ಮಹಿಮೆಗಳ 2 ಪಾದ ಪದ್ಮಸುತ ತಂದೆ ಮುದ್ದು ಮೋಹನದಾಸರಾಯರೆಂದೆನಿಸಿ ಮಧ್ವಮತಸಾರಗಳ ಹೀರಿ ಮಕರಂದವನು ಸಿದ್ಧಿಗೊಳಿಸಿ ಸುಜನಕೀವ ಶ್ರೀ ಗುರುವೆ3 ಕರಿಗಿರಿ ನರಹರಿಯ ಚರಣಕಮಲ ಧ್ಯಾನ ಅರಘಳಿಗೆ ಬಿಡದೆ ಮನಮಂದಿರದಿ ಸ್ಮರಿಪ ಕರುಣಜಲನಿಧಿಯೆ ನಿಮ್ಮ ಮೊರೆಹೊಕ್ಕವರ ಕಾಯ್ವ ಪರಮಪ್ರಿಯರೆಂತೆಂಬ ಬಿರುದುಳ್ಳ ಗುರುವೇ 4 ಕಮಲಾಂತ ಪ್ರೀತ ಶ್ರೀ ಕಮಲನಾಭನ ಪಾದ ಕಮಲ ಮನದಲಿ ಸ್ಮರಿಪ ಕಮನೀಯ ಗಾತ್ರ ಕಮಲಾಕ್ಷ ಗೋಪಾಲಕೃಷ್ಣವಿಠ್ಠಲನ ಪದ ಕಮಲ ಮನದಲಿ ತೋರಿ ಕೃಪೆಯಗೈಯ್ಯುವುದು 5
--------------
ಅಂಬಾಬಾಯಿ
ವ್ಯಾಸಕೂಟ ದಾಸಕೂಟ ಎನ್ನದಿರೊ ಹೀನಮಾನವ ಪ ಈಶ ಹೊರತು ಮಿಕ್ಕ ಜನರು ದಾಸರೇ ಸರಿ ಅ.ಪ. ವೇದವ್ಯಾಸದೇವ ದೇವ ಸರ್ವರಿಗೆ ಈಶ ಕಾಣಿರೋ ಮೋದಮುನಿಯು ಆತನಿಗೆ ಮುಖ್ಯದಾಸ ಶಾಸ್ತ್ರಸಿದ್ದವೋ ಎಂದಮೇಲೆ ನೀನು ಯಾರು ಸಾಕ್ಷಿಕೇಳಿ ಬೇಗ ನುಡಿಯಲೋ ಛಂದ ಭಜಿಸಿ ಜ್ಞಾನ ಘಳಿಸಿ ದಾಸನೆಂದು ಹರಿಯ ಭಜಿಸೆಲೋ 1 ಧರ್ಮಶಾಸ್ತ್ರ ಮರ್ಮಬಿಟ್ಟು ಓದಿ ಓದಿ ಏನು ಫಲವೊ ನಿತ್ಯ ತೃಪ್ತ ನಿರ್ಜರೇಶ ನೊಲಿಮೆ ಮುಖ್ಯವೋ ಕಮಲೆಯರಸ ಕಲ್ಪವೃಕ್ಷ ಹೃಸ್ಥದೊರೆಯ ಕಾಣಬೇಕೆಲೋ ಕರ್ಮಬಿಡದೆ ಆಶೆತೊರೆದು ಕರ್ಮಪತಿಯ ಶರಣು ಪೊಗೆಲೋ 2 ವೇದಶಾಸ್ತ್ರ ಸ್ಮøತಿಗಳಲ್ಲಿ ಪೇಳಿರುವ ತತ್ವಗಳನ್ನು ನಡತೆಯಿಂದ ನಡಿಸಿ ನಡಿಸುತ ಇಂದಿರೇಶನ ದಾಸಜನರು ಪದಗಳಿಂದ ಪಾಡಿ ಪಾಡುವ ಖೇದವಳಿದು ಸಾಧು ಜನಕೆ ನಂದ ಸೂರೆಗೈದು ನಲಿವರೋ 3 ವೇಷದಿಂದ ಭಾಷೆಯಿಂದ ಶ್ರೀಶನೊಲಿಮೆ ಕಾಣಲಾಗದೋ ದಾಸನೆಂದು ದೈನ್ಯದಿಂದ ದ್ವೇಷ ತ್ಯಜಿಸಿ ಕೂಗಬೇಕೆಲೋ ಕುಣಿದು ಕುಣಿಯಲೊ 4 ಶಕ್ತಿಜರಿದ್ವಿರಕ್ತಿಬೇಡಿ ಭಕ್ತಿಯಿಂದ ಭಜಿಸಿ ಭಜಿಸೆಲೊ ಶಕ್ತ ವಿಜಯಸೂತ ಶ್ರೀ ವಾಯುಹೃಸ್ಥ “ಕೃಷ್ಣವಿಠಲ” ಯುಕ್ತಿಯಿಂದ ಬಂಧಬಿಡಸಿ ನಿತ್ಯಸುಖವ ನಿತ್ತು ಕಾಯ್ವನೊ ಭಕ್ತಿಯಿಂದ ಶಕ್ಯನಾದ ಜ್ಞಾನ ಘಳಿಸಿ ಕೊಲ್ಲು ಸಂಶಯ 5
--------------
ಕೃಷ್ಣವಿಠಲದಾಸರು
ಶಿಖರಪುರ ದಾಸಾರ್ಯ ವಂಶದಿ ಶಶಿಯಂತೆ ಉದಿಸಿದ ಶ್ರೀನಿವಾಸಾರ್ಯರೆಂಬ ಪ್ರಚಲಿತ ನಾಮದ ದಾಸಾರ್ಯರ ಚರಿತೆ ಗುರುಗಳ ದಯದಿಂದ ಅರಿತಷ್ಟು ಪೇಳುವೆ ಬುಧ ಜನರು ನಿಷ್ಕಪಟ ಭಾವದಿಂದಲಿ ಕೇಳಿ ಸಿರಿಗುರುತಂದೆವರದಗೋಪಾಲವಿಠ್ಠಲನ ಭಕ್ತರೊಳಗಿವರೊಬ್ಬರು ಕಾಣಿರೊ 1 ಶ್ರೀ ರಮೇಶಕೃಷ್ಣನು ತನ್ನ ಪರಿವಾರ ಸಹಿತಾಗಿ ಓಲಗದಿ ಕುಳಿತಿರಲು ಸಾವಧಾನದಿ ತಾನು ಶ್ರೀದೇವಿ ಋಷಿಯಾಜ್ಞೆಯಿಂದಲಿ ಬಂದು ಶಿರಬಾಗಿ ಧರಣಿಯೊಳು ಭಾಗವತರ ಮಹಿಮೆತಿಳಿದು ಸಾಧನೆಗೈಯ್ಯಬೇಕೆಂಬ ಕುತೂಹಲದಿಂದ ದೇವಾಂಶರ ಬಿಡದೆ ಅವತಾರ ಮಾಡಿದ ಪವಿತ್ರವಂಶದಿ ಬಹುಕಾಲ ಪುತ್ರಾಪೇಕ್ಷೆಯಿಂದಲಿ ಶ್ರೀನಿವಾಸನ ಸೇವೆಗೈದ ಮಾತೆ ಶ್ರೀ ರುಕ್ಮಿಣೀದೇವಿ ಪಿತ ರಾಘವೇಂದ್ರರ ಉದರದಿಂದಲಿ ಜನಿಸಿ ಬಾಲತ್ವ ಕೆಲಕಾಲ ಕಳೆದು ತದನಂತರದಿ ಭೂವೈಕುಂಠಪುರದಲ್ಲಿ ದ್ವಿಜತ್ವವನೆ ಪಡೆದು ಲೌಕಿಕ ವಿದ್ಯೆಗಳನೆಲ್ಲ ಕಲಿಸಿ ಬಳಿಕ ಸಂಗೀತ ವಿದ್ಯೆಯ ಸಾಧನಕೆ ಮಿಗಿಲೆಂದು ಸಾಧಿಸಿ ಬಿಡದೆಲೆ ಪ್ರಾವೀಣ್ಯತೆಯ ಪಡೆದು ಅತಿ ಗೌಪ್ಯದಿಂದಲಿ ಶಿರಿಗುರು ತಂದೆವರದಗೋಪಾಲವಿಠ್ಠಲನ ಸ್ತುತಿಸಿ ಮನದಿ ಅತಿ ಹಿಗ್ಗುತಲಿರ್ದ ಬಗೆ ಕೇಳಿ 2 ಗುರು ಕಾಳಿಮರ್ದನ ಕೃಷ್ಣಾಖ್ಯದಾಸರ ಸಹವಾಸದಿಂದಲಿ ಲೌಕಿಕದಿ ಹುರುಳಿಲ್ಲವೆಂಬ ಮರ್ಮವ ತಿಳಿದು ಮನದಿ ವಿಚಾರಿಸುತಿರಲು ಕಾಲವಶದ ಸೋತ್ತುಮ ರಾಜ್ಯದಿ ಸ್ವರೂಪ ಕ್ರಿಯೆಗಳಾಚರಣೆಗೆ ಮನಮಾಡುತಲಿಹ ಓರ್ವ ದ್ವಿಜನ ಮರ್ಮವ ತಿಳಿಯದೆ ನಿಂದಿಸುವ ಮನವ ಮಾಡೆ ಶ್ರೀವದ್ವಿಜಯರಾಯರುತಮ್ಮ ವಂಶಜನಿವನೆಂದು ಶ್ರೀಮತ್ ರಾಘವೇಂದ್ರ ಮುನಿಗೆ ಬಹು ವಿಧ ಪ್ರಾರ್ಥಿಸಿ ಫಲ ಮಂತ್ರಾಕ್ಷತೆಯನಿತ್ತು ಧ್ಯಾನಕ್ಕೆ ತೊಡಗಿಸಿ ಶ್ರೀಮದ್ ಭಾವಿ ಸಮೀರ ಪದರಜವೇ ಬಹು ಭಾಗ್ಯವೆಂದು ಧೇನಿಪ ಭಕ್ತವರ್ಯರಾದ ತಂದೆವರದಗೋಪಾಲ ವಿಠಲದಾಸರಾಯರ ಪದಪದ್ಮಂಗಳಿಗೊಪ್ಪಿಸಿ ಅಪರಾಧಗಳನ್ನೆಲ್ಲ ದೃಷ್ಟಿ ಮಾತ್ರದಿ ದಹಿಸಿ ಫಣಿಗೆ ಮೃತ್ತಿಕೆ ತಡೆದು ಗುರುಗಳನೆ ಅರುಹಿ ನಿಜ ಮಾರ್ಗದಿಂದ ಶಿರಿಗುರುತಂದೆವರದಗೋಪಾಲವಿಠ್ಠಲನ ಕರುಣಿ ಪಡೆವ ಮಾರ್ಗವನೆ ಪಿಡಿದರು ಜವದಿ 3 ಭವದೊಳು ಬಳಲುವ ಭೌತಿಕ ಜೀವಿಗಳ ಬಹು ಬೇಗದಿಂದಲಿ ಉದ್ಧರಿಸಲೋಸುಗ ಬೋಧಮುನಿ ಕೃತ ಗ್ರಂಥಸಾರವ ಬೋಧಿಪ ಮುನಿಗಳ ದರ್ಶನಗೋಸುಗ ಪೊರಟ ಸಮಯದಲಿ ಶ್ರೀಗುರು ವಾದಿರಾಜ ಮುನಿವರ್ಯ ತನ್ನಯ ಪುತ್ರನ ಮೊರೆಕೇಳಿ ಶ್ರೀಲಕ್ಷ್ಮೀಹಯವದನನ ಮೂರ್ತಿಯ ಪ್ರಾರ್ಥಿಸೆ ರೌಪ್ಯಪೀಠ ಪುರವಾಸಿ ಶ್ರೀಕೃಷ್ಣನ ಕರದಿ ಶೋಭಿಪ ವಸ್ತುವಿನ ಪುರದಿ ಸ್ವಪ್ನದಿ ಬಂದು ತಂದೆವರದವಿಠ್ಠಲನೆಂಬ ಅಂಕಿತವನಿತ್ತು ಅದೇ ಸುಂದರ ರೂಪವ ತೋರಿ ನೈಜಗುರುಗಳ ದ್ವಾರಾ ಭಜಿಸೆಂದು ಬೋಧಿಸಿದ ನಂತರದಿ ಬಹು ಸಂಭ್ರಮದಿಂದಲಿ ಉಬ್ಬುಬ್ಬಿ ತನ್ನ ತನುಮನಧನ ಮನೆ ಮಕ್ಕಳನೆಲ್ಲ ನಿನ್ನ ಚರಣಾಲಯಕೆ ಅರ್ಪಿತವೆಂದು ಅರ್ಪಿಸಿ ಗುರುಗಳ ದ್ವಾರಾ ಸಿರಿಗುರು ತಂದೆವರದಗೋಪಾಲಗೆ ಸದಾ ಧೇನಿಸುತ ಮೈಮರೆತಿರ್ದನೀ ದಾಸವರ್ಯ 4 ಪಾದ ಕರವ ಮುಗಿದು ಸ್ವಾಮಿ ಶ್ರೀಗುರುರಾಜಾತ್ವದ್ದಾಸವರ್ಗಕೆಸೇರಿದ ಬಾಲಕ ದಾಸನೀತಾ ಕರುಣದಿಂದಲಿ ಜವದಿ ಕರುಣ ಕಟಾಕ್ಷದಿ ಈಕ್ಷಿಸಿ ಉದ್ಧರಿಸಬೇಕೆಂದು ಬಹುವಿಧ ಪ್ರಾರ್ಥಿಸಲು ಪರಮ ಕರುಣಾನಿಧಿ ಋಜುವರ್ಯ ಶ್ರೀ ವಾದಿರಾಜಾರ್ಯ ತನ್ನ ಹಂಸರೂಪಿಣಿ ಶ್ರೀ ಭಾವೀ ಭಾರತಿಯಿಂದೊಡಗೂಡಿ ಬಹು ಆನಂದದಿಂದಲಿ ಪಂಚ ಬೃಂದಾವನ ರೂಪದಿ ಮೆರೆವ ತನ್ನಯ ರೂಪವ ತೋರಿ ತುತಿಸಿಕೊಂಡು ಬಹು ಆನಂದಭರಿತರಾಗಿ ಬಹು ಬೇಗ ಸಾಧಿಸುವ ಗೈಸಲೋಸುಗ ಶಿರಿಗುರು ತಂದೆವರದಗೋಪಲವಿಠಲನ ಪ್ರಾರ್ಥಿಸಿ ಸಕಲ ಉತ್ಸವಗಳ ತೋರಿ ಶ್ರೀಮದ್ವಿಶ್ವೇಂದ್ರರ ದ್ವಾರಾ ತವ ಪಾದರೇಣು ಫಲ ಮಂತ್ರಾಕ್ಷತೆಯನಿತ್ತು ಬಗೆಯನೆಂತು ವರ್ಣಿಸಲಿ ಪಾಮರ ನರಾಧಮನು ನಾನು 5 ಕೇವಲ ಲೌಕಿಕ ಜನರಂತೆ ಆಧುನಿಕ ಪದ್ಧತಿಗನುಸರಿಸಿ ದಿನಚರ್ಯವನೆ ತೋರುತಲಿ ಭಾರತೀಶನ ಪ್ರಿಯವಾಗಿಹ ಕರ್ಮಗಳನೊಂದನೂ ಬಿಡದೆ ತಿಳಿದು ಮನದಿ ಮಾಡುತಲಿ ಮಂಕುಗಳಿಗೆ ಮೋಹಗೊಳಿಸಿ ಮಮಕಾರ ರಹಿತನಾಗಿ ದಿನಾಚರಣೆಗೈದು ಶ್ರೀ ಶುಕಮುನಿ ಆವೇಶಯುತರಾದ ಸದ್ವಂಶಜಾತ ಶ್ರೀಕೃಷ್ಣನ ಸೇವೆಗೋಸುಗ ಅವತರಿಸಿದ ವಾಯುದೇವ ಪೆಸರಿನಿಂದಲಿ ಶೋಭಿಪ ಕುಲಪುರೋಹಿತರ ಬಳಿಯಲಿ ಬಹು ವಿನಯದಿಂದಲಿ ಶ್ರೀ ನಿಜತತ್ವಗಳ ಮರ್ಮಗಳ ಕೇಳಿಕೊಂಡು ಮನದಿ ವಿಚಾರಿಸಿ ದೃಢೀಕರಣ ಪೂರ್ವಕ ಪಕ್ವವಾದ ಮನದಿಂದಲಿ ಶ್ರೀಶಶ್ರೀ ಮಧ್ವಮುನಿ ಶ್ರೀಗುರುಗಳ ಕರಣವನೆ ಕ್ಷಣಕ್ಷಣಕೆ ಬಿಡದೆ ಸ್ಮರಿಸುತಾನಂದ ಭಾಷ್ಯೆಗಳ ಸುರಿಸುತ ಭಾಗವತರ ಸಮ್ಮೇಳನದಿ ತತ್ವಗಳ ವಿಚಾರಿಸುತ ಶ್ರೀ ದಾಸಾರ್ಯರಾ ಉಕ್ತಿಗಳ ಆಧಾರವನೆ ಪೇಳುತಲಿ ಮನದಿ ಗುರುಗಳ ಸನ್ನಿಧಿಗೆ ಅರ್ಪಿಸಿ ತತ್ವದ್ವಾರ ತಿಳಿದುಪೂರ್ಣ ಸಾಧನವಗೈದು ಶ್ರೀ ಪ್ರಲ್ಹಾದ ಬಲಿ ಮಾಂಧಾತ ಕರಿರಾಜ ಶಿಬಿಮೊದಲಾದ ಚಕ್ರವರ್ತಿಗಳಲಿ ಬಹುಬೇಗ ಸಾಧನವ ಗೈದರು ಇವರಾರೊ ನಾ ಕಾಣೆ ಶಿರಿ ಗುರುತಂದೆವರದ-ಗೋಪಾಲವಿಠಲನ ಆಣೆ 6 ಸತಿ ವತ್ಸರ ವತ್ಸರ ಸತಿ ಮಾಯಾ ಶುಭ ದಿನದಿ ಸಂಖ್ಯಾ ಕಾಲದಿ ಪ್ರಥಮ ಯಾಮವೆಮಿಗಿಲೆಂದು ಮನದಿ ಲಯ ಚಿಂತನೆಯ ಬಿಡದೆ ಮಾಡುತದೇವತೆಗಳ ದುಂದುಭಿ ವಾದ್ಯಗಾಯನಗಳ ರಭಸದಿಶ್ರೀ ಲಕುಮಿ ದೇವಿಯ ಸೌಮ್ಯ ದುರ್ಗಾ ರೂಪಕೆನಮೋ ನಮೋ ಎಂದು ಶಿರಿಗುರುತಂದೆವರದಗೋಪಾಲ ವಿಠಲನಪುರಕೆ ಪುಷ್ಪಕ ವಿಮಾನ ರೋಹಿಣಿಯನೆ ಮಾಡಿನಲಿನಲಿದಾಡುವ ತೆರಳಿ ಪೋದಾರಿವರು 7 ಜತೆ :ಸತಿದೇವಿ ರಮಣನ ಭಕ್ತನೇ ನಿನ್ನಯಸುಖತನವೆಂದಿಗೂ ಕೊಡಲೆಂದು ಬೇಡಿಕೊಂಬೆಸಿರಿಗುರುತಂದೆವರದಗೋಪಾಲ ವಿಠಲನಿಗೆ 8
--------------
ಸಿರಿಗುರುತಂದೆವರದವಿಠಲರು
ಶೇಷವಂದ್ಯ ಹರಿ ವಿಠಲ | ನೀ ಸಲಹೊ ಇವಳಾ ಪ ವಾಸುದೇವನೆ ಕೃಷ್ಣ | ಶ್ರೀಶ ಪುರುಷೋತ್ತಮ ಅ.ಪ. ಸೂಕರ ನೀಚ | ಯೋನಿಗಳಲಿ ಜನಿಸಿಜ್ಞಾನಾನು ಸಂಧಾನ | ಕಾಣದಿದ್ದಾಗ್ಯೂಅನೇಕ ಪೂರ್ವವೆನೆ | ಪುಣ್ಯ ಸಂಚಿತದಿಂದಮಾನವ ಸುಜನ್ಮದೊಳು | ಜನುಮ ಪೊತ್ರಿಹಳೊ 1 ತೈಜಸ ಸೂಚಿ | ವರ ಅಂಕಿತವನಿತ್ತೆಮರುತಾಂತರಾತ್ಮಕನೆ | ಮದ್ಬಿಂಜ ಪೊರೆಯಿವಳಾ 2 ವರಸು ಸೌಭಾಗ್ಯವನೆ | ಪರಿಹರಿಸಿ ದುಷ್ಕರ್ಮನಿರುತ ನಿನ್ನಯ ನಾಮ | ಸ್ಮರಣೆ ಸುಖವಿತ್ತೂಮರುತ ಮತ ತತ್ವಗಳ | ಅರಿವಾಗುವಂತೆಸಗೋಕರಿವರದ ಕಮಲಾಕ್ಷ | ಕಾರುಣ್ಯ ಮಾರ್ತೇ 3 ಪತಿಸುತರು ಹಿತರಲ್ಲಿ | ಕೃತಿರಮಣ ಸುವ್ಯಾಪ್ತಮತಿಇತ್ತು ಪೊರೆ ಇವಳ | ಕ್ಷಿತಿರಮಣ ದೇವಾಮತಿಮತಾಂ ವರರಂಘ್ರಿ | ಹಿತಸೇವೆ ದೊರಕಿಸುತಕೃತ ಕೃತ್ಯಳೆಂದೆನಿಸೊ | ಅತಿ ಚಿತ್ರ ಚರಿತಾ 4 ಕಾವ ಕರುಣಿಯೆ ದೇವ | ಭಾವುಕರ ಪರಿಪಾಲನೀವೊಲಿಯ ದಿನ್ನಿಲ್ಲ | ಆವತ್ರೈ ಜಗದೀನೋವುಸುಖ ದ್ವಂದ್ವಗಳ | ಸಮತೆಯು ಉಂಬಂತೆನಿವೊಲಿಯೊ ದೇವ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶೌರಿ ಪ ಸರ್ವಮಂಗಳಮಯನೆ ವಿಧಿತಾತ ಮುದವೀತೊ ಅ.ಪ. ಉದ್ಧವನ ಗುರುವರ್ಯ ನಿರ್ದೋಷ ಗುಣವನಧಿ ನಿದ್ದೆ ಮಾಡುವಗೊಲಿದು ಮುಕ್ತಿ ಇತ್ತೆ ಹದ್ದುಮೀರಿ ಭವದಿ ಬಿದ್ದು ಮೊರೆ ಇಡುತಿಹೆನೊ ಹೃದ್ಧಾಮದಲಿ ನಿನ್ನ ದರುಶನವ ನೀಡೆಯ್ಯ 1 ಮನದಲ್ಲಿ ಮಹಪೂಜೆಕೊಳ್ಳಯ್ಯ ಎನ್ನಿಂದ ಪ್ರಣೀತಪಾಲಕ ಕೃಷ್ಣಪೂರ್ಣ ಪುರುಷ ತೃಣಮೊದಲು ಬ್ರಹ್ಮಾಂಡ ಸರ್ವರಲಿ ಸ್ವಾತಂತ್ರ್ಯ ಅನಿಲಾತ್ಮ ಆನಂದ ಖಣಿ ಕರುಣ ಮಾಡಯ್ಯ 2 ಕೆಸರು ಕಲ್ಕಿದಜ್ಞಾನಕಳವಡುವುದೇ ನಿನ್ನ ಅಸಮ ಮಂಗಳ ಸುಗುಣ ಶ್ರುತಿ ವಿನುತನೆ ದಶಮತಿಯ ಮನದೈವ ನೀ ಕೂತು ಮನದಲ್ಲಿ ವಿಶದ ತಿಳಿಮತಿಯಿತ್ತು ವೈಭವವ ತೋರೆನಗೆ 3 ಜೀವಜಡರಲಿ ಪೊಕ್ಕಾಡುವೆ ಬಹುಲೀಲೆ ಭಾವಸೂತ್ರದಿ ನಮ್ಮ ಕಟ್ಟಿ ಕುಣಿಸಿ ಈ ವಿಧವ ಬಲ್ಲವರ ಮೇಲಾಗಿ ಪಾಲಿಸುವಿ ತಾವೀಶರೆಂಬುವರು ಮುಳುಗುವರು ದುಃಖದಲಿ 4 ದುಷ್ಟಜನ ಸಹವಾಸ ಅಷ್ಟತತ್ವಗಳಲ್ಲಿ ವೃಷ್ಣೀಶ ಬಿಡಿಸಯ್ಯ ಬಂಧ ಕಡಿದು ಇಷ್ಟಾನಿಷ್ಟ ಜೀವರಲಿ ನಿಂತು ನಟಿಸುವ ಗುಟ್ಟುತೋರಿ ಜಯೇಶವಿಠಲನೆ ಕೃಪೆಮಾಡು 5
--------------
ಜಯೇಶವಿಠಲ
ಶ್ರೀ ಜಗನ್ನಾಥತೀರ್ಥರ ದಿವ್ಯ ಮಹಿಮೆಯನು ರಾಜಿಸುವ ಹೈಮಲಿಪಿಯಲ್ಲಿ ಬರೆಯಲಿ ಬೇಕು ಪ ಸುಜನ ಸುರಭೂಜರಾಗಿಹ ಮಹಾ ಕರ ಸಂಜಾತ ಅ.ಪ ಉದ್ಭವಿಸಿದರು ಗಾಲವರು ಜಗದೊಳೆಂಬಂಶ ವೇದ್ಯವಾಯಿತು ಆಪ್ತಜನವೃಂದಕೆ ಮಧ್ವಮತ ತತ್ವಗಳನುದ್ಧಾರವನೆಗೈದ ದಿಗ್ಧಂತಿಗಳತಿ ಪ್ರಸಿದ್ಧ ಸ್ಥಾನವ ಪಡೆದ 1 ಸಕಲ ಶಾಸ್ತ್ರಾರ್ಥ ನಿರ್ಣಯಗೈವ ಪರಸೂತ್ರ ನಿಕರಗಳಿಗಲವಬೋಧರ ಭಾಷ್ಯವ ಸುಖದಿಂದಲರಿಯಲುಪಕೃತಿಗೈದ ಯತಿಕುಲ ತಿಲಕ ಭಾಷ್ಯಾದೀಪಿಕಾಚಾರ್ಯರೆಂದತಿ ಖ್ಯಾತ 2 ಸರ್ವಗುಣ ಗುಣಪೂರ್ಣ ಸರ್ವತ್ರ ವ್ಯಾಪ್ತ ಹರಿ ಸರ್ವಭಕ್ತ ಪ್ರಸನ್ನನೆಂದರುಹಲು ಉರ್ವನುಗ್ರಹ ಪಡೆದ ಸರ್ವತಂತ್ರ ಸ್ವತಂತ್ರ 3
--------------
ವಿದ್ಯಾಪ್ರಸನ್ನತೀರ್ಥರು
ಶ್ರೀ ಶ್ರೀ ಶ್ರೀಸತ್ಯಪ್ರಮೋದತೀರ್ಥರು ಸತ್ಯಾಭಿಜ್ಞ ಕರಜ ಶ್ರೀ | ಸತ್ಯಪ್ರಮೋದಾ |ತೀರ್ಥ ನಿಮ್ಮಯ ಚರಣ ದ್ವಂದ್ವಕಾ ನಮಿಪೆ ಪ ವೈರಾಗ್ಯ ಸದ್ಭಾಗ್ಯ | ಪರಮ ನಿಧಿಯೆನಿಸುತಲಿಶ್ರೀರಾಮ ಪದತುಂಗ | ಸರಸಿರುಹ ಭೃಂಗಾ |ಊರೂರು ಚರಿಸುತಲಿ | ಆ ರಾಮ ಪದದ್ವಂದ್ವಆರಾಧಕರಿಗ್ವೊರೆದ | ಪರಮ ತತ್ವಗಳಾ 1 ವಾದಿಗಳ ಹೃದಯ ನಿ | ರ್ಭೇದ ಗೈಸುವ ನಿಮ್ಮವಾದಗಳ ಗಡಣೆಗಳ | ವಾದಿಗಳು ಕೇಳೀ |ಪಾದವನು ಕ್ರಮಿಸುತ್ತ | ಗೈದರು ಪಲಾಯನವಮೋದ ಪ್ರಮೋದ ಹರಿ | ಕಾರುಣ್ಯ ಪಾತ್ರಾ 2 ಕಲ್ಯಾಣ ಪುರಿಯೊಳಗೆ | ಎಲ್ಲ ವೈಷ್ಣವರ್ನೆರೆದುಪುಲ್ಲನಾಭನು ಶ್ರೀ ವೇದವ್ಯಾಸರನೂ |ಚೆಲ್ವಗಜ ವಾಹನದಿ | ಕುಳ್ಳಿರಿಸಿ ಐತರಲುಎಲ್ಲ ಭಕ್ತರು ಮೊರೆಯೆ | ಅಂಬರವು ಬಿರಿಯೇ 3 ವತ್ಸರ ಚಾರು ಸಿರಿ | ಸತ್ಯಧ್ಯಾನರ ಭಕ್ತಿಲೀ 4 ಭವ ಬಂಧಾ 5 ಕೋಪರಹಿತರುಯೆನಿಸಿ | ಶ್ರೀ ಪತಿಯ ಧ್ಯಾನಿಸುತತಾಪಸೀಗಳು ತೀರ್ಥ | ಪ್ರಾಪಿಸುತ್ತಿರೆ ಭಕುತರೂ |ಪಾಪ ಕಳೆದೆವು ಯೆಂಬ ಸ | ಲ್ಲಾಪದೊಳು ತಪನತಾಪ ಮರೆತರು ನೋಡಿ | ಪಾಪ ಹೊರದೂಡೀ 6 ಹತ್ತಾರು ಸಾಸಿರಕೆ | ಮತ್ತೆ ಭೋಜನಗೈಸಿಕೃತಿವಾಸನ ತಾತ | ಉತ್ತಮೋತ್ತಮನೆನ್ನುತಾ |ಸತ್ಯವಲ್ಲಭ ಗುರೂ | ಗೋವಿಂದ ವಿಠಲನಪ್ರತ್ಯಹರ್ ಅರ್ಚಿಸುವ | ಸತ್ಯ ಪ್ರಮೋದಾರ್ಯ 7
--------------
ಗುರುಗೋವಿಂದವಿಠಲರು
ಶ್ರೀರಂಗಶಾಯಿ ವಿಠಲ ಪೊರೆಯ ಬೇಕಿವಳ ಪ ಭವ ಶರಧಿ ದಾಂಟಿಸುತ ಅ.ಪ. ಕಾರಾಣಾತ್ಮಕ ನಿನ್ನ | ಗುಣರೂಪ ಕ್ರಿಯೆಗಳಧಾರಣೆಗಳಿಲ್ಲದಲೆ | ಧ್ಯಾನರತಳಾಗಿಮೂರಾರು ದ್ವಾರಗಳ | ಬಂಧಿಸುತ ಯೋಗದಲಿಆರಾಧ್ಯ ಮೂರ್ತಿಯನೆ | ಮರೆತ ಯೋಗಿಣಿಯ 1 ತೈಜಸ ಸು | ವ್ಯಕ್ತ ಅಂಕಿತವಾ 2 ತಾರತಮ್ಯ ಜ್ಞಾನ | ಮೂರೆರಡು ಭೇದಗಳಸಾರತತ್ವಗಳರುಹಿ | ಪೊರೆಯ ಬೇಕಿವಳ |ಕಾರುಣಿಕ ಕಂಕಣಾ | ಕಾರ ಚಕ್ರಾಕೃತಿಯತೋರಿರುವೆ ತನ್ಮಹಿಮೆ | ಅರಿಯ ಕಾತುರಳಾ 3 ಸಿರಿ ಸತ್ಯ ನರೆಯಣನೆಪರಿಪರಿಯಲಿಂದಿವಳ | ಪೊರೆಯ ಬೇಕೋಗರುಡಗಮನನೆ ದೇವ | ಸರ್ವಜ್ಞ ನೀನಿರಲುಒರೆವೆನೆಂಬಪರಾಧ | ಮರೆದು ಪಾಲಿಪುದೋ 4 ಅದ್ವೈತ ಉಪದೇಶ | ತಿದ್ದಿನಿನ ಪದದಲ್ಲಿಶುದ್ಧ ಭಕ್ತಿಜ್ಞಾನ | ವೃದ್ಧಿಯನೆ ಗೈಸೀಮಧ್ವಾಂತರಾತ್ಮ ಗುರು | ಗೋವಿಂದ ವಿಠ್ಠಲನೆಅದ್ವಿತೀಯನು ಯೆಂಬ | ಬುದ್ಧಿ ಸ್ಥಿರ ಮಾಡೋ 5
--------------
ಗುರುಗೋವಿಂದವಿಠಲರು