ಒಟ್ಟು 112 ಕಡೆಗಳಲ್ಲಿ , 34 ದಾಸರು , 103 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೇಶವನೊಲುಮೆಯು ಆಗುವ ತನಕ ಹರಿದಾಸರೊಳಿರುತಿರು ಹೇ ಮನುಜ ಪ ಕ್ಲೇಶಪಾಶಂಗಳ ಹರಿದು ವಿಲಾಸದಿಶ್ರೀಶನ ನುತಿಗಳ ಪೊಗಳುತ ಮನದೊಳುಅ ಘಾಸಿ ಮಾಡಿದ ಪಾಪಕಾಶಿಗೆ ಹೋದರೆ ಹೋದೀತೆಶ್ರೀಶನ ಭಕುತರ ದೂಷಿಸಿದಾ ಫಲಕಾಸು ಕೊಟ್ಟರೆ ಬಿಟ್ಟೀತೆಭಾಷೆಯ ಕೊಟ್ಟು ನಿರಾಶೆಯ ಗೈದ ಫಲಕ್ಲೇಶಗೊಳಿಸದೆ ಇದ್ದೀತೆಭೂಸುರಸ್ವವ ಹ್ರಾಸ ಮಾಡಿದ ಫಲಏಸೇಸು ಜನುಮಕು ಬಿಟ್ಟೀತೆ 1 ಜೀನನ ವಶದೊಳು ನಾನಾ ದ್ರವ್ಯವಿರೆದಾನಧರ್ಮಕೆ ಮನಸಾದೀತೆಹೀನ ಮನುಜನಿಗೆ ಜ್ಞಾನವ ಬೋಧಿಸೆಹೀನ ವಿಷಯ ಅಳಿದ್ಹೋದೀತೆಮಾನಿನಿ ಮನಸದು ನಿಧಾನವಿರದಿರೆಮಾನಾಭಿಮಾನಗಳುಳಿದೀತೆಭಾನುಪ್ರಕಾಶನ ಭಜನೆಯ ಮಾಡದಹೀನಗೆ ಮುಕುತಿಯು ದೊರಕೀತೆ2 ಸತ್ಯಧರ್ಮಗಳ ನಿತ್ಯವು ಬೋಧಿಸೆತೊತ್ತಿನ ಮನಸಿಗೆ ಸೊಗಸೀತೆತತ್ವದ ಅರ್ಥವ ವಿಚಿತ್ರದಿ ಪೇಳೆಕತ್ತೆಯ ಚಿತ್ತಕೆ ಹತ್ತೀತೆಪುತ್ಥಳಿ ಬೊಂಬೆಯ ಚಿತ್ರದಿ ಬಣ್ಣಿಸಿಮುತ್ತು ಕೊಟ್ಟರೆ ಮಾತನಾಡೀತೆಕತ್ತುರಿ ತಿಲಕವನೊತ್ತಿ ಫಣೆಯೊಳಿಡೆಅರ್ತಿಯ ತೋರದೆ ಇದ್ದೀತೆ 3 ನ್ಯಾಯವ ಬಿಟ್ಟನ್ಯಾಯವ ಪೇಳುವನಾಯಿಗೆ ನರಕವು ತಪ್ಪೀತೆಬಾಯಿ ಕೊಬ್ಬಿನಲಿ ಬಯ್ಯುವ ಮನುಜಗೆಘಾಯವಾಗದೆ ಬಿಟ್ಟೀತೆತಾಯಿತಂದೆಗಳ ನೋಯಿಸಿದವನಿಗೆಮಾಯದ ಮರಣವು ತಪ್ಪೀತೆಮಾಯಾಜಾಲವ ಕಲಿತ ಮನುಜನಿಗೆಕಾಯ ಕಷ್ಟವು ಬಿಟ್ಟೀತೆ 4 ಸಾಧು ಸಜ್ಜನರ ನೋಯಿಸಿದ ಮಾಯಾವಾದಿಗೆ ನರಕವು ತಪ್ಪೀತೆಬಾಧಿಸಿ ಪರರರ್ಥವ ದೋಚುವವಗೆವ್ಯಾಧಿಯು ಕಾಡದೆ ಬಿಟ್ಟೀತೆಭೇದವೆಣಿಸಿ ಬಲು ಕ್ಷುದ್ರವ ಕಲಿತರೆಮೋದವೆಂದಿಗು ಆದೀತೆಕದ್ದು ಒಡಲ ಪೊರೆವವನ ಮನೆಯೊಳುಇದ್ದದ್ದು ಹೋಗದೆ ಉಳಿದೀತೆ5 ಅಂಗಜ ವಿಷಯಗಳನು ತೊರೆದಾತಗೆಅಂಗನೆಯರ ಸುಖ ಸೊಗಸೀತೆಸಂಗ ದುಃಖಗಳು ಹಿಂಗಿದ ಮನುಜಗೆಶೃಂಗಾರದ ಬಗೆ ರುಚಿಸೀತೆಇಂಗಿತವರಿತ ನಿಸ್ಸಂಗಿ ಶರೀರ ವ-ಜ್ರಾಂಗಿಯಾಗದೆ ತಾನಿದ್ದೀತೆಮಂಗಳ ಮಹಿಮನ ಅಂಘ್ರಿಯ ಕಾಣದಮಂಗಗೆ ಮುಕುತಿಯು ದೊರಕೀತೆ 6 ಕರುಣಾಮೃತದಾಭರಣವ ಧರಿಸಿದಶರಣಗೆ ಸಿರಿಯು ತಪ್ಪೀತೆಕರುಣ ಪಾಶದುರವಣೆ ಹರಿದಾತಗೆಶರಣರ ಕರುಣವು ತಪ್ಪೀತೆಅರಿತು ಶಾಸ್ತ್ರವನಾಚರಿಪ ಯೋಗ್ಯಗೆಗುರು ಉಪದೇಶವು ತಪ್ಪೀತೆವರ ವೇಲಾಪುರದಾದಿಕೇಶವನಸ್ಮರಿಸುವನಿಗೆ ಮೋಕ್ಷ ತಪ್ಪೀತೆ 7
--------------
ಕನಕದಾಸ
ಕೋಲು ಉತ್ಸವಗೀತೆ ಕೋಲುವ ನೋಡುವ ಬನ್ನಿ ಶ್ರೀರಂಗನಾಯಕಿಯ ಕೋಲುವ ನೋಡುವ ಬನ್ನಿರೆಲ್ಲ ಪ ಚಪ್ಪರವನು ಶÀೃಂಗರಿಸಿ ಪಟ್ಟುಪೀತಾಂಬರದ ಮೇಲೆ ಕಟ್ಟುಗಳಿಂದ ವಿಸ್ತರಿಸಿ ಕದಳಿಯಕೊನೆ ಕಬ್ಬು ತೆಂಗಿನ ಫಲಗಳ ವಿಧವಿಧವಾಗಿ ಶೃಂಗಾರ ಮಾಡಿದರು 1 ಭಾದ್ರಪದ ಕನ್ಯಾಮಾಸದಲ್ಲಿ ಶುದ್ಧಪಾಡ್ಯದಲ್ಲಿ ಭದ್ರೆ ಶ್ರೀರಂಗನಾಯಕಿಯು ಬಂದು ಮಜ್ಜನವನು ಮಾಡಬೇಕೆನುತಲೆ ಮೂದ್ರ್ವಾರಮಧ್ಯದಲಿ ತಾ ನಿಂದಳು 2 ತಂದು ಹರವಿದರು ಬತ್ತವ ವಿಸ್ತಾರವಾಗಿ ತಂದಿಟ್ಟು ಕರ್ಪೂರಬಟ್ಟಲುಗಳು ತುಂಬಿ ಕಲ್ಪೋಕ್ತ ದಿಂದಲೆ ಪೂಜೆಯ ಮಾಡಿದರು 3 ಎಂಭತ್ತೊಂಬತ್ತು ಬಟ್ಟಲಲ್ಲಿ ಇರುವ ಉದಕವನು ರಂಭೆಗಭಿಷೇಕವ ಮಾಡೆ ಗಂಧವ ಅಂಬೆ ಶಿರದೊಳು ಧರಿಸಿ ಪೂಮಾಲೆಯ [ಸಂಭ್ರಮದಿ]ಧರಿಸಿ ನಿಂದಳು ದೇವಿ 4 ಸುಖನಿಧಿ ಪದ್ಮಾನಿಧಿಗೆ ಹಣ್ಣಿನ ಹರಿವಾಣವ ಶಂಕೆ ಇಲ್ಲದೆ ಭಕ್ತರು ಪಿಡಿದು [ನಿಂತಿರುವ] ಶಂಖನಾದವು ತಾಳಮೇಳ ವಾದ್ಯಗಳಿಂದ ಪಂಕಜಮುಖಿಗಭಿಷೇಕವ ಮಾಡಿದರು 5 ಪುಷ್ಪದ ಮಂಟಪದಲ್ಲಿ ಪುರುಷೋತ್ತಮನ ಒಪ್ಪವಾದ ಅಶ್ವವ ತಂದಿರಿಸಿದರು ಆನಂದದಿ ಕಲ್ಪೋಕ್ತದಿಂದಲೆ ಪೂಜೆ ನೈವೇದ್ಯವ ಮಾಡಿ ಒಪ್ಪುವ ಕಂಕಣವನು ಕಟ್ಟಿದರಾಗ 6 ರತ್ನದ ಕಿರೀಟವಿಟ್ಟು ಲಲಾಟದಲ್ಲಿ ಮತ್ತೆ ತಿದ್ದಿದ ಕಸ್ತೂರಿಬಟ್ಟು ರತ್ನದ ಪದಕವು ಇಟ್ಟು ಕೊರಳೊಳು ಇಂದಿರೆ ವಂದಾಳು 7 ಮಧ್ಯದ ಕೊಟ್ಟಿಗೆಯಲ್ಲಿ ವಿಪ್ರರು ಕೈಕಟ್ಟಿ ನಿಂದು ಸೇವೆಯ ಮಾಡುತಿರಲು ಅರ್ತಿ ಯಿಂದಲೆ ಧೂಪದೀಪ ನೈವೇದ್ಯದಿ ಲಕ್ಷ್ಮೀ ದೇವಿಗೆ ಪೂಜೆಯ ಮಾಡಿದರು 8 ಭೇರಿ ದುಂದುಭಿ ವಾದ್ಯಗಳಿಂದ ತಾಳಮೇಳವು [ನಾರಿಯರ] ರ ಸಾಲುಗಳಿಂದ ಬಾಣ ಬಿರುಸು ಮತಾಪು ಅಗರುಬತ್ತಿ [ಗಳ ನಡುವೆ] ನಾರಾಯಣನರಾಣಿ ಕೋಲುವಿನಲ್ಲಿ 9 ಛತ್ರಿಚಾಮರ ಸೂರೆಪಾನ ಪಿಡಿಯೆ ಮದ ಹಸ್ತಿಗಳು ಮಾಡುವ ಸಲಾಮು ಸುತ್ತಿ ದೀವಟಿಗೆಯು ತುತ್ತೂರಿ ನಾದವು ಮತ್ತಧಿಕಾರಿಗಳು ಮಂಟಪದಲಿ 10 ಆರುದಿವಸದಲ್ಲೊರೆಗೊಂಡು ಪಾನುಪಟ್ಟಿಯು ಸೂರ್ಯಚಂದ್ರರು ಮುತ್ತಿನಬಟ್ಟು [ಆ]ರಾಗಟೆಹೆರಳು ಭಂಗಾರಗೊಂಡೆಗಳಿಟ್ಟು ವ ಯ್ಯಾರದಿಂದಲೆ ಬಂದಳು ಮಂಟಪಕೆ 11 ಸಪ್ತದಿನದಲಿ ಲಕ್ಷ್ಮೀದೇವಿಗೆ ಉತ್ರಾಜಿಮಾಲೆ ಹಸ್ತವಡಗೆ ಹರಡಿವಂಕಿ ದಕ್ಷಿಣ ಹಸ್ತದಿ ರತ್ನದಹಂಸವು ವಾಮ ಹಸ್ತವ ಮೊಣಕಾಲಿನೊಳಿಟ್ಟಳು 12 ಅಂದುಗೆ ಗೆಜ್ಜೆ ಮುಂಗೈಮುರಾರಿ ಉಂಗುರವು ಕುಂದಣದ ಪಾಗಡವಿಟ್ಟು ಹಿಂದಿನತೋಳಿಗೆ ಬಂದಿ ತಾಯಿತನಿಟ್ಟು ಕುಂದಣದ ಮಂಟಪದಲಿ ಕುಳಿತಳು 13 ಅಷ್ಟಮ ದಿವಸದಲ್ಲಂದು ಸೃಷ್ಟಿಗಿರೀಶ್ವರಿಗೆ ಕಟ್ಟಿದರು ಕಲ್ಕೀತುರಾಯಿ ದೃಷ್ಟಿಯಬಟ್ಟು ರತ್ನದ ಕುಂಡಲ [ಇಟ್ಟು] ಮತ್ತರಗಿಣಿಯನು ಮಾತಾಡಿಸುತ 14 ಮುಕ್ತಿದಾಯಕಿಗೆ ಮೂರು ಪಾವಡೆಯನುಡಿಸಿ ಮತ್ತೆ ವಡ್ಯಾಣವನಿ[ಡಲು] ರತ್ನದ ಹಸ್ತದಿ ಅಭಯವ ಕೊಡುತ [ನಿಂತಳು] ಮೊರ್ನೋಮಿಯ ಮಂಟಪದಲ್ಲಿ 15 ಮುಂದೊಂಭತ್ತು ದಿನದಲ್ಲಿ ರಂಭೆರಂಗನಾಯಕಿಯು ಮಿಂದು ಮಡಿಗಳ ತಾನುಟ್ಟು ಚಂದದಿ ನೈವೇದ್ಯವ ಭಕ್ತರಿಗಿತ್ತು ಬಂದು ಆಸ್ಥಾನದಿ ನಿಂದಳು ದೇವಿ 16
--------------
ಯದುಗಿರಿಯಮ್ಮ
ಗದ್ಯ ದಂಡಕ ಅಧರ ಚುಬುಕ ದಂತಗಳ 10 ಅಗರು ಚಂದನದಮುತ್ತಿನ ಮಲುಕು ಪೆಂಡೆಯಸರ ಕೊರಳಲ್ಲಿಹತ್ತೆಗಟ್ಟಿದ ವಾಗ್ಗೊರಳು ಮುತ್ತುಗಳಮುತ್ತು ಮಾಣಿಕ ನವರತ್ನದ ಚಿಂತಾಕ-ವತ್ತಿ ಸೇರಿದ ಕಂಠಮಾಲೆ ಸರಗಳ 20 ಮಣಿ ತಾಯಿತ್ತುಮೆರೆವ ಹಮ್ಮೀರ ತಾಯಿತಿ ಕಾಂತಿಗಳಕಡಗ ಕಂಕಣ ಸುರಿಗೆ ಬಿಚ್ಚು ಬಳೆಗಳುಹಿಡಿವುಡಿಯಲ್ಲಿ ವಜ್ರದ ಥಳವುಗಳಕಡು ಮೋಹವಾದ ಮುರುಡಿಯ ಸರಪಣಿಝಡಿವ ಮುಂಗೈಯ ಮುರಾರಿ ಕವಡೆಯ30 ನೀಲ ವೈಜಯಂತಿ ಮಾಲೆ ಶೋಭಿಸುವ 40 ಕದಳಿ ನಖ ಚಂದ್ರಿಕೆಯ 50 ಕಮಲ ವಾಸವಾಗಿಪ್ಪ ಕೃಷ್ಣನಪದುಮ ಚರಣಕ್ಕೆ ನಮೊ ನಮೊ ನಮೋ ಎಂಬೆ ನಾ. 60
--------------
ವ್ಯಾಸರಾಯರು
ಘನ ಗುರು ನೀನೆನೋ ಎನಗೆ ಸಾಕ್ಷಾತವೋ ಮನಕಾದನಕೂಲವೋ ಧ್ರುವ ಕಣ್ಣಿಲೆ ಕಂಡೆವೋ ಚನ್ನಾಗ್ಹಿಡಿದೆವೋ ಇನ್ನೆಲ್ಲಿಗ್ಹೋದೆಲವೋ ಮುನ್ನಿನ ಪುಣ್ಯವೋ ನಿನ್ನ ನೋಡಿದೆವೋ ಧನ್ಯ ಧನ್ಯವಾದೆವೋ 1 ಸಾಧಿಸಿ ಬಿಡೆವೋ ಭೇದನ ಮಾಡೆವೋ ಸದಮಲ ಸುಖಗೂಡುವೆವೋ ಸಾಧನ ಮಾಡುವೆವೋ ಭೇದಿಸಿ ನೋಡುವೆವೋ ಸದೋದಿತ ಬೆರದಾಡುವೆವೋ 2 ಗುಹ್ಯ ಗುರುತವೋ ಧ್ಯಾನಿಸುವೆವೋ ದಂiÀiಮಾಡಬೇಕೆಲವೋ ಇಹಪರ ನೀನೆವೋಮಹಿಪತಿ ನಿಜವೋ ತಾಯಿತಂದೆ ನೀನೆವೋ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜರ ಇನ್ಯಾತಕೆ ಬಂತಮ್ಮಾ ಸಜ್ಜನರಿಗೆಜರ ಇನ್ಯಾತಕೆ ಬಂತಮ್ಮಾ ಸಜ್ಜನರಿಗೆ ಪ ಪರಮೇಷ್ಠಿ ಜನಕಾನೆಪರನೆಂದು ತಿಳಿಸಾದೆ ಪರಗತಿಯ ತೋರದ ಅ.ಪ. ಸ್ನಾನವ ಮಾಡಿಕೊಂಡು ಕುಳಿತು ಬಲುಮೌನದಿಂದಿರಲೀಸಾದೆ ||ಶ್ರೀನಿವಾಸನ ಧ್ಯಾನ ಮಾಡಾದೆ ಮನಸುಶ್ವಾನನೋಪಾದಿಯಲ್ಲಿ ತಾ ಓಡುವಂಥ 1 ಜಪ ಮಾಡುವ ಕಾಲದಲ್ಲಿ ಕರೆಯ ಬರೆವಿಪರೀತವಾಗುವದು ಮನಸು ||ಸ್ವಪನದಂತೆ ಮನಸಿಗೆ ಪೊಳದು ಬಲುಸುಪಥವ ತಪ್ಪಿಸಿ ಅಪಗತಿ ಕೊಡುವಂಥ 2 ಯಜಮಾನನು ಮಾಡಿದ ಪಾಪಂಗಳವ್ರಜವು ಬಿಡದೆ ಅನ್ನದೊಳಗಿಪ್ಪುದ ||ದ್ವಿಜನು ಭುಂಜಿಸಲಾಗಿ ಅವನ ಉದರದೊಳುನಿಜವಾಗಿ ಇಪ್ಪಾವು ಸುಜನಾರು ಲಾಲಿಸಿ 3 ಉದರದೊಳಗೆ ಬಿಚ್ಚದ ಸಾವಿರಾರುವಿಧವಾಗುವದು ಕೇಳು ||ಅದೇ ದೇಹ ಪುಷ್ಟಿ ಮಲ ರೇತಸ್ಸುಅದೇ ಪಾಪಿಗೆ ತಿಳಿಯದೆ ಭುಜಿಸುವಂಥ 4 ಕೆಳಗೆ ಕುಳ್ಳಿರಿಸಿದಾರೆ ಜ್ಞಾನಿ-ಗಳ ಬೊಗಳುವೆ ಕುನ್ನಿಯಂದದಿ ||ಒಳಗೆ ಕರೆದು ಒಯ್ದು ಬೆಳಗಿಲಿಕುಳ್ಳಿರಿಸೆ ಸಾಯಂ ಪ್ರತಿ ಸ್ತುತಿ ಮಾಡುವಾ 5 ಪ್ರಸ್ತದಾ ಮನೆಯೊಳಗೆ ಕರೆಯಾದಲ್ಲಿಗೆಸ್ವಸ್ಥಾದಿ ನೀ ಕುಳಿತುಕೊಂಡು ||ವಿಸ್ತಾರದಿ ಹಾರೈಸಿ ಪ್ರ-ಶಸ್ತವಾಯಿತೆಂದೂ ಮಸ್ತಕ ತಿರುಹುವೆ 6 ಮಾಡಿದ ಮಹಾ ಪುಣ್ಯದ ಓದನಕಾಗಿಕಾಡಿಗೊಪ್ಪಿಸಿ ಪೋದಂತಾಯಿತು ||ಗಾಡಿಕಾರ ಮೋಹನ್ನ ವಿಠಲನಪಾಡಿ ಪೊಗಳಿ ಕೊಂಡಾಡಿಕೊಂಡಿರದಂತೆ 7
--------------
ಮೋಹನದಾಸರು
ಜೋ ಜೋ ಧ್ರುವ ತೊಟ್ಟಿಲ ಕಟ್ಟಿ ನಟ್ಟನಡುಮಧ್ಯ ಜಗಜಟ್ಟಿ ತೊಟ್ಟಿಲ ತೂಗಿರೆ ಮನಮುಟ್ಟಿ 1 ಧ್ಯಾನಧಾರಣದರಳೆಲೆ ಮಾಡಿ ಕರ್ನಕುಂಡಲ ಲಯಲಕ್ಷವಿಡಿ ಕರುಣನ ಪಾಡಿ 2 ತೋಳತಾಯಿತವಿಡಿ ನೋಡಿ 3 ಜಡಿತಾಭರಣದುಡುಗಿಯ ನೀಡಿ ಶ್ರೀ ಸರ್ವೋತ್ತಮನ ಪಾಡಿ 4 ನಿತ್ಯ ಆನಂದಮೂರ್ತಿಯ ತೂಗಿ ಪತಿತ ಜೀವನಪಾವನ್ನವಾಗಿ ಚಿತ್ತಮನಬುದ್ಧಿ ಏಕತ್ವವಾಗಿ ಭಕ್ತವತ್ಸಲನ ತೊಟ್ಟಿಲ ತೂಗಿ 5 ಅದೃಷ್ಟದಲಿ ಸದೃಷ್ಟವಾಗಿ ಸದ್ಬ್ರಹ್ಮಾನಂದ ಸದ್ಗುರುಯೋಗಿ ಮೂರ್ತಿಯ ತೂಗಿ 6 ಜೀವನಮೂರ್ತಿಯ ಪಾಡಿ ಘನ ಕೂಡಿ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಾನೆ ತಾನಾದನಮ್ಮಾ ಎನ್ನೊಳು ಘನಬ್ರಹ್ಮ ಧ್ರುವ ಕಣ್ಣಿಲೆ ನೋಡಲಿಕ್ಕೆ ಕಣ್ಣಿನೊಳಾದನಮ್ಮ ಕಣ್ಣಿಗೆ ಕಣ್ಣಾಗಿ ಪೂರ್ಣ ಕಾಣಿಸಿದಾನಂದೋಬ್ರಹ್ಮ ಅಣುರೇಣುದೊಳು ವ್ಯಾಪಿಸಿ ಜನ ಮನ ದೊಳು ತುಂಬಿಹ ತನುಮನದೊಳು ತಾನೆತಾನಮ್ಮ 1 ಎತ್ತ ನೋಡಿದತ್ತ ಸುತ್ತ ಸೂಸುವನಮ್ಮ ನೆತ್ತಿ ಒಳಗೆ ಪೂರ್ಣ ಮೊತ್ತವಾದ ಪರಬ್ರಹ್ಮ ಅನುದಿನ ಸಂತತ ಸದ್ಗುರು ಪೂರ್ಣ ಅಂತರಾತ್ಮದೊಳಗಿಹನಮ್ಮ 2 ನಾನು ನಾನೆಂಬುದಿದು ಇಲ್ಲದಂತಾಯಿತು ನಮ್ಮ ತಾನೆ ತಾನಾದ ನಿಜ ಓಮಿತ್ಯೇಕಾಕ್ಷರ ಬ್ರಹ್ಮ ಚೆನ್ನಾಗಿ ಮಹಿಪತಿಗೆ ಸನ್ಮತಸುಖದೋರಿತುಉನ್ಮನವಾಗ್ಯೆನ್ನೊಳಗೆ ಘನಸುಖ ಹೊಳೆಯಿತು ಸಂಭ್ರಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಾಯಿತಂದೆಯರಿಗೆ ನಮನ (ವಾರ್ಧಕ ಷಟ್ಪದಿ) ಆನಮಿಪೆ ಮಾತೆ ಪಿತರರ್ಗೆ ಪ ಆನಮಿಸಿ ಈರ್ವರಿಗೆ | ಜ್ಞಾನ ಸಾಧನ ದೇಹದಾನ ಮಾಡ್ದದಕವರ | ಧೇನಿಸುತ ಪದವನಜಗಾನ ಮಾಡುವೆ ವಂಶದ ಅಕ್ಷೀಣ ವಾರ್ತೆಗಳ ಕೇಳ ಬಯಸುವರಾಲಿಸಿ ಅ.ಪ. ವಿಸ್ತರದ ಕೀರ್ತಿಯುತ | ಚಿತ್ತೂರು ಕೃಷ್ಣಾಖ್ಯರಿತ್ತ ಮಹಿ ಶೂರೊಳಗೆ | ನೆಲೆಸುತ್ತ ತಮ ಧರ್ಮಪತ್ನಿಯಲಿ ಚತುರ ಕುವ | ರರ ಪಡೆದು ಚತುರರಂಗೆಅಯ್ಯುತಿರೆ ವಿಧಿವಶದಲಿ |ಪೆತ್ತ ಪಿತ ಪರಪುರಕಡರೆ ಮಾತೆ ಕಡೆ ಕುವರಗೆತ್ತಣದು ವಿದ್ಯೆ ಎಂ | ದೆನ್ನಿಸದೆ ಸಲಹುತ್ತಉತ್ತಮರು ಬಕ್ಷಿತಿರು | ಮಲರ ವಂಶೋದ್ಭೂತ ಸುಬ್ಬರಾಯರ ಕುವರಿಯ 1 ಕಾಲ ಕಳೆಯುತಿರಲು 2 ಪತಿ ವಿಯೋಗವು ಆಯ್ತುಮಾರಿ ಕೋಪದ್ರವದಿ | ಮಾರಿ ಕಣಿವೆಲಿ ಪ್ರಥಮ ಅಪಮೃತ್ಯು ಸಂಭವಿಸಲು |ತಾರುಣ್ಯ ಉರುತರ | ವ್ಯಸನದಿಂ ನೂಕುತ್ತಪೋರನಭಿವೃದ್ಧಿಗಿ | ನ್ನೇನುಗತಿ ಎಂದೆನುತನಾರಾಯಣ ಸ್ಮರಣೆ | ಪರಿಪರಿಯಗೈಯ್ಸುತ್ತ ನಿಟ್ಟುಸಿರ ಬಿಡುತ್ತಿದ್ದಳು 3 ನಾಲ್ಕಾರು ವರುಷಗಳು | ದಾಯಾದ್ಯರೊಳು ದುಡಿದುನಾಲ್ಕೆಂಟು ಕಡುಕ್ರೂರ | ವಾಕ್ಕುಗಳ ಸಹಿಸುತ್ತಪ್ರಾಕ್ಕು ಕರ್ಮದ ಫಲವ | ಮುಕ್ಕಲೇಬೇಕೆಂಬ ವಾಕ್ಕುಗಳ ಮನ್ನಿಸುತಲಿ ||ನೂಕುತಿರೆ ಕೆಲಕಾಲ | ತೋಕಗಾಯ್ತುಪನಯನಕಾಕು ಮಾತುಗಳಾಡಿ | ನೂಕಲೂ ಗೃಹದಿಂದಆ ಕುಮಾರ ಧೃವನ | ನೂಕಿದಾಪರಿಯಾಯ್ತು ಎಂದೆನುತ ಹೊರ ಹೊರಡಲು 4 ಭವ ತರಣ | ಧವಣೆಯಲಿ ಕುವರಂಗೆ ವೈವಾಹ ತಾವಿರಚಿಸಿ 5 ಭಾಗವತ ವತ್ಸರ ವಸಿತ ದ್ವಿತಿಯ ತೃತಿಯ ತಿಥಿ ಹರಿ ಸ್ಮøತಿಲಿತನು ವಪ್ಪಿಸಿದಳು 6 ಭಾರತೀಶ ಪ್ರಿಯಗಭಿನ್ನಾತ್ಮನಮೊ ಗುರು ಗೋವಿಂದ ವಿಠ್ಠಲನ ದಾಸ ದಾಸಿಯರಿಗೇ ನಮೊ ಎಂಬೆನು 7
--------------
ಗುರುಗೋವಿಂದವಿಠಲರು
ಧನ್ಯ ಧನ್ಯವಾಯಿತು ಜನುಮಾ | ಆವಪುಣ್ಯವೋ ಅರಿಯೇ ನಮ್ಮಾ ಪ ನಾನಾ ಜನ್ಮದ ಬಲಿಯನೆ ಗೆದ್ದು ಸಲೆ | ಮಾನುಷ ದೇಹದಲಿಂದು | ಮಾನುಭಾವರ ವಂಶದಿ ಬಂದು | ಅವರ | ಸಾನಿಧ್ಯ ಸೇವೆಯ ಪಡೆದು 1 ಗುರುಕ್ಷೇತ್ರವೇ ಯನಗಿದೇ ಕಾಶೀ | ಗಂಗೆ | ಮೆರೆವುದು ಗುರುತೀರ್ಥವೆನಿಸಿ | ಗುರು ವಿಶ್ವೇಶ್ವರ ನೆನೆವಾಸೀ | ಕಂಡು | ಪೂರಿತಾಯಿತು ಮನದಾಸಿ 2 ಭವ | ಕರ್ಮ | ಪಾದ ಧರ್ಮಾ | ನಿಜ | ನಂದನ ಗಾನಂದೋಬ್ರಹ್ಮಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಂಬಿ ನಡಿಯಿರೋ | ನಂಬಿ ನಡಿಯಿರೋ | ಗುರುಪಾದವಾ ನಡಿಯಿರೋ ನಂಬಿ ನಡಿಯಿರೋ | ನೇಮದಲಿ ಅತಿ | ಪ್ರೇಮದಲಿ ಪ ತಿರುಗುವರೇ ನೀ ಮರಗುವರೇ | ಇಹದೇನೋ ಗುಣವಹುದೇನೋ | ತಾರಕರಿಲ್ಲ ಪೋಷಕರಿಲ್ಲಾ | ಸುವರುಂಟೆ ಬೆಳಗುವರುಂಟೆ1 ಬಾಳಿ ತೊಳಲಿ ಘನ ಬಳಲಿ | ಬಂದೀಗ ನೀ ನಿಂದೀಗ | ಹಾದಿಯನು ತಿಳಿ ಭೇದಿಯನು | ಶರಣವನು ಪಿಡಿ ಚರಣವನು 2 ನಿರ್ಜರ ತರುವೆ ಸರ್ವರ | ನಿಜದರುವೆ ಕರುಣವಗರವೇ | ಪಾಡುತಲೀ ನಲಿದಾಡುತಲಿ | ಡ್ಯಾಡಿ ನಮನವನೇ ಮಾಡಿ | ಸ್ವಾನಂದದ ಸುಖ ಸೂರ್ಯಾಡಿ | 3 ಮೌಳಿ ಉಚ್ಛಿಷ್ಟ ಚಾಂಡಾಳಿ | ಳೆಂಬೋಪಾಸನ ಧ್ಯಾಸನಾ | ಹಾದಿಲಿ ನಡೆವರೇ ನೋಡುವರೇ | ಅಮೃತ ಕೊಂಡಂತಾಯಿತು ಗುಣಹೇತು 4 ತಿಗಳ್ಯಾಕೆ ಚಿಂತಿಗಳ್ಯಾಕೆ | ಆಚರಿಯಾ ನೀ ಕೇಳರಿಯಾ | ಗೋವಿಂದಾ ಶ್ರೀ ಮುಕ್ಕುಂದಾ | ಇಹಪರವು ನಿಜ ಸುಖದರವು 5 ಮನದೊಳಗೆ ಈ ಜÀನದೊಳಗೆ | ಡಂಭವ ದೋರುತ ಎರೆಯುತ | ತೋರುವುದಲ್ಲಾ ಗುಣಸಲ್ಲಾ | ಕಿಡಿಸುವರೇ ನೀ ಧರಿಸುವರೇ6 ವಾರ್ತೆಗಳಾ ಮನೆವಾರ್ತೆಗಳಾ | ಪ್ರಾಣವನು ಅಪಾನವನು | ಹಾರಿಸಿದೀ ನೀ ತೋರಿಸಿದೀ | ಏನಾದರೂ ಏನಿಲ್ಲಾ ಸಮ್ಯಕ್ | ಜ್ಞಾನವಾಗದೆ ಸಿಲ್ಕುವದೀ 7 ಸೌಮ್ಯದಲಿ ನಿಷ್ಕಾಮ್ಯದಲಿ | ಸವನಿಟ್ಟು ರತಿಗಳನಿಟ್ಟು | ನಿಲದ್ಹಾಂಗ ಚಲಿಸದಲ್ಹಾಂಗ | ಗುರುವಾಜ್ಞೆಯಲಿ ಅಭಿಜ್ಞೆಯಲಿ 8 ಭಕ್ತಿಯಲಿ ನಿಜವೃತ್ತಿಯಲಿ | ಮಹೀಪತಿಯಾ ಸುಚರಿತೆಯಾ | ಪಡಕೊಂಡವರನವರಿತಾ ಸುಖಭರಿತಾ | ಭವ ಸುಗಮದಲಿ ನೀ ಬೇಗದಲಿ 9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಾ ಕೆಟ್ಟ ಕೇಡ ಹೇಳುವೆನು ಎಲ್ಲ ಲೋಕದಂತೆನ್ನಬದುಕು ಆಗಲಿಲ್ಲ ಪ ಹೆಂಡರಿಚ್ಛೆಯಿಲ್ಲ ಹೀನವೆಂಬುದಿಲ್ಲಪಂಡಿತತ್ವದ ಪರಮಾರ್ಥಕಿಲ್ಲಉಂಡೆ ಉಟ್ಟೆನೆಂಬ ಊಹೆ ಮೊದಲಿಗಿಲ್ಲಕಂಡ ಕಂಡಂತೆ ಚರಿಸುವಂತಾಯಿತೆ 1 ಅರಿವು ಮರೆವು ಇಲ್ಲ ಆಸೆಗಳೇನಿಲ್ಲಇರುಳು ಹಗಲು ಎಂಬುದೆರಡಿಲ್ಲವೋಶರೀರ ಸ್ಮರಣೆಯಿಲ್ಲ ಶ್ರೇಷ್ಠ ಭಾವಗಳಿಲ್ಲಮರುಳು ಮರುಳು ಆಗಿ ತಿರುಗುವಂತಾಯಿತು 2 ಚಿದಾನಂದ ಗುರುವಿನ ಚಿತ್ತದಿ ಪಿಡಿದರೆಒದವಿದ ಬ್ರಹ್ಮಾನಂದವ ಸವಿದುವಿಧವಿಧವಾದ ಬೆಳಕಿನೊಳಾನಡಗಿರೆಇದರಿಂದಲಿ ಇಂತಾದುದಿದೆಲ್ಲವು3
--------------
ಚಿದಾನಂದ ಅವಧೂತರು
ನಾರಾಯಣನು ನಾರಿಯಾದನು ನಾರಾಯಣನು ನಾರಿಯಾಗಲು ಉಗರು ಕಾಂತಿ ಪೋಗಿ ಸಾರಸುಂದರವ ತಿರಸ್ಕರಿಸೆ ಶೃಂಗಾರಸ ನಿಧೆ ಪ ಸುರರಸುರ ಕರೆಸಿ ವೈರೆವ ಮರೆಸಿ ಸ್ನೇಹದಿಂದಿರಿಸಿ ಈ ಕುಲ ವರಿಸಿ ನಿಮ್ಮೊಳು ಬೆರಸಿ ಸುಖವಂಕುರಿಸುವಂತೆ ಸಂಚರಿಸೆಂದು ಸರಸದಿಂದಲಾದರಿಸೆ ಸುರರ ಧರಿಸಿ ಬಿಡದುದ್ಧರಿಸುವೆ ನಿದ್ರಿ ತರಿಸಿ ದೈತ್ಯರ ವರಿಸೆಂದು ಸಿರಿ 1 ದಿತಿಜಾದಿತಿ ಜ್ಯಾತ ತತಿಗಳನು ಸ ಅಮೃತ ಬಪ್ಪದಕ್ಕೆ ಹಿತವ ಪೇಳುವೆನೆಂದತಿಶಯದಿಂದ ಚತುರಾತುಮ ಮಾರುತ ಪಿತಾ ಕ್ಷಿತಿಯೊಳು ನೂರು ಶತ ಯೋಜನ ಪರ್ವತ ಮಂದಾರುಂಟು ಜತೆಯಲಿ ಏಕಮತರಾಗಿ ಪೊಲ್ ಜಾತವ ಕಿತ್ತೆತ್ತಿಸಿತಾಬ್ಧಿಯೊಳು ಮಥಿüಸೆಂದು 2 ಹರಿ ನಿರೂಪವÀ ಧರಿಸಿ ಎಲ್ಲರು ಗಿರಿಯ ಬಳಿಗೆ ಹರಿದರಾಗಲೆ ಕಿರಿ ಬೆರಳ ಅಬ್ಬರದಾಟವು ಬೊಬ್ಬಿರುವ ಧ್ವನಿ ಭೀಕರ ಕರಿ ಶರಧಿ ಮಿಕ್ಕ ಗೋತುರ ಸಪ್ತದ್ವೀಪ ತರು ಮೃಗಾದಿ ಜೀವರು ತಲ್ಲಣಿಸೆ ಗಿರಿ ವೆಗ್ಗಳಿಪ ಭರಕಂದು3 ಸುತ್ತ ಈ ಪರಿಯಾಗುತ್ತಿರೆ ಇತ್ತ ಪ ರ್ವತವಲ್ಲಾಡಿಸಿ ಕಿತ್ತಿ ತೆಗೆದೆತ್ತಿ ಹೊತ್ತರಿತ್ತಂಡದಿ ಚಿತ್ತ ಮಾರ್ಗವನು ಹತ್ತಿ ಬರಲು ದೇವತೆಗಳು ಹೊತ್ತರದ್ರಿಮೂಲ ಎತ್ತಲಾರದಲೆ ತತ್ತಳಗೊಂಡು ಮಾರುತ್ತ ಅಡಿಗಡಿ ಎತ್ತಿಡಲರಿದು ದೈತ್ಯರ ವಂಚಿಸಿ ಆ ದಿತ್ಯರಿಗಿರಿಸಿದುತ್ತಮನೊ4 ವನಧಿsಯೊಳದ್ರಿ ದನುಜ ಮರರ ಗುಣವಿಳಹಿ ಸ ರ್ಪನ ತಂದೀಗ ನೇಣನೆ ಮಾಡಿದರು ಸುರರು ಬಾಲನು ದೈತ್ಯಯರು ಹೂಣಿಕೆಲಿ ವಿನಯದಿಂದ ಮಥಿüಸುವಾಗ ವದನದನಿಲಕೆ ಅನಿಮಿಷರು ತಲ್ಲಣಿಸೆ ಹರಿ ತನ್ನನು ನಂಬಿದವರ ಕಾಯಿದ ವಂಚನೆಯಿಂದ5 ಉಭಯ ಜನರು ಗಂಭೀರವಾದ ಕ್ಷೀರಾಂಬುಧಿ ಕಟವ ರಭಸಗೈದು ಕಕುಭದಲಿ ಪ್ರತಿ ಶಬ್ದಪುಟ್ಟಿ ಉ ದುಭವಿಸಿದವು ಶುಭಾ ಶುಭ ಪ್ರಭು ಧನ್ವಂತ್ರಿ ಸುಲುಭ ರಸ ತಾರೆ ವಿಭುದರೊಳಗೆ ಗಲಭೆಯ ಬೀಸಿ ಅ ನಿಬರು ಒಯ್ಯಲು ಋಭುಜಾದ್ಯರು ಅಬುಜಾಪ್ತ ಪೋದನಭವಾಗೆ6 ಹರಿ ತಿಳಿದ ಭಕ್ತರ ಮನೋಕ್ಲೇಶ ಸಿರಿ ಸ್ತುತಿಗಗೋಚರನೆನ್ನಲು ಧರಿಸಿ ಬಂದನು ಮಿರುಗುತಿಪ್ಪ ಸುಂ ದರ ನಾರೀ ರೂಪ ಪರದೈವ ಕುಸುಮ ಪೊಂಗೆಜ್ಜೆಯ ಸರಪಳಿಯ ಮೇಲೊಲಿವ ಕಾಂಚಿದಾಮ ಶರತ್ಕಾಲದ ಚಂದಿರನಂತೆ7 ಸಣ್ಣವನಾರಾ ಮೋಹನ್ನಕರವು ಪಾ ಕೌಸ್ತುಭ ರನ್ನ ವನಮಾಲೆ ಚಿನ್ನದ ಸರ ಶೋಭನ ಕರಡಿಗೆ ಚನ್ನಗೋಡಿ ಸರ ಬಣ್ಣ ಸರ ರನ್ನದಪದಕ ಕನ್ನಡಿ ಮಲಕು ಚನ್ನಪ ನ್ಯಾವಳ ಮುನ್ನೆ ಸರ್ವಹಾರ ಮೂರ್ತಿ 8 ಮುತ್ತಿನ ಚಿಂತಾಕ ಮುತ್ತಿನೋಲೆ ಜಾತ ಮುತ್ತಿನ ಮೂಗುತಿ ಮುತ್ತಿನಕ್ಷತಿಯು ಮುತ್ತಿನ ಸೂಸುಕಾ ಮುತ್ತಿನ ಜಡೆಯು ಮುತ್ತಿನ ಗೊಂಚಲು ಮತ್ತೆ ತೋಳು ಮುತ್ತು ಮೇಲಗೊಪ್ಪು ಕತ್ತಲೆ ಸೋಲಿಪ ಕಸ್ತೂರಿ ತಿಲಕಾ ನೆತ್ತಿಯ ಬೈತಲು ಸುತ್ತ ತಳಪು ಸುರೋತ್ತಮ ಚಂದ್ರಮಾ ನಿತ್ಯಾನಂದ ಪರುಷೋತ್ತಮನು 9 ನೀಲಗೂದಲು ಸುಫಲಾದಿ ಶ್ರವಣ ಭ್ರೂಲಾದಿಕÀವು ಚಂ ಕಪೋಲ ನಾಸಿಕ ತಾಂಬುಲದ ವದನ ನಾಲಿಗೆತಳ ವಿಶಾಲ ಭುಜ ಕಂದರ ಸುಂಡಾಲಾಕಾರವಾದ ತೋಳು ಕರತಳ ಪಾಲು ಬಪ್ಪ ಸ್ತನ ಸ್ಥೂಲೋದರ ನಾಭಿ ಲೀಲಾ ನಡವು ಪಂ ಚಳ ಊರು ಜಾನು ಲೋಲಾಡುತಾ 10 ಹರಡಿ ಕೈಕಟ್ಟು ಬೆರಳುಂಗುರವ ವರ ಕಂಕಣಾದಿ ಸರಿಗೆ ತಾಯಿತ ಸರ ಹುಲೆಯುಗರು ಎಣ್ಣೆ ನೂಲು ತರುಳಹಾರ ಚೌರಿಯಿಂದ ಪರಿಪರಿ ಚಿತ್ರ ಬರೆದ ಕಂಚುಕಾ ಸರಿಸರಿ ಬಂದಾಭರಣ ಧರಿಸಿ ಅರೆ ಶರಗು ಗಹ್ವರದಿ ಮಾಡುತ್ತ ಮರಿಯಾನೆ ಬಪ್ಪ ತೆರದಂತೆ 11 ಗಂಧ ಪಚ್ಚಿಕೊಂಡು ಒಂದು ಕರದೊಳು ಗಂಧ ವಿಳ್ಯವು ಮತ್ತೊಂದು ಕರದೊಳು ಕಂದುಕ ಪುಟಿಸುತ್ತೊಂದೊಂದು ಹೆಜ್ಚೆಯನು ನಿಂದಲ್ಲಿ ನಿಲ್ಲದೆ ಚಂದದಿಂದ ಬಂದಬಂದಂತೆ ಪೂ ಮಂದರಾದಿ ಮುಡಿಯಿಂದ ಉದರಲು ಮಂದಹಾಸದಿಂದ ವೇಗ ನಡೆ ತಂದು ಸಮೀಪದಿ ನಿಂದನು ಖಳರಿಗೊಂಡಿ ಮಾರಿ12 ದುರುಳ ಸಮೂಹ ಪರವಶನಾಗಿ ಬೆರಗಾಗಿ ನಿಲ್ಲೆ ಪರಿ ಏನೆನಲು ಇರದೆ ಪೇಳಲು ಶಿರವದೂಗುತ್ತಾತಾರವೆಂದ ಭರ ಯೌವ್ವನ ಸ್ತ್ರೀ ಪರಪುರಷರ ಸರಿತದಲ್ಲಿಗೆ ಚರಿಸಬಾರದು ಎರಡು ಬಲದವರು ಕರದಿ ಲೋಚನವ ಮುಚ್ಚಿ ಸಾಗಿರೆ ಪಂಙÂ್ತ 13 ಬಡಿಸೂವೆನೆ ಒಡನೆ ತಮ್ಮಯ ಪಡೆ ಸಮ್ಮತ ಸಾಲ್ಹಿಡಿದು ಕುಳ್ಳಿರೆ ನಡುವೆ ಪಿಯೂಷ ಪಿಡಿದು ದುಷ್ಟರ ಕಡಿಗೊಂದು ಬಿಂದು ಬಡಿಸದೆ ದೃಢ ಭಕ್ತರಿಗೆ ಕುಡಿಸುತ್ತಿರಲು ಬಡ ರಾಹು ತಾನು ದುಡುಗಿ ಸುರರಾ ಎಡೆಯೊಳಿರಲು ಕುಡಿತಿಯೊಳು ತಾ ಬಡಿಸಿ ಚಕ್ರವಾ ತುಡುಕಿದ14 ಓರ್ವನ ತರಿದು ಈರ್ವಗೆ ಮಾಡಿದ ಊರ್ವಿಗೆ ಕೆಡಹಿ ಗರ್ವ ಮುರಿದು ಸರ್ವಬಗೆಯಿಂದ ನಿರ್ವಾಹ ಕರ್ತನು ಓರ್ವನಲ್ಲದೆ ಮತ್ತೋರ್ವನಾರೊ ಗೀರ್ವಾಣ ಜನರ ನಿರ್ವಾಧಿಕವೊಹಿಸಿ ಪರ್ವತೆಡೆಯಿದ್ದ ದು ರ್ವಿಷಯಾಬ್ಧಿಗೆ ಚೀರ್ವನಾಗಿದ್ದ ವಿಜಯವಿಠ್ಠಲ ನಿರ್ವಾಣೇಶ15
--------------
ವಿಜಯದಾಸ
ನಾರಾಯಣಯೆಂಬೊ ನಾಮವನು ನೆನೆದರೆ ಹಾರಿ ಹೋಹುದು ಜನ್ಮಜನ್ಮದ ಪಾಪಗಳು ಮುಕ್ತಿದೋರಿಸು ಮುರಾರಿ ಪ. ಸಕಲವೇದ ಪುರಾಣ ಶಾಸ್ತ್ರಗಳ ತಿಳಿದೋದಿ ಭಕ್ತಿಯಲಿ ತಾಯತಂದೆಯ ಚಿತ್ತವಿಡಿದವರ ಸುಕುಮಾರನೆನಿಸಿಕೊಂಡು ಪ್ರಕೃತಿಯಲಿ ಹೋಮಕ್ಕೋಸ್ಕರ ಸಮಿದೆ ತರಹೋಗಿ ದುಷ್ಕøತ್ಯದ ಫಲದಿಂದ ಅಂತ್ಯಜಳನು ಕಂಡು ಕಾ- ಅರಿತರಿಯದೆ 1 ನಿಲ್ಲು ನಿಲ್ಲೆಲೆ ಕಾಂತೆ ನಿನಗೊಲಿದೆ ನೀನಾರು ಸೊಲ್ಲಿಸೆನ್ನೊಡನೆ ಸತಿಯರ ಕುಲಕೆ ಕಟ್ಟಾಣಿ ಹುಲ್ಲೆನೋಟದ ಭಾವಕಿ ಸಲ್ಲಿಲಿತ ಗಾತ್ರೆ ಸೊಕ್ಕಾನೆ ಮೆಲ್ಲಡಿಯವಳೆ ಮಲ್ಲಿಗೆಗಂಧಿ ಮದನನ ಕೈಯ ಮಸೆದಲಗೆ ಸೆರಗ ಪಿಡಿದ 2 ವಿಪ್ರ ಕೇಳು ನಾವು ಕುಲಹೀನರೆಮ್ಮನೆಯ ಹೊಲಸಿನ ಮಾಂಸ ಗೋವಿನ ಚರ್ಮದ್ಹಾಸಿಕೆಯು ಹಿಂಡು ಬಲು ಘೋರ ಎನಿಸಿಪ್ಪುದು ಬಲೆಗೆ ಸಿಕ್ಕಿದ ಪಕ್ಷಿ ಬೇಂಟೆಯವಗಲ್ಲದೆ ಕುಲವ ಕೂಡುವದೆ ಕಾಮಿನಿ ಕೇಳು ನಿನ್ನೊಡನೆ ಛಲವೊಂದೆ ಎನಗೆ ಎಂದ3 ವ್ಯರ್ಥ ಎನ್ನೊಡನೆ ಮಾತ್ಯಾಕೆಲೊ ವಿಪ್ರ ಚಿತ್ತವೆನ್ನಲ್ಲಿ ಇದ್ದರೆ ಹೋಗಿ ನೀ ಎನ್ನ ನಿನಗೊಲಿವೆನೆಂ[ದಳು] ಅತ್ತ ಕಾಮಿನಿಯ ಒಡಗೂಡಿ ಆಕೆಯ ಪಿತನ ಹತ್ತಿರಕೆ ಹೋಗಿ ಕೇಳಿದರಾತನಿಂತೆಂದ ಇಂಥ ಮೊತ್ತಕೊಳಗಾಗದಿರೊ 4 ಆಗದಾಗದು ಎನ್ನ ಕುಲಬಂಧು ಬಳಗವÀನು ನೀಗಿ ನಿಮ್ಮೊಡನೆ ಕೂಡುವೆನೆಂಬ ಮತವೆನಗೆ ನಾಗಭೂಷಣನ ಪಣೆಗಣ್ಣಿಂದ [ಲುರಿದನ] ಬಾಣತಾಗಿತೆನ್ನೆದೆಯನೆಂದ ಕೂಗಿ ಹೇಳಿದೆ ನಿನ್ನ ಕುಲವಳಿಯದಿರೆಂದು ಹೋಗಿ ಕೂಡೊ ಹೆತ್ತ ತಾಯಿತಂದೆಗಳ ಅದು ಆಗದಿದ್ದರೆ ಆಚೆ ಮನೆಯೊಳಗೆ ನೀವಿಬ್ಬರಲ್ಲಿರಿ ಹೋಗ್ಯೆಂದನು 5 ಹಾಲಂತ ಕುಲವ ನೀರೊಳಗದ್ದಿಪೂರ್ವದ ಶೀಲವನಳಿದು ಸತಿಯೊಡಗೂಡಿ ತಾನು ಚಾಂ- ಡಾಲತಿಗೆ ಹತ್ತುಮಕ್ಕಳ ಪಡೆದು ತಾನವರ ಲೀಲೆಯನು ನೋಡಿ ಹಿಗ್ಗಿ ಆಲಂಬನದಲಿ ಅಜಾಮಿಳನು ಇರುತಿರಲಾಗ ಕಾಲ ಬಂದೊದಗಿ ಕರೆಯಿರೊ ಪಾತಕಿಯನೆಂದು ಯಮನಾಳುಗಳು ಇಳಿದರಾಗ 6 ಎಡೆಗೈಯ ಪಾಶಗಳು ಹಿಡಿದ ಚಮ್ಮಟಿಗಳು ಒಡನೊಡನೆ ಚವುರಿಗಳು ವಜ್ರದ ಮೋತಿಯ [ಕಾಗಡಿ] ಘುಡು‌ಘುಡಿಸುತಲಿ ನಿಂತರು ಕಡುಹಸುಳೆ ಕಂದನಿವನೆಷ್ಟು ಅಂಜುವನೆಂದು ಗಡಗಡನೆ ನಡುಗಿ ಕಂಗೆಟ್ಟು ಅಜಾಮಿಳ ತಾನು ಲಾಲಿಸಿದ ಸ್ವಾಮಿ 7 ಮರಣಕಾಲದಿ ಶ್ರೀಹರಿಯೆಂಬ ನಾಮವನು ಹರಿವುದಾಕ್ಷಣದಲ್ಲಿ ಕರುಣದಿಂದಜಮಿಳನ ಕರೆತನ್ನಿರಿಲ್ಲಿಗೆಂದ ಉರದೊಳೊಪ್ಪುವ ತುಳಸಿದಂಡೆ ಪೀತಾಂ- ಬರವು ಗದೆ ಶಂಖ ಚಕ್ರ ದ್ವಾದಶನಾಮವನು ಧರಿಸಿ ಕರವೆತ್ತಿ ಅಂಜ ಬ್ಯಾಡೆಲೊ ಎಂದು ಹರಿದಾಸರೈ ತಂದರು 8 ಪುಂಡರೀಕಾಕ್ಷನ ಭೃತ್ಯನ ಭಾಧಿಸುವ ಲಂಡರಿವರ್ಯಾರು ನೂಕಿ ನೂಕಿರೊ ಎಂದು ಯಮನ ದಂಡವನು ಮುರಿದು ಬಿಸಾಡಿ ನಿಮ್ಮಸುವ ಹಿಂಡುವೆವು ಎಂದರಾಗ ಕಂಡ ಹರಿದೂತರಿಗೆ ಯಮನಾಳುಗಳೆರಗಿ ಭೂ- ಮಂಡಲದೊಳಗೆ ಎಮ್ಮೊಡೆಯ ಯಮಧರ್ಮನ ಉದ್ದಂಡರಹುದೆಂದರಾಗ 9 ತಂದೆ ಕೇಳೆಮ್ಮ ಬಿನ್ನಪವ ಲಾಲಿಸಿ ನೀವು ಒಂದು ದಿನ ಹರಿಯೆಂಬ ಧ್ಯಾನವನರಿಯನು ನಾವು ಬಂದೆಳೆಯಲಾತ್ಮಜನ ನಾರಗಾ ಎನಲು ಕುಂದಿತೆ ಇವನ ಪಾಪ ಹಂದಿಕುರಿಗಳಿರ ನಿಮಗಿಷ್ಟು ಮಾತುಗಳ್ಯಾಕೆ ನಿಂದಿರದೆ ಹೋಗ್ಯೆಂದು ನೂಕಿ ಯಮನಾಳ್ಗಳನು ತಂದಪೆವು ದಿವ್ಯ ಪುಷ್ಪಕವನೆಂದೆನುತ ಬಂದರಾ ವೈಕುಂಠಕೆ 10 ಎದ್ದು ಅಜಾಮಿಳನು ಮೂರ್ಛೆಯ ತಿಳಿದು ಎಚ್ಚೆತ್ತು ಬಿದ್ದ ಕಾಯವನು ಭಾದಿಸಿದವರ್ಯಾರು ಉ- ಪದ್ರವನು ಬಿಡಿಸಿದ ದಿವ್ಯ ಸ್ವರೂಪ[ದ] ಸುಧಾತ್ಮರಾರು ಎಂದ ಮದ್ಯಪಾನವ ಮಾಳ್ಪ ಹೆಂಗಸಿನ ಒಡನಾಡಿ ಅದ್ದಿದೆ ನೂರೊಂದು ಕುಲವ ನರಕದೊಳೆಂದು ತಾನತಿ ಮರುಗುತ 11 ವಿಪ್ರ ಕುಲದಲ್ಲಿ ಪುಟ್ಟಿ ವೇದಶಾಸ್ತ್ರವನೋದಿ ಮುಪ್ಪಾದ ತಾಯಿ-ತಂದೆಯ ಬಿಟ್ಟು ಬುಧÀ ಜನರು ಮದನ ಬಾಧೆಗೆ ಸಿಲುಕಿ ದುಷ್ಟ ತಾಪವ ಪೊತ್ತೆ ಜನನಿಂದಕನಾದೆ ಅಪ್ರತಿಮ ಅನಂತಪಾತಕಿ ಭುವನದಲಿ ತಪ್ಪಲಿಲ್ಲವೆ ಪಣೆಯ ಬರದ ಬರಹಗಳು ಇನ್ನು ಭಾಪುರೆ ವಿಧಿ ಎಂದನು 12 ಇಷ್ಟು ದಿನ ಹರಿಯೆಂಬೊ ನಾಮವರಿಯೆನು ನಾನು ದುಷ್ಟಯವÀುದೂತರನು ಕಂಡು ಚಂಡಾಲತಿಗೆ ಪುಟ್ಟಿದ ಮಗನ ನಾರಗನೆಂದು ಕರೆದರೆ ಮುಟ್ಟಿದವೆ ನಿಮಗೆ ದೂರು ಇಷ್ಟು ಅವಗುಣಗಳನು ಎಣಿಸಲಿಲ್ಲವೆ ಸ್ವಾಮಿ ಎಷ್ಟು ಕರುಣಾಕರನೊ ಎಂದು ಸ್ನಾನವ ಮಾಡಿ ಬಿಟ್ಟು ತಾಪತ್ರಯವ ಭಯ ನಿವಾರಣ ಹರಿಯ ಗಟ್ಯಾಗಿ ಧ್ಯಾನಿಸಿದನು 13 ತನ್ನ ನಾಮವ ನೆನೆವ ಭಕ್ತರಾದವರೆಲ್ಲ ಧನ್ಯರಿವರಹುದೆಂದು ಜಗವರಿಯಬೇಕೆಂದು ಉನ್ನತವಾದ ಪುಷ್ಪಕವ ತಾ ಕಳುಹಿದ ಪನ್ನಗಾರಿವಾಹನ ಅನ್ಯಾಯ ಇವಗಿಲ್ಲ ಅವನಿಯೊಳಗುತ್ತಮನು ಎನ್ನಯ್ಯ ಏಳೆಂದು ಕೈಲಾಗವÀನು ಕೊಡಲು ಉನ್ನತವಾದ ಪುಷ್ಪಕವೇರಿ ಅಜಮಿಳನು ಹರಿಯ . ಸನ್ನಿಧಿಗೆ ನಡೆದ 14 ಜಲಜನಾಭನ ದಿವ್ಯನಾಮವನು ನೆನೆದರೆ ಕುಲಕೋಟಿ ದೋಷಗಳಿಲ್ಲ ಕುಂದುಗಿಂದುಗಳಿಲ್ಲ ಸಲುವರಲ್ಲೆಂದ ಯಮನು ನಲವಿಂದ ಹೆಳವನಕಟ್ಟೆ ಶ್ರೀ ವೆಂಕಟನ ನೆಲೆಯರಿತು ನೆನೆದವರ್ಗೆಮನ ಭಾದೆಗಳಿಲ್ಲ ಸಾಯುಜ್ಯ ಪದವೀವ ಬಲು ನಂಬಿ ಭಜಿಸಿ ಜನರು 15
--------------
ಹೆಳವನಕಟ್ಟೆ ಗಿರಿಯಮ್ಮ
ನಿಗಮನುಳುಹಿಸಿ ನಗನೆಗದಿಹಗೆ ಜಗದೋದ್ದಾರ ಸುಭಗತ ಪ್ರಿಯಗೆ ಸುಗಮ ಧರಿ ಮೂರಡಿಯ ಮಾಡಿ ಸುಗೊಡಲ ಪಿಡಿದಿಹಗೆ ಬಗೆದು ಜಲಿಧಿಲಿ ಸೇತು ಗಟ್ಟಿದ ಖಗವಾಹನ ಯದುಕುಲ ಲಲಾಮಗೆ ಜಗಮೋಹಿಸುವ ಬೌದ್ಯಕಲ್ಕಿಗೆ ಶರಣು ಸುಶರಣು 1 ಸಿರಿಯನಾಳುವ ದೊರಿಯೆ ನಿನ್ನ ಮರೆಯ ಹೊಕ್ಕಿಹ ಚರಣಕಮಲ ಸರಿಯ ಬಂದ್ಹಾಂಗೆನ್ನ ಹೊರವದು ನಿನ್ನ ದಯ ಘನವು ಬಿರುದು ನಿನ್ನದು ಸಾರುತಿಹುದು ಕರಿಯ ವರದಾನಂದ ಮೂರುತಿ ಸುರಿಸಿ ಕರುಣಾಮೃತವುಗರೆವುದು ತರಳ ಮಹಿಪತಿಗೆ 2 ಮೂರ್ತಿ ಸದ್ಗುರು ನೆನೆವರನುದಿನ ಸಾರ್ಥ ಸದ್ಗುರು ಜನವನದೊಳನುಕೂಲ ಸದ್ಗುರು ತಾನು ತಾಂ ಎನಗೆ ಸಾರ ನೀಡುತ ತನುಮನದೊಳನುವಾಗಿ ಸಲಹುವ ದೀನಮಹಿಪತಿ ಸ್ವಾಮಿ ಭಾನುಕೋಟಿ ತೇಜನಿಗೆ 3 ಶರಣಜನಾರಾಭರಣವಾಗಿಹ ಮೂರ್ತಿ ಸದ್ಗುರು ತರಣೋಪಾಯದ ಸಾರಸುಖವಿರುವ ನಿಜದಾತ ಪರಮಪಾವನ ಗೈಸುತಿಹ ವರ ಶಿರೋಮಣಿ ಭಕ್ತವತ್ಸಲ ಚರಣ ಸ್ಮರಣಿಲೆ ಪೊರೆವದನುದಿನ ತರಳ ಮಹಿಪತಿಗೆ 4 ನೋಡದೆನ್ನವಗುಣದ ದೋಷವ ಮಾಡುವದು ಸದ್ಗುರು ದಯ ಘನ ನೀಡುವುದು ನಿಜ ಸಾರಸುಖವನು ಕರುಣದೊಲವಿಂದ ಬೇಡುವÀದು ನಿನ್ನಲ್ಲಿ ಪೂರಣ ಪ್ರೌಢ ಘನಗುರುಸಾರ್ವಭೌಮನೆ ಮೂಢ ಮಹಿಪತಿ ರಕ್ಷಿಸನುದಿನ ಸರ್ವಕಾಲದಲಿ 5 ಸ್ವಾಮಿ ಸದ್ಗುರು ಸಾರ್ವಭೌಮನೆ ಕಾಮ ಪೂರಿತ ಕಂಜನಾಭನೆ ಸಾಮ ಗಾಯನ ಪ್ರಿಯ ಸಲವ್ಹೆನ್ನಯ ಶ್ರೀ ನಿಧಿಯೆ ಮಾಮನೋಹರ ಮನ್ನಿಸೆನ್ನ ನೀ ನೇಮದಿಂದಲಿ ಹೊರೆವದನುದಿನ ಕಾಮಧೇನಾಗಿಹ ಕರುಣದಿ ದೀನಮಹಿಪತಿಗೆ 6 ಕುಂದ ನೋಡದೆ ಬಂದು ಸಲಹೆನ್ನಯ್ಯ ಪೂರ್ಣನೆ ಇಂದಿರಾವಲ್ಲಭನೆ ತಂದಿ ತಾಯಿ ನೀ ಎನಗೆ ಬಂಧು ಬಳಗೆಂದೆಂದು ನಿನ್ನನೆ ಹೊಂದಿ ಕೊಂಡಾಡುವ ಮೂಢ ನಾ ಬಂದ ಜನ್ಮವು ಚಂದಮಾಡು ನೀ ಕಂದ ಮಹಿಪತಿಗೆ 7 ದೀನಬಂದು ದಯಾಬ್ಧಿ ಸದ್ಗುರು ಭಾನುಕೋಟಿ ತೇಜಪೂರ್ಣನೆ ನ್ಯೂನ ನೋಡದೆ ಪಾಲಿಸೆನ್ನ ನೀ ಘನಕರುಣದಲಿ ನೀನೆ ತಾಯಿತಂದೆಗೆ ನೀನೆ ಬಂಧುಬಳಗ ಪೂರಣ ನೀನೆ ನೀನಾಗ್ಹೊರೆವದನುದಿನ ದೀನಮಹಿಪತಿಗೆ 8
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿನಗೆ ಅಂಜುವನಲ್ಲ ನೀರಜಾಕ್ಷ ಪ ಮನವಚನ ಕಾಯದಿಂ ನಿನ್ನವರಿಗಂಜುವೆನುಅ ರಾಗದಿಂದಲಿ ಇಂದ್ರದ್ಯುಮ್ನ ಭೂಪಾಲಕನು ಯೋಗ ಮಾರ್ಗದಿ ನಿನ್ನ ಭಜಿಸುತಿರಲು ಯೋಗ ಕುಂಭೋದ್ಭವನು ಬಂದು ಶಾಪವೆ ಕೊಡಲು ಆಗ ಮೌನದಲವನನೊಪ್ಪಿಸಿದ ಬಗೆ ಬಲ್ಲೆ 1 ಗುಣವಂತರೀರ್ವರು ಜಯವಿಜಯರು ನಿನ್ನ ಅನುಗಾಲ ಬಾಗಿಲನು ಕಾಯುತಿರಲು ಸನಕಾದಿಗಳು ಬಂದು ಶಪಿಸಲಾಕ್ಷಣದಲ್ಲಿ ಸನುಮತದಲವರ ನೀನೊಪ್ಪಿಸಿದ ಬಗೆಬಲ್ಲೆ 2 ನೃಗರಾಯ ಪುಣ್ಯ ಬರಬೇಕೆನುತ ವಿಪ್ರರಿಗೆ ನಿಗಮೋಕ್ತಿಯಿಂದ ಗೋದಾನ ಕೊಡಲು ಜಗಳ ಪುಟ್ಟಿತು ನೋಡು ಅನ್ಯೋನ್ಯರೊಡಗೂಡಿ ಮಿಗೆ ಶಾಪ ಕೊಡಲವನನೊಪ್ಪಿಸಿದ ಬಗೆ ಬಲ್ಲೆ 3 ಉಣಲಿತ್ತರೆ ಉಂಡು ಪೋಗಲೊಲ್ಲದೆ ಒಂದು ತೃಣದಲ್ಲಿ ಗೋವನ್ನೆ ರಚಿಸಿ ನಿಲಿಸಿ ಮುನಿಪ ಗೌತಮನಿಗೆ ಗೋಹತ್ಯವನು ಹೊರಿಸಿ ಕ್ಷಣದೊಳಗೆ ಅವನ ನೀನೊಪ್ಪಿಸಿದ ಬಗೆ ಬಲ್ಲೆ 4 ಅನಪರಾಧಿಗಳಿಗೆ ಇನಿತಾಯಿತೋ ದೇವ ಎನಗೆ ತನಗೆಂಬುವರಿಗಾವ ಗತಿಯೊ ಮಣಿದು ಬೇಡಿಕೊಂಬೆ ವಿಜಯವಿಠ್ಠಲರೇಯ ನಿನಗಿಂತ ಭಕುತಿ ನಿನ್ನವರಲ್ಲಿ ಕೊಡು ಎನಗೆ 5
--------------
ವಿಜಯದಾಸ