ಒಟ್ಟು 81 ಕಡೆಗಳಲ್ಲಿ , 33 ದಾಸರು , 77 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾದ ಒಮ್ಮಿಗಾದರು ನೆನೆದು ಕರ್ಮ ಪೋಪುವುದು ಎಂತೊ ಇಮ್ಮನಾವಾಗುವುದು ವ್ಯಾಮೋಹ ಸಂಗತಿಗೆ ಕಮ್ಮಗೋಲನ ಬದುಕೀಲಿ ರಂಗಾ ಪ ಹಾಳ ಹರಟಿಗೆ ಮನಾ ಹೇಳಿಸಿಕೊಳದೆವು ಬ್ಬಾಳುತನದಿಂದ ಕುಳಿತು ಕೇಳುವುದು ಕಿವಿಗೊಟ್ಟು ಅವರ ಕಿಂಕರನಾಗಿ ಹೇಳು ಇನ್ನೊಮ್ಮೆ ಎನುತಾ ಲಾಲಿಸಿ ಗತಿ ತಪ್ಪದಂತೆ ಜೋಡಿಸಿ ಮಾತು ಪೇಳುವೆನು ಕೈತಿರುವುತಾ ಶ್ರೀಲೋಲ ನಿನ್ನ ಕೀರ್ತನೆಗೆಯಿಲ್ಲದೊಂದು ಕೀಳು ವಾರ್ತೆಯ ತಾಹದೊ ಮನಸು1 ಧರೆಯನಾಳುವವನ ಸಮ್ಮುಖದಲ್ಲಿ ನಿಂದು ಕರವೆರಡು ನೊಸಲಿಗೆ ಚಾಚಿ ಕರುಣಿಸುವದೆಂದು ಮೊಗವೆತ್ತಿ ಪೊಗಳುವೆ ನಿನಗೆ ಸರಿ ಮಿಗಿಲು ಯಿಲ್ಲವೆಂದೂ ಮರಿಯದಲೆ ಸಲಹುವದು ಮಹಾತ್ಮನಹುದೆಂದು ಹರಿ ನಿಮ್ಮಯ ನಾಮವೆ ನೆನೆವೆ ನಾನೆನ್ನಲು ಮರಪು ಬಂದೊದಗಿಹದೊ ರಂಗಾ2 ಹಸಿವೆ ತೃಷೆಯಿಂದ ಉಳ್ಳವರ ಮನೆಗಳ ಕಾಯಿದು ಬಿಸಿಲು ಬೆಳದಿಂಗಳೆನ್ನದೆ ದೆಸೆಗೆಟ್ಟು ಚಾಲ್ವರಿದು ವಿಷವನುಂಡವನಂತೆ ಕುಸಿದು ಕನಿಷ್ಠನಾಗಿ ರೆಸೆದು ಹದಿನಾರು ಪಲ್ಲುಗಳು ಅವರ ಕೊರಳ ಹಿಸುಕಿ ಹಿಂಸೆಗಳ ಬಿಡಿಸಿ ಹಸನಾಗಿ ನಿನ್ನ ನಾಮಾಮೃತವನುಣದೆ ನಾ ಮುಸುರೆ ಎಂಜಲು ಸವಿದೆನೊ ರಂಗಾ 3 ಹೊನ್ನು ಹಣದ ಆಸೆಗೆ ಹಲಬರನ ಅನುಸರಿಸಿ ಅನ್ನಿಗರ ಕೊಂಡಾಡುತ ಎನ್ನಯ್ಯ ಎನ್ನೊಡಿಯ ಎನ್ನ ಸಾಕುವ ತಾತ ಎನ್ನ ಕುಲ ಉದ್ಧಾರಕಾ ನಾಕ ಬಗೆಯಿಂದ ಮರಿಯದಲೆ ಕುನ್ನಿಯಂತೆ ಕಾಯಿದೆನೊ ಪನ್ನಂಗ ಶಯನನೆ ನಿನ್ನ ಮಹಿಮೆಗಳನ್ನು ಅನ್ನದಲೆ ನರಕಿಕ್ಕಿಳಿದೇ ಸ್ವಾಮಿ 4 ಒಂದು ದಿನವಾದರೂ ಸಂತೋಷದಿಂದಲಿ ಜಿಹ್ವೆ ಇಂದಿರಾರಮಣ ಶರಣಾಗತವತ್ಸಲ ಕಂದರ್ಪನಯ್ಯ ಕಮಲಬಾಂಧವ ಕುಲಾಗ್ರಣಿ ಎಂದು ಸ್ಮರಿಸದೆ ಘೋರ ಅಂಧ ಕೂಪದಿ ಹೊರಳಿದೆ ಮಂದಮತಿಗೊಂದು ಗತಿಯಿಲ್ಲ ವಿಜಯವಿಠ್ಠಲ ತಂದೆ ನೀನೆ ಕಾವುದೋ ಹರಿಯೆ 5
--------------
ವಿಜಯದಾಸ
ಪಾಲಿಸು ಶ್ರೀನಿವಾಸ ಪಾಲಿಸೋ ಪ ಪಾಲಿಸೋ ಯದುಕುಲ ಬಾಲಾ ಗಾನ- ಲೋಲನೆ ಯಾಕಿಂಥ ಜ್ವಾಲಾ ಜನ್ಮ ಬಲ್ಲೇನಾ ಸಂಸಾರಶೂಲಾ ನಿನ್ನ ಚಾಲನದಿಂದಾದವೆಲ್ಲಾ ಪದ್ಯ ಮಾಲೆಹಾಕುವೆ ಸಿರಿಲೋಲಾ ಆಹಾ ಬಾಲನ ಪಡೆದು ಪಾಲಿಸಲಾರೆನೆಂದರೆ ಸೀಲನೇ ಜನನಿ ಪದ್ಮಾಯಗಳಿಗೆ ಪೇಳ್ವೆ 1 ನಾನು ಮಾಡುವುದೆಂಬುದಿಲ್ಲಾ ಯೆನಗಾವ ಸ್ವಾತಂತ್ರ್ಯವು ಇಲ್ಲಾ ಇರೆ ಅನುಗಾಲ ಕಷ್ಟವು ಸಲ್ಲಾ ಎನಗೆ ಜನುಮಾದಿ ಭಯವು ಬಿಟ್ಟಿಲ್ಲ ನೀನು ತನುಸ್ಥಾನ ಬಿಟ್ಹೋದ ಮ್ಯಾಲೆ ಎನ್ನ ಸ್ವಾತಂತ್ರ್ಯವು ಇಲ್ಲವಾಯಿತಲ್ಲ ಆಹಾ ಅನುದಿನ ಹಸಿವೆ ತೃಷೆಗಳಿಂದ ಬಳಲೋ ದಾ- ಸನು ನಿನ್ನವನಿಗೆ ಸ್ವಾಧೀನವೆಲ್ಲಿಹುದೈಯ್ಯಾ 2 ನಿತ್ಯ ಸಂಸಾರಿಯಾದೆನಗೆ ಮತ್ತೆ ಮೃತ್ಯು ಬೆನ್ಹತ್ತಿರುವವಗೆ ಮಾಡೋ ಕರ್ಮ ಬದ್ಧ ಎನಗೆ ನೀ- ಚತ್ವದಿದುಪಜೀವಿಸುವವಗೆ ನಾನು ನಿತ್ಯನೆಂಬುವ ದುರಾತ್ಮನಿಗೆ ಆಹಾ ಮುಕ್ತಿಗೊಡೆಯ ಪುರುಷೋತ್ತಮ ನಿನ್ನ ದಾ- ಸತ್ವನಿತ್ತು ಸುಶಕ್ತನಮಾಡು ನೀ 3 ನಿನ್ನ ಆಧೀನವೊ ಎಲ್ಲಾ ನಾನು ನಿನ್ನ ದಾಸನು ಶಿರಿನಲ್ಲಾ ಅನು- ದಿನ ಮಾಡುವ ಕಾರ್ಯವೆಲ್ಲ ನೀನು ಚಲನೆದಂದದಿ ಮಾಡ್ವೆನಲ್ಲಾ ಯೆಂನೊ- ಳಾವ ತಪ್ಪಿತವೇನೋ ಇಲ್ಲಾ ನಿನ್ನ ಸಂಕಲ್ಪದಂತಾಗೋದೆಲ್ಲಾ ಆಹಾ ತನುವ ಕೊಟ್ಟವ ನೀನೆ ತನು ಕೊಂಡೊಯ್ವನೂ ನೀನೆ ಹನುಮೇಶವಿಠಲಾ ನಿನ್ನವನಾದ ಮ್ಯಾಲೆನ್ನಾ4
--------------
ಹನುಮೇಶವಿಠಲ
ಬಿನ್ನವೆನ್ನೆಣೆಸದಿರು ಎಲೆ ಮಾನವಾ ಚನ್ನಕೇಶವ ಸ್ವಾಮಿ ಒಲಿದು ಪಾಲಿಸುವಾ ಪ ವಸುಧೆಯಲಿ ಚಲಿಸುತಿಂತ ಸಕಲ ಜಂತುಗಳೆಲ್ಲ ಹಸನಾಗಿ ತಿಳಿಯದೆ ನಿನ್ನಾತ್ಮವೆಂದು ತೃಷೆ ಕ್ಲೇಶಗಳು ಮುರಿದೊಗೆವ ಜೀವವನು ಕಸಕಸರಿ ಮಾಡದಿರು ಪರರಾತ್ಮವೆಂದು 1 ಅವರಿವರು ಬಂಧುಗಳು ಅಪ್ತೇಷ್ಟ ಸಹೃದರು ಇವರವರು ದೂಷಕರು ಪರಜಾತಿಯೆಂದು ಸವಿಸುತಲಿ ಮನಸನ್ನು ಪರಪಂಚವೆನಿಸುತ್ತ ಭವವನ್ನೆ ಸೆಲೆ ನಂಬಿ ಪರರಾತ್ಮವೆಂದು 2 ದಾಸದಾಸರಿಗೆಲ್ಲ ವಂದನೆಯ ಮಾಡುತ್ತ ದಾಸರೆಲ್ಲರು ಜಗದಿ ಏಕಾತ್ಮರೆಂಬ ವಾತನೆಯ ನಂಬದಲೆ ಬಿನ್ನಾತ್ಮರೆಂದೆಣಿಸಿ ವಾಸುಕೀಶಯನನೂ ಭಿನ್ನಾತ್ಮನೆಂದು 3
--------------
ಕರ್ಕಿ ಕೇಶವದಾಸ
ಭಕ್ತಿಯು ಸುಲಭ ತಾನಲ್ಲ ನಿಜಭಕ್ತಿ ದೊರಕಲವಗಾಗುವುದು ಎಲ್ಲ ಪ ಎಲ್ಲ ಸಂಗವ ಬಿಡಬೇಕು ತಾನುಬಲ್ಲ ಗುರುವ ಸೇವೆ ಮಾಡಬೇಕುಎಲ್ಲಕೆ ತಾನಿರಬೇಕು ಭಕ್ತಿಬಲ್ಲವನಿಂದ ನಿತ್ಯದಿ ಹೆಚ್ಚಬೇಕು 1 ಹೇಳಿದಲ್ಲಿಗೆ ಹೋಗಬೇಕು ಮನಕೇಳದಿರಲು ಬುದ್ಧಿಯ ಹೇಳಬೇಕುಕಾಳರಾತ್ರೆಯೆನ್ನದಿರಬೇಕು ನಿತ್ಯಬಾಲಕನಂತೆ ತೋರುತಲಿರಬೇಕು 2 ಹಸಿವು ತೃಷೆಯ ಬಿಡಬೇಕು ತಾನುಎಸಗಿ ಗುರುಸೇವೆ ಮಾಡಬೇಕುಬಿಸಿಲು ಮಳೆ ಎನ್ನದಿರಬೇಕು ಧೈರ್ಯವೆಸಗಿ ಭಯಕೆ ಬೆಚ್ಚದಲಿರಬೇಕು 3 ಗುರುವಿನನಡೆ ನೋಡಬೇಕು ಆಗುರುವಿನ ನಡೆಯ ಕಂಡಂತಿರಬೇಕುಕರಣ ವಿಷಯ ಹೋಗಬೇಕು ನಿತ್ಯಭರಿತವಾನಂದವಾಗಿರಬೇಕು 4 ಕರವ ನೀಡುವನು ಏ-ನೆಂತು ಪೇಳಲಿ ತನ್ನೊಳೆರಕ ಮಾಡುವನು 5
--------------
ಚಿದಾನಂದ ಅವಧೂತರು
ಭೀಮರಾಯನ ನಂಬಿ ಭೀಮಸೇನನಭೀಮಭವವಾರಿಧಿಯ ಬೇಗದಾಟುವರೆ ನಮ್ಮ ಪ. ಬಕ ಮೊದಲಾದ ಹಿಡಿಂಬಕ ದುರ್ಜನರ ಕೊಂದುಸುಖಪಡಿಸಿದನಂದು ದ್ವಿಜಕುಲಜರಾಗ ಕೂಡ 1 ಜರಾಸಂಧನ ಕೂಡೆ ವರ ಯುದ್ಧವನ್ನೆ ಮಾಡಿಸರಕು ಮಾಡದೆ ಕೊಂದ ಧಾರುಣಿಯೊಳಗೆ ನಿಂದ 2 ಸತಿ ಕೃಷ್ಣೆಯಬಾಧಿಸೆ ಘಾಸಿಮಾಡಲು ವಂದ್ಯರ ಹೇಸದೆ ಮೋಸದಿ ಕೊಂದ3 ಕಡುತೃಷೆಗೆ ದುಶ್ಶಾಸನನೊಡಲ ಬಗಿದು ರಕ್ತಕುಡಿದಂತೆ ತೋರ್ದ ನಮ್ಮೊಡೆಯ ದ್ರೌಪದಿಪ್ರಿಯ 4 ಭೀಮ ತನ್ನ ಮರೆಹೊಕ್ಕ ಸುಜನರ ಕಾವಸ್ವಾಮಿ ಶ್ರೀಹಯವದನ ರಾಮನಾಣೆ ಸತ್ಯವಿದು 5
--------------
ವಾದಿರಾಜ
ಮತಿಗೆಟ್ಟೆ ಭವತಾಪವ್ಯಥೆಯಿಂದ ನಾನು ಸುತನರಿಕೆ ಹಿತದಿಂದ ಕೇಳು ಮಮಪಿತನೆ ಪ ವಿಧಿವಶದಿ ಸಿಲ್ಕಿ ನಾ ಉದಿಸಿ ಈ ಬುವಿಯೊಳಗೆ ಸದಮಲನೆ ತವಸ್ಮರಣವಿಧಿಯ ತಿಳಿಯದಲೆ ಉದಯದೇಳುತ ನಾನು ಅಧಮ ಉದರಕ್ಕಾಗಿ ವದನತೆರೆದನ್ಯರನು ಹುದುಗಿ ಬೇಡುತಲಿ 1 ಹಸಿತೃಷೆಯ ತಡೆಯದೆ ಪುಸಿಯಾಡಿ ದಿನಗಳೆದೆ ನಿಶೆಯೆಲ್ಲ ಸಂಸಾರವ್ಯಸನದೊಳು ಕಳೆದೆ ವಸನ ಒಡೆವೆಗೆ ಮೆಚ್ಚಿ ವಸುಧೆಯೊಳ್ತಿರುತಿರುಗಿ ಪುಸಿಯ ಮಾನವರನ್ನು ರಸನೆಯಿಂದ್ಹೊಗಳಿ 2 ವಾನರಗೆ ವಶನಾದಿ ದಾನವನ ರಕ್ಷಿಸಿದಿ ಮಾನವಗೆ ಆಳಾದಿ ದೀನದಯಾಸಿಂಧು ನೀನೆ ಗತಿಯೆನಗಿನ್ನು ಜ್ಞಾನಬೋಧಿಸಿ ಕಾಯೊ ಹೀನಭವ ಗೆಲಿಸಿ ಮಮಪ್ರಾಣ ಶ್ರೀರಾಮ 3
--------------
ರಾಮದಾಸರು
ಮನ್ನಿಸ್ಯಾದವಾ ಮಮತೆಯಿಂದಾಲೆನ್ನ ಮಾಧವಾ ಪ. ನೀರಜಾಕ್ಷನೆ ಪಾಲಿಸು ಜಗದ್ಭರಿತವಾಸನೆ ಮೂರುದಿನದ ಬಾಳ ನೆಚ್ಚಿ ಘಾಸಿಯಾದೆನು ನಾರಾಯಣ ನಿಮ್ಮ ನೆನೆವೆನನುದಿನಾ 1 ಬಿಸಜನೈಯ್ಯನೆ ಶ್ರೀತುಲಸಿಮಾಲಾ ಭೂಷÀನೆ ಹಸಿವು ತೃಷೆಯು ನಿದ್ರೆಯಿಂದಾ ಹೊತ್ತುಗಾಣೆನೈಯ್ಯಾ ದೆಸೆಗೆದೆಸೆಗೆ ಇಂದ್ರಿಯಗಳು ಎಳೆದು ಕಾಡುತಾರೈಯ್ಯಾ ವಸುಧಿಗೊಡೆಯ ನಿಮ್ಮ ನೆನೆಯದೆ ಮುಗ್ಧಳಾದೆನು 2 ದುರಿತನಾಶನೆ ಪಾಲಿಸು ಜಗದ್ಭರಿತವಾಸನೆ ನಿರುತ ವ್ಯಾಧಿಯಿಂದ ಮಂದಳಾದೆನು ಸರ್ವೇಶನೆ ಮರುತನಂತೆ ಮನಸ್ಥಿರವ ಮಾಡಿಸೋ ಲಕ್ಷ್ಮೀಶ ಕರ್ತೃ ಹೆಳವನಕಟ್ಟೆ ವೆಂಕಟೇಶನೆ 3
--------------
ಹೆಳವನಕಟ್ಟೆ ಗಿರಿಯಮ್ಮ
ಮರತಿರಲಾರೆ ನಿಮ್ಮನೂ ಹರಿಯೇ ಧೊರೆಯೆ ಪ ಸುರಮುನಿವರನುತ ಕರಿವರ ಸುಚರಿತ ಕರುಣಿಸಿ ಕಾಯೊ ಮಮದುರಿತಹರಣ ವೆಂಕಟ್ರಾಮಾನುಜ 1 ಕುಸುಮ ಶರೀರ ಭಾವಾ ಪಶುಪತಿಪ್ರಿಯಸೇವೆ ತೃಷೆಯ ನೀಗಿಸೊ ವೆಂಕಟ್ರಾಮಾನುಜ2 ಭರತಪುರೀಶನ್ಯಾರೊ ನಿಜ ಸುರತವ ತೋರೋ ಗುರುವು ತುಲಶಿರಾಮ ದೊರೆಯೆ ಸರಿಯೊ ವೆಂಕಟ್ರಾಮಾನುಜಾ 3
--------------
ಚನ್ನಪಟ್ಟಣದ ಅಹೋಬಲದಾಸರು
ಮಳೆಯ ದಯಮಾಡೊ ರಂಗಯ್ಯ ನಿಮ್ಮ ಕರುಣ ತಪ್ಪಿದರೆ ಉಳಿಯದೀ ಲೋಕ ಪ. ಪಶುಜಾತಿ ಹುಲ್ಲೆ ಸಾರಂಗ ಮೃಗಗಳು ಬಹಳ ಹಸಿದು ಬಾಯಾರಿ ಬತ್ತಿದ ಕೆÀರೆಗೆ ಬಂದು ತೃಷೆಯಡಗದೆ ತಲ್ಲಣಿಸಿ ಮೂರ್ಛೆಗೊಂಡು ದೆಸೆದೆಸೆಗೆ ಬಾಯಿ ಬಿಡುತಿಹವಯ್ಯ ಹರಿಯೆ 1 ಧಗೆಯಾಗಿ ದ್ರವಗುಂದಿ ಇರುವ ಬಾವಿಯ ನೀರ ಮೊಗೆ ಮೊಗೆದು ಪಾತ್ರೆಯಲಿ ನಾರಿಯರು ಹಗಲೆಲ್ಲ ತರುತಿಹರು ಯೋಚನೆಯ ಮಾಡುತ್ತ ಬೇಗದಿಂದಲಿ ತರಿಸೊ ವೃಷ್ಟಿಯನು ಹರಿಯೆ2 ಸಂದು ಹೋದವು ಜ್ಯೇಷ್ಠ ಆಷಾಢ ಶ್ರಾವಣ ಬಂದಿದೆ ಭಾದ್ರಪದ ಮಾಸವೀಗ ಇಂದು ಪುರಂದರಗೆ ಹೇಳಿ ವೃಷ್ಟಿಯ ತರಿಸೊ ಸಂದೇಹವಿನ್ಯಾಕೆ ಹೆಳವನಕಟ್ಟೆಯ ರಂಗ3
--------------
ಹೆಳವನಕಟ್ಟೆ ಗಿರಿಯಮ್ಮ
ಮುದ್ದು ತಾರೋ ರಂಗಾ ಮುದ್ದು ತಾರೋ ಕೃಷ್ಣಾ ಸಿದ್ಧ ವೇದಾ ಗಮಾ ಭೇದ್ಯ ಮೋಹನ್ನಾ ಪ ಕಾಣಲಿಕ್ಕೆ ಹಸಿವೆ ತೃಷೆಗಳೇ ಮರೆವದು ಏಣಾಂಕ ಬಿಂಬ ಮೊದಾ ಬಾಯಿಂದಾ 1 ಕರ್ಪುರವಾ ಕರಡಿಗಿಯಂತೆ ಹೊಳೆವುತಾ ವಪ್ಪುತಿಹ ಚಲ್ವ ಪುಟ್ಟ ಬಾಯಿಂದಾ2 ಅಮ್ಮ ತಾರಮ್ಮ ನಾನುಂಡೆನೆಂದು ಕೈಯ ಬೀಸಿ ಝಮ್ಮನೇ ತೊಡಲು ನುಡಿ ಬಾಯಿಂದಾ 3 ತಪ್ಪ ಹೆಜ್ಜೆಯನಿಟ್ಟು ಘಲಘಲನೆ ನಡೆವುತ ಧಪ್ಪನೆ ಬೀಳುತ್ತಾ ಬಿರಿವ ಬಾಯಿಂದಾ4 ಹಣೆಯ ಅರಳೆಲೆ ಮಾಗಾಯಿಗಳಲ್ಲಾ ಆಡಿಸುತಾ ಕುಣಿದು ಬೆಣ್ಣೆಯ ಬೇಡುವ ಬಾಯಿಂದಾ5 ಕೋರಳಿಗೆ ಅಂಟಹಾಕಿ ಕೈಗಳಿಂದಾ ಬಿಗಿದಪ್ಪಿ ಗುರು ಮಹಿಪತಿ ನಂದನ ಜೀವನ್ನಾ 6
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮೊರೆಹೊಕ್ಕೆ ಹರಿ ನಿಮ್ಮ ಚರಣಕಮಲವ ನಾನುಮರೆಯದೆ ಸಲಹೆನ್ನ ವರದಾ ಪಕರಿ ಧ್ರುವ ಪ್ರಹ್ಲಾದ ವಿಭೀಷಣರ ರಕ್ಷಿಸಿದೆಪರಂದೇವಿ ವಲ್ಲಭನೆ ವರದಾ ಅ ಎಂಬತ್ತು ನಾಲ್ಕು ಲಕ್ಷ ಜೀವರಾಶಿ ಯೋನಿಯೊಳುಹಂಬಲಿಸಿ ನಾ ಬಂದೆ ವರದಾಅಂಬುಜೋದ್ಭವನ ಬರೆಹವ ಮೀರಲಾರದೆ ನರಬೊಂಬೆ ಗರ್ಭದೊಳಿದ್ದೆ ವರದಾ 1 ತುಂಬಿದ್ದ ಕೀವು ಮಲಮೂತ್ರ ರಕ್ತದಿಂ ಹೊರಳುವಸಂಭ್ರಮದೊಳಿದ್ದೆ ನಾ ವರದಾಒಂಬತ್ತು ಮಾಸವು ಕಳೆದು ಗುಂಡಿಯೊಳಿಳಿದು ಈಕುಂಭಿನಿಗೆ ನಾ ಬಂದೆ ವರದಾ 2 ನಸುನುಡಿಯನು ಕಲಿತು ನಸುನಗೆಗಳ ನಕ್ಕು ಈ ಕುಶಲದಾಟವ ಕಲಿತೆ ವರದಾಎಸೆವ ಯೌವನ ಬಂದು ಶಶಿಮುಖಿಯರೊಳು ಕಾಮತೃಷೆಗೆ ನಾನೊಳಗಾದೆ ವರದಾ 3 ನುಸುಳಿಸುವ ಚಾಂಡಾಲ ಗುಣವನೆಣಿಸದೆ ಕಾಮವಶನಾಗಿ ನಾನಿದ್ದೆ ವರದಾಉಸುರಲೆನ್ನಳವಲ್ಲ ಬೆಸನಿತ್ತು ಸಲಹೆನ್ನಬಿಸರುಹಾಕ್ಷನೆ ಕಂಚಿ ವರದಾ 4 ಗುರು ಹಿರಿಯರ ಕಂಡು ಸರಿಸಮಾನದಿ ನಾನುಬೆರೆದುಕೊಂಡಿದ್ದೆನೋ ವರದಾನರರ ಕೊಂಡಾಡಿ ನಾಲಗೆಯೊಣಗಿ ಅತಿಯಾಗಿನರನರಳಿ ಬೆಂಡಾದೆ ವರದಾ 5 ಕಾಸಿಗಾಸೆಯ ಪಟ್ಟು ಸಹಸ್ರ ಲಕ್ಷದ ಪುಸಿಯಬೇಸರಿಸದೆ ಬೊಗಳಿದೆ ವರದಾವಿಶೇಷ ನಿಮ್ಮಂಘ್ರಿಯ ನಂಬಲಾರದೆ ಕೆಟ್ಟದೋಷಕನು ನಾನಾದೆ ವರದಾ 6 ಪಂಚೇಂದ್ರಿಯಗಳೊಳಗೆ ಸಂಚರಿಸುವೀ ಮನವುಕೊಂಚ ಗುಣಕೆಳೆಯುತಿದೆ ವರದಾಪಂಚತ್ರಿಂಶತ್ಕೋಟಿ ಭೂಮಂಡಲದೊಳೆನ್ನಂಥಪಂಚಪಾತಕನುಂಟೆ ವರದಾ 7 ಮುಂಚೆ ಶ್ರೀ ಹರಿಯೆ ನಿಮ್ಮ ವರಧ್ಯಾನ ಮಾಡುವರಪಂಚೆಯಲ್ಲಿರಿಸೆನ್ನ ವರದಾಪಂಚಬಾಣನ ಪಡೆದ ನೆಲೆಯಾದಿ ಕೇಶವ ಈ ಪ್ರಪಂಚವನು ಬಿಡಿಸೆನ್ನ ವರದಾ 8
--------------
ಕನಕದಾಸ
ಯಾಕೆನಗೆ ವೈರಾಗ್ಯ ಪುಟ್ಟಲಿಲ್ಲವೊ ದೇವ ಏನು ಪಾಪಿಯೊ ಜಗದಲಿ ಪ. ಸಾಕು ಸಾಕೀ ವಿಷಯ ಚಿಂತನೆಯ ಬಿಡಿಸಿನ್ನು ಲೋಕನಾಯಕನೆ ಸ್ವಾಮಿ ಅ.ಪ. ಅಸನವಸನಗಳಿಗೆ ಆಲ್ಪರಿದು ಅನ್ಯರಿಗೆ ಬಿಸಜನಯನನೆ ಕಾಲಹರಣೆಯನೆಗೈದೆ ವಸುದೇವಸುತ ನಿನ್ನ ಅರಘಳಿಗೆ ನೆನೆಯದಲೆ ಹಸಿವು ತೃಷೆಯಿಂ ಬಳಲಿ ಬೆಂಡಾದೆನಯ್ಯಾ 1 ಇಂದ್ರಿಯಗಳೆಲ್ಲವನು ಬಂಧನದೊಳಗೆ ಇರಿಸಿ ಇಂದಿರೇಶನೆ ನಿನ್ನ ಧ್ಯಾನಿಸದಲೆ ಮಂದಮತಿಯಿಂದ ನಾ ಮಮಕಾರದಲಿ ಬಿದ್ದು ಮಂದ ಜನರೊಡನಾಡಿ ಮಾಯಕೊಳಗಾದೆ 2 ಭಕ್ತಿಮಾರ್ಗವ ಕಾಣೆ ಜ್ಞಾನ ಮೊದಲೆ ಅರಿಯೆ ಮುಕ್ತಿಗೊಡೆಯನೆ ಎನ್ನ ಮುದದಿಂದ ಸಲಹೊ ಯುಕ್ತಯುಕ್ತಿಗಳರಿಯೆ ಸುತ್ತುತಿಪ್ಪೆನೊ ಭವದಿ ಶಕ್ತ ನೀ ಒಳಗಿದ್ದು ಎನ್ನ ಕಾಡುವರೆ 3 ಕರ್ಮಮಾರ್ಗವ ತೊರೆದು ನಿರ್ಮಲದಲಿ ನಿನ್ನ ಒಮ್ಮೆಗಾದರೂ ಮನದಿ ನೆನೆಯಲಿಲ್ಲ ರಮೆಯರಸನೆ ಶ್ರೀ ಗುರುಗಳಂತರ್ಯಾಮಿ ಕರ್ಮತ್ರಯಗಳ ಕಡಿದು ಕರುಣದಲಿ ಕಾಯೊ4 ಪಾಪರಹಿತನೆ ಎನ್ನ ಪಾಪ ಕರ್ಮಗಳೆಲ್ಲ ಪರಿ ನುಡಿದೆ ನೀ ಪರಿಹರಿಸಿ ಕಾಯೋ ಗೋಪಾಲಕೃಷ್ಣವಿಠ್ಠಲನೆ ನೀನಲ್ಲದಲೆ ಈ ಪಾಪಿಯನು ಕಾಯ್ವರಾರೊ ಶ್ರೀ ಹರಿಯೆ5
--------------
ಅಂಬಾಬಾಯಿ
ಯಾರ ಕೃತಕವು ಇದು ವಿಚಾರವನು ಮಾಡಿ ಕಾರಣೀಕದ ಸ್ವಪ್ನ ಕಾಣುತಿದೆ ನೋಡಿ ಪ ಕಾಳ ಮೇಘಧ್ವನಿಯು ಗಾಳಿ ಮಳೆ ಮಿಂಚುಗಳು ಧಾಳಿ ಇಡುತಿಹ ಸಿಡಿಲು ಬಹಳ ಕತ್ತಲೆಯು ಹಾಳೂರ ಮಧ್ಯದೊಳು ಬೀಳುತಿಹ ವಾರಿಗಳು ಮೃಗ ಮೈಮೇಲೆ ಬೀಳುವುದ 1 ವೃಷ್ಟಿ ತೀರುವ ತನಕ ಇಟ್ಟೆಡೆಯೊಳಿರುತಿರ್ದು ಕೆಟ್ಟ ಪಥದಲಿ ಚಾರುಗಟ್ಟಿವಿಳಿದು ಗಟ್ಟಿಯಾಗಿಹ ಚಳಿಯು ಹುಟ್ಟಿ ಕೈಕಾಲುಗಳು ಒಟ್ಟಾಗಿ ಕೂಡಿರ್ದು ದೃಷ್ಟಿ ಬಿಡುತಿಹುದು 2 ಬಿಸಿನೀರ ಮಳೆಯೊಳಗೆ ನುಸಿತ ಗುಣೆಯಸೆಯೊಳಗೆ ಎಸೆದು ತೋರುವ ಉರಿಯ ಹಸಿಯ ಮೆಣಸಿನೊಳು ಗಸಣಿಯನು ಕೈಕೊಂಡು ಕಸಮುಸುರೆಯಾಗಿರ್ದು ಉಸುರಲಾರದೆ ತೃಷೆಯ ಹಸಿದ ಬಳಲಿಕೆಯ 3 ನಿಂದೆಯಾಗಿಹ ಮೃಗದ ಚಂದವನು ಮೈಗೊಟ್ಟು ಬಂದುದೆನಗೈಶ್ವರ್ಯ ಎಂದು ಹರುಷಿಸುತ ಮಂದಹಾಸದ ಒಳಗೆ ಬಂಧನದಲಿರುತಿರ್ದು ಮುಂದುವರಿದು ವ್ಯಸನದೊಳು ಬಂದಿರ್ದ ಬಗೆಯ 4 ಮೂರು ಮಂದಿಯು ಬಂದು ಸೇರಿದರು ದೂರಿಡುವ ಆರು ಕರೆದರು ತಾನು ಬಾರೆನೆಂಬ ಮೇರೆಯಾಗಿಯೆ ಬಪ್ಪ ಮೂರಾರು ತಾ ಬಿಡುವ ಸಾರಿ ಚೋರತ್ವದಲ್ಲಿ ಪರವೂರ ಸುಲಿವ 5 ಮೇಲು ದುರ್ಗವ ಕಂಡು ಗಾಳಿಗೋಪುರವನ್ನು ಆಳ ಬಲುಹುಳ್ಳವನು ಅವಸರದೊಳು ನೂಲಯೇಣಿಯನಿರಿಸಿ ಏರಿಳಿದು ಬಾಹಾಗ ಕಾಲು ಜಾರಿಯೆ ಬಸಿದ ಶೂಲದೊಳು ಬೀಳುವುದು 6 ಹೀಗಿರುವ ಕೃತ್ಯಗಳು ನಾಗಶಯನನಿಗರುಹು ಬೇಗದೊಳು ಪರಿಹರಿಪ ಯೋಗವನು ಕೊಡುವ ನಾಗಗಿರಿವಾಸನಹ ವರಾಹತಿಮ್ಮಪ್ಪ ತೂಗುವನು ತೊಟ್ಟಿಲೊಳು ಆಗುವುದನಿತ್ತು 7
--------------
ವರಹತಿಮ್ಮಪ್ಪ
ಯಾರಲ್ಲಿ ಪೋದರು ನೀರಾದರೂ ಕೊಡರು ಪ ದೂರ ಹೋಗೆಂಬರು ಬದಿಸೇರಲೀಸರು ಅ.ಪ ಹಸಿವು ತೃಷೆಗಳಿಂದಲಿ ವ್ಯಸನವಪಡುತಲಿ ಉಸುರುಸುರೆನುತಲಿ ಬಸವಳಿದು ಭಯದಲಿ 1 ರೋಗದಲಿ ಬಳಲುತ ಹ್ಯಾಗಿನ್ನು ಎನ್ನುತ ಕೂಗುತ್ತ ಬಾಯ್ಬಿಡುತ ಎಲ್ಲರನು ಬೇಡುತ 2 ಗುರುರಾಮವಿಠಲನ ನೆರೆ ನಂಬದಿರುವನ ಪರಿಪರಿಯಲಿ ಜನ ಬಯ್ಯುವರನುದಿನ 3
--------------
ಗುರುರಾಮವಿಠಲ
ಯಾರು ಮೀರಲರಿದು ಬ್ರಹ್ಮ ಬರೆದಲಿಖಿತವ ಪುರಾರಿ ಮಿತ್ರನೊಬ್ಬ ಬಲ್ಲನಿದರ ಕೆಲಸವ ಪ ಎಲ್ಲಿ ದಂಡು ಎಲ್ಲಿ ಗೂಳ್ಯವೆಲ್ಲಿಗಮನವಲ್ಲಿ ವಾಸ ವೆಲ್ಲಿ ಊಟವೆಲ್ಲಿ ಶಯನವು ಎಲ್ಲಿ ನಿದ್ದೆ ಎಲ್ಲಿ ಸುಲಿಗೆ ಎಲ್ಲಿ ಕಡಿತ ವೆಲ್ಲಿ ಮರಣ ವೆಲ್ಲಿ ರುದ್ರಭೂಮಿ ಮೆತ್ತೆಲ್ಲಿ ಜನನವು 1 ಊರದೆಲ್ಲಿ ಮನೆಗಳೆಲ್ಲಿ ನಾರಿ ನೆಂಟರಿಷ್ಟರೆಲ್ಲಿ ಸೇರಿಸಿಟ್ಟ ವಸ್ತು ವಡವೆ ಒಂದು ಕಾಣವು ಭೂರಿ ಪಶುಗಳೆಲ್ಲಿ ಭಯವು ಏರಿ ನೋಳ್ವಗುಡ್ಡ ಸಂ ಚಾರವೆಲ್ಲಿ ಹಸಿವು ತೃಷೆಯು ಹರುಷ ದುಃಖವು 2 ಹಿಂದುಯಿಲ್ಲ ಮುಂದುಯಿಲ್ಲ ಸಿಂಧುತನಕ ತಪರರಿಂದ ಕೆಟ್ಟ ದಿಂದ ಸಲಹುತಿರುವ ಮರುತ ನಂದನ ಕೋಣೆವಾಸ ಲಕ್ಷ್ಮೀರಮಣ ಬಲ್ಲನೋ 3
--------------
ಕವಿ ಪರಮದೇವದಾಸರು