ಒಟ್ಟು 69 ಕಡೆಗಳಲ್ಲಿ , 25 ದಾಸರು , 67 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರೆ ಪಾರ್ವತಿ ಸಾರೆ ಸುಖವ ತೋರೆ ನಿನ ದಯವ ಪ ಬಾರಿ ಬಾರಿಗು ಪ್ರಾರ್ಥಿಸುವೆನೆ ಸಾರಸಾಕ್ಷಿಯೆ ಸರ್ಪವೇಣಿಯೆ ಅ.ಪ ದಕ್ಷಕುವರಿಯೆ ಈಕ್ಷಿಸೆನ್ನನು- ಪೇಕ್ಷೆ ಮಾಡದಲೆ ಅಕ್ಷಿತ್ರಯನ ಸತಿಯೆ ಭಕ್ತರ ಕಷ್ಟ ಬಡಿಸುತಲಿ ಸೂಕ್ಷ್ಮ ಮತಿಯನಿತ್ತು ಕೃಷ್ಣನ ಸ್ತೋತ್ರಗಾನದಲಿ ಅ- ಪೇಕ್ಷೆಯೊದಗುವ ಮನವ ಪಾಲಿಸು ರಕ್ಷಿಸೀಗಲೆ ಭಕ್ತವತ್ಸಲೆ 1 ಮಂದಗಮನೆ ಮತ್ತೊಂದು ಪೇಳುವೆ ನಂದಿವಾಹನನಾ ಮುಂದೆ ಸ್ತುತಿಪ ಭಕ್ತವೃಂದ ವಿ- ದೆಂದು ಪೇಳಿದೆ ನಾ ಸುಂದರ ಶ್ರೀ ಹರಿಯ ಸೇವೆಗೆ ಪೊಂದಿಸೆನ್ನ ಮನ ಚಂದದಿಂದ ಪ್ರಾರ್ಥಿಸುವೆನೆ ಸುಂದರಾಂಗಿಯೆ ನಿನ್ನನನುದಿನ 2 ಕಮಲನೇತ್ರೆಯೆ ವಿಮಲ ಸದ್ಗುಣಗುಣಿಯೆ ಪಾರ್ವತಿ ಕಮಲಸಂಭವ ಭವಸುರಾರ್ಚಿತನ ಸ್ಮರಿಸುವ ಮತಿ ಹೃ- ತ್ಕಮಲದೊಳಗೆ ನಿಲಿಸುವಂತೆ ಮಾಡು ಸದ್ಗತಿ ಕಮಲನಾಭ ವಿಠ್ಠಲ ಕೊಡುವ ನೆನುತ ಕೀರುತಿ 3
--------------
ನಿಡಗುರುಕಿ ಜೀವೂಬಾಯಿ
ಬಾರೊ ಹನುಮ ಬಾರೊ ಭೀಮ ಬಾರೊ ಮಧ್ವಮುನಿಪ ಪ. ಬಾರೊ ರಾಮಕೃಷ್ಣ ವೇದವ್ಯಾಸರ ಪ್ರಿಯ ಭಕ್ತ ಅ.ಪ. ಅಂಜನೇಯ ಸುತನು ಆಗಿ ಸಂಜೀವನ ಗಿರಿಯ ತಂದೆ ಕಂಜಲೋಚನೆಯ ವಾರ್ತೆ ಮಂಜುಭಾಷಣ ರಾಮನಿಗರುಹಿದೆ 1 ಪಾಪಿ ಕೌರವ ಕುಲವ ಕೊಂದು ದ್ರೌಪದಿಯ ಕಾಯ್ದ ಮಹಿಮ ಶ್ರೀಪತಿ ಶ್ರೀ ಕೃಷ್ಣನ ಭಜಿಸಿದ ಭೂಪ ಭೀಮಸೇನ ಬೇಗ 2 ಭೂಸುರ ಜನ್ಮದಲಿ ಬಂದು ಆಸೆಯಿಂದ ಆಶ್ರಮ ಕೊಂಡು ದೋಷಿ ಅನ್ಯಮತವ ಮುರಿದು ಭೂಸುರರ ಕಾಯ್ದ ಮಧ್ವ 3 ಸಕಲ ಸುಜನರ ಸೇವೆ ಕೊಂಡು ಮುಕುತಿಮಾರ್ಗಪ್ರದ ನೀನಾಗಿ ಭಕುತಿಮಾರ್ಗವ ತೋರಿ ಎನ್ನ ಹೃತ್ಕಮಲ ಮಧ್ಯದಲಿ ನಿಲ್ಲೊ 4 ಗೋಪಾಲಕೃಷ್ಣವಿಠ್ಠಲನ ರೂಪ ನೋಡುವ ಕೃಪೆಯ ಮಾಡೊ ಶ್ರೀಪತಿ ಶ್ರೀ ಶ್ರೀನಿವಾಸಗೆ ನೀ ಪ್ರೀತಿಕರನೆಂದು ನಮಿಪೆ 5
--------------
ಅಂಬಾಬಾಯಿ
ಬಾರೋ ರಂಗಯ್ಯ ಬಾರೋ ಕೃಷ್ಣಯ್ಯ ಬಾರೋ ರಂಗ ನವನೀರದ ನಿಭಾಂಗ ಪ ನಂದಗೋಪನಂದನ ಸುಂದರ ನಾರಾಯಣ ಇಂದು ವದನ 1 ಗಮನ ವರ ಶ್ರೀವತ್ಸಲಾಂಛನ ದುರಿತ ಹರಣ ನರಹರಿ ಪರಮಪಾವನ 2 ಪಂಕಜದಲಲೋಚನ ವೆಂಕಟಾಚಲರಮಣ ಭಂಜನ 3 ಅನಘ ವನಧಿಶಯನ ಮುನಿ ಹೃತ್ಕಮಲ ಪೋಷಣ ಘನಮಣಿ ಖಚಿತಾಭರಣ ಕನಕಾಂಬರ ಭೂಷಣ 4 ಬಲಿಬಂಧನ ವಾಮನ ಜಲಜೋದರ ಜನಾರ್ಧನ ವಿಲಸಿತ ಹೆನ್ನೆ ಪಟ್ಟಣ ನಿಲಯ ಶ್ರೀ ಮಧುಸೂದನ 5
--------------
ಹೆನ್ನೆರಂಗದಾಸರು
ಬಿಟ್ಹ್ಯಾಗೆ ಇರಲಿನ್ನೀ ಚರಣ | ರಂಗ ಪ. ವಿಠ್ಠಲನಾ ಪುಟ್ಟ ಚರಣ ಬಿಟ್ಟು ಗೋಕುಲ ಪುಂಡಲೀಕನಿಗೊಲಿಯುತ ಇಟ್ಟಿಗೆ ಮೇಲ್ಹೊಂದಿ ನಿಂತಂಥ ಚರಣ ಅ.ಪ. ಭಕ್ತರಿಗೊಲಿಯುವ ಚರಣಾ | ವೇದ ಉಕ್ತಿಗೆ ನಿಲುಕದ ಚರಣಾ ಹತ್ತಿ ಪಾರ್ಥನ ರಥ ಮತ್ತೆ ಭೀಷ್ಮನಿಗೊಲಿದು ಹಸ್ತದಿ ಚಕ್ರವ ಪಿಡಿದು ಬಂದಾ ಚರಣ 1 ಬಲಿಯನ್ನು ತುಳಿದಂಥ ಚರಣಾ | ಮೂರು ಇಳೆಯನಳೆದ ಪುಟ್ಟ ಚರಣ ಕುಲಕೋಟಿ ಉದ್ಧಾರಗೈವಂಥ ಗಂಗೆಯ ಚಲುವ ಉಂಗುಟದಲ್ಲಿ ಪಡೆದ ಕೋಮಲ ಚರಣ 2 ಹಸ್ತಿ ಕರೆಯೆ ಬಂದ ಚರಣಾ | ಲಕ್ಷ್ಮಿ ವತ್ತುವೋ ಮೃದುತಳ ಚರಣಾ ಚಿತ್ತದೆ ಚಿಂತಿಪ ಭಕ್ತರ ಮನದೈವ ತೆತ್ತಿಗನಾಗಿ ಐವರ ಪೊರೆದಾ ಚರಣ3 ಭೀಮ ತೀರಾ ವಾಸ ಚರಣಾ | ಭಕ್ತ ರಾಮಯ ಹರಿಸುವ ಚರಣಾ ಕಾಮಜನಕ ಪಾಂಡುರಂಗವಿಠ್ಠಲನೆಂದು ಪ್ರೇಮದಿಂ ಭಜನೆಗೊಂಬುವ ಸ್ವಾಮಿ ಚರಣಾ 4 ಬಿಟ್ಟಿರಲಾರೆ ನೀ ಚರಣ | ಮನದಿ ಕಟ್ಟಿ ಹಾಕೂವೆ ನಾ ನೀ ಚರಣ ದಿಟ್ಟ ಶ್ರೀ ಗೋಪಾಲಕೃಷ್ಣವಿಠ್ಠಲ ಚರಣ ಇಟ್ಟು ಹೃತ್ಕಮಲದಿ ಪೂಜಿಪೆ ನೀ ಚರಣ 5
--------------
ಅಂಬಾಬಾಯಿ
ಬೇಗನೆ ಬಾರೊ ಶ್ರೀ ಹರಿಯನೆ ತೊರೋ ಶ್ರೀ ಗುರುವೇ ದಯದಿ ಪ. ಬೇಗನೆ ಬಾರೊ ಯೊಗಿಗಳೊಡೆಯ ನಾಗಶಯನ ಪ್ರೀತ ತ್ವರಿತದಿ ಅ.ಪ. ಭಕ್ತರೆಲ್ಲರು ನಿಮ್ಮ ದಾರಿಯನೆ ನೋಡುತಾ- ಸಕ್ತಿಯಿಂದಿರುತಿಹರೊ ಮೋದ ಗುರುವೆ ನಿಮ್ಮ ಶಕ್ತಿಗೆ ಎದುರ್ಯಾರೊ ಧರೆಯೊಳು 1 ಕಾಣದೆ ಕಂಗಳು ಕಾತರಗೊಳ್ಳುತ ತ್ರಾಣಗೆಡುತಲಿಹವೊ ಪ್ರಾಣವ ರಕ್ಷಿಪ ಪ್ರಾಣಪತಿಯ ಪ್ರಿಯ ಕಾಣೆ ನಾನನ್ಯರನಾ ಜಗದೊಳು 2 ಪರಮಪ್ರಿಯರು ಎಂದು ಪರಮ ಬಿರುದು ಪೊಂದಿ ಪರಮಾತ್ಮನನು ಕಂಡು ಪರಮಾತ್ಮ ತತ್ವ ಪರಮಯೊಗ್ಯರಿಗರುಹಿ ದುರಿತ ತ್ವರಿತದಿ 3 ಕಮಲಾಕ್ಷನನು ಹೃತ್ಕಮಲದಲಿ ಕಾಂಬ ಕಮಲಾಪ್ತ ಅತಿ ಪ್ರೀತ ಕಮಲಸಂಭವಪಿತ ಕಮಲಾಕ್ಷ ಹರಿಯ ಹೃ ತ್ಕಮಲದಲಿ ತೋರೋ ಗುರುವರ 4 ಗೋಪಾಲಕೃಷ್ಣವಿಠ್ಠಲನ ಸೌಂದರ್ಯದ ರೂಪವೆನಗೆ ತೋರೊ ತಾಪವ ಹರಿಸುತ ಕಾಪಾಡಬೇಕೆಂದು ನಾ ಪ್ರಾರ್ಥಿಸುವೆ ಗುರುವೆ ತ್ವರಿತದಿ 5
--------------
ಅಂಬಾಬಾಯಿ
ಬ್ರಹ್ಮಕೊರವಂಜಿ ಸುರರು ಕಿನ್ನರರು ಸ್ಮರಣೆ ಮಾಡುವ ಪಾದ ಕುರುಪತಿಯ ಗರ್ವವನು ಪರಿಹರಿಸುವ ಪಾದ ಪರಮ ಯೋಗಿಗಳ ಹೃತ್ಕಮಲದಲ್ಲಿಹ ಪಾದ ಪಾದ ಪದ್ಮವನು ನೆನೆವೆ ನಾನು 1 ದಾನವಾರಿಯ ಚೆಲ್ವ ಜಾನು ಜಂಘೆಗಳೆಸೆವ ಮೀನ ಖಂಡಗಳ ಪೆರ್ದೊಡೆಯ ಸೊಬಗಿನ ಭಾನುಕೋಟಿ ಪ್ರಕಾಶದಂತೆ ವರಕಾಂತಿಯಲಿ ಆನಂದದಿಂದಲಿ ಮೆರೆವ ಮೂರುತಿಯ ನೆನೆವೆÀ ನಾನು 2 ಮಿಸುನಿ ಒಡ್ಯಾಣ ಕಾಂಚಿಯದಾಮ ತೆಳ್ವಸುರ ಬಿಸಜನಾಭನ ಬಾಹುಪುರಿಯ ಸೊಬಗಿನ ಎಸೆವ ಗದೆ ಶಂಕಚಕ್ರವು ಪದ್ಮಕರದಿ ಶೋ ಭಿಸುತಿರುವ ಕಂಬುಕಂಧರದ ಮೂರುತಿಯ ನೆನೆವೆ ನಾನು 3 ಕದಪು ಕಂಗಳು ಎಸೆಯೆ ಕರ್ಣಕುಂಡಲದ ಸಂಪಿಗೆಯ ನಾಸಿಕದ ರನ್ನ ತುಟಿ ಝಗಝಗಿಸೆ ಕುಡಿಹುಬ್ಬುಗಳು ಎಳೆಯ ಮನ್ಮಥನ ಚಾಪದಂತೆಸೆವ ಮೂರುತಿಯ ನೆನೆವೆÀ ನಾನು 4 ಅರೆದಿಂಗಳಂತೆಸೆವ ನೊಸಲ ಕಸ್ತೂರಿತಿಲಕ ಹೊಳೆÀವ ಕಿರೀಟ ಮಸ್ತಕದಿ ಢಾಳಿಸುವ ಅಲಸದೀರೇಳ್ಜಗವ ಕರುಣದಲಿ ರಕ್ಷಿಸುವ ಹೆಳವನಕಟ್ಟೆ ಶ್ರೀ ವೆಂಕಟೇಶ್ವರನ ನೆನೆವೆ ನಾನು 5 ಕಂಸಾಸುರನಿಟ್ಟ ಸೆರೆಯ ಮನೆಯೊಳು ಕಷ್ಟಪಡುತಲಿ ದೇವಕಿನಿ- ಮಿಷ ಯುಗವಾಗಿ ಕಳೆಯುತಿದ್ದಳು ನಿತ್ಯಾನಂದನ ನೆನೆಯುತಾ ಕಂಸರಿಪು ನಾರಾಯಣನು ಜನಿಸುವನೆಂದು ಅರುಹುವೆನೆನುತಲಿ ಧರಿಸಿದ ಆದನೆ ಕೊರವಿ 6 ಮಲ್ಲಿಗೆಯ ವನಮಾಲೆಯ ಚಂದ್ರಗಾವಿಯನುಟ್ಟು ಪಣೆಯೊಳು ತಿದ್ದಿತಿಲಕವನಿಟ್ಟನು ಗಂಧ ಕಸ್ತೂರಿ ಪರಿಮಳವನು ಲೇಪಿಸಿ ಸರ್ವಾಂಗದಿ ಭಾಸ್ಕರನಂದದಿ ಆದನೆ ಕೊರವಿ 7 ಗುಂಜಿಯ ದಂಡೆಯು ತೋಳಭಾಪುರಿ ಗಲ್ಲಕೊತ್ತಿದ ವೀಳ್ಯವು ಮಂಜಾಡಿಯಸರ ಹವಳ ಸರ ಹತ್ತೆಸರವಾ ಕೊರಳಲಿ ಹೊಳೆಯಲು ಅಂಜನವನಿಟ್ಟು ಅಲರಗಣ್ಣಿಗೆ ಅತಿಹರುಷದಿಂದ ಬೇಗದಿ ಆದನೆ ಕೊರವಿ 8 ಮುತ್ತು ಮಾಣಿಕ ಹೊನ್ನಗೂಡೆಯ ಪಿಡಿದು ಉತ್ತಮ ಶಿಶುವ ಬೆನ್ನಲಿ ಕಟ್ಟಿ ಚಿತ್ತದೊಳಗೆ ನರಹರಿ ಶರಣೆನುತ ಸತ್ಯಲೋಕದಿಂದಿಳಿದಳೆ ಕೊರವಿ 9 ಮಧುರಾ ಪಟ್ಟಣಕಾಗಿ ಬಂದಳೆ ಕೊರವಿ ಹದಿನಾರು ಬಾಗಿಲ ದಾಟಿ ನಡೆದಳು ಮದಗಜದಂತೆ ಮೆಲ್ಲಡಿಗಳನಿಡುತ ಬೆದರದೆ ಕೇರಿಕೇರಿಯಲಿ ಸ್ವರಗೈದು 10 ಮನೆಮನೆ ಬಾಗಿಲಗಳ ಮುಂದೆ ನಿಂತು ವನದ ಕೋಗಿಲೆಯಂತೆ ಯವ್ವಾ ಯವ್ವಾ ಎನುತ ವಿನಯದಿ ಸ್ವರಗೈವ ಕೊರವಿಯ ಕಂಡು ವನಿತೆ ದೇವಕಿ ಸನ್ನೆಮಾಡಿ ಕರೆದಳು 11 ಸನ್ನೆಮಾಡಿ ಕರದರೆ ಚೆನ್ನಕೊರವಂಜಿ ಬಂದು ಎನ್ನವ್ವ ಎನ್ನಕ್ಕ ಎನ್ನ ತಂದೆಯ ಹೆತ್ತವ್ವ ನಿನ್ನ ಮನದಾಯತವ ಹೇಳೇನು ಬಾರವ್ವ ಎನ್ನ ಕೂಸಿಗೆ ಒಂದಿಷ್ಟನ್ನವನಿಕ್ಕವ್ವ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 12 ಮಲೆಯಾಳ ಕೊಂಕಣದೇಶ ಮಹಾರಾಷ್ಟ್ರ ಗುಜ್ಜರದೇಶ ಚೆಲುವ ಕಾಶ್ಮೀರ ಕಳಿಂಗ ಕರ್ನಾಟಕದೇಶ ತುಳುವ ತಿಲುಗ ದೇಶವನ್ನು ತಿರುಗಿ ಸೊಲ್ಲ ಹೇಳಿ ಬಂದೆ ಒಲುಮೆಯ ಕೊರವಂಜಿ ನಾನಲ್ಲವೆಯಮ್ಮ ಸೊಲ್ಲ ಕೇಳೆ ಸೊಲ್ಲ ಕೇಳೆ ಸಿರಿವಂತೆ ಬಾರೆ13 ಛಪ್ಪನ್ನ ದೇಶವನೆಲ್ಲ ಸುತ್ತಿ ಸೊಲ್ಲ ಹೇಳಿಬಂದೆ ತಪ್ಪ ಹೇಳುವ ಕೊರವಿ ನಾನಲ್ಲವೆಯಮ್ಮ ಕರ್ಪೂರ ವೀಳ್ಯವ ತಾರೆ ಕಾಂತೆ ನಿನ್ನ ಕೈಯ ತೋರೆ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 14 ವಚನ :ಇತ್ತಿತ್ತ ಬಾರವ್ವ ವಿವರಿಸಿ ಹೇಳೇನು ಮುತ್ತಿನ ಮುಡಿಯವ್ವ ಮುದ್ದುಮುಖವ ತೋರೆ ಮತ್ತಗಜಗಮನೆ ಮಂದಹಾಸವದನೆ ರತ್ನದ ಸೆಳೆಗೋಲ ಪಿಡಿಯೆ ರಾಜೀವನೇತ್ರೆ ನಿನ್ನ ಚಿತ್ತದೊಳಗಣ ಮಾತ ಛಂದವಾಗಿ ಹೇಳ್ವೆನು ಕೇಳೆ ಅಮ್ಮಯ್ಯ ಬರಿಯ ಡಂಬಕದ ಕೊರವಿ ನಾನಲ್ಲ ಅರುಹುವೆನು ಮುಂದಣ ಕಥಾಂತ್ರವೆಲ್ಲವ ಮೊರದ ತುಂಬ ಮುತ್ತು ತಾರೆ ಮಾನಿನಿರನ್ನಳೆ ಕುರುಹ ಹೇಳೇನು ಇಲ್ಲಿ ಕುಳ್ಳಿರು ಬಾರೆಯವ್ವ15 ಎಂದ ಮಾತ ಕೇಳಿ ಹರುಷದಿಂದ ದೇವಕಿ ಮಿಂದು ಮಡಿಯನುಟ್ಟು ಕಾಂತೆ ಬಂದು ಕುಳಿತಳು ಇಂದುಮುಖಿಯು ಮೊರನ ತುಂಬ ಮುತ್ತನಿಟ್ಟಳು ತಂದು ಕೈಯತುಂಬ ಹೊನ್ನ ಕಾಣಿಕಿಟ್ಟಳು 16 ಗುಣಿಸಿ ಮುತ್ತಿನ ಅಕ್ಷತೆಯಿಟ್ಟು ಗುಪಿತದಿಂದಲಿ ನೆನೆದಳು ಮನದಭೀಷ್ಟವೀವ ಕೃಷ್ಣನ ಜನಿಸಿದೆನು ಮಧುರಾಪುರದ ಅರಸನುದರದಿ ಎನ್ನ ಸೋದರನೆಂಬ ಪಾಪಿ ಸೆರೆಯೊಳಿಟ್ಟನು17 ಎನ್ನ ಸುತನು ತನ್ನ ಕೊಲುವನೆಂಬ ಮಾತಿಗೆ ಎನ್ನ ಅಗ್ರಜ ಎನ್ನ ಮೇಲೆ ಖಡ್ಗವೆತ್ತಲು ಎನ್ನ ಪತಿಯು ಎನ್ನ ಮೇಲಣ ಮಮತೆಯಿಂದಲಿ ತನ್ನ ಸುತರ ಕೊಡುವೆನೆಂದು ಕೊಲೆಯನುಳುಹಿದ18 ಒಡನೆ ಹುಟ್ಟಿದ ಅಣ್ಣ ಎನಗೆ ವೈರಿಯಾದನು ಪಡೆದ ಪಡೆದ ಸುತರನರೆಯಲಪ್ಪಳಿಸಿದನು ಒಡೆಯ ಕೃಷ್ಣಸಲಹೊ ಎಂದು ಸ್ತುತಿಸಿ ದೇವಕಿ ಗಡಣದಿಂದ ಕೊರವಿ ತಾನು ಹೇಳ ಕುಳಿತಳು 19 ವಚನ :ತಿರುಪತಿ ತಿಮ್ಮಪ್ಪ ಚಳ್ಳಪಿಳ್ಳೆರಾಯ ಸುರಪುರವಾಸ ಲಕ್ಷ್ಮೀವರ ಕರುಣವಾಗು ವಂದನೆ ಸೊಲ್ಲ ಚಂದಾಗಿ ಹೇಳೇನು ಕೇಳೆಯಮ್ಮಯ್ಯಾ ಉರ್ಬಿಯೊಳತಿ ದಿಟ್ಟನಮ್ಮ ನಿಮ್ಮ ಮಗನು ಗರ್ಭದೊಳಿಹನು ಕಾಣಮ್ಮ ಕೊಬ್ಬಿದ ಕಂಸನ ಹಮ್ಮ ಮುರಿದು ನಿಮ್ಮ ನಿರ್ಬಂಧ ಬಿಡಿಸುವನಮ್ಮ 20 ಎಂಟನೆ ಗರ್ಭವಿದಮ್ಮ ನಿಮ್ಮುದರದಿ ಅಂಟಿಹ ಮಗನು ಕಾಣಮ್ಮ ಗಂಟಲ ಮುರಿವ ಕಾಣಮ್ಮ 21 ನಿಷ್ಕರುಣಿ ನಿಮ್ಮಣ್ಣನಮ್ಮ ನೀ ಪಡೆದಂಥ ಮಕ್ಕಳ ಕೊಲ್ಲುವ ಕಾಣಮ್ಮ ಚಕ್ರಧರನ ಕೈಯೊಳಮ್ಮ ಈ ಕಂಸನು ಸಿಕ್ಕುವುದು ತಡವಿಲ್ಲವಮ್ಮ 22 ವಚನ : ಈ ಮಾತು ಪುಸಿಯಲ್ಲ ಸ್ವಾಮಿಯ ಕರುಣ ಉಂಟು ಕೈಗೂಡಿತು ಕೇಳೆಯಮ್ಮಯ್ಯಾ ಕೈಯ ತೋರೆ ಕೈಯ ತೋರೆ ಕೈಯ ತೋರೆ ಅಮ್ಮಯ್ಯ ಕೈಯ ತೋರೆ ನಿನ್ನ ಮನದ ಕುರುಹ ಹೇಳುವೆ ಸೈಯೆನಿಸಿಕೊಂಬೆ ನಿನಗೆ ಸುಖವಾಕ್ಯವನು ಹೇಳಿ ಭಯ ಬೇಡವೇ ಅಮ್ಮಯ್ಯ ನಿನಗೆ ಭಾಷೆಯ ಕೊಡುವೆ 23 ಸಟೆಯ ಮಾತುಗಳಾಡಿ ಸೆಳೆದುಕೊಂಡು ಹೋಗಿ ಹೊಟ್ಟೆಯ ಹೊರೆವ ಕೊರವಿ ನಾನಲ್ಲವಮ್ಮ ನೆಟ್ಟನೆ ಸದಾಶಿವನ ತಟ್ಟಿ ಬಂದ ಕೊರವಿಯ ಮಾತ ದಿಟ್ಟವೆಂದು ಸೆರಗ ಗಂಟಿಕ್ಕಿಕೊಳ್ಳಮ್ಮ 24 ಅಂಗನೆ ನಿನ್ನ ಮನದ ಆಯಿತವ ಹೇಳೇನು ಮಾನಿನಿ ರನ್ನೆ ಬಂಗಾರದ ಕೈಯ ತೋರೆ ಬೊಗಸೆಗಂಗಳ ನೀರೆ ಹಿಂಗುವದು ನಿನ್ನ ಕಷ್ಟ ಹುಸಿಯಲ್ಲವಮ್ಮ 25 ವಚನ :ಚಂದ್ರವದನೆಯ ಚೆಲ್ವ ವಾಮಹಸ್ತವ ಚಂದದಿಂದಲಿ ಕೊರವಿ ವಿವರಿಸಿ ಹೇಳಿದಳು ಹಿಂದಣ ಕಷ್ಟವೆಲ್ಲ ಪರಿಹಾರವಾಯಿತು ಶುಭ ಶ್ರಾವಣ ಬಹುಳಾಷ್ಟಮಿ ರಾತ್ರೆಯ ನಡುವಿರುಳು ರೋಹಿಣಿ ನಕ್ಷತ್ರದಲ್ಲಿ ನಿಮ್ಮುದರದಿ ಕೃಷ್ಣ ಜನಿಸುವನು ಕಾಣೆ ಕೇಳಮ್ಮಯ್ಯ 26 ಪಂಕಜ ಪೀತಾಂಬರ ಅ- ಲಂಕಾರ ಮೂರುತಿಯಾಗಿ ಪುಟ್ಟುವ ಕೃಷ್ಣ ಶಂಕೆಯಗೊಳದಿರೆ ಕೇಳಮ್ಮಯ್ಯ 27 ಅಮ್ಮಾ ನಿಮ್ಮುದರದಿ ಬ್ರಹ್ಮನಪಿತ ಬಂದು ನಿಮ್ಮ ನಿರ್ಬಂಧವ ಬಿಡಿಸುವನು ಕಾಣೆ ಉಮ್ಮಯಗೊಳಬೇಡವೆ ಕೇಳಮ್ಮಯ್ಯ 28 ಆದಿಮೂರುತಿ ನಿಮ್ಮುದರದೊಳವತರಿಸಿ ಮೇದಿನಿ ಭಾರವನಿಳುಹಲು ಕಂಸನ ಭೇದಿಸುವನು ಕಾಣೆ ಕೇಳುಮ್ಮಯ್ಯ 29 ಏಳು ಮಕ್ಕಳ ಕಂಸ ಅರೆಯಲಪ್ಪಳಿಸಿದನೆ ಚಳ್ಳೆ ಬೀಜದಂತೆ ನುಣಿಚಿ ತಪ್ಪಿಸಿಕೊಂಬ ಕಳ್ಳಮಗನು ಪುಟ್ಟುವ ಕೇಳಮ್ಮಯ್ಯ 30 ವಚನ : ಇಂಥಾ ಮಗನು ನಿಮ್ಮುದರದಿ ಜನಿಸಲು ಕಾಂತ ವಸುದೇವರು ಗೋಕುಲಕೆ ಒಯ್ಯಲು ಸಂತೋಷದಿಂದಲ್ಲಿ ಬೆಳೆವನೆ ಕೃಷ್ಣ ಕೇಳಮ್ಮಯ್ಯ ಗೋಕುಲದೊಳಗೆ ಶ್ರೀ ಕೃಷ್ಣನನಿಟ್ಟು ದುರ್ಗೆಯ ಈ ಕಡೆಗೆ ಕೊಂಡುಬಹ ನಿಮ್ಮ ಪತಿಯು ಕಾಕು ಕಂಸಾಸುರನು ಆಕೆಯ ಪಿಡಿಯೆ ಗಗ- ನಾಕೆ ಹಾರಿ ಹೋಗುವಳು ಮಾಯಾಕಾರಿಯು 31 ಕ್ರೂರ ರಕ್ಕಸ ಎನ್ನ ಕೊಲ್ಲುವದೇತಕೋ ನಿನ್ನ ವೈರಿ ಕೃಷ್ಣ ಹೋಗಿ ಗೋಕುಲದೊಳಗೆ ಧೀರನಾಗಿ ಬೆಳೆದು ಸಂಹಾರವ ಮಾಡುವನೆಂದು ಸಾರಿ ಹಾರಿ ಹೋಗುವಳಂಬರಕೆ ದುರ್ಗಿ 32 ನಂದನ ಗೋಕುಲದಿ ಆನಂದದಿ ಬೆಳೆದಾನು ಕೃಷ್ಣ ಸಂದೇಹ ಬೇಡವವ್ವ ನಿಮ್ಮ ಮನದೊಳಗೆ ಬಂದು ಮz
--------------
ಹೆಳವನಕಟ್ಟೆ ಗಿರಿಯಮ್ಮ
ಭಕ್ತವತ್ಸಲ ಭವಭಯ ಹರನೆ ಭಕ್ತಿ ಮುಕ್ತಿದ ಪರಿಪಾಲಿಸು ಧೀರನೆ ಪ. ಪ್ರತಿದಿನ ಉದಯಾರಂಭಿಸಿ ನಾ ಮಾಡುವ ಪಾಪ ತತಿಗಳನೆಲ್ಲವ ಭಸಿತಗೈಸಿ ಪತಿತಪಾವನ ಪರಮಾತ್ಮನ ರೂಪ ಶ್ರೀ- ಪಾದ ಸಂಸ್ಮøತಿಯಿತ್ತು ಕರುಣಿಸು 1 ವರದೇಶ ನಿನ್ನಯ ಚರಣಾರವಿಂದವ ಶರಣೆಂದು ನಂಬಿದ ನರರಿಗಿನ್ನು ಪುರುಷಾರ್ಥಗಳ ಸೇರಿ ಬರುವರಾಶ್ಚರಿಯವೆ ಕರಿರಾಜಗೊಲಿದ ಶ್ರೀಕರಮೂರ್ತಿ ದಯವಾಗು 2 ಘೋರ ಸಂಸೃತಿ ಪಾರಾವಾರ ದಾಟಿಸಲು ಬೇರಾರಿಲ್ಲ ನಿಜ ದಾಸೋದ್ಧಾರ ಹರೆ ವಾರಿಜಾಂಬಕ ವೆಂಕಟಾಚಲನಾಯಕ ಗಾರುಮಾಡದೆ ಬೇಗ ಬಾರೋ ಹೃತ್ಕಮಲದಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಭಕ್ತಿಗೆ ಮೂರು ಗುಣಗಳು ಬೇಕು ಯುಕ್ತಿವಂತರು ಕೇಳಿ ಮುಕ್ತಿಶೀಲವು ತಿಳಿದು ನಿಜವಿರಕ್ತತನದಲಿ ಬಾಳಿ ಧ್ರುವ ಪ್ರೇಮ ಪ್ರೀತಿ ರತಿ ನೇಮದಲಿ ಶ್ರೀಸ್ವಾಮಿ ಚರಣದಲಿಡಬೇಕು ಸೌಮ್ಯ ಸಮಾಧಾನದಲಿ ತಾನಮೃತವನು ಹಿಡಿಯಬೇಕು ನಿರ್ಮಳದಲಿ ನಡಿಬೇಕು ಪಡೆದು ಸಮದೃಷ್ಟಿಗುಡಬೇಕು 1 ನಿತ್ಯ ವಿವೇಕವು ತಿಳಿದು ಪಥ್ಯದಲಿ ನಡಿಯಬೇಕು ಚಿತ್ತವೃತ್ತಿ ಸವೃತ್ತಿಯ ಮಾಡಿ ಸತ್ಯದಲಿ ನುಡಿಯಬೆಕು ಉತ್ತಮೋತ್ತಮ ವಸ್ತುದ ನಿಜಸುಖ ಹೃತ್ಕಮಲದಲಿಡಬೇಕು ಭಕ್ತಿಗೆ ಭಾವನೆ ಬಲಗೊಂಡು ವೈರಾಗ್ಯದ ಸುಖ ತೊಡಬೇಕು 2 ಸೋಹ್ಯ ಸೋನ್ನಿಯ ಸೂತ್ರವ ತಿಳಿದು ಸ್ಥಾಯಿಕನಾಗಿರಬೇಕು ಧ್ಯೇಯಧ್ಯಾತಧ್ಯಾನವ ತಿಳಿದು ಮಾಯದ ಮೊನೆ ಮುರಿಬೇಕು ನ್ಯಾಯ ನೀತಿಯ ನೆಲೆನಿಭವನು ಉಪಾಯದಲಿ ಅರಿಯಬೇಕು ಪಾಯಕನಾಗನುದಿನ ಮಹಿಪತಿ ಗುರುಪಾದದಿ ಸ್ಥಿರವಿರಬೇಕು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭಜನೆ ಭಾಗ್ಯ ಒಂದೇ ಸಾಲದೇ | ಹರೀ ಪ. ಭಜಕರಾದವರಿಗೆ ಹಗಲು ಇರುಳು ಮಾಳ್ಪಾ ಭಜನೆ ಭಾಗ್ಯ ಒಂದೇ ಸಾಲದೆ ಅ.ಪ. ಭಕ್ತರೆಲ್ಲರು ಕೂಡೀ ಮುಕ್ತಿಗೊಡೆಯನ ಪಾಡಿ ಭಕ್ತಿ ಭಾಗ್ಯವ ಬೇಡಿ ನೃತ್ಯವ ಗೈಯುವಾ 1 ತಾಳ ತಂಬೂರಿ ಗೆಜ್ಜೆ ಮೇಳನದಿಂದಲೀ ತೋಳುಗಳೆತ್ತಿ ಪಾಡೀ ವೇಳೆಯ ಕಳೆವಂಥಾ 2 ಹಿಂದೆ ಮುಂದಾಡುವ ನಿಂದಕರಾ ನುಡಿ ಒಂದು ತಾರದೆ ಮನಕಾನಂದವ ಬೀರುವಾ 3 ಕಟ್ಟಳೆ ಮೀರದೆ ಬಿಟ್ಟು ಬಿಡದೆ ನಿತ್ಯ ನಿಷ್ಠೆಯಿಂದಲಿ ಗುರು ಕೊಟ್ಟ ಅಜ್ಞೆ ಎಂಬಾ 4 ಮೂರ್ತಿ ನಿಂತು ಒಳಗೆ ಹೊರಗೆ ಸಂತಸಪಡಿಸೆ ಏಕಾಂತ ಭಕ್ತರು ಮಾಳ್ಪ 5 ಸಾಸಿರ ಸತ್ಕರ್ಮ ಮೀಸಲು ಫಲಗಳೂ ಶ್ರೀಶನ ಧ್ಯಾನಕೆ ತ್ರಾಸಿಗೇರದೆಂಬ 6 ಪದ್ಧತಿಯಂತೆ ತಂದೆ ಮುದ್ದುಮೋಹನ್ನ ಗುರು ಪದ್ಮ ಪಾದಕೆ ಸೇರಿ ಪೊದ್ದಿದ ದಾಸ್ಯದ 7 ತ್ರಿಗುಣದ ಕಲ್ಮಶ ವಗೆದು ದೂರಕೆ ಮನ ಮಿಗಿಲಾಗಿ ಹರಿಪದ ತಗಲಿಕೊಂಬುವುದಕ್ಕೆ 8 ನರ್ತಗೈಯ್ಯುತ ಸುತ್ತಿ ಪ್ರದಕ್ಷಿಣೆ ಎತ್ತಿ ಸ್ವರವ ಹರಿ ಮೂರ್ತಿಯ ಪಾಡುವಾ 9 ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲನನು ಇಟ್ಟು ಹೃತ್ಕಮಲದಿ ಮುಟ್ಟುವೋ ಹರಿ ಪುರ 10
--------------
ಅಂಬಾಬಾಯಿ
ಮಂಗಳಂ ಮಂಗಳಂ ಪ ಮಂಗಳಂ ಮಂಗಳಂ | ಪರಿಮಾಳಾರ್ಯರಿಗೆ ತುಂಗೆ ತೀರಗ ಯತಿ | ಪುಂಗರೀಗೇ ಅ.ಪ. ವೈರಿ ಭೃಂಗ | ಸುಧೀಂದ್ರ ಚರಣಾಬ್ಜಮಧುಕರರೆನಿಸುತ್ತ | ಸುಧೆಯ ಸೌರಭವ |ಬುಧ ಜನ ಕುಣಿಸುತ್ತ | ವಿಧ ವಿಧ ಮೆರೆಯುವತ್ರಿದಶ ಭೂರುಹವೆನಿಸಿ | ಸದಯದಿ ಪೊರೆವಗೇ 1 ಮಧ್ವ ಮತಾಬ್ಧಿಗೆ | ಶುದ್ಧ ಪೂರ್ಣೇಂದ್ವಿಗೆಅದ್ವೈತ ಕಲಿಮಲ | ದಾವಾಗ್ನಿಗೇ |ಸದ್ವೈಷ್ಣ್ವ ಕುಮುದೇಂದು | ವಿದ್ವಾಂಸನತ ಪಾದಶೌದ್ಧೋದನಿಯ ಮತ | ವಿಧ್ವಂಸಕಗೇ 2 ಕರದೆಡೆ ಬರುವಂಥ | ಪರಮ ದಯಾಳುಗೆಧರೆಯೊಳೆಲ್ಲೆಲ್ಲೂ | ಮೆರೆಯುತಿಹಗೇ |ಶರಣರ ಹೃತ್ಕಮಲ | ವರ ಮಿತ್ರನೆಂದೆನಿಸಿಗುರು ಗೋವಿಂದ ವಿಠಲ | ಚರಣಾಬ್ಜಧೇನಿಪಗೇ 3
--------------
ಗುರುಗೋವಿಂದವಿಠಲರು
ಮಂಗಳಂ ಮಂಗಳಂ ಮಾರಮಣಗೆ ಪ ಕುಂಡಲಿ ಶಯನಗೆ ಗುಣನಿಧಿಗೆ ಪುಂಡರೀಕಾಕ್ಷ ಶ್ರೀ ಪುರುಷೋತ್ತಮಗೆ 1 ಸರ್ವಪ್ರಾಣಿಗಳ ಹೃತ್ಕಮಲನಿವಾಸಗೆ ಉರ್ವಿಭಾರವ ಪರಿಹರಿಸಿ ಭಕ್ತರ ಕಾಯ್ವ ಸಾರ್ವಭೌಮ ಹರಿಸರ್ವೋತ್ತಮಗೆ 2 ಭಾಗ್ಯವಲ್ಲಿ ಹನುಮನೊಡೆಯನಮ್ಮ ಗುರುರಾಮ ವಿಠಲ ಶ್ರೀ ಕೃಷ್ಣಮೂರುತಿಗೆ3
--------------
ಗುರುರಾಮವಿಠಲ
ಮದನ ಮೋಹನ ಕೃಷ್ಣ ಉದಧಿ ಶಯನ ಹರಿ ಮಾಧವನ ಪ ಮದಗಜಗಮನೆ ಶ್ರೀ ಪದುಮಲೋಚನೆ ಪ್ರಿಯ ಅದ್ಭುತ ಮಹಿಮ ಶ್ರೀ ಅಚ್ಚುತನ ಅ.ಪ ಇಂದಿರೆ ರಮಣ ಗೋವಿಂದನ ಮಹಿಮೆಯ ಒಂದೆ ಮನದಿ ಸ್ತುತಿಸುವ ಜನರ ಕುಂದೆಣಿಸದೆ ಮುಚುಕುಂದ ವರದ ಹೃನ್ಮಂದಿರದಲಿ ನಲಿದಾಡುವನು 1 ಗೋಕುಲಪತಿ ಜಗದ್ವ್ಯಾಪಕ ಹರಿ ಎಂದ- ನೇಕ ವಿಧದಿ ಸ್ತುತಿಸುವ ಜನರ ಶೋಕಗಳಳಿದು ಏಕಾಂತ ಭಕ್ತರೊಳಿಟ್ಟು ತೋಕನಂದದಿ ಪರಿಪಾಲಿಸುವ 2 ಪದ್ಮನಾಭನ ಪಾದಪದ್ಮವ ಸ್ಮರಿಸುತ ಶುದ್ಧಮನದಿ ಪಾಡಿ ಪೊಗಳುವರಾ ಸಿದ್ಧಾರ್ಥನಾಮ ವತ್ಸರದಲಿ ಸುಜನರ ಹೃದ್ರೋಗವಳಿಯುತ ಸಲಹುವನೂ 3 ಚಿಂತೆ ಎಲ್ಲವ ಬಿಟ್ಟೀ ವತ್ಸರದಲಿ ಲಕ್ಷ್ಮೀ- ಕಾಂತನನೇಕ ವಿಧದಿ ಸ್ಮರಿಸೆ ದಂತಿವರದ ಅನಂತ ಮಹಿಮ ತನ್ನ ಕಾಂತೆ ಸಹಿತ ಒಲಯುವನವರ್ಗೆ4 ಕಮಲಸಂಭವಪಿತ ನಮಿಸಿ ಸ್ತುತಿಸುವೆನು ಕಮಲ ಪತ್ರಾಕ್ಷಹರಿ ಕರುಣಾನಿಧೆ ಕಮಲನಾಭ ವಿಠ್ಠಲ ವಿಠ್ಠಲ ರಕ್ಷಿಸೆನೆ ಹೃ- ತ್ಕಮಲದಿ ಪೊಳೆಯುವ ಸುಜನರಿಗೆ5
--------------
ನಿಡಗುರುಕಿ ಜೀವೂಬಾಯಿ
ಮನ್ನಿಸೈ ಹರಿ ಪನ್ನಗೇಂದ್ರಶಯನ ಪ ಘನ್ನವಾದ ಪಾಪವನ್ನು ಮಾಡಿ ಜಗದಿ ನಿನ್ನ ನಾಮ ಮರದೆ ಸನ್ನುತಾಂಗ ಸಲಹೊಅ.ಪ ಜ್ಞಾನ ಶೂನ್ಯವಾಗಿ ನಾನಾ ವಿಷಯಗಳಲಿ ನಾನು ನನ್ನದೆಂಬ ಹೀನ ಮಮತೆಯಿಂದ ದಾನವಾರಿ ನಿನ್ನ ಧ್ಯಾನಿಸದಲೆ ಕಾಲ ಸಾನುರಾಗದಿಂದ ಶ್ವಾನನಂತೆ ಕಳೆದೆ 1 ರೋಗಹರನೆ ಭವದ ರೋಗವೈದ್ಯನೆಂದು ಬಾಗಿ ನಿನ್ನನುತಿಪೆ ನಾಗಾರಿವಾಹನ ಯೋಗಿವಂದ್ಯನೆ ಚನ್ನಾಗಿ ನಿನ್ನ ಸ್ತುತಿಪ ಭಾಗವತರ ಸಂಗ ದೇವ ಪಾಲಿಸಯ್ಯ 2 ರಕ್ಷಿಸೆಮ್ಮ ಬಿಡದೆ ಲಕ್ಷ್ಮಿರಮಣದೇವ ಕುಕ್ಷಿಯೊಳಗೆ ಜಗವ ರಕ್ಷಿಸುತ್ತ ಪೊರೆವ ಸೂಕ್ಷ್ಮ ಸ್ಥೂಲದೊಳು ಪ್ರತ್ಯಕ್ಷನಾದ ಹರಿ ಉ- ಪೇಕ್ಷಿಸದಲೆ ಕಾಯೋ ಪಕ್ಷಿವಾಹನ ದೇವ 3 ಕಡಲೊಡೆಯನೆ ದೇವ ಮೃಡನ ಸಖವೆ ಕಾಯೊ ಅಡಿಗಡಿಗೆ ಸ್ತುತಿಸಿ ಬಿಡದೆ ಮುಗಿವೆ ಕಯ್ಯ ಎಡಬಲದಲಿ ಶ್ರೀ ಭೂಮಡದೇರಿಂದ ಮೆರೆವ ಉಡುಪ ಮುಖನೆ ಕಾಯೋ ಕಡಲೊಡೆಯನೆ ರಂಗ 4 ಕಮಲಪತ್ರದಳಾಕ್ಷ ಕಮಲಜೋದ್ಭವೆ ಪ್ರಿಯ ಕಮಲಸಂಭವ ಜನಕ ಕಮನೀಯ ಸ್ವರೂಪ ಕಮಲನೇತ್ರೆರ ರಸಕಮಲಪುಷ್ಪಮಾಲಾ ಹೃ- ತ್ಕಮಲದೋಳು ಶೋಭಿಪ ಕಮಲನಾಭ ವಿಠ್ಠಲ 5
--------------
ನಿಡಗುರುಕಿ ಜೀವೂಬಾಯಿ
ಮನ್ಮಥ ಚರಿತೆ340 ವರಸಿದ್ಧಿ ಗಣೀಶನ ಬಲಗೊಂಡೀ- ಶ್ವರನ ಪದಕೆ ನಮಿಸಿ | ಶಾರದೆಯ ಹರುಷದಿ ಸಂಸ್ಮರಿಸಿ | ಚ ತುರ್ಮುಖಗಳ ನೆರೆ ಭಜಿಸಿ ಹರುಷದಿ ನುತಿ ಮಾಡಿ | ಮಾಡಿ- ದ ಕೃತಿಯ ಸುಜನರು ನೋಡಿ 1 ಕಾಮಜನಕ ನಿಷ್ಕಾಮಜನಾಪ್ತ | ಸು- ಧಾಮನ ಸಖ ಹರಿಯು | ಮೂರು ಲೋಕಗಳಿಗೆ ತಾ ದೊರೆಯು | ಎನ್ನಹೃ- ತ್ಕಮಲದೊಳೀಪರಿಯು ಕಾಮನ ಸುಚರಿತೆಯು | ಸಜ್ಜನರು- ಇಹಪರ ಸದ್ಗತಿಯು | 2 ಪೃಥಿವಿಯೊಳಿಹ ಸುಜನರು ಕೇಳಿ | ಮ ನ್ಮಥ ಚರಿತ್ರೆಯನು | ಸಹ- ರ್ಷೋತ್ಕರದಿ ನೀವ್ಗಳಿದನು | ಭಜಿಸೆ ಸ- ದ್ಗತಿಗಳನು ಕೊಡುವನು | ಶತಮುಖವಂದಿತ ಸಿರಿದೇವಿಯರಸ- ನೊಲಿದು ಪಾಲಿಸುವನು | ಜನರ ಕೋ- ರಿದ ಕೋರಿಕೆಗಳನು | ತಾ ಕೊಟ್ಟವರನು ಪಾಲಿಪ ತಾನು 3 ತಾರಕಾಸುರನ ಭಯದಿಂದಲಿ ವೃಂ- ದಾರಕರೆಲ್ಲ ಕೂಡಿ | ಮನದಿ ಆಲೋಚನೆಗಳ ಮಾಡಿ | ವನಜ ಸಂ- ಭವನಡಿಗಳ ಬೇಡಿ | ಯಾರು ನಮಗೆ ದಿಕ್ಕೆಂದು ಕಳವಳಿಸಿ ನಾರಾಯಣನ ತ್ವರಿತದಲಿ | ಕಂಡು ವಂ- ದಿಸಿದರು ತವಕದಲಿ | 4 ವಾರಿಜಾಕ್ಷ ಪರುಷೋತ್ತಮ ವಿಶ್ವಾ- ಧಾರ ಪರಾತ್ಪರನೆ | ಅನಂತನವ- ತಾರ ಕೃಪಾಕರನೆ | ನಾವೆಲ್ಲ ಸೇರಿದೆವೈ ನಿನ್ನನೆ | ತಾರಕಾಸುರನ ಬಾಧೆ ಪರಿಹರಿಪ- ರ್ಯಾರನು ನಾವ್ ಕಾಣೆವೈಯ್ಯ | ಉ-- ದ್ಧಾರ ಮಾಳ್ಪನು ನೀನೆ | ಭಕ್ತಜನ- ವಾರಿಧಿ ಚಂದ್ರಮನೆ | 5 ಎನಲು ಸುರರೊಡನೆ ನುಡಿದನಾಗಲಾ- ವನಜನಾಭ ತಾನು | ಈ ಕಾರ್ಯ- ಕೆನಾ ಮಾಡುವುದೇನು | ಭ- ವಾನೀಧವನಾಗಿ ಶಿವನು | ಘನತಪವನಾಚರಿಸುತ್ತ ಮೇರುಗಿರಿ ಗುಹೆಯೊಳು ಕುಳಿತಿಹನೊ | ಫಾಲದಲಿ ಉರಿಗುಣ್ಣುಳ್ಳವನು | ಏನಾದರು ಸರಿ ತಾ ಲೆಕ್ಕಿಸನು | 6 ಕಾಮನಿಂದ ಶಂಕರನ ತಪಕಿಡಿಸಿ ಕರುಣಿಸಬೇಕೆಂದು ಬೇಡಿ | ಕೊಂ- ಡರವ ನಿಮ್ಮೊಳು ದಯಮಾಡಿ | ತ- ಕ್ಕಯೋಚನೆಗೈಯ್ಯುವ ನೋಡೀ | ತಾಮಸನ ಮುರಿದು ನಿಮಗೆ ಸಂತತವ ಕೊಡುವನು ಮುದಗೂಡಿ | ಎಂದು ಪೇಳಿದ ಶ್ರೀಹರಿಯನುಡಿ | ಕೇಳಿ ಇಂದ್ರನು ಗುರುವನು ನೋಡಿ 7 ಚಂದದಿಂದ ಸೇರಿ | ಸ್ಮರಗೆಯಿದ- ರಂದವೆಲ್ಲವುಸುರಿ | ಅವನಮನ ಶೌರಿ ಕಂದನೆಯಂತಾದರು ತಂದರೆ ಸುಖ- ವೆಂದನುಪಕಾರಿ | ಗುರು ವಂದಿಸೆ ಸುರರ ದೊರಿ | ಬೀಳ್ಕೊಂಡು ಬಂದನು ಕುಸುಮಪುರಿ8 ಕುಸುಮಾವತಿಯಲಿ ಮೀನಕೇತನನ ಶಶಿನಿಭವದನೆಯರು | ಸೇ- ವಿಸುತಿರೆ ಹಸನಾದ ಪನ್ನೀರು | ಪುನಗು ಅಗರು | ಕುಸುಮಶರನ ಉಪಚರಿಸುತ ಬಾಲೆಯ- ರೆಸೆಯಲು ಮೋದದೊಳು | ರತಿ- ಕ್ರೀಡೆಯಲಿ ಮನಕರಗಲು | ಬೃ ಹಸ್ಪತಿಯನಿತರೊಳೈತರಲು 9 ಊಳಿಗದವರಿಂದ್ಹೇಳಿ ಕಳುಹೆ ಗುರು ಕೇಳಿ ಸುದ್ದಿ ಮಾರಾ | ತವಕ ಪರಿಪರಿಯುಪಚಾರ | ಶ್ರೀಪತಿಯ ಕುಮಾರ | ಬಂದಹದ- ನೇನೆನುತ ಪದಾರ | ವಿಂದ- ಕೆರಗಿದನಾ ಕುಸುಮಶರ 10 ಭಯದೊಳಮರರೆಲ್ಲ | ಕ್ಷೀರಸಾಗರಕೆ ಪೋಗಿ ಎಲ್ಲ | ಬಿನ್ನೈ- ಸಲು ಕೇಳಿ ಸಿರಿಯನಲ್ಲಾ | ಅರಘಳಿಗಾಲೋಚಿಸಿ ಎನ್ನೊಳುನುಡಿ- ದನುಕೇಳಿಸಿರಿಯನಲ್ಲಾ | ಖಳಗೆಧರೆ- ಪರಿ ಎಲ್ಲವನು ಬಲ್ಲ 11 ಕಾಮನು ಪುಷ್ಪ ಶರಗಳಿಂದೆಸೆಯಲು ಗೌ- ರಿಮನೋಹರನೂ | ಬ- ಹಿರ್ಮುಖನಾಗುತ ಶಂಕರನೂ | ನಿ- ಕ್ಷೇಮವ ಪಾಲಿಪನು | ರಜತಗಿ ರಿವಾಸಿ ಮಹೇಶ್ವರನು | ಇದಕೆ ಗುರಿಯಾದ ಎನ್ನ ಮಗನು 12 ನಾವು ಪೇಳಿರುವೆವೆಂದು ನಮ್ಮ ಸು- ಕುಮಾರ ಮನ್ಮಥನಿಗೆ | ಇದೆಲ್ಲಾ ಪೇ- ಳಿವಿವರಮಾಗೆ | ಕರೆದುಕೊಂ- ಡ್ಹೋಗಿ ಶಿವನ ಬಳಿಗೆ | ಪಾವಕಾಕ್ಷ ಬಲು ಕರುಣಾನಿಧಿಯಿ- ನ್ನೇನು ಚಿಂತೆ ನಮಗೆ | ಬೇಗನಡೆ ಯೆಂದ ಹರಿಯು ಎನಗೆ | ಸಕಲವೂ ತಿಳಿಸಿದೆ ನಾನಿನಗೆ | 13 ಪರಿಯೋಚನೆ ಮಾಡು | ಸ- ತ್ಕೀರ್ತಿಯ ಸಂಪಾದನೆ ಮಾಡು | ಭರದಿ ಹೂ ಶರಗಳ ನೀ ಹೂಡು | ಹರನ ತಪವ ಭಂಗಿಸಿ ನಮ್ಮೆಲ್ಲರ ಕರುಣದಿ ಕಾಪಾಡು | ತಂದೆಯ- ಪ್ಪಣೆಯ ಮನದಿ ನೋಡು | ಮೂಜಗದಿ ಯಾರು ನಿನಗೆ ಜೋಡು | 14 ಈ ಪರಿಪೇಳಿದ ಗುರುವಿನ ನುಡಿಯನು ಶ್ರೀಪತಿಯ ಕುಮಾರ | ರತಿಯೊಡನೆ ಮಾರ | ನುಡಿದಳಾ ಶಿವನು ಮಹಾಕ್ರೂರ | ಆಪತ್ತೊದಗುವುದೀಗ ಬೇಡ ಎಂ- ಕಂದರ್ಪಮನದಿ ಸೋತು | ಬೃಹಸ್ಪತಿ- ಗೆಂದ ಕಾಮನಿನಿತು 15 ಸಮ್ಮತಿಯಿದು ಕೇಳಿ | ಪೂಶರನ ಬಿಡಲು ಚಂದ್ರಮೌಳಿ | ಕೋಪಿಸಲಾ ಹಣೆಗಣ್ಣೆನಗಾಳೀ | ಬ್ರಹ್ಮಾಂಡಗಳಾದರು ದಹಿಸುವುದು ಎನ್ನಳವೇ ಎಂದಾ | ಈ ಕಾರ್ಯಕೆ ನಾನು ಬಾರೆನೆಂದ | ನುಡಿಗೆ ಸುರ- ಗುರುಮತ್ತಿಂತೆಂದ | 16 ಮರೆಹೊಕ್ಕಿರುವಮರರ ಪಾಲಿಸುನೀ ಕಂದರ್ಪ | ಜಗ- ತ್ಕಾರಣನೈನಿಮ್ಮಪ್ಪ | ಪೇಳ್ದನುಡಿ ನಡಿಸಲು ಬೇಕಪ್ಪಾ | ಪರಿಪರಿಯಲಿ ನೋಡಿದರು ಜಗದೊಳಗೆ ನಿನ್ನ ಸರಿಯಾರಪ್ಪಾ | ನಮ್ಮ ನುಡಿ ಮೀರಬಾರದಪ್ಪಾ | ಅಷ್ಟು ಪೇಳಿ- ದರು ಕಾಮವೊಪ್ಪಾ | 17 ಕಾಮನವೊಪ್ಪಿಸಿ ಕರದೊಯಿದಮರರು ಕೈಲಾಸವ ಸೇರಿ | ಅರುಹಿದರು ಗಿರಿರಾಜ ಕುಮಾರಿ | ಕೇಳಿನಡೆತಂದಳಾಗಗೌರಿ | ವ್ಯೋಮಕೇಶನಿಹ ಗವಿಯ ದ್ವಾರಕೇ ಬರಲು ನೋಡಿ ನಂದಿ | ತಾಯಿನೀ- ನಿಲ್ಲಿಗೇಕೆ ಬಂದಿ | ಏನು ಅ- ಪ್ಪಣೆಯೆಂದನು ನಂದಿ 18 ವಂದನೆ ಒಳಗೆ ಹೋಗುವನು ಇವನನೀ ತಡೆಯಬೇಡವಯ್ಯ | ಎನ್ನ ಕಂದನು ಇವ ಕೇಳಯ್ಯ | ಎಂದು ಪೇ- ಳಿದ ಗೌರಿಯ ನುಡಿಯಾ | ಮುದದಿ ಶಿರದೊಳಾಂತನು ನಂದೀಶ್ವರ ಮುಂದೆ ಕೇಳಿ ಕಥೆಯ | ಅನಿತರೊಳ್ ಬಂದ ಕಾಮರಾಯ | ಪೋಗ ಬಹು- ದೆಂದ ಪ್ರಥಮಗೇಯ | 19 ಕಾಮಪೊಕ್ಕನಂದು | ಕರದಿ ಜ- ಪಮಾಲೆ ಪಿಡಿದು ಮುಂದು | ಮ- ಹಾಮಂತ್ರಗಳ ಜಪಿಸುತಂದು | ನೇಮದೊಳೇಕೋಭಾವದೊಳಿರುತಿಹ ಸೋಮಧರನ ಕಂಡ | ಏ- ನು ಮಾಡುವದೆಂದು ಪ್ರಚಂಡಾ | ಇಕ್ಷುಧ- ನುಶರಗಳ ಕೈಕೊಂಡಾ | 20 ವಿನಯದಿಂದ ಪ್ರಾರ್ಥಿಸಿ ಮಾತಾಡಿಸು- ವೆನೆಂದು ಶಂಕರನ | ನುತಿಸಿ ಬೇಡಿ- ದನು ಶೂಲಧರನಾ | ಎಷ್ಟಾದರು ಕರಗಲಿಲ್ಲವನಮನಾ | ಪರಿಪರಿಯೋ- ಚನೆ ಮಾಡಿ ಮನ್ಮಥನು | ಬೆರಗಾಗುತಾ ನಿಂತಾ ಸಮಯನೋಡುತ- ಲಿರತಿಯ ಕಾಂತಾ | ಮನ ದಿ ಹೊಂದಿದನು ಮಹಾಚಿಂತಾ 21 ನೆಂದು ಯೋಚಿಸಿದನು | ಇ- ಕ್ಷು ಧನುವನು ಜೇ ಹೊಡೆದಾನು | ಮಹೇ- ಶನ ಮರ್ಮಸ್ಥಳಗಳನು | ಪುಷ್ಪ ಬಾಣಗಳೂಡೆಸೆಯೆ ಮ- ಶರಗಳನು ಸುರಿದಾನು | ಜ- ನರೆ ಕೇಳೀಯಾಶ್ಚರ್ಯವನು | 22 ಆ ಮಹೇಶ್ವರನ ಮೂಲ ತಿಳಿಯಲಿಂ- ದ್ರಾದಿಸುರರಿಗಳವೆ | ಕೇಳಿಯೀ ಕಾಮನೇನು ಲಕ್ಷ್ಯವೆ | ಕರಿಚರ್ಮಾಂಬರನಾ | ಮೀನ ಕೇ- ತನನ ಬಾಣಕೆ ಮನಾ | ಬಹಿರ್ಮು- ಖನಾಗಿ ನೋಡಿ ಸ್ಮರನಾ | 23 ಕಣ್ಣುತೆಗೆದು ಮುಕ್ಕಣ್ಣಯಲೋ ನಿನ- ಗೆನ್ನೊಳೇಕೆ ಪಂಥಾ | ಛೀ ಛೀನಡಿ ಹೋಗು ಹೋಗು ಭ್ರಾಂತ | ಎಂದು ತಾ- ತನ್ನನಿಜಸ್ವಾಂತ-| ವನ್ನು ಪೂರ್ವದಂದದಿ ತಪದಲ್ಲಿರಿಸಚ- ಪೋಲ್ವಂದದಲಾ ಶಾಂತಾ | ಶೂರ್ಪಕಾ- ರಿಯು ಎದುರಲಿ ನಿಂತಾ | 24 ನಾನು ಬಂದಾ ಕಾರ್ಯವ ಕೇಳದಲೆ ಇ- ದೇನೀ ಪುರಹರನು | ಛೀಹೋಗೋ- ಗೆಂದು ಗರ್ಜಿಸಿದನು | ಎನುತ ತೆ- ಗೆದೆಚ್ಚ ಪೂಶರವನು | ನಾನಾವಿಧದಲಿ ತನ್ನ | ಚಮತ್ಕಾ- ರಗಳ ತೋರಿಸಿದನು | ಮನದಿ ಭಯಗೊಳುತ ಮನಸಿಜನು | ಮುಂದಾಗುವ ಕಥೆಯ ಕೇಳಿಯಿನ್ನು 25 ಭರ್ಗಕಣ್ದೆರೆದು ನೋಡಲಾಕ್ಷಣದಿ ಭರದಿಂ ಮನ್ಮಥನಾ | ಕೋಪಕಿಡಿ- ಯಿಡುತ ಫಣೆಗಣ್ಣ | ತೆಗೆದು ನೋಡಲು ತಕ್ಷಣ | ಚಿಣ್ಣಾ ಭುಗ್ಗು ಭುಗ್ಗುಯೆಂದೇಳ್ವ ಉರಿಗಳಿಂ ದಗ್ಧನಾದ ಮದನಾ | ಭಸ್ಮದಂ- ತಿದ್ದು ಮರ್ಮಸದನಾ | ಅಗ್ನಿವ್ಯಾ ಪಿಸೆ ಬ್ರಹ್ಮಾಂಡವನಾ 26 ಸುರರು ಕಿನ್ನರರು ಗಡಗಡ ನಡುಗುತ ಬೆರಗಾದರು ನೋಡಿ | ಅವರ- ಶಿರವನಲ್ಲಾಡಿ | ಚರರು ಬಂದು ರತಿಗೀ ಸುದ್ದಿಯ ಪೇಳಿ- ದರು ದುಃಖ ಮಾಡಿ | ಕೇಳಿ ನಾರಿಯರು ಶೋಕವಮಾಡಿ | ರತಿಯು ನೆಲದೋಳ್ ಬಿದ್ಹೊರಳಾಡಿ | 27 ಹಾಹಾರಮಣಾ ಹಾ ನಿಜೇಶ ಹಾ ಪ್ರಾಣಕಾಂತಕಾಮಾ | ಎನ್ನ ಕರ್ಕಶನಿಸ್ಸೀಮ | ಸಾಹಸ ಮಾಡುವೆನೆಂದು ಪೋಗಿ ಶಂ- ಕರನಿಂದಲಿ ಮಡಿದೆ | ಪೇಳಿದಮಾ- ತ್ಕೇಳದೆ ನೀ ನಡೆದೇ | ಪೋಗಬೇ- ಡೆಂದು ನಾನು ನುಡಿದೆ 28
--------------
ಗುರುರಾಮವಿಠಲ
ಮಾತೆಂದೆನಬ್ಯಾಡಿ ಧ್ರುವ ಎಲ್ಲಿ ನೋಡಿದರೆ ತಾ ಅಲ್ಲಿಗಲ್ಲಿಗಿಹ್ಯ ಎಲ್ಲ ಕಡೆಯಲ್ಲೇಕೋಮಯವೊ ಸುಲ್ಲಭವಾಗಿಹ್ಯಬಲ್ಲ ಜ್ಞಾನಿಗೆ ಭಾಸುತಿಹ್ಯ ಫುಲ್ಲಲೋಚನ ಪ್ರಾಣದೊಲ್ಲಭನು 1 ಎತ್ತ ನೋಡಿದರತ್ತ ಸುತ್ತಸುತ್ತಲಿಹ್ಯ ನಿತ್ಯವಾಗಿಹ್ಯ ಹೃತ್ಕಮಲದಲಿ ತುತ್ತಾಯಿತ ತಾ ಮಾಡಿ ನಿತ್ಯಸಲಹುವ ಹತ್ತಿಲೆ ಹೊಳೆಯುತ ಚಿತ್ತದಲಿ 2 ಹಿಂದೆನೋಡಿದಿರಿಹ ಮುಂದೇನೋಡಿದಿರಿಹ್ಯ ಸಂಧಿಸಿಹನು ಅಂತರಾತ್ಮದಲಿ ತಂದೆ ತಾಯಿಯು ಬಳಗಾಗಿಹ್ಯ ತಾನೆ ಎಂದಿಗೆ ಅಗಲದೆ ಅನುದಿನದಲಿ 3 ಜನವನದೊಳಗಿಹ್ಯ ಜನಾರ್ಧನ ತಾನು ತನುಮನದೊಳು ಥಳಥಳಸುತಲಿ ಅನುಮಾನವಿಲ್ಲದೆ ಅನಿಮಿಷದಲಿ ನೋಡಿ ಆಣುರೇಣುದಲಿ ಪರಿಪೂರ್ಣನು 4 ಸಾರಿಚಲ್ಲೆದ ಪರಬ್ರಹ್ಮಸ್ವರೂಪವಿದು ಸೂರ್ಯಾಡಬಹುದು ಸುಜ್ಞಾನಿಗಳು ತೋರದು ಎಂದಿಗೆ ಗುರುಕೃಪೆಯಿಲ್ಲದೆ ತರಳಮಹಿಪತಿ ವಸ್ತುಮಯವಿದು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು