ಒಟ್ಟು 74 ಕಡೆಗಳಲ್ಲಿ , 30 ದಾಸರು , 72 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿಗಮ ತಂದುಸುವುಸಿ ಜಗದೊಳಗೆ ಧ್ರುವ ನಗ ಬೆನ್ನೆಲಿ ತಾಳಿದ ನೀನಾರೋ ಜಗವ ಕದ್ದೊಯಿದಸುರನ ನೀ ಕೊಂಡು ಬಗೆದು ತರಳಗೊಲಿದವ ನೀನಾರೊ 1 ಧರಣಿ ನೀ ಮೂರಡಿಯನೆ ಮಾಡಿ ಹಿರಿಯಳ ಶಿರ ಹರಿಗಡಿದವನಾರೊ ಪರ ದೇವತೆಗಳ ಸೆರೆಯ ಬಿಡಿಸಿ ತುರುಗಳಗಾಯ್ದ ಗೋವಳ ನೀನಾರೊ 2 ನಾರಿಯರ ವ್ರತಗಳನೆ ಹಳಿದು ಏರಿ ಹಯವನು ಸುಳಿವವನಾರೊ ತರಳ ಮಹಿಪತಿ ಮನೋಹರವ ಮಾಡಿ ಗುರುತುತೋರಿದ ಗುರು ಮಹಿಮ ನೀ ಬಾರೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೀನೆ ದಯಾನಿಧಿಯು ಶ್ರೀ ಗುರುರಾಯ ನೀನೆ ದಯಾನಿಧಿಯು ಧ್ರುವ ಕರುಣದಿ ಕುಂತಿಯ ಪುತ್ರರಿಗೆ ಒಲಿದು ಕಾಳ ನಿರ್ಮಿಸಿ ಕೌರವರಳಿದು ಉಳಿಯದೆ ಇಳೆಯೊಳು ವಂಶವ ಸವರಿದ ಶೇಷಶಯನ ಶ್ರೀ ಕೇಶವ ನೀನೆ 1 ನರಗೊಲಿದು ನರಕಾಸುರನ ಮರ್ದಿಸಿ ನಾರಗನೆಂದಜಮಿಳನ ನೀ ತಾರಿಸಿ ನಾರದಗೊಲಿದು ನಾಟ್ಯವನಾಡಿದ ನರಹರಿಯು ನಾರಾಯಣ ನೀನೆ 2 ವೇದವ ಕದ್ದೊಯಿದಸುರನ ಸೀಳಿ ಮಚ್ಛವತಾರದ ರೂಪವ ತಾಳಿ ಮಾವನ ಕೊಂದ ಮಾನ್ಯರ ಮಡುಹಿದ ಮಾಧವ ನೀನೆ 3 ಗೋಕುಲದಲಿ ಪುಟ್ಟಿ ಧರೆಯೊಳು ಬೆರಳಲಿ ಗೋವರ್ಧನ ಗಿರಿಯನೆತ್ತಿ ಗೋಕುಲ ಕಾಯ್ದಿ ಗೋಪಿಯರಿಗೊಲಿದ ಗೋಪಾಲಕೃಷ್ಣ ಗೋವಿಂದನು ನೀನೆ4 ಸೃಷ್ಟಿನೆಲ್ಲ ಬೆನ್ನಿಲಿ ತಾಳಿದ ಶೇಷನ ಸಂ ಕಷ್ಟವ ಪರಿಹರಿಸಿದ ಶಿಷ್ಟ ವಿಭೀಷಣಗೊಲಿದು ಪಟ್ಟವಗಟ್ಟವು ವಿಷ್ಣವು ನೀನೆ 5 ಮದನನೊಲಿದು ಕಾಳಿಂಗನ ತುಳಿದು ಕದನದಲಿ ಬಾಣಾಸುರನಳಿದು ಮೇದಿನಿಯೊಳು ಮರೆ ಇಲ್ಲದೆ ದೈತ್ಯರ ಮರ್ದಿಸಿದ ಮಧುಸೂದನನು ನೀನೆ 6 ತ್ರಿಪುರವನಳಿದು ತ್ರಿಗುಣವ ತಾಳಿದ ತೆತ್ತೀಸ ಕೋಟಿ ದೇವರುಗಳಿಗಾಳಿದ ಅಕ್ರೂರಗೊಲಿದು ಚರಿತ್ರವದೋರಿದ ತ್ರಿಜಗಪತಿ ತ್ರಿವಿಕ್ರಮ ನೀನೆ7 ವಾಲಿಯನಳಿದು ವಾಲ್ಮೀಕಿಗೊಲಿದು ಬಲಿಚಕ್ರನ ಮುನಿಮುಂದಲಿ ಸುಳಿದು ಬ್ರಾಹ್ಮಣನಾಗಿ ದಾನವ ಬೇಡಿದ ಮಾನ್ನವಗೊಲಿದ ಶ್ರೀ ವಾಮನ ನೀನೆ 8 ಸೃಷ್ಟಿನೆಲ್ಲ ನಿರ್ಮಿಸಿ ವಕ್ಷ ಸ್ಥಳದಲಿ ಶ್ರೀ ಮಹಾಲಕ್ಷ್ಮಿಯ ಧರಿಸಿದ ಶ್ರೀನಿಧಿ ಶ್ರೀಪತಿ ಶ್ರೀಗುರುಮೂರುತಿ ಶ್ರೀದೇವಿಗೊಲಿದಿಹ ಶ್ರೀಧರ ನೀನೆ 9 ದಾಸರ ಕ್ಲೇಶಕಿಲ್ಮಿಷಗಳ ತೊಳೆದು ಅಂಬರಿಷ ರುಕ್ಮಾಂಗದಗೊಲಿದು ಶುಕ ಶೌನಕ ಪರಾಶರ ಮುನಿಗಳಿಗೆ ಹರುಷನಿತ್ತ ಹೃಷಿಕೇಶನು ನೀನೆ 10 ಕ್ಷಿತಿಯೊಳು ದೃಢ ಪತಿವ್ರತೆಗೊಲಿದು ಯತಿ ಮುನಿಗಳಿಗಿನ್ನು ಗತಿಗಳನಿತ್ತು ಪತಿತರ ತಾರಿಸಿ ಪಾವನಗೈಸಿದ ಪರಂಜ್ಯೋತಿ ಪದ್ಮನಾಭನು ನೀನೆ 11 ದೇವಕಿಗೊಲಿದು ಸ್ಥಾಪಿಸಿ ಧರೆಯೊಳು ದ್ವಾರಕಿಯಲಿ ನಿಜ ಲೀಲೆಯು ತೋರಿದ ದುರಿತ ವಿಧ್ವಂಸನ ದೇವಕಿ ಪುತ್ರ ದಾಮೋದರ ನೀನೆ 12 ಸಿದ್ದ ಶರಣರಿಗೊಲಿದ ಸದ್ಗತಿ ಸುಖಸಾಧನ ಸಹದೇವಗದೋರಿದ ಸಂಭ್ರಮದಿ ಸುಧಾಮಗ ಒಲಿದು ಸಂತೋಷವನಿತ್ತ ಸಂಕರುಷಣ ನೀನೆ 13 ವಸುಧಿಯೊಳು ಭಸ್ಮಾಸುರನ ಮರ್ದಿಸಿ ಭಾಷೆಯನಿತ್ತು ಭಕ್ತರ ಪಾಲಿಸಿ ಋಷಿ ವೇದವ್ಯಾಸಗೊಲಿದಾತನು ವಸುದೇವಸುತ ವಾಸುದೇವನು ನೀನೆ 14 ವಿದುರುದ್ಧವ ಗರುಡಗೊಲಿದು ಭೃಗುಮುನಿ ಕಪಿಲ ಯೋಗೇಂದ್ರನ ಸಲಹಿದ ಸ್ಥಿರಪದವಿತ್ತರೊಂದು ಮಂದಿಗೆ ಪ್ರಸನ್ನವಾದ ಪ್ರದ್ಯುಮ್ನನು ನೀನೆ 15 ಸೀತಾ ಸುದ್ದಿಯ ತಂದವಗೊಲಿದು ಹತ್ತು ತಲೆಗಳ ಇದ್ದವನಳಿದು ಕದ್ದುಬೆಣ್ಣೆಯ ಮುದ್ದೆಯ ಮೆದ್ದು ಉದ್ದವಗೊಲಿದ ಅನಿರುದ್ಧನು ನೀನೆ 16 ಸೋಕಿಸಿ ಪೂತಣಿಯ ಕಾಯವು ಹೀರಿದ ಭಕ್ತ ಪುಂಡಲೀಕನ ಸಲಹಿದ ಭಕ್ತಿಗೆ ಒಲಿದು ಮುಕ್ತಿಯನಿತ್ತ ಪರಮ ಪರುಷ ಪುರುಷೋತ್ತಮನು ನೀನೆ 17 ಅಕ್ಷಯವೆಂದು ರಕ್ಷಿಸಿ ಸಭೆಯೊಳು ದ್ರೌಪದಿ ಕರುಣಕಟಾಕ್ಷದಿ ಸಲಹಿದ ಭಕ್ತವತ್ಸಲನಾಗಿ ಗಜೇಂದ್ರಗೆ ಅಧೋಕ್ಷಜ ನೀನೆ 18 ನರನಾರಿಯು ನಾಂಟೀಶರನಾಗಿ ನಖಮುಖದಲಿ ಹಿರಣ್ಯಕನ ಸೀಳಿ ಭಕ್ತಪ್ರಹ್ಲಾದಗ ಒಲಿದು ಸ್ತಂಭದಿ ಪ್ರಕಟಿಸಿದ ನರಸಿಂಹನು ನೀನೆ 19 ಅನಿಳ ಸ್ನೇಹಿತ ಅಜಗ್ನಾನಗ ಒಲಿದು ಅಹಲ್ಯಾ ಶಾಪ ವಿಮೋಚನ ಮಾಡಿದ ನೆಚ್ಚಿದ ಧ್ರುವನ ನಿಜ ಭಕ್ತಿಗೆ ಒಲಿದು ಅಚಲ ಪದವಿತ್ತುಚ್ಯುತ ನೀನೆ 20 ಜಗದೊಳು ಭಕ್ತಜನರಿಗೆ ಒಲಿದು ಜಾಹ್ನವಿ ನಿರ್ಮಿಸಿ ಜನಕನ ಸಲಹಿದ ಸಾಧು ಸಜ್ಜನ ಮುನಿ ಸಂಜೀವನ ಜಾನಕೀಪತಿ ಜನಾರ್ಧನನು ನೀನೆ 21 ಅಂಗದಗೊಲಿದಾನಂದವನಿತ್ತು ಕುಂದದೆ ಕರೆದುಪಮನ್ಯುನ ಸಲಹಿದ ದಿನಕರ ಚಂದ್ರ ಕಳಿಯಗಳಿತ್ತು ಇಂದ್ರಗೆ ಒಲಿದ ಉಪೇಂದ್ರನು ನೀನೆ 22 ಧರೆಯೊಳು ಭಕ್ತನ ಜನ್ಮವು ಹರಿಸಿ ಹರಿಶ್ಚಂದ್ರನ ಕ್ಲೇಶವು ಪರಿಹರಿಸಿದ ಸುರಮುನಿಗೊಲಿದ ಶ್ರೀ ಹರಿಯು ನೀನೆ 23 ಕಾಳಿ ಮಥನವು ಮಾಡಿ ಕರುಣದಿ ಸುರರಿಗೆ ಅಮೃತವನಿತ್ತು ಸಲಹಿದ ಕಲ್ಕ್ಯಾವತಾರದ ಲೀಲೆಯ ತೋರಿದ ಕಪಟ ನಾಟಕ ಶ್ರೀ ಕೃಷ್ಣನು ನೀನೆ 24 ಸಂಧ್ಯಾನದ ಸಾಹಾಯವನಿತ್ತು ಕಾಯದಿ ಸದ್ಗತಿ ಸಾಧನದೋರಿದ ನರಕೀಟಕ ಮಹಿಪತಿ ತಾರಕ ಗುರುಮೂರ್ತಿಯ ಪರಮ ದಯಾನಿಧಿಯು ನೀನೆ 25
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೀನೇ ದಯಾಸಂಪನ್ನ ಭಕ್ತ ಪ್ರಸನ್ನಾ ಪ ಕಂದನಿನ್ನಯ ದಿವ್ಯಾನಂದ ಮೂರುತಿಯ ನಾ ಕುಂದದೇ ಭಜಿಸಲು ಮರುಗಿ ಬೇಗಾ ಇಂದಿರೇ ಅಜಭವರೆಂದೂ ಕಾಣದ ನಿಜ ವೆಂದೆಂಬೋ ರಾಜ್ಯದೊಳಿದ್ದ ಕಾರಣದಿಂದ 1 ಹರಿಸರ್ವೋತ್ತಮನೆಂದು ಪಿತನಾಜ್ಞೆಯ ಮೀರಲು ಹರಿರೂಪತಾಳ್ದು ದೈತ್ಯನ ಶಿರವಾ ಹರಿದು ಬಾಲನನೆತ್ತಿ ಸಲಹಿದ ಬಗೆಯಿಂದ ಕರುಣಾಕರನೆಂದು ಶ್ರುತಿಯು ಪೇಳುತ್ತಿರಲೂ 2 ಪಾತಕದಿಂದ ಗೌತಮಸತಿ ಶಿಲೆಯಾಗೆ ಭೂತಳದೊಳು ಪರಬೊಮ್ಮನೆಂಬೋ ಸೀತಾರಾಮಾವತಾರರಿಂದ ಸೌಂದರ್ಯ ನೂತನಪದ ಸೋಕಲು ನಿಜಸತಿಯಾದಳೋ 3 ಗುರುತನೂಜನ ಮಂತ್ರಶಕ್ತಿ ವೇದನೆ ತಡೆದೆ ಹರಿಯೆಂದು ಕರೆದ ಉತ್ತರೆಗೆ ಬೇಗಾ ವರಚಕ್ರವನು ಮರೆಮಾಡಿ ಪರೀಕ್ಷಿತನ ಪೊರೆಯೆ ತ್ರಿಜಗದೊಳು ಕೀರ್ತಿಯಾಹುದರಿಂದ 4 ಹರನಿಂದ ಉರಿಯ ಹಸ್ತವ ಪಡೆದು ಭಸ್ಮಾ ಸುರನು ಫಾಲಕ್ಷನ ಖತಿಗೊಳಿಸೆ ಸಿರಿವೇಲಾಪುರ ಚನ್ನಕೇಶವನಾವೇಶದಿಂ ಪರಿದಸುರನ ಕೊಂದು ಸ್ಥಿರವಾದಕಾರಣ 5
--------------
ಬೇಲೂರು ವೈಕುಂಠದಾಸರು
ಪಾದಸೇವೆಯ ಪಾಲಿಸೋ ಪಂಕಜನಾಭ ಪ ಪಾದಸೇವೆಯ ತೋರೋ ವೇದಗೋಚರ ವ್ಯಾಘ್ರ ಭೂಧರ ವಿಹರಣ ಶ್ರೀಧರ ಹರಿ ನಿನ್ನ ಅ.ಪ ಶೇಷವಾಯುಗಳತಿದೋಷವರ್ಜಿಸಿ ತನು ಶೋಷಿಸಿ ತಪನ ವಿಶೇಷವಾಚರಿಸೆ ದೋಷರಹಿತ ಗುಣಭೂಷಾ ಶೇಷನಿಗೊಲಿದು ಶೇಷಪರ್ವತ ಶಿರೋಭೂಷಣನೆನಿಸಿದ 1 ಬಲಿಚಕ್ರವರ್ತಿಯು ಬಲವೈರಿಯನು ಬಲು ಬಳಲಿಸಿ ರಾಜ್ಯವ ಛಲದಿಂದಾಕ್ರಮಿಸೆ ನಲಿದು ವಾಮನನಾಗಿ ಬಲಿಯ ದಾನವ ಬೇಡಿ ನೆಲನ ಈರಡಿ ಮಾಡಿ ಬಲಿಯ ಮೆಟ್ಟಿದ ಧೀರ2 ಪಲಕಾಲ ಶಾಪದಿ ಶಿಲೆಯಾಗಿದ್ದ ಗೌತಮ ಕುಲಸತಿಗೊಲಿದು ನಿರ್ಮಲ ತಪೋವನಕೆ ಸುಳಿದು ಆ ಲಲನೆಯ ಕಲುಷವ ಖಂಡಿಸಿ ಲಲನಾರೂಪವನಿತ್ತು ಸಲಹಿದ ಪಾವನ 3 ತರಣಿತನಯನೆಚ್ಚ ಗರಳಶರವು ಬೇಗ ನರನುತ್ತಮಾಂಗಕೆ ಗುರಿಯಾಗಿ ಬರಲು ಚರಣದುಂಗುಟದಿಂದ ಧರಣೀತಳವನೂರಿ ನರನ ಶಿರವ ಕಾಯ್ದ ನರನಾರಾಯಣ ನಿನ್ನ 4 ಪುಲಿನಾಮದಸುರನು ಛಲದಿ ಮಾಂಡವ್ಯನ ಗಳವಪಿಡಿದು ಬಾಧೆಗೊಳಿಸೆ ವೇಗದಲಿ ಪುಲಿಗೆ ಮೋಕ್ಷವನಿತ್ತು ಪುಲಿಗಿರಿಯಲಿ ಮುನಿ ಕುಲಜ ಮಾಂಡವ್ಯಗೆ ಒಲಿದ ವರದವಿಠಲ ನಾರಾಯಣ5
--------------
ವೆಂಕಟವರದಾರ್ಯರು
ಪಾರ್ಥಸಾರಥಿ ಪಾಲಿಸೆನ್ನ ಶ್ರೀಹರಿಯೆ ಪ ಅಂದು ಗಜನು ತಾನು ಬಂದು ತಾ ಬಂಧು ಬಳಗವ ಕೂಡಿ ಸೊಂಡಿ- ಲಿಂದ ನೀರನು ಕಲಕಲಾಕ್ಷಣ ಒಂದು ಮಕರ್ಹಲ್ಲಿಂದ ಪಿಡಿಯೆ ಮು- ಕುಂದ ನೀನೆ ಗತಿಯೆಂದರಾಕ್ಷಣ ಬಂದು ಒದಗಿದ್ಯೊ ಸಿಂಧುಶಯನನೆ 1 ದುರುಳಾಸುರನು ತನ್ನ ಕರುಳ ತನ ಕರುಳನಿಟ್ಟುರಿಯಲ್ಲಿ ಗರಳ ಹಾಕಿ ಬಾಧಿಸಲು ಖಳನು ಕಾರಣ ಕಂಬದಲಿ ಬಂದೆಳೆದು ಅವನುರ ಕರುಳ ಮಾಲೆಯ ಕರಾಳವದನವ ತೆರೆದು ತನ್ನಯ ಕೊರಳಲ್ಲಿರಿಸಿದ ಕೋಮಲಾಂಗನೆ 2 ಪಿತನ ತೊಡೆಯಲಿದ್ದ ಸುತನ ಕಂಡು ಸುತನ ಸುರುಚಿಯು ತಾನಾಗ ಹಿತದಂತ್ವಾಕ್ಯಗಳನು ನುಡಿಯಲು ಅತಿಬ್ಯಾಗದಲಜಸುತನ ನುಡಿ ಕೇ ಳುತಲಿ ತಪವನು ಚರಿಸಲಾಕ್ಷಣ ಪತಿತಪಾವನ ಪರಮ ಕರುಣದಿ ಸುತ ಧ್ರುವಗೆ ಸುಖವಿಟ್ಟ ಶ್ರೀಹರಿ3 ಬಾಡಿ ಬಳುಕುವ ದ್ವಿಜನ ನೋಡಿ ತಾ ನೋಡಿ ತಂದವಲಕ್ಕಿ ಬೇಡಿ ಆಡಿ ಭಕ್ತನ ಕೂಡ ನಯನುಡಿ ಮಾಡಿ ಕರುಣವ ತನ್ನ ದಯ ಸೂ- ರ್ಯಾಡಿ ಸಖಗೀಡಿಲ್ಲದರ್ಥವ ನೀಡಿದ್ಯೊ ಬಹು ರೂಢಿಗಧಿಕನೆ 4 ಕಡುಚÉಲ್ವೆಕರೆಯಲುಟ್ಟುಡುಗೆ ಉಟ್ಟ ಉಡುಗೆ ಸೆಳೆಯಲು ಕೃಪ್ಣೆ(ಯಿ)ದ್ದೆಡೆಗೆ ನಡೆದಸುರ ಪಿಡಿದೆಳೆಯೆ ಸೀರೆಯ ಕಡೆಯ ಕಾಣದೆ ಖಳನು ಧರೆಯೊಳು ಯುಡುಗೆಗಕ್ಷಯ ನುಡಿದ ಕೃಷ್ಣನೆ 5 ಸಿಂಧುಶಯನಾರವಿಂದನಯನಾರ- ವಿಂದ ನಯನ ಅಸುರರಿಗತಿ ಭಯಂಕರನಾ- ಗೆಂದಿಗಾದರು ನಿನ್ನ ನಾಮಸುಧೆ ಯಿಂದ ಸುಖ ಸುರಿವಂತೆ ಮಾಡು ಮು- ಕುಂದ ಭೀಮೇಶಕೃಷ್ಣ ನಿನ್ನ ಪ- ದಾಂಬುಜವ ತೋರಾನಂದದಿಂದಲಿ 6
--------------
ಹರಪನಹಳ್ಳಿಭೀಮವ್ವ
ಪಾಲಿಸೆನ್ನನು ಶ್ರೀ ಲೋಲ ಸದ್ಗುಣ ವಿಶಾಲ ನೀಲ ಪ. ಶ್ರೀರಮಣನೆ ನಿನ್ನ ಚರಣ ಸದ್ಗುಣಗಣ ವಾರಿಧಿಗಣನೆ ನೀನೆಂದು ಸಿರಿದೇವಿಯಂದು ಪಾರವಿಲ್ಲದ ತವ ಚರಿತ್ರೆಯ ಸಾರಗಳನೀಕ್ಷಿಸಲು ನಯನಾಂ- ಪಾದ ಹತಮಾಂಸಾರಕೇಶವ 1 ಶ್ರುತಿ ತತಿಗಳನೈದಸುರನ ಕೊಂದ ದಿತಿಜಗೋಸುಗ ನಗಧರನ ಕೃಪಹಾರ ಹಣನ ದಿತಿಜಹರ ಸುರತತಿಗೆ ರಾಜ್ಯವನತಿ ವಿಲಾಸದೊಳಿತ್ತ ಭಾರ್ಗವ ಬಾಧ್ಯನೆ ಅತುಳಹಯನೆ 2 ಸುರರು ನಿನ್ನಯ ಪಾದ ನಿರ್ಮಲ ರಜೋದ್ಧಾರಕರ ಬಿನ್ನಪವ ಕೇಳ್ ಗಜ ಚರ್ಮ ವಸ್ತ್ರ ಸಮಧ್ವಜಾಸನ ನಿನ್ನ ದಾಸರ ದಾಸರೊ- ಷಣ್ಮುಖಾತ್ಮಜ ಜಯನ ಗಿರಿಗನೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಬಹಳ ನಂಬಿದೆ ಭಕ್ತಪಾಲ ಶ್ರೀ ಲಕ್ಷೀಯ ಲೋಲ ವೆಂಕಟರಾಯನ ಮೂರು ಲೋಕದೊಡೆÉಯನ ಮುಕ್ತಿಯ ಕೊಡುವನ ಪಾಲಿಸಿ ಜಗವನುದ್ಧರಿಸಿದ ದೇವನ ಪ. ಜಲದೊಳು ಪೊಕ್ಕು ವೇದವ ತಂದು ಅಜವನಿಗಿತ್ತು ಬಲುಗಿರಿ ಕುಸಿಯಲು ಬೆನ್ನಿನಿಂದಲಿ ತಳೆದು ನೆಲನ ಕದ್ದಸುರನ ಕೊಂದು ಕಂಬದಿ ನಿಂದು ಬಲಿಯ ದಾನವ ಬೇಡಿ ಜಲ ಪರುಷವ ನೀಡಿ ಮತ್ತೆ ಮಾತೆಯ ಕಡಿದು ಛಲದಿ ರಾವಣನ ಸಂಹರಿಸಿ ಸೀತೆಯ ತರಿಸಿ ಬಲುಸತಿಯರನಾಳಿ ಬವುದ್ಧ ರೂಪವ ತಾಳಿ ಅಲ್ಲದಶ್ವವೇರಿದ ಅತಿ ಚೆಲುವ ದೇವನ 1 ನಿಗಮ ಚೋರನ ಕೊಂದು ನೀರೊಳು ಮುಳುಗ್ಯಾಡಿ ನಗವ ಬೆನ್ನಲಿ ಪೊತ್ತು ಸುರರಿಗಮೃತವಿತ್ತು ಬಗೆದು ಧಾರುಣಿಯನ್ನು [ಚೀರಿ ಹರಹಿ] ಹಿರಣ್ಯಕನ ಮಿಗಿಲಾದ ಬಲಿಯ ಮೆಟ್ಟಿ ಸೊಗಸಿಂದ ಕಾಮಧೇನುವ ತಂದು ಕೌಸಲ್ಯಾ ಮಗನಾಗಿ ಹುಟ್ಟಿ ರಕ್ಕಸÀರನ್ನು ತರಿದೊಟ್ಟಿ ವಿಗಡ ಮಾವನ ಕೊಂದು ಮತ್ತೆ ತ್ರಿಪುರವ ಗೆಲಿದು ಜಗದೊಳುದ್ದಂಡ ರಾವುತನಾದ ದೇವನ 2 ಆದಿಪೊಳ[ಕು] ಕ್ಷೀರಾಂಬುಧಿ ಮಥsÀನವ ಆಡಿ ಕೂರುಮನಾಗಿ ಮತ್ತ ಹಿರಣ್ಯಕನ ದಾಡೆಯಿಂದಲಿ ಸೀಳಿ ಜೋಡು ರೂಪವ ತಾಳಿ ಬೇಡಿ ಮೂರಡಿ ನೆಲವ ತೀಡಿ ಕ್ಷತ್ರಿಯರ ಸಂಹರಿಸಿ ಕಾಡೊಳು ಚರಿಸಿ ಗಾಡಿಗಾತಿಯರ ಮನೆಯೊಳುಳ್ಯಾಡಿ ಸತಿಯರ ವ್ರತ- ಗೇಡಿ ಭಕ್ತರಿಗೆ ಅಭಯವ ನೀಡಿ ಹೆಳವನಕಟ್ಟೆ ಕಾಡುಗಲ್ಲಲ್ಲಿ ನಿಂತ ಕಲಿ ವೆಂಕಟೇಶನ 3
--------------
ಹೆಳವನಕಟ್ಟೆ ಗಿರಿಯಮ್ಮ
ಬಾಗಿಲು ತೆರೆಯುವ ಹಾಡು ನಾರಿ ಶಿರೋಮಣಿ ವಾರಿಜ ಮುಖಿಯೆ ಗಂಭೀರಳೆ ಬಾಗಿಲು ತೆರೆಯೇ |ಗಂಭೀರಳೆ ಬಾಗಿಲ ತೆರೆಯೇ ಪ ಆರು ನಿನ್ನಯ ಪೆಸರೆನಗೆ ಪೇಳದಲೆ ದ್ವಾರವ ತೆಗೆಯೆನು ನಾನು |ನಾ ದ್ವಾರವ ತೆಗೆಯೆನು ನಾನು ಅ.ಪ. ನೀರೊಳು ಸಂಚರಿಸಿ ಕ್ರೂರ ತಮನ ಕೊಂದಧೀರ ಮತ್ಸ್ಯನು ಕಾಣೆ ನಾರೀ | ನಾಧೀರ ಮತ್ಸ್ಯನು ಕಾಣೆ ನಾರೀ ||ಧೀರ ಮತ್ಸ್ಯನು ನೀನಾದರೊಳಿತು ದೊಡ್ಡವಾರಿಧಿಯೊಳಗಿರು ಹೋಗಯ್ಯ | ದೊಡ್ಡವಾರಿಧಿಯೊಳಗಿರು ಹೋಗಯ್ಯ 1 ಶರಧಿ ಕೂರ್ಮ ಕೂರ್ಮ ಕಾಣೆ ||ಗಿರಿಯ ತಾಳಿದ ಕೂರ್ಮನಾದರೊಳಿತು | ದೊಡ್ಡಮಡುವಿನೊಳಗೆ ಇರು ಹೋಗಯ್ಯ | ದೊಡ್ಡಮಡುವಿನೊಳಗೆ ಇರು ಹೋಗಯ್ಯ2 ಧರೆಯ ಕದ್ದಸುರನ ದಾಡಿಯಿಂದಲಿ ಸೀಳ್ದವರಹ ಕಾಣೆಲೆ ವಾರಿಜಾಕ್ಷಿ | ನಾವರಹ ಕಾಣೆಲೆ ವಾರಿಜಾಕ್ಷೀ ||ವರಹ ನೀನಾದರೊಳಿತು ನಡೆ ನಡೆ | ದೊಡ್ಡವನಾಂತ್ರದೊಳಗಿರು ಹೋಗಯ್ಯ || ದೊಡ್ಡವನಾಂತರದೊಳಗಿರು ಹೋಗಯ್ಯ 3 ಮೃಗ ಮೃಗ ಮೃಗ ನೀನಾದರೊಳಿತು ದೊಡ್ಡಗಿರಿ ಶಿಖರದೊಳಗಿರು ಹೋಗಯ್ಯ | ದೊಡ್ಡಗಿರಿ ಶಿಖರದೊಳಗಿರು ಹೋಗಯ್ಯ 4 ಭೂಮಿ ಈರಡಿ ಮಾಡಿ ಬಲಿಯ ಪಾತಾಳಕಿಟ್ಟವಾಮನ ಕಾಣೇ ವಾರಿಜಾಕ್ಷೀ | ನಾವಾಮನ ಕಾಣೇ ವಾರಿಜಾಕ್ಷೀ ||ವಾಮನ ನೀನಾದರೊಳಿತು ನಿನ್ನಪ್ರೇಮ ಬಂದಲ್ಲಿರು ಹೋಗಯ್ಯ | ನಿನ್ನಪ್ರೇಮ ಬಂದಲ್ಲಿರು ಹೋಗಯ್ಯ 5 ತಂದೆ ಆಜ್ಞೆಯ ಪೊತ್ತು ತಾಯಿ ಸೋದರನ್ನಕೊಂದವ ನಾನೇ ಕೋಮಲಾಂಗೀ | ನಾಕೊಂದವ ನಾನೇ ಕೋಮಲಾಂಗೀ ||ಕೊಂದವ ನೀನಾದರೊಳಿತು ಮುನಿವೃಂದದಲ್ಲಿ ಇರು ಹೋಗಯ್ಯಾ | ಮುನಿವೃಂದಾದಲ್ಲಿ ಇರು ಹೋಗಯ್ಯ 6 ಲಂಡ ರಾವಣನ ಶಿರವ ಚಂಡಾಡಿ ಸೀತೆ ತಂದ | ಪ್ರ-ಚಂಡ ವಿಕ್ರಮ ರಾಮ ಕಾಣೇ | ನಾ ಪ್ರ-ಚಂಡ ವಿಕ್ರಮ ರಾಮ ಕಾಣೇ ||ಪ್ರಚಂಡ ವಿಕ್ರಮನಾದರೊಳಿತು ಕೋತಿಹಿಂಡುಗಳೊಳಗಿರು ಹೋಗಯ್ಯ | ಕೋತಿಹಿಂಡುಗಳೊಳಗಿರು ಹೋಗಯ್ಯ 7 ಮಧುರಾಪುರದಿ ಪುಟ್ಟಿ ಮಾವ ಕಂಸನ ಕೊಂದಚದುರ ಕಾಣೆಲೆ ಶಾಮಲಾಂಗೀ | ನಾಚದುರ ಕಾಣಲೆ ಶಾಮಲಾಂಗೀ ||ಚದುರ ನೀನಾದರೊಳಿತು ನಡೆ ನಡೆ ಗೋಪೇ-ರಧರ ಚುಂಬಿಸುತಿರು ಹೋಗಯ್ಯ | ಗೋಪೇ-ರಧರ ಚುಂಬಿಸುತಿರು ಹೋಗಯ್ಯ 8 ಶುದ್ಧ ಖಳನು ಆಗಿ ವ್ರತವನಳಿದು ಬಂದಬೌದ್ಧ ಕಾಣಲೇ ಮಂದಗಮನೇ | ನಾಬೌದ್ಧ ಕಾಣಲೇ ಮಂದಗಮನೇ ||ಬೌದ್ಧನು ನೀನಾದರೊಳಿತು ನಡೆ ನಡೆ ನಿನ್ನಬುದ್ಧಿ ಬಂದಲ್ಲಿರು ಹೋಗಯ್ಯ | ನಿನ್ನಬುದ್ಧಿ ಬಂದಲ್ಲಿರು ಹೋಗಯ್ಯ 9 ತುರಗವನೇರಿ ಕಲಿಯ ಕಡಿದು ಶಾಂತನ ಸಹೋ-ದರಗೆ ರಾಜ್ಯವನಿತ್ತೆ ಕಾಣೇ | ಸಹೋ-ದರಗೆ ರಾಜ್ಯವನಿತ್ತೆ ಕಾಣೇ ||ಪರಮ ಪುರುಷನಹುದೋ ರಾಹುತರಿರುವಸ್ಥಳದಲ್ಲಿರು ಹೋಗಯ್ಯ | ನೀರಾಹುತರಿರುವ ಸ್ಥಳದಲ್ಲಿರು ಹೋಗಯ್ಯ 10 ಕನ್ಯಾಮಣಿಯೆ ಕೋಮಲೆಯೇ ಗುಣಪೂರ್ಣ ಮೋ-ಹನ್ನ ವಿಠಲ ರಾಯ ಕಾಣೆ | ನಾ ಮೋ-ಹನ್ನ ವಿಠಲ ರಾಯ ಕಾಣೆ ||ಎನ್ನ ಅಪರಾಧ ಕ್ಷಮಿಸಬೇಕು ಎನುತಲಿಚೆನ್ನಾಗಿ ಪಾದಕ್ಕೆರಗಿದಳು ದೇವಿ 11
--------------
ಮೋಹನದಾಸರು
ಬಾರೊ ಮುಂದಿರೊ ಪರನಾರಿಸಹೋದರಮಾರ ನಿನಗಾರ ಮುದ್ದತಾರ ವೀರಹನುಮ ಪ. ಮರಗಳ ಮುರಿದೆ ಕರೆಕರೆದು ನೆರೆದಸುರರಶಿರಂಗಳ ತರಿದೆ ನಿನ್ನ ಸರಿಯಾರೋ ವೀರ ಹನುಮ 1 ಕಂಡೆ ನಿನ್ನ ಬಲವ ಸುಪ್ರಚಂಡ ರಿಪುಕುಲವತುಂಡು ತುಂಡಿಕ್ಕಿ ಮೆರೆದೆ ಬಲುಗಂಡೆ ವೀರ ಹನುಮ 2 ಎನ್ನೊಡೆಯ ಶ್ರೀಹಯವದನಗೆ ರನ್ನದ ಕನ್ನಡಿಯಂತೆ ಪ್ರಸನ್ನ ಮೋಹದ ......ಬಾಳು ಬಾಳು ವೀರ ಹನುಮ 3
--------------
ವಾದಿರಾಜ
ಭಕುತರಪರಾಧವ ಬಗೆಯನೀ ದೇವಭಕುತರು ತಪ್ಪಿದರೆ ಬಲು ಭಯವೀವ ಪ . ಇಟ್ಟುಣಿಸಿದ ಬಲಿ ಕಟ್ಟಿದ ಯಶೋದೆಗೆಇಷ್ಟಾರ್ಥಗಳನಂದು ಕೊಟ್ಟು ಕಾಯನೆದುಷ್ಟತನದಿ ಧೃತರಾಷ್ಟ್ರತನಯ ತನ್ನಕಟ್ಟಲು ಹವಣಿಸೆ ಕಷ್ಟವನುಣಿಸನೆ 1 ಕಾಲಲಿ ತನ್ನ ಅಂಗವನೊದ್ದ ಮುನಿಪನಮೂಲೋಕವರಿಯೆ ಮುದ್ದಿಸಿ ಮೆರೆಯನೆತಾಳದೆ ನೃಪತಿಯ ತಾನೆಂದು ತಿಳಿಯನುಕಾಲಯವನ ಬಂದು ಕಾಳು ಮಾಡಿಸನೆ 2 ಪರವಶಚಿತ್ತನಾಗಿಫಲುಗುಣ ಜರೆಯಲುಹರಿ ದೂರಾಗದೆ ಹರಣವ ಕಾಯನೆಅರಸೆಂಬ ಗರ್ವದಿಂದ ಅರಿಭಟ ಪೌಂಡ್ರಕನಧುರಕೆ ಗುರಿಯ ಮಾಡಿ ಧುರದಿ ಕೊಲಿಸನೆ3 ಶರಕೆ ಗುರಿಯ ಮಾಡಿ ಸಮರದೊಳೊಡ್ಡಿದಸುರವ್ರತÀಗಂದು ಶುಭವನೀಯನೆಹರನ ಮೆಚ್ಚಿಸಿ ತನ್ನ ಗೆಲುವ ಬಿಲ್ಲ ಬೇಡಿದಶರೀರ ಸಂಬಂಧಿಯ ಕೊಲಿಸನೆ 4 ಮಕುಟವ ಕದ್ದೊಯ್ಯಲು ಮಹಾಬಲಿಯ ಬಾಗಿಲಅಕಳಂಕನಂದು ಕಾವುದ ಬಿಟ್ಟನೆಈ ಕೃಷ್ಣ ಹಯವದನನಿಂದುಡುಪಿನ ಜನಕೆಶೋಕವಿತ್ತ ಕಳ್ಳನಿಗೆ ಶೂಲಗತಿಯೀಯನೆ5
--------------
ವಾದಿರಾಜ
ಭವ ಶರಧಿ ತಾರಕನೇ - ನಾಕರವಾ ಮುಗಿವೆ - ಎನ್ನ ಕರುಣದಲ್ಲಿ ನೋಡೋ ಪ ಎರಡು ಭಾಗದಿ ಶ್ರೀ ಧರಣೇರಿಂದೊಪ್ಪುತತ್ವರಿತದಿ ದಯಮಾಡು ಉರಗಾಗಿರಿ ವೆಂಕಟ ಅ.ಪ. ತೇರಿನೊಳಿಪ್ಪ ಶೃಂಗಾರ ಪುರುಷನೆ ಬಂ-ಗಾರ ಮಾಣಿಕದಲಂಕಾರವ ಧರಿಸಿದಮಾರಮಣನೆ ವನಜಾರಿವದನ ಬಲು-ಶೂರ ಸಮರಧೀರ ನಾರಾಯಣ ಕಂಸಾರೇ ||ನರ ಕಂಠೀರವ ಕಮಲನಾಭನಾರದ ಮುನಿ ಪ್ರಿಯ ಚಾರು-ಚರಿತ ಪನ್ನಗಾರಿಗಮನ ಮದ-ನಾರಿಯ ಸಲಹಿದ ಧೀರ ಮುರಾರಿ 1 ನಿಂದರೆ ಬಪ್ಪುದು ಸಿಂಧುಶಯನ ದಯ-ದಿಂದ ಎನ್ನನು ನೋಡು-ಕಣ್ದೆರೆದೀಕ್ಷಿಸಿ |ಕಂದಗೊಲಿದು ಕಂಬದಿಂದ ಬಂದಸುರನಕೊಂದು ಕರುಳಹಾರ ಕಂಧರದಿ ತಾಳಿದೇ ||ಮಂದಮತಿವನೆಂದಲೇ ಗೋ-ವಿಂದ ಗೋವಳ ವೃಂದದೊಡನೆ ಕಾ-ಳಿಂದಿಯ ಧುಮುಕಿ-ಫಣೀಂದ್ರನ ಶಿರದಲಿಧಿಂ ಧಿಮಿ ಧಿಮಿಕೆಂದು ಕುಣಿದ ಹರಿ 2 ಜಲದೊಳ ಪೊಕ್ಕು ಆ ಇಳೆಯ ತಸ್ಕರನು ದುಂ-ಬಲಗೊಂಡು ಮಡುಹಿ ನಂಬಿದ ಪ್ರಹ್ಲಾದ ಹಂ-ಬಲಿಸೆ ಧರ್ಮದಿ ಕಾಯ್ದೆ ಸಲೆ ಕ್ಷತ್ರಿಯಕುಲವನಳಿದೆ-ನಿನ್ನೊಳು ನೀನೇ ಕಾಯ್ದೆ ||ಮಲೆತ ಮಾವನ ಕೊಂದೆ ಸಲೆಖಳ ತ್ರಿಪುರನ ಗೆದ್ದು ಕಲಿಯ ಸಂಹರಿಸಿದೆಸುಲಭ ಮೂರುತಿ ಮೋಹನವಿಠ್ಠಲಚೆಲುವ ತಿರುವೇಂಗಳ 3
--------------
ಮೋಹನದಾಸರು
ಭಾಗವತ ದಶಮಸ್ಕಂದ ಕಥೆ ಜಯ ಜಯ ರಾಮಾನುಜ ಪಾಹಿ ಜಯ ಜಯ ಶ್ರೀಕೃಷ್ಣಪಾಹಿ ಜಯ ಪಾಂಡವ ಮಿತ್ರ ಪಾಹಿ ಜಯ ಜಯ ಜಯತು ಪ ಭವ ಪ್ರಮುಖ ಸುರರಿ- ಗಾನಮಿಸುತ ದಶಮಸ್ಕಂದದ ಕಥೆಯ ಪೇಳುವೆ 1 ತಾಮರಸಭವಂಗೆ ಪೋಗಿ ಮೊರೆಯನಿಟ್ಟಳು 2 ಹರಮುಖ ಸುಮನಸರ ಕೂಡಿ ವಿಧಿಯು ಕ್ಷೀರ ಶರಧಿಯೈದಿ ಪರುಷಸೂಕ್ತದಿಂದ ಹರಿಯ ಸ್ತೋತ್ರ ಮಾಡಲು 3 ಸುರರು ಯಾದವರಾಗಿ ನಾನು ಬರುವೆ ದೇವಕಿ ಪುತ್ರನೆನಿಸಿ ತರಿವೆ ನೀಚರನೆಂದಾಕಾಶವಾಣಿಯಾಯಿತು 4 ಕನ್ನಿಕೆಯರು ಭುವಿಯೊಳವತರಿಸುವದೆನ್ನುತ 5 ಮೃಡ ಸಡಗರದಲಿ ತಮ್ಮ ನಿಳಯಗಳನು ಸಾರ್ದರು 6 ಶೂರಸೇನನೆಂಬ ರಾಜ ಪಾರಂಪರ್ಯದಿ ಮಧುರೆಯಲ್ಲಿ ಧಾರುಣಿಯ ಪಾಲಿಸುತೆ ಧರ್ಮದಿಂದಲಿ 7 ದೇವಕನು ದೇವಕಿಯ ವಸುದೇವಗಿತ್ತು ಉತ್ಸವ ಬರೆ ಭಾವ ಮೈದ ಕಂಸ ರಥಕೆ ಸಾರಥಿಯಾದನು8 ನಭವುನುಡಿಯೆ ಜವದಿ ತಂಗಿಯ ಮುಡಿಯ ಪಿಡಿಯೆ ಕಂಸ ಕೋಪದಿ9 ಪುಟ್ಟಿದ ಮಕ್ಕಳನೆಲ್ಲ ನಿನಗೆ ಕೊಟ್ಟುಬಿಡುವೆ ಕೊಲ್ಲದಿರವಳ ಸಿಟ್ಟು ಸೈರಿಸೆನುತ ಪೇಳ್ದ ಶೌರಿಭಾವಗೆ 10 ಕೊಡಲು ಕಂಸ ಹೃದಯದಲಿ ಸತ್ಯಕೆ ಮೆಚ್ಚಿ ಭಾವಗೆಂದನು 11 ಇವನ ಭಯವು ಎನಗೆ ಇಲ್ಲ ಈವುಂದೆಂಟನೆ ಸುತನ ಮಾತ್ರ ತವಕದಿಂದ ಮನೆಗೆ ಪೋಗು ಪುತ್ರ ಸಹಿತದಿ 12 ಸೆರೆಯೊಳಿಡಿಸಿ ಘನವಿಭವದಿ ಭುವಿಯನಾಳುತಿರ್ದ ಕಂಸನು 13 ಸುರ ಋಷಿ ರಹಸ್ಯದಲಿ ಬಂದು ಪೇಳಿದ 14 ಉರಿದ ಕಣ್ಣೊಳು ಕಿಡಿಗಳುದುರೆ ಶೌರಿಯ ಬಂಧನದೊಳಿಟ್ಟು ತರಿದನಾರುಮಂದಿ ಸುತರ ತವಕದಲಿ 15 ಏಳನೆಯ ಗರ್ಭ ಉದರವಿಳಿದೆಂದು ತಿಳಿಯೆ ಜನರು ಶ್ರೀಲತಾಂಗಿಯರಸನಂಶ ಬಳಿಕ ಬೆಳೆದುದು 16 ಅದನು ವಯ್ದು ದುರ್ಗಿ ರೋಹಿಣಿಯುದರದಲ್ಲಿ ಇಟ್ಟೆಶೋದೆ ಯುದರದಲ್ಲಿ ತಾನು ಸೇರಿ ಬೆಳೆಯುತಿರ್ದಳು 17 ಬಳಿಕಯಿಂದಿರೇಶ ತಾನು ಜಲಜಮುಖಿ ದೇವಕಿಯ ಗರ್ಭ ದಲಿ ಪ್ರವಿಷ್ಠನಾಗಿರ್ದ ಮಹಿಮೆಯಿಂದಲಿ 18 ಮುಖದಿ ಕಳೆಯೇರಿರಲ್ಕೆ ಖಳನಿದೇ ಇದೇ ಎನುತ್ತ ಸಕಲ ಭಾಗದಿ ಕಾವಲಿಟ್ಟು ಸಮಯ ನೋಡುತ್ತಿರೆ 19 ಸುರರು ಹರಿಯ ವೇದದಿಂದ ಸ್ತೋತ್ರಮಾಡಿ ಹೋದರು 20 ನಂದನರಸಿಯಲ್ಲಿ ದುರ್ಗಿಯಂದುದಿಸಿರೆ ನಭೋ ಮಾಸದಿ ಅಂದುರಾತ್ರಿಯ ಶಿತಪಕ್ಷಯಷ್ಟಮಿ ದಿನದಲಿ 21 ಸರಸಿಜಾಪ್ತನುದಿಸಿದಂತೆ ಬೆಳಕು ತುಂಬಲು 22 ದರ ಗದಾರಿ ಪದ್ಮ ಪೀತಾಂಬರ ಶ್ರೀವತ್ಸ ಕೌಸ್ತುಭಗಳ ಶೌರಿ ನೋಡಿದ 23 ದಿವ್ಯರೂಪವ ಕಾಣುತ ವಸುದೇವ ಮನದಿ ಹಿಗ್ಗಿ ಮುದದಿ ಗೋವುಗಳನು ಹತ್ತುಸಾವಿರ ಧಾರೆಯೆರೆದನು 24 ತುತಿಸಲಂದು ಸತೀಪತಿಗಳು ಹಿತದಿ ತೇಜವ ಮಾಯಗೈದು ಸುತನು ಮಗುವಿನಂತೆ ತೋರೆ ಸೊಬಗಿನಿಂದಲಿ 25 ಕಾಲಲಿದ್ದ ಸಂಕೋಲೆಗಳು ಕಳಚಿ ಬಿದ್ದುದಾಗ ದೇವಕಿ ಬಾಲನನ್ನು ನೋಡಿ ಮನದಿ ಭಯವ ಪಟ್ಟಳು 26 ಬೀಗಮುದ್ರೆ ಸಹಿತ ಎಲ್ಲ ಬಾಗಿಲು ತನ್ನಿಂತಾನೆ ತೆಗಿಯೆ ಶೌರಿ ನಡೆದನು 27 ಗೋಕುಲವನೈದಿ ಕಮಲನಾಭನಂ ಯಶೋದೆಯ ಬಳಿಯಲಿಟ್ಟನು 28 ಆಕೆ ಪಡೆದ ಹೆಣ್ಣು ಶಿಶುವ ತಾ ಕೈಕೊಂಡು ಮನೆಗೆ ಬಂದು ಜೋಕೆಯಿಂದ ಮೊದಲಿನಂತೆ ತೋರುತಿರ್ದನು 29 ಅಳಲು ಶಿಶವು ಕೇಳಿಯೆಲ್ಲ ಖಳರು ಹೋಗಿ ಕಂಸಗುಸುರೆ ಝಳಪಿಸುತ್ತ ಖಡ್ಗವನ್ನು ಜವದಿ ಬಂದನು 30 ವಂದನಾದರೂ ಬಿಡಬಾರದೆ ಸುಂದರಿ ಇವಳಣ್ಣ ಎನಲು ಮುಂದುಗಾಣದೆ ಯೋಚಿಸುತ್ತ ಮುಗುವನೆತ್ತಿದ 31 ನಭದಿನಿಂತು ಸಾರಿ ಛೀ ದುರಾತ್ಮ ಯಾರ ಕಡಿವೆ ಯೆಂದಳು? 32 ವೈರಿ ಮೀರಿ ಕೊಂದು ಪಾಪಿಯಾದೆ ಛೀ! ಹೋಗೆಂದಳು 33 ಮನದಿ ನೊಂದು ಕಂಸನು ತನ್ನನುಜೆಯನ್ನು ಭಾವನನ್ನು ವಿನಯದಿಂದ ಬೇಡಿಕೊಂಡ ಕ್ಷಮಿಸಿರೆನ್ನುತಾ 34 ನೆರಹಿ ತನ್ನ ಮಂದಿಯಾದ ದುರುಳರಿಗೀ ಸುದ್ದಿಪೇಳೆ ಬರಲಿ ಹರಿಯು ಕೊಲುವೆವವನ ಭಯಬಿಡೆಂದರು 35 ಧರೆಯೊಳು ಪುಟ್ಟಿದ ಶಿಶುಗಳನ್ನು ತರಿವುದೆಂದು ಪೂತನೆಯೆಂಬ ಮರುಳೆಯನ್ನು ಕಳುಹಿ ವಿಸ್ಮಯದಿಂದಲಿರ್ದನು 36 ನಂದಗೋಕುಲದಲ್ಲಿ ಮಹಾನಂದವಾಗಿ ಜನರೆಶೋದೆಯ ಕಂದನನ್ನು ನೋಡಿ ಹಿಗ್ಗಿಯುತ್ಸವಗೈದರು 37 ಪ್ರೀತಿಯಿಂದ ನಂದಗೋಪ ಜಾತಕರ್ಮ ಮಾಡಿಸಲ್ಕೆ ಶ್ರೀ ತರುಣಿಯ ಕಳೆ ದಿನದಿನದಿ ಪೆರ್ಚುತಿಹುದು 38 ಶೌರಿಯ ಮಧುರೆಯಲಿ ನೋಡಿ ಆದರಿಸಿ ಎನ್ನ ಮಗನೆ ಧೀರ ನಿನ್ನ ಮಗನೆನ್ನುತ ಗೋಪ ನುಡಿದನು39 ಏಳನೆಯ ದಿನದಿ ಪೂತನಿ ಬಾಲಕಂಗೆ ಮೊಲೆಯನೊಡೆ ಹಾಲಾಹಲವನೀಂಟಯಸುವನೆಳದು ಕೊಂದನು40 ಬಿಡುಬಿಡೆನ್ನುತಾರ್ಭಟಿಸುತಲೊಡನೆ ಯೋಜನವಾಗಿ ದೇಹ ಪೊಡವಿಗುರುಳೆ ನೋಡಿಗೋಪರು ಭೀತಿಗೊಂಡರು 41 ಜನ್ಮತಾರೆಯುತ್ಸವದಲಿ ಶಕಟನು ಬಂಡಿಯೊಳು ಸೇರಿ ಇರಲು ನನ್ನಿಯಿಂದಲೊದ್ದು ಕೆಡಹಿ ಕೊಂದಿತಾ ಶಿಶು ಪೋರ 42 ಬಾರಿಬಾರಿಗೆ ರಕ್ಷೆಕಟ್ಟಿನಾರಾಯಣ ಕವಚವ ತೊಡಿಸಿ ಪೋರಬಾಲನನ್ನು ಸಲಹೆನುತ ಹರಿಯ ಬೇಡಿದರು43 ಸಾರಿ ನೆಲಕೆ ಕೆಡಹಿ ಮೇಲೆ ಆಡುತಿರ್ದನು 44 ಶೌರಿ ನೇಮದಿಂದ ಗರ್ಗ ಸೇರಿ ಗೋಕುಲವನು ಸಂ ಸ್ಕಾರ ಕ್ಷತ್ರದಿಂದ ಮಾಡಿದ ಶಿಶುಗಳೆರಡಕೆ 45 ರಾಮಕೃಷ್ಣರೆಂದು ಪೆಸರ ಪ್ರೇಮದಿಂದಲಿಡಿಸಿ ನಂದನ ನೇಮಕೊಂಡು ತಾ ತೆರಳಿದ ಗರ್ಗಾಚಾರ್ಯನು46 ಶುಕ್ಲಪಕ್ಷದ ಚಂದ್ರನಂತೆ ಶುಕ್ಲನಾಮಕ ಹರಿಯು ಜನದೊ ಳಕ್ಕರಿಯಲ್ಲಿ ಬಾಲಲೀಲೆ ತೋರುತಿರ್ದನು 47 ಅಂಬೆಗಾಲಿಡುತ್ತ ಕೃಷ್ಣ ಸಂಭ್ರಮದಲಿ ಮನೆಮನೆಗಳೊ ಳಿಂಬಾಗಿ ಪಾಲು ಬೆಣ್ಣೆ ಕದ್ದು ತಿಂಬನು 48 ವಂದು ನೋಡಿ ಕಣ್ಣುಮುಚ್ಚಿ ವಿಸ್ಮಿತಳಾದಳು 49 ಮನೆಮನೆಗಳ ಪೊಕ್ಕೆಶೋದೆತನಯ ಪಾಲುಬೆಣ್ಣೆಸವಿದು ವಿ ನಯದಿಂದ ಅರಿಯದವನಂತಿರುವ ತಾಯಿಗೆ 50 ಗೋಪಿ ವಿಧ ವಿಧ ಗುಣದಿಂದಲೂಖಲಕ್ಕೆ ಕಟ್ಟಿದಳ್ 51 ವರಳ ಸೆಳೆದುಕೊಂಡು ಮತ್ತಿಮರಗಳನ್ನು ಮುರಿಯೆ ಸಿದ್ಧ ಪರುಷರೀರ್ವರಾಬಾಲಗೆ ನಮಿಸಿ ತುತಿಸಿ ಪೋದರು 52 ವನಜನಾಭ ಕೃಷ್ಣನನ್ನು ದೂರುತಿರುವರು 53 ಸೂನು ನಮ್ಮ ಮನೆಗೆ ಬಂದು ಆನಂದದಿ ಯಾರು ಆಡದಾಟ ಆಡುವ 54 ಬಾಯಿಗೊರಸಲತ್ತೆ ಸೊಸೆಯ ಹೊಡೆಯೆ ನಗುತ ಓಡಿ ಬಂದ ತವಸುತ 55 ಲೀಲೆಯಿಂದಲಿವನು ನೆಲುವಿನ ಮೇಲಿಟ್ಟಿರುವ ಭಾಂಡವನ್ನು ಕೋಲಿನಿಂದ ತಿವಿದು ವಡೆದು ಪಾಲ ಸವಿದನು56 ಎತ್ತಿಕೊಳ್ಳೆನುತ್ತ ಮೈಯ್ಯ ಹತ್ತಿ ನೆಲುವಿನ ಭಾಂಡವನ್ನು ಮತ್ತೆ ನಿಲುಕಿಸಿಕೊಂಡು ಪಾಲಕೆನೆಯ ಮೆದ್ದನು 57 ಸತಿಪತಿಗಳ್ ಮಲಗಿರೆ ಮಧ್ಯೆ ಸರ್ಪವನು ಹಾಕಿ ತಾನ- ಗುತ್ತಲಿ ಜುಟ್ಟು ಜಡೆಗೆ ಗಂಟಿಕ್ಕಿ ಓಡಿದ58 ಅಳುತಲಿರುವ ಶಿಶುವಿನ ತಲೆಯ ಕೂದಲು ಕರುವಿನಬಾಲಕೆ ಎಳೆದು ಗಂಟುಹಾಕಿ ಬೀದಿಯಲ್ಲಿ ನೂಕುವ 59 ಬೆಣ್ಣಿಯನ್ನು ಮೆದ್ದು ಮಿಕ್ಕದನ್ನು ಕೋತಿಗಿತ್ತದು ತಿನ್ನತಿರಲು ನಗುತ ನಗುತ ತಿರುಗುತಿರುವನು 60 ಇನಿತು ಎಲ್ಲ ಪೇಳೆ ಗೋಪವನಿತೆ ತಾನು ಮಗನ ಮುದ್ದಿಸಿ ಘನ ಪ್ರಮೋದ ಚಿತ್ತಳಾಗಿ ಕಾಲಕಳೆವಳು 61 ಪ್ರೀತಿಯಿಂದ ಬನ್ನಿ ಎಂದು ಕರೆವ ಬಾಲರ 62 ಮೂರು ವರ್ಷವಾಗೆ ಕೃಷ್ಣ ಮುದದಿ ಕರುಗಳ ಕಾಯುತ್ತ ವಾರಿಗೆಯವರಿಂದ ಕೂಡಿ ಕುಣಿಯುತಿರುವನು 63 ವತ್ಸ ಬಕರ ಮುರಿದು ಕೃಷ್ಣ ಸ್ವೇಚ್ಛೆಯಿಂದಲಣ್ಣನೊಡನೆ ನಿಶ್ಚಲ- ಚಿತ್ತರುಲಿಯಲಾಡುತೆಸೆದ ಮೋದದಿ64 ವೃಂದಾವನಕೆ ಪೋಗಲಲ್ಲಿ ಇಂದಿರೇಶ ವಿಷದ ಮಡುವ ನೊಂದು ದಿನದಿ ಧುಮುಕಿ ಜಲವ ನಿರ್ಮಲಗೈದನು 65 ವನದೊಳಗ್ನಿಯನು ನುಂಗಿ ಜನರ ಸಲಹಿ ರಾತ್ರಿಯಲ್ಲಿ ಮುನಿ ಜನೇಢ್ಯನಾಗಿ ಗೋಕುಲದೊಳೆಸೆದನು 66 ಅಜಗರನಾಗಿದ್ದಸುರನ ನಿಜಶರೀರ ಬೆಳಸಿ ಕೊಂದು ಸ್ವಜನರನ್ನು ಪಾಲಿಸಿದನು ವೃಜಿನದೂರನು 67 ಳನ್ನು ಕಾಯ್ದ ಕೃಷ್ಣ ತಾನು ನನ್ನಿಯಿಂದಲಿ 68 ಕರುಗಳನ್ನು ಹುಡುಗರನ್ನು ಸರಸಿಜಭವ ಬಚ್ಚಿಡಲ್ಕೆ ಹರಿಯುತಾನು ತತ್ವದ್ರೂಪವಾಗಿ ಮೆರೆದನು 69 ನಾನಾಲಂಕಾರದಿ ಗೋವುಗಳ
--------------
ಗುರುರಾಮವಿಠಲ
ಮರೆಯದಿರು ಹರಿಯಮರೆವರೆ ಮೂರು ಲೋಕದ ದೊರಿಯ ಪ ಮದಗಜ ಹರಿಯೆಂದು ಕರೆಯಲುಒದಗಿ ಆಕ್ಷಣ ಬಂದುಮುದದಿ ನಕ್ರನ ಕೊಂದು ಸಲ-ಹಿದ ಸದ್ಭಕ್ತರ ಬಂಧುಹದುಳ ಪ್ರಹ್ಲಾದನ ಹೆದರಿಸಿದಸುರನಉದರವ ಬಗೆದಂಥದುಭುತ ಮಹಿಮನ1 ನಾರಿಯು ತನ್ನ ಕರೆದ ಮಾತ್ರದಿಸೀರೆಯ ಮಳೆಗರೆದಕ್ರೂರ ಖಳನ ತರಿದು ಆ ಪಾಂಡವರಆರಣ್ಯದಿ ಪೊರೆದಗಾರಾದಜಮಿಳ ನಾರಗ ಎನಲುಪಾರಗಾಣಿಸಿದಪಾರ ಗುಣನಿಧಿಯ 2 ದುರಿತ ಭವ ಪಾಶಾ - ಅವಗೆಂದೆಂದಿಗಿಲ್ಲ ಕ್ಷೇಶಾತಂದೆ ಕದರುಂಡಲಗಿ ಹನುಮಯ್ಯನೊಡೆಯಚಂದಾದಿಕೇಶವನ ನೆನೆದವರೆಂದಿಗು ಧನ್ಯರು3
--------------
ಕನಕದಾಸ
ಮಾಧವ ನಮ್ಮ ಶ್ರೀಧವ ಬಾಧೆಪಡಿಸದೆ ತನ್ನ ಪಾದದಾಸರ ಕಾಯ್ವ ಪ ನಿರುತ ನೀರೊಳು ನಿಂದ ಈತ ಚಾರು ನಿಗಮಗಳ ತಂದ ಬಲು ಭಾರ ಪೊತ್ತನು ಬೆನ್ನಲಿಂದ ಆಹ ಕೋರೆದಾಡೆಯಲಿಂದ ಘೋರದೈತ್ಯನ ಸಂ ಹಾರವ ಮಾಡಿ ಭೂಭಾರವನಿಳುಹಿದ 1 ಅರಮನೆಕಂಬದಲಿಂದ ಕಡು ಘೋರ ರೂಪವ ತಾಳಿ ಬಂದ ಮಹ ದುರುಳನುದರ ಬಗಿದುಕೊಂದ ಆಹ ಧರೆಯನೀರಡಿ ಮಾಡಿವ ದನುಜನ ತುಳಿದು ಚರಣದಾಸರ ಮನದೊರವಿತ್ತು ಸಲಹಿದ 2 ವೀರತನದಿ ಕೊಡಲಿಪಿಡಿದ ಧರೆಯ ಸಾರಕ್ಷತ್ರಿಯಮೂಲವಳಿದ ದೇವ ಧಾರುಣಿಯೊಳು ನರನಾದ ಅಹ ತೋರಿ ವಿಪಿನವಾಸ ಮೀರಿದಸುರನ ಕೊಂದು ಮೂರುಲೋಕದ ಕಷ್ಟ ದೂರಮಾಡಿದ ಶೂರ 3 ಗೊಲ್ಲಕುಲದಿ ಜನಿಸಿದ ಪುಂಡ ಬಿಲ್ಲಿನಾಟವ ರಚಿಸಿದ ವೀರ ಖುಲ್ಲ ಕಂಸನ ಮದ ಮುರಿದ ಆಹ ನಲ್ಲೇರ್ಹದಿನಾರು ಸಹಸ್ರಬಲ್ಲಿದತನದಾಳಿ ಎಲ್ಲ ಭಕ್ತರ ಇಷ್ಟಸಲ್ಲಿಸಿ ಪೊರೆದನು 4 ಸಾರಿಬತ್ತಲೆ ಕದಲಿದ ಪರಮ ನಾರಿಯರ ವ್ರತ ಭಂಗಿಸಿ ಮೆರೆದ ಮೂರುಪುರದ ಗರ್ವಮುರಿದ ಆಹ ಪಾರುಮಾಡಿದ ಸುರರ ಘೋರಕಂಟಕದಿಂದ ಏರಿದ ಹಯ ನಮ್ಮ ಧೀರ ಶ್ರೀ ಗುರು ರಾಮ 5
--------------
ರಾಮದಾಸರು
ಮಾಧವ ಮಧುಸೂದನ ಹರಿ ಜೋ ಜೋ ಯಾದವ ರಾಯ ಶ್ರೀರಂಗನೆ ಜೋ ಜೋ ಪ ವಸುದೇವ ದೇವಕಿ ಸುತನಾಗುದಿಸಿ ವಸುಧÉಯ ಭಾರವನಿಳುಹಿದೆ ಜೋ ಜೋ1 ಶುಕಶೌನಕ ನಾರದಮುನಿ ವಂದ್ಯ ಅಕಳಂಕ ಚರಿತ ಅಚ್ಚುತಾನಂತ ಜೋ ಜೋ2 ಶಿಶುರೂಪನೆತ್ತುತ ಮುದ್ದಿಸುತಿಹ ಅಸುರೆ ಪೂತಣಿ ಅಸುಹೀರಿದೆ ಜೋ ಜೋ 3 ಬಂಡಿಯ ರೂಪದಿ ಬಂದಸುರನ ಸಿರ ಚಂಡಾಡುತ ನಲಿದಾಡಿದೆ ಜೋ ಜೋ 4 ಪೊಂಗೊಳಲೂದುತ ಗಂಗೆಯೊಳಿಹ ಕಾ- ಳಿಂಗನ ಪೆಡೆ ತುಳಿದಾಡಿದೆ ಜೋ ಜೋ 5 ಗೋಪಾಲಕರೊಡನಾಡುತ ನಲಿಯುತ ಪಾಪಿ ಖಳನ ತರಿದಾಡಿದೆ ಜೋ ಜೋ 6 ಸಾಧಾರಣ ವತ್ಸರದಲಿ ಸಲಹುವ ಶ್ರೀದ ಕಮಲನಾಭ ವಿಠ್ಠಲ ಸುಜನರ 7
--------------
ನಿಡಗುರುಕಿ ಜೀವೂಬಾಯಿ