ಒಟ್ಟು 48 ಕಡೆಗಳಲ್ಲಿ , 23 ದಾಸರು , 45 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೃಂದಾವನದಲಿ ನಿಂದಿಹನ್ಯಾರೆ ಪೇಳಮ್ಮಯ್ಯ ಪ ಕುಂದು ರಹಿತ ಬಹು ಸುಂದರ ಹರಿಪದದ್ವಂದ್ವ ಭಜಕ ಯತಿ ಪುಂಗ ಕಾಣಮ್ಮ ಅ.ಪ. ಮಂಗಳ ಪಂಪಾ ಕ್ಷೇತ್ರ ಸನಿಯ ಮುನಿಪುಂಗರು ಯಾರೇ ಪೇಳಮ್ಮಯ್ಯ |ಅಂಗಜನನು ಬಲು ಹಿಂಗಳೆಧರಿ ಪದಭೃಂಗರೇನಿಪರ್ಯಾರೇ ಪೇಳಮ್ಮಯ್ಯ |ತುಂಗಭದ್ರ ಸುತರಂಗಿಣಿ ಮಧ್ಯಗಮಂಗಳಾಂಗ ವ್ಯಾಸೇಂದ್ರ ಕಾಣಮ್ಮ 1 ಮಾಯಾಮತ ವಿಧ್ವಂಸಕರೆನಿಸುವನ್ಯಾಯಾಮೃತ ರಚಕರ ನೋಡಮ್ಮಮ್ಮ |ಸಾಯಣಾದಿ ಕುಭಾಷ್ಯದಲಿಹ ಅನ್ಯಾಯವ ಜರಿದ ನೋಡಮ್ಮಮ್ಮ |ಕಾಯಜ ಪಿತನನ ಹೇಯನೆಂದು ಬಹುಗಾಯನ ಮಾಡ್ದ ಮಹಾತ್ಮ ಕಾಣಮ್ಮ 2 ಪದುಮನಾಭ ಕವೀಂದ್ರ ವಾಗೀಶರಮಧ್ಯದಲಿಹರ ನೀ ನೋಡಮ್ಮಯ್ಯ |ಸುಧೀಂದ್ರ ಶ್ರೀನಿವಾಸರು ರಾಮತೀರ್ಥರಮಧ್ಯದಲಿಹರ ನೀ ನೋಡಮ್ಮಯ್ಯ |ಯದುರಿಲಿ ಪ್ರಾಣ ಸುಪಾಶ್ರ್ವದಿ ರಘುವರ್ಯಗೋವಿಂದ ತೀರ್ಥರ ನೋಡಮ್ಮಮ್ಮ 3 ಆರು ಕೋಣೆಗಳ ಮೇಲಾಕಾರ್ವೊಲಯದಿ ಧೀರ ವಾನರರಾ ನೋಡಮ್ಮಯ್ಯಮೂರು ಕೋಟಿ ಜಪದಾಧಾರದಿ ಸಮೀರ ನಿಂದಿಹ ನೋಡಮ್ಮಯ್ಯ |ಧೀರ ನಿಲಿಸಿದಾಧಾರ ಭಕ್ತಿ ಯಂತ್ರೋದ್ಧಾರರ ನೀ ನೋಡಮ್ಮಮ್ಮ 4 ಬೋಧ ಗುರು ಗೋವಿಂದ ವಿಠಲನಪಾದ ಸೇವಕ ವ್ಯಾಸಾರ್ಯ ಕಾಣಮ್ಮ 5
--------------
ಗುರುಗೋವಿಂದವಿಠಲರು
ಶ್ರೀ ಲಕ್ಷ್ಮೀನೃಸಿಂಹ ಪ್ರಾದುರ್ಭಾವ ದಂಡಕ ಶ್ರೀರಮಾ ಮಾನಿನೀ ಮಾನಸೇಂದೀವರೋತ್ಫುಲ್ಲ ಸಂಫುಲ್ಲ ಚಂದ್ರಾ ಚಿದಾನಂದ ಸಾಂದ್ರಾ ಸದಾ ಸನ್ನುತೇಂದ್ರಾ ನಮೋಪೇಂದ್ರ ನಿಸ್ತಂದ್ರ ನೀ ಕೇಳು, ಆ ರೀತಿ ಪ್ರಹ್ಲಾದನಲ್‍ಸಜ್ಜನಾಹ್ಲಾದನಲ್ ದೈತ್ಯ ಸತ್ಪುತ್ರರಾವೇಳೆ ಶ್ರೀಕಾಂತನ ಜ್ಞಾನ ಭಕ್ತಿ ಕ್ರಿಯಾಗಾಧೆಗಳ್ ಬೋಧೆಗಳ್ ಕೇಳಿ ತಾವೆಲ್ಲರಾಮಾರ್ಗದಲ್ಲೇ ಸುನಿರ್ದಿಷ್ಟ ಸನ್ಮಾರ್ಗದಲ್ಲೇ ಪರಾಭೂತ ಷಡ್ವರ್ಗದಲ್ಲೇ ಮನಸ್ಸಿತ್ತು ಧರ್ಮಾರ್ಥ ಕಾಮಸ್ಪøಹ ಗ್ರಂಥಗಳ್ 10 ಸಿದ್ಧ ಸಂಸಾರ ಸಂಬಂಧಗಳ ಹತ್ತುವೂದಾಗದೇ ದಾನವಾಚಾರ್ಯರಾಶ್ಚರ್ಯದಿಂದಾಗ ತಾವೇಸುರೀತಿಂದಲಾಯಾಸುರೀವಿದ್ಯೆಗಳ ಗದ್ಯಗಳ್ ಪದ್ಯಗಳ್ ಪಾಠ ಪೇಳ್ತಿದ್ದರಾ ಪಾಠಗಳ್ ಒಪ್ಪದೇ ತಪ್ಪದೇನಿಂತು ಮಾರಾಟಗಳ್ ಮಾಡುತಾ ವಿಷ್ಣುಭಕ್ತಿ ಕ್ರಿಯಾಪಾಠಗಳ್ ಪಾಡುತಾ ಎಲ್ಲರೊಂದಾಗೆ ತಾವ್‍ನೋಡಿ ಅಂಜ್ಯಾಡಿ ಇನ್ನೇನು ಈಸೂನುಗಳ ದೈತ್ಯರಾಟ್ ಸೂನನಲ್ ಬುದ್ಧಿ ಭೇದೈಸಿ ದುರ್ಬೋಧಗಳ್ ಕೇಳಿ ದುಸ್ಸಾಧ್ಯರಂ 20 ಕರ್ಣ ಕಾಠೋರ್ಯ ಬಾಣಾಳಿಗಳ್ ರೀತಿ ಅಪ್ರೀತಿಯಾಸೂತಿ ದುರ್ನೀತಿ ತಾ ಸೈಸದೇ ಕೋಪಸಂದೀಪನಾವೇಶದಿಂದಲ್ ಚಲದ್ಗಾತ್ರನಾಗೆದ್ದು ಪ್ರೋದ್ಯದ್ದಯಾಪಾತ್ರನಂತಿಪ್ಪ ತತ್ಪುತ್ರ ಸಂಹಾರದಲ್ ಚಿತ್ತವಂ ಪೆತ್ತವಂ ಪಾಪÀಸಂವೃತ್ತನೇತ್ರ ಪ್ರಮಾಕ್ಷೇಕ್ಷನಾಗಲ್ ಸಮ 30 ಕ್ಷೈಸಿ ದುಷ್ಟೋಕ್ತಿಗಳ್ ಬಾಗುತಾ ಕೂಗುತಾಸಾಧು ಸಧ್ಭಕ್ತಿಯಿಂದಲ್ ಮಹದ್ಭಕ್ತಿಯಿಂದಲ್ಲಿ ತನ್ನಲ್ಲಿ ಚೆನ್ನಲ್ಲಿ ಬದ್ಧಾಂಜಲಿಯಾಗಿ ಸಿದ್ಧಾಂತ ಸದ್ಭಕ್ತಿಯಿಂದಲ್ಲಿ ನಿಂದಿದ್ದ ಪ್ರಹ್ಲಾದ ಧೀಮಂತಗೇ ನಿರ್ಮಲಸ್ವಾಂತಗಾವೇಳೆ ಪಾದಾಹತವ್ಯಾಳಿಯಂತೇ ಭುಜಶ್ವಾಸಗಳ್ ಬೇಸಿಗಳ್ ಬೀಸುತಾಕಂದಗಾ ತಂದೆ ಸುಭಾಷಿಪಂ. ಹೋಯೆಲೋ ದುರ್ವಿನೀತಾಯೆಲೋ ಮಂದಬುದ್ಧೇಯೆಲೋಇಂತು ನೀ ಸ್ತಬ್ಧನಾದೇತಕೋ ವಂಶಘಾ40 ತೀಯೆಲೋ ಪಾಪಜಾತೀಯೆ ನೀ ಹೀಗೆ ಮಚ್ಛಾಸನಾತೀನಾಗಪ್ಪೊಡೇ ನಿನ್ನ ನಿನ್ನಾ ಯಮದ್ವಾರಕೇ ಕಳುಹುವೆಂ ನೋಡೆಲಾನಾನು ಕೋಪಿಷ್ಠನಾಗಿಪ್ಪೊಡೇ ಅಂಜಿ ಮೂರ್ಲೋಕಗಳ್ ಲೋಕಪಾನೀಕಗಳ್ ಕಂಪ ಕಾಣುತ್ತವಿಂಥಾ ಬಲಿಷ್ಠನ್ನ ನೀನೆನ್ನ ಸಂಪದ್ಬಲ ಶ್ರೀಯನಾಶ್ರೈಸದೇ ಬಿಟ್ಟರಿನ್ನಾವನಲ್ ನೀಂ ಬಲಶ್ರೀಯನಾಶ್ರೈಸುವೇಯೋ ಎಲಾ ಏಕೆ ಮಚ್ಛಾಸನಾತೀತನಾಗೂವಿಯೋ ಕಂದ ಪೇಳೆಂದರೇ, ತಂದೆಗಾ 50 ತಂದೆ ಕೇಳಯ್ಯ ಬ್ರಹ್ಮಾದಿ ಆಸ್ತಂಭಪರ್ಯಂತವುಂ ಜಂಗಮಸ್ಥಾವರಾತ್ಮ ಪ್ರಪಂಚೋಚ್ಚ ನೀಚ ಪ್ರಜಾನೀಕ ಯಾವತ್ತದಾವಾತನಾಧೀನದಲ್ಲಿಪ್ಪುದೋ ಆತನೇ ಎನ್ನಗೇ ನಿನ್ನಗೇಇನ್ನು ಮಿಕ್ಕಾದ ಚೈತನ್ಯಕೆಲ್ಲಾ ಬಲಶ್ರೀಯು ತಾನಾದನೇ ಕಾದನೇ ಕಾಲರೂಪೀಶ್ವರೋರುಕ್ರಮಾಕಾರನೆಂಬಾತನೇಆತನೇ ಆತನೇ ತೇಜ ಓಜಸ್ಸಹಾಸತ್ವ ಸಂಪದ್ಬಲ ಶ್ರೀಂದ್ರಿಯಾತ್ಮನ್ ಸ್ವಯಂ60 ಸ್ವಾಂತ ನೀನಿತ್ತು ಸರ್ವತ್ರ ಸಮಚಿತ್ತನಾಗಯ್ಯ ಎನ್ನಯ್ಯನೇ ನಿನ್ನಗಾಮೇಲೆ ವಿದ್ವೇಷ ಮಾಡೂವರಾರಿಲ್ಲವಂತಸ್ಸಿನಲ್ಲಿಪ್ಪ ಕಾಮಾದಿ ಷಡ್ವರ್ಗವೆಂಬಾ ಮಹಾವೈರಿಗಳ್ ಕಳ್ಳರಂತೆಲ್ಲರುಂ 70 ದೇಹವೆಂಬೋ ಮಹಾರಾಜಧಾನೀ ವೃಥಾಹಾನಿ ಮಾಡೂವರಂಥಾವರಂ ಗೆಲ್ಲದೇಕೆಲ್ವರೀ ದಿಕ್ಕುಗಳ್ ಸರ್ವವಂ ಗೆದ್ದವೆಂತೆಂದು ಹಿಗ್ಗೂವರಂತಸ್ಸಿನಲ್ಲಿಪ್ಪ ಕಾಮಾದಿ ಷಡ್ವರ್ಗ ಗೆದ್ದಾತಗೇ ಜ್ಞಾನಸಂಪೂತಗೇ ಸಾಧು ಸಂಭೂತ ಸರ್ವಂಸಮಂಚೇತಗಾಮೇಲೆ ತನ್ಮೋಹ ಸಂಜಾತವೆಂತಪ್ಪುದೋ ಶಾತ್ರವವ್ರಾತವೆಲ್ಲಿಪ್ಪುದಯ್ಯಾ ಸದಯ್ಯಾತ್ಮನೇ ತಿಳಿದು ನೋಡೆಂದು ತಾನಿಂದು ಮಾತಾಡಲು, ಶತ್ರುವಂತಿಪ್ಪ ಪು 80 ಇಂದು ನಾವೊಂದು ಪೇಳುತ್ತಿರುತ್ತಿದ್ದರೊಂದಕ್ಕೆ ಹತ್ತಾಗಿ ನೀನೇವನೋ ವಿಷ್ಣುವೆಂಬಾತ ಬೇರೊಬ್ಬ ತಾನಿಪ್ಪನೆಂದೂಹಿಸೂವೇಯ ಹೋ ಹೋಯೆಲಾಸಾವಿಗೀ ಬುದ್ಧಿ ನೀ ಸಿದ್ಧ ಮಾಡೀದಿ ಎಂಬೋದಿದಂ ವ್ಯಕ್ತವಂತೆಲ್ಲ ನಾಂ ಬಲ್ಲೆ ಇಂ 90 ತಲ್ಲದೇ ನಿನ್ನಗೀರೀತಿ ದುರ್ಬುದ್ಧಿ ಪುಟ್ಟೂವುದೇ ಮೃತ್ಯುಸಿದ್ಧರ್ಗೆ ವಿಷ್ಣುತ್ವ ಸಂಭಾಷೆಯಲ್ಲಿಚ್ಛೆ ಬೇಕಾಗಿ ಹೋದಲ್ಲದೇಬಲ್ಲೆನೆಲ್ಲಾ ಎಲೋ ಮಂದನೇ ಮಂದಭಾಗ್ಯೋಕ್ತಿಗಳ್ ಏಕೆ ನೀನಾಡುವೇ ಅಕ್ಕಟಾಎನ್ನಗಿನ್ನಾ ಜಗನ್ನಾಥನಿನ್ನಾವನೋಆತನೆಲ್ಲಿಪ್ಪ, ಸರ್ವತ್ರದಲ್ಲಿಪ್ಪ ನೀನೆಂದಡೇ ಡಿಂಭಕಾಡಂಭಕಾಡೋಣಗಳ್‍ಸಾಕು ಮಾಡಿನ್ನು ಮೇಲೀ ಸಭಾಸ್ತಂಭದಲ್‍ಶೀಘ್ರ ಸಂರಂಭದಲ್ ತೋರು ನೀ ತೋರದೇ 100 ಪೋದೆಯಾ ಇನ್ನು ನೀ ಮಾರುಮಾತಾಡದ್ಹಾಗೇ ಶಿರಚ್ಛೇದ ಮಾಡೂವೆನೋ ನಿನ್ನಗೀವೇಳೆಯಲ್ ವಿಷ್ಣುವೆಂತೆಂದದಾವಾತ ತಾನಡ್ಡ ಬಂದಾನೋ ನಾ ನೋಡುವೆಂ ವಿಷ್ಣುವೇಬೇಡಬೇಕಾದ ದಿಕ್ಕಾಗಿ ನಿನಗಿಪ್ಪಡೇಬೇಡಿಕೋ ಮೂರ್ಖನೇ ಎಂದು ಕ್ರೋಧಾಗ್ನಿಯಿಂದುರ್ಪಿ ದುರ್ಭಾಷೆಯಲ್ ತನ್ನ ಪುತ್ರನ್ನ ತಾದೂರುತಾ ಹಾರುತಾ ಕೈಲಿ ಖಟ್ ಪೆಟ್ಕವಂಖಡ್ಗವಂ ಕೊಂಡು ದುಷ್ಟಂ ಮಹಾದೋರ್ಬಲಿಷ್ಠಂ ಸ್ವಯಂ ಮುಷ್ಟಿಯಿಂದಲ್ಲಿ ಪೆಟ್ಟಿತ್ತನು. 110 ಆ ಭೀಕರಧ್ವಾನ ಸಂಭಿನ್ನ ದುಷ್ಟಾಸುರೀಗರ್ಭಸಂರಂಭವುಂ ಶುಂಭದಂಭೋದ ವೀಥೀ ಸಮಾರಂಭಿತೋ ಜೃಂಭವುಂ ವೈಷ್ಣವೋತ್ಕøಷ್ಟ ವಿಶ್ರಂಭವುಂ ಶಾತಕುಂಭೊಲ್ಲಸದ್ರತ್ನಚಿತ್ರಪ್ರಭಾಗುಂಭವುಂ ತತ್ಸಭಾಸ್ತಂಭವಂ ಆಗಲೇ ಬೇಗಲೇ ಘಳಾಘಳಾರಾವ ಉದ್ಭೂತವಾಗೆದ್ದು ಬ್ರಹ್ಮಾಂಡವೆಲ್ಲಾ ಪರಿಸ್ಫೋಟವಂ ಮಾಡುವಂತೊಪ್ಪೆ ಬ್ರಹ್ಮಾದಿಗಳ್ ತಮ್ಮ ಧಾಮಕ್ಕೆ ವ್ಯಾಘಾತವೇನಾದರುಂ ಬಾಹೋದೇನೋ ಇದೇನೆಂದು ವಿ 120 ಭ್ರಾಂತ ಚೇತಸ್ಕರಾಗಿಪ್ಪರಂತೇ ದುರಂತೇಕ್ಷಣಂಗಳ ಕುವರಾಗ್ರನಲ್ ತುಂಬುತಾಕತ್ತಿ ಕೈಹತ್ತಿ ಪುತ್ರನ್ನ ತಾ ಚಿತ್ರಹಿಂಸಿತ್ತು ಕೊಲ್ಲೂವೆನೆಂದಾಗ್ರಹೋಗ್ರ ಗ್ರಹಗ್ರಸ್ತನಾಗೇನು ಮೈತಿಳಿಯದೇ ಕೂಡಿಓಡ್ಯಾಡಿ ಬಾಹೋ ಹಿರಣ್ಯಾಖ್ಯಗಾ ವೇಳೆ ಕಾಲಾಡದದ್ಹಾಗೇ ಸಭಾಸ್ತಂಭದಲ್ ತನ್ಮಹಾರಾವ ತಾನಡ್ಡಕಟ್ಟಿಪ್ಪದಂತಾ ಮಹಾಧ್ವಾನ ಕೇಳುತ್ತಲೇ ನಿಂತನಾ ಹೇತುವಂ ಕಾಣದೇ ಆಗ ಆಯಾಸುರೀ ಹಿಂಡುಗಳ್ 130 ತುಂಬಿ ಕಾಳ್ಗಿಚ್ಚುಗಳ್ ಚೆಂದದಿಂಜಂತು ಸಂಘಕ್ಕೆ ಸಂತಾಪಗೈಸೇ ಛಿಟಾಛಿಟ್ ಛಿಟಾಂಗಾರಗಳ್ ಬೀಸೆ ಇದೇವುದೋಭೂತ ಉದ್ಭೂತವಾಗೊಪ್ಪಿತೆಂದಾಗ ಮೂರ್ಲೋಕವೆಲ್ಲಾ ಸಮುಲ್ಲೋಕವಾಗಿಪ್ಪುದಾವೇಳೆ ತದ್ಭøತ್ಯವಾಕ್ ಸತ್ಯವಂ ಮಾಡಬೇ 140 ಕಾಗಿ ಸರ್ವತ್ರ ತಾನ್ ತನ್ನ ವ್ಯಾಪ್ತತ್ವವಂಪಥ್ಯವಾಗಿಪ್ಪವೋಲ್ ಅದ್ಭುತಾಕಾರ ಪೊತ್ತಂ ಜಗದ್ಭರ್ತ ತಾನೊಂದೆ ಸಿಂಹಾಕೃತೀಯಾಗದೇ ಮತ್ರ್ಯಮೂತ್ರ್ಯಲ್ಲದೇ ತತ್ಸಭಾಸ್ತಂಭದಲ್ ಡಿಂಬ ಸಂಭಾವನಕ್ಕಾಗಿ ಸಂಭೂತನಾದಂ.ದಿತೀಪುತ್ರನಾ ರೂಪವಂಕಂಡಿದೇನೋ ಮಹಾ ಚಿತ್ರವಾಗಿಪ್ಪುದೇಸಿಂಹದಂತಲ್ಲದೇ ಮತ್ರ್ಯನಂತಲ್ಲದೇಯಾವುದೀ ಭೂತವೆಂತೆಂದು ಮೀಮಾಂಸಮಾನಾತ್ಮನಾದಂ.ಜಗತ್ಸ್ಯಾಮಿ ತಾನಾಗಲೇ 150 ತಪ್ತಭಾಂಗಾರ ಶೃಂಗಾರವಲ್ಯಂತೆ ಕಂಗಳ್ ಸಮುದ್ಯತ್ಸಟಾ ಕೇಸರಂಗಳ್‍ವಿಜೃಂಭತ್ಕರಾಳಾಸ್ಪದಂ ಉಗ್ರನಾಸಾಸಮುಚ್ಚಾಸ್ವ ನಿಶ್ವಾಸಗಳ್ ಸಂಚಲದ್ವಸ್ತವ್ಯಾಳ ಕ್ಷುರಾಂತೋಗ್ರ ಜಿಹ್ವಾಗ್ರ ಲೇಲೀಹನಂಗಳ್ ಭ್ರಮದ್ಭ್ರೂಲ್ಪಲಂಗಳ್ ಹನೊರೋಷಭೀಷ್ಣಂಗಳುಂ ಊಧ್ರ್ವಕರ್ಣಂಗಳುಂ ಭೂಮಿ ಭೃ ತ್ಕಂದರಾಶ್ಚರ್ಯವವ್ಯಾತ ಘೋರಾಸ್ಯನಾಸಾಪುಟಂಗಳ್ ಅದೀರ್ಘೊನ್ನತಗ್ರೀವವುಂದೀರ್ಘದಂತೊಪ್ಪುವೋ ದೇಹವಂ ವಿಸ್ತøತೋ160 ಶುಂಡಾಲ ಶುಂಡಪ್ರಕಾಂ170 ಡ ಪ್ರಚಂಡೋಲ್ಲಸದ್ದೋಹ ಸಾಹಸ್ರ ದೀಪ್ತಾಯುಧಾಭೋ ನಖಾನೀಕವುಂ ಚಕ್ರ ಶಂಖಾದಿ ನಾನಾಯುಧ ಶ್ರೇಷ್ಠ ವಿದ್ರಾವಿತಾsಭದ್ರ ರಕ್ಷಃ ಪಿಶಾಚಾಸುರೋದ್ರೇಕವುಂಪ್ರೋನ್ನಿತಂಬೋರು ಸತ್ಸಾನು ಜಂಘಪ್ರದೇಶಾವೃತ ಪ್ರೋಲ್ಲಸತ್ಪೀತ ಕೌಶೇಯವುಂಬದ್ಧಕಾಂಚೀಕಟಿಸ್ಥಾನವುಂ ಮಂಜುಮಂಜೀರ ಸಂಚಿನ್ನನಾದಾಂಘ್ರಿಕಂಜಾತ ವಿನ್ಯಾಸವುಂ ಕೋಟಿ ಮಾರ್ತಾಂಡ ಸಂಕಾಶವುಂಪೋಲ್ವುದಂಥಾ ದುರಾಲೋಕವಂತಿಪ್ಪ ಜ್ವಾ180 ಲಾ ನೃಸಿಂಹಾಕೃತಿ ಸ್ವಾಮಿನಂ ನೋಡುತಾದೃಷ್ಟಿಗಳ್ ಬಾಗೆ ತಾ ನಿಂತು ನನ್ನ ವರಜಾರಾತಿಯಾದ ಸ್ವಯಂ ಜ್ಯೋತಿ ಈ ರೀತಿ ತಾನಿಂದಿಗೇ ನಾರಸಿಂಹಾಕೃತೀಯಾಗಿ ನಾಂಪುತ್ರಂ ಸಂಹಾರಕುದ್ಯುಕ್ತನಾಗಿಪ್ಪೊಡೇಎನ್ನ ಸಂಹಾರಕಾಗಿಲ್ಲಿಗೇ ಬಂದನೋಇನ್ನು ಮೇಲೀತನಿಂದೆನ್ನಗೇ ಮೃತ್ಯು ತಾಸಿದ್ಧವಾಂತಿಪ್ಪುದೇನೋ ಪುರಾಣ ಪ್ರಸಿದ್ಧೋಕ್ತ್ಯಭಿವ್ಯಕ್ತಿಗೈತೇನಹೋ ಎಂದು ಮಾತಾಡುತಾ ನಿಂತು ಉದ್ಯದ್ಗದಾಧಾರಿ ತ 190 ಪೂರ್ವದಲ್‍ಅಸ್ಯತೇಜೋಂಶದಿಂದಲ್ ಜಗಧ್ವಾಂತ ಯಾವತ್ತುಮಿಂ ತಾ ಸ್ವಯಂ ಪಾನಮಾಡಿಪ್ಪ ಸತ್ಯಾತ್ಮಗೀ ನಾರಸಿಂಹಾತ್ಮಗೇ ಈ ಹಿರಣ್ಯಾಸುರ ಶ್ರೇಷ್ಠ ಸಂಹಾರ ಹೆಚ್ಚಲ್ಲವಂತಾದರುಂ ಲೋಕದೃಷ್ಟ್ಯಾನುಸಾರ ಕ್ರಿಯಾಕಾರಿಯಾಗಿಪ್ಪ ನೃಸಿಂಹನುದ್ಯದ್ಗದಾಧಾರಿ ತಾನಾಗಿ ಸದ್ವಿದ್ಯುದಾಭ್ಯೋದ್ಯದು 200 ದ್ವೇಗವೇಗೋರು ಸಂಪದ್ಗದಾ ದಂಡವಂಕೊಂಡು ಯುದ್ಧಕ್ಕೆ ಬಾಹೋ ಮಹಾದೈತ್ಯವರ್ಯನ್ನ ತಾ ನೋಡಿ ರೋಷೋಜ್ವಲ ಜ್ವಾಲೆಗಳ್‍ಲೇಲಿಹಾನೋಲ್ಲ್ಲಸಜ್ಜಿಹ್ವೆಯಿಂದಲ್ ಪ್ರಕಾಶೈಸುತಾ ಚೀರುತಾಗಾಟ್ಟಹಾಸಕ್ರಮನ್ಯಾಸದಿ ಹಾರುತಾ ಕೋಟಿ ಸೂರ್ಯಪ್ರಭಾಬೀರುತಾ ಆ ಗರುತ್ಮಂತ ಕಾಳಾಹಿಂಪಿಡಿವನಂತೊಪ್ಪಿ ತಾನಾ ದಿತೀಪುತ್ರನಲ್‍ನೂಕಿದಂ ಶೀಘ್ರದಲ್ ಪಿಡಿದನಾ ದೈತ್ಯರಾಜೇಂದ್ರನಾವೇಳೆ ತದ್ಧಸ್ತದೋಳ್ ಸಿಕ್ಕದೇ 210 ಸುಕ್ಕದೇ ಘಕ್ಕನೇ ಬಿಡಿಸಿಕೊಂಡಾ ಗದಾದಂಡವಂ ಕೊಂಡು ಸನ್ನದ್ಧ ಸದ್ಯುದ್ಧವಂಮಾಡುವೋನಂತೆ ಯಾವಾಗ ನೃಸಿಂಹನಲ್‍ಸಿಕ್ಕಿ ಮತ್ತೇಬಿಡೂವಾದನಾ ವೇಳೆಯಲ್‍ಶರ್ವ ಶಕ್ರಾದಿ ದಿಕ್ಪಾಲಕಾನೀಕವುಂಸೂರ್ಯಚಂದ್ರಾದಿ ಸರ್ವಗ್ರಹಕ್ರ್ಷಾವಳೀಲೋಕವುಂ ಮೇಘಸಂತಾನದೋಳ್ ಲೀನವಾಗಿದ್ದು ಇನ್ನೇನು ಈ ದೇವತಾರಾತಿ ಈನಾರಸಿಂಹಾತ್ಮನಲ್ ಸಿಕ್ಕದೇ ದಕ್ಕದಂತಿಪ್ಪನೇ ಈತನೀ ದುಷ್ಟ ದೈತ್ಯನ್ನ ಗೆ 220 ಲ್ಲಾರನೋ ಗೆಲ್ವನೋ ಎಂದು ತದ್ವೀರ್ಯವಂತಿಳಿಯದೇ ಭ್ರಾಂತಚಿಂತಾಂತರಂಗೋದ್ಯದುದ್ವೇಗದಿಂ ಕಾಂಬಂತಿಪ್ಪುದು.ಆಮೇಲೆ ಢಾಲ್ ಕತ್ತಿ ಕೈಗೊಂಡು ಆಯಾಸದಿಂದಲ್ಲಿ ಆ ದೈತ್ಯನಾನಾರಸಿಂಹಾತ್ಮನಲ್ ಸಂಗರ ಶ್ರಾಂತಿ ಮತ್ತೇನು ತಾ ಕಾಣದೇ ದೂಕಿದಂ ತಾಕಿದಂಸೋಕಿದಂ ಅಂಘ್ರಿವಿನ್ಯಾಸಗಳ್ ಕೂಡಿ ತಾಮೇಲೆಯುಂ ಕೆಳಗೆಯುಂ ಶ್ಯೇನಪಕ್ಷಂತೆ ಸುತ್ತಾಡುತಾ ಛಿದ್ರವಂ ಕಾಣದೇ ತನ್ನನೇಪಿಡಿವುದಕ್ಕಾತನಂತೋಡುತಾ ಬಾಹೊ ಬ 230 ಲ್ಲಿಷ್ಠನಾ ಅಟ್ಟಹಾಸೈಸಿಯುಕ್ಕೇಸರಂಗಳ್ ಪ್ರಸಾದೈಸಿ ಕ್ರೂರಾಹಿತಾನಂದಘಗ್ರಾಹಿಯಂತೇ ಸ್ವಭಾ ಸಾಸಿರಂ ಸೂಸಿ ಜಂಘಾಲ ಲೀಲಾ ಸಮುಲ್ಲಂಘನಾ ಗೋಪದಿಂಹಾರಿಯಾ ನಾರಹರ್ಯಕ್ಷನಾ ದೈತ್ಯದಕ್ಷನ್ಪಿಡಿರ್ದಂ ಫಟಾಫಟ್ ತಲಾಘಾತವಂಗೈಲ್ಬಡಿರ್ದಂ ಥಟಾಥಟ್ ಪದಾಘಾತದಿಂ ದಲ್ ಹೊಡೆರ್ದಂ ಗದಾಘಾತದಿಂದಲ್ ಮಹೋರಸ್ಕಿಡಿರ್ದಂ ಸಭಾದ್ವಾರದಲ್ ಹಾಕಿ ಭಾಸ್ವನ್ನಖ ಶ್ರೇಣಿಯಿಂದಲ್ ಫಟಾಫಟ್ ಗುರು240 ತ್ಮಂತಕಾಲಾಹಿನಂ ಸೀಳುವೋ ರೀತಿ ಜಂಭಾರಿದಂಭೋಳಿಯಂತಾಗಲುಂ ಸೀಳುತಿರ್ದಾಮಹಾದೇವನ್ನಾ ಹಗಲ್ ರಾತ್ರಿಯೊಂದಲ್ಲದ್ಹಾಗೇ ದಿವಾಸಂಧಿಯಲ್ ಸೀಳಿದಂ.ಘೋರ ಸಂರಂಭ ದಂಷ್ಟ್ರೇಕ್ಷವ್ಯಾವೃತ್ಕರಾಳಾಕ್ಷನಾಗಿ ಸ್ವಜಿಹ್ಪಾಗ್ರದಿಂದಲ್ ಲಸದ್ವ್ಯಾತ್ತ ವಕ್ತ್ರಾಂತ ಶೋಣಿಯ ಮಾನಾಧರಾದ್ಯಂತವಂ ಲೇಲಿಹಾನೋಗ್ರವಂ ತೋರುತಾರಾಕ್ಷಸ ಶ್ರೇಷ್ಠನಂ ಪಿಡಿದು ವಕ್ಷೋನ್ನತಸ್ಥಾನವಂ ತೋಡಿ ಕಾಸಾರವಂ ಮಾಡುತಾ 250 ತುಂಬಿ ಶುಂಡಾಲ ಸಂಹಾರದಲ್ ಮುಂಚುವೋ ಘೋರ ಪಂಚಾನನೋದಾರ ಲೀಲೆಂಗಳಂ ಬೀರುತಾ ರಾಕ್ಷಸಾಧ್ಯಕ್ಷ ವಕ್ಷಸ್ಸಿನೋಳ್ ಕಿತ್ತುತಾ ಹಾರಗಳ್‍ಮಾಡಿಕೊಂಡೊಪ್ಪಿ ತದ್ರಕ್ತ ಸಿಕ್ತಾನನೋದ್ಯಚ್ಛಟಾ ಕೇಸರಂಗಳ್ ಪ್ರಕಾಶೈಸುತಾ 260 ದೈತ್ಯರಾಜೇಂದ್ರನಾ ಪ್ರಾಣಗಳ್‍ಗೊಂಡನಾಮೇಲೆ ಸುತ್ತಿದ್ದ ತದ್ಭಂಧು ಸಂದೋಹದಲ್ಲಿದ್ದನೇಕಾಸುರೀನೀಕವಂ ಸಾಯುಧೋದ್ರೇಕವಂ ಅಲ್ಲಕಲ್ಲೋಲವಂ ಮಾಡಿ ಚಂಚನ್ನಖಶ್ರೇಣಿಯಿಂ ಸಂಹರಂ ಮಾಡಿದಂ.ಆಗ ತದ್ಭೀಕರಾಕಾರವಂ ಕಾಂಬ ಶಕ್ತ್ಯಾವುದಂ ಕಾಣದೇ ತತ್ಸಟಾ ಕೇಸರೋದ್ಭೂತ ಸಂಘಾತಗಳ್ ಘೋರ ಜೀಮೂತಗಳ್‍ಸರ್ವವಂ ನೋಡುತಾ ಮತ್ರ್ಯಸಿಂಹೋಗ್ರದೃಷ್ಟಿಜ್ವಲಜ್ವಾಲೆಗಳ್ ಸೈಸದೇ ಸೂರ್ಯಚಂ270 ಪಾದ ಸಂಘಟ್ಟದಿಂದಲ್ ಧರಾಚಕ್ರವಲ್ಲಾಡಿತಾಘೋರ ತೇಜಸ್ಸಿಗವಕಾಶಂಗಳಾಕಾಶವೂಬಾಡಿತಾ ಶಾಕಿನೀ ಡಾಕಿನೀ ಮುಖ್ಯ ದು 280 ಷ್ಟಗ್ರಹಾನೀಕವುಂ ಭೀತಿಗೊಂಡೋಡಿತಾಮೇಲೆ ಉದ್ಯತ್ಸಭಾ ಮಧ್ಯೆ ದೈತ್ಯೇಂದ್ರ ಸಿಂಹಾಸನಸ್ಥಾನದಲ್ ನಾರಸಿಂಹಂ ಸಮಾಸೀನನಾಗಿಪ್ಪನಾ ತೇಜ ಓಜ ಪ್ರಭಾಪುಂಜರಂಜನ್ನ ಭಾಸ್ವತ್ಕರಾಳೋಗ್ರ ಜಿಹ್ವ ಸ್ಫುರದ್ದಂಷ್ಟ್ರ ವಕ್ತ್ರನ್ನ ಬಿಭ್ರಲ್ಲಸದ್ಭ್ರೂತನಂ ಆ ಮಹಾಕೋಪ ಸಂರಂಭ ಗಂಭೀರ ನೇತ್ರನ್ನ ಕಣ್ಣೆತ್ತಿ ಕಾಂಬೋದರಲ್‍ಬ್ರಹ್ಮ ರುದ್ರಾದಿಗಳ ಶಕ್ತಿಯುಂ ಸಾಲದೇದೂರದಲ್ ಪಾಶ್ರ್ವ ಭಾಗಸ್ಥರಾಗಿಪ್ಪರಂತೇ.290 ಆಗ ಮೂರ್ಲೋಕ ಸಂತಾಪಿಯಾಗಿಪ್ಪ ದೈತ್ಯನ್ನ ನಾರಾಯಣಂ ನಾರಸಿಂಹಾಕೃತೀಯಾಗಿ ಸಂಹಾರವಂ ಮಾಡಿದಂ ಎಂಬುದಾವಾರ್ತೆ ಕೇಳುತ್ತಲೇ ದೇವನಾರೀಜನಂಗಳ್ ಪ್ರಹರ್ಷಾನನೋತ್ಪುಲ್ಲರುಲ್ಲಾಸದಿಂವಾಸಿತಾಮೋದ ಮಂದಾರ ಕುಂದಾರವಿಂದಾದಿ ಸತ್ಪುಷ್ಟ ಸಂತಾನ ವರ್ಷÀಂಗಳಂವರ್ಷಿಸುತ್ತಿಪ್ಪರಾಕಾಲಾವಾಕಾಶದಲ್‍ನಿಂತು ಕಾಣೂವರಾ ದೇವದೇವೀ ಸಮೂಹಂಗಳಾಯಾವಿಮಾನಂಗಳೆಲ್ಲಾ ಮಹಾ 300 ಸಂಕುಲೀ ಭೂತವಾಗಿಪ್ಪವಾ ದೇವತಾದುಂದುಭಿಧ್ವಾನ ಇಂಬಾಗಿ ತಾ ದೇವಗಂಧರ್ವ ಸಂಗೀತ ನಾಟ್ಯಂಗಳಿಂದಪ್ಸರಾಕಾಮಿನೀ ತಾನ ಗಾನಂಗಳಿಂದಾಗ ಆಕಾಶವುಂ ತುಂಬಿತಾ ಬ್ರಹ್ಮರುದ್ರೇಂದ್ರ ಮುಖ್ಯಾಮರ ಶ್ರೇಣೀಗಳ್ ಪಿತೃಗಳ ಮನ್ವುಗಳ್‍ಸಿದ್ಧ ವಿದ್ಯಾಧರಾನೀಕಗಳ್À ಅಪ್ಸರಾ ಕಾಮಿನೇರಾ ಪ್ರಜಾಪಾಲ ಗಂಧರ್ವರಾಯಕ್ಷ ಕಿಂಪುರುಷರಾ ಚಾರಣಾನೀಕವಾಕಿನ್ನರಸ್ತೋಮ ನಂದಾ ಸುನಂದಾದಿ ತ 310 ತ್ಪಾರ್ಷದಾನೀಕವೆಲ್ಲಾ ಶಿರೋಭಾಗದಲ್‍ಪಾಣಿಗಳ್ ಜೋಡಿಸೀತೆಲ್ಲ ಮುನ್ನಾತಿ ದೂರಸ್ಥರಾಗಿದ್ದು ನಿಂತಾಮೃಗೇಂದ್ರಾಸನಾಸೀನನಾಗಿಪ್ಪ ಅತ್ಯುಗ್ರ ತೇಜಸ್ವಿನಂಮೆಲ್ಲನೇ ಬೇರೆ ಬೇರಾಗಿ ಕೊಂಡಾಡುತಾನಿಂತರಾವೇಳೆಯಲ್ ಬ್ರಹ್ಮ ತಾ ಭಾಷಿಪಂನಿನಗೆ ವಂದೀಸುವೆಂ ತಂದೆ ನೀನೆ ಅನಂತಂ ದುರಂತ್ಯೋರು ಶಕ್ತ್ಯುಳ್ಳವಂ ಲೋಕಪಾವಿತ್ರ್ಯ ಕಮ್ರ್ಯಂ ಮಹಾಶ್ಚರ್ಯ ವೀರ್ಯ ಜಗತ್ಸøಷ್ಟಿ ಸಂರಕ್ಷ ಸಂಹಾರಗಳ್ ಲೀಲೆಯಿಂ320 ದಲ್ ಸದಾ ಮಾಳ್ಪೆಯೋ ಅವ್ಯಯಾತ್ಮನ್ನೆ ನೀ ನೆಂದನು.ಈಶ ತಾ ಬಂದೆಲೋ ತಾತನೇನಿನ್ನಗೀ ಕೋಪ ಬಾಹೋದಕಿಂದಾ ಯುಗಾಂತಾಖ್ಯ ವೇಳ್ಯಲ್ಲವೋ ಕ್ಷುಲ್ಲನೀ ದೈತ್ಯನೀವೇಳೆ ನಿನ್ನಿಂದ ತಾನ್ ಮೃತ್ಯುಪಾಲಾದನಂತಿನ್ನುಮೇಲ್ ಕೋಪ ಸಂಕ್ಷೇಪ ಮಾಡಯ್ಯ ಈದೈತ್ಯ ಪುತ್ರನ್ನ ಪ್ರಹ್ಲಾದನಂ ಸರ್ವದಾನಿನ್ನ ಭಕ್ತನ್ನ ಸಂರಕ್ಷಿಸೋ ಭಕ್ತವಾತ್ಸಲ್ಯದಿಂದೆಂದನು.ಇಂದ್ರ ತಾ ನಿಂತೆಲೋ ಸ್ವಾಮಿಯೇ ಅಣ್ಣತಮ್ಮಂದ್ರ ದೀಟಾಗಿ ನೀನೇ ಸದಾ ನಮ್ಮ ಸಂ330 ರಕ್ಷಿಸೂವೇಯೊ ನಿನ್ನಿಂದಲಾ ಯಜ್ಞ ಭಾಗಂಗಳುಂ ನಮ್ಮಗೇ ಮತ್ತೆ ಉಂಟಾದವಯ್ಯಾ ಹಿರಣ್ಯಾಸುರಂಗಾದುದೀಗೆಮ್ಮ ಸುಸ್ವಾಂತಗಳ್ ನಿನ್ನಗಾವಾಸಯೋಗ್ಯತ್ವ ಪೊಂದಿಪ್ಪುವಂತೆ ವಿಕಾಸ್ಯೆಸಿತೋ ನಿನ್ನ ಶುಶ್ರೂಷೆ ಬೇಕೆಂಬ ಲೋಕಾಳಿಗೇ ಕಾಲಸಂಗ್ರಸ್ತವಂತಿಪ್ಪ ಲೋಕಾಳಿಯಲ್ ಯಾವದೂಲಕ್ಷ್ಯವಿಲ್ಲಂತೆ ಮುಕ್ತ್ಯಾದರುಂ ಹೆಚ್ಚು ನಿಶ್ಬೈಸುವಂತೇ ನೃಹರ್ಯಾತ್ಮನೇ ಮಿಕ್ಕ ಸಂಭೂತಿಯಿಂದಾಗಬೇಕಾದುದೇ ನಿಪ್ಪುದೆಂದಂ.340 ಬೊಮ್ಮ ನೀನೆಮ್ಮ ಶ್ರೇಯಸ್ಸಿಗೆ ಮುನ್ನ ನಿನ್ನ ಸ್ವತೇಜಾಂಶವನ್ನೇ ತಪೋಯೋಗವಂ ನಮ್ಮಗೇಕೊಟ್ಟೆಯೊ ಆ ತಪಸ್ಸಿಂದ ನಿನ್ನಲ್ಲಿಹೋವಿಶ್ವವೆಲ್ಲಾ ಬಹೀರಂಗ ಮಾಡೀದೆಯೋನಮ್ಮದಂಥಾ ತಪಸ್ಸಂ ಹಿರಣ್ಯಾಸುರಶ್ರೇಷ್ಠತಾ ಕದ್ದನಂತಿದ್ದನೇ ಈಗ ನೀನೀ ಜಗದ್ರಕ್ಷಣಕ್ಕಾಗಿಯೇ ಭಕ್ತ ಸಂರಕ್ಷನೇ ನಾರಹರ್ಯಕ್ಷನಾಗಿನ್ನು ರಕ್ಷೋಗಣಾಧ್ಯಕ್ಷ ವಕ್ಷಸ್ಕವಂ ಸೀಳಿ ನೀ 350 ನಮ್ಮಗೆಲ್ಲಾ ತಪೋಯೋಗವಂ ಮತ್ತೆ ತಂದಿತ್ತೆಯಂತೆಂದರು.ಪಿತೃಗಳ್ ನಿಂತೆಲೋಧರ್ಮರೂಪೀಯೆ ಇಂಥಾ ಕ್ರಿಯಾಲಾಪಗಳ್‍ಪುತ್ರರಿಂದಲ್ ತಿಲೋದಂಗಳಿಂದಲ್ ಮಹಾಪುಣ್ಯ ತೀರ್ಥಂಗಳಲ್ ಕ್ಷೇತ್ರ ಪಾತ್ರಂಗಳಲ್‍ನಮ್ಮ ನಮ್ಮಲ್ಲಿ ಇಂತಿತ್ತ ಶ್ರಾದ್ಧಂಗಳಂತನ್ನ ಪ್ರೀತ್ಯರ್ಥವೆಂತಿರ್ದನೈ ನಾಥ ಸಂಪೂರ್ಣ ಸೌಭಾಗ್ಯ ಸಂಸ್ಥಾನಿಯೋ ನೀನು ಭಾಸ್ವನ್ನಖ ಶ್ರೇಣಿಯಿಂದಲ್ ಮಹಾ ದೈತ್ಯವಕ್ಷಸ್ಕವಂ ಸೀಳಿ ಇತ್ತಾವ ಪಾಂತ್ರಾತ್ಮಿಕಾ 360 ಶ್ರಾದ್ಧ ನಮ್ಮಲ್ಲಿ ತಾ ಸೇರಿತೈ ನಾರಹರ್ಯಾತ್ಮನೇ ನಿನ್ನಗೇ ನಾವು ಸಾಷ್ಟಾಂಗ ಪ್ರಣಾಮಗಳ ಮಾಡುವೇವೆಂದರು.ಸಿದ್ದರೆಲ್ಲಾಂಜಲೀಬದ್ಧರಾಗೆದ್ದೆಲೋಅಷ್ಟಸಿದ್ಧಾತ್ಮನೇ ನಮ್ಮಲಿದ್ದಾ ಮಹಾಯೋಗ ಸಿದ್ಧಿಂಗಳೆಲ್ಲಾ ತಪೋಯೋಗಸಾಮರ್ಥ್ಯದಿಂ ಕದ್ದನೇ ಗೆದ್ದೆನೆಂತಿದ್ದ ದೈತ್ಯ ಪ್ರಬುದ್ಧನ್ನ ವಕ್ಷಸ್ಕ ಸಂಭಿನ್ನವಂಮಾಡಿಯಾ ನಮ್ಮಗಾಧಾರವಾಗಿದ್ದ ಸದ್ಯೋಗ ಸಿದ್ಧಿಂಗಳಂ ಮತ್ತೆ ನೀನಿತ್ತೆಯೋ 370 ನಾರಸಿಂಹಾತ್ಮ ನಾವೆಲ್ಲರುಂ ನಿನ್ನಗೇವಂದನಂಗಳ್À ಸಮರ್ಪೀಂಸುವೇವೆಂದರು.ಆಮೇಲೆ ವಿದ್ಯಾಧರಾನೀಕಗಳ್ ನಿಂತೆಲೋಸರ್ವ ವಿದ್ಯಾತ್ಮನೇ ನಮ್ಮಲಿದ್ದಾ ಪೃಥಕ್‍ಧಾರಣಾಯೋಗ ಸಂಪಾದ್ಯಗಳ್ ವಿದ್ಯೆಗಳ್‍ನಷ್ಟಗೈಸಿದ್ದನತ್ಯಂತ ದರ್ಪಿಷ್ಠನೀಅಜ್ಞ ದೈತ್ಯೇಂದ್ರನಾ ಯಜ್ಞದೋಳ್‍ಬದ್ಧ ಪಶ್ವಂತೆ ತಾನಿಂದು ನಿನ್ನಿಂದಲಾ ಮೃತ್ಯುಪಾಲಾದನೇ ನಮ್ಮ ಸದ್ವಿದ್ಯೆಗಳ ಮತ್ತೆ ನಮ್ಮಲ್ಲೆ ಬಂದಿಪ್ಪುದಯ್ಯಾ ನೃಹರ್ಯಾತ್ಮ ತು 380 ನಾಗರಾವೇಳೆಲೋsನಂತನೇ ನಮ್ಮಲಿದ್ದಾ ಮಹಾರತ್ನಗಳ್‍ಮಾನಿನೀ ರತ್ನಗಳ್ ತಾ ಬಲಾತ್ಕಾರದಿಂಗೊಂಡನೀ ಪಾಪಿ ದೈತ್ಯನ್ನ ವಕ್ಷಸ್ಕವಂಸೇದಿ ಈ ರತ್ನಗಳ್ ಮತ್ತೆ ನೀ ನಮ್ಮಗೇಸೇರುವಂತೇ ದಯಾಮಾಡಿದೀಯೈ ನಮಸ್ತೇ ನಮೋ ಎಂದರು.ಮನ್ವುಗಳ್‍ನಿಂತೆಲೋಧರ್ಮ ಸಂರಕ್ಷನೇ ನಾವು ನಿನ್ನಾಜ್ಞೆಯಿಂದೀ ಪ್ರಜಾನೀಕಕೇರ್ಪಾಟು ಮಾಡಿದ್ದ ಮರ್ಯಾದೆಗಳ್ ಸರ್ವವೀ ದೈತ್ಯ ತಾ ಕೆಡಿಸಿ ಕ390 ಲ್ಲೋಲವಂ ಮಾಡಿ ನಿನ್ನಿಂದಲೀ ಈಗ ಸಂಹಾರಿಸಲ್ಪಟ್ಟನೇ ಇನ್ನು ಮೇಲ್ ನಾವು ನಿಮ್ಮುಟ್ಟಕ್ತಿಗಳ್ ನಡೆಸುವೇವೆಮ್ಮಗಾಜ್ಞಾಪಿಸೋನಾವು ತ್ವದ್ದಾಸ್ಯವಂ ಬಯಸಿದೇವೆಂದರು.ಆ ಪ್ರಜೇಶ್ಯಾಳಿಗಳ್À ನಿಂತು ಕೇಳೋ ``ಪ್ರಜೇಶಾ ವಯಂ ತೇ ಪರೇಶಾಭಿಸೃಷ್ಟಾ ನ ಯೇನ ಪ್ರಜಾ ವೈ ಸೃಜಾಮೋ ನಿಷಿದ್ಧಾಃ ಸ ಯೇಷ ತ್ವಯಾ ಭಿನ್ನವÀಕ್ಷಾನು ಶೇತೇ ಜಗನ್ಮಂಗಲಂ ಸತ್ವಮೂರ್ತೇವತಾರಃ’’ ಪ್ರಭೋಎಂದರು. ಆಗ ಗಂಧರ್ವರೆಲ್ಲಾ ಎಲೋ 400 ಸ್ವಾಮಿಯೇ ನಾವು ನಿಮ್ಮ ಪ್ರಸನ್ನಾವತಾರೈಕ ಲೀಲಾ ಕಥಾಸೂಕ್ತಿಗಳ್ ನಾಟ್ಯ ಶೃಂಗಾರ ಚೇಷ್ಟಾ ಕಳಾದರ್ಶನಾದ್ಯಭಿನಯಾವ್ಯಕ್ತಿಗಳ್ ತಾನ ಗಾನಾನುಸಂಧಾನ ಸಮ್ಮೋಹಿನೀ ಶಕ್ತಿಗಳ್ ಕೂಡಿ ಆಶ್ರಾಂತವುಂನಿನ್ನ ಕೊಂಡಾಡುತಾ ಗಾಯಕಶ್ರೇಷ್ಠರಂತಿಪ್ಪೆವೇ ತನ್ನ ಸದ್ವೀರ್ಯ ತೇಜೋಬಲೋಜಸ್ಕದಿಂದಲ್ ಪ್ರಭೋ ನಮ್ಮ ಸಾಮಥ್ರ್ಯಗಳ್‍ತನ್ನಗಾಧೀನ ಮಾಡಿಟ್ಟುಕೊಂಡಿದ್ದನೀದೈತ್ಯನೀ ವೇಳೆ ನಿನ್ನಿಂದ ಪಂಚತ್ವವಂ 410 ಆ ಯಕ್ಷರೆಲ್ಲಾ ಎಲೋ- 420 ಧ್ಯಕ್ಷನೇ ತ್ವನ್ಮನೋಭಿಜ್ಞ ಕರ್ಮಂಗಳಿಂದಲ್ ಸದಾ ನಿನ್ನಗೇ ಭೃತ್ಯರಾಗಿಪ್ಪ ನಾವೆಲ್ಲರುಂ ದೈತ್ಯಗೇ ಪಾಲಕೀ ಹೊರ್ವರಂತಾದೆವೇ ನಮ್ಮ ಸಂತಾಪಗಳ್ ಬಲ್ಲ ನಿನ್ನಿಂದಲೀ ದೈತ್ಯನೀ ವೇಳೆ ಪಂಚತ್ವವಂಹೊಂದಿದಂ ನಾವು ಸಂತೋಷವಂ ಕಂಡೆವಯ್ಯಾ ನೃಪಂಚಾಸ್ಯನೇ ಪಂಚವಿಂಶಾಖ್ಯ ನೀ ನೆಂದರು. ಆಮೇಲೆ ಕಿಂಪೂರುಷಾನೀಕವುಂಬಂದೆಲೋ ಪುರುಷನೇ ನಾವು ಕಿಂಪೂರುಷರ್‍ನೀಂ ಮಹಾಪೂರುಷಂ ಈಶ್ವರಂ ನಿನ್ನ ಕೈ 430 ನಿತ್ಯ ಕೊಂಡಾಡುತಾಭೂರಿಯೂಟಂಗಳಂ ಉಣ್ಣುತಾಲಿದ್ದೆವೇತಾನಿವೆಲ್ಲಾ ಪರಿಗ್ರಾಹಿಸೀ ದೈತ್ಯ ನಿನ್ನಿಂದ ಪೆಟ್ಟಾಂತು ತಾ ಪೋದನೇ ದೈವದಿಂ440 ಕಿನ್ನರ ಪ್ರಾಣಿಗಳ್‍ಪೂರ್ವದಲ್ ನಿನ್ನ ದಾಸಾನುದಾಸರ್ಗಳಾಗಿಪ್ಪೆವೀ ದೈತ್ಯ ನಮ್ಮಿಂದ ತಾ ಬಿಟ್ಟಿಕಾರ್ಯಂಗಳೆಲ್ಲಾ ಸದಾ ಮಾಡಿಸೂವಂ ವiಹಾದು:ಖಗೋಣಿಸುವಂ ಇಂಥ ಪಾಪಿಷ್ಠ ದೈತ್ಯನ್ನ ಸಂಹಾರ ವಂ ಮಾಡಿದೀ ಇನ್ನು ನೀನಮ್ಮಗೆಲ್ಲಾ ಸಮುಲ್ಲಾಸಗಳ ಶ್ರೇಯಗಳಕೊಟ್ಟು ಸಂರಕ್ಷಿಸೋ ನಾರಹರ್ಯಕ್ಷನೇ ಎಂದರು. 450 ಅಚ್ಯುತದ್ವಾರಪಾಲಾಳುಗಳ್‍ನಿಂತೆಲೋ ಭೂಮನೇ ಕಂಡೆವೋ ಇಂದಿಗೇನಾರಹರ್ಯದ್ಭುತಾಕಾರವಂ ಲೋಕಕೆಲ್ಲಾ ಸುಖಾನಂದವಂ ನಮ್ಮಗಾಧಾರ ನೀನಲ್ಲದಿನ್ನಿಲ್ಲವೋ ಈಗ ವೈಕುಂಠದಲ್‍ನಿನ್ನ ದ್ವಾರಸ್ಥನಾಗಿಪ್ಪನಾ ವಿಪ್ರರಿಂದಲ್ ಮಹಾದೈತ್ಯಜನ್ಮಕ್ಕೆ ತಾ ಬಂದನೇ ಬಂದನಂತಿಂದಿಗೇ ವೈರಮಾರ್ಗಕ್ಕೆ ನೀನಿಂದು ಗೈದಂಥ ಈ ದೈತ್ಯಸಂಹಾರ ವ್ಯಾಪಾರವೆಮ್ಮಲ್ ಮಹಾನುಗ್ರಹಕ್ಕಾಗಿ ನೀ ಬಂದೆ ನಾವ್ 460 ಸ್ವಾಂತ ಸಂತೋಷ ಮಾಡೆಂದು ಬಿನ್ನಾಹಗಳ ಮಾಳ್ಪರು.ಆಮೇಲೆ ಆ ಬಾಲೆ ಸಾಕ್ಷಾಜ್ಜಗನ್ಮೋಹಿನೀ ಲೀಲೆಗಳ್ ಮಿಂಚುತಾ 470 ಪೂಂಚುತಾ ಬಂದು ಸಿಂಹಾಸನಸ್ಥಾನದಲ್‍ಉಗ್ರನಂತಿಪ್ಪನೃಸಿಂಹ ಮೂತ್ರ್ಯುಗ್ರವಂಕಂಡತಿವ್ಯಗ್ರಳಂತಾಗಿ ಆ ತಾಯಿ ಹಿಂದಕ್ಕೆ ತಾ ಬಂದಳಮ್ಮಮ್ಮ ಏಂ ಗುಮ್ಮನಂತಪ್ಪÀನೇ ಸ್ವಾಮಿ ಮುನ್ನಿಂತು ಆಶ್ಚರ್ಯವಂಈಸು ವಿಕ್ರಮ್ಯವಂ ಎಂದಿಗಾನೆಲ್ಲಿ ಕಂಡಿಲ್ಲವಲ್ಲಾ ಕಿವಿಲ್ಯಾದರುಂ ಕೇಳಲೇ ಇಲ್ಲವಲ್ಲಾ ಇದೇನೋ ವಿಚಿತ್ರಾಕÀೃತೀಯಂತೆ ತೋರೂವನೆಂದಂಜಿಕೇಗೊಂಡ ರೀತಿಂದ ತಾ ಹೆಜ್ಜೆ ಕಾಲ್ಗೆಜ್ಜೆಗಳ್ ಸಪ್ಪುಳಂ480 ಮಾಡದೇ ಮೆಲ್ಲನೇ ಪಾಶ್ರ್ವದಲ್ ನಿಂತಳುಆಮೇಲೆ ಪ್ರಹ್ಲಾದನಂ ಕಂಡು ಸಂಭಾಷಿಪಂಬ್ರಹ್ಮ ಬಾರೈ ಎಲೋ ವತ್ಸ ನೀನೀ ನೃಸಿಂಹಾತ್ಮನಲ್ ಮೆಲ್ಲನೇ ಸೇರಿ ನಿಮ್ಮಪ್ಪಗಾ ಗಿಂದು ನಮ್ಮಪ್ಪನಲ್ಲಿಪ್ಪ ತತ್ಕೋಪ ಸಂಕ್ಷೇಪ ಗೈಸೆನ್ನೆ ತದ್ವಾಣಿಗಳ ಕೇಳುತಾಮೆಲ್ಲನೇ ಪಿಲ್ಲೆ ಪ್ರಹ್ಲಾದನಾಹ್ಲಾದದಲ್‍ವೈಷ್ಣವಶ್ರೇಷ್ಠ ತಾನಾಗ ಬಂದಂ ಮಹಾಭಕ್ತಿಯಿಂದಲ್ ಮಹೀಮಂಡಲೀ ಮೇಲೆ ಸಾಷ್ಟಾಂಗ ಬಿದ್ದಂ ನಮೋ ಎಂದು ದಂಡಪ್ರಣಾ 490 ಮಂಗಳಂ ಮಾಡುವೋ ವೇಳೆ ತನ್ನಂಘ್ರಿಕಂಜಾತದಲ್ ಬಿದ್ದ ಬಾಲನ್ನ ಬಾಳಾ ಸುಶೀಲನ್ನ ಕಂದನ್ನ ದೃಷ್ಟಿಂದ ತಾ ಕಾಣುತಾಚಕ್ರ ಶಂಖಾಂಕಿತಾ ಶ್ರೀಲಸದ್ಬಾಹುಗಳ್‍ಚಾಚಿ ಭಕ್ತನ್ನ ತಾನೆತ್ತಿ ತನ್ಮಸ್ತಕಸ್ಥಾನದಲ್ ಪೋಕಲಾಗಿನ್ನು ಸಂಸ್ರಸ್ತ ಚೇತೋಭಯಧ್ವಸ್ಥವಂ ಸ್ವಸ್ತಿದಾನ ಕ್ರಿಯಾಭ್ಯಸ್ತವಂ ಶ್ರೀ ಸತೀ ಸ್ತಂಬಕವಿನ್ಯಸ್ತವಂಹಸ್ತವನ್ನಿತ್ತನವ್ಯಾಹತ ಸ್ಪರ್ಶದಿಂದಲ್ ವಿಧೂತಾ ಶುಭವ್ರಾತನಾಗೀಯಭಿ 500 ವ್ಯಕ್ತ ಲಕ್ಷ್ಮೀವಿಲಾಸಾತ್ಮ ಸಂದರ್ಶನೈಶ್ವರ್ಯವಂ ಕೂಡಿ ತತ್ಪಾದ ಪದ್ಮಂಗಳಂಚಿತ್ತದಿಂದಿತ್ತನಾನಂದದಿಂದಲ್ ಪ್ರಹೃಷ್ಯತ್ತನು ಕ್ಲಿನ್ನ ಚಿತ್ತಾಶ್ರುನೇತ್ರಾಬ್ಜನಾಗಿದ್ದು ಪ್ರಹ್ಲಾದನುಂ ನಾರಸಿಂಹಾತ್ಮನಲ್‍ನಿಂತು ಸಂಸ್ತೋತ್ರಗಾರಂಭಿಪಂ. ಶ್ರೀರಮಾದೇವಿ ತಾನಾಗ ಸಮ್ಮೋಹಿನೀ ಸಂಪುಗಳ್‍ಕೂಡಿ ಬಂದಾ ನೃಸಿಂಹಾಂಕದಲ್ ನಿಂತಳಾಬ್ರಹ್ಮನಾವೇಳೆಯಲ್ ನಾರಸಿಂಹಾತ್ಮನಲ್‍ಸೇರಿ ಸುಕ್ಷೀರ ನೀರಾಭಿಷೇಕಂಗಳಂ 510 ಚೀನಿ ಚೀನಾಂಬರಂಗಳ್ ಮಹಾನಘ್ರ್ಯ ರತ್ನಾವಳೀ ಭೂಷಣಂಗಳ್ ಲಸನ್ಮೌಕ್ತಿಕಾಹೀರ ಹಾರಂಗಳಂ ಗಂಧ ಕಸ್ತೂರಿಕಾಲೇಪಗಳ್ ಶ್ರೀ ತುಳಸ್ಯಾಪ್ತ ಶಾಮಂತಿಕಾ
--------------
ಶ್ರೀಪಾದರಾಜರು
ಶ್ರೀಶ ಶ್ರೀ ಕೇಶವನೆ ಬಾ ಪರುಮ ಪುರುಷ ಶೇಷರಾಯನ ಮುಕುಂದ ಶರಣರಾನಂದ ಪ ಭೂಸುರರು ನಡೆಮುಡಿದು ಪೂರ್ಣಕುಂಭವು ವೇದ ಓಲಗ ಛತ್ರ ಚಾಮರ ದಿಮಿಗೆ ಅ.ಪ ಸುತ್ತಿಬರುತಿಹ ದನುಜ ವೃಂದವೆಲ್ಲವ ತರಿದು ಮುತ್ತಿನಂಥಾ ತನುವು ಧೂಳಾಗಿರುವುದೋ ಒತ್ತುತೆಣ್ಣೆಯ ನಿನಗೆ ಮತ್ತೆಬಿಸಿನೀರೆರೆದು ಕತ್ತುರಿಯ ಹಣೆಗಿಟ್ಟು ನುಡಿಯನುಡಿಸುವೆನೋ 1 ಸರಸಿ ಪೀತಾಂಬರ ಶಿರಕೆ ಮಣಿಯಳವಡಿಸಿ ಕೊರಳಿನೊಳುಹಾಕಿ ತುಳಸೀಮಾಲೆಯ ಕರಕೆ ಕಂಕಣ ಶಂಖ ಚಕ್ರಗಧೆಯಾ ಕಮಲ ದೊರೆನಡುವಿಗೊಡ್ಯಾಣ ಸಿರಿಪದಕೆ ಕಡಗ 2 ಅಂಗಕ್ಕೆ ಶ್ರೀಗಂಧ ಅಗರುಚಂದನ ಧೂಪ ಮಂಗಳದ ದೀಪವೂ ಮಂತ್ರಪುಷ್ಪ ಶೃಂಗಾರ ಮೂರ್ತಿಗೆ ಕನ್ನಡಿಯು ಬೀಸಣಿಗೆ ಸಂಗೀತ ನರ್ತನವು ಸ್ತುತಿಸೇವೆಯೂ 3 ವಸುಮತೀಪಾಲನೆಯ ಸತತ ನೀಗೈಯುತ್ತ ಹಸಿದು ಬಳಲುತ್ತಿರುವೆ ಕೃಷ್ಣಪರಮಾತ್ಮ ಬಿಸಿಯಹೋಳಿಗೆ ತುಪ್ಪ ಹಸುನಿನಾ ಬಿಸಿಹಾಲು ಮೊಸರು ಶಾಲ್ಯನ್ನ ಫಲಪಾನಕದ ಸುಖಹೀರಿ 4 ಶ್ರೀದೇವಿ ಭೂನೀಳ ಇವರೊಡನೆ ತೃಪ್ತಿಯಂ ಶ್ರೀಧರ ಮೂರುತಿ ಹೃದಯ ಕಮಲದಲಿ ಕೂಡೋ ಸಾದರದಿ ಕರ್ಪೂರ ತಾಂಬೂಲವನು ಸದಿಯೋ ಮೋದದಿಂದಾರತಿಯ ಬೆಳಗುವೆನೋ ರಂಗಾ 5 ಜಯತು ಜಗದಾಧಾರ ಪುಷ್ಪಾಂಜಲಿಯೊಧೀರ ಜಯ ಸಾಧು ಹೃದ್ಭಾಸ ಹೆಜ್ಜಾ ಜಿವಾಸ ಜಯತು ಮಂಗಳ ನಾಮ ಶ್ಯಾಮಂಗೆ ಪ್ರಣಾಮ ಜಯತು ಕರುಣಾಸಿಂಧು ಜಯಭಕ್ತ ಬಂಧು 6
--------------
ಶಾಮಶರ್ಮರು
ಶ್ರೀಹರಿ ಸಂಕೀರ್ತನ ಅನ್ಯರಿಲ್ಲ ಗತಿ ಅಚ್ಯುತನಾನಂತ ಶ್ರೀಪತಿ ಅಜಪಿತ ಮಹಾಮತಿ ಪ. ಸತ್ಯಜ್ಞಾನಾನಂತುಗುಣಸಿಂಧು ಭಾಗವತಜನಬಂಧು ರಕ್ಷಿಸಿಂದು ಪ್ರತ್ಯಗಾತ್ಮ ಸುಹೃತ್ತಮ ಜರಾ- ಮೃತ್ಯುರಹಿತನೆ ಚಿತ್ತಸಾಕ್ಷಿಯೆ 1 ವಾಸುದೇವ ದಿನೇಶಕೋಟಿಪ್ರಭ ಪೂಜಿತವಿಬುಧ ಮೌನಿಸಭ ಪದ್ಮನಾಭ ದಾಸಜನಹೃದಯಾಶ್ರಯಸ್ಥಿತ ದೋಷಗಂಧವಿದೂರ ಶ್ರೀವರ 2 ಸಕಲ ಜಗದಾಧಾರಮೂರುತಿಯೆ ವಿಜಯರಥ ಸಾರಥಿಯೆ ಹರಿಯೆ ದೊರೆಯೆ ಶಕಟಮರ್ದನ ಶಾಙ್ರ್ಗಧರ ಶ್ರೀ ಲಕುಮಿನಾರಾಯಣ ನಮೋಸ್ತುತೇ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶ್ರುತಿಯ ಶಿರಗಳನೀಗ ಸೂಚಿಪೆ ಸ್ವಾಮಿವಿತತವಾಗಿಹ ವಿಶ್ವಕ್ಕೊಡೆಯ ನೀ ಗ್ರಹಿಸು ಪಆದಿ ಮಧ್ಯಾಂತಗಳಿಲ್ಲದನಾದಿಯಾದಾ ನಿರ್ಗುಣಬ್ರಹ್ಮ ನಿಜರೂಪವೆಂದುಸಾಧಿಸಿ ಬೋಧಿಸಿ ಸರ್ವೋಪಾಧಿಯನುಭೇದಿಸಿ ಬಿಡುತಿಹ ಬಹು ಸಿದ್ಧವಾದ 1ಮಾಯೆಯ ರೂಪದಿ ಮಾಡಿ ವಿಶ್ವವನುಆಯದಿಂದಾಧಾರವಾಗಿಯೂ ತಾನುನೋಯದೆ ನೋಡುತ್ತ ನಿಂದ ಸಾಕ್ಷಿಕನುಈಯಂಡದೊಳು ಪೂರ್ಣನಾಗಿಹನೆಂಬ 2ಹರಹುತ ಲೋಕವ ಹೊಂದಿಸು ತಿಂತುಇರುವನು ನಿತ್ಯದಲೀ ದೇವನೆಂದುಅರುಹುತಲಿದೆ ಶ್ರುತಿಶಿರವಿದು ಕೇಳುತಿರುಪತಿ ವೆಂಕಟಗಿರಿನಾಥ ಕೃಷ್ಣ 3ಓಂ ಶುಕವಾಗಮೃತಾಬ್ಧೀಂದವೇ ನಮಃ
--------------
ತಿಮ್ಮಪ್ಪದಾಸರು
ಸಕಲ ಸದ್ಗುಣಪೂರ್ಣ ಶ್ರೀನಿವಾಸ ವಿಕಸಿತ ಕಮಲವದನ ಮಕರ ಕುಂಡಲಮಣಿ ಮಕುಟ ಕೌಸ್ತುಭಾ ಹಾರ ಅಖಿಳ ಜಗದಾಧಾರ ಅಂಬುಜಾಕ್ಷ ಸಿರಿ ನಲ್ಲ ನಿನ್ನ ಸಮಾನ ರಿಲ್ಲವೆಂಬುದ ಸರ್ವ ಶ್ರುತಿ ತತ್ವವ ಬಲ್ಲ ಬುಧರಿಂದರಿದು ಸೊಲ್ಲಸೊಲ್ಲಿಗೆ ತ್ರಿಜಗ ಪಾದ ಪಲ್ಲವವÀ ನಂಬಿದೆನು 1 ಚಕ್ರ ಶಂಖಾಬ್ಜಧರ ವಿಕ್ರಯ ವಿರಾಟರೂ- ಪಾ ಕ್ರಾಂತ ಸಕಲ ಭೂಚಕ್ರವನ್ನು ಶಕ್ರಗೊಲಿದಿತ್ತತಿಪರಾಕ್ರಮ ತ್ರಿವಿಕ್ರಮನೆ ಶುಕ್ರ ಶಿಷ್ಯನಿಗಧಿಕ ಶುಭವ ಪಾಲಿಸಿದಿ 2 ಜಯ ಜಯ ಜಗನ್ನಾಥ ಜಾನಕೀವರ ಸರ್ವ ಭಯ ನಿವಾರಣ ಭಕ್ತ ಕಲ್ಪತರುವೆ ಲಯದೂರ ಲಾವಣ್ಯ ಚಯಮಮಾಲಯದಲ್ಲಿ ದಯವಾಗು ಜ್ಞಾನ ಸುಖಮಯ ವೆಂಕಟೇಶ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸನ್ನುತ ನಮೋಸ್ತು ಜಗದಾಧಾರಾ ಪ ನಮೋಸ್ತು ಮೀನ ಶರೀರಾ ಅ.ಪ ನಮೋಸ್ತು ಕೌಸ್ತುಭಧರಾ ಕೂರ್ಮ ಶರೀರಾ 1 ಮೃಗೇಂದ್ರ ಸದ್ಯುಶಾ ಶ್ರೀಪತೇ ವರಾಹ ರೂಪ ನಮೋಸ್ತುತೇ 2 ತಲ್ಪ ವಿರಾಜಿತೇ ಸನ್ನುತ ನೃಸಿಂಹರೂಪ ನಮೋಸ್ತುತೇ 3 ಪುರಂದರ ಫಲಪ್ರದಾ ಸಕಲೇಷ್ಟದಾ ನಮೋಸ್ತು ವಾಮನ ಶ್ರೀಕರಾ4 ರಮಾಮನೋಹರ ಶ್ರೀಹರೇ ಭಂಜನ ನಮೋಸ್ತು ಪರಶುಧರಾಹರೇ 5 ಪ್ರದೀಪ ಹನುಮತ್ಸೇವಿತ ಭವ ವಿನಾಶ ಭೂಮಿಸುತಾನ್ವಿತಾ 6 ಕೃಪಾಕರಾ ಪಶುಪಾಲಕಾ ಪ್ರವೀಣ ಗೋಪಬಾಲಕಾ 7 ಪಿತಾಯ ವ್ರತ ನಿರ್ಮೂಲತೇ ಬುದ್ಧ ಶರೀರತೇ 8 ಧರ್ಮೋದ್ಧರಾಯ ತುರಂಗ ವಿರಾಜತೇ ಗಮನ ಸುರೇಶ ಕಲ್ಕಿ ಮಹಾತ್ಮತೇ 9 ಪರ್ವತಧರ ಧರಾಯ ನೃಸಿಂಹತೇ ಪ್ರಬುದ್ಧಕಲ್ಕಿ ದಿಶಾಕಲತೇ 10 ಶುಭಾಂಗ ಗರುಡ ತುರಂಗತೇ ನಾರಾಯಣಾಯ ಭಕ್ತೋದ್ಧಾರತೇ 11
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸರ್ವಸಾರಭೋಕ್ತ ಸಕಲ ಮಂಗಲದಾಯಿ ವೆಂಕಟೇಶ ನಿರ್ವಹಿಸುವವ ನೀನೆ ನಿತ್ಯಕರ್ಮಗಳಿಂದ ವೆಂಕಟೇಶ ಪ. ದೇವರ್ಷಿ ಪಿತೃಗಣರೊಳಗಿದ್ದು ರಾಜಿಪ ವೆಂಕಟೇಶ ಭೂವರರಲ್ಲಿ ವಿಭೂತಿರೂಪನು ನೀನೆ ವೆಂಕಟೇಶ ಸೇವಕ ಜನರನು ಸುಲಭದಿ ಸಲಹುವ ವೆಂಕಟೇಶ ಪಾದ ಪದ್ಮವೆ ಗತಿ ಎಂಬೆ ವೆಂಕಟೇಶ 1 ಇಂದಿರಾಧವ ಯದುನಂದನನೆನಿಸಿದೆ ವೆಂಕಟೇಶ ಸುಂದರ ವಿಗ್ರಹ ಸುಗುಣೇರ ಒಲಿಸಿದೆ ವೆಂಕಟೇಶ ಹಿಂದೆ ಮುನ್ನ ಭವದಂದವನರಿಯೆನು ವೆಂಕಟೇಶ ಮಂದಮತಿಯ ಕರ್ಮಕುಂದನು ಕ್ಷಮಿಸಯ್ಯ ವೆಂಕಟೇಶ 2 ಸ್ವೋದರಗತ ಜಗದಾಧಾರಗುಣನಿಧಿ ವೆಂಕಟೇಶ ಭೂಧರಗಿರಿವರ ಶೋಭಿತ ಮೂರುತಿ ವೆಂಕಟೇಶ ಶ್ರೀಧರಾಕಾಂತ ನಿನ್ನಾಧಾರ ನಂಬಿದೆ ವೆಂಕಟೇಶ3
--------------
ತುಪಾಕಿ ವೆಂಕಟರಮಣಾಚಾರ್ಯ
ಹನುಮಂತ ಬಲವಂತ ಅತಿ ಗುಣವಂತಾ | ಇನ ಶಶಿ ಶಿಖಿನೇತ್ರ ರೂಪ ಚರಿತ್ರ | ವನಚರ ಪುಂಗವ ಸನಕ ಸನಂದನ | ವಿನುತ ಹರಿಚರಣನನುದಿನ ಜಪಿತಾ ಪ ಗಜ ಕಂಠೀರಾ | ರಾಯ ಕಪಿಗೆ ಹರಿಯಾ | ತೋರಿದ ಸಿರಿಯಾ | ಶ್ರೀಯರಸನ ನಾಮ ಸವಿದ ನಿಸ್ಸೀಮ | ಪ್ರಿಯ್ಯಾದಿಕೊಂಡು ಗುರುತು ಸಾಗರನರಿತು | ಮಾಯಾಛಾಯಾ ಗ್ರೀಯಾ ನೋಯ | ಸಾಯಬಡದ ಸೀತೆಯ ಮುಂದೆ ನಿಂದು | ಕೊಂಡ ಸ | ಮಾಯದ ಲಂಕಿಯ ನ್ಯಾಯವುರಹಿದ ಧೇಯಾಂಜನೇಯಾ 1 ವರ ಕುಂತಿನಂದನಾ ಕಲಿಯ ಭಂಜನಾ | ಉರಗ ಭಂಜನಾ | ಉರಿತಾಪ ಪರಿಹಾರ | ಕರುಣ ಸಾಗರಾ | ದುರುಳ ಕೀಚಕರ ಹಿಡಂಬಕಾಂತಕ | ಕೌರವಾ ಪಾರಾವಾರಾ ಉರಹಿದ ಬಲುಧೀರ ಶರ ಗದಾಧಾರಾ | ಗುರುವರ ಸುತದಿನ | ಕರಜನುವರದೊಳು | ಪರಿ ಪರಿಹರಿಸಿದೆ ಸಮರಾ 2 ಆನಂದತೀರ್ಥನಾಗಿ ಅತಿ ಹರುಷಯೋಗಿ ಕಾನನ ಪರಮತಾ ದಹಿಸಿದ ಖ್ಯಾತಾ | ಭಾನುಕುಲ ಸಾಂದ್ರಾ ಎನಿಸುವ ಚಂದ್ರಾ | ಧ್ಯಾನಾಮೃತ ಪಾನಾ | ಮುಕ್ತಿ ಸೋಪಾನಾ | ಜ್ಞಾನಾಹೀನಾ ದೀನಾ ಜನಾ | ಮಾನಿಸಫಲದಾನಾ ನಿರತ ನಿಧಾನಾ | ಶ್ರೀನಿಧಿ ವಿಜಯವಿಠ್ಠಲ | ಶ್ರೀನಿವಾಸನ ಮಾನಸ ಪೂಜಿಪೆ ಗಾನನ ಮುನಿಗಳ ಆನನಮಣಿ ಪವಮಾನಸೂನು 3
--------------
ವಿಜಯದಾಸ
ಜಯತು ಜಗದಾಧಾರ ಜಯತು ದೋಷ ವಿದೂರಕುಂದಕುಟ್ಮಲದಂತೆವದನಮಂದಹಾಸಇಂದಿರಾಲಯವಕ್ಷ ತುಲಸಿಮಾಲೆಸಿರಿಸ್ತಂಭ ಉರುಟುಕದಳಿಊರು ಜಾನುಜಂಘೆಶ್ರೀಪತಿ ಅನೇಕರೂಪನಾಗಿನಿಂದುಇಂದೀವರಾಕ್ಷಿಯರ ಮನದ ಹದನವನರಿತುಕೊಳ್ಳಲುಬಳಿಯಲೊಬ್ಬಳನೆ ನಿಲಿಸಿ ಹೆಗಲಲ್ಲಿಕರವಹಾಕಿಕುಳದಲ್ಲಿ (?) ಕೃಷ್ಣನ ಸ್ಥಳದಲ್ಲಿ ಹೆಜ್ಜೆಯೊಳುಘಲಕು ಘಲಕು ತಾಳಗತಿಗಳಿಂದಲಿ ಸುತ್ತಿದುಂದುಭಿವಾದ್ಯ ತಮ್ಮಿಂದ ತಾಂ ಬಾರಿಪವುಒಂದೊಂದು ದೋಷದಿಂದಿನ್ನು ಅಜಭವಸುರರುಶರಣು ಕರುಣಾನಿಧಿಯೆ ಶರಣು ಗುಣವಾರಿಧಿಯೆರಾಸಕ್ರೀಡೆಯಲಿ ತೋರಿಸಿದ ಗೋಪಿಯರ ಅಭಿ-
--------------
ಗೋಪಾಲದಾಸರು
ಯೋಗಿಯ ನೋಡಿರೋ ಸದ್ಗುರು ಯೋಗಿಯ ನೋಡಿರೋಯೋಗಿಚಿದಾನಂದಾವಧೂತ ಗುರುದೊರೆಯ ಸದ್ಗುಣ ಚರಿತನಪಆಶಾಪಾಶಗಳೆಂಬುವನೆಲ್ಲವಜರಿದುವಾಸನೆತರಿದುದೋಷದುರ್ಗ ಜನನಾದಿಗಳನು ಬಳಿದು ಸಂಶಯ ತುಳಿದುಕ್ಲೇಶಪಂಚಕ ಕಾಮಕ್ರೋಧವ ಕಡಿದು ಮುಂದಕೆ ನಡೆದುಭಾಸುರತೇಜದಿ ತೋರುವ ಪ್ರಭೆಯನುಕೂಡುವ ತಲೆಯೊಲಿದಾಡುವ1ಬಲಿದಾಧಾರವ ಕುಂಭಕದಿಂದಲಿ ಬಲಿಸಿ ವಾಯುವ ನಿಲಿಸಿನೆಲೆಯನೆ ಹತ್ತಿ ಆ ನೆಲೆಯನೆ ನಿಲುಕುತ ಮತ್ತಾನೆಲೆಯ ಹೊಲಬಲಿ ತೋರುವಭಾಸ್ಕರಕೋಟಿಯ ಮೀರಿಕಳೆಗಳ ತೋರಿ ಥಳಥಳ ಥಳಿಸಿಯೆ ಮೆರೆವಾ ಆತ್ಮನ ನೋಡುವ ಸಂತಸಪಡುವ2ಆರು ಚಕ್ರಗಳಲಿ ತೋರುವ ದಳಗಳನರಿದು ಅದರೊಳು ಬೆರೆತುಭೋರಿಡುತಿಹ ದಶನಾದದ ಬೊಬ್ಬೆಯಕೇಳಿಹರುಷವ ತಾಳಿ ಚಾತುರದಿ ಮೆರೆಯುತಲಿಹ ಜ್ಯೋತಿಯಸಾರಸೇವಿಪ ಶೂರಧಿರ ಚಿದಾನಂದಾವಧೂತಾತ್ಮ ಗುರುವಾ ಎನ್ನನು ಪೊರೆವಾ3
--------------
ಚಿದಾನಂದ ಅವಧೂತರು
ಶ್ರೀ ಧರ್ಮಪುರಿ ಕ್ಷೇತ್ರ ಪರವಾಸುದೇವ ಸ್ತೋತ್ರ61ಶರಣು ಹೊಕ್ಕೆನೋ ನಿನ್ನ |ಪರವಾಸುದೇವನೇ ಪಾಲಿಸೆನ್ನಲಿ ಕೃಷ್ಣ |ಕರಿರಾಜವರದನೇ ಶರಣ ವತ್ಸಲ ಘನ್ನ |ಭಕ್ತಜನ ಪ್ರಸನ್ನ |ಉರುಗುಣಾರ್ಣವ ವೇದವೇದ್ಯನೆ |ಶಿರಿ ಕರಾಂಬುರುಹಾಚೀತಾಂಘ್ರಿ |ಸರೋಜವಿಧಿಶಿವಾದ್ಯಮರ ವಂದ್ಯನೆ ಸರ್ವಕರ್ತಾಶರಣುಹೊಕ್ಕೆನೋ ನಿನ್ನ|| ಪಮೀನಕೂರ್ಮವರಾಹ| ಚಿನ್ಮಾತ್ರವಪುಷವೀರಭದ್ರ ನೃಸಿಂಹ||ಬಲಿರಾಯಗೊಲಿದು ಕೆಡಹಿದೈತ್ಯ ಸಮೂಹ ||ದುಷ್ಟನೃಪರ ಸೀಳಿ ಬಿಸುಟು ಬ್ರಹ್ಮ | ಕುಲವರವಾಯು ಮಹಾರ್ಹಹನುಮಪ್ರಿಯರವಿ ಸುತ ವಿಭೀಷಣರಿಗೆ ನೀ ಅಭಯನೀಡಿ ಪಾಂಡು -ತನಯರು ದ್ರೌಪದೀ ವಿದುರಉದ್ಧವಇನ್ನುಬಹು ಸಜ್ಜನರಿಗೊಲಿದು ||ಜನಜನೆನಿಸಿದಿ ದೈತ್ಯಮೋಹಕ ಸುರಸುಬೋಧಕ ಬುದ್ಧಶರಣು |ಕ್ಷೋಣಿಯಲ್ಲಿ ಚೋರರಾಜರ ಸದೆದು -ಧರ್ಮಸ್ಥಾಪಿಸಿದಿ ಹೇ ಕಲ್ಕಿ ನಮೋ ನಮೋಪಾಹಿಸಂತತ1ಸರ್ವಗತ ಸರ್ವೇಶ | ಸರ್ವೇಶ್ವರನು ನೀನೇ ಕಾಲವಸ್ತುದೇಶ ||ಸರ್ವತ್ರಒಳಹೊರ ವ್ಯಾಪ್ತನಾಗಿಹ ಶ್ರೀಶ ||ಶ್ರೀತತ್ವ ನಿನ್ನಲಿ ಓತಪ್ರೋತಮಹೇಶ | ಅಕರನೇನಿರ್ದೋಷ ||ಸಚ್ಚಿತ್ ಸುಖಮಯ ಆತ್ಮಾಪ್ರೇದಕ್ಕೂ ಅಮಿತ ಸತ್ಕಲ್ಯಾಣಗುಣನಿಧೇ ||ಸರ್ವಜಗಚ್ಚೇಷ್ಟೆಯನು ಗೈಸುತಿ ಸ್ವಪ್ರಯೋಜನ ರಹಿತಸ್ವಾಮಿಯೇ |ಅಜಿತರುಚಿರಾಂಗದನೇ ಸ್ವಾಸ್ಯನೇ ಸರ್ವಭೂತಾಂತರಾತ್ಮನೇ ||ಅಚ್ಯುತನೇ ಸಂಪೂರ್ಣ ಕಾಮನೇ ಅತಿಜ್ಞಾನ ವೈರಾಗ್ಯ ಸಂಪತ್‍ದಾತಕರುಣಿ | ಗುರುವೇಂಕಟ || ಶರಣು || 2ಧರ್ಮಪುರಿಯಲ್ಲಿರುತ್ತಿ | ಶೇಷಶಯನನೇನಮೋ ಪರವಾಸುದೇವ ಪ್ರಮೋದಿ ||ಮದ್ದೋಷ ಕಳೆದು ಸದ್ಧರ್ಮದಲಿ ಇಡು ದಯದಿ |ವೃಷಾತಪಿಯೇ ಕಪಿತನಾಮಕನಮೋ ಆನಂದಿ ನಂದಾ ನಂದನ ನಂಹಿಜಗದಾಧಾರ ಶ್ರೀಕೂರ್ಮನಭ ಅರ್ಕಾದಿ ಧಾರಕ ಶಿಂಶುಮಾರನೇಸಾಗರವು ಭೂಮಿಯನು ನುಂಗದೇ ಹಿಂದೆ ಸೆಳೆದು ಧರೆಯರಕ್ಷಿಪ ||ಸಾಗರದಲ್ಲಿರುವ ವಡವಾವತ್ತಅಗ್ನಿನೀನು ಸವತ್ರ ಹರವು |ಮುಖ್ಯ ರಕ್ಷಕ ವೇಧತಾತ ಪ್ರಸನ್ನ ಶ್ರೀನಿವಾಸ ಶ್ರೀಪತಿಗರುಡಕೇತನಶರಣು ಹೊಕ್ಕೆನೋನಿನ್ನ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಆನಂದಮಯಸ್ತೋತ್ರ40ಪೂರ್ಣ ಸುಗುಣಾರ್ಣವನೆಅನಘಪರಮೇಶ್ವರನೆಆ ನಮಿಪೆ ಶ್ರೀರಮಣಆನಂದಮಯವಿಷ್ಣುಪನಿನ್ನಯ ಸುಮಹಿಮೆಗಳ ನಿನ್ನಿಚ್ಛೆಯಿಂದಲೇಚೆನ್ನಾಗಿ ತಿಳಿಸಿ ಅಚ್ಛಿನ್ನ ಭಕ್ತಿಯನೀಯೊ ಅಪಸುಖರೂಪ ಪಾಲನಾಲಯಕರ್ತ ಲಕ್ಷ್ಮೀಶನಿಷ್ಕಳನು ನೀ ಸದಾಕೈವಲ್ಯಸುಖದಆಗಮಸುಶಾಸ್ತ್ರೈಕ ವಿಜÉÕೀಯ ಪರಬ್ರಹ್ಮಅಂಗಾಂಗ್ಯಭಿನ್ನ ಆನಂದ ಸಂಪೂರ್ಣ 1ಬ್ರಹ್ಮಶಬ್ದದಿ ಮುಖ್ಯವಾಚ್ಯ ಬಹು ಆವರ್ತಿಬ್ರಹ್ಮಆನಂದಮಯನೀ ಇತರರಲ್ಲಬ್ರಹ್ಮಪರಿಪೂರ್ಣಹರಿಸರ್ವನಾಮದಿ ನೀನೆಬಹುರೂಪ ಸರ್ವಸ್ಥ ಈಶ್ವರಆನಂದಮಯ2ಚಿತ್ಪ್ರಕೃತಿ ನಾಲ್ಮೊಗನು ಅಷ್ಟಮೂರುತಿ ಎಂಬರುದ್ರನು ದೇವೇಂದ್ರ ಸುರಗುರುವಿಪ್ರಇಂಥ ಯಾರೂ ವಸ್ತು ಯಾವುದೊ ಅಲ್ಲವುಆನಂದಮಯನೀನು ವಿಷ್ಣು ಪರಬ್ರಹ್ಮ3ಪ್ರಕೃತಿ ಪ್ರಜಾಪತಿ ಸದಾನಂದ ದಶಪ್ರಮತಿರುದ್ರಾಷ್ಟಮೂರ್ತ್ಯಾದಿ ಸರ್ವ ಶಬ್ದಂಗಳುಪರನೆ ಬ್ರಹ್ಮನೆ ವಿಷ್ಣು ಮುಖ್ಯ ವಾಚಕ ನಿನಗೆಇರುವ ಈ ಸರ್ವರೊಳು ಸುಖಪೂರ್ಣ ಸ್ವಾಮಿ 4ಅನ್ನಮಯ ಪ್ರಾಣಮಯ ಮನೋಮಯ ವಿಜ್ಞಾನಮಯಆನಂದಮಯಎಂಬ ಐದು ಶಬ್ದಂಗಳು 1ಆನಂದಮಯಶಬ್ದದಿಂದ ಗ್ರಹಿಸಲುಬೇಕುಆನಂದಮಯಬ್ರಹ್ಮ ನೀನೆ ಇತರರು ಅಲ್ಲ5ಶಿರ ಬಾಹುದ್ವಯ ಮಧ್ಯಚರಣಅಂಗಾಂಗಗಳುಪೂರ್ಣಆನಂದಮಯಎಂದೂ ಅಭಿನ್ನಉರು ಸುಗುಣ ಪರಿಪೂರ್ಣ ವಿಷ್ಣು ಆತ್ಮನು ಬ್ರಹ್ಮಶೃತಿಯು ಬಹುಸಾರುತಿದೆ ಸುಖಮಯನು ಎಂದು 6ಅನ್ನಮಯ ಅನಿರುದ್ಧ ಪ್ರಾಣಮಯ ಪ್ರದ್ಯುಮ್ನಮನೋಮಯ ಸಂಕರ್ಷಣನು ವಿಜ್ಞಾನಮಯನುಅನಘಮಾಯಾರಮಣ ಪರವಾಸುದೇವ ನೀಆನಂದಮಯಶ್ರೀಶ ನಾರಾಯಣ ಬ್ರಹ್ಮ7ಪಂಚ ಕೋಶಂಗಳಲಿ ತನ್ನಾಮ ತದ್ಭಿನ್ನಕಿಂಚಿತ್ತು ಲೇಪವಿಲ್ಲದೆ ಇದ್ದು ನಿಯಮಿಸುವೆಪಂಚ ಸುಖರೂಪದಿಂ ಪಂಚವರ್ಣದಿ ಜ್ವಲಿಪೆಸಂಚಿಂತಿಪರ್ಗೆ ಸುಖವೀವೆ ಸುಖಮಯ ಬ್ರಹ್ಮ 8ಅಧಿಕಾರಿ ಆನಂದಪ್ರಚುರಬಹುರೂಪ ನೀಸರ್ವರೂ ನಿನ್ನಿಂದ ಉಪಜೀವ್ಯರೊ ಸ್ವಾಮಿಸರ್ವರಿಗು ಪ್ರೇರಕನು ಸತ್ತಾಪ್ರವೃತ್ತಿದನುಸರ್ವೇಶ ಸುಖಪೂರ್ಣ ಸರ್ವವ್ಯಾಪಿಯೆ ದೇವ 9ಆನಂದಮಯನೀನೆ ಆನಂದೋದ್ರೇಕದಿಂಪ್ರಾಣಿಗಳ ಧರ್ಮಗಳ ಪ್ರವೃತ್ತಿ ಮಾಡುವೆಯೊಆನಂದೋದ್ರೇಕದಿಂ ಸರ್ವತ್ರವ್ಯಾಪ್ತ ನೀಆನಂದಮಯಇತರ ಲೋಕಚೇಷ್ಟಕರಿಲ್ಲ10ಅಂಗಾಂಗಿತ್ವದಿ ಭಗವಂತ ನೀ ಕ್ರೀಡಿಸುವೆರಂಗ ನೀ ಸತ್ಯಂ ಜ್ಞಾನಮನಂತಂ ಬ್ರಹ್ಮನೆಂದುಹೊಗಳುತಿದೆ ಶೃತಿಯು ಸುಖಸಾರಾತ್ಮ ಚಿನ್ಮಾತ್ರಚಾರ್ವಾಂಗ ನಿನ್ನ ತಿಳಿಯದೆ ಬೇರೆ ಗತಿಯಿಲ್ಲ 11ಸತ್ಯ ಸತ್ಸøಷ್ಟಿಕರ್ತ ಜೀವನಪ್ರದನುಸರ್ವ ಪ್ರವರ್ತಕನು ಸಂಹಾರಕರ್ತಅಶೇಷಸಾಮಾನ್ಯ ವಿಶೇಷಜ್ಞಾನವು ಜ್ಞಾನದೇಶಾದಿಪರಿಚ್ಛೇದ ಶೂನ್ಯವು ಆನಂತ 12ಅನ್ನಮಯದಿಂ ಸೃಷ್ಟಿ ಸಂಹಾರಜೀವನವುಪ್ರಾಣಮಯ ಶಬ್ದ ಸಹ ಜೀವನಪ್ರದವುಮನೋಮಯ ಶಬ್ದದಿಂ ಸಾಮಾನ್ಯಜ್ಞಾನವುವಿಜ್ಞಾನಮಯ ಶಬ್ದದಿ ವಿಶೇಷಜ್ಞಾನ 13ಆನಂದಮಯಶಬ್ದದಿಂದಲಿ ಜÉÕೀಯವುಆನಂದಾದ್ಯಖಿಳಗುಣ ಅಪರಿಚ್ಛಿನ್ಮತ್ವಅನ್ನಮಯ ಪ್ರಾಣಮಯ ಸತ್ಯಂ ಬ್ರಹ್ಮಮನೋಮಯ ವಿಜ್ಞಾನಮಯ ಜ್ಞಾನಂ ಬ್ರಹ್ಮ 14ಆನಂದಮಯಆನಂತಂ ಬ್ರಹ್ಮ ಎಂದೀ ರೀತಿಮಂತ್ರವರ್ಣೋಕ್ತ ಶಬ್ದಗಳಿಗೇಕಾರ್ಥಆನಂದಮಯಮೊದಲಾದ ಶಬ್ದಗಳಿಂದಆನಂದಪರಿಪೂರ್ಣ ವಿಷ್ಣು ನೀನೇ ವಾಚ್ಯ 15ಆತ್ಮ ನೀಆನಂದಮಯಇತರರು ಅಲ್ಲಆನಾತ್ಮರು ಸಂಪೂರ್ಣಸ್ವತಂತ್ರರು ಅವರುಚೇತನಾಚೇತನದಸತ್ತಾನಿನ್ನಿಂದಲೇಆನಂತ ನೀ ಸರ್ವಗನು ಆಸಮ ಪ್ರಭು ಐರ 16ಬ್ರಹ್ಮ ವಿದಾಪ್ನೋತಿ ಪರಂ ಎಂದು ಉಪನಿಷದ್ವಾಕ್ಯಬ್ರಹ್ಮಾಪರೋಕ್ಷವೇ ಮೋಕ್ಷಕ್ಕೆ ಕಾರಣಬ್ರಹ್ಮೇತರ ವಿರಿಂಚಾದಿ ಜೀವರ ಜ್ಞಾನಮೋಕ್ಷಕೊಡಲು ಎಂದು ಶೃತಿಯು ಪೇಳುತಿದೆ 17ತಮೇವಂ ವಿದ್ವಾನಮೃತ ಇಹಭವತಿನಾನ್ಯಃ ಪಂಥಾ ಅಯನಾಯ ವಿದ್ಯತಾಎಂಬ ಶೃತ್ಯನುಸಾರ ನಿನ್ನಾಪರೋಕ್ಷ ವಿನಾಮುಕ್ತಿಯು ಲಭಿಸದು ಅನ್ಯಜ್ಞಾನದಿ ಎಂದೂ 18ಆನಂದಪ್ರಚುರ ಪೂರ್ಣಾನಂದಮಯ ನೀನೆಆನಂದ ತರತಮದಿ ಜೀವರಲಿ ಉಂಟುಅತ್ಯಂತ ಭೇದವು ನಿನಗೂ ಜೀವರಿಗೂಅನಂತ ಅಪರಿಮಿತ ಆನಂದಿ ನೀನೆ 19ರುದ್ರನ ಶತಗುಣಿತ ಆನಂದ ನಾಲ್ಮೊಗನಒಂದು ಆನಂದವು ಎಂಬುವುದು ಶೃತಿಯುಆನಂದ ಪರಿಮಿತವು ಜೀವರಿಗೆ ಈ ರೀತಿಆನಂದ ಅಪರಿಮಿತ ನಿನ್ನಯ ಸ್ವರೂಪ 20ಸುಖಮಯ ನಿನ್ನಪರಿಮಿತಾನಂದಾದಿಗಳನುಸಾಕಲ್ಯತಿಳಿದವರು ಇಲ್ಲವೇ ಇಲ್ಲಸಾಕಲ್ಯಶಬ್ದಗಳು ಪೊಗಳಲರಿಯವು ನಿನ್ನಏಕಸುಖಮಯ ನೀನು ಜೀವರಿಗೆ ಭಿನ್ನ 21ತತ್ವಮಸ್ಯ ಹರಿಬ್ರಹ್ಮಾಸ್ಮಿ ಪುರುಷಯೇ ವೇದಂಸರ್ವಂ ಎಂಬಂಥಾ ಇಂಥ ಶೃತಿ ಮಾತುಗಳುಜೀವೇಶ ಐಕ್ಯವನು ಬೋಧಿಸುವವಲ್ಲವುಸರುವಿಚಾರ ನಿರ್ಣಯದಿ ಭೇದಬೋಧಕವೆ 22ಜೀವರಿಗೆ ಜನ್ಮಜೀವನಸತ್ತಾದಾತನುಸರ್ವಾಶ್ರಯ ಸರ್ವನಿಯಾಮಕನು ಆತ್ಮಜೀವರು ಪರಬ್ರಹ್ಮಜ್ಞಾನದಿಂ ಪೊಂದುವಸೋಚಿತಪೂರ್ಣತ್ವ ಕೊಡುವ ನೀ ಬ್ರಹ್ಮ 23ಸರ್ವಕ್ಕೂ ಭಿನ್ನ ನೀ ಸರ್ವತ್ರ ಸರ್ವದಾಸರ್ವದೊಳು ಇರುವಂಥ ಸರ್ವೇಶ್ವರಸರ್ವ ಸತ್ತಾದಿ ಪ್ರದತ್ವ ಸ್ವಾಮಿತ್ವದಿಂಸರ್ವ ನೀನೆಂದೆನಿಸಿಕೊಂಬೆಯೊ ದೇವ 24ಸರ್ವವಂದ್ಯನು ವಿಷ್ಣು ಸರ್ವಾಂತರ್ಯಾಮಿಯುಸ್ವತಂತ್ರ ಈಶನು ಸರ್ವಜೀವರಿಗೆ ಭಿನ್ನಸರ್ವಸ್ವಾಮಿಯು ನೀನು ಎಂದರಿತು ಭಜಿಪರಿಗೆಸರ್ವಶೋಕವ ಬಿಡಿಸಿ ಮೋಕ್ಷಸುಖವೀವೆ 25ಸರ್ವಜಡ ಚೇತನದಿ ಅಂತರ್ನಿಯಾಮಕನುಸರ್ವಜಗದಾಧಾರ ಏಕ ಬಹುರೂಪತ್ವಂ ಅಸೌ ಅಹಮೆಂದು ಸರ್ವನಾಮದಿ ವಾಚ್ಯಸರ್ವಜಡ ಚೇತನಕೆ ವಿಲಕ್ಷಣನು ಸ್ವಾಮಿ 26ಅತೀಂದ್ರಿಯವು ಬ್ರಹ್ಮವಿಷಯಕ ಜ್ಞಾನಶೃತ್ಯನುಸಾರವಿಲ್ಲದ ಅನುಮಾನದುಸ್ತರ್ಕದಿಂದಲಿ ಲಭಿಸದು ಯಾರಿಗೂಮೋದಮಯ ಶ್ರೀ ವಿಷ್ಣು ಜೀವರಿಂ ಭಿನ್ನ 27ಬದ್ಧರೊಳು ಮುಕ್ತರೊಳು ಇದ್ದು ನೀ ನಿಯಮಿಸುವೆಬದ್ಧರಂತೇ ಮುಕ್ತಜೀವರಿಗೂ ಭಿನ್ನಮುಕ್ತರಿಗೆ ಅವರವರ ಆನಂದ ಅನುಭವವುಅಧೀನ ನಿನ್ನಲ್ಲಿಆನಂದಮಯಶ್ರೀಶ28ಸದಮಲ ಬ್ರಹ್ಮ ನಿನ್ನ ಪರೋಕ್ಷಜ್ಞÕನಿಗೆಪದುಮಸಂಭವ ಸಹ ನೀನು ಸಹ ಇದ್ದುಒದಗಿಸುವೆ ಸೋಚಿತ ಮೋಕ್ಷಸುಖ ಅವರಿಗೆಹೇ ದಯಾನಿಧೇ ನಮೋ ಆನಂದಪೂರ್ಣ 29ಅನ್ನ ಪ್ರಾಣ ಮನೋವಿಜ್ಞಾನಆನಂದಮಯಪರಿಣಾಮ ಅಭಿಮಾನರಹಿತ ಅಧಿಕಾರಿಆನಂದ ಪ್ರಚುರನೇ ಲೋಕಚೇಷ್ಟಕ ನೀನೆಮಂತ್ರವರ್ಣೋಕ್ತ ಮಹಾಮಹಿಮ ಸುಖಪೂರ್ಣ 30ವನಜಾಸನಾದಿಗಳು ಆನಂದಮಯರಲ್ಲನಿನ್ನಿಂದ ಉಪಜೀವ್ಯ ಭಿನ್ನರು ಅವರುಆಮ್ನಾಯದಿಂ ವೇದ ದುಸ್ತರ್ಕಕತಿ ದೂರಆನಂದಮಯವಿಷ್ಣು ಮುಕ್ತರಿಗೂ ಆಶ್ರಯನು31ಜ್ಞಾನಸುಖಪೂರ್ಣ ಪ್ರಸನ್ನ ಶ್ರೀನಿವಾಸಪೂರ್ಣಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತಎನ್ನ ಒಳಹೊರಗಿದ್ದು ನೀನೆ ನುಡಿದೀ ಗ್ರಂಥನಿನಗೆ ಅರ್ಪಣೆ ಸುಹೃದನಿತ್ಯಸಂತೃಪ್ತ32
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀರಾಮಮಂತ್ರ22ಶ್ರೀರಾಮ ಸೀತಾರಮಣ ಮಾಂಪಾಹಿಪಉರು ಜ್ಞಾನ ಸುಖರೂಪ ನಮೋವಾಸುದೇವಅ.ಪಶ್ಯಾಮ ರಮಣೀಯ ಉರು ಆಮ್ನಾಯಕೂ ಅಮಿತರಮೆ ಸೀತಾಯುತ ನಮೋ ಹನುಮಾದಿಸೇವ್ಯವಾಮಹಸ್ತದಿಚಾಪಚಿನ್ಮುದ್ರೆ ಶರಬಲದಿಅಮಿತಾರ್ಕಸೋಮ ಸ್ವಕಾಂತಿ ಶ್ರೀರಾಮ 1ಪರಮೇಶ ಏಕಾತ್ಮಅರದೂರಪರಿಪೂರ್ಣಉರು ಸುಗುಣವಾರಿನಿಧಿ ನೀನೇ ಸ್ವತಂತ್ರಅರವಿಂದಜಾಂಡಾದಿ ಜಗತ್ಸರ್ವ ಕರ್ತಜಸುರರ ಮೊರೆಕೇಳಿದಶರಥನ ಸುತನಾದೆ2ಚತುರ್ವದನ ಸಂಸೇವ್ಯ ಹಯವದನ ಷಡ್ರೂಪಚತುರ್ವಿಂಶಾಕ್ಷರ ಸುಮಂತ್ರ ಪ್ರತಿಪಾದ್ಯತ್ರಾತಪ್ರೇರಕಸ್ವಾಮಿ ರಾಮನೇ ಎಂದರಿತುಸಂಧ್ಯಾಸುಮಂತ್ರ ಋಷಿ ಬಂದು ಪ್ರಾರ್ಥಿಸಿದ 3ಸುದುಪಾಸ್ಯ ನಿನ್ನ ಋಷಿ ಆಶ್ರಮಕೆ ಕರದೊಯ್ಯೆಶ್ರೋತವ್ಯ ಮಂತವ್ಯ ನಿಧಿ ಧ್ಯಾಸಿತವ್ಯಪ್ರತ್ಯಕ್ಷ ಅವತಾರರೂಪ ನೀನೆಂದರಿತುಸಿದ್ಧರು ಭಕ್ತಿಯಿಂದಲಿ ವಂದಿಸಿದರು 4ತತ್ರ ತತ್ರ ಸ್ಥಿತೋ ವಿಷ್ಣುಃ ತತ್ತಚ್ಛಕ್ತಿ ಬೋಧಯನ್ಅಸ್ತ್ರದೇವತೆಗಳೀ ತತ್ವವನು ಅರಿತುಸತ್ತಾದಿದಾತನೇ ಶಾಸ್ತ್ರಸ್ವಾಮಿ ವಿಷ್ಣೋಪ್ರತ್ಯಗಾತ್ಮನೆ ರಾಮ ನಿನಗೆ ನಮಿಸಿದರು 5ಯಜÕಗೆ ಯಜÕಗೆ ವಿಶ್ವಾಮಿತ್ರಗೆ ನಮೋಯಜÕಭುಕ್ ಯಜಮಾನ ಯಜÕ ಯಜೆÕೀಶಇಜ್ಯ ಪೂಜ್ಯಗೆ ಸ್ವಾಮಿ ಮನ್ಮನೋವಾಕ್ಸಂಸ್ಥಯಜÕಸ್ಥಯಜÕ ಮಾಂಪಾಹಿನಮೋ ನಮಸ್ತೆ6ವೇದವತಿತ್ವದಧೀನೆ ಸರ್ವಜಗದಾಧಾರೆಭೂದೇವಿ ಸುಖಪೂರ್ಣೆ ಅಜೆ ನಿತ್ಯಮುಕ್ತೆವೈದೇಹಿ ಜಾನಕಿ ಸೀತಾನಾಮದಿ ತಾನೆಈ ಧರೆಯೊಳ್ ತೋರಿಹಳು ನಿನ್ನನನುಸರಿಸಿ 7ಸುರಾಜಗಜಇಕ್ಷುಜಲ್ಲೆಯನು ಮುರಿವಂತೆಪರಫಲಿಬಲಿನೀನು ಶಿವಚಾಪ ಮುರಿಯೆಸುರರುನರವರ್ಯರು ಹರುಷದಿಂದಲಿ ನೋಡೆಸಿರಿಸೀತೆ ವರಮಾಲೆ ನಿನಗೆ ಹಾಕಿದಳು8ಶರಭಂಗಶಬರಿ ಜಟಾಯು ಮೊದಲಾದವರವರಭಕ್ತಿಗೆ ಮೆಚ್ಚಿ ಯೋಗ್ಯ ಗತಿಯಿತ್ತೆಮಾರುತಿಗೆ ಪ್ರಿಯರೆಂದು ರವಿಜಗೆ ವಿಭೀಷಣಗೆಕರುಣಿಸಿದೆ ನಿರಪೇಕ್ಷ ನೀ ಪೂರ್ಣಕಾಮ 9ಕ್ರೂರ ಪೌಲಸ್ತ್ಯಾದಿ ರಕ್ಕಸರ ತರಿದು ನೀಧರೆಯಲಿ ಸುಕ್ಷೇಮ ಧರ್ಮ ಸ್ಥಾಪಿಸಿದೆಸರಸಿಜಾಸನ ಲೋಕದಂತಾಯಿತೀ ಲೋಕವರವಿಷ್ಣುಭಕ್ತಿಯು ಸೌಖ್ಯ ಎಲ್ಲೆಲ್ಲೂ 10ಸರಸಿಜಾಸನ ಪಿತ ಪ್ರಸನ್ನ ಶ್ರೀನಿವಾಸನೆಸರಿ ಮಿಗಿಲು ನಿನಗಿಲ್ಲ ಯಾರು ಎಂದೆಲ್ಲೂಸಿರಿಸೀತಾಯುತರಾಮ ಎಂದೂನು ಎಲ್ಲೆಲ್ಲೂಮಾರುತಿ ಸೌಮಿತ್ರಿ ಭರತಾದಿಸೇವ್ಯ11
--------------
ಪ್ರಸನ್ನ ಶ್ರೀನಿವಾಸದಾಸರು
ಹರಿಯೆ ಅಚ್ಯುತಾನಂತ ಗೋವಿಂದದುರುಳಹಿರಣ್ಯಕ ಅಸುರ ಅವತರಿಸಿದರೆ ಎಲ್ಲಿಪರಿಪರಿಯ ಲೋಕ ಪಾತಾಳ ಸ್ವರ್ಗವ ಗೆದ್ದುಪಡೆದು ಅವನ ಸತಿಯ ಸುರಪತಿಯು ಎಳೆತರಲುಅಲ್ಲಿ ಗರ್ಭದಲಿ ಪ್ರಹ್ಲಾದನಿಹನೆಂದುಹರಿಯೆ ಚಂಡಹಿರಣ್ಯಕ ಅಸುರ ದಂಡಿಸುವದುಷ್ಟಮರ್ದನ ದೂರಾತಿದೂರ ಜಗ-ಪರಿಪರಿಯಿಂದ ತುತಿಸುತ್ತ ಕರಗಳ ಮುಗಿಯೆಇತ್ತ ಸುರರೆಲ್ಲ ತಮ್ಮ ತತ್ತಸ್ಥಾನಕೆ ಪೋಗೆಒರೆದೊರೆದು ಪೇಳಿ ಬಹು ಬಗೆ ಬಗೆಯಿಂದಲಿನಮ್ಮ ಅಂತರ ತತ್ವ ನಿಶ್ಚಯವೆ ಇದು ಸರಿಅನ್ಯರಲ್ಲವು ನಾವು ಹಿತವರೆ ನಿನಗಿನ್ನುಭಿನ್ನ ದೇಹ್ಯವುನೋಡುಮುನ್ನಿಂದಲಿ ಇನ್ನುಬಾಧ್ಯ ಬಾಧಕ ಹರಿಯೆ ಸಾಧ್ಯ ಸಾಧನಕೆಹರಿಚಂಡಮಾರ್ಯರು ತಾವು ಚೆಲುವ ಬಾಲಕಿ ಕೇಳುಆವ ವಿಪರೀತವನೆ ಅಲ್ಲದ್ದು ನುಡಿದನುಏಸುಬಗೆಯಿಂದ ಉಪಾಯದಲಿ ಕೇಳಿದರುಈಸು ದಿನ ಇವ ಎನ್ನ ಸುತನು ಎಂದರಿದಿದ್ದೆನಾನಾ ಬಗೆಯಿಂದ ವಧೆಗೇನೇನು ಉಪಾಯಎಲ್ಲಿ ಪ್ರಹ್ಲಾದ ನಿನ್ನೊಡೆಯನು ಇನ್ನುಭುಂಗಿ ಭುಂಗಿಗೆ ಬ್ರಹ್ಮಾಂಡವೆಲ್ಲ ಗದ್ದರಿಸಿನ್ನುಬಿರಬಿರನೆ ಕಣ್ಣುಗಳ ಬಿಡುವುತ್ತ ಹೂಂಕರಿಸಿಕೆಡಿಸದೆ ತಾನಿತ್ತವರಸತ್ಯವೆಂದೆನಿಸಿಪರಿಪರಿಯಿಂದ ಸಿರಿದೇವಿಗೆಇದೆ ಸಮಯವೆಂದುಸಿರಿಅಜಭವಾದಿಗಳೆಲ್ಲಪರಿಪರಿಯಿಂದಸುರ ಋಷಿಪಿತೃ ಗಂಧರ್ವಕಂದ ಪ್ರಹ್ಲಾದನ್ನ ಮುಂದಕ್ಕೆ ಕರೆದು ನಿಮ್ಮಮೆಚ್ಚಿದೆನು ಪ್ರಹ್ಲಾದ ವರವ ಬೇಡೆಂದೆನಲುಆಗ ಪ್ರಹಲ್ಲಾದಗೆ ಕರಕಮಲಗಳಿಂದಹರಿಯೆ ಜಗಕಿನ್ನು ಇರತೋರಿನ್ನು ಪ್ರಹಲ್ಲಾದಜಯ ಜಯತು ಪ್ರಹ್ಲಾದವರದ ಜಗದಾಧಾರ
--------------
ಗೋಪಾಲದಾಸರು