ಒಟ್ಟು 84 ಕಡೆಗಳಲ್ಲಿ , 35 ದಾಸರು , 65 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಲೋಕವಿಲ್ಲೆಂಬೊ ಪರಮ ಪಾಪಿಗಳಿಗೆ ನರಲೋಕವೇ ನರಕವಣ್ಣ ಪ ಪರಲೋಕವಿಹುದೆಂದು ಗುರುಕರುಣವನು ಪಡೆದ ಕುರುಬನದ ಅರಿತನಣ್ಣ ಅ.ಪ ಈಶ ಜಡ ಜೀವರೆಂಬುವ ಭಿನ್ನ ತತ್ವಗಳು ಈಶನೊಬ್ಬನೆ ಕರ್ತನಣ್ಣ ಸಾಸಿರದಿ ಆಸೆ ಭಂಗಗಳ ಪೊಂದುತಲಿರಲು ಮೀಸೆಯನೇತಕೆ ತಿರುವಬೇಕಣ್ಣ 1 ಹರಿಯು ಪರನಲ್ಲದಿದ್ದರೆ ಸರ್ವಭುವನಗಳು ಹರಿಯಧೀನದಲಿರುವುದೇಕೆ ಹರಿಯಧೀನಲಿಲ್ಲದಿದ್ದರೀ ಜಗದೊಳಗೆ ಕೊರತೆಯೇತಕೆ ಮಂದಿಗಳಿಗೆ 2 ದೇವದತ್ತನು ಧನಿಕ ಪ್ರೇತದತ್ತನು ಬಡವ ಯಾವ ಕಾರಣ ವಿಷಮಗತಿಗೆ ಸಾವು ನೋವುಗಳ ಪ್ರತಿಕ್ಷಣಗಳಲಿ ನೋಡಿ ದೊರೆ ಭಾವವಿರುವುದು ನ್ಯಾಯವೇ 3 ಈಶನಿಲ್ಲೆಂಬುವರು ಹೇಸಲಾರರು ಪಾಪ ರಾಶಿ ರಾಶಿಯ ಗಳಿಸಲು ಆಶೆಬಡುಕರ ಜಗವ ನಾಶಮಾಡಲು ರಾಜ ಶಾಸನಕೆ ಬುಡವೆಲ್ಲಿಯಣ್ಣ 4 ಇಂದು ಇದನು ಪಡೆಯುವೆ ಮುಂದೆ ಅಧಿಕ ಧನವನು ಗಳಿಸುವೆ ಸದೆ ಬಡಿಯುವೆನು ಪರರನೆಂಬ ನುಡಿ ತಮಗುಣದ ಬೆದೆಯಲಿರುವನು ನುಡಿವನು 5 ಎಲ್ಲಿಂದ ಬಂದೆ ಹೋಗುವುದೆಲ್ಲಿಗೆಂಬುದನು ಬಲ್ಲವಗೆ ಮುಕುತಿ ಇಲ್ಲೇ ಒಳ್ಳೆ ಮನವನು ಪಡೆದು ಬಲ್ಲವರ ಸೇವೆಯಿಂ ದೆಲ್ಲವನು ತಿಳಿಯಲಳವಣ್ಣ 6 ಕಾಯವಾಚಾಮನಸದಿ ತಪವಗೈಯುತ ಶುದ್ಧ ಭಾವವನು ಗಳಿಸಿರಣ್ಣ ದೇವಗುರು ಪ್ರಾಜ್ಞ ಪೂಜನ ಲಾಭವಿದು ವಿನಯ ಭಾವಕೆ ಪ್ರಸನ್ನರಿವರು 7
--------------
ವಿದ್ಯಾಪ್ರಸನ್ನತೀರ್ಥರು
ಪಾಹಿ ರಮಾ ಮನೊಹರ ಪಾಪಿ ಪ ಪಾಹಿ ಸದಾಗಮವೇದ್ಯ ಸಕಲ ಕ ಲ್ಯಾಣ ಗುಣಾರ್ಣವ ಲೀಲಾಮಾನುಷ ಅ.ಪ ಆನೆಯೊಂದು ಕರೆಯಲು ಆ ಕ್ಷಣದಲಿ ನೀನೇ ಬಂದುದೇಕೆ ದೇವ ನೀನೇ ಪಡೆದ ಮಕ್ಕಳ ದೈನ್ಯದ ನುಡಿ ನೀನಲ್ಲದೆ ಕೇಳುವರ್ಯಾರಿರುವರು1 ತುರುವಿನ ಕೆಚ್ಚಲ ಕರು ಗುದ್ದಿದರದು ಕರೆಯದೇ ಕ್ಷೀರವನು ದೇವ ಮರೆತು ಎನ್ನ ಅಪರಾಧಗಳೆಲ್ಲವ ಮರೆಯದಿರೆಲೊ ಎನ್ನಯ ಬಾಂಧವ್ಯವ 2 ಅತ್ತು ಕರೆದು ಔತಣ ನೀಡಿದ ಪರಿ ನಿತ್ಯ ಸೇವೆಯಾಯ್ತೋ ಕೃಷ್ಣ ನಿತ್ಯ ಪೂರ್ಣ ಕರುಣಾಮಯ ಕರುಣಿಸೊ ಚಿತ್ತ ಪ್ರಸನ್ನತೆ ಸಾರ್ಥಕ ಜೀವನ 3
--------------
ವಿದ್ಯಾಪ್ರಸನ್ನತೀರ್ಥರು
ಪಾಹಿಮಾಂ ಪರಮೇಶ ಪಾಹಿಪನ್ನಗಭೂಷ ಪಾಹಿಕೈಲಾಸವಾಸ ಪ ಸ್ವಾಮಿ ಗಿರಿಜಾನಾಥ ಸಮರ ವಿಜಯ ತ್ರಿಣೇತ್ರ ಸುಜನ ವಿನುತ ಕಾಮಿತಾರ್ಥ ಪ್ರದಾತ ಕ್ಷೇಮತರ ಸುಚರಿತ್ರ ಸಾಮಗಜ ವದನ ತಾತರಾಮೇಶ ಕೇಶಪುನೀತ ಪ್ರಖ್ಯಾತ 1 ಕಾಲ ಭಾಳಾಕ್ಷಭಯ ಸಂಹಾರ ಜನಸಾರ ಶೂಲಧರ ಕರುಣಾಕರ ಶೀಲವರಗುಣ ಸುಂದರ ಹರಪಾಶ ಭಯವಶಂಕರ ಓಂಕಾರ 2 ಬಲಸಾಕಾರತ ವಿಶಾಲ ಏಕಮಯ ತ್ರಿಗುಣದಿಂದ ಖಿಲಲೋಕ ವಿಸೂತ್ರ ಜಾಲ ಸಾಕೆನ್ನ ಭವದಳಲ ಶೋಕವನು ನೀಕೇಳದೇಕೆ ಈ ಚೇಷ್ಟೆಬಹಳ ಕಾಲ ಮೂಕಾಂಬಿಕಾಂಬಲೋಲ3 ನಾಗವಾಹನ ನಮಿತನೆ ಯೋಗಮಾಯಾತೀತನೆ ಸಾಗರಾಂಬರದೊಡೆಯನೆ ಭಾಗವತ ಭಾಗಚಂದಿರಧರನೆ ಹರನೆ 4 ಧರಣಿಯೊಳಗೆ ವಿಶೇಷತರ ಗೌಜದೊಳುವಾಸ ವರಋಷಿ ಸ್ಥಾಪನೇಶ ಸರಸಕೀರ್ತಿ ವಿಲಾಸ ಸ್ಮರಹರ ಸುರಾಧ್ಯಕ್ಷ ದುರಳ ದಾನವ ವಿನಾಶ ದುರಿತಹರ ನಿರ್ದೋಶ ಧರಣಿ ಸುರಜನರಕ್ಷ ಕರಿಚರ್ಮಧರಮಹೇಶ ಉರಗರಾಜ ವಿಭೂಷವರ ಗುರು ವಿರೂಪಾಕ್ಷ ಪುರಮಥನ ಗೌತಮೇಶ 5
--------------
ಕವಿ ಪರಮದೇವದಾಸರು
ಪ್ರಾಚೀನ ಕರ್ಮವಿದು ಬಿಡಲರಿಯದುಯೋಚನೆಯ ಮಾಡಿ ಬಳಲುವುದೇಕೆ ಮನುಜ ಪ ಕೌಪೀನ ಬಿಡಿಸಲಿಲ್ಲ ಹರಿಯು 1 ಲೋಕಾದಿಲೋಕಗಳ ಚರಿಸುವ ರವಿರಥಕೆಏಕಗಾಲಿಯು ಏಳುಕುದುರೆಗಳ ಕಟ್ಟಿಲೋಕಲೋಕಗಳನೆಲ್ಲ ಚರಿಸುವ ಅರುಣನಿಗೆಬೇಕೆಂದು ಚರಣಗಳ ಕೊಡಲಿಲ್ಲ ಹರಿಯು 2 ಸಾಸಿರ ನಾಮದ ಒಡೆಯಾದಿಕೇಶವನಬೇಸರಿಸದೆ ಹೆಗಲ ಮೇಲಿರಿಸಿಕೊಂಡುಆಕಾಶ ಮಾರ್ಗದಲಿ ಚರಿಸುವ ಗರುಡನಿಗೆನಾಸಿಕದ ಕೊನೆಡೊಂಕು ತಿದ್ದಲಿಲ್ಲ ಹರಿಯು 3
--------------
ಕನಕದಾಸ
ಪ್ರಾಣೇಶನೆನ್ನೊಳಗೆ ಕೇಣವಾಂತಿಹನೇಕೆ ಗೋಣಬಿಗಿವಂತಾಗೆ ನಾಣದೇಕೆ ಇಲ್ಲದುದನಿವನೊಳಾಂ ಸೊಲ್ಲಿಸಿದೆನೇನಮ್ಮ ಕಲ್ಲೆದೆಯಿದೇವೆಳ್ವೆ ನಲ್ಲನಿವಗೆ ಕಂಡಸುದ್ದಿಯ ಪೇಳೆ ಕೆಂಡದಂತಾಗುವರೆ ಕಂಡುದಿಲ್ಲಕ್ಕಟೀ ಭಂಡತನವ ನ್ಯಾಯವನು ಸೂಚಿಸಲು ನೋಯುವಂತಾಡುವರೆ ಜಾಯೆಯೊಳಗೀತೆರದನ್ಯಾಯಮರರೆ ಕಪಟನಾಟಕ ಸೂತ್ರಧಾರನಿವನೆ ಸುಪವಿತ್ರ ಕೇಳೆನ್ನ ಪ್ರಾಣಸಖನೆ ತಪನವಂಶಾಬ್ಧಿ ರಾಕೇಂದುವಿವನೆ ವಿಪುಲ ಶೇಷಾದ್ರೀಶನೆನಿಪ ವರನೆ
--------------
ನಂಜನಗೂಡು ತಿರುಮಲಾಂಬಾ
ಬರಿದಿದೇಕೆಲೋ ನಿನ್ನಂತರಿರವು ಸಿರಿಯರರಸ ಅರಿಯನೇನೆಲೋ ಪ ಮರೆಯ ಮೋಸದಿ ಕುಕ್ಕಲು ಮೀನ ಹರಿವ ಉದಕದಿ ಬಕನು ಮೌನ ಧರಿಸಿದಂದದಿ ಪರಮಮೌನ ಧರಿಸಿ ಕುಳಿತು ಮರುಳುಗೊಳಿಸಿ ಪರರ ಕೊರಳ ಮುರಿವ ದುರುಳತನದ ಕೃತಿಗೆ ಹರಿಯು ಒಲಿಯುವನೇನು ಮರುಳೆ1 ಕಪಟ ನೀಗದೆ ಹುಚ್ಚು ಬಿಡದೆ ಗುಪಿತ ತಿಳಿಸದೆ ಮುಚ್ಚಿ ಕಣ್ಣು ತಪಸಿಯಂದದಿ ಕುಪಿತ ಮಾನಿಸನಾಗಿ ಕುಳಿತು ತಪಸಿಯಂತೆ ತೋರಿ ಜನರ ಅಪಾಯಮಾಳ್ಪ ಕಪಟವೇಷಕೆ ಸುಫಲ ದೊರೆಯುವುದೇನು ಮರುಳೆ 2 ಉದಯದೇಳುತ ಓಡಿ ಹೋಗಿ ನದಿಯ ಮುಳುಗುತ ತೀಡಿಗಂಧ ಹದದಿ ಬರೆಯುತ ವಿಧವಿಧಮಂತ್ರೊದರಿ ಇತರರ ಸದನ ಮುರಿದು ಸತಿಯ ಸುತರ ಮುದದಿ ಪೊರೆವ ಅಧಮ ವ್ರತಕೆ ಸದಮಲಾಂಗೊಲಿವನೆ ಮರುಳೆ 3 ಕಪಟ ನೀಗದೆ ಜಟೆಯ ಬೆಳಸಿನ್ನು ಚಪಲತನದಿಂ ದುಟ್ಟು ಕೌಪೀನ ನಿಟಿಲದಲ್ಲಿ ಭಸ್ಮಧರಿಸಿ ನಟಿಸಿ ಸಾಧುವರ್ತನದಿಂ ದ್ಹೊಟ್ಟೆ ಹೊರೆವ ಭ್ರಷ್ಟತನಕೆ ಕೆಟ್ಟ ಬವಣಳಿಯುವುದೆ ಮರುಳೆ 4 ತತ್ವದರ್ಥವ ಬೋಧಿಸುತ್ತ ಭೃತ್ಯ ಸಮೂಹವ ಸಂಪಾದಿಸುತ್ತ ನಿತ್ಯಸತ್ಯವ ವಿತ್ತದಾಸೆಗುತ್ತರಿಸುವಸತ್ಯಭ್ರಷ್ಟ ವರ್ತನಕೆ ಮುಕ್ತಿದಾಯಕ ಸಿರಿಯರಾಮ ಮುಕ್ತಿಸುಖ ನೀಡುವನೆ ಮರುಳೆ 5
--------------
ರಾಮದಾಸರು
ಬರಿದೆ ಚಿಂತಿಸಿ ನೀನು ಬಳಲುವದೇಕೆ ಮನವೆ ಹರಿನಾಮ ಸ್ಮರಣೆಯು ಹರುಷದಲಿ ಸ್ಮರಿಸಿ ಧರ್ಮಾರ್ಥ ಕಾಮ ವರಮೋಕ್ಷ ಫಲಗಳು ಕರುಣಾ ಕಟಾಕ್ಷದಿಂದ ಶ್ರೀಧರ ನಿರುತ ಕೊಡುವ ಪ ಅರಿಷಡ್ವರ್ಗಕೆ ಸಿಲ್ಕಿ ಅರಿಯದೆ ಭವಸಾಗರದೊಳು ಮುಣುಗಿ ಮೈಮರೆದು ಶ್ರೀನರಹರಿ ಶರಣರ ಪೊರೆವ ಬಿರುದುಳ್ಳಂಥ ಗರುಡವಾಹನ ಸಿರಿಯರಸ ಪರಮಾತ್ಮನ ಕಮಲ ಅನುದಿನ 1 ನೆಚ್ಚಿ ನೀ ಮಂದಾಂಧನಾಗಿ ಅಂದು ಪ್ರಹ್ಲಾದ ಪರಮಾನಂದದಿ ಕರೆಯಲು ದ್ವಂದ್ವರೂಪತಾಳಿ ಬಂದು ಕಾಯಿದಾ ವೃಂದಾರ ಕೇಂದ್ರನುತ ಮಂದರಧರ ಮುಚುಕುಂದ ವರದನ್ನ ಸಲಹೆಂದು ಮೊರೆಯ ಹೋಗದೆ 2 ನರಜನ್ಮ ತಾಳಿ ಸುಖಸ್ಥಿರ ಮಾರ್ಗ ಕಾಣದೆ ಸತ್ಪುರುಷರ ಜರಿದು ಗರ್ವ ಭರಿತನಾಗಿ ಮುರನರಕಾಂತಕ ಮುಕ್ತಿದಾಯಕ ಶುಭಕರ ಸ್ಮರಜನಕ ಶ್ರೀಧರ ಮಾಧವ ತ್ವರದಿ ರಕ್ಷಿಸೋಯನ್ನ ಹರಿಸರ್ವೋತ್ತಮ ನೆನದೆ 3
--------------
ಹೆನ್ನೆರಂಗದಾಸರು
ಬರೇ ವಾಚಾಭಿಮಾನವಿದೇಕೆ | ಹರಿ ಲೀಲಾಮೃತ ಸೇವಿಸಲಿಕ್ಕೆ ಪಸಂಸ್ಕøತ ವಂದ್ಯ ಪ್ರಾಕೃತ ನಿಂದ್ಯ |ಸುಕೃತಿಗಳಾಡುದೇ ಕುಂದಾ1 ಕನ್ನಡ ನುಡಿಯೆಂದ್ಹಳಿಯಬೇಡಿ | ಕನ್ನಡಿ ದರ್ಪಣವಲ್ಲವೆ ನೋಡಿ 2 ಕರಿದು ಬಿಳಿದು ಅವಾದರೇನು |ಎರಡಾಗದು ಕ್ಷೀರೆಂದೂ ತಾನು3 ಗುರುವರ ಮಹೀಪತಿ ಪ್ರಭುಚರಿತಾ |ಭರಿತಾದುದೇ ಪಾವನ ನುಡಿತಾ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಲ್ಲೆ ಬಲ್ಲೆನು ಕೃಷ್ಣ ನಿನ್ನ ಮಹಿಮೇ ಪ ಗುಲ್ಲು ಮಾಡದೆ ಬೇಗ ನಿಲ್ಲೈಯ ಮನದಲಿ ಅ.ಪ ತಿರುಪೆ ಬೇಡಿದೆ ಯಾಕೆ ಪರಮ ಪುರುಷನು ಎನಿಸಿ ತುರುವ ಕಾಯ್ದೇಕೆ ಪರಿವಾರ ಸುರರಿರಲು ಕರಡಿಕಪಿಗಳ ಸೈನ್ಯ ನೆರವು ಯಾತಕೆ ನಿನಗೆ ಚರಿತೆ ಸೋಜಿಗವಯ್ಯಾ 1 ಅಷ್ಟಕರ್ತನಿಗೇಕೆ ಸಂತತವು ಜಪತಪವು ಪಟ್ಟ ಮಹಿಷಿಯರಿರಲು ಕುಬ್ಜೆಕೂಡಿದೆ ಯಾಕೆ ಉಟ್ಟು ಸೀರೆಯ ಖಳರ ವಂಚಿಸಿದ ಬಹು ಶೂರ ನಿಷ್ಟೆಯಿಂದಲಿ ಬಲಿಯ ಬಾಗಿಲನು ಕಾಯುವನೆ 2 ಬೆಣ್ಣೆ ಕಳ್ಳರ ಗುರುವೆ ಹೆಣ್ಣು ಕದ್ದವ ನೀನು ಮಣ್ಣು ಮಾಡಿದೆ ಕುಲವ ಯೆಂಜಲುಂಡವ ದೊರೆಯೆ ಅಣ್ಣ ತಮ್ಮಂದಿರಲಿ ಕಲಹವನು ವÀಡ್ಡುತಲಿ ನುಣ್ಣ ಗೆಲ್ಲರ ಮಾಡಿ ನಿಷ್ಕಪಟಿಯೆನಿಸಿದೆಯೊ 3 ಅನ್ಯರಿಗೆ ಉಪಕಾರಿ ಅನನ್ಯರಾ ಶತ್ರುವು ಭವ ಭ್ರಷ್ಟತ್ವ ನೀಡುವೆಯೊ ನಿನ್ನಾಳ ನಿಖಿಳರಿಗು ತೊರ್ಗೊಡದ ಬಹುಗೂಢ ಕಣ್ಣು ಕೈ ಕಾಲೆಲ್ಲ ಸಮವೇನೆ ನಿನಗಯ್ಯ 4 ದೊಡ್ಡ ದೇವನು ಎನಿಸಿ ಗುಡ್ಡವೇತಕೆ ಹೊಕ್ಕೆ ಗಿಡ್ಡರೂಪವ ತೋರಿ ದೊಡ್ಡದಾಗುತ ಎಂದು ಅಡ್ಡಿಯಿಲ್ಲದೆ ಬಲಿಯ ಹೆಡ್ಡನೆನಿಸಲು ಬಹುದೆ ಗುಡ್ಡೆಯಿಲ್ಲದೆ ಚರಿಪ ವಡಲು ಬಗೆದಾ ಘೋರ 5 ಪೂಡವಿಗೊಡೆಯನು ಎನಿಸಿ ಹಡೆದ ಮಾತೆಯ ಕಡಿದೆ ಅಡವಿ ಬೇರನು ತಿಂದೆ ಕಡಲೊಳಗೆ ಸಂಚರಿಪೆ ಮಡದಿಯನು ಕಳಕೊಂಡು ಹುಡುಕುತಲಿ ತಿರುಗಿದೆಯೋ ಸಡಗರದಿ ಹಯವೇರಿ ಕೆಡುಕು ಕಡಿಯುವೆಯಂತೆ 6 ನಾಮಕುಲಗೋತ್ರಗಳ ನೆಲೆಯಕಂಡವರಿಲ್ಲ ಸಾಮಸರಿ ನಿರ್ಗುಣವು ಪೂರ್ಣಗುಣ ನೀನಂತೆ ವಾಮನೀನಾವರಿಸಿ ವಳ ಹೊರಗೆ ಲೋಕಗಳ ನೇಮದಿಂ ಕಾಯುವನು ಪುಡುಕಿದರು ಸಿಗೆಯೇಕೇ 7 ಮಂಗಳಾಂಗನು ಅಂತೆ ಲಿಂಗವರ್ಜಿತನಂತೆ ಶೃಂಗಾರರಸನಂತೆ ಭಂಗರಹಿತನು ಅಂತೆ ಲಿಂಗವೆರಡೂ ಅಂತೆ ಸಿಸ್ಸಂಗ ನೀನಾಗಿ ಅಂಗದಲಿ ಅಂಗನೆಯ ಧರಿಸಿ ಮೆರೆಯುವೆಯೇಕೆ 8 ವೇದ ಬೋಧೆಯನಿತ್ತಗಾಧ ವರ್ಜಿತ ಮಹಿಮ ಮೋದ ಮಯ ನೀ ನಿನ್ನ ನಾದಿನಿಯ ಬೆರೆದೇಕೆ ಸಾಧುಗುಣಪೂರ್ಣ ಭಾನುವನು ಮರೆ ಮಾಡಿ ಮೈದುನನ ಸಲಹಿದ್ದು ಬಹುನ್ಯಾಯ ವೇನೈಯ್ಯ 9 ಹಾಲು ಕೊಟ್ಟವಳನ್ನು ಲೀಲೆಯಿಂದಲಿ ಕೊಂದೆ ಶೀಲಸತಿಯಳ ಬೆರದು ವ್ರತವಳಿದು ಪರವಿತ್ತೆ ಕಾಲನಾಮಕನಾಗಿ ಜಗವೆಲ್ಲ ನುಂಗುವನೆ ಹೇಳುವರು ಕೇಳುವರು ನಿನಗಿಲ್ಲವೇನೈಯ್ಯಾ 10 ಏನೆಂದು ವರ್ಣಿಸಲಿ ನಿನ್ನಯ ವಗತನವ ಸತಿ ಚಂಚಲೆಯು ಮಗಳ ಮಾರ್ಗವುಡೊಂಕು ಮಾನಾಭಿಮಾನಗಳ ಬಿಟ್ಟವರೆ ಪರಿವಾರ ನೀನಿರದಠಾವಿಲ್ಲ ನಿನಗಿಲ್ಲ ತುದಿಮೊದಲು 11 ಸರ್ವಜ್ಞನಾದವಗೆ ಸಾಂದೀಪ ಗುರುವೇಕೆ ಸರ್ವ ನಾಮವು ಕೂಡೆ ನಾಮಕರಣವು ಏಕೆ ಸರ್ವಸ್ವಾಮಿಯು ಎನಿಸಿ ಸಾರಥಿಯು ಆದೇಕೆ ಸರ್ವ ತೋಮುಖ ನೀನು ಜಗವಿಲಕ್ಷಣ ನೈಯ್ಯಾ12 ಒಬ್ಬರಲಿ ನೀಜನಿಸಿ ಮತ್ತೊಬ್ಬರಲಿ ನೀ ಬೆಳೆದೆ ತಬ್ಬಲಿಯೆ ವಾಸ್ತವದಿ ಉಬ್ಬಿಳಿತವರ್ಜಿತವೆ ಅಬ್ಬಬ್ಬ ಬ್ರಹ್ಮಾಂಡ ಹಬ್ಬಿ ನಡೆಸುವ ಧೀರ ಕೊಬ್ಬಿದಾ ಖಳಗಂಜಿ ಮಧುರೆಯನು ತೊರೆದೇಕೊ 13 ಮೇದಿನಿಗೆ ನೀ ಸ್ವಾಮಿ ಮದುವಾದೆ ಮಗಳನ್ನು ಬೈದವಗೆ ಗತಿಯಿತ್ತೆ ಭಕ್ತರಿಗೆ ಕೂಳಿಲ್ಲ ಮೋದ ಮಯ ನುಂಡುಣಿಸಿ ನಿರ್ಲೇಪನೀ ನಿರ್ಪೆ ವಿದುರ ನೌತಣ ಕೊಂಡೆ ಕನ್ಯೆಯಲಿ ನೀ ಬಂದೆ 14 ಜಯ ಮುನಿ ಹೃದಯದಲಿ ವಾಯುವಿನಂತರ ದಿರ್ಪ ಶ್ರೀಯರಸ ತಾಂಡವ ಕೃಷ್ಣವಿಠಲನೆ ನೀನು ಮಾಯಾವಿ ತೋರಗೊಡೆ ನಿಜಮರ್ಮಖಳಜನಕೆ ಜೀಯನೆ ಮೊರೆಹೊಕ್ಕೆ ನಿನ್ನಿರವ ತೋರೈಯ್ಯಾ 15
--------------
ಕೃಷ್ಣವಿಠಲದಾಸರು
ಬಾಲಗೆ ಪಟ್ಟಗಟ್ಟಿಸು ಪರಿವಾರವ ಬಾಳಿಸು ಮುನ್ನಿನಂದದಲಿ ಸುತನ ಮುಂದಿಟ್ಟು 151 ಇಕ್ಷ್ವಾಕುಕುಲತಿಲಕನೆ ನಿನ್ನ ರಾಜ್ಯವ ಒಪ್ಪಿಸಿಕೊಳಲೆನಗಳವೆ ಪುತ್ರಗೆ ಪಟ್ಟವ ಕಟ್ಟುವುದೇನು ಕಾರಣ ವಿಸ್ತಾರವಾಗಿ ಹೇಳೆಂದ 152 ಕೇಳಿದೆ ಕರ್ಣದಿ ಹೀನದ ವಾಕ್ಯವ ಜಾರತ್ವ ಬಂದಿತಾತ್ಮಜೆಗೆ ಮಾಡುವೆನು 153 ಅಮರಲೋಕಕ್ಕೆ ವಶವಹರು ಭಾಧೆಗೆ ಗುರಿಯಾಗಿ 154 ವ್ಯರ್ಥವಾಯಿತು ಎನ್ನ ಬದುಕು ಮಾಡಿಕೊಂಬೆನೆಂದ 155 ಕಥೆಯ ಕೇಳರಿಯಾ ಕುಂದನೊದ್ದವರಾರು ಜಗದಿ 156 ಮೀರಿದರಾರೊ ಕಲ್ಪನೆಯ 157 ಸರ್ವಾಂಗದಿಂದ ಸುಂದರಿಯು ಸತಿ ಲಾಂಛನೆಯ ತಾಳಿದನು 158 ಸೆರೆತಂದ ತಾರಾದೇವಿಯನು ಪಾಡೇನು ಭೂಪಾಲ 159 ಕುಮಾರತಿಯ ಮಂದಿರಕೆ ಅರುಹಿದರಾರು ನಿನ್ನೊಡನೆ 160 ನಿಲ್ಲಿಸಿದ ಪ್ರಧಾನಿ ನಡೆತಂದ ಸೆಜ್ಜೆವಾಹರಿಗೆ 161 ಮಲಿನವನುಟ್ಟ ಮಾನಿನಿಯ ಸೆಳೆವಿಡಿದೆತ್ತಿದ ರಾಯ 162 ಮಾಜುವದೇಕೆ ಎನ್ನೊಡನೆ ಬ್ರಾಹ್ಮರು ಮೆಚ್ಚುವಂತೆ 163 ಸುರರೊ ನರರೊ ಕಿನ್ನರರೊ ಗಿರಿಜೇಶನಾಣೆ ಹೇಳೆಂದ 164 ವಿಶ್ವಲೋಚನನಂಘ್ರಿಯಾಣೆ 165 ಸರಿಯ ನಾರಿಯರು ಉರಿವ ಪಾವಕನ 166 ಬ್ರಾಹ್ಮರಿಗ್ಯೊಗ್ಯವಹುದೆ ಬರುವುದು ನಿಮ್ಮ ಕುಲಕೆ 167 ಪಾತಕಿಯೆಂದು ತಿಳಿದು ಬರುವುದೆ ಉಚಿತವು 168 ಮುನಿದು ಅರಣ್ಯಕ್ಹೋಗುವರೆ ವರಿಸು ನಿನಗೆ ಉತ್ತುಮವುಳ್ಳ ಪುರಷಗೆ ಧಾರೆಯನೆರೆವೆನು 169 ಪಾತಕ ಬರಿದೆ ನಿಂದ್ಯವನು (ಅ) ಬಂದೊದಗಿದ ಮೇಲೆ 170 ತೂಪಿರಿದು ಮಂತರಿಸಿ ಘೋರ ಕಾನನಕೆ 171 ಗುರಿಮಾಡಿ ನಾರಿ ಕಂಬನಿದುಂಬಿದಳು 172 ವಶವಲ್ಲದಂಥ ಮೂಗುತಿಯ ಬಿಸುಸುಯ್ವದೇತಕೆ ತಾಯೆ 173 ಕುಮಾರಿಯ ಮೇಲೆ ಸ್ನೇಹದಲಿ ವಿಧಿಯೆಂದ್ಹೊರಳಿದಳು 174 ಅಳುವುದೇತಕೆ ತಾಯೆ ನೀನು ಕಲ್ಮಾಡು ನಿನ್ನ ದೇಹವನು 175 ಹೇಳಿದನೇಕಾಂತದಲಿ ಉದಯಕೆ ಬನ್ನಿರೆಂದ 176 ಕರೆಸಿದನಾಗ ಕಿಂಕರರ ಪ್ರಧಾನಿಯು ತರಿಸಿದನೊಜ್ರದಂದಣವ ಬನ್ನಿರಿ ಶೀಘ್ರದಿಂದ 177 ಮಾಡಿರಿಮನಕೆ ಬಂದುದನು ನಾನಿಡುವೆ ರಾಯನ ಮುಂದೆ 178 ಮೇಲೆ ಪನ್ನಂಗ ಕವಿದವು ಶೀಘ್ರದಿ ಪೊತ್ತು ನಡೆದರು 179 ಬಸವಳಿದಳು ಶ್ರೀ ಹರಿಯ ಸ್ತುತಿಸುತಿರ್ದಳೆ ತನ್ನ ಮನದಿ 180 ಕಾಲನ ವಶಕೆÉ ಒಪ್ಪಿಸದೆ ಪಾದಾರವಿಂದೊಳಿರಿಸು 181 ಭಾರವನ್ಹೊತ್ತು ಬಳಲಿ ಬಾಯಾರುತ್ತ ಏರುತ್ತ ಘಟ್ಟ ಬೆಟ್ಟಗಳ ಬಾಲೆಯ ತಂದಿಳುಹಿದರು 182 ಬಾ ಬಳಲಿದೆಯೆನುತ ರಂಭೆಯನುಪಚರಿಸಿದರು 183 ತೊಪ್ಪಲ ಮೇಲ್ಹರಹಿದರು ಕತ್ತಿಗೆ ಮಯ್ಯನಿಕ್ಕಿದಳು 184 ಕಂಬುಚಕ್ರಧಾರಿ ವೈಕುಂಠವಾಸಗೆ ವಂದಿಸಿದಳು ತನ್ನ ಮನದಿ ಸ್ತುತಿಯ ಮಾಡಿದಳು 185 ಅರಣ್ಯದಲ್ಲಿ ತನ್ನ ನೆನೆವ ಕುಮಾರಿಗೆ ಕಾರುಣ್ಯದಿಂದೊದಗಿದನು ನಿದ್ರೆ ಕವಿದವು 186 ಕಾಮಧೇನು ಕಲ್ಪವೃಕ್ಷ ಚಿಂತಾಮಣಿ ಭಕ್ತರಿಗೊಜ್ರಪಂಜರನೆ ದೂತರ ಮನವ 187 ಯೋಚಿಸಿ ತಮ್ಮ ಮನದಿ ಪಾತಕ ಎತ್ತಿದಾಯುಧವನಿಳುಹಿದರು 188 ಒಬ್ಬರೊಬ್ಬರು ಮಾತನಾಡಿ ಉರ್ವೀಶಗೊಯ್ದು ಒಪ್ಪಿಸುವ 189 ವಾರಿಜಗಂಧಿಯ ಬಿಟ್ಟು ರಾಯಗೆ ಗುರುತ ತೋರಿದರು 190 ತಪ್ಪದೆ ರಾಯನೋಲಗಕೆ ಚಿತ್ತೈಸು ಜೀಯವಧಾನ 191 ತಂದೆವು ಮುದ್ರೆಯುಂಗುರವ ಮನದಲಿ ಮರುಗಿದನು 192 ಅಂಜೂರ ಕೊಯ್ದು ಕೊಟ್ಟಂತೆ ಬೆಂದೊಡಲನೆಂತು ಪೊರೆಯಲಿ 193 ಕೆಂಡದೊಳಾಜ್ಯ ಬಿದ್ದಂತೆ ಬೆಂದರು ಶೋಕಾಗ್ನಿಯಿಂದ 194 ಮೇಲೆ ಸ್ನೇಹದಲಿ ತಲೆಯೆತ್ತಿದವಬ್ಜ ಬಂಧುಗಳು 195 ಹಸಿದ ಹೆಬ್ಬುಲಿಗೆ 196 ಬೆದರುವಳು ವ್ಯಾಘ್ರದಟ್ಟುಳಿಗೆ ಮರಳಿ ಧೈರ್ಯವನೆ ಮಾಡುವಳು 197 ಮಾಯಪಾಶಕೆ ಗುರಿಮಾಡಿ ಮುಕ್ತಿ ಸಾಧನವು 198
--------------
ಹೆಳವನಕಟ್ಟೆ ಗಿರಿಯಮ್ಮ
ಬಿಡಬೇಕು ಸ್ತ್ರೀಸಂಗ ಬ್ರಹ್ಮನಾಗುದಕೆಬಿಡದಿರಲು ಕೆಡುತಿಹನು ಬಿಡೆಯವಿಲ್ಲಯ್ಯ ಪ ಕಣ್ಣುಗಳು ತಿರುಹಲಿಕೆ ಕಾಲುಕೈಯುಡುಗುವುದುನುಣ್ಣನೆಯ ಗಂಟೊಲಿಯೆ ಎದೆಗುಂದುವುದು ಅಯ್ಯ ಸಣ್ಣ ಹಲ್ಲನು ಕಾಣೆ ಸರಿವುದು ಶಿವಧ್ಯಾನನುಣ್ಣನೆಯ ಮುಖಕ್ಕೆ ನುಗ್ಗಹುದು ದೃಢ ಚಿತ್ತ 1 ಕಿರುನಗೆಯ ಕಾಣಲು ಕಳಚಿಹೋಹುದು ಬುದ್ಧಿಸೆರಗು ಸಡಿಲಲು ಸೈರಣೆಯು ಅಡಗುವುದು ಅಯ್ಯತಿರುಗಾಡುತಿರಲು ತಿಳಿವಳಿಕೆ ಹಾರುವುದು ಮು-ಕುರ ಮುಖ ಕಾಣಲು ಮುಳುಗುವುದು ಅರಿವು ಅಯ್ಯ 2 ಗಾಳಿಯದು ಹಾಯಲಿಕೆ ಗತವಹುದು ಅನುಭವವುಬೀಳೆ ಅವರ ನೆರಳು ಬಯಲಹುದು ಬೋಧನೆಯುಬಾಲ ನುಡಿಗಳ ಕೇಳೆ ಬೀಳುವುದು ಬಲ್ಲವಿಕೆಬಾಲೆಯರ ಸಂಗವದು ಭವದ ತಿರುಗಣೆಯಯ್ಯ 3 ನವನೀತ ಪುರುಷನು ನಾರಿಯೇ ಅಗ್ನಿಯುನವನೀತ ಕರಗದೆ ಅಗ್ನಿಯೆದುರಿನಲಿಯುವತಿ ಸನಿಹದಲಿರಲು ಎಲ್ಲಿ ಬ್ರಹ್ಮವು ನಿನಗೆಶಿವನಾಣೆ ಸತ್ಯವಿದು ಸುಳ್ಳೆಂದಿಗೂ ಅಲ್ಲ 4 ಪಾತಕದ ಬೊಂಬೆಯು ಫಣಿವೇಣಿಯರ ರೂಪಘಾತಕವು ತಾನಹುದು ಯೋಗಗಳಿಗೆಯಲಯ್ಯಮಾತು ಬಹಳವದೇಕೆ ಮಹಿಳೆಯನು ತ್ಯಜಿಸಿದರೆದಾತ ಚಿದಾನಂದನು ತಾನೆ ಅಹನಯ್ಯ5
--------------
ಚಿದಾನಂದ ಅವಧೂತರು
ಬಿನ್ನಪವ ಕೇಳು ಬಿನ್ನಪವ ಕೇಳೈಪ್ರಸನ್ನ ವೆಂಕಟರಮಣ ಪತೊಳಲಿದರು ಬಹುಭವದಿ ತೊಡರಿ ಬಂದಿಹ ಕರ್ಮತೊಲಗದೆ ಬಳಲಿಸುತಲಿಹುದು ಜಗದೀಶಸುಲಭ ಮಾರ್ಗವ ಕಾಣದಳಲುತಿರೆ ನೀನೆ ಕೃಪೆದಳೆದು ಗುರುರೂಪದಿಂ ಬಂದೆ ನನ್ನೆಡೆಗೆ 1ಗೆದ್ದೆನೆ ಭವವ ಗುರು ಒದ್ದು ನೂಕಿದ ದುರಿತವಿದ್ದರೂ ನನಗೆ ಭಯವಿಲ್ಲೆನ್ನುತಿಹೆನುಬದ್ಧತೆಯು ಬಿಡಲಿಲ್ಲ ಮೋಹ ಸಡಿಲುವುದಿಲ್ಲನಿರ್ಧರದಿ ನಿಜವು ತಾ ನಿಲುಕದಿಹುದೀಶ 2ಕಂಡ ಭಯ ಕಾಡುವುದು ಷಂಡತನವೋ ನನ್ನಪಂಡಿತತ್ವಾಭಿಮಾನದ ಬಲವೊ ತಿಳಿಯೆಪುಂಡರೀಕಾಕ್ಷ ನನ್ನೊಲವಿಗಿದಿರೆನಿಸದಿದುದಿಂಡುಗೆಡೆದಿಹೆನೀಗ ದಯಮಾಡು ಸ್ವಾಮೀ 3ನೀನೊಲಿದು ನಿರ್ಣಯವು ನಿಲುಕದಿಹುದೇಕೆ ಬಲುಮಾನಾವಮಾನಗಳು ತೊಲಗದಿಹವೇಕೆಹೀನಕರ್ಮಂಗಳಲಿ ರುಚಿಗೆಡದೆುಹುದೇಕೆದೀನವತ್ಸಲನೆ ದಮೈಯ ನಂಬಿದೆನು 4ನಿನ್ನವನು ನಾನಾಗಿ ನಿನ್ನಿದಿರೆ ರಿಪುಗಳಿಂಬನ್ನಬಡಲೊದಗದಪವಾದವೆನಗೀಗನನ್ನ ಕರ್ಮವದೆಂಬೆನೇ ಸ್ವತಂತ್ರತೆಯುಂಟೆರನ್ನ ತಿರುಪತಿಯ ವೆಂಕಟ ನೀನೆ ಬಲ್ಲೆ 5ಓಂ ಸತ್ಯವಾಚೇ ನಮಃ
--------------
ತಿಮ್ಮಪ್ಪದಾಸರು
ಭಯದೂರ ಧರ್ಮಸಾರ ಭುವನಾಧಾರ ಪ. ಭಕ್ತಾರ್ತಿಭಂಜನ ಭವಪಾಶಮೋಚನ ದಮನ ನಿಕೇತನ ಸಾರಿ ಮೈದೋರು ಬಾ ಶ್ರೀರಮಾಮನೋಹರ 1 ಸಂದಿಗ್ಧ ಸಮಯಂಗಳ್ ಬಂದಿರ್ಪವೇಳೆಯೊಳ್ ನೊಂದಿರ್ಪ ಭಜಕರೊಳ್ ಇಂದೇಕೆ ಸಂದೆಗಂ ಪೇಳ್ ಇಂದಿರಾಮನೋಹರ ನಂದನಕುಮಾರ 2 ಶ್ರೀನಾಥ ನಿನ್ನಂಘ್ರಿಯೊಳ್ ಅನ್ಯೂನ ಭಕ್ತಿಯಿರಲ್ ಮಾನಾಭಿಮಾನಂಗಳೇನೊಂದನೆಣಿಸದೆ ಜ್ಞಾನೋದಯಂ ತಾನಾಗೆ ಚಿದಾನಂದಮಪ್ಪುದೈ 3
--------------
ನಂಜನಗೂಡು ತಿರುಮಲಾಂಬಾ
ಮನವು ಕರಗದೇನೋ ಸಿರಿಹರಿ ಮುನಿಸದೇಕೆ ಪೇಳೋ ಪ ತನು ಮನ ಧನಗಳ ನಿನಗೊಪ್ಪಿಸುತ್ತಲಿ ಮುನಿವರರೊಲು ನಿನ್ನ ನೆನೆಯಲಿಲ್ಲವುಯೆಂದು ಅ.ಪ ಬಾಲತನದೆ ನಿನ್ನ ನೆನೆಯದೆ ಕಾಲಕಳೆದೆ ಯೌವನದೊಳು ಲೋಲುಪನಾದೆನ್ನ ಕಾಲದೂತರು ಬಂದು ನೂಲಿಂದಚಿಳೆದರೂ 1 ಜಗವು ಚಿರವೆಂದು ಸತತವು ಬಗೆದು ಭ್ರಾಂತನಾದೆನ ಅಗಣಿತ ನೀಲಮಣಿ | ಖಗಪತಿವಾಹನ [ಪೊರೆಯಲಿನ್ನು] 2 ಗಂಗಾಧರ ರಂಗಾ ನೀನೆನ್ನಂತರಂಗದೆ ನಿಲಲಿನ್ನು3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಾರಮಣಾ ಹರಿ ಗೋವಿಂದಾ ಬಾರೋ ಕೊಂಡಾಡಿ ಪಡೆವೆನಾನಂದ ಪ ನಾರದಾದಿ ಮುನಿ ಬೃಂದಾನಂದ ಬಾರೋ ಭಕ್ತಕುಮುದೇಂದು ಮುಕುಂದಾ ಅ.ಪ ನಾನಾ ಜನುಮಗಳೊಳಗುದಿಸಿದೆವಯ್ಯ ಏನೆಂದು ಪೇಳಲಿ ನಿನಗೆ ಜೀಯ ನೀನೆನಗಿತ್ತಾ ತನುಗಳನಳೆಯಲು ಏನಪೇಳಲೈ ಭೂಮಿಗೆ ನಾಲ್ಮಡಿ ಸಾನುರಾಗದಿ ಜನನಿಯಿತ್ತಾ ಘೃತ ಪಾನಕ್ಷೀರ ವಾರಿಧಿಗಿಮ್ಮಡಿಯೋಳ್ ಬಾ 1 ನೋಡಿ | ಮನಕರಗದೆ ರುಕುಮಿಣಿ ರಮಣಾ ಮೃಡ ವಂದಿತ ಸರಸಿಜ ಚರಣಾ ಪಾಡೀ ಕೊಂಡಾಡುತಿರ ದೇಕೆ ನಿಷ್ಕರುಣಾ ಬೇಡಿದರ್ಗೆ ಕೈನೀಡುತೆ ದಾನವ ಮಾಡಲಿಲ್ಲವದರಿಂದ ದರಿದ್ರತೆ ಪೀಡಿಸವೈ ನಾ [ಮಾಡಿದ] ಪಾತಕವಾರ್ಜಿಸಿ ಜನುಮಂಗಳ ಪಡೆದೆನೊ ಬಾ 2 ಸುನಾಮ ನಮಿಸುವೆ ಸುಗುಣ ವಿರಾಮ ಸನ್ನುತ ವರಮಾಧವ ಕೋಮಲಾಂಗ ಸೋಮಶೇಖರಾಧಿಪ ಸುಮಚರಣವ ನೋಳ್ಪೆನೋ ಬಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್