ಒಟ್ಟು 116 ಕಡೆಗಳಲ್ಲಿ , 40 ದಾಸರು , 113 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೇವ ದೇವ ದೇವ ದೇವ ದೇವಾದಿದೇವ| ಶ್ರೀ ದೇವನೇ ದೇವಾ|ಸಲಹೆನ್ನ ಸದಾ ಪ ವಸುಧಿಯ ತನುಭವ ತನುಗಿರಿ ಕುಲಿ|ಶಾ| ಮರರಿಗಡಿಗಡಿಗೆ ನೀ ಸಲಹುವೆ ಕರುಣದಿ| ಬಿಸರುಹ ಲೋಚನ ದೇವ ದೇವಾ| ಸುರತರು ದೇವದೇವ1 ನಗವರಧರ ಮೃಗಕುಲದಧಿಪತಿ| ವೈರಿಯ ಕುಲವರ ವರದನೇ ಕೇಶವಾ| ಉಡಗಣ ಪತಿಯನ ಪಡೆದನ ತನುಜೆಯ| ರಮಣನೆ ಮಹಿಪತಿ ನಂದನ ಜೀವನಾ| ಪೊಡವಿ ಮನೋಹರ ದೇವ ದೇವಾ 2
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದೇವಕಿಯ ಗರ್ಭದಲಿ ಲೋಕವಕಾವ ಕೃಷ್ಣನು ಬಂದು ನಂದನಠಾವಿನಲಿ ತಾ ಬೆಳೆದು ಗೋವನುಕಾವ ನೆವದಲಿ ಗೋಪಗೋಪೀಭಾವವನು ನೆಲೆಗೊಳಿಸಿ ದುಷ್ಟರಜೀವವನು ನೆರೆ ತೆಗೆದ ಹಾಗೆಮಾವ ಕಂಸಗೆ ಮುಕ್ತಿುತ್ತಾಮಾತೃ ಪಿತೃ ಬಂಧನವ ಬಿಡಿಸಿದಭಾಗವತವೂ ಲಾಲಿಸಿದನೂ ದೇವದೇವಾ 1ನಡೆಯಲುಪನಯನಾಖ್ಯ ಕರ್ಮವದೊಡನೆ ವಿದ್ಯವನೋದಿ ದುಷ್ಟರಬಡಿದು ಪತ್ನಿಯರೆಂಟುಮಂದಿಯಪಡೆದು ದ್ವಾರಕಿಯಲ್ಲಿ ಯಾದವರೊಡನೆ ಭೋಗಿಸಿ ಭೋಗಭಾಗ್ಯವತಡುಕಿದರಿಗಳ ತರಿದು ಕೌರವಪಡೆಯ ಮರ್ದಿಸಿ ಪಾಂಡವರನಾಪೊಡವಿಪಾಲರ ಮಾಡಿದಂಥಾಭಾಗವತವೂ ಲಾಲಿಸಿದನೂ ದೇವದೇವಾ 2ಪರಿಹರಿಸಿ ಭಾರವನು ಭೂಮಿಗೆಪರಮ ಭಕತರ ಸಲಹಿ ಕಥೆಯನುಹರಹಿ ಮುಂದಣ ಜನರು ಸಂಸ್ಕ øತಿಶರಧಿಯನ್ನಿದರಿಂದ ದಾಂಟುವತೆರನ ಮಾಡಿಯೆ ಕಾಯ್ದ ಕರುಣಾಶರಧಿ ತಿರುಪತಿ ವೆಂಕಟೇಶನೆನಿರುಪಮಾಮಿತ ಮಹಿಮ ನೀನೇಚರಿಸಿದಂಥಾ ಚಾರುತರವಹಭಾಗವತವೂ ಲಾಲಿಸಿದನೂ ದೇವದೇವಾ 3ಓಂ ಧೇನುಕಾಸುರ ಭಂಜನಾಯ ನಮಃ
--------------
ತಿಮ್ಮಪ್ಪದಾಸರು
ದೇವದೇವತಾಸ್ತುತಿ ಅಜಸುರಸನ್ನುತ ಸುಜನವಂದಿತ ಹರೇ ಭುಜಗ ಭೂಷಣ ಪ್ರಿಯ ಪ ಅತಿಶಯ ಕಾಮದಿ ಸತಿಯನಪಹರಿಸಿದ ಪತಿತ ರಾವಣನನು ಖತಿಯಲಿ ಕೊಂದೆ ನೀಂ 1 ಪರಿ ಪರಿಸಲು ವಾಲಿಯ ತರಿದೆಯೊ ಶರದಿಂದ 2 ದಶರಥನುದರದಿ ದಶರಥನಾಗಿಯು ಪಶುಪತಿ ಮಿತ್ರನೆ ಜನಿಸಿದೆ ಕರುಣದಿ 3 ಮಾನವ ಜಿತಾಸುರ ಮಾನವ ರೂಪನೆ ಪೊರೆ 4 ಧೇನುನಗರಪತಿ ದಾನವಖಂಡನ ಧ್ಯಾನ ಸ್ವರೂಪನೆ ಜ್ಞಾನವ ಪಾಲಿಸು 5
--------------
ಬೇಟೆರಾಯ ದೀಕ್ಷಿತರು
ದೇವದೇವತೆಗಳ ಸ್ತುತಿ ಅಂಬುಧಿಶಯನ ಪೀತಾಂಬರಧರ ಕಮಳಾಂಬಕ ಸಿರಿರಮಣ ನಂಬಿದ ಭಕ್ತರ ಬೆಂಬಿಡದಿಹನೆಂಬುದಕೆ ಸಹಜಗುಣ ಪ ಒರಲುತ್ತಾ ಸಭೆಗೆ ಬರಲು ಒತ್ತಿ ಮುದ್ದಿಸುತಿರಲು ಪೊರೆದೆಯೋ ಧ್ರುವನ1 ಹರಿನಾಮವನು ಬರೆಯೆ ವಿರಚಿಸೆ ಕೇಳದಿರೆ ದುರುಳಬಾಧಿಸೆ ಮಗನ ಮೂರ್ತಿ ವರವಿತ್ತು ಪೊರೆದೆಯೋ ಪ್ರಹ್ಲಾದನ 2 ಶಾಪವನೀಯ ಲಗಸ್ತ್ಯನಿಂದ್ರದ್ಯುಮ್ನ ಭೂಪತಿ ಗಜವಾಗಲು ಕೋಪದಿ ನೆಗಲ್ವಿಡಿಯೊ ಗುಪಿತದಿ ಮೊರೆಯಿಡಲು ಸೀಳ್ದು ಪೊರೆದೆಯೋ ಗಜವ 3 ಮರ್ಮವನರಿತು ಬರಲು ಅನ್ನವನೀಯೆನಲು ಪೊರೆದೆಯೋ ಪಾಂಡುವರ 4 ಹರಿವಾಸವರವ ಮಾಡಲು ನರಿಯೆ ಬಂದು ವರವಿತ್ತು ಪೊರೆದೆಯೋ ವೇಣುಗೋಪಾಲ 5
--------------
ಕವಿ ಪರಮದೇವದಾಸರು
ದೇವದೇವತೆಗಳ ಸ್ತುತಿ ವೀರನ ನೋಡಿರೈ ನರಮೃಗಾಕಾರನ ಪಾಡಿರೈ ಪ ಕಾರ್ಪರ ಋಷಿ ತಪಕೊಲಿದು ಅಶ್ವತ್ಥದಿ ಮೆರೆವಾ ಭಕುತರ ಪೊರೆವಾ ಅ.ಪ ದುರಿತ ತಿಮಿರಕೆ ಸವಿತ ವ್ರಾತ ಸೇವಿತ ತ್ವರಿತ ಮಧ್ಬಂಧು ಪೊರೆಯೊನೀನೆಂದು ಪ್ರಾರ್ಥಿಸುವರಿಗಭೀಷ್ಟಿಯಗರಿಯಲು ದೇವ ತರುಸ್ವಭಾವ 1 ಉಗ್ರನಾದರು ಭಕುತಾಗ್ರಣಿಗಳಿಗೆ ಅನುಗ್ರ ಒಲಿವನು ಶೀಘ್ರ ವಾಗ್ಧೇವಿಯರ ಸನಾಜ್ಞದಿ ನಮಿಸಿ ಪ್ರಹ್ಲಾದ ಸ್ತುತಿಸಲು ಒಲಿದ ಉಗ್ರವದನ ಶಾಲಿಗ್ರಾಮಗಳ ರೂಪದಲಿ ವೃ- ಭಾರ್ಗವಿ ಪ್ರಕಟನಾಗಿಹನ 2 ತೋರಿಸುವದಕೆ ಅಸುರನ ಮಥಿಸಿ ನೆಲಸಿಕರುಣದಿ ದಿವಿಜರೊಡೆಯನ3 ಪೋಪುದು ವೃಜಿನ ತಿಳಿವದು ಮುನ್ನ ಭಾನು ಕರ್ಕಾಟಸ್ಥಾನದಿ ಬರುವ ಕಾಲದಲಿ ತೀರ್ಥಗಳಲ್ಲಿ ಹೃದಯದಿ ಪೊಳಿವ 4 ತರುವರ ಸಂಸ್ಥಾ ಚರಿತ ತ್ರಿಗುಣಾತೀತ ಪದಯುಗಲ ಬಿಡದನುಗಾಲ ಸಾರಿ ಭಜಿಪರಿಗಪಾರ ಸೌಖ್ಯಗಳ ಗರಿವ ವಿಘ್ನವ ತರಿವ5
--------------
ಕಾರ್ಪರ ನರಹರಿದಾಸರು
ದೇವದೇವನಾ ಭಜಿಸು ಜಾನಕಿ ಪ್ರೇಮನಾ ಬಿಡದೆ ಇನ್ನು ಪ ಇಂದಿರೇಶನಾ ಸಕಲ ವಿಶ್ವನಾಥನಾ ಸುಂದರ ರೂಪನ ಸುಗುಣ ಸುಜನವಂದ್ಯನಾ ಸಿಂಧು ಶಯನನಾ ಚೆಲುವ ಶ್ರೀನಿವಾಸನಾ ಮಂದರಾದ್ರಿಯನೆ ಪೊತ್ತ ಮಹಿಮಾನಂದನ 1 ವಾರಿಜನಾಬನಾ ಘನ ವಾಸುಕಿಶಯನನಾ ನೀರಜ ನಯನನಾ ಕೃಷ್ಣಾ ನಿಗಮಗೋಚರನಾ ನವನೀತ ಚೋರನಾ ಪಾರಮಾರ್ಥಿಕ ಜ್ಞಾನದಲ್ಲಿ ಪ್ರಬಲವಾಗಿ ಮನವು ನಿಲ್ಲಿಸಿ2 ಪನ್ನಗ ಭೂಷಣನಾದ ಪಾರ್ವತೀಶನಾ ಮನ್ನಿಸಿ ಪೊರೆದನ ಮಹಾಮಹಿಮೆಯುಳ್ಳನಾ ಚಿನ್ಮಯ ರೂಪನಾ ಪರಮ ಚಿದ್ವಿಲಾಸನಾ ಹೆನ್ನ ತೀರನಿಲಯ ಸುಪ್ರಸನ್ನ 'ಹೆನ್ನ ವಿಠ್ಠಲ’ ನಾದ 3
--------------
ಹೆನ್ನೆರಂಗದಾಸರು
ದೇವದೇವನೆ ಓವುದೆಮ್ಮನು ಶ್ರೀವಧೂವರನೇ ಸಾವಧಾನದಿ ಭಾವಿಸೈ ವಸುದೇವ ಕುವರನೇ ಪ. ನೀಲಮೇಘಶ್ಯಾಮ ರಮಾಲೋಲ ಪಾಲಿಸೈ ಬಾಲಗೋಕುಲಬಾಲ ಶ್ರೀ ವನಮಾಲ ಪಾಲಿಸೈ 1 ಭೋಗಿಶಯನ ಯೋಗಗಮ್ಯ ಸಾಗರಸ್ಥಿತ ಬಾಗಿ ನಮಿಪೆವು ರಾಗದಿಂ ಪೊರೆ ವಾಗಗೋಚರ 2 ಘಳಿಲನೈತಹುದಿಳೆಯ ರಮಣ ತಳುವ ಬೇಡುವೈ ಎಳೆಯರಾವು ಚಲವನರಿಯೆವು ಒಲವನೆರೆವೆವೈ3 ದೇಶದೇಳ್ಗೆಯೊಳಾಸೆಯಿಂದಿಹ ದಾಸರೆಂದು ನೀಂ ಲೇಸ ಪಾಲಿಸು ಆಶೆ ಸಲ್ಲಿಸು ಶೇಷಗಿರೀಶನೇ4
--------------
ನಂಜನಗೂಡು ತಿರುಮಲಾಂಬಾ
ದೇವದೇವರ ದೇವ ಭಕ್ತ ಸಂಜೀವಿ ಮಹಾನುಭಾವ ಪ ದಶರಥ ಸುಕುಮಾರ ಜಾನಕೀವರ ಧೀರ ಅಸಮ ಸಾಹಸಿ ಕಪಿವೆರಸಿ ಲಂಕೆಯಪೊಕ್ಕ ಅಸುರರ ಕೊಂದ ಶ್ರೀ ರಾಮಾವತಾರ 1 ಯದುಕುಲದೊಳಗುದಿಸಿ ಮಾತುಲಮದ ಮುಖರನ್ನು ವಧಿಸಿ ಪಾಂಡುವರನ್ನೇ ವಹಿಸಿದೆ 2 ಮೃಗ ಪುರದೆಡೆಯೊಳು ನಿಂದು ಸೇವಕÀ ವೆಂಕಟಾಚಲಗೋವಿಂದ 3
--------------
ಕವಿ ಪರಮದೇವದಾಸರು
ನಂಬಿದೇ ನರಹರಿಯೆ ನಾ ಪ ನಂಬಿದೆನೊ ಬ್ರಹ್ಮಾದಿ ವಂದಿತ ಪೂರ್ಣ ಸುಗುಣ ಕಂದಂಬ ನಿರುಪಮ ನಿತ್ಯಮುಕ್ತಾಮುಕ್ತ ಜೀವದ ವಿಶ್ವ ಭಾಸಕ ಮುಕ್ತಿದನೇಕನೆಂಬುದಾ ಅ.ಪ ನೊಂದು ನೊಂದೆನೊ ಭವದಿ ಹಿಂದುಮುಂದನು ಕಾಣೆ ಬಂಧ ನೀಡುವ ನೀನೆ ಬಂಧಾ ಬಿಡಿಸಲುಬೇಕೊ ಸ್ವಾಮಿ ಸಂಶಯವೆಂದು ಪೊಗಳುವೆ ಪೂರ್ಣ ಪೂರ್ಣಾನಂದ ಸಜ್ಜನನಂದ ಕಾಮದ ಸಾಮ ಪೂರ್ಣಚಂದ್ರ ಸುತೇಜಭವಹರ 1 ಕರ್ಮ ಅಡ್ಡಿಯಾಗಿದೆ ಸುಖಕೆ ವಡ್ಡುವೆ ಸರ್ವಸ್ವನಿನಗೆ ದೊಡ್ಡವನು ನೀವಲಿಯೆ ಎನ್ನಯ ದಡ್ಡತನ ನಿನ್ನೇನುಮಾಳ್ಪದು ಸಡ್ಡೆಮಾಡದೆ ದೋಷರಾಶಿಯ ಮಮತೆ ತೊಲಗಿಸಿ ಗುಡ್ಡಹೊತ್ತ ಮಹಾಂತರೊಡೆಯನೇ 2 ಸಿರಿ “ಕೃಷ್ಣವಿಠಲ”ನೆ ನಿನ್ನಾಕರುಣವೆ ತಾರಕ ಇನ್ನುಮುನ್ನು ನಿನ್ನ ನಂಬಿಹೆ ಜ್ಞಾನಮಾನವ ನೀಡ್ವದಾತನೆ ಸಣ್ಣವನ ಪಿಡಿದಿನ್ನು ನೀ ಪ್ರಸನ್ನನಾಗೆಲೊ ದೇವದೇವನೆ ನಿನ್ನದಾಸರ ಭಾಗ್ಯವೊಂದೇ ಸಾಕು ಸಾಕೈಯೆಂದು ಬೇಡುವೆ ಅನ್ಯರೊಳ್‍ರತಿ ಇಲ್ಲದಿರಲೈ ಮಾನ್ಯ ಮಧ್ವರ ಮತದಿ ನಿಲಿಸು 3
--------------
ಕೃಷ್ಣವಿಠಲದಾಸರು
ನರಜನ್ಮವನು ಕೊಟ್ಟು ಸಲಹಿದೆ ಯೆನ್ನನು ಕೊರತೆಯೇನಿಲ್ಲವೋ ಗೋವಿಂದಾ ಪ ಉರುತರ ಜನ್ಮವ ಸುರುಚಿರಾಂಗಗಳನ್ನು ಅರಿವು ಇಂದ್ರಿಯಗಳ ಸ್ಮರಣೆಯಿಂ ಕೂಡಿದ ಅ.ಪ ನಿನ್ನಧ್ಯಾನವ ಗೈವವೊಲೆನ್ನ ಈ ರಸನೆಯು ನಿನ್ನ ಮೂರ್ತಿಯ ನೋಡಲಿ ಈ ನೇತ್ರಾ ನಿನ್ನ ಪೂಜಿಸೆ ಹಸ್ತ ನಿನ್ನ ಚರಿತೆಗೆ ತರ್ಕಾ ನಿನ್ನ ನಮಿಸಲು ಶಿರವು ನಿನ್ನಾಲಯಕೆ ಕಾಲು 1 ನಿನ್ನ ಪಾದದ ತುಳಸಿಯನ್ನು ಘ್ರಾಣಿಸ ಇನ್ನೇನು ಬೇಡವಯ್ಯ ಸನ್ನುತಾಂಗ ಗೋಪಾಲ 2 ಧನಕನಕಾಂಬರ [ವಸ]ನದ ಧರ್ಮ ಮೋಕ್ಷದೊ ಳಿನಿತಾಸೆಯೆನಗಿಲ್ಲ ಕೇಳಯ್ಯ ಜನುಮ ಜನುಮದೆ ನಿನ್ನ ಘನಪುಣ್ಯ ನಾಮವ ನೆನೆವ ಭಕ್ತಿಯು ಮಾತ್ರ ಮನದೆ ನೆಲೆಗೊಳಿಸಯ್ಯ 3 ದೇವದೇವನೆ ನಿನ್ನ ಸೇವಕರಿಗೆ ಯೆನ್ನ ಸೇವಕನೆನಿಸದೆ ಬಿಡಬೇಡಾ ದಾಸರಸೇವಿಸಲೆನ್ನ ಜೀವ ತುಡಿಯುವುದೊ ವಿಸಲೆ ದಾಸರದಾಸ ಶ್ರೀ ಮಾಂಗಿರಿಯರಸ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾಮರೆತರು ನೀಮರೆವರೆ ಹರಿಯೇ ಪ ಅಭಿ | ರಾಮಪೂರ್ಣ ಕಾಮದುಷ್ಟರಾಕ್ಷಸಾಂತಕಅ.ಪ ಸರ್ವತ್ರ ಸರ್ವವಾಗಿ ವ್ಯಾಪಿಸಿನೀನಿರುವೇ ಸರ್ವೇಶ ಸರ್ವಾಧಾರಣಶರಣಜನ ಸುರತರುವೇ 1 ಸುಜ್ಞಾನಮಯ ಸ್ವರೂಪಾಂತರ್ಯಾಮಿಯು ನೀನು 2 ಪರಿ ಎಲ್ಲ ಭಕ್ತರಾ ತ್ವರ | ದಿಂದ ಬಂದು ಪೊರೆವೆ ನೀ ಕರುಣಾ ಸಾಗರಾ 3 ಶುಕ | ಶೌನಕಾದಿ ಮೌನಿ ಹೃದಯ ಪದ್ಮಮಿತ್ರನೆ ನಿನ್ನ | ಧ್ಯಾನ ಮಾಳ್ಪಗುಂಟೆ ಹಾನಿ ದೇವದೇವನೆ 4 ಕರೆದರೆ ಬರದಿರÀಲು ನಮ್ಮ ಕಾವರ್ಯಾರೆಲಾ ವಿಧಿ | ಹರಮುಖಾಮರವಂದಿತ ಗುರುರಾಮ ವಿಠ್ಠಲ 5
--------------
ಗುರುರಾಮವಿಠಲ
ನಾರಾಯಣ ಹರಿ ವಿಠಲ | ಪೊರೆಯ ಬೇಕಿವಳಾ ಪ ಕಾರುಣಿಕ ಹರಿಯೇಅ.ಪ. ನಾದ ಮೂರುತಿ ನಿನ್ನ | ಪಾದಾನುವರ್ತಿ ಇಹಸಾಧು ತರುಳೆಯ ಕಾಯೊ | ವೇದ ವೇದ್ಯಾ |ಶೋಧಿಸಿದ ಸಂಸ್ಕಾರ | ಕಾದಿಹುದು ಸತ್ಪುಣ್ಯಬೋಧವಿದು ಸಂಪಿಗೆಯ | ಸ್ವಾದು ದರ್ಶಾ 1 ಭವ | ಸಾಗರವ ದಾಂಟಿಸುವೆಯೋಗಿ ಕುಲ ಸದ್ವಂದ್ಯ | ಅಗಜೆದರ್ಶನದೀ 2 ಭಾವಿ ಬೊಮ್ಮನ ಮತವ | ಭಾವದಲ್ಯಭಿವೃದ್ಧಿಗೈವ ಹವಣೆಯು ನಿಂದು | ದೇವದೇವೇಶಾಭಾವಿ ಕಾರ್ಯವು ಎನ್ನೆ | ಜೀವಗಂಕಿತಸೂಚಿಭಾವದಲಿ ತೋರಿರುವೆ | ಶ್ರೀ ವರನೆ ಹರಿಯೇ 3 ಕೈವಲ್ಯ | ದಿಂತ ತವದಾಸ್ಯವನುಈ ತರಳೆಗಿತ್ತು ಸುಖ | ದಿಂದ ನಾಗುವುದೋ 4 ಸಾರ್ವ ಭೌಮ ಸ್ವಾಮಿ | ಸಾರ್ವಕಾಲದಿ ನಿನ್ನಪಾವನ ಸ್ಮøತಿಯಿತ್ತು | ದರ್ವಿಜೀವಿಯನೂಕಾವುದೆನೆ ಭಿನ್ನಪವ | ನೀ ವೊಲಿದು ಸಲಿಸುವುದುದೇವ ದೇವೇಶ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ನಿತ್ಯದುದಯಾಸ್ತಮಾನದಲಿ ಸ ರ್ವೋತ್ತಮ ಹರಿನಾಮ ಬರೆದೋದಿ ಭಕ್ತಿಯಿಂದಾಲಿಪರ ಭವತಾಪ ಜರೆ ಮೃತ್ಯುನೀಗಿ ನಿತ್ಯಮುಕ್ತಿ ಕೈಸೇರುತಿಹ್ಯವು ಪ ನರಿಹರಿ ಹಯವದನ ಜನಾರ್ದನ ವಾಸುದೇವ ವಾರಿಜಾಕ್ಷ ಮುರಧ್ವಂಸಿ ಮುಪ್ಪುರಾಂತಕ ಮುಕ್ಕುಂದ ಹರಿ ಸರ್ವೇಶ ಉರಗಪರ್ಯಂಕ ನಿರಂಜನ ನಿರ್ಜರೇಶ ಶರಣಜನಮಂದಾರ ಸಿರಿಯರಸ ಪರಮಪ್ರಕಾಶ ಪರತರೇಶ ಪರಮಪುರುಷ ಪರಾತ್ಪರನೆಂದು 1 ಮಾಧವ ದೇವದೇವೇಶ ದನುಜರಸಂಹರ ಶ್ಯಾಮಸುಂದರ ಘನಮೇಘಶ್ಯಾಮ ಸಚ್ಚಿದಾನಂದ ಚಿನುಮಯಾತ್ಮ ತಚ್ಚೈತನ್ಯರೂಪ ವೇಣುಧರ ಗೋಪಾಲ ಗೋವ ರ್ಧನೋದ್ಧಾರ ಗಾನಾಂದಧೋಕ್ಷಜಪಿತ ಧ್ಯಾನಗಮ್ಯ ತ್ರಿಭುವನೇಶ ತ್ರಿವಿಕ್ರಮನೆಂದು 2 ನಿತ್ಯಗುಣಾರ್ಣವ ನಿಜಗುಣ ನಿಷ್ಕಲಂಕ ನಿತ್ಯಾತ್ಮ ನಿರುಪಮ ಪರಂಜ್ಯೋತಿ ನಿತ್ಯನಿರ್ಮಲ ಸತ್ಯಭಾಮಾಕಾಂತ ಚಿದ್ರೂಪ ಚಿತ್ಕಳಂಕ ಕಮಲಾಕ್ಷ ಲಕುಮೀಶ ಶೌರಿ ಸೂತ್ರಧಾರಿ ಭಕ್ತವತ್ಸಲ ಭಯನಿವಾರ ನರಸಿಂಹ ಮುಕ್ತಿದಾಯಕ ಮಧುಸೂದನ ರಮಾರಮಣ ಮೃತ್ಯುಂಜಯ ವಿಶ್ವೇಶ ವಿಶ್ವವ್ಯಾಪಕನೆಂದು 3 ಕಾಲಾರಿ ಚಕ್ರಿ ಚತುರ್ಭುಜ ಭವನಾಶ ನೀಲಾಂಗ ರಂಗ ರಾಘವ ಭುವನೇಶ ನೀಲಲೋಚನ ನಗಧರ ಜಗಮೋಹ ಮೇಲುನಿಲಯ ನಿಗಮಾತೀತ ಪದ್ಮನಾಭ ಕಾಲೀಮರ್ದನ ಕೌಸ್ತುಭಾಂಬರ ವಿಷ್ಣು ಪಾಲಸಾಗರಕನ್ನಿಕಾಪ್ರಿಯನಾಥ ಲೀಲಜಾಲ ಜಾಹ್ನವೀಜನಕ ಕೇಶವ ಶೂಲಪಾಣಿಸಖ ಶಾಂತಾಕಾರನೆಂದು4 ಪರಮಾನಂದ ಗೋವಿಂದ ಗಜರಕ್ಷ ಶರಧಿಮಥನ ಕೂರ್ಮಮತ್ಸ್ಯ ಕರುಣಾಂಗ ವಾಮನ ಧ್ರುವಪಾಲ ದುರಿತಾರಿ ಕೃಷ್ಣ ವೆಂಕಟ ವಿಠಲ ಶರಣಾಗತವರದ ನುತಪಾಲ ವರದಾತ ವೇದಾಂಗ ಸುಖಧಾಮ ವರ ಶ್ರೀರಾಮ ಪರಮ ಪುಣ್ಯನಾಮ ಧರೆಮೂರರೊಳತ್ಯಧಿಕಮೆಂದು 5
--------------
ರಾಮದಾಸರು
ನೀಂ ಕಟಾಕ್ಷಿಸೆನ್ನನೊಲವಿಂ ಲೋಕನಾಥ ಪಾಲಿಸೈ ಪ. ಸಂಕಟಂಗಳೆಲ್ಲಮಂ ನಿಷ್ಕಲಂಕ ನೀಂ ನಿವಾರಿಸೈ ಅ.ಪ ತಾತ ನೀನೇ ನಾಥನೇ ಆತ್ಮಜಾತಂ ನೀನೆಲೈ ದಾತ ನಿನ್ನ ನಂಬಿದೀಯನಾಥರಂ ಪ್ರೀತಿಯಿಂ1 ಭಾವಜಾತಜನಕ ಭೂ ದೇವದೇವ ಶ್ರೀಧವ ಭಾವಿಸುವೆನನನ್ಯಭಾವದೆ ಕಾವುದೈ ಶ್ರೀನಿಧೇ 2 ಪರಮಪುರಷ ಶೇಷಶೈಲವರದ ಶ್ರೀಕರ ಪರಿಭವಂಗಳೆಲ್ಲ ಪರಿದು ಪಾಲಿಸೈ ಪರಾತ್ಪರ 3
--------------
ನಂಜನಗೂಡು ತಿರುಮಲಾಂಬಾ
ನೀ ಕೃಪೆ ಮಾಡೋ ಹರಿಯೇ ಲೋಕವಿನುತ ಸಿರಿಯೇ ಪ ಶ್ರೀಕರ ಭಾಸ್ವರಾ ಭಕ್ತಸುಧಾಕರ ಶೋಕಹರಣಾ ನೀ ಶೂರಾ ಅ.ಪ ನಡು ನೀರೋಳೆನ್ನ ಕೈಯ ಬಿಡಬೇಡ ಮಾರನಯ್ಯ ಅಡಿಗೆರಗುವೆನಯ್ಯ ಕೊಡು ನಿನ್ನ ನಾಮಾವಳಿಯ ದೃಢದೆ ಭಜಿಪೆನಯ್ಯ ಮೃಡನುತಾನೇ ಗೋವಿಂದಯ್ಯ 1 ಕಳೆದ ದುರಿತಾವೃತ ಉಳಿದುದು ವೋವರಾ ಅಳಿವ ಕಾಲವಿದಿನ್ನು ಬಳಲಿಸೋಲುವೆ[ನಯ್ಯ] ಘಳಿಲನೆ ನಿನ್ನ ನಾಮಾವಳಿಯ ಸ್ಮರಣೆಯ 2 ಅನ್ಯರ ಭಜಿಸೆನು ಅನ್ಯರ ನುತಿಸೆನು ಅನ್ಯರಿಗೆರಗೆನು ಅನ್ಯರ [ಪೂಜಿ]ಸೆನು [ಅ ನನ್ಯ ಶರಣನೆ ಮನ್ನಿಸೊ ಶರಣುಬಂದಿಹೆನು] 3 ಕಾವಧೀರನು ಇನ್ನು ಅವನೇ ಶ್ರೀಹರಿ ಸೇವಕರಿಗೆ ನಾನು ಸೇವಕನೆನ್ನುತಾ ಭಾವಿಸೋ ದೇವದೇವಾ ಮಾವಿನಾಕೆರೆರಂಗ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್