ಒಟ್ಟು 108 ಕಡೆಗಳಲ್ಲಿ , 47 ದಾಸರು , 106 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುಬ್ಬಿಯಾಳೊ ಗೋವಿಂದ ಗೋವಿಂದಾ ಗೋವಿಂದ ಗೋವಿಂದಾನೆಂದು ನೆನಯಿರೊ ಗುಬ್ಬಿಯಾಳೊ ಪ. ಕ್ಲೇಶ ಪರಿಹಾರವು ಗುಬ್ಬಿಯಾಳೊ ನಾರಾಯಣನ ಧ್ಯಾನದಿಂದ ನರಕಭಯವಿಲ್ಲವೊ ಗುಬ್ಬಿಯಾಳೊ 1 ಮಾಧವನ ನೆನೆದರೆ ಮನೋಭೀಷ್ಟ ಕೊಡುವೊನು ಗುಬ್ಬಿಯಾಳೊ ನಾಶನವು ಗುಬ್ಬಿಯಾಳೊ 2 ವಿಷ್ಣುಭಜನೆಯಿಲ್ಲದವಗೆ ವೈಷ್ಣವರ ಜನ್ಮವುಂಟೆ ಗುಬ್ಬಿಯಾಳೊ ಇಹುದೊ ಗುಬ್ಬಿಯಾಳೊ 3 ತ್ರಿವಿಕ್ರಮನ ನೆನೆದರೆ ಸಾವಿತ್ರಿಯಾಗಿಹರೊ ಗುಬ್ಬಿಯಾಳೊ ವಾಮನದೇವರು ನಮಗೆ ವರಗಳ ಕೊಡುವೋರು ಗುಬ್ಬಿಯಾಳೊ 4 ಸಿರಿ ನಮಗೆ ಒಲಿವಳೊ ಗುಬ್ಬಿಯಾಳೊ ಹೃಷೀಕೇಶನ ಧ್ಯಾನದಿಂದ ಹೃದಯ ಪರಿಶುದ್ಧವೊ ಗುಬ್ಬಿಯಾಳೊ 5 ಪದ್ಮನಾಭ ನಮ್ಮೆಲ್ಲರ ಪಾಲಿಸಿ ರಕ್ಷಿಪನೊ ಗುಬ್ಬಿಯಾಳೊ ದಾಮೋದರನ ನೆನೆದರೆ ಪಾಮರತ್ವ ಬಿಡಿಸುವನೊ ಗುಬ್ಬಿಯಾಳೊ 6 ಸಂಕರ್ಷಣನ ಧ್ಯಾನದಿಂದ ಸಂತಾನ ಅಭಿವೃದ್ಧಿಯು ಗುಬ್ಬಿಯಾಳೊ ವಾಸುದೇವನ ದಯದಿಂದ ವಂಶಉದ್ಧಾರವೊ ಗುಬ್ಬಿಯಾಳೊ 7 ಪ್ರದ್ಯುಮ್ನನ ನೆನೆದರೆ ಭೂಪ್ರದಕ್ಷಿಣೆ ಫಲವು ಗುಬ್ಬಿಯಾಳೊ ಅನಿರುದ್ಧನ [ಸೇವಿಸೆ ಪುನೀತರಹೆವೊ] ಗುಬ್ಬಿಯಾಳೊ 8 ತಿಳಿಯಿರೊ ಗುಬ್ಬಿಯಾಳೊ ಅಧೋಕ್ಷಜ ನಮ್ಮೆಲ್ಲರಿಗಾಧಾರವಾಗಿಹನೊ ಗುಬ್ಬಿಯಾಳೊ 9 ನಾರಸಿಂಹದೇವರು ನಮ್ಮ ಕುಲದೈವವೊ ಗುಬ್ಬಿಯಾಳೊ ಅಚ್ಯುತ ಲಕ್ಷ್ಮಿಯ ಕೂಡಿ ಸಚ್ಚಿದಾನಂದನೊ ಗುಬ್ಬಿಯಾಳೊ 10 ಜನಾರ್ದನದೇವರು ಜಗಕೆಲ್ಲ ಶ್ರೇಷ್ಠರೊ ಗುಬ್ಬಿಯಾಳೊ ಕ್ಷಮಿಸುವನೊ ಗುಬ್ಬಿಯಾಳೊ 11 ಹರಿನಾಮಾಮೃತಕೆ ಸರಿಧರೆಯೊಳಗೆ ಇಲ್ಲವೊ ಗುಬ್ಬಿಯಾಳೊ ಶ್ರೀಕೃಷ್ಣ ರಂಗೇಶಯೆಂಬೊ ಸಿದ್ಧಕ್ರಿಯ ಬಲ್ಲರೆ ಗುಬ್ಬಿಯಾಳೊ12 ಈ ಗುಬ್ಬಿ ಪಾಡುವರಿಗೆ ಇಹಪರವು ಸಂತತವು ಗುಬ್ಬಿಯಾಳೊ ಧರಣಿಯೊಳು ಆಚಂದ್ರಾರ್ಕ ತಾರಕವಾಗಿಹರು ಗುಬ್ಬಿಯಾಳೊ 13 ನಿತ್ಯ ಮರೆಯದೆ ನೀ ನೆನೆಮನವೆ ನಿತ್ಯ ಮನವೆ ಗುಬ್ಬಿಯಾಳೊ 13
--------------
ವಾದಿರಾಜ
ಗುರುಕೂರ್ಮಚಾರ್ಯರ ಚರಣಕಮಲಯುಗ್ಮ ಮಾನವ ಪ ಧರಣಿಯೊಳಗೆ ಸುಕ್ಷೇತ್ರಗಾಲವ ಪುರದಿ ಶ್ರಿ ನರಶಿಂಹಾ ಚಾರ್ಯರ ತರುಣಿಯಳ ಗರ್ಭಾಬ್ಧಿಯಲಿಹಿಮ ಕರನ ತೆರದಲಿ ಜನಿಸಿಮೆರೆದ ಅ.ಪ ವರಕೊಲ್ಹಾಪುರದಿ ಪೋಗಿರಲು ಸುಂದರವಾದ ಸಿರಿಯರೂಪವ ಕಾಣುತ್ತ ಅರಿತು ಪ್ರಾರ್ಥಿಸಲು ಶ್ರೀ ನರಶಿಂಹಾರ್ಯರಿಗೊಲಿದು ಕರುಣದಿಂದಲಿ ಕೊಟ್ಟಂಥ ಚರಣಕವಚ ಸ್ವರಣ ಸಂಪುಟದಲ್ಲಿ ನಿರುತ ಪೂಜೆಯ ಮಾಡುತ್ತ ಪ್ರವಚನಾಸಕ್ತ ಧರೆಯೊಳಗೆ ಬಹು ಶರಣು ಜನ ರಘ ತರಿದು ಸೌಖ್ಯವ ಗರಿವುದಕೆ ಸಂ ಚರಿಸುತಲಿ ಸಚ್ಛಾಸ್ತ್ರ ಮರ್ಮವ ನರುಹಿಜನರನುದ್ಧರಿಸಿದಂಥ 1 ಪೊಳೆವ ಫಾಲದಿ ಪುಂಡ್ರ ತಿಲಕ ಮುದ್ರಾಕ್ಷತಿ ವಿಲಸಿತ ಶುಭಗಾತ್ರದಿ ಅಲವ ಬೋಧರ ಮತದೊಳು ತತ್ವಬೋಧಕ ಸುಲಲಿತೋಪನ್ಯಾಸದಿ ಬಲು ವಿಧಾರ್ಥವ ಪೇಳಿಕುಳಿತಪಂಡಿತರನ್ನು ಒಲಿಸುತಿರೆ ಪೂರ್ವದಿ ಪಂಢರಪುರದಿ ಭವ ಮುದ್ಗಲಾಚಾರ್ಯರಿ ಗೊಲಿದು ಬಂದಿಹ ಚಲುವ ವಿಠ್ಠಲ ಮೂರುತಿಯ ಪದ ಜಲಜ ಮಧುಕರರೆನಿಸಿದಂಥ 2 ಜಡಜಾಪ್ತನುದಯದಿ ನಡೆದು ದ್ವಿಜಗೃಹದೇವ ರಡಿ ಗೊಂದನೆಯ ಮಾಡುತ್ತ ಎಡೆಬಿಡದಲೆ ತಮ್ಮ ಅಡಿಗೊಂದಿಸುವ ಭಕ್ತ ಗಡಣವ ಮನ್ನಿಸುತ ಬಿಡದೆ ಶತತ್ರಯ ಕೊಡ ಜಲದಲಿ ಸ್ನಾನ ದೃಢಮನದಲಿ ಮಾಡುತ್ತ ತಂತ್ರ ಸಾರೋಕ್ತ ಎಡಬಲದಿ ಶೇವೆಯನು ಮಾಡುವ ಪೊಡವಿಸುರಕೃತ ವೇದ ಘೋಷದಿ ಜಡಜನಾಭನ ಪೂಜಿಸುವ ಬಹು ಸಡಗರವ ನಾನೆಂತು ಬಣ್ಣಿಪೆ 3 ಭೂತಲದಲಿ ಶ್ರೇಷ್ಠವಾತ ಮಾತಾಂಬುಧಿ ಶೀತ ಕಿರಣನೆನಿಸಿ ಪ್ರಾತರಾರಭ್ಯ ಶ್ರೀನಾಥನೆ ಪರನೆಂಬೊ ಶಾಸ್ತ್ರದಿ ಮನವಿರಿಸಿ ಖ್ಯಾತ ಸತ್ಯಧ್ಯಾನ ತೀರ್ಥರೆಂಬುವ ಗುರು ಪ್ರೀತಿಯ ಸಂಪಾದಿಸಿ ಪುತ್ರರಿಗೆ ಬೋಧಿಸಿ ಪ್ರೀತಿಯಲಿ ಶಿಷ್ಯರಿಗೆ ಭಗವ ದ್ಗೀತೆಯನು ಪ್ರತಿದಿನದಿ ಪೇಳುತ ಪಾತಕವ ಪರಿಹರಿಸಿ ಪರಮ ಪು- ನೀತ ಗಾತ್ರರ ಮಾಡಿ ಸಲಹಿದ 4 ಧರೆಯೊಳಧಿಕಮಾದ ಗಿರಿ ವೇಂಕಟೇಶನ ದರುಶನವನೆ ಕೊಳ್ಳುತ ಗುರುವಾಜ್ಞೆಯಲಿ ಬಂದು ವರ ಸಭೆಯೊಳು ತಮ್ಮ ಪರಿವಾರದಿಂದಿರುತ ವರಷ ಶಾರ್ವರಿಯೊಳು ವರ ಮಾಘ ಪ್ರತಿಪದ ಬರಲು ಧ್ಯಾನವ ಮಾಡುವ ಹರಿಪದಾಸಕ್ತ ಪರಮ ಭಕುತಿಯಲಿಂದ ಶೇವಿಪ ಶರಣು ಜನ ಮಂದಾರ ನೆನಿಸುತ ಮೆರೆವ ಕಾರ್ಪರ ನಿಲಯ ಶಿರಿನರ ಹರಿಯ ಪುರವನು ತ್ವರದಿ ಶೇರಿದ 5
--------------
ಕಾರ್ಪರ ನರಹರಿದಾಸರು
ಗುರುಗಳ ನೆರೆ ನಂಬಿರೊ ಪರಿಪಾಲಿಪ ಗುರುಗಳ ನೆರೆ ನಂಬಿರೊ ಪ ಪರಿ ಅಘದೊಳು ತೊಳಲುವ ಮನು ಜರ ಬವಣೆಗಳರಿತು ಸಜ್ಜನರ ಪಾಲಿಸುವಂಥ ಅ.ಪ ಚಿಂತೆಯೆಲ್ಲವು ನೀಗಿಸಿ ಮನಸಿಗೆ ಬಹು ಸಂತೋಷವನು ಸೂಚಿಸಿ ಪಾದ ಚಿಂತನೆ ಮಾಡುವ ಅಂತರಂಗದ ಭಕ್ತರೊಡನೆ ಮೆರೆವ ದಿವ್ಯ1 ಬೆಟ್ಟದೊಡೆಯನ ಪೂಜಿಸಿ ಭಕುತರ ಮನ ದಿಷ್ಟಗಳನು ಸಲ್ಲಿಸಿ ಸೃಷ್ಟಿಕರ್ತನ ಗುಣ ಸ್ವಚ್ಛ ತಿಳಿದು ಸರ್ವ ಕಷ್ಟಗಳ್ಹರಿಸಿ ಸಂತುಷ್ಟಿಪಡಿಸುವಂಥ 2 ಸರಿಯುಂಟೆ ಧರೆಯೊಳಗೆ ಗುರುಗಳ ಪೋಲ್ವ ನರರುಂಟೆ ಭುವಿಯೊಳಗೆ ಸಿರಿ ಉರಗಾದ್ರಿವಸ ವಿಠ್ಠಲದಾಸರ ಕೂಡಿ ವರಗಳ ಕೊಡುವಂಥ ಪರಮ ಸಾತ್ವಿಕರಾದ 3 ಪರಮ ಮಂಗಳ ಮೂರ್ತಿಯ ರೂಪವ ಹಗ ಲಿರುಳು ಧ್ಯಾನವ ಮಾಳ್ಪರ ಪರಮ ಗುರುಗಳ ಪರಮ ಪ್ರೀತಿಯ ಪಡೆದಂಥ ಉರಗಾದ್ರಿವಾಸ ವಿಠ್ಠಲದಾಸರೆಂಬಂಥ4 ಕರುಣದಿ ಸಲಹುವರು ಭಕ್ತರನೆಲ್ಲ ಕರೆದು ಬೋಧನೆ ಮಾಳ್ಪರು ವರ ಕಮಲನಾಭ ವಿಠ್ಠಲನ ಭಜಿಸುತ್ತ ಸಿರಿ ಶ್ರೀನಿವಾಸನ ನಿರುತ ಪೂಜಿಸುವಂಥ 5
--------------
ನಿಡಗುರುಕಿ ಜೀವೂಬಾಯಿ
ಗುರುಸತ್ಯವರರೆಂಬ ಕಲ್ಪಭೂಜಾ ಧರೆಯೊಳಗೆಮ್ಮನುದ್ಧರಿಸ ಬಂತಿದಕೊ ಪ ಶ್ರೀಮಧ್ವಮತವೆಂಬೋ ಭೂಮಿಯೊಳಗುದ್ಭವಿಸಿ ರಾಮ ವೇದವಾಸ್ಯರಂಘ್ರಿ ಯುಗಳ ವ್ಯೋಮ ಮಂಡಲವನಾಶ್ರಯಿಸಿ ಸತ್ಕೀರ್ತಿನಿ ಸ್ಸೀಮ ಶಾಖೋಪಶಾಖೆಗಳಿಂದ ಶೋಭಿಸುತ 1 ಭವವೆಂಬ ಭಾಸ್ಕರತಪದಿಂದ ಬೆಂದು ಬಂ ದವರ ಮಂದಸ್ಮಿತ ನೆಳಲಿಂದಲೀ ಪ್ರವಣರಂತಃಸ್ತಾಪ ಕಳೆದು ನಿತ್ಯದಲಿ ಸ ತ್ಕವಿ ದ್ವಿಜಾಳಿಗಲಿಗಾಶ್ರಿತರಾಗಿ ಮೆರೆವ 2 ಕರ್ಮ ಜ್ಞಾನ ಮಾರ್ಗಸ್ಥ ಜನರಿಗಾಗಿ ಲ್ಲಿಹವು ಫಲ ಪುಷ್ಪ ಐಹಿಕಾಮುಷ್ಮಿಕಾ ಭುಜಗ ಹೃ ದ್ಗುಹದೊಳಿಪ್ಪದು ಮಾಯಿಮೂಷಕಗಳೋಡಿಸುತ 3
--------------
ಜಗನ್ನಾಥದಾಸರು
ಚಿಂತೆಯಿಲ್ಲದ ನರನು ಧರೆಯೊಳಗಿಹನೇ ಅಂತರಂಗದಿ ನಮ್ಮ ರಂಗನಿಲ್ಲದಿರೆ ಪ ಅಂತರಂಗದಿ ಶುದ್ಧಿ ಇಲ್ಲದಿರೆ ರಂಗಯ್ಯ ಎಂತು ನೀನಿಹೆಯಯ್ಯ ಮಾನಸದಿ ಸ್ವಾಮಿ ಅ.ಪ ಧನಧಾನ್ಯಗಳ ಚಿಂತೆ ಕನಕದೊಡವೆಯ ಚಿಂತೆ ತನುಜ ತನುಜೆಯರನ್ನು ಪಡೆವ ಚಿಂತೆ ಅನಿಶ ಯೌವ್ವನವಾಂತು ಕನಸು ನನಸುಗಳಲ್ಲಿ ವನಿತೆಯರನೊಡಗೂಡಿ ಭೋಗಿಸುವ ಚಿಂತೆ 1 ಉಡಿಗೆ ತೊಡಿಗೆಯ ಚಿಂತೆ ಉಡುವೆನೆಂಬಾ ಚಿಂತೆ ಒಡಲ ಪೋಷಿಪ ಚಿಂತೆ ಕಡಲಲೆಗಳಂತೆ ಪಿಡಿದೆನ್ನ ಬಾಧಿಪುವು ಬಿಡಿಸೆಲ್ಲ ಚಿಂತೆಗಳ ಕೊಡು ನಿನ್ನ ಸೇವೆಯನು ಮಾಂಗಿರಿಯರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಜಯ ಕೃಷ್ಣವೇಣಿ ದುರ್ಜನರ ಗಂಟಲಗಾಣಿ ನಿತ್ಯ ಕಲ್ಯಾಣಿ ಪ ಹರಜಡಿಯಲಿ ಜನಿಸಿ ಹರಿಪಾದ ಜಲವೆನಿಸಿ ಮುರಹರನ ವರ್ಣ ಪೆಸರವನೇ ಪೊತ್ತು ಧರೆಯೊಳಗೆ ಮಹಾಬಳೇಶ್ವರದಲ್ಲಿ ನೆಲೆಯಾಗಿ ಪೊರಿದೆ ಶರಣಾಗತರ ದುರಿತಗಳ ತರಿದೆ 1 ದೋಷರಹಿತಾಥೆರೆಯೊಳು ಸಾಸಿರ ಭಾಗದಲಿ ಆ ಸಲಿಲ ಬಿಂದು ಪವಮಾನ ಬಂದೂ ಬೀಸಿದಾ ಸಮಯದಲಿ ಜೀವರಾಸಿಯ ಮೇಲೆ ಕ್ಲೇಶ ಶೋಕ ವಿನಾಶ 2 ಅಷ್ಟಾರ್ಥಮಾಸ ಕೃಷ್ಣಪಕ್ಷ ಚತುರ್ದಶಿ ಕೃಷ್ಣವಾರ ವಿಷ್ಣು ತಾರೆಯಲ್ಲೀ ಕೃಷ್ಣಕೃಷ್ಣಾ ಎಂದು ನಿಷ್ಠೆಯಿಂದಲಿ ಮನ ಮುಟ್ಟಿ ಸ್ನಾನವ ಮಾಡೆ ಕಷ್ಟ ಪರಿಹರಿಪ 3 ಕಪಟ ಸಂಗಮಛಾಯಾ ಶ್ರೀ ಶೈಲ ವರ ಚತುಸ್ಥಾನಗಳಲಿ ವಾಸಮಾಡಿ ಇರಲು ಕ್ತರನು ಮಾಡಿ ಪೊರದೇ 4 ಕಲಿಯುಗದಿ ಕೃಷ್ಣಾ ಸ್ನಾನ ಕೃಷ್ಣ ಸ್ಮರಣಿ ವೆ ಸತಿ ಪೊಗಳಲು ಸಿರಿ ವಿಜಯವಿಠ್ಠಲ ಕಾಣಿಸಿದಿಯಾ5
--------------
ವಿಜಯದಾಸ
ತುತಿ | ಪರನ ಪೊರದೇ ಪ ನೋಡಿದಾಕ್ಷಣದಲ್ಲಿ ಅನಂತ ಜನ್ಮದಿಂದ | ಮಾಡಿದ ಪಾಪಗಳು ಪರಿದವಯ್ಯ | ಆಡಲೇನು ತೋಯ ಸ್ಪರ್ಶವಾಗಲು | ನಲಿ | ದಾಡಿದರು ಗೋತ್ರಜರು ಇವನ ಪುಣ್ಯಕ್ಕೆ ಎಣಿಯೇ 1 ಮಿಂದು ಮನಃಪೂರ್ವಕದಿ ಕೊಂಡಾಡಲು ವಳಗೆ | ಪೊಂದಿದ ದಾಸವರು ಸುಮ್ಮನಹರೋ | ವೃಂದಾರಕರ ಬಳಗ ಇವನ ಸಾಧನೆ ಮಾಳ್ಪಾ ನಂದದಲಿ ಇಪ್ಪನೆ ಅಭಿಮೊಗರಾಗಿ2 ವರನ ಕೊಡುವೆನೆಂದು ವೈಷ್ಣವ ಮಣಿಯಿಂದ | ಧರೆಯೊಳಗೆ ಜನಿಸದೆ ಜಗಜ್ಜನನಿ | ಕರಸಿಕೊಂಡೆ ನೀನು ವರದೆ ವರದೆ ಎಂದು | ವರವ ಕೊಡು ಎನಗೆ ಸುಜನರು ಮೆಚ್ಚವಂದದಲಿ 3 ಇದನೆ ಬೇಡಿಕೊಂಬೆ ಇರಳು ಹಗಲು ನೀನೆ | ಒದಗಿ ಬಿನ್ನಹ ಮಾಡು ನಿನ್ನ ಪತಿಗೆ | ಮುದದಿಂದ ಹರಿಯಾಪ್ರವಿಷ್ಠಾಪ್ರವಿಷ್ಠ ಕಥೆ | ತುದಿನಾಲಿಗೆಯಲ್ಲಿ ಬರಲಿ ಬಣ್ಣಿಸುವಂತೆ 4 ಪಾಂಚಜನ್ಯಾದ್ರಿಯಲ್ಲಿ ಉದುಭವಿಸಿ ತುಂಗೆಯೊಳು | ಪಂಚನದಿ ಸಂಗಮವೆಂದೆನಿಸಿದೆ | ಪಂಚವಿಂಶತಿ ನಮ್ಮ ವಿಜಯವಿಠ್ಠಲದೇವ | ಮೂರ್ತಿ ಮನದೊಳಗಿರಲಿ5
--------------
ವಿಜಯದಾಸ
ತುಳಸಿಯ ಸೇವಿಸಿ ಪ ಶ್ರೀ ತುಳಸಿಯಳ ಸೇವೆ ಪ್ರೀತಿಯಿಂದಲಿ ಮಾಡೆ ಗಾತರದ ಮಲವಳಿದು ಮಾತೆ ಯೆಂಬನಿತರೊಳು ಮಾಡುವಳು ಯಾತಕನುಮಾನವಯ್ಯ ಅ.ಪ. ಸುಧೆಗಡಲ ಮಥಿಸುವ ಸಮಯದಲಿ ವೈದ್ಯನಾಗಿ | ಪದುವನಾಭನು ತಾನು ಉದುಭವಿಸಿ ಬರಲಂದು | ಉದಕವುತ್ಸಹದಿಂದಲದೆ ತುಳಸಿ ನಾಮನಾಗೆ || ತ್ರಿದಶರೊಂದಿಸುತ ಮೋದದಿಂ ಕೊಂಡಾಡಿದರು | ಒದಗಿ ಸುಜನರು ತಮ್ಮ ಸದನದಲಿ ನಿತ್ಯ ತಿಳಿದು ವೃಂದಾವನ ರಚಿಸಿದರೈಯ1 ಮೂಲದಲಿ ಸರ್ವ ತೀರ್ಥಗಳುಂಟು ತನ್ಮದ್ಯೆ | ಕಾಲ ಮೀರದೆ ಸರ್ವ ನದನದಿಗಳಮರಗಣ | ಮೂರತಿಯು ವಾಲಯವಾಗಿಪ್ಪುದು || ಮೂರ್ಲೋಕಗಳ ಧರ್ಮ ವ್ರತಕೆ ಮಿಗಿಲೆನಿಸುವುದು | ನೀಲಮೇಘಶ್ಯಾಮಗರ್ಪಿಸಿದ ತುಳಸಿ ನಿ | ಧರಿಸಿದ ಮನುಜ ಕಾಲನಾಳಿಗೆ ಶೂಲನೊ2 ಉದಯದೊಳಗೆದ್ದು ನೀರೆರೆದು ಮಜ್ಜನಗೈದು | ತುದಿ ಬೆರಳಿನಿಂದ ಮೃತ್ತಿಕೆಯ ಫಣಿಯೊಳಗಿಟ್ಟು | ತದನಂತರದಲಿ ಭಜನೆ || ವದನದೊಳು ಗೈಯೆ ಧರೆಯೊಳಗಿದ್ದ ಸರ್ವವದ | ನದಿಗಳಿಗೆ ನೂರ್ಮಡಿ ಯಾತ್ರೆ ಮಾಡಿದ ಫಲ | ಜನ್ಮಗಳಘವ ತುದಿ ಮೊದಲು ದಹಿಪುದಯ್ಯ3 ಆವವನ ಮನೆಯಲ್ಲಿ ತುಳಸಿ ಸಾಲಿಗ್ರಾಮ | ಆವವನ ಮನೆಯಲ್ಲಿ ಹರಿದಾಸರಾ ಕೂಟ | ಪಾವಮಾನಿಯ ಮತದೊಳು || ಆವವನು ಕಾಂತ್ರಯವ ಕಳೆವ ನಾವಲ್ಲಿ | ವಾಸುದೇವ ಮುನಿ ದೇವಾದಿಗಣ ಸಹಿತ | ಭಾವಿಸಿರಿ ಭಾವಙ್ಞರು 4 ಕಂಡರೆ ದುರಿತಕ್ಕೆ ಕೆಂಡವನು ಬೀರುವುದು | ಕೊಂಡಾಡಿದರೆ ಪುಣ್ಯವ ಪರಿಮಿತವುಂಟು ಮೈ-| ಜನನವಿಲ್ಲ ಸಲೆ ದಂಡ ವಿಟ್ಟವ ಮುಕ್ತನೊ || ಚಂಡಾಲ ಕೇರಿಯೊಳು ಇರಲು ಹೀನಯವಲ್ಲ | ಪಾಂಡುರಂಗ ಕ್ಷೇತ್ರ ಸರಿಮಿಗಿಲು ಎನಿಸುವುದು | ಯೋಗ್ಯ ಫಲ ಕಂಡವರಿಗುಂಟೆ ಅಯ್ಯ5 ಚಿತ್ತ ಶುದ್ದನು ಆಗಿ ಮುಂಝಾನೆಯೊಳು ತುಳಸಿ | ಸ್ತೋತ್ರವನೆ ಮಾಡುತ್ತ ದಿವ್ಯಾವಾಗಿಹ ತ್ರಿದೊಳ | ತುಂಬಿ ವಿತ್ತಾದಿಯಲಿ ತಾರದೆ || ಮತ್ತೆ ವಸ್ತ್ರದಿ ಹಸ್ತ ಶಿಲೆಯರ್ಕ ಏರಂಡ | ಪತ್ರದಲಿ ತಾರದಲೆ ಭೂಮಿಯೊಳಗಿಡದೆ ಪೂ - | ತರಬೇಕು ಹೊತ್ತು ಮೀರಿಸಲಾಗದೊ6 ಕವಿ ಮಂಗಳವಾರ ವೈಥೃತಿ ವ್ಯತೀಪಾತ ರವಿ ಶಶಿಯ ಸಂಗಮ ಪರ್ವಣಿ ಪುಣ್ಯಕಾಲ ಇವುಗಳಲಿ ತೆಗೆಯಾದಿರಿ ನವವಸನ ಪೊದ್ದು ಊಟವ ಮಾಡಿ ತಾಂಬೂಲ- ಸವಿಯುತ್ತ ಮುಟ್ಟದಿರಿ ಯುವತಿ ಶೂದ್ರರಿಂ ತರಿ ಕೊಂಡಾಡುತಿರಿ ದಿವಸಗಳೊಳಯ್ಯ 7 ದಳವಿದ್ದರೇ ವಳಿತು ಇಲ್ಲದಿದ್ದರೆ ಕಾಷ್ಟ ಎಲೆ ಮೃತ್ತಿಕೆಗಳಿಂದ ಪೂಜೆ ಮಾಡಲಿಬಹುದು ತೊಳೆ ತೊಳೆದು ಏರಿಸಲಿಬಹುದು ತುಳಸಿ ಒಣಗಿದ್ದರೂ ಲೇಶದೋಷಗಳಲ್ಲಿ ತುಳಸಿ ವಿರಹಿತವಾದ ಪೂಜೆಯದು ಸಲ್ಲದು ಮಾಡಿ ಜಲಜಾಕ್ಷನರ್ಚಿಸಿರೈಯ್ಯ 8 ಸದನ ಹೊಲೆಮಾದಿಗರ ಸದನ ತುಳಸಿ ಇಲ್ಲದ ಬೀದಿ ನರಕಕೆಳಸುವ ಹಾದಿ ವ್ಯರ್ಥ ತುಳಸಿ ಬಲು ಪ್ರಾಧಾನ್ಯವೊ ತುಳಸಿ ಮಿಶ್ರಿತವಾದ ನೈವೇದ್ಯ ಗತಿಸಾದ್ಯ ತುಳಸಿ ಧರಿಸಿದ ದೇಹ ಪರಮ ಸಾರ್ಥಕವಯ್ಯ ನೆಲೆಯ ನಾ ಕಾಣೆನಯ್ಯ9 ಸತಿ ಪ್ರಹ್ಲಾದ ನಾರದ ವಿಭೀಷಣನು ಧ್ರುವ ಅಂಬರೀಷ ಶಶಿಬಿಂದು ರುಕ್ಮಾಂಗದನು ವಿವರವನು ತಿಳಿದರ್ಚಿಸಿ ತವಕದಿಂ ತಂತಮ್ಮ ಘನ ಪದವನೈದಿದರು ಭುವನದೊಳಗುಳ್ಳ ನಿರ್ಮಲ ಜನರು ಭಜಿಸಿದರು ನೀಗಿ ಭವದೊರರಾದರೈಯ 10 ಉದಯಕಾಲದೊಳೆದ್ದು ಆವನಾದರು ತನ್ನ ಹೃದಯ ನಿರ್ಮಲನಾಗಿ ಭಕುತಿಪೂರ್ವಕದಿಂದ ಸ್ತೋತ್ರಮಾಡಿದ ಕ್ಷಣಕೆ ಮದ ಗರ್ವ ಪರಿಹಾರವೊ ಇದೆ ತುಳಸಿ ಸೇವಿಸಲು ಪೂರ್ವದ ಕಾವೇರಿ ನದಿಯ ತೀರದಲೊಬ್ಬ ಭೂಸುರ ಪದಕೆÉ ವ್ಯೋವ ಸಿರಿ ಪ್ರಿಯಳಾದ ಮದನತೇಜಳ ಭಜಿಸಿರೈದು 11
--------------
ವಿಜಯದಾಸ
ದಯ ಮಾಡೋ ಗುರುವೇ ದಯ ಮಾಡೋ ಪ ದಯ ಮಾಡೋ ಗುರುವೇ ನಿನಗೆದುರಾರೀ ಧರೆಯೊಳಗೆ ಸದಮಲ ಮೂರುತೀ ಶ್ರೀ ರಾಗವೇಂದ್ರಾ ಅ.ಪ ಭಕ್ತರ ಪೊರೆಯಬೇಕೆಂಬೀಕಾರಣದಿಂದ ಸಿದ್ಧ ಹಸ್ತಾನಾಗಿ ಬಂದು ನಿಂತಿರುವೇ ಕಂಡ ಕಂಡಾ ದೈವಂಗಳ ಪೂಜಿಸಿ ಪರಿಪರಿಸ್ತುತಿಸುತ ಬಳಲಿ ಬೆಂಡಾದೆನೈ ಸದ್ಗುರುವೇ 1 ಭಕ್ತಿಯಾ ಲಿಟ್ಟು ಮಾಡಿದಪರಾಧಂಗಳ ಒಂದೆಣಿಸಾದೆ ಎನ್ನನು ಮನಿಸು ಪ್ರಭುವೇ 2 ಶ್ರೀ ರಾಘವೇಣದ್ರಾ ದಾರಿಯಕಾಣೆ ಸಂತೈಸು ಜೀಯಾ 3 ಧೊರೆ ರಾಘವೇಂದ್ರಾ ಕಾಯೋ ಶ್ರೀ ಗುರು ರಾಘವೇಣದ್ರಾ 4
--------------
ರಾಧಾಬಾಯಿ
ದಾಸರೆಂದು ಕರೆದ ಮಾತ್ರದಿ | ಈಗ ಎಮ್ಮ ದೋಷರಾಶಿ ನಾಶವಾಯಿತು ಪ. ಶ್ರೀಶ ತಾನು ಗುರುಗಳಿಂದ ಈ ಶರೀರಕೀ ಜನ್ಮದಲಿ ದಾಸತನದ ಪೆಸರನಿಟ್ಟು ವಾಸುದೇವ ಕಾಯ್ದ ಎನ್ನ ಅ.ಪ. ಏಸು ಜನ್ಮ ಯತ್ನ ಗೈಯ್ಯಲು | ಭೃತ್ಯಭಾವ ಪಾಶ ದುರ್ಲಭವು ಸುಜನಕೆ ಶ್ರೀಶನನುಗ್ರಹದ ಬಲದಿ ಈಸು ನಾಮ ದೊರೆಯಬೇಕು ಆಶಪಾಶ ತೊಲಗಿ ಭವ ಕ್ಲೇಶ ಕೊನೆಗಾಣಿಸುವುದು 1 ಪಂಡಿತನೆಂದೆನಿಸಿ ಮೆರೆಯಲು | ಜಗದೊಳಗೆ ಕಂಡಮಾತ್ರ ಗರ್ವ ಕಾರಣ ಮಂಡೆಬಾಗಿ ಹರಿಗೆ ನಿನ್ನ ತೊಂಡನೆಂದು ನಮಿಸೆ ನಲಿದು ಪುಂಡರಿಕಾಕ್ಷ ತಾನು ತಂಡ ತಂಡ ಪಾಪ ಕಳೆವ 2 ಹರಿಯದಾಸರೆಂದು ಎನಿಸಲು | ಧರೆಯೊಳಗೆ ಸುರರು ಬಯಸಿ ಬರುತಲಿಪ್ಪರು ಸರ್ವದೇವತೆಗಳು ಬಂದು ಹರಿಯದಾಸರೆನಿಸಿ ಮೆರೆದು ಪರಿಪರಿಯ ತತ್ವ ತಿಳುಹಿ ಹರಿಯ ಪುರಕೆ ತೆರಳಲಿಲ್ಲೆ 3 ದಾಸತನಕೆ ಅಧಿಕವಿಲ್ಲವು | ಸಾಧನವು ದಾಸತನವು ಗರ್ವವಳಿವಳಿವುದು ದಾಸ ದಾಸ ದಾಸ ನಿನಗೆ ವಾಸುದೇವ ಸಲಹೊ ಎನಲು ದೋಷನಾಶಗೈಸಿ ಹರಿಯು ದಾಸ ಜನರ ಕಾಯ್ದ ದಯದಿ 4 ಅಷ್ಟು ಭಾಗ್ಯಕಧಿಕ ಲಾಭವು | ದಾಸತನವು ಶ್ರೇಷ್ಠ ಗುರುಗಳಿಂದ ದೊರಕಿತು ಇಷ್ಟವೆನಗೆ ದಾಸಪೆಸರು ಶಿಷ್ಟರೆಲ್ಲ ಕರೆಯಲೀಗ ತುಷ್ಟಿಪಡುವೆ ಶ್ರೀ ಗೋಪಾಲ-ಕೃಷ್ಣವಿಠಲ ಸಲಹೊ ಎಂದು 5
--------------
ಅಂಬಾಬಾಯಿ
ಧರೆಯೊಳಗೆ ವ್ಯಾಸಮುನಿವರನ ಸಂಸ್ಥಾನಕಿ ನ್ನೆರಡನೆಯದಾವುದುಂಟು ಪ. ಪರಿಪರಿಯಲಿ ನೋಡೆ ಪರಮ ವೈಭವದಿಂದ ಧರಣಿಯೊಳು ಮೆರೆಯುತಿಹುದು ಇಹುದುಅ.ಪ. ಹಂಸನಾಮಕನಿಂದ ಹರಿದು ಬಂದಂಥ ಯತಿ ಸಂಸ್ಥಾನ ಸುರನದಿಯೊ ಕಂಸಾರಿಪ್ರಿಯ ಶ್ರೀ ಮಧ್ವಮುನಿ ಮತ ಸಾರ ಹಂಸಗಳು ಸುರಿಯುತಿರಲು ಸಂಶಯವ ಪರಿಹರಿಸಿ ಸದ್ಗ್ರಂಥಗಳ ಸ- ದ್ವಂಶರಿಗೆ ಸಾರುತಿರಲು ಅಂಶ ಹರಿಪರ್ಯಂಕ ಸಹಿತ ಬಾಹ್ಲೀಕ ಯತಿ ವಂಶದಲಿ ಉದಿಸಿ ಬರಲು ಬರಲು 1 ಬನ್ನೂರು ಸ್ಥಳದಲ್ಲಿ ಜನ್ಮವೆತ್ತುತಲಿ ಬ್ರ ಹ್ಮಣ್ಯರಾ ಕರದಿ ಬೆಳೆದು ಚಿಣ್ಣತನದಲಿ ಮೌಂಜಿಧರಿಸಿ ಕಿತ್ತೊಗೆಯುತಲಿ ಧನ್ಯಯತಿಯಾಗಿ ಮೆರೆದು ಘನ್ನ ಶ್ರೀಪಾದರಾಯರಲಿ ಸದ್ಗ್ರಂಥಗಳ ಚನ್ನಾಗಿ ಮನನಗೈದು ಸಣ್ಣ ಪೆಟ್ಟಿಗೆಯೊಳಡಗಿದ್ದ ಶ್ರೀ ಕೃಷ್ಣನ ತನ್ನ ಭಕ್ತಿಯೊಳ್ ಕುಣಿಸಿ ನಲಿದು 2 ಪಡೆದು ಪರಿಪರಿಯ ಮಹಿಮೆಗಳ ತೋರುತಲಿ ದುರ್ವಾದಿ ದುರುಳ ಮತಗಳನೆ ಮುರಿದು ಮರುತ ಮತ ಶೀತಾಂಶುಕಿರಣ ಚಂದ್ರಿಕೆಯನ್ನು ಹರಹಿ ಪ್ರಕಾಶಗೈದು ಸರ್ವ ಸಜ್ಜನರ ಮನದಂದಕಾರವ ಕಳೆದು ಸಿರಿವರನ ಪ್ರೀತಿ ಪಡೆದು ತಿರುವೆಂಗಳೇಶನ ಪರಮ ಮಂಗಳ ಪೂಜೆ ವರುಷ ದ್ವಾದಶವಗೈದು ಮೆರೆದು 3 ಆರಸನಿಗೆ ಬಂದಂಥ ಆಪತ್ಕುಯೋಗ ಪರಿ ಹರಿಸಿ ಸಂಸ್ಥಾನ ಪಡೆದು ಪರಮ ಸಾಮ್ರಾಜ್ಯ ಪಟ್ಟಾಭಿಷೇಕವ ತಳೆದು ಪರಮ ವೈಭವದಿ ಮೆರೆದು ಚಿರಕಾಲ ವಿಜಯನಗರವು ಮೆರೆಯಲೆಂದ್ಹರಸಿ ಅರಸನಿಗೆ ರಾಜ್ಯವೆರೆದು ಕರುಣಾಳುವೆನಿಸಿ ವೈರಾಗ್ಯ ಶಿಖರದಿ ಮೆರೆದು ಮೊರೆಪೊಂದಿದವರ ಪೊರೆದು ಬಿರುದು 4 ಎಲ್ಲೆಲ್ಲಿ ನೋಡಲಲ್ಲಲ್ಲಿ ಶ್ರೀ ಮರುತನ್ನ ನಿಲ್ಲಿಸುತ ಪೂಜೆಗೈದು ನಿಲ್ಲದಿರೆ ಹಂಪೆಯಲಿ ಪ್ರಾಣಾರಾಯನು ಯಂತ್ರ ದಲ್ಲಿ ಬಂಧನವಗೈದು ಚಲ್ಲಾಡಿ ಸುವರ್ಣವೃಷ್ಟಿಯಿಂ ದುರ್ಭಿಕ್ಷ ನಿಲ್ಲಿಸದೆ ದೂರಗೈದು ಎಲ್ಲ ಕ್ಷೇತ್ರಗಳ ಸಂಚರಿಸಿ ಬಹುದಿನ ಹಂಪೆ ಯಲ್ಲಿ ಶಿಷ್ಯರನು ಪಡೆದು ನಿಂದು 5 ನವಕೋಟಿ ಧನಿಕ ವೈರಾಗ್ಯ ಧರಿಸುತ ಭವದ ಬವಣೆಯಲಿ ನೊಂದು ಬಂದು ನವ ಜನ್ಮಕೊಟ್ಟು ಉದ್ಧರಿಸಬೇಕೆಂದೆರಗೆ ಅವನಂತರಂಗವರಿದು ಪವಮಾನ ಮತವರುಹಿ ತಪ್ತ ಮುದ್ರಾಂಕಿತದಿ ನವ ಜನ್ಮವಿತ್ತು ಪೊರೆದು ಪವನ ಗ್ರಂಥಾಂಬುಧಿಯೊಳಡಗಿದ್ದ ದಾಸ್ಯ ರ ತ್ನವ ಪೂರ್ವಗುರುವಿಗೊರೆದು ಸುರಿದು 6 ಪುರಂದರ ಕನಕರೆಂ ಬತುಲ ಶಿಷ್ಯರ ಕೂಡುತಾ ಸತತ ಹರಿ ಚರ್ಯ ಮಹಿಮಾದಿಗಳ ಸ್ಮರಿಸುತ್ತ ಸ್ಮøತಿ ಮರೆದು ಕುಣಿದಾಡುತಾ ರತಿಪಿತನ ಗಾನ ಭಕ್ತಿಯಲಿ ಕನ್ನಡ ಕವನ ಮತಿಯೊಳ್ ನಾಲ್ವರುಗೈಯುತಾ ಕ್ಷಿತಿಯಲ್ಲಿ ದಾಸಪದ್ಧತಿ ಬಾಳಲೆಂದೆನುತ ಯತಿವರರ ಸೃಷ್ಟಿಸುತ್ತಾ | ಸತತ 7 ಅಂದು ವಿಜಯೀಂದ್ರರನು ಯತಿವರರು ಬೇಡÉ ಆನಂದದಲಿ ಭಿಕ್ಷವಿತ್ತ ಬಂದು ಕೈ ಸೇರಿದಾ ರಾಜ್ಯವನು ಕ್ಷಿತಿಪನಿಗೆ ಮುಂದಾಳಲೆನುತಲಿತ್ತ ಪತಿ ವೆಂಕಟೇಶನ್ನ ಪೂಜೆ ವರ ಕಂದನಿಗೆ ಒಲಿದು ಇತ್ತ ಒಂದೊಂದು ವೈಭವವು ಕೈ ಸೇರೆ ವೈರಾಗ್ಯ ತಂದು ಅಭಿರೂಪ ಬಿಡುತಾ | ಕೊಡುತ 8 ನವವಿಧದÀ ಭಕ್ತಿಯಲಿ ಜ್ಞಾನ ವೈರಾಗ್ಯದಲಿ ಕವನದಲಿ ಶಾಂತತೆಯಲಿ ನವಗ್ರಂಥ ನಿರ್ಮಾಣ ಪವನ ಗ್ರಂಥೋದ್ಧಾರ ಸವಿನಯವು ಸದ್ಗುಣದಲೀ ಸುವಿವೇಕ ಸತ್ಕರ್ಮ ಅಂತರ್ಮುಖ ಧ್ಯಾನ ಅವನಿ ಸಂಚಾರದಲ್ಲಿ ಇವರ ಸರಿಯಿಲ್ಲ ದಾಸ ವ್ಯಾಸ ಕೂಟದಲಿ ಭುವನದಲಿ ಮೆರೆದ ಧನ್ಯಾ | ಮಾನ್ಯ 9 ಪಾಪಿಗಳ ಸಲಹಿ ಪಾವನ್ನಗೈಯುತ ಭವದ ಕೂಪದಿಂದುದ್ಧರಿಸಿದಾ ಆಪಾರ ಮಹಿಮೆ ಆದ್ಯಂತ ವರ್ಣಿಸಲಳವೆ ಶ್ರೀಪಾದ ಪದುಮ ರಜದಾ ವ್ಯಾಪಾರವೆನ್ನ ಗುರು ದಯದಿ ಎನ್ನೊಳು ನಿಂದು ತಾ ಪಾಲಿಸುತ ನುಡಿಸಿದ ಗೋಪಾಲಕೃಷ್ಣವಿಠಲ ಧ್ಯಾನದಲಿ ಹಂಪೆ ಗೋಪ್ಯಸ್ಥಳದಲಡಗಿದಾ 10
--------------
ಅಂಬಾಬಾಯಿ
ಧರೆಯೊಳಗೆ ಹೆಳವನಕಟ್ಟೆಯಲಿ ನೆಲಸಿ ಪರಿಪೂರ್ಣಕಳೆಯಿಂದ ಭಕುತರನು ಒಲಿಸಿ ಸ್ಥಿರವಾಗಿ ಪೂಜೆಯನು ನೆಲಸಿ ನೀನಿಂದೆ ಕರುಣ ದೃಷ್ಟಿಯಲಿ ಭಕ್ತರನು ಮನ್ನಿಸುವೆ 1 ಹತ್ತು ಅವತಾರದಲಿ ಇದಿರಾಂತವರ ಗೆಲಿದು ಮತ್ತೆ ಪದವಿಯ ಕೊಟ್ಟುರಕ್ಷಿಸಿ ಕಾಯ್ದೆ ವಿಸ್ತರಿಸಿ ಪೂಜೆಯನು ಮಾಡಿಸಿಕೊಂಬೆ ತೆತ್ತೀಸಕೋಟಿ ದೇವರ್ಕಳನು ರಕ್ಷಿಸಿದೆ 2 ಉದಯ ಮದ್ಯಾಹ್ನ ಸಂಜೆಯಲಿ ಪೂಜೆಯನು ವಿಧವರಿತು ಸೇವೆಯನು ಅನುಸರಿಸಿಕೊಂಬೆ ಸ- ಹೃದಯ ಭಕ್ತರನು ಕಾಯ್ದು ಪಾಲಿಸುವೆ ಮುದದಿಂದ ಹೆಳವನಕಟ್ಟೆಯಲಿ ನೆಲಸಿರುವೆ 3
--------------
ಹೆಳವನಕಟ್ಟೆ ಗಿರಿಯಮ್ಮ
ನಂಬಿದ್ಯಾ ಮನವೇ ನಂಬಿದ್ಯಾ ಪ ನಂಬಿದ್ಯ ಮನವೆ ಕೊಂಡಾಡಿದ್ಯ ಆನಂದ ತೀರ್ಥರ ಮತವೆಸತ್ಯವೆಂದು ಅ.ಪ ಇಂದಿರೆ ರಮಣನೆ ಪರದೈವವೆಂದು ಬಂಧನಾದಿ ಅಷ್ಟಕರ್ತೃತ್ವ ಆತನದೆಂದು ಕುಂದುಕೊರತೆಗಳಿಲ್ಲದ ಸರ್ವೇಶ ಶಾಶ್ವತನೆಂದು ನಂದ ಕಂದನು ಸಾನಂದ ಗುಣ ಪೂರ್ಣ ಸ್ವರತನೆಂದು 1 ನಾರಾಯಣನೆ ಸರ್ವೋತ್ತುಮನು ಎಂದು ಸಿರಿ ಅಜಶಿವರೆಲ್ಲ ಹರಿಯಕಿಂಕರರೆಂದು ಮುರವೈರಿ ಅಂತಃ ಬಹಿರ್ವ್ಯಾಪ್ತನು ಎಂದು ಶಾರಂಗ ಪಾಣಿಯೆ ಸರ್ವಾಂತರ್ಯಾಮಿಯೆಂದು 2 ಸಾಕಾರಸರ್ವೇಶ ನಿರ್ವಿಕಾರ ನೆಂದು ಓಂಕಾರ ವಾಚ್ಯನೆ ಸರ್ವಾಧಾರ ಸರ್ವಗನೆಂದು ಅಕಾರಾದಿ ಸರ್ವವರ್ಣಸ್ವರ ಶಬ್ದ ವಾಚ್ಯನುಎಂದು ಅಜ ಅಪ್ರಮೇಯನೆಂದೂ3 ವೇದಗೋಚರ ತಾವೇದಾತೀತನೆಂದು ವಿಧಿಸಿರಿ ವಂದಿತ ಸಾಕಲ್ಯದಿ ಅವಾಚ್ಯನೆಂದು ಮಧುಸೂಧನನು ಚಿನ್ಮಯ ವಪುಷನೆಂದು ಭೇದವಿಲ್ಲದ ರೂಪ ಗುಣಕ್ರಿಯ ಅವಯವನೆಂದು4 ನಾಶರಹಿತ ಕೇಶವನೊಬ್ಬ ಆರ್ತಿವರ್ಜಿತ ನೆಂದು ಕ್ಲೇಶರಹಿತ ವಾಸುದೇವನು ವಿಧಿನಿಷೇಧ ವರ್ಜಿತನೆಂದು ವಿಶ್ವೇಶ ಸರ್ವತಂತ್ರ ಸ್ವತಂತ್ರನು ಸಾರ್ವಭೌಮನು ಎಂದೂ ವಾಸುಕಿ ಶಯನನು ಲೀಲೆ ಗೋಸುಗ ವಿಹಾರಮಾಳ್ಪಾನೆಂದು5 ಪುರುಷ ಸೂಕ್ತ ಪ್ರತಿಪಾದ್ಯ ಅಪ್ರಾಕೃತನೆಂದು ವರಗಾಯತ್ರ್ಯಾದಿ ಸರ್ವಮಂತ್ರ ಪ್ರತಿಪಾದ್ಯನೆಂದು ಅಪವರ್ಗ ಗತಿದಾಯಕನೆಂದೂ ಪಾದ ಭಜನೆಯೆ ಸಾರವೆಂದೂ 6 ವಿರಂಚಿ ಜನಕನೆ ಸರ್ವತ್ರ ಸರ್ವರಲಿದ್ದು ಸರ್ವಕಾರ್ಯ ಕಾರ್ಯಗಳನು ಮಾಡಿ ಮಾಡಿಸುವನೆಂದು ಸರ್ವಜೀವರಿಗೆ ಕರ್ಮಗಳುಣಿಸಿ ತಾ ನಿರ್ಲೇಪನೆಂದೂ ಖರಾರಿರೂಪಗಳೆಲ್ಲ ಅನಾದಿ ಶುಕ್ಲಶೋಣಿತವರ್ಜಿತವೆಂದು7 ಲಕ್ಷ್ಮಿರಮಣನು ಪಕ್ಷಪಾತ ರಹಿತನೆಂದು ಪಕ್ಷಿವಾಹನನು ಕ್ಷರಾಕ್ಷರ ವಿಲಕ್ಷಣನೆಂದು ಲಕ್ಷ್ಮಣಾಗ್ರಜನು ಕುಕ್ಷಿಯೊಳಗೆ ಬ್ರಹ್ಮಾಂಡ ರಕ್ಷಿಪನೆಂದು ಇಕ್ಷು ಚಾಪನ ಪಿತನಚಿಂತಾದ್ಭುತನೆಂದು 8 ಹಂಸಾದಿ ಹದಿನೆಂಟು ರೂಪಗಳ ಧರಿಸಿ ಹೊರಗೆ ವ್ಯಾಪಿಸಿ ಕಂಸಾರಿಸಕಲವ ನಡಿಸೀನಡಿಸುತ ಸುಖದುಃಖಗಳ ಲೇಶಯೋಗ್ಯತೆ ಮೀರಗೊಡದಲೆ ಉಣಿಸುವನೆಂದು 9 ಪತಿತ ಪಾವನ ಪರಾವರೇಶ ತ್ರಿಗುಣವರ್ಜಿತನೆಂದು ಸತತ ಸ್ವಪ್ನ ಸುಷಪ್ತಿ ಜಾಗ್ರತೆ ಮೋಕ್ಷಾ ವಸ್ಥೆಗಳಲಿ ವಿಶ್ವ ತ್ವೆಜಸ ಪ್ರಾಜ್ಞ ತುರ್ಯರೂಪಾದಿಂದ ಮತಿ ಪ್ರೇರಕನಾಗಿ ಕಾದುಕೊಂಡು ಪೊರೆಯುವ ನೆಂದು10 ಸತ್ಯವತಿ ಸುತನು ಸತ್ಯ ಸಂಕಲ್ಪನೆಂದು ಆತನೆ ನಿತ್ಯಾನಿತ್ಯ ಜಗದೀಶನಂತರ್ಯಾಮೀಯೆಂದು ಮುಕ್ತಾ ಮುಕ್ತರ ನಾಥ ಮುಖ್ಯ ಬಿಂಬನು ಚತುರಾನನಾದಿಗಳಿಗೆಲ್ಲಾ ಎಂದು11 ಅನಿಲ ಜೀವೋತ್ತಮ ಹರಿಯ ಪ್ರಥಮಾಂಗ ಅಪರೋಕ್ಷ ಪ್ರಭುವು ಅಣು ಮಹದ್ಘನ ರೂಪ ಚರಿತ ಭಾರತೀಶ ವಾಣೀ ಪತಿಯ ಪದಾರ್ಹ ವಾತದೇವನು ಎಂದು 12 ಹನುಮ ಭೀಮ ಮಧ್ವ ಮೂರಾವತಾರದ ದೇವ ಅನುಪಮ ಬಲನಿಸ್ಸೀಮ ಪುರುಷತೇಜ ತೃಣ ಮೊದಲಾದ ಸರ್ವಜೀವರಲ್ಲಿದ್ದು ಅವರ ಹರಿಯಾಜ್ಞೆಯಂತೀವನೆಂದೂ 13 ದ್ವಾತ್ರಿಂಶಲ್ಲಕ್ಷಣ ಸಂಪನ್ನ ಗುರು ಮಧ್ವನೆಂದು ಆತನೇಲೋಕಕ್ಕೆಲ್ಲ ಗುರವು ಎಂದು ಈತ ಸಕಲಪೇಳಿದ ಮಾತಿಗೆ ಸರಿಯಿಲ್ಲವು ಎಂದು ಪ್ರೀತಿಯಿಂದಲಿ ಭಜಿಪ ಭಕ್ತಗೇನೆ ಮುಕ್ತಿಯೆಂದು 14 ಹರಿಯ ಮತವೆ ಹನುಮನ ಮತವು ಎಂದು ಸಿರಿ, ವಿರಂಚಿ ಪವನ ವಾಣಿ ಭಾರತೀಯರಲ್ಲಿ ಗರುಡ ಶೇಷ ಶಿವ ಶಕ್ರಾದಿಸರ್ವರೊಳಗೆ ತಾರತಮ್ಯ ಪಂಚ ಭೇದವು ಸತ್ಯವೆಂದು 15 ಭಾರತಿ ಪತಿಯದ್ವಾರವೆ ಹರಿಯು ಸ್ವೀಕರಿಪ ನೆಂದು ಮುರಾರಿಯ ಒಲುಮೆಗೆ ಜ್ಞಾನಯುತಭಕ್ತಿಯೆ ಸಾಧನವೆಂದು ಧರೆಯೊಳಗೆ ಹರಿನಾಮ ಸ್ಮರಣೆಗೆ ಸರಿಯಿಲ್ಲವು ಎಂದು ಮಾರಮಣನ ಅನುಗ್ರಹವೆ ಮೋಕ್ಷದಾಯಕ ವೆಂದು 16 ಅರಿಷಡ್ವರ್ಗಗಳಳಿಯುವುದೆ ವೈರಾಗ್ಯ ಮಾರ್ಗವೆಂದು ಗುರುವಿನ ಕರುಣವೆ ಜ್ಞಾನಕ್ಕೆ ಕಾರಣವೆಂದು ಸಾರಮಾರ್ಗಕ್ಕೆ ಸಾಧುಗಳ ಸಂಗವೆ ಮುಖ್ಯವೆಂದು ನೀರಜಾಕ್ಷಗೆ ಸರಿ ಮಿಗಿಲು ಇಲ್ಲವೆಂದು 17 ಜೀವ ಈಶಗೆ ಭೇದ ಈಶ ಜಡಕೆ ಭೇದ ವೆಂದು ಜೀವ ಜೀವಕೆ ಭೇದ ಜಡ ಜಡಕೆ ಭೇದವೆಂದು ಪರಿ ಪಂಚ ಭೇದವೆಂದು ಸಾವಧಾನದಿ ತಿಳಿದು ಜಗತ್ಸತ್ಯವೆಂದು ಧೃಡದಿ 18 ಸುರರೊಳುನರರೊಳು ಅಸುರರೊಳು ಎಲ್ಲೆಲ್ಲು ತಾರತಮ್ಯವು ಅನಾದಿಯಿಂದಲಿ ಇರುತಿಹುದೆಂದು ಸ್ವರೂಪಾನಂದಾವಿರ್ಭಾವವೆ ಮುಕ್ತಿಯೆಂದು ಅರವಿಂದನಾಭಗೆ ಸರ್ವರು ಸದಾದಾಸರೆಂದು 19 ಧನಕನಕ ವನಿತಾದಿಗಳೆಲ್ಲ ಹರಿಗೆ ಅರ್ಪಿತ ವೆಂದು ಏನೇನು ಮಾಡುವುದೆಲ್ಲ ಶ್ರೀ ಕೃಷ್ಣನ ಸೇವೆಯೆಂದು ದೀನ ಜನ ಮಂದಾರನಾಧೀನ ಸುಖದುಃಖಾಗಳೆಂದು ಏನು ಬೇಡದೆ ಹರಿಯ ಸತತನೆನೆವೋದೆ ಸಾಧನ ವೆಂದು20 ನಾಕೇಶ ಜಯತೀರ್ಥ ವಾಯ್ವೂಂತರ್ಗತನಾದ ಶ್ರೀಕೃಷ್ಣ ವಿಠಲಾನೆ ಮಮಸ್ವಾಮಿ ಸರ್ವಸ್ವವೆಂದು ಸಕಲ ಕರ್ಮಗಳರ್ಪಿಸುತ ತ್ರಿಕರಣ ಶುದ್ಧಿಯಿಂದಲಿ ಮಾಕಳತ್ರನ ಸತತ ಭಜಿಸುತ್ತಿರಬೇಕು ಎಂದು 21
--------------
ಕೃಷ್ಣವಿಠಲದಾಸರು
ನಮೋ ನಮೋ ಗುರುರಾಜ ಪ ಭಾಸುರ ಪಂಪಾ ತುಂಗಾ ತೀರವಾಸ | ಪಾಲಿಸೊ ತವದಾಸ ಅ.ಪ. ರತಿಪತಿ ಜನಕನ ವರ ಶಯ್ಯಾಂಶದಲಿ | ವಾಯ್ವಾವೇಶದಲಿ ಜನಿಸುತ ಮೋದದಲಿ ವಿತತನು ವಿಷ್ಣುವು ವಿಶ್ವದೊಳೆನುತಲಿ | ಅತಿಶಯ ಭಕ್ತಿಯಲಿ ಪಿತಗೆ ತೋರ್ದ ಪ್ರಹ್ಲಾದನೆ ಹಿತದಲ್ಲಿ | ಅವತರಿಸಿದೆ ಇಲ್ಲಿ 1 ಧರೆಯೊಳಗೆ ಪ್ರಖ್ಯಾತ ಪರಮಾತ್ಮನ ಪದಶರಣ ವ್ಯಾಸಯೋಗಿ | ಯೆನಿಸುತಲಿ ವಿರಾಗಿ ತರತಮ ಪಂಚಕ ಪ್ರಭೇದವ ಸ್ಥಾಪಿಸಲು | ದುರುಳರ ಖಂಡ್ರಿಸಲು ಪರಿಪರಿ ಶಾಸ್ತ್ರವ ಶ್ರೀ ಪಾದರಾಯರಲಿ | ಓದಿದ್ಯೊ ಭಕ್ತಿಯಲಿ 2 ಪುರಂದರ ಕನಕರಿಗೆ ಆದರದಿಂದಲಿ ಬೋಧಿಸಿ ತತ್ವವನು | ಮಾಡಿ ಪುನೀತರನು ವೇದಶಾಸ್ತ್ರ ತರ್ಕಾದಿ ಗ್ರಂಥಗಳಲಿ | ಕೋವಿದರರಸುತಲಿ ನೀ ದಯದಿಂದಲಿ ಸೇರಿಸಿ ಪರಿಷತ್ತು | ಭಾವಿಸಿ ವಿದ್ವತ್ತು 3 ಅರ್ಥಿಕಲ್ಪಿತ ವರ ಕಲ್ಪವೃಕ್ಷವಾಗಿ | ನಿತ್ಯದಿ ಮಹಯೋಗಿ ಪ್ರಥ್ಯರ್ಥಿ ಮದಕರಿ ಪಂಚವಕ್ತ್ರನಾಗಿ | ಪ್ರತ್ಯಕ್ಷದಿ ತಾಗಿ ಹೊರ ಚೆಲ್ಲುತೆ ನೀನು ಸ್ತುತ್ಯ ಕೃಷ್ಣ ಭೂಮೀಂದ್ರನ ಕುಹುಯೋಗ | ಪರಿಹರಿಸಿದೆ ಬೇಗ 4 ವ್ಯಾಸಾಂಬುಧಿಯನು ಕಟ್ಟಿ ಖ್ಯಾತನಾಗಿ | ದಾಸರ ಚನ್ನಾಗಿ ಪೋಷಿಸುತಲಿ ಶ್ರೀ ಶೇಷಗಿರಿಗೆ ಬಂದು | ಶ್ರೀಶನಲ್ಲಿ ನಿಂದು ಪಡುತ ಹನ್ನೆರಡು ವರುಷ ದೇಶ ದೇಶದಲಿ ಆಶುಗಿಯನು ನಿಲಿಸಿ | ಶಿಷ್ಯರಿಗನುಗ್ರಹಿಸಿ 5 ಕಾಶಿ ಗಧಾಧರ ವಾಜಪೇಯಿ ಲಿಂಗ | ಮಿಶ್ರರು ನರಸಿಂಗ ವಾಸುದೇವ ಪುರಿ ಈಶ್ವರ ಪಂಡಿತರ | ವಾದದಿ ಬಿಗಿವರ ಜೈಸಿ ತಂದ ಜಯ ಪತ್ರಗಳನು ಮುದದಿ | ಶ್ರೀನಿಧಿಗರ್ಪಿಸಿದಿ ಶ್ರೀಸತ್ಯಾ ರುಕ್ಮಿಣಿ ವೇಣುಗೋಪಾಲರನು | ಸ್ತುತಿಸಿ ಪಡೆದೆ ನೀನು 6 ನ್ಯಾಯಾಮೃತ ಬಿಚ್ಚಿ ಚಂದ್ರಿಕೆಯನು ತಂದೆ ಆಯದಿ ಬುಧಮನ ತಾಂಡವಾಡುವಂತೆ | ತರ್ಕತಾಂಡವವಿತ್ತೆ ಕಾಯಜಪಿತ ಶ್ರೀಕಾಂತನ ಸೇವಿಸುತ | ಸುಖಿಸುವೆ ನೀ ಸತತ 7
--------------
ಲಕ್ಷ್ಮೀನಾರಯಣರಾಯರು
ನರಹರಿ ತೀರ್ಥಯತಿವರ್ಯ ಇಷ್ಟೆಂದೊ ಚರಿಯ ಪ ಸುರವಿನುತ ಪದಹರುಷತೀರ್ಥರ ಕರಕಮಲ ಸಂಜಾತರೆನಿಸುತ ಧರೆಯೊಳಗೆ ಸಿರಿಸಹಿತರಾ ಮನ ಕರೆದು ಧರೆಸುರ ಜನಕೆ ತೋರಿದ ಅ.ಪ ಚರಿಸುತ ಬರಲು ಗಜಪುರದಿ ಪುರ- ದರಸನಿಲ್ಲದಿರೆ ಯೋಚಿಸುತ ಕರಿಕರದಿ ವರಮಾಲಿಕೆಯ ಕೊಡಲಾಕ್ಷಣದೀ ಯತಿ ವರರ ಕಂಠದಲಿ ಹಾಕಲು ಜನ ಸಭದಿ ಪುರಜನದ ಪ್ರಾರ್ಥನದಿ ದ್ವಾದಶ ವರುಷ ಪ್ರಜರನು ಪೊರೆದು ಕೋಶದೊಳಿ- ರುವ ಧರಿಜಾಸಹಿತ ರಾಮನ ತರಿಸಿ ಪೊರಟರು ಕುದುರೆಯೇರುತ1 ಆ ಮಹಾಮುನಿಪರು ತ್ವರದಿ ಬಂದು ಶ್ರೀ ಮದಾನಂದ ತೀರ್ಥರ ಪದಯುಗದಿ ಪ್ರೇಮವಂದನ ಪೂರ್ವಕದಿ ಸೀತಾ ರಾಮಮೂರ್ತಿಯ ನೊಪ್ಪಿಸಿದರು ಕರದೀ ಶ್ರೀ ಮನೋಹರ ನಂಘ್ರಿಯುಗಲವ ಪ್ರೇಮದಿಂದಲಿ ಪೂಜಿಸುತಲಿರೆ ಈ ಮಹಾತ್ಮರ ಕರೆದು ಕೊಟ್ಟರು ನೇಮದಿಂದರ್ಚಿಸಿರಿ ಎನುತಲಿ 2 ಭಾಸುರ ಹೇಮಮಂಟಪದಿ ನಿತ್ಯಾ ಶ್ರೀಸೀತಾರಾಮನರ್ಚಿಪರು ವೈಭವದೀ ಭೂಸುರ ಕೃತ ವೇದಘೋಷದಿ ಮತ್ತೆ ವ್ಯಾಸಸೂತ್ರಗಳ ನಾಮಾವಳಿ ಪಠಣ ದಿ ದೇಶ ದೇಶಗಳಲ್ಲಿ ಚರಿಸುತ ತೋಷತೀರ್ಥರ ಮತವ ಬೋಧಿಸಿ ಸಿರಿ ನರ ಕೇಸರಿಗೆ ಪ್ರಿಯದಾಸರೆನಿಸಿದ 3
--------------
ಕಾರ್ಪರ ನರಹರಿದಾಸರು