ಒಟ್ಟು 161 ಕಡೆಗಳಲ್ಲಿ , 47 ದಾಸರು , 151 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುವಶಕೆ ನಮೋ ಎಂಬೆ ನಮ್ಮ ಶ್ರೀ ಮದಾನಂದತೀರ್ಥ ಪದ್ಮನಾಭರಿಗೆ | ರಾಮದೇವರ ಕಂದ ನರಹರಿಗೆ || ಕಾಮಿತ ಫಲವೀವ ಮಾಧವಕ್ಷೋಭ್ಯರಿಗೆ | ಆ ಮಹಾಮಹಿಮ ಜಯತೀರ್ಥ ರಾಯರಿಗೆ 1 ವಿದ್ಯಾಧಿರಾಜರಿಗೆ ವಿಜಯ ಕವೀಂದ್ರ ಸು | ಸದ್ಗುಣ ವಾಗೀಶ ರಾಮಚಂದ್ರರಿಗೆ || ವಿದ್ಯಾನಿಧಿ ರಘುನಾಥ ರಘುವರ್ಯತೀರ್ಥರಿಗೆ | ಅದ್ವೈತಮತ ಖಂಡ ರಘೋತ್ತರಾಯರಿಗೆ 2 ವೇದವ್ಯಾಸ ವಿದ್ಯಾಧೀಶ ವೇದನಿಧಿ ಮುನಿಗೆ | ನಿತ್ಯ ವತ್ರರಿಗೆ || ಮೇದಿನಿಯಲಿ ಮೆರೆದ ಸತ್ಯನಿಧಿತೀರ್ಥರಿಗೆ | ವಾದಿಗಜಕೆ ಸಿಂಹ ಸತ್ಯನಾಥರಿಗೆ 3 ಯತಿಶ್ರೇಷ್ಠ ಸತ್ಯಾಭಿನವತೀರ್ಥರಿಗೆ | ಸತತ ಸಜ್ಜನಪಾಲ ಸತ್ಯಪೂರ್ಣರಿಗೆ || ಅತಿಶಯವಾನಂದ ಸತ್ಯ ವಿಜರಿಗೆ | ಮತ ಉದ್ಧಾರಕ ಶ್ರೀ ಸತ್ಯಪ್ರಿಯರಿಗೆ4 ಇಂತು ಗುರುಗಳ ಸಂತರೆ ಕೊಂಡಾಡಿ ಇಂತು ಸುತಾಪವನುರುಹಿ ಬಿಟ್ಟು || ಸಂತೋಷಿ ನಾನಾದೆ ವಿಜಯವಿಠ್ಠಲನ್ನ ಚಿಂತಿಯ ಮಾಡುವೆ ದಾಸರ ದಯದಿಂದ 5
--------------
ವಿಜಯದಾಸ
ಗೋಪಾಲ ದಾಸರಾಯ ನಿನ್ನಯ ಪಾದ ನಾ ಪೊಂದಿದೆನೊ ನಿಶ್ಚಯ ಪ ಈ ಪೀಡಿಸುವ ತ್ರಯತಾಪಗಳೋಡಿಸಿ ಕೈ ಪಿಡಿದೆÀನ್ನ ಕಾಪಾಡಿದ ಗುರುರಾಯ ಅ.ಪ. ಘೋರ ವ್ಯಾಧಿಯನೆ ನೋಡಿ | ವಿಜಯರಾಯ ಭೂರಿ ಕರುಣವ ಮಾಡಿ ತೋರಿದರಿವರೆ ಉದ್ಧಾರಕರೆಂದಂದಿ ಪಾದ ಸಾರಿದೆ ಸಲಹೆಂದು || ಸೂರಿಜನ ಸಂಪ್ರೀಯ ಸುಗುಣೋದಾರ ದುರುಳನ ದೋಷ ನಿಚಯವ ದೂರಗೈಸಿ ದಯಾಂಬುನಿಧೆ ನಿ ವಾರಿಸದೆ ಕರಪಿಡಿದು ಕರುಣದಿ ಅಪ ಮೃತ್ಯುಯವನು ತಂದೆ ಎನ್ನೊಳಗಿದ್ದ 1 ಅಪರಾಧಗಳ ಮರೆದೆ ಚಪಲ ಚಿತ್ತನಿಗೊಲಿದು ವಿಪುಲ ಮತಿಯನಿತ್ತು ನಿಪುಣನೆಂದೆನಿಸಿದೆ ತಪಸಿಗಳಿಂದಲಿ ಕೃಪಣ ವತ್ಸಲ ನಿನ್ನ ಕರುಣೆಗೆ ಉಪಮೆಗಾಣೆನೊ ಸಂತತವು ಕಾ ಶ್ಯಪಿಯೊಳಗೆ ಬುಧರಿಂದ ಜಗದಾ ಧಿಪನ ಕಿಂಕರನೆನಿಸಿ ಮೆರೆಯುವ 2 ಎನ್ನ ಪಾಲಿಸಿದಂದದಿ ಸಕಲ ಪ್ರ ಪನ್ನರ ಸಲಹೊ ಮೋದಿ ಅನ್ಯರಿಗೀಪರಿ ಬಿನ್ನಪ ಗೈಯೆ ಜ ಗನ್ನಾಥ ವಿಠಲನ ಸನ್ನುತಿಸುವ ಧೀರ || ನಿನ್ನ ನಂಬಿದ ಜನರಿಗೆಲ್ಲಿಯ ಬನ್ನವೋ ಭಕ್ತಾನು ಕಂಪಿಶ ರಣ್ಯ ಬಂದೆನೊ ಈ ಸಮಯದಿಅ ಹರ್ನಿಶಿ ಧ್ಯಾನಿಸುವೆ ನಿನ್ನನು 3
--------------
ಜಗನ್ನಾಥದಾಸರು
ಗೋವಿಂದ ಗೋಪಾಲ ಗೋಪಿಕಾವಲ್ಲಭÉೂೀವರ್ಧನೋದ್ಧಾರಕಪ. ಶೌರಿ ಹರಿವಾರಿಜೋದ್ಭವವಂದ್ಯ ವಂದಿತ ಚರಿತ್ರಪುರಮರ್ದನಮಿತ್ರ ಪರಮಪವಿತ್ರ 1 ಗರುಡತುರಗಗಮನ ಕಲ್ಯಾಣಗುಣಗಣನಿರುಪಮಲಾವಣ್ಯನಿರ್ಮಲಶರಣ್ಯ ಪರಮಮುನಿವರೇಣ್ಯಭಕ್ತಲೋಕಕಾರುಣ್ಯ 2 ಇನಶಶಿಲೋಚನ ಇಂದುನಿಭಾನನಎನುತ ಕುಂಡಲನಾದನಕನಕಮಯವಾಸನ ಘನ ಪಾಪನಾಶನಎನುತ ಕುಂಡಲನಾದ ವೇಣುನಾದ ಹಯವದನ 3
--------------
ವಾದಿರಾಜ
ಗೋವಿಂದ ನಿನ್ನಾನಂದದಲ್ಲಿಡೋ ಗೋವಿಂದ ಪ ಗೋವಿಂದ ಹೃದಯಾರವಿಂದದಲ್ಲಿ ಇಂದೂ ಮುಂದೂ ಚರಣಾರವಿಂದ ತೋರೊ ಅ.ಪ ಬೆಟ್ಟದ ದರುಶನ ಲಾಭವು ಕಷ್ಟ ಪಟ್ಟರು ದೊರೆಯಲಸಾಧ್ಯವು ನೋಡೆ ಸುಟ್ಟು ಹೋಗುವುದಘರಾಶಿಯು ಪಟ್ಟ ಶ್ರಮವು ಇಷ್ಟಾರ್ಥವು ದಿಟ್ಟ ಮನವ ಕೊಟ್ಟು ಅಟ್ಟುರಿಯ ಕಳೆದು ಮೆಟ್ಟು ಮೆಟ್ಟಲನೇರಿ ದಿಟ್ಟಿಪರೋ ನಿನ್ನ1 ಪದುಮಜಾಂಡ ಕೋಟಿ ನಾಯಕ ದೇವ ಶ್ರೀದ ಸೃಷ್ಟಾದ್ಯಷ್ಟ ಕರ್ತೃ ನೀನೆ ಆದ್ಯಂತ ಜಗದಾಧಾರಕ ಅಂತರಾತ್ಮಕ ವಿಶ್ವವ್ಯಾಪಕ ಆದಿಮೂಲ ಚತುಷ್ಪಾದ ಎಂದೆನಿಸಿ ತ್ರಿ- ಪಾದ ಇಳೆಯೊಳಿಟ್ಟೆ 2 ಸದಮಲಾತ್ಮಕನೇ ದೇವ ಸರ್ವದಾ ಎಲ್ಲಾ ಹದಿನಾಲ್ಕು ಲೋಕವ ಧರಿಸಿದೆ ದಿವ್ಯ ನೆಲೆಸಿದೆ ಸರ್ವರ ಹೃದಯದ ಪದುಮದಲಿ ಪೊಳೆದು ತ್ರಿಜಗವಂದಿತನಾಗಿ ಮೇದಿನಿಯೊಳು ಮೆರೆಯುತಿಹೆ 3 ಧ್ವಜವಜ್ರಾಂಕುಶಯುಕ್ತಲಾಂಛನ ದೆÉೀವ ಅಬ್ಜಭವಾರಾಧ್ಯ ಚರಣದಿವ್ಯ- ಅಬ್ಜಸಖಕೋಟಿಕಿರಣ ಪಾದಾಭರಣದಿಂದ ಕಿರಣಾ ತಾ ಝಗಝಗಿಸುತ್ತ ನೂಪುರ ಕಾಲಂದಿಗೆ ಗೆಜ್ಜೆ ಸಜ್ಜುಗೊಂಡಿಹ ಮೂರ್ಜಗದೊಡೆಯನೆ ಹರಿ 4 ತಟಿತಕೋಟಿನಿಭಸಮಕಾಯ ಕಟಿಯ ದಿವ್ಯರತ್ನಖಚಿತದಟ್ಟಿಯಾ ತೊಟ್ಟ ಪಟ್ಟೆಪೀತಾಂಬರ ಬಟ್ಟೆಯಾ ಸೊಂಟಪಟ್ಟಿಯ ಇಟ್ಟ ಪರಿಯಾ ಅಟ್ಟಹಾಸದಿ ನಿಂದ ಸೃಷ್ಟಿಗೊಡೆಯ ಮನೋ- ಭೀಷ್ಟದಾಯಕ ಬೆಟ್ಟದೊಡೆಯನೆ 5 ಕರಚತುಷ್ಟಯದಲ್ಲಿ ಮೆರಯುವಾ ಶ್ರೀ ಸು- ದರ್ಶನ ಶಂಖದಿಂದಿರುವಾ ದೀನ ಶರಣಜನರಿಗಭಯ ಹಸ್ತವಾ ಕರೆದು ನೀಡುವ ಕಾಮಿತಾರ್ಥವ ಪರಿಪರಿ ಭಾಪುರಿ ಭುಜಗಾಭರಣಾದಿಗಳ ಧರಿಸಿರುತ ಭಕ್ತಜನರಘ ಹರಿಸುವಾ6 ವಕ್ಷಸ್ಥಳದಲ್ಲಿ ಶ್ರೀವತ್ಸವೂ ಕಂಠ ದಕ್ಷಿಣದಲ್ಲಿ ತೋರ ನಕ್ಷತ್ರದಂತಿಹ ಹಾರವೂ ಕುಕ್ಷಿ ಅಂದವೂ ಮೋಕ್ಷದಾತೃವು ಅಕ್ಷರ ವಾಚ್ಯತ್ರ್ಯಕ್ಷಾದಿ ಸುರವಂದ್ಯ ಈ ಕ್ಷಿತಿಗಿಳಿದು ಪ್ರತ್ಯಕ್ಷನಾಗಿ ನಿಂದೆ 7 ಮಂದಹಾಸಮುಖ ಅರವಿಂದ ದಂತ ಚಂದಕರ್ಣಕುಂಡಲದಿಂದ ಕೆಂದುಟಿಯಿಂದ ಒಪ್ಪುವ ಚೆಂದ ಪೊಂದಿ ಮಕುಟ ಸರ್ವಾಲಂಕಾರ ಪರಿಪೂರ್u ಬಂಧ ಮೋಚನ ಹರಿ ಶ್ರೀ ವೇಂಕಟೇಶನೆ 8 ಪರಿಪರಿ ಮುಕ್ತಜೀವರುಗಳು ಇಲ್ಲಿ ಪರಿವಾರ ತರುಲತೆ ಶಿಲೆಗಳು ಇನ್ನು ವಿರಜೆ ಮೊದಲಾದ ಸರ್ವತೀರ್ಥವು ಸ್ವಾಮಿ ತೀರ್ಥವೂ ಮೋಕ್ಷದಾತೃವೂ ಭವ ಶಕ್ರಾದಿನುತಉರಗಾದ್ರಿವಾಸವಿಠಲ ಜಗದೀಶನೆ 9
--------------
ಉರಗಾದ್ರಿವಾಸವಿಠಲದಾಸರು
ಜಾಹ್ನವಿ ಜನಕ ಮೂಜಗತ್ಪತಿ ಸುರಕುಲ ಸನಕಾ ದೀಜನ ಮನೋಹರ ಮಾಣಿಕ್ಯ ಕನಕಾ ವೈಜಯಂತಿ ಹಾರ ಪಾವನ್ನ ಪದಕ ಪ ಕೇಶಿಭಂಜನ ವ್ಯೋಮಕೇಶ ವಂದಿತ ಪಾದ ಕ್ಲೇಶನಾಶನ ವಾತೇಶನ ಜನಕ ಕೇಶರಿರುಹ ಮುಂಜಿಕೇಶನೆ ಕುಂಕುಮ ಶೌರಿ 1 ವಾರುಣಿ ಪತಿನುತ ವಾರುಣನ ಭಯ ನಿ ವಾರಣಾ ವಾರಣಾಶಿ ಪುರದರಸೆ ವಾರಣ ನಗರಿಯ ವಾರನಹತಪಲ್ಲ ವಾರುಣಿ ಪಾಣಿಯೆ ನಾರಾಯಣನೆ ಜೋ ಜೋ 2 ಮಾದೇವಿ ರಮಣ ಭೂಮಿದೇವಿ ಉದ್ಧಾರ ಮಾಧುರ್ಯ ವಚನ ಉಮಾದೇವಿ ವಿನುತಾ ಮಾಧಾರ ಮಹಶೂರ ಮತ್ಕುಲನೆ ಪ್ರೇ ಮಾಧವ ರಾಯಾ 3 ಗೋವಳಿ ಪರಿಪಾಲ ಗೋವಳೇರಾ ಪ್ರಿಯಾ ಗೋವುಗಳ ಕಾಯಿದ ಗೋವಳರಾಯಾ ವಿಪ್ರ ಸಂರಕ್ಷ ಗೋವಿದಾಂಪತಿ ರಂಗ ಗೋವಿಂದ ನಂದ 4 ಮಧುಕೈಟಭಾಸುರ ಮದಗರ್ವ ಮರ್ದನ ನಿತ್ಯ ಮಧುರನ್ನ ಪಾನಾ ಮಧುರಾಪುರ ಪಾಲ ಮದಗಜ ಹರಣಾ ಶಾ ಮದವರ್ಣ ಶರೀರ ಮಧುಸೂದನನೆ 5 ಇಷ್ಟಭಕ್ತರ ಕುಲ ಇಷ್ಟದೈವವೆ ಸರ್ವ ಇಷ್ಟಾರ್ಥ ಕೊಡುವ ಬಲಿಷ್ಟನು ನಿನ್ನ ಇಷ್ಟ ಅಷ್ಟಯೆಂದು ತಿಳಿಯಲಿ ವಶವಲ್ಲ ವಿಷ್ಣು ಸರ್ವೋತ್ತಮ ವಿಶ್ವನಾಟಕನೆ6 ಅಕ್ರಮದಲಿ ಸ್ವರ್ಗ ಆಕ್ರಮಿಸಿ ಬಲಿ ವಿಕ್ರಮನಾಗಿ ಕಾಲಕ್ರಮಣಿ ಮಾಡೆ ಶಕ್ರಮರ್ಚಿಸೆ ಅನುಕ್ರಮನಾಗಿ ಪ ರಾಕ್ರಮದಲಿ ಬೆಳದೆ ತ್ರಿವಿಕ್ರಮನೆ 7 ವಾಮಲೋಚನೆಯರ ವಾಮನ ಕೆಡಿಸಿದೆ ವಾಮನವಾಶಿಷ್ಟವಾ ಮುನಿವಂದ್ಯ ವಾಮನದಲಿ ದಾನವಾಮನ್ಯಗಳರನ್ನು ಅ ವಮಾನ ಮಾಡಿದೆ ಸಿರಿವಾಮನನೆ 8 ಶ್ರೀಧರ ರಮಣನೆ ಶೃಂಗಾರ ವಾರಿಧಿ ಶ್ರೀಧನ ಸಂಪತ್ತಾಶ್ರಿತ ಜನರಿಗೆ ಶ್ರೀಧೇನು ನೀನಯ್ಯಾ ಶ್ರೀ ಕರುಣಾಕರ ಶ್ರೀದೇವಿ ಉರಭೂಷಾ ಶ್ರೀಧರನಂತಾ 9 ಋಷಿಕೇಶನ ತಾತ ಋಷಿಜನ ಸಂಪ್ರೀತ ಋಷಿಕುಲೋದ್ಭವ ಪುರುಷ ರಾಮ ಮಹಾ ಋಷಿನಾಮಧೇಯನೆ ಋಷಿಪತ್ನಿ ಪಾಲನೆ ಋಷಿಗಳ ಒಡೆಯನೆ ಹೃಷಿಕೇಶ ದೇವ 10 ಪದುಮಜಾಂಡದಲ್ಲಿ ಪದುಮೆ ಮಾತನು ಕೇಳಿ ಪದುಮನಾಭಿಯಲ್ಲಿ ಪದುಮಜನ ಪೆತ್ತ ಪದುಮಾಸ್ಯ ಪದುಮಾಕ್ಷ ಪದುಮಕರನೆ ಪಾದ ಪದುಮ ಮಿಗಲು ಕಾಂತಿ ಪದುಮನಾಭನೆ11 ಧಾಮನಿಧಿಕುಲನು ಧಾಮನೆ ನಿರುತ ತ್ರಿ ಧಾಮನಿವಾಸ ಸುಧಾಮನ ಮಿತ್ರ ಧಾಮ ಪುಣ್ಯಧಾಮ ಭಕ್ತ ಹೃದ್ವನಜ ಧಾಮ ಮಧುಕರನೆ ದಾಮೋದರ ಧರ್ಮಾ 12 ಶಂಖ ಸುರಾಹರಾ ನಿಃಶಂಕ ಚರಿತ ಶಂಖಪಾಣಿ ಶಶಾಂಕ ಸುವದನ ಸಂಖ್ಯೆಯಿಲ್ಲದೆ ತಾಯಿ ಸಂಕಲೆ ಹರಿಗಡಿದೆ ಸಂಕರುಷಣನುವುಜ ಸಂಕರುಷಣನೆ 13 ಪ್ರಧಾನ ಮೂರುತಿ ಪ್ರದ್ವೀಪ ವರ್ಣ ಸುಪ್ರದಾಯಕನೆ ಪ್ರದೇಶ ಪರಿಮಾಣ ವರಪ್ರದ ಸಿದ್ಧನೆ ಪ್ರದ್ಯುಕ್ತ ಅವ್ಯಕ್ತ ಪ್ರದ್ಯುಮ್ನ ವಿಶ್ವ14 ವಾಸುವಾನುಜ ಶ್ರೀನಿವಾಸ ಪುಂಡ್ರೀಕ ವಾಸುದೇವನ ಶಮನಪುರದಲ್ಲಿ ವಾಸಮಾಡಿಸಿದಯ್ಯಾ ವಾಸವಾರ್ಚಿತ ಶ್ರೀ ವಾಸುದೇವ 15 ಅನುಗಾಲವು ನಿನ್ನ ಅನುಸರಿಸಿದೆ ನಾನು ಅನುಕೂಲವಾಗಿ ಎನ್ನನು ಸಾಕುವುದು ಅನುಮಾನವ್ಯಾತಕೆ ಅನಿಮಿತ್ತ ಬಂಧು ಅನಿರುದ್ಧ ಶ್ರೀಶಾ 16 ಪುರುಷ ಪುರುಷ ಶ್ರೇಷ್ಠ ಪುರುಷಾರ್ಥ ಕಾರಣ ಪುರುಷೇಶ್ವರ ತತ್ಪುರುಷಾದಿ ಪುರುಷ ಪುರುಷ ಬೀಜ ವೇದ ಪುರುಷ ಪರಮ ಪುರುಷ ಪುರುಷರು ಮೋಹಿಸುವ ಪುರುಷೋತ್ತಮನೆ 17 ಅಕ್ಷಯ ಬಲ ಸಹಸ್ರಾಕ್ಷ ರಕ್ಷಕ ಅಕ್ಷರಪರ ಬ್ರಹ್ಮ ಗೀರ್ವಾಣಧ್ಯಕ್ಷ ಅಕ್ಷಯ ಪಾತ್ರಿಯ ಶಾಖಾದಳವನ್ನು ಅಕ್ಷಯ ಮಾಡಿದಧೋಕ್ಷಜ ಚಕ್ರಿ 18 ನರಸಖ ನರಹರಿ ನಾರಾಯಣ ವಾ ನರ ದಳನಾಯಕ ನಾರದ ವಿನುತ ನರಕ ಉದ್ಧಾರಕ ನರಕಾಂತಕ ಕಿ ನ್ನರ ಸುರನರೋರಗ ವೃಂದ ನರಸಿಂಹ 19 ಸಚ್ಚಿದಾನಂದಾತ್ಮ ಸಚಲ ವಿಗ್ರಹನೆ ಸಚ್ಚರಾಚರದೊಳೂ ಗುಣಪರಿಪೂರ್ಣ ಸಚ್ಛಾಸ್ತ್ರದಲಿ ನಿನ್ನ ಸಾಮರ್ಥಿ ಪರಿಪೂರ್ತಿ ಸಚ್ಚೂತ ಚುತಿ ದೂರ ಚಿನ್ಮಯ ರೂಪಾ 20 ಜನನ ಮರಣ ನಾಶ ಜನನಾದಿಕರ್ತಾಂ ಜನಸುತಗತಿ ಪ್ರೇಮಾಂಜನ ಗಿರಿಧಾಮ ಜನಕವರದ ಸಜ್ಜನರಘದಹನ ದು ರ್ಜನರ ಕುಲರಾತಿ ಜನಾರ್ದನನೆ 21 ವೀಂದ್ರವಾಹನ ಮಹೇಂದ್ರಧಾರನೆ ಗ ಜೇಂದ್ರನ್ನ ಬಿಡಿಸಿ ನಕ್ಷೇಂದ್ರನ ಸೀಳಿ ನಾ ಗೇಂದ್ರ ಶಯನ ಗುಣಸಾಂದ್ರ ಗೋಕುಲ ಚಂದ್ರ ಇಂದ್ರಮಣಿ ನಿಭ ರಾಮಚಂದ್ರ ಉಪೇಂದ್ರಾ 22 ಹರಿ ಎನುತಾ ಹರಿ ಹರಿದು ಓಡಿ ಬರೆ ಹರಿದು ಪೋಗಿ ಪರಿಹರಿಸಿದ ಖಳನ ಹರಿ ಹರಿಯು ನಲಿವನೆ ಹರಿರೂಪ ಪರಿ ಹರಿನಾಮವೆ ಗತಿ ಹರಿ ಸರ್ವೋತ್ತಮಾ23 ಕೃಷ್ಣದ್ವಯಪಾಯನ ಉತ್ಕøಷ್ಟ ಮುನೇಶ ಕೃಷ್ಟಿಗೆ ಬಂದ ಕಷ್ಟ ಓಡಿಸಿದೆ ಕೃಷ್ಣವತ್ರ್ಮನೆ ಸಂತುಷ್ಟೀಲಿ ಸುಖಬಡುವ ಕೃಷ್ಣಾವತಾರ ಕೃಷ್ಣ ಕಮಲೇಶ 24 ನಿನ್ನ ಮಹಿಮೆಯನ್ನು ಬಣ್ಣಿಸಲಳವಿಲ್ಲ ನಿನ್ನೊಳಗೆ ನೀನು ಬೀಯ ಬೀಜವನು ಎನ್ನ ಪಾಲಿಸುವುದು ವಿಜಯವಿಠ್ಠಲ ಪ್ರಸನ್ನ ಭಕ್ತರ ವರದ ಬಾಲ ಗೋಪಾಲ ಜೋ ಜೋ 25
--------------
ವಿಜಯದಾಸ
ಜೋ ಜೋ ಶ್ರೀಹರಿ ಮಲಗೊ ಜೋಗುಳ ಪಾಡಿ ಪಾಡಿ ತೂಗುವೆ ಮುದದಿಪ ಯೋಗಿಗಳರಸನೆ ಸಾಗರಶಯನನೆ ಭಾಗವತರಪ್ರಿಯ ಬಾಗಿ ಸ್ತುತಿಪರೊ ನಿನ್ನ ಅ.ಪ ಹರ ಬ್ರಹ್ಮಾದಿಗಳು ಕೂಡಿ ನಿನ್ನನು ಪರಿಪರಿ ವಿಧದಲಿ ಕೊಂಡಾಡಿ ಸುರರು ಗಂಧರ್ವರು ವರಋಷಿಗಳು ಕೂಡಿ ಪರಮ ಸಂಭ್ರಮದಿಂದ ಹರಿ ನಿನ್ನ ಸ್ತುತಿಪರು 1 ಗೋಕುಲದ ನಾರಿಯರು ಗೋವಿಂದ ನಿನಗೆ ಬೇಕಾದ ಪಾಲ್ಮೊಸರು ಜೋಕೆಯಿಂದಲಿ ಹೊಸ ಬೆಣ್ಣೆ ತಂದಿಹೆವೆಂದು ಅ- ನೇಕ ಬಗೆಯಲಿ ಸ್ತುತಿ ಮಾಡಿ ಬೇಡುತಲಿರುವರು 2 ದಿಟ್ಟ ಗೋಪಾಲ ಕಯ್ಯೊಳಗೊಂದು ಪುಟ್ಟ ಬಚ್ಚೆಯ ಪಿಡಿದು ಅಚ್ಚುತ ನಿನಗೀವೆವೆಂದು ಬಾಗಿಲೋಳ್ ನಿಂದು ಪುಟ್ಟ ಮಕ್ಕಳು ಬಾಯಿಬಿಟ್ಟು ಪ್ರಾರ್ಥಿಸುವರು 3 ಇನಕೋಟಿ ಪ್ರಭೆ ನಾಚಿಪ ಮುಖ ಕಮಲದ ದನುಜದಲ್ಲಣ ನಿನ್ನನು ಸನಕಾದಿಗಳು ಸ್ತುತಿಮಾಡಿ ಮೈ ಮರೆತರೊ ವನಿತೆಯರೋಕುಳಿಗಳನಾಡಿ ನರ್ತಿಸುವರೊ 4 ನಿದ್ರೆ ಮಾಡಿದರೆ ನೀನು ಈ ಜಗವೆಲ್ಲ ಉದ್ಧಾರವಾಗುವುದೇನು ನಿದ್ರೆ ಸಾಕೇಳೆಂದು ದುರ್ಗಾದೇವಿಯರು ಸ್ತುತಿಸೆ ಮುದ್ದು ಕೃಷ್ಣನೆ ಭಕ್ತರುದ್ಧಾರಕರ್ತನೆ5 ಹಯ ಮುಖ ಹರಿ ಮತ್ಸ್ಯನೆ ಕೂರ್ಮನೆ ವರಹ ಹಯಗ್ರೀವ ನರಸಿಂಹನೆ ಜಯವಟು ಭೃಗು ರಾಮಕೃಷ್ಣ ಬುದ್ಧನÉ ಕಲ್ಕಿ ಜಯ ನಾನಾ ರೂಪನÉ ಜಯವೆಂದು ಪೊಗಳ್ವರೊ6 ನವನೀತ ಚೋರನೆಂದು ನಾರಿಯರೆಲ್ಲ ನವವಿಧ ನುಡಿ ನುಡಿವರೊ ಭುವನ ಮೋಹನಸ್ವಾಮಿ ಸುಮನಸ ವಂದ್ಯನೆಕವಿ ಜನರಪ್ರಿಯ ಶ್ರೀ ಕಮಲನಾಭ ವಿಠ್ಠಲ 7
--------------
ನಿಡಗುರುಕಿ ಜೀವೂಬಾಯಿ
ಜ್ಞಾನಾನಂದಮಯಂ ಭಜೇಹಂ ಪ ಶ್ರೀನಿವಾಸ ಕರುಣಾರಸಪೂರಂ ಅ.ಪ ಸಕಲ ಕಲಾಕೃತಿ ಪೂರ್ಣಮನಂತಂ ಸಕಲ ವರಪ್ರದಮನುಪಮ ಶಾಂತಂ ವಿಕಸಿತ ಕಮಲೋಪಮ ಶಂಭುಚಿತ್ತಂ ಶ್ರೀಕರಮಮಿತ ಕೃಪಾಗುಣ ಸಹಿತಂ1 ಮೂಲಮಂತ್ರ ಸಕಲಾರ್ಥಸಮೀರಂ ಮೂಲತತ್ವ ನಿರ್ಧಾರಕಮಮರಂ ಗಾಲವ ನಾರದ ಮುನಿಜನನಿಕರಂ ಸಾಲಂಕೃತ ಮಾಂಗಿರಿವರಮಿಹಿರಂ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತುಂಗಾತೀರದಿ ಕಂಗೊಳಿಸುವ ಮುನಿ ಪುಂಗವರಾಯರ ನಯನದಿ ನೋಡೆ | ಮನದಿ ಕೊಂಡಾಡೆ ವರಗಳ ಬೇಡೆ ಪ ಆದಿ ಯುಗದಿ ಪ್ರಹ್ಲಾಲದನೆನಿಸಿ ಕ ಯಾದವಿನುದರದಿ ಜನಿಸುತಲಿ | ಸಖಿಜನಿಸುತಲಿ ಮಾಧವ ಪರನೆಂದುಮೋದದಿ ಸ್ತಂಭದಿ ತೋರಿದ ಧೀರನೆ 1 ಅದ್ವೈತಾಟವಿ ದಗ್ಧಕೃತಾನಲ ಮಧ್ವಮತಾಬ್ಧಿಗೆ ಭೇಶನೆಂದೆನಿಸಿ ಸದ್ವೈಷ್ಣ ವರುದ್ಧಾರಕನಾದ ಪ್ರ ಸಿದ್ಧನಾದ ವ್ಯಾಸಕರ್ಮಂದ ಕುಲೇಂದ್ರನೆ 2 ಧರಣಿ ತಳದಿ ರಾಘವೇಂದ್ರ ಸುನಾಮದಿ ಮರಳಿ ಜನಿಸಿ ದಿವ್ಯ ಪರಿಮಳ ರಚಿಸಿ | ಪರಿಮಳ ರಚಿಸಿ ಕರುಣದಿ ದ್ವಿಜರಿಗೆ ಎರದು ಪೊರೆವಗುರು ಮರುತಾವೇಶದ ದೇವಸ್ವಭಾವನೆ 3 ಸ್ವಾಂತÀದಿ ಭಜಿಪರ ಚಿಂತೆಯ ಕಳೆಯಲು ಚಿಂತಾಮಣಿಯಂತೆ ಸತತ ಸಖಿಯೇ | ಸಂತತ ಸಳಿಯೇ ಮಂತ್ರನಿಕೇತನ ಕ್ಷೇತ್ರದಿ ಸ್ಥಿರವಾಗಿ ನಿಂತ ಪರಮ ಸುಶಾಂತ ಮೂರುತಿಯೆ 4 ವಂದಿಸಿ ಸ್ತವಿಸುವ ವಂದ್ಯಾಂಧಕರಿಗೆ ಕಂದ ರಕ್ಷಿಗಳ ಕರುಣಿಸಿಹರೇ | ಕರುಣಿಸಿಹರೇ ಇಂದು ಧರಾಮರ ವಂದಿತ ಶಾಮ ಸುಂದರ ವಿಠಲನ ದಾಸೋತ್ತಮನೆ 5
--------------
ಶಾಮಸುಂದರ ವಿಠಲ
ದತ್ತಾತ್ರೇಯನ್ನಮೋ ದತ್ತಾತ್ರೇಯಾ ಅತ್ರಿ ವರದಾಯಕನೇ ದತ್ತಾತ್ರೇಯಾ ಪ ಭಕುತಿ ಮಾಡಲು ಮೆಚ್ಚಿ ಅನಸೂಯಾ ಕರದೊಳಗ ಸುಕುಮಾರ ವೇಷದವತಾರ ತಾಳಿ ಪಥ ದೋರಲಿಕೆ ಅಕಳಂಕ ಯೋಗ ರೂಪವ ಭರಿಸಿದೆ 1 ಉದಯದೊಳು ವಾರ್ಣಾಸಿಸುರನದಿಯಲಿ ಸ್ನಾನ ವದಗಿ ಕೊಲ್ಹಾಪುರಕ ಮಧ್ಯಾಹ್ನದೀ ವಿದಿತ ಭಿಕ್ಷವನುಂಡು ಪೋಗಿ ಸಂಜೆಗೆ ಮಾಹು ನಿತ್ಯ ವಿಧಿಯಲಿ ಚರಿಸುವೇ2 ದತ್ತಹರಿ ಸಾಕ್ಷಾತ ಉನ್ಮದೋನಂದದಾಯಕ ದತ್ತವರ ಮುನಿ ದಿಗಂಬರ ಬಾಲಕಾ ನಿತ್ಯ ಪ್ರಕಾಶಮಯ ಜ್ಞಾನಸಾಗರನೆಂಬರ ದುರಿತ ಭಯವಾರಿಸುವೆ3 ಆವನಾಗಲಿ ಮರೆದು ನಿಮ್ಮ ನಾಮವ ನೆನೆವ ಠಾವಿನಲಿಸುಳಿವ ಪ್ರತ್ಯಕ್ಷದಿಂದಾ ಭಾವದಿಂದಲಿ ಸ್ಮರಿಸಿದವಗ ಇಹಪರ ಸುಖವ ನೀವ ಕರುಣಾಳು ದೀನೋದ್ಧಾರಕಾ 4 ಇಪ್ಪತ್ತು ನಾಲ್ಕು ಗುರುಗಳ ಕ್ರಮವ ದೋರಿಭವ ಮುಪ್ಪು ಬಿಡಿಸಿದೆ ಯದುರಾಯಗಂದು ಒಪ್ಪಿನಿಂದಲಿ ಗುರು ಮಹಿಪತಿ ಪ್ರಭುಯನಿಸಿ ತಪ್ಪ ನೋಡದೆ ನಂದ ನುದ್ಧರಿಸಿದೆಲೆ ದೇವಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದಶಾವತಾರಗಳು ಕರುಣದಿ ಪಾಲಿಸೆನ್ನ ಶ್ರೀ ಹಯ ವದನ ಪ ಕರುಣದಿ ಪಾಲಿಸೊ ಕರಿವರದನೆ ನಿನ್ನ ಚರಣ ಕಮಲಗಳಿಗೆರಗಿ ಬೇಡಿಕೊಂಬೆ ಅ.ಪ ಅಗಣಿತ ಮಹಿಮನೆ ನಗಪಾಣಿ ಶ್ರೀಶನೆ ವಾಹನ ನಿಗಮ ಗೋಚರನದ ಮೃಗರೂಪ ಮೂರ್ಜಗದೊಡೆಯನೆ ನಿನ್ನ ಮೀಗೆ ಹರುಷದಿಂದ ಪೊಗಳುವ ಸುಖವಿತ್ತು ಹಗಲಿರುಳೆನ್ನದೆ ಅಘು ಕಳೆದು ಕಾಯೊ ಗಗನಾಳಕ ವಂದಿತ ತ್ವರಿತದಿ ಕರ ಮುಗಿದು ಬೇಡುವೆ ಸಂತತ ಮರಿಯದೆಪೊರೆ ಪ ನ್ನಗ ಶಾಯಿ ಶ್ರೀ ಭೂನಾಥ ನಿನ್ನಯ ಪಾದ ಯುಗ ಸೇವೆ ನೀಡಯ್ಯ ನಗವೈರಿ ಮಗ ಸೂತ 1 ಕ್ಷಿತಿಜೆರಮಣ ದ್ರೌಪದಿ ರಕ್ಷಕನೆ ನಿನ್ನ ಸುರ ಸನ್ನುತ ಪತಿತೋದ್ಧಾರಕಮನ್ ಪತಿ ಪಾದ್ಯನೆ ಸಂ ಪಾದ ಶತಪತ್ರ ನಂಬಿದೆ ಹಿತದಿ ಎನ್ನಯ ದುರ್ಮತಿ ಕಳೆದು ಕಾಯೊ ಶತ ಮಖಾನುಜ ಗೋವಿಂದ ಬಾಗುವೆ ಶಿರ ದಿತಿಜಾರಿ ನಿತ್ಯಾನಂದ ಮಾತುಳ ವೈರಿ ವಿತತ ಮಹಿಮ ಮುಕುಂದ ನಿನ್ನನುದಿನ ಕೃತಿ ಪತಿ ಭರದಿಂದ 2 ಇಂದಿರಾಧವ ಶಾಮಸುಂದರ ವಿಠಲನೆ ಮಂದರ ಗಿರಿ ಪೊತ್ತು ಮಂದಜಾಸನಪಿತ ಮಾಧವ ಸುರ ವಿನುತ ದಯಾಸಿಂಧು ದಿನ ಬಂಧು ಪಾದ ಪೊಂದಿದೆ ಸಂತತ ಕಂದನೆಂದರಿದೆನ್ನ ಕುಂದು ಎಣಿಸದೆ ದಯ ದಿಂದ ಪಾಲಿಸು ಹೇದೇವ ನಂಬಿದೆ ದಶ ಕಂಧರಾಂತಕ ರಾಘವ ಬೇಡುವೆ ದಶ ಶ್ಯಂದನ ಸುತ ವರವ ಪಾಲಿಸಿ ಕಾಯೊ ಕಂದರ್ಪ ಪಿತ ಕುಂತಿನಂದನರ ಭಾವಾ 3
--------------
ಶಾಮಸುಂದರ ವಿಠಲ
ದಾಸರಾಯರ ಪಾಡಿರೋ | ರಂಗನೊಲಿದ ಶ್ರೀ |ದಾಸರಾಯರ ಪಾಡಿರೋ ಪ ದಾಸರಾಯರ ಪಾಡಿ | ದೋಷಗಳೀಡಾಡಿಶಾಶ್ವತ ಲೋಕಗ | ಳಾಶಿಪ ಜನರೆಲ್ಲಾ ಅ.ಪ. ಮಾನವಿ ಕ್ಷೇತ್ರಸ್ಥಿತನೂ | ಘನಕರ್ಣೀಕ ನರಸಪ್ಪನೆಂಬ ದ್ವಿಜನೂ |ಜ್ಞಾನಿ ತಿಮ್ಮಣ್ಣನ ಸತಿಸಹಿತ ಸೇವಿಸೆಮಾನ್ಯ ಸಹ್ಲಾದ ತಾ ಸುತನಾಗಿ ಜನಿಸಿದ 1 ಶಾಲಿವಾಹನ ಶಕವೂ | ಮತ್ತೇಗಾಳಿಗಣಯುತ ಹತ್ತಾರ್ನೂರು |ಕೀಲಕವತ್ಸರ ಶುಕ್ಲ ಶ್ರಾವಣದಲ್ಲಿಶೀಲ ವೆರಡೆನೆ ದಿನ ಜನಿಸಿಹರನ್ನಾ 2 ಈತನು ಹರಿಭಕ್ತನೊ | ಪ್ರಹ್ಲಾದಗೆಪ್ರೀತಿಯ ಸೋದರನೋಧಾತ ಜನಕ ಹರಿ ಮಾತಿನಿಂದಲಿ ಇವಖ್ಯಾತನಾಗಿ ಶ್ರೀನಿವಾಸನೆಂದೆನಿಸಿದ 3 ಆದ ಸಕಾಲದಿ ದ್ವಿಜನು | ಸದ್‍ಬೋಧಿತ ವರದೇಂದ್ರರಿಂ |ಭೇದ ಮತದೊಳದ್ವಿತೀಯ ನೆಂದೆನಿಸುತ್ತವಾದಿ ನಿಗ್ರಹದೊಳತ್ಯಾದರವನೆ ಪೊತ್ತ4 ಒದಗಲುದ್ಧುøತ ಕಾಲವೂ | ಪ್ರಾಪ್ತಸಾಧು ವಿಜಯ ದಾಸರು | ಮುದದಿ ನರ್ತವಗೈದು ಕೀರ್ತನೆ ಪಾಡಲುಹದಗೆಟ್ಟನಿವನೆಂದು ಬಿರುನುಡಿ ನುಡಿದಂಥಾ5 ಒದಗಲುದರ ರೋಗವೂ | ಮುಂದೆಹದನ ಕಾಣದೆ ತಪಿಸಾಲು |ಮೋದ ತೀರ್ಥರ ರೂಪ ಆದರದಲಿ ಭಜಿಸಿಸಾಧು ಸೋತ್ತಮ ದ್ರೋಹ ಕಳವ ಮಾರ್ಗವ ತಿಳಿದ6 ವಿಜಯ ದಾಸರ ಪಾದವಾ | ತಮ್ಮಯನಿಜ ಶಿರದೊಳು ಪೊತ್ತು ಮೆರೆವಾ |ನಿಜ ಶಿಷ್ಯ ಗೋಪಾಲದಾಸರಲ್ಲಿಗೆ ಬಂದುಭಜಿಸೆ ಅವರ ಆಯು ನಾಲ್ವತ್ತು ಪಡೆದಂಥ 7 ಮಂತ್ರಿತ ಭಕ್ಕರಿಯಾ | ಭುಜಿಸೆ ದೇಹಯಂತ್ರ ಸಾಧನ ಕೊದಗಲೂ |ಮಂತ್ರೋಪದೇಶವ ಗೊಳ್ಳುತ ಮುದದಿಂದೆಯಂತ್ರೋದ್ಧಾರಕ ಪ್ರಿಯ ರಂಗನ ಒಲಿಸಿದ 8 ಇಂದು ಭಾಗದಿ ಸ್ನಾನವೂ | ಮಾಡುತಲಿರೆಸ್ಕಂಧಾ ರೋಹಿತ ಶಿಲೆಯಸ್ಥ |ಇಂದಿರಾ ರಮಣ ಶ್ರೀ ಜಗನ್ನಾಥ ವಿಠಲನಸುಂದರಾಂಕಿತವನ್ನು ಧರಿಸಿದ ಶಿರದಲ್ಲಿ 9 ಪಾಂಡುರಂಗನ ಕಾಣುತ | ತನ್ನಯದಿಂಡುಗೆಡಹಿದ ಆಕ್ಷಣಾ |ಅಂಡಜಾಧಿಪನುದ್ದುಂಡ ದೇವರ ದೇವಪುಂಡರೀಕಾಕ್ಷನ ಪಾದಕೆ ಶರಣೆಂದ 10 ಸ್ವಾದಿ ಕ್ಷೇತ್ರಕ್ಕ ಪೋಗೀ | ಪೂಜ್ಯರಾದವಾದಿರಾಜರ ಪೂಜಿಸೀ |ಸಾಧು ವರ್ಯರ ಆಜ್ಞಾಧಾರಕರಿವರಾಗಿಬುಧರಿಗೆ ಹರಿಕಥಾ ಸುಧೆಯ ಸಾರವನಿತ್ತ 11 ಪದ ಸುಳಾದಿಗಳಿಂದಲಿ | ಹರಿಯ ಪಾದಸದ್ವನಜವ ಸ್ತುತಿಸುತಲೀ |ಹೃದಯ ಸದ್ಮದಿ ತದ್ಧಿಮಿ ಧಿಮಿ ಧಿಮಿಕೆಂದುವಿಧಿಪಿತ ಹರಿಯನ್ನ ಕುಣಿಸಿ ಮೋದಿಸಿದಂಥ 12 ಸುವತ್ಸರವು ಶುಕ್ಲದೀ | ಸಿತಭಾದ್ರನವಮಿ ತಾರೆಯು ಮೂಲದೀ |ರವಿಯ ವಾರವು ಸಂದ ಶುಭದಿನದಲಿ ಗುರುಗೋವಿಂದ ವಿಠಲನ ಸೇರಿ ತಾಮೆರೆದಂಥ 13
--------------
ಗುರುಗೋವಿಂದವಿಠಲರು
ದಾಸೋಹಂ ತವ ದಾಸೋಹಂ ಪ ವಾಸುದೇವ ವಿತತಾಘಸಂಘ ತವ ಅ ಜೀವಾಂತರ್ಗತ ಜೀವ ನಿಯಾಮಕ ಜೀವವಿಲಕ್ಷಣ ಜೀವನದ ಜೀವಾಧಾರಕ ಜೀವರೂಪ ರಾ ಜೀವ ಭವಜನಕ ಜೀವೇಶ್ವರ ತವ 1 ಕರ್ಮಕರ್ಮಕೃತ ಕರ್ಮಕೃತಾಗಮ ಕರ್ಮ ಫಲಪ್ರದ ಕರ್ಮಜಿತ ಕರ್ಮಬಂಧ ಮಹಕರ್ಮ ವಿಮೋಚಕ ಕರ್ಮನಿಗ್ರಹ ಕರ್ಮಸಾಕ್ಷಿ ತವ 2 ಕಾಲಾಹ್ವಯ ಮಹಕಾಲ ನಿಯಾಮಕ ಕಾಲಾತೀತ ತ್ರಿಕಾಲಜ್ಞ ಕಾಲಪ್ರವರ್ತಕ ಕಾಲನಿವರ್ತಕ ಕಾಲೋತ್ಪಾದಕ ಕಾಲಮೂರ್ತಿ ತವ 3 ಧರ್ಮಯೂಪ ಮಹಧರ್ಮ ವಿವರ್ಧನ ಧರ್ಮ ವಿಧೋತ್ತಮ ಧರ್ಮನಿಧೇ ಧರ್ಮ ಸೂಕ್ಷ್ಮ ಮಹಧರ್ಮ ಸಂರಕ್ಷಕ ಧರ್ಮಸಾಕ್ಷಿ ಯಮಧರ್ಮಪುತ್ರ ತವ 4 ಮಂತ್ರಯಂತ್ರ ಮಹ ಮಂತ್ರ ಬೀಜ ಮಹ ಮಂತ್ರರಾಜಗುರು ಮಂತ್ರ ಧೃತ (ಜಿತ) ಮಂತ್ರಮೇಯ ಮಹಮಂತ್ರಗಮ್ಯ ಫಲ ಮಂತ್ರಮೇಯ ಜಗನ್ನಾಥ ವಿಠಲ ತವ 5
--------------
ಜಗನ್ನಾಥದಾಸರು
ದೈವಕೃಪೆ ಇದಲ್ಲಾ ಇವರಿಗೆ ಭಾವ ಶುದ್ಧಿಯಿಲ್ಲಾ ಪ ದೇವತೆಗಳು ಸಂತೋಷಿಸರೆಂದಿಗು ನಾವೆಂಬಹಕಾರದಿ ಮಾಳ್ಪದರಲಿ ಅ.ಪ ಮದುವೆಯ ಪೆಸರಿರಿಸಿ | ದೂರದಿಂ ವಿವಿಧ ಬಂಧುಗಳ ಕರಸಿ ವಧುವರರಿಗವರು ವುಡುಗೊರೆ ವೋದಿಸ- ಲದನೇಯವರಿಗೆ ಹಿಂದಕ್ಕೆ ಕೊಡುವುದು 1 ಕೊಡದಿದ್ದರೆ ಕೋಪಾ | ಕೊಟ್ಟರೆ ಕಡು ಮೂಢರಿಗೆ ಪುಣ್ಯವೆಲ್ಲಿಹುದು ಸಡಗರ ಭ್ರಾಂತಿಯು ಡಂಬವು ಬರಿದೆ 2 ತಂತ್ರಗಳಾಚರಿಸೆ ಯಂತ್ರೋದ್ಧಾರಕ ಗುರುರಾಮವಿಠಲಾ ಸಂತಸಡುವನೆ ಧನವ್ಯಯ ಬರಿದೆ 3
--------------
ಗುರುರಾಮವಿಠಲ
ದ್ವಾರಪಾಲಕರಿಗಾನಮಿಪೆ ನಿತ್ಯ ಶ್ರೀ ರಮಣ ನಾರಯಣನ ಪುರತ್ರಯದೊಳಿಹ ಪ ಜಯ ವಿಜಯ ಬಲಪ್ರಬಲ ಚಂಡ ಪ್ರಚಂಡ ನಿ ರ್ಭಯ ನಂದ ಸುನಂದ ಕುಮುದ ಕುಮುದಾ ಧಾಮ ಸುಧಾಮ ಸಂ ಪ್ರಿಯ ತಮನ ಆಜ್ಞಾಧಾರಕರೆಂದೆನಿಸುವ 1 ಲಸದೂಧ್ರ್ವಪುಂಡ್ರ ದ್ವಾದಶನಾಮ ಶಂಖ ಸುದ ರುಶನ ಸುಗದಾ ಪದ್ಮ ನಾಮ ಮುದ್ರಾ ಕುಸುಮ ಮಾಲಿಕೆ ಧರಿಸಿ ನಸುನಗುತಹರ್ನಿಶಿಗಳಲಿ ಹರಿಯ ತುತಿಪಾ 2 ಕುಂಡಲ ಹಾರ ಪದಕ ಕಂ ಕಣ ನಡುವಿನೊಡ್ಯಾಣ ಪೀತಾಂಬರ ಕ್ವಣಿತನೂಪುರ ಗೆಜ್ಜೆ ಚರಣಾಭರಣ ಸುಲ ಕ್ಷಣರಾದ ಸರ್ವಾಂಗ ಸುಂದರರೆನಿಸುವಾ 3 ಕರದೊಳೊಪ್ಪುವ ಗದಾಯುಧ ಕುಂದರದನ ಕ ಸ್ತುರಿನಾಮ ಮಾಣಿಕಕ್ಷತೆಯ ಧರಿಸಿ ಕುಸುಮ ಕೇಸರಿ ಗಂಧದಿಂ ಭಯಂ ನಿತ್ಯ 4 ಮೂರು ಬಾಗಿಲಲಿ ಶ್ರೀ ದೇವಿಯಿಪ್ಪಳು ವಾಯು ಭಾರತಿ ಆಜ್ಞದಿಂದೀ ದೇವರು ವೀರಜಯ ವಿಜಯಾದಿಗಳಿಗೆ ವಿಷ್ವಕ್ಸೇನ ಪ್ರೇರಕನು ತಾನಾಗಿ ಶ್ರೀಶನರ್ಚಿಪನೆಂದು 5 ಹೃದಯ ಶ್ರೋತ್ರ ಚಕ್ಷುವದನಾದಿ ಕರಣದೊಳು ನದನದಿಗಳೊಳು ಮಹೋದಧಿಗಳೊಳಗೆ ಉದಿತ ಭಾಸ್ಕರ ಮಂಡಲದಿ ದೇವಗೃಹದಿ ಸದಸದ್ವಿಲಕ್ಷಣ ಸುದತಿಸಹ ಪೂಜಿಸುವ 6 ದ್ರುಹಿಣ ಮೊದಲಾದ ಸುಮನಸ ಪೂಜ್ಯ ಚರಣಾಬ್ಜ ಮಹಿಮ ಮಂಗಳಚರಿತ ಸುಗುಣ ಭರಿತ ಅಹಿರಾಜ ಶಯನ ಜಗನ್ನಾಥವಿಠಲನ ಸ ನ್ಮಹಿಮೆಗಳ ತಿಳಿಸಿ ತೋರಿಸಲಿ ಮನ್ಮನದೀ 7 ತೀರ್ಥಕ್ಷೇತ್ರ
--------------
ಜಗನ್ನಾಥದಾಸರು
ಧನಪ್ರದ ಶ್ರೀಕರ ಕಾರುಣ್ಯ ಸ್ತೋತ್ರ ಧನಕೀರ್ತಿಗಳ ಹುಡುಕಿ ತಿರುಗಾಡಲಾರೆ ಧನಕೀರ್ತಿಗಳ ಕೊಡುವಿ ನೀನಾಗಿ ನೀನೆ ಪ ಶ್ರೀಕರನೇ ನೀನಾಗಿ ನೀನೇ ಸುಧಾಮನಿಗೆ ಬೇಕಾದ ಸೌಭಾಗ್ಯ ಧನ ಧಾನ್ಯವಿತ್ತಿ ಸಾಕಿ ಸಲಹುವ ಸ್ವಾಮಿ ನೀನಿರಲಿಕೆ ನಾನು ಏಕೆ ತಿರುಗಾಡುವುದು ಕುಳಿತಲೆ ಕೊಡುವಿ 1 ಪತಿ ಹೃಸ್ಥ ಶ್ರೀ ರಮಾಪತಿ ಸರ್ವ ಪ್ರೇರಕಾಂತರ್ಯಾಮಿ ಆರ್ತಿಹರ ನೀನು ವರಜ್ಞಾನ ಯೋಗಿವರ್ಯನು ರೈಕ್ವ ಕುಳಿತಲೆ ಪೌತ್ರಾಯಣ ದ್ವಾರ ಭಾರಿ ಧನವಿತ್ತೆ 2 ದೇವ ವೃಂದದಿ ಪ್ರವರ ಗುರು ವಾಯು ಪ್ರೇರಿಸಲು ದೇವ ಶರ್ಮನು ಬಂದು ಏನೂ ಬೇಡದಲೆ ನಿವ್ರ್ಯಾಜ ಭಕ್ತಿ ಆನಂದದಲಿ ಸ್ತುತಿಸಿದನು ದ್ರವಿಣಾದಿ ಧನವಿತ್ತಿ ನೀನಾಗಿ ನೀನೇ 3 ಸರ್ವದೊಳು ನೀನಿರುವಿ ಸರ್ವವಶಿ ನಿಸ್ಸಂಗ ಸರ್ವಧಾರಕ ಶ್ರೀಶ ಸರ್ವಗುಣ ಪೂರ್ಣ ಭೂಮಿಯಲಿ ಮಾರ್ಜಾಲ ತನ್ನ ಮರಿಯ ತಾನೇ ಎತ್ತಿ ಕಾಯುವಂತೆ ನೀ ಎನ್ನ ಸರ್ವದಾ ಕಾಯುತಿ ಕೃಪೆಯಿಂದ 4 ಶಂಖ ನಿಧಿ ಪದ್ಮನಿಧಿ ರವಿ ಸೋಮಕೈಗಳಲಿ ಶಂಖಾರಿಧರ ದ್ರವ್ಯ ಕೊಡುವ ಹಸ್ತಗಳು ಸ್ವಾಂಕಸ್ಥ ಲಕ್ಷ್ಮೀ ಸಮೇತ ಗರುಡಾ ರೂಢ ಶ್ರೀಕರನೇ ಅಜಪಿತ ನಮೋ ಪ್ರಸನ್ನ ಶ್ರೀನಿವಾಸ 5
--------------
ಪ್ರಸನ್ನ ಶ್ರೀನಿವಾಸದಾಸರು